ಒಟ್ಟು 8009 ಕಡೆಗಳಲ್ಲಿ , 129 ದಾಸರು , 4271 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀತಿಯೆ ಎನ್ನ ಬಾಧಿಸುವುದಿನ್ನು ಪ. ಎಲ್ಲಿಯೂ ಎನಗೆ ನೀನಲ್ಲದೆ ಬೇರೆ ಗತಿ ಸಿರಿನಲ್ಲ ನೀ ಬಿಡುವುದು 1 ಶ್ರೀಯರಸ ನೀನೆ ತಂದೆತಾಯಿಗಳೆಂದು ಬಾಯಬಿಟ್ಟೊದರಲು ಕಾಯದೆ ಕಠಿಣ 2 ಭೂಧರಾಧೀಶಾಯುರ್ವೇದ ವಿದಾಯಕ ಮಾಧವ ನೀ ಎನ್ನ ವ್ಯಥೆಗೊಳಿಸುವುದು 3
--------------
ತುಪಾಕಿ ವೆಂಕಟರಮಣಾಚಾರ್ಯ
ನೀತಿಯೇನಿದು ಕಾಂತೆ ಮಾತಿನೊಳ್ ಬಿರುಸೆನಿತೆ ಘಾತಿಸುವುದಿದೊಳ್ಳಿತೇ ಪ್ರಾಣದಾತೆ ಈಕಾಲದಬಲೆಯರ ಕಾಕಲಾಪಕೆ ಸೋತು ಸಾಕಾರನೊಳಗಿಂತು ಕೇಣಮಾಂತು ನೀನೆರೆವೆÉ ವಸ್ತುಗಳ ನಾನಿತ್ತೆನಾದರೆ ಕಾನನದ ವಾಸವು ಎನಗೆ ನಿಜವು ಇದನರಿತು ನೀನೆನ್ನ ಪದುಳದಿಂ ಸುಖಿಯಪ್ಪ ಹದನನರಿಯದೆ ಬರಿದೆ ಜರಿದೆ ಮುಗುದೆ ಪ್ರೇಮ ಗೌರವ ಭಕ್ತಿ ಭಾವ ಶುದ್ಧಿ ನೇಮನಿರತಿಶಯ ಸುಸ್ನೇಹದಿಂದ ಕೋಮಲತೆಯಯಾಂತೆಸೆವ ಬಗೆಯ ತಾಳ್ದು ಭಾಮೆಯೆನ್ನಿಸು ಶೇಷಗಿರೀಶಗೊಲಿದು
--------------
ನಂಜನಗೂಡು ತಿರುಮಲಾಂಬಾ
ನೀತಿವಂತನಾದ: ನೀತಿ ವಂತನಾದ ನಿಗಮಗೋಚರ ದೇವ | ಮಾತಿಗೆ ನಿಜಶೀಲ ಮಾತುಗಳಾಡಿ ಪ ಕೂಸಿನ ಮೊಲೆಯವಳ | ಕೊಸರಿಮುತ್ತನೆ ಇಟ್ಟು | ಚೂಶಿಯ ಮಾಡಿ ಬಲು ಘನವಾಗಿ ಮನಿಯೊಳು 1 ಚದಗತನದಿಯಲ್ಲ | ಚಲುವೆಯರೂಡಗೂಡಿ ಅಧರಾಮೃತ ಸವಿದು ಆನಂದದಲಿ ಇನ್ನು 2 ನೀರಿಗೆ ಹೋಗುವಂಥಹ ನಿಜ ಸ್ತ್ರೀಯರನೆ ಕಂಡು ತೋರಿವಟ್ಟಳ ಹಿಡಿದು ತುಟಿಯನೆ ಕಡಿದು 3 ಕೆಳದೆರು ಜಲದಲ್ಲಿ ಕ್ರೀಡೆನಾಡುವ ವೇಳೆ ಕೆಳಗಿದ್ದ ಶೀರೆಗಳ ಕೊಂಡು ಮರವನೇರಿ 4 ಈ ಪರಿಚರ್ಯಗಳಷ್ಟು ತನ್ನಲಿದ್ದು ಭೂಪ ಹೆನ್ನೆ ವಿಠಲ ಪೂಜಿತನಾÀನು 5
--------------
ಹೆನ್ನೆರಂಗದಾಸರು
ನೀನಲ್ಲದನ್ಯವೆನಗಿಲ್ಲ ನಾರದ ವರದಏನೆಂಬೆ ಸರ್ವರಿಗು ನೀನೆಯಹುದಾದಡೆಯು ಪಧನದ ಬಲವುಳ್ಳವರು ಧರ್ಮಗಳ ಮಾಡುವರುಮನದ ಮೇಧಾವಿಗಳು ಮಂತ್ರಿಸುವರು ತನುವಿನಲಿ ತ್ರಾಣಿಗಳು ತೀರ್ಥಗಳ ಪಡೆಯುವರುಅನುವದಿಸಿ ವೇದಗಳನವರಾಢ್ಯರಹರು 1ತನುವ ದಂಡಿಸಿ ಪೂಜ್ಯ ತನುವಾದರವರ್ಗುಂಟುಧನದ ತ್ಯಾಗದಿ ಮುಂದೆ ದೈನ್ಯ ಹರವುಮನವ ನಿಗ್ರಹಿಸಿದರೆ ಮುಖ್ಯ ಜ್ಞಾನವುಬಹುದುಇನಿತಾದರವರ್ಗಿರುವದೇನುಂಟು ನನಗೆ 2ಇತರ ಮಾತುಗಳಾಡದೀ ವಾಕನೊಳಗಿರಿಸಿಮಿತವಾಗಿ ಸತ್ಯಯುತಮಾಗಿ ನುಡಿಸಿಅತಿದೋಷಗಳು ಹೋಗಿಯವರ್ಗೆ ಮುಂದಣ ಭವದಿವಿತತವಾಹದವಿದ್ಯೆ ವಿವರಿಸಲಿದುಂಟೆ 3ಸತತವೂ ಧನವಿಲ್ಲ ಸಾಧು ಸಮ ತನುವಿಲ್ಲವ್ರತತೀರ್ಥಗಳಲಾಡಿದೊಡಲಿದಲ್ಲಮತಿಯಲ್ಲಿ ನೋಡಿದರೆ ಮಂತ್ರ ಮನನಗಳಿಲ್ಲಸ್ತುತಿ ಮಾಳ್ಪ ಸೂಕ್ತಗಳ ಸೊಲ್ಲು ತಾನಿಲ್ಲ 4ಹಿಂದಾದ ಮುಂದೆ ಬಹ ಹೊಂದಿದೀ ಭವ ಸಹಿತತಂದೆ ಕಣ್ದೆರಪಾಗಿ ತಾ ತೋರಿತುಬಿಂದು ಸಾಧನವಿಲ್ಲದೊಡಲೊಂದು ಲಭಿಸಿರಲುಬಂಧವನು ಬಿಡಿಸುವರೆ ಬಂದೆ ಗುರುವಾಗಿ 5ಪರಮ ಕರುಣಾಸಿಂಧು ಪತಿತ ಪಾವನ ಶೀಲದುರಿತಾಂಧಕಾರಕ್ಕೆ ದಿವಸಕರನುಹರಿ ದೀನವತ್ಸಲನು ಹಾಗನಾಥರ ತಾನುಹೊರೆವನೆಂಬೀ ಮಾತು ಹುಸಿಯಾಗಲಿಲ್ಲ 6ನನ್ನನೀಪರಿಯಲ್ಲಿ ನೋಡಿ ಸಲಹಿದ ಮೇಲೆುನ್ನೇಕೆ ಸಂದೇಹವಿದೆ ಚೋದ್ಯವುಸನ್ನುತನೆ ತಿರುಪತಿಯ ಸ್ವಾಮಿ ವೆಂಕಟರಮಣನಿನ್ನಡಿಯ ಸ್ಮರಣೆಯನು ನನಗಿತ್ತೆಯಾಗಿ 7ಕಂ|| ಭೃಗುವಾರದರ್ಚನೆಯನಿದಭೃಗುಸುತೆ ಸಹ ನೀನು ಕೊಳುತೆ ರಕ್ಷಿಸುಯೆನ್ನಂಹೊಗಲಾರೆನು ಭವಸಿಂಧುವನಿಗಮಾರಾಧಿತನೆ ದೇವ ವೆಂಕಟರಮಣಾಓಂ ಯಜ್ಞ ಭೋಕ್ತ್ರೇ ನಮಃ
--------------
ತಿಮ್ಮಪ್ಪದಾಸರು
ನೀನಲ್ಲದಿನ್ನಾರು ಸಲಹುವರು ಹರಿಯೆ ಪ ನಾನನ್ಯರನು ಕಾಣೆನೆಲ್ಲಿಯೂ ಕೇಳ್ದರಿಯೆ ಅ.ಪ. ಪೋರ ಶಶಿಹಾಸನನು ತಂದೆ ತಾಯ್ಸಲುಹಿದರೆಧೀರ ಪ್ರಲ್ಹಾದನನು ತಂದೆ ತಾಯ್ ಸಲುಹಿದರೆವೀರ ಕರ್ಣನ ಹಡೆದ ತಾಯಿ ಸಲುಹಿದಳೆನಾರಿ ದ್ರೌಪದಿಯನ್ನು ಭರ್ತೃಗಳು ಸಲುಹಿದರೆ 1 ಕರ್ಣ ತಾ ಸಲುಹಿದನೆಕಡುಗಲಿಯ ವಾಲಿಯನು ಸುಗ್ರೀವ ಸಲುಹಿದನೆಗಡ ಬಬ್ರುವಾಹನನು ತಂದೆಯನು ಸಲುಹಿದನೆ 2 ಪುಸಿಯಲ್ಲದೆಲ್ಲವನು ಸಲಹುವಾತನೆ ನೀನುಪಿಸುಣರೈ ಸಲಹುವರು ತಾವೆಂದು ಗಳಹುವರುಉಸಿರು ಗದುಗಿನ ವೀರನಾರಾಯಣನೆ ನೀನು 3
--------------
ವೀರನಾರಾಯಣ
ನೀನಲ್ಲದಿನ್ನಾರು ಸಲಹುವರೊ ಎನ್ನ ಪ ನಾನು ನನ್ನದು ಎಂಬ ದುರಭಿಮಾನಿಯನ್ನಅ.ಪ. ಶ್ರೀಮದಾಚಾರ್ಯರ ಪುಸ್ತಕ ಭಂಡಾರವನು ಪ್ರೇಮದಿಂ ಧರಿಸುತ ವೃಷಭನಾಗಿರ್ದು ಚರಿಸಿ ಕಾಮಪಿತನೊಲಿಮೆಯಿಂ ಮರಳಿ ಜನಿಸಿ ಗುರುಗಳ ಆ ಮಹಾಭಾಷ್ಯವರುಹಿದ ಜಯತೀರ್ಥ ಗುರುವೆ 1 ಬಾಲತನದಲಿ ಸಕಲ ಲೀಲೆಗಳ ತೊರೆದು ಕಾಲುಂಗುಟಾಗ್ರದಿ ನಿಂದು ತಪವಗೈದು ಶ್ರೀಲೋಲನ ಮೆಚ್ಚಿದಂಥ ಧೀರ ದೈವ ಭೂ- ಪಾಲನಂಶದ ಶ್ರೀಪಾದರಾಜ ಗುರುವೆ2 ಪಿತನ ಮತ ಧಿಕ್ಕರಿಸಿ ಶ್ರೀಪತಿಯೆ ಪರನೆಂಬ ಮತಿಪÉೂಂದಿ ಶಿಶುತನದಲಿ ನರಹರಿಯ ಒಲಿಸಿ ಅತಿಹಿತನಾದ ಪ್ರಹ್ಲಾದದೇವನಂಶದಿಂ ಕ್ಷಿತಿಯೊಳುದ್ಭವಿಸಿದ ವ್ಯಾಸರಾಜ ಗುರುವೆ 3 ಈ ಧರೆಯೊಳೆಸೆಯುತಿಹ ಉಡುಪಿಯೊಳು ನೆಲಸಿರ್ಪ ಯಾದವ ತೀರ್ಥಾಯ ಪದ ಸರಸಿರುಹ ಭೃಂಗ ಮೋದ ತೀರ್ಥಾರ್ಯರ ಪದಕರುಹನಾದಂಥ ಸೋದೆಯೊಳ್ರಾಜಿಸುವ ವಾದಿರಾಜ ಗುರುವೇ 4 ಕಂತುಜನಕನಿಗತ್ಯಂತ ಪ್ರಿಯನಾದ ಮತಿ ವಂತನಾ ವ್ಯಾಸಮುನಿಯೆ ನೀನಾಗಿ ಬಂದು ಸಂತಸದಲಿ ಸಾಧು ಜನರಿಷ್ಟ ಪೂರೈಸುತ ಮಂತ್ರಾಲಯದಿ ಮೆರೆವ ರಾಘವೇಂದ್ರ ಗುರುವೆ 5 ಜಲಜಭವನೂರುಭವನಂಶದಲಿ ಜನಿಸಿ ಕಲಿಯುಗದಿ ಹರಿನಾಮವೆ ಗತಿಯೆಂದು ಸಾರಿ ಹಲವು ಪದ ಸುಳಾದಿಗಳ ರಚಿಸಿ ಸಜ್ಜನರ ಕಲುಷಗಳ ಕಳೆದ ಪುರಂದರದಾಸರಾಯ 6 ಸಕಲ ಋಷಿಗಳ ಸಂಶಯವ ಪರಿಹರಿಸಿ ವೇದ ಉಕುತಿಗಳಿಂದ ಹರಿಯೆ ಪರನೆಂದು ಸ್ಥಾಪಿಸಿ ಭಕುತಿ ವೈರಾಗ್ಯನಿಧಿ ಭೃಗುಮುನಿಯೆಂದೆನಿಸಿದ ಮುಕುತಿಪಥ ತೋರಿಸಿದ ವಿಜಯದಾಸರಾಯ 7 ಸೂತ್ರ ಪುರಾಣಗಳ ರಚಿಸೆ ದಾಸತ್ವವಹಿಸಿ ಸಕಲ ಗ್ರಂಥಗಳ ಬರೆದು ಶ್ರಿಶಗರ್ಪಿಸುತ ಲೇಸು ಜಗಕೆಗೈದಂಥ ಗ ಣೇಶಾವತಾರಿ ಗೋಪಾಲದಾಸರಾಯ 8 ಸಿರಿ ರಂಗೇಶವಿಠಲನ ಕಾಂಬ ತೃಷೆಯಲಿ ಹರಿಗೆ ಹರಿಕಥಾಮೃತಸಾರ ಪಾನಗೈಯಲಿತ್ತ ನರಹರಿಯ ಕೃಪಾಪಾತ್ರ ಸಹ್ಲಾದನಂಶದ ಗುರುವರ ಶ್ರೀ ಜಗನ್ನಾಥದಾಸರಾಯ 9
--------------
ರಂಗೇಶವಿಠಲದಾಸರು
ನೀನು ಸರ್ವಜ್ಞನಾಗಿರಲು ನಿನ್ನಲಿ ಜನರು ಜಾಣತನ ತೋರಲಾಗುವುದೆ ಪವಮಾನ ಪ ಪ್ರಾಣಪತೇ ನಿನ್ನೊಲುಮೆ ಪಡೆದು ಸುಜನರು ದಿವ್ಯ ಸ್ಥಾನಗಳ ಪೊಂದಿ ಇಹಪರದಿ ಸುಖಿಸುವರು ಅ.ಪ ಧರ್ಮಯೋನಿಯ ಶಾಸನಗಳ ಸಂರಕ್ಷಣೆಯ ಕರ್ಮ ನಿನಗಲ್ಲದನ್ಯರಿಗೆ ತರವೆ ಕಿಮ್ಮೀರ ಕೀಚಕ ಜರಾಸಂಧ ಮೊದಲಾದ ಧರ್ಮಘಾತಕರ ಸದೆ ಬಡಿದ ಬಲಭೀಮ 1 ಜ್ಯೇóಷ್ಠನೆಂಬುವ ಮಮತೆ ತೊರೆದು ಧೈರ್ಯದಲಿ ಧೃತ ರಾಷ್ಟ್ರನಿಗೆ ಕಿಲುಬು ಕಾಸನು ಕೊಡದೆಲೆ ಭಾಗವತ ಧರ್ಮಗಳ ಹಂಚುವ ಹರಿಗೆ ಪ್ರೇಷ್ಟತಮ ನೀನಲ್ಲದನ್ಯರಾರಿಹರೊ 2 ನಿನ್ನ ಮತವೇ ಸಿರಿಯರಮಣನಿಗೆ ಸಮ್ಮತವು ನಿನ್ನ ದಯವೇ ಸಾಧು ಜನಕೆ ಅಭಯ ನಿನ್ನ ಮಾರ್ಗವ ನಂಬಿ ಧನ್ಯರಾಗುವರಲಿ ಪ್ರ ಸನ್ನನಾಗುವ ಹನುಮ ಭೀಮ ಮಧ್ವೇಶ 3
--------------
ವಿದ್ಯಾಪ್ರಸನ್ನತೀರ್ಥರು
ನೀನೆ ಅನಾಥನಾಗಿರಲು ಅನ್ಯರಿಗೆ ಏನು ದಾನವ ನೀ ಮಾಡುವಿಯೊ ಪ ಜ್ಞಾನಪೂರ್ಣ ನೀನೆಂದು ಅರಿತು ನಿನ್ನ ಜ್ಞಾನಲೇಶವನು ಯಾಚಿಸುವೆ ಅ.ಪ ಯಾರು ನಿನ್ನ ತಂದೆ ಯಾರು ನಿನ್ನ ತಾಯಿ ತೋರೆಲೊ ಈರೇಳು ಭುವನದಲಿ ಊರೊಳು ವಾಸಕೆ ಗೃಹವನು ಕಾಣದೆ ವಾರಿಧಿಯೊಳು ನೀನಡಗಿದೆಯೊ ರಂಗ 1 ಎಡಬಿಡದಿಹ ನಿನ್ನ ಮಡದಿಯ ಬಯಸದೆ ಪಡೆದೆಯೊ ನಾಭಿಯೊಳ್ನಾಲ್ಮುಗನ ಅಡಿಯಾಕಾಶವ ಕಾಣದ ಇಂತಹ ದುಡುಕಿನ ಲೋಕೋತ್ತರ ಪುರುಷ 2 ಪೆತ್ತುದನೆಲ್ಲವ ತುತ್ತು ಮಾಡುವುದು ಎತ್ತರ ನಡತೆಯೊ ನಾ ಕಾಣೆ ಪುತ್ಥಲಿ ಗೊಂಬೆಗಳಂದದಿ ಎಲ್ಲರ ಸುತ್ತಿಸುತಿಹೆ ಪುರುಷೋತ್ತಮನೆ 3 ಚಂಚಲಳಾದÀ ಮಡದಿಯು ನಿನ್ನನÀು ವಂಚಿಪಳೆನ್ನುವ ಭಯದಿಂದ ಹೊಂಚು ಕಾಯಲು ನಿನ್ನ ಹೃದಯದಲ್ಲಿ ಪೊತ್ತು ಸಂಚರಿಸುವೆ ವಿಲಕ್ಷಣ ಪುರುಷ 4 ಅಣುವಿನೊಳಗೆ ಅಣು ಮಹತಿನೊಳಗೆ ಮಹ ತೆನಿಪ ವಿರೋಧ ಧರ್ಮಕೆ ಧರ್ಮಿ ಎನ್ನಿಪ ನಿನ್ನಯ ಗುಣವರಿಯಲು ಸಂತತ ಸುಜನ ಪ್ರಸನ್ನ 5
--------------
ವಿದ್ಯಾಪ್ರಸನ್ನತೀರ್ಥರು
ನೀನೆ ಕಾಮಿಸಿ ನಿರುತವು ಕೆಡುವೆ ಪ ಸ್ವರೂಪವರಿಯದೆ ನೀ ಕರೆಕರೆ ಪಡುವೆ 1 ಭ್ರಾಂತಿಯಪಡುತಲಿ ಬಾಯಿ ಬಾಯಿ ಬಿಡುವೆ 2 ನಾಯಂದದಿ ಪರಸ್ತ್ರೀಯರ ಬಯಸುತ ಹೇಯನೆನಿಸಿಕೊಂಡು ನೊಯ್ಯುವೆಯಲ್ಲದೆ 3 ಮಲಮೂತ್ರದಿ ನೀ ಮಲಗಿರಲಿಲ್ಲವೇ ಮರೆತು ಯೌವ್ವನ ಗರ್ವದಲಿ ತಲೆ ತೂಗುತ4 ಪರಿಪರಿವಿಧದಲಿ ಭಕ್ತರ ಪಾಲಿಪ ಗುರುರಾಮವಿಠಲನ ಚರಣವ ನಂಬದೆ 5
--------------
ಗುರುರಾಮವಿಠಲ
ನೀನೆ ಗತಿ ಎನಗಿನ್ನು ಕರುಣಿಸು ಮಾಧವ ದೀನನ ಮರೆಯದಿರು ಸಿರಿಯರ ಜೀವ ಪ ನೀನೆ ಕರುಣಾಳು ಭಕ್ತಜನರಭಿಮಾನಿ ನೀನೆನ್ನ ಬಿಟ್ಟ ಬಳಿಕ ಕಾಮಿತವ ಪೂರೈಸಿ ಕಾಯ್ವರಕಾಣೆನಾರನು ಕಮಲನಾಭ ಅ.ಪ ಎಡಬಿಡದೆನ್ನನು ಕಾಡುತಿರುವ ಅತಿ ಜಡಭವ ಕಡುದು:ಖ ತಡಿಲಾರೆನಭವ ಅಡರಿಕೊಂಡೆನ್ನ ಸುಡುತಲಿರುವ ಒಡಲತಾಪ ಗಡನೆ ಬಿಡಿಸಿ ಬಿಡದೆ ಎನ್ನನು ಪಿಡಿದು ರಕ್ಷಿಸು ಮಡದಿಗಕ್ಷಯದುಡುಪು ಇತ್ತನೆ 1 ಶರಧಿಸಂಸಾರದ ಉರುತರ ಪರಿಬಾಧೆ ಕಿರಿಕಿರಿ ಪರಿಹರಿಸಿ ಪೊರೆಯಯ್ಯ ಜವದಿ ಶರಣುಮಾಡುವೆ ಶರಣಜನರ ಕರುಣಮಂದಿರ ಮರೆಯದಿರೆಲೊ ತರಳ ನಿರುತದಿ ಚರಣಸ್ಮರಿಸಿ ಕರೆಯೆ ಕಂಬದಿ ಭರದಿ ಬಂದನೆ 2 ಮುಂದೆನಗೆ ಭವಬಂಧ ಎಂ ದೆಂದಿಗಿಲ್ಲದಂತೆ ತಂದೆ ಕರುಣಿಸು ದಯಾ ಸಿಂಧು ಶ್ರೀರಾಮ ವಂದಿ ಭಜಿಸುವೆ ಮಂದರಾದ್ರಿ ಮಂದಿರನೆ ತ್ವರ ಬಂದು ಕಾಯೊ ಬಂಧನದಿ ಜಗ ತಂದೆ ನಿಮ್ಮ ಪಾದಕೆಂದು ಪೂವಗೆ (?) ಬಂದು ಪೊರೆದನೆ 3
--------------
ರಾಮದಾಸರು
ನೀನೆ ಗತಿ ಶ್ರೀಪತಿ ನೀನೆ ಗತಿ ನಿರಾಕೃತ ದಾನವತತಿ ದೀನಾನುಕಂಪಿತ ಮತಿ ಪ. ಏನೆಂಬೆನು ನಿನ್ನಯ ಕರುಣಾ ಪವಮಾನ ಮತಿಯ ಜನಾದರಣಾ ದೀನಬಂಧು ದುರಿತೌಘ ನಿವಾರಣ ಶುಭ ಸಂಚಯ ಕರಣ 1 ನಿರವಧಿ ಸುಖದಾಯಕ ನಿನಗನ್ಯರು ಸರಿಯಂಬರು ನರಕದಿ ಹೊರಳುವರು ಚರಣಯುಗ್ಮಸರಸಿಜವಿಂತಿರಲು ಬರಿದೆ ಭವದಿ ತಿಳಿಯದೆ ಬಳಲುವರು 2 ಸ್ಮರಣೆ ಮಾತ್ರದಿಂದೊಲಿವ ಮನವರಿತು ಪಾಡಿದರೆ ನಲಿವ ಸಿರಿಸಮೇತ ಮಂದಿರದೊಳಗಿರುವ ಉರಗ ಗಿರೀಂದ್ರನ ಶಿರದಲಿ ನಲಿವ 3
--------------
ತುಪಾಕಿ ವೆಂಕಟರಮಣಾಚಾರ್ಯ
ನೀನೆ ಗತಿಯು ಎನಗೆ ಎನ್ನಯ್ಯ ಶ್ರೀ ಪನ್ನಂಗಶಯನ ಕಾಯೋ ಪ ಹೀನ ಸಂಸಾರದೊಳು ಇನ್ನೆಲ್ಲಿತನಕ ನಾ ಬನ್ನಬಡಬೇಕಯ್ಯ ಜಾಹ್ನವೀಜನಕ ಅ.ಪ ಸನುಮತಿವಿನಿತಿಲ್ಲದೆ ಮನಸಿನೊಳು ಘನತರ ಭ್ರಮಿಪೆ ಬರಿದೇ ಶುನಕನ ಕನಸಿದು ಅನಿತ್ಯ ಜಗತ್ಸುಖ ಎನಗ್ಯಾಕೆ ಒಣಭ್ರಾಂತಿಯನು ತೋರ್ವೆ ಶ್ರೀಕಾಂತ 1 ಘಳಿಗೆಸಂತಸವಿಲ್ಲದೆ ಬಳಲುವೆ ಬಲು ಇಳೆ ಸುಖದಿ ಮನ ನಿಲ್ಲಿಸಿ ಘಳಿಗೆ ಮೊಕ್ಕಾಮಿಗಾಗಿ ಕಳವಳಸೀಪರಿ ಬಳಲುವೆನ್ಯಾಕೊ ತಿಳಿಯದಿದು ನಳಿನಾಕ್ಷ 2 ಎತ್ತ ನೋಡಲು ನೀನಿರ್ದು ಮಿಥ್ಯಜಗತ್ತಿನೋಳ್ ವ್ಯರ್ಥ ಬಳಲಿಪರೆ ಎನ್ನ ಭಕ್ತವತ್ಸಲನೆಂಬ ಹೊತ್ತಿರುವಿ ಬಿರುದುಗಳ್ ಚಿತ್ತಕ್ಕೆ ಸತ್ಸುಖವಿತ್ತು ಪೊರೆ ಶ್ರೀರಾಮ 3
--------------
ರಾಮದಾಸರು
ನೀನೆ ಗತಿಯೆನಗೆ ಮಾಂಗಿರಿಯ ರಂಗ ಪ ನಾನಾ ಜನುಮವ ನಾನೇ ಪಡೆದವ ಮಾನವ ಜನ್ಮವ ನೀನೆನಗಿತ್ತವ ಅ.ಪ ಹಿಂದಿನ ಜನ್ಮದ ಅಂದವ ಮರೆಸಿದು ದೊಂದುಪಕಾರವೋ ಇಂದಿರೆಯರಸ ಇಂದೆನ್ನ ಬಳಿಗೆ ನೀ ಬಂದು ಪಾಲಿಸಬೇಕು ಭವ ಬೇಡೆಂದು ಬೇಡುವೆನಯ್ಯ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀನೆ ಜಗದೀಶ ಶ್ರೀ ವೆಂಕಟೇಶಾ ಪ. ಪೂರ್ವ ವೈರ ವಹಿಸಿರ್ವ ತಮೋಗ್ರಹ ಪರ್ವ ಕಾಲದೊಳು ಶರ್ವರೀಶನಿದಿ- ರಿರ್ವದರಿತು ಸುರ ಸಾರ್ವಭೌಮ ಶತ- ಪರ್ವದೊಳಸುರನ ಗರ್ವವ ಕಳಿವಿ 1 ಧರಣಿಗೆ ಭಾರವ ನೆರಹುವ ದೈತ್ಯರು ಸುರರ ಮಹಾದ್ಬುತ ಧುರದೊಳು ಗೆಲಿತಿರೆ ತಿರಿಯ ಜನರ ಸುರವರತನುವಾಗುತ ತಿರಿವಿ ಮದಾಂಧರ ಸರಸೀಜನಯನ 2 ಹೊಂದಿದ ಭಕ್ತರನೆಂದಿಗು ಕಾಯುವ ನೆಂದು ವೇಡಮುನಿ ವೃಂದ ಪೊಗಳುವುದು ಸುಂದರ ಪೂರ್ಣಾನಂದ ಶೇಷಗಿರಿ ಸಿರಿ ಗೋವಿಂದ ಮುರಾರೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ನೀನೆ ದಯಮಾಡಲು ನಾನುದ್ಧಾರಾಗುವೆನು ಏನೇನು ಪರಲೋಕ ನಾನರಿಯೆ ಶ್ರೀಹರಿಯೆ ಪ ಹೀನಸಂಸಾರದೊಳಗೆ ಮುಳುಗಿ ಶ್ವಾನನಂದದಿ ಕರಗಿ ಕೊರಗಿ ಜ್ಞಾನಶೂನ್ಯನಾಗಿ ಬಳಲುವೆ ಜ್ಞಾನಮೂರುತಿ ಅಭಯ ಪಾಲಿಸು ಅ.ಪ ಉದಯದಲ್ಲೇಳುತ ಸದಮಲ ತವಪಾದ ಮುದದಿಂದ ನೆನೆಯದೆ ಅಧಮತನದಿ ವಿಧವಿಧದಿ ಅಧಮಜನರ ಸುದ್ದಿ ವದನದಿಂದಾಡುತ ಮುದಿಕೋಣನಂದದಿ ಮದಮುಚ್ಚಿ ನಡೆದೆ ಎಡಬಿಡದೆ ಕುದಿದೆನನುದಿನ ಪರರ ಮನೆ ಸಂ ಪದವ ನೋಡಿ ಸಹಿಸದವರ ಸದನ ಮುರಿಯುವ ಬುದ್ಧಿ ಹುಡುಕಿದೆ ಪದುಮನಾಭಪರಾಧ ಕ್ಷಮಿಸಿ1 ಒಂದು ನಾನರಿಯದೆ ಮುಂದೆ ಭಲಾಯೆಂದು ಹಿಂದೆ ನಿಂದಿಸಿ ನಕ್ಕೆ ದ್ವಂದ್ವಕರ ಬಡಿದು ಬಲು ಜರಿದು ಹಂದ್ಯಮೇದ್ಯಕಂಡಾನಂದಿಪತೆರದನ್ಯ ಸುಂದರಿಯರ ನಯನದಿಂದ ನೋಡಿದೆ ಎವೆಯಿಕ್ಕದೆ ಇಂದಿರೇಶನೆ ನಿಮ್ಮ ಪಾದವ ಒಂದೆ ಮನದಿಂ ಭಜಿಸದೆ ಭವ ದಂದುಗದಲಿ ಬಿದ್ದು ನೊಂದವ ಕಂದನೊಳು ಕೃಪಾದೃಷ್ಟಿಯಿತ್ತು 2 ದಾಸಜನರ ಆವಾಸ ನಾ ಬಯಸದೆ ಈಷಣ ಪ್ರಪಂಚದ್ವಾಸನದಲ್ಲಿ ಬಹು ತೊಳಲಿ ಆಸೆಯೆಂಬುವ ಮಹಪಾಶದಬಲೆಯೊಳು ಘಾಸಿಯಾಗುವೆ ಸಿಲ್ಕಿ ಸೋಸಿ ನೋಡದಲೆ ಮರೆ ಮೋಸದಲಿ ದಾಸ ಬುದ್ಧಿಯಿಂದ ಮಾಡಿದ ಬಲು ದೋಷರಾಶಿಗಳೆಲ್ಲ ನಾಶಿಸಿ ಶ್ರೀಶ ಶ್ರೀರಾಮ ನಿಮ್ಮ ಪಾದ ದಾಸನಿಗೆ ನಿಜಧ್ಯಾಸ ನಿಲ್ಲಿಸು 3
--------------
ರಾಮದಾಸರು