ಒಟ್ಟು 2437 ಕಡೆಗಳಲ್ಲಿ , 116 ದಾಸರು , 1864 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದವ ತೋರೋ ಪಾವನಮಹಿಮೆ ಪಪಾದವ ತೋರೋ ರಂಗಯ್ಯಪಾದಕೆ ಬಿದ್ದು ಪಾವನನಾಗುವೆ ಪಾದವ ತೋರೋ ಅ.ಪಥಳಥಳ ಹೊಳೆಯುತ ಜಲದಿ ಸಂಚರಿಸಿದಪಾದವ ತೋರೋ ಎನ್ನಯ್ಯಬಲುಗೌಪ್ಯದಿ ಒಳಗೆಳೆದು ಮುದುರಿಕೊಂಡಪಾದವ ತೋರೋಬಲಿಯಮೆಟ್ಟಿ ರಸಾತಳಕಿಳಿಸಿದಘನಪಾದವ ತೋರೋ ಎನ್ನಯ್ಯಇಳೆಯ ಮೇಲೆ ಬಿದ್ದ ಶಿಲೆಯ ತುಳಿದಮಹಪಾದವ ತೋರೋ 1ಗಾಬರಿಯಿಂದ ಭರತ ಬಂದೆರಗಿದಪಾದವ ತೋರೋ ಎನ್ನಯ್ಯಶಬರಿ ಭಕ್ತಿಯಿಂದ ಮುಟ್ಟಿ ಪೂಜಿಸಿದ ಪಾದವ ತೋರೋಪ್ರಭು ಹನುಮಂತನ ಹೃದಯದೋಳ್ಹೊಳೆಯುವಪಾದವ ತೋರೋ ಎನ್ನಯ್ಯನಭೋಮಾರ್ಗದಿನಿಂದುವಿಭೀಷಣ ನಮಿಸಿದಪಾದವ ತೋರೋ 2ಕರಿರಾಜ ಸ್ಮರಿಸಲು ಸರಸಿಗೆ ಇಳಿದಪಾದವ ತೋರೋ ಎನ್ನಯ್ಯಉರಗನ ಶಿರಮೆಟ್ಟಿ ಪರಿಪರಿನಲಿದ ಪಾದವ ತೋರೋಗರುಡನ ಏರಿ ಗಮಿಸುವ ಪರತರಪಾದವ ತೋರೋ ಎನ್ನಯ್ಯಪರಮಪಾವನೆ ಸುರಗಂಗೆಯನು ಪೆತ್ತ ಪಾದವ ತೋರೋ 3ಸದಮಲ ರಾಧೆ ತನ್ನ್ವದನದಿಂ ಚುಂಬಿಸಿದಪಾದವ ತೋರೋ ಎನ್ನಯ್ಯವಿದುರನ ಸದನವ ಸುದಯದಿಂದ ಪೊಕ್ಕ ಪಾದವ ತೋರೋಅಧಮಪೂತನಿಯ ಕೊಂದೊದೆದಪಾದವ ತೋರೋ ಎನ್ನಯ್ಯವಿಧವಿಧದೆಶೋದೆ ತೊಡೆಯ ಮೇಲಾಡಿದಪಾದವ ತೋರೋ 4ಧರೆಯನು ಮೀಂಟಿ ಕುರುಪನ ಕೆಡಹಿದಪಾದವ ತೋರೋ ಎನ್ನಯ್ಯಧುರದಲಿ ನರನ ವರೂಥ ನೆಲಕೊತ್ತಿದ ಪಾದವ ತೋರೋಚರಣದಾಸರಿಗೆ ಪರಮಮುಕ್ತಿನೀಯ್ವಪಾದವ ತೋರೋ ಎನ್ನಯ್ಯವರದ ಶ್ರೀರಾಮನ ಮರೆಯಬಿದ್ದ ನಿಜ ಪಾದವ ತೋರೋ 5
--------------
ರಾಮದಾಸರು
ಪಾರ್ವತೀದೇವಿ ಸ್ತೋತ್ರ137ಪಾರ್ವತಿ ದಕ್ಷಕುಮಾರಿ ನಿನ್ನ | ಸಾರ್ವೆ ಸಂತತ ಕುಜನಾರೀ ||ಆಹಾ||ದೂರ್ವಾಸನರ್ಧಾಂಗಿ ಸರ್ವಜೆÕ ಯನ್ನಯ ||ಚಾರ್ವಾಕ ಮತಿ ಕೀಳಿ ತೋರ್ವದು ಸುಪಥವ ಪದುರ್ಗೆ ಭವಾನಿ ರುದ್ರಾಣಿ ಗೌರಿ | ಸ್ವರ್ಗಜಿನಾರಾಧ್ಯ-ಮಾನಿ || ಸೇರೆದುರ್ಗುಣದವರ ಸುಜ್ಞಾನಿ | ಭಕ್ತವರ್ಗ ಪೋಷಕ ಶುಕ-ವಾಣೀ ||ಆಹಾ||ನಿರ್ಗುಣರಾದುತ್ತಮರ್ಗೆವೊಲಿವ ಅಪ |ವರ್ಗದ ನಾಳೆ ನರರ್ಗೆ ಮಣಿಸದಿರೆ 1ಚಂಡಿ ಕಾತ್ಯಾಯಿನಿ ಉಮ್ಮಾ ನಾಲ್ಕು | ಮಂಡೆಯವನಸೊಸೆ | ಯಮ್ಮಾ | ನಾಡೆಕಂಡು ಭಜಿಪೆನಿತ್ಯನಿಮ್ಮ |ಪಾದಪುಂಡರೀಕದ್ವಯವಮ್ಮಾ ||ಆಹಾ||ಉಂಡು ವಿಷವ ನಿನ್ನಗಂಡಬಳಲಿ ಕೈ |ಕೊಂಡೌಷಧ ತಂಡ ತಂಡದಲೆನಗೀಯೆ 2ಪಾವಕನೊಳು ಪೊಕ್ಕ ಪತಿವ್ರತೆ | ಯಾವಾಗ ಮಾನಿಸತ್ಕಥೆ | ಯಲ್ಲಿಭಾವನೆ ಕೊಡೆಪ್ರತಿಪ್ರತಿ | ಜಾವ ಜಾವಕೆ ಷಣ್ಮುಖಮಾತೆ ||ಆಹಾ||ಕೋವಿದರೊಡತಿ ಕೇಳಾವಾಗ ವೈರಾಗ್ಯ |ವೀವದು ದುರಾಪೇಕ್ಷೆ ನಾವೊಲ್ಲೆನೆಂದೆಂದೂ 3ಬೇಡಿದಭೀಷ್ಟವ ಕೊಡುವೆ | ದಯ ಮಾಡಿ ಭಕ್ತರಕರಪಿಡಿವೆ | ದೋಷಕಾಡುಳಿಯದಂತೆ ಸುಡುವೆ | ನಿನ | ಗೀಡೆ ಮಹದ್ಭಯಕಡಿವೆ ||ಆಹಾ||ರೊಢೀಶ ಶಿವನೆಂದು ಆಡಿಸದಿರು ಬುದ್ಧಿ |ಗೇಡಿ ದಾನವರಂತೆ ನೀಡು ಶ್ರೀಹರಿ ಸೇವೆ 4ಮೇಶ ಪ್ರಾಣೇಶ ವಿಠ್ಠಲನೆ | ಜಗದೀಶನೆಂಬುವ ದಿವ್ಯ-ಜ್ಞಾನೆ | ಕೊಟ್ಟು |ಪೋಷಿಪುದೆನ್ನ ಸುಜಾಣೆ | ನೀನುದಾಸಿಸೆ ನಾನಾರಕಾಣೆ ||ಆಹಾ||ಈಶೆ ಪಂಚ ಮಹಾದೋಷಿ ಬಿಡದೆ ನಿತ್ಯಾ |ಈ ಶರೀರದೊಳಿಹ್ಯಘಾಸಿಮಾಡುವನನ್ನು 5
--------------
ಪ್ರಾಣೇಶದಾಸರು
ಪಾಲಯಮಾಂ ಶ್ರೀಭಾರ್ಗವಿಲಕ್ಷ್ಮೀಭಕ್ತವಾತ್ಸಲ್ಯನಿಧಿ ಹೇ ಜನನಿ ಪಫಾಲಲೋಚನಬ್ರಹ್ಮಾದ್ಯಮರಪೂಜಿತಪಾದಪದ್ಮಯುಗಳ ಸೌಭಾಗ್ಯ ಪ್ರದಾಯನಿ ಅ.ಪಚಂದ್ರರೂಪಿಣಿಚಂದ್ರಾಭರಣಾಲಂಕೃತಸೌಂದರ್ಯಚಂದ್ರಮುಖಿಇಂದ್ರವರಜ ಹೃನ್ಮಂದಿರ ವಾಸಿನಿವಿಶ್ವಕುಟುಂಬಿಇಂದಿರೆಸತತಂ1ಧಾತ್ರಿ ತುಲಸಿರಾಮದಾಸಾವನಶೀಲದಾರಿದ್ರ್ಯಾಪಹಾರಿಣೀಅತ್ರೀಮಹಾಋಷ್ಯಾಪತ್ಯಸಹೋದರಿಅಹಿಗಿರಿ ಶಿಖರಾನಂದನಿಲಯ ನಿತ್ಯ2
--------------
ತುಳಸೀರಾಮದಾಸರು
ಪಾಲಿಸು ನಮ್ಮನು ಪರಬ್ರಹ್ಮ ಶ್ರೀ-ಲೋಲಾನಂತ ಗುಣಾಲಯನೇ ಪ.ನೀಲಾಭ್ರದಾಭ ಕಾಲನಿಯಾಮಕಮೂಲೇಶ ಪುರುಷ ಮೂರ್ಲೋಕಾಧಿಪ ಅ.ಪ.ಉತ್ತಮ ಗುಣಗಳು ಬತ್ತಿಪೋದುವೈದೈತ್ಯರ ಗುಣವು ಪ್ರವರ್ಧಿಪುದುಚಿತ್ತಸಾಕ್ಷಿ ತವ ಭಕ್ತಿಕಥಾಮೃತನಿತ್ಯನಿತ್ಯಸವಿಸುತ್ತ ಹಿಂಬಾಲಿಸೆ1ಭಾಗವತಜನರ ಯೋಗಕ್ಷೇಮ ಸಂಯೋಗೋದ್ಯೋಗಿ ನೀನಾಗಿರಲುಕೂಗುವಾಸುರರ ಕೂಡೆ ಕೂಡಿಸದೆಭೋಗಿಶಯನಭವರೋಗಭೇಷಜನೆ2ಪಾವನಕರ ನಾಮಾವಳಿ ವರ್ಣಿಪಸೇವಕ ಜನರ ಸಂಭಾವಿಸುವಕೇವಳಾನಂದ ಠೀವಿಯ ಪಾಲಿಸುಶ್ರೀವಾಸುದೇವ ದೇವಕೀತನಯ] 3ಶುದ್ಧತಮೋಗುಣಬದ್ಧ ದೈತ್ಯ ಪ್ರ-ಸಿದ್ಧರಾಗಿಹರು ಮದ್ಯಪರುಬುದ್ಧಿಜ್ಞಾನ ಸಮೃದ್ಧಿ ಭಕ್ತಿಯಿಂ-ದುದ್ಧರಿಸೈಗುರುಮಧ್ವವಲ್ಲಭನೆ4ಕೇಶವಾಚ್ಯುತ ಪರೇಶ ಹೃದ್ಗುಹನಿ-ವಾಸ ವಾಸವಾದ್ಯಮರನುತಶ್ರೀಶ ಶ್ರೀವೆಂಕಟೇಶ ಭಕ್ತಜನರಾಶ್ರಯಸ್ಥಿತದಿನೇಶಶತಪ್ರಭ5ಮಂಗಲ ಜಗದೋತ್ತುಂಗರಂಗಮಾತಂಗವರದ ನೀಲಾಂಗ ನಮೋಅಂಗಜಪಿತಲಕ್ಷ್ಮೀನಾರಾಯಣಸಂಗೀತಪ್ರಿಯವಿಹಂಗತುರಂಗನೆ6
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪಾಲಿಸು ಪಾಲಿಸು ಪಾಲಯಮಾಂ ಸತತಇಂದಿರಾದೇವಿ ಪಪಾಲಿಸು ಪನ್ನಗವೇಣಿಪಾಲಿಸುಪಂಕಜಪಾಣಿಪಾಲಿಸು ಗುಣಗಣ ಶ್ರೇಣಿ ಪಾಹಿನಿತ್ಯ ಕಲ್ಯಾಣಿ ಅ.ಪಬಾಲಕನು ತಾನಾಗಿ ಗೋಪಿಗೆಬಾಲಲೀಲೆಗಳನ್ನು ತೋರಿದಶ್ರೀಲಲಾಮನನ್ನು ಮೆಚ್ಚಿಮಾಲೆಹಾಕಿದಂಥ ಲಕ್ಷ್ಮಿ 1ಅಂಬುಧಿಯೊಳ್ ಶಯನಿಸಿದಕಂಬುಕಂಧರಹರಿಯಬೆಂಬಿಡದೆ ಸೇವಿಪ ಭಕ್ತ ಕು-ಟುಂಬಿ ನಿನ್ನ ನಂಬಿದವರ 2ನಿನ್ನನೆ ನಾನಂಬಿರುವೆ-ನನ್ಯರ ನಾಶ್ರಯಿಸದಲೆಸನ್ನುತಾಂಗಿ ಎನ್ನ ಮನದ-ಲಿನ್ನು ಹರಿಯಪಾದತೋರು3ಸರಸೀಜಾಸನ ಮಾತೆಸ್ಮರಿಸುವೆ ನಿನ್ನಯಪಾದಸ್ಮರಣೆ ಮರೆಯದಂತೆ ಕೊಟ್ಟುಹರಿಯ ತೋರು ಹರುಷದಿಂದ 4ಕಮಲೇ ಹೃತ್ಕಮಲದಿ ಶ್ರೀಕಮಲನಾಭ ವಿಠ್ಠಲಮಿನುಗುವಂಥ ಸೊಬಗು ತೋರುವಿನಯದಿಂದ ನಮಿಪೆ ನಿನ್ನ 5
--------------
ನಿಡಗುರುಕಿ ಜೀವೂಬಾಯಿ
ಪಾಲಿಸೆನ್ನ ಪಾರ್ವತೀಪತಿ ಪಾಲಿಸೆನ್ನನುಪಾಲಿಸೆನ್ನನು ಚೆಲ್ವ ಕಾಲಕಂದರ ಹರಪಾಲಯಮಾಂ ಶಿವಲೋಲವಿರೂಪಾಕ್ಷಪಶರನಾಮ ಸುರನ ಕುವರಿಯನಾಳಿದವನಹಿರಿಯ ಪಿತನ ಶಿರವ ತರಿದವನ ಸುತನಿಗೆತುರಗವಾದವನ ಜೆಹ್ವೆಯ ತುದಿಗೆ ಸಿಲುಕಿಮರುಳಾಗಿದ್ದವನ ಬಾಯ ತುತ್ತಾಗಿಮರೆಯೊಳಿದ್ದವನ ಕಾಯವಾಧರಿಸಿ ನೀಶಿರದೊಳು ತಾಳಿದೆಯಾ ಎನ್ನೊಡೆಯ1ಬಾಯೊಳಗಿಹ ರಮಣನ ಅನುಜನ ಮಾವನ ದಿನದಮೈಯವನ ಮಗನ ಶಿರದಾಯತವಾಗಿಪ್ಪನ ವೈ-ರಿಯ ನೇರಿದಾಯತಾಕ್ಷಿಯ ಪೆತ್ತನ ವಂಶವ ಮುರಿ-ದಾ ಯಾಗಗಳ ಕಿತ್ತವನ ಆತ್ಮಜನಿಗೆಆಯಾಮಾರ್ಗಣವಿತ್ತವನೆ2ಸರಸಿಜಮಿತ್ರನ ಸೂನುವಿನ ಕಂದನವರಪುರಂಧ್ರಿಯಮಾನವಕಾಯ್ದನಣ್ಣನಕರದೊಳಿದ್ದಾಯುಧವ ಪೆಗಲೊಳಾತುನರರ ರಕ್ಷಿಸಿ ಪೊರೆವ ದೇವನನೇರಿಚರಿಪ ಪಂಪಾಪುರವನಾಳ್ವ ಸದ್ಗುರುಚಿದಾನಂದ ದೇವಭಕ್ತರಕಾವ3
--------------
ಚಿದಾನಂದ ಅವಧೂತರು
ಪಾಹಿಮಾಂ ಪರಮೇಶಪುರಹರಪಾಹಿಪನ್ನಗಭೂಷಣಾ |ಪಾಹಿಮಾಂ ಗಿರಿಜೇಶ ಸುರವರಪಾಹಿಕ್ಷನ್ನಘನಾಶನಾ 1ಪಾಲಯಂಫಾಲಾಕ್ಷ ಸಜ್ಜನಪಾಲ ಶಂಭು ಮಹೇಶ್ವರಾ |ಪಾಲಯಂ ಪಂಚಾಸ್ಯ ದುರ್ಜನಕಾಲ ಅಂಬಮನೋಹರಾ 2ಮಾಯಮಂ ಬೆರಸೀರ್ಪುದೆನ್ನಯ ಕಾಯದೊಳ್ ಶಶಿಶೇಖರಾ |ಪಾಯಮಂ ಇದಕರಿಯೆ ನಿನ್ನಯ ಸಹಾಯ ಕೊಡುವಿಷಕಂಧರಾ 3ನಂದಿಯನೇರುತ್ತ ಭುವನಾನಂದದಲಿ ಸಂಚರಿಪನೇ |ಬಂಧಮಂ ಬಿಡಿಸೆಂಬೆ ಶಿವ ಗೋವಿಂದದಾಸನಪೊರೆವೆನೆ ||ಪಾಹಿಮಾಂ| |4
--------------
ಗೋವಿಂದದಾಸ
ಪಾಹಿಮಾಂಪಾಹಿಸೀತಾಪತೆಪ.ವಾಣೀಧವ ಪಿತ ಘÉೂೀಣಿ ರಥಪದಪಾಣಿನಂದಕೃಪಾಣಿ ಜಯ ಜಯಕ್ಷೋಣಿವಲ್ಲಭ ಕ್ಷೋಣಿಸುತಾಚಿದ್ಗೌಣ ವರಾಹಾಗ್ರಣಿ ಶ್ರೀರಾಮ 1ರಾಜಕುಲಾಂಬುಧಿ ರಾಜಾರಮಣರಾಜತೇಜವೈರಾಜ ಜಯ ಜಯರಾಜಸೂಯಾರ್ಚಿತ ರಾಜೇಶ್ವರ ಸುರರಾಜಾನುಜ ರಘುರಾಜ ಶ್ರೀರಾಮ 2ಮಂದರಧರನಿಜಸುಂದರ ಚಿನ್ಮಯಮಂದಿರ ನಿತ್ಯಾನಂದ ಜಯ ಜಯವೃಂದಾವನಚರವೃಂದಾರಕಮುನಿವೃಂದ ನೃಪಾನ್ವಯವಂದ್ಯ ಶ್ರೀರಾಮ 3* . . * . . * . . * . . * 4ಶ್ರೀಪದ ಶ್ವೇತದ್ವೀಪನಿಲಯಶ್ರುತಿತಾಪಹರಣ ನಿರ್ಲೇಪ ಜಯ ಜಯಶ್ರೀ ಪ್ರಸನ್ವೆಂಕಟ ಭೂಪತಿಭುವನವ್ಯಾಪಕ ಪೂರ್ಣಪ್ರತಾಪ ಶ್ರೀರಾಮ 5
--------------
ಪ್ರಸನ್ನವೆಂಕಟದಾಸರು
ಪೂಜೆಯ ಮಾಡುವೆನೊ ಸದ್ಗುರುವಿನ |ಪೂಜೆಯ ಮಾಡುವೆನು ||ಮಾಜದೆ ತನು ಮನ ಧನವೆಲ್ಲ ಅರ್ಪಿಸಿ |ಪೂಜೆಯ ಮಾಡುವೆನುಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಗಣಪತಿ ಹರಿಹರರಾ ನಿಜಶಕ್ತಿ ದಿನಪತಿ ನಿಜಭಾಸವು |ತನುವೆಂಬ ಅಷ್ಟಕಂಬದ ಮನೆಯೊಳು ನಾಲ್ಕುಗುಣದ ಚೌಕಿಯನಿಡುವೆ1ವೃತ್ತಿಉದಾಸೀನಕೆ ನಿರ್ಗುಣವಾದಸುತ್ತ ರೇಖೆಯ ಬರೆದು | ಚಿತ್ತವೆಂಬಷ್ಟದಳದಕಮಲದೊಳಿಷ್ಟಮೂರ್ತಿಯ ಧ್ಯಾನಿಸುವೆ2ವೇದಾದಿ ಕಾರಣದಿ ಉಪನಿಷದಾದಿಅರ್ಥದಿ ಶಿರಸಾಮೇದಿನಿ ಮೊದಲಾದತತ್ತ್ವಭೂಷಣದಿಂದ ಆದಿನಾಥನ ಪೂಜೆಯ3ಪ್ರವೃತ್ತಿ ಸ್ಥಾನದಲ್ಲಿ ಫಣಿಯಲ್ಲಿ ನಿವೃತ್ತಿ ವಿಭೂತಿಯುನಿರ್ವಂಚನೆಯಾದ ಆಚಮನ ಕೊಡುವೆನುಸರ್ವಾತ್ಮ ಗುರುಮೂರ್ತಿಗೆ4ಭಕ್ತಿಯ ಜಲದಿಂದಲಿ ಸದ್ಗುರುವಿನನಿತ್ಯಚರಣತೊಳೆದು |ಮುಕ್ತಿಯ ಪಾವನ ಮಾಡುವ ಗುರುಪಾದ ತೀರ್ಥವಂದಿಸಿಕೊಂಬುವೆ5ಸದ್ವಾಸನೆ ಗಂಧವ ಶ್ರೀಗುರುವಿಗೆ ಚಿದ್ ವೃತ್ತಿಯಕ್ಷತೆಯು |ಸದ್ಭಾವದಿಂದಲಿ ತೋರುವ ಪರಿಮಳಮದ್ಗುರುವಿನ ತನುವಿಗೆ6ಮೂರು ಮಾತ್ರೆಯ ಹೊಸೆದು | ನಿರ್ಗುಣವಾದ ಧಾರವಶಿವಸೂತ್ರಕ್ಕೆ | ತೋರುವ ವಿಶ್ವಚರಾಚರ ಪುಷ್ಪದ ಹಾರಕೊರಳಿಗೆ ಹಾಕುವೆ7ನಾನೆಂಬ ಧೂಪ ಸುಟ್ಟು ಸದ್ಗುರುವಿಗೆ ಜ್ಞಾನದೇಕಾರತಿಯು |ಬೋನ ನೈವೇದ್ಯ ಜೀವದ ಭಾವವರ್ಪಿಸಿ ಜ್ಞಾನಕರೋದ್ವರ್ತಿಯ8ವಾಚ್ಯಾರ್ಥ ತಂಬೂಲವಾ ಸದ್ಗುರುವಿಗೆ |ಲಕ್ಷ್ಯಾರ್ಥವೆ ದಕ್ಷಿಣಾ ಲಕ್ಷ್ಯಾತೀತಗೆ ಮಂಗಳಾರತಿಬೆಳಗುವೆಅಕ್ಷಯಮಂತ್ರಪುಷ್ಪ9ಸಂತ ಸನಕಾದಿಕರೂ ಸುರರೆಲ್ಲ ಅಂತರಿಕ್ಷದಿ ಬಂದರು |ತಂತಿ ಮದ್ದಳಿ ತಾಳ ಗೀತ ಶಂಖದ ವಾದ್ಯತಿಂತಿಣಿಯಲಿ ಕುಣಿಯುತ10ಅದ್ವೈತಸಾಷ್ಟಾಂಗವಾ ಸದ್ಗುರುವಿಗೆ | ಚಿದ್ಬೋಧದಿಎರಗಲು ಶುದ್ಧಿ ಸಿದ್ಧಿಗಳೆಂಬ ಚರ್ಯವ ತೋರುವಮುದ್ರೆ ಶ್ರೀ ಗುರುಗಿಟ್ಟೆನು11
--------------
ಜಕ್ಕಪ್ಪಯ್ಯನವರು
ಪೂಜೆಯನು ಮಾಡಿರೊ ಪಾಪಿಪುರುಷನಿಗೆಕಾಯಮಲತೋಯದ ಸ್ನಾನವನೆ ಮಾಡಿಸಿನಯನ ನಾಸಿಕದ ಮಲ ಗಂಧಲೇಪನ ಮಾಡಿಗುಪಿತದಲಿ ಗುದಮಲ ಹಸ್ತೋದಕವ ಕೊಟ್ಟುಅಷ್ಟಮದ ದರಿದ್ರ ಅಲ್ಪಬಲನೆ ಕ್ರೂರನವವಿಧ ದ್ವೇಷಕೆ ನೀನೆ ಅಧಿಕಾರಿಯು
--------------
ಗೋಪಾಲದಾಸರು
ಪೂರ್ವಜನ್ಮದಲಿ ನಾ ಮಾಡಿದಾ ಭವದಿಂದಉರ್ವಿಯೊಳು ಜನಿಸಿದೆನೊ ಕೃಷ್ಣ ಪಕಾರುಣ್ಯನಿಧಿಯನ್ನ ಕಾಯಬೇಕಯ್ಯಹರಿವಾರಿಜನಾಭನೇ ಮುದ್ದುಕೃಷ್ಣ ಅ.ಪಹುಟ್ಟಿದಂದಿಂದಿಗೂ ಸುಖವ ನಾ ಕಾಣದಲೆಕಷ್ಟನಾದೆನು ಕೇಳೊ ಕೃಷ್ಣತೊಟ್ಟಿಲಿನ ಶಿಶು ತಾಯ ಬಿಟ್ಟ ತೆರನಂತೆ ಕಂಗೆಟ್ಟು ಸೊರಗಿದೆನಯ್ಯ ಕೃಷ್ಣಮುಟ್ಟಲಮ್ಮರು ಎನ್ನಸತಿಸುತರು ಬಾಂಧವರುಅಟ್ಟಿ ಎಳೆಯುತ್ತಿಹರೋ ಕೃಷ್ಣಕಷ್ಟ ದಾರಿದ್ರ್ಯವನು ಪರಿಹರಿಸದಿರೆ ದೂರುಮುಟ್ಟುವುದು ನಿನಗಯ್ಯ ಕೃಷ್ಣ 1ಕಾಶಿಯಾವಾಸವನು ಬಯಸಿ ಬಹುದಿನದಿಂದಆಸೆಯೊಳಗಿದ್ದೆನಯ್ಯ ಕೃಷ್ಣಗಾಸಿಯನು ಮಾಡದಲೆ ದೋಷವನು ಪರಿಹರಿಸೊಸಾಸಿರನಾಮದ ಕೃಷ್ಣಹೇಸಿಕೆಯೊಳಿರ್ದ ಸಂಸಾರವೆಂಬುವ ಮಾಯಪಾಶದಿಂದಲಿ ಬಿಗಿದರೇ ಕೃಷ್ಣಕಂಸಮರ್ದನನೆ ನೀ ಕಾಯಬೇಕಯ್ಯಹರಿವಾಸುದೇವನೆ ಮುದ್ದು ಕೃಷ್ಣ 2ಲೋಕದೊಳಗೆನ್ನನು ಪೋಲ್ಪ ಪಾಪಿಗಳನ್ನುನೀ ಕಂಡು ಬಲ್ಲೆಯಾ ಕೃಷ್ಣಸಾಕಿನ್ನು ಎನಗೊಂದು ಗತಿಯ ತೋರಿಸಿ ಸದ್ವಿವೇಕಿಯನೆ ಮಾಡಯ್ಯ ಕೃಷ್ಣರಾಕೇಂದುಮುಖಿ ದ್ರೌಪದಿಯಮಾನವಕಾಯ್ದೆಆಕೆಗಕ್ಷಯವಿತ್ತೆ ಕೃಷ್ಣ ಪಿನಾಕಿಸಖಪುರಂದರವಿಠಲನೆ ಉಡುಪಿಯ ವಾಸಸಾಕಿ ಸಲಹೈ ಎನ್ನ ಕೃಷ್ಣ
--------------
ಪುರಂದರದಾಸರು
ಪೋ ಪೋಗೆÀಲೋ ಸಾ ಸಾರೆಲೊನಗೆಗಿಂತೆನಲು ಮುನಿದು ಪೋದನೆಮನುಮಥನಯ್ಯ ಕಾಣೆ ಪ.ಎನ್ನ ಪೆಸರು ಮಾಧವನೆಂದೆಂಬರುಅನ್ಯರನೊಲ್ಲದೆ ನಿನ್ನೊಳು ಮನವಿಟ್ಟೆವನವ ತಿರುಗುವ ವಸಂತ ನೀನಾದರೆಮನೆಗ್ಯಾತಕೆ ಬಂದೆ 1ವಕ್ರದ ನುಡಿಗಳ ನುಡಿಯದಿರೆನ್ನನುಚಕ್ರಧರನೆಂದೆಂಬರು ಎನ್ನನುರೊಕ್ಕಕ್ಕೆ ಮಡಕೆಯ ಮಾರುವ ಕುಂಬಾರಒಕ್ಕಲ ಮನೆಗೆ ಪೋಗೋ 2ಹಿರಿಯರು ಹರಿಯೆಂದೆಂಬರು ಎನ್ನನುತರಳೆ ನೀನೇನಾದರೆ ಎಂದೆನದಿರುತರುಗಳೇರಿ ಕುಣಿದಾಡುವ ಕಪಿಗಳತೆರದೊಳಾಡು ಪೋಗು 3ಸರ್ಪನÀ ಮಸ್ತಕದಲಿ ನಲಿದಾಡುವೆಅಲ್ಪಕನೆಂದು ನೀ ಬಗೆಯದಿರೆನ್ನನುತಪ್ಪದೆ ಗಗನದೊಳಿಪ್ಪ ಗರುಡನುಬಪ್ಪನೆ ಪುರದೊಳಗೆ 4ಎನ್ನ ಮಹಂತರನಂತನೆಂದೆಂಬರುಮನ್ನ ಬಂದಂತೆ ನೀ ಮಾತುಗಳಾಡದಿರುಪನ್ನಂಗನಾದರೆ ಪಾತಾಳಕ್ಕೆ ಪೋಗುನಿನ್ನ ಸಂಗಕ್ಕೆ ಅಂಜುವೆ 5ಕಡಲೊಳಗಿಪ್ಪನೆಂದೆಂಬರು ಎನ್ನನುಮಡದಿಯೇನಾದರು ಎಂದೆನ್ನದಿರುಮಡಿದು ಮಡಿದು ಹೋಹ ಮೀನು ಮೊಸಳೆಗಳಗಡಣವ ಕೂಡು ಪೋಗು 6ಸಚರಾಚರಂಗಳ ಸೃಜಿಸಬಲ್ಲವನೆಂದುಸುಚರಿತ್ರ ದೇವತೆಯೆಂದೆಂಬರುಉಚಿತವೆ ಹೆಣ್ಣುಮಗಳ ಕೂಡೆ ಮೋಹದವಚನವು ನಿನಗೆ ರಂಗ ಪೋಗು 7ಆಲದೆಲೆಯಮೇಲೆ ಮಲಗಿಪ್ಪ ವಸ್ತು ನಾನುಪಾಲಮಾರುವವರಿಗೆ ಪರತತ್ವನೆಂಬರುಕಾಲಬೆರಳ ಚುಂಬಿಸುವಗ್ಯಾತಕೆ ಗೋಪಾಲಬಾಲೆಯರಾಟ 8ಮೈಯೊಳು ಸಾವಿರ ಕಣ್ಣುಗಳುಳ್ಳವನಯ್ಯನೆಂದು ದೇವತೆಗ-ಳ್ದಿವ್ಯಚಾರಿತ್ರ ದೇವತೆಯೆಂತೆಂಬರುಅಯ್ಯ ನೀನಾದರೆ ಅಹಲ್ಯಾದೇವಿಯಕಯ್ಯ ಪಿಡಿದ ಕಳ್ಳನೆ ಪೋಗು 9ಕಂಗಳ ಕುಡಿನೋಟಗಳಿಂದ ತ್ರಿಜ-ಗಂಗಳನೆಲ್ಲವ ಸಂಹರಿಸುವೆÀ ನಾನುರಂಗ ನೀನಾದರೆ ಕೊಲೆಗಡುಕನು ನ-ಮ್ಮಂಗಳಕ್ಕೆ ಬರಬೇಡವೊ 10ಸ್ವರ್ಗಕ್ಕೆ ಹೋದರೆ ನಿನ್ನವಗುಣವಿದುಅಗ್ಗಳಿಯದ ಹೊನ್ನನ್ಗೆ(?) ಬಗ್ಗುವಳಲ್ಲ ನೀಒಗ್ಗುವೆ ನಾ ನಿನಗಯ್ಯ ಸ್ವರ್ಗಾಪ-ವರ್ಗವ ಕೊಡುವವನೆ ಪೋ ಪೋ 11ಒಲಿದು ನಾ ನಿನ್ನ ಮನೆಗಾಗಿ ಬಂದರೆಕಲಹದ ಮಾತುಗಳಾಡದಿರು ಎನ್ನಲಲನೆಉರದÀಲ್ಲಿದ್ದು ನಾಭಿಕಮಲದಿಂದಛಲದಿ ಮಗನ ಪಡೆದೆ 12ಮುನಿಗಳರ್ಚಿಸುವ ಶ್ರೀಹಯವದನನು ನಾನುವನಿತೆಯೆನ್ನಿರವನು ಬಲ್ಲವರೆ ಬಲ್ಲರುಉಣಲೀಸೆ ಉಡಲೀಸೆ ತಲೆಯೂರಿ ತಪವನುವನದೊಳು ಮಾಡಿಸುವೆ 13
--------------
ವಾದಿರಾಜ
ಪೋಗಿ ಬರುವೆನು ಎನ್ನ ಮನೆಗೆ ಜಗದೀಶಭಾಗವತಪ್ರಿಯ ಭಾಗೀರಥೀಜನಕ ಪ.ವರುಷವರುಷಕೆ ನಿನ್ನ ದರುಶನವನಿತ್ತೆನ್ನಕರುಣಿಸೈ ಶೇಷಾದ್ರಿವರ ಶ್ರೀನಿವಾಸದುರಿತಕೋಟಿಗಳ ಸಂಹರಿಸಿ ನಿನ್ನಯ ಕರುಣಾವರಪ್ರಸಾದವನೀಯೊ ಜನ ಮೆಚ್ಚುವಂತೆ1ಜಯ ಹೊಂದಿಸುತ ಮನದ ಭಯವೆಲ್ಲ ಪರಿಹರಿಸಿನಿಯಮತಿಯೀಯೊ ನೀರಜನಾಭನೆದಯಮಾಡೊ ತವ ಪಾದಸೇವೆಯನ್ನಿತ್ತೆನಗೆಪ್ರಿಯನಾಗು ಶ್ರೀಹರಿಯೆ ಭಯನಿವಾರಣನೆ 2ನೀನೆ ಗತಿಯೆನಗೆ ಶ್ರೀನಿವಾಸನೆ ಭಕ್ತಾಧೀನನೀನೆಂಬ ಬಿರುದುಂಟಾದಡೆಮಾನಿಸೈ ಶ್ರೀಲಕ್ಷ್ಮೀನಾರಾಯಣನೆ ನಿನ್ನಧ್ಯಾನ ಸೌಭಾಗ್ಯಗಳನಿತ್ತೆನ್ನ ಸಲಹೊ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪ್ರಥಮ ಕೀರ್ತನೆಪ್ರವೃಜ್ಯ ಕುಲಶಿರೋರತ್ನ ಜಯತೀರ್ಥರಸುವೃತತಿ ಜಾಂಫ್ರಿಯಲಿ ಶರಣಾದೆ ಸತತಸರ್ವೇಷ್ಟದಾತರುವಿಜ್ಞಾನಬೋಧಕರುಮಧ್ವೇಷ್ಟ ಶ್ರೀ ರಮಾಪತಿಗೆ ಪ್ರಿಯತಮರು ಪಅಖಿಳಗುಣಆಧಾರ ನಿರ್ದೋಷ ಶ್ರೀರಮಣಜಗದಾದಿ ಮೂಲಗುರು ಅಗುರು ಶ್ರೀ ಹಂಸವಾಗೀಶಸನಕಾದಿ ದೂರ್ವಾಸಾದಿಗಳಪೀಳಿಗೆ ಗುರುಗಳಿಗೆ ಶರಣು ಶರಣೆಂಬೆ 1ಪುರುಷೋತ್ತಮತೀರ್ಥಅಚ್ಯುತಪ್ರೇಕ್ಷರಿಗೆಪುರುಷೋತ್ತ ಮಾರ್ಯರಕರಕಮಲಜಾತವರವಾತಅವತಾರ ಆನಂದತೀರ್ಥರಚರಣಪದ್ಮದಲಿ ನಾ ಶರಣಾದೆ ಸತತ2ಶ್ರೀ ಮಧ್ವ ಆನಂದತೀರ್ಥಕರಅಬ್ಜಜರುಪದ್ಮನಾಭನೃಹರಿ ಮಾಧವಾಕ್ಷೋಭ್ಯಈ ಮಹಾ ಗುರುಗಳು ಸರ್ವರಿಗು ಆನಮಿಪೆಶ್ರೀ ಮನೋಹರ ಪ್ರಿಯರು ಸಂತೈಪರೆಮ್ಮ 3ತ್ರೇತೆಯಲ್ಲಿ ಶ್ರೀ ರಾಮಚಂದ್ರನ್ನ ಸೇವಿಸಲುಸೀತಾ ಪ್ರತಿಕೃತಿಯಲ್ಲಿ ತಾಪೊಕ್ಕವಾತನ್ನೊಲಿಸಿಕೊಳ್ಳ ದವರ್ಗೆಹರಿಒಲಿಯಎಂದು ಜಗಕೆ ತೋರ್ದ ವಾಲಿಯೇ ಇಂದ್ರ 4ವಾತಾವತಾರ ಹನುಮಂತನೇ ದ್ವಾಪರದಿಕೌಂತೇಯ ಭೀಮನು ಅವನಿಗೆಅನುಜಇಂದ್ರ ಅರ್ಜುನನಾಗಿ ಸೇವಿಸಿ ಹನುಮಧ್ವಜಪಾದಮೂಲದಿ ಕುಳಿತ ಕೃಷ್ಣನು ಒಲಿದ5ಅಖಂಡೈಕ ಸಾರಾತ್ಮ ಅನಂತರೂಪಾಭಿನ್ನಶ್ರೀಕೃಷ್ಣ ರಾಮನೇ ಋಷಿವಂಶದಲ್ಲಿಈ ಕುವಲಯದಲ್ಲಿ ಪ್ರಾದುರ್ಭವಿಸಿದ ವ್ಯಾಸಅಕಳಂಕ ಸುಖಜಿತ್ವಪುಷಶ್ರೀಪತಿಯು6ಆಮ್ನಾಯತತಿಪುರಾಣಗಳು ಪೇಳ್ವಂತೆರಮೆಯರಸ ವ್ಯಾಸನ್ನ ಸೇವಿಸಲು ಇಳೆಯೋಳ್ಭೀಮನೇ ಯತಿ ರೂಪದಲ್ಲಿ ಬಂದಿಹನೆಂದುಸುಮನಸರಾಜ ಪುಟ್ಟಿದನು ಪುನಃ7ಹದಿನೆಂಟು ವರುಷಗಳು ಎತ್ತಾಗಿ ತಾನಿದ್ದುಹೊತ್ತು ಮಧ್ವಾಚಾರ್ಯರ ಪುಸ್ತಕಗಳಭಕ್ತಿಯಲಿ ಸೇವಿಸಿ ಮಧ್ವರಾಯರು ಪಾಠಬೋಧಿಸುವದು ಕೇಳ್ದ ವೃಷಭರಾಟ್ ಇಂದ್ರ 8ಆನಂದಪ್ರದ ತತ್ವಬೋಧಕ ಭಾಷ್ಯಾದಿಗಳಆನಂದ ಮುನಿಮಧ್ವ ಬೋಧಿಸಲು ಗ್ರಹಿಸಿವಿನಯದಿ ಕೇಳ್ದರು ಶಿಷ್ಯರು ಟೀಕೆಗಳಗ್ರಂಥಗಳಿಗೆ ಯಾರು ಮಾಡುವುದು ಎಂದು 9ಈ ಗೋರಾಜನೇ ಟೀಕೆಗಳ ಸಂರಚಿಸಿಜಗತ್ತಲ್ಲಿ ಸತ್ತತ್ವ ಶಾಸ್ತ್ರ ಪ್ರಕಟಿಸುವಹೀಗೆಂದು ಶ್ರೀ ಮಧ್ವಾಚಾರ್ಯರಾಜ್ಞಾಪಿಸಲುಮಿಗೆ ಹರುಷದಲಿ ಗೋರಾಟ್ ಶಿರವ ಬಾಗಿದನು 10ಯುಕ್ತ ಕಾಲದಿ ಈ ಗೋರಾಜ ನೇವೆರಘುನಾಥ ದೇಶಪಾಂಡೆ ರುಕ್ಮಾಬಾಯಿಗೆಮಗನಾಗಿ ಜನಿಸಿದನು ಮಂಗಳವೇಢೆಯಲಿಈ ಗ್ರಾಮ ಪಂಢರಪುರದ ಸಮೀಪ 11ಧೋಂಡುರಾಯನು ಎಂಬ ನಾಮದಲಿ ಬೆಳೆದಗಂಡಿಗೆ ಉಪನಯನ ಮದುವೆಯೂ ಆಯ್ತುಹೆಂಡತಿ ಭೀಮಾಬಾಯಿ ಸುಗುಣೆ ಸೌಂದರ್ಯವತಿಚಂಡ ಶ್ರೀಮಂತರ ಮನೆತನದವಳು 12ಒಂದುದಿನ ಧೋಂಡುರಾಯನು ನದೀ ದಡಕೆಬಂದನು ಕುದುರೆಯ ಮೇಲೇರಿಕೊಂಡುಅಂದು ಅಕ್ಷೋಭ್ಯ ಮಠ ಸಂಚಾರ ಕ್ರಮದಲ್ಲಿನಿಂತಿತ್ತು ಮೊಕ್ಕಾಮಾಗಿ ಆಚೆಕಟ್ಟೆಯಲಿ 13ನದೀತೀರ ಕುಳಿತಿದ್ದ ಅಕ್ಷೋಭ್ಯ ತೀರ್ಥರುಎದುರಾಗಿ ನದಿಯಲ್ಲಿ ಆಚೆದಡದಿಂದಕುದುರೆ ಸವಾರನು ವರ್ಚಸ್ವಿ ಯುವಕನುಬೆದರದೆ ಪ್ರವಾಹದಲಿ ಬರುವದು ನೋಡಿದರು 14ಕುದುರೆ ಮೇಲ್ ಅಸೀನನಾಗಿದ್ದ ಯುವಕನುಕ್ಷುತ್ತೃಷೆಶಮನಕ್ಕೆ ಯತ್ನ ಮಾಡುತ್ತಾಉದಕವ ಕೈಯಿಂದ ತುಂಬಿಕೊಳ್ಳದಲೇಎತ್ತಗಳು ಕುಡಿವಂತೆ ಬಾಯಿ ಹಚ್ಚಿದನು 15ಮಾಧವಮಧ್ವರು ಮೊದಲೇ ಸೂಚಿಸಿದಂತೆಇಂದುಆ ಕುರುಹ ಅರಿತು ಅಕ್ಷೋಭ್ಯರುಇದು ಏನು `ಪಶು' ವಂತೆ ಎಂದು ಧ್ವನಿಕೊಟ್ಟರುಹಿಂದಿನ ಜನ್ಮ ಧೊಂಡೋಗೆ ನೆನಪಾಯ್ತು 16ಪ್ರವಾಹದ ನಗಾರಿಯ ಸಮಬಲಿ ಧೋಂಡುವೇಗ ಲೆಕ್ಕಿಸದಲೇ ದಡಕೆ ತಾ ಬಂದುಮುಗಿದಕರಬಾಗಿ ಶಿರ ನಮಿಸಿ ಅಕ್ಷೋಭ್ಯರಆಗಲೇ ಸಂನ್ಯಾಸಕೊಡಲು ಬೇಡಿದನು 17ಗಾಧಿ ಅರ್ಜುನ ಸಮ ಬಲ ರೂಪದಲಿ ತೋರ್ಪಈತ ರಾಯರ ಸುತನಾದರೂ ವೈರಾಗ್ಯಯುತ ಭಕ್ತಿಮಾನ್ ಸುಶುಭ ಲಕ್ಷಣನೆಂದುಹರಿಮಧ್ವ ನಿಯಮಿತ ಅವಗೆ ಕೊಟ್ಟರು ಸಂನ್ಯಾಸ 18ಶ್ರೀಯಃಪತಿಗೆ ಪ್ರಿಯತರ ಜಯತೀರ್ಥನಾಮವಜಯ ಶೀಲ ಹೊಸಯತಿಗೆ ಇತ್ತು ಅಭಿಷೇಕಅಕ್ಷೋಭ್ಯಗುರು ಮಾಡೆ ಗಗನದಿ ಪೂವರ್ಷಜಯ ಷೋಷ ಹರಡಿತು ಪರಿಮಳ ಸುಗಂಧ 19ತಂದೆ ರಘುನಾಥರಾಯನು ಸುದ್ದಿಕೇಳಿಬಂದು ಅಕ್ಷೋಭ್ಯರ ಕಂಡು ಬಲುಕೋಪದಿಂದ ಯಾಕೆ ಸಂನ್ಯಾಸ ಯುವಕಗೆ ಕೊಟ್ಟಿರಿಎಂದು ವಾದಿಸಿದನು ಪುತ್ರ ಮೋಹದಲಿ 20ಪೂರ್ವಧೋಂಡುರಾಯ ಈಗ ಜಯತೀರ್ಥರುತಾವೇ ಸ್ವೇಚ್ಛೆಯಿಂದ ಕೊಂಡರು ಸಂನ್ಯಾಸಈ ವಿಷಯ ತಿಳಕೊಂಡರೂ ಸಹ ರಘುನಾಥಸೇವಕರ ಸಹ ಮಗನ ಕರಕೊಂಡು ಹೋದ 21ರಾಯನು ಮಗನನ್ನ ಗೃಹಸ್ಥ ಚರ್ಯದಲಿರಿಸೆಶಯನಗೃಹದೊಳು ಪತ್ನಿ ಸಹಿತ ಕಳುಹಿದನುಶಯನ ತಲ್ಪದಿ ದೊಡ್ಡ ಸರ್ಪಕಂಡಳು ಯುವತಿಭಯದಿಂದ ಹೊರಬಂದು ಹೇಳಿದಳು ವಿಷಯ 22ತನ್ನಪತಿಧೊಂಡರಾಯನ್ನ ತಲ್ಪದಲಿಕಾಣದೆ ಅವರಿದ್ದ ಸ್ಥಾನದಲಿ ಸರ್ಪಘನಧೀರ್ಘಗಾತ್ರವಿಸ್ತಾರ ಹೆಡೆಯಿಂದಮಿನುಗುತ್ತ ಕುಳಿತಿದ್ದ ವಿವರ ಪೇಳಿದಳು 23ರಘುನಾಥರಾಯನು ಹರಿಚಿತ್ತ ಇದು ಎಂದುಮಗನ ಪ್ರಭಾವವ ಅರಿತು ತ್ವರಿತದಲಿಅಕ್ಷೋಭ್ಯರಲಿ ಹೋಗಿ ಶಿಷ್ಯನ್ನ ಒಪ್ಪಿಸಿಬಾಗಿ ಶಿರ ಸನ್ನಮಿಸಿ ಕ್ಷಮೆಯ ಬೇಡಿದನು 24ವಂಶ ವೃಧ್ಧಿಗೆ ಮತ್ತೂ ಪುತ್ರಪುಟ್ಟವನೆಂದುದೇಶಪಾಂಡೆಯ ಅನುಗ್ರಹಿಸಿ ಕಳುಹಿಸಿದಶಪ್ರಮತಿ ಪೀಳಿಗೆಯೊಳು ಅಕ್ಷೋಭ್ಯಮುನಿಗ¼ Àುಶಿಷ್ಯ ಜಯತೀರ್ಥರಿಗೆ ಸ್ಥಾನ ನೇಮಿಸಿದರು 25ಶ್ರೀ ಮದ್ವಾಚಾರ್ಯರು ಬೋಧಿಸಿ ತೋರಿಸಿದಶ್ರೀ ರಮಾಪತಿ ಪೂಜಾ ಸತ್ತತ್ವವಾದದುರ್ಮತ ಖಂಡನದ ರೀತಿಯ ಜಯಾರ್ಯರಿಗೆಸಮ್ಮುದದಿ ಅರುಹಿದರು ಅಕ್ಷೋಭ್ಯ ಗುರುವು 26ಶಕ ವರುಷ ಹನ್ನೊಂದು ನೂರು ಅರವತ್ತೇಳುಮಾರ್ಗಶಿರ ಕೃಷ್ಣ ಪಂಚಮಿ ವಿಶ್ವಾವಸುವಲ್ಲಿಅಕ್ಷೋಭ್ಯ ತೀರ್ಥರ ಪೀಠ ಆರೋಹಿಸಿಶ್ರೀಕರಗೆ ಪ್ರೀತಿಕರ ಪಟ್ಟವಾಳಿದರು 27ದೇವತಾರ್ಚನೆ ಶಿಷ್ಯ ಉಪದೇಶ ಮಾಡುತ್ತದಿಗ್ವಿಜಯದಲಿ ದುರ್ವಾದಿಗಳ ಗೆದ್ದುಮಧ್ವಗ್ರಂಥಗಳಿಗೆ ಟೀಕೆಗಳ ರಚಿಸಿಪ್ರಖ್ಯಾತರಾದರು ಜಯತೀರ್ಥ ಆರ್ಯ 28ವನರುಹಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸಪೂರ್ಣ ಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತಗುಣಪೂರ್ಣನಿರ್ದೋಷಶ್ರೀಯಃ ಪತಿಗೆ ಪ್ರಿಯಘನ ಕರುಣಿಜಯತೀರ್ಥಗುರುನಮೋಪಾಹಿ29|| ಪ್ರಥಮ ಕೀರ್ತನೆ ಸಮಾಪ್ತ ||ದ್ವಿತೀಯಕೀರ್ತನೆಪ್ರವೃಜ್ಯ ಕುಲಶಿರೋರತ್ನ ಜಯತೀರ್ಥರಸುವೃತತಿ ಜಾಂಫ್ರಿಯಲಿ ಶರಣಾದೆ ಸತತಸರ್ವೇಷ್ಟದಾತರುವಿಜ್ಞಾನಬೋಧಕರುಮಧ್ವೇಷ್ಟ ಶ್ರೀ ರಮಾಪತಿಗೆ ಪ್ರಿಯತಮರು ಪನರಹರಿಯ ಮಹಾದುರ್ಗೆಯ ಕುರಿತು ತಪಸ್ ಆಚರಿಸಿವರವ ಪಡೆದಿಹರು ಈ ಜಯತೀರ್ಥ ಆರ್ಯಬರೆವುದಕೆ ಲೇಖನವು ಅಡಿಕೆಯುಅರದೂರದುರ್ಗೆಯು ಕೊಟ್ಟಿಹಳು ಇವರ್ಗೆ1ಎರಗೋಳದಲ್ಲಿದ್ದು ಶ್ರೀ ಮದಾಚಾರ್ಯರಪರಸುಖಪ್ರಮೂಲಗ್ರಂಥಗಳ ಟೀಕಾಬರೆದಿಹರು ಅನುಪಮ ಉತ್ತಮ ರೀತಿಯಲಿಭರದಿ ಓದುವವರೇ ಬಲ್ಲರು ಮಹಿಮೆ 2ಶ್ರೀ ಮಧ್ವಕೃತವು ಶ್ರೀ ಬ್ರಹ್ಮಸೂತ್ರಭಾಷ್ಯವುಆ ಮೂಲಗ್ರಂಥವು ಎರಡು ಸಾವಿರವುಆ ಮಹಾಭಾಷ್ಯಕ್ಕೆ ಟೀಕೆ ಅಷ್ಟ ಸಹಸ್ರವುಅಮ್ಮಮ್ಮ ಏನೆಂಬೆ ಈ ಮಹಾ ಕಾರ್ಯ 3ಅನುವ್ಯಾಖ್ಯಾನದ ನಾಲಕ್ಕು ಸಾವಿರಘನತರ ಗ್ರಂಥಕ್ಕೆ ಜಯತೀರ್ಥರಜ್ಞಾನಪ್ರದ ಅಜ್ಞಾನಗಿರಿವಜ್ರಟೀಕೆಯಗ್ರಂಥ ಇಪ್ಪತ್ತೆಂಟು ಸಾವಿರ ಸಂಖ್ಯಾ 4ಈ ನುಡಿ ಬರೆವಾಗ ಬಿಂದುಮಾಧವ ಪೇಳ್ದಘನ್ನ ಶುಭತರ ಮಧ್ವ ವಿಜಯದಲ್ಲಿಅನುವ್ಯಾಖ್ಯಾನದ ಟೀಕಾ ಸುಧಾ ಎಂದುಶ್ರೀ ನಾರಾಯಣಾಚಾರ್ಯ ಸೂಚಿಸಿಹರೆಂದು 5ತತ್ವ ಸಂಖ್ಯಾನಕ್ಕೂ ಕಥಾ ಲಕ್ಷಣಕ್ಕೂತತ್ವ ವಿವೇಕಕ್ಕೂ ಋಗ್ಬಾಷ್ಯಕ್ಕೂತತ್ವ ನಿರ್ಣಯಕ್ಕೂ ಪ್ರಮಾಣ ಲಕ್ಷಣಕ್ಕೂತತ್ವೋದ್ಯೋತಕ್ಕೂಕರ್ಮನಿರ್ಣಯಕ್ಕೂ6ಮಾಯಾವಾದಉಪಾಧಿಖಂಡನಗಳಿಗೂಮಿಥ್ಯಾತ್ವಾನುಮಾನ ಖಂಡನಕ್ಕೂನ್ಯಾಯ ವಿವರಣಕ್ಕೂ ಗೀತಾ ಭಾಷ್ಯಕ್ಕೂನ್ಯಾಯ ತೇಜೋಜ್ವಲ ಗೀತಾ ತಾತ್ವರ್ಯಕ್ಕೂ 7ಪಟ್ಟ್ರಶ್ನ ಈಶಾವಾಸ್ಯ ಭಾಷ್ಯಗಳಿಗೂಅಷ್ಟಾದಶ ಈ ಗ್ರಂಥಗಳಿಗೆಪಟು ಪಟೀಯಸವಾಗಿ ಟೀಕೆಯಾ ಬರೆದಿಹರುಇಷ್ಟೇ ಅಲ್ಲದೇ ಇನ್ನೂ ನಾಲ್ಕು ರಚಿಸಿಹರು 8ಪ್ರತ್ಯಕ್ಷ ಅನುಮಾನಆಗಮಪ್ರಮಾಣಗಳರೀತಿ ಲಕ್ಷಣ ಪೇಳ್ವ ಪ್ರಮಾಣ ಪದ್ಧತಿಯುಮಾಧವನ ಸರ್ವೋತ್ತಮ ಜಗತ್ ಸತ್ಯತ್ವಇಂಥಾದ್ದು ಸಾಧಿಸುವ ವಾದಾವಳಿಯು 9ತಂತ್ರಸಾರಪಾಂಚರಾತ್ರಾಗಮಾನುಸರಿಸಿಪದ್ಯಮಾಲಾನಾಮ ಗ್ರಂಥದಲ್ಲಿಶ್ರೀಧರ ಸರ್ವೋತ್ತಮಾರ್ಚನೆ ಬಗೆ ಪೇಳಿದರುಶತಾಪರಾಧ ಸ್ತೋತ್ರವು ಮಾಡಿಹರು 10ದಿಗ್ವಿಜಯ ಮಾಡಿ ಸಜ್ಜನರ ಉದ್ಧರಿಸುತ್ತಾದುರ್ವಿದ್ಯಾ ದುರ್ಮತಗಳನ್ನ ಛೇದಿಸುತಸುವೈದಿಕ ಮಧ್ವಸಿದ್ಧಾಂತ ಸ್ಥಾಪಿಸುತಭುವಿಯಲಿ ಪ್ರಖ್ಯಾತರಾದರು ಜಯಾರ್ಯ 11ಒಂದು ಸಮಯದಿ ವಿದ್ಯಾರಣ್ಯರು ಶ್ರೀಮಧ್ವಗ್ರಂಥ ಓದಿ ನೋಡಿ ಅರ್ಥವಾಗದಲೆಗ್ರಂಥಕ್ಕೆ ಜಯರಾಯರು ಬರೆದ ಟೀಕೆಯಓದಲು ಅರ್ಥವು ವಿಶದವಾಯ್ತು 12ಪೂರ್ವಾಪರ ಸಂಗತಿ ಮತ್ತು ವಾಕ್ಯಾರ್ಥಸರ್ವ ಪ್ರಕಾರದಲೂ ಉತ್ತಮವಾಗಿಹುದುಸರ್ವಜÕ ಮುನಿಗಳ ಗ್ರಂಥದ ಸರಿಯಾದಭಾವವ ವಿವರಿಸುವುದೆಂದು ಹೇಳಿದರು 13ಈ ರೀತಿ ವಿದ್ಯಾರಣ್ಯರು ಕೊಂಡಾಡಿಪುರಿ ರಾಜಬೀದಿಯಲಿ ಆನೆ ಅಂಬಾರಿಮೆರವಣಿಗೆ ಮಾಡಿಸಿ ಜಯಘೋಷ ಮಾಡುತ್ತಾಮರ್ಯಾದೆ ಮಾಡಿದರು ವಿಜಯನಗರದಲಿ 14ಮಧ್ವಗಂಥಗಳನ್ನು ಜಯಾರ್ಯ ಬರೆದಿರುವಉತ್ತಮ ಟೀಕೆಗಳ ಬಲು ಶ್ಲಾಘಿಸುತ್ತವಿದ್ಯಾರಣ್ಯರು ನಮಸ್ಕಾರ ಮಾಡಿದರುಎಂದು ಇತಿಹಾಸವ ಸುಜನರು ಪೇಳುವರು 15ಸ್ವಮತ ಪರಮತ ವಿದ್ವಜ್ಜನರಿಂದಈ ಮಹಾಮಹಿಮ ಟೀಕಾಚಾರ್ಯ ಆರ್ಯಈ ಮಹಿಯಲ್ಲಿ ಪ್ರಖ್ಯಾತ ಪೂಜಿತರಾಗಿತಮ್ಮ ಗುರುಕ್ಷೇತ್ರ ಮಳಖೇಡ ಸೇರಿದರು 16ಮಳಖೇಡ ಕ್ಷೇತ್ರದಲ್ಲಿ ಕಾಗಿನೀ ನದಿತೀರಮಾಲೋಲ ಪ್ರಿಯ ಅಕ್ಷೋಭ್ಯರ ವೃಂದಾವನಶೀಲತಮ ಜಯರಾಯ ಅಲ್ಲಿಯೇ ನಿಂತರುಅಳವೇ ವರ್ಣಿಸಲು ಈ ಮಹಾತ್ಮರ ಮಹಿಮೆ 17ಹನ್ನೊಂದು ತೊಂಭತ್ತು ಶಕವಿಭವಆಷಾಢಕೃಷ್ಣ ಪಂಚಮಿ ಪುಣ್ಯದಿನದಲ್ಲಿ ಇವರುತನ್ನ ಸೇವಾ ವಿಷ್ಣು ಮಧ್ವರಿಗೆ ಪೂರೈಸಿಶ್ರೀ ನಾರಾಯಣನಪಾದಸೇರಿದರು18ಮತ್ತೊಂದು ಅಂಶದಲ್ಲಿ ವೃಂದಾವನದಲ್ಲಿಇದ್ದು ಸೇವಿಸುವವರ್ಗೆ ವಾಂಛಿತವೀಯುತ್ತಮಧ್ವಸ್ಥ ಶ್ರೀ ಹರಿಯ ಧ್ಯಾನಿಸುತ ತಮ್ಮಗುರುಬದಿಯಲ್ಲಿ ಕುಳಿತಿಹರು ಸ್ಮರಿಸೆ ಪಾಲಿಪರು 19ವನರುಹಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸಪೂರ್ಣ ಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತಗುಣಪೂರ್ಣನಿರ್ದೋಷಶ್ರೀಯಃ ಪತಿಗೆ ಪ್ರಿಯಘನಕರುಣಿ ಜಯತೀರ್ಥಗುರುನಮೋಪಾಹಿ20||ಇತಿ ಶ್ರೀ ಜಯತೀರ್ಥವಿಜಯಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಥಮ ಕೀರ್ತನೆಸತ್ಯ ಬೋಧಾರ್ಯರ ವೃತತಿಜಾಂಘ್ರಿಗಳಲ್ಲಿಸತತ ಶರಣಾದೆ ನಾಹಿತದಿ ಪಾಲಿಪರುಪ್ರತತ ಭೂಮಾದಿ ಗುಣಸಿಂಧು ಪುರುಷೋತ್ತಮನವಿತತ ಮನದಲಿ ಧ್ಯಾನಿಸಿ ಒಲಿಸಿಕೊಂಡ ಪಹಂಸನಾಮಕ ವಿಷ್ಣು ವನರುಹಾಸನಸನಕದೂರ್ವಾಸಮೊದಲಾದಗುರುವಂಶಜಾತದಶಪ್ರಮತಿಸರಸಿಜನಾಭನರಹರಿತೀರ್ಥಬಿಸಜಚರಣಂಗಳಲಿ ಸತತ ನಾ ಶರಣು |1ಮಾಧವಅಕ್ಷೋಭ್ಯ ಜಯವಿದ್ಯಾಧಿರಾಜ ರಾ-ಜೇಂದ್ರ ಕವೀಂದ್ರವಾಗೀಶರಾಮಚಂದ್ರವಿಭುದೇಂದ್ರ ವಿದ್ಯಾನಿಧಿಗಳು ಈ ಸರ್ವಸತಪೋನಿಧಿ ಯತಿವರ್ಯರಿಗೆ ನಮಿಪೆ 2ವೇದಾಂತ ಕೋವಿದರು ರಘುನಾಥ ರಘುವರ್ಯಪದವಾಕ್ಯತತ್ವಜÕ ರಘೂತ್ತಮಾರ್ಯರಿಗೆವೇದವ್ಯಾಸ ಯತಿಗಳಿಗೆ ವಿದ್ಯಾಧೀಶರಿಗೆವೇದನಿಧಿಗಳಿಗೆ ನಾ ಬಾಗುವೆ ಶಿರವ 3ಸತ್ಯವ್ರತ ಸತ್ಯನಿಧಿ ಸತ್ಯನಾಥರಿಗೆಸತ್ಯಭಿನವ ಸತ್ಯ ಪೂರ್ಣರಿಗೆ ನಮಿಪೆಸತ್ಯವಿಜಯರಿಗೆ ಸತ್ಯಪ್ರಿಯ ಸತ್ಯಬೋಧರಿಗೆಭೃತ್ಯನಾ ಎನ್ನ ವಂದನೆಗಳರ್ಪಿಸುವೆ4ಸತ್ಯಬೋಧರ ಮಹಿಮೆ ಬಹು ಬಹು ಬಹುಳವುವೇದ್ಯ ಎನಗೆ ಅತಿ ಸ್ವಲ್ಪ ಮಾತ್ರಆದರಲ್ಲೂ ಬಿಟ್ಟದ್ದು ಬಹು ಇಲ್ಲಿ ಪೇಳಿಹುದುಅತಿ ಕಿಂಚಿತ್ ಅಣುಮಾತ್ರ ಸುಜನರು ಲಾಲಿಪುದು 5ರಾಮಾಚಾರ್ಯರು ಸಣ್ಣ ವಯಸ್ಸಿನವರುನೇಮದಿಂದಾಶ್ರಮೋಚಿತ ಕರ್ಮಪರರುರಾಮ ಹಯಶೀರ್ಷ ನರಸಿಂಹನ ಗುಣರೂಪಸಮ್ಮುದದಿ ಜ್ಞಾನಭಕ್ತಿಯಲಿ ಧ್ಯಾನಿಪರು 6ಈ ರಾಯಚೂರು ರಾಮಾಚಾರ್ಯರೇ ಸತ್ಯಪ್ರಿಯಗುರುಗಳ ಸಂಸ್ಥಾನ ಪೀಠಕ್ಕೆ ಬಂದುಸೂರಿವರ್ಯರು ಸತ್ಯಬೋಧ ತೀರ್ಥರು ಎಂದುಧರೆಯಲ್ಲಿ ಪ್ರಖ್ಯಾತರಾಗಿಹರು ಕರುಣಿ 7ಬಾದರಾಯಣಮಾಧ್ವ ಸಚ್ಛಾಸ್ತ್ರ ಬೋಧಿಸಿಅಧಿಕಾರಿಗಳ ಉದ್ಧರಿಸಿ ಅಲ್ಲಲ್ಲಿವೇದ ವಿರುದ್ದ ದುರ್ವಾದಗಳ ಕತ್ತರಿಸಿಮೇದಿನಿಸಜ್ಜನರ ಪೊರೆದಂಥ ಧೀರ 8ಪೀಠ ಆರೋಹಿಸಿದ ಪೂರ್ವಗುರುಗಳ ಪೋಲುಮಠಕ್ಕೆ ಮಾನ್ಯಗಳ ಅಭರಣಗಳನ್ನಪಟ್ಟಣ ಪ್ರಮುಖರು ಧನಿಕರು ಭೂಪಾಲರುಕೊಟ್ಟದ್ದು ಅಲ್ಲಲ್ಲಿ ಸ್ವೀಕರಿಸಿದರು 9ಸತ್ಯಪ್ರಿಯರಾರಾಧನೆಗಾಗಿ ಬಂದಿದ್ದಸತ್ಯಬೋಧರ ಮಹಿಮೆಯನ್ನು ಲೆಕ್ಕಿಸದೆಬಂಧಿಸಿದ ಶ್ರೀಮಠವ ರಾಮೇಶ್ವರ ರಾಜಬಂತು ಸೈನ್ಯವು ತಿರುಚಿನಾಪಳ್ಳಿಯಿಂದ 10ತಿರುಚಿನಾಪಳ್ಳಿಯಿಂದ ಜಾನೋಜಿರಾವ್ ನಿಂಬಳ್ಕಾರನು ಸೈನ್ಯವನು ಕಳುಹಿಸಿದನುವಿರೋಧ ಬಿಡುಗಡೆ ಮಾಡಿ ಆ ರಾಜನ್ನ ಶಿಕ್ಷಿಸಿಗುರುಗಳ ಕರೆತಂದ ತಿರುಚಿನಾಪಳ್ಳಿಗೆ 11ತಿರುಚಿನಾಪಳ್ಳಿಯ ಮ್ಲೇಛ್ಬರಾಜನು ಈಗುರುಗಳ ಪ್ರಭಾವವ ಅರಿಯದೆ ಮೌಢ್ಯದಲಿವರಧನಾಪಹಾರಿಯು ಎಂದು ಆಪಾದಿಸಿನಿರೋಧಿಸಿದ ಶೋಧನೆ ಮಾಡುವ ನೆವದಿ 12ಪರಿಶೋಧನೆಯಲ್ಲಿ ಮೈಲಿಗೆ ಆಗದಿರೆಗುರುಗಳು ರಾಮದೇವರ ಪೆಟ್ಟಿಗೆಯತಿರುಕಾಟ್ಟು ಪಳ್ಳೀಗೆ ಕಳುಹಿಸಿ ಉಪೋಷಣದಿಹರಿಯ ಮಾನಸ ಪೂಜೆ ಮಾಡುತ ಕುಳಿತರು 13ಜಾನೋಜಿರಾಯನು ವಾದಿಸೆ ಸುಲ್ತಾನತನ್ನ ಸರ್ಕಾರ ಶೋಧಕರ ಕಳುಹಿಸಿದತನ್ನ ಹಿರಿಯರ ಮತ್ತು ಇತರ ರಾಜರುಗಳಚಿಹ್ನೆ ಮುದ್ರಿತ ಒಡವೆ ಮಾತ್ರವೆ ಕಂಡ 14ವಿರೋಧ ನೀಗಿಸಿ ನಿಂಬಳ್ಕರನ ಕೈಯಿಂದಹರಿಪೂಜೆಗುರುಪೂಜೆ ಮಾಡಿಸಿ ಕಾಣಿಕೆಯುಗುರುತರದಿ ಅರ್ಪಿಸಿದ ಆ ಮ್ಲೇಛ್ಭರಾಜನುಗುರುಸತ್ಯಬೋಧರ ಕೀರ್ತಿವರ್ಧಿಸಿತು15ತಿರುಕಾಟ್ಟುಪಳ್ಳಿಯಿಂದಲಿ ಪೂಜೆ ಪೆಟ್ಟಿಗೆಯತರಿಸಿ ಹರಿಪೂಜೆಯ ಮಾಡಿ ಮುದದಿಂದಮರ್ಯಾದೆ ಕಾಣಿಕೆಗಳಕೊಂಡು ದಿಗ್ವಿಜಯಚರಿಸಿದರು ಹರಿಗುರು ತೀರ್ಥಸ್ಥಳಗಳಿಗೆ 16ಮಾರ್ಗದಲಿ ತಂಜಾವೂರಿನ ರಾಜನುಶ್ರೀ ಗುರುಗಳಿಗೆ ಸೇವೆಸÀಲ್ಲಿಸಿದನಗರದಲಿ ಪ್ರಮುಖಪಂಡಿತಗೋಸಾಯಿಯನಿಗಮಾಂತ ವಾದದಲಿ ಸೋಲಿಸಿದರು 17ಕುಂಭಕೋಣದಿ ಬ್ರಾಹ್ಮಣರ ಬೀದಿಯಲ್ಲಿಗಂಭೀರತರ ದೊಡ್ಡ ಮಂಟಪಕಟ್ಟಿಸಂಭ್ರಮದಿ ಹರಿಪೂಜೆಗೈದು ವಿದ್ವಜ್ಜನಸಭೆಯಕೂಡಿ ವಾಕ್ಯಾರ್ಥ ನಡೆಸಿದರು 18ಶ್ರೀರಂಗ ಕ್ಷೇತ್ರ ತಂಜಾವೂರು ತರುವಾಯಸಾರಂಗಪಾಣಿ ಕುಂಭೇಶ್ವರ ಕ್ಷೇತ್ರಪರಿಕಲ್ಲು ತಿರುಕೋಯಿಲೂರು ಮಾರ್ಗದಿ ಬಂದುಸೇರಿದರು ತಿರುಪತಿ ವೇಂಕಟಾಚಲಕ್ಕೆ 19ಶ್ರೀರಂಗನಾಥನಿಗೆ ಶ್ರೀರಂಗನಾಯಕಿಗೆಕ್ಷೀರಾಬ್ಧಿಯಲಿತೋರ್ದ ಧನ್ವಂತರಿಗೆನೀರುಮಧ್ಯದಿ ಇರುವ ಜಂಬುಕೇಶ್ವರನಿಗೆಭಾರಿ ಪುಣ್ಯದೆ ಕಾವೇರಿಗೆ ನಮಿಪೆ 20ಶಾಙ್ರ್ಗಧರಚಕ್ರಧರಕುಂಭೇಶ್ವರಅಂಬಮಂಗಳನಾಯಕಿ ವಿಜಯೀಂದ್ರರಿಗೆನಾಗೇಶ್ವರನಿಗೆ ವಿದ್ಯುಪುರಿ ಶ್ರೀಶನಿಗೆಭೃಗುಸುತಪತಿ ಶ್ರೀನಿವಾಸನಿಗೆ ನಮಿಪೆ 21ಪರಿಕಲ್ಲು ಎಂಬುವ ಗ್ರಾಮದಲಿ ನರಸಿಂಹಶ್ರೀರಮಾಪತಿ ಇಹನು ಸರ್ವೇಷ್ಟದಾತಪರಿಪರಿ ಭಕ್ತರ ಪೀಡೆಗಳ ಪರಿಹರಿಪಶರಣಾದೆ ಶ್ರೀ ಲಕ್ಷ್ಮಿ ನರಸಿಂಹನಲ್ಲಿ 22ತಿರುಕೋಯಿಲೂರಲ್ಲಿ ಮೂರ್ಲೋಕ ಅಳೆದವನಭಾರಿಆಲಯಉಂಟು ಶಿವಕುಮಾರರಿಗೂಪಾತ್ರ ವಿಶಾಲವು ದಕ್ಷಿಣ ಪಿನಾಕಿನಿಯತೀರದಲಿ ಶ್ರೀರಘೂತ್ತಮರು ಕುಳಿತಿಹರು 23ಪಿನಾಕಜಾ ಈ ಪಿನಾಕಿಯಲ್ಲಿಹನುಅನಿಮಿತ್ತ ಬಂಧುಶ್ರೀಕೇಶವ ಸರ್ವೇಶಸ್ನಾನ ಜಪದಾನಗಳು ಪಣ್ಯಪ್ರದತತ್ತೀರವನದಲ್ಲಿ ಶ್ರೀ ರಘೂತ್ತಮರ ವೃಂದಾವನ 24ಶ್ರೀಯುತ ತ್ರಿವಿಕ್ರಮ ವಿಶ್ವರೂಪಗೆ ನಮೋಕಾತ್ಯಾಯನಿ ಶಿವಗೂ ಸ್ಕಂಧವಲ್ಲಿಗೂಕಾಯವಾಕ್ಕು ಮನದಿ ಟೀಕಾಭಾವಬೋಧರಿಗೂಕಾಯಮನ ಶುದ್ಧಿಕರ ಪಿನಾಕಿನಿಗೂ ನಮಿಪೆ 25ತಿರುಕೋಯಿಲೂರಿಗೆ ಕ್ರೋಶತ್ರಯದೊಳಗೇವೆವೀರ ಚೋಳಪುರದಲ್ಲಿ ಶ್ರೀ ಸತ್ಯನಾಥತೀರ್ಥರು ಅಭಿನವ ಚಂದ್ರಿಕಾಕಾರರುಇರುತಿಹರು ವೃಂದಾವನದಲ್ಲಿ ವಂದೇ 26ತಿರುಕೋಯಿಲೂರಿಂದ ತಿರುವಣ್ಣಾಮಲೆಯೆಂಬಅರುಣಾಚಲಕೆ ಪೋಗಿ ಅಲ್ಲಿ ರಾಜಿಸುವಕರುಣಾಬ್ಧಿ ಗಿರಿಜಾರಮಣನ್ನ ವಂದಿಸಿತಿರುಪತಿಗೆ ಹೊರಟರು ಗುರುಸರ್ವಭೌಮ 27ಹೇಮಗರ್ಭನತಾತಶ್ರಿಪತಿ ಜಗನ್ನಾಥಆಮಲಗುಣಗಣಸಿಂಧು ಪ್ರಸನ್ನ ಶ್ರೀನಿವಾಸರಾಮ ಹಯಮುಖವ್ಯಾಸನೃಹರಿಗೆ ಪ್ರಿಯತಮರೆನಿಮ್ಮಲ್ಲಿ ಶರಣಾದೆ ಸತ್ಯಬೋಧಾರ್ಯ 28 ಪ
--------------
ಪ್ರಸನ್ನ ಶ್ರೀನಿವಾಸದಾಸರು