ಒಟ್ಟು 1528 ಕಡೆಗಳಲ್ಲಿ , 97 ದಾಸರು , 1142 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂದು ಕಾಂಬೆನು ಪಾಂಡುರಂಗ ಮೂರುತಿಯಾ ಇಂದು ಭಾಗನಿವಾಸ ನರನ ಸಾರಥಿಯ ಪ ಚಾರು ಚರಣಾಂಗುಲಿ ನಖರ ತರುಣೀಂದುಚ್ಛವಿ ತಿರಸ್ಕರಿಸುವ ಪ್ರಖರ ಕಿರುಗೆಜ್ಜೆ ಕಡಗ ನೂಪುರ ಪೆಂಡೆ ಶಫರ ತೆರಜಾನು ಜಂಘೆ ಭಾಸ್ಕರ ರತ್ನ ಮುಕುರ1 ರಂಭಾ ಪೋಲುವ ಊರು ಪೊಂಬಣ್ಣಾಂಬರವ ಕುಂಭೀ ಮಸ್ತಕದೊಲ್ ನಿತಂಬದಿ ಪೊಳೆವ ಕಂಬು ಮೇಖಳಕಂಜ ಗಂಭೀರ ನಾಭೀ ವಿಧಿ ಶಂಭು ಪೂಜಿತನ 2 ಲವಕುಕ್ಷಿತ್ರವಳಿ ಬಾರ್ಗವಿ ವಕ್ಷ ಉರವು ಕೌಸ್ತುಭ ವೈಜಯಂತಿಯ ಸುವಿಶಾಲ ವಕ್ಷದೊಳ್ ವಿವಿಧ ಹಾರಗಳು ನವನೀತ ಚೋರ ಶ್ರೀ ಪವಮಾನಾರ್ಚಿತನ 3 ಪದಕ ಸರಿಗೆಯ ಜಾಂಬೂನದ ಕಂಬುಕಂಠ ರದನೀಕರ ಬಾಹು ಚದುರ ಭುಜಕೀರ್ತಿ ಬದರ ಸಂಕಾಶಾ ಅಂಗದ ರತ್ನ ಕಟಕಾ ಪದಮಾರುಣ ಕರಯುಗ್ಮ ಕಟಿಯಲ್ಲಿಟ್ಟವನಾ4 ವಿಧುಬಿಂಬೋಪಮ ಚಲ್ವವದನ ಕೆಂದುಟಿಯಾ ಬಿದುರಾಭಾದಶನಾಲಿಂಗದನೊಳ್ ಕಿರುನಗೆಯಾ ಕದಪು ಕನ್ನಡಿ ನಾಸಾ ತುದಿ ಚಂಪಕ ತೆನೆಯಾ ಉದಕೇಜಾಯತ ನೇತ್ರಯದುವಂಶೋದ್ಭವನಾ 5 ಕುಂಡಲ ಕರ್ಣ ಸುಲಲಿತ ಭ್ರೂಯುಗಳ ಪೊಳೆವ ಬಾಲ ಶಶಾಂಕ ತಿಲಕಾಂಕಿತ ಫಾಲ ಅಳಿಬಾಲವೆನಿಪ ಕುಂತಳ ರತ್ನ ಚಕಿತ ಕಲಧೌತ ಮಕುಟ ದಿಗ್ವಲಯ ಬೆಳಗುವನ 6 ಮಾನವ ಹರಿಯಾ ವಟುಭಾರ್ಗವ ಕಾಕುಸ್ಥ ಶಠ ಕಂಸದ್ವಿಷನ ನಿಟೆಲಾಂಬಕ ಸಹಾಯ ಖಳಕಟಕಾರಿ ಭೀಮಾ ತಟವಾಸ ಜಗನ್ನಾಥವಿಠಲ ಮೂರುತಿಯ 7
--------------
ಜಗನ್ನಾಥದಾಸರು
ಎಂದೂ ಬಂಧವಿಲ್ಲ ಆತ್ಮಗೆ ಬಂಧವ ಕಲ್ಪನೆ ಮಿಥ್ಯವಿದೆಲ್ಲ ಮಂದರ ನುಡಿಯಿದು ಈ ಸಂಸಾರ ಪ ನಿತ್ಯಮುಕ್ತನೇ ತಾನಾದವಗೆ ಮಿಥ್ಯವ ಕಲ್ಪನೆ ಬರುವದೆಂತೋ ತಥ್ಯವಿಲ್ಲದ ಮಾತಿನ ಮಾಲೆ ಮತ್ತೆ ಬಂಜೆಯಾ ಮಗನೆಂಬುವವೋಲ್ 1 ಆತ್ಮನೆ ತಾನೆಂಬನುಭವ ಪಡೆಯದೆ ಮತ್ತೆ ಶಬ್ದ ಮಾತ್ರವನರಿತವಗೆ ಸುತ್ತಿಕೊಳ್ಳುವುದು ಸಂಶಯ ವಿದುವೆ ಅನುಭವದೊಳಗೇನಿಲ್ಲ ವಿಕಲ್ಪ 2 ಭಾನುವಿಗುಂಟೇ ಉದಯಾಸ್ತಗಳು ಮಾನವಕಲ್ಪನೆಗಳು ತಾನೆಲ್ಲ ತಾನೇ ತಾನಾದವಗಿನ್ನು ಹೀನಭವದ ಭಾಧೆಯುತಾನುಂಟೇ 3 ಅನುಭವರೂಪನು ತಾನಾದಾಗ ಅನುಭವ ಬರುವದು ಈ ನುಡಿ ಕೇಳೈ ಮನವಾಣಿಗೆ ಮೀರಿದ ಸ್ವಾತ್ಮನುನೀ ಚಿನುಮಯ ಶಂಕರತಾನಾದವಗೇ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಎದ್ದುನಿಂತ ಬಂದು ನಿಂತ ಮುಂದೆ ನಿಂದಂಥಮಾರಾಂತರ್ಗೆ ಕೃತಾಂತ ನಿಶ್ಚಿಂತ ಹನುಮಂತಬಲವಂತ ಯೆದೆಗೊಂತ ತನಪಂಥ ಸಲಲೆನುತಸÀಂತರಿಗೆ ಸಂತತ ಶಾಂತ ನಿಂತ ಮಾರಾಂತ ಕೃತಾಂತ ಪ. ದುರುಳ ರಾವಣನ ವನದ ತರುವಿನ ಕೊನೆಯೇರಿದಕರಚರಣಗಳ ಘಾಯದಿ ಮರಂಗಳ ಮುರಿದಅರಿಗಜ ಗಂಡಭೇರುಂಡನೆಂಬ ತನ್ನ ಬಲುಬಿರುದಮೆರೆದು ಮಾರುತಿ ಪ್ರತಿಭಟರ ಶಿರಂಗಳ ತರಿದ 1 ಸೀತೆಗೆ ಉಂಗುರವನ್ನಿತ್ತು ಮತ್ತೆ ಕೈಗಳ ಮುಗಿದಪ್ರೀತಿಯಿಂ ಪೊನ್ನಕಚ್ಚುಟಕ್ಕಿಟ್ಟ ಗಂಟನು ಬಿಗಿದಖ್ಯಾತ ಮಂಡೋದರಿಕುವರನ ಬಸುರನು ಬಗಿದವಾತಸುತನು ವೈರಿಪುರವ ಸುಡಲು ತೊಡಗಿದ 2 ನಲಿದು ಲಂಘಿಸಿ ನಳನಳಿಸುವ ಬಾಲವನೆತ್ತಿಖಳರೆದೆ ಶೂಲ ಹುಬ್ಬುಗಳ ಗಂಟಿಕ್ಕಿ ನೋಡುವ ಅರ್ಥಿಆಳುತಲಿಹ ಅಬಲೆಯರ ಭಯಂಕರಮೂರ್ತಿಸುಳಿದನು ಕೇರಿಕೇರಿಯಲಸುರರ ನುಗ್ಗೊತ್ತಿ 3 ಲಂಕಾನಗರಿಯ ಪುಚ್ಚದ ಕಿಚ್ಚಿಂದ ಸುಟ್ಟಹುಂಕರಿಸುತ ಅಹಿತರ ಬೇಗ ತೆಗೆದೊಗದಿಟ್ಟಕಂಕಣ ಮಕುಟ ಹಾರಂಗಳಿಂದೊಪ್ಪುವ ಬಲುದಿಟ್ಟಶಂಕೆಯಿಲ್ಲದನಿಲಜ ಶತ್ರುಗಳಿಗಿಂತರ್ಥಿಯ ಕೊಟ್ಟ 4 ಹೋಗೆಲೊ ಕಪಿಯೆನೆ ಹೊಕ್ಕು ರಕ್ಕಸರನು ಬಿಗಿದಕಾಗೆಯ ಬಳಗಕೆ ಕಲ್ಲನಿಟ್ಟಂದದಿ ಮಾಡಿದಆಗಲೆ ಕಂಡ ದಶಮುಖನೆಂಬ ಕಳ್ಳನ ನೋಡಿದಬೇಗ ಜಾನಕಿಯನ್ನು ಬಿಡು ಬಿಡುಯೆನಲು ತೊಡಗಿದ 5 ಮೂರರದೊಂದು ಪಾಲು ಖಳರ ಜನಂಗಳ ಕೊಂದಮೀರಿದ ಸೇನೆ ನಮ್ಮ ರಘುಪತಿಗಿರಲೆಂದು ನಿಂದನೂರುಯೋಜನದ ವಾರಾಶಿಯ ತೀರಕೆ ಬಂದಹಾರಿದನು ಗಗನಕೆ ಹನುಮನು ಭರವಸದಿಂದ ನಿಂದ 6 ಕುಂಭಿನೀ ಸುತೆಯ ಕುರುಹಿನ ಸನ್ಮಣಿಯ ತಕ್ಕೊಂಡಅಂಬುಧಿಯನು ಬೇಗ ದಾಟಿ ಶ್ರೀರಾಮರ ಕಂಡತ್ರ್ಯಂಬಕ ಮೊದಲಾದ ಸುರರ ತಂಡದಲಿ ಪ್ರಚಂಡಕಂಬುಕಂಧರ ಹಯವದನನ ಭಕ್ತಿರಸಾಯನ ಉಂಡ 7
--------------
ವಾದಿರಾಜ
ಎನಗಾಧಿಯೋ ಗುರು ಅಧಿಯೋ ಧ್ರುವ ಒಬ್ಬಗೆ ಶ್ರುತಿಪುರಾಣಾದಿ ಒಬ್ಬಗೆ ಶ್ರೋತ್ರಾಧಿ ಒಬ್ಬಗೆ ಸ್ಮಾರ್ತಾಧಿ ಒಬ್ಬಗೆ ಜ್ಯೋತಿಷ್ಯದಾಧಿ ಮಿತವಾಕ್ಯದಾಧಿ ಶ್ರೀಪಾದದಾಧಿ 1 ಒಬ್ಬಗೆ ವೃತ್ತಾಧಿ ಒಬ್ಬಗೆ ವಿತ್ತಾಧಿ ಒಬ್ಬಗೆ ಸ್ತುತಿಸುವದಾಧಿ ಯಂತ್ರ ಮಂತ್ರದಾಧಿ ಒಬ್ಬಗೆ ಶೈವಾಧಿ ಒಬ್ಬಗೆ ಶಕ್ತ್ಯಾಧಿ ಒಬ್ಬಗಾಗಮಯುಕ್ತಿ ಆಧಿ ಶ್ರೀಪಾದದಾಧಿ 2 ಒಬ್ಬಗೆ ಹಟದಾಧಿ ಒಬ್ಬಗೆ ದಿಟದಾಧಿ ಒಬ್ಬಗೆ ತಟಕೂಪದಾಧಿ ಒಬ್ಬಗೆ ಪಟದಾಧಿ ಬಗೆ ಪಠಣ್ಯಾದಿ ಒಬ್ಬಗೆ ಮಠಮಾನದ್ಯಾಧಿ ಒಬ್ಬಗೆ ಕುಟಲಾಧಿ ಒಬ್ಬಗೆ ಜಟದಾಧಿ ಒಬ್ಬಗೆ ಫಟಿಸುವ ಆಧಿ ಶ್ರೀಪಾದದಾಧಿ 3 ಒಬ್ಬಗೆ ರಸದಾಧಿ ಒಬ್ಬಗೆ ಕಸದಾಧಿ ಒಬ್ಬಗೌಷಧಮಣಿ ಆಧಿ ಒಬ್ಬಗೆ ಕೃಷದಾಧಿ ಒಬ್ಬಗೆ ದೇಶಿ ಆಧಿ ಒಬ್ಬಗೆ ಹುಸಿಹುಟ್ಟಣ್ಯಾಧಿ ಒಬ್ಬಗೆ ವೃಷದಾಧಿ ಒಬ್ಬಗೆ ದ್ವೇಷಾಧಿ ಒಬ್ಬಗೆ ಪ್ರಶಂಸದಾಧಿ ನಿಮ್ಮ ಶ್ರೀಪಾದದಾಧಿ 4 ಮನಕೆ ಮರೆಯಾಗಿ ಜನಕ ಠವಿಸುವ ಅನೇಕಪರಿ ಲೋಕದಾಧಿ ಖೂನಕೆ ಬಾರದೆ ಙÁ್ಞನಕೆ ತಾನೊಂದು ಅನುಭವಕಿಲ್ಲದಾಧಿ ಉಂಟಾಗಿಹ್ಯದಾಧಿ ಮಹಿಪತಿಗೆ ಅಧಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎನ್ನಪರಾಧವ ಮನ್ನಿಸಿ ಪೊರೆ ಸುಪ್ರ- ಸನ್ನ ಕುಮಾರ ದೇವ ಪ ನಿನ್ನಂಥ ಕರುಣಾಳು ಇನ್ನಿಲ್ಲ ಲೋಕದೊ-ಳೆನ್ನನುದ್ಧರಿಸು ದೇವಾಅ.ಪ ನೀರಜನೇತ್ರ ಮಯೂರವಾಹನ ಭಕ್ತೋ-ದ್ಧಾರ ಶಂಕರನ ಸುತಾ | ಶೂರಾಖ್ಯ ಪೂರ್ವಸುರಾರಿಗಳಂತಕ ಮಾರನಾಕಾರದಾತಾ , ಪುನೀತಾ 1 ಕಂಬು ಕಂಧರಶರಜ ಮು-ಕುಂದನ ಸಖ ಚಿದ್ರೂಪ ಪ್ರತಾಪ 2 ಈಶನ ಸುತ ಕಮಲಾಸನಾರ್ಚಿತ ರವಿ-ಭಾಸ ಸೇನಾನಿ ಧೀರಾ ದೋಷರಹಿತ ಪಾವಂಜೇಶನೆ ತವಪಾದ ದಾಸರ ಕುಲ ಉದ್ಧಾರ | ಗಂಭೀರ 3
--------------
ಬೆಳ್ಳೆ ದಾಸಪ್ಪಯ್ಯ
ಎಲೆ ಮಾನವಾ ಅಭಿಮಾನವಾ ಅವಿವೇಕವಾ ದೂಡೈ ಸುಖದುಃಖದಾ ಘನ ಮೂಲವಾ ಸುವಿವೇಕದೀ ನೋಡೈ ಪ ಪರರಿಂದ ಈ ಪರಿತಾಪವು ಬರುತಿರ್ಪುದೆಂಬುದಿದೋ ಬರಿ ಬ್ರಾಂತಿಯೋ ನಿಜವಲ್ಲವೋ ಅಲೋಚಿಸಿ ನೋಡೈ 1 ಗ್ರಹಕಾಲಗಳ್ ಘನ ಕರ್ಮಗಳ್ ಇವು ಕಾರಣಲ್ಲವಿದೋ ಮನವೇ ಇದೇ ಪರಿತಾಪದ ಘನಮೂಲವೈ ನೋಡೋ 2 ಸಟೆಯಾಗಿಹ ಸಂಸಾರವ ದಿಟವೆಂದು ತೋರ್ಪುದಿದೋ ಮನದಿಂದಲೇ ಇದು ಕಾಂಬುದೋ ಮನವಿಲ್ಲದಾಗಿಲ್ಲ 3 ಪರಮಾತ್ಮನ ಪರಿಪೂರ್ಣನ ಮರೆಮಾಡುತೀಮನವು ಹರಿದಾಡುತಾ ಸುಖದುಃಖವಾ ಗುಣಿಸುತ್ತ ತಾನಿಹುದೋ 4 ವನದಾಟಕೇ ಮರುಳಾಗದೇ ಗುರುಶಂಕರಾರ್ಯನಲಿ ಮನ ನಿಲ್ಲಿಸಿ ಈ ಮೋಹವಾ ಬಿಡು ಬೇಗ ನೀನೀಗ 5
--------------
ಶಂಕರಭಟ್ಟ ಅಗ್ನಿಹೋತ್ರಿ
ಎಲ್ಲಡಗಿದನೊ ಹರಿ ಎನ್ನಯ ಧೊರಿ ಪ ಎಲ್ಲೆಲ್ಲಿ ಪರಿಪೂರ್ಣನೆಂಬೊ ಸೊಲ್ಲನು ಮುನ್ನಾ ಮಲ್ಲಮರ್ದನ ಪುಲ್ಲಲೋಚನ ಹರಿಅ ಪ ಶರಣೆಂದವರ ಕಾಯ್ವ ಕರುಣಾ ಸಮುದ್ರನು ಕರುಣನ ಅರಿಯದೆ ಹರಿಣಾಂಕ ನಿಭವಕ್ತ್ರ 1 ಕರಿರಾಜನ ಮೊರೆ ಕೇಳಿ ತ್ವರಿತದಿಂದ ಗರುಡನೇರಿ ಬಂದ ಗರ್ವರಹಿತ ದೇವ 2 ವರ ಭುಜದಲಿ ಶಂಖ ಚಕ್ರವ ಧರಿಸಿದ ಪರಮೇಷ್ಠಿ ಜನಕನು 3 ವನಜ ಮಲ್ಲಿಗೆ ಜಾಜಿ ವನದಲ್ಲಿ ಚಲಿಸುವ ವನಿತೆಯರಾಟಕ್ಕೆ ಮನಮೆಚ್ಚಿ ನಡೆದಾನೊ 4 ಹಿಂಡು ಗೋಪಾಲರನು ಕಂಡು ಕಾವ ವಿಷಯಕ್ಕಾಗಿ ಕಮಲಲೋಚನ ಹರಿ5 ಇನ ಚಂದ್ರ ನಿಭವಕ್ತ್ರ ಕನಕಾಂಬರಧರ ವಿನಯದಿಂದಾಡುತ್ತ ಮುನಿಗಳಲ್ಲಿಗೆ ದೇವ 6 ಗಜ ಧ್ರುವ ಬಲಿ ಪಾಂಚಾಲಿ ವರದನೆಂಬ ನಿಜವಾದ ಬಿರುದುಳ್ಳ ವಿಜಯವಿಠ್ಠಲರೇಯ7
--------------
ವಿಜಯದಾಸ
ಎಲ್ಲಿ ಸುವರಗಳು ಇಲ್ಲದಿದ್ದರೆ ಇವ | ನಲ್ಲದೆ ಮತ್ತಾರಾ | ವಲ್ಲಿ ಕಾಣದೆ ಪೋದೆ ಪ ಸಾರುವ ಶರೀರ ಧರಿಸಿ ಬಾಳಿದ ಮಹಾ | ಭಾರವಾಗಿದ್ದ ಪಾಷಾಣವ ಪೊತ್ತವ | ಗೊರುವ ನೆಲನಂದು ಕಾಷ್ಟದಿಂದಲಿ ಬಂದ | ಹಾರುವನಾಗಿ ತಿರದುಂಡು ಕುಲಧರ್ಮ | ಮೀರಿ ನಡೆದವ ಉಪವಾಸದವÀನಿಂದ | ಊರ ಎಂಜಲಿಗೆ ಹೇಸದೆ ಓಡಾಡಿದವ | ನಾರಿಯರ ವ್ರತ ಕೆಡಿಸಿ ರಾವುತನಾಗಿ | ಕಾಯ | ಆರಿಂದ ಜನಿತನಿವ ನೋಡಲಾಗಿ | ಧಾರುಣಿಯೊಳಗಿದ್ದವ ಸರ್ವರನ್ನ | ಮೀರಿ ನಡೆತÀಲಿದ್ದವ ಇವಗೆ ಮೆಚ್ಚಿ | ಧಾರಿ ಎಂದ ನಿನ್ನ ಮಗಳೆ ಬೇಕೆಂದವ 1 ಬಿರಿಗಣ್ಣೆನವನಿವ ಆವಾವ ಕಾಲಕ್ಕೆ | ಶಿರವಾಗಿ ಕೊಂಡಿಪ್ಪ ಶೀಲ ಸ್ವಭಾವದಿ | ಕೊರಳ ತಿರುಹಲಾರ ಕರುಳ ಮಾಲೆಯುವ | ಪರರ ಬಾಗಿಲ ಕಾವರಾಜ್ಯವಿಲ್ಲದವ | ಸುರರ ಕೋತಿಯ ಮಾಡಿ ಕುಣೆಸಾಡಿದವನಿವ | ದಿಗಂಬರನಾಗಿ ಚರಿಸಿದೆನೆಂದು ಕೋಪದಿಂದ | ಕರವಾಳ ಹಸ್ತದವ || ಪರಾಕ್ರಮ ಉರಗನ್ನ ಮೇಲಿದ್ದವ ಇವನ ಖೂನ | ಅರಿಯನು ದಾವದಾವ | ಭೇದವನಿಕ್ಕಿ | ತಿರುಗಿಸುವನು ಲೋಕವ ವಂಚಕನಿಗೆ | ಪರಮ ಪ್ರೀತಿಯಿಂದ ಕೊಟ್ಟದನೆಣಿಸುವ 2 ತನ್ನ ಜಾತಿಗಳನ್ನು ನುಂಗುವನವನಿವ | ಬೆನ್ನ ಮೇಲಿನ ಒಂದೆ ಬುಗುಟಿ ಪಲ್ಲಿನ ತುದಿ | ಮಣ್ಣು ತೋರುವನಿವ ವಿಕಾರ ಮೊಗದವ | ಕಣ್ಣು ಚುಚ್ಚಿದ ಒಬ್ಬ ಹಾರವನ್ನು ನೋಡಿ | ಹೆಣ್ಣಿಗಭಯವಿತ್ತು ಕಾದಿ ಸೋತವನಿವ | ರಣ್ಯ ವಾಗನಿವ ರಣದೊಳೋಡಿದನಿವ | ಅನ್ಯಾಯ ಪೇಳಿದ ನಂಬಿದವರಿಗೆ | ಮುನ್ನೆ ಕುದುರಿಯೇರಿದಾ ಇವನು ತಾನೆ | ಅನಂತ ಮಾಯಮೋದಾ ಎಂಥವರಲ್ಲಿ | ಪಾದ ಇಟ್ಟು ಇದ್ದು | ಕಣ್ಣಿಗೆ ಪೊಳಿಯೆ ಖೇಡ ಬಡಿಸವಂಥ | ಬಣ್ಣಾಣಿಗಾರನು ಬಂದೆಲ್ಲಿ ದೊರಕಿದಾ 3 ಮೀಸಿ ಕಟ್ಟಿಸಿಕೊಂಡಿವನೀವ ಪ್ರಳಯಾದಿ | ದ್ವೇಷವನಿಕ್ಕಿದ ದೇವದಾನವರಿಗೆ | ಏಸು ದಿವಸವಾಗೆ ಅದೋ ದೃಷ್ಠಾಯವನಿವ | ಭಿಕ್ಷೆ ಪಾತ್ರಿಯವ | ಬಿಗಿಯನೆ ಮುರದು ಬಿಟ್ಟವನಿವ | ಕೊಂಡ ಲಜ್ಜೆಗೇಡಿ | ಘಾಸೆತನಕೆ ಶೂರನು ಒಮ್ಮ್ಯಾದರು || ಮಾಡುತಲಿಪ್ಪನು ಇವನು ಹೆಣ್ಣು | ವೇಷ ಧರಿಸಿಕೊಂಬನು ಕೇವಲ ಅವ | ಕಾಶ ಯಿಲ್ಲದ ಸ್ಥಾನದಲ್ಲಿ ವೊಂದಿಪ್ಪನು 4 ದೃಷ್ಟಿ ಮುಚ್ಚದಿಪ್ಪನವನಿವ ಆವಾಗ | ಬೆಟ್ಟವೆ ಗತಿ ಎಂದು ಸೇರಿಕೊಂಡವನಿವ | ದಿಟ್ಟ ಕಠೀಣ ಕಾಯದವನಿವ ಎದುರಿಗೆ | ಎಷ್ಟಗಲ ಬಾಯದೆರೆದಿಪ್ಪ ಪಾದದ | ಬಟ್ಟಿನಿಂದಲಿ ನೀರು ಸುರಿಸುವ ಬಗೆ ಉಂಟು | ಕುಟ್ಟಿ ಮಾತೆಯ ಶಿರ ಕೆಡಹಿದನಿವ ಜಡೆ | ಗಟ್ಟಿಪ್ಪ ಚೋರನಾಯಕ ಮೌನಪ್ರಾಂತಕ್ಕೆ | ದುಷ್ಟನೆನಸಿ ಮೆರೆವ ಹತ್ತದೆಂದು || ಅಟ್ಟಿಬಿಟ್ಟರೆ ಬರುವ ತನ್ನೆಲ್ಲಿಗೆ | ಕೆಟ್ಟವರನ ಕರೆವ ಉತ್ತಮರನ್ನು | ಪಟ್ಟದ ರಾಣಿಗೆ ಪೇಳದೆ ಜವಾ | 5 ಜಲದೊಳಗಾಡುವನಿವ ಹೊರೆ ಹೊತ್ತು | ಕಲೆಪರಟಿಯಾಗಿ ತಿರುಗುವನಿವ ಮೂಗಿಲ್ಲಿ | ಳಿದು ಬಂದವನಿವ ಗೊಗ್ಗರÀ ಧ್ವನಿಯವ | ತಲುವರಿ ಇವ ತಾನೆ ಶಿಷ್ಯಗೆ ವಿದ್ಯವÀ | ಕಲಿಸಿ ಶ್ಯಾಪವ ಕೊಟ್ಟನವನಿವ ವೈರತ್ವ | ಬಳಸದವನ ಮೇಲೆ ಕಲ್ಲು ಹಾಕಿಸಿದವ | ಬಲು ಭಂಡುಗೋವಳ ಅನ ಬರದದು ಬಿಟ್ಟು | ಕಲಿಯಾಗಿ ಓಡಾಡಿದ | ಹೆರರಿಗಾಗಿ ಸ್ತಳ ದ್ರವ್ಯವ ಮಾಡಿದಾ ದಾನವರಿಂದ | ಬಲವಾವನು ಬೇಡಿದಾ ಬೊಮ್ಮಾಂಡದ | ಒಳಗೆ ಹೊರಗೆ ಕಾಡಿದಾ | ಬಹು ಠಕ್ಕನು | ತಿಳಿದು ತಿಳಿದು ಈರ್ವರಿಗೆಯಲ್ಲಿ ನೋಡಿದಾ 6 ಸವಿ ನೋಡದದರ ರೂಪನಾದವನಿವ | ಅವಯವಂಗಳೆಲ್ಲ ಮುದುರಿಕೊಂಡಿಪ್ಪಾನಿವ | ಅವನಿಗೋಡಿ ಪೋದನಿವ ಮೃಗವಲ್ಲ ಮಾ | ನವನಲ್ಲ ವದ್ಭೂತನಾಗಿ ತೋರುವನಿವ | ಬವರಿಗಾದವನಿವ ತನ್ನ ಕಾಲಕೆ ತಪ್ಪ | ಭವನವಿಲ್ಲದೆ ದಿನ ಕಳೆದವ ಯಾಗದ | ನ್ನವನುಂಡು ನಾನಾ ಶಸ್ತ್ರವನ್ನು ನುಂಗಿದವನಿವ || ಯುವತಿ ಧರಿಸಿದ ಸಂಗಾ ಹಾ | ರುವ ಪಕ್ಕಿ ದಿವಸ ದಿವಸ ತುರುಗಾನಾಗಿಪ್ಪದು | ಅವಧೂತ ಮಾರ್ಗ ತುಂಗಾ | ಪರ್ವತವನು | ಲವಕಾಲಬಿಡದೆ ಬಾಯಲಿ ಕಚ್ಚಿದ ರಂಗಾ 7 ಮಾರಧ್ವಜನನವತಾರ ತಾಳಿದನಿವ | ನೀರೋಳಗಡಿಗಿಪ್ಪ ಎರಡು ಭಾಗಗಲ್ಲಿ | ಕೋರೆಗಳದ್ದಿ ಮಸÀದು ಮತ್ಸರಿಸುತಿಪ್ಪ | ಚೀರಿ ಕೂಗುವ ಮಹಾ ಬೊಮ್ಮಾಂಡವಡದಂತೆ | ಮೂರಡಿಯೊಳಗೆ ತ್ರಿಲೋಕವÀನಿಟ್ಟವ | ಬೇರು ಕಡುವನಂತೆ ಕೊಡಲಿಕಾರನಿವ | ಆರೋಗಣಿಗೆ ಶಬರಿಯ ಹಣ್ಣು ಮೆದ್ದವ | ಬುದ್ಧ ಉದ್ದಂಡಾ ಏಕನು ಇವ || ಕೊಂಡ ಬಹು ಕಡೆ | ಬೀರಿದನ್ನವ ಕೈಕೊಂಡಾ ಒಂದು ತುತ್ತು | ಆರಗೀಯದಲೆ ಉಂಡಾ ಇವನನ್ನು | ಹಾರೈಸಿದವರಿಗೆ ಏನು ಲಕ್ಷ ಹೆಚ್ಚಳ ಕಂಡಾ 8 ಉದಕ ಬಿಟ್ಟರೆ ಬದುಕಲಾರದವನಿವ | ಎದೆಗಟ್ಟಿಯವನಲ್ಲಿ ಮುಟ್ಟಿ ನೋಡಿದರೆ | ಪೊದೆ ಪೊದರಿನೊಳು ಸೇರಿ ಕೊಂಡವನಿವ | ಎದುರಿಗೆ ಒಬ್ಬರ ಬರಗೊಡದವ ತನ್ನ | ಪದದ ಕೆಳಗೆ ಕೊಟ್ಟವನ ಇಟ್ಟವನಿವ | ಮದಕಾವ ಮಾಡಿ ತನ್ನೊಳು ತಾನೆ ಸೋತವ | ಸುದತಿಯುಳಟ್ಟಿದ ಪಾರ್ಥಗಾಳಾದ | ಚದುರ ಕ್ರೂರರಿಗೆ ಕ್ರೂರಾ ನಿರಂತರ | ಉದಧಿ ಎಂಬೊದೆ ಮಂದಿರಾ ಇವಗೆ ನೋಡು | ಬದರಿ ಗಿಡವೆ ಆಸರಾ ಏನೆಂಬೆನೊ | ಕದರು ಮೋರಿಯೆ ಶೃಂಗಾರ ತನ್ನಯ ಗುಣ | ಮೊದಲಿದೆ ಕಡೆ ಎಂದು ಆರಾರಿಗೆ ತೋರಾ 9 ಚಪಲಾಕ್ಷದವನಿವ ಚಲುವನೆಂತೆಂಬೆನೆ | ವಿಪರೀತ ನಿದ್ರೆ ಮಾಡುವನಿವ ಕರೆದರೆ | ಕುಪಿತವಾಗುವ ಕಿಡಿ ಉಗುಳುವನಿವ | ಕಪಟದಲ್ಲಿ ಗಟ್ಟಿ ತಲೆ ಹೊಡಕ ರಾಮ | ಕಪಿಯ ಮೋಸದಿಂದ ಕೆಡಹಿದ ಮಾವನ್ನ | ನಿಪತನ ಗೈಸಿದ | ದೋಷಕ್ಕೆ ಶಂಕಿಸಾ | ತ್ರಿಪುರವ ಕೆಡಸಿದ ಹರಗೆ ಸಾಯುಕವಾಗಿ | ಅಪಕಾರಿ ಝಗಳಗಂಟ ಒದಿಸಿಕೊಂಡ || ವಿಪುಳದೋಳೇನು ಒಂಟಾ ಉಚ್ಚರಿಸುವೆ | ಕೃಪಣ ಜನರಿಗೆ ನೆಂಟಾಸನಕ್ಯಾದರ | ಶಪತದಲ್ಲಿಗೆ ಪೊರವಂಟಾ ಉತ್ತಮರಿಂದ | ಉಪದೇಶವಿಲ್ಲದ ಬಾಳುವ ಮಹಾತುಂಟಾ 10 ಇವರೀರ್ವರಿಗೆ ಈಡೆ ತಪ್ಪಿಸಲು ಪದ್ಮ | ಭವಗಳವಲ್ಲವು ನಿನ್ನ ಕುವರಿಗೆ | ಸವಿಗಾರ ಇವನಲ್ಲದೆ ಮತ್ತಾವಾವಾ | ವಿವರಿಪೆ ಎಂಥವರಕೆ ಅಂಥ ಕನ್ನಿಕೆ | ಹವಣವಾಗಿದೆ ಸತ್ಯ ಸಂಕಲ್ಪವೆ ಸಿದ್ಧಾ | ಶ್ರವಣಾದಿ ಇಂದ್ರಿಂಗಳಿಗಗೋಚರಾ | ಸ್ಥವಿರ ಯೌವನ ಬಾಲ ಒಂದಾದರಿವನೆಲ್ಲಾ | ನವನವ ಬಗೆ ಸುಕಾಯಾ || ಮೋಹನ್ನ ಯಾ | ದವರಾಯಾ ಶಿರಿ ವಿಜಯವಿಠ್ಠಲ ಕೃಷ್ಣ | ಶಿವಕುಲ್ಲ್ಯ ಪುರಿ ನಿಲಯಾ ಭಕ್ತರ ಪ್ರೀಯಾ | ಮಾಯಾ ಜಗದ್ಗುರು | ಪವನವತಾರ ಶ್ರೀ ಆನಂದ ಮುನಿಗೇಯಾ11
--------------
ವಿಜಯದಾಸ
ಎಷ್ಟು ಸಾಹಸವಂತ ನೀನೆ ಬಲವಂತದಿಟ್ಟಮೂರುತಿ ಭಳಭಳಿರೆ ಹನುಮಂತ ಪ. ಅಟ್ಟುವ ಖಳರೆದೆ ಮೆಟ್ಟಿ ತುಳಿದು ತಲೆಗಳಕುಟ್ಟಿ ಚೆಂಡಾಡಿದ ದಿಟ್ಟ ನೀನಹುದೊ ಅ.ಪ. ರಾಮರಪ್ಪಣೆಯಿಂದ ಶರಧಿಯ ದಾಟಿಆ ಮಹಾ ಲಂಕೆಯ ಕಂಡೆ ಕಿರೀಟಸ್ವಾಮಿಕಾರ್ಯವನು ಪ್ರೇಮದಿ ನಡೆಸಿದಿಈ ಮಹಿಯೊಳು ನಿನಗಾರೈ ಸಾಟಿ1 ದೂರದಿಂದಸುರನ ಪುರವ[ನ್ನು] ನೋಡಿಭರದಿ ಶ್ರೀರಾಮರ ಸ್ಮರಣೆಯನು ಮಾಡಿಹಾರಿದೆ ಹರುಷದಿ ಸಂಹರಿಸಿ ಲಂಕಿಣಿಯನುವಾರಿಜಮುಖಿಯನು ಕಂಡು ಮಾತಾಡಿ 2 ರಾಮರ ಕ್ಷೇಮವ ರಮಣಿಗೆ ಪೇಳಿತಾಮಸ ಮಾಡದೆ ಮುದ್ರೆನೊಪ್ಪಿಸಿಪ್ರೇಮದಿಂ ಜಾನಕಿ ಕುರುಹನು ಕೊಡಲಾಗಆ ಮಹಾ ವನದೊಳು ಫಲವನು ಬೇಡಿ 3 ಕಣ್ಣ್ಣಿಗೆ ಪ್ರಿಯವಾದ ಹಣ್ಣ[ನು] ಕೊಯ್ದುಹಣ್ಣಿನ ನೆವದಲಿ ಅಸುರರ ಹೊಯ್ದುಪಣ್ಣಪಣ್ಣನೆ ಹಾರಿ ನೆಗೆನೆಗೆದಾಡುತಬಣ್ಣಿಸಿ ಅಸುರರ ಬಲವನು ಮುರಿದು4 ಶೃಂಗಾರವನದೊಳಗಿದ್ದ ರಾಕ್ಷಸರಅಂಗವನಳಿಸಿದೆ ಅತಿರಣಶೂರನುಂಗಿ ಅಸ್ತ್ರಗಳ ಅಕ್ಷಯಕುವರನಭಂಗಿಸಿ ಬಿಸುಟಿಯೊ ಬಂದ ರಕ್ಕಸರ 5 ದೂರ ಪೇಳಿದರೆಲ್ಲ ರಾವಣನೊಡನೆಚೀರುತ್ತ ಕರೆಸಿದ ಇಂದ್ರಜಿತುವನೆಚೋರಕಪಿಯನು ನೀ ಹಿಡಿತಹುದೆನ್ನುತಶೂರರ ಕಳುಹಿದ ನಿಜಸುತನೊಡನೆ 6 ಪಿಡಿದನು ಇಂದ್ರಜಿತು ಕಡುಕೋಪದಿಂದಹೆಡೆಮುರಿ ಕಟ್ಟಿದ ಬ್ರಹ್ಮಾಸ್ತ್ರದಿಂದಗುಡುಗುಡುಗುಟ್ಟುತ ಕಿಡಿಕಿಡಿಯಾಗುತನಡೆದನು ಲಂಕೆಯ ಒಡೆಯನಿದ್ದೆಡೆಗೆ 7 ಕಂಡನು ರಾವಣನುದ್ದಂಡ ಕಪಿಯನುಮಂಡೆಯ ತೂಗುತ್ತ ಮಾತಾಡಿಸಿದನುಭಂಡುಮಾಡದೆ ಬಿಡೆನೋಡು ಕಪಿಯೆನೆಗಂಡುಗಲಿಯು ದುರಿದುರಿಸಿ ನೋಡಿದನು 8 ಬಂಟ ಬಂದಿಹೆನೊಹಲವು ಮಾತ್ಯಾಕೊ ಹನುಮನು ನಾನೆ 9 ಖುಲ್ಲ ರಕ್ಕಸನೆತೊಡೆವೆನೊ ನಿನ್ನ ಪಣೆಯ ಅಕ್ಷರವ 10 ನಿನ್ನಂಥ ದೂತರು ರಾಮನ ಬಳಿಯೊಳುಇನ್ನೆಷ್ಟು ಮಂದಿ ಉಂಟು ಹೇಳೊ ನೀ ತ್ವರಿಯಾನನ್ನಂಥ ದೂತರು ನಿನ್ನಂಥ ಪ್ರೇತರುಇನ್ನೂರು ಮುನ್ನೂರು ಕೋಟಿ ಕೇಳರಿಯಾ11 ಕಡುಕೋಪದಿಂದಲಿ ಖೂಳರಾವಣನು ಸುಡಿರೆಂದ ಬಾಲವ ಸುತ್ತಿ ವಸನವನುಒಡೆಯನ ಮಾತಿಗೆ ತಡೆಬಡೆಯಿಲ್ಲದೆಒಡನೆಮುತ್ತಿದರು ಗಡಿಮನೆಯವರು 12 ತÀಂದರು ವಸನವ ತಂಡತÀಂಡದಲಿಒಂದೊಂದು ಮೂಟೆ ಎಂಬತ್ತು ಕೋಟಿಯಲಿಚಂದದಿ ಹರಳಿನ ತೈಲದೊಳದ್ದಿಸೆನಿಂದ ಹನುಮನು ಬಾಲವ ಬೆಳೆಸುತ 13 ಶಾಲು ಸಕಲಾತ್ಯಾಯಿತು ಸಾಲದೆಯಿರಲುಬಾಲೆರ ವಸ್ತ್ರವ ಸೆಳೆದುತಾರೆನಲುಬಾಲವ ನಿಲ್ಲಿಸೆ ಬೆಂಕಿಯನಿಡುತಲಿಕಾಲಮೃತ್ಯುವ ಕೆಣಕಿದರಲ್ಲಿ14 ಕುಣಿಕುಣಿದಾಡುತ ಕೂಗಿ ಬೊಬ್ಬಿಡುತಇಣಿಕಿನೋಡುತ ಅಸುರರನಣಕಿಸುತಝಣಝಣಝಣರೆನೆ ಬಾಲದಗಂಟೆಯುಮನದಿ ಶ್ರೀರಾಮರ ಪಾದವ ನೆನೆಯುತ 15 ಮಂಗಳಂ ಶ್ರೀರಾಮಚಂದ್ರ ಮೂರುತಿಗೆಮಂಗಳಂ ಸೀತಾದೇವಿ ಚರಣಂಗಳಿಗೆಮಂಗಳವೆನುತ ಲಂಕೆಯ ಸುಟ್ಟುಲಂಘಿಸಿ ಅಸುರನ ಗಡ್ಡಕೆ ಹಿಡಿದ 16 ಹತ್ತಿತು ಅಸುರನ ಗಡ್ಡಮೀಸೆಗಳುಸುತ್ತಿತು ಹೊಗೆ ಬ್ರಹ್ಮಾಂಡಕೋಟಿಯೊಳುಚಿತ್ತದಿ ರಾಮರು ಕೋಪಿಸುವರು ಎಂದುಚಿತ್ರದಿ ನಡೆದನು ಅರಸನಿದ್ದೆಡೆಗೆ 17 ಸೀತೆಯಕ್ಷೇಮವ ರಾಮರಿಗ್ಹೇಳಿಪ್ರೀತಿಯಿಂ ಕೊಟ್ಟಕುರುಹ ಕರದಲ್ಲಿಸೇತುವೆ ಕಟ್ಟಿ ಚತುರಂಗ ಬಲಸಹಮುತ್ತಿತು ಲಂಕೆಯ ಸೂರೆಗೈಯುತಲಿ 18 ವೆಗ್ಗಳವಾಯಿತು ರಾಮರ ದಂಡುಮುತ್ತಿತು ಲಂಕೆಯ ಕೋಟೆಯ ಕಂಡುಹೆಗ್ಗದ ಕಾಯ್ವರ ನುಗ್ಗುಮಾಡುತಿರೆಝಗ್ಗನೆ ಪೇಳ್ದರು ರಾವಣಗಂದು 19 ರಾವಣಮೊದಲಾದ ರಾಕ್ಷಸರ ಕೊಂದುಭಾವಶುದ್ಧದಲಿ ವಿಭೀಷಣ ಬಾಳೆಂದುದೇವಿ ಸೀತೆಯನೊಡಗೊಂಡಯೋಧ್ಯದಿದೇವ ಶ್ರೀರಾಮರು ರಾಜ್ಯವಾಳಿದರು 20 ಶಂಖದೈತ್ಯನ ಕೊಂದೆ ಶರಣು ಶರಣಯ್ಯಶಂಖಗಿರಿಯಲಿ ನಿಂದೆ ಹನಮಂತರಾಯಪಂಕಜಾಕ್ಷ ಹಯವದನನ ಕಟಾಕ್ಷದಿಬಿಂಕದಿ ಪಡೆದೆಯೊ ಅಜನಪದವಿಯ21
--------------
ವಾದಿರಾಜ
ಏಕ ಚಿಂತಿಸಲಯ್ಯ ಈ ಜಗದ ಸುಖಕಾಗಿ ಸಾಕು ಇದರೊಳು ಸುಖದ ಲೇಶವನು ಕಾಣೆ ಪ ಒಂದು ಸುಖ ಬಯಸಿದೊಡೆ ಹಿಂದೆ ನೂರೆಂಟಾಗಿ ಸಂದಣಿಪ ದುಃಖಗಳು ಬಂದು ಒದಗುವವಿದಕೆ ಎಂದಿಗೂ ಬಯಸೆನಾ ಈ ತೆರೆದ ಸುಖವನ್ನು ಹಿಂದಿನಾ ಕರ್ಮದಂತಾಗುತಿರುವುದಕೆ 1 ಮೊದಲು ಸವಿಯಾಗಿಹುದು ತುದಿಯಲಿದು ವಿಷವಹುದು ಬದಲಾಗುತಿಹ ಇಂಥ ಸುಖ ಬೇಡವೆನಗೆ ಮೊದಲುಕೊನೆ ಇಲ್ಲದಿಹ ಸದಮಲಾನಂದವಹ ಪದವ ಮರೆಯಿಸುತಿರುವದಿದು ಬೇಡವೆನಗೆ 2 ಅನಿಸಿಕೆಯೆ ಕೂಡಿರುವ ಈ ಸುಖವು ನಿಜವಲ್ಲ ಮನವಾಣಿಗಳಿಗಾಚೆಗಿಹ ಸುಖವು ನಿಜವು ತಾನೆ ಸುಖರೂಪನೆಂದನಿತರೊಳು ನಿಶ್ಚಯಿಸಿ ಜ್ಞಾನಿಶಂಕರನೆ ನಾನಾದ ಮೇಲಿನ್ನು 3
--------------
ಶಂಕರಭಟ್ಟ ಅಗ್ನಿಹೋತ್ರಿ
ಏನಂತೆನ್ನಲಿ ಎನ್ನನುತಾಪ ನೀನಾದ್ದರಿಂದೆಂಬೆ ಗೈಯದೆ ಲೋಪ ಪ. ಕಣ್ಣೆದುರಾದ ಕಂದರ್ಪಲಾವಣ್ಯ ಸನ್ನುತ ಸಕಲ ಲೋಕೈಕಶರಣ್ಯ ಪುಣ್ಯಪುರುಷ ಸುಪ್ರಸನ್ನ ಕೇಳಮ್ಮ 1 ಕೆಂದಾವರೆಯಂತೆ ಚೆಂದುಳ್ಳ ಚರಣ ಸೌಂದರ್ಯಸಾರ ಪೀತಾಂಬರಾವರಣ ವಂದನೀಯ ಪೂರ್ಣಾನಂದ ಮುಕುಂದ ಸಂದೇಹವಿಲ್ಲ ತೋರಿದನು ಗೋವಿಂದ 2 ಶಂಕ ಚಕ್ರ ಗದಾ ಪಂಕಜಪಾಣಿ ಶಂಕರನುತ ಶ್ರೀವತ್ಸಾಂಕಿತ ಜನನಿ ಬಿಂಕದ ಕೌಸ್ತುಭಾಲಂಕೃತಗ್ರೀವ ವೆಂಕಟೇಶ ನಿಷ್ಕಳಂಕ ಕೇಳವ್ವ 3 ಚಂದ್ರಶತಾನನ ಕುಂದಸುಹಾಸ ಇಂದಿರಾ ಹೃದಯಾನಂದ ಪರೇಶ ಸುಂದರ ನಳಿನದಳಾಯತನಯನ ಮಂದರಧಾರ ಧರಾಧರಶಯನ 4 ಲಕ್ಷ್ಮೀನಾರಾಯಣ ಸುಕ್ಷೇಮಧಾಮ ಅಕ್ಷರಾರ್ಚಿತ ನೀಲನೀರದಶ್ಯಾಮ ಪಕ್ಷೀಂದ್ರವಾಹನ ಪಾವನಚರಿತ ಸಾಕ್ಷಿರೂಪ ಸಚ್ಚಿದಾನಂದಭರಿತ 5
--------------
ತುಪಾಕಿ ವೆಂಕಟರಮಣಾಚಾರ್ಯ
ಏನಂತೆನ್ನಲಿ ಎನ್ನನುತಾಪ ನೀನಾದ್ದರಿಂದೆಂಬೆ ಗೈಯದೆ ಲೋಪ ಪ. ಕಣ್ಣೆದುರಾದ ಕಂದರ್ಪಲಾವಣ್ಯ ಸನ್ನುತ ಸಕಲ ಲೋಕೈಕಶರಣ್ಯ ಪುಣ್ಯಪುರುಷ ಸುಪ್ರಸನ್ನ ಕೇಳಮ್ಮ 1 ಕೆಂದಾವರೆಯಂತೆ ಚೆಂದುಳ್ಳ ಚರಣ ಸೌಂದರ್ಯಸಾರ ಪೀತಾಂಬರಾವರಣ ವಂದನೀಯ ಪೂರ್ಣಾನಂದ ಮುಕುಂದ ಸಂದೇಹವಿಲ್ಲ ತೋರಿದನು ಗೋವಿಂದ 2 ಶಂಕ ಚಕ್ರ ಗದಾ ಪಂಕಜಪಾಣಿ ಶಂಕರನುತ ಶ್ರೀವತ್ಸಾಂಕಿತ ಜನನಿ ಬಿಂಕದ ಕೌಸ್ತುಭಾಲಂಕೃತಗ್ರೀವ ವೆಂಕಟೇಶ ನಿಷ್ಕಳಂಕ ಕೇಳವ್ವ 3 ಚಂದ್ರಶತಾನನ ಕುಂದಸುಹಾಸ ಇಂದಿರಾ ಹೃದಯಾನಂದ ಪರೇಶ ಸುಂದರ ನಳಿನದಳಾಯತನಯನ ಮಂದರಧಾರ ಧರಾಧರಶಯನ 4 ಲಕ್ಷ್ಮೀನಾರಾಯಣ ಸುಕ್ಷೇಮಧಾಮ ಅಕ್ಷರಾರ್ಚಿತ ನೀಲನೀರದಶ್ಯಾಮ ಪಕ್ಷೀಂದ್ರವಾಹನ ಪಾವನಚರಿತ ಸಾಕ್ಷಿರೂಪ ಸಚ್ಚಿದಾನಂದಭರಿತ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಏನು ಭಾಗ್ಯವೋ ತಾಯೆ ಲಕುಮಿ ನಿನ್ನದೂ ಸಾನು ರಾಗದಿ ಹರಿಯ ಸೇವಿಸುತಲಿರುವಿ ಪ. ಕಂಕಣವು ನೀನಾಗಿ ಹರಿಗೆ ಭುಜಕೀರ್ತಿ ನೀನಾಗಿ ಶಂಕುಚಕ್ರ ಗದಾ ಪದ್ಮ ನೀನಾಗಿ ಶಂಕೆ ಇಲ್ಲದೆ ಕಿಂಕರಳು ನೀನಾಗಿ ಹರಿಸೇವೆಗೆ ಪಂಕಜಾನಾಭನ್ನ ಸೇವಿಸುತಲಿರುವಿ 1 ಅಕ್ಷರಳು ನೀನಾಗಿ ಹರಿಯ ವಕ್ಷಸ್ಥಳವನೇ ಸೇರಿ ಈ ಜುತ ಹರಿಯ ಪರಮ ಸಂತೋಷದಿಂದ ಲಕ್ಷ ಕೋಟಿ ಕೋಟಿ ಬ್ರಹ್ಮಾಂಡರೂಪದಲ್ಲಿರುವ ಪಕ್ಷಿವಾಹನನ ನೋಡಿ ವೆರಗಾಗುತಲಿರುವಿ 2 ರಾಮನಾ ಸತಿಯಾಗಿ ಪ್ರೇಮದಿಂದಲಿ ಈಗ ಕಾಮನಯ್ಯನ ಕಾರುಣ್ಯದಿಂದ ರಮಾವಲ್ಲಭವಿಠಲನ ತೊಡೆಯ ಮೇಲೆ ಕುಳಿತು ಸ್ವಾಮಿಗೆ ಸತಿಯಾಗಿ ಸೇವಿಸುತಲಿರುವಿ 3
--------------
ಸರಸಾಬಾಯಿ
ಏನುಧನ್ಯನೊ ಇವನು ಎಂಥ ಪುಣ್ಯನೊ ದೀನದಯಾಳು ಜಾನಕೀಶನ ಧ್ಯಾನ ಮಾಳ್ಪ ಮಾನವನು ಪ ಜ್ಞಾನದಿಂದ ತಿಳಿದು ಜಗ ಶೂನ್ಯವೆಂದು ಊಹಿಸಿ ಮನದಿ ದಾನವಾಂತಕನಾದ ಹರಿಯ ಧ್ಯಾನವೊಂದೇ ಕಾರಣೆಂದು ಜ್ಞಾನಬೆಳಗಿನೊಳಗೆ ನೋಡಿ ಆನಂದಿಸುತಲ್ಹಿಗ್ಗುವವ 1 ಆಶಪಾಶಗಳನು ನೀಗಿ ಈ ಮೋಸಮಯ ಸಂಸಾರದೊಳು ವಾಸನಾರಹಿತನಾಗಿ ಸದಾ ದಾಸಸಂಗಸುಖಪಡೆದು ಈಶ ಭಜನೆಯೊಳ್ಮನವಿಟ್ಟು ಈಸಿಭವಾಂಬುಧಿ ಪಾರಾಗುವವ 2 ನಂಬಿಗಿಲ್ಲದ ದೇಹವಿದನು ನಂಬಿನೆಚ್ಚಿ ಸಂಭ್ರಮಿಸದೆ ಕಂಬುಕಂಧರ ಶಂಭುವಿನುತ ಅಂಬುಜಾಕ್ಷ ಶ್ರೀರಾಮನ ನಂಬಿ ಗಂಭೀರಸುಖದೊಳಿರುವವ 3
--------------
ರಾಮದಾಸರು
ಏನೆಂದುಸುರುವೆ ಈ ನವರಾತ್ರಿಯಾ | ಸ್ವಾನಂದ ಸುಖಮಯ ಮಹಿಪತಿ ಚರ್ಯಾ ಪ ಮೊತ್ತ ಜನರು ಕೂಡಿ ಭಿತ್ತಿ ಬಾಗಿಲುಗಳ ಬಣ್ಣದಿ ನಿಚ್ಚಳ | ತೆತ್ತ ಮಾಡಳರವಿ ತಳಿಲು ತೋರಣದಿ | ಮತ್ತೆ ದೇವಾಲಯ ಮಂಡಿತ ಜಗಲಿಯಾ | ಸುತ್ತ ಕದಳೀ ಕಂಭದಿ ಮ್ಯಾಲಿಯ | ಉತ್ತಮ ಮಂಟಪದಿ ತರಗು ತೆಂಗು | ಉತ್ತತ್ತೀ ಬಹು ಓಲವೀ ಕಟ್ಟಿಹ | ವತ್ತೊತ್ತಿ ಥರ ಥರದಿ ನಮ್ಮಯ್ಯಾನಾ 1 ಕಡಲೆ ತಂಡುಲ ಗುಡ ಶರ್ಕರವ ಮತ್ತೆ ಗೂಡಿಹ ಸಮಸ್ತ | ಘೃತ ವಡವೆಯ ತುಂಬಿಹ ಸ್ಟೈಪಾಕ ಮಾಡಲಿ | ತಡೆಯದೆ ಕೊಡುತಿಹರು ಓಡ್ಯಾಡಲು | ಅಡಿಗಡಿಗೊಬ್ಬೊಬ್ಬರು ಆಜ್ಯವ | ಧೃಡ ಭಕ್ತಿಯುಳ್ಳವರು ನಮ್ಮಯ್ಯನಾ 2 ಏಕೋ ಭಾವನೆಯಲಿ ಯಾತ್ರೆಯ ಸದ್ಭೋಧಾಸಕ್ತರು | ಬೇಕಾದಿ ಸಾಕುವದೇವ ದೇವರಾ ಸಾರಿ ಸುಜನ ವಿಂಡು | ಹಾಕಿ ಸಾಷ್ಟಾಂಗದಲಿ ಪರಿ ಲೋಕ ನೆರೆಯುತಿರಲಿ ನಮ್ಮಯ್ಯನಾ 3 ಮೊದಲಿನ ದಿವಸದಿ ಸಂಧ್ಯಾವಂದನಜಪಾನುಷ್ಠಾನಾ | ವಿದಿತ ಬಂಗಾರ ವೆಳಿಯಲಿ ಬರೆದ ಚದುರ | ಝಗ ಝಗ ಅದು ನಕ್ಷತ್ರ ಮಾಲಿ ನಮ್ಮಯ್ಯನಾ 4 ಪಡದಿಯ ಸೋಂಪಿಲಿ ಬಹು ವಿಚಿತ್ರ | ಸಡಗರದಲಿ ದೇವ ಸಂಪುಟ ಮೆರೆವಾ| ವಡೆಯನ ಏನೆಂದ್ಹೇಳಲಿ ನಮ್ಮಯ್ಯಾನಾ 5 ಸನ್ನುತ ಗಂಗೆಯ ಸಲಿಲವು ಮುನ್ನ ಪಂಚಾಮೃತ ದಾಗಲು ಅಭಿಷೇಕ | ಸುಗಂಧವನ್ನು ಅರ್ಪಿಸಿ ಚಲ್ವದಾ ಸಾಲಾದಾ | ಘನ್ನ ದೀಪದೆಡೆ ಬಲದಾ ನಮ್ಮಯ್ಯನಾ 6 ಪರಿಮಳ ದಿಂಡಿಗೆ ಪರಿ ಪುಷ್ಪದಾ ಪಸರಿಕೆ ಬಹುಳವಾ | ತರುವಾರಾ ಧೂ ಬಲವೆಡಾ ಊದುಬತ್ತಿಯ ಗಿಡಾ | ನೆರೆ ಏಕಾರತಿಯಾಗಲಿ ನೈವೇದ್ಯ ಹರಿವಾಣವನು | ಬರಲಿ ಹರಿಗೆ ಪ್ರತ್ಯಕ್ಷದಲೀ ನಮ್ಮಯ್ಯನಾ 7 ವಾದಾ ಪೂಗೀ ಫಲಾ ಹರಿವಾಣ ಆರತಿ ಪೂರಣಾ | ಛಂದ ಭೇದಿಸಿ ಘನತಾಳಾ ಬಲು ಶಂಖ ನಾಮ ಘೋಷದಿತಿಂತ | ರಾದವರು ಪಾಡಲೀ ನೀರಾಂಜನ | ಸಾದಿಪ ಸಮಯದಲಿ ಕಣ್ಣಿನಲಿ ನಮ್ಮಯ್ಯನಾ 8 ಮೆರೆವ ಷೋಡಷದಿಂದ ಹರಿತೀರ್ಥಕೊಳ್ಳಲು ಹರುಷದಿ ಜನಗಳು | ಕರುವೇದ ಘೋಷ ಮಾಡು ಮಾಡಿ ಕುಳ್ಳಿರೆ | ಪರಮಾನ್ನ ಪರಿ ಶಾಕಗಳು ಸೂಪಘೃತ | ಗಿರಿಸಿಹ ದೀಪಗಳು ನಮ್ಮಯ್ಯನಾ 9 ಪ್ರೌಢದಿ ಹರಿ ನಾಮಾ ಆಡಲೇನದು ತೃಪ್ತಿ ಆಯಿತು ಉಂಡು | ನೀಡೆ ವೇದೋಕ್ತದ ನುಡಿ ಆಶೀರ್ವಾದ | ಮಾಡುತ ಬ್ರಾಹ್ಮರು ಮನೆಗೆ ಹೋಗುವರು | ಗಾಡ ಮದ್ದಲೆ ಸದರು ಸಭೆಯೊಳುಗೂಡಿ | ಒಡೆಯನಿದಿರು ಹರಿಯ ಕೊಂಡಾಡಿ ಆರತಿಯತ್ತೀರ ನಮ್ಮಯ್ಯನಾ 10 ಮುಂಚಿಲಿ ನಡೆಯಲು ಅರ್ಚನೆಯಾ ಅರ್ತಿ | ಸಂಭ್ರಮದಲಿ ನೋಡಿ ಸದ್ಗತಿ ಸೂರ್ಯಾಡಿ | ಕೊಂಬರು ಸ್ವಸ್ಥಲ ಕುರಿತು ಆಜ್ಞೆಗಳ | ಇಂದಿಲ್ಲ ಆನಂದದೀ ಈ ಮಹಿ ಮಾಡಂಬರೆನ್ನ ಮುಖದಿ ನುಡಿಸಿದ | ಶಂಭು ಮಹಿಪತಿ ದಯದಿ ನಂದನ | ಬೊಂಬಿ ಸೂತ್ರ ದಂದದಿ ನಮ್ಮಯ್ಯನಾ 11
--------------
ಕಾಖಂಡಕಿ ಶ್ರೀ ಕೃಷ್ಣದಾಸರು