ಒಟ್ಟು 14277 ಕಡೆಗಳಲ್ಲಿ , 133 ದಾಸರು , 6728 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವೆನ್ನ ತಾಯಿ ಸದ್ಗುರುವೆನ್ನ ತಂದೆ ಗುರುಕೃಪೆ ಪಡೆದು ನಾ ಹೆಸರಿಗೆ ಬಂದೆ ಪ ಗುರುವೆನ್ನ ಪ್ರಾಣಲಿಂಗಾ ಗುರುವೆನ್ನ ಇಷ್ಟಲಿಂಗಾ ಗುರುಪ್ರಕಾಶವು ಬೆಳಗುತಿರೆ ಸರ್ವಾಂಗಾ ಗುರುಸ್ಮರಣೆ ಸುಖರಂಗಾ ಗುರುಕರುಣಾ ಕೃಪಾಂಗಾ ಗುರುವಿಂದಧಿಕ ಕಾಣೆ ಶಿವನಾಣೆ ಗುರುವೆನ್ನ 1 ಗುರುವೆ ಈ ಪೃಥವಿಯು ಗುರುವೆ ಆಕಾಶವು ಗುರುವೆ ಸ್ಥಾವರ ಜಂಗಮವೆಲ್ಲವು ಗುರುರೂಪವೆಂದು ಶ್ರೀ ಗುರು ಕರುಣದಂದರಿತು ಗುರು ಸರ್ವರಿಗೆ ಸರಿಯಲ್ಲಾ ಶಿವಬಲ್ಲ 2 ಗುರುವೆ ದೇವಾಂಗಾ ಶ್ರೀ ಗುರುವೆ ಬಸವಲಿಂಗಾ ಗುರು ಬ್ರಹ್ಮವಿಷ್ಣುರುದ್ರ ಸ್ವರೂಪ ಗುರು ಧರಣಿಪಾಲಾ ಗುರು ವಿಮಲಾನಂದ ಲೋಲಾ ಗುರು ಸಿದ್ಧೇಶ್ವರಸ್ವಾಮಿ ಭಕ್ತ ಪ್ರೇಮಿ 3
--------------
ಭಟಕಳ ಅಪ್ಪಯ್ಯ
ಗುರುವೇ ಗುರುವೇ ಗುರು ಗುರುವೇ ಮಹಾಗುರು ಗುರುವೇ ಶ್ರೀ ಗುರುವೇ ಪ ನಿರಂಜನ ನಿಷ್ಕಲಂಕ ಗುರುವೇಪ್ರತ್ಯಾಗಾತ್ಮ ಪರಾತ್ಪರಾತ್ಪರ ಪ್ರತ್ಯಯರಹಿತ ಗುರುವೇ 1 ನಿರ್ವಿಕಲ್ಪ ನಿರಾಕಾರ ನಿರ್ಗುಣ ನಿರ್ಮಾಯನೇ ಗುರುವೇನಿರ್ವಿಕಾರ ನಿದ್ರ್ವಂದ್ವ ನಿಜಾಕಾರ ನಿರುಪಮಾತ್ಮ ಗುರುವೇ 2 ಪೂಜ್ಯಮಾನ ಸುರಾಸುರ ಸಿದ್ಧಾಯಿಂ ಪೂಜಾರ್ಪಿತ ಗುರುವೇಈ ಜಗದೇಕ ನಾಥನೆ ಚಿದಾನಂದ ತೇಜಃಪುಂಜ ಗುರುವೇ 3
--------------
ಚಿದಾನಂದ ಅವಧೂತರು
ಗುರುಸಂತತಿಗೆ ನಮೊ ನಮೊ ಶ್ರೀ ಹರಿಶರಣರಿಗೆ ನಮೋ ನಮೋ ಪ ಧರಣೀಸುರರಿಗೆ ನಮೋ ನಮೋ ಅ.ಪ ವಿಜಯರಾಮದಾಸಗುರುವೆ ನಮೋ ನಮ ಭಜಕಜನರಸುರತರುವೆ ನಮೋ ವೃಜಿನ ಕಳೆವ ಭಾಗ್ಯನಿಧಿದಾಸ ನಮೋ ವಂದೇ ಸುಪ್ರೇಮದಾಸ ನಮೋ 1 ತಿರುಮಲಾಖ್ಯದಾಸರಿಗೆ ನಮೋ ನಮ ಗುರುಗೋಪಾಲರಾಯರಿಗೆ ನಮೋ ವರ ಭಾಗಣ ವಿಜಯರಾಯರಿಗೆ ನಮೋ ಪುರಂದರಾಖ್ಯ ಸುರಮುನಿಗೆ ನಮೋ 2 ವ್ಯಾಸಾಭಿಧಮೌನೀಶನಮೋ | ಹರಿ ದಾಸಶ್ರೀಪಾದರಾಯರಿಗೆ ನಮೋ ಭೂಸುರ ಪ್ರಿಯಹನುಮತೇ ನಮೋ ಸೀತೇಶ ಶ್ರೀಗುರುರಾಮ ವಿಠಲ ನಮೋ 3
--------------
ಗುರುರಾಮವಿಠಲ
ಗುರುಸುಶೀಲೇಂದ್ರ | ಚರಣವಾರಿಜ ಯುಗ್ಮ ಸ್ಮರಿಸುವ ನರರು ಶ್ರೀಹರಿದಾಸರು ಪ ಹರಿವರ ಸುಮಚಾಬ್ಧಿ | ಹರಿಣಾಂಕರೆನಿಸಿದ ವರಸುವೃತೀಂದ್ರರ ತೀರ್ಥರ ಕರಕಮಲಜ ಅ.ಪ ಮಾಸ ತ್ರಯದಿ ಸಡಗರದಲಿ ಮಹ ಸಭೆ ನಿರ್ಮಿಸಿ ಪೊಡವಿಯೊಳಿದ್ದ ಭೂಸರರಾಜ್ಞ ಪತ್ರ ಬರಮಾಡಿ ವಿದ್ವಾಂಸರ ಒಡಗೂಡಿ | ಮಧ್ವಾಗಮನವನು ನೋಡಿ ಬೆಲೆಯುಳ್ಳವೆಗ್ಗಳ ಒಡವೆ ಉಡುಪಗಳನು ಕರುಣಿಸಿ ಮೃಷ್ಟಾನ್ನ ದ್ವಿಜರಿಗೆ ಕಡು ಸುಪ್ರೇಮದಿ ಸಲಿಸಿ | ಮುದ ಬಡಿಸಿ ಜಡಕುಮಾಯ್ಗಳ | ಗಡಣ ಜಡಧಿಗೆ ವಡೆಯ ತಾನೆನಿಸಿ ಕ್ರೋಢ ಜಾಸ್ಥಿತ | ಒಡೆಯ ಶ್ರೀಗುರು ರಾಘವೇಂದ್ರರ ಅಡಿಗಳಾಬ್ಜಕಾ ರಡಿಯಂತೊಪ್ಪುತ | ಬಿಡದೆ ಸಂತತ ಧೃಢದಿ ಸೇವಿಸಿ ಜಡಜ ಜಾಂಡದಿ ಮೆರೆದ ಅಸ್ಮದ್ 1 ತರಣಿ ಕುಲೇಂದ್ರನ ಕರುಣವೆಷ್ಟಿವರೊಳು ಅರುಹಲಾರೆ ವರಕಾಪ್ಯಾಸನ ಪುರಕೆ ಎರಡಾರು ಯತಿಗಳ ವತಿಯಿಂದ ತಮ್ಮಯ ಶಿಷ್ಯ ತತಿಯಿಂದ ಬಹುವಿಧ ಬಿರುದಾವಳಿಯಿಂದ ತೆರಳಿ ಶಶಿರವಿವರ ಸುವಾದ್ಯಧ್ವಾನ ಮೊಳಗಿಸುತ ‌ಘನ ಭಕ್ತಿ ಪರವಶರಾಗಿ ಸುರಚಿರ ಕನಕಮಣಿ ಧನ ತನುಮನ ತ್ವರಿತ ತೃಣ ಬಗೆಯ ದೇವಕಿ ತರಳ ರುಕ್ಮಿಣಿ ವರ ಮುರಾಂತಕÀ ಚರಣಗರ್ಪಿಸುತ | ಆನಂದಪಡುತ ಸರ್ವಮುನಿ ಜನಗಳಿಗೆ ಬಲು ಉಪಚರಿಸಿ | ಮನ್ನಣೆ ಧರಿಸಿ ಹರುಷದಿ ವರ ಸುಧೀಂದ್ರರ ಕರಜರನು ನೆರೆಸ್ಥಾಪಿಸಿ ಆಶ್ಚÀರ್ಯ ಚರಿತ 2 ಪತಿ ಶೃತಿ ಶಾಸ್ತ್ರಾರ್ಥ ಚತುರ ತನದಿ ಪಡೆದು ವಿತತ ಮಹಿಮನಾದ ಪತಿತ ಪಾವನ ಶಾಮಸುಂದರನ ಸ್ತುತಿಸುತಲಯ ಚಿಂತನೆ ಗೈಯುತ ಶ್ರೀಯುತ ಸಂಸ್ಥಾನಮತಿ ವಿಶಾರದರಾದವರ ಸುವೃತೀಂದ್ರ ತೀರ್ಥರಿಗೆ ಹಿತದಿಂದ ಒಪ್ಪಿಸಿ | ಯತಿ ಧೀರೇಂದ್ರರ ಚಾರುಸ್ಥಳದೊಳಗೆ ತನುವಿತ್ತು | ಹರಿಪುರಪಥವ ಪಿಡಿದೈದಿದರು ಚನ್ನಾಗಿ | ಸೇವಿಪ ಜನರಿಗೆ ಅತಿದಯದಿ ಮನೋರಥವ ನೀಡುತ ಸತತ ಮಾಣದೆ ಪರಮ ಭಕುತಿಲಿ ಪೃಥ್ವಿ ಸುರಕರ ಶತಪತ್ರಗಳಿಂದ ನುತಿಸಿಕೊಳುತಲರ್ಚನೆಗೊಂಬ 3
--------------
ಶಾಮಸುಂದರ ವಿಠಲ
ಗುರುಸ್ತುತಿ ಗುರುಗಳ ಕರುಣವಿದು ಇರುಳು ಹಗಲು ಹರಿಸ್ಮರಣೆಯೊಳಿರುವದು ಪ ಕಲಿಯುಗ ಒದಗಿತಲ್ಲ | ವಿಷಯದಿ ಚಲಿಸಿತು ಮನವೆಲ್ಲ ಇಳೆಯೊಳು ಹಿರಿಯರಿಲ್ಲ ನೆರೆಜನ ಖಳರು ಸಜ್ಜನರಲ್ಲ 1 ವೇದ ಓದುಗಳಿಲ್ಲ ಸುಮ್ಮನೆ ಕಾದಿ ಕಳೆವರು ಕಂಡ್ಹಾಗೆ ಮೋದತೀರ್ಥರ ಮತ ಇದರೊಳು ಓದಿ ಪೇಳುವರಿಲ್ಲ 2 ಮೋಸ ಪೋಗದ ಹಾಗೆ ಹರಿಪದ ದಾಸ್ಯವ ಬಿಡದಾಗೆ ವಾಸುದೇವವಿಠಲನ್ನೆ ಕರುಣದಿ ವಾಸರ ಕಳೆಯುವನೋ | ನಮ್ಮ 3
--------------
ವ್ಯಾಸತತ್ವಜ್ಞದಾಸರು
ಗುರುಸ್ತುತಿ ದಾಸರ ಭಜಿಸುತ ಕ್ಲೇಶವ ಕಳೆಯಿರೊ ವಾಸುದೇವನ ಭಕ್ತರಾದ ಶ್ರೀಪುರಂದರ ಪ ಮೀಸಲ ಮನದಲಿ ಕೇಶವನಡಿಗಳ ಆಸೆಲಿ ಪೂಜಿಪ ದಾಸರೊಳಗೆ ಶ್ರೇಷ್ಠ ಅ.ಪ ಪುರಂದರ ಗಡದೊಳು ಹಿರಿಯನೆಂದೆನಿಸಿದ ವರದಪ್ಪನಿಗೆ ವರಕÀುವರ ನೆಂದೆನಿಸಿದೀ ಧರೆಯೊಳು ತನಗ್ಯಾರು ಸರಿಯಿಲ್ಲದಂತೆ ಮೆರೆಯೆ ಸಿರಿಯರಸನು ಶೀಘ್ರದಲಿ ತಾನರಿಯುತ 1 ಬಂದನು ಮಗನಿಗೆ ಮುಂಜಿಯೆಂದೆನುತಲಿ ಚಂದದಿಂದಲಿ ಬೇಡಲು ಧಣಿಯ ಬಂದೆಯಾತಕೆ ನಮ್ಮ ಚಂದದ ಬೀದಿಲಿ ಹಿಂದಕೆ ತೆರಳೆನೆ ಬಂದನು ಬಾರಿ ಬಾರಿ 2 ಹರಿಯೆಂದು ತಿಳಿಯದೆ ಜರಿಯುತ ನುಡಿಯಲು ಮರಳಿ ಮರಳಿ ಯಾಚಿಸೆ ಬಿಡದೆ ತೆರಳನು ಈ ವೃದ್ಧ ತೆರಳಿಪೆನೆನುತಲಿ ಸರಸರ ತೆಗೆಯುತ ಸುರಿದನು ನಾಣ್ಯವ 3 ನೋಡುತ ಶ್ರೀಹರಿ ಗಾಡದಿ ಕೈನೀಡೆ ನೀಡಿದ ಸವೆದ ರೊಕ್ಕವ ನೋಡೀ ಗಾಡನೆ ಬಂದು ನಾಯಕನ ಸತಿಯಳನು ಬೇಡಿದ ಪುಣ್ಯವು ಬಾಹೋದೆನುತಲಿ 4 ಏನು ನೀಡಲಿ ಎನಗೇನಿಹುದೆನ್ನಲು ಮಾನಿನಿ ಮೂಗುತಿ ನೀಡೆಂದೆನಲು ಮಾನಿನಿ ಮಾಡಲು ಜ್ಞಾನಿಗಳರಸನು ಗಾಡ ಹಿಂತಿರುಗುತ 5 ಗಾಡನೆ ಮೂಗುತಿ ನೀಡುತ ದ್ರವ್ಯವ ಬೇಡಲು ಬೇಗದಿ ನೀಡುತ ನುಡಿದನು ನೋಡುತ ವಡವೆಯ ನೀಡಿದ ಭರಣಿಲಿ ಸತಿ ಮುಖವಾ 6 ಮೂಗುತಿ ಎಲ್ಲೆನೆ ಬೇಗದಿ ನಡುಗುತ ನಾಗವೇಣಿಯು ಪ್ರಾರ್ಥಿಸಿ ಹರಿಯ ಆಗ ಕುಡಿವೆ ವಿಷವೆನ್ನುತ ಕರದಲಿ ನಾಗವಿಷದ ಬಟ್ಲಲಿ ಇರಲು 7 ತೋರಿದಳಾಗಲೆ ತನ್ನಯ ರಮಣಗೆ ತೋರದಿರಲು ಮುಂದಿನ ಕಾರ್ಯ ಭಾರಿ ಆಲೋಚನೆಯ ಮಾಡುತ ಮನದಲಿ ಸಾರಿದ ತನ್ನ ವ್ಯಾಪಾರದ ಸ್ಥಳಕೆ 8 ತೆರೆದು ನೋಡಲು ಆ ವಡವೆಯ ಕಾಣದೆ ಮಿಗೆ ಚಿಂತೆಯು ತಾಳುತ ಮನದಿ ನಗಧರನ ಬಹು ಬಗೆಯಲಿ ಪೊಗಳುತೆ ತೆಗೆದ ಅಸ್ಥಿರ ರಾಜ್ಯದಿ ಮನವ 9 ಕಳವಳ ಪಡುತಲಿ ಆ ಲಲನೆಯ ಸಹಿತದಿ ತನುಮನ ಧನ ಹರಿಗರ್ಪಿಸುತಾ ಕ್ಷಣ ಬಿಡದಲೆ ಹರಿ ಚರಣವ ಸ್ಮರಿಸುತ ಕಮಲನಾಭ ವಿಠ್ಠಲನೆನ್ನುವ ಹರಿ 10
--------------
ನಿಡಗುರುಕಿ ಜೀವೂಬಾಯಿ
ಗುರುಹಿರಿಯರನುಸರಿಸಿ ಹÀರಿಯ ಮನದೊಳಗಿರಿಸಿಪರಗತಿಯ ಬೇಗ ಸಾಧಿಸಿರೊ ಪ. ಲೆಕ್ಕವಿಲ್ಲದ ದೇಹವೆಂಬ ಸೆರೆಮನೆಯೊಳಗೆಸಿಕ್ಕಿ ಬಹುಕಾಲ ಬಳಲದಿರಿರಕ್ಕಸಾರಿಯ ಭಕ್ತರೊಳು ಸೇರಿ ಮುಂದೆ ಸೆರೆ-ಯಿಕ್ಕದಂತವನ ಮರೆಹೋಗಿರೊ 1 ಕಂಬಳಿಯ ಬುತ್ತಿಯಂತೀ ದೇಹದೊಳಗೆ ಸುಖವೆಂಬುದಿಲ್ಲವು ದುಃಖಭರಿತಅಂಬುಜಾಕ್ಷನ ದಿವ್ಯ ಮಂಗಳ ಕಥಾಮೃತವ-ನುಂಬ ಸಂಭ್ರಮಕೆ ಸರಿಗಾಣೆನು 2 ಮಕ್ಕಳುಗಳಳುವಾಗ ಮಡದಿಯರು ಜರಿವಾಗಭಿಕ್ಷುಕರು ಬಂದು ಬೈದ್ಹೋಗುವಾಗಇಕ್ಕಿ ಪೊರೆವುದಕೆ ಬಗೆಯಿಲ್ಲದ ದರಿದ್ರಂಗೆಸೌಖ್ಯವೆತ್ತಣದು ಮನುಜರಿಗೆ 3 ತಾಯ ಮಾರಿ ತೊತ್ತಕೊಂಬ ಪಾಮರನಂತೆಹೇಯಕುಜನರ ಚರಣಕೆರಗಿಶ್ರೀಯರಸನಂಘ್ರಿಗಳ ನೆನೆಯಲೊಲ್ಲದ ಮನುಜರಿಗೆಆಯುಷ್ಯ ಬರಿದೆ ಹೋಯಿತಲ್ಲ 4 ಐವರಿತ್ತೊಡವೆಯನು ಅವರವರು ಒಯ್ವರು ಮ-ತ್ತೈವರೆಂಬುವರು ತೊಲಗುವರುಮೈಯ ಹತ್ತರಕೂಟ ಹರಿದು ಹೋಗುವ ಮುನ್ನಕೈಯ ಪಿಡಿದೆತ್ತುವರ ಕಾಣೆ 5 ಕಾಲು ಜವಗುಂದಿದವು ರೋಗರುಜಿನಗಳಿಂದಕಾಲನ ಭಟರು ಬಂದು ಕವಿದುಸಾಲಾಗಿ ನಿಂತಾಗ ಮುಖಘಂಟೆಯೊಳಗಿನನಾಲಿಗೆಗೆ ನಾದವೆಲ್ಲಿಹುದೊ 6 ಈಗಲೆ ಹರಿನಾಮನಾದದಿಂದೆಚ್ಚೆತ್ತುನಾಗಶಯನನ ಪುರದ ಪಥವಆಗಮಜ್ಞರ ಕೈಯ ಕೇಳಿಕೊಳ್ಳಿರೊ ನೀವುಈ ಗಾಳಿದೀಪ ಸ್ಥಿರವಲ್ಲ7 ಜರೆ ಬಂದು ಕಡೆಯಲ್ಲಿ ಗುರುಗುರುಟ್ಟುವಾಗಶರೀರಸಂಬಂಧಿಗಳ ಕಾಟತರುಣಿಯರ ಮೇಲಾಸೆ ತಮ್ಮ ಹಿತವರಿಯದೆಬರಿದೆ ಭವದೊಳಗೆ ಬಳಲದಿರಿ 8 ವೇದಶಾಸ್ತ್ರವನೋದಲಿಲ್ಲ ಜಪತಪಸಾಧು ಸತ್ಕರ್ಮಗಳ ಸರಕಿಲ್ಲಮಾಧವನ ಪೂಜೆಯನು ಮಾಡಿದವನಲ್ಲ ಹರಿಪಾದತೀರ್ಥ ವ್ರತಗಳಿಲ್ಲ 9 ಊಧ್ರ್ವಪುಂಢ್ರsÀಗಳೆಲ್ಲಿ ಹರಿಯ ಲಾಂಛನವೆಲ್ಲಿಪದ್ಮಾಕ್ಷಿ ಶ್ರೀತುಲಸಿ ಸರಗಳೆಲ್ಲಿಸದ್ಧರ್ಮಪಥವೆಲ್ಲಿ ವಿಷಯಾಂಧಕೂಪದೊಳುಬಿದ್ದು ಹೋರಳುವ ಮನುಜರೆಲ್ಲಿ 10 ಏಕಾದಶಿಯ ಮಾಡಿ ಯತಿಗಳೊಡನೆ ಆಡಿಪೋಕವೃತ್ತಿಗಳನೀಡಾಡಿಶ್ರೀಕಾಂತನನು ಬೇಡಿ ಸುಕೃತಿಗಳನೆ ಕೂಡಿಆ ಕೃಷ್ಣನಂಘ್ರಿಗಳ ಪಾಡಿ 11 ಉಕ್ಕಿ ಹರಿಯನೆ ಪೊಗಳಿ ಅವನಂಗಣದಿ ಹೊರಳಿಶುಷ್ಕ ತರ್ಕಗಳ ಮೇಲೆ ಉಗುಳಿಭಕ್ತಿಜ್ಞಾನಗಳಿರಲಿ ಮಿಕ್ಕ ಪಥದಿಂ ಮರಳಿಮುಕ್ತಿಮಾರ್ಗದಲಿನ್ನು ತೆರಳಿ 12 ಕೊಳ್ಳೆನಾಯಕ ಬಂದು ಕೋಟೆಗಡರದ ಮುನ್ನಕಳ್ಳರೈವರ ಕಾಟದಿಂದಉಳ್ಳ ಪುಣ್ಯಾರ್ಥಗಳು ಕೊಳ್ಳೆ ಹೋಗದ ಮುನ್ನಫುಲ್ಲನಾಭದಲಿ ಬಚ್ಚಿಡಿರೊ 13 ಮಲಮೂತ್ರರಕ್ತಮಾಂಸದ ರಾಸಿಗಳು ಕೂಡಿಎಲುವಿನ ಬಿಲದಲ್ಲಿ ಗೂಡಮಾಡಿಬೆಳೆಸಿದೀ ತನುವೆಂಬ ನರಕದಾಸೆಯ ಬಿಟ್ಟುಜಲಜನಾಭನ ಸೇರಿಕೊಳ್ಳಿರೊ14 ಒಂಬತ್ತು ಛಿದ್ರವುಳ್ಳ ದೇಹವೆಂಬ ಮಡಕೆಯಲ್ಲಿತುಂಬಿದ ವಾಯು ಸ್ಥಿರವೆಂದುನಂಬಿಕೊಂಡಿರಬೇಡಿ ಹಯವದನ ಹರಿಯ ಪಾ-ದಾಂಬುಜವ ಸೇರಿ ಬದುಕಿರೊ 15
--------------
ವಾದಿರಾಜ
ಗುರ್ವಂತರ್ಗತ ಗೋಪಾಲ ಪಾಹಿ ಸರ್ವಪಾಲಕ ಶಿರಿಲೋಲ ಪ ಶರ್ವಸುರಗಂಧರ್ವ ಮುನಿಕುಲ Àಸರ್ವಸೇವಿತ ಗರ್ವರಹಿತನೆ ಅ.ಪ ರಾಮಾಕೃಷ್ಣ ವ್ಯಾಸರೂಪದಿಂದಾ ಮಾಮನೋಹರ ಮಾಡೆಕೃಪಾ ಶ್ರೀಮಧ್ವ ಮೊದಲಾದ ಆ ಮಹಾಮುನಿಗಳ ಸ್ತೋಮಸಂತತ ಮಹಾಪ್ರೇಮಮನದಲಿದ್ದು ಭೂಮಿತಳದೊಳಗಖಿಳಜನರಿಗೆ ಕಾಮಿತಾರ್ಥವ ಸಲಿಸಿ ತಾ ನಿ ಸ್ಸೀಮ ಮಹಿಮೆಯ ತೋರಿ ಇವರಿಗೆ ಆ ಮಹತ್ತರ ಕೀರ್ತಿಕೊಡುತಿಹ 1 ಆವಾವಜನುಮಗಳಲ್ಲಿ ಜಗಕೆ ಜೀವನಪ್ರದನಾಗಿ ಇಲ್ಲೀ ಶ್ರೀವರ ಸರ್ವೇಶ ಜೀವೇಶ ಸುರವಂದ್ಯ ದೇವ ನಿನ್ನಯ ಪಾದಸೇವಾವ ಸಲಿಸೆಂದೆ ಕೋವಿದರ ಕುಲಮಣಿಗಳೊಳಗೆ ಭಾವಿಪುದು ಸನ್ಮನವನಿತ್ತು ಗೋವಿದಾಂಪತೆ ಙÁ್ಞನಗಮ್ಯನೆ ಪಾವನಾತ್ಮಕ ಪರಮ ಪಾಲಿಸೋ 2 ದಾತ ಶ್ರೀ ಗುರುಜಗನ್ನಾಥವಿಠಲ ನೀ ಧಾತನಾಂಡಕೆ ಮುಖ್ಯನಾಥಾ ಧಾತಪ್ರಮುಖಸುರವ್ರಾತಸನ್ನುತಪಾದ ಪಾಥೋಜಯುಗಳ ಸಂಭೂತ ರಜೋದಿಂದ ಧೂತಪಾಪನ ಮಾಡುವದು ಅ ದ್ಭೂತ ಙÁ್ಞನ ವಿರಕುತಿ ಸಂಪ ದ್ಪ್ರಾತ ಪಾಲಿಸೊ ಹೇ ಮಹದ್ಭುತ ದಾತ ಎಂಬೆನೊ ನಮೋ ನಮೋ 3
--------------
ಗುರುಜಗನ್ನಾಥದಾಸರು
ಗುಹ್ಯ ಗುರುತವು ಪೂರ್ಣ ಸುಳ್ಹವುದೋರಿಕೊಡುವ ನಿಜ ಸದ್ಗುರು ಕರುಣ ಧ್ರುವ ಜೀವ ಶಿವ ದಾವ ದೆಂದಿಳಿವ್ಯಾವ ನೋಡಿ ನಾವು ನೀವೆಂದು ಹ್ಯಾವ ಹೆಮ್ಮೆಯ ಹಿಡಿಯ ಬ್ಯಾಡಿ ಮಾವಮಕರ ಗುಣಬಿಟ್ಟು ಭಾವ ಭಕ್ತಿ ಮಾಡಿ ದೇವದೇವೇಶನ ದಿವ್ಯಪಾದಪದ್ಮ ಕೂಡಿ 1 ಬಾಯ್ದೆರೆದು ಬರೆ ಭ್ರಮೆಗೆ ಸಾಯಗೊಂಬುದು ಏನು ನ್ಯಾಯ ಜರೆದು ನೋಯಗೊಂಬುಪಾಯ ನಿನ್ನಾಧೀನ ಮಾಯ ಮರ್ಮಪಾಯವರಿದು ಧ್ಯಾಯಿಸೊ ನಿಧಾನ ಸೋಹ್ಯದೋರುತಿದೆ ನೋಡಿ ಸದ್ಗತಿ ಸಾಧನ 2 ಸಾವಧಾನವೆಂದು ಶ್ರುತಿ ಸಾರುತಿದೆ ನೋಡಿ ಗೋವಿಸುವ ವಿದ್ಯದೊಳು ಸಿಲುಕಿಬೀಳಬ್ಯಾಡಿ ಆವ ಪರಿಯ ಭಾವ ಕಾವ ದೈವ ನೋಡಿ ಜೀವ ಜೀವಾಗಿಹ್ಯ ಮಹಿಪತಿ ನಿಜಗೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗೃಹಸಮರ್ಪಣೆ ಪುರುಷಾರ್ಥದಾಯಿ ಶ್ರೀವರ ನೀ ನಿಲಯದಿ ಸ್ಥಿರವಾಗು ಕರುಣಾನಿಧೆ ವರದೇಶ ನಿಜಪಾದ ಸರಸೀಜ ಮಕರಂದ ನಿತ್ಯ ಪ. ಆವ ಕಾಲಕು ಸಿರಿದೇವಿಯರಸ ನೀನೆ ಕಾವಲಾಗಿರುವಿ ಎಂದು ಭಾವಶುದ್ಧದಿ ನಿನ್ನ ಸೇವಾರತಿಯನಿತ್ತು ಪಾವನಗೊಳಿಪ ಬಂಧು ಕಾರುಣ್ಯಸಿಂಧು ವಿರಿಂಚಿ ಭವಾಹಿ ವಿಪತಿ ಸು- ರಾವಳೀಶಯವೆಂದು ರವಿಮುಖ ದೇವ ಋಷಿಗಣ ದೇವ್ಯ ನಿನ್ನ ಕ- ನಿತ್ಯ ಬಯಸುವೆ 1 ನಿನ್ನ ಕಟಾಕ್ಷ ಸಂಪೂರ್ಣವಾಗಿರಲೆನ- ಗನ್ಯರ ಭಯವಿಲ್ಲವು ಪರಮ ಸುಗು- ಣಾರ್ಣವ ನಿನಗೆಲ್ಲವು ತಾ ಸೇರಿರುವವು ಪನ್ನಗಾರಿ ಧ್ವಜ ಪರೇಶ ಮ- ಹೋನ್ನತಿ ಪ್ರದ ಮೂಜಗದ್ಭವ ನಿನ್ನ ದಾಸರದಾಸನೆಂದರಿ- ದೆನ್ನ ಮೇಲ್ಕಡೆಗಂಣನಿರಿಸುತ 2 ಪಂಕಜಾಲಯ ಭೂವರ ಕಿಂಕರಾಧಾರನಿ:- ಶಂಕ ಕೃಪಾಕರ ಅಂಕಿತ ಕೊಡು ಸಾದರ ಬಲಭದ್ರ ಸೋದರ ಶಂಕರನೆ ಶುಭಕರ ಕಮಲವನು ಶಂಕಿಸಿದೆ ಶಿರದಲ್ಲಿ ಕಲ್ಪಿಸಿ ಅಂಕುರಿತ ಭಯ ಬಿಡಿಸು ಸಕಲಾ- ಶಂಕವಾರಣ ವೆಂಕಟೇಶ್ವರ 3
--------------
ತುಪಾಕಿ ವೆಂಕಟರಮಣಾಚಾರ್ಯ
ಗೆಲವ ನೀಡೆನಗೆ ಇಹ್ಯದ ಗೆಲವ ನೀಡೆನಗೆ ಪ ಗೆಲವ ನೀಡಿಯೆನ್ನ ಮಲಿನಬಿಡಿಸಿ ನಿನ್ನ ವರ ದಿವ್ಯಪಾದನಳಿನದೊಲುಮೆಯಿತ್ತು ಅ.ಪ ಎಡರು ಆವರಿಸಿದ ಕಾಲದಿ ದೈರ್ಯವ ದಯಮಾಡೊ ಸಡಗರಸಿರಿ ಬಂದ ಕಾಲದಿ ಶಾಂತಿ ವಿನಯ ಕೊಡೊ ಕಡುಜವ್ವನದಲಿ ದುಡುಕನುಕೊಡದಿರು ಪಿಡಿದು ನೇಮವನು ಬಿಡದ ಛಲವನಿತ್ತು 1 ಧರಣಿಯ ಸುಖಕಾಗಿ ಎನ್ನಿಂ ಪುಸಿಯ ನುಡಿಸದಿರೋ ಹರಣಪೋದರು ಪರರಿಗೆ ದೇಹಿಯೆನಿಸದಿರೋ ಪರಮಹರುಷದಿಂದ ಹರಿಶರಣರು ಮೆಚ್ಚಿ ಶಿರವದೂಗುವಂಥ ನಿರುತವರ್ತನೆಯಿತ್ತು 2 ಸತತದಿ ಕರ್ಣಕ್ಕೆ ಹರಿಕಥೆ ಕೀರ್ತನೆ ಕರುಣಿಸೊ ಪತಿತಪಾವನವೆನಿಪ ಭಜನಾನಂದವ ಪಾಲಿಸೊ ಕ್ಷಿತಿಯೋಳಧಿಕ ಸದುಗತಿ ಮೋಕ್ಷಾಧಿ ಪತಿ ಶ್ರೀರಾಮ ನಿಮ್ಮ ಪಾದಭಕ್ತಿಯಿತ್ತು 3
--------------
ರಾಮದಾಸರು
ಗೊಲ್ಲರಾ ಮನೆಯ ಪೊಕ್ಕುಗುಲ್ಲು ಮಾಡುವುದೇನಲ - ಬಲುಲಲ್ಲೆ ಮಾಡುವುದೇನಲ ಪ ಹಾಲು ಮೊಸರು ಘೃತವು ನೆಲುವಿನಮೇಲೆ ಇಟ್ಟ ಬೆಣ್ಣೆಯಬಾಲಕರಿಗಿಲ್ಲದಲೆ ಸುರಿದುಹಾಲುಗಡಿಗೆಯನೊಡೆದಲ 1 ಸಣ್ಣ ಮಕ್ಕಳ ಕಣ್ಣ ಮುಚ್ಚಿಹುಣ್ಣಿಮೆ ಬೆಳುದಿಂಗಳಲಿಬಣ್ಣ ಬಣ್ಣದ ಮಾತನಾಡಿಸಣ್ಣ ಕೆಲಸಕ್ಕೆಳೆದಲ 2 ಸುದತಿಯೊಬ್ಬಳು ದಧಿಯ ಮಥಿಸುತಒದಗಿದ ಬೆಣ್ಣೆಯ ತೆಗೆಯಲುಮದನ ಕದನಕೆ ಕೆಡಹಿ ಮಾನಿನಿಒದರಿದರು ನೀ ಬಿಡೆಯಲ 3 ಕಿಟ್ಟ ನಾ ನಿನಗೆಷ್ಟು ಹೇಳಲಿದುಷ್ಟ ಬುದ್ಧಿಯ ಬಿಡೆಯಲಇಷ್ಟು ಹರಳಿಸಿ ರಟ್ಟು ಯಾತಕೆಬಿಟ್ಟು ಮಧುರೆಗೆ ಪೋಗೆಲ4 ಕೇಶವ ವಿಠ್ಠಲ ನಿನ್ನನುಕೂಸು ಅಂದವರ್ಯಾರಲೊ - ಹಸುಗೂಸು ಅಂದವರ್ಯಾರಲೊದೇಶದೊಳಗೆ ವಾಸವಾಗಿಹ ಬೇಲೂರು ಚೆನ್ನಕೇಶವ 5
--------------
ಕನಕದಾಸ
ಗೋ ಪಾಲಾ ಶೃತಬಾಲಾ | ಮುನಿಕುಲಾನತಬಲ ಪ ಶ್ರೀಪದುಮಾಯುತ ನಯನಾ | ವನಮಾಲ ಕೃಪಾಲವಾಲ ಅ.ಪ [ಶ್ರೀ]ಪಾದಾಂಬುಜಾತ ಪ್ರೀತಲೋಲ [ಗೋಪೀಜನ] ವಿಮಲಚರಿತಾ ಶ್ರೀಯುತ ಅ.ಪ ದೇವಾನತ ದೇವೇಶಾ ಮುರಳೀರವ ಲೋಲಾ | ಗೋವರ್ಧನೋದ್ಧಾರ ಲೀಲಾ | ಶ್ರೀವರ ವನಮಾಲಾ | ಪಾವನ ಪದಜಲಜಾಯುತ ಲೋಚನ | ಶ್ರೀ ಗೋವಿಂದ ಮಾಂಗಿರೀಶ ಭಾವುಕಜನ ಚೈತನ್ಯ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗೋಕರ್ಣೇಶಂ ಗೌರೀಶಂ ವಂದೇ ನತಜನಭಯನಾಶಂ ಪ. ಪಾಕಹ ಮದನದಿವಾಕರಪ್ರಮುಖ ದಿ- ವೌಕಸಕೃತ ಜಯಜಯಘೋಷಂ ಅ.ಪ. ಕರ್ಪೂರಕ್ಷೀರಗೌರಾಂಗಂ ಕಲ್ಯಾಣನಿಧಿಂ ನಿಸ್ಸಂಗಂ ದರ್ಪಕದರ್ಪಹರಂ ತಮುದಾರಂ ಸರ್ಪಫಣಾಮಣಿಹಾರಂ ಘೋರಂ 1 ಲಕ್ಷ್ಮೀನಾರಾಯಣಸಖಂ ಸುರಾ- ಧ್ಯಕ್ಷಂ ಶಿವಂ ವಿಗತಶೋಕಂ ದಕ್ಷಾಧ್ವರವಿಧ್ವಂಸನಚತುರಂ ಮೋಕ್ಷಜ್ಞಾನದಂ ಸಮ್ಮೋಹಭಿದಂ2
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಗೋಕರ್ಣೇಶಂ ಗೌರೀಶಂ ವಂದೇ ನತಜನಭಯನಾಶಂಪ. ಪಾಕಹ ಮದನದಿವಾಕರಪ್ರಮುಖ ದಿ- ವೌಕಸಕೃತ ಜಯಜಯಘೋಷಂಅ.ಪ. ಕರ್ಪೂರಕ್ಷೀರಗೌರಾಂಗಂ ಕಲ್ಯಾಣನಿಧಿಂ ನಿಸ್ಸಂಗಂ ದರ್ಪಕದರ್ಪಹರಂ ತಮುದಾರಂ ಸರ್ಪಫಣಾಮಣಿಹಾರಂ ಘೋರಂ1 ಲಕ್ಷ್ಮೀನಾರಾಯಣಸಖಂ ಸುರಾ- ಧ್ಯಕ್ಷಂ ಶಿವಂ ವಿಗತಶೋಕಂ ದಕ್ಷಾಧ್ವರವಿಧ್ವಂಸನಚತುರಂ ಮೋಕ್ಷಜ್ಞಾನದಂ ಸಮ್ಮೋಹಭಿದಂ2
--------------
ತುಪಾಕಿ ವೆಂಕಟರಮಣಾಚಾರ್ಯ