ಒಟ್ಟು 931 ಕಡೆಗಳಲ್ಲಿ , 87 ದಾಸರು , 810 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯೋ - ಕಾಯೋ ಪ ಕಾಯೋ ಕಾಯೋ ಗುರು - ರಾಯನೆ ತವ ಪದ ತೋಯಜ ಯುಗ ಎನ್ನ ಕಾಯದಲಿಟ್ಟು ಅ.ಪ ಕ್ಷುಲ್ಲಕ ಮನುಜರ - ಸೊಲ್ಲನೆ ನೀಗಿಸಿ ಹಲ್ಲನೆ ಮುರಿಯುವ - ಬಲ್ಲಿದ ನೀನೇ 1 ಭದ್ರ ಭಕುತಿಯ - ಉದ್ರೇಕವಿತ್ತು 2 ತ್ವತ್ಸೇವಾ ಜನರಲಿ - ಮತ್ಸರ ಮಾಡುವ ಕುತ್ಸಿತ ಜನತÀÀತಿ - ವಿಚ್ಛೇದ ಮಾಡುವ 3 ನಿನ್ನಯ ಜನರನ - ಮನ್ನಣೆ ಮಾಡದೆ ಬನ್ನವ ಬಡಿಪರ - ಖಿನ್ನರ ಮಾಡೀ 4 ದೂತರ ನಿಚಯಕೆ - ಈ ತೆರ ಚಿಂತೆಯು ಯಾತಕೆ ಗುರು ಜಗನ್ನಾಥ ವಿಠಲ ದೂತಾ 5
--------------
ಗುರುಜಗನ್ನಾಥದಾಸರು
ಕಾರುಣ್ಯ ಮೂರುತಿ ಕರುಣಾಸಾಗರ ಪ ಘೋರದುರಿತ ಸಂಹಾರ ಜಗತ್ಕರ್ತ ಮಾರ ಜನಕ ಶ್ರೀ ಮನೋಹರನ ವಾರಿಜಾಂಬಕ ಕೃಷ್ಣ ವಾರಧಿ ಶಯನನ ಪಾರಿಮಾರ್ಥಿಕ ನರಿತು ಪರಮ ಹರುಷದಿಂದ 1 ಕುಂಭಿನೀ ಪತಿರಾಮ ಕೋದಂಡಧರ ಗುಣ ಗಂಭೀರ ಪುರುಷ ಶ್ರೀ ಘನ ಮಹಿಮನ ಶಂಬರಾರಿಯ ಕೊಂದ ಶಿವನ ರಕ್ಷಿಸಿದಂಥ ಕಂಬು ಕಂಧರ ಕನಕಾಂಬರ ಭೂಷಣನಾ 2 ಅಗಣಿತ ಚರಿತ ಅನಂತ ಅವತಾರನ ನಿಗಮಗೋಚರ ವಿಷ್ಣು ನಿಜ ನಾಮವು ಬಗೆ ಬಗೆಯಲಿ ಅತಿ ಭಕುತಿಯಿಂದಲಿ ಜಯ ಜಗದೊಡೆಯ ಹೆನ್ನ ವಿಠ್ಠಲನ ಜಿವ್ಹದಿ 3
--------------
ಹೆನ್ನೆರಂಗದಾಸರು
ಕಾವನಯ್ಯಾ ಜಗವನನುದಿನ | ದೇವ ತಿರುಪತಿಯ ದಾಸಾ ಶ್ರೀ ವಲ್ಲಭವೆಂಕಟೇಶಾ ಪ ತರಳ ಉತ್ತಾನಪಾದಿಯ ನೋಡು | ಮಂದ ಕಾಯನ್ನ | ಕುರೂಪಿಯಾದ ಕುಬಜೆ ವ್ಯಭಿ | ಚರಿಯ ಅಜಮಿಳನ ಕಾಯದ 1 ಬಡವನಾಗಿದ್ದ ಸುಧಾಮ ಕೊಲೆ ಗಡಿಕನಾದ ಕಿರಾತನ್ನ ನೋಡು | ನಡತೆ ತಪ್ಪಿದ ಸುಗ್ರೀವ ಕುಲವ | ಕಡಿದ ಪಾರ್ಥನ್ನ ಕಾಯದಾ 2 ಇಟ್ಟಿಗೆ ವಗೆದ ಪುಂಡಲೀಕನ | ಬೆಟ್ಟಲೆ ಬೆಟ್ಟವ ನೆತ್ತಿಸಿದವನಾ | ಪೆಟ್ಟನು ಫಣಿಗೆಯಿಟ್ಟ ಭೀಷ್ಮನ | ಕಟ್ಟಿಬಿಗಿದ ಗೋಪಿಯ ಕಾಯದಾ3 ಜನನ ನೋಡು ವಿದುರನ್ನ ಕ ರುಣಿ ಎಂಬೆನೆ ರುಕುಮಾಂಗದ | ಮನೆ ಉಳ್ಳವರೆ ಸನಕಾದಿಗಳು | ಮಣಿಹಾಕಿಸಿದ ಭೂಪತಿಯ ಕಾಯದಾ4 ಶಕುತಿ ಮಿಕ್ಕಾದ ಕರ್ಮಗಳು ನೋಡಾ | ಭಕುತಿಗೆ ಮಾತ್ರ ಸಿಲುಕುವವನು | ಭಕುತವತ್ಸಲ ಶ್ರೀನಿವಾಸಾ | ಅಕಳಂಕ ರೂಪ ವಿಜಯವಿಠ್ಠಲ 5
--------------
ವಿಜಯದಾಸ
ಕಾವವನೆ ಕರ್ಮಜಯ ಬಳಿಕಂ ಸಾವವನೆ ಉಣ್ಣುವರು ಜನರು ಭಾವವನೆ ಅರಿದಿರಿಸು ಜೀವರ ನಿನ್ನಂಘ್ರಿಯಲಿ ಪ ದಾಸವೃಂದವು ತೋಷದಿಂದಲೆ ಪೂಶರಯ್ಯನ ವಿಡಿದು ಘನ ಸಂ- ಸುಕೃತ ಫಲವಿಹುದೋ ಶ್ರೀಶನಲಿ ನಿಜದಾಸ ಭಕುತಿಯ ಮೀಸಲಿರಿಸೀ ಮನವ ಮೋಹದೆ ಆಶೆ ಗಳಿಸದೆ ಶ್ರೀಹರಿಯ ನಿಜವಾಸ ಕೈಯ್ಯುವರು 1 ಮೃಗಜಲಕೆ ನೀರೆಂದು ಭಾವಿಸಿ ಪೊಗಲೆಳಿಸುವೆರಳೆಗಳ ಪರಿಯಲಿ ಮೃಗನಯನೇರತಿ ಚೆಲ್ವಿಕೆಗೆ ಜಗವೆಳಸಿ ಬಳಲುವದು ಮಿಗಿಲಾಗಿದ ವಿಷಯಲನಲದಿ ಧಗಧಗಿಸಿ ಜನಗಳು ಪೋಪರಲ್ಲದೆ ಖಗಪತೀ ವಾಹನನ ನೆನೆಯರು ಜಗವ ಪಾವನನು 2 ನೀರಜಾಸನ ಪಿತನೆ ಅಕ್ಷಯ ಶ್ರೀ ರಮಾವಲ್ಲಭನೆ ತವ ಪರಿ ವಾರವಲ್ಲದೆ ಸತಿಸುತರು ಮೇಣ್ ದೇಹ ಬಾಂಧವರು ಸಾರಸುಮತಿಯನಿತ್ತೆಮಗೆ ಹರೆ ಸೇರಿಸೆಮ್ಮನು ನಿನ್ನ ಅಡಿಯಲಿ ಧೀರ ಶ್ರೀ ನರಸಿಂಹವಿಠ್ಠಲ ಪಾರಗಾಣಿಪುದು 3
--------------
ನರಸಿಂಹವಿಠಲರು
ಕೀಚಕಾಂತಕ ಭೀಮಸೇನರಾಯ ಯಾಚಿಸುವೆ ನಿನಗಾನು ಎಲ್ಲರನು ಸಲಹೆಂದು ಪ ಕುಂತಿ ಜಠರೋದ್ಭವನೆ ಕುವಲಯದೊಳಗಿಪ್ಪಮ ಹಂತರಿಗೆ ಬಪ್ಪ ಜನ್ಮಾದಿರೋಗ ಚಿಂತೆಗಳ ಕಳೆದ ನಿಶ್ಚಿಂತರನು ಮಾಡು ಸ ರ್ವಾಂತರಾತ್ಮಕ ಸುಖದ ಸರ್ವೇಶ ಶಕ್ರಾದಿ ನುತ 1 ದ್ರೌಪದೀರಮಣ ಜ್ಞಾತಾಜ್ಞಾತ ಕರ್ಮಜ ಮ ಹಾಪರಾಧಗಲೆಸದನು ದಿನದಲಿ ನೀ ಪೊರೆಯಬೇಕುಪೇಕ್ಷಿಸದೆ ನಿನ್ನವರ ವಿ ವಿಶ್ವ ಚೇಷ್ಟಕನೆ 2 ಕೌರವಾಂತಕನೆ ಕಾಶ್ಯಪಿಸುತರ ಸಂತೈಪ ಭಾರ ನಿನ್ನದು ಭವದಿ ಭಕ್ತಬಂಧೋ ಪ್ರೇರಕ ಪ್ರೇರ್ಯ ರೂಪಗಳಿಂದ ಸರ್ವರ ಶ ರೀರದೊಳಗಾಡುವೆ ದೇವತೆಗಳೊಡನೆ 3 ಪವಮಾನತನಯ ಪಾಪಿಷ್ಠರೊಳಗಿದ್ದು ನಿ ನ್ನವರನೀಪರಿ ದಣಿಸಿ ನೋಡುತಿಹುದು ಭುವನತ್ರಯೇಶ ಭೂಷಣವೇನೋ ನಿನಗೆ ಸ ತ್ಕವಿ ಕುಲೋತ್ತಂಸ ಕಾವರ ಕಾಣೆ ನಿನ್ನುಳಿದು 4 ಧನಧಾನ್ಯ ಪಶುಪತ್ನಿ ಜ್ಞಾನಭಕುತಿ ತನಗೆ ತಾನೊದಗಿ ಬಪ್ಪುದು ಸುನಿಶ್ಚಯ ಸನಾ ತನ ಜಗನ್ನಾಥ ವಿಠ್ಠಲನೊಲುಮೆ ಪಾತ್ರ 5
--------------
ಜಗನ್ನಾಥದಾಸರು
ಕುದುರೆ ಬಂದಿದೆ ಚೆಲುವಕುದುರೆ ಬಂದಿದೆ ಪ. ಕುದುರೆ ಬಂದಿದೆ ವಾದಿರಾಜಗೆಮುದದಿ ಜ್ಞಾನ ಭಕುತಿ ಕೊಡುವ ಅ.ಪ. ಹಿಂಗಾಲಿಂ ರಕ್ಕಸರ ಒದೆವ ಕುದುರೆಮುಂಗಾಲು ಕೆದರಿ ಬಾಲವ ಬೀಸಿತಗ್ಗಿಸಿ ತಲೆಯ ಅಡಿಗಡಿಗೆಜಿಗಿದು ಹಾರಿ ಹುಂಕರಿಸುವ1 ಗರುವಿ ಮಹಲಕ್ಷ್ಮಿ ತನ್ನವರನೆಂದು ಒಲಿದು ಬರುವಉರದಿ ಶ್ರೀವತ್ಸ ಕೌಸ್ತುಭಧsÀರಿಸಿ ತಾಂ ಮೆರೆಯುವಂಥ 2 ಹಲ್ಲಣವಿಲ್ಲದೆ ನಿಲ್ವುದು ಕುದುರೆಒಲ್ಲದು ಕಡಿವಾಣ ಕುದುರೆಬೆಲ್ಲಕಡಲೆ ಮೆಲ್ಲುವ ಕುದುರೆಚೆಲುವ ಹಯವದನನೆಂಬೊ ಕುದುರೆ 3
--------------
ವಾದಿರಾಜ
ಕೂಗಳತಿ ಎಂಬೊ ಸಂಶಯಸಲ್ಲಾಪ ಸಮಚಿತ್ತದಲ್ಲಿ ಇದ್ದು | ಸಮ ವಿಷಮ ತಿಳಿದೆದ್ದು | ಕುಮತ ಮತವನು ವದ್ದು | ಬಲು ಉಬ್ಬೆದ್ದು | ಕಮಲ ಪೀಠನ ಹೊದ್ದು | ಕ್ರಮಣಿ ಯೋಪಾದಿಯಲಿದ್ದು | ತಮಕ್ಕೆ ಹರಿನಾಮ ಮದ್ದು | ಶ್ರಮ ಕಳುಕದವಗೆ1 ಭಾಗವತರ ನೋಡಿ | ವೇಗ ಮನಸನು ಮಾಡಿ | ಬಾಗಿ ಸಿರವನೆ ನೀಡಿ | ನಲಿದು ಪಾಡಿ | ಯೋಗವಾಗದೆ ಕೂಡಿ | ಭೋಗವನು ಈಡಾಡಿ | ತೂಗಿ ಮೈಯಲಾಡಿ ಪುಣ್ಯದನವನಿಗೆ 2 ಹರಿ ಭಕುತಿಯ ಬೇಕು | ನರಹರಿಯ ಸ್ಮರಣೆ ಬೇಕು | ಹರಿಕಥಾ ಬೇಕು | ಹರಿ ಎನಲಿ ಬೇಕು | ಹರಿಯ ಭಜಿಸಲಿ ಬೇಕು | ಹರಿವೊಲಿಮೆ ಇರಬೇಕು | ಹರಿಯಲ್ಲದಿಲ್ಲೆಂದು ಹರಿದು ನುಡಿದವನಿಗೆ 3 ಆಸಿಯನು ಕಳೆದು | ದುರ್ವಾಸನೆ ಹಮ್ಮು ಕಳೆದು | ಕ್ಲೇಶವನು ಅಳಿದು | ತೋಷದಲಿ ಬೆಳೆದು | ದೋಷರಾಶಿಗೆ ಮುಳಿದು | ದೂಷಕರನೆ ಅಳಿದು | ಭೇಷಜವನೆ ಅಳಿದು | ದಾಸರ ಬಳಿಗೆ ಸುಳಿದವಗೆ 4 ಆಚಾರವನು ಪಿಡಿದು | ಸೂಚನೆ ಅರಿತು ನಡೆದು | ವಾಚಗಳ ಮಿತಿ ನುಡಿದು | ನಾಮಗುಡಿದು | ಸಿರಿ ವಿಜಯವಿಠ್ಠಲರೇಯನ | ಯೋಚನಿಂದಲಿ ಬಿಡದೆ | ದಿನವ ಹಾಕುವನಿಗೆ 5
--------------
ವಿಜಯದಾಸ
ಕೃತಿ 5 ಇಂದು ಎನಗೆ ಗೋವಿಂದ ನಿನ್ನ ಪಾದಾರ ವಿಂದವ ತೋರೊ ಮುಕುಂದ ಪ ಸುಂದರ ವದನನೆ ನಂದಗೋಪನ ಕಂದ ಮಂದರೋದ್ಧರ ಆನಂದ ಇಂದಿರಾ ರಮಣ ಅ.ಪ ನೊಂದೆನಯ್ಯ ಭವಬಂಧನದೊಳು ಸಿಲುಕಿ ಮುಂದೆ ದಾರಿ ಕಾಣದೆ ಕುಂದಿದೆ ಜಗದೊಳು ಕಂದನು ಎಂದೆನ್ನ ಕುಂದುಗಳೆಣಿಸದೆ ಕಂದರ್ಪ ಜನಕನೆ 1 ಮೂಢತನದಿ ಬಹು ಹೇಡಿ ಜೀವ ನಾನಾಗಿ ದೃಢಭಕುತಿಯನು ಮಾಡಲಿಲ್ಲವೊ ಹರಿಯೆ ನೋಡಲಿಲ್ಲವೊ ನಿನ್ನ ಪಾಡಲಿಲ್ಲವೊ ಮಹಿಮೆ ಗಾಡಿಕಾರ ಕೃಷ್ಣ ಬೇಡಿಕೊಂಬೆನೊ ನಿನ್ನ 2 ಧಾರುಣಿಯೊಳು ಭೂಭಾರ ಜೀವ ನಾನಾಗಿ ದಾರಿತಪ್ಪಿ ನಡೆದೆ ಸೇರಿದೆ ಕುಜನರ ಆರೂ ಕಾಯುವರಿಲ್ಲ ಸೇರಿದೆ ನಿನಗಯ್ಯ ಧೀರ ವೇಣುಗೋಪಾಲ ಪಾರಗಾಣಿಸೊ ಹರಿಯೆ 3
--------------
ವಿಜಯೀಂದ್ರತೀರ್ಥರು
ಕೃತ್ತಿವಾಸ ಪೂಜ್ಯ ಚರಣೇ | ಮಹತತ್ವಮಾನಿ ಸತಿಯೆ ಸುಗುಣೆ ||ಅ|| ನಿತ್ಯ ನೀಡೆ ಹರಿಯ ಸ್ಮರಣೆ ಅ.ಪ. ವಿಧ್ಯುದ್ವಾಕ್ ದಿಙËಮಾನಿಯೆ | ಹೇದ್ಯುಪೃಥಿವಿ ಭಾರತೀಯೇಪ್ರದ್ಯುಮ್ನ ಕೃತಿಗೆ ಕುಮಾರಿಯೆ | ಬುಧ್ಯಾಭಿಮಾನಿಯೇ ಕಾಯೆವಿದ್ಯುತಿಸ್ಥಿತಿ | ಬುಧ್ಯಾಬ್ದಿಯೆ | ವಿಧ್ಯೇತರ | ಅವಿಧ್ಯೆಯ ಕಳೆಸದ್ಯೋಜನ | ಶ್ರದ್ದಾಂಬಾ | ಮದ್ದೇಹದಿ | ಸಿದ್ಧಿಸು ಹರಿ 1 ಮಂದ ಪತಿ | ಸುಂದರ ಪದ | ಸಂಧಿಸು ಮನ | ಮಂದಿರದಲಿ 2 ಭಿಕ್ಷೆ ನೀಡೆ ತಾಯೇ | ಯುಕುತಿ ಶಾಸ್ತ್ರ ಒಂದನರಿಯೇಸೌಖ್ಯ ತೀರ್ಥ ಮತವನ್ವೊರೆಯೇ ಮುಕುತಿ ಮಾರ್ಗ ತೋರಿ ಪೊರೆಯೇ ||ತೋಕನು ಎನೆ | ಸ್ವೀಕರಿಸುತ | ಲೋಕರುಗಳ | ವಾಕನು ದೂ-ರೀಕರಿಸು ಪ | ರಾಕೆನ್ನುವೆ | ಭೀಕರಭವ | ನೀ ಕರಗಿಸು 3 ಕಡಗ ಕಂಕಣ ದ್ವಾರ ಧಾರೆ | ಜಡಿತ ದುಂಗುರ ದೋಷ ದೂರೆಮುಡಿದ ಮಲ್ಲಿಗೆ ಕುಂಚುಕಧಾರೆ | ಉಡುಗೆ ಬಿಳುಪಿನಂಬರೆ ನೀರೇ || ಒಡ ನಡುವು | ನಿಡಿತೋಳೂ | ತೊಡೆಕದಳೀ | ಬಡುವು ಪರೀ |ಅಡಿಗೆರಗುವೆ | ಪೊಡ ವೀಶನ | ಧೃಡ ಭಕುತಿ | ತಡೆಯದೆ ಕೊಡು4 ಶರಣು ಮುಂದಣ ವಾಣಿ ಕರುಣ | ಗುರು ಗೋವಿಂದ ವಿಠಲ ಚರಣಾ |ಭರಣವೆನಿಪ ಸುಗುಣ ಗಣಾ | ಒರೆದು ಕಳೆಯೆ ಭವದ ಬಂಧನ |ಮಾರಯ್ಯನ | ಆರಾಧನೆ | ಚಾರೀಸದೆ | ಧಾರಾಣಿಗೆಭಾರಾದೆನು | ಕಾರುಣ್ಯವ | ತೋರೂವುದು ಭಾರತಿಯೇ 5
--------------
ಗುರುಗೋವಿಂದವಿಠಲರು
ಕೃಪೆಯ ತೋರಬಾರದೇನೋ | ಗೋಪಾಲರಾಯ ಪ ತಾಪತ್ರಯ ಬಲು ದೀಪನವಾಗಿದೆನೀ ಪರಿಹರಿಸದೆ ಮತ್ತೋರ್ವರನರಿಯೆ ಅ.ಪ. ಸೂನು ಶ್ರೀನಿವಾಸಾ |ಸಾರುತ ತವಪದ ಸೇವಿಸಿ ಭಕುತಿಲಿ |ದೂರೋಡಿಸಿದನು ಜವನವರಾ 1 ಗಿರಿಜಾತೆಯ ಪ್ರಿಯ ಕುವರಾ | ನೃಪವರದಶರಥ ಸುತ ಭರತಗೆ ಅವರಾ |ಮಾರುತಿ ಮತವನು ಅರುಹುತ ನೀ ಸಂಸಾರಕೆ | ತಾರಕ ನೆನಿಸಿದ ಧೀರಾ 2 ಭೋಗಿ ಶೀಲಾ | ನೀನಘದೂರ ಕಳೆಯೊ ಮೋಹಜಾಲಾ |ಭೋಗಿಶಯನ ಗುರು ಗೋವಿಂದ ವಿಠಲನಬಾಗಿ ಭಜಿಸುವಂಥ ಭಾಗ್ಯವ ನೀಯೋ 3
--------------
ಗುರುಗೋವಿಂದವಿಠಲರು
ಕೃಷ್ಣತಾತ ಮ'ಪತಿರಾಯರ ಭಜಿಸೊಅಭಿಮಾನವ ತ್ಯಜಿಸೊ ಅನುಮಾನವ ತ್ಯಜಿಸೊ ಪರಾಜವೈಭವದ ಭೋಗಗಳನುಭ'ಸಿ ಶ್ರೀ ಹರಿಯ ಸ್ಮರಿಸಿಭೋಗದೊಳಗೆ ತ್ಯಾಗದ ಪಾಠವ ಕಲಿಸಿ ಕೊಡುಗೈದೊರೆಯೆನಿಸಿಯೋಗಬಂದತಕ್ಷಣ ವೈಭವ ತ್ಯಜಿಸಿ ಯೋಗಿಯನಾಶ್ರೈಸಿಯೋಗಾಭ್ಯಾಸದಿ ಬೇಗ ಹರಿಯ ಒಲಿಸಿ ಅವನೊಳು ಮನಬೆರೆಸಿ 1ಹರಿಯಧ್ಯಾನಕನುಕೂಲವಾದ ಮೆಟ್ಟಾ ಹುಡಕುತುತಾಹೊರಟಾವರಕಾಖಂಡಿಕಿ ಕ್ಷೇತ್ರದಿ ಕಾಲಿಟ್ಟಾ 'ಶ್ರಾಂತಿಗೆ ಕುಳಿತಾಅರೆನಿ'ುಷದಿ ಹರಿಧ್ಯಾನದಿ ಮೈಮರೆತಾ ಸಮಾಧಿ ಇಳಿಯುತಾವರೃಮುನಿಗಳು ತಪವಗೈದಮೆಟ್ಟಾ ಎನುತಲಿಯೆ ನಿಂತಾ 2ಹಗಲು ಇರಳು ಹರಿಧ್ಯಾನದಿ ತಾ ಮುಳುಗಿ ಅಲ್ಲಿರುತಿರಲಾಗಿ ನಗೆ ಮುಖದಲಿ ಝಗಝಗ ಕಾಂತಿಯು ಬೆಳಗಿ ಸುತ್ತಲು ಬೆಳಕಾಗಿಜಗದಜನಕೆ ಅದು ಅತಿ ಅಚ್ಚರಿಯಾಗಿ ಯೋಗಿಗೆ ಶಿರಬಾಗಿಬಗೆ ಬಗೆ ಭಕುತರು ಬಂದರು ತಾವಾಗಿ ಮ'ಪತಿಮಹಾಯೋಗಿ 3ಅಷ್ಟಸಿದ್ಧಿಗಳು ನೆಲೆಸಿದವಾಗಲ್ಲಿ ಆಶ್ರಮ ಬಾಗಿಲಲಿಎಷ್ಟು ಭಕುತಿಜನ ಬಂದರು ಸ'ತಲ್ಲಿ ಇಷ್ಟಾರ್ಥ ಕರದಲಿಮೃಷ್ಟಾನ್ನ ಭೋಜನ ಪ್ರತಿದಿನದಲ್ಲಿ ನಡೆುತು ಸಮತೆಯಲಿಇಷ್ಟವಾದ ಆಧ್ಯಾತ್ಮಿಕ ಮಾರ್ಗದಲಿ ಉಪದೇಶ ಪಡೆಯುತಲಿ 4
--------------
ಭೂಪತಿ ವಿಠಲರು
ಕೃಷ್ಣವೇಣಿ ಕಲ್ಯಾಣಿ ನಿತ್ಯ ಸಾಗರನ ರಾಣಿ ಪ ಅಜನ ನಿರೂಪದಲಿ ಜಾಬಾಲಿಮುನಿ ಬಂದು ಭಜಿಸಿದನು ನಿನ್ನ ಬಲುದಿವಸಂಗಳು ನಿಜವಾಗಿ ಹರನ ಜಡೆಯಲ್ಲಿ ಉದ್ಭವಿಸಿದೆ ತ್ರಿಜಗದೊಳಗೆ ಮೆರೆದೆ ತ್ರಿದಶಾಮರವಂದಿತೆ 1 ಕನ್ಯಾರಾಶಿಗೆ ಜೀವ ಬಂದು ಪ್ರಾಪುತನಾಗೆ ಹನ್ನೆರಡು ವರುಷಕೆ ಒಮ್ಮೆ ಬಿಡದೇ ಮನ್ನಿಸಿ ಭಕುತಿಯಿಂದ ಒಂದು ಮಜ್ಜನಮಾಡೆ ಧನ್ಯನ ಮಾಳ್ಪೆ ಬಲು ಘನ್ನ ತರಂಗಿಣಿ 2 ಎತ್ತ ನೋಡಿದರತ್ತ ನಾಲ್ಕುವರೆ ಯೋಜನವು ಕ್ಷೇತ್ರ ಪುಣ್ಯದೇವಿಯೆನಿಸಿಕೊಂಬೆ ಸ್ತುತಿಸಲಳವೇ ನಿನ್ನ ಮಹಿಮೆಯ ಅನುಗಾಲ ಮತ್ತಗಜಗಮನೆ ಮಲದೂರೆ ಮುಕ್ತಿಧಾರೆ 3 ಪೋಗದ ಪಾಪಗಳಿರಲು ನಿನ್ನ ದರುಶನವು ಬಾಗಿಲ ಕಾಯ್ವ ಭಾಗ್ಯವ ಕೊಡು ಕರುಣದಲಿ 4 ಕಲಿಯುಗಕೆ ನೀನೇ ವೆಗ್ಗಳವೆಂದು ಬುಧಜನರು ಒಲಿದು ಕೊಂಡಾಡುವರು ಸತತದಲ್ಲಿ ಜಲನಿಧಿಯ ಎರಡು ಮೊಗದಲಿ ಮೆರೆದೆ ಮಹತಟಿನಿನೆಲೆಗೊಳಿಸು ವಿಜಯವಿಠ್ಠಲ ಚರಣದಲ್ಲಿ 5
--------------
ವಿಜಯದಾಸ
ಕೃಷ್ಣಾರ್ಯರು ಮನವೇ ಲಾಲಿಸಿ ಕೇಳೊ ಬಿನ್ನೈಸುವೆನೊ ನಿನಗೆ ಚೆನ್ನಾಗಿ ವಡೆಯಾನಾ ಪಾದದಲ್ಲಿ ಭಕುತಿಯನ್ನೆ ಮಾಡಿ ಮಮತೆ ವಿಷಯಾದಿ ಅಹಂಕಾರ ಬುದ್ಧಿಯನ್ನೇ ಬೀಸಾಟಿ ದೃಢವಾಗಿ ಧೈರ್ಯದಿಂದ ಇದೇ ಸಾಧನವೆಂದುಗುಪಿತಾದಲ್ಲಿ ಸಂಚರಿಸೆ ಪಾಣಿಯಾ ಪಿಡಿದುತಾ ವಾಣಿ ಅರಸ ನಿರ್ಮಾಣವ ತೋರಿಸುವ ಪ್ರಾಣದೇವರು ಪ್ರಾಣವಪ್ಪಿಸಿ ಸಾಕುವಬಿಡದೆ ಪಂಚಪ್ರಾಣಾತ್ಮಕನಾದ ತಂದೆವರದಗೋಪಾಲವಿಠಲರೇಯಾನ ಭಜಿಸು ಬಿಡದೆ 1 ಇಂದು ಸಾಧನವೆಂದು ತಿಳಿದು ನಿನ್ನಿಂದ ನೀನೇ ಹಿಗ್ಗಿ ಕುಗ್ಗಾದೀರು ಮಗ್ಗುಲೊಳಗಿದ್ದ ಮಧ್ವದ್ವೇಷಿ ಬಂದು ಮದ್ದು ಹಾಕಿ ಮಣಿಸೂವ ಮಧ್ವರಾಯರ ಪಾದಪದ್ಮದಲ್ಲಿ ಬುದ್ಧಿಯನಿಟ್ಟರೆ ಬಾಧೆಯ ತಪ್ಪಿಸಿ ಉದ್ಧರಿಸುವ ಮುದ್ದು ಮುಖದ ತಂದೆವರದಗೋಪಾಲ- ವಿಠಲರೇಯಾನವಲಿಸು ಬಿಡದೆ 2 ಅನಾದಿ ಕಾಲದಿಂದ ನಿಜ ಗುರುರಾಯನು ನಿನ್ನೊಳಿದ್ದು ಜನಿಸಿ ಬಂದ ಸಾಧನ ಬಿಟ್ಟು ಸುಖದುಃಖ ಜಲಮಯ ಸಂಸಾರದೊಳಗೆ ಬಿದ್ದು ಬಾಯ್ಬಿಡುವಿ ಕಂಡ್ಯಾ ಆ ಗುರುರಾಯರ ಮೂರುತಿ ನಿನ್ನೊಳು ನೋಡುತ್ತ ಪಾಡುತ್ತ ಸುಖಿಯಾಗಿ ಸಕಲ ಕರ್ಮಗಳಾಚರಿಸಿ ತದ್ವಾರ ನವನಿಧಿ ರಾಜನ ಚರಣಕ್ಕೆ ಆರೋಪಿಸೆ ಕೈಗೊಂಡು ಹೊಸಹೂವ ಸುಂದರ ಮೂರುತಿ ತಂದೆವರದಗೋಪಾಲವಿಠ್ಠಲರೇಯಾನ ನಿಲ್ಲಿಸೊ ಬಿಡದೇ 3 ಅವರ ಬಳಿಯಲ್ಲಿ ಪೋಗಿ ನೀನೂ ನಿನ್ನದು ಎನ್ನದಿರು ಕಂಡ್ಯಾ ಮುನ್ನ ನಿನಗೆ ಘನ್ನವಾದ ವೈರಾಗ್ಯ ಪುಟ್ಟುವಾದೂ ಇನ್ನು ನೀನು ಮನದಾಶೆ ಎಂಬ ಪಿಶಾಚೀಗೆ ಒಳಗಾಗಿ ಏನಾಹೋದೋ ನಿನ್ನ ಘಾಸಿಯನರಿತು ಕ್ಲೇಶಾಪಾಶಾಗಳಿದ್ಯಾಡಿಪಶುಪತಿಪಿತನ ಪಡೆದ ತಂದೆವರದಗೋಪಾಲವಿಠಲರೇಯಾನ ವಲಿಸೋ ಬಿಡದೆ4 ಸದಾಕಾಲದಲ್ಲಿ ಇವರ ಸ್ಮರಣೆ ಮಾಡಿ ಧ್ಯಾನಕೆ ತಂದು ಯೋಗಾದಿ ನೋಡುವಾದೆ ಮಹಾ ನಿಜವಾದ ಭಕುತಿ ಇವರ ಪಾದಸ್ಮರಣೆ ಮಾಡಾದ ಮನುಜರಿಗೆ ಶ್ರೀಪದ್ಮ ರಮಣಾನು ಸೃಷ್ಟಿಸೂವ ಆ ಮನುಜಗೋಸುಗ ನರಕ ನರಕಾದೊಳಗಿಟ್ಟು ಕುಟ್ಟುವ ಕ್ಷಣ ಬಿಡದೆ ಎಷ್ಟು ಮಾಡಿದರೇನು ಉತ್ತುಮೋತ್ತಮರೆಲ್ಲ ಸೋತ್ತುಮರಾಯರ ದ್ರೋಹಮಾಡಿ ತುತ್ತುತುತ್ತೀಗೆ ಹಾಕಿಸಿಕೊಂಡು ಕುತ್ತೀಗೆ ಕಟ್ಟಿ ನಿತ್ಯಾದಲ್ಲಿ ಸ್ಮರಣೆಯ ಮಾಡಿದರೆ ನೃತ್ಯವಾಗೈಸುವ ಭಕ್ತಾವತ್ಸಲ ತಂದೆವರದಗೋಪಾಲವಿಠಲರೇಯಾನ ನಿಲ್ಲಿಸೋ ಬಿಡದೆ 5 ಜತೆ :ನವವಿಧಭಕುತಿಯನ್ನೇ ಅರಿತು ಗುರುಪೂಜೆ ಮಾಡಲು ತದ್ವಾರಾ ವಲಿದಾ ತಂದೆವರದಗೋಪಾಲವಿಠ್ಠಲಾ 6
--------------
ತಂದೆವರದಗೋಪಾಲವಿಠಲರು
ಕೇಶವಾಚ್ಯುತ ಮಾಧವಾನಂತ|ಶ್ರೀ ಶಕಮಲದಳೇಕ್ಷಣಾ| ವಾಸುದೇವ ಮುಕುಂದ ಮುರಹರ ಕ್ಲೇಶಹರಣ ಜನಾರ್ಧನಾ|| ವಾಸುಕಿಯ ಪರಿಯಂಕನೆನುತಲಿ|ನೆನೆವನಾವ ನರೋತ್ತಮಾ| ಮೋಸಹೋಗದಿರವರೊಳೆಂದು|ಚರರಿಗ್ಹೇಳಿದನೈಯಮಾ 1 ರಾಮರಾಘವ ರಾಜಶೇಖರ|ರಾವಣಾಸುರಮರ್ದನಾ| ಶಾಮಸುಂದರ ಸಕಲ ಗುಣನಿಧಿ|ಶಬರಿಪೂರಿತ ವಾಸನಾ ಭೂಮಿಜಾಪತಿ ಭೂತನಾಥ|ಪ್ರಿಯನೆಂಬ ನರೋತ್ತಮಾ| ಪ್ರೇಮಿಕನ ನುಡಿಸದಿರಿಯೆಂದು|ಚರರಿಗ್ಹೇಳಿದನೈಯಮಾ 2 ಬಾಲಲೀಲವಿನೋದ ಶ್ರೀ ಗೋಪಾಲ ಗೋಕುಲ ಲಾಲನಾ| ಕಾಲಜಲಧರ ನೀಲಮುರಲೀ ಲೋಲಸುರವರ ಪಾಲನಾ| ಕಾಲಕಾಲನೆ ಕಂಸಹರನನು ತಾವ ನೆನೆವ ನರೋತ್ತುಮಾ| ಕಾಲಿಗೆರಗಿರಿ ಅವರಿಗೆಂದು|ಚರರಿಗ್ಹೇಳಿದನೈಯಮಾ 3 ಮಕರಕುಂಡಲ ಕಿರೀಟ ಕೌಸ್ತುಭ|ಕಟಕಕೇಯೂರ ಭೂಷಣಾ| ಅಖಿಲ ಜಗನುತ ಚರಣಪೀತಾಂಬರನೆ ಶ್ರೀವತ್ಸಲಾಂಭನಾ| ಪ್ರಕಟಿತಾಯುಧ ಶಂಖಚಕ್ರಗದಾಬ್ಜ ನೆನೆವನರೋತ್ತಮಾ| ಸುಖಿಸುವವರನು ತ್ಯಜಿಸಿರೆಂದು ಚರರಿಗ್ಹೇಳಿದನೈಯಮಾ 4 ಶ್ರವಣಪೂಜನೆ ಸ್ಮರಣಕೀರ್ತನೆ ವಂದನೆದಾಸ್ಯದಿ ಸಖ್ಯವಾ| ಬಿಡದನಾವನರೋತ್ತುಮಾ| ಅವನ ಸೀಮೆಯ ಹೋಗದಿರೆಂದು ಚರರಿಗ್ಹೇಳಿದನೈಯಮಾ 5 ಯಾರಮನೆಯಲಿ ತುಲಸಿವೃಂದಾವನದಿ ಶಾಲಿಗ್ರಾಮವು| ಚಾರುದ್ವಾದಶನಾಮ ಹರಿಚಕ್ರಾಂಕಿತದ ಶುಭಕಾಯವು| ಮೀರದಲೆ ಹರಿದಿನದ ವ್ರತದಲಿ ನಡೆವನಾವನರೋತ್ತಮಾ| ದಾರಿ ಮೆಟ್ಟದಿರೆಂದು ತನ್ನಯ ಚರರಿಗ್ಹೇಳಿದನೈಯಮಾ 6 ಸಾಧುಸಂತರು ಬಂದರೆರಗುತ ಪಾದೋದಕದಲಿ ಮೀವನು| ಆದಿನವಯುಗ ವಾದಿಚತುರ್ದಶ ಪರ್ವಕಾಲಗಳೆಂಬನು| ಸಾದರದಿ ಹರಿಪೂಜೆಯಿಂದರ್ಚಿಸುವ ನಾವನರೋತ್ತಮಾ| ಮೋದದಿಂದಲಿ ಬಾಗಿರೆಂದು ಚರರಿಗ್ಹೇಳಿದನೈಯಮಾ 7 ಅಂದು ಹೇಳಿದ ಕಥೆ ರಹಸ್ಯದ ಹರಿಯನಾಮದ ಮಾಲಿಕಾ| ತಂದೆ ಮಹೀಪತಿ ಎನ್ನ ಮುಖದಲಿ ನುಡಿಸಿದನು ಭೋಧಾಷ್ಟಕ| ತಂದು ಮನದಲಿ ಭಕುತಿಯಿಂದಲಿ ನೆನೆವನಾವನರೋತ್ತಮಾ| ಇಂದು ಜೀವನ್ಮುಕ್ತನಮಗಿನ್ನೇನು ಮಾಡುವನೈಯಮಾ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳು ಮನವೆ ಸುಜನನಾಗಿ ಬಾಳು ಬಾಲ ಭಕುತಿಯಲ್ಲಿ ಕೇಳು ಶ್ರವಣದಲ್ಲಿ ಪೇಳು ಹರಿಯೇ ದೈವವೆಂದು ಪ ನಿಲ್ಲಿಸು ಹರಿಯ ವೊಲಿಸುವಳಿಗೆ ಗಳಿಸು ಜ್ಞಾನ ವಳಿಸು ಪಾಪಕಲಿಯಾ ಬೆಳಿಸು ಘಳಿಸು ತಾಮಸ ಸುಳಿಸು ಮಾರ್ಗ ಬೆಳಿಸು ಚೆನ್ನಾಗಿ ಗೆಲಿಸು ವ್ರತವ ಚಲಿಸು ಯಾತ್ರೆಯ ಇಳಿಸು ಮಮತೆ ಕಲಿಸು ಮಿಥ್ಯವ ಥಳಿಸುವಂತೆ ಕೇಳು ಮನವೆ 1 ಕೀರ್ತನೆ ಕಾಡು ರಂಗನ ಬೇಡು ದೈನದಿ ನೀಡು ಹಸ್ತವ ಬಾಡು ನಿನ್ನೊಳಗಾಡು ತಾಡುತಾ ಕೇಡು ಒದೆದು ಬಿಡು ನೆಚ್ಚ ದೀಡ್ಯಾಡ್ಯೋ ಕಾಯವ ಗೂಢದ ಮಾತಾಡು ಕಲಾಪ ಬೇಡರಟ್ಟಲು ಮೋಡು ನಿಲ್ಲದೆ ಪಾಡು ಪಂಥವಾ 2 ನೆರಿಯೊ ವೊಡನೆ ಸುರಿಯೊ ನಾಮವ ಅರಿಯೊ ಮಹಿಮೆ ಮರಿಯೊ ವ್ಯಾಕುಲ ಮೆರಿಯೊ ಗುಪ್ತದಿ ಜರಿಯೊ ಹೀನರಾ ಸರಿಯೊ ಮಿರಲು ಗುರಿಯೊ ತಮಕ್ಕೆ ಸರಿಯೆ ಲಾಲಿಸು ಧರಿಯೊಳಗೆ ನೀ ವಿಜಯವಿಠ್ಠಲನೆಂದು 3
--------------
ವಿಜಯದಾಸ