ಒಟ್ಟು 696 ಕಡೆಗಳಲ್ಲಿ , 88 ದಾಸರು , 515 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದುರ್ಗೇ ಪಾಲಿಸೆ ಹೇ ದುರ್ಗೇ ಪಾಲಿಸೆ ಪ ಭಾರ್ಗವಿ ಭಜಕರ ವರ್ಗವ ಕರುಣದಿ ಅ.ಪ ಸರ್ಗಸ್ಥಿತಿ ಲಯಕಾರಣೆ ಜಗಕೆ ಸು ಮಾರ್ಗದಿ ನಡೆಯಲನುಗ್ರಹ ಮಾಡೆ 1 ವಂದಿಸುವೆನು ಭವಬಂಧವ ಬಿಡಿಸ್ಯಾ ನಂದವ ಕರುಣಿಸು ನಂದಾತ್ಮಜಳೆ 2 ಕಡಲತನುಜೆ ತವಕಡು ಕರುಣದಲಿ ಬಡಜಭವ ಮುಖರು ಪಡೆದರು ಪದವನು 3 ನಭ ಸಂಚಾರಿಣೆ ಆಯುಧ ಭವ ಭಯಹಾರಿಣಿ ನಮೊನಮೋ4 ಇಂದಿರೆ ಪದುಮ ಸುಮಂದಿರೆ ತವಪದ ದ್ವಂದ್ವದಿ ಭಕುತಿಯ ಪೊಂದಿ ಸುಖಿಸುವಂತೆ 5 ವೀರರೂಪಿ ಅಸÀುರಾರಿಯೆ ತವಪರಿ ವಾರದ ಭಯವನು ತಾರದಿರೆಂದಿಗೂ 6 ಮಂಗಳಕೃಷ್ಣ ತರಂಗಿಣೆ ಕಾರ್ಪರ ತುಂಗಮಹಿಮೆ ನರಸಿಂಗನ ರಾಣಿ7
--------------
ಕಾರ್ಪರ ನರಹರಿದಾಸರು
ದೇವ ಏನು ಬೇಡುವುದಿಲ್ಲ ನಾನು ನಿನ್ನ ಬೇಡುವೆ ಭವಭವದಿದನೆ ಕೊಡು ನೀನು ಪ ಶಿರ ನಿನ್ನ ಚರಣದಿ ಎರಗಲಿ ಕರ್ಣ ಹರಿಕಥೆಕೀರ್ತನೆ ಶ್ರವಣ ಮಾಡಲಿ ಪರಮಾತ್ಮಮೂರ್ತೆನ್ನ ನೇತ್ರ ನೋಡಲಿ ನಾಸಿಕ ಘ್ರಾಣಿಸಲಿ 1 ವÀದನ ನಿನ್ನನು ಸ್ತುತಿಸಲಿ ನಿನ್ನ ಜಿಹ್ವೆ ಕೊಂಡಾಡಲಿ ಹೃದಯವು ತವನಾಮ ತುಂಬಿಕೊಳ್ಳಲಿ ಮಧುಸೂದನನ ಪ್ರಸನ್ನತೆ ಮನವು ಬಯಸಲಿ 2 ಕರ ನಿನ್ನ ಚರಣಮಂ ನಿರುತ ಪೂಜಿಸಲಿ ದ್ವಯ ಚರಣಗಳುನುದಿನ ಯಾತ್ರೆಗೈಯಲಿ ಪರಿಪರಿ ತವಲೀಲೆಯೊಳು ಬುದ್ಧಿ ನಿಲ್ಲಲಿ ಎನ್ನ ಶರೀರ ಶ್ರೀರಾಮನ ಚರಣಕೊಪ್ಪಲಿ 3
--------------
ರಾಮದಾಸರು
ದೇವ-ದೇವತೆಗಳ ಸ್ತುತಿ ಶ್ರೀ ಲಕ್ಷ್ಮೀ ಸ್ತುತಿ 3 ನೀನನ್ನ ಹೇಳಬಾರದೇನ ತಾಯಿ ನೀನನ್ನ ವಾನರ ವಂದಿತ ಶ್ರೀನಿವಾಸಗೆ ಬುದ್ಧಿ ಪ ಶ್ರೀನಿಧಿ ಪರನೆಂದು ನಂಬಿ ಬಂದ ಬಡ ಪ್ರಾಣಿಯ ಪೊರೆಯೆಂದು ಜಾನಕಿ ದೇವಿಯೆ 1 ಕರ ಪಿಡಿವೆನೆಂಬೊ ಘನಾ ಬಿರುದು ಉಳಿಸಿಕೊ ಎಂದ್ಹರುಷದಿ ಸಿರಿದೇವಿ 2 ಉರಗಶಾಯಿ ಶಿರಿಗೋವಿಂದ ವಿಠಲ ತುರಗಗ್ರೀವ ನರಹರಿಗೆ ತ್ವರಿತದಲಿ 3
--------------
ಅಸ್ಕಿಹಾಳ ಗೋವಿಂದ
ದೇವೀ ಸಲಹೆನ್ನನೂ | ತವ ಬಾಲಕನನೂ | ದೇವೀ ಸಲಹೆನ್ನನೂ ಪ ಕಾವ ನಿಜ ಸುಖವೀವ ಶಕ್ತಿಯೆ | ದೇವ ವಿಶ್ವೇಶ್ವರನ ಸುಪ್ರೀಯೆ ಅ.ಪ ಚಂಡನಾಡುತ ರಕ್ತಬೀಜರ | ಹಿಂಡಿ ರಕ್ತನುಂಡ ಶಂಕರೀ 1 ದುರಿತ ಹರೆ ಆರ್ಯಾ ಕಾತ್ರ್ಯಾಯನಿಯೇ | ಗೌರಿ ಹೈಮಾವತಿ | ಸುರಮುನೀ ಸುತೆ ಸರ್ವಮಂಗಲೆ | ಶರಣು ಶರ್ವಾಣಿಯೆ ರುದ್ರಾಣಿಯೆ 2 ಭವ ಸರ್ವ ಕಾರಣ ಭೂತೆ ಮುನಿ ಸುತೆ | ಸರ್ವ ಸೌಖ್ಯ ಸುಖ ಪ್ರದಾಯಕಿ 3 ಜಗದ್ಭರಿತೆ ಸದ್ಗುಣ | ಶುಭ ತತ್ವಾತೀತೆ ನಿರುಪಮ ಶಕ್ತಿ ದೇವತೆ | ಸೋತೆ ನೀ | ದಾರಿದ್ರ ದುಃಖ ವ್ರಾತವನು ಪರಿಹರಿಸಿ ರಕ್ಷಿಸೆ4 ತಂದೆ ತಾಯೆನ್ನ ಬಂಧು ಬಳಗಗಳೂ | ನಾರಾಯಣಿಯನೀ- | ಹೊಂದಿರುವ ತಾಪತ್ರಯವನಾ | ನಂದದಿಂದಲಿ ಪಾರಗಾಣಿಸಿ | ತಿಂದೆನ್ನನು ಸದಾನಂದನೆನಿಸುತ 5
--------------
ಸದಾನಂದರು
ದೇಹವ್ಯಾಕೆ ಇಂಥ ದೇಹವ್ಯಾಕೆ ಪ ಹರಿಯ ಪಾದಕೆರಗದಂಥ ಶಿರವು ಏಕೆ ಪರಮ ಪುರುಷನ ಪಾಡದಂಥ ವದನವ್ಯಾಕೆ 1 ಹರಿಯಸ್ಮರಣೆ ಕೇಳದಂಥ ಕರ್ಣವ್ಯಾಕೆ ಹರಿಯಮೂರ್ತಿನೋಡದಂಥ ಕಂಗಳ್ಯಾಕೆ 2 ಹರಿಯ ನಿರ್ಮಾಲ್ಯವಾಘ್ರಾಣಿಸದಂಥ ನಾಸವ್ಯಾಕೆ ಹರಿಯ ನೈವೇದ್ಯ ಭುಂಜಿಸದಂಥಾ ಉದರವ್ಯಾಕೆ 3 ಶರಣಜನರ ಚರಣ ತೊಳೆಯದ ಕರವು ಏಕೆ4 ಜಿಹ್ವೆ ಏಕೆ ಜಾಣರೆಲ್ಲರು ತಿಳಿದು ನೋಡಿ ಬದುಕಿ ಜೋ 5
--------------
ಬಾಗೇಪಲ್ಲಿ ಶೇಷದಾಸರು
ದೊರೆಯೆಂದು ನಂಬಿದೆ ನಿನ್ನ ಪ ಇರುವೇ ಮೊದಲು ವಿಧಿ ಪರಿಯಂತವು ಪ್ರಾಣಿ ಹೊರಗೊಳಗೆ ವ್ಯಾಪಿಸಿರ್ಪ ಅ.ಪ ಯಾರು ಬಲ್ಲರೋ ನಿನ್ನಾ ಪಾರ ಮಹಿಮೆಯನ್ನ ಶ್ರೀನಾರಾಯಣ ಸುಪ್ರಸನ್ನಾ 1 ದಾಸರನೆಲ್ಲಾ ಪೋಷಿಸಬಲ್ಲಾ ಈಶನೀನಲ್ಲದಿನ್ನಿಲ್ಲಾ 2 ಕರಿವರದನೆಂದು ಮರೆ ಹೊಕ್ಕೆÀ್ಕನಿಂದು | ಶ್ರೀ ಗುರುರಾಮವಿಠಲ ಬಂದು 3
--------------
ಗುರುರಾಮವಿಠಲ
ದ್ವೈತ ಅದ್ವೈತೆಂದು ಹೊಡದಾಡದಿರೊ ಪ್ರಾಣಿ ಚೇತಿಸಿ ಬ್ಯಾರಿಹ ವಸ್ತುಗಾಣಿ ಧ್ರುವ ಅದ್ವೈತ ಅ- ದ್ವೈತ ಎನಲಿಕ್ಕೆ ಅದೆನೆ ತಾಂ ದ್ವೈತ 1 ಹಿಂದು ಮುಂದಾಗಿ ಆಡಿಸುತಿಹ್ಯ ನಿಜಖೂನ ಎಂದಿಗಾದರು ತಿಳಿಯಗುಡದು ಪೂರ್ಣ 2 ಅತಿಸೂಕ್ಷ್ಮ ತಿಳುವಾದರಲ್ಲೆ ಬಿದ್ದದ ಮಲಕು ನೇತಿ ನೇತೆಂದು ಸಾರುತಿದೆ ಶ್ರುತಿ ಇದಕೆ ತಿಳಿಕೊ 3 ದ್ವೈತ ಎಂದವನೆ ತಾಂ ಪರಮ ವೈಷ್ಣವನಲ್ಲ, ಅ ದ್ವೈತನೆಂದವನೆ ತಾಮ ಪರಮ ಸ್ಮಾರ್ತನಲ್ಲ 4 ಸ್ಮಾರ್ತ ವೈಷ್ಣವ ಮತ ಗುರು ಮಧ್ವಮುನಿಬಲ್ಲ ಅರ್ತು ಸ್ಥಾಪಿಸುವದು ಮನುಜಗಲ್ಲ 5 ಮೂರುವರಿ ಮೊಳದ ದೇಹದ ಶುದ್ಧಿ ನಿನಗಿಲ್ಲ ದೋರುವರೆ ತರ್ಕಸ್ಯಾಡುವ ಸೊಲ್ಲ 6 ದ್ವೈತ ಅದ್ವೈತಕ ಬ್ಯಾರಿಹ ಗುರುಗುಟ್ಟು ಚಿತ್ತ ಶುದ್ದಾಗಿ ಮಹಿಪತಿಯ ಮುಟ್ಟು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದ್ವೈತಮತಾಬ್ಧಿ ಚಂದ್ರಮ ಪ ಅದ್ವೈತ ಸ್ವರೂಪ ಪಾಲಿಸೊ ಶ್ರೀರಾಮ ಅ.ಪ ಒಂದೆರಡಾಗಿ ನೀ ಛಂದದಿ ಮೂಲದೊ ಳೊಂದು ಉತ್ಸವದಿ ಮತ್ತೊಂದು ರೂಪಾಗಿರುವೆ 1 ಎಷ್ಟು ಪ್ರಾಣಿಗಳಿಗೆ ಅಷ್ಟುರೂಪಾಗಿ ನೀ ಕೃಷ್ಣ ಒಳ ಹೊರಗೆ ಚೇಷ್ಟ್ಟೆ ಮಾಡಿಸೂತಿಹೆ 2 ಅಣುವಿಗೆ ಅಣುವು ಮಹತ್ತಿಗೆ ಮಹತ್ತು ಕೊನೆಗಾಂಬರಾರೊ ಶ್ರೀ ಗುರುರಾಮ ವಿಠಲನೇ 3
--------------
ಗುರುರಾಮವಿಠಲ
ಧರ್ಮೇಂದ್ರಿಯಕ್ಕೆ ದಟ್ಟಡಿಯನಿಡಲೊಲ್ಲೆ ದುಷ್ಕರ್ಮೇಂದ್ರಿಯಕ್ಕೆ ಕಾಲ್ಗೆರಗುತ್ತಲಿಹೆ ಮರುಳೆ ಪ ಪುಸ್ತಕವ ಬಿಚ್ಚಿ ಪೌರಾಣ ಶಾಸ್ತ್ರಂಗಳಿಂವಿಸ್ತರಿಸಿ ಹರಿಯ ಕಲ್ಯಾಣಗುಣ ಕಥೆಯನ್ನುಸ್ವಸ್ಥದಿಂ ಕುಳ್ಳಿರ್ದು ಕೇಳೆಂಬ ಠಾವಿನಲಿಮಸ್ತಕಕೆ ವ್ಯಥೆಯೆಂದು ಮನೆಯತ್ತ ನೀ ನಡೆವೆಹಸ್ತದಿಂ ಹಣ ಭತ್ತ ಹಚ್ಚಡಂಗಳ ಕೊಟ್ಟುಕುಸ್ತರಿಸಿ ಬಿನಗು ಚಾರಿತ್ರ್ಯವಂ ಲಾಲಿಸುತದುಸ್ತರದ ಲೆತ್ತ ಚದುರಂಗ ಪಗಡೆಯನು ಉದಯಾಸ್ತದವರೆಗಾಡುತ ಮೇಲೇಳದಿಹೆ ಮರುಳೆ 1 ಸುರಭಿ ಸೇವಂತಿ ಮಲ್ಲಿಗೆ ಮೊಲ್ಲೆ ಬಕುಳ ಪಾದರಿ ಚಂಪಕಾ ಕಂಜ ಕಣಿಗಲು ಶ್ರೀ ತುಳಸಿಪರಿಮಳದ ಪಚ್ಚೆತೆನೆ ಹರಿಪಾದಕರ್ಪಿಸುತೆನಿರುಮಾಲ್ಯ ಪರಿಮಳವನಾಘ್ರಾಣಿಸೆನೆ ಒಲ್ಲೆಬಿರಿದ ಕೆಂಜಾಜಿ ಪುಷ್ಪಂಗಳಂ ವನಿತೆಯರಸಿರಿ ಮುಡಿಗೆ ಮುಡಿಸಿ ಕುಂತಳ ಸೌರಭವ ಕಂಡುಹರುಷದಿಂ ರೋಮ ಪುಳಕಿತನಾಗುತಡಿಗಡಿಗೆಪರಮ ಸಂತೋಷಮಂ ನೀ ಪಡೆಯುತಿಹೆ ಮರುಳೆ 2 ಭಾಗವತ ನೃತ್ಯವಂ ನೋಡುತತಿಶಯದ ಹರಿದಿನವ್ರತದಲ್ಲಿ ಜಾಗರವ ಮಾಡದಲೆ ನಿದ್ರೆಗೈವೆಕೃತಕ ಪಣ್ಯಾಂಗನೆಯ ಚತುರ ನೃತ್ಯಕೆ ಮನೋ-ರಥ ಸಿದ್ಧಗೊಳಿಸಿ ಈಕ್ಷಿಪೆನೆಂದು ಕುಜನ ಸಂ-ಮತವೆರಸಿ ಬೆಳತನಕ ಕುಳ್ಳಿರುತ ನಿದ್ರಾ ವ-ರ್ಜಿತನಾಗಿ ಪರಮ ಸಂತಸ ಪಡೆಯುತಿಹೆ ಮರುಳೆ 3 ಗಂಧ ಶಾಲ್ಯಾನ್ನ ನವಘೃತ ತೋಯ ಪಳಿದ್ಯ ನಲ-ವಿಂದ ಪರಮಾನ್ನ ಮಹಶಾಕ ಸೀಕರಣೆಯನುಒಂದೆರಡು ಪರುಠವಿಸಿ ದ್ವಾದಶಿ ದಿನದಂದು ಮು-ಕುಂದಾರ್ಪಣವ ಮಾಡಿ ಮನೆಯೊಳಗೆ ಉಣ್ಣದಿಹೆಬಂದಾವನಾದೊಡಂ ಕರೆಯೆ ದೇಹದ ಪುಣ್ಯವೆಂದವರ ಮನೆಗಳಿಗೆ ಹೋಗಿ ನೀ ಕುಳ್ಳಿರ್ದುಚಂದದಿಂ ಬಣ್ಣಿಸುತ ಮಿಂಚುಕೂಳುಗಳನ್ನುತಿಂದೊಡಲ ಪೊರೆದು ಕಾಲವ ಕಳೆಯುತಿಹೆ ಮರುಳೆ4 ಸಿರಿ ವೈಕುಂಠ ಪದವಿಯನು ಪಡೆ ಮರುಳೆ 5
--------------
ಕನಕದಾಸ
ಧುಮ್ಮಸಾಲೆಯ ನೋಡಿ ಧುಮ್ಮಸಾಲೆಯಾ ಪ ಧುಮ್ಮಸಾಲೆಯ ನೋಡಿ ಘಮ್ಮವಾದ ಪ್ರಾಣಿಗಳು | ತಮ್ಮ ಸುದ್ದಿ ತಮಗಿಲ್ಲಾ ಹಮ್ಮಿನಿಂದಲಿ | ಧಿಮ್ಮಹಿಡಿದು ಭವದೊಳು ಸುಮ್ಮನೆವೆ ಕೆಟ್ಟು ಹೋದ | ಗ್ಯಾದರೆಯು ಪರಬೊಮ್ಮನಾಮ ನೆನೆಯಿರೋ 1 ವಿದ್ಯೆಯಿಂದ ವಾದಿಸುತ ಮುದ್ದಿಯಿಂದ ಕಣ್ಣು ಮುಚ್ಚಿ | ಸದ್ಯ ಶಕ್ತಿ ಯೌವನದಿ ಗುದ್ದಿ ಹೆಟ್ಟು ತಾ | ಪರಿ ನಿಜ | ಬುದ್ಧಿ ಹೋಗಾಡಿಸಿ ಅನಿರುದ್ಧನನ ಮರೆತಿರೋ 2 ಒಂದು ಕವಡಿಯಲಾಭ ತಮಗೆ ಹೊಂದದಿದ್ದರೆ ಸರಿ | ಬಂದು ನಿಂದು ಒಳ್ಳೆವರಾ ನಿಂದೆ ಮಾಡುತಾ | ಇಂದು | ಕೂಪ ಲಿಟ್ಟರೋ 3 ಉಡಗಿ ಬಿಟ್ಟು ಹುಡಿಯಹಚ್ಚಿ ಜಡಿಯಬಿಟ್ಟು ಸಿದ್ಧಗಾಗಿ | ಪೊಡವಿಲಿನ್ನು ಲಾಭಾ ಲಾಭಾ ನುಡಿಯ ಹೇಳುವಾ | ತುಡುಗರಿಗೆ ಹೋಗಿಕಾಲ ವಿಡಿದು ಗೋಂದಲ್ಹಾಕುವರು | ಕಡಲಶಯನನ ಭಜಿಸದೆವೆ ಅಡಲು ಬಿಟ್ಟು ಹೋದರೋ 4 ಸಿರಿಯ ಸುಖಗೀಪರಿ ಪರಿಯ ವೃತ ತಪದಿಂದಾ | ಚರಿಸಿ ನೋಡು ಕಣ್ಣು ವಿದ್ದು ಕುರುಡರಾದರೋ | ಗುರುಮಹಿಪತಿ ಸ್ವಾಮಿ ಚರಣ ನಂಬಿಯಚ್ಚರದಿ | ನಿರಪೇಕ್ಷ ಭಕ್ತಿಯಿಂದಾ ತರಣೋಪಾಯ ನೋಡರೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಧೂಪವಿದು ದೇವ ನೀನಾಘ್ರಾಣಿಸುತಾಪಹರವಾಗಿರುವ ಸೂಕ್ಷ್ಮಗಂಧದ ದಿವ್ಯ ಪಪಾವಕನು ನಿನ್ನ ಮುಖದಲಿ ಜನಿಸಿ ಬ್ರಹ್ಮಾದಿದೇವತಾಮುಖನಾಗಿ ಲೋಕಗಳನುಪಾವನವ ಮಾಡುತ್ತ ದಶವಿಧದ ದ್ರವ್ಯವನುತಾ ವಹಿಸಿ ನಿನ್ನ ಪಾದದ ಮುಂದೆ ನಿಂದಿಹನು 1ಸೋಮಷೋಡಶ ಕಲೋತ್ಪನ್ನ ವಾಗಿಹ ಧೂಪಸೋಮ ನಿನ್ನಯ ಮನದಿ ಜನಿಸಲೀ ಧೂಪಸೋಮನನು ಪುನಹ ಮನದಲಿ ನಿಲಿಸುತಿಹ ಧೂಪಕಾಮಿತಾರ್ಥಪ್ರದವು ಭಾವಿಪರಿಗೀ ಧೂಪ 2ಪರಿಪೂರ್ಣನಾಗಿ ಜಗದೊಳ ಹೊರಗೆ ನೆಲಸಿರುತಪರಿಪರಿಯ ಪೂಜೆಗಳ ತೆಗೆದುಕೊಳುತಶರಣಾಗತರ ಸಲಹಿ ಮಹಿಮೆಗಳ ಬೀರುತ್ತತಿರುಪತಿಯಲಿರುತಿರುವೆ ವೆಂಕಟೇಶ್ವರನೆನುತ 3 ಓಂ ನಂದವ್ರಜ ಜನಾನಂದಾಯ ನಮಃ
--------------
ತಿಮ್ಮಪ್ಪದಾಸರು
ಧೂಪಾರತಿಯ ಮಾಡುವ ಬನ್ನಿ ಸರ್ವರೂಪ ರಹಿತ ತನ್ಮಾತ್ರನಿಗೆಕೆಟ್ಟ ವಾಸನೆಗಳು ಎಷ್ಟಿಹವೆಲ್ಲ ಪ ಅಷ್ಟನು ಕುಟ್ಟಿ ಪುಡಿಯನು ಮಾಡಿದಶಿಷ್ಟ ದಶಾಂಗಮ ಘಮ ಘಮ ಬೀರಲುಸುಟ್ಟು ಎತ್ತುವ ಧೂಪಾರತಿಯ 1 ವಾಸನತ್ರಯವೆಂಬ ಗುಗ್ಗುಳ ಸಾಂಬ್ರಾಣಿದ್ವೇಷ ಭ್ರಾಂತಿಗಳ ಪರಿಪರಿಯಾದವಾಸನೆ ಎತ್ತೆತ್ತ ಮಕಮಕ ಎಸೆಯಲುಸೂಸಿ ಎತ್ತುವ ಸುಧೂಪಾರತಿಯ 2 ತುಂಬಿ ತುಂಬಿಗುರು ಚಿದಾನಂದ ತಾನಾದಾತ್ಮಗೆತ್ತುವೆಪರಮಮಂಗಳ ಸುಧೂಪಾರತಿಯ 3
--------------
ಚಿದಾನಂದ ಅವಧೂತರು
ಧೇನಿಸೂ ಶ್ರೀಹರಿಯ ಮಹಿಮೆ ನೀ ಧೇನಿಸೊ ಪ ಧೇನಿಸು ಶ್ರೀಹರಿಯ ಲೀಲಾ ಸೃಷ್ಟಿ ಮಾನಸದಲಿ ನೆನೆಯೋ ಪರಿಯಾ ||ಆಹಾ|| ತಾನೆ ತನ್ನಯ ಲೀಲಾಜಾಲತನದಿ ತನ್ನ ಆನಂದದೊಳಿಪ್ಪ ಶ್ರೀ ಮುಕುಂದ ನನ್ನ ಅ.ಪ ಮೂಲ ನಾರಾಯಣ ದೇವ ತಾನು ಆಲದೆಲೆಯೊಳು ಲೀಲಾ ತೋರಿ ಬಾಲತನದಿ ತಾ ನಲಿವಾ ಅನೇಕ ಕಾಲ ಪರ್ಯಂತರದಿ ಸರ್ವ ||ಆಹಾ|| ಎಲ್ಲ ಜಗವ ತನ್ನ ಒಡಲೊಳಡಗಿಸಿ ಲೋಲನಾಗಿ ಬಾಲಕ್ರೀಡೆಯಾಡುವಪರಿಯಾ 1 ಇಂತು ಶಯನಗೈದ ಹರಿಯ ಅ- ನಂತ ವೇದಗಳಿಂದ ತ್ವರಿಯಾ ದುರ್ಗ ಸಂತಸದಿಂದ ಸಂಸ್ತುತಿಯ ಮಾಡೆ ಕಂತುಪಿತÀನು ತಾನೆಚ್ಚರಿಯ ||ಆಹಾ|| ಅಂತೆ ತÉೂೀರ್ದ ವಾಸುದೇವಾದಿ ಚತುರಾ- ಸಿರಿ ರೂಪಗಳ ಸಹಿತ 2 ಸಕಲ ರೂಪಗಳ ತನ್ನೊಳೈಕ್ಯಾ ಮಾಡಿ ಸಕಲ ಲಕುಮಿ ರೂಪಗಳಲಿ ಐಕ್ಯಾ ಇಟ್ಟು ಸಕಲ ಮರುತರ್ಗೆ ತನುಮುಖ್ಯಾ ಇತ್ತು ಸಕಲ ಕ್ರೀಡೆಯೊಳು ಸೌಖ್ಯಾ ||ಆಹಾ|| ಲಕುಮಿಯ ಸ್ತುತಿಗೆ ಒಲಿದು ತಾನೇತ- ನ್ನ ಕಡೆಗಣ್ಣಿಂದ ಪಂಚಜೀವರ ನೋಡಿದಾ 3 ಶುದ್ಧಸೃಷ್ಟಿಯೆಂಬುದೊಂದು ಪರಾ- ಧೀನ ವಿಶೇಷವು ಎಂದು ಮತ್ತೆ ಒಂದು ಮಿಶ್ರ ಸೃಷ್ಟಿಯೆಂದು-ಒಂದು ಕೇವಲ ಸೃಷ್ಟಿಯೆಂದೂ ||ಆಹಾ|| ತಮಾಂಧಕಾರವ ಪ್ರಾಶಿಸಿದ ವಿವರಾ 4 ತನ್ನೊಳೈಕ್ಯವಾಗಿದ್ದ ಮಹ ತಾನೆ ಪ್ರಕಟನಾಗಿ ನಿಂದ ಆಗ ಉನ್ನಂತ ಚತುರ ನಾಮದಿಂದ ||ಆಹಾ|| ಜನುಮ ಸ್ಥಿತಿ ಮೃತಿ ಮೋಕ್ಷದನಾಗಿರ್ಪ ಅನಿರುದ್ಧಾದಿ ಚತುರಮೂರ್ತಿಗಳ ವ್ಯಾಪಾರ5 ಪುರುಷನಾಮಕ ಪರಮಾತ್ಮ ತಾ ತರವರಿತು ಘನಮಾಡ್ದ ಮಹಿಮಾ ಸೃಷ್ಟಿ ತರತರ ಮಾಡ್ದ ಮಾಹಾತ್ಮ ||ಆಹಾ|| ಪ್ರಾಕೃತ ವೈಕೃತ ದೇವತೆ ಸುಮಾನ ಈ ಮೂರುವಿಧ ಸೃಷ್ಟಿಯಾನೆಸಗಿದ ಪರಿಯ ನೀ 6 ಮಹದಹಂಕಾರ ತತ್ವ ಪಂಚ ಮಹಭೂತಗಳು ಮನಸ್ತತ್ವ ಇನ್ನು ಮಹದಶೇಂದ್ರಯಗಳ ತತ್ವ ಮತ್ತೆ ಮಹತಾಮಿಶ್ರಾಂಧ ತಾಮಸ ತತ್ವ ||ಆಹಾ|| ಇಹುದು ಈ ಪರಿಯಲ್ಲಿ ಪ್ರಾಕೃತ ಸೃಷ್ಟಿಯು ಮುಹುರ್ಮುಹು ಇದನೆ ಆಲಿಸಿ ನಿನ್ನೊಳು 7 ವೈಕೃತದೋಳು ಸಕಲ ವೃಕ್ಷಾ ತಿರ್ಯಕ್ ಸಕಲ ಪ್ರಾಣಿಗಳ್ ಮನುಜ ಕಕ್ಷಾ ಎಲ್ಲ ವಿಕೃತ ಸೃಷ್ಟಿಯ ಮಾಡ್ದ ಅಧ್ಯಕ್ಷಾ ಇನ್ನು ಸುರಸಮಾನ ಸೃಷ್ಟಿಯ ಅಪೇಕ್ಷಾ ||ಆಹಾ|| ಸಕಲ ಸುರಾಸುರಪ್ಸರ ಗಂಧರ್ವರು ಪಿತೃಗಳು ಯಕ್ಷರಾಕ್ಷಸರ ಪರಿಯವರಾ 8 ಪುನ್ನಾಮ ವಿರಂಚಿ ಬ್ರಹ್ಮಾನು ಅಂದು ಘನ್ನವಾಸುದೇವ ತಾನು ಸೃಷ್ಟಿ ಯನ್ನ ಪ್ರಕಟಮಾಡಿದನು ಮುಂದೆ ಅನಿಲದೇವನು ಸಂಕರುಷಣನ ||ಆಹಾ|| ಅನಿಲನೆ ಸೂತ್ರನಾಮಕವಾಯುವಾಗಿಹ ಭಾವೀ ಬ್ರಹ್ಮನೀತನೆ ನಿತ್ಯಗುರುವೆಂದು 9 ಪ್ರದ್ಯುಮ್ನನಿಂದ ಸರಸ್ವತಿ ಇನ್ನು ಶ್ರಧ್ದಾನಾಮಕಳು ಭಾರತಿ ಸೃಷ್ಟಿ- ಯಾದ ವಿವರ ತಿಳಿಯೊ ಪೂರ್ತೀ ಇದೇ ಪ್ರದ್ಯುಮ್ನನ ಸೃಷ್ಟಿಯ ಕೀರ್ತಿ ||ಆಹಾ|| ಶ್ರದ್ಧಾದೇವಿಯೊಳು ಸೂತ್ರನ ವೀರ್ಯದಿಂ- ದುದ್ಭವಿಸಿದ ಜೀವ ಕಾಲನಾಮಕನು 10 ಈರ ಬ್ರಹ್ಮರಸೃಷ್ಟಿ ಚರಿತ್ರೆ ಚಿತ್ರ ಗಾತ್ರ ತರವೆಲ್ಲ ವಿಚಿತ್ರ ||ಆಹಾ|| ವಿರಂಚಿ ಬ್ರಹ್ಮ ಸರಸ್ವತಿಯಿಂದ ವೈ- ಕಾರಿಕ ರುದ್ರ ಶೇಷಗರುಡರ ನೀ 11 ಸೂತ್ರ ಶ್ರದ್ಧಾ ದೇವೇರಿಂದ ಪವಿ ತ್ರತೈಜಸ ರುದ್ರ ಬಂದಾ ಪ- ಪುತ್ರರಾಗಿಹರತಿ ಚೆಂದಾ ||ಆಹಾ|| ಪುತ್ರನಾದ ತಾಮಸ ರುದ್ರ ಶೇಷಗೆ12 ಪ್ರದ್ಯುಮ್ನ ಸೂಕ್ಷಶರೀರ ಕೊಟ್ಟು ಉದ್ಧಾರ ಮಾಡಿದ ಜೀವರ ಅನಿ ರುದ್ಧನ ಕೈಲಿ ಕೂಡಲವರಾ ಅನಿ ರುಧ್ದನು ಮಾಡ್ದ ವಿಸ್ತಾರಾ ||ಆಹಾ|| ತದಪೇಕ್ಷ ಮೂಲಪ್ರಕೃತಿಯಿಂದ ಗುಣತ್ರಿ- ವಿಧ ಕೊಂಡು ಮಹತ್ತತ್ವ ನಿರ್ಮಿಸಿದಾ 13 ಮಹತ್ತತ್ವದಿಂದಹಂಕಾರ ತತÀ್ತ ್ವ ಮಹದಹಂಕಾರವು ಮೂರುತರ ಇದ- ರೊಳು ಬ್ರಹ್ಮವೈಕಾರಿಕ ಶರೀರವಾಗಿ ಪರಿ ಈ ರೂಪ ವಿವರಾ ||ಆಹಾ|| ಅಹುದು ತೈಜಸದಿಂದ ಶೇಷನ ದೇಹವು ತಾಮಸದಿಂದಲಿ ರುದ್ರ ತಾನಾದನು 14 ಎರಡನೆಯ ಸಾರಿ ಪ್ರದ್ಯುಮ್ನ ಅರ್ಧ ನಾರೀ ರೂಪನಾಗಿ ಇನ್ನು ಎಡದಿ ಸ್ರೀರೂಪ ಜೀವರುಗಳನ್ನು ಬಲದಿ ಪುರುಷ ಜೀವರೆಲ್ಲರನ್ನು ||ಆಹಾ|| ಧರಿಸಿ ಅವರ ದೇಹಗಳನಿತ್ತು ಅ ನಿರುದ್ಧನ ಕೈಯೊಳಿತ್ತ ಪರಿಯನ್ನು 15 ಅದರಂತೆ ಅನಿರುಧ್ದದೇವ ತಾ ನದಕಿಂತ ಸ್ಥೂಲದೇಹವ ಮೂಲ ಪ್ರಕೃತಿಯಿಂದ ಗುಣವಾ ಕೊಂಡು ಅದುಭುತ ಮಹತ್ತತ್ವತೋರ್ವ ||ಆಹಾ|| ಅದುಭುತ ಮಹತ್ತತ್ವದಿಂದಹಂಕಾರ ಉದಿಸಿದ ಪರಿಯನು ಮುದದಿಂದಲಿ ಅರಿತು 16 ಪರಮ ಕರುಣೆಯಲೀ ರುದ್ರನು ಅರ್ಧ ನಾರೀರೂಪ ತಾಳಿ ಇನ್ನೂ ಎಡದಿ ಸುರರಸ್ತ್ರೀಗಳನ್ನು ಬಲದೀ ಸುರಪುರಷರನ್ನೂ ||ಆಹಾ|| ಭರದಿ ಪುಟ್ಟಿಸಿ ಪ್ರದ್ಯುಮ್ನನ ಕೈಲಿತ್ತ ಪರಿಪರಿ ಸೃಷ್ಟಿಯ ಕ್ರಮವರಿತು ನೀನೀಗ 17 ಅನಿರುಧ್ದ ದೇವನು ಜೀವರ ಸ್ಥೂಲ ತನುವ ಕೊಟ್ಟು ಪಾಲಿಪ ತದಭಿ- ಮಾನಿ ಶ್ರೀ ಭೂ ದುರ್ಗಾ ಮಾಡಿ ತಾನೆಲ್ಲರ ಸತತ ಪೊರೆವಾ ||ಆಹಾ|| ಮಹತ್ತತ್ತಾ ್ವಭಿಮಾನಿಗಳೆನಿಸಿದ ದೇವನ18 ಅಹಂಕಾರ ತತ್ತಾ ್ವಭಿಮಾನಿ ಅದಕೆ ಅಹಿಗರುಡರು ಅಭಿಮಾನಿ ಇನ್ನು ಅನಿರುದ್ಧಾದಿ ರೂಪತ್ರಯವು ಇದಕೆ ಇನ್ನು ನಿಯಾಮಕನು ಎನ್ನು ||ಆಹಾ|| ಮಹತ್ತತ್ವಾ ನಿಯಾಮಕ ವಾಸುದೇವನಿಂದ- ನವರತ ಈ ಸೂಕ್ಷ್ಮಪ್ರಮೇಯ ಗ್ರಹಿಸಿ ನೀನು 19 ಮನಸ್ತತ್ವಾಭಿಮಾನಿ ಸುರರಾ ಸೃಷ್ಟಿ ಯನ್ನೆ ವೈಕಾರಿಕದಿಂದಲವರಾ ಮಾಡಿ ಘನ್ನ ತೈಜಸದಿಂದಲಿಂದ್ರಿಯ ತತ್ಪವೆ- ಲ್ಲನೆಸಗಿದಂಥ ವಿವರಾ ||ಆಹಾ|| ಉನ್ನಂತ ತನ್ಮಾತ್ರ ಭೂತಪಂಚಕಗಳ ತಾಮಸದಿಂದಲಿ ಉದಿಸಿದ ಪರಿಯನು 20 ಯುಕ್ತಸ್ಥಾನಾದಿಗಳನ್ನು ಕೊಡೆ ಉತ್ತಮೋತ್ತಮನನ್ನು ತಾವು ಸುತ್ತಿ ಸ್ತುತಿಸಲು ಇನ್ನೂ ||ಆಹಾ|| ತತ್ವದೇವತೆಗಳ ಭಕ್ತಿಗೆ ಒಲಿದು ತತ್ವರೆಲ್ಲರ ತೋರೆ ರೂಪದಿ ಧರಿಸಿಟ್ಟನು21 ರಜಸುವರ್ಣಾತ್ಮಕವಾದ ಘನ ನಿಜ ಐವತ್ತು ಕೋಟಿ ಗಾವುದ ಉಳ್ಳ ಅಜಾಂಡವನ್ನು ತಾ ತೋರ್ದ ತನ್ನ ನಿಜಪತ್ನಿ ಉದರದಿ ಮಾಡ್ದ ||ಆಹಾ|| ಸೃಜಿಸಿ ಬ್ರಹ್ಮಾಂಡದಿ ತತ್ವಗಳೊಡಗೂಡಿ ನಿಜವಾಗಿ ತಾನೊಳ ಪೊಕ್ಕ ವಿರಾಟನ್ನ 22 ಪಾತಾಳಾದಿ ಸಪ್ತಲೋಕ ಕಡೆ ಪರಿಯಂತ ರೂಪ ತಾ ತಾಳಿದ ಆದ್ಯಂತ ಇಂತು ನಿರತನು ಸಚ್ಚಿದಾನಂದ ||ಆಹಾ|| ಇಂತು ವಿರಾಟ ತನ್ನಂತರದೊಳು ತತ್ವರೆಲ್ಲರ ತತ್‍ಸ್ಥಳದೊಳಿಟ್ಟು ಪೊರೆದನ್ನ23 ಸಕಲ ಉದಕ ಶುಷ್ಕದಿಂದ ಇರಲು ತಕ್ಕ ಮುಕ್ತಾಮುಕ್ತರ ಭೇದದಿಂದ ತಕ್ಕ ಸ್ಥಾನವೆ ಕಲ್ಪಿಸಿದ ಚೆಂದಾ ||ಆಹಾ|| ಅಕಳಂಕ ಪುನ್ನಾಮಕನು ಧಾಮತ್ರಯ ಮೊದಲಾದ ನರಕ ಪಂಚಕಗಳ ಮಾಡಿದ 24 ಉದಕ ಶೋಷಣೆಯನ್ನು ಮಾಡಿ ಇನ್ನುಮ- ಹದಹಂಕಾರವ ಕೂಡಿ ಭೂತ ಪಂಚಕವ ಮಿಳನ ಮಾಡಿ ಆಗ ಹದಿನಾಲ್ಕೂದಳಾತ್ಮಕ ಪದ್ಮತೋರಿ ||ಆಹಾ|| ಅದುಭುತ ಪದುಮದಿ ಉದಿಸಿದ ಬ್ರಹ್ಮನು ಚತುರ ನಾಲ್ಕುದಿಕ್ಕು ಮುದದಿಂದ ನೋಡಿದ 25 ಪದುಮದಲಿ ಚತುರಾಸ್ಯನಾಗಿ ಅದು ಭುತÀ ಮಹಿಮೆ ನೋಡುತ ತಾನೆ ಮುದದಿಂದ ಮೊಗತಿರುಗಿಸುತಾ ಅದ ಅದುಭುತ ಶಬ್ದಕೇಳುತ್ತಾ ||ಆಹಾ|| ತದಪೇಕ್ಷ ತಪವನಾಚರಿಸಿ ನಾಳದಿ ಬಂದು ಪದುಮನಾಭನು ತಾನು ಮುದದಿಂದ ನೋಡಿದ 26 ಪರಮಪುರುಷ ಉಕ್ತಿ ಲಾಲಿಸಿ ಮೆಚ್ಚಿ ವರವ ಕೊಟ್ಟು ಪಾಲಿಸಿ ಸೃಷ್ಟಿ ನಿರುತ ಮಾಡಲು ತಾ ಬೆಸಸೀ ತಾನು ಅವನಂತರದೊಳು ನೆಲೆಸೀ ||ಆಹಾ|| ಹೊರಗೂ ಒಳಗೂ ನಿಂತು ಸೃಷ್ಟಿಲೀಲೆಯ ತೋರ್ವ ಉರಗಾದ್ರಿವಾಸವಿಠಲ ವೇಂಕಟೇಶನ್ನ 27
--------------
ಉರಗಾದ್ರಿವಾಸವಿಠಲದಾಸರು
ಧ್ಯಾನಿಸು ಶ್ರೀಹರಿಯ ಧ್ಯಾನಿಸು ಪ ಧ್ಯಾನಿಸು ಮನವೆ ಶ್ರೀ ಹರಿಯ ಪಾದ ಧ್ಯಾನವಂತರ್ಯಾಮಿ ಹರಿಯ, ಆಹ ಪ್ರಾಣಾಪಾನ ವ್ಯಾನೋದಾನ ಸಮಾನರ್ಗೆ ಪ್ರಾಣನಾಗಿಹ ಮುಖ್ಯ ಪ್ರಾಣಾಂತರ್ಗತನ ಅ.ಪ ಪರಮಾಣು ಪ್ರದೇಶದಲ್ಲಿ, ಪ್ರಾಣಿ ರಾಸಿ ಅನಂತವುಂಟಲ್ಲಿ ಹೀಗೆ ವರಲುತಿದೆ ವೇದದಲ್ಲಿ ದೃಷ್ಟಾಂ ತರವ ಪೇಳುವೆ ದೃಢದಲ್ಲಿ-ಆಹ ಪರಮ ಸೂಕ್ಷ್ಮ ವಟತರು ಫಲದಲ್ಲಿಹ ನಿತ್ಯ 1 ನಿರುತ ಸುವರಣ ಬ್ರಹ್ಮಾಂಡದಲ್ಲಿ ಪರಿಪೂರ್ಣವಾಗಿ ಅಖಂಡವಾಗಿ ಮೆರೆವುತಲಿಪ್ಪ ಮಾರ್ತಾಂಡ ದಿವ್ಯ ಕಿರಣದಂತಿರುವ ಪ್ರಚಂಡ-ಆಹ ಹೊರಗೆ ಒಳಗೆ ಹರಿ ಚರಿಸುವ ಪರಿಯ ನೀ ನರಿತು ಆವಾಗಲು ದೊರಕಿದ ಸ್ಥಳದಲ್ಲಿ 2 ಸಲಿಲ ಭೂಗಿರಿ ಲತೆ ನಾನಾ-ವೃಕ್ಷ ಮೃಗ ಪಕ್ಷಿ ಕಾನನ-ಮುಕ್ತ ಸ್ಥಳಗಳವ್ಯಾಕೃತ ಗಗನ, ತೃಣ- ಪಾವಕ ತರು ಪವನ-ಆಹ ಒಳಗೆ ಹೊರಗೆ ಎಲ್ಲ ಸ್ಥಳದಲ್ಲಿ ಹರಿಮಯ ನೆಲೆಯ ನೀ ನಲವಿಂದ ತಿಳಿದು ಆವಾಗಲು3 ವಿಶ್ವ ಮತ್ಸ್ಯಾದಿ, ತೇಜೊ ರಾಶಿ ಹಯಗ್ರೀವಾದಿ, ಜೀವ ರಾಶಿಯೊಳಿದ್ದು ಅನಾದಿ ಸರ್ವ ದೇಶ ಭೇದಿಸುವಂಥ ವೇದಿ-ಆಹ ಮೂರ್ತಿ ಶ್ರೀಶ ರಂಗನೆಂದು ನಿತ್ಯ 4 ಸಪ್ತಾವರಣ ದೇಹದಲ್ಲಿ, ದಶ ಸಪ್ತ ದ್ವಿಸಹಸ್ರ ನಾಡಿಯಲಿ, ದಶ ಸಪ್ತ ದ್ವಿಸಹಸ್ರ ರೂಪದಲಿ ಹರಿ ವ್ಯಾಪ್ತ ನಿರ್ಲಿಪ್ತ ಸ್ಥಾನದಲಿ-ಆಹ ಆಪ್ತನಂತಿಪ್ಪ ಸುಷುಪ್ತಿ ಜಾಗರದೊಳು ತಪ್ತ ಕಾಂಚನದಂತೆ ದೀಪ್ತಿಸುತಿಪ್ಪನ್ನ5 ಜೀವರಿಂದತ್ಯಂತ ಭೇದ, ಪ್ರತಿ ಜೀವಾಂತರದಲ್ಲಿ ಮೋದನಾಗಿ ಯಾವಾಗಲಿರುತಿಹ ವೇದ-ದಲ್ಲಿ ಪೇಳುವುದು ಸತ್ಯಂಭಿದಾ-ಆಹ ಈ ವಿಧ ವೇದಾರ್ಥ ಸಾವಧಾನದಿ ತಿಳಿದು ಶ್ರೀ ವಾಯುಮತದ ಸುಕೋವಿದರೊಡಗೂಡಿ 6 ಶ್ರೀಕೇಶವನೆ ಮೂಲರಾಶಿ, ಶ್ರುತಿ- ಏಕೋ ನಾರಾಯಣ ಆಸೀತ್ ನಾನಾ ಲೋಕ ಸೃಷ್ಟಿಪ ಧಾತನಾಸೀತ್, ಜಗ ದೇಕತಾರಕ ಉಪದೇಶೀ-ಆಹ ನೀ ಕೇಳಿ ನಿಗಮಾರ್ಥ ನೀಕರಿಸು ಸಂಶಯ ಏಕಮೇವ ದ್ವಿತಿಯ ಶ್ರೀಕೃಷ್ಣನಂಘ್ರಿಯ 7 ಗಂಗಾಜನಕ ಸಿರಿರಂಗ ಉ- ತ್ತುಂಗ ಗುಣಾಂತರಂಗ, ಕಾ ಳಿಂಗ ಸರ್ಪನ ಮದಭಂಗ, ಭು ಜಂಗಶಯನ ಅಮಲಾಂಗ-ಆಹ ಮಂಗಳ ಇಡಾ ಪಿಂಗಳ ಸುಷುಮ್ನ ಸಂಗಡ ಮಧ್ಯದಿ ತಿಂಗಳಂತಿಪ್ಪನ್ನ 8 ಹೃದಯಸ್ಥಾನದಲಿದ್ದ ಮೂರ್ತಿ, ಬಲು ಅದುಭುತಾತನ ದಿವ್ಯಕೀರ್ತಿ, ಅದು ಪದುಮುಜಾಂಡದಿ ಪರಿಪೂರ್ತಿ ತರು ವುದಕೆ ಬೇಕು ವಾಯು ಸಾರಥಿ-ಅಹಾ ಅದು ಬಿಂಬಮೂರ್ತಿ ಜೀವದಾಕಾರಾವಾಗಿದ್ದ ಪದುಮಕೋಶದಲ್ಲಿ ಸದಮಲಾತ್ಮಕನನ್ನು 9 ಧರೆಯನಳೆದ ದಿವ್ಯ ಚರಣ, ಅದು ಮೆರೆವುತಿಹುದು ಕೋಟಿ ಅರುಣನಂತೆ ಪರಿಪೂರ್ಣ ಭರಿತವು ಕಿರಣ, ಸ್ಮರಿ- ಪರಿಗೆ ಮಾಡುವುದು ಕರುಣ-ಆಹ ತರಣಿಯಂಥ ನಖದಿ ಸುರನದಿಯನು ಹೆತ್ತ ಎರಡೈದು ಬೆರಳಲ್ಲಿ ಕಿರುಗೆಜ್ಜೆ ಪೆಂಡೆಯು 10 ಪೆರಡು ಜಾನು ಜಂಘೆ ಘನ್ನ ಸುರು- ಚಿರ ವಜ್ರಾಂಕುಶ ಧ್ವಜ ನಾನಾ, ದಿವ್ಯ ವರ ರೇಖೆಯಿಂದಲೊಪ್ಪುವನ, ಜಘನ ಪರಮ ಶೋಭಿತ ಸುಂದರನ-ಆಹ ಕದಳಿ ಕಂಬ ಇರುವೂರು ಶೋಭಿಸೆ ಸರಿಗಾಣೆ ಹರಿವುಟ್ಟ ವರ ಪೀತಾಂಬರವನ್ನು 11 ಗಜವೈರಿಯಂತಿಪ್ಪ ಮಧು ಬಲು ವಿಜಯ ವಡ್ಯಾಣ ಅಚ್ಛೇದ್ಯ, ಭೇದ್ಯ ನಿಜಘಂಟೆ ಘಣರೆಂಬೊ ವಾದ್ಯ, ಕು ಬುಜೆ ಡೊಂಕ ತಿದ್ದದನಾದ್ಯ-ಆಹ ಅಜ ಜನಿಸಿದ ನಾಭ್ಯಂಬುಜದಳ ಚತುರ್ದಶ ಕುಕ್ಷಿ ನಿಜಪೂರ್ಣ ಸಖನನ್ನು 12 ಉದರ ತ್ರಿವಳಿ ನಾನಾ ಹಾರ ದಿವ್ಯ ಪದಕ ಪವಳದ ವಿಸ್ತಾರ ರತ್ನ ಮುದದಿಂದ ಧರಿಸಿದ ಧೀರ ಸುಂದರ ವಾದ ಕಂಬುಕಂಧರ-ಆಹಾ ಪದುಮಜ ಭವರಿಂದ ತ್ರಿದಶರು ತಿಳಿಯುತ್ತ ಸದಾಕಾಲ ಧ್ಯಾನಿಪ ಹೃದಯಾಂಬರವನ್ನು 13 ಸಿರಿವತ್ಸ ಕೌಸ್ತುಭಹಾರ, ಮೇಲೆ ಸರಿಗೆ ನ್ಯಾವಳದ ವಿಸ್ತಾರ ಅಲ್ಲಿ ವೈಜಯಂತಿ ಮಂದಾರ, ಗುರು ತರವಾದ ಭುಜ ಚತುರ-ಆಹ ಮರಿಯಾನೆ ಸೊಂಡಿಲಂತಿರೆ ಬಾಹು ಕೇತಕಿ ಬೆರಳು ನಕ್ಷತ್ರದ ಅರಸಿನಂತೆ ನಖ14 ಕರಚತುಷ್ಟಯದಲ್ಲಿ ಶಂಖ, ಚಕ್ರ ವರಗದೆ ಪದುಮು ನಿಶ್ಶಂಕನಾಗಿ ಧರಿಸಿ ಮೆರೆವೊ ಅಕಳಂಕ, ದುರು ಳರ ದಂಡಿಸುವ ಛಲದಂಕ ಆಹ ಬೆರಳು ಮಾಣಿಕದುಂಗುರ ಕಡಗ ಕಂಕಣ ಬಿರುದಿನ ತೋಳ್ಬಂದಿ ವರ ಭುಜಕೀರ್ತಿಯ15 ಅಗರು ಚಂದನ ಗಂಧÀಲೇಪ, ಕಂಬು ಸೊಗಸಾದ ಕಂಠಪ್ರತಾಪ, ಮಾವು ಚಿಗುರಲೆ ಕೆಂದುಟಿ ಭೂಪ, ನಸು ನಗುವ ವದನ ಸಲ್ಲಾಪ-ಆಹ ಮಗನಾಗಿ ತಾನು ಗೋಪಿಗೆ ವದನದೊಳು ಅಗಣಿತ ಮಹಿಮನ್ನ 16 ಮುಗುಳು ಮಲ್ಲಿಗೆ ಮೊಗ್ಗೆ ದಂತ ಪಙÂ, ಜಗವ ಮೋಹಿಸುವ ಸುಶಾಂತ ಜಿಹ್ವೆ ನಿಗಮಕೆ ವೇದ್ಯವಾದಂಥ ಬಲು ಬಗೆಯಿಂದ ನಡೆಸುವ ಪಂಥ-ಆಹ ಪೊಗಳಲಾರದು ವೇದ ಖಗವಾಹನನ ಮಹಾ ಅಗಣಿತ ಮಹಿಮೆ ಸಂಪಿಗೆಯ ನಾಸಿಕನನ್ನು 17 ಪೊಳೆವೊ ವಿದ್ಯುತ ಕಪೋಲ, ನೀಲೋ- ತ್ಪಲದಳ ನೇತ್ರ ವಿಶಾಲ, ದಿವ್ಯ- ತಿಲಕವನಿಟ್ಟ ಸುಫಾಲ, ನೀಲಾ- ಚಲಕಾಂತಿ ತನುರುಹ ಜಾಲ-ಆಹ ಕುಂಡಲ ಕರ್ಣದೊಲುಮೆಯ ಚೆಲುವಿಕೆ ಇಳೆಯೊಳಗೆಣೆಗಾಣೆ ಇಂದಿರಾಲೋಲನ್ನ 18 ಶುಭ ನೋಟ, ಕಂಗ- ಳೆರಡ ಚೆಲುವಿಕೆ ಮಾಟಕಿನ್ನು ಅರವಿಂದ ಸರಿಯಿಲ್ಲ ದಿಟ ಅಲ್ಲಿ ತರಣಿ ಚಂದ್ರಮರ ಕೂಟ-ಆಹ ಶರಣ ಜನರ ಮನೋಹರುಷ ವಾರ್ಧಿಗೆ ಸುಧಾ ಕರ ದುಷ್ಟಜನರ ತಿಮಿರಕ್ಕೆ ಭಾಸ್ಕರನ್ನ 19 ಹೊಳೆವ ಹುಬ್ಬುದ್ವಯ ಸ್ಮರನ ಚಾಪ- ತಲೆ ತಗ್ಗಿಸುವಂಥ ರಚನ ಫಾಲ- ದಲ್ಲಿಟ್ಟು ತಿಲಕ ಸುಂದರನ ಲೋಕ- ಕಳವಳಗೊಳಿಸುವ ಸುಗುಣ-ಆಹ ನಲಿವ ವದನದಲ್ಲಿ ಅಳಿಗಳಂತೊಪ್ಪುವ ಸುಳಿಗುರುಳಿನ ಮೇಲೆ ವಲಿವಾರಳೆಲೆಯನ್ನು 20 ರೂಪ ಶೃಂಗಾರ ವಿಲಾಸ ಉಡು- ಭೂಪ ನಾಚುವ ಮುಖಹಾಸ ವಿಶ್ವ ರೂಪ ಧೃತ ಸ್ವಪ್ರಕಾಶ ಸರ್ವ ವ್ಯಾಪಕಾಖಿಳ ಜಗದೀಶ-ಆಹ ತಾಪಸರಿಗೆ ಕರುಣಾಪಯೋನಿಧಿ-ಅಣು ರೂಪಿನೋಳ್ ಪರಮಾಣು ರೂಪನಾಗಿಪ್ಪನ್ನ21 ಕೋಟಿಮಾರ್ತಾಂಡ ಸಂಕಾಶ ಕಿ ರೀಟಕ್ಕೆ ಅಸಮ ಪ್ರಕಾಶ ಎಲ್ಲು ಸಾಟಿಗಾಣೆನು ಲವಲೇಶ ಕಪಟ- ನಾಟಕ ಶ್ರೀ ಲಕುಮೀಶ-ಆಹ ನಖ ಲಲಾಟ ಪರಿಯಂತ ನೋಟದಿಂದಲೆ ಈಶ ಕೋಟಿ ಸಹಿತನಾಗಿ 22 ಕಾಮಾದಿಗಳನೆಲ್ಲ ತರಿದು ಮುಕು- ತೀ ಮಾರ್ಗವನ್ನೆ ನೀನರಿದು ಅತಿ- ಪ್ರೇಮದಿ ಗುರುಗಳ ನೆನೆದು ಹೇಮ ಭೂಮಿ ಕಾಮಿನಿಯರ ಜರಿದು-ಆಹ ಸಾಮಜ ವರದ ಶ್ರೀ ವಿಜಯವಿಠ್ಠಲನಂಘ್ರಿ ಯುಗ್ಮ ನಿತ್ಯ 23
--------------
ವಿಜಯದಾಸ
ನಂದ ಯಶೋದೆಯರಲ್ಲಿ ಬಂದು ಅವತರಿಸಿದ ಇಂದಿರಾಪತಿಯ ಮಹಿಮೆಯನಲುವಿನಿಂದ ಚಂದವನೆಲ್ಲ ರಚಿಸಿದ ಪ. ದೇವನಾರಾಯಣ ಭೂದೇವಿ ಮೊರೆ ಕೇಳಿ ದೇವಕಿಯಲ್ಲಿ ಅವತರಿಸಿದ ದೇವಕಿದೇವಿಯಲ್ಲಿ ಅವತರಿಸಿದ ಧರಾದೇವಿ ಭಾರವನೆಲ್ಲ ಇಳಿಸಿದ1 ದುಷ್ಟ ದೈತ್ಯರನಟ್ಟಿ ಆಪನೊಳು ಮನೆಕಟ್ಟಿಪಟ್ಟದ ರಾಣಿಯರ ಒಯ್ದಿಟ್ಟಪಟ್ಟದ ರಾಣಿಯರ ಒಯ್ದಿಟ್ಟ ಶೌರ್ಯವ ಎಷ್ಟು ವರ್ಣಿಸಲ್ಪಶವಲ್ಲ 2 ಹರಿಯು ವೈಕುಂಠದ ಪರಿಯ ತೋರುವೆನೆಂದುಧರೆ ಮೇಲಾಗ ಜನಿಸಿದ ಧರೆ ಮೇಲಾಗ ಜನಿಸಿದ ದ್ವಾರಕಾಪುರನಿರ್ಮಿಸೆಂದು ಜಲದೊಳು 3 ದೊರೆ ಕೃಷ್ಣಯ್ಯನ ಹಿರಿ ಮಡದಿಮನೆಪರಿಯ ವರ್ಣಿಸಲು ವಶವÀಲ್ಲಪರಿಯ ವರ್ಣಿಸಲು ವಶವಲ್ಲ ದ್ವಾರಕಾಸಿರಿಕೇಳಿ ಬ್ರಹ್ಮ ಬೆರಗಾದ4 ಅಪ್ಪ ರಾಮೇಶನು ಇಪ್ಪಂಥ ಅರಮನೆಯುಅಪ್ರಾಕೃತ ವೈಕುಂಠಅಪ್ರಾಕೃತ ವೈಕುಂಠ ವೆಂಬೋದುಸುಪ್ರಕಾಶವಾಗಿ ಹೊಳೆದೀತು5
--------------
ಗಲಗಲಿಅವ್ವನವರು