ಒಟ್ಟು 32405 ಕಡೆಗಳಲ್ಲಿ , 137 ದಾಸರು , 8458 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧ್ರುವ ತಾಳ ದಾಸ ನಿನಗೆ ನಾನು ಲೇಸಿನವನೆಂದು ಆಶೆಯಿಂದಲಿ ಗತಿ ಬೇಡಲಿಲ್ಲ ದಾಸತನ ಎನಗೆಲ್ಲಿಹುದು ಶ್ರೀನಿ- ವಾಸನೆ ಅನಂತ ಕಲ್ಪದಲ್ಲಿ ನಾಶನ ಮಾಡಿಕೊಂಬ ದಾಸ ನಾನು ದಾಸನೆನಿಸಿಕೊಂಡು ತಿರುಗುವ ಜನಕ್ಕೆ ಲೇಸಾಗಿ ದಂಡಿಸಿ ಮೆದಿಯ ಬೇಕು ಕೇಶವ ವಿಜಯವಿಠ್ಠಲನೆ ನಿನ್ನ ಮರೆದು ಗ್ರಾಸಕ್ಕೆ ತಿರುಗುವ ಭಾಸಮಾನ ದಾಸ 1 ಮಟ್ಟತಾಳ ತಿರಕದಾಸ ನಾನು ಹರಕ ದಾಸ ನಾನು ಕರಕರಿಯನು ಮಾಡಿ ಪರರ ಪೀಡಿಸಿ, ಉ- ದರ ಪೊರೆವ ದಾಸನು ನಾನು, ಬರಿಯ ದಾಸ ನಾನು ಅರಿಮರ್ದನ ಹರಿ ವಿಜಯವಿಠ್ಠಲ ನಿನ್ನ ಪರಮ ಭಕ್ತನೆಂದು ತಿರಿದುಣ್ಣ ಮೆಚ್ಚಿದೆನು 2 ತ್ರಿವಿಡಿ ತಾಳ ಕೊಟ್ಟರೆ ಹರಸುವೆನು, ಕೊಡದಿದ್ದರೆ, ಬೆರ ಳಿಟ್ಟು ಬಗಳುವಂಥ ಭ್ರಷ್ಟ ದಾಸನು ನಾನು ಸೃಷ್ಟಿಯೊಳಗೆ ಬಹು ಧನವಂತರ ಮನೆಯ ಮೆಟ್ಟು ಕಂಡರೆ ಬಿಡದಿಪ್ಪ ದಾಸ ನಾನು ನಷ್ಟ ವಾಗಿದ್ದ ಉಚ್ಛಿಷ್ಟ ದಾಸನು ನಾನು ದೃಷ್ಟಿಯಿಂದಲಿ ನೋಡೊ, ವಿಜಯವಿಠ್ಠಲ ಕೇಳೊ ಎಷ್ಟೊ ಕಾಲದ ಪಾಪಿಷ್ಠ ದಾಸನು ನಾನು 3 ಅಟ್ಟತಾಳ ಕುರುಡ ದಾಸನು ನಾನು ಕುಂಟ ದಾಸನು ನಾನು ಹುರಡಿಗೆ ಮಾಡುವ ಹುರಳಿಲ್ಲದ ದಾಸ ಸರಿಯವರನು ಕಂಡು ಮರಗುವ ದಾಸನು ಎರಡು ಕಡೆ ಕೆಟ್ಟ ಭರಡಿ ದಾಸನು ನಾನು ಗರಕೆ ಕರದಾರೆ ಹಿಗ್ಗುವ ದಾಸನು ನಾನು 4 ಆದಿತಾಳ ಹೀನ ದಾಸನು ನಾನು, ನೀಚ ದಾಸನು ನಾನು ಹಾನಿವೃದ್ಧಿಗಳೆಲ್ಲ ತಿಳಿಯದ ದಾಸನು ನಾನಾ ದುಷ್ಕರ್ಮ ಮಾಳ್ಪ ದಾಸನೊ ನಾನು ಮಾನವಿಲ್ಲದೆ ಅಪಮಾನ ದಾಸ ನಾನು ದಾನ ಧರ್ಮವಿಲ್ಲದ ಹೀನ ದಾಸನು ನಾನು ಅನಂತ ಜನನಕ್ಕೆ ಹೊಲೆದಾಸನು ನಾನು ಶ್ರೀನಿವಾಸ ತಿರುಮಲೇಶ ವಿಜಯವಿಠ್ಠಲ ಬ್ಯಾನೆ ಇದ್ದಲ್ಲಿ ಬಿಡುವ ಬಕ್ಕದಾಸನು ನಾನು 5 ಜತೆ ಹೊಟ್ಟೆಕಿಚ್ಚಿನ ದಾಸ-ಹಲುಬಿ ಪೋಗುವ ದಾಸ ದಟ್ಟದಾರಿದ್ರ ದಾಸನು ವಿಜಯವಿಠ್ಠಲರೇಯ 6
--------------
ವಿಜಯದಾಸ
ನಂಬಿದೆನು ಸರ್ವೇಶಾ ಸ್ಮರಣೆಯೆ ಉಲ್ಲಾಸಾ 1 ಮಾಡಲಿಬೇಡ ಇನ್ನಾ ಇಚ್ಛಿಸುವೆ ಭಕ್ತಿರನ್ನಾ | ಯನಗೆ ಪ್ರತ್ಯಕ್ಷನಾಗೂಯತಿರನ್ನಾ 2 ಎಂಥೆಂಥವರನು ಪೊರೆದೇ | ಯನ್ನಂಥವರು ನಿನಗೆ ಹಿರಿದೇ ಚಿಂತೆಯನೀ ತರಿದೇ 3 ನಿನ್ನ ಮೆಚ್ಚಿಸಲೆನಗೆ ಶಕ್ತಿ | ಘನ್ನ ಮಹಿಮನೇಕೊಡು ಭಕ್ತಿ ಚೆನ್ನಾಗಿ ಪಾಲಿಸು ಮುಕ್ತೀ 4 ಪ್ರಥಮದಲಿ ಪ್ರಹ್ಲಾದನಾಗೇ | ಅಲ್ಲಿದಿತಿವಂಶದಲಿ ನೀ ಪೋಗೇ ಹತ ಮಾಡದೆ ಅವನೀಗೇ | ಪಿತಗೆ ಸದ್ಗತಿಯಿತ್ತೆಯೋಗೀ 5 ಮೂರ್ತಿ ಲೋಕದಲಿ ಪ್ರಖ್ಯಾತಿ ಏನೆಂಧೆÉೀಳಲಿ ವಾರ್ತೀ | ರಾಶಿರಾಶಿತುಂಬಿದವು ನಿನ್ನ ಕೀರ್ತೀ 6 ಮನಸಿಗೆ ಪ್ರೀಯಾ ಬಂದು ಪಿಡಿಕೈಯಾ 7 ಸತ್ಯ ಸಂಧರು ನೀವೆನಿಸೀ | ದೊಡ್ಡ ಉತ್ತರಾದಿ ಮಠದಿ ಜನಿಸೀ ಭಕ್ತರನೆಲ್ಲಾ ಸ್ವೀಕರಿಸೀ | ಮಧ್ವಮತವನುದ್ಧರಿಸೀ 8 ಬಿದ್ದೆ ನಿನ್ನ ಪಾದಕೈಯಾ | ಎನ್ನ ವುದ್ಧಾರ ಮಾಡುಜೀಯಾ ವಿದ್ವಾಂಸರಿಗೆ ನೀ ಘೇಯಾ | ಬೇಗ ಎದ್ದು ಬಂದು ಪಿಡಿಕಯ್ಯಾ 9 ನರಸಿಂಹ ವಿಠಲನ ಪ್ರೀಯಾ | ಕರೆಸಿದ್ದು ನೀ ಎನ್ನ ಖರೆಯಾ ಮಹರಾಯಾ 10
--------------
ಓರಬಾಯಿ ಲಕ್ಷ್ಮೀದೇವಮ್ಮ
ನಾ ವಂದಿಸುವೆ ನಲಿದಾಡುವೇ ಪ ಪವಿತ್ರಳಾದೇ ನಿತ್ಯ ಪರಮಾತ್ಮನ ಕಂಡು ಕೃತಾರ್ಥಳಾದೇ 1 ವಜ್ರ ಮಂಟಪ ವೈಭವನೋಡಿದೆ ನೋಡಿ ಉಧೃತಳಾದೇ 2 ಸತ್ಯಧ್ಯಾನರು ಎತ್ತಿ ಮಾಡುವಂಥ | ಮಂಗಳಾರ್ತಿಯನೆ ಕಂಡೆನೇ ವಿಸ್ತರ ನೋಡಿದೆ3 ಕೊಂಡಾಡುವುದ ನಾ ಕೇಳಿದೆ ಹಿಂಡು ಪಡೆವುದ ನೋಡಿದೆ 4 ಮುಟ್ಟಿಪೂಜಿಸಿದ ಮೂರ್ತಿಯು ಮತ್ತೆ ಕುಬೇರನ ಅಳಕಾ ಪಟ್ಟಣವೇ ಪ್ರತ್ಯಕ್ಷ ಬಂದಿರುವುದಿಲ್ಲಿ 5 ಬೆಳ್ಳಿ ಭಂಗಾರದ ಮಿಳ್ಕೆ, ತಂಬಿಗಿ ಢಾಲಿಯನು ಕೈಯಲಿ ಜನರು ಕೊಂಡೊಯ್ವರು ಭಾಳಿರುವುದು 6 ಪ್ರತ್ಯಕ್ಷವೈಕುಂಠವೆನಿಪುದೂ ದಾಯಪಿಡಿವರೂ 10 ನೋಡಿ ಸಂತುಷ್ಟಳಾದೇ ಈ ಮಠದಲಿ 11 ಮತ್ಯಾರಿಗೀಡಿಲ್ಲನೋಡು ಸೃಷ್ಟಿವೊಳಗಿನವರಿಗೀಡಿಲ್ಲನೋಡು 12 ವಾದಿಮತದ್ವಾದಿನೀ ಸೋಲಿಸುವರು | ಮಾಯಮತಿಗಳ ಮಾಯಮಾಡುವರೂ ಪಾಠದಿಬೋಧಿಸುವರೂ 13 ಸುರಲೋಕ ಪೂಜ್ಯರಿವರೂ ಶಿರೋಮಣಿಯೆಂದು ಕರೆಸಿಕೊಳ್ಳುವರೂ 14
--------------
ಓರಬಾಯಿ ಲಕ್ಷ್ಮೀದೇವಮ್ಮ
ನಾನೊಂದು ಕನಸು ಕಂಡೆ ಕೇಳಕ್ಕಾ ಪ ನರರಂತೆ ಬಂದ ನಲ್ಲೆ ಕೇಳಕ್ಕಾ | ಪರಿಪರಿಲಿ ಬೋಧಿಸಿದನೇ ಕೇಳಕ್ಕಾ 1 ಅಯ್ಯ ನಂಘ್ರಿಗೆ ಸಿರಸನು | ನಾ ಚಾಚಿ | ಜೀಯ ಸಲಹೆನ್ನಯನಲು ಕೇಳಕ್ಕಾ ಕೈಯ ಬಿಡೆನೆಂದಿಗೆಂದು ಕೇಳಕ್ಕಾ 2 ಕನ್ನಡಿಯೊಳಡಗಿದಂತೆ ಕೇಳಕ್ಕಾ | ಲಿನ್ನು ಮನ ಬೆರಗಾಯಿತೆ ಕೇಳಕ್ಕಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪಾರ್ವತಿರಮಣನಾ ನೋಡಿದೆನು | ನೋಡಿದೆನು | ಪರ್ವತ ಮಲ್ಲೇಶನಾ 1 ಆಟವಾಡುತ ಪಾಟ ಪಾಡುತ | ಕೋಟಿ ಜನರ ಸಹಿತಾಗಿ ಸಾಟಿಯಿಲ್ಲದ ಪರ್ವತ | ನಾಗಾ ಲೋಟಿಯನೆ ನಾ ನೋಡಿದೆ 2 ಅಲ್ಲಿದ್ದ ಜನರ ಸಹಿತಾಗಿ ಪೆದ್ದ ಚೆರುವನ್ನೆದಾಟಿದೆ | ಪುಟ್ಟ ಬೆಟ್ಟಗಳೇರಿ ಇಳಿಯುತ ಕೃಷ್ಣಧ್ಯಾನವ ಮಾಡುತ ದಿಟ್ಟ ಮಲ್ಲಿಕಾರ್ಜುನನ ಮನ ಮುಟ್ಟಿ ಸ್ನರಣೆಯ ಮಾಡುತ 3 ಶ್ರೀಭೌಮನ ಕೊಳ್ಳ ನೇಮದಿಂದಲಿ ದಾಟಿದೆ4 ಆ ಶೈಲ ಕೈಲಾಸ ಧಾಮರೆ | ಸೋಂಪಿನಿಂದಲಿ ಬಂದೆನೂ ಸಾಕ್ಷಿಗಣಪಗೆ ಕೈಯ ಮುಗಿದೂ | ಶ್ರೀ ಶೈಲಶಿಖರವ ಕಂಡೆನು5 ಭಂಗಾರ ಗೋಪುರದ ಮ್ಯಾಲೆ | ಶೃಂಗಾರವನು ನಾ ನೋಡಿದೆ ನಂದಿ ಭೃಂಗಿ ಮೊದಲು ಮಾಡಿ ಸಕಲ ತೀರ್ಥವ ನೋಡಿದೆ6 ಅಲ್ಲಿ ಸ್ನಾನವ ಮಾಡಿನಾನು | ಬಲ್ಲಿದನ ಬಲದಿಂದಲಿ ಎಲ್ಲ ಫಲ ಪುಷ್ಪಧರಿಸಿದ ಮಲ್ಲಿಕಾರ್ಜುನನ ನೋಡಿದೆ 7 ಪಂಚಾಮೃತವ ಮಾಡಿನಾನು | ಸಂಚಿತಾಗಮ ಕರ್ಮವು ವಂಚನಿಲ್ಲದೆ ಕರೆದು | ನಿಶ್ಚಿಂತೆ ಮನವನು ಮಾಡಿದೆ 8 ಜನಿತ ಪಾತಾಳಗಂಗಿ ಉದಕವು ತಂದು ಗಂಗಾಧರಗೆ ಎರೆದು ನಾನು | ಕಂಗಳಿಂದಲಿ ನೋಡಿದೆ 9 ಥೂಪ-ದೀಪ-ನೈವೇದ್ಯದಾರುತಿ | ಅನೇಕ ಭಕ್ತಿಲಿ ಮಾಡಿದೆ ಪ್ರೀತಿಯ ತೋರೆಂದು ಶಿವಗೆ | ಪ್ರೀತಿಲಿ ಕರಮುಗಿದೆನು 10 ಮುದ್ದು ಕೋಟಿಲಿಂಗಗೆ ನಾನು | ವಿಧ್ಯುಕ್ತದಿ ನಮಿಸಿದೆ ವೃದ್ಧ ಮಲ್ಲೇಶ್ವರನ ನೋಡಿ | ಅಲ್ಲಿದ್ದದೇವರ ಭಜಿಸಿದೆ 11 ಅಮರರಿಂದರ್ಚಿಸಿಗೊಂಬ | ಭ್ರಮರಾಂಬನ ನೋಡಿದೆ ಭ್ರಮೆಯು ಬ್ಯಾಡೆಂದು ಸಂಸಾರದ | ಬ್ಯಾಗದಿಂದಲಿ ಬೇಡಿದೆ 12 ಥಟ್ಟನೇ ಪಂಚಾ ಮಠವನೋಡಿ | ಅಟಕೇಶ್ವರಕೆ ಬಂದೆನು ಶಿಖರೇಶ್ವರನ ದರ್ಶನ ಮಾಡಿ | ಹಾಟಕೇಶ ಪುರ ನೋಡಿದೆ13 ಭಾರತಿಯ ಶೈಲಿ ವಿಸ್ತಾರ ಪತ್ರಿ ಪುಷ್ಪಗಳ ಫಲಗಳ ನಾರಸಿಂಹ ವಿಠಲಗರ್ಪಿಸಿ | ಧಾರೆ ಎರೆದು ಬಂದೆನು 14
--------------
ಓರಬಾಯಿ ಲಕ್ಷ್ಮೀದೇವಮ್ಮ
ಪಾಲಿಸೆನ್ನೆ ಜೀವರೋತ್ತಮ ಪ ರಾಮದೂತನೆನಿಸಿಕೊಂಡ್ಯೋ ನೀ ರಾಕ್ಷಸರ ವನವನೆಲ್ಲ ಕೆಡಿಸಿ ಬಂದ್ಯೋ ನೀ ಭೂಮಿಪುತ್ರಿಗೆ ಮುದ್ರೆಯಿತ್ತು ಜಗತ್ತಿಗೆಲ್ಲ ಹರುಷವಿತ್ತು ಪ್ರಖ್ಯಾತನಾದ್ಯೋ ನೀ 1 ಗೋಪಿಸುತನ ಪಾದಪೂಜಿಸಿ ಗದೆಯ ಧರಿಸಿ ಕೌರವಕುಲವ ಸವರಿದ್ಯೋ ನೀ ದ್ರೌಪದಿಯ ಮೊರೆಯ ಕೇಳಿ ಕಷ್ಟವೆಲ್ಲ ಬಿಡಿಸಿ ಭೀಮರೂಪನೆನಿಸಿದ್ಯೋ ನೀ 2 ಮದ್ಯಗೇಹದಲ್ಲಿ ಜನಿಸಿ ಬಾಲ್ಯತನದ ಮಷ್ಕರಿಯ ರೂಪಗೊಂಡ್ಯೋ ನೀ ವೇದ ವಿಠಲವ್ಯಾಸದಾಸನಾಗಿ ಭಾಷ್ಯವನೋದಿ ಸನ್ಮುದದಿಂದ ಸಂತೆಬಿದನೂರಿನಲ್ಲಿ ನಿಂತ್ಯೋ ನೀ 3
--------------
ಬಡಣ್ಣಯ್ಯಾಚಾರ್ಯರು
ಪುರಾಣವಿಷಯ ಶ್ರೀವೆಂಕಟೇಶ ಕಲ್ಯಾಣ ಇನ್ನೆಂದಿಗೋ ನಿನ್ನದರುಶನ ಶೇಷಾದ್ರಿವಾಸ ಪ ಪನ್ನಂಗಶಯನ ಪ್ರಸನ್ನರ ಪಾಲಿಪ ಘನ್ನಮಹಿಮ ನೀನೆನ್ನನುದ್ಧರಿಸೂಅ.ಪ ವರ ಸುರಮುನಿಗಳ ವೃಂದ ನೆರಹಿದ ಯಾಗಗಳಿಂದ ಪರಮಾದರದಿಂದಿರುವ ಸಮಯದಿ ನಾರದ ಮುನಿ ಬಂದೊದಗಿ ನಿಂದ ಇ- ಸುರಮುನಿವಚನದಿ ಭೃಗುಮುನಿವರ ಪೋಗಿ ಹರುಷದಿ ಶ್ರೀಹರಿ ಉರಗಶಯನನಾಗಿ ಹರುಷದಿ ಮುನಿಪಾದ ಕರದಲಿ ಒತ್ತುತ ಕರುಣದಿ ಸಲಹಿದೆ ದುರಿತವ ಹರಿಸಿ ಹರಿಭಕುತರ ಅಘಹರಿಸಿಕಾಯುವಂಥ ಕರುಣಿಗಳುಂಟೇ ಶ್ರೀಹರಿ ಸರ್ವೋತÀ್ತುಮಾ 1 ಸ್ವಾಮಿ ನೀನಿಜಧಾಮವನೇ ತೊರೆದೂ ಸ್ವಾಮಿಕಾಸಾರ ತೀರದಿ ನಿಂದೂ ಧಾಮವನರಸಿ ವಲ್ಮೀಕವನೆ ನೋಡಿ ಸನ್ಮುದವನ್ನೇ ತೋರುತ ಕಮಲ ಭವಶಿವ ತುರುಕರುರೂಪದಿ ಕಾಮಧೇನು ಪಾಲ್ಗರೆಯುತಾ ಈ ಮಹಿಮೆಯನ್ನೇ ಬೀರುತಾ ಭೂಮಿಗೊಡೆಯ ಚೋಳನೃಪಸೇವಕನು ಧೇನುವನ್ನು ತಾ ಹೊಡೆಯಲು ಕಾಮನಯ್ಯ ನೀನೇಳಲು ಭೀಮವಿಕ್ರಮವ ತೋರಲು ಕ್ಷಮಿಸಿದೆ ನೃಪನ ದಯಾಳು ಅಮಿತ ಸುಗುಣಪೂರ್ಣ ಅಜರಾಮರಣ ನೀ ಮಸ್ತಕಸ್ಪೋಟನ ವ್ಯಾಜವ ತೋರಿ ಪ್ರೇಮದಿ ಗುರುಪೇಳ್ದೌಷಧಕಾಗಿ ನೀ ಮೋಹವ ತೋರಿದೆ ವಿಡಂಬನಮೂರ್ತೇ 2 ಮಾಯಾರಮಣನೆ ಜೀಯಾ ಕಾಯುವೆ ಜೀವನಿಕಾಯಾ ತೋಯಜಾಂಬಕ ಹಯವನೇರಿ ಭರದಿ ತಿರುಗಿತಿರುಗೀ ವನವನೆÀಲ್ಲ ಮೃಗನೆವನದಿ ನಿಂದು ನೋಡಿದೇ ಪ್ರಿಯಸಖಿಯರ ಕೂಡಿ ಪದುಮಾವತಿಯು ತಾ ಹಯದಿ ಕುಳಿತ ನಿನ್ನ ನೋಡಲು ಪ್ರಿಯಳಿವಳೆನಗೆಂದು ಯೋಚಿಸಿ ಕಾಯಜಪಿತ ನಿನ್ನ ಹಯವನೆ ಕಳಕೊಂಡು ಮಾಯದಿಂದ ನೀ ಮಲಗಿದೆ ತೋಯಜಮುಖಿಯಳ ಬೇಡಿದೇ ಆ ಯುವತಿಯನ್ನೇ ಸ್ಮರಿಸುತಾ ಶ್ರೀಯರಸನೆ ನೀನು ಸ್ತ್ರೀರೂಪದಿ ಹೋಗಿ ಶ್ರೀಯಾಗಿಹಳಿನ್ನು ಶ್ರೀಹರಿಗೀಯಲು ಶ್ರೇಯವೆಂದು ಆಕಾಶನನೊಪ್ಪಿಸಿ ತಾಯಿಯಭೀಷ್ಟವನಿತ್ತೆ ಸ್ವರಮಣಾ 3 ಸಕಲಲೋಕೈಕನಾಥಾ ಭಕುತರಭೀಷ್ಟಪ್ರದಾತಾ ಭಕುತನಾದ ಆಕಾಶನೃಪತಿಯು ಬಕುಳೆ ಮಾ- ತ ಕೇಳಿ ಅಭಯವಿತ್ತು ಮನ್ನಿಸಿ ಪದುಮಾವತಿಯ ಪರಿಣಯ ಶುಕರ ಸನ್ಮುಖಹಲ್ಲಿ ಅಕಳಂಕ ಮಹಿಮ- ಗೆ ಕೊಟ್ಟನು ತಾ ಲಗ್ನಪತ್ರಿಕಾ ಸ್ವೀಕರಿಸುವದೀ ಕನ್ನಿಕಾ ಈ ಕಾರ್ಯಕೆ ನೀವೆ ಪ್ರೇ ಸಕಲಸಾಧನವಿಲ್ಲಿನ್ನು ಲೋಕೇಶಗರುಹಬೇಕಿನ್ನು ಲೋಕಪತಿಯೆ ಸುರಕೋಟಿಗಳಿಂದಲಿ ಈ ಕುವಲಯದಿ ನಿನ್ನಯ ಪರಿಣಯವೆಸಗಲು ಭಕುತಜನಪ್ರಿಯ ಶ್ರೀವತ್ಸಾಂಕಿತ 4 ಖಗವರವಾಹನ ದೇವಾ ಅಗಣಿತಮಹಿಮ ಗೋಮಯನೆನಿಸಿ ಸುರರ ಪೊರೆಯುತಾ ಅಗಣಿತ ಸುರಗಣ ಕಿನ್ನರರು ಸಾಧ್ಯರು ತರು ಫಲ ಖಗಮೃಗ ರೂಪವ ಬಗೆಬಗೆ ಇಹೆ ಪೊಗಳಲಳವೇ ಗಿರಿವರವು ಹಗಲು ಇರುಳು ಭಗವಂತನೆ ನಿನ್ನನ್ನು ಪೊಗಳುತಿಹರು ನಿನ್ನ ಭಕುತರು ಮೊಗದಲಿ ನಿನ್ನ ದಾಸರು ಗೋವಿಂದ ಮುಕುಂದ ಎನ್ನುತಾ ಯುಗ ಯುಗದೊಳು ನೀನಗದೊಳು ನೆಲಸಿಹೆ ಜಗದ ದೇವ ರಾಜಿಸುವವನಾಗಿಹೆ ಮಿಗಿಲೆನಿಸಿದ ಶ್ರೀ ವೆಂಕಟೇಶಾ ಸದ್ಗುಣ ಸಚ್ಚಿದಾನಂದ ಮುಕುಂದ ಗೋವಿಂದಾ 5
--------------
ಉರಗಾದ್ರಿವಾಸವಿಠಲದಾಸರು
ಪ್ರಥಮ ವಚನ ಕಾಂತಿಯಿಂದಿರುವ | ಚಕ್ರ ಪದುಮ ಗದೆ | ಅದರೊಳಗೆ ಬಿದ್ದಿರುವ ಪರಮಪವಿತ್ರ ತ್ಯುಬುಗಳ ತೆಗೆದು | ನೇತ್ರದೊಳಗೊತ್ತಿ | ಪರಿಮಳವಾದ ಗಂಧಗಳಿಂದ ಅಲಂಕೃತ | ಸಿರಿದೇವಿ ವರದೊಡೆಯ ಮೇಲಿದ್ದು | ಕರಕಮಲದಲೊತ್ತುವ | ದಿನವೆ ಪರಮ ಪುಣ್ಯೋದಯ ಪ ಪಾದ | ಸರಸೀರುಹ ಸರಸದಿಂ ಕೊಂಡಾಡಿ | ನೆರಳಿ ಮರಳೀ ಸೌಖ್ಯದಾನಂದ | ಶರಧಿಯೊಳು ಮುಣುಗಿ ಮುಣುಗಿ ಏಳುತ | ಸೌಖ್ಯದಾನಂದ ಭಕ್ತಿಭಾವಗಳಿಂದ ಕರುಣಾಳು ಕೃಷ್ಣ ತ್ವರಿತದಲಿ ತನ್ನ ಸೇವಕ ಜನರೊಳಗೆ | ಸೇರಿಪ್ಪ ನಾ ಅರಿಯನು ನಾನೊಂದು ಸ್ತೋತ್ರ ಮಾಡುವದಕ್ಕೆ | ವರವ್ರಜ ತರುಣಿಯರು ಏನು ಪುಣ್ಯವ ಮಾಡಿದರೊ | ಸರುವದಾ ಹರಿಯನ್ನು ಕಾಣುವರು ಕಂಗಳಲಿ | ಪರಿಹಾಸ್ಯ ನುಡಿಯಲ್ಲ | ಪರಮ ಪವಿತ್ರರಿಗೆ ದೊರೆ | ಸಿರಿ ವಿಜಯವಿಠ್ಠಲನು | ಕರವಿಡಿದು ಎನ್ನಭೀಷ್ಟವನಿತ್ತು | ಪರಿಪಾಲಿಸಬೇಕೆಂದು ಭಕ್ತ ಕೇಳಿದನು 1 ದ್ವಿತೀಯ ವಚನ ಜಲಜನಾಭನÀ ರಥದ ದಡದ ಮೇಲೆ ನಿಲ್ಲಿಸಿ | ಜಲದೊಳಗೆ ತಾ ಮುಳುಗಿ ಅಕ್ರೂರ ಕಣ್ಣು ತೆರೆಯೆ | ಕಲುಷವರ್ಜಿತನಾದ ಕೃಷ್ಣ | ಹಲಧರನ ಸಹ ಮೇಳ ಸಂಭ್ರಮದಿ | ಜಲದೊಳಗೆ ತಾ ಕಂಡು | ನಾ ಪೇಳಿದ ಮಾತು ನಡಿಸಿ | ಬಲವಂತದಲಿ ಬಿದ್ದ ಭವರೋಗ ವೈದ್ಯನ ಮಾತೆ | ಲಲನಾಮಣಿಗೆ ಏನು ಹೇಳುವೆನು | ಸುಲಭವಾಗಿ ಎಮಗೆ ಅಭೀಷ್ಟಪ್ರದವಿದು | ಎಂದೆನುತ ತಂದೆ ನಂದಗೋಪನು | ಯೋಚಿಸಿ ಮನದಲಿ ಚಿಂತೆಯಗೊಂಡು | ಹನುಮೇಶ ವನಜಾಕ್ಷ | ಘನಮಹಿಮ ಎನ್ನ ಮನದ ಚಿಂತೆಯನು ಹನನವ ಮಾಡಿ ಎನ್ನ ಕೈಪಿಡಿಯಲಾಗದೆ ಈಗ ಎನುತ | ಮೇಲೇಳೆ ಸನಕ ಸನಂದನ ಸನತ್ಕುಮಾರ ಸಹ | ವನಜ ಸಂಭವ ಜನಕ ವೈಕುಂಠಪತಿ ಕೃಷ್ಣ | ಕನಕ ರಥದ ಮೇಲೆ ನಿಂತಿದ್ದು ತಾ ಕಂಡು | ಕರವೆರಡು ಜೋಡಿಸಿ | ಭರದಿ ಭಕ್ತಿಯಗೊಂಡು | ನರಜನ್ಮ ಹುಳು ನಿನ್ನ ಮಹಿಮೆಗಳ ಅರಿಯದೆ | ಜಲದೊಳಗೆ ನೀ ಬಿದ್ದಿ ಎನುತಲೀ ಯೋಚಿಸಿದೆ | ಚರಣದ ಮಹಿಮೆಗಳ | ಮರಣದಲಿ ಅಜಮಿಳಗೆ ದಯಮಾಡ ಬೇಕೈ | ಅರ್ಭಕ ಪ್ರಹ್ಲಾದ ನಿಜಮುನಿ ಶುಕಾಚಾರ್ಯರಂತೆ | ಅಪ್ರಾಕೃತ ಅಕಲಂಕ ಚರಿತ ಅಮರೇಂದ್ರ ವಂದಿತ | ಪಾಲಾ ವಿಜಯನ ರಥವನ್ನು ಸಾರಥಿಯಾಗಿ ದಯಾಸಮುದ್ರ ವಿಜಯವಿಠ್ಠಲನೇ2 ತೃತೀಯ ವಚನ ಅರವಿಂದನಾಭ ಕೃಷ್ಣ ಅಖಿಲಜನ ಪರಿಪಾಲ | ಕೃಪಾ ಸಮುದ್ರ | ಕಳತ್ರ | ಪರಿಪಾಲಿಸಬೇಕೆನ್ನ | ಪಾವನ ಚರಿತ್ರ | ಸುರಪತಿಗೆ ಅಸುರರ ಬಲನೀಗಿ ಆ | ವಿರಂಚಿ ಬಳಿಗೆ | ಶರಣೆಂದು ವರವೊಂದು ಕೇಳಿದೆ ವೈಕುಂಠಪತಿ ಕೃಷ್ಣ | ಕಂಟಕ ಕಂಸಾದಿಗಳ ಗೆಲಿದು | ಪಾದ | ಸರಸಿಜದೊಳು ಚಿತ್ತವಿರುವಂದದಲಿ | ಪರಮ ದಯಾಕರ ನಿನ್ನ ಮಹಾ ಮಹಿಮೆಗಳ | ಗರ್ವಿಷ್ಠನಾಗಿ ಮಲಗಿದವನಲ್ಲಿ | ಕೇಳ್ವ | ತ್ವರಿತದಲಿ ದಯಮಾಡಿ | ಭರದಿ ಪಾಲಿಸಬೇಕೆನ್ನ | ಭಕ್ತಜನ ವತ್ಸಲನೆ ಎನಲಾ ಮಾತಿಗೆ | ಇನ ಇಂದಿರೆ ಅರಸ | ಹನುಮೇಶ ಕನಕಮಯವಾದ ಪೀತಾಂಬರ | ಜನಿವಾರ | ಅನೇಕ ಅತರಿಗಳ ಗೆಲಿವ ಕನಕಮಯ | ಕಿರೀಟ ಚತುರ್ಭುಜ | ಕಟಕ ರತ್ನಮಯದುಂ | ಗುರ ವಾಹನ ಚಕ್ರವರ್ತಿಗೆ ತನ್ನ ನಿಜರೂಪವ3 ಚತುರ್ಥ ವಚನ ಆನಂದತೀರ್ಥ ಮುನಿವಂದ್ಯ | ಜ್ಞಾನಿಗಳ ವಲ್ಲಭ | ದೀನಜನ ಮಂದಾರ ನಾ | ನಿನ್ನ ಮೊರೆಹೊಕ್ಕು ಧೇನಿಸಲರಿಯೆ | ಆನೆಯನು ಆದರದಿ ಕಾಯ್ದ ಶ್ರೀನಿವಾಸ | ಸಾನುರಾಗದಿ ಪ್ರಹ್ಲಾದಗೊಲಿದ ಶ್ರೀನಿಧಿ ನರಸಿಂಹ | ಅನಾದಿ ಕಾಲದಿ ತಂದೆ ಬಂಧು ಬಳಗವು ಎಂದೆ | ಮಾನಿನಿ ದ್ರೌಪದಿ ಮೊರೆ ಇಟ್ಟಾಗ ಧ್ವನಿ ಕೇಳಿ | ಮಣಿ ಲಕುಮಿಗ್ಹೇಳದೆ | ಆನಂದಮಯನು ಅಕ್ಷಯವಿತ್ತು ಆಗ ಪರಿಪಾಲಿಸಿದಿ ಅದರಂತೆ | ಮಾನಹೀನನೆಂದು ನಿರಾಕರಿಸದೆ | ಧ್ಯಾನಕ್ಕೆ ಒಳಗಾಗಿ | ಮೌನಿಜನರನು ಕಾವ ಕ್ಷೋಣೀಶ ಮಾಣಿಕ್ಯ ಮಕುಟ ಕುಂಡಲಧರ | ಸಿರಿ ತುಳಸಿ | ಪರಿಮಳ ಸಿರಿಗಂಧ ಉದರದಲಿ ಬೆಳಗುವ | ಉಪೇಂದ್ರ ನಾಮ ಕೃಷ್ಣ ಉರಗೇಶಶಯನಾ | ನಿನ್ನ ದಾಸರದಾಸನೆಂದೆನುತ | ಕಾಣಸಿ ನಿನ್ನ ನಿಜರೂಪ | ನಿನ್ನ ಸ್ತೋತ್ರ ಮಾಡುವ ಭಕ್ತಗಣದೊಳಗೆ ನಿಲ್ಲಿಸೊ | ನಿನ್ನ ಮತ್ತೊಂದು ಪದಾರ್ಥ ಕೇಳುವವನಲ್ಲ | ತೀರ್ಥ ತೀರ್ಥಗಳಲ್ಲಿ ಮುಳುಗಿ ಬಂದವನಲ್ಲ | ಸಾರ್ಥಕವಾದಂಥ ಕೃತ್ಯ ಮಾಡುವನಲ್ಲ | ಸಾಧುಜನಸಂಗದಲಿ ಸೇರಿ ಪಾಡಿದವನಲ್ಲ | ಈ ನುಡಿ ಸತ್ಯವೇ ಲೇಸು ಪುಸಿಯಲ್ಲ | ಮಲ್ಲಮಲ್ಲರ ಗೆಲಿದ ಮಾಧವನು ನೀನಲ್ಲದೆ ಇನ್ನೊಂದು ದೈವವಿಲ್ಲದ ಮಧ್ವ ಮುನಿ ಹೃದಯಾಟ್ಟ ಪೀಠದೊಳು ವಾಸ ಮಾಡುವ ದೊರೆ ಉದ್ಧರಿಸಬೇಕೆನ್ನ ವಿಜಯವಿಠ್ಠಲನೆ 4 ಐದನೇ ವಚನ ಕರಿಯಬೇಕೆನ್ನ ಹಿರಿಯರೂ | ಇಡಲಾಗದ ಮನಸು ಸರ್ವದಾ ನಿನ್ನ | ಚರಣಾರವಿಂದ ದ್ವಂದ್ವದಲಿ | ಭರದಿಂದ ಮುದ್ರೆಯನಿಟ್ಟ | ತುತಿ ಮಾಡುವೆ ನಿನ್ನ | ಮುಚಕುಂದ ವರದ ನಿತ್ಯಾನಂದ ವಿಗ್ರಹ | ಸರಸಿರುಹಾಕ್ಷ ಸಜ್ಜನ ಪರಿಪಾಲಾ | ಪೂಜ್ಯ ಅವಗುಣ ವರ್ಜ ಅಕಳಂತ | ಮಹಾನುಭಾವ ಮಧ್ವೇಶ | ಈ ನುಡಿಯು ಪುಸಿಯಲ್ಲ | ಕರ ಪಿಡಿದು ಕಾಯ್ವರನ ಕಾಣೆ ಚರಣಾವಿಂದವನು ಭಜಿಪ ವೀಣೆ | ಈ ಕ್ಷೋಣಿಯೊಳಗೆನ್ನ ನರಜನ್ಮವು ಬಾರದೆ ಪರಿಪಾಲಿಸಬೇಕೆನ್ನ | ಪರಮ ಪವಿತ್ರ ಪಂಕೇರುಹನೇತ್ರ ಸಂಕಟಗಳ ಕಳೆದು | ಸೌಖ್ಯಪದ ವೈಕುಂಠದೊಳಗೆನ್ನ ನಿಲ್ಲಿಸೊ | ಭರದಿಂದ ನಿನ್ನ ನಾಮದ ಭಂಡಾರ ಕದ್ದ ಕಳ್ಳನೆನೆಸಿ | ಅರವಿಂದನಾಭ ನಿನ್ನ ಅಮರನೇ ವೈಕುಂಠ | ಕಾರಾಗೃಹದೊಳಗೆ ವಾಸ ಮಾಡಿಸು ದೇವ ಕೋಟಿ | ವರುಷಕೆ ಇದುವೆ ಎನಗೆ ಹರುಷ ಆನಂದಮಯ | ಇನ್ನೋರ್ವನಿಲ್ಲ ವಿಜಯವಿಠ್ಠಲನೇ 5
--------------
ವಿಜಯದಾಸ
ಫಣಿರಾಜಶಯನ ರುಕ್ಮಿಣೀ ದೇವಿಯೊಡಗೂಡಿ ಕುಳಿತಿರ್ದು ಸತಿಯೊಡನೆ ಅಣಕವಾಡಿದನು ಇನಿತೆಂದು 1 243 ಹೇ ರಾಜಕನ್ನಿಕೆ ಭೂರಮಣ ನಾನಲ್ಲ ನಾರದನ ನುಡಿಗೆ ನಳಿನಾಕ್ಷಿ 2 244 ಶಿಶುಪಾಲ ಮೊದಲಾದ ವಸುಧೆಪಾಲರ ಬಿಟ್ಟು ಸುಕುಮಾರಿ ಎನಲು ಪರ ವಶಳಾದಳಾಗ ಮಹಲಕ್ಷ್ಮಿ 3 245 ಈ ಮಾತ ಕೇಳಿ ಕೈ ಚಾಮರವನೀಡಾಡಿ ಭುಗಿಲೆಂದು ಮಲಗಿದಾ ಕಾಮಿನಿಯ ಕಂಡ ಕಮಲಾಕ್ಷ 4 246 ಕಂಗೆಟ್ಟಳೆಂದು ತನ್ನ ಅಂಗನೆಯ ಬಿಗಿದಪ್ಪಿ ಮುಂಗುರುಳ ತಿದ್ದಿ ಮುದ್ದಿಸಿ | ಮುದ್ದಿಸಿ ಮಾತಾಡ್ಡ ಕಂಗಳಶ್ರುಗಳ ಒರೆಸುತ್ತ5 247 ಸಲಿಗೆ ಮಾತಿನ ಬಗೆಯ ತಿಳಿಯದಲೆ ಹೀಗೆ ಚಂ ಚಲವನೈದುವರೆ ಚಪಲಾಕ್ಷಿ | ಚಪಲಾಕ್ಷಿ ಏಳೆಂದು ತÀಲೆಯ ಮೇಲಿಟ್ಟ ಕರಪದ್ಮ 6 248 ಶ್ರೀ ದೇವಿ ನಿನ್ನೊಳು ವಿನೋದ ಮಾಡಲಿಷ್ಟು ವಿ ಅನುದಿನ | ಅನುದಿನದಿ ಸ್ಮರಿಸುವರ ಕಾದುಕೊಂಡಿಹೆನು ಬಳಿಯಲ್ಲಿ 7 249 ಹಿಗ್ಗಿದಳು ಮನದಿ ಸೌಭಾಗ್ಯ ಭೂಮಿನಿಯು ಅಪ ವರ್ಗದನ ನುಡಿಗೆ ಹರುಷಾದಿ | ಹರುಷದಿಂದಲಿ ಪಾದ ಯುಗ್ಮಕೆರಗಿದಳು ಇನಿತೆಂದು 8 250 ಜಗದೇಕ ಮಾತೆ ಕೈ ಮುಗಿದು ಲಜ್ಜೆಯಲಾಗ ಮಾತಾಡಿದಳು ಪತಿಯ ಮೊಗವ ನೋಡುತಲಿ ನಳಿನಾಕ್ಷಿ 9 251 ಪರಿಪೂರ್ಣಕಾಮ ನಿನ್ನರಸಿ ನಾನಹುದು ಸ್ವೀ ಕರಿಸಿದೆಯೊ ಎನ್ನ ಸತಿಯೆಂದು | ಸತಿಯೆಂದ ಕಾರಣಾ ಕ್ಷರಳೆನಿಸಿಕೊಂಡೆ ಶ್ರುತಿಯಿಂದ10 252 ಭುವನಾಧಿಪತಿ ನೀನು ಅವಿಯೋಗಿ ನಿನಗಾನು ನೃಪರ ಪತಿಯೆಂದು | ಪತಿಯೆಂದು ಬಗೆವೆನೇ ಸವಿ ಮಾತಿದಲ್ಲ ಸರ್ವಜ್ಞ 11 253 ಭಗವಂತ ನೀನು ದುರ್ಭಗ ದೇಹಗತರವರು ತ್ರಿಗುಣವರ್ಜಿತವು ತವರೂಪ | ತವರೂಪ ಗುಣಗಳನು ಪೊಗಳಲೆನ್ನಳವೆ ಪರಮಾತ್ಮ12 254 ಭಾನು ತನ್ನಯ ಕಿರಣ ಪಾಣಿಗಳ ದೆಸೆಯಿಂದ ಪಾನೀಯಜಗಳನರಳಿಸಿ | ಆರಳಿಸಿ ಗಂಧ ಆ ಘ್ರಾಣಿಸಿದಂತೆ ಗ್ರಹಿಸೀದಿ13 255 ಬೈದವನ ಕುತ್ತಿಗೆಯ ಕೊಯ್ದು ಅಂಧಂತಮಸ್ಸಿ ಪರಿಪಂಥಿ ನೃಪರನ್ನು ಐದುವೆನೆ ನಿನ್ನ ಹೊರತಾಗಿ 14 256 ನಿಮ್ಮನುಗ್ರಹದಿಂದ ಬ್ರಹ್ಮರುದ್ರಾದಿಗಳ ನಿರ್ಮಿಸಿ ಸಲಹಿ ಸಂಹಾರ | ಸಂಹಾರ ಮಾಡುವೆನು ದುರ್ಮದಾಂಧರನಾ ಬಗೆವೇನೆ 15 257 ಮಂಜುಳೋಕ್ತಿಯ ಕೇಳಿ ಅಂಜಲ್ಯಾತಕೆಂದು ನವ ಕಂಜಲೋಚನೆಯ ಬಿಗಿದಪ್ಪಿ | ಬಿಗಿದಪ್ಪಿ ಮುದ್ದಿಸಿದ ಧ ನಂಜಯ ಪ್ರಿಯನು ಸಥೆಯಿಂದ16 258 ನಿನಗೆ ಎನ್ನಲಿ ಭಕುತಿ ಎನಿತಿಹುದೊ ಕಂಡೆ ಎಂದೆಂದು ಇಹುದು ಇದ ಕನುಮಾನವಿಲ್ಲ ವನಜಾಕ್ಷಿ 17 259 ದೋಷವರ್ಜಿತ ರುಕ್ಮಿಣೀಶನ ವಿಲಾಸ ತೋಷದಲಿ ಕೇಳಿ ಪಠಿಸಿದ | ಪಠಿಸಿದಂಥವರ ಅಭಿ ಲಾಷೆ ಪೊರೈಸಿ ಸಲಹೂವ 18 260 ನೀತಜನಕ ಶ್ರೀ ಜಗನ್ನಾಥ ವಿಠ್ಠಲ ಜಗ ನ್ಮಾತೆಯೆನಿಸುವಳು ಮಹಲಕ್ಷ್ಮಿ | ಮಹಲಕ್ಷ್ಮಿ ಸುತ ಬ್ರಹ್ಮ ಪಾತ್ರನೆನಿಸುವ ಗುರು ರುದ್ರ 19
--------------
ಜಗನ್ನಾಥದಾಸರು
ಬೃಂದಾವನಿ ಜನನಿ ವಂದಿಸುವೆ ಸತತ ಜ ಲಂಧರನ ರಾಣಿ ಕಲ್ಯಾಣಿ | ಕಲ್ಯಾಣಿ ಶ್ರೀ ತುಲಸಿ ನಿಜ ಮಂದಿರೆ ಎನಗೆ ದಯವಾಗೆ 1 ಜಲಜಾಕ್ಷನಮಲ ಕಜ್ಜಲ ಬಿಂದು ಪೀಯೂಷ ಕಲಶದಲಿ ಬೀಳೆ ಜನಿಸಿದಿ | ಜನಿಸಿದಿ ಹರಿಯಿಂದ ಶ್ರೀ ತುಲಸಿ ನೀನೆಂದು ಕರೆಸೀದಿ2 ಶ್ರೀ ತರುಣಿವಲ್ಲಭನ ಪ್ರೀತಿ ವಿಷಯಳೆ ನಿನ್ನ ಕೈ ಮುಗಿವೆ ಎನ್ನಯ ಮಹ ಪಾತಕವ ಕಳೆದು ಪೊರೆಯಮ್ಮ 3 ತುಲಸಿ ನಿನ್ನಡಿಗೆ ನಾ ತಲೆವಾಗಿ ಬಿನ್ನೈಪೆ ಕಲುಷ ಕರ್ಮಗಳ ಎಣಿಸದೆ | ಎಣಿಸದೆ ಸಂಸಾರ ಜಲಧಿಯಿಂದೆಮ್ಮ ಕಡೆ ಹಾಯ್ಸು 4 ದುರಿತ ಈಡಾಡಿದವ ನಿನ್ನ ಕೊಂ ನಿತ್ಯ ಹರಿಪಾದ | ಹರಿಪಾದ ಕಮಲಗಳ ಕೂಡಿಸುವೆ ಸತ್ಯವೆಂದೆಂದು 5 ನಿಂದಿಸಿದವರೆಲ್ಲ ನಿಂದ್ಯರಾಗುವರು ಅಭಿ ವಂದಿಸಿದ ಜನರು ಸುರರಿಂದ | ಸುರರಿಂದ ನರರಿಂದ ವಂದ್ಯರಾಗುವರು ಎಂದೆಂದು 6 ಕಲುಷವರ್ಜಿತ ನಿನ್ನ ದಳಗಳಿಂದಲಿ ಲಕ್ಷ್ಮೀ ಪೂಜಿಪರಿಗೆ ಪರಮಮಂ ಗಳದ ಪದವಿತ್ತು ಸಲಹೂವಿ 7 ಶ್ರೀ ತುಲಸಿದೇವಿ ಮನ್ಮಾತೆ ಲಾಲಿಸು ಜಗ ಎನ್ನ ಹೃತ್ಪದ್ಮದಲಿ ನೀ ತೋರೆ ಕೃಪೆಯಿಂದ 8
--------------
ಜಗನ್ನಾಥದಾಸರು
ಯತಿಕಕ್ಷೆ - ದಾಸಕಕ್ಷೆ ಮುನಿಜನರ ನೆನೆಸಿ ಜನರೂ | ಮುನಿ ಜನರ ನೆನೆಸಿ ಬಿಡ | ದನುದಿನದಲಿ ನಿಮ್ಮ | ಮನ ಮಲಿನ ಪೋಗಿ ಸ | ವನಧಿ ಹರಿವೊಲಿದು | ಘನವಾಗಿ ಪಾಲಿಸುವನು ಪ ವಿಶ್ವ | ಮಿತ್ರ ಮೈತ್ರಾವಾರುಣಿ ಭೃಗು | ವೀತಿ ಹೋತ್ರ ಕಪಿ ಗಾಗ್ರ್ಯ ಗಾಲವ | ಗರ್ಗಗಾರ್ಚಮಾ || ಪತ್ರ ಫಾಲಾಶವಟು | ಶಾಂಡಿಲ್ಯ ಶಕಟ ಸು | ಕೃತಿ ಗೋತ್ರ ಗೌರೀವೀತಹವ್ಯ | ಕಪಿ ಶಂಖಕಟ ಮೈತ್ರಾವರುಣವಾಧುಳಾ || 1 ಉಪಮನ್ಯು ಶಂಕು ಉದ್ದಾಲಕ ಕೌಂಡಿಣ್ಯ | ಅಪುನವಾನ ಅತಿಥಿ ಪಾಂತುಚಾವನ ಚವನ | ಕ | ಶ್ಯಪ ಪೂತಿಮಾಷರೈಭ || ವಿಪುಳ ಜಮದಗ್ನಿ ವಾಲ್ಮಿಕಿ ರೇಭ ಜಾಬಾಲಿ | ಸ್ವಪನ ಸಾತ್ಯಕಿಯು ಸಾಮ್ಯಾಳ ದೇವರತತಿ | ಕಪಿಕುತ್ಸ್ನ ಪೌರಕುತ್ಸಾ 2 ಮುನಿಮಾದ್ರಮ ಶಣಶರ್ಮ ಬಾದರಾಯಣ | ಕನಕ ಕಾತ್ಯಾಯನ ಮಾರ್ಕಾಂಡ್ಯ ಮಾಂಡವ್ಯ | ತೃಣಬಿಂದು ಭಾಷ್ಕಾಳಾಖ್ಯ || ಪನಸ ಅಘಮರ್ಷಣ ಪ್ರಮಧ ಪ್ರಾಗಾಧ ಜೀ | ವನಯಾಜ್ಞವಲ್ಕ್ಯ ಜಿವಂತಿ ಮಾತಂಗ ಶೋ | ದನ ಧೌಮ್ಯ ಆರ್ಯ ರುಚಿರಾ || 3 ವಾಸಿಷ್ಟ ಶ್ರೀವತ್ಸ ಲೋಹಿತಾಷ್ಯಕಶರ್ವ | ಕರ್ದಮ ಮರೀಚಿ ಪಾ | ಬೇಷಿ ಜಾವಾಯುಲಿಕೆಯೂ || ಭೂಷಣೌ ಬಾರ್ಹಸ್ಪತ್ಯದಾಲ್ಭ್ಯ ಸುಯಜ್ಞಾಜ್ಞಿ | ವೇಶ್ಯ ಮುಖ ಸಪರಿಧಿಸಾಲಂಕಾಯನಾ ಧರ್ಮ | ನಾಶಯ ದೇವಶ್ರವತಾ ||4 ಶ್ರವ ಪೂರ್ಣವಾಹಕ ಕೃತು ಅಂಗಿರಸಾಂಗಿರಾ || ಲವ ಶಮನ ಋಷಿಶೃಂಗ || ಕವಿ ವೇದಶಾಲ ವಿಶಾಲ ಕೌಶಿಕ ಶುಚಿ | ಭುವನ ಉರ್ಜಯನ ಮಾಹಋಷಿಭಹುದ ಸಂ | ಭವಸ್ತಂಭ ಕಿರಾಠಿ ಕಪಿಸೇನ ಶಾಂಡಿಲ್ಯ | ಪವನದಮ ಬೀಜವಾಪಿ || 5 ಉಲಿಖಲು ಧನಂಜಯ ವಾಲಿಖ್ಯಮಾಯ | ಕಲಿಕಿ ಸೃಂಗಿ ಮಧು ಚಂದವಿತನು ಬಹು | ಶರಭ || ಪುಲಸ್ತ್ಯ ದಧೀಚಿ ಕಥಾಸೂನು ಸೇವಾಸ್ಯ ಮಾ | ದ್ಗಲ ವಿಷ್ಣು ತ್ರಿಧಕುಕ್ಷಿ ಶುಕ್ಷ ಮನತಂತು | ಬಲವೀರ್ಯ ಬಬ್ರಾಮೇನೂ6 ಅಪವರ್ಗ ಹಿರಣ್ಯನಾಭ ಅ | ದ್ಭುತ ಅಜಾಮೀಡ ಪರ್ವತ ಶ್ವೇತಕೇತಮಾಹ || ಸತ್ಯವ್ರತ ಶ್ರ್ರುತಿದೃತಿ ಆಯತಾ || ಶ್ರುತಿಕೀರ್ತಿ ಸುಪ್ರಭಾವತ್ಸ ಮೃತಾಂಡ ಸೂ | ಕ್ರೋಢ ಕೋಲ ಗೋಬಲ ಮಾತೃಕಾನಂದ || ಕಥನ ಸರ್ವಸ್ಥಂಬವಾ 7 ನೈಧ್ರುವಾ ದೀರ್ಘತಮ ಜಮದಗ್ನಿ ಕಾರುಣಿ | ಸದ್ಮುನಿಕಾಂಡಮಣಿ ಮಾಂಡವ್ಯವಾಚÀಸಕ | ಶಿದ್ಧಿಸನಕಸ ನಂದನಾ || ವಿದ್ಯಾಂಗ ಹವ್ಯರೋಹಿತಶರ್ಮ ಸೂಕರ್ಮ | ಮೇಧ ಮೇಧ ಪ್ರ | ಶುಕ ಬುದ್ಧಿ ಸಮೇಧ ಪೇರ್ಮಿ 8 ಪಂಚ ಪಂಚಾಸಪ್ತ ಅಪ್ಟ ಕಾಲದಲಿ ಪ್ರಾ | ಪಂಚದೊಳು ತೊಡಕದಲೆ ಬುದ್ಧಿ ಚಿತ್ತದೊಳಿಟ್ಟು | ಗಿದ್ದವರ ಕೊಂಚ ಮುನಿಗಳ ಪೇಳಿದೆ || ವಂಚನೆಯಿಲ್ಲದೆ ಸ್ಮರಿಸಿ ಮಧ್ವಮತಪೊಂದಿ | ಸಂಚಿತಾಗಮ ಕಳೆವ ಸರ್ವಸುಖವೀವ ವಿ | ಮಿಂಚಿನಂದದಿ ಪೊಳೆವನು 9
--------------
ವಿಜಯದಾಸ
ರಂಗ ನಿನ್ನಯ ಮುಖ ತೋರಯ್ಯ ಪ ಅರ್ಧರಾತ್ರಿಯಲ್ಲವತರಿಸಿದ್ಯೊ ಹೋಗಿ ಮುದ್ದು ಗೋಪಿಯ ಸುತನೆನಿಸಿದ್ಯೊ ಭದ್ರದೇವಿಯರ ನೀ ಕಳಿಸಿದ್ಯೊ ಬಂ ದಿದ್ದ ಪೂತಣಿಯ ಸಂಹರಿಸಿದ್ಯೊ 1 ವತ್ಸಕಾಯುತಲ್ಹೋಗಿ ವನದೊಳು ಬಂದ ಕಿಚ್ಚು ನುಂಗಿದೆ ನಿನ್ವದನದೊಳು ಸ್ವಚ್ಛಮಾಡಿದಿ ಕಾಳಿಜಲಗಳು ತೋರೆ ಕುಕ್ಷಿಯೊಳಗೆ ತ್ರಿಜಗಂಗಳು 2 ದೇವಕ್ಕಿದೇವಿ ಯಶೋದಾನೆ ವಸು ದೇವ ನಂದ ಬಲರಾಮಗೆ ಎದುರು ಬಾರೋ ಭೂದೇವಿರಮಣನೆ ಭೀಮೇಶ ಕೃಷ್ಣನೆÀ ಶ್ಯಾಮವರಣನೆ3
--------------
ಹರಪನಹಳ್ಳಿಭೀಮವ್ವ
ರಾಗ :ಸಾರಂಗ ಅಷ್ಟತಾಳ ಸಲಹಿಕೊಂಬವರಿಲ್ಲವೋ ವೆಂಕಟರಾಯ ಗೆಲುವ ಪರಿಯ ಕಾಣೆನು ಪ ಛಲವೇಕೋ ನಿನಗಿಷ್ಟು ಹೊಲಬುದಪ್ಪಿದ ಮೇಲೆ ಫಲವಿತ್ತು ಕರುಣದಿ ಕುಲವೃಕ್ಷವನು ಕಾಯೋ ಅ.ಪ ಅರಳಿಯ ವೃಕ್ಷದೊಳು ಆನೆಯ ತಂದು ಸ್ಥಿರವಾಗಿ ಕಟ್ಟಿದಂತೆ ದುರುಳರು ಬಂದೆನ್ನ ಕೊರಳು ಕೊಯ್ದೀಗ ಪರಿ ಇರವ ಕಾಣುತ ಮುಂದೆ 1 ಮಾಡಿದ ಉಪಕಾರವ ಮರೆತು ಮುಂದೆ ಕೇಡನು ನೆನೆವರಿಗೆ ನೋಡಿದೆ ಯಾತಕೆ ಮಾಡದೆ ಶಿಕ್ಷೆಯ ಆಡಿದೆ ನಿನ್ನೊಳು ಬೇಡ ಇನ್ನವರೊಳು 2 ವಾರಿಧಿ ತೀರದಲಿ ನೆಲ್ಲನು ತಂದು ಹಾರಿಸಿ ಬಿತ್ತಿದಂತೆ ಭವ ಘೋರ ಕಾನನದೊಳು ಸೂರೆವೋದೆನು ನಿನ್ನ ಮಾರಿಹೋದೆನು ಎನ್ನ 3 ಒದಗಿದ ನ್ಯಾಯದಲಿ ಇದಿರು ಬಂದು ಕದನವ ಕಟ್ಟುತಲೆ ಬೆದರುಗೊಳಿಸಿ ಎನ್ನ ಸದನಕ್ಕೆ ಮುನಿವುದ ಅದನೆಲ್ಲ ಚರಣದ ಪದುಮಕ್ಕೆ ಅರುಹುವೆ 4 ನೊಂದೆನು ಬಹಳವಾಗಿ ಈ ಭವದ ಸಿಂಧುವ ದಾಟಿ ಹೋಗಿ ಚಂದದಿ ನಿನ್ನಯ ಚರಣಾರವಿಂದವ ಎಂದಿಗೆ ತೋರ್ಪೆಯೊ ವರಾಹತಿಮ್ಮಪ್ಪ 5
--------------
ವರಹತಿಮ್ಮಪ್ಪ
ಲಕ್ಚ್ಮೀದೇವಿ ದೇವೀ ಕಮಲಾಕ್ಷೀ ಭಜೇಹಂ ಸದಾತ್ವಂ ಅಂಬಾ ಪ ಹೃದಯ ಸದನೇ ಮಲ್ಲಿಕಾದಿ ಪುಷ್ಪವದನೇ | ಫುಲ್ಲಲೋಚನೇ | ಸುನಯನೇ | ಬಲ್ಲಿದ ಭಕ್ತಿ ಸಮುದಾಯನೇ | ಕೊಲ್ಲಾಪುರ, ಅವಧಾರಣೇ ಆಹ್ಲಾದಕರಸುವದನೇ, ಕೊಲ್ಲಾಪುರವಾಸಿನೇ | ಶ್ರೀ ಲಕ್ಷ್ಮಿದೇವಿ 1 ಅಕ್ಷಯ ಅಕ್ಷಯ ಫಲ ಪ್ರದಾಯಿನೇ | ರಕ್ಷಮಾಂ ಲಕ್ಷ್ಮಿದೇವಿ 2 ನರಸಿಂಹ ವಿಠಲ ಪ್ರೀಯೇ ನಾರೀಮಣೀ ಹೃದಯ ಸೇವೆ ಹಾರ ದೇಹಾಲಂಕಾರಿಯೇ | ಮಾರಜನನಿ | ಜಯ ಪುರವಾಸಿನೇ ಲಕ್ಷ್ಮೀದೇವಿಯೇ 3
--------------
ಓರಬಾಯಿ ಲಕ್ಷ್ಮೀದೇವಮ್ಮ
ವಚನ ಮನವು ಬಿಲ್ಲನೆ ಮಾಡಿ ತನುವು ಹೆದಿಯನೆ ಕಟ್ಟಿ ಅನುಭವದ ಅಂಬಿನಲಿ ಜನನ ಮರಣದ ಗುರಿಯ ಕೆಡಹಿದಾ ಜ್ಞಾನಸಾಗರ ಗುರುನಾಥನೆಂದು ಸ್ತುತಿಸಿದಾ ಮಹಿಪತಿಯು |
--------------
ಕಾಖಂಡಕಿ ಶ್ರೀ ಮಹಿಪತಿರಾಯರು