ಒಟ್ಟು 194 ಕಡೆಗಳಲ್ಲಿ , 47 ದಾಸರು , 179 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೀಂಗ್ಯಾಕ ಪ್ರಾಣಿ | ಹೀನ ಗುಣಗಳನೆಬಿಡಲಿಲ್ಲ | ಶ್ರೀ ಗುರುವಿನಾಶೆಯ ಮಾಡಲಿಲ್ಲ ಪ ವಿವೇಕವ ತೊಡಲಿಲ್ಲ ಅ-ವಿವೇಕವ ಸುಡಲಿಲ್ಲ |ಸಾವಧಾನದಿ ಮನವಿಡಲಿಲ್ಲ 1 ಆಚಾರವ ಕೊಳಲಿಲ್ಲಮತ್ಸರವ ಮರೆಯಲಿಲ್ಲಸಚ್ಚಿದಾನಂದ ಸುಖ ಉಣಲಿಲ್ಲ 2 ಈ ನಡತೀ ತರಹವಜಾಣನಾದವನೇ ಬಲ್ಲ |ಜ್ಞಾನಬೋಧನು ಸಾರಿದ ಸೊಲ್ಲ 3
--------------
ಜ್ಞಾನಬೋದಕರು
435(ಅ)ನಮೋ ಯತಿಕುಲಶಿಖಾಮಣಿಯೆ ಸುಗುಣನಿಧಿಯೆಮತಿಮತಾಂವರ ಮಾನಿನೇ ಪ.ಭುವನೇಂದ್ರತೀರ್ಥ ಯತಿಪ್ರವರಕರಸಂಜಾತಸುವಿವೇಕಿ ವರದೇಂದ್ರಕರಸಂಭವಾಯಅವಿಕಳಾನಂದ ವೈಷ್ಣವನಿವಹಗೀರ್ವಾಣತ-ರವ ಸುಕೃತೇಂದ್ರ ಸದ್ಗುರುವೆ ನಮೋಸ್ತುತೇ 1ಕಾಶೀಮಠಾದಿಪತಿಯೇ ಸುಸನ್ಯಾಸಿಯೇ ಸ(ತ್ತ್ವ) ಗುಣಭೂಷಾಯ ತೇವ್ಯಾಸ ರಘುಪತಿಚರಣದಾಸವತ್ಪೂಜಕ ವಿ-ಶೇಷಭಕ್ತಿಜ್ಞಾನಶಾಲಿನೇ ತುಭ್ಯಂ2ಆಜಾನುಬಾಹುವೇ ಗೌಡಸಾರಸ್ವತ ಮ-ಹಾಜನಸಮಾಜಮಂಡಲವಾಸಿನೇರಾಜೀವನಯನಾಯ ನಮಿತಜನನಿಕರ ಸುರಭೂಜಾಯಭೂರಿರವಿತೇಜಸ್ವಿನೇ3ತುಷ್ಟಾಯ ಭಾಗವತನಿಷ್ಟಾಯ ದ್ವಿಜಕುಲವರಿಷ್ಠಾಯ ಷಡ್ವರ್ಗಜಿಷ್ಣವೇ ತುಭ್ಯಂದುಷ್ಟ ಜನ ದೂರಾಯ ಧೀರಾಯ ಭಕ್ತದ-ತ್ತೇಷ್ಟಾಯ ಮಹತೇ ಸಹಿಷ್ಣವೇ ಮಹತೇ 4ಬ್ರಹ್ಮಚರ್ಯಾದಿ ವ್ರತಧರ್ಮಾತ್ಮನೇ ವಿಹಿತಕರ್ಮಣೇ ಸುಕೃತೇಂದ್ರ ಶರ್ಮಣೇ ತುಭ್ಯಂಬ್ರಹ್ಮಪಿತ ಲಕ್ಷ್ಮೀನಾರಾಯಣಾಂಘ್ರಿಧೃತಿ ಸು-ನಿರ್ಮಲಾಂತಃಕರಣ ಕರುಣನೀರಧಯೇ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಇರಲೇ ಬಾರದು - ಇಂಥಲ್ಲಿಇರಬಾರದಿಂದ ......... ವರೆ ಭಯಂಕರದುರುಳ ಜನ ಸಹವಾಸದಲ್ಲಿ ದುಷ್ಟಮೃಗವಿದ್ದಡವಿಯಲ್ಲಿ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಉರಗಗಳು ಸೇರಿಕೊಂಡ ಸದನಗಳಲ್ಲಿಕರುಬರಿದ್ದ ಊರಗಳಲಿ ಕಲಹ ಹೆಚ್ಚಿದ ರಾಜ್ಯದಲ್ಲಿಪರಹಿಂಸೆಯ ಮಾಡಲಂಜದ ಪಾಪಿಗಳಿದ್ದಲ್ಲಿ 1ಅವಿವೇಕದ ಪ್ರಭುಸೇವೆಯಲ್ಲಿ ಆತ್ಮಸೌಖ್ಯವಿಲ್ಲದಲ್ಲಿಲವಶೇಶವು ಸದ್ವಿದ್ಯಾ ಮಾತ್ರ ಲಾಭವಿಲ್ಲದಲ್ಲಿನವಯೌವನಭರಿತ ನಾರಿ ತಾನೊಬ್ಬಳಿದ್ದಲ್ಲಿಅವನಿಯೊಳಗರ್ಥಪ್ರಾಪ್ತಿಇಲ್ಲದಂಥಲ್ಲಿ2ಮಾನವಲ್ಲದ ಸಭೆಯಲ್ಲಿ ಮಾತ ಕದಿವ ನ್ಯಾಯದಲ್ಲಿನೂನ್ಯಪೂರ್ಣ ಎನ್ನವವನ ಉಟ್ಟಕಾಲದಲ್ಲಿಶ್ರೀನಾಥ ಶ್ರೀ ಪುರಂದರವಿಠಲ ರೂಪಗಳುಅನಂತಾನಂತವೆಂದು ಅರಿಯದ ಅದ್ವೆಷ್ಣವರಲ್ಲಿ 3
--------------
ಪುರಂದರದಾಸರು
ತಾಸು ಬಾರಿಸುತಿದೆಕೇಳಿ - ಹರಿದಾಸರೆಲ್ಲ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ತಾಸು ಬಾರಿಸುತಿದೆಕೇಳಿಪ.ಹಾಸುಮಂತ ಸುಪ್ಪತ್ತಿಗೆಯಲಿ - ಹಗಲು ಇರುಳು |ಹೇಸರಗತ್ತೆಯಂತೆ ಹೊರಳಿ - ಸ್ತ್ರೀಯರಗೂಡ |ಬೇಸರದೆ ನಿತ್ಯವು ಉರುಳಿ ||ಈಪರಿ ಕಾಲವ ಕಳೆದೆಯೊಕಾಲ ಸ |ಮೀಪವಾಯಿತು ಎಂದೀಗಲೆ 1ವೃಧ್ಧ ಯಾವನ ಬಾಲಕಾಲ - ವಿವೇಕವಿಲ್ಲದ |ಬುದ್ಧಿ ಮಾಂದ್ಯವು ಹಲವುಕಾಲ - ಆಹಾರಸಂಗ |ನಿದ್ರೆಯಿಂದಲಿ ಅತಿಲೋಲ ||ಈಶನ ಭಜಕರ ಭಜಿಸದೆ ಮಾನುಷಾ |ಯುಷ್ಯವೆಲ್ಲವು ವ್ಯರ್ಥವಾಯಿತಾಯಿತೆಂದು 2ಕಂಡ ವಿಷಯವ ಕಾಮಿಸಿ - ಕಷ್ಟಪಡದೆ |ತಾಂಡವ ಕೃಷ್ಟನ ಭೇಸಿ - ಪುಂಡನೆನಿಸದೆಭಂಡಧಾವತಿಯನು ತ್ಯಜಿಸಿ ||ಪುಂಡರೀಕಾಕ್ಷ ಪುರಂದರವಿಠಲನ |ಕೊಂಡು ಭಜಿಸಿರೈಯ ಢಂ ಢಂ ಢಂ ಡಣ್ಣೆಂದು 3
--------------
ಪುರಂದರದಾಸರು
ತುದಿನಾಲಿಗೆ ಬೆಲ್ಲ ಎದೆಗತ್ತರಿಯವರ ಸಂಗಬೇಡಹೃದಯ ದಾಕ್ಷಿಣ್ಯವನರಿಯದ ಮನುಜರ ಪ್ರಸಂಗಬೇಡ ಪ.ಮುಂದೆ ಭಲಾ ಎಂದು ಹಿಂದಾಡಿಕೊಂಬರ ಸಂಗಬೇಡಕುಂದು - ನಿಂದೆಗಳ ಪ್ರಯೋಗ ಮಾಡುವರಪ್ರಸಂಗ ಬೇಡ 1ಆಡಿ ಅಳುಕದ ಅಜಾÕನಿ ಮನುಜರ ಸಂಗಬೇಡಕೂಡಿ ಕುಮಂತ್ರವ ಎಣಿಸುವ ನರರ ಪ್ರಸಂಗ ಬೇಡ 2ವಿನಯ - ವಿವೇಕವಿಲ್ಲದ ವಿದ್ವಾಂಸರ ಸಂಗಬೇಡತನಗಲ್ಲದಬಂಟ- ನಂಟ - ಮಿತ್ರಾಂಗಳ ಸಂಗಬೇಡ3ತಮ್ಮ ಕಾರ್ಯಕ್ಕಾಗಿ ಪರರ ಕೆಡಿಸುವರ ಸಂಗ ಬೇಡನಮ್ಮ ಪುರಂದರವಿಠಲನಿರಲನ್ಯ ಪ್ರಸಂಗ ಬೇಡ 4
--------------
ಪುರಂದರದಾಸರು
ದಾತೆಇಂದಿರೆಪಾರಿ| ಜಾತ ಮಂದಿರೆ ಲೋಕ |ನಾಥೆ ಸುಖ ಪೂರ್ಣೆ ವಿಖ್ಯಾತೆ ||ಬಿನ್ನವಿಸುವೆನೆ ಯನ್ನಮಾತು ಮನ್ನಿಪುದೇ ವಿಧಿಮಾತೆ ಪಪಾನೀಯಧಿ ಹರಿಗೆ | ಏನು ಕೊಟ್ಟನೊ ನಿನ್ನ |ಕಾಣಿಸವೆ ಕಣ್ಣು ಕುಲವಿಲ್ಲ ||ಗೋತ್ರವಿಲ್ಲ ಹೆತ್ತವರ-ಕ್ಷೋಣಿಯೊಳಗೊಬ್ಬರರಿತಿಲ್ಲ1ಏನು ಮರುಳಾದೆವ್ವ | ಶ್ರೀನಾರಿಯಿಂಥವಗೆ |ಹೀನಳುಚ್ಛಿಷ್ಟ ಫಲಮೆದ್ದ ||ಬಡ ಬ್ರಾಹ್ಮಣೊದ್ದರೆಮಾನವೇ ಇಲ್ಲಿ ನಗುತಿದ್ದ2ಥವ ಚೋರ ಬಹುಜಾರ| ಸವತಿಯರು ಬಲು ಮಂದಿ |ಅವರಿಗಾತ್ಮಜರು ಹತ್ತತ್ತು ||ನಿನ್ನೊಗತನದೊಳಿದ್ದಅವಿವೇಕ ಮೂಲೋಕಕೆ ಗುರುತು3ಅತ್ತೆ ಮಾವಗಳಿಲ್ಲ |ವೃತ್ತಿಕ್ಷೇತ್ರಗಳಿಲ್ಲ |ಹಸಿದರನ್ನಿಲ್ಲ ಮನೆಯಲ್ಲಿ ||ಈ ಗಂಡನೊಡನೆಯೇ-ನರ್ಥಿ ಪಡುತಿಹೆಯೆ ನೀ ಬಲ್ಲೆ 4ಸೇರಿದನುಪತಿನಿನ್ನ | ತೌರು ಮನೆ ನೋಡಲ್ಕೆ |ಧಾರಿಣಿಯೊಳಗೆ ಬಹು ನಿಂದಾ ||ಭಕ್ತಿಯಿಂದವನ ಹ್ಯಾ-ಗಾರಾಧಿಸುವದೋ ಸುರವೃಂದಾ 5ಶಿಶು ಹಿಂಸಕತಿ ಕಠಿಣ | ಹಸನ್ಮುಖನಲ್ಲರ್ಭಕ ಹೆಂ- |ಗಸರಳಿದ ಪುಕ್ಕಾ ಬಹು ಠಕ್ಕಾ ||ಕಲಹಗಂಟೇನು ಸೇ-ವಿಸಿದ್ಯೊ ವ್ರತಗಳನು ಇವ ಸಿಕ್ಕಾ6ಎಲ್ಲೆಲ್ಲಿ ನೋಡಿದರು | ಇಲ್ಲಿ ಪ್ರಾಣೇಶ ವಿ- |ಠಲನಂಥವರೂ ಏನೆಂಬೆ ||ಮುದದಿಂದ ಬಿಡದೆ ಅವ-ನಲ್ಲಿ ಪೊಂದಿರ್ಪೆ ಜಗದಂಬೆ 7
--------------
ಪ್ರಾಣೇಶದಾಸರು
ನಂಬಿದವರಿಗೆ ಇಂಬುದೋರುವ |ಲಂಬೋದರ ಗಣನಾಯಕ ಪಶಂಭು ಶಂಕರಸುತನೆ ಭಕ್ತಕುಟುಂಬಿ ವಿಘ್ನನಾಯಕ ಅ.ಪಏಕದಂತ ವಿವೇಕದಾತನೆ | ಲೋಕನಾಥ ಪ್ರಖ್ಯಾತನೆಶೋಕಹರಹೇರಂಬಗಜಮುಖಕಾಕುಜನಸಂಹಾರಕನೆ ಜಯತು ಜಯತು 1ಕುಂಕುಮಾಂಕಿತ ದೇವದೇವನೆ | ಕಿಂಕರನ ನುತಿಪಾತ್ರನೆಶಂಕರಿಯ ಸುಕುಮಾರ ಮಧುಪುರಪಂಕಜಾದಳನೇತ್ರನೆ ಜಯತು ಜಯತು 2ವಿಘ್ನಘನಕಾಂತಾರಕ ನಲನೆ | ವಿಘ್ನ ಮೇಘಕೆ ಅನಿಲನೆವಿಘ್ನಕರ ಯಾಮಿನಿಗೆಭಾಸ್ಕರವಿಘ್ನಸಾಮಜಕೇಸರಿಜಯತು ಜಯತು 3ಗಂಧಚಂದನ ಪುಷ್ಪಫಲಗ | ಳಿಂದ ನಿನ್ನನು ಪೂಜಿಸಿವಂದಿಸುವೆ ನಿನ್ನಂಘ್ರಿ ಕಮಲಕೆ ಸಲಹೊಸಲಹೊ ಗೋವಿಂದದಾಸನ ಜಯತು ಜಯತು 4
--------------
ಗೋವಿಂದದಾಸ
ನಂಬಿದೆನು ಜಗದಂಬೆ ನಿನ್ನನು ಪಾಲಿಸು ಸರ್ವಾ-ರಂಭಸೂತ್ರಳೆ ಇಂಬುದೋರಿನ್ನು ಪ.ಅಂಬುಜಾಂಬಕಿ ಶುಂಭಮರ್ದಿನಿಕಂಬುಗ್ರೀವೆಹೇರಂಬಜನನಿಶೋ-ಣಾಂಬರಾವೃತೆ ಶಂಭುಪ್ರಿಯೆ ದಯಾ-ಲಂಬೆ ಸುರನಿಕುರುಂಬಸನ್ನುತೆ ಅ.ಪ.ಕ್ರೂರದೈತ್ಯವಿದಾರೆ ಮಹದಾಕಾರೆ ಮಂಗಲೇ ವಿಶ್ವಾ-ಧಾರೆ ಕಲ್ಮಷದೂರೆ ಕದನಕಠೋರೆ ನಿಶ್ಚಲೆ ಪಾರಾ-ವಾರ ಸಮಗಂಭೀರೆ ಸುಗುಣವಿಹಾರೆ ನಿರ್ಮಲೆ ರತಿಶೃಂ-ಗಾರೆ ರಿಪುಸಂಹಾರೆ ತುಂಬುರುನಾರದಾದಿಮುನೀಂದ್ರ ನುತಚರ-ಣಾರವಿಂದೆ ಮಯೂರಗಾಮಿನಿಸೂರಿಜನ ಸುಮನೋರಥಪ್ರದೆ 1ಮೂಲರೂಪೆ ದಯಾಲವಾಲೆವಿಶಾಲಸುಗುಣಯುತೆ ಮುನಿಜನ-ಲೋಲತರುಣಮರಾಳೆ ಸಚ್ಚರಿತೆ ನವಮಣಿಮಾಲೆ ಮನ್ಮಥಲೀಲೆ ರಿಪುಶಿರಶೂಲೆ ಸಚ್ಚರಿತೆ ಹಿಮಗಿರಿ-ಬಾಲೆ ನೀಲತಮಾಲವರ್ಣೆ ಕ-ರಾಳಸುರಗಿ ಕಪಾಲಧರೆ ಸುಜ-ನಾಳಿಪಾಲನಶೀಲೆ ಹಿಮಕರಮೌಳಿಶೋಭಿತೆ ಕಾಳಿಕಾಂಬಿಕೆÉ 2ಶೋಕಮೋಹಾನಾನೀಕದೂರೆ ಪಿನಾಕಿಸುಪ್ರೀತೆ ಕೋಟಿ ದಿ-ವಾಕರಾಭೆಪರಾಕುಶರಣಜನೈಕಹಿತದಾತೆ ಸುರನರ-ಲೋಕಮಾತೆ ನಿರಾಕುಲಿತೆ ಸುವಿವೇಕಗುಣವ್ರಾತೆ ಮಾನಸ-ವಾಕುಕಾಯದಿಂದ ಗೈದಾನೇಕ ದುರಿತವ ದೂರಗೈದು ರ-ಮಾಳಕಳತ್ರನ ಪಾದಭಕುತಿಯ ನೀ ಕರುಣಿಸು ಕೃಪಾಕರೇಶ್ವರಿ3ಈಶೆ ಪಾಪವಿನಾಶೆ ಮಣಿಗಣಭೂರಿಪ್ರದೆ ಶಕ್ತಿವಿ-ಲಾಸೆ ವಿಗತವಿಶೇಷೆ ಕೃತಜಯಘೋಷೆ ಸರ್ವವಿದೆ ಮನ್ಮನ-ದಾಸೆಗಳ ಪೂರೈಸು ಸಜನರ ಪೋಷೆ ಕುಂದರದೆ ಶಂಕರೋ-ಲ್ಲಾಸೆ ಯೋಗೀಶಾಶಯಸ್ಥಿತೆವಾಸವಾರ್ಚಿತೆ ಶ್ರೀಸರಸ್ವತಿದೋಷರಹಿತೆ ಮಹೇಶೆ ಸುಗುಣರಾಶಿ ಸುರತತಿದಾಸಜನಯುತೆ 4ಸಾಮಗಾನಪ್ರೇಮೆ ರಾಕ್ಷಸ ಭೀಮೆ ರುದ್ರಾಣಿ ಅರಳ-ಗ್ರಾಮದೇವತೆ ಕ್ಷೇಮದಾಯಿನಿ ತಾಮರಸಪಾಣಿ ಪಶುಪತಿ-ವಾಮಭಾಗಲಲಾಮೆ ಮಂಗಲಧಾಮೆ ಫಣಿವೇಣಿ ಜಯಜಯಶ್ರೀಮಹಾಲಕ್ಷ್ಮಿ ನಾರಾಯಣಿರಾಮನಾಮಾಸಕ್ತೆ ಕವಿಜನ-ಸ್ತೋಮಕೃತ ಪರಿಣಾಮೆ ಭೌಮೆ ಪುಲೋಮಜಾರ್ಚಿತೆಸೋಮಶೇಖರಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನೆಚ್ಚದಿರೀ ಭಾಗ್ಯ ಆರಿಗೂ ಸ್ಥಿರವಲ್ಲನೆಚ್ಚದಿರೆಚ್ಚರಿಕೆಹೆಚ್ಚದೆ ಹಿಗ್ಗದೆ ಇದ್ದರೆ ಲೋಕಕೆಮೆಚ್ಚು ಕೇಳೆಚ್ಚರಿಕೆ ಪ.ಪೊಡವಿಪರೊಲೂಮೆ ಸುಸ್ಥಿರವೆಂದು ಗರ್ವದಿನೆಡೆಯದಿರೆಚ್ಚರಿಕೆಕೊಡವನಂಧಕ ಪೊತ್ತು ನಡೆವಂತೆ ಅಧಿಕಾರಕಡೆಉಒಲ್ಲ ಎಚ್ಚರಿಕೆಕಡುಚಪಲನು ತಾನೆಂದು ಪರರವಗಡಿ ಸದಿರೆಚ್ಚರಿಕೆಬಡವರೆಡರ ಲಾಲಿಸದೆಮುಂದಕ್ಕಿ ಹೆಚ್ಚುಇಡಬೇಡವೆಚ್ಚರಿಕೆ 1ದೊರೆಗಳ ಒಲವಲಂಯಂತೆಂದಲ್ಲರೊಳುಹಗೆತರವಲ್ಲ ಎಚ್ಚರಿಕೆಉರಗನ ಮುತ್ತಿ ಕಟ್ಟಿರುವೆಯು ಕೊರೆದಂಥತೆರನಪ್ಪುದೆಚ್ಚರಿಕೆಗುರುಹಿರಿಯರ ಕಂಡು ಚರಣಕೆ ಶಿರಬಾಗಿನಡೆಯುತಿರೆಚ್ಚರಿಕೆಸಿರಿಯೆಂಬ ಸೊಡರಿಗೆ ಮಾನ್ಯರ ಅವಮಾನಬಿರುಗಾಳಿ ಎಚ್ಚರಿಕೆ 2ಲೋಕಾಪವಾದಕೆ ಅಂಜಿ ನಡೆಯುವುದು ವಿವೇಕ ಕೇಳಚ್ಚರಿಕೆನಾಕೇಂದ್ರನಾದರೂ ಬಿಡದಪಕೀರ್ತಿ ಪರಾಕು ಕೇಳೆಚ್ಚರಿಕೆಕಾಕು ಮನುಜರಕೊಂಡೆಯ ಕೇಳೀ ಕೋಪದುದ್ರೇಕ ಬೇಡೆಚ್ಚರಿಕೆಭೂಕಾಂತೆ ನಡು - ನಡುಗುವಳು ನಿಷ್ಠುರವಾದವಾಕುಕೇಳೆಚ್ಚರಿಕೆ3ನಳ - ಮಾಂಧಾತರೆಂಬವರೇನಾದರುತಿಳಿದು ನೋಡೆಚ್ಚರಿಕೆಅಳಿವುದು ಈ ದೇಹ ಉಳಿವೂದೆಂದೇ ಕೀರ್ತಿಇಳೆಯೊಳಗೆಚ್ಚರಿಕೆಅಳಲಿಸಿ ಪರರನು ಗಳಿಸಿದಂಥ ಹೊನ್ನುಉಳಿಯದು ಎಚ್ಚರಿಕೆಉಳಿದಲ್ಪಕಾಲದಿ ಬಡವರಾದವರನುಹಳಿಯದಿರೆಚ್ಚರಿಕೆ 4ಪರಸತಿ - ಪರಧನಕಳುಪಲು ಸಿರಿಮೊಗದಿರುಹುವಳಚ್ಚರಿಕೆನೆರೆ ಛಿದ್ರಕುಂಭದ ನೀರಿನಂತಾಯುಷ್ಯಸರಿಯುವುದೆಚ್ಚರಿಕೆಬರುವ ಹಾನಿವೃದ್ಧಿ ತನ್ನ ಕಾಲದ ಮೀರಲರಿಯದು ಎಚ್ಚರಿಕೆವರದ ಪುರಂದರವಿಠಲರಾಯನಮರೆಯದಿರೆಚ್ಚರಿಕೆ 5
--------------
ಪುರಂದರದಾಸರು
ಪಾಲಿಸೆಮ್ಮ ಮುದ್ದು ಶಾರದೆ-ಎನ್ನ-ನಾಲಗೆಯಲಿ ನಿಲ್ಲಬಾರದೆ ಪಲೋಲಲೋಚನೆ ತಾಯೆ | ನಿರುತ ನಂಬಿದೆ ನಿನ್ನ ಅ.ಪಅಕ್ಷರಕ್ಷರ ವಿವೇಕವ-ನಿಮ್ಮ ಕುಕ್ಷಿಯೊಳೀರೇಳು ಲೋಕವ |ಸಾಕ್ಷಾದ್ರೂಪದಿಂದ ಒಳಿದು ರಕ್ಷಿಸು ತಾಯೆ 1ಶೃಂಗಾರಪುರ ನೆಲೆವಾಸಿನಿ-ದೇವಿ-ಸಂಗೀತ ಗಾನ ವಿಲಾಸಿನಿ |ಭೃಂಗಕುಂತಳೆ ತಾಯೆ-ಭಳಿರೇ ಬ್ರಹ್ಮನ ರಾಣಿ 2ಸರ್ವಾಲಂಕಾರಮಯ ಮೂರುತಿ-ನಿನ್ನಚರಣವ ಸ್ತುತಿಸುವೆ ಕೀರುತಿ |ವರದಪುರಂದರವಿಠಲನ ಸ್ತುತಿಸುತ3
--------------
ಪುರಂದರದಾಸರು
ಪೂರ್ವಜನ್ಮದಲಿ ನಾ ಮಾಡಿದಾ ಭವದಿಂದಉರ್ವಿಯೊಳು ಜನಿಸಿದೆನೊ ಕೃಷ್ಣ ಪಕಾರುಣ್ಯನಿಧಿಯನ್ನ ಕಾಯಬೇಕಯ್ಯಹರಿವಾರಿಜನಾಭನೇ ಮುದ್ದುಕೃಷ್ಣ ಅ.ಪಹುಟ್ಟಿದಂದಿಂದಿಗೂ ಸುಖವ ನಾ ಕಾಣದಲೆಕಷ್ಟನಾದೆನು ಕೇಳೊ ಕೃಷ್ಣತೊಟ್ಟಿಲಿನ ಶಿಶು ತಾಯ ಬಿಟ್ಟ ತೆರನಂತೆ ಕಂಗೆಟ್ಟು ಸೊರಗಿದೆನಯ್ಯ ಕೃಷ್ಣಮುಟ್ಟಲಮ್ಮರು ಎನ್ನಸತಿಸುತರು ಬಾಂಧವರುಅಟ್ಟಿ ಎಳೆಯುತ್ತಿಹರೋ ಕೃಷ್ಣಕಷ್ಟ ದಾರಿದ್ರ್ಯವನು ಪರಿಹರಿಸದಿರೆ ದೂರುಮುಟ್ಟುವುದು ನಿನಗಯ್ಯ ಕೃಷ್ಣ 1ಕಾಶಿಯಾವಾಸವನು ಬಯಸಿ ಬಹುದಿನದಿಂದಆಸೆಯೊಳಗಿದ್ದೆನಯ್ಯ ಕೃಷ್ಣಗಾಸಿಯನು ಮಾಡದಲೆ ದೋಷವನು ಪರಿಹರಿಸೊಸಾಸಿರನಾಮದ ಕೃಷ್ಣಹೇಸಿಕೆಯೊಳಿರ್ದ ಸಂಸಾರವೆಂಬುವ ಮಾಯಪಾಶದಿಂದಲಿ ಬಿಗಿದರೇ ಕೃಷ್ಣಕಂಸಮರ್ದನನೆ ನೀ ಕಾಯಬೇಕಯ್ಯಹರಿವಾಸುದೇವನೆ ಮುದ್ದು ಕೃಷ್ಣ 2ಲೋಕದೊಳಗೆನ್ನನು ಪೋಲ್ಪ ಪಾಪಿಗಳನ್ನುನೀ ಕಂಡು ಬಲ್ಲೆಯಾ ಕೃಷ್ಣಸಾಕಿನ್ನು ಎನಗೊಂದು ಗತಿಯ ತೋರಿಸಿ ಸದ್ವಿವೇಕಿಯನೆ ಮಾಡಯ್ಯ ಕೃಷ್ಣರಾಕೇಂದುಮುಖಿ ದ್ರೌಪದಿಯಮಾನವಕಾಯ್ದೆಆಕೆಗಕ್ಷಯವಿತ್ತೆ ಕೃಷ್ಣ ಪಿನಾಕಿಸಖಪುರಂದರವಿಠಲನೆ ಉಡುಪಿಯ ವಾಸಸಾಕಿ ಸಲಹೈ ಎನ್ನ ಕೃಷ್ಣ
--------------
ಪುರಂದರದಾಸರು
ಪ್ರಥಮ ಕೀರ್ತನೆಪ್ರವೃಜ್ಯ ಕುಲಶಿರೋರತ್ನ ಜಯತೀರ್ಥರಸುವೃತತಿ ಜಾಂಫ್ರಿಯಲಿ ಶರಣಾದೆ ಸತತಸರ್ವೇಷ್ಟದಾತರುವಿಜ್ಞಾನಬೋಧಕರುಮಧ್ವೇಷ್ಟ ಶ್ರೀ ರಮಾಪತಿಗೆ ಪ್ರಿಯತಮರು ಪಅಖಿಳಗುಣಆಧಾರ ನಿರ್ದೋಷ ಶ್ರೀರಮಣಜಗದಾದಿ ಮೂಲಗುರು ಅಗುರು ಶ್ರೀ ಹಂಸವಾಗೀಶಸನಕಾದಿ ದೂರ್ವಾಸಾದಿಗಳಪೀಳಿಗೆ ಗುರುಗಳಿಗೆ ಶರಣು ಶರಣೆಂಬೆ 1ಪುರುಷೋತ್ತಮತೀರ್ಥಅಚ್ಯುತಪ್ರೇಕ್ಷರಿಗೆಪುರುಷೋತ್ತ ಮಾರ್ಯರಕರಕಮಲಜಾತವರವಾತಅವತಾರ ಆನಂದತೀರ್ಥರಚರಣಪದ್ಮದಲಿ ನಾ ಶರಣಾದೆ ಸತತ2ಶ್ರೀ ಮಧ್ವ ಆನಂದತೀರ್ಥಕರಅಬ್ಜಜರುಪದ್ಮನಾಭನೃಹರಿ ಮಾಧವಾಕ್ಷೋಭ್ಯಈ ಮಹಾ ಗುರುಗಳು ಸರ್ವರಿಗು ಆನಮಿಪೆಶ್ರೀ ಮನೋಹರ ಪ್ರಿಯರು ಸಂತೈಪರೆಮ್ಮ 3ತ್ರೇತೆಯಲ್ಲಿ ಶ್ರೀ ರಾಮಚಂದ್ರನ್ನ ಸೇವಿಸಲುಸೀತಾ ಪ್ರತಿಕೃತಿಯಲ್ಲಿ ತಾಪೊಕ್ಕವಾತನ್ನೊಲಿಸಿಕೊಳ್ಳ ದವರ್ಗೆಹರಿಒಲಿಯಎಂದು ಜಗಕೆ ತೋರ್ದ ವಾಲಿಯೇ ಇಂದ್ರ 4ವಾತಾವತಾರ ಹನುಮಂತನೇ ದ್ವಾಪರದಿಕೌಂತೇಯ ಭೀಮನು ಅವನಿಗೆಅನುಜಇಂದ್ರ ಅರ್ಜುನನಾಗಿ ಸೇವಿಸಿ ಹನುಮಧ್ವಜಪಾದಮೂಲದಿ ಕುಳಿತ ಕೃಷ್ಣನು ಒಲಿದ5ಅಖಂಡೈಕ ಸಾರಾತ್ಮ ಅನಂತರೂಪಾಭಿನ್ನಶ್ರೀಕೃಷ್ಣ ರಾಮನೇ ಋಷಿವಂಶದಲ್ಲಿಈ ಕುವಲಯದಲ್ಲಿ ಪ್ರಾದುರ್ಭವಿಸಿದ ವ್ಯಾಸಅಕಳಂಕ ಸುಖಜಿತ್ವಪುಷಶ್ರೀಪತಿಯು6ಆಮ್ನಾಯತತಿಪುರಾಣಗಳು ಪೇಳ್ವಂತೆರಮೆಯರಸ ವ್ಯಾಸನ್ನ ಸೇವಿಸಲು ಇಳೆಯೋಳ್ಭೀಮನೇ ಯತಿ ರೂಪದಲ್ಲಿ ಬಂದಿಹನೆಂದುಸುಮನಸರಾಜ ಪುಟ್ಟಿದನು ಪುನಃ7ಹದಿನೆಂಟು ವರುಷಗಳು ಎತ್ತಾಗಿ ತಾನಿದ್ದುಹೊತ್ತು ಮಧ್ವಾಚಾರ್ಯರ ಪುಸ್ತಕಗಳಭಕ್ತಿಯಲಿ ಸೇವಿಸಿ ಮಧ್ವರಾಯರು ಪಾಠಬೋಧಿಸುವದು ಕೇಳ್ದ ವೃಷಭರಾಟ್ ಇಂದ್ರ 8ಆನಂದಪ್ರದ ತತ್ವಬೋಧಕ ಭಾಷ್ಯಾದಿಗಳಆನಂದ ಮುನಿಮಧ್ವ ಬೋಧಿಸಲು ಗ್ರಹಿಸಿವಿನಯದಿ ಕೇಳ್ದರು ಶಿಷ್ಯರು ಟೀಕೆಗಳಗ್ರಂಥಗಳಿಗೆ ಯಾರು ಮಾಡುವುದು ಎಂದು 9ಈ ಗೋರಾಜನೇ ಟೀಕೆಗಳ ಸಂರಚಿಸಿಜಗತ್ತಲ್ಲಿ ಸತ್ತತ್ವ ಶಾಸ್ತ್ರ ಪ್ರಕಟಿಸುವಹೀಗೆಂದು ಶ್ರೀ ಮಧ್ವಾಚಾರ್ಯರಾಜ್ಞಾಪಿಸಲುಮಿಗೆ ಹರುಷದಲಿ ಗೋರಾಟ್ ಶಿರವ ಬಾಗಿದನು 10ಯುಕ್ತ ಕಾಲದಿ ಈ ಗೋರಾಜ ನೇವೆರಘುನಾಥ ದೇಶಪಾಂಡೆ ರುಕ್ಮಾಬಾಯಿಗೆಮಗನಾಗಿ ಜನಿಸಿದನು ಮಂಗಳವೇಢೆಯಲಿಈ ಗ್ರಾಮ ಪಂಢರಪುರದ ಸಮೀಪ 11ಧೋಂಡುರಾಯನು ಎಂಬ ನಾಮದಲಿ ಬೆಳೆದಗಂಡಿಗೆ ಉಪನಯನ ಮದುವೆಯೂ ಆಯ್ತುಹೆಂಡತಿ ಭೀಮಾಬಾಯಿ ಸುಗುಣೆ ಸೌಂದರ್ಯವತಿಚಂಡ ಶ್ರೀಮಂತರ ಮನೆತನದವಳು 12ಒಂದುದಿನ ಧೋಂಡುರಾಯನು ನದೀ ದಡಕೆಬಂದನು ಕುದುರೆಯ ಮೇಲೇರಿಕೊಂಡುಅಂದು ಅಕ್ಷೋಭ್ಯ ಮಠ ಸಂಚಾರ ಕ್ರಮದಲ್ಲಿನಿಂತಿತ್ತು ಮೊಕ್ಕಾಮಾಗಿ ಆಚೆಕಟ್ಟೆಯಲಿ 13ನದೀತೀರ ಕುಳಿತಿದ್ದ ಅಕ್ಷೋಭ್ಯ ತೀರ್ಥರುಎದುರಾಗಿ ನದಿಯಲ್ಲಿ ಆಚೆದಡದಿಂದಕುದುರೆ ಸವಾರನು ವರ್ಚಸ್ವಿ ಯುವಕನುಬೆದರದೆ ಪ್ರವಾಹದಲಿ ಬರುವದು ನೋಡಿದರು 14ಕುದುರೆ ಮೇಲ್ ಅಸೀನನಾಗಿದ್ದ ಯುವಕನುಕ್ಷುತ್ತೃಷೆಶಮನಕ್ಕೆ ಯತ್ನ ಮಾಡುತ್ತಾಉದಕವ ಕೈಯಿಂದ ತುಂಬಿಕೊಳ್ಳದಲೇಎತ್ತಗಳು ಕುಡಿವಂತೆ ಬಾಯಿ ಹಚ್ಚಿದನು 15ಮಾಧವಮಧ್ವರು ಮೊದಲೇ ಸೂಚಿಸಿದಂತೆಇಂದುಆ ಕುರುಹ ಅರಿತು ಅಕ್ಷೋಭ್ಯರುಇದು ಏನು `ಪಶು' ವಂತೆ ಎಂದು ಧ್ವನಿಕೊಟ್ಟರುಹಿಂದಿನ ಜನ್ಮ ಧೊಂಡೋಗೆ ನೆನಪಾಯ್ತು 16ಪ್ರವಾಹದ ನಗಾರಿಯ ಸಮಬಲಿ ಧೋಂಡುವೇಗ ಲೆಕ್ಕಿಸದಲೇ ದಡಕೆ ತಾ ಬಂದುಮುಗಿದಕರಬಾಗಿ ಶಿರ ನಮಿಸಿ ಅಕ್ಷೋಭ್ಯರಆಗಲೇ ಸಂನ್ಯಾಸಕೊಡಲು ಬೇಡಿದನು 17ಗಾಧಿ ಅರ್ಜುನ ಸಮ ಬಲ ರೂಪದಲಿ ತೋರ್ಪಈತ ರಾಯರ ಸುತನಾದರೂ ವೈರಾಗ್ಯಯುತ ಭಕ್ತಿಮಾನ್ ಸುಶುಭ ಲಕ್ಷಣನೆಂದುಹರಿಮಧ್ವ ನಿಯಮಿತ ಅವಗೆ ಕೊಟ್ಟರು ಸಂನ್ಯಾಸ 18ಶ್ರೀಯಃಪತಿಗೆ ಪ್ರಿಯತರ ಜಯತೀರ್ಥನಾಮವಜಯ ಶೀಲ ಹೊಸಯತಿಗೆ ಇತ್ತು ಅಭಿಷೇಕಅಕ್ಷೋಭ್ಯಗುರು ಮಾಡೆ ಗಗನದಿ ಪೂವರ್ಷಜಯ ಷೋಷ ಹರಡಿತು ಪರಿಮಳ ಸುಗಂಧ 19ತಂದೆ ರಘುನಾಥರಾಯನು ಸುದ್ದಿಕೇಳಿಬಂದು ಅಕ್ಷೋಭ್ಯರ ಕಂಡು ಬಲುಕೋಪದಿಂದ ಯಾಕೆ ಸಂನ್ಯಾಸ ಯುವಕಗೆ ಕೊಟ್ಟಿರಿಎಂದು ವಾದಿಸಿದನು ಪುತ್ರ ಮೋಹದಲಿ 20ಪೂರ್ವಧೋಂಡುರಾಯ ಈಗ ಜಯತೀರ್ಥರುತಾವೇ ಸ್ವೇಚ್ಛೆಯಿಂದ ಕೊಂಡರು ಸಂನ್ಯಾಸಈ ವಿಷಯ ತಿಳಕೊಂಡರೂ ಸಹ ರಘುನಾಥಸೇವಕರ ಸಹ ಮಗನ ಕರಕೊಂಡು ಹೋದ 21ರಾಯನು ಮಗನನ್ನ ಗೃಹಸ್ಥ ಚರ್ಯದಲಿರಿಸೆಶಯನಗೃಹದೊಳು ಪತ್ನಿ ಸಹಿತ ಕಳುಹಿದನುಶಯನ ತಲ್ಪದಿ ದೊಡ್ಡ ಸರ್ಪಕಂಡಳು ಯುವತಿಭಯದಿಂದ ಹೊರಬಂದು ಹೇಳಿದಳು ವಿಷಯ 22ತನ್ನಪತಿಧೊಂಡರಾಯನ್ನ ತಲ್ಪದಲಿಕಾಣದೆ ಅವರಿದ್ದ ಸ್ಥಾನದಲಿ ಸರ್ಪಘನಧೀರ್ಘಗಾತ್ರವಿಸ್ತಾರ ಹೆಡೆಯಿಂದಮಿನುಗುತ್ತ ಕುಳಿತಿದ್ದ ವಿವರ ಪೇಳಿದಳು 23ರಘುನಾಥರಾಯನು ಹರಿಚಿತ್ತ ಇದು ಎಂದುಮಗನ ಪ್ರಭಾವವ ಅರಿತು ತ್ವರಿತದಲಿಅಕ್ಷೋಭ್ಯರಲಿ ಹೋಗಿ ಶಿಷ್ಯನ್ನ ಒಪ್ಪಿಸಿಬಾಗಿ ಶಿರ ಸನ್ನಮಿಸಿ ಕ್ಷಮೆಯ ಬೇಡಿದನು 24ವಂಶ ವೃಧ್ಧಿಗೆ ಮತ್ತೂ ಪುತ್ರಪುಟ್ಟವನೆಂದುದೇಶಪಾಂಡೆಯ ಅನುಗ್ರಹಿಸಿ ಕಳುಹಿಸಿದಶಪ್ರಮತಿ ಪೀಳಿಗೆಯೊಳು ಅಕ್ಷೋಭ್ಯಮುನಿಗ¼ Àುಶಿಷ್ಯ ಜಯತೀರ್ಥರಿಗೆ ಸ್ಥಾನ ನೇಮಿಸಿದರು 25ಶ್ರೀ ಮದ್ವಾಚಾರ್ಯರು ಬೋಧಿಸಿ ತೋರಿಸಿದಶ್ರೀ ರಮಾಪತಿ ಪೂಜಾ ಸತ್ತತ್ವವಾದದುರ್ಮತ ಖಂಡನದ ರೀತಿಯ ಜಯಾರ್ಯರಿಗೆಸಮ್ಮುದದಿ ಅರುಹಿದರು ಅಕ್ಷೋಭ್ಯ ಗುರುವು 26ಶಕ ವರುಷ ಹನ್ನೊಂದು ನೂರು ಅರವತ್ತೇಳುಮಾರ್ಗಶಿರ ಕೃಷ್ಣ ಪಂಚಮಿ ವಿಶ್ವಾವಸುವಲ್ಲಿಅಕ್ಷೋಭ್ಯ ತೀರ್ಥರ ಪೀಠ ಆರೋಹಿಸಿಶ್ರೀಕರಗೆ ಪ್ರೀತಿಕರ ಪಟ್ಟವಾಳಿದರು 27ದೇವತಾರ್ಚನೆ ಶಿಷ್ಯ ಉಪದೇಶ ಮಾಡುತ್ತದಿಗ್ವಿಜಯದಲಿ ದುರ್ವಾದಿಗಳ ಗೆದ್ದುಮಧ್ವಗ್ರಂಥಗಳಿಗೆ ಟೀಕೆಗಳ ರಚಿಸಿಪ್ರಖ್ಯಾತರಾದರು ಜಯತೀರ್ಥ ಆರ್ಯ 28ವನರುಹಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸಪೂರ್ಣ ಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತಗುಣಪೂರ್ಣನಿರ್ದೋಷಶ್ರೀಯಃ ಪತಿಗೆ ಪ್ರಿಯಘನ ಕರುಣಿಜಯತೀರ್ಥಗುರುನಮೋಪಾಹಿ29|| ಪ್ರಥಮ ಕೀರ್ತನೆ ಸಮಾಪ್ತ ||ದ್ವಿತೀಯಕೀರ್ತನೆಪ್ರವೃಜ್ಯ ಕುಲಶಿರೋರತ್ನ ಜಯತೀರ್ಥರಸುವೃತತಿ ಜಾಂಫ್ರಿಯಲಿ ಶರಣಾದೆ ಸತತಸರ್ವೇಷ್ಟದಾತರುವಿಜ್ಞಾನಬೋಧಕರುಮಧ್ವೇಷ್ಟ ಶ್ರೀ ರಮಾಪತಿಗೆ ಪ್ರಿಯತಮರು ಪನರಹರಿಯ ಮಹಾದುರ್ಗೆಯ ಕುರಿತು ತಪಸ್ ಆಚರಿಸಿವರವ ಪಡೆದಿಹರು ಈ ಜಯತೀರ್ಥ ಆರ್ಯಬರೆವುದಕೆ ಲೇಖನವು ಅಡಿಕೆಯುಅರದೂರದುರ್ಗೆಯು ಕೊಟ್ಟಿಹಳು ಇವರ್ಗೆ1ಎರಗೋಳದಲ್ಲಿದ್ದು ಶ್ರೀ ಮದಾಚಾರ್ಯರಪರಸುಖಪ್ರಮೂಲಗ್ರಂಥಗಳ ಟೀಕಾಬರೆದಿಹರು ಅನುಪಮ ಉತ್ತಮ ರೀತಿಯಲಿಭರದಿ ಓದುವವರೇ ಬಲ್ಲರು ಮಹಿಮೆ 2ಶ್ರೀ ಮಧ್ವಕೃತವು ಶ್ರೀ ಬ್ರಹ್ಮಸೂತ್ರಭಾಷ್ಯವುಆ ಮೂಲಗ್ರಂಥವು ಎರಡು ಸಾವಿರವುಆ ಮಹಾಭಾಷ್ಯಕ್ಕೆ ಟೀಕೆ ಅಷ್ಟ ಸಹಸ್ರವುಅಮ್ಮಮ್ಮ ಏನೆಂಬೆ ಈ ಮಹಾ ಕಾರ್ಯ 3ಅನುವ್ಯಾಖ್ಯಾನದ ನಾಲಕ್ಕು ಸಾವಿರಘನತರ ಗ್ರಂಥಕ್ಕೆ ಜಯತೀರ್ಥರಜ್ಞಾನಪ್ರದ ಅಜ್ಞಾನಗಿರಿವಜ್ರಟೀಕೆಯಗ್ರಂಥ ಇಪ್ಪತ್ತೆಂಟು ಸಾವಿರ ಸಂಖ್ಯಾ 4ಈ ನುಡಿ ಬರೆವಾಗ ಬಿಂದುಮಾಧವ ಪೇಳ್ದಘನ್ನ ಶುಭತರ ಮಧ್ವ ವಿಜಯದಲ್ಲಿಅನುವ್ಯಾಖ್ಯಾನದ ಟೀಕಾ ಸುಧಾ ಎಂದುಶ್ರೀ ನಾರಾಯಣಾಚಾರ್ಯ ಸೂಚಿಸಿಹರೆಂದು 5ತತ್ವ ಸಂಖ್ಯಾನಕ್ಕೂ ಕಥಾ ಲಕ್ಷಣಕ್ಕೂತತ್ವ ವಿವೇಕಕ್ಕೂ ಋಗ್ಬಾಷ್ಯಕ್ಕೂತತ್ವ ನಿರ್ಣಯಕ್ಕೂ ಪ್ರಮಾಣ ಲಕ್ಷಣಕ್ಕೂತತ್ವೋದ್ಯೋತಕ್ಕೂಕರ್ಮನಿರ್ಣಯಕ್ಕೂ6ಮಾಯಾವಾದಉಪಾಧಿಖಂಡನಗಳಿಗೂಮಿಥ್ಯಾತ್ವಾನುಮಾನ ಖಂಡನಕ್ಕೂನ್ಯಾಯ ವಿವರಣಕ್ಕೂ ಗೀತಾ ಭಾಷ್ಯಕ್ಕೂನ್ಯಾಯ ತೇಜೋಜ್ವಲ ಗೀತಾ ತಾತ್ವರ್ಯಕ್ಕೂ 7ಪಟ್ಟ್ರಶ್ನ ಈಶಾವಾಸ್ಯ ಭಾಷ್ಯಗಳಿಗೂಅಷ್ಟಾದಶ ಈ ಗ್ರಂಥಗಳಿಗೆಪಟು ಪಟೀಯಸವಾಗಿ ಟೀಕೆಯಾ ಬರೆದಿಹರುಇಷ್ಟೇ ಅಲ್ಲದೇ ಇನ್ನೂ ನಾಲ್ಕು ರಚಿಸಿಹರು 8ಪ್ರತ್ಯಕ್ಷ ಅನುಮಾನಆಗಮಪ್ರಮಾಣಗಳರೀತಿ ಲಕ್ಷಣ ಪೇಳ್ವ ಪ್ರಮಾಣ ಪದ್ಧತಿಯುಮಾಧವನ ಸರ್ವೋತ್ತಮ ಜಗತ್ ಸತ್ಯತ್ವಇಂಥಾದ್ದು ಸಾಧಿಸುವ ವಾದಾವಳಿಯು 9ತಂತ್ರಸಾರಪಾಂಚರಾತ್ರಾಗಮಾನುಸರಿಸಿಪದ್ಯಮಾಲಾನಾಮ ಗ್ರಂಥದಲ್ಲಿಶ್ರೀಧರ ಸರ್ವೋತ್ತಮಾರ್ಚನೆ ಬಗೆ ಪೇಳಿದರುಶತಾಪರಾಧ ಸ್ತೋತ್ರವು ಮಾಡಿಹರು 10ದಿಗ್ವಿಜಯ ಮಾಡಿ ಸಜ್ಜನರ ಉದ್ಧರಿಸುತ್ತಾದುರ್ವಿದ್ಯಾ ದುರ್ಮತಗಳನ್ನ ಛೇದಿಸುತಸುವೈದಿಕ ಮಧ್ವಸಿದ್ಧಾಂತ ಸ್ಥಾಪಿಸುತಭುವಿಯಲಿ ಪ್ರಖ್ಯಾತರಾದರು ಜಯಾರ್ಯ 11ಒಂದು ಸಮಯದಿ ವಿದ್ಯಾರಣ್ಯರು ಶ್ರೀಮಧ್ವಗ್ರಂಥ ಓದಿ ನೋಡಿ ಅರ್ಥವಾಗದಲೆಗ್ರಂಥಕ್ಕೆ ಜಯರಾಯರು ಬರೆದ ಟೀಕೆಯಓದಲು ಅರ್ಥವು ವಿಶದವಾಯ್ತು 12ಪೂರ್ವಾಪರ ಸಂಗತಿ ಮತ್ತು ವಾಕ್ಯಾರ್ಥಸರ್ವ ಪ್ರಕಾರದಲೂ ಉತ್ತಮವಾಗಿಹುದುಸರ್ವಜÕ ಮುನಿಗಳ ಗ್ರಂಥದ ಸರಿಯಾದಭಾವವ ವಿವರಿಸುವುದೆಂದು ಹೇಳಿದರು 13ಈ ರೀತಿ ವಿದ್ಯಾರಣ್ಯರು ಕೊಂಡಾಡಿಪುರಿ ರಾಜಬೀದಿಯಲಿ ಆನೆ ಅಂಬಾರಿಮೆರವಣಿಗೆ ಮಾಡಿಸಿ ಜಯಘೋಷ ಮಾಡುತ್ತಾಮರ್ಯಾದೆ ಮಾಡಿದರು ವಿಜಯನಗರದಲಿ 14ಮಧ್ವಗಂಥಗಳನ್ನು ಜಯಾರ್ಯ ಬರೆದಿರುವಉತ್ತಮ ಟೀಕೆಗಳ ಬಲು ಶ್ಲಾಘಿಸುತ್ತವಿದ್ಯಾರಣ್ಯರು ನಮಸ್ಕಾರ ಮಾಡಿದರುಎಂದು ಇತಿಹಾಸವ ಸುಜನರು ಪೇಳುವರು 15ಸ್ವಮತ ಪರಮತ ವಿದ್ವಜ್ಜನರಿಂದಈ ಮಹಾಮಹಿಮ ಟೀಕಾಚಾರ್ಯ ಆರ್ಯಈ ಮಹಿಯಲ್ಲಿ ಪ್ರಖ್ಯಾತ ಪೂಜಿತರಾಗಿತಮ್ಮ ಗುರುಕ್ಷೇತ್ರ ಮಳಖೇಡ ಸೇರಿದರು 16ಮಳಖೇಡ ಕ್ಷೇತ್ರದಲ್ಲಿ ಕಾಗಿನೀ ನದಿತೀರಮಾಲೋಲ ಪ್ರಿಯ ಅಕ್ಷೋಭ್ಯರ ವೃಂದಾವನಶೀಲತಮ ಜಯರಾಯ ಅಲ್ಲಿಯೇ ನಿಂತರುಅಳವೇ ವರ್ಣಿಸಲು ಈ ಮಹಾತ್ಮರ ಮಹಿಮೆ 17ಹನ್ನೊಂದು ತೊಂಭತ್ತು ಶಕವಿಭವಆಷಾಢಕೃಷ್ಣ ಪಂಚಮಿ ಪುಣ್ಯದಿನದಲ್ಲಿ ಇವರುತನ್ನ ಸೇವಾ ವಿಷ್ಣು ಮಧ್ವರಿಗೆ ಪೂರೈಸಿಶ್ರೀ ನಾರಾಯಣನಪಾದಸೇರಿದರು18ಮತ್ತೊಂದು ಅಂಶದಲ್ಲಿ ವೃಂದಾವನದಲ್ಲಿಇದ್ದು ಸೇವಿಸುವವರ್ಗೆ ವಾಂಛಿತವೀಯುತ್ತಮಧ್ವಸ್ಥ ಶ್ರೀ ಹರಿಯ ಧ್ಯಾನಿಸುತ ತಮ್ಮಗುರುಬದಿಯಲ್ಲಿ ಕುಳಿತಿಹರು ಸ್ಮರಿಸೆ ಪಾಲಿಪರು 19ವನರುಹಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸಪೂರ್ಣ ಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತಗುಣಪೂರ್ಣನಿರ್ದೋಷಶ್ರೀಯಃ ಪತಿಗೆ ಪ್ರಿಯಘನಕರುಣಿ ಜಯತೀರ್ಥಗುರುನಮೋಪಾಹಿ20||ಇತಿ ಶ್ರೀ ಜಯತೀರ್ಥವಿಜಯಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಬ್ರಹ್ಮಾದಿಕರನು ಪರಬ್ರಹ್ಮದಿಚ್ಛಿಲಿ ಪಡೆದಳಮ್ಮಪರಂಜ್ಯೋತಿ ಪರಬ್ರಹ್ಮಿಣೀಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ವಾಣಿ ಕಲ್ಯಾಣಿಫಣಿವೇಣಿ| ರುದ್ರಾಣಿಶರ್ವಾಣಿಸುವಾಣಿ ಗೀರ್ವಾಣಿ ವರದೆ | ಗಾಣಿತ್ರಿನಯನ ಅಜನ ರಾಣಿ ಶಂಕರ ಪ್ರಾಣಿ ಪುಸ್ತಕಪಾಣಿನಾರಾಯಣೀ1ಅಂಬೆ ಲೋಕಾಂಬೆ ಭ್ರಮರಾಂಬೆ ಮೂಕಾಂಬೆಹರಡಿಂಬೆ ಪ್ರತಿಬಿಂಬೆ ಕುಚಕುಂಭೆ ಸಾಂಬೆ |ರಂಭೆ ಹೇರಂಬೆ ಶರಣೆಂಬೆ ವರಗೊಂಬೆ ಭಕ್ತರಬೊಂಬೆ ಹೊಳೆವ ಗೊಂಬೆ2ಕಾಳೆ ಹಿಮ ಬಾಳೆ ಭೂ ಪಾಳೆ ಕುಸುಮಾಳೆವನಮಾಳೆಕಂದರಮೌಳೆ ಕುಟಿಲ ಕುರುಳೆ |ಕೇಳಿನಿನ್ನಯ ಲೀಲೆ ಕಾಲಿಗೆರಗುವರಘವ ಮೂಲಕೆತ್ತೆತ್ತಿಬಿಸುಟುವ ಕೃಪಾಳೆ3ಬೇಕೆಂಬೊ ಬಯಕಿತ್ತು ಸಾಕು ಸಾಕೆನಿಸುವರುಲೋಕದೊಳಗ್ಯಾರುಂಟು ನಿನ್ನ ಬಿಟ್ಟು |ಏಕೆ ವಿವೇಕೆ ಎನ್ನೀ ಕುಟಿಲಗುಣನೋಡ ಬೇಕೆಕ್ಷಮೆಮಾಡಿದರೆ ಮೈಯುಳಿಯುವದು4ಕಾಯಜನ ಮಾತೆ ಸಿತಕಾಯನರ್ಧಾಂಗಿ ಜಗಕಾರ್ಯನಿರ್ಮಿಸುವ ನರರುದಿಸಿ ಮೂರು || ಕಾಯಡಗಿ ಹೋದನಿಷ್ಕಾಯ ಪರಶಕ್ತ್ಯೆನ್ನ ಕಾಯ್ದುಕೊಳ್ಳೆಲೆತಾಯಿ ಸ್ತ್ರೀಯರನ್ನೆ5ಸಾರಿದರಹೊರೆವಸಂಸಾರದೊಳು ಮುಳುಗಿದರೆತಾರಿಸುವ ತವಕದಿಂತರುಳೆತರುಣೀ |ಸೇರಿಸುತ ತಿರುಗಿ ತನು ಬಾರದ್ಹಾದಿಗೆ ಒಯ್ದುತಾರಿಸುವ ಸ್ಥಿರದಿ ನೀ ತೋಯಜಾಕ್ಷಿ6ಕುಸುಮಸರ್ಪಾದಿಗಳು ಕುಸುಮಗಂಧಿಯ ಪದಕೆಕುಸುಮವೃಷ್ಟಿಗವು ದೇವಿಯ ಸುಕೃತಿಗಳೂ |ಕುಸುಮದೊಳು ಕರಕಂಜ ಕುಸುಮದೊಳುವರವಿಡಿದ ಕುಸುಮಶರರಿಪುಶಂಕರನ ಶಂಕರೀ7
--------------
ಜಕ್ಕಪ್ಪಯ್ಯನವರು
ಭ್ರಾಂತಿ ಬಿಡದೊ ಭಾಗ್ಯ ಪುರುಷನೆವಿಷಯಂಗಳಜರಿದುಶಾಂತಚಿತ್ತನಾಗೋತನಕಕಾಲಕಾಲಕೆ ಹರಿಕಥಾಶ್ರವಣ ಗುರುಗಳ ಮುಖದಿಂದಪಾಂಚಜನ್ಯ ಅರಿಪಾಣಿ ಸರ್ವೇಶ ತದ್ರಾಣಿ ಲಕುಮಿ ವಿ-ಪೂರಕ ಕುಂಭಕ ರೇಚಕದಿಂದಲಿ ಹೃದಯಸ್ಥ ಭೌತಿಕಅಂಶಿ ಅಂಶ ವೇಷಾಧಿಷ್ಠಾನ ಅಂತರ್ಯಾಮಿಗಳಹಂಚುಹಾಟಕ ಸಮದರ್ಶಿ ಎನಿಸಿ ಶೀತೋಷ್ಣವ ಸಹಿಸಿವಿಷಯಾವಿಷಯಂಗಳ ರೂಪವ ತಿಳಿದು ವಶವಾಗದನ್ಯಸ್ವತಂತ್ರ ಅಸ್ವತಂತ್ರ ವಸ್ತು ವಿವೇಕವ ತಿಳಿದುಸಕಲೇಂದ್ರಿಯಗಳಿಂದ ಶ್ರೀಹರಿಯ ವ್ಯಕತತಿಗೆ ತಂದುಬಿಂಬಭಾವಕ್ರಿಯ ದ್ರವ್ಯಾ ದ್ವೈತವ ತಿಳಿದು ಸರ್ವಗತ
--------------
ಗೋಪಾಲದಾಸರು
ಮೋರೆಯ ಕಾಂತಿಗೆ ಹಚ್ಚಿರೋ ಕಿಚ್ಚಾಮರುಳಾಗುತಿರುತಿಹನವ ಹುಚ್ಚಾಪಯೋನಿಯ ಮುಖ ನೋಡೆ ಎಲ್ಲಕೆಹೇಸಿಕೆತಾನೆ ರಕ್ತವ ನಿತ್ಯತವಿಸುತಿಹುದುಏನೇನು ಶುಚಿಯಲ್ಲ ಇಂತು ವಿವೇಕವಿಲ್ಲಏನು ಕಾರಣ ಮೋಹ ಪಡುವರೋ1ನರಕಾಣುವ ಪೂರಿತವದು ಭಗವದುಭರದಿ ದುರ್ಗಂಧವಾಸನೆಬಹುದುಸರಸಿಜೋದ್ಭವನಾಗಲಿ ಶಿವನೆ ತಾನಾದರಾಗಲಿಮರುಳೆ ಪುನಃ ಜನ್ಮಕೆ ತಾರದೆ ಬಿಡುವುದೇ2ಚಕ್ರಿ ಖಂಡವು ಆಸ್ತಿ ಚದುರಸ್ತಿರೊಪಾಗಿಕರ್ಮವೆಂಬುದಕೆ ಸ್ಥಾನವಾಗಿಹುದುನಿರ್ಮಳ ಚಿದಾನಂದ ವಸ್ತುವ ತಿಳಿಗೊಡದಧರ್ಮದಾ ಪಥದಲ್ಲಿ ಕೆಡಹುತಿಹುದು3
--------------
ಚಿದಾನಂದ ಅವಧೂತರು