ಒಟ್ಟು 344 ಕಡೆಗಳಲ್ಲಿ , 68 ದಾಸರು , 307 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಿಲ್ವಪತ್ರೆಯ ಪೂಜೆಗೊಲಿವನು ಜಗದ್‍ವಲ್ಲಭನಾದ ರಾಮೇಶ್ವರನು ಪ ಕೋಟಿ ಕನ್ಯಾದಾನವ ಮಾಡಿದ ಫಲಕೋಟಿ ತುರಗದಾನದ ಫಲವುಕೋಟಿ ಸಂಖ್ಯಾ ಗಜದಾನದ ಫಲ ಶಶಿಜೂಟಗೊಂದೆ ಬಿಲ್ವಪತ್ರೆಯೇರಿಸಿದರೆ 1 ಕೋಟಿ ಗಂಗಾಸ್ನಾನವ ಮಾಡಿದ ಫಲಕೋಟಿ ಪ್ರಯಾಗ ಸ್ನಾನದ ಫಲವುಕೋಟಿ ಗೋದಾನದ ಫಲ ಬರುವುದು ಶಶಿಜೂಟಗೊಂದೆ ಬಿಲ್ವಪತ್ರೆಯೇರಿಸಿದರೆ2 ಲಕ್ಷ ಪಂಚಾಕ್ಷರಿ ಜಪವ ಮಾಡಿದ ಫಲಲಕ್ಷಭೂಮಿಯ ಪ್ರದಕ್ಷಿಣ ಫಲವುಲಕ್ಷಾಶ್ವಮೇಧಯಾಗವ ಮಾಡಿದ ಫಲತ್ರ್ಯಕ್ಷಗೊಂದೆ ಬಿಲ್ವಪತ್ರೆಯೇರಿಸಿದರೆ 3 ವೇದಪುರಾಣವ ಪಠಿಸಿದ ಫಲ ಸರ್ವಮೇದಿನಿ ದಾನವನಿತ್ತ ಫಲವುಭೂದಿವಿಜರ ಸಂರಕ್ಷಿಸಿದ ಫಲ ಶ್ರೀಮಾದೇವಗೇಕ ಬಿಲ್ವವನೇರಿಸಿದರೆ4 ಸೋಮವಾರದ ದಿನ ನೇಮದಿಂದಲಿ ಬಹುಕೋಮಲ ಬಿಲ್ವಪತ್ರೆಗಳ ತಂದುಶ್ರೀ ಮಹಾದೇವಗರ್ಪಿಸಿದಂಥ ಭಕ್ತರ್ಗೆರಾಮೇಶಲಿಂಗ ಮುಕ್ತಿಯನೀವನು 5
--------------
ಕೆಳದಿ ವೆಂಕಣ್ಣ ಕವಿ
ಬೇಕಾದವನೇ ಹರಿದಾಸ ಪ ಏಕಾದಶಿ ಉಪವಾಸ ಮಾಡಿದರೆ ನಾಕಿಗಳಿಗೆ ಆಗದು ವಿಶ್ವಾಸ ಅ.ಪ ಏಕಾದಶಿಯೆ ಯೋಗಸಿದ್ಧಿ ಏಕಾದಶಿಯೆ ಭೋಗಪ್ರಾಪ್ತಿ ಏಕಾದಶಿಯಲಿ ಎರೆಡು ಕಾರ್ಯಲ- ಕ್ಷೀಕಾಂತನ ಭಜನೆ ರಾತ್ರಿ ಜಾಗರವು 1 ಉಪವಾಸ ವ್ರತವೆ ವ್ರತವು ಜಪಶೀಲರ ತಪವೇ ಸುಖವು ಅಪರಿಮಿತವಾದ ಸತ್ಕರ್ಮಗಳೆಲ್ಲಾ ಚಪಲದಿ ಓಡುವುದುಪವಾಸದ ಹಿಂದೆ 2 ಅನ್ನಸಾರು ಕಾಯಿಪಲ್ಯ ಒಬ್ಬಟ್ಟು ತಿನ್ನುವುದೇ ಪ್ರತ್ಯಕ್ಷ ನರಕವು 3 ಘನಮೋದದಲಿ ಪವನಜನಾದ ಭೀ- ಮನೇ ಸ್ವೀಕರಿಸಿರುವನು ಪೂರ್ವದೊಳು 4 ವಿಕಳ ಬುದ್ಧಿಯಾಗದೆ ಸಮಯದಿ ತನ್ನ ಸುಕುಮಾರನ ಕಡಿಯಲೆತ್ನಿಸಿದನು 5 ನಿರಾಹಾರವು ನಡೆಯಲುತ್ತಮವು ಎರಡನೇಯದು ಮೇಲ್ಪೇಳಿದುದು ಪರಿಪರಿ ಅನ್ನೋತ್ಸವದಿ ಕೆಡುವನು 6 ಮಾನವ ಕರಾಮಲಕ ಮುಕ್ತಿಯಲಿ ಸುಖಪಡುವನು 7
--------------
ಗುರುರಾಮವಿಠಲ
ಬೋಧ ಭಾನು ಬರುತೈದನೆ ನಾದ ವಿನೋದವೆಂಬ ಈಕೋಳಿಯು ಕೂಗುತೈತವರನೀಕ್ಷಿಸೆ ಸತ್ಕರುಣಾ ಕಟಾಕ್ಷದಿಂಏಳಯ್ಯ ಗುರುವರ್ಯ ಏಳಯ್ಯ ಗುರುವರ್ಯ ಯತಿಜನಾಲಂಕಾರಪಏಳು ಭಕ್ತಾಧಾರ ಯಮನಿಯಮ ಸಂಚಾರಏಳು ವಿದ್ವದ್ವರ್ಯ ಪರಮಹಂಸಾಚಾರ್ಯ ಏಳು ಗೋಪಾಲ ಯತಿವರ್ಯಾ ಸ್ವಾಮಿಅ.ಪಆಧಾರ ಮಣಿಪೂರ ಹೃದಯ ಕಮಲಗಳಲ್ಲಿನಾದ ಬಿಂದು ಕಲೆಗಳೆಂಬರುಣನುದುಸಿದಬೋಧೆಯೆಂಬರ್ಕನಾವಿರ್ಭವಿಸಿದನು ಸಹಸ್ರಾರ ಕಮಲದ ತುದಿಯಲಿವೇದವೇದ್ಯಾನಂತಮಹಿಮ ಚಿನ್ಮಯರೂಪನಾದಸೌಖ್ಯಾಕಾರ ಕಲಿ ಕಲ್ಮಷವಿದೂರಆದಿಮಧ್ಯಾಂತರಹಿತಾನಂದ ನಿತ್ಯನಿಜಬೋಧನೊಲಿದುಪ್ಪವಡಿಸಾ ಸ್ವಾಮೀ1ನಿತ್ಯವೆ ನಿಮ್ಮ ಪದವೆಂದಜಾಂಡವನಿದನನಿತ್ಯವೆಂದಖಿಳ ವಿಷಯಗಳಲಿ ವಿರತರಾಗಿಅತ್ಯಂತ ಶಮ ದಮಾದಿಗಳೆಂಬ ಸಾಧನದಿ ಮುಕ್ತಿ ಸುಖವನು ಬಯಸುತಾಪ್ರತ್ಯಕ್ಷರ ಬ್ರಹ್ಮರೈಕ್ಯವರಿಯದೆ ವಿದುಗಳತ್ಯಂತ ತ್ವರೆುಂದ ನಿಮ್ಮ ಮುಖಕಮಲದಿಂತತ್ವಮಸಿ ವಾಕ್ಯದರ್ಥವ ತಿಳಿಯಬೇಕೆಂದು ನೃತ್ಯವನು ಮಾಡುತಿಹರೂ ಸ್ವಾಮಿ 2ದೇಹೇಂದ್ರಿಯಾಂತರಂಗವನೇತಿಗಳಿದು ಸಂದೇಹದಲಿ ಕೂಟಸ್ಥ ನೀನೆಂಬುದರಿಯದೆಮಹಾ ವಿಚಾರಿಸಿ ಭಕ್ತ ಸುಲಭನೆ ದಾಟಿಸೈ ಮೋಹಸಾಗರವನೆನುತಾಪಾಹಿ ನೊಂದೆವು ಸಂಸ್ಕøತಿಯ ಬಂಧದಲಿ ನಮ್ಮಬೇಹುದೈಪಾಲಿಸಲು ಯೋಗನಿದ್ರೆಯ ಬಿಟ್ಟುದಾಹರಿಸು ವೇದಾಂತಗೋಪ್ಯವನೆನುತ ನತಸಮೂಹ ಕಾದಿದೆ ಕೃಪಾಳು ಸ್ವಾಮಿ 3ಕೇಳಿ ಭಕುತರ ದೈನ್ಯ ಸಲ್ಲಾಪಗಳನಿಂತುಲೀಲಾವತಾರ ಗುರುರಾಯನೊಲಿದೆದ್ದವರಲಾಲಿಸುತ ಧನ್ಯರಾದಿರಿ ಸನ್ಮತಿಯೊಳಿಂತು ಮೇಳಾಪವಾುತೆನುತಾಬಾಲರಿರ ನಿಮ್ಮನಂತಃಕರಣದ ಧ್ಯಾನಜಾಲಸುತ್ತಿರಲಾಗಿ ನಿಮ್ಮ ನಿಜವನು ಮರೆದುಕಾಲಕರ್ಮಾಧೀನವಾಗಿ ನೊಂದಿರಸತ್ಯವೀ ಲೋಕವೆಂದರಿಯದೆ ಎನಲು ಗುರುವೇ 4ಜೀವೇಶ್ವರರ ವಾಚ್ಯ ಲಕ್ಷ್ಯಾರ್ಥವನು ನಿಚ್ಚ ಭಾವಿಸುತ ಬ್ರಹ್ಮ ಕೂಟಸ್ಥರೆಂದವರಿಗೆ ಸ್ವಭಾವದಿಂ ಭೇದವಿಲ್ಲೌಪಾಧಿಕವಿದೆಂದು ಸಾವಧಾನದಲಿ ತಿಳಿದೂನಾವೆ ಪರಿಪೂರ್ಣಾತ್ಮರೆಂದು ಬೋಧಾಮೃತವಸೇವಿಸಿದಡನುದಿನಂ ಕೃತಕೃತ್ಯರಹಿರೆನಲ್‍ದೇವ ಕೃತಕೃತ್ಯರಾದೆವು ನಮೋ ಎನುತ ಸ್ವಭಾವ ಪದದಲಿನಿಂದರೂ ಸ್ವಾಮೀ 5
--------------
ಗೋಪಾಲಾರ್ಯರು
ಬ್ರಹ್ಮಣ್ಯ ತೀರ್ಥ ಗುರು ರಾಜಾ | ನಿನ್ನನಮ್ಮಿದೆನೊ ಭಾಸ್ಕರ ಸುತೇಜಾ | ಭಾವಿಬೊಮ್ಮ ಮತವರುಹಿ ಮಹೋಜಾ | ಸಲಹೊಪ್ರಮ್ಮೇಯಂಗಳ ನಿಧಿಯ ಸಹೋಜಾ ಪ ಓದ್ದಾಡುತಿಹೆನೊ ಈ ಭವದೀ | ಸುಖಗದ್ದುಗೆಯನೇರ್ವಂಥ ಹಾದೀ | ತೋರಿಉದ್ಧರಿಸೊ ಬಲು ಕೃಪಾಜಲಧೀ | ಗುರುವೆಶುದ್ಧ ಬುದ್ಧಿಯ ನೀಯೊ ಮುದದೀ 1 ಯಾತ್ರೆಗಳ ಮಾಡ್ದೆನೆಂಬ | ಬಿಂಕದ್ವಾರ್ತೆಯೊಂದಲ್ಲದಲೆ ಇಂಬ | ಕಾಣೆಕ್ಷೇತ್ರ ಮೂರ್ತಿಯ ಕಾಂಬನೆಂಬ | ಆಶೆಪೂರ್ತಿ ಮಾಡೆನ್ನ ಗುರು ಬಿಂಬ 2 ಧನವನಿತೆ ವಿಷಯದಲ್ಲೀ | ಬಹಳ ಮನ ಮಾಡಿ ನೊಂದೆನಲ್ಲೀ | ಹರಿಯಮನ ಮುಟ್ಟೊ ಭಜಿಸು ಎಂಬಲ್ಲೀ | ಇನ್ನುಘನ ಜ್ಞಾನ ಭಕುತಿ ಇಲ್ಲಲ್ಲೀ 3 ಜೀವಗೆಲ್ಲಿಯ ಸ್ವತಂತ್ರಾ | ಹರಿಗುರುತಾವಲ್ಲಿ ಮಾಡುತಿಹ ತಂತ್ರ | ದಿಟವಿದುಜೀವನೇ ಮಾಳ್ಪುನೆಂಬುದೆ ಕುತಂತ್ರ | ತಿಳಿಸೊಭಾವ ಜಾನಯ್ಯನ ಸ್ವತಂತ್ರ 4 ಸಾರ ವ್ರಾತ | ತಿಳಿಸೊಜ್ಞಾನ ನಿಧಿ ಪುರುಷೋತ್ಮ ತಂತ್ರ 5 ಕಾರಕ ಕ್ರಿಯ ದ್ರವ್ಯವೆನಿಪ | ಭ್ರಮವುಮೂರರಿಂದಲಿ ದೂರ ಮಾಳ್ಪ | ಮಾರ್ಗತೋರಿಸಲಹುವುದು ಯತಿ ಭೂಪ | ತವಪದವಾರಿ ಜತೆ ಈ ನೀಚ ಬೀಳ್ಪ 6 ತ್ರ್ಯಕ್ಷಾಂಶ ಭೂತರಾದ | ಸನ್ಯಾಸಿಅಕ್ಷೋಭ್ಯ ಕರಜರಾದ | ಅಜೇಯಇಕ್ಷುಚಾಪನ್ನ ಗೆಲಿದ | ಜಯಾರ್ಯಭಿಕ್ಷುವಿನ ಮಾರ್ಗರಾದ7 ಮೋದ | ಪಡೆವದಾಯ ತೋರಿದಿ ನಿರ್ವಿವಾದ | ಇನ್ನುಗಾಯನದಿ ಮಹಿಮೆ ಅಗಾಧ | ಪೇಳ್ವಆಯತವ ನೀಯೋ ಸುಭೋಧ 8 ಬೃಹತೀ ಸಹಸ್ರ ಮಂತ್ರ | ಜಪಿಪಮಹಯೋಗದಾತ ಮಹಾಂತ | ಬೇಡ್ವೆಬೃಹತಿನಾಮಕನು ಎಂಬಂಥ | ಹರಿಯಮಹ ಮಹಿಮೆ ಕಂಡು ಹಿಗ್ವಂಥ 9 ಸೃಷ್ಟ್ಯಾದಿ ಅಷ್ಟಕಗಳ | ಗೈವಕೃಷ್ಣನ್ನ ಮಹಿಮೆಗಳ | ಕೇಳಿಹೃಷ್ಟರಾಗುವ ಜನಗಳ | ಸಂಗಕೊಟ್ಟುದ್ಧರಿಸೊ ನಮ್ಮಗಳ 10 ಸದನ 11
--------------
ಗುರುಗೋವಿಂದವಿಠಲರು
ಭಕ್ತಜನ ಸಂರಕ್ಷಣ ಪ ಭಕ್ತಜನ ಸಂರಕ್ಷ ಭವದುರಿತ ಸಂಹಾರಿ ಭಕ್ತರಾ ಸುರಧೇನು - ತರುವೆ ಚಿಂತಾಮಣಿಯೆ ಪೊತ್ತ ತಿಮ್ಮಪ್ಪ ಏಳೊಅ.ಪ. ಅಂಬರವು ತಾಂಬ್ರಮಯವಾಗೆ ಗರುಡಾಗ್ರಜನು ಇಂಬಿನಲಿ ತಲೆದೋರೆ ಕಿರಣಗಳು ಹರಹಿದುವು ತಾರಾ ನಿಕರವಂಬರದಿ ರೂಹುಮಾಸೆ ಕುಂಭಿಣಿಯ ಮುಸುಕಿರ್ದ ಕತ್ತಲೆ ಪರಿದು ಪೋಗೆ ಅಂಬುಜದಳಕ್ಕೆ ಮರಿದುಂಬಿಗಳು ಎರಗಿದವು ಸರಸಿಜಾಂಬುಕ ಮಂಚದಿಂದೇಳೊ 1 ಉದಯ ಪರ್ವತಕೆ ರಥನೂಕಿದನು ಮಾರ್ತಾಂಡ ಉರಗ ಪೆಡೆಯೆತ್ತಿದನು ಭಯದಿಂದ ಅಡಗಿದರು ದಶದಿಕ್ಕಿನೊಳಗೆ ತ್ರಿದಶರಬ್ಬರಿಸಿ ಆನಕ ದುಂದುಭೀ ಶಂಖ ಧಂ ಧಂ ಧಣಾ ಸರಿಗಮಪದನೀ ಯೆಂದೆನುತ ತುರೆಸಿದರು ಸದಮಲಾನಂದ ತಿಮ್ಮಾ 2 ನಾರಿಯರು ಬಂದು ಅಂಗಳ ಬಳಿದು ಗಂಧದಾ ಸಾರಣಿಯದೆಳೆದು ಮುತ್ತಿನ ರಂಗವಾಲೆ ವಿ- ಮಕರ ಕನ್ನಡಿ ದ್ವಾರದಲಿ ಬಿಗಿದರ್ಥಿಯಲಿ ಗೊಲ್ಲ ಕಟ್ಟಿಗೇ- ಕಾರ ಪರಿವಾರದವರೆಲ್ಲ ವೊಪ್ಪುತಿದಾರೆ ಕಂಸಾರಿ ಕೋನೇರಿವಾಸ 3 ನೃತ್ಯಗಾರರು ಬಂದು ತತ್ಥಿಗಿಣಿ ತಕ್ಥೈಯ ತಿತ್ತಿರಿ ಮೃದಂಗ ಜೊತೆ ತಪ್ಪದಂದದಿ ತಾಳ ಬತ್ತೀಸರಾಗದಲಿ ಎತ್ತಿ ಧ್ವನಿತೋರುತ್ತ ನೃತ್ಯ ಪಾಡುತ್ತ ಕುಣಿಯೆ ಮುತ್ತೈದೆಯರು ಬಂದು ಮುತ್ತಿನಾರತಿ ಪಿಡಿದು ಮಿತ್ರಭಾವದಿ ನಿಮ್ಮ ಅಡಿಗಳಿಗೆ ಹರಿವಾಣ ನೋಡುತ್ತಿದಾರೆ ಸರ್ವೇಶ4 ಕಾದೋದಂ ವಿಮಲ ಕಮ್ಮೆಣ್ಣಿ ಕಸ್ತೂರಿ ಸ್ವಾದು ಜವ್ವಾಜಿ ಚಂದನ ಗಂಧ ದ್ರವ್ಯಗಳ ಹೇಮ ಪಾದುಕಾ ಪಟ್ಟುವಸನ ಈ ಧರೆಯ ಮೇಲಿರ್ದ ಉಡಿಗೆ ತೊಡಿಗೆಯು ಕರ್ಪು ರಾದಿ ತಾಂಬೂಲ ನಿರ್ಮಲ ದಾದಿಯರು ಪಿಡಿದು ಮುಂದೆ ಆದಿಹರಿ ಪರಮಪುರುಷ 5 ದಂಡಿಗೆ ಶಂಖತಾಳ ತಂಬೂರಿ ಜಾಂಗಟೆಯ ಗೊಂಡು ನಿನ್ನಯ ಪರಮ ಪ್ರೀತ್ಯರ್ಥ ದಾಸರು ಬೊಮ್ಮಾಂಡ ಕಟಹÀ ಬಿಚ್ಚುವಂತೆ ತಂಡ ತಂಡದಿ ಗೆಜ್ಜೆಕಟ್ಟಿ ಅಭಿನಯ ತಿರುಹಿ ಕೊಂಡಾಡೆ ಶಬ್ದ ಪ್ರತಿ ಶಬ್ದವಾಗುತಿದೆ ಭೂ- ಬಲ್ಲವರಾರು ಕುಂಡಲಗಿರಿವಾಸ ತಿಮ್ಮಾ 6 ಗೋತ್ರಾರಿ ಹರಿಧರ್ಮ ಪುಣ್ಯಜನಪನು ವರುಣ ವೀತಿಹೋತ್ರನ ಸಖನು ಯಕ್ಷೇಶ ಕೈಲಾಸ- ಸೂರ್ಯ ಚಿತ್ತದಲಿ ಮುಖ್ಯರಾದ ವಿಶ್ವ - ಮಿತ್ರ ಸನಕಾದಿಗಳು ನಾರದರೆ ಮೊದಲಾಗಿ ಸ್ತೋತ್ರವನು ಮಾಡುತಲಿದ್ದಾರೆ ಲಕ್ಷ್ಮೀಕಳತ್ರ ಜಗದ್ಭರ್ತ ತಿಮ್ಮಾ 7 ನಿಚ್ಚ ಏಳುವ ಸಮಯ ಮೀರಿತೋ ಇಂದೀಗ ಎಚ್ಚರಿಕೆ ಪುಟ್ಟದೇ ಎಲೋ ದೇವ ಶ್ರೀದೇವಿ ಮೆಚ್ಚಿಸಿದ ಮಹಸರಸವೆ ಮುಚ್ಚಟೆಯಿದೇಂ ತಿಳಿಯಲಾಗದೆ ಸ್ವಾಮಿ ಸೊಲ್ಲು ಕರ್ಣಕೆ ಬೀಳದಾಯಿತೆ ಕಾಣೆ ಸಚ್ಚಿದಾನಂದಾತ್ಮಕ 8 ನಿದ್ರೆಗೆವೆ ಹಾಕದಿರೊ ನೀರೊಳಗೆ ನೀನಿರೊ ಉ- ಪದ್ರ ಭೂಮಿಗೆ ಕಳೆಯೊ ಕಶ್ಯಪನ ಸುತನಳಿಯೊ ಸ- ಮುದ್ರ ರಾಣಿಯ ಪಡೆಯೊ ರಾಯರಾಯರ ತÀಡೆಯೊ ಮುದ್ರೆ ಭೂಮಿಜೆಗೆ ಕಳುಹೊ ಅದ್ರಿಯುದ್ಧರಿಸೊ ಮುಪ್ಪುರವ ಸಂಹರಿಸೊ ಕಲಿ- ಕ್ಷುದ್ರ ಕಳೆ ನಿದ್ರೆ ಸಾಕೆಂದು ಶುಕ್ತಿ ಸಾರುತಿದೆ ವೆಂಕಟಕಾದ್ರವೇಯ ಹಾಸಿಗೆಯಿಂದೇಳು 9
--------------
ವಿಜಯದಾಸ
ಭಜಿಸಿದ್ಯಾ | ವೆಂಕಟನಾ ನೀ | ಭಜಿಸಿದ್ಯಾ ಪ ಭಜಿಸಿದ್ಯ ಈ ಭಾಗ್ಯನಿಧಿಯ | ನೋಡು | ತ್ರಿಜಗವಂದಿತ ಗುಣಾಂಬುಧಿಯಾ ||ಆಹ|| ಪಂಕಜ ಕರ್ಣಿಕೆ ವಾಸ | ಅಜ ಸುರಾರ್ಚಿತ ಪಾದರಜ ತಮದೂರನ್ನ ಅ.ಪ. ಮನ ಸೋಲಿಸುವ ಸುಲಲಾಟ | ಚನ್ನ | ಫಣಿಗೆ ಕಸ್ತೂರಿನಾಮ ಮಾಟ | ನ ಮ್ಮನು ಪಾಲಿಸುವ ವಾರೆನೋಟ |ಆಹ| ಕನಕ ಮೋಹನ ಕುಂಡಲಾ ಕರ್ಣ ಮಿನುಗುವ ಕದವು ಆವಿನ ಸೋಲಿಪ ನಿತ್ಯಾ1 ಭೃಂಗಕುಂತಳ ನೀಲಕೇಶ | ಹುಬ್ಬು | ಚಾಪ ವಿಲಾಸ | ಉ | ತ್ತುಂಗ ಚಂಪಕ ಕೋಶನಾಸ | ರಸ ರಂಗು ತುಟಿ ಮಂದಹಾಸ || ಆಹ || ತಿಂಗಳು ಯೆಳೆ ಬೆಳೆದಿಂಗಳು ಮೀರಿ ಭೂ ಕೃತಿ ತಿರುವೆಂಗಳ ಸ್ವಾಮಿಯ 2 ಪರಿಮಳವೀಳ್ಯ ಕರ್ಪೂರ | ಇಟ್ಟು | ಜಲಧಿ ಗಂಭೀರ | ದಂತ ಪರಿಪಜ್ಞೆ ಸಮ ವಿಸ್ತಾರ ||ಆಹ || ಮಿನುಗುವನಂತ ಚಂದೀರ ತೇಜಾಧಿಕ ಮುಖ ಪರಿಪರಿ ವೇದ ಉಚ್ಚರಿಸುವ ಚತುರಾರ 3 ಬಕುಳಾರವಿಂದ ಮಲ್ಲೀಗೆ | ಅದು | ಕುರುವಕ ಪನ್ನೀರು ಸಂಪಿಗೆ | ಭೂಚಂಪಕ ಜಾಜಿ ಯಿರುವಂತಿಗೆ | ಪೂಕೇತಕಿ ಮರುಗ ಶಾವಂತಿಗೆ ||ಆಹ|| ಸಕಲ ಪೂತರುವಿರೆ ವಿಕಸಿತ ಮುಕುಳಿತ ಮಕರಂದ ಮೊರದ್ವಂದ್ವ ಕಸ್ತೂರಿಯ ನಿಂದು4 ಕರತಾಳರೇಖೋಪರೇಖ | ಕಾಂತಿ | ಅರುಣಸಾರಥಿ ಮಯೂಖ | ಬೇರೆ | ಪರಿ ಶೊಭಿತ ಹಸ್ತ ಶಂಖ | ಗದೆ | ಧರಿಸಿದ ಚಕ್ರ ನಿಶ್ಶಂಕ || ಆಹ | ಸರಿಗೆ ಕೌಸ್ತಭಮಣಿ ಸಿರಿವತ್ಸವನ ಮಾಲೆ ವೈಜಯಂತಿ ಮಂಜರಹೀರ ಹಾರನ್ನ5 ಕಡಗ ಕಂಕಣ ಮುದ್ರೆ ಬೆರಳ | ಪಾಣಿ | ನಿಡಿತೋಳ ಕಕುಭುಜಿ ಕೊರಳ ಸ್ಕಂಧ ವಿಡಿ ಸಪ್ತವರಣ ವಿಸರಳ | ಬೆನ್ನು | ಮುಡಿಯವಿಟ್ಟ ಮಣಿಹವಳ ||ಆಹ | ಝಡಿತದ ಪವಳ ವಡಸೀದ ಕೇಯೂರ ವಡನೆ ಕಾಯಿಕ ಕೀರ್ತಿ ವಡಲೀಲಿ ಮೆರೆವನ್ನ6 ಮುತ್ತು ವೈಢೂರ್ಯ ಪ್ರವಾಳ | ಪಚ್ಚೆ | ಕೆತ್ತಿದ ಪದಕನ್ಯಾವಳ ಸುತ್ತ ಸುತ್ತಿದ ಸನ್ಮುಡಿವಾಳ | ಇತ್ತ ತುತಿಪ ಜನಕೆ ಜೀವಾಳ ||ಆಹ || ಪ್ರತ್ಯೇಕವಾಗಿ ತೂಗುತ್ತಿಹ ಸರಗಳ ಸುತ್ತುಲಸಿಯ ಮಾಲೆ ಚಿತ್ರವಾಗಿರೆ ಬಹಳ 7 ಕೇಸರಿ ಅಂಬರ | ಗೋರೋ ಚನ ನಖಚಂದ ನಗಾರು | ಪೆಚ್ಚಿ | ತೆನೆ ಮೃಗನಾಭಿ ಪನ್ನೀರ | ವೆಳ | ಘನಪರಿಮಳ ಗಂಧಸಾರ ||ಆಹ || ಸೊಗಸು ಸಲಿಸುತ್ತ ಒಪ್ಪುವ ಘನರುಹ ತ್ರಿವಳಿಯಾ 8 ತ್ರಿವಳಿ ಉಪಗೂಢ ಜಠರ | ಅಖಿ | ಳಾವನೀ ಧರಿಸಿದಾ ಧೀರಾ | ಮೇಲೆ | ಕುಸುಮ ಮಂದಿರಾ | ಮೃಗದೇವ ಉಡಿನಡು ಧಾರಾ ||ಆಹ || ಭಾವ ಕಿಂಕಿಣಿ ತೋಳಲಿವಾಸನಾ ಬಿರು ದಾವಳಿಕೊಂಡರು ದೈತ್ಯಾವಳಿ ಹಾರನ್ನಾ 9 ಊರು ಜಾನು ಜಂಘ ಗುಲ್ಫ | ವಿ ಚಾರ ಶಕ್ರ ಮಾತು ಅಲ್ಪ | ಎನ್ನ ತೋರುನೆಯ ಅಗ್ರ ಸ್ವಲ್ಪ | ಗುಣ | ಸಾರಮಾಡಿಪ್ಪ ಸಂಕಲ್ಪ ||ಆಹ || ವಾರಣಕರದಂತೆ ಹಾರೈಸು ಈ ತನೂ ಪುರ ಕಡಗಾ ಗೆಜ್ಜೆ ಚಾರುಚರಣ ಪೆಂಡ್ಯಾ10 ಪಾದ | ಪಾಪ ಪಾದ | ಕಾಮ ಪಾದ | ಬಹು ಪಾದ ||ಆಹಾ|| ಅನಂತ ಚಿನ್ಮಯ ಒಮ್ಮೆ ನೀನೇ ಗತಿಯೆಂಬ ಮಾನವಗೆ ಬಂದು ಕಾಣಿಸಿಕೊಂಬನ11 ಮೃದುತಾಳಾಂಗುಲಿನಿಸಿ ಭಾಸ | ರಕ್ತ ಪದತಳ ಧ್ವಜ ವಜ್ರಾಂಕುಶ | ಚಕ್ರ ಪದುಮ ಚಿಹ್ನೆ | ನಿರ್ದೋಷ | ಸುಧಿ ಸುಧ ಕಥಾಪಾಠ ಸರಸÀ ||ಆಹ|| ತ್ರಿದಶನಾಯಕ ಶಿವ ವಿಧಿಗಮುಗುಟ ಪಾದದಲಿ ಸಮರ್ಥವಾದರು ನೋಡು ತರುವಾಯ 12 ಆಪದ್ರಕ್ಷಕ ಸುರಾಧ್ಯಕ್ಷ | ಜಗ | ದ್ವ್ಯಾಪಕ ಕರುಣಾಕಟಾಕ್ಷ | ಜಾಗ್ರತ್ | ಸ್ವಪ್ನದಲಿ ನೀನೆ ದಕ್ಷಾ | ನಗೆ | ಆಪನ್ನರಿಗೆ ನೀನೆ ವೃಕ್ಷಾ ||ಆಹ || ರೂಪರೂಪಾಂತರ ವ್ಯಾಪಾರ ಮಾಳ್ಪನ್ನ ಆಪಾದ ಮೌಳಿ ಪರಿಯಂತರ ನೀನು 13 ಹಿಂದಾಣ ಅನುಭವ ಧಾನ್ಯ | ಲೋಹ | ತಂದು ಸಂಪಾದಿಸೋ ಜ್ಞಾನ | ಭಕ್ತಿ | ಯಿಂದ ಮುಂದಕೆ ನಿಧಾನ | ಚಿತ್ತ | ಯಿಂದು ಕೊಂಡಾಡೋ ಮುನ್ನೀನ ||ಆಹ|| ಬಂಧನ ಹರಿಸಿ ಆನಂದಾವ ಕೊಡುವ ಮು- ಕುಂದ ಅನಿಮಿತ್ತ ಬಂಧು ವೆಂಕಟನಾ ನೀ14 ನಿತ್ಯ | ನೀಲ | ಪುಣ್ಯ | ವ್ರಜವ ಪಾಲಿಸುವ ವಿಶಾಲ | ವಿತ್ತು | ನಿಜದೊಳಗಿಡುವ ಈ ಕೋಲ ||ಆಹ|| ವ್ರಜದಲ್ಲಿ ಪುಟ್ಟಿದ ಸುಜನಾರಾಂಬುಧಿ ಸೋಮ | ವಿಜಯವಿಠ್ಠಲರೇಯ ಗಜರಾಜವರದನ್ನ 15
--------------
ವಿಜಯದಾಸ
ಭಜಿಸಿದ್ಯಾ ಈ ಭಾಗ್ಯನಿಧಿಯಾ ನೋಡು ಸುಜನರ ಹೃದಯ ಪಂ ರಜತಮೋ ದೂರನ್ನ ಪ ಮನ ಸೋಲಿಸುವ ಲಲಾಟ ಫಣಿ ನಮ್ಮನು ನೋಡುವ ವಾರೆ ನೋಟಾ ಹಾಹಾ ಮಕರ ಕುಂಡಲ ಕರ್ಣ ಕದಪು ಆವಿನ ಸೋಲಿಸೆ ನಿತ್ಯಾ 1 ಭೃಂಗ ಕುಂತಳ ಕೇಶಾ ಪುಬ್ಬು ಅಂಗಜ ಚಾಪಾ ವಿಲಾಸ ಉ ತ್ತುಂಗ ಚಂಪಕ ಕೋಶಾ ನಾಸಾರಸಾ ರಂಗುದುಟಿಯ ಮಂದಹಾಸಾ ಹಾಹಾ ತಿಂಗಳ ಎಳೆ ಬೆಳ ದಿಂಗಳಾ ಮೀರೆ ಭೂ ಮಂಗಳಾಕೃತಿ ತಿರುವೆಂಗಳ ಸ್ವಾಮಿಯ 2 ಪರಿಮಳ ವೀಳ್ಯೆ ಕರ್ಪುರಾ ವಿಟ್ಟಾ ಜಲಧಿ ಗಂಭೀರಾ ದಂತ ಪರಿಪಙË್ತ ಸಮ ವಿಸ್ತಾರ ಹಾಹಾ ಮಿರುಗುವಾನಂತ ಚಂ ಚರಿಸುವ ಚತುರನ್ನ 3 ಪನ್ನೇರು ಸಂಪಿಗೆ ಪೊಂಗೇ ಜಾಜಿ ಇರುವಂತಿಗೆ | ಹಾಹಾ | ಮಕರಂದಾ ಮಾರಂದೋದಕ ಸುರಿಯಲಿಂದು4 ನಿಡಿದೋಳು ಕಕುಭುಜಾ ಕೊರಳಾ ಸ್ಕಂಧಾ ಮಣಿ ಹರಳಾ | ಹಾಹಾ| ಒಡನೆ ತಾಯಿತ ಕೀರ್ತಿ ವಡಿವೇಲಿ ಮೆರೆವನ್ನ 5 ಸುರವಿ ಮಯೂಖಾ ಮೇಲು ಧರಿಸಿದ ಚಕ್ರಾದಿ ಶಂಖಾ | ಹಾಹಾ | ಕೌಸ್ತುಭ ಮಣಿ ಸಿರಿವತ್ಸ ವನಮಾಲಾ ಉರವೈಜಯಂತಿ ಮಂದಾರ ಹೀರ ಹಾರನ್ನ6 ಮುತ್ತು ವೈಢೂರ್ಯ ಪ್ರವಳಾ ಪಚ್ಚ್ಚೆ ಕೆತ್ತಿದ ಪದಕ ನ್ಯಾವಳಾ ಸ್ತುತಿಪ ಜನಕೆ ಜೀವಾಳಾ | ಹಾಹಾ | ಪ್ರತ್ಯೇಕವಾಗಿ ತೂಗುತಿಹ ಸರಗಳು ತತ್ತುಲಸಿಧಾಮ ಚಿತ್ರವಾಗಿರೆ ಬಲು 7 ನಖ ಚಂದನಾ ಅಗರಾ ಪಚ್ಚೆ ಘನ ಪರಿಮಳ ಗಂಧ ಸಾರಾ | ಹಾಹಾ | ತನುವಿಗೆ ತನುವು ಲೇಪನವಾದಾ ಸೊಗಸು ವಾ ಸನೆ ಸುತ್ತ ಘಮಘಮ ತನರು ಹಾವಳಿ ತಿಳಿ 8 ತ್ರಿವಳಿ ಉಪಗೂಢ ಜಠರಾ ಅಖಿಳಾವನಿ ಧರಿಸಿದ ಧೀರಾ ನಾಭಿ ಕುಸುಮ ಮೃಗ ದೇವ ಉಡಿ ಉಡದಾರಾ | ಹಾಹಾ | ಭವಕಿಂಕಿಣಿ ತಳಲಾವಿ ವಸನ ಬಿರು ತೊಡರು ದೈತ್ಯಾವಳಿ ಹರನನ್ನಾ 9 ಊರು ಜಾನು ಜಂಘೆ ಗುಲ್ಫಾ ವಿಚಾರಿಸೆ ಕ್ರಮಾತು ಅಲ್ಪಾ ತನ್ನ ಸಂಕಲ್ಪಾ | ಹಾಹಾ| ವಾರಣಾ ಕರದಂತೆ ಹಾರೈಸುಯಿಂತು ನೂ ಚಾರು ಚರಣ ಪೆಂಡೆ10 ನಖ ವಜ್ರಾಂಕುಶ ಚಕ್ರ ಸುಧಿಯಾ ಸುರಿವ ಪೀಠ ಸರಸಾ | ಹಾಹಾ | ತ್ರಿದಶನಾಯಕ ಶಿವ ವಿಧಿಗಳ ಮುಕುಟ ಪಾದದಲಿ ಸಮ್ಮರ್ದವಾದುದು ನೋಡಿ ತರುವಾಯಾ 11 ದಹಿಸುವ ಪಾದಾ ಕಾಮ ಕಾನನ ದಹಿಸುವ ಪಾದಾ | ಹಾಹಾ | ಅನಂತ ದಿನಕ್ಕೊಮ್ಮೆ ನೀನೇ ಗತಿಯೆಂದಾ ಮಾನವಗೆ ಬಂದು ಕಾಣಿಸಿಕೊಂಬನ್ನ12 ಅಪದಕ್ಷ ಸಾರಾಧ್ಯಕ್ಷ ಸರ್ವವ್ಯಾಪಕ ಕರುಣಿಕಟಾಕ್ಷ ಜಾಗ್ರತ್ ಸ್ವಪ್ನದಲ್ಲಿ ಪ್ರಾಜ್ಞಾದಕ್ಷ ನಿಜ ಆಪನ್ನರಿಗೆ ದಾವಾ ವೃಕ್ಷ | ಹಾಹಾ | ರೂಪ ರೂಪಾಂತರ ವ್ಯಾಪಾರ ಮಾಳ್ಪನ್ನ ಆಪಾದ ರತುನ ಮೌಳಿಪರಿಯಂತರಾ13 ಸಂಪಾದಿಸು ಜ್ಞಾನಾ ಭಕ್ತಿ ಕೊಂಡಾಡು ಮುನ್ನಿನಾ | ಹಾಹಾ | ಬಂಧನ ಹರಿಸಿ ಆನಂದವ ಕೊಡುವ ಮು ಕುಂದ ಅನಿಮಿತ್ತ ಬಂಧು ವೆಂಕಟನ್ನ 14 ನಿತ್ಯ ಭಜಿಸುವ ಜನರಿಗೆ ಶೀಲಾ ಪುಣ್ಯ ನಿಜರೊಳಗಿಡುವ ಈ ಕೂಲಾ | ಹಾಹಾ | ವ್ರಜದಲಿ ಪುಟ್ಟಿದಾ ಸುಜನಾಂಬುಧಿ ಸೋಮ ವಿಜಯವಿಠ್ಠಲರೇಯಾ ಗಜರಾಜವರದನ್ನಾ 15
--------------
ವಿಜಯದಾಸ
ಭಯ ನಿವಾರಣವು ಶ್ರೀಗುರು ದಿವ್ಯನಾಮ ನಿಮ್ಮ ನಾಮ ಧ್ರುವ ಕ್ಲೇಶಪಾಶವು ಕತ್ತರಿಸಿ ದೋಷನಾಶವನು ಗೈಸಿ ಪೋಷಿಸುವ ಕೇಶವ ನಿಮ್ಮ ನಾಮ 1 ನರಕ ಘೋರದ ಘಟವೆಂಬ ನರಜನ್ಮದುರ್ಘಟ ತಾರಿಸುವ ನಾರಾಯಣ ನಿಮ್ಮ ನಾಮ 2 ಮದಮತ್ಸರವ ಜರಿಸಿ ಭೇದಾಭೇದವು ಹರಿಸಿ ಮಾಧವ ನಿಮ್ಮ ನಾಮ 3 ಭವ ಹಿಂಗಿಸುವ ಗೋವಿಂದ ನಿಮ್ಮ ನಾಮ 4 ಇಷ್ಟಾರ್ಥಗಳ ಕೊಟ್ಟು ಕಷ್ಟಾರ್ಥ ಪರಿಹರಿಸಿ ದೃಷ್ಟಾಂತದಲಿ ಹೊರೆವ ವಿಷ್ಣು ನಿಮ್ಮ ನಾಮ 5 ಮೊದಲು ಮೂವಿಧಿಯಗಳು ಜರಿಸಿ ಸದಮಲ ಪುಣ್ಯ ಪದವೀವ ಮಧುಸೂದನ ನಿಮ್ಮ ನಾಮ 6 ತ್ರಿವಿಧಾಧ್ಯಾತ್ಮ ಸ್ಥಿತಿಗತಿಯ ಈವ ಶಾಸ್ತ್ರಗಳನರಿಸಿ ಭಾವಭಕ್ತೀವ ತ್ರಿವಿಕ್ರಮ ನಿಮ್ಮ ನಾಮ 7 ವರ್ಮಧರ್ಮವನರಿಸಿ ಕರ್ಮಪಾಶವ ಹರಿಸಿ ಜನ್ಮ ತಾರಿಸುವ ವಾಮನ ನಿಮ್ಮ ನಾಮ 8 ಶ್ರೀಕರವನಿತ್ತು ಸಿರಿಸಕಲ ಸೌಭಾಗ್ಯದಲಿ ಸೃಷ್ಟಿಯೊಳು ಹೊರೆವ ಶ್ರೀಧರ ನಿಮ್ಮ ನಾಮ 9 ಹರಿಸಿ ಸಂದೇಹ ಸಂಕಲ್ಪ ಬಾಧೆಯಗಳು ಹರುಷ ಗತಿನೀವ ಹೃಷೀಕೇಶ ನಿಮ್ಮ ನಾಮ 10 ಪಾತಕ ಹರಿಸಿ ಪದ್ಮನಾಭ ನಿಮ್ಮ ನಾಮ 11 ದುರಿತ ವಿಧ್ವಂಸನಿಯ ಮಾಡಿ ಧರೆಯೊಳು ದ್ಧರಿಸುವ ದಾಮೋದರ ನಿಮ್ಮ ನಾಮ 12 ಸಕಲ ಪದವಿತ್ತ ಸುಖಸಾಧನವ ತೋರುತಿಹ್ಯ ಅಖಿಳದೊಳು ಸಂಕುರುಷಣ ನಿಮ್ಮ ನಾಮ 13 ವಾಸನೆಯು ಪೂರಿಸುತ ಭಾಷೆ ಪಾಲಿಸುತಿಹ ಲೇಸಾಗಿ ಶ್ರೀವಾಸುದೇವ ನಿಮ್ಮ ನಾಮ 14 ಪ್ರಾಣಪ್ರಿಯವಾಗಿ ಪ್ರಸನ್ನವಾಗುವ ಪೂರ್ಣ ಪ್ರತ್ಯಕ್ಷವಿದು ಪ್ರದ್ಯುಮ್ನ ನಿಮ್ಮ ನಾಮ 15 ಅನುಮಾನ ಪರಿಹರಿಸಿ ಅನುಭವಾಮೃತ ಸುರಿಸಿ ಅನಿರುದ್ಧ ನಿಮ್ಮ ನಾಮ 16 ಪೂರ್ವಕರ್ಮವ ಹರಿಸಿ ಪೂರ್ಣಕಳೆಯೊಳು ಬೆರೆಸಿ ಪುಣ್ಯಪದವೀವ ಪುರುಷೋತ್ತಮ ನಿಮ್ಮ ನಾಮ 17 ಅಧ್ಯಾತ್ಮ ಸುಖವರಿಸಿ ಸಿದ್ಧಾಂತವನು ತೋರಿ ಅಧ್ಯಕ್ಷವಾಗುವಾಧೋಕ್ಷಜ ನಿಮ್ಮ ನಾಮ 18 ನರಜನ್ಮವನು ಹರಿಸಿ ಹರಿಭಕ್ತಿಯೊಳು ಬೆರೆಸಿ ಅರುವು ಕುರ್ಹುವ್ಹಿಡಿದ ನರಸಿಂಹ ನಿಮ್ಮ ನಾಮ 19 ಅರ್ಚನೆಯು ಪ್ರಾರ್ಥನೆಯು ಪರಮಪೂಜೆಯನರಿಸಿ ಅಚ್ಯುತ ನಿಮ್ಮ ನಾಮ 20 ಜನನ ಮರಣವನಳಿಸಿ ತನುಮದೊಳು ಬೆರಿಸಿ ಜನುಮ ಹರಿಸುವ ಜನಾರ್ದನ ನಿಮ್ಮ ನಾಮ21 ಉಪಮೆಯ ರಹಿತ ವಸ್ತುವುಪಾಯದಲಿ ತೋರಿ ಕೃಪೆಯಿಂದ ಹೊರೆವ ಉಪೇಂದ್ರ ನಿಮ್ಮ ನಾಮ22 ಹರಿಸಿ ಅಹಂಭಾವ ಅರಿಸಿ ಅನುಭವ ಪೂರ್ಣ ಸುರಿಸುವ ಸುಖ ಶ್ರೀಹರಿ ನಿಮ್ಮ ನಾಮ 23 ಕರಕಮಲವಿಟ್ಟು ಶಿರದಲಿ ಸದ್ಗೈಸುತಿಹ ಕರುಣಾಳು ಮೂರುತಿ ಶ್ರೀಕೃಷ್ಣ ನಿಮ್ಮ ನಾಮ 24 ಸಾರ ಸಂಧ್ಯಾಯನದಿ ಮಹಿಪತಿಯ ಹೊರೆವ ಶ್ರೀಗುರು ನಿಮ್ಮ ನಾಮ 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭವ ಭಸಿ- ತಾಂಗನ ನೋಡಿದೆ ಪ. ರಂಗನ ತನ್ನಂಗದೊಳಗೆ ಇಟ್ಟು ಹಿಂಗದೆ ನೆನೆಯುವ ಮಂಗಳ ಮೂರುತಿ ಅ.ಪ. ತ್ಯಕ್ಷನ ನೋಡಿದೆ | ಕರುಣಕ- ಟಾಕ್ಷನ ನೋಡಿದೆ ವೀಕ್ಷಣದಿಂದ ಶ್ರೀ ವಕ್ಷನ ಸುತನನು ಶಿಕ್ಷಿಸಿದ ಫಾಲಾಕ್ಷನ ಶಿವನ 1 ಹರನನು ನೋಡಿದೆ | ಗಂಗಾ- ಧರನನು ನೋಡಿದೆ ಗಿರಿಜೆವಲ್ಲಭ ಭಾಸುರ ವಂದಿತನಾ ಸರಿತು ತುಂಗ ಪಂಪಾಪುರವಾಸನ 2 ಶೂಲಿಯ ನೋಡಿದೆ | ರುಂಡ ಮಾಲಿಯ ನೋಡಿದೆ ಕೈಲಾಸದಿ ಉಮೆ ಲೋಲನೆನಿಸಿ ಇಲ್ಲಿ ವ್ಯಾಳಭೂಷಣನಾಗಿ ಲೀಲೆಯೊಳ್ ಮೆರೆವನ 3 ಈಶನ ನೋಡಿದೆ | ನರಹರಿ ದಾಸನ ನೋಡಿದೆ ಪಾಶುಪತಾಸ್ತ್ರವ ವಾಸವಜನಿಗಿತ್ತ ಪೋಷಿಕಿರಾತನ ವೇಷನ ಹರುಷದಿ 4 ದಿಟ್ಟನ ನೋಡಿದೆ | ವೈಷ್ಣವ ಶ್ರೇಷ್ಠನ ನೋಡಿದೆ ವೃಷ್ಣೀಶ ಗೋಪಾಲಕೃಷ್ಣವಿಠ್ಠಲನಿಗೆ ಪುಟ್ಟ ಮೊಮ್ಮಗನಾಗಿ ತುಷ್ಟಿಪಡಿಸುವನ5
--------------
ಅಂಬಾಬಾಯಿ
ಭವ ವನಧಿಗೆ ನವಪೋತ | ಪಾಲಿಸು ವಿಖ್ಯಾತ ಪ ವಿಯದಧಿಪನೆ ಎನ್ನ ಕೈಯ್ಯನು ಪಿಡಿಯೋ | ಜ್ಞಾನ ಭಿಕ್ಷ ಈಯೋ ಅ.ಪ. ಮಾಯಾಪತಿ ಪದ ಪದ್ಮಯುಗಳ ಭಜಿಪಾ | ಉತ್ತಮ ಪಥತೋರ್ಪಾಶ್ರೇಯಸು ಸಾಧನ ವೆನಿಸಿ ಮೆರೆಯುರ್ತಿರ್ಪಾ | ಹರಿಪರಮನು ಎನಿಪಾ ||ಮಾಯಾಮತ ತಮ ಸೂರ್ಯನೆನಿಸಿ ಮೆರೆವಾ | ಸುಜನಸುರದ್ರುಮವಾನ್ಯಾಯ ಸುಧೆಯನೇ ತಾರಚಿಸಿರುವಾ | ಮುಕುತಿ ಮಾರ್ಗ ತೋರ್ವಾ 1 ಕಾಕು ವೃತ್ರನಿಂದಾವೃತ ಜಗವಿರಲೂ | ಜ್ಞನರಹಿತ ವಿರಲೂಲೋಕ ಮಹಿತ ಮಂತ್ರವು ನಿನಗಿರಲೂ | ಜಪಿಸುತಾಸ್ತ್ರ ಬಿಡಲೂ ||ಆ ಕುಯೋನಿಗತ ಚಿತ್ರಕೇತು ಮೋಕ್ಷ | ಆಯಿತು ಸುರರಾಧ್ಯಕ್ಷಲೋಕಾಮಯವನು ಹರಿಸಿ ಜಗದಿ ಮೆರೆದೇ | ಮಹಾನ್ನು ಎನಿಸೀದೇ2 ಚಾಪ ಜೇತಾಕುಕ್ಷಿಯೊಳಗೆ ಬಲು ಬಲು ವಿಖ್ಯಾತಾ | ಕಾಗಿನಿ ತಟದಿಸ್ಥಿತ ||ಅಕ್ಷರೇಡ್ಯ ಗುರುಗೊವಿಂದ ವಿಠ್ಠಲನಾ ತನ ಹೃದ್ಗನಾಗಿರುವವನ ||ಅಕ್ಷಿಯೊಳಗೆ ಕಂಡು ಮೋಕ್ಷ ಪಧವ ಸೇರ್ದ | ಆನಂದವ ಬೀರ್ದ 3
--------------
ಗುರುಗೋವಿಂದವಿಠಲರು
ಭವ ಕೂಪನಿ ಪತಿತಂ ಪ ಘೊರ ದುರಿತಹರ ಚಾರುಚರಣಯುಗಲಂ ಪ್ರಣ ಮಾಮಿ ತ್ರಿಕಾಲಂ ಅ,ಪ ಕಾರ್ಪರ ಋಷಿಕೃತ ಘೋರ ತಪ:ಪ್ರೀತ ಅ- ತ್ರಾವಿರ್ಭೂತ ಕಾರ್ಪರ ಗ್ರಾಮೇತೀರ ಗತಾಶ್ವತ್ಥ ಪೇಣ ಸಮಸ್ತ ಆರಾಧಕ ನಿಜಭಕ್ತ ಜ- ನಾಭಿಷ್ಟ ವರ್ಷಣ ಸರ್ವೇಷ್ಟ ನಾರಾಯಣ ಮುನಿ ಪೂಜಿತ ಸುರವ್ರಾತ ಸಂಸ್ತುತ ಶುಭಚರಿತ 1 ಸಾಕ್ಷಾಚ್ಛ್ರೀರ ಪಿವೀಕ್ಷ್ಯಾದ್ಭುತರೂಪಂ ತವ ಪ್ರಕಟಿತ ಕೋಪಂತ್ರ್ಯಕ್ಷಾದ್ಯಮರೈ:ಪ್ರೇಷಿತಾಪಿ ಸ್ವ¥ತಾ ಶಂಕೆ- ತೇವ ತಸ್ಥಾ ರಕ್ಷಿತÀವಾನಭಿ ವೀಕ್ಷ್ಯ ಪ್ರಹ್ಲಾದಂ ಕೃತ್ವಾಪ್ರ ಸಾದಂ ಲಕ್ಷ್ಮೀಧವಖಲ ಶಿಕ್ಷಣ ತವಚರಿತಂ ಜ್ಞಾಪಯಮೇ ಸತತಂ 2 ಭಕ್ತಿಂದೇಹಿ ಪ್ರಶಸ್ತಾಂತ್ವಯಿ ಕೃಪಯಾ ಚಿಂತಿತ ದುರ್ವಿಷಯಾ ಸಕ್ತಿಂಜಹಿ ಸದ್ಭಕ್ತ ಚಿತ್ತನಿಲಯ ಕಾಯಾಧವ ಪ್ರಿಯ ಶೃತಿಪುಟಸಂಭೃತಯಾ ಮುಕ್ತಾ ಮುಕ್ತ ಸಮಸ್ತ ಜಗತ್ಕಾಯಾ ಸುರಗಣ ಸಂಶೇವ್ಯಾ3 ಸುಜನಾರ್ತಿಹರಣಾ ವೃಕ್ಷಾದವತೀರ್ಣ ಮದೃತ್ತಿಮಿರ ಪ್ರದ್ಯೋತನಕಿರಣ ಸನ್ನಿಭಶುಭ ಚರಣ ಷಡ್ಗುಣಸಂಪನ್ನ 4 ಮಂಗಳ ಕೃಷ್ಣ ತರಂಗಿಣೆ ಕೂಲಸ್ಥ ಅಶ್ವತ್ಥೋದ್ಭೂತ ತುಂಗವದನ ಬಹು ಶಾಲಿಗ್ರಾಮಗತ ಷೋಡಶ ಬಾಹುಯುತ ಮಾತಂಗ ಸಂಗೀತಪ್ರಿಯ ಮಂಗಳತರಚರಿತ ಶತಿತತಿ ವಿಖ್ಯಾತ 5
--------------
ಕಾರ್ಪರ ನರಹರಿದಾಸರು
ಭಾವಭಕ್ತಿಗೊಲಿವ ತಾಂ ಶ್ರೀಹರಿ ಕಾವ ಕರುಣದಲಿ ಪರೋಪರಿ ಧ್ರುವ ಕಂದ ಪ್ರಹ್ಲಾದನ ಸದ್ಭಾವಕಾಗಿ ಸಂಧಿಸೊದಗಿ ಬಂದ ನರಸಿಂಹನಾಗಿ ತಂದೆ ತಾಯಿ ಬಂಧು ಸಮಸ್ತವಾಗಿ ಬಂದು ರಕ್ಷಿಸಿದ ಪ್ರತ್ಯಕ್ಷವಾಗಿ 1 ಭಾವದಿಂದ ದ್ರೌಪದಿಗಾಗ್ಯಧ್ಯಕ್ಷ ಠಾವಠಾವಿಲಿ ಕಾಯಿದೆ ಪ್ರತ್ಯಕ್ಷ ಭುವನದೊಳಾಗಿ ಪಾಂಡವಪಕ್ಷ ಜೀವ ಪ್ರಾಣಾಗಿ ಮಾಡಿದ ಸಂರಕ್ಷ 2 ಭಾವದಿಂದಾಗುವ ಭಕ್ತರಾಧೀನ ದೇವೋತ್ತಮದ ಬಿಟ್ಟು ಹಿರಿಯತನ ದಾವದೊಂದೇಕಾಗಿ ತಾಂ ಸಾವಧಾನ ಈವ್ಹಾಭಕ್ತರ ಮನಿಲ್ಯನುದಿನ 3 ಭಾವದಿಂದುದಿಸುವ ಸ್ವಯಂಭಾನು ಭಾವಿಕರಿಗಾಗುವ ಶ್ರಯಧೇನು ಭಾವದಿಂದಾಗುವ ಸಫಲ ತಾನು ಭಾವದಿಂದ ಭಾವ ಪೂರಿಸಿದನು 4 ಭಾವವೆಂಬಂಜನ ಕಣ್ಣಿಲೂಡಿ ಭಾವದಲುಂಬುದನು ಒಡಮೂಡಿ ಭಾವದಿಂದ ಮಹಿಪತಿ ಕೈಯಗೂಡಿ ಜೀವ ಪಾವನ್ನಗೈಸÀುತಿಹ್ಯ ನೋಡಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಾಸ್ಕರ ಗುರು ನಮ್ಮ ಪಕ್ಷ ಭಾಸುತಿಹ ಪ್ರತ್ಯಕ್ಷ ಧ್ರುವ ಪೂರಿಸಿ ಮನದಾಪೇಕ್ಷ ಬೀರಿದ ಕರುಣಾಕಟಾಕ್ಷ ತೋರಿದ ನಿಜಲಯ ಲಕ್ಷ ಅರುಹಿದ ಅನುಭವ ಸಾಕ್ಷ 1 ಮಾಡಿಙÁ್ಞನ ಸುದೀಕ್ಷ ನೀಡಿದ ನಿಜ ಸುಭಿಕ್ಷ ದÀೃಢಭಕ್ತರ ಕಲ್ಪವೃಕ್ಷ ಒಡೆಯನಹುದು ಸಂರಕ್ಷ 2 ಮೂಢ ಮಹಿಪತಿಪಕ್ಷ ಬಿಡದೆ ಮಾಡುವ ಸಂರಕ್ಷ ಪುಂಡರೀಕಾಕ್ಷ ಕುಡುವ ಸದ್ಗತಿ ಸುಮೋಕ್ಷ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಿಕ್ಷಾವ ನೀಡ್ವುದು ತಾಕ್ರ್ಯನ ಮಾತೇ | ಹರಿ ಭಕುತಿ ಎಂಬಭಿಕ್ಷಾವ ನೀಡ್ವುದು ತಾಕ್ರ್ಯನ ಮಾತೇ ಪ ತ್ರ್ಯಕ್ಷಸು ಸನ್ನುತೆ | ಮೋಕ್ಷದ ಶ್ರೀಹರಿಶಿಕ್ಷಿಸುಭಕುತಿಯ | ಪಕ್ಷಿಯ ಮಾತೇ ಅ.ಪ. ಪತಿ ಸಿರಿ | ವಸುದೇವ ಸುತನನಯಶವ ನುಡಿ ಪದ | ಬಿಸಜದಿ ಭಕುತಿಯ 1 ಮೂರ್ತಿ | ಕೇಳ್ವುದು ಶರಣಾರ್ತಿಮಾನಾಭಿಮಾನ ನಿನ್ನದು ಗಾಯತ್ರಿ | ನರಹರಿ ಗುರು ಭಕ್ತಿ ||ಕ್ಷೋಣಿಯೊಳಗೆ ಸ | ತ್ತ್ರಾಣಿ ಭಾರತಿಯೆಮಾಣದೆನಗೆ ಜಗ | ತ್ರಾಣನ ಭಕುತಿಯ 2 ಸತಿ ಕಾಳೀ||ಸಾರತ ಮನು ಗುರು | ಗೋವಿಂದ ವಿಠಲನಚಾರು ಚರಣ ಸ | ದ್ಭಕುತಿಯು ಎಂಬ 3
--------------
ಗುರುಗೋವಿಂದವಿಠಲರು
ಭಿಕ್ಷೆ ನೀಡೆನಗೆ ಪಕ್ಷಿಗಮನ ನಿಮ್ಮ ನಾಮ ಭಿಕ್ಷೆನೀಡಿ ರಕ್ಷಿಸೆನ್ನ ಮೋಕ್ಷಪದಕಧ್ಯಕ್ಷ ನಾಮ ಪ ಅಂಬರೀಷನ ಕಾಯ್ದ ನಾಮ ಇಂಬು ಇವಗಿತ್ತ ನಾಮ ಶಂಭು ಕುಣಿದು ಕುಣಿದು ಪೊಗಳ್ವ ಕುಂಭಿನಿಯೊಳು ಮೆರೆವ ನಾಮ 1 ಕರಿಯ ಕಷ್ಟಕ್ಕಾದ ನಾಮ ತರಳನ್ನೆತ್ತಿ ಪೊರೆದ ನಾಮ ಪರಮಪಾವನೆ ಪರಮೇಶ್ವರಿ ಅರಸಿ ಶಿರವದೂಗ್ವ ನಾಮ 2 ಯಮನ ಬಾಧೆ ಗೆಲಿಪ ನಾಮ ಸುಮನಸರೊಳಾಡಿಸುವ ನಾಮ ಅಮಿತ ಶ್ರೀರಾಮ ನಿಮ್ಮಾನಂದ ನಾಮ 3
--------------
ರಾಮದಾಸರು