ಒಟ್ಟು 1406 ಕಡೆಗಳಲ್ಲಿ , 77 ದಾಸರು , 499 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜೋಕೆ ಎನ್ನ ವಿಚಾರ ನಾಕು ಜನರಂತಲ್ಲ ಸ್ವೀಕರಿಸಬೇಕು ಕ್ಷಣದಿ ಪ ನಾಕಾರು ವಿಧಗಳಲಿ ನೀಪೇಳಿದುದನೆಲ್ಲ ಏಕಮನದಲಿ ಮಾಡಿದೆ ಕೃಷ್ಣ ಅ.ಪ ಬಾಲತನದಲಿ ಬಹಳ ಲೋಲನಾಗಿರು ಎಂದು ಪೇಳಲಿಲ್ಲವೆ ಯೋಚಿಸು ಕೀಳುಜೀವನದಲ್ಲಿ ಕಾಲವನು ಕಳೆ ಎಂದು ಪೇಳಿದುದ ನೀ ಮರೆತೆಯಾ ಶ್ರೀ ಲಕುಮಿಪತಿ ನಿನ್ನ ಕೀಲುಗೊಂಬೆಯ ತೆರದಿ ಪೇಳಿದುದ ಮಾಡಿರುವೆನೊ 1 ಶ್ರೀಪತಿಯೆ ನಿನ್ನ ಪ್ರೇರಣೆಯಲ್ಲವೆ ಸರ್ವ ಪಾಪ ಪುಣ್ಯಕೆ ಕಾರಣ ಈ ಪರಿಯ ನಿನ್ನ ಸಂಕಲ್ಪವನು ಮೀರಲು ತಾಪಸೋತ್ತಮರಿಗಳವೆ ಆಪತ್ತು ಸಂಪತ್ತು ನಿನ್ನಧೀನಗಳೆಂದು ತಾಪತ್ರಯವ ಸಹಿಸಿದೆ 2 ಇಂದಿರಾಪತಿ ನಿನ್ನ ಒಂದೊಂದು ದಿನದಲಾ ನಂದ ಪೂಜೆಗೈಯಲು ಹಿಂದಿನಾ ಲೆಕ್ಕವು ಸಂದಿಲ್ಲವೆಂದು ನೀ ಇಂದು ಮಾಡುವರ್ಯಾರು ಸಂದೇಹವಿಲ್ಲವೆನಗೆ 3 ಇಂತಹುದು ಬೇಕೆಂಬ ಚಿಂತೆಯಿಲ್ಲದೆ ಬಹಳ ಸಂತಸದಿ ಮುಳುಗಿರುವೆನೊ ಕಂತುಜನಕ ಎನಗೆ ಭ್ರಾಂತಿ ನೀಡದೆ ಮನಕೆ ಶಾಂತಿಯನು ದಯಮಾಡೆಲೊ ಸಂತತ ನೀನು ಎನ್ನಂತರಂಗದಲಿರಲು ಕಂತೆಯಂದದಿ ಕಾಂಬೆನೊ ಜಗವ 4 ಧೋರಣೆಯ ನುಡಿಗಳಿಗೆ ಕಾರಣನು ನೀನಿರಲು ಯಾರ ಭಯವೆನಗಿಲ್ಲವೊ ನೀರಜಾಕ್ಷನೆÉ ನಿನ್ನ ಪ್ರೇರಣೆಯನೆಳ್ಳಷ್ಟು ಮೀರಿ ನಡೆಯುವುದಿಲ್ಲವೊ ಸಾರಗುಣ ಸಂಪನ್ನ ಧೀರಭಕ್ತ ಪ್ರಸನ್ನ ಯಾರಿರುವರೊ ಜಗದಲಿ ನಿನ್ಹೊರತು 5
--------------
ವಿದ್ಯಾಪ್ರಸನ್ನತೀರ್ಥರು
ಜ್ಞಾನಕಿದೇ ನಡಿ ಕುರುಹು | ಶ್ರೀ ರಮಾನಾಥಾಂಘ್ರಿಯ ಕಾಣುವದರಿತು ಪ ಕೋಪ ತಾಪವ ಬಿಡಬೇಕು ಪಶ್ಚಾ | ತ್ತಾಪದಿ ವೈರಾಗ್ಯ ಘನ ಬಲಿಬೇಕು | ಪಾಪವಿರಹಿತಾಗಬೇಕು | ಗತಿ | ಸೋಪಾನವಾದಾ ಶಾಂತಿಯ ಜಡಿಬೇಕು 1 ಕರುಣ ಮೂರುತಿ ಆಗಬೇಕು ಸರ್ವ | ಧರೆಯು ಜನಕ ಪ್ರಿಯವಾಗಿರಬೇಕು | ನೆರೆ ಲೋಭವನು ಜರಿಬೇಕು ತನ್ನ | ತೆರನರಿ ತನ್ನವ ನೀಡಲಿಬೇಕು 2 ದುರಿತ ಭಯವ ಬಿಡಬೇಕು | ದುಃಖ | ದುರ್ವಾಣಿಯಲಿ ತಾ ಬಳಲದಿರಬೇಕು | ಹರಿಭಕ್ತಿ ದೃಢಗೊಳ್ಳಬೇಕು ಗುರು | ಬೋಧ ನಿಜವೆನಬೇಕು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಡವ ಮಾಡುವಿಯಾಕೊ ಒಡೆಯ ಗೋವಿಂದ ಬಡವನ ಮೇಲಿನ್ನು ಮುನಿಸೆ ಮುಕುಂದ ಪ. ಕೆಟ್ಟ ಕೃತ್ಯಗಳತ್ಯುತ್ಕøಷ್ಟವಾದುದರಿಂದ ಮಂಡೆ ಕುಟ್ಟುವ ತೆರದಿ ಸಿಟ್ಟಿನಿಂದಲಿ ಬಹು ಕಷ್ಟಗೊಳಿಸಿದಿ ಕಟ್ಟ ಕಡೆಯಲಿ ನೀ ಕಟ್ಟ ಬಿಡಿಸಿದಿ 1 ದುಷ್ಟ ಬಾಧೆಯ ಮುರಿದಟ್ಟಿದಿ ದಯದಿ ಘಟ್ಟ ಬೆಟ್ಟಗಳನ್ನು ಮೆಟ್ಟಿ ನಾ ಭರದಿ ನಿಟ್ಟುಸುರಲಿ ಬಾರೆ ಕೃಷ್ಣ ನೀ ಕರುಣದಿ ತೊಟ್ಟಿಲ ಶಿಶುವಿನಂದದಲಿ ಪಾಲಿಸಿದಿ 2 ಜನರ ಸಹಾಯವ ಕನಸಿಲಿ ಕಾಣೆ ಧನಬಲವೆಂದೆಂದಿಗಿಲ್ಲ ನಿನ್ನಾಣೆ ವನರುಹೇಕ್ಷಣ ನಿನ್ನ ನಾಮ ಒಂದೆ ಹೊಣೆ ಯೆನುತ ನಂಬಿದುದರ ಫಲವಿನ್ನು ಕಾಣೆ 3 ಜಗದ ಸಜ್ಜನರಿದು ಮಿಗೆ ಮೀರಿತೆನಲು ಹಗೆಗಳೆಲ್ಲರು ಬಹು ಸೊಗಸಾಯಿತೆನಲು ನಗಲು ಎನ್ನನು ನೋಡಿ ನಗಧರ ನೀ ಬಂದು ಅಘಟಿತ ಘಟನ ಮಾಡಿದಿ ದೀನಬಂಧು 4 ಈ ಪರಿಯಲಿ ನಿರುಪಾಧಿಯೊಳೆನ್ನ ಕಾಪಾಡಿ ಕಡೆಯೊಳೀ ಕಷ್ಟಗಳನ್ನ ನೀ ಪರಿಹರಿಸಲೇಬೇಕು ಪ್ರಸನ್ನ ಶ್ರೀಪತಿ ಶೇಷಾದ್ರಿವಾಸ ಮೋಹನ 5
--------------
ತುಪಾಕಿ ವೆಂಕಟರಮಣಾಚಾರ್ಯ
ತತ್ವೋಪದೇಶತೋರಿಸಬೇಕು ನಿನ್ನ ನಿಜವನು ಕಾರುಣ್ಯನಿಧಿ ಗುರುರಾಯ ನೀನು ಪತೋರುವ ತೋರಿಕೆಯನು 'ುೀರಿ 'ುಕ್ಕಿಹ ಪಾರಮಾರ್ಥಿಕ ಸಚ್ಚಿದಾನಂದ ರೂಪವ ಅ.ಪಕಾಯ ಬಂದಂದವೆನಗೆ ಕಾಣಿಸದು ಮಾಯಾಪಾಶದ ತೊಡರೆನ್ನ ಬಿಡದುಜಾಯಾಸುತಾದ್ಯರ ಬರಿಯ ಮೋಹದಲಾಯು ಬೀಯವಾಗುತಲಿದೆ ಬಿಡಿಸಿದ ಬೇಗದಿ 1ಪ್ರಕೃತಿಯೊಳ್ ಕೂಡಿ ಪ್ರಕೃತಿಧರ್ಮಗಳಾದ ಸುಕೃತ ದುಷ್ಕøತ ಫಲ ರೂಪವಾದ'ಕರಿಪ ಸುಖದುಃಖದನುಭವಕದಕೊಳಗಾಗದಕಳಂಕದಿರ'ದೆಂಬುದು ತೋರದಿದೆ ದೇವ 2ಆಕಾಶದೊಳು ದೀಪಪ್ರಕಾಶವು ಏಕವಾದಂತೆ ಚಿದಚಿತ್‍ಸಂಮೇಳವುಐಕ್ಯವಾಗಿರಲಚಿದ್ಭಾವವಳಿದು ಚಿತ್ತು ಏಕವಾಗಿಹ ನಿತ್ಯನಿರ್ಗುಣ ರೂಪವ 3ಅರಿ'ದ್ದೂ ಮರವೆಯೊಳರಿವರಿಯದೆ ಪಿರಿದಾಗಿ ಹಮ್ಮು 'ಹರಿಸುತಿಹುದುಮರವೆಯಹಂಭಾವ ತೋರದರಿ'ನೊಳು ಬೆರೆದು ಬೆರೆದ ಪರಿ ತೋರದಿರುವ ಹಾಗೆ4ಮೃತ್ತಿನಿಂದಾದ ಘಟಶರಾವಾದಿಗಳು ಮತ್ತೊಂದು ರೂಪವಾದ ತೆರದಲಿಚಿತ್ತೊಂದುಪಾಧಿುಂ ನಾನಾತ್ವವಾಗಿರೆ ಕೃತ್ರಿಮ'ದ ಕಡೆಗೊಳಿಸಿ ನಿಜದೊಳಿರಿಸಿ5ಬೀಜದಿಂದಾದ ತರು ಭಿನ್ನರೂಪಾಗಿ ಬೀಜದಾಕಾರ ಮಾಜಿದಂದದಲಿವ್ಯಾಜರ'ತ 'ಭ್ರಾಜಮಾನ ಬ್ರಹ್ಮಬೀಜದಿಂ ಮೂಜಗವಾದ ಬಗೆಯದೇನು 6ನಂಬಿದೆ ನಿನ್ನ ಚರಣಸರೋಜವ ಅಂಬುಜನಾಭ ಗುರು ವಾಸುದೇವನಂಬುಗೆಯನು ಕೊಟ್ಟು ಕರುಣವೆನ್ನೊಳಗಿಟ್ಟುುಂಬಿಟ್ಟು ಸಲ'ದ ವೆಂಕಟರಮಣ ನೀ7
--------------
ತಿಮ್ಮಪ್ಪದಾಸರು
ತನು ಸಹ ಕಾಂಬುದೆ ಬ್ರಹ್ಮಸತ್ಯವು ಸತ್ಯವ ಕೇಳೆಲೋ ತಮ್ಮತನು ಸಹ ಕಾಂಬುದೆ ಬ್ರಹ್ಮತನುವನು ಬಿಟ್ಟು ಬೇರೇನೂ ತೋರದುನಿನಗೆ ಅರಿದು ನಿಮ್ಮಪ್ಪಗೆ ಅರಿದು ಪ ಹೂವನೆ ಮುಂದೆ ಮುಂದಿಟ್ಟುಕೊಂಡುಸರ ಕಟ್ಟಬಹುದು ದೊಡ್ಡ ಚೆಂಡುಹೂವನೆ ಮುಂದಿಟ್ಟಿಕೊಂಡುಹೂವನೆ ಬಿಟ್ಟು ಪರಿಮಳ ಕಟ್ಟೆನೆಅವ್ವಗೆ ಅರಿದು ಅವ್ವನವ್ವಗೆ ಅರಿದು1 ಮುತ್ತದು ಕೇವಲ ಜ್ಯೋತಿ ಕಿವಿಗೆಮುತ್ತಿಡುವರಿಗದು ನೀತಿಮುತ್ತದು ಕೇವಲ ಜ್ಯೋತಿಮುತ್ತದು ಬಿಟ್ಟು ಜ್ಯೋತಿಯ ಬಿಡು ಎನೆಮುತ್ತದು ಅಜಗೆ ಅರಿದು ಮಹೇಶ್ವರಗರಿದು2 ಬೆಲ್ಲದ ಮುದ್ದೆಯ ನೋಡುಹಲ್ಲಿನಿಂದಲೇ ತಿನಬೇಕು ಕಡಿದುಬೆಲ್ಲದ ಮುದ್ದೆಯ ನೋಡುಬೆಲ್ಲವನು ಬಿಟ್ಟು ಸಿಹಿಯನು ತಿನ್ನೆನೆಬಲ್ಲ ಚಿದಾನಂದ ಸದ್ಗುರುಗರುದು 3
--------------
ಚಿದಾನಂದ ಅವಧೂತರು
ತನ್ನ ತಿಳಿಯದವನೇಕೆ ಇನ್ನವನನು ಸುಡಬೇಕು ಪ ವೇದಾರ್ಥಿಯು ತಾನಾಗಿ ವಾದಿಸುತಿಹನೀ ಗೂಗೆಓದಿದ ಓದದು ವ್ಯರ್ಥ ಒಳ್ಳಿತಾಗಿ ಗಳಿಸಿದನರ್ಥ 1 ಆಚಾರದಿ ಒದ್ದಾಡಿ ಅಡವಿಯ ಹಿಡಿದನು ಖೋಡಿಕುಚಾಳಿಯೆ ವ್ಯವಹಾರ ಕುಮಂತ್ರಕೆ ಬಲು ಧೀರ 2 ಮಾನ್ಯರ ಕೋಪದಿ ಝಡಿವಾ ಅವಮಾನ್ಯರ ಕೊಂಡಾಡಿ ನುಡಿವಾಜ್ಞಾನದ ಹಾದಿಯ ಕಾಣ ಗೋಣಿಯ ಹೊರುವ ಕೋಣ3 ಮುಕ್ತಿಯ ತಿಳಿಯಲು ಬಾರ ಮುಂದಿನ ಭವಿತವ ನೋಡಭಕ್ತಿಯೆಂಬುದಿಲ್ಲ ಈ ಕತ್ತೆಗೇನು ಸಲ್ಲ 4 ಕಲ್ಲನೆ ದೇವರು ಎಂಬ ಕಡಮೆಯಲಿಲ್ಲವು ಎಂಬಒಳ್ಳಿತಲ್ಲವು ಅವನಿರವು ಒಲಿದವನೇ ಚಿದಾನಂದ ಗುರುವು 5
--------------
ಚಿದಾನಂದ ಅವಧೂತರು
ತಪ್ಪುಗಳೆಣಿಸಾದೆನ್ನಪ್ಪ ಕಾಯಲಿಬೇಕು |ಸರ್ಪಶಯನನ ದೂತಾ ||ಇಪ್ಪತು ಒಂದು ಕುಭಾಷ್ಯ ಮುರಿದ | ರಾ ಮ |ತ ಪ್ರವರ್ತಕ ರಾಘವೇಂದ್ರ ಮುನಿಪ ಮಹಾ ಪ ಪ್ರತಿ ವರುಷಕೆ ಬಂದು ಸನುತಿಸಿ ಪೋಗು ಎಂದು |ನತ ಸ್ವಪ್ನದಲಿ ನೀ ಬಂದೂ ||ಹಿತದಿಂದ ಪೇಳಲು ರತನಾಗಿ ಧನದಿ ಮ |ರತು ಬಿಟ್ಟೆ ನಿಮ್ಮನು ಯತಿಕುಲೋತ್ತಮ ಇಂಥಾ 1 ಸ್ನಾನ ಸಂಧ್ಯಾನ ಸುಜಪತಪ ವ್ರತಹೋಮ |ಮೌನ ಮಾರ್ಗಗಳರಿಯೆ ||ಜ್ಞಾನಿಗಳಾನು ಸಂಧಾನ ಪೂರ್ವಕ ಪೂಜೆ |ಯಾನು ಮಾಡದೆ ದುಷ್ಟ ಮಾನವರೊಳಗಿದ್ದೆ 2 ಏಸು ಜನ್ಮದಿ ಬಂದಾ ದೋಷವ ಕಳದು ವಿ |ಶೇಷ ಸುಖವ ಕೊಡುವಾ ||ಈ ಸುವಾರ್ತಿಯ ಕೇಳಿ ಮೊರೆಹೊಕ್ಕೆ ಗುರು ಪ್ರಾ ||ಣೇಶ ವಿಠಲನ ದೂತಾ ಮತಪ್ರೀತಾ 3
--------------
ಗುರುಪ್ರಾಣೇಶವಿಠಲರು
ತರತಮದಿ ಶರಣು ಮಾಡುವೆ ನಿಮಗೆ ಕರಣಶುದ್ಧಿಯಲ್ಲಿ ಕರುಣ ಮಾಡಿ ಎನ್ನ ಪರಿಪಾಲಿಸಬೇಕು ನಿರುತ ಬಿಡದೆ ಮನ ಸಿರಿಹರಿ ಚರಣಕ್ಕೆ ಎರಗುವಂತೆ ವರಭಕುತಿಯಲ್ಲಿ ಪ ಪರಮೇಷ್ಠಿ ವಾಯು ಸರಸ್ವತಿ ಭಾರತೀ ಉರಗ ಈಶ ಹರಿ ಸತಿಯರು ಮೂ ರೆರಡು ಜನರು ಆ ತರುವಾಯ ಸೌಪರ್ಣಿ ಸಿರಿ ಗುರು ದಕ್ಷನೆ ಶಚಿ ಮರುತ ಪ್ರವಾಹ ಮೂ ವರು ಸನಕಾದ್ಯರು ದುರಿತಶಾಸನ ಶಶಿ ತರಣಿ ಶತರೂಪ ವರುಣ ನಾರದರ 1 ಮುನಿಗಳ ಶ್ರೇಷ್ಠ ಭೃಗು ಅನಲ ಪ್ರಸೂತಗಾಧಿ ತನುಜ ವಾರಿಜಾಜನ್ನತನಯರು ವೈವಸ್ವತ ಸೂರ್ಯ ದನು ಪ್ರವಾಹವೆಂಬ ಅನಿಲನ್ನ ತಳೋದರಿ ಅನಿಲದೇವಜ ಅಶ್ವಿನಿ ದೇವತೆಗಳು ಅನಳಾಕ್ಷಸುತ ಧನಪತಿ ಪ್ರಹ್ಲಾದ ಗುಣಿಸುವೆ ವಸು ಏ ಳನು ದಶರುದ್ರರು ಇನಿತರೊಳಗೆ ಒಬ್ಬನ ಬಿಟ್ಟನು ದಿನ 2 ದಶ ವಿಶ್ವದೇವತರು ಸ್ವಶನರೊಳಗೆಗೀರ್ವರ ರಸದ್ಯುನವಕೋಟಿ ತ್ರಿದಶರೂಪ ಪಿತ್ರರೂ ಎಸವ ಸೋಮ ಪುನರ್ವಾಪಸರಿಪಶತಸ್ಥರು ನಸುನಗೆ ಕರ್ಮಜ ಋಷಿ ಈರ್ವರು ಮನು ಕುಶಲ ಸಪ್ತ್ತರಿಗೆ ತುತಿಸೆ ಕಾಲಕಾಲದಿ 3 ಮಾಂಧಾತ ಬಲಿ ಶಶಿಬಿಂದುವೆ ಪ್ರಿಯವ್ರತ ಪರೀಕ್ಷಿತ ನಂದ ಕಕುಸ್ಥ ಗಯ ಕುಂದದೆ ಯದುಕುಲದಿಂದ ಬಂದ ಹೈಹಯನು ಚಂದ್ರನ ಮಡದಿ ಏಳೊಂದನೆ ಸೂರ್ಯನು ಮಂದಹಾಸಾಂಬುಜ ಬಾಂಧವನಸತಿ ಕಲದರ್ಪನಸೂಸೆ ವೃಂದಾರಕರಿಗೆ 4 ಸದಮಲ ಸ್ವಾಹಾದೇವಿ ಬುಧಾ ಉಷಾದೇವಿ ಶನಿ ಮುದದಿಂದ ಪುಷ್ಕರ ಸಹೃದಯ ತುಂಬರರಿಂದ ಮೊದಲಾಗಿ ನೂರುಮಂದಿ ತ್ರಿದಶ ಗಂಧರ್ವರು ಚದುರೆ ಊರ್ವಸಿ ರಂಭೆ ಅದಿತಿ ಕಶ್ಯಪದಿತಿ ಹದಿನಾರು ಸಾವಿರ ಬುಧನ ಮಕ್ಕಳು ತಪೋನಿಧಿಗಳು ಎಂಭತ್ತು ತದುಪರಿ ಅಜಾನಜ ತ್ರಿದಶರು ಓಜಸ್ತರೆದರಾಗಿ ನಾನಿಂದು 5 ಹರಿಭಕ್ತರಾದ ಅಪ್ಸರ ಸ್ತ್ರೀಯರು ಕೆಲಕೆಲವು ಮರಳೆ ಚಿರಾಖ್ಯನಾಮದಿರುತಿಪ್ಪ ಪಿತೃಗಳು ಪರಿಪರಿ ನೂರುಕೋಟಿ ಪರಮಋಷಿಗಳಿಗೆ ಸುರ ಗಂಧರ್ವರ ವಿಸ್ತರ ಮನುಜ ಗಂಧರ್ವ ಧರಿಣಿಜಾಕವಿ ಮೇಲರಿದು ಜಯಂತಗೆ ಕರ ಮುಗಿವೆ ಕ್ಷಿತಿಪರನು ಕೊಂಡಾಡುತ ಇರುಳು ಹಗಲು ಉತ್ತಮರ ಮನುಜರ ಪಾಡಿ ನಿರುತ ಜಂಗಮ ಸ್ಥಾವರಗಳ ನೋಡುತ 6 ಭುಜಗಶಯನನಿಂದ ಸೃಜಿಸಿದ್ದ ಸರ್ವರಿಗೆ ನಿಜವಾಗಿ ಶಿರವಾಗಿ ಭಜಿಸುವೆ ಚನ್ನಾಗಿ ತ್ರಿಜಗದೊಳಗೆ ಎನ್ನ ರಜ ತಾಮಸ ಗುಣದ ವೃಜವೆ ಓಡಿಸಿ ನಿತ್ಯಸುಜನ ಮಾರ್ಗವ ತೋರಿ ರಜನಿ ಚರಾಂತಕ ವಿಜಯವಿಠ್ಠಲನ್ನ ಭಜಿಪೆನದಕೆ ನಿಮ್ಮ ನಿಜವ್ಯಾಪಾರದಿ ಸೃಜಿಸಿ ಕೊಡುತ ಧರ್ಮ ವೃಜಗಳೊದಗಿಸುತ್ತ ಕುಜನ ಮತದ ಮೇಲೆ ಧ್ವಜವೆತ್ತಿಸುವುದು 7
--------------
ವಿಜಯದಾಸ
ತಲೆಯ ತೂಗಿ ನಗುವುದೇನೊ ಚೆಲುವ ತಿಮ್ಮರಾಯ ನೀ ತಿಳಿಸಿದಂತೆ ನುಡಿದೆನಿಂದು ಸಲುಹಬೇಕು ಜೀಯ ಪ. ಯೋಗ ಮಾಯ ಶಕ್ತಿ ತಾಳ ರಾಗ ರಚನೆಯರಿಯೆ ಲಾಘವಾದಿ ವರ್ಣಭೇದವಾಗಲಿದನು ತೊರೆಯೆ ಶ್ರೀಗುರು ಮುಖೇಡ್ಯ ನಿನ್ನಾದಾಗಲು ನಾ ಮರೆಯೆ ನಾಗಶಯನ ನಿನ್ನ ಪದಕೆ ಬಾಗಿ ನುಡಿವೆ ದೊರೆಯೆ 1 ಮಾನಸ ವಾಕ್ಕರ್ಮವೆಲ್ಲ ನೀನೆ ಮಾಳ್ಪಿಯೆಂದು ಧ್ಯಾನಿಸಿಕೊಂಡಿಹೆನು ಭಕ್ತಾದೀನ ಕರುಣಾಸಿಂಧು ಮಾನವಿಯ ನುಡಿಯೊಳಿರುವ ನಾನಾ ಥರವ ಕುಂದು ನೀನೆ ಕ್ಷಮಿಸಬೇಕು ಪದ್ಮಮಾನ ದೀನ ಬಂಧು 2 ಬುದ್ಧಿಹೀನ ಶಿಶುವು ನುಡಿವಾ ಬದ್ಧ ಮಾತಿನಿಂದ ಲೆದ್ದು ಬಂದು ಜನನಿ ತೊಡೆಯೊಳಿದ್ದು ಕೇಳುವಂದ ಸಿದ್ಧವಾಗು ಶ್ರೀನಿವಾಸ ಶುದ್ಧ ಪೂರ್ಣಾನಂದ ಗೋಪಿ ಕಂದ 3
--------------
ತುಪಾಕಿ ವೆಂಕಟರಮಣಾಚಾರ್ಯ
ತಾಯಿ ಅಲ್ಲವೇ ನೀನು ಹೆತ್ತ ಪ ತಾಯಿಯಾದ ಮೇಲೆ ಕತ್ತೆಮರಿಯಾದರೂ ಪೊರೆಯಬೇಕುಎನ್ನ ಅ.ಪ. ಸಾರ್ಥಕಾಗಲಿಲ್ಲ ಜನುಮವು ವ್ಯರ್ಥವಾಯಿತಲ್ಲಾಸಾಗುತಿದೆ ಆಯು ಸಹಿಸಲಾರೆ ಬಡಿಸೆ ಭವದ ನೋವು 1 ಸಾರವೆಲ್ಲಿದೆ ಸಂಸಾರ ಶರಧಿಯೊಳಗೆ ಮುಣುಗಿದೆ ಅಸಾರ ಸುಖವ ಸವಿದು ಘನ ಸಂಸಾರಿ ಎನಿಸಿ ಮೆರೆದೆ 2 ನಿಷ್ಠೆಯಿಂದ ನಿನ್ನ ಭಜಿಸಿದೆ ಭ್ರಷ್ಟನಾದೆ ಇನ್ನು ಶಿಷ್ಟರೊಡಯ ತಂದೆವರದಗೋಪಾಲವಿಠ್ಠಲನ ಮುಟ್ಟಿ ಭಜಿಪ ಎನ್ನ 3
--------------
ತಂದೆವರದಗೋಪಾಲವಿಠಲರು
ತಾರಕವಿದು ಹರಿಕಥಾಮೃತಸಾರ ಜನಕೆ ಪ ಘೋರತರ ಅಸಾರ ಸಂಸಾರವೆಂಬ ವನಧಿಗೆ ನವ ಅ.ಪ. ಶ್ವಾನಸೂಕರಾದಿ ನೀಚಯೋನಿಗಳಲಿ ಬಂದು ನೊಂದು ವೈನತೇಯ ವಾಹನನ ಸನ್ನಿಧಾನ ಬೇಕು ಎಂಬುವರಿಗೆ 1 ಪ್ರಿಯವಸ್ತುಗಳೊಳಗೆ ಪಾಂಡುವೇಯ ಸಖನೆ ಎಮಗೆ ಬ್ರಹ್ಮ ಸುರರು ತಂದೆ ತಾಯಿ ಎಂದರಿತವರಿಗೆ 2 ಜ್ಞೇಯ ಜ್ಞಾನ ಜ್ಞಾತೃ ಬಾದರಾಯಣಾಖ್ಯ ಹರಿಯ ವಚನ ಕರ್ಮ ಶ್ರೀ ಯರಸ ನೀವನರಗೆ 3 ಶ್ರೀ ಮುಕುಂದ ಸರ್ವ ಮಮಸ್ವಾಮಿ ಅಂತರಾತ್ಮ ಪರಂ ಧಾಮ ದೀನಬಂಧು ಪುಣ್ಯ ನಾಮವೆಂದರಿತವರಿಗೆ 4 ಭೂತಭವ್ಯ ಭವತ್ಪ್ರಭು ಅನಾಥಜನರಬಂಧು ಜಗ ನ್ನಾಥ ವಿಠ್ಠಲ ಪಾಹಿಯೆಂದು ಮಾತುಮಾತಿಗೆಂಬುವರಿಗೆ 5
--------------
ಜಗನ್ನಾಥದಾಸರು
ತಾಳಬೇಕು ಭಕ್ತಿಯೇಳಬೇಕು ಪ ತಾಳಬೇಕಾದವನು ಮೇಳದಲಿ ಬಾಳಬೇಕು ಅ.ಪ ಹಾಡಲು ತಾಳಬೇಕು ಬೇಡಲು ತಾಳಬೇಕು ಓಡಾಡಿ ಕುಳಿತು ಮಾತಾಡಲು ತಾಳಬೇಕು ನೋಡಬೇಕಾದವನು ನೋಡಲು ತಾಳಬೇಕು ಮಾಡಿ ಮುಳುಗುವ ಜನ್ಮಬೇಡೆಂದು ತಾಳಬೇಕು 1 ತಾಳರಿತಮೇಲಂತರಾಳವನು ಕಾಣಬೇಕು ತಾಳದವ ಬಾಳುವನೇ ಮೇಳದೊಳಗೇ ತಾಳ ನೋಡುವರೆಲ್ಲ ಹೂಳನೋಡಲಿಬೇಕು ತಾಳಿ ಮಾಂಗಿರಿರಂಗನೂಳಿಗಕ್ಕೆ ನುಗ್ಗಬೇಕು 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತಾಳಲಾರೆನಮ್ಮಾ ಬಾಲಕನಟ್ಟುಳಿ ಗೋಪೀಘನವಮ್ಮ ಕೇಳಿದುಳವಿಲ್ಲಾ ಕೇಳಿದುಳವಿಲ್ಲಾ ಕಾಲಕಾಲದಲಿಟ್ಟ ಬೆಣ್ಣೆ ಮೂಲವಿರಲಿಕ್ಕಿಲ್ಲಾ ಪ ಅತ್ತನೋಡ ಲಿಹಾ ಇತ್ತ ನೋಡಲಿಹಾ ಸುತ್ತಸೂಸುತ ಬಾಲೆಯರಾ ಚಿತ್ತಮೋಹಿಸುತಿಹಾ1 ಹಿಡಿದೇನೆಂದರೆ ಸಿಕ್ಕಾ ತುಡುಗ ಬಲುದಕ್ಕಾ ಹಿಡಿದು ನಿಲ್ಲಿಸುವರಿಲ್ಲಾ ಪೊಡವಿಲಿವನ ತುಕ್ಕಾ2 ಆರಿಗೇ ವಿಚಾರಾ ಸಾರಬೇಕು ದೂರಾ ಸೂರೆಹೋಗುತಿದೆ ಸಂಸಾರಾ ಸುಖಸಾರ 3 ತಂದೆಮಹಿಪತಿ ನಂದನ ಸಾರಥಿ ಇಂದು ನಮ್ಮ ಕಾಡಿದರ ಮುಂದಾರುಗತಿ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಿಂಡಿಯಾಗಲಿ ಬೇಗ ಪ ತೊಂಡರೊಡನೆ ಕೂಡಿ ತ್ವರಿತದಿ ಹೊರಡೋಣ ಅ.ಪ ಅನ್ನಸಾರೆರಡೇ ಬೇಕು | ಮಿಕ್ಕಾದ್ದೆಲ್ಲಾ ಹನ್ನೊಂದು ಗಂಟೆ ಹೊತ್ತಿನೊಳಗೆ ಅಡಿಗೆಯ ಮಾಡಿ ಹರಿದಾಸರ ಕೂಡಿ ಆ ವೂರಿಗೆ ಹೋಗೋಣ1 ಕಟ್ಟಿ ಪಾತ್ರೆಯೊಳಗಿರಿಸಿ ಜಾತ್ರೆ ನೋಡುವುದಕ್ಕೆ ಜನರು ಮಿತ್ರರು ಸಹ 2 ಉಪ್ಪಿನಕಾಯಿ ತೆಗಿಯಲಿ ಹಪ್ಪಳ ಸುಟ್ಟು ನಮ್ಮಪ್ಪ ಗುರುರಾಮ ವಿಠ- ಲ್ಪಪನ ನೆನೆಯುತ ಚಪ್ಪಾಳೆ ತಟ್ಟುತ 3
--------------
ಗುರುರಾಮವಿಠಲ
ತಿಂದು ಹೋಗುವರೆಲ್ಲ ಹೊರತು ತಂದು ಕೊಡುವರಿಲ್ಲ ಪ ಕಷ್ಟಪಡುವೆವು ಅ.ಪ ಊರಿನ ಜನವಷ್ಟು | ಒಳ್ಳೆಯ ಶೀರೆ ಕುಪ್ಪಸ ತೊಟ್ಟು ನೀರಿಗೆ ಪೋಗುವ ದಾರಿಯಲಿ ಬಹರು ವಾರಿಗೆಯವರಂತಿಹುದಾನೆಂದಿಗೂ 1 ಹಿತವಾದಡಿಗೆಯ ಮಾಡಿಡಬೇಕು ಗತಿಗೆಟ್ಟ ರೋಗಿಗಳಿಗೆ ಅಕಟಾ 2 ಗಂಡನ ಕಡೆಯವರ | ಸೇವಿಸಿ ಬೆಂಡಾಯ್ತು ಶರೀರ ಯಾವ್ಯಾವ ಊರಿಗೊ ರೋಕಲಾರೆ ಹಾ 3 ನೀರು ಸೇದಲಾರೆ | ವುಂಡು ದೂರುವರು ಬೇರೆ ಸೋರುವುದು ಮನೆಯು ಸುಖವು ಕಾಣೆ ತೌರುಮನೆಯಾಸೆ ತಪ್ಪೆ ಹೋಯಿತು 4 ಅಕ್ಕಿಬೇಳೆಯಿಲ್ಲ | ಮುಗಿದಿತು ರೊಕ್ಕಮೂಲವೆಲ್ಲ ಇಕ್ಕಿ ಇಕ್ಕಿ ಕೈಬರಿದಾಯಿತು ಪೊಂ- ಬಕ್ಕಿದೇರ ಗುರುರಾಮ ವಿಠಲ 5
--------------
ಗುರುರಾಮವಿಠಲ