ಒಟ್ಟು 930 ಕಡೆಗಳಲ್ಲಿ , 90 ದಾಸರು , 806 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಷ್ಟ ತನುವಿನಲಿ ಹುಟ್ಟಿ ತೊಳಲುವಂಥಎಷ್ಟೆಂದು ತಾಳುವೆನೊ ಶ್ರೀರಂಗ ಪ ಅಷ್ಟರೊಳೆಂದೆನ್ನ ಅವಗುಣವೆಣಿಸದೆ ಕಷ್ಟ ಪಡಿಸುವುದೇನು ಶ್ರೀರಂಗ ಅ ನರಜನ್ಮವನು ಎತ್ತಿ ನರಕದೊಳಗೆ ಸುತ್ತಿಗುರಿ ಗೊತ್ತು ಕಾಣೆನಯ್ಯ ಶ್ರೀರಂಗಪರಮಪಾತಕನಾಗಿ ಹರಿ ನಿಮ್ಮ ಸ್ಮರಣೆಯನುಮರೆದು ಪಾಮರನಾದೆ ಶ್ರೀರಂಗ1 ಮಂದ ದು-ರ್ಮತಿಗೆ ಮರುಳಾದೆನೊ ಶ್ರೀರಂಗಅತುಳ ಪ್ರಪಂಚಕ್ಕೆ ಹಿತನಾಗಿ ದುಷ್ಟ ಸಂ-ಗತಿಯ ನಾನರಿದಿದ್ದೆನೊ ಶ್ರೀರಂಗ 2 ಮಿತಿಮೀರಿ ಮನ ಹರಿ ಪದವ ನೆನೆಯದೆ ಪರಸತಿಯರಿಗಳುಪಿದೆನೊ ಶ್ರೀರಂಗಕೃತಬುದ್ಧಿಯೊಳು ಉನ್ನತನಾಗಿ ತಾನೆರೆದುಸ್ತುತಿ ಮಾಡಿಕೊಂಡಿದ್ದೆನೈ ಶ್ರೀರಂಗ 3 ಆಶಾಪಾಶಗಳೆಂಬ ದೇಹಕ್ಕೆ ಸಿಲ್ಕಿ ಸ-ದ್ವಾಸನೆಯನು ಬಿಟ್ಟೆನು ಶ್ರೀರಂಗಮೋಸದಿಂದಾತ್ಮಘಾತುಕನಾಗಿ ಅಪರಾಧವೇಸೊಂದು ಮಾಡಿದೆನಯ್ಯ ಶ್ರೀರಂಗ 4 ಈಸಲಾರದೆ ಹೊಳೆಯಲಿ ಕಾಸಲಾರದೆ ಒಲೆಯಲಿಸೋಸುತ್ತ ಕುಳಿತಿಹೆನು ಶ್ರೀರಂಗವಾಸುಕಿ ಶಯನ ನೆಲೆಯಾದಿಕೇಶವ ನಿಮ್ಮಾಶ್ರಿತದಾಸರ ದಾಸನಯ್ಯ ಶ್ರೀರಂಗ 5
--------------
ಕನಕದಾಸ
ಕಾಮಾನ ಜನನಿಯೆ ಸೋಮಾನ ಸೋದರಿ ಸಾಮಾಜ ವರದನ ಪ್ರೇಮವ ಕೊಡಿಸಮ್ಮ ಪ ನೇಮಾದಿಂದಲಿ ಹರಿ ನಾಮಾವ ನುಡಿಸುತ ತಾಮಾಸ ಓಡುವಂತೆ ನೀಮಾಡಬೇಕಮ್ಮ ಅ.ಪ ನಿತ್ಯ ತೃಪ್ತಳೆನಿನ್ನ ನಿತ್ಯದಿ ಬೇಡಿಕೊಂಬೆ ಭೃತ್ಯರೊಳಗೆ ಎನ್ನ ಎತ್ತಿ ಸೇರಿಸೆ ತಾಯೆ || ಮತ್ತನಾಗದೆ ಭವದಿ ಉತ್ತುಮನೆನಿಸುತ ಆತ್ಮದಿ ಹರಿ ತೋರಿ ಕೃತಕೃತ್ಯನೆನಿಸಮ್ಮ 1 ದೇಶಕಾಲದಿನೀನು ಶ್ರೀಶಗೆ ಸಮಳಮ್ಮ ನಾಶಮಾಡುತ ದೋಷ ದಾಸಾನು ಎನಿಸಮ್ಮ || ಶ್ವಾಸಾಶೇಷರನೆಲ್ಲ ಲೇಸಾಗಿ ಆಳುವಳೆ ವಾಸುದೇವನಲ್ಲಿ ಆಸೇಯ ನೀಡಮ್ಮ 2 ಶೃತಿಯಲ್ಲಿ ನೀನಿದ್ದು ಸ್ತುತಿಸೀ ಶ್ರೀಹರಿಯನ್ನ ಮತ್ತೆಸೃಜಿಸುವಂತೆ ಎತ್ತಿಗಾನವ ಮಾಳ್ವೆ || ಎತ್ತ ನೋಡಲು ಬಲು ಕತ್ತಲೆಕಣಿ ತಾಯೆ ಸತ್ಯವ ಬಿಡದಂತೆ ಹತ್ತೀಸೆ ಹರಿದಾರಿ3 ಹರಿಯಂತೆ ಅವತಾರ ನಿರುತನೀ ಮಾಡುತ ಪರಿ ರೂಪದಿಂದ ಪರಿಚರಿಯ ನೀಮಾಳ್ವೆ || ಸರ್ವೇಶ ಹರಿಯಿಂದ ಸರ್ವಕಾಲದಿ ಕೂಡಿ ಸರ್ವಕಾರ್ಯವ ಮಾಳ್ವೆ ಸರಿಯಾರೆ ನಿನಗಮ್ಮಾ 4 ಅಕ್ಷರ ರೂಪಳೆ ಈಕ್ಷಿಸುಕರುಣದಿಂದ ತ್ರ್ಯಕ್ಷೇಶ ವಿಧಿಮಾತೆ ಅಕ್ಷರನರ್ಧಾಂಗಿ || ಕುಕ್ಷೀಲಿ ಬ್ರಹ್ಮಾಂಡ ಲಕ್ಷ್ಯವಿಲ್ಲದೆ ಪಡೆದಿ ಅಕ್ಷಯ ಮಾಡಿ ಜ್ಞಾನ ಮೋಕ್ಷಾವ ಕೊಡಿಸಮ್ಮಾ5 ವಿಕಾರ ಶೂನ್ಯಳೆ ಪ್ರಕೃತಿಗೆ ಮಾನಿಯೆ ನೀಕಾರ್ಯ ಕಾರಣಕ್ಕೆ ಮುಖ್ಯ ಹೇತುವೆ ತಾಯೆ || ಪ್ರಕೃತಿ ಬಂಧವ ಬಿಡಿಸಿ ಸಾಕಾರ ಮೂರುತಿ ಲೋಕನಾಯಕ ಹರಿಯ ಏಕಾಂತದಲಿ ತೋರೆ6 ತ್ರಿಗುಣ ಕಾರ್ಯಗಳೆಲ್ಲ ಸುಗುಣಿ ನೀ ಮಾಡುತ ನಿತ್ಯ ಪೊಗಳಿ ಹಿಗ್ಗುವೆ ಮಾತೆ || ಜಗವೆಲ್ಲ ಕುಣಿಸುತ ನಗುತಲೀಲೆಯಿಂದ ನಿಗಮಾದಿಗಳ ಮೀರಿ ಬಗೆ ಬಗೆ ಲೀಲೆ ಕಾಂಬೆ 7 ನಿತ್ಯಾ ಮುಕ್ತಳು ನೀನು ಪ್ರೀತಿಲಿ ನಮಿಪೆನೆ ಮಾತುಲಾಲಿಸಿ ಎನ್ನ ನಿತ್ಯದಿ ಸಲಹೆಮ್ಮ || ಹೆತ್ತ ತಾಯಿಯು ನೀನು ಎತ್ತಿ ಪೊರೆಯದಿರೆ ಎತ್ತ ಪೋಗಲಿ ನಾನು ಉತ್ತುಮರಮೆ ಹೇಳೆ 8 ಸಾಗರನ ಮಗಳೆ ಆಗಮರೂಪಳೆ ಹೋಗೀಸುಲಿಂಗವ ಸಾಗಿಸಿಗುಣಕಾರ್ಯ || ಭಾಗ್ಯ ಸ್ವರೂಪಳೆ ಬಾಗಿ ನಮಿಸುವೆ ಆಗು ಮಾಡಿಸು ಹರಿ ಗೀತೆಗಳೆನ್ನಿಂದ 9 ಮರುತ ದೇವನ ಪಿತನ ಉರದಲಿ ವಾಸಿಪಳೆ ಹರಿಗುರು ಚರಣದಿ ನಿರುತ ಭಕ್ತಿಯ ಕೊಟ್ಟು || ವಾರಿಜನಾಭನಲ್ಲಿ ಧಾರೆ ಧಾರೆಯ ಭಕ್ತಿ ಸಾರಸ ದಳನಯನೇ 10 ಮಾತು ಮಾತಿಗೆ ನಮ್ಮ ಖ್ಯಾತಾಜಯತೀರ್ಥ ನವನೀತ ಧರಿಸೀಹ || ಶ್ರೀ ತಾಂಡವ ಕೃಷ್ಣ ವಿಠಲರಾಯನ ಸ್ಮರಣೆ ಆತ್ಮಾದೊಳಗೆ ನಿಂತು ಖ್ಯಾತೀಲಿನಡಿಸಮ್ಮಾ 11
--------------
ಕೃಷ್ಣವಿಠಲದಾಸರು
ಕಾಯವಿದು ನಿತ್ಯವೆಂದು ನೆಚ್ಚಬೇಡ ಮಾಯಾಕಾರ್ಯನಾಗಿ ಮೆರೆವುದಿದು ತಿಳಿದುನೋಡಾಕಾಯವಳಿವ ಮುನ್ನ ಹರಿಯ ಕೃಪೆಯ ಜೋಡ ತೋಡುನಾಯಬಾಯತುತ್ತ ನಂಬಿ ಬೆರೆಯ ಬೇಡ ಪಮಾತಾಪಿತೃರೇತಸ್ಸಿಂದ ಪತನವಾಗಿ ಪಂಚಭೂತಕಾರ್ಯದಿಂದ ಸ್ಥೂಲಾಕಾರವಾಗಿರೇತಸ್ಸು ರಕ್ತಗಳಾರು ಕೋಶವಾಗಿ ಕರ್ಮಜಾತಕಾಯ ಹೀಗೆ ತೋರುತಿಪ್ಪುದಾಗಿ 1ಹುಟ್ಟಿ ಬೆಳೆದು ನಲಿದು ಮುಪ್ಪಿನಿಂದ ಕ್ಷೈಸಿ ಕಡೆಗೆನಷ್ಡವಾಗಿ ಹೋಗಿ ಮಣ್ಣಿನೊಳಗೆ ಬೆರಸಿಇಷ್ಟೂ ಪರಿಯೊಳಾರು ವಿಕಾರವ ತೋರಿಸಿ ವಂದಿಷ್ಟೂ ಫಲವಿಲ್ಲದಂತೆ ುದಕೆ ಭ್ರಮಿಸಿ 2ಕಾಲಕರ್ಮ ಪಂಚಭೂತ ಮಿಳಿತವಾಗಿ ಇದಕೆಮೂಲವಾದ ಕರ್ಮವೆ ಪ್ರಧಾನವಾಗಿಢಾಳಿಸುವಾತ್ಮನ ತೇಜಾಧಾರವಾಗಿ ಕರ್ಮತೇಲಲಾಗಿ ದೀಪದಂತೆ ಪೋಪುದಾಗಿ 3ಬತ್ತಿಯನ್ನು ಎಣ್ಣೆಮುಗಿವ ಸಮಯಕಾಗಿ ಎಣ್ಣೆಯೂಮತ್ತೆ ತಂದು ತುಂಬೆ ದೀಪ ಪೋಗದಾಗಿಇತ್ತೆರದ ಕರ್ಮದಿಂದ ಚಕ್ರವಾಗಿ ಜನ್ಮಮೃತ್ಯುಗಳೀ ದೇಹಕ್ಕವಧಿುಲ್ಲವಾಗಿ 4ತೈಲಮಿಶ್ರವರ್ತಿಯಗ್ನಿ ಸಮ್ಮೇಳದಿಂದಾ ದೀಪಬಾಳಿಬೆಳಗುವುದು ತೈಲದಾಧಾರದಿಂದಾತೈಲಮುಗಿಯೆ ದೀಪ ಕೆಟ್ಟು ಹೋಹ ಛಂದದಂತೆಕೇಳು ದೇಹವೀಪರಿಯೊಳಿಹುದರಿಂದಾ 5ಹುಟ್ಟಿದಲ್ಲಿ ಸೂತಕವು ಹೊಂದಿದಲ್ಲಿ ಸೂತಕವುಮುಟ್ಟಿವಸ್ತುಗಳುಚ್ಚಿಷ್ಟಂಗಳಹವೂನಟ್ಟನಡುವೆ ಬಂದದೆಂದು ಶಿಷ್ಟರಿದ ಮನ್ನಿಸರುನಷ್ಟವಾಗಿ ಕಡೆಗೆ ತಾನು ಹೋಹ ದೇಹವೂ 6ತಾನು ಬಂದ ಬಗೆಯು ತನಗೆ ತಿಳಿಯದಿದ್ದರೂ ನಿನ್ನಸೂನು ಬಂದ ಬಗೆಯ ನೋಡಿ ತಿಳಿದುಕೊಂಡಾರುಹೀನನಾದ ಕಾಯವಭಿಮಾನಿಸದಿರು ಮುಂದೆಶ್ರೀನಾಥನ ಪದವ ಭಜಿಸಿ ಸುಖದಿಂದಿರುತಿರು 7ಮನವೆ ಮಿಥ್ಯದೇಹದಭಿಮಾನವೇತಕೆ ಬಹುಜನುಮ ಜನುಮದಲ್ಲಿ ದುಃಖದಗೆ ನೂಕೆಕೊನೆಗೂ ಹೀಗೆ ಬಂಧವನ್ನು ಕೊಡುವದಕ್ಕೆ ಮಚ್ಚಿಜಿನುಗುವಿರಿಕೆಯೇನು ಇನ್ನೂ ಬಿಡದೆ ಬಯಕೆ 8ಘೋರರೂಪಾಪಾರಸಂಸಾರಾಂಬುಧಿಯನ್ನೂಮೀರಲೇರು ವೆಂಕಟೇಶನಾಮನಾವೆಯನ್ನುಧೀರಗುರು ವಾಸುದೇವರಂಘ್ರಿಯನ್ನು ಬೇಗಸಾರುವ ವಿವೇಕತನವಂದು ಚೆನ್ನೂ 9ಕಂ|| ಜೀವನು ವಿರತಿಯ ಸಾಧಿಪಭಾವಧಿ ಮನದೊಡನೆ ಕಾಯವ ನೆಚ್ಚದಿರೆನ್ನುತಕೈವಲ್ಯದ ಪಥವ ಪೇಳಲುಜೀವನೊಳಾಡಿದುದು ಕಾಯವಚ್ಚರಿಯೆನ್ನಲೂ
--------------
ತಿಮ್ಮಪ್ಪದಾಸರು
ಕಾಯೊ ಕರುಣಾಕರ ಕೃಪಾಲ ಶ್ರೀ ಗುರು ಎನ್ನ ಕಾಯೊ ದಯದಿಂದೆನ್ನ ಪರಮಪಾವನ ಧ್ರುವ ಹುಟ್ಟಿಸಿಹ್ಯ ಜೀವನ ಸೃಷ್ಟಿಯೊಳು ನಾ ನಿಮ್ಮ ದೃಷ್ಟಿಸಿ ನೋಡಲು ಎನ್ನ ಕಷ್ಟಪರಿಹಾರ ಶಿಷ್ಟಜನ ಪ್ರತಿಪಾಲ ದುಷ್ಟಜನ ಸಂಹಾರ ಎಷ್ಟೆಂದು ಪೊಗಳಲಯ್ಯ ಕೃಷ್ಣಕೃಪಾಲ 1 ಇನ್ನೊಂದು ಅರಿಯೆ ನಾ ಅನ್ಯಪಥÀವೆಂಬುದನು ನಿನ್ನ ಚರಣಕೆ ಪೂರ್ಣ ನಂಬಿಹ್ಯನು ಭಿನ್ನವಿಲ್ಲದೆ ಎನ್ನ ಚನ್ನಾಗಿ ಸಲಹಯ್ಯ ಧನ್ಯಗೈಸೊ ಪ್ರಾಣ ಚಿನ್ಮಯನೆ 2 ವಾಸನೆಯ ಪೂರಿಸೊ ವಿಶ್ವವ್ಯಾಪಕ ಎನ್ನ ಭಾಸ್ಕರಕೋಟಿ ಪ್ರಕಾಶ ಪೂರ್ಣ ಲೇಸು ಲೇಸಾದಿ ಪಾಲಿಸೊ ವಾಸುದೇವನೆ ದಾಸಾನುದಾಸ ನಿಜದಾಸ ಮಹಿಪತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕಾಯೊ ಕಾಮಿತ ಫಲದ ಕಾಯೊ ಕಾಯೊ ಪ ಕಾಯೊ ಕಾಯೊ ಎನ್ನ ಕಾಯಜನಯ್ಯನೆ ಕಾಯದಿದ್ದರೆನ್ನ ಕಾವವರಾರೊ ಅ.ಪ ಎಂದೆಂದಿನ ಕರ್ಮಗಳನೆಣಿಸುತಲಿ ಕಂದಿಸಿ ಕುಂದಿಸಿ ಬಂಧಿಪರೇನೋ 1 ತಾಳಲಾರೆ ಈ ಕಾಲನ ಬಾಧೆಯು ಬೇಳುವೆ ನಿನ್ನಯ ಕಾಲಿಗೆ ಸ್ವಾಮಿ 2 ಆಲಸ ಮಾಡದೆ ಆರ್ತಿಗಳೋಡಿಸಿ ಪಾಲಿಪುದೆನ್ನನು ಪಾವನ ಮೂರ್ತೆ3 ಮಾಡಿದ ಪಾಪಗಳೋಡಿಸಿ ಸುಖದಿಂ ದಾಡಿಸು ಕಣ್ಣಿಗೆ ಕಾಣಿಸಿಕೊಂಡು 4 ವಾಸುದೇವವಿಟ್ಠಲ ನೀ ಎನಗಿನ್ನು ವಾಸಿ ಮಾಡಿಸಿ ಕೀರ್ತಿಯ ಪಡೆಯೊ 5
--------------
ವ್ಯಾಸತತ್ವಜ್ಞದಾಸರು
ಕಾಯೋ ಕೇಶವ ದೇವ ದೂರ್ವೆಶಾ ಪಾಯವ ನರಿಯೆನು ಪೊರೆಯೊ ಸರ್ವೇಶಾ ಪ ಸುಜನರ ರಕ್ಷಿಸಿ ಭಜಕರ ಸಲಹುವ ಅಜಪಿತ ಶ್ರೀಹರಿ ಸೇವೆಯ ಗೈವೆ 1 ಸಾಸಿರ ನಾಮಗಳಿಂದ ರಂಜಿಪ ದೇವ ವಾಸುಕಿಶಯನನ ಸೇವೆಯ ಗೈವೆ 2 ವೇದವ ಪಾಲಿಸಿ ಧರಣಿಯ ಸಲಹಿದ ಮಾಧವ ಶ್ರೀಹರಿ ಸೇವೆಯ ಗೈವೆ 3
--------------
ಕರ್ಕಿ ಕೇಶವದಾಸ
ಕಾಲಕಾಲದಲಿ ಕೇಶವನೆನ್ನಿರೊ ಬಾಲ ಮುಕುಂದ ಮಾಧವನೆನ್ನಿರೊ ಧ್ರುವ ಉದಯಕಾಲದಲಿ ಅನಂತಮಹಿಮನೆನ್ನಿ ಮಧ್ಯಾಹ್ನದಲಿ ಪದ್ಮನಾ¨sನೆನ್ನಿ ಸಂಧ್ಯಾಸಾಯಂಕಾಲದಲಿ ಶ್ರೀಧರನೆನ್ನಿ ಸದಾ ಕಾಲದಲಿ ಶ್ರೀ ಹರಿಯೆನ್ನಿರೊ 1 ಏಳುತ ಮಚ್ಛಾವತಾರ ಅಚ್ಯುತನೆನ್ನಿ ಮಲಗುತ ಶೇಷಶಯನನೆನ್ನಿರೊ ಹೇಳುತ ವಿಷ್ಣುವರಾಹವತಾರನೆನ್ನಿ ಕೇಳುತ ಕೃಷ್ಣಾವತಾರನೆನ್ನಿ 2 ನಡೆಯುತ ಸುಗುಣ ನಿರ್ಗುಣ ಸರ್ವೋತ್ತಮನೆನ್ನಿ ನುಡಿಯುತ ನಾರಯಣನೆನ್ನಿರೊ ಮಾಡುತ ಕೃಷ್ಣನಿರ್ಮಿತ ದಾಮೋದರನೆನ್ನಿ ಕೂಡುತ ಕೂರ್ಮಾವತಾರನೆನ್ನಿ3 ಆಡುತ ಗರುಡವಾಹನ ತ್ರಿವಿಕ್ರಮನೆನ್ನಿ ಬೇಡುತ ಸ್ವಾಮಿ ವಾಮನನೆನ್ನಿರೊ ನೋಡುತ ವಾರಿಜನೇತ್ರ ಪ್ರಸಿದ್ದನೆನ್ನಿ ಪಾಡುತ ಪರಮಾತ್ಮನೆನ್ನಿರೊ 4 ಉದ್ಯೋಗದಲಿ ಸಹಕಾರನಿರುದ್ದನೆನ್ನಿ ಉದರ ಕಾಯದಲಿ ಉಪೇಂದ್ರನೆನ್ನಿ ಮೇದಿನೊಯೊಳು ಹರಿಮಧುಸೂದನನೆನ್ನಿ ಆದಿ ಅಂತಿಮ ಅಧೋಕ್ಷಜನೆನ್ನಿರೊ 5 ಹೃದಯಕಮಲದೊಳು ಹೃಷೀಕೇಶನು ಎನ್ನಿ ಶಬ್ದಜಿಹ್ವೆಲಿ ಜನಾರ್ಧನನೆನ್ನಿರೊ ಬುದ್ಧಿಯಲಿ ಸಿದ್ಧಬೌದ್ದಾವತಾರನೆನ್ನಿ ಅದಿಅನಾದಿ ಗೋವಿಂದನೆನ್ನಿ 6 ಅನುದಿನ ಮನದೊಳು ಘನಮಹಿಮನು ಎನ್ನಿ ತನುವಿನೊಳು ಪುರುಷೋತ್ತಮ ನಾನೆನ್ನಿ ಅನ್ನವುದಕ ಸೇವಿಸುವ ಹರಿಭೋಕ್ತನೆನ್ನಿ ಘನಭೂಷಣದಿ ಸಂಕರುಷಣನೆನ್ನಿ 7 ಸತಿಪತಿ ಸಂಯೋಗದಲಿ ಪ್ರದ್ಯುಮ್ನನೆನ್ನಿ ಪತಿತಪಾವನ ಪರಬ್ರಹ್ಮನೆನ್ನಿ ಭಕ್ತವತ್ಸಲ ನರಸಿಂಹಾವತಾರನೆನ್ನಿ ಮುಕ್ತಿದಾಯಕ ದೇವೋತ್ತಮನೆನ್ನಿರೊ 8 ಪಾವನಮೂರುತಿ ಪರಶುರಾಮನೆನ್ನಿ ಜೀವಸಂಜೀವ ಶ್ರೀ ರಾಮನೆನ್ನಿ ಭವಭಯನಾಶ ಕಲ್ಕ್ಯಾವತಾರನೆನ್ನಿ ಮಹಿಪತಿಗುರು ವಾಸುದೇವನೆನ್ನಿ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಲು ತೊಳೆದವನೊಬ್ಬ ತೊಳೆಸಿಕೊಂಡವನೊಬ್ಬ ಮೌಳಿ ಮೇಲಾಜಲವ ಸತತ ಧರಿಸಿದನೊಬ್ಬ ಪಾಲಿಸುವ ಪ್ರಭುವೊಬ್ಬ ಕೊಲುವ ತಳವಾರನೊಬ್ಬ ಮೂರ್ಲೋಕವರಿಯೆ ಪುಟ್ಟಿಸಿದ ಪಿತನೊಬ್ಬ ಆಲೋಚನೆಯ ಬಲ್ಲವಗೆ ಸಂಶಯ ಸಲ್ಲ ಮಾಲೆಯನು ಮಹಲಕ್ಷುಮಿ ಹಯವದನಗಿತ್ತಳಾಗಿ 1 ರಾವಣನ ಕೊಂದ ಪಾಪವ ಕಳೆಯಬೇಕೆಂದು ದೇವ ರಘುಪತಿ ಸದಾಶಿವನ ಪೂಜಿಸಿದ ಗಡಾ ಆ ವಿಧಿಯ ಒಂದು ತಲೆಯನು ಕಡಿದ ಮಾತ್ರದಿಂದ ಆವಾಗ ಕರದಲ್ಲಿ ಇಹ ಕಪಾಲವ ಕಾಣನೆ ದಾವಘದೊಳು ಪೊರಳುವನ ದಾವಾತ ಭಜಿಸುವನು ಜೀವರಿಗೆ ಉಳ್ಳಷ್ಟು ವಿವೇಕ ಹಯವದನಗಿಲ್ಲವೆ 2 ರಾಮಾಯಣದ ಕತೆಯು ಮಹಾಪುಣ್ಯ ಕಥೆಯು ಗಡಾ ರಾಮ ರಾವಣನ ಕೊಂದದ್ದು ಮಹಾಪಾಪ ಗಡಾ ಆ ಮನುಮುನಿಗಳೆಲ್ಲ ಪಾಪಕಂಗೀಕರಿಸಿದರೆ ಸ್ವಾಮಿಯು ಲಯದಿ ಬೊಮ್ಮನ ಮೊದಲು ಕೊಲಿಸದೆ ಧೀಮಂತ ಹಯವದನ ಕೊಂದ ಹಿರಣ್ಯಕ ಮುಖ್ಯ ತಾಮಸ ದಿತಿಜರು ಕಶ್ಯಪ ಋಷಿ ಸುತರಲ್ಲವೆ3 ಶ್ರುತಿಯಿವ ಕರ್ಮಣಾನೋಕನೀಯ ಎಂದು ತುತಿಸುತಿರೆ ನಿಮ್ಮ ನಿರ್ಗುಣ ಬೊಮ್ಮಗೆ ಕರ್ಮವುಂಟೆ ಕ್ಷಿತಿಯೊಳಗೆ ರಾವಣನ ವಧೆಯ ಮಾಡಿದ ಸೇತುಪತಿಯ ಪಾವನನೆನಲು ಅವನ ಕೊಂದವನ ಪತಿತಪಾವನನೆಂಬುದೆ ಕುಚಿತ್ತಯುಕುತಿಯು ಸತತ ಹಯವದನನೊಬ್ಬನೆ ಶುದ್ಧ ಕಾಣಿರೊ 4 ಒಂದು ಕಡೆಯಲಿ ವಿಭೀಷಣನ ಪ್ರತಿಷ್ಠಿಸಿದನು ಮ- ತ್ತೊಂದು ಕಡೆಯಲಿ ಸದಾಶಿವನ ಪೂಜಿಸಿದ ಇಂ- ತೆಂದು ಪುರಾಣಗಳು ಕೂಗುತಿವೆ ತ್ರಾಸಿನೊಳು ಹೊಂದಿಸಿ ಸಮನೆಂದು ತೂಗಿ ತೋರು ಮದದಲಿ ಸಂದೇಹ ಸಲ್ಲ ಹಯವದನ ರಘುಪತಿಗಿಬ್ಬರು ಸಂದ ಭಕುತರೆಂಬುದು ಸಲೆ ಸುಪ್ರಸಿದ್ಧ 5 ಸೇತುವೆಯ ಕಂಡ ನರರಿಗೆ ಬ್ರಹ್ಮಹತ್ಯಾದಿ ಪಾತಕವು ಬಿಡುವುದೆಂಬ ಶ್ರುತಿಯ ಮನ್ನಿಸಲು ಖ್ಯಾತ ಬೊಮ್ಮನ ತಲೆಯ ಕಡಿಯೆ ಕರದಲಿಕೊಟ್ಟ ತಾ- ಸುಕೃತ ಸೇತುಮುಖದಿಂದ ಸೀತೆಯರಸನು ಶಿವನ ನಿಲ್ಲಿಸಿ ಪ್ರತಿಷ್ಠಾಪಿಸಿದ ಜಗನ್ನಾಥ ಹಯವದನ ಭಕ್ತರಬಂಧು ಕಾಣಿರೊ 6 ರಾಮ ಶ್ರೀರಾಮರಾಮೇತಿ ರಮೆಯೆಂಬ ಆ ಮಹಾದೇವ ಭಗವದ್ಭಕ್ತನಲ್ಲವೆ ಸ್ವಾಮಿ ತನ್ನ ಭಕ್ತರÀನು ಪ್ರತಿಷ್ಠಿಸಿದ ನಿ- ಸ್ಸೀಮ ಕರುಣಾಂಬುಧಿ ಮಹಾಮಹಿಮನೆಂಬರು ಭ್ರಾಮಕದ ನುಡಿಗೆ ಮರುಳಾಗದಿರು ಹಯವದನ ರಾಮಚಂದ್ರನೆ ಕಾಶಿಯ ತಾರಕಬೊಮ್ಮ ಕಾಣಿರೊ 7 ಕಾಶಿಯಲಿ ರಾಮಮಂತ್ರೋಪದೇಶವ ಮಾಳ್ಪ ಈಶ ಜಾಣರ ಮತದಿ ಜಗಕೆ ಗುರುವೆಂತೆಂಬ ಆ ಶಿವನ ಮಂತ್ರದೇವತೆ ತಾರಕಬೊಮ್ಮಯೆನಿಪ ವಾಸುದೇವನೆ ಜಗಕೆ ಪರದೈವ ಕಾಣಿರೊ ಈ ಸುತತ್ವÀವ ಪೇಳ್ವ ಹರಗೆ ನಮ್ಮ ಹಯವದನ ಏಸುಮನ್ನಣೆ ಮಾಡಿದರುಚಿತ ಕಾಣಿರೊ 8 ಕರವ ಶಿರದ ಮೇಲೆ ಇರಿಸಬಂದ ಖಳಗಂಜಿ ಹರ ಸಕಲ ಸುರೇಶ್ವರರ ಅರಮನೆಗಳಿಗೆ ಪೋಗಿ ಪರಿಹರವ ಕಾಣದೆ ನಮ್ಮ ಸಿರಿವರನ ಮರೆಹೊಗಲು ಪÀರಿಣಾಮವನು ಪೊರೆದ ಗಡಾ ಶರಣರಕ್ಷಕನೆಂಬ ಬಿರುದುಳ್ಳ ಹಯವದನ ಹರಿಯಲ್ಲದೆ ಪಿರಿದೊಂದು ಪರದೈವವಿಲ್ಲವಯ್ಯ 9 ರೋಮಕೋಟಿಲಿಂಗನೆನಿಸಿದ ಹನುಮನೊಂದು ರೋಮಕೆ ಕೋಟಿ ಶಿವರ ಮಾಡುವ ಶಕ್ತ ಕಾಣಿರೊ ಆ ಮಹಾತ್ಮನ ತನ್ನ ಆಳುಮಾಡಿ ನಡೆಸಿಕೊಂಡ ರಾಮಚಂದ್ರನೆ ಜಗಕ್ಕೆ ಪರದೈವ ಕಾಣಿರೊ ಸ್ವಾಮಿ ಹಯವದನ ವೇದವ ತಂದು ಕಮಲಜನ ಕಾಮಿತವನಿತ್ತನಾಗಿ ಅವನೆ ಜಗದೊಡೆಯ 10 ನೂರು ರುದ್ರರು ಪೇಳೆ ಕಾರ್ಯವಾದರೇನವರು ಈರೇಳು ಜಗವ ಸಂಹರಿಸಲರಿಯರು ಗಡಾ ಕಾರ್ಯವಿಲ್ಲದ ಶಿವರ ಪೇಳಲದ್ವೈತಮತ ಹಾರಿಹೋಗದೆ ಬರಿದೆ ಹಲವು ಹಂಬಲಿಸದೆ ಶ್ರೀರಮಣ ಹಯವದನನೊಡಂಬಟ್ಟನಿ ಬರನು ದೂರ ಕಳಚಿದನೆಂದು ಪೂರ್ವದವರನೆ ನಂಬು 11 ಯಾತ್ರೆಯ ಮಾಡಿಸಿಕೊಂಡು ಹರ ಹಿರಿಯ ತಾನಾಗಿ ಯುಕ್ತಿ ಬಾಧಕವಾಯಿತ್ತು ಹರಿಹರರೊಳೈಕ್ಯ ಚಿತ್ರ ನಿನ್ನ ಮತಕೆ ನೀನೆ ಶತ್ರುವಾದೆ ಪ್ರತ್ಯುತ್ತರವ ಪೇಳೆ ಪರಾಜಯ ಬಾರದಿಹುದೆ ಮತ್ತೆ ನೆನೆಯೊ ಶ್ರೀಹಯವದನಗಿದು ಲೀಲೆಯಾದರೆ ಸತ್ವ ಹೆಚ್ಚಿತು ಸರ್ವೋತ್ತಮನೆಂಬ ಶ್ರುತಿಗೆ 12 ವಂದ್ಯಮಾನಂ ಪಿತಾನಾಂ ಪ್ರತಿ ಪ್ರಮಾಣಂ ಎಂದು ರುದ್ರನ ಕೂಡೆ ಶ್ರುತಿ ಪೇಳಿತಾಗಿ ತಂದೆ ಮಕ್ಕಳ ಮನೆಗೆ ಪೋದಂತೆ ಪೋಗಿ ಮು- ಕುಂದ ಮೊಮ್ಮಗನಿಗೆ ಹಿರಿತನವ ಕೊಡಲೆಂದು ಮುಂದೆ ಜನಿಸುವ ಕಿರಿಯ ಕುವರರೊಳು ತನ್ನ ಕಂದನ ಸೃಜಿಸಿದ ಹಯವದನ ಚತುರನಲ್ಲವೆ 13 ಸುರರು ದ್ವಾರಕಾಪುರ ಯಾತ್ರೆಯಲಿ ಪಾಲಸಾಗರಯಾತ್ರೆ ಗರ್ಭಯಾತ್ರೆ ಕಳೆಯೆ ಶೂಲಧರ ಖಳಗಂಜಿ ಭುವನವೆಲ್ಲವ ಸುತ್ತಿ ಶ್ರೀ- ಲೋಲನಿಹ ವೈಕುಂಠಯಾತ್ರೆಯಿಂದ ಬದುಕನೆ ಭೂಲೋಕದಲಿ ಪುಟ್ಟಿ ಹಯವದನ ಕೃಷ್ಣ ಮಾಡಿದ ಕೈಲಾಸಯಾತ್ರೆ ಕೈವಲ್ಯಪತಿಗೆ ಲೀಲೆ 14 ಹರನಾರು ಪುರಾಣಗಳು ವಿರಿಂಚನಾರು ಪುರಾಣಗಳು ಹರ ವಿರಿಂಚರವಲ್ಲವೆಂದು ಹಿರಿಯರೆ ಮನ್ನಿಸಲಾಗಿ ಪರಮ ಸಿದ್ಧಾಂತಕೋವಿದರೆನಿಪ ಬುಧರಿಗೆ ಪುರಾಣಗಳ ಮ್ಯಾಲೆ ಮಾಡುವ ಪರಮಾದÀರ ಸಲ್ಲದಯ್ಯ ದುರಾಗ್ರಹವ ಮಾಡಬ್ಯಾಡ ಗುರುಮತವ ಬಿಡಬ್ಯಾಡ ಸಿರಿ ಹಯವದನನಾರುಪುರಾಣಗಳ ನೋಡಿರೊ 15 ಒಂದು ಬೊಮ್ಮಚಿತ್ತು ಒಂದು ಜೀವಚಿತ್ತು ಇಂ- ತೆಂದು ಶ್ರುತಿಸ್ಕಂಧÀ ಚೇತವೆಲ್ಲ ಗ್ರಂಥ[ಆ]ಸ್ಯ ದಿಂದ [ಒರೆಯೆ] ಹರಿಜಡನೋ ಹರಜಡನೋ ಮಂದಹಾಸದಿಂದ ಜಡರು ಮನುಮುನಿಗಳೆಲ್ಲ ಇಂಥ ಶಿವನ ವಹಿಸಿಕೊಂಡು ವಾದಿಸುವರು ಹಿಂದು ಮುಂದರಿಯರೆಂದು ಹಯವದನ ನಗನೆ 16 ಯಂ ಬ್ರಹ್ಮವೇದಾಹಂ ಬ್ರಹ್ಮ ವೇದಶ್ರುತಿಶಬ್ದ ಬ್ರಹ್ಮ- ವೆಂಬ ವೇದ ಬೋಧಿಸಿತಾಗಿ ಇಂಥ ಮನುಜರಿಗೆಲ್ಲ ಭಾವಾಭಾವ ಪೇಳ್ವ ಹೊಂದಿಬದುಕು ಹಯವದನನ ಚರಣವ ಹೊಂದಿಬದುಕೊ ಜೀವ ಹರಿಯೆ ನಾನೆನ್ನಬ್ಯಾಡ 17
--------------
ವಾದಿರಾಜ
ಕಾವೇರಿ ಕಲುಪಾಪಹಾರಿ ಪಾವನ ಶರೀರೆ ಶುಭತೋಷಕಾರಿ ಪ ವಾಸುದೇವ ರಂಗೇಶನಾಲಯಕೆ ನೀ ನಾವರಣಳಾಗಿಪ್ಪೆ ವಿರಜೆಯಂತೇ ದೇವ ಋಷಿ ಗಂಧರ್ವ ಪಿತೃಪ ನರವರರಿಂದ ಸೇವನೀಯಳಾಗಿ ಸರ್ವಾರ್ಥ ಪೂರೈಪೆ 1 ಜಲಚರಾನ್ವೇಷಣ ಲುಬ್ಧ ಸಾಲಿಗ್ರಾಮ ತುಲಸಿ ವೃಕ್ಷವನೆ ಕೊಡಿಸಿದ ಮಾತ್ರದೀ ಕಲುಷರಾಶಿಗಳೆಲ್ಲ ಕಳೆದು ಮುಕ್ತಿಯನಿತ್ತೆ ಸಲಿಲಮಂದಿರೆ ನಿನ್ನ ಕರುಣಕೇನೆಂಬೆ 2 ರವಿ ತುಲಾರಾಶಿಗೈದಿದ ಸಮಯದೊಳಗೊಂದು ಮಜ್ಜನ ಗೈವ ಮಾನವರಿಗೆ ಪವನಾಂತರಾತ್ಮಕನ ಪಾದಕಮಲವ ತೋರಿ ಭವಜ ರೋಗವ ಕಳೆದು ಭಾಗ್ಯವಂತರ ಮಾಳ್ಪೆ 3 ಶ್ರೀ ಪವನ ಶಿವರಿಂದ ತಾ ಪೂಜೆಗೊಳುತ ಬಹು ಪರ ಮನು ವ್ಯಾಪಿಸಿಹ ನಿನ್ನೊಳದ್ಯಾಪಿ ಸ್ವರ್ಗಸ್ಥ ಜನ ರೀ ಪೊಡವಿಯೊಳು ತವ ಸಮೀಪದಲಿ ಜನಿಸುವರು 4 ಮೂಢಮತಿ ನಾನು ಕೊಂಡಾಡ ಬಲ್ಲೆನೆ ನಿನ್ನ ಬೇಡಿಕೊಂಡೆನು ಹೃದಯ ನೀಡದೊಳಗೇ ಗೂಡ ಪದ ಶಯನ ಜಗನ್ನಾಥ ವಿಠ್ಠಲನಂಘ್ರಿ ನೋಡುವ ಸೌಭಾಗ್ಯ ದಯ ಮಾಡು ಪ್ರತಿದಿನದಲ್ಲಿ ಬ 5
--------------
ಜಗನ್ನಾಥದಾಸರು
ಕಾಶಿಯ ಹಾದಿಯಲಿ ಕೇಶವನಿದ್ದಾನೆ ರಾಮರಾಮ ಕೇಶವನ ದಯದಿ ಕಾಶಿಯಾತ್ರೆಯ ಕಂಡೆ ರಾಮರಾಮ 1 ಬದರಿಕಾಶ್ರಮದಲ್ಲಿ ನಾರಾಯಣನಿದ್ದಾನೆ ರಾಮರಾಮ ಬದರಿಕಾಶ್ರಮ ಕಂಡೆ ನಾರಾಯಣನ ದಯದಿ ರಾಮರಾಮ 2 ಪ್ರಯಾಗ ನದಿಯಲ್ಲಿ ಮಾಧವನಿದ್ದಾನೆ ರಾಮರಾಮ ಪ್ರಯಾಗ ನದಿ ಮಿಂದೆ ಮಾಧವನ ದಯದಿ ರಾಮರಾಮ 3 ಗೋಕುಲದಲ್ಲಿ ಶ್ರೀ ಗೋವಿಂದನಿದ್ದಾನೆ ರಾಮರಾಮ ಗೋಕುಲವನು ಕಂಡೆ ಗೋವಿಂದನ ದಯದಿ ರಾಮರಾಮ 4 ವಿಷ್ಣು ತೀರ್ಥದಲಿ ಶ್ರೀವಿಷ್ಣುವಿದ್ದಾನೆ ರಾಮರಾಮ ವಿಷ್ಣು ತೀರ್ಥದಿ ಮಿಂದೆ ವಿಷ್ಣುವಿನ ದಯದಿಂದ ರಾಮರಾಮ 5 ಮತ್ಸ್ಯತೀರ್ಥದಲ್ಲಿ ಮಧುಸೂದನನಿದ್ದಾನೆ ರಾಮರಾಮ ದಯದಿ ರಾಮರಾಮ6 ತ್ರಿವೇಣಿಯಲ್ಲಿ ತ್ರಿವಿಕ್ರಮನಿದ್ದಾನೆ ರಾಮರಾಮ ತ್ರಿವಿಕ್ರಮನ ದಯದಿ ತ್ರಿವೇಣಿಯಲ್ಲಿ ಮಿಂದೆ ರಾಮರಾಮ7 ವಾಮನ ನಮ್ಮನು ಒಲಿದು ಕಾಯುವನಂತೆ ರಾಮರಾಮ ವಾಮನನ ದಯದಿ ಭೂವೈಕುಂಠವ ಕಂಡೆ ರಾಮರಾಮ8 ಶ್ರೀಧರ ನಮ್ಮ ಹೃದಯದಲ್ಲಿದ್ದಾನೆ ರಾಮರಾಮ ಶ್ರೀಧರನ ದಯದಿಂದ ಹೃದಯವಾಸನ ಕಂಡೆ ರಾಮರಾಮ9 ಋಷಿಗಳಾಶ್ರಮದಲ್ಲಿ ಹೃಷಿಕೇಶನಿದ್ದಾನೆ ರಾಮರಾಮ ಹೃಷಿಕೇಶನ ದಯದಿ ಋಷಿಗಳಾಶ್ರಮ ಕಂಡೆ ರಾಮರಾಮ10 ಪದ್ಮನಾಭದಲ್ಲಿ ಪದ್ಮನಾಭನಿದ್ದಾನೆ ರಾಮರಾಮ ಪದ್ಮನಾಭನ ದಯದಿ ಪದ್ಮನಾಭನ ಕಂಡೆ ರಾಮರಾಮ11 ಸಾಧು ಬೃಂದದಲ್ಲಿ ದಾಮೋದರನಿದ್ದಾನೆ ರಾಮರಾಮ ಸಾಧು ಬೃಂದವ ಕಂಡೆ ದಾಮೋದರನ ದಯದಿ ರಾಮರಾಮ 12 ಸಕಲ ತೀರ್ಥದಲ್ಲಿ ಸಂಕರ್ಷಣನಿದ್ದಾನೆ ರಾಮರಾಮ ಸಂಕರ್ಷಣನ ದಯದಿ ಸಕಲ ತೀರ್ಥವೆ ಮಿಂದೆ ರಾಮರಾಮ 13 ವಸುಧೇಯ ಮೇಲೆಲ್ಲ ವಾಸುದೇವನಿದ್ದಾನೆ ರಾಮರಾಮ ವಾಸುದೇವನ ದಯದಿ ವಸುಧೆಯೆಲ್ಲವ ಕಂಡೆ ರಾಮರಾಮ 14 ವೃದ್ಧಗಂಗೆಯಲ್ಲಿ ಪ್ರದ್ಯುಮ್ನನಿದ್ದಾನೆ ರಾಮರಾಮ ಪ್ರದ್ಯುಮ್ನನ ದಯದಿ ವೃದ್ಧಗಂಗೆಯ ಮಿಂದೆ ರಾಮರಾಮ 15 ಅಲಕನಂದೆಯಲ್ಲಿ ಅನಿರುದ್ಧನಿದ್ದಾನೆ ರಾಮರಾಮ ಅಲಕನಂದನೆ ಮಿಂದೆ ಅನಿರುದ್ಧನ ದಯದಿ ರಾಮರಾಮ 16 ಪುಣ್ಯಕ್ಷೇತ್ರದಲ್ಲಿ ಪುರುಷೋತ್ತಮನಿದ್ದಾನೆ ರಾಮರಾಮ ಪುಣ್ಯಕ್ಷೇತ್ರವ ಕಂಡೆ ಪುರುಷೋತ್ತಮನ ದಯದಿ ರಾಮರಾಮ 17 ವೈತರಣಿಯಲ್ಲಿ ಅಧೋಕ್ಷಜನಿದ್ದಾನೆ ರಾಮರಾಮ ವೈತರಣಿದಾಟಿದೆ ಅಧೋಕ್ಷಜನ ದಯದಿ ರಾಮರಾಮ 18 ನಿರ್ಮಲ ಗಂಗೆಲಿ ನರಸಿಂಹನಿದ್ದಾನೆ ರಾಮರಾಮ ನಿರ್ಮಲ ಗಂಗೆಯ ಮಿಂದೆ ನರಸಿಂಹನ ದಯದಿ ರಾಮರಾಮ 19 ವೈಕುಂಠಗಿರಿಯಲ್ಲಿ ಅಚ್ಯುತನಿದ್ದಾನೆ ರಾಮರಾಮ ವೈಕುಂಠಗಿರಿ ಕಂಡೆ ಅಚ್ಯುತನ ದಯದಿ ರಾಮರಾಮ20 ಜಾಹ್ನವಿಯಲ್ಲಿ ಜನಾದರ್Àನಿದ್ದಾನೆ ರಾಮರಾಮ ಜನಾರ್ದನನ ದಯದಿ ಜಾಹ್ನವಿಯಲಿ ಮಿಂದೆ ರಾಮರಾಮ21 ಉಡುಪಿ ಕ್ಷೇತ್ರದಲ್ಲಿ ಉಪೇಂದ್ರನಿದ್ದಾನೆ ರಾಮರಾಮ ಉಡುಪಿ ಕ್ಷೇತ್ರವ ಕಂಡೆ ಉಪೇಂದ್ರನ ದಯದಿ ರಾಮರಾಮ 22 ಹರಿಯುವ ನದಿಯಲ್ಲಿ ಶ್ರೀ ಹರಿಯಿದ್ದಾನೆ ರಾಮರಾಮ ಹರಿಯ ದಯದಿಂದ ಹರಿವ ನದಿಯ ಮಿಂದೆ ರಾಮರಾಮ 23 ಕೃಷ್ಣನ ದಯದಿ ಸಕಲ ಕಷ್ಟ ಬಿಟ್ಟಿತು ರಾಮರಾಮ 24 ಭಕ್ತಿಲಿಪ್ಪತ್ನಾಲ್ಕು ನಾಮ ಪೇಳುವರಿಗೆ ರಾಮರಾಮ ಭುಕ್ತಿ ಮುಕ್ತಿಯ ನೀವ ವಿಜಯವಿಠ್ಠಲರೇಯ ರಾಮರಾಮ 25
--------------
ವಿಜಯದಾಸ
ಕಾಸನಿತ್ತಿರಿ ಭರದಲಿ ಹಾಗದ ಕಾಸನಿತ್ತಿರಿ ಭರದಲಿ ಪ. ವಾಸುದೇವನ ದಯೆಯೆ ಸಾಕು ಕಾಸುಬೇಡಿದವರಲ್ಲ ನಾವ್ ಕೃಪಣರ ಕಾಸಮುಟ್ಟುವರಲ್ಲ ನಾವ್ ಅ.ಪ ಘನತೆಯೊಂದಿಹ ಧನಿಕರೆಂದು ಗಣಿಸಿಸಾರಿದೆವಿಲ್ಲಿಗೆ ಘನತೆಗೊಪ್ಪುವ ಬಗೆಯ ತೋರದೆ ಧನದ ಮೋಹದಿ ಮೆರೆದಿರೆ ನೀವ್ ಅಣುಗಿಯರೋಳ್ ಮುಳಿದಿರೇ 1 ಮಂದಿಯಿದಿರೋಳ್ ಮೌನದಿಂ ನೀ ವಿಂದು ಲೋಭದ ಮಂತ್ರದಿಂ ತಂದೆ ನಿಮ್ಮೀ ಒಂದು ಹಣವನು ಕೈಗೊಂಡು ನೀವೇ ನಲಿಯಿರಿ ಬಂಧು ಮಿತ್ರರನೊಲಿಸಿರಿ 2 ಭಳಿರೆ ನೀವೌದಾರ್ಯಗುಣದೊಳು ಬಲಿದರೆನ್ನಿಸಿ ಮೆರೆದಿರೆ ಜಲಜಲೋಚನ ಶೇಷಶೈಲನಿವಾಸನೊಲವಿಂ ಸಂತತಂ ನಲಿದು ಸುಖಿಸಿರಿ ಸಂತತಂ 3
--------------
ನಂಜನಗೂಡು ತಿರುಮಲಾಂಬಾ
ಕೂಗೆಲೋ ಮನುಜ ಕೂಗೆಲೋ ಪ ಸಾಗರಶಯನನೆ ಜಗಕೆ ದೈವವೆಂದು ಅ ಮಾಧವ ಕೃಷ್ಣ ಸಚ್ಚಿದಾನಂದೈಕ ಸರ್ವೋತ್ತಮ ಸಚ್ಚರಿತ ರಂಗ ನಾರಾಯಣ ವೇದ ಮತ್ಸ್ಯ ಮೂರುತಿಯೆಂದು1 ನರಹರಿ ಮುಕುಂದ ನಾರಾಯಣ ದೇವ ಪರಮ ಪುರುಷ ಹರಿ ಹಯವದನ ಸಿರಿಧರ ವಾಮನ ದಾಮೋದರ ಗಿರಿ ಕೂರ್ಮ ಮೂರುತಿಯೆಂದು2 ಪುರುಷೋತ್ತಮ ಪುಣ್ಯಶ್ಲೋಕ ಪುಂಡರೀಕ ವರದ ಅಪಾರ ಸದ್ಗುಣನಿಲಯ ಮುರುಮರ್ದನ ಮಂಜು ಭಾಷಣ ಕೇಶವ ನಿರ್ಮಲ ದೇವ ಭೂವರಾಹಮೂರುತಿ ಯೆಂದು 3 ನಿಗಮವಂದಿತ ವಾರಿಜನಾಭ ಅನಿರುದ್ಧ ಅಪ್ರಾಕೃತ ಶರೀರ ಸುಗುಣ ಸಾಕಾರ ಜಗದತ್ಯಂತ ಭಿನ್ನ ನರಮೃಗ ರೂಪಾನೆಂದು 4 ವಟಪತ್ರಶಯನ ಜಗದಂತರ್ಯಾಮಿ ಕೌಸ್ತುಭ ವಿಹಾರ ತಟಿತ್ಕೋಟಿ ನಿಭಕಾಯ ಪೀತಾಂಬರಧರ ನಿಟಿಲಲೋಚನ ಬಾಲವಟು ಮೂರುತಿಯೆಂದು5 ವಿಷ್ಣು ಸಂಕರುಷಣ ಮಧುಸೂದನ ಶ್ರೀ ಕೃಷ್ಣ ಪ್ರದ್ಯುಮ್ನ ಪ್ರಥಮ ದೈವವೆ ಸಾರಥಿ ರಾಮ ಅಚ್ಯುತಾಧೋಕ್ಷಜ ಸೃಷ್ಟಿಗೊಡೆಯ ಭಾರ್ಗವ ಮೂರುತಿಯೆಂದು 6 ಇಭರಾಜ ಪರಿಪಾಲ ಇಂದಿರೆಯರಸ ನಭ ಗಂಗಾಜನಕ ಜನಾದರ್Àನನೆ ವಿಭುವೇ ವಿಶ್ವರೂಪ ವಿಶ್ವನಾಟಕ ಋ ಷಭ ದತ್ತಾತ್ರೇಯ ಶ್ರೀ ರಾಮಮೂರುತಿಯೆಂದು 7 ವಾಸುದೇವ ರಂಗ ನವನೀತ ಚೋರ ಜಾರ ಗೋಕುಲವಾಸಿ ಗೋವಳರಾಯ ಶ್ರೀಧರ ಏಕಮೇವ ಶ್ರೀ ಕೃಷ್ಣ ಮೂರುತಿಯೆಂದು 8 ಹೃಷಿಕೇಶ ಪರಮಾತ್ಮ ಮುಕ್ತಾಮುಕ್ತಾಶ್ರಯ ಭಂಜನ ಕುಸುಮ ಶರನಯ್ಯ ಶಾರ್ಙಧರಾಚಕ್ರಿ ವಿಷಹರ ಧನ್ವಂತ್ರಿ ಬೌದ್ಧ ಮೂರುತಿಯೆಂದು 9 ಸರ್ವಮಂಗಳ ಸರ್ವಸಾರ ಭೋಕ್ತ ಸರ್ವಾಧಾರಕ ಸರ್ವ ಗುಣಗಣ ಪರಿಪೂರ್ಣ ಸರ್ವ ಮೂಲಾಧಾರ ಕಲ್ಕಿ ಮೂರುತಿಯೆಂದು 10 ಪರಿ ಅಪಾರ ಜನ್ಮ ಬೆಂಬಿಡದಲೆ ಸಪ್ತ ದ್ವೀಪಾಧಿಪ ನಮ್ಮ ವಿಜಯವಿಠ್ಠಲರೇಯ ಅಪವರ್ಗದಲ್ಲಿಟ್ಟು ಆನಂದಪಡಿಸುವ 11
--------------
ವಿಜಯದಾಸ
ಕೂಸಿನಲ್ಲಿ ಬಾಲಕೃಷ್ಣ ಕೇಶವಾರ್ಯ ಪುತ್ರನಲ್ಲಿವಾಸಮಾಡಿ ಸತತ ಮನವ ಪೋಷಿಸೂವನು 1 ತರುಣಿಯಲ್ಲಿ ಮಾಧವವಿರುವ ಶರಣರೊಳಗೆ ವಸುದೇವನರಿತು ತೋಷಿಸುವುದು ಸತತ ಹರುಷದಿಂದಲೀ 2 ವಾಸುದೇವ ಖಗವರೇಣ್ಯನು 3 ದಿವಿಜ ನಾರಾಯಣನು ವಸ್ತಿ ಮಾಡಿಹನು4 ಸುರಭಿಯಲ್ಲಿ ವಿಷ್ಣುರೂಪಿ ತುರಗದಲ್ಲಿ ವಾಮನಾತ್ಮಇರುವ ಸಂಕರ್ಷಣಾಖ್ಯ ಚರಮ ಜಾತಿಯಲೀ 5 ನಿತ್ಯ ವೈಶ್ಯ ಪ್ರದ್ಯುಮ್ನಭೃತ್ಯರಲ್ಲಿ ಮಹಿದ್ರಾಸ ಕೃತ್ಯ ನಡೆಸುವಾ 6 ಮಹಿಷಿಯಲ್ಲಿ ಉಪೇಂದ್ರ ಗಜದಲ್ಲಿ ಚಕ್ರಪಾಣಿಬೆಕ್ಕಿನಲ್ಲಿ ವಿಶ್ವರೂಪ ಸತತ ತಿಳಿವುದೂ 7 ಶುನಕ ಭೂತ ಭಾವನಸರ್ವರೊಳಗೆ ಅನಂತರೂಪ ಹರಿ ನಿವಾಸಿಪ 8 ನಿತ್ಯದಲ್ಲಿ ಹರಿಯು ಹೀಗೆ ಚಿತ್ತವಿಟ್ಟು ಲಕ್ಷಣೀಯುವರ್ತಿಸುತಲಿ ಯದುವರೇಣ್ಯನ ಪತ್ನಿಯಾದಳು 9 ಪರಮಪುರುಷನಮಲ ರೂಪ ಸ್ಮರಿಸುತಲೆ ಪೋಷ್ಯರಲ್ಲಿತೊರೆದು ಕರ್ಮಲೇಪ ಶಿರಿಯ ಹೋದುವಾ 10 ನಂದಸುತನ ತಿಳಿದು ಪೋಷ್ಯ ವೃಂದದಲ್ಲಿ ಭೋಗ ನೀಡಿಇಂದಿರೇಶ ನಮಗೆ ಮೋಕ್ಷಾನಂದ ಕೊಡುವನು 11
--------------
ಇಂದಿರೇಶರು
ಕೃಷ್ಣ ಗೋಪಿ ಬಾಲನೆ ಬಹುಗುಣಶೀಲನೆಗೋವಳಪಾಲನೆ ನೋಡುವೆ ಬಾ ಬಾ ಬಾ ಪ ಗೋಪ ರೂಪನೆ ಪಾಪ ದೂರನೆನೀಪದೊಳು ಕುಳಿತು ಗೋಪೇರ ವಸ್ತ್ರವಶ್ರೀಪತಿ ನೀಡಿದಿ ಬಾ ಬಾ ಬಾ 1 ಸಿಂಧು ಮಂದಿರ ಸುಂದರಾಂಬರಮಂದಹಾಸವ ಮಾಡಿ ವಂದಾರುಗಳ ಮಾಡಿಆನಂದದಿ ನೋಡುವೆ ಬಾ ಬಾ ಬಾ 2 ದೋಷದೂರನೆ ವಾಸುದೇವನೆಶೇಷಗಿರಿಯಲಿ ನಿಂತು ದಾಸ ಜನರಿಗೆಲ್ಲಇಂದಿರೇಶನೆ ಕಾಯುವಿ ಬಾ ಬಾ ಬಾ3
--------------
ಇಂದಿರೇಶರು
ಕೃಷ್ಣ ಮುರಾರಿ ಕೇಶವ ಮುರಾರಿಅಚ್ಚುತಾನಂತ ಗೋವಿಂದ ಮುರಾರಿಪ. ವೇಷಧಾರಿಯಾಗಿ ಬಂದು ಅಸುರರ ಸಂಹರಿಸಿಭೂಸುರರಿಗ್ವೊರವನಿತ್ತ್ಯೋ ಕೇಶವ ಮುರಾರಿ 1 ನಾ ತಾಳಲಾರೆನೊ ಲೋಕಾಧಿಪತಿಯೆ ಕಾಯೊಅನಾಥರಕ್ಷಕ ನಾರಾಯಣನೆ ಮುರಾರಿ 2 ಮಾಧವ ಮುರಾರಿ3 ಅನೇಕ ಗೋವ್ಗಳ ಕಾಯ್ದ ಗೋಪಾಲಮೂರುತಿಗೋಪಿಯರರಸ ಗೋವಿಂದ ಮುರಾರಿ 4 ಕಟ್ಟಿದ ಕಾಮನೆಯ ಬಿಟ್ಟು ಕಳಚಿ ಮನ-ದಿಷ್ಟಾರ್ಥವನೀವ ವಿಷ್ಣು ಮುರಾರಿ 5 ಮಧುರವಾಕ್ಯಗಳಿಂದ ಮಂದಿರಕಾಗಿ ಬಾರೊಮನಸಿಜನಯ್ಯ ಮಧುಸೂದನ ಮುರಾರಿ 6 ತಿದ್ದಿದ ಕಸ್ತುರಿತಿಲಕ ತಿಗುರಿದ ಪರಿಮಳಗಂಧಮುದ್ದು ನಸುನಗೆಯ ತ್ರಿವಿಕ್ರಮ ಮುರಾರಿ7 ಕಾಮಿನಿ ಅಗಲಿಬಂದು ಸೀಮೆನಾಳುವೆÀನೆಂದುನೇಮವಾಕ್ಯದಿ ನಿಂದ ವಾಮನ ಮುರಾರಿ 8 ಶ್ರೀಯರಸ ಮೇಳದಿ ರಮಿಸಿ ಬಹುಕಾಲದಿಸಿಂಧುಶಯನ ಶ್ರೀಧರನೆ ಮುರಾರಿ 9 ಋಷಿಗಳಿಗ್ವರವಿತ್ತು ಬೃಂದಾವನದಲ್ಲಿ ನಿಂದುಹರುಷವಾರಿಧಿ ಹೃಷಿಕೇಶ ಮುರಾರಿ 10 ಪಾವನ್ನ ಮೂರುತಿ ಪರಮದಯಾಳು ನೀನೆಪಾಲಿಸೊ ಶ್ರೀಪದ್ಮನಾಭ ಮುರಾರಿ11 ದಾನವರ ಮರ್ದಿಸಿ ಸುಮನಸರಿಗೊಲಿದದಾನದತ್ತನೆ ದಾಮೋದರನೆ ಮುರಾರಿ 12 ಶಂಕೆಯಿಲ್ಲದೆ ಗೆಲಿಸು ಶಂಖಚಕ್ರವ ಧÀರಿಸಿ ಅ-ಲಂಕಾರವಾದ ಸಂಕರ್ಷಣನೆ ಮುರಾರಿ 13 ವಾಸುದೇವ ಮುರಾರಿ 14 ಇದ್ದ ಗೋಪೇರಮನೆಯ ಕದ್ದು ಬೆಣ್ಣೆಯ ಮೆದ್ದಪದ್ಮದಳಾಕ್ಷ ಪ್ರದ್ಯುಮ್ನ ಮುರಾರಿ 15 ಅನಿರುದ್ಧ ಮುರಾರಿ16 ಪುನಗು ಕಸ್ತೂರಿಗಂಧ ಪರಿಮಳಪುಷ್ಪದಿಂದ ಪುಣ್ಯಮೂರುತಿ ಪುರುಷೋತ್ತಮನೆ ಮುರಾರಿ 17 ಅವನಿ ಅಧೋಕ್ಷಜ ಮುರಾರಿ 18 ನಾನೇನ ಪೇಳಲಿ ನಗೆನಗೆಯಲ್ಲಿ ಅಕ್ಷಿಕ್ರೂರವಾಯಿತು ನಾರಸಿಂಹ ಮುರಾರಿ 19 ಮೆಚ್ಚಿದೆ ನಾ ನಿನ್ನ ಪಕ್ಷಿವಾಹನ ಸ್ವಾಮಿಮುಚ್ಚುಮರೆಗಳ್ಯಾಕೊ ಅಚ್ಚುತ ಮುರಾರಿ 20 ಜಾಣತನದಿ ಪೋಗಿ ಜಾರಸ್ತ್ರೀಯರನ್ನುಒಡಗೂಡಿ ಆಡಿದ ಜನಾರ್ದನ ಮುರಾರಿ21 ಉಗುರಲ್ಲಿ ಹಿರಣ್ಯಕನ ಸೀಳಿ ಉರದಲ್ಲಿ ಮಾಲೆಯ ಧರಿಸಿಉಬ್ಬಲ್ಲಿ ಮೆರೆದ ಉಪೇಂದ್ರ ಮುರಾರಿ 22 ಹಿರಣ್ಯಾಕ್ಷತನಯನಂದು ಕರೆಯೆ ಕಂಬದಿ ಬಂದಗರುವದಿಂದಲೆ ನರಹರಿಯೆ ಮುರಾರಿ 23 ಅಟ್ಟಡವಿಯ ತಪಸು ಎಷ್ಟುದಿನವೊ ಸ್ವಾಮಿಪಟ್ಟಣಕಾಗಿ ಬಾರೊ ಕೃಷ್ಣಮುರಾರಿ 24 ಎಲ್ಲರ ಸಲಹಿದ ಫುಲ್ಲಲೋಚನ ಸ್ವಾಮಿಪಾಲಿಸೊ ಶ್ರೀಹಯವದನ ಮುರಾರಿ 25
--------------
ವಾದಿರಾಜ