ಒಟ್ಟು 173 ಕಡೆಗಳಲ್ಲಿ , 52 ದಾಸರು , 166 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಘವನಾಡಿದ ಮಾತಿಗಾಂಜನೇಯ ಬಿನ್ನವಿಸುವದು |ಈಗ ಪೇಳುವೆ ಸಜ್ಜನರಾಲಿಸುವದು ಪಆ ರವಿನಂದನನು ತಾ ಮೇರೆ ಮಾಡಿ ಅಟ್ಟಿದನು |ವಾನರರುಗಳನು ತಿಂಗಳು ಮೀರಿತಿಂದಿಗೆ ||ಮಾರುತಿ ಕೇಳೀ ಮಾತು ಇನ್ನಾರ ಕಾಣೆ ಬಲ್ಲಿದರ |ನಾರಿಯೆಲ್ಲಿಹಳೋ ವಾರ್ತೆ ತಾರೋ ನೀ ಪೋಗಿ 1ಸ್ವಾಮಿ ಪಾಲಿಸೊ ಅಪ್ಪಣೆ ನಾ ಮುಂಚೆ ಪೋಗುವೆ |ತಡವ ಮಾಡದೆ ಎಲ್ಲೀಗೆನ್ನ ಭೂಮಿಜಾ ರಮಣ ||ಈ ಮುದ್ರೆ ಕೊಂಡು ಪೋಗೋ ಶಾಮಲಾಪತಿ ದಿಕ್ಕಿಗೆ |ಸಮುದ್ರ ದಾಟಿ ವೇಗಪಾವಮಾನಿಕೇಳೋ 2ಭೂತಲಾಕಾಶ ಲೋಕಾದಿ ಪಾತಾಳದೊಳಗಿರಲಿ |ನಾ ತರುವೇನು ವಾರ್ತೆ ಜಗನ್ನಾಥಪರಾಕು||ಹೇತರಳತ್ರಿಲೋಕ ವಿಖ್ಯಾತನಾಗಿಹ ರಾವಣ |ಪಾತಕಕೊಂಡು ಪೋಗಿಹ ಸೀತೆಯ ಕೇಳು 3ಬುದ್ಧಿದೇವ ನೀ ಕೊಟ್ಟಂಥ ಬುದ್ಧಿಯಿಂದಲೇ ಅವನ |ಗುದ್ದಿ ಸರ್ವ ಬಲವನ್ನೂ ಒದ್ದು ಬರುವೆನೊ ||ಮುದ್ದು ಕಂದ ರಕ್ಕಸರವಧ್ಯರೋವರಪಡೆದು |ರುದ್ರನಿಂದ ಮಾಡದಿರೊ ಗದ್ದಲ ಕೇಳೋ 4ತಂದೆ ರಾಮಾ ನಿನ್ನ ದಯೆಯಿಂದ ಈಡಲ್ಲವೊ ಯನಗೆ |ನಂದಿಧ್ವಜಾ ಈ ರಕ್ಕಸರೊಂದು ತೃಣವೋ ||ಕಂದ ಈ ವೇಳೆಯೊಳೇನು ಬಂದುದನು ಭೋಗಿಸಿ ನಾನು |ಕೊಂದು ಹಾಕುವ ದಿನವೂ ಮುಂದುಂಟು ಕೇಳೋ5ದೇವಿಯ ನೋಡಿ ಬರುವಾಗ ತಾವಂತು ಕೆಣಕಲು ದಾ- |ನವರು ಸುಮ್ಮನಿರಲೇನು ದೇವದೇವೇಶ ||ಕೋವಿದಾಗ್ರೇಶನೆ ನೀನು ಸಾವಿರಾಳಿಗೆ ಒಬ್ಬನೇ |ಆ ವಿಚಾರ ಮನಕೆ ತರುವದೇ ಕೇಳೋ 6ಹೇಳಿದ ಮಾತು ಕಟ್ಟಿದ ಕೂಳು ನಿಲ್ಲವೊ | ಆ ವನ-ದೊಳೇನಹದೊ ಬಲ್ಲೆನೇ ಪ್ರಾಣೇಶ ವಿಠಲಾ ||ಬಾಲಕ ಹನುಮಂತ ನಿನ್ನೊಳಗೆನ್ನಾ ರಾಣಿಯಲ್ಲಿ- |ಹಳೋ ನೋಡಿ ಬರುವುದಕಾಲಸ್ಯ ಕೇಳೋ 7
--------------
ಪ್ರಾಣೇಶದಾಸರು
ರೂಹ ಹೇಳುವೆ ಕೃಷ್ಣನ ಕೃಪೆಯಲ್ಲಿನವೀನ ಜನನ ಮೃತ್ಯು ಭಯವೆಲ್ಲಿ ಪ.ಕುಶತಲ್ಪ ತಂತ್ರಸಾರಾರ್ಚನೆಯೆತ್ತಖಳಪ್ರಸರದ ಗೊಂದಣದಾರಿಯೆತ್ತಹೊಸಮಲ್ಲಿಗೆಯ ಹಾರ ಸುರಭ್ಯೆತ್ತ ಮಲಕಶ್ಮಲರತ ಗ್ರಾಮಸೂಕರೆತ್ತ 1ಚಕ್ರಪಾಣಿ ಒಲುಮೆ ವಿರತರಿಗುಂಟುಕರ್ತವಿಕ್ರಮವಾದಶೀಲಗೆ ಮತ್ತ್ಯೆಲ್ಲುಂಟುತಕ್ರಭಿನ್ನ್ವಾದರೆ ಹಾಲ ಹೋಲಲಿಲ್ಲ ಭಕ್ತಿವಕ್ರನೆಂದೆಂದಿಗೆ ಭಾಗವತನಲ್ಲ 2ಡಂಬರ ಶ್ರದ್ಧೆಗೆಹರಿಮೆಚ್ಚಲಿಲ್ಲ ಸಲೆಡೊಂಬ ರಾಷ್ಟ್ರ ತಿರುಗೆ ಭೂ ಪ್ರದಕ್ಷಿಣೆಯಲ್ಲಅಂಬುಜಾಕ್ಷನನ್ನು ನಂಬದವ ಕ್ಷುಲ್ಲ ಗತಅಂಬಕನ ನೋಟ ಬದಿಯ ಧನದಲಿಲ್ಲ 3ಇಂದಿರೇಶಮಹಿಮೆ ಮತಿಮಂದಗೇನು ದೀಪಹೊಂದಟ್ಟೆ ಭೋಜನಸುಖ ಶ್ವಾನಗೇನುಎಂದೂ ಸಾಧುಸಂಗಸೌಖ್ಯ ಕುಹಕಗಿಲ್ಲ ಕೆಚ್ಚಲೊಂದಿದ ಉಣ್ಣೆಗೆ ಕ್ಷೀರಸ್ವಾದವಿಲ್ಲ 4ಪೂರ್ವಕೃತಪುಣ್ಯ ಒದಗದೆಂದಿಗಿಲ್ಲ ಯತಿಸರ್ವಜÕರಾಯನ ಮತ ಸುಲಭವಲ್ಲಉರ್ವಿಯೊಳು ಸಮೀರಮತಸ್ಥರಕಾವತಂದೆಸರ್ವೇಶ ಪ್ರಸನ್ನವೆಂಕಟಾಧಿದೇವ 5
--------------
ಪ್ರಸನ್ನವೆಂಕಟದಾಸರು
ವನಜನಾಭನ ಧಾಳಿ ಘನವಾಯಿತಿಂದಿಲಿಂದಮನೆಯೊಳು ನಿಲ್ಲಲಾರೆವಮ್ಮ ಪಚಿನ್ನನ ಸುದ್ದಿನಿತ್ಯಹೇಳುವರು ಹತ್ತರಗೂಡಾ |ಹನ್ನೊಂದೆನ್ನ ಬೇಡವಮ್ಮ ||ಅನ್ಯಾಯದ ಮಾತುಹುಸಿಹುಟ್ಟಿಸಿಯಾಡಿದರೆ ನಮ್ಮ |ಸಣ್ಣವರಾಣೆ ಗೋಪೆಮ್ಮ 1ಪೋರರಾಟಿಕೆಯಾದರೆ ಜನನೋಡೆ ನಿರ್ಭಯದಿ |ಕ್ಷೀರವ ಕುಡಿಯಬೇಕಮ್ಮ ||ಆರೂ ಮನೆಯೊಳಿಲ್ಲದ ಸಮಯದಲ್ಲಿ ಪಾಲು |ಸೋರೆ ಕದ್ದೊಯ್ಯುತಿದ್ದನಮ್ಮ2ಚಿಕ್ಕವರನ್ನು ರಂಬಿಸಿ ಸಕ್ಕರೆ ಕೊಟ್ಟು ಕದ್ದು |ರೊಕ್ಕವ ತನ್ನಿರೆಂಬುವನಮ್ಮ ||ಮಕ್ಕಳಾಟಿಕೆ ಆದರಾಯಿತೆ ನಿನ್ನ ಕಂದ |ರೊಕ್ಕವನೇನು ಮಾಡ್ಯಾನಮ್ಮ 3ಏಕಾಂತ ಮನೆಯೊಳು ಸರು ಹೊತ್ತಿನಲ್ಲಿ ಬಂದು |ಶ್ರೀಕಾಂತನಡಗಿದ್ದನಮ್ಮ ||ಹೇ ಕಾಂತೆ ನಿನ್ನ ಸಲಿಗಿಲ್ಲದೆಂತು ಬಂದನೆಂದು |ಆ ಕಾಂತ ಸಂಗ ಬಿಟ್ಟನಮ್ಮ 4ನೀರೊಳು ನೆರಳೆಂದು ತಿಳಿಯದ ಮಗುವಿಗೆ |ಪೋರನೆಳೆದು ತಾಯಂಬೊನಮ್ಮ ||ಹಾರುತಿರಲು ಸ್ವಾಮಿಯ ದಯೆಯಿಂದ ಕಂಡು ಒಬ್ಬ |ನಾರಿ ಕರಕೊಂಡು ಬಂದಳಮ್ಮ 5ತರಳರಿಗೆಲ್ಲ ಇದರಂತೆ ಹತ್ತಿರೆಂದು ಹೇಳಿ |ಹರಿವಂದು ಹತ್ತಿಕೊಂಬೊನಮ್ಮ ||ಕರುಗಳೆಲ್ಲವು ಹೀಗೆ ಹತವಾಗಿ ಪೋಪವು |ತುರುಗಳ ಗಡಹವಮ್ಮ6ಬಾಲನ ಮನೆಯೊಳಗಿರ ಹೇಳಿ ಉದಕವ |ವಾಲಯಕೆ ತರಹೋದೆನಮ್ಮ ||ಮೂಲೇಶ ಹುಡುಗನ ಕೈಯಕಟ್ಟಿಮನೆಯೆಲ್ಲ |ಹಾಳು ಮಾಡಿಯೇನೋ ತಂದನಮ್ಮ 7ಹುಡುಗರ ಅಂಬೆಯಾಗಿಯೇರಿಸಿಕೊಂಡಾಡಿಸಿ |ಕೆಡಹಿ ಕೈಕಾಲು ಮುರಿದನಮ್ಮ ||ಬಡವರೆಂದರೆ ಪುನಃ ಬಿಡದಲೆ ತಾ ಹತ್ತಿ |ನಡುವ ನೋಯಿಸೀಹ ನೋಡಮ್ಮ 8ಬಾಲೆ ಅದೇನು ಕಾರಣವೋ ತಿಳಿಯದು ನಮ್ಮ |ಮೂಲೆಯಲಡಗಿದ್ದನಮ್ಮ ||ಛೀ ಲಕುಮೀಶ ನಡೆಯೆಂದೆ ಕೈ ಸಂಧಿಸದಾಕಳ |ಮೊಲೆ ಉಂಡಿದ್ದನಮ್ಮ 9ಗಂಡಅತ್ತೆಯ ಮನೆಘೋಗಿ ನಡುವ ಹೆಣ್ಣಾ |ಪುಂಡ ಬಂದಪ್ಪಿಕೊಂಡನಮ್ಮ ||ಕಂಡು ನಾನಿದು ತರವೇನೆಲೆ ರಂಗಾಯೆನ್ನಲು |ಭಂಡು ಮಾಡಿದನು ನೋಡಮ್ಮ 10ಭ್ರಷ್ಟ ಮಾತಲ್ಲವೆ ಬಾಣಂತಿ ಮಂಚದಡಿ ಕೆಂಡ- |ವಿಟ್ಟರೆ ಕಾಸಿಕೊಂಡನಮ್ಮ ||ಥಟ್ಟನೆ ಕಂಡಂಜಿ ಪ್ರಾಣಾಂತಿಕ ಆಯಿತು ಪ್ರಾಣೇಶ |ವಿಠಲನಿಂಥವ ಕಾಣಿರಮ್ಮ 11
--------------
ಪ್ರಾಣೇಶದಾಸರು
ವಾರಿಜನಾಭನ ಕರುಣವೆ ಸ್ಥಿರ ಸಂಸಾರ್ಯೆರವು ಕೇಳಾತ್ಮಜಾರುತದಾಯು ದೂರದ ಮುಕುತಿಯದಾರಿಯ ಪಾಥೇಯ್ಯೆಲ್ಲಾತ್ಮ ಪ.ಧರ್ಮದ ಸರಕಿಲ್ಲದವನೆಂದು ಬೇಗ್ಯಮಧರ್ಮ ಭಟರು ಬಂದರಲ್ಲೊಚರ್ಮದ ಮನೆ ಬಿಡಿಸಿದರು ಮುಟ್ಟಲು ನೋವಕರ್ಮಯಾತನೆ ಕೊಟ್ಟರಲ್ಲೊಹಮ್ರ್ಯನಿಕೇತನ ವೃತ್ತಿಕ್ಷೇತ್ರವನು ಅಧರ್ಮಿಗಳಗಲಿಪರಲ್ಲೊಮರ್ಮವರಿತು ತ್ರಾಟಿಸುವಾಗ ಶ್ರೀವಿಶ್ವಕರ್ಮನ ಪೂಜೆ ಹೋಯಿತೆಲ್ಲೊ 1ಹೆಡಗೈಯಕಟ್ಟಿಪರಿಘದೊಳು ಬಡಿವಾಗಮಡದಿ ಮಕ್ಕಳ ಸಹಾಯವೆಲ್ಲೊಒಡೆಯ ದಮ್ಮಯ್ಯ ನಮ್ಮಯ್ಯನೆಂದರೆಕಾಲಹಿಡಿದರೆ ಕೊಡಹಿದರಲ್ಲೊಸುಡುವ ಮಳಲು ಹುಡಿ ಕಲ್ಮುಳ್ಳೊಳೆಳೆವಾಗಹಿಡದೇಜಿ ಕೊಂಬುಕಾಳೆಲ್ಲೊಪೊಡವಿಲಿ ಬಂದಾಗ ಹರಿಸೇವೆ ಮಾಡದೆಕಡುಹುಂಟಾದರೆ ತೋರದೆಲ್ಲೊ 2ಕೀವು ರುಧಿರವಿಟ್ಟ ಕುಂಡದಿ ಮುಣುಗುವಾಗ್ಹ್ಯಾವಿನ ಮಾತೇನಾಯಿತಣ್ಣಸಾವುತೀನವ್ವಪ್ಪಾ ಮೊರೆಯ ಕೇಳೆಂದರೆಆವಾಗಬಾಧೆ ಕಾಣಣ್ಣಆವೈವಸ್ವತದಂಡ ಕೊಟ್ಟು ಬೊಗಳೆಂಬಾಗಚಾರ್ವಾಕತನವೆಲ್ಲಣ್ಣಆ ವಾಸುದೇವನ ಭಟಸಂಗ ನಿನಗೀಗ ವೈರ ಆಗೆಲ್ಲಿದಣ್ಣ 3ನಾಲಿಗೊಣಗಿ ನೀರು ಕೂಳೆಂದು ಅಳುವಾಗಹಾಲ ಶಾಲ್ಯೋದನವೆಲ್ಲೊಮ್ಯಾಲೆ ಮ್ಯಾಲ್ವೈತರಣಿ ಸ್ನಾನವ ಮಾಡುವಕಾಲಕೆ ಅಭ್ಯಂಗನವೆಲ್ಲೊಕಾಲನ ದೂತರ್ಗೆ ಕೊಟ್ಟುಳಿವೆನೆಂದರೆಹೂಳಿದ ಧನ ದೂರಾಯಿತಲ್ಲೊಕಾಲಕಾಲಕೆ ದ್ವಿಜಪಂಕ್ತಿಭೋಜನಸುಖವ್ಯಾಳೆ ತಪ್ಪಿತನ್ನವೆಲ್ಲೊ 4ಕಷ್ಟಿಸಿ ಬಳಲುವೆ ಹಾಹಾಯೆಂದಳಲುವೆಇಷ್ಟನೆಂಟರು ಹೋದರೆತ್ತಮುಷ್ಟಿಕುಠಾರಪ್ರಹಾರನೋಡುನಿನ್ನವರಿಷ್ಟತನವು ನಿಂತಿತೆತ್ತಶಿಷ್ಟರ ನೋಡದೆ ಸತ್ಕಾರ ಮಾಡದೆನಿಷ್ಠುರ ನುಡಿದೆ ಪ್ರಮತ್ತಕೃಷ್ಣ ನಮೊ ಎಂದು ಕಡೆಗಾಣಲರಿಯೆ ಎಳ್ಳಷ್ಟು ಪುಣ್ಯವ ಕಾಣೆನೆತ್ತ 5ಕಂಗೆಟ್ಟು ತಕ್ರನ್ನೆ ಕಾಸಿ ಸೀಸ್ಯೆರೆವಾಗಅಂಗಣದ ಪಶು ಬಹುದೂರಕೆಂಗೆಂಡಗಂಭವಪ್ಪಿಸುವರು ನಿನ್ನ ಪರಾಂಗನೆಭೋಗಿಚದುರಅಂಗ ಶೃಂಗಾರದ ಕೊನಬುಗಾರ ನಿನಗ್ಹಿಂಗುವದೆ ಯಮದ್ವಾರಮಂಗಳ ಮಹಿಮ ಮುಕುಂದ ಮುರಾರಿ ಶ್ರೀರಂಗನ ಭಕುತಿವಿದೂರ 6ಸುಟ್ಟರೆ ಹಿಡಿಬೂದಿ ಕೆಟ್ಟರೆ ಕ್ರಿಮಿಕಾಯಇಟ್ಟರಿರದು ವಾಯುವಿರದೆಹುಟ್ಟಿ ಸುಜನ್ಮದಿ ಜಾಣರಾಗದೆಬುಧರಟ್ಟುವರೆ ದಿವಸ ಬರಿದೆಇಟ್ಟಣಿಸಿದ ಭವಗತ ಸುಖದು:ಖವುಂಡುಟ್ಟು ರಾಮನ ಮನವಿರದೆಕಟ್ಟಕಡೆಲಿ ನರಕವನುಂಬೋದುಚಿತಲ್ಲದಿಟ್ಟನಾಗು ಮಾಯೆಯಜರಿದು7ನಿತ್ಯನೈಮಿತ್ಯಕಾಮ್ಯಾದಿ ಸತ್ಕರ್ಮವಮತ್ತೆ ತಿಳಿದು ನಡೆ ಆತ್ಮಹತ್ಯವಸತ್ಯ ಅನ್ಯವಧೂಜನಸಖ್ಯಪರವಿತ್ತದಂಜಿಕೆ ಇರಲ್ಯಾತ್ಮಕರ್ತಮೂರವತಾರಿ ಪೂರ್ಣ ಬೋಧಾಚಾರ್ಯರಭೃತ್ಯನಾಗಿ ಬಾಳೊ ಆತ್ಮಎತ್ತೆತ್ತ ನೋಡಲು ಬೆನ್ನಬಿಡದೆಕಾವಪ್ರತ್ಯಕ್ಷನಾಗಿ ಪರಮಾತ್ಮ 8ಮಂಗಳಾತ್ಮರಿಗೆಅಹರ್ನಿಶಿಶ್ರೀವರಅಂಗಜಜನಕನೆಚ್ಚರಿಕೆಸಂಗಡಿಸಿದ ವಿಷಯಂಗಳಿದ್ದರೇನುತಂಗಳ ಅನ್ನದೋಕರಿಕೆಹಿಂಗದೆ ವರಸಂಗ ಮಾಡಿದರೊಯಿವರುಮಂಗಳಾತ್ಮಕನಿದ್ದ ಪುರಕೆಬಂಗಾರ ಮನೆಯ ಪ್ರಸನ್ವೆಂಕಟೇಶನಡಿಂಗರರಿಗೆ ನರ್ಕಸರ್ಕೆ 9
--------------
ಪ್ರಸನ್ನವೆಂಕಟದಾಸರು
ವಾವೆಯೆಲ್ಲಿಹುದಯ್ಯ ವೈಕುಂಠಪತಿಗೆ |ದೇವಭಾರ್ಗವನಾಗಿ ಮಾತೆಯ ಶಿರವ ಕಡಿದ ಪಒಬ್ಬ ಮಾವನ ಕೊಂದ, ಒಬ್ಬ ಮಾವನನೆಸೆದ |ಒಬ್ಬ ಮಾವನ ಕೂಡೆ ಕಡಿದಾಡಿದ ||ಒಬ್ಬ ಭಾವನ ಹಿಡಿದು ಹೆಡಗೈಯ ಕಟ್ಟಿದನು |ಒಬ್ಬ ಭಾವಗೆ ಬಂಡಿ ಬೋವನಾದ 1ಕುಂಭಿನಿಗೆ ಪತಿಯಾದ ಕುಂಭಿನಿಗಳಿಯನಾದ |ಕುಂಭಿನೀಪತಿಯ ಸಂಹಾರ ಮಾಡಿದ ||ಅಂಬುಧಿಗೆ ಪಿತನಾದ ಅಂಬುಜೆಗೆ ಪತಿಯಾದ |ಅಂಬುಜಾಸನಗೆ ತಾ ಸ್ವಾಮಿಯಾದ 2ಮೊಮ್ಮನನು ಮಲಗಿಸಿದ ಅವನ ಹೆಮ್ಮಕ್ಕಳನು |ಇಮ್ಮೆಯ್ಯವರಿತು ಸಂಹಾರ ಮಾಡಿದ- ||ರಮ್ಯ ಮೂರುತಿ ಪುರಂದರವಿಠಲ ದೇವೇಶ |ಬೊಮ್ಮಮೂರುತಿಗೆಲ್ಲಿ ಬಂಧು ಬಳಗ 3
--------------
ಪುರಂದರದಾಸರು
ಶ್ರೀಗುರು ಎಂಥಾ ದಯವಂತನಿಹ ನೋಡೆಈಗ ಋಣವ ಕಳೆದೆನೆನಲು ಆನಂದವಹುದು ನೋಡೆಪಕರೆಯುತ ಸನಿಹಕೆ ಚರಣವ ಶಿರದಲಿಟ್ಟನು ನೋಡೆಹರುಷ ಉಕ್ಕುತ ಎನ್ನ ಮುಖವ ನೋಡಿದ ನೋಡೆಪರಮಾತ್ಮನು ನೀತಿ ಎಂದುಪರಿಪರಿ ಹೇಳಿದ ನೋಡೆಅರೆಮರೆಯೆಲ್ಲವು ನೀ ಬ್ರಹ್ಮನೆಂದು ಆಡಿದ ಕರ್ಣದಿ ನೋಡೆ1ತೋರುವುದೆಲ್ಲವು ನೀನೆ ಎಂದು ತಿಳುಹಿದ ಎನ್ನನು ನೋಡೆದಾರಾಸುತ ಸಹೋದರರೆಂಬರ ದಾರಿಯ ಬಿಡಿಸಿದ ನೋಡೆಮೂರು ಗುಣಗಳ ಮಂದಮತಿಗಳ ಮುಂದುಗೆಡೆಸಿದ ನೋಡೆಕಾರಣಕಾರ್ಯವ ಕಳೆದ ಅವಿದ್ಯದ ಕಷ್ಟವ ಕಳೆದ ನೋಡೆ2ಷಟ್ಚಕ್ರಂಗಳ ದಾಟಿಸಿ ಎನ್ನುನು ಶ್ರೇಷ್ಠನ ಮಾಡಿದ ನೋಡೆಅಡರಿಸಿ ಮೇಲಕೆ ಸಹಸ್ರಾರದಿ ಆನಂದಿಸಿದನು ನೋಡೆಕಿಡಿಯುಗುಳುವ ಕೋಟ್ಯಾದಿತ್ಯರ ಬೆಳಕನು ತೋರಿದ ನೋಡೆಮೃಡಚಿದಾನಂದ ಸದ್ಗುರು ಬ್ರಹ್ಮದಿ ಮುಕ್ತನು ಮಾಡಿದ ನೋಡೆ3
--------------
ಚಿದಾನಂದ ಅವಧೂತರು
ಸದ್ಗುರುನಾಥನ ಕರುಣ ದೇಹಕೆ ಬೀಳೆಬದ್ಧಜೀವವದೆಂಬುದೆ ಮಾಡಿದನುಇದ್ದ ಸ್ವಾಸ್ಥಿಗಳೆಲ್ಲ ಆಶ್ರಯವದಾಯಿತುಶುದ್ಧಿ ಮಾಡಲಿಕ್ಕಿಲ್ಲ ಜೀವನನುಪಗುರುವೆ ನೋಡುವನಾದಗುರುವೆ ಕೇಳುವನಾದಗುರುವೆ ಶೀತೋಷ್ಣ ಅರಿವನಾದಗುರುವೆ ಘ್ರಾಣಿಪನಾದ ಗುರುವೆ ಉಣ್ಣುವನಾದಗುರುವೆ ಮನಸು ಬುದ್ಧಿ ತಾನಾದನು1ನಡೆವವನು ತಾನಾದ ನುಡಿವವನು ತಾನಾದಸಡಗರದ ಸಂಪತ್ತು ತಾನಾದನುಕೊಡುವವನು ತಾನಾದಕೊಂಬುವವ ತಾನಾದಕೊನಬುಗಾರಿಕೆಯೆಲ್ಲ ತಾನಾದನು2ತಾನೆ ಸಾಕ್ಷಾತ್ತಾಗಿ ಕೂರುವವ ಮಲಗುವವತಾನೆ ನಗುವವನು ತಾನೆ ಸಂತೋಷಿಯುತಾನೆ ಚಿದಾನಂದ ಗುರುನಾಥ ದೇಹದಿಂತಾನೆ ತಾನಾಗಿರಲು ಜೀವ ಮುಳುಗಿದನು3
--------------
ಚಿದಾನಂದ ಅವಧೂತರು
ಸಿಕ್ಕಿದನೆಹರಿಅಕ್ಕಕ್ಕ ಸುಖದಕ್ಕಿಸಿ ಕೊಳಬನ್ನ್ಯಕ್ಕಕ್ಕಚಿಕ್ಕವನಿವನಲ್ಲಮ್ಮಮ್ಮ ಬಿಡೆಪುಕ್ಕಟೆ ಜಾರುವನಮ್ಮಮ್ಮ ಪ.ಚಲ್ಲಿದ ಹಾಲ್ಮೈಯೆಲ್ಲಾಗಿದೆ ಹೊನ್ಚಲ್ಲಣ ತೊಯಿದಿದೆ ನೋಡವ್ವೆಅಳ್ಳೆದೆಗಾರನು ಅಳುಕುವನೆ ಹಗಲ್ಗಳ್ಳನ ಮಾಟವ ನೋಡವ್ವೆ 1ಮುಂಗುರುಳಿಗೆ ಮೆತ್ತಿದೆ ಕೆನೆಮೊಸರುಕಂಗಳುತುಪ್ಪಾಗಿದೆ ತಂಗಿ ರತ್ನದುಂಗುರ ಬೆರಳು ಮುಂಗೈಯ ಮತ್ತಂಗೈ ಬೆಣ್ಣ್ಯಾಗಿದೆ ತಂಗಿ 2ಪಡಗೊಡಿದು ಬಿಸಳಿಗೆ ನುಗ್ಗಲ್ಲೆಅಡಗ್ಯಡಗ್ಯಾಡುವನಿವನಂತೆಬಡಗಣ ಮೂಡಣ ಪಡು ತೆಂಕಣದಿತುಡುಗನ ಹುಯ್ಯಲು ಘನವಂತೆ 3ಗೋಡೆಯನೇರುವ ಧುಮುಕುವ ತಾ ಸಿಡಿದೋಡುವನಂಜದೆ ಅಲ್ಲಲ್ಲೆನೋಡಲು ಬಾಲಕ ಬಾಲೆಯರ ಪಿಡಿದಾಡ್ಯಾಲಂಗಿಪನಲ್ಲಲ್ಲೆ 4ಈಗಲೆ ಕಟ್ಟುವ ಬಿಟ್ಟರೆ ಇನ್ನಾವಾಗಲಿ ಸಿಕ್ಕುವನೆ ಬಾಲೆಹ್ಯಾಗಾದರೆ ಪ್ರಸನ್ವೆಂಕಟಗಿರಿಭೋಗಿಯ ಹೊಂದುವ ಬಾಲೆ 5
--------------
ಪ್ರಸನ್ನವೆಂಕಟದಾಸರು
ಸುಣ್ಣವಿಲ್ಲ ಭಾಗವತರೆ |ನುಣ್ಣನೆಯ ಗೋಡೆಗೆ ನಿನ್ನ ತೊಡೆದು ಬಿಟ್ಟೆ......... ಪ.ವೀಳೆಯ ಹಾಕುವನಲ್ಲ ವ್ಯಾದಿಷ್ಠ ನನಗಂಡ ||ಬಾಳುಗೇಡಿ ಎನ್ನ ಬಾಯನೋಡಿ ||ಹಾಳಾದ ಮನೆ ಹೊಕ್ಕು ಗೋಳುಗರಿಯತ್ತೇನೆ |ಕೇಳಿದ ಬಳಿಕಿನ್ನು ಹೇಳದೆ ಫಲವೇನು......... 1ಮದ್ದು ಮದ್ದು ತಿಂದು ಮನೆಯೆಲ್ಲ ಬರಿದಾಯ್ತು |ಹೊದ್ದಿತು ಮೂದೇವಿ ಮೈದುನಗೆ ||ಬದ್ಧತನದಿ ಸಂಜೆಭಂಗಿ ಮುಕ್ಕುವಭಾವ |ಒದ್ದು ಕೊಳ್ಳುತಾನೆ ಒಳಗೆ ಕದವನಿಕ್ಕಿ 2ಅನ್ನೆಕಾರಿ ಅತ್ತೆ ತೊನ್ನು ಬಡಕ ಮಾವ |ಗನ್ನ ಘಾತಕಿರಂಡೆಅತ್ತಿಗೆ ಮುಂಡೆ ||ಎನ್ನ ಗೋಳು ತಾಗಿ ಎಂದಿಗೆ ಹೋದಾರು |ಪನ್ನಗಶಯನ ಶ್ರೀ ಪುರಂದರವಿಠಲ 3
--------------
ಪುರಂದರದಾಸರು
ಸುಪುತ್ರನು ಎಂಬುವನಿವನುಸುಪುತ್ರನನು ಹೇಳುವೆ ನಾನುಪತಂದೆ ತಾಯಿಗಳ ಪೂಜಿಸುವಬಂಧುಗಳಿಗೆ ಬಹು ಪ್ರಿಯನಾಗಿ ಇರುವಎಂದಿಗೂ ಕೆಟ್ಟದ್ದ ನುಡಿಯ ಆವ-ಬಂದವರಿಗೆಲ್ಲ ಅನ್ನವ ಕೊಡುವ1ಕುಲದ ಆಚಾರವ ತಪ್ಪಿಸನುಹಲವು ವ್ರತಗಳನವ ತಾ ಬಿಡನುಬಲು ತಿಳುವಳಿಕೆಯನು ತಿಳಿದಿಹನುನೆಲೆಯಿಲ್ಲದ ತಪಮಾಡುವನು2ಅಣ್ಣ ಅತ್ತಿಗೆಗೆ ಉತ್ತರಕೊಡನುಪುಣ್ಯ ಕಥೆಯನು ಕೇಳ್ವುದ ಬಿಡನುತನ್ನ ದೇಹವ ಪೋಷಣೆ ಮಾಡನುಭಿನ್ನ ಬುದ್ಧಿಯನೆಂದಿಗು ತೋರನು3ತತ್ವ ವಿಚಾರವೆಂಬುದೆ ಜೀವನಿತ್ಯಅನಿತ್ಯವ ತಿಳಿದು ಅವನೀವಸತ್ಪುರುಷರೊಳು ಒಡನಾಡುವಎಲ್ಲಮಿಥ್ಯೆಎಂದರಿವ4ಸಂಶಯ ಸಂಕಲ್ಪನೀಗಿಧ್ವಂಸ ಮಾಡಿ ವಾಸನೆಯೆಲ್ಲವಶಿಂಶುಮಾರದ ಚಕ್ರಕೆ ಹೋಗಿಹಂಸ ಚಿದಾನಂದ ಗುರುವಾಗಿ5
--------------
ಚಿದಾನಂದ ಅವಧೂತರು
ಸುಮ್ಮನಿರು ಬೇಡಿಕೊಂಬೆ ಕಾಡದಿರು ಕೃಷ್ಣ |ಉಮಾಪತಿಯೆಂಬ ಗುಮ್ಮ ಬಂದಿದೆಕೊ ಪಐದು ಮುಖ ಐದು ಈರೈದು ಕಣ್ಣುಗಳಿಂದ |ಐದು ಪಣೆಯೊಳಗಗ್ನಿ ಕಿಡಿಯುದುರುತ ||ಐದೆರಡು ತೋಳು ಭುಜಗಳ ಒಲೆದಾಡಿಸುತ |ಐದು ಬಾಣಗೆ ಮುನಿದ ಗುಮ್ಮ ಬಂದಿದೆಕೊ 1ಬಾಲಚಂದ್ರನ ಪೊತ್ತುಕೊಂಡು ತ್ರಿಶೂಲದಿ |ಮೇಲೆ ಒರಲುವ ಭೂತಗಣ ಸಹಿತದಿ ||ಕಾಲಭೈರವನ ಕಾವಲಿಗಿರಿಸಿ ಮರುಳ್ಗಳ |ಸಾಲುಸಹಿತನಾಗಿ ಬಾಗಿಲಿಗೆ ಬಂದಿದೆಕೊ 2ಲಂಡದಾನವರ ಶಿರಗಳ ತರೆದು ಬಿರುದಿನ |ರುಂಡಮಾಲೆಯ ಧರಿಸಿ ಆರ್ಭಟಿಸುತ ||ಅಂಡಲೆದು ಅಷ್ಟದಿಕ್ಕುಗಳೆಲ್ಲ ಬೆದರಿಸುತ |ಪುಂಡರೀಕಾಕ್ಷನ ತೋರು ತೋರೆನುತ 3ಕರಿಚರ್ಮವ ಪೊದ್ದು ಕರದಿ ಒಡನೆ ಪಿಡಿದು |ಕರಿಜಡೆಗಳನೆಲ್ಲ ಕೆದರಿಕೊಳುತ ||ಹರಿವ ನೀರನು ನೆತ್ತಿಯೊಳು ಹೊತ್ತು ಹಾವುಗಳಾ-|ಭರಣಸಹಿತಾಗಿ ಬಾಗಿಲಿಗೆ ಬಂದಿದೆಕೊ4ಮುದಿಯೆತ್ತನೇರಿ ಮೈಯೆಲ್ಲ ಬೂದಿಯ ಪೂಸಿ |ಮದನಾರಿಯೆಂಬಂಥ ಬಲಭೂತವು ||ಹೃದಯದಲಿ ನಿನ್ನ ನೋಳ್ಪೆನೆಂಬ ಧ್ಯಾನದಲಿ |ಒದಗಿ ಬಂದಿಹನಿದೊ ಪುರಂದರವಿಠಲ 5
--------------
ಪುರಂದರದಾಸರು
ಸುಲಭಲ್ಲ ಹರಿಭಕುತಿ ಗುರುಕೃಪೆ ಇಲ್ಲದಿಲ್ಲ ಪ.ಸಿದ್ಧಿ ಸೊಲ್ಲುವ ಗುರುಗಳುಂಟು ಧರೆಯೊಳಲ್ಲಿಗಲ್ಲಿ ಅವರೆಲ್ಲ ಹಿತಕಾರಿಗಳೆಂದಿಗಲ್ಲಸಲ್ಲ ಕೈವಲ್ಯದ ಮಾರ್ಗವ ಬಲ್ಲಬಲ್ಲಿದಭಾರತಿನಲ್ಲಗೆ ಸಲ್ಲಲಿಬಲ್ಮತದಲ್ಲಿರಿರ್ಯೆಲ್ಲ 1ಭವಸಾಗರ ವೈರಾಗ್ಯದ ನಾವೆಲಿನೀಗಿಸಾಗಿ ಜ್ಞಾನಾಗರದಾಗಮವಕೇಳಿವೇಗದೀಗ ನಿರಯಾಗಾರ ತಪ್ಪಿಸದೆ ಶ್ರೀರಂಗ ಬ್ಯಾಗೊದಗ ಸುಜÕನಾಗಿರದೆಮಗೆ ಮ್ಯಾಗೆ ಲೋಗರೋಗರಕಾಗಿ ರಹಿತಧರ್ಮರಾಗಿರೆ ತಾಗೂದು ರೋಗ 2ನಾ ನನ್ನದು ಸಂಪದೆಂಬಭಿಮಾನಿ ನೀಚನುನೀ ನಿನ್ನದು ಕೃಷ್ಣನೆಂಬ ಮತಿವಂತನೆ ಧನ್ಯ ಬಹುಪುಣ್ಯಶ್ಲೋಕರ ವೈಭವವಾಯಿತನ್ಯೋನ್ಯ ನನಗಿನ್ನ್ಯಾತರ ನೆಚ್ಚಿಕ್ಯಣ್ಣ ಪ್ರಸನ್ವೆಂಕಟರನ್ನನಪುಣ್ಯದ್ವಾರನ್ನಾಂತ ಸನ್ನುಮತಿಗನ್ಯದೆ ಏನಣ್ಣ 3
--------------
ಪ್ರಸನ್ನವೆಂಕಟದಾಸರು
ಸೂದನ ಗುಣಗಳ ಶೋಧನ ಮಾಡೋದೇ ಪಹರಿಸರ್ವೋತ್ತಮಗುರುಜೀವೋತ್ತಮಪುರಹರಸುರವರ ಪರಿವಾರಾವರಿತು ವಿಧಿಯ ನೀ ಪರಿಪರಿ ಭಜಿಪೋದೆ 1ಸೀಲಜೀವರ ಪ್ರೇಮ ಮೆಲ್ಲುವನೆಂಬುದೆ 2ಮತ್ಸರಿಸದೆ ಪರಮೋತ್ಸನಾಗೋದೆ 3ಮಾತಾಪಿತರುಸತಿಪೋತರು ಸಿರಿಸತಿನಾಥನ ಪದಯುಗದೂತರು ಎಂಬುದೆ 4ವನಜಾಕ್ಷನಗುಣಮನದಲಿ ಎಣಿಸಿದೆದಣಿದರೆ ಮುಕುತಿಯು ತನಗಿಲ್ಲೆಂಬುದೆ 5ದಾಸನಾಗಿ ಭವದಾಸೆಯ ನೀಗೋದೆ 6ನಂದದಿ ಪರರನು ನಿಂದಿಸದಿಪ್ಪೋದೆ 7ಪಾಸನ ಮಾಡುತ ಸೋಸಿಲಿ ಇರುವೋದೆ 8ಮಾಧವದೊರೆಯನು ಖೇದವು ಬರುವುದುಮೋದಕೊಡುವವೋ ಹಾದ್ಯೆಲ್ಲೆಂಬೋದೆ9ಸದಮಲಮೂರುತಿ ಹೃದಯದಿ ಕಾಂಬೋದೆ 10ಅಂಬುಜಭವನಾಂಡದಿ ಶಿರಿಬಿಂಬನೆ ಈಪರಿತುಂಬಿಹನೊಬೊಂಬೆಯ ತೆರ ಕುಣಿಸುವನೆಂಬೋದೆ 11ಶ್ರೀವರ ತಾ ನಮ್ಮ ಕಾವನುಎನುತಭಾವಿಸಿ ಈಪರಿಸೇವೆಯ ಮಾಡೋದೆ12ವಹಿಸಿದ ದಾಸ್ಯದ ವಿಹಿತನು ಎನಿಸೋದೆ 13ನಾಥನೆಂದು ಈ ರೀತಿಲಿ ಇಪ್ಪೋದೆ 14
--------------
ಗುರುಜಗನ್ನಾಥದಾಸರು
ಹರಿತಾ ದೂರಿಲ್ಲ ದೂರಿಲ್ಲಒರಟು ಮಾತಿನ ಸರಕೆ ಸಲ್ಲ ಪ.ಹರಿದಾಸರ ಸಂಗಕೆ ಸರಿ ಇಲ್ಲ ಗುರುಕೃಪೆಯಿರಲಿ ನಿತ್ಯೆಲ್ಲತರತಮವಿರಹಿತಗೆಲ್ಲಿ ಕೈವಲ್ಯವು ಅ.ಪ.ಧರ್ಮಾಥರ್Àಕಾಮ ಮೋಕ್ಷವನಿಚ್ಛಿಸುವನಿರ್ಮಳ ಮತಿಗಳಿಗಾವಾಗಕರ್ಮದ ಮೋಡಿಗೆ ಸಿಲುಕದವನಗುಣಕರ್ಮನಾಮೋಚ್ಚರಣೆ ಸಾಧನ1ಜ್ಞಾನ ಭಕುತಿ ವೈರಾಗ್ಯ ಹೊಲಬಲಿನಾನಾ ವ್ರತವ ಮಾಡಲು ಬೇಕುಹೀನಕೇಳಿಕೆ ಕಾಳಿಕೆಯನುಳಿದುನಿತ್ಯಶ್ರೀನಿವಾಸನೆಗತಿಎನ್ನಲು2ಸಂತತ ಅಂಗದಿ ಬಲವಿರುವನಕಕಾಂತ ಪ್ರಸನ್ವೆಂಕಟಪತಿಯಅಂತರಂಗದಿ ಚಿಂತಿಸಿ ಕಳೇವರವನುಪ್ರಾಂತಯಾತ್ರೆಗೆ ತ್ಯಜಿಸುವಗೆ 3
--------------
ಪ್ರಸನ್ನವೆಂಕಟದಾಸರು
ಹರಿದಿನ ಇಂಥ ಹರಿದಿನ ಪ.ಹರಿದಿನದ ಮಹಿಮೆ ಹೊಗಳಲಗಾಧಪರಮಭಾಗವತರಾಚರಣೆಗಾಹ್ಲಾದÀದುರಿತದುಷ್ಕøತ ಪರ್ವತಕೆ ವಜ್ರವಾದಮರುತ ಸದ್ವ್ವ್ರತಕೆಲ್ಲ ಶಿರೋರತ್ನವಾದ ಅ.ಪ.ಭಕ್ತಿಗೆ ಮೊದಲು ವಿರಕ್ತಿ ಬೀಜವೆಂಬಸಕಲ ತಪದೊಳೆಲ್ಲ ಮೇಲೆನಿಸಿಕೊಂಬಮಖಕೋಟಿಗಧಿಕ ಫಲಸ್ಥಿರ ಸ್ತಂಭಮುಕ್ತಿ ಸೋಪಾನ ನಿಧಾನತ್ವವೆಂಬ 1ತ್ವಕ್ ಚರ್ಮ ಅಸ್ತಿ ಮಜ್ಜ ಮಾಂಸರುಧಿರಯುಕ್ತ ಸಪ್ತ ಧಾತುಗಳಿಹ ಶರೀರನಖಕೇಶ ಕಫ ಸ್ವೇದ ಮಲ ಮೂತ್ರಾಗರ ಈನಿಖಿಳಪಾವನ ಮಾಡುವ ನಿರಾಹಾರ2ವರವಿಪ್ರಕ್ಷತ್ರಿಯ ವೈಶ್ಯ ಶೂದ್ರ ಜನರುತರಳಯೌವನ ವೃದ್ಧ ನಾರಿಯರುಕಿರಾತಪುಲತ್ಸ್ಯಾಂದ್ರ ಹೂಣ ಜಾತಿಯವರುಹರಿವ್ರತ ಮಾತ್ರದಿ ಮುಕ್ತಿಯೈದುವರು 3ದ್ವಿಜಗೋವಧ ನೃಪರನು ಕೊಂದ ಪಾಪನಿಜಗುರು ಸತಿಯರ ಸಂಗದ ಪಾಪಅಜಲಪಾನದ ದಿನದುಂಡ ಮಹಾಪಾಪನಿಜನಾಶ ಮೋಕ್ಷ ಪ್ರಾಪ್ತಿಯು ಸತ್ಯಾಲಾಪ 4ಯಾಮಿನಿಯಲಿ ಅನಿಮಿಷದ ಜಾಗರವುಶ್ರೀ ಮದ್ಭಾಗವತ ಶ್ರವಣ ಗೀತಾಪಠಣಪ್ರೇಮವಾರಿಧಿಲಿ ಮುಳುಗಿ ಸಂಕೀರ್ತನೆಯುಧಾಮತ್ರಯದ ಸುಖಕಿದೇ ಕಾರಣವು 5ಅರ್ಧಕೋಟಿ ತೀರ್ಥಸ್ನಾನವೆಲ್ಲ ಅಜಸ್ರಪ್ರಯಾಗ ಕಾಶಿವಾಸವೆಲ್ಲ ಸಹಸ್ರ ಕೋಟಿ ಭೂಪ್ರದಕ್ಷಿಣೆಯೆಲ್ಲಸುಶ್ರದ್ಧೆ ಸಹ ಜಾಗರಕೆ ಸರಿಯಲ್ಲ 6ಪಂಚಮಹಾ ಪಾಪ ಪ್ರಪಾಪವವಗೆವಂಚಕ ಪಿಶುನ ಜನರ ಪಾಪವವಗೆಮಿಂಚುವ ಕ್ಷೇತ್ರವಳಿ ಪಾಪವವಗೆಪಂಚಕವ್ರತ ಪೆತ್ತ ವ್ರತ ಉಲ್ಲಂಘಿಪಗೆ 7ಸರ್ಪಶಯನಗೆ ನೀರಾಜನವೆತ್ತಿ ನೋಡಿಉಪವಾಸದಿ ಭಗವಜ್ಜನ ನೃತ್ಯವಾಡಿಚಪ್ಪಾಳಿಕ್ಕುತ ದಂಡಿಗೆ ಮುಟ್ಟಿ ಪಾಡಿತಪ್ಪೆ ನಾಯಿ ನರಕ ಫಲ ಕೈಗೂಡಿ 8ಶ್ರುತಿಪಂಚರಾತ್ರಾಗಮವು ಸಾರುತಿವೆಯತಿ ಮಧ್ವರಾಯರುಕುತಿ ಪೇಳುತಿವೆಕ್ರತುಪ್ರಸನ್ವೆಂಕಟ ಕೃಷ್ಣ ಮತವೆಕ್ಷಿತಿಪತಿ ಸುರರತಿಶಯದ ಸದ್ವ್ವ್ರತವೆ 9
--------------
ಪ್ರಸನ್ನವೆಂಕಟದಾಸರು