ಒಟ್ಟು 2482 ಕಡೆಗಳಲ್ಲಿ , 110 ದಾಸರು , 1780 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಂಗ ಒಲಿದ ದಾಸರಾಯರ - ಪಾದಯುಗ್ಮಕಂಗಳಿಂದ ನೋಡಿದಾವರÀ - ಪಾಪಂಗಳೆಲ್ಲಹಿಂಗಿಪೋಪವಲ್ಲೊ ಸತ್ವರ - ಏನು ಪೇಳಲೀವರಾ ಪತುಂಗಮಹಿಮೆ ತೋರಿ ಜನಕೆಮಂಗಳಾವ ಕೊಡುವರಿಂಥಾ ಅ.ಪಬ್ಯಾಗವಾಟನಾಮ ಗ್ರಾಮದಿ - ನಾರಸಿಂಹಭಾಗವತಆದಿ ಶಾಸ್ತ್ರಭೋಗಿಶಯನ ಕರುಣದಿಂದಆಗ ಈಗ ಎನದೆ ಸದಾನುರಾಗ ತೋರುವಂಥ 1ಮುದದಿ ದಾಸ್ಯಭಾವದಿಂದಲಿ - ಜಗದಿ ಜನರಹೃದಯಭಾವಪೂರ್ತಿಯಿಂದಲಿ- ಪ್ರೀತಿಗೈದುಪದುಮನಾಭನ ಪ್ರೀತಿಯಿಂದಲಿ - ಗುಣಗಳನ್ನುಭುಧರಮ್ಯಾಳಸಂಗದಿಂದಮುದದಿ ಮನವ ಧರಿಸಿನಿತ್ಯಪದುಮನಾಭನ ಭಜನಿಗೈಯುತ - ತತ್ವಸಾರವದನದಿಂದುಚ್ಭಾರ ಗೈಯುತ - ತೀರ್ಥಯಾತ್ರೆಮುದದಿಕಾಯಧರಿಸಿ ಹರಿಯ ಭಜನೆಗೈದು ಸುಖಿಸಿದಂಥ2ಖ್ಯಾತ ಶುಕ್ಲ ಬಾದ್ರಪದದಿ ನವಮಿ ಜಗ -ನ್ನಾಥ ವಿಠಲಪಾದಪದುಮದಿ ಮನವೆ ಮೊದಲುಭೂತಕಾಶಮಾರ್ಗ ಸಂಗದಿ - ಹೃದಯ ಮಂಡಲಧಾತನಿಂದ ಕೂಡಿ ವಿ -ಧಾತನಾಂಡ ಭೇಧಿಸಿ ಗುರುಜಗ -ನ್ನಾಥ ವಿಠಲಪಾದಪೊಂದಿದಾ - ಈತನಂಥಆತುರಾದಿ ಕೊಡುವ ನಂದನ - ಏನು ಮಹಿಮೆವಾತದೇವನ ನಿಜಾವೇಶದಿಂದ ಯುಕ್ತರಾದ 3
--------------
ಗುರುಜಗನ್ನಾಥದಾಸರು
ರಂಗ ಕೊಳಲನೂದಲಾಗ |ಮಂಗಳಮಯವಾಯ್ತುಧರೆ-ಜ -ಪನಂಗಳು ಚೈತನ್ಯ ಮರೆದು |ರಂಗಧ್ಯಾನಪರರಾದರು ಅ.ಪಬಾಡಿದ ಮಾಮರಗಳು ಗೊನೆಯೊಡೆದವು |ತೀಡುತ ಮಾರುತ ಮಂದಗತಿಗೊಯ್ಯೆ ||ಬಾಡಿದ ಬರಲು ಫಲದ ಗೊಂಚಲು |ಪಾಡಲೊಲ್ಲವಳಿಕುಲಗಳು ||ಹೇಡಿಗೊಂಡವು ಜಕ್ಕವಕ್ಕಿ ಗಿಳಿ ಮಾ-|ತಾಡದೆ ಕಳೆಗುಂದಿದವು ಕೋಗಿಲೆ ||ಓಡಾಟ ವೈರಾಟ ಬಿಟ್ಟು ಖಗಮೃಗ |ಗಾಢ ನಿದ್ರಾವಶವಾದವು 1ಕೆಳಗಿನುದಕ ಉಬ್ಬೇರಿ ಬಂದುವು |ತುಳುಕಿ ಚೆಲ್ಲಾಡಿ ನಿಂದಳು ಯಮುನೆ ||ಮಳೆಯ ಮೋಡೊಡ್ಡಿ ಮೇಘಾಳಿ ಧಾರಿಟ್ಟುವು |ಕಲುಕರಗಿ ಕರಗಿ ನೀರಾದುವು ||ನಳಿನಚಂಪಕನಾಗಪುನ್ನಾಗಪಾ-|ಟಲ ಸೇವಂತಿಗೆ ಕುಂದ-ಮೊಲ್ಲೆ ಮಲ್ಲಿಗೆ ಬ-||ಕುಲ ಮಾಲತಿ ಜಾಜಿ ಪರಿಮಳಗೂಡಿ |ನೀಲಾಂಗನಂಘ್ರಿಗೆ ನೆರೆದುವು 2ಕೆಚ್ಚಲು ಬಿಗಿದು ತೊರೆದ ಮೊಲೆಯೊಳು |ವತ್ಸದೊಡಲಾಸೆಜರಿದುಎಳೆಹಲ್ಲ||ಕಚ್ಚದಲ್ಲಿಗಲ್ಲಿ ನಿಂದುವು ತಮ್ಮಯ |ಪುಚ್ಚವ ನೆಗಹಿ ನೀಂಟಿಸಿ ||ಅಚ್ಯುತನಾಕೃತಿ ನೋಡಲು ಸುರರಿಗೆ |ಅಚ್ಚರಿಯಾಯಿತು ಆವು ಕಂಡಾನಂದ ||ಪೆಚ್ಚಿ ಮುಕುಂದನ ಲೀಲಾವಿನೋದಕೆ |ಮೆಚ್ಚಿ ಕುಸುಮವ ಸುರಿದರು 3ಮುದ್ದು ಮೋಹನನ ಮಂಜುಳ ಸಂಗೀತ |ಸದ್ದನಾಲಿಸಿ ಗೋಪಾಂಗನೆಯರೆಲ್ಲ ||ಬುದ್ಧಿ ಸೂರಾಡಿ ತಮ್ಮಾಲಯವನೆ ಬಿಟ್ಟು |ಎದ್ದು ಪರವಶರಾದರು ||ಸಿದ್ದ ಮುನಿಜನರಿದ್ದ ಸಮಾಧಿಯಿಂ-|ದೆದ್ದೆದ್ದು ಕುಣಿದೆದ್ದರು ಎದುರಾಗಿ ||ಗದ್ದುಗೆಯರಸನ ಒಲಿಸಿಕೊಂಡರು |ಗೆದ್ದರು ಭವದ ಸಮುದ್ರವನು 4ಶ್ರೀಮನೋಹರ ಗೋಪಾಲ ಮೂರುತಿ |ಆ ಮಧು ಕುಂಜ ವನದಿ ತ್ರಿಭಂಗಿಯಲಿ ||ಹೇಮಾಂಬರವುಟ್ಟು ಗೀರುಗಂಧ ಕಸ್ತೂರಿ |ನಾಮ ಮುಕುಟದ ಬೆಳಕಿನಲಿ ||ದಾಮವನಮಾಲೆ ಶ್ರೀವತ್ಸಕೌಸ್ತುಭ|ಸ್ವಾಮಿ ಪುರಂದರವಿಠಲರಾಯನ |ರಾಮಶ್ರಿ-ಗುಂಡಶ್ರಿ ಮೇಘರಂಜನೆ ಪಾಡಿ |ಸಾಮಗಾನಪ್ರಿಯ ನಮೊ ಎಂದರು 5
--------------
ಪುರಂದರದಾಸರು
ರಂಗ ಕೊಳಲನೂದುವ ಮಂಗಳಸ್ವರಕೆ ಮೂಜ-ಗಂಗಳೂ ಮೋಹಿಸುತಿಹವಲ್ಲೇ ನೋಡೆ ಏ ಸಖಿ ಪಗೋಕುಲದಂಗನೆಯರು ಮೈಮರೆದು ತಮ್ಮ ಮನೆ ಕದ |ಹಾಕದೇ ಹರಿಯೆಲ್ಲಿಹನೆಂದರಸುತ ಬಂದರು ||ಗೋ ಕರುವೇನೆಂದೊಬ್ಬಳು ಹಾಕುವಳೆತ್ತಿಗೆ ದಾಳಿ |ನೂಕು ನೂಕಾಗುತ್ತ ಹಲವಂಗನೆರೋಡಿದರು 1ಕಣ್ಣಿಗೆ ಕುಂಕುಮ ಫಣಿಯಲ್ಲಿ ಕಾಡಿಗೆ ಕೆಲವರು |ಬಣ್ಣದ ಸೀರೆಯ ಮಂಡೆಗೆ ಸುತ್ತುತ್ತ ಕೆಲವರು ||ಚಿನ್ನಗೆ ಹಾಲೆರೆವೆವೆಂದು ಗಂಡರ ಪಿಡಿದು ಒಲ್ಲೆ- |ನೆನ್ನೆ ಕೇಳದಲೆ ನೆಲಕಿಕ್ಕುವರು ಕೆಲವರು 2ಹರಿಯ ನೋಡುವ ಭರದಿಂದ ಆಕಳಿವೇಯೆಂದು |ಹರದೇರು ಅತ್ತೇರಿಗೆ ಕುಟ್ಟಿ ಕಣ್ಣಿಯಿಕ್ಕೊರು ||ಒರಲಿದರೆ ನಾವಾಕಳಲ್ಲವೆಂದು ಕೇಳದಲೆ |ತ್ವರದಿ ಮಾಧವನ ನೋಡಬೇಕೆಂದೋಡಿದರು 3ಕಾಲಿಕೆಕಟ್ಟಾಣಿಆಣಿಮೆಂಟು ಪಿಲ್ಯಾ ಸರ ಮಾಡಿ |ಮಾಲೆಯೆಂದು ಹಾಕುವರು ಕೊರಳಿಗೆ ಕೆಲವರು ||ಹಾಲಿಗೆ ಮೂಗುತಿ ಕಾನ ಬಾವುಲಿ ಮೂಗಿಗೆ ತಮ್ಮ |ಬಾಲೆರೆಂದಾಕಳ ಕರುವೆತ್ತಿಕೊಂಡೋಡುವರು 4ಹೇಳಿದರೆ ಮಾತುಕೇಳಿಕಳ್ಳ ಕೃಷ್ಣಾ ಸಿಕ್ಕೆಂದು ಮೈ |ಘಾಳಿಗೊಂಡಾಳುವರಾ ಕೈ ಕಂಭಕೆ ಕಟ್ಟುವರು ||ಕೀಲ ಕಂಕಣ ಬಾಗಿಲ ಬೀಗವೆಂಜೋಡಿಸಿ ಲಕ್ಷ್ಮೀ |ಲೋಲನಂಘ್ರಿಯ ಕಾಣಬೇಕೆಂದೆಲ್ಲರು ಓಡಿದರು 5ಎಲೆ ಯಶೋದೆಯಮ್ಮ ನಿನ್ನ ಮಗ ಮೊನ್ನೆ ನಿಶಿಯಲ್ಲಿ |ಮಲಗಂಟು ಬಿಚ್ಚಿ ಒಲ್ಲೆನೆನ್ನೆ ಕೇಳಾ ಥರವೆ ||ಬಲು ಶಬ್ದೆನೆಂದು ಕೇಳಲತ್ತೆಗೊಂದು ಪರಿಯಿಂದ |ತಿಳಿಸಿದೆನೆಂದೊಬ್ಬಳು ಅತ್ತೆಯ ಮುಂದೆ ಹೇಳುವಳು 6ಬೀದಿಯೊಳ್ ಹೇಳಿದಂತೆ ನಮ್ಮನಿಗೆ ಬಾಯೆಂದೊಬ್ಬಳು |ಮಾಧವನಿವನೆಂದು ತನ್ನ ಪುರುಷಘೇಳುವಳು ||ಆ ದಿನ ನಾವೇಕತ್ರದಲ್ಲಿರೆಗಂಡಬರಲು ಸ್ತ್ರೀ |-ಯಾದಿ ಸೈ ಸೈಯೆಂದೊಬ್ಬಳು ಪತಿಗೇ ಪೇಳುವಳು7ಬತ್ತಲೆ ಕೆಲವರು ಸೀರ್ಯುಟ್ಟವರ್ಕೆಲವರು ಉ- |ನ್ಮತ್ತರು ಕೆಲವರು ಪಾಡುತ್ತಲಿ ಕೆಲವರು ||ನೆತ್ತಿಹಿಕ್ಕುವರು ಕೆಲವರು ಹೂಸಿಕೊಂಡವರು |ತುತ್ತು ಬಾಯೊಳಿಟ್ಟವರೂ ತ್ವರದಿ ಓಡಿದರು 8ಒಂದಾಡುತೊಂದಾಡುವರುನಿಂದುನಿಂದಾಲಿಸುವರು |ಮಂದಿಗಂಜದಲೆ ಹರಿದು ಹರಿದು ಹೋಗುವರು ||ಕಂದಗಳೆತ್ತಿದವರು ಕರುಗಳೆತ್ತಿದವರು |ಚಂದಿರ ವದನೆಯರು ತವಕದಿ ಓಡುವರು 9ಹೆಂಣುಗಳಾ ಆವಾವ ಕೆಲಸದೊಳಿದ್ದಿರ್ಯಾ ಹ್ಯಾಂಗೆ |ಬನ್ನಿರೆನ್ನ ಬಳಿಗೆಂಬಂತೆವೇಣುಕೇಳಿಸುವುದು ||ಪನ್ನಗಶಯನನಾಜೆÕಯಂತೆ ಪ್ರವರ್ತಿಸಿದ ಮೇಲೆ |ಅನ್ಯಾಯವೇ ಸತಿಯರದು ಕೇಳಿರಿ ಕವಿಗಳು 10ಕರಿಸಿಂಹಗಳು ಹುಲಿತುರುತುರುಗಮಹಿಷಿ|ಮರೆದು ವೈರತ್ವ ಹರಿಸ್ವರ ಕೇಳುತಿಹವು ||ಕರಗುತಿಹವು ಕಲ್ಲು, ಸುರರಾಕಾಶದಿ ಪುಷ್ಪ |ಸುರಿಸುತಿಹರು, ಗಂಧರ್ವರು ಪಾಡುತಿಹರು11ಅಂಬುಜಾಕ್ಷಗೆ ಕೆಲವಂಗನೆರು ಆಲಿಂಗಿಸುವರು |ಚುಂಬಿಸುವರು ಕೆಲವರುನಿಂದುಪ್ರಾರ್ಥಿಸುವರು ||ಶಂಬುಪಾಣಿ ಕರುಣಿಸಿ ಇಬ್ಬರಿಗೊಬ್ಬೊಬ್ಬನಾಗಿ |ಹಂಬಲ ಪೂರೈಸುವಂತೆ ರಾಸಕ್ರೀಡೆಯಾಡಲು 12ಕಾಮನಾ ಪೂರ್ತಿ ಮಾಡುತಿರೆ ಹೆಂಗಳೆರು ಇಂಥ |ಸ್ವಾಮಿಯಮ್ಮ ಕೈ ಸೇರಿದ ನೋಡಿರೆಂದ್ಯೋಚಿಸಲು ||ಭಾಮಿನಿಯರಹಂಕಾರ ತಿಳಿದಾಕ್ಷಣವೊಬ್ಬಳ |ಪ್ರೇಮದಿ ಕೊಂಡೊಯ್ದು ಎಲ್ಲರಿಗೆ ಮಾಯವಾದನು13ಬಹುರೂಪದೊಳೊಮ್ಮಿಂದ ಒಮ್ಮೆ ಬಂದೂ ರೂಪವಿಲ್ಲ |ಮಹೀಪಾಲನೇನಾದನೋ ಆವಳನ ಕೊಂಡೊಯ್ದನು ||ಅಹಿವೇಣಿಯರೇ ನಿಮ್ಮ ನಿಮ್ಮ ಗುಂಪಿನೊಳಗೆ ಎ- |ಷ್ಟಿಹಿರೊ ನಾರೆರು ಎಣಿಸಿರೆ ಯಂದಾಳೊಬ್ಬಳು 14ಒಂದೆರಡು ನೂರಿನ್ನೂರೈನೂರು ಸಾವಿರೆಂದೆಣಿಸಿ |ಮಂದಗಮನೆಯೊಬ್ಬಳಿಲ್ಲವಮ್ಮ ನಮ್ಮೊಳೆಂದರು ||ಇಂದ್ರಜಾಲದವಳೇ ಆವನು ಅಂಥ ವಂಚಕನೆ |ಸಂಧಿಸಿತಿಬ್ಬರಿಗೆ ಮುಂದೇನುಪಾಯವೆಂದರು 15ಹರಿಹೋದಕಷ್ಟೊಂದು ಅವಳ ನಾ ವೈದ ದುಃಖೊಂದು |ಸ್ಮರಣೆದಪ್ಪಿ ಗಂಡರೊಡನೆ ಆಡಿದ್ದೊಂದು ||ಸ್ಮರನ ಬಾಣ ಬಾಧೆಯೊಂದು ಬೆರದಿತಿನಿತುಕ್ಲೇಶ|ಹರದೆರಚ್ಯುತನರಸುತವನಹೊಕ್ಕರು 16ಹರಿಒಬ್ಬಳ ಒಯ್ದನು ಕಂಡಿರಾ ಯಿದ್ದಿರ್ಯಾ ಎಂದು |ನರರೆಂಬೊ ಭ್ರಾಂತಿಯಿಂದ ಮರನ ಕೇಳುವರು ||ಸ್ಮರಣೆ ಬಂದಾಗ ವಮ್ಮೆ ಗಿಡ ಕೇಳುತಿಹವೆಲ್ಲೆ |ಹರಿಹರಿ! ಜೀವಿಸುವದೆಂತು ಹೇಳಿರೆಂಬೊರು 17ಅತ್ತ ಎಲ್ಲರ ವಂಚಿಸಿ ಯನ್ನ ರೂಪಾಧಿಕ ನೋಡಿ |ಎತ್ತಿಕೊಂಡು ಬಂದ ರಂಗನೆಂಬೊಳಾಕಿ ಮುದದಿ ||ಸತ್ಯ ಸಂಕಲ್ಪವಳ ಮನತಿಳಿದು ತಿಳಿಯದಂತೆ |ತೊತ್ತಿಗ ನಂದದಿ ಹೆಗಲೊಳಗಿಟ್ಟು ಪೋಗಲು 18ದಣಿದೆ ಹಸಿದೆ ನೀರಡಸಿದೆನೆಂದರವಳ |ಅಣುಗನಂದದಿಂದಿಳಿಸೇರಿಸಿ ಕೊಂಬುವನು ||ಗೊನೆ ಹಣ್ಣು ನಿಲಕದೆಂದರೆ ನೀಡಿ ಕೊಡುತಲಿ |ಘನಸುಖ ಬಡಿಸುತ ದಕ್ಕಿದಂತಿರುವನು 19ಸಾವಿರ ಪ್ರಕಾರಾ ಘೋರಿಸಿದರೂ ನಗುತಲೆ ಇಹ |ಕೇವಲ ದಕ್ಕಿದನೆಂದು ನಿಶ್ಚಯ ತಿಳಿದಳು ||ಮಾವಿರಿಂಚೇಶ ಜಂಭಾರಿಗಳನು ವಂಚಿಸುವಂಥ |ದೇವನು ಈ ನಾರಿ ಅಹಂಕಾರವ ತಾಳುವನೆ20ಸೊಕ್ಕು ಬಂತಿವಳಿಗಿನ್ನು ಶೀಘ್ರ ತಗ್ಗಿಸಬೇಕೆಂದು |ಚೊಕ್ಕ ಮಾವು ಪಿಡಿಸಿ ಅಪ್ರತ್ಯಕ್ಷವಾಗಲಿತ್ತಲು ||ತುಕ್ಕಿ ತುಕ್ಕ್ಯಾರಂಣ್ಯಾ ಹೆಜ್ಜೆ ಪಿಡಿದಿಲ್ಲಿಹ ಅಲ್ಲಿಹ |ರಕ್ಕಸಾರೆನುತ ಬಂದೆಲ್ಲರವಳನು ಕಂಡರು 21ಜಾರೆ ಚೋರೆ ಕುಲ್ಲೆ ಖೂಳೆ ಕುಲಕಂಟಿಕೆನವನೀತ|ಚೋರನೆಲ್ಲಡಗಿಸಿದ್ದೆ ತೋರೆಲೆ ತೋರೆಂದರು ||ಘೋರಪಾತಕಿಯ ಕುಟ್ಟಿರೆಂದು ಕೆನ್ನಿ ಕುಟ್ಟುವರು |ಗಾರುಮಾಡಿದರೆ ಬಟ್ಟಬವಣೆಹೇಳಿದಳು22ಸಮದುಃಖಿಗಳಾಗಿಹರಿಹರಿಯೆಂದೊದರಲು ಈ |ಶ್ರಮ ನೋಡಿ ಪ್ರಾಣೇಶ ವಿಠಲ ಬಂದಾಲಿಂಗಿಸಿ ||ಸುಮನಗಂಧಿಯರೆ ನಿಮ್ಮಹಂಕಾರ ಬಿಡಿರೆಂದು |ಅಮರೇಶಮುಂಚಿನಂತೆಲ್ಲರೊಳಾಡಿದನು 23
--------------
ಪ್ರಾಣೇಶದಾಸರು
ರಂಗ ರಂಗ ಎಂಬ ನಾಮವ ನೆನೆವರ |ಸಂಗದೊಳಿರಿಸು ಎನ್ನ ಪಅಂಗದೊಳ್ಲೆವರು ದೆಸೆದಸೆಗೆಳೆಯುವ |ಭಂಗವ ಬಿಡಿಸೊ ಹರಿಯೆ-ಸ್ವಾಮಿ ಅ.ಪಹರೆಕೃಷ್ಣ ಎಂದೆಂಬೆಜಿಹ್ವೆತಾನಿರುತಿರೆ |ಬರಿಯೆ ಮಾತಾಡುವೆ ನಾ ||ಗುರು-ಹಿರಿಯರ ವಂದನೆಗೆ ಕರ-ಶಿರವಿರೆ |ಗುರುವಹಂಕಾರತನ ||ಪರಿಪರಿ ಪುಷ್ಪದಲಿ ಪೂಜಿಸದೆ ಅಚ್ಯುತನ |ಮರೆತಿಹೆ ನಾನನುದಿನ |ಅರಿವ ನೋಡಿದರೆ ಎನ್ನಲಿ ಕಾಣೆನೈ ದೇವ |ಮೊರೆಹೊಕ್ಕೆ ಸಲಹೊ ಎನ್ನ-ಸ್ವಾಮಿ 1ವೇದ ಶಾಸ್ತ್ರ ಪುರಾಣ ನಾಮವ ನೆನೆವರ |ಚೋದ್ಯವ ನಾನರಿಯೆನು ||ಹಾದಿಬೀದಿ ತಿರುಗುವ ಜಾರಸ್ತ್ರೀಯಳ ಕಂಡು-ವಿ-|ನೋದಗಳ ಮಾಡುತಿಹೆನು ||ಮಾಧವಗೋವಿಂದ ಎನ್ನದೆ ಕಾಲನ |ಬಾಧೆಗಳಿಗೊಳಗಾದೆನೊ ||ಈ ಧರೆಯೊಳಗೆನ್ನ ರಕ್ಷಿಸುವವರ ಕಾಣೆ |ಶ್ರೀಧರ ನೀನೆ ಸಲಹೊ-ಸ್ವಾಮಿ 2ಮಡದಿ-ಮಕ್ಕಳಿಗೆಲ್ಲ ಒಡವೆ ಬೇಕೆಂಬುವ |ಕಡುಲೋಭತನವ ಬಿಡಿಸೊ ||ಅಡಿಗೆ ಅಡಿಗೆ ನಾರಾಯಣನೆಂಬ ನಾಮವನು |ನುಡಿವ ನಾಲಗೆಗಿರಿಸೊ ||ಪೊಡವಿಯೊಳುಪುರಂದರವಿಠಲರಾಯನೆ ನಿನ್ನ |ಅಡಿಯದಾಸನೆನಿಸೊ-ಸ್ವಾಮಿ 3
--------------
ಪುರಂದರದಾಸರು
ರಂಗನೊಲಿದ ನಮ್ಮ ಕೃಷ್ಣನೊಲಿದ |ಅಂಗನೆ ದ್ರೌಪದಿಗೆ ಅಕ್ಷಯವಸ್ತ್ರವನಿತ್ತುಪಕರಿಯಪುರದ ನಗರದಲ್ಲಿ ಕೌರವರು ಪಾಂಡವರು |ಧರೆಯನೊಡ್ಡಿ ಲೆತ್ತವಿಡಿದು ಜೂಜನಾಡಲು ||ಪರಮಪಾಪಿ ಶಕುನಿ ತಾನು ಪಾಸಿನೊಳಗೆ ಪೊಕ್ಕಿರಲು |ಧರುಮರಾಯ ಧಾರಿಣಿ - ದ್ರೌಪದಿಯ ಸೋತನು 1ಮುದ್ದುಮೊಗದ ದ್ರೌಪದಿಯ ಮುಂದೆಮಾಡಿ ತನ್ನಿರೆಂದು |ತಿದ್ದಿ ತನ್ನ ಮನ್ನೆಯರಿಗೆ ತಿಳಿಯಹೇಳಿದ ||ಮುದ್ರೆಮನ್ನೆಯರು ಬಂದು ದ್ರೌಪದಿಯ ಮುಂದೆ ನಿಂತು |ಬುದ್ಧಿಯಿಂದಲೆಲ್ಲವನು ಬಿನ್ನಹಮಾಡಲು 2ಅಮ್ಮ ಕೇಳೆ ಅರಸುಗಳು ಅಚ್ಚ ಪಗಡೆ ಪಂಥವಾಡಿ |ಹೆಮ್ಮೆಯಿಂದ ಜೂಜಿಗಿಟ್ಟು ಲೆತ್ತವಾಡಲು ||ಧರ್ಮರಾಯ ಸೋತನೆಂದು ಸತ್ಯವಚನಿ ಕೌರವಂಗೆ |ನಿಮ್ಮ ನಿಜದಿ ಸೇರಿ ಆಗ ಕೊಟ್ಟರೆಂದರು 3ಪಟ್ಟಪದವಿ ಅವರಿಗಾಗಿ ಬಡವರಾಗಿ ಇರುವೆವೆಂದರೆ |ಕಿಟ್ಟ ಪಗಡೆ ಪಂಥ ಜೂಜಿದೆಲ್ಲಿ ಒದಗಿತು ? ||ದುಷ್ಟ ಕೌರವನು ಎನ್ನ ಲಜ್ಜೆ - ನಾಚಿಕೆಯ ಕೊಂಡು |ಭ್ರಷ್ಟ ಮಾಡುವನು ಎಂದು ಬಳಲಿ ದ್ರೌಪದಿ 4ಬಾಗಿ ಬಳುಕಿ ಬೆದರಿ ಬಿಕ್ಕಿ ಕಣ್ಣ ನೀರನುದುರಿಸುತಲಿ |ಮಾಗಿಯ ಕೋಗಿಲೆಯಂತೆಕಾಯ ಒಲೆಯುತ ||ಆಗ ಕೃಷ್ಣನಂಘ್ರಿಗಳನು ಅಂತರಂಗದಲಿ ನೆನೆದು |ಸಾಗಿಸಾಗಿ ಹೆಜ್ಜೆ ಇಡುತ ಸಭೆಗೆ ಬಂದಳು 5ವೀರಕರ್ಣ ಅಶ್ವತ್ಥಾಮ ವಿದುರ ಶಲ್ಯ ಭಗದತ್ತರು |ಕ್ರೂರ ಕೌರವ ದುಃಶಾಸನ ಗುರುಹಿರಿಯರು ||ಸಾರುತಿಪ್ಪ ಭಟರು ಪರಿವಾರ ರಾವುತರ ಕಂಡು |ಧಾರಿಣಿಗೆ ಮುಖವ ಮಾಡಿ ನಾಚಿನಿಂತಳು 6ಚೆಂದದಿಂದ ದುರ್ಯೋಧನ ಚದುರಿ ದ್ರೌಪದಿಯ ಕಂಡು |ಮುಂದರಿಯದೆ ಮುಗುಳುನಗೆಯ ಮಾತನಾಡಿದ ||ಅಂದು ಸ್ವಯಂವರದಲ್ಲಿ ಐವರಿಗೆ ಆದ ಬಾಲೆ |ಇಂದು ಎನ್ನ ಪಟ್ಟದರಸಿಗೊಪ್ಪಿದೆಯೆಂದನು7ಮಲ್ಲಿಗೆಯನು ಮುಡಿಯೆ ನಾರಿ ಮುದ್ದುಮೊಗದ ಒಯ್ಯಾರಿಚೆಲ್ಲೆಗಂಗಳ ದ್ರೌಪದಿಯೇ ಬಾರೆ ಎಂದನು ||ಬಿಲ್ಲು ಎತ್ತಲಾರದವನೆ ಬಂಡಣ ಕಾದದಿದ್ದವನೇ |ಹಲ್ಲುಕೀಳುವರೈವರು ಬೇಡವೆಂದಳು 8ಬಟ್ಟೆಬಡಕರೈವರಿಗೆ ಮಿತ್ರೆಯಾಗುವುದು ಸಲ್ಲ |ಪಟ್ಟಿಮಂಚಕೊಪ್ಪುವಂತ ಬಾರೆ ಎಂದನು ||ಕೆಟ್ಟಮಾತನಾಡದಿರೊ ಕ್ರೋಧದಿಂದ ನೋಡದಿರೊ |ರಟ್ಟೆಕೀಳುವರೈವರು ಬೇಡವೆಂದಳು 9ಅಡವಿತಿರುಕರೈವರಿಗೆ ಮಡದಿಯಾಗುವುದು ಸಲ್ಲ |ತೊಡೆಯ ಮೇಲೆ ಒಪ್ಪುವಂತೆ ಬಾರೆ ಎಂದನು ||ಬೆಡಗುಮಾತನಾಡದಿರೊ ಭೀಮಸೇನನ ಗದೆಯು ನಿನ್ನ |ತೊಡೆಯ ಮೇಲೆ ಒಪ್ಪುವದು ಬೇಡವೆಂದಳು 10ಅಚ್ಚ ಪೊಂಬಣ್ಣದ ಬೊಂಬೆ ಆನೆಯಂತೆ ನಡೆವ ರಂಭೆ |ಅಚ್ಚ ಮುತ್ತಿನಂತೆ ಬಿಂಬೆ ಬಾರೆ ಎಂದನು ||ಹೆಚ್ಚು - ಕುಂದನಾಡದಿರೊ ಪರರ ಹೆಣ್ಣ ನೋಡಿದಿರೊ |ಚುಚ್ಚಿ ಹಾಕುವರೈವರು ಬೇಡವೆಂದಳು 11ಎಷ್ಟುಬಿಂಕ - ಬಡಿವಾರವು ಹೆಣ್ಣ ಬಾಲೆಗಿವಳಿಗೆಂದು |ಸಿಟ್ಟಿನಿಂದ ದುರ್ಯೋಧನ ಸಾರಿ ಕೋಪಿಸಿ ||ಉಟ್ಟ ಸೀರೆ ಸೆಳೆಯಿರಿವಳಉಬ್ಬು ಕೊಬ್ಬು ತಗ್ಗಲೆಂದು |ದೃಷ್ಟಿಯಿಂದ ದುಃಶಾಸಗೆ ಸನ್ನೆ ಮಾಡಿದ 12ದುರುಳ ದುಃಶಾಸನ ಬಂದು ದ್ರೌಪದಿಯ ಮುಂದೆ ನಿಂತು |ಕರವ ಪಿಡಿದು ಸೆರಗಹಿಡಿದು ನಿರಿಯ ಸೆಳೆಯಲು ||ಮರುಳು ಆಗದಿರೋ ನಿನ್ನ ರಕ್ತದೊಳಗೆ ಮುಡಿಯನದ್ದಿ |ಕರುಳ ದಂಡೆಯನ್ನೆ ಮಾಡಿ ಮುಡಿವೆನೆಂದಳು 13ಗುಲ್ಲುಗಂಟಿ ಹೆಣ್ಣೆ ನಿನ್ನ ಕಾಡಿ ಬಳಲಿಸುವೆನು ಎಂದು |ಗಲ್ಲದಲ್ಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ನಿಲ್ಲೊ ನಿಲ್ಲೊ ಪಾಪಿ ನಿನ್ನ ನಾಲಗೆ ಎರಡಾಗಿ ಸೀಳಿ |ಪಲ್ಲಿನಲ್ಲಿ ಕೇಶ ಹಿಕ್ಕಿಕೊಂಬೆನೆಂದಳು 14ಬೆನ್ನಿನಲಿ ಪೆಟ್ಟನಿಕ್ಕಿ ಭಂಡುಮಾಡುವೆನು ಎಂದು |ಕೆನ್ನೆಯಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ರನ್ನೆ ವೀರಬೊಬ್ಬೆಯಿಕ್ಕಿ ರಭಸದಿಂದ ಸಾರುತಲಿ |ಪನ್ನಗಶಯನ ಕೃಷ್ಣ ಕೃಷ್ಣ ಕಾಯೊ ಎಂದಳು 15ಮಚ್ಚ ಕೂರ್ಮವರಹ ಕಾಯೊ, ಮುದ್ದು ನಾರಸಿಂಹ ಕಾಯೊ |ಹೆಚ್ಚಿನ ವಾಮನನೆ ಕಾಯೊಭಾರ್ಗವ ಕಾಯೊ ||ಅಚ್ಯುತ ರಾಮಕೃಷ್ಣ ಕಾಯೊ ಬೌದ್ಧ ಕಲ್ಕಿರೂಪ ಕಾಯೊ |ಸಚ್ಚಿದಾನಂದ ಸ್ವಾಮಿ ಕಾಯೊ ಎಂದಳು16ಸಜ್ಜನರ ಪ್ರಿಯನೆ ಕಾಯೊ ಸಾಧುರಕ್ಷಕನೆ ಕಾಯೊ |ನಿರ್ಜರವಂದಿತನೆ ಕಾಯೊ ನರಹರಿ ಕಾಯೊ |ಅರ್ಜುನನ ಸಖನೆ ಕಾಯೊ ಆನತಪಾಲಕನೆ ಕಾಯೊ |ಲಜ್ಜೆ - ನಾಚಿಕೆಯ ಕಾಯೊ ಸ್ವಾಮಿ ಎಂದಳು 17ಸಿಂಧು ಸಾಗರದ ಶಯನ ದ್ರೌಪದಿಯ ಮೊರೆಯಕೇಳಿ |ಅಂದು ಉಟ್ಟ ವಸ್ತ್ರಗಳುಅಕ್ಷಯ ವೆಂದನು||ಒಂದು ಎರಡು ಮೂರು ನಾಲ್ಕು ಕೋಟ್ಯಸಂಖ್ಯ ಸೀರೆಗಳು |ನೊಂದು ಬೆಂದು ದುಃಶಾಸನು ನಾಚಿಕುಳಿತನು 18ನೋಡಿದರು ದ್ರೌಪದಿಯ ಮಾನರಕ್ಷ ಲೀಲೆಗಳನು |ಮಾಡಿದರು ಮಾಧವನ ಮುದ್ದು ಸ್ತೋತ್ರವ ||ಮೂಢ ಕೌರವನ ಕೂಡಮಾನಿನಿ ದ್ರೌಪದಿಯು ಪಂಥ - |ವಾಡಿ ತನ್ನ ಪತಿಗಳೈವರನ್ನು ಗೆಲಿದಳು19ಕೇಶಮುಡಿಗಳನ್ನಕಟ್ಟಿ ಕ್ಯೆಯಕಾಲಮಣ್ಣನೊರಸಿ |ಸಾಸಿರನಾಮದ ಕೃಷ್ಣನು ಸುರರ ಪಾಲಿಪ |ವಾಸಿಯುಳ್ಳ ಕೃಷ್ಣ ಎನ್ನ ವಹಿಸಿ ಮಾನಕಾಯ್ದನೆಂದು | ಸಂತೋಷದಿಂದ ದ್ರೌಪದಿಯು ಮನೆಗೆ ಬಂದಳು 20ಇಂತು ಆ ದ್ರೌಪದಿಯ ಮಾನರಕ್ಷ ಲೀಲೆಗಳನು |ಸಂತತದಲಿ ಹಾಕಿಕೇಳಿ ನಲಿವ ಜನರಿಗೆ |ಸಂತಾನ ಸೌಭಾಗ್ಯ ಸಕಲಭೀಷ್ಟೆಗಳನು ಕೊಡುವ |ಕಂತು ಜನಕ ನಮ್ಮ ಪುರಂದರವಿಠಲನು21
--------------
ಪುರಂದರದಾಸರು
ರನ್ನ ಚಿನ್ನದಕೋಲಹೊನ್ನು ಮುತ್ತಿನಕೋಲಪನ್ನಂಗಶಯನ ನಲಿದು ಒಲವೊ ಕೋಲ ಪ.ಇಂದಿರೇಶಗೆ ರಾಯ ಗಂಧ ಕಸ್ತೂರಿ ತೀಡಿಮಂದಾರಮಲ್ಲಿಗೆ ಮಾಲೆ ಚಂದದಲ್ಹಾಕಿ1ಶ್ರೀದೇವಿಯರಿಗೆ ಭದ್ರಾ ಕ್ಯಾದಿಗೆ ಮಲ್ಲಿಗೆ ಮುಡಿಸಿಊದು ಪರಿಮಳ ಮ್ಯಾಲೆ ಮೋದವ ಬಟ್ಟು 2ಅಂಬುಜಾಕ್ಷರಿಗೆ ರಾಯ ತಾಂಬೂಲ ಅಡಿಕೆಯ ಕೊಟ್ಟುಕಂಬುಕಂಠರಿಗೆ ಎರಗಿ ಸಂಭ್ರಮದಿಂದ 3ಸರಸಿಜಮುಖಿಯರಿಗೆ ಅರಿಷಿಣಕುಂಕುಮಹಚ್ಚಿಸರಸದ ವಸ್ತಗಳ ದ್ರೌಪತಿ ಅರಸಿಗೆ ಇಟ್ಟು 4ಪಚ್ಚಮುತ್ತಿನ ವಸ್ತ ಅಚ್ಯುತನಂಗದಲೆ ಇಟ್ಟುಉಚಿತ ವಸ್ತ್ರಗಳ ಕೊಟ್ಟು ಸ್ವಚ್ಚ ಮನದಿ 5ರುಕ್ಮಿಣಿ ಅರಸಿಯರಿಗೆ ಅನಘ್ರ್ಯ ವಸ್ತ್ರವಕೊಟ್ಟುಶೀಘ್ರದಿಂದ ಎರಗಿ ದ್ರೌಪತಿ ಹಿಗ್ಗಿದಳು 6ತಂದೆ ರಾಮೇಶಗೆ ಮಂದಗಮನೆಯರೆಲ್ಲಗಂಧ ಕುಂಕುಮ ವೀಳ್ಯ ವಸ್ತ ಅಂದದಿಕೊಟ್ಟು 7
--------------
ಗಲಗಲಿಅವ್ವನವರು
ರಾಜರ ನೋಡಿರೈ ಇನತತಿತೇಜರ ಪಾಡಿರೈ ಪಪೂಜಕÀರಾ ಸುರಸನ್ನುತರ ಅ.ಪವರಪಾಷ್ರ್ಣಿದ್ವಯ ಪರದಲಿ ಶೋಭಿಪಜಾನುಗಳೋ ಶಶಿಬಿಂಬಗಳೋ 1ಕಟಿತಟವೋಕೇಸರಿನಡುವೋತುಂಬಿದ ಕರುಣನ ಗುಂಭಸುನಾಭೀ -ತಾವರೆಯೋ ಗಂಗಾಸುಳಿಯೋ 2ಸುಂದರಕುಕ್ಷಿಸುಚಂದನ ಚರ್ಚಿತದಂಡಗಳೋಕರಿಶುಂಡಗಳೋ3ಯತಿಕುಲವರ್ಯನ ಸ್ಮಿತಯುತವಕ್ತ್ರಕ್ಷಿತಿಸುರ ವಂದ್ಯನ ಅತಿ ಸುಂದರ -ನಯನಗಳೋ ನೈದಲಿಯುಗಳೋ 4ಘಣೆಯೋ ಅಕ್ಷತಮಣಿಯೋ 5ಮಂದಿರವೆನಿಸುವ ವೃಂದಾವನಶುಭವೃಂದಾರಕಘನವೃಂದದಿ ರಾಜಿಪದಾತಾಜಗದೊಳು ಖ್ಯಾತಾನೀತಾ ಭಾವಿ ವಿಧಾತಾ 6ಶಿಷ್ಟರ ಸುಮನೋಭೀಷ್ಟದ ಗುರುಜಗ -ನ್ನಾಥವಿಠಲ ದೂತಾ 7
--------------
ಗುರುಜಗನ್ನಾಥದಾಸರು
ರಾಮ ನಾಮಾಮೃತವ ಕೊಂಬವರೆಲ್ಲ |ಪ್ರೇಮದಿಂದಚ್ಯುತ ಪೇಟೆಗೆ ಬನ್ನಿರೆ ಪಒಮ್ಮನವೆರಸಿ ಬನ್ನಿ |ನಿಮ್ಮ ಮನಕೆ ಬಂದಂತಳೆದು ಕೊಳ್ಳಿ ||ರಾಮಟಿಂಕೆಯ ಸಲಿಸಿ ಶ್ರೀ ಕೃಷ್ಣನೆಂಬ |ಧರ್ಮದ ಸಂತೆ ನೆರೆದಿದೆ ಬನ್ನಿ 1ಉಂಟು ನಾಲ್ಕು ಕುದುರೆಗಳು |ಎಂಟಾನೆಯ ಬಿರುಬಲೆಯಲ್ಲಿ ಕಟ್ಟಬಹುದು ||ಸಾಲವರ್ಣದ ಪಟ್ಟಿಯು ಏಳಿರೆ |ಏಳುಲೋಕವು ಬಲ್ಲದು 2ಬೆಲೆಯಿಲ್ಲದ ಮುತ್ತುಂಟು |ಏಳೇಳ್ಪುಟಿಯ ಹೊಳೆವಪರಂಜಿಯ ಚಿನ್ನವುಂಟು ||ಥಳಥಳಿಸುವ ನೀಲಿಯ ಕೊಂಬುವರೆಲ್ಲ |ನಳಿನನಾಭನ ಸನ್ನಿಧಿಗೆ ಬನ್ನಿ 3ಎರಡು ಕಾಶಿಯಲಳೆವ ಕೊಳಗವು |ಪಿರಿದುದೊಂದು ಕಿರಿದೊಂದು ಉಂಟಲ್ಲಿಗೆ ||ಗರಳವವೊರಿಸಲು ರತ್ನವು |ಮರುತಾಶ್ರಯನ ಸನ್ನಿಧಿಗೆ 4ಆರಂಗಡಿಯ ಸುಟ್ಟು |ಸೂರೆಮಾಡಿ ಏಳು ಎಂಟು ಹಟ್ಟಕೊರವನೊ...ದುದು ||ಸಾರಿಸಿ ನವವಿಧ ಶುಚಿಯ ಹೇಳಿದ |ಸರ್ವಾತ್ಮಗೆ ಸೌದೆಯ 5ಸುಂಕಿಗರೈವರಿಗೆ ಹರುಷದಿಂದ |ಪಂಕಜನಾಭನ ಚೀಲ ತೋರಿ ||ಶಂಕೆಯಿಲ್ಲದೆ ನಡೆವ ಅವರನೆಲ್ಲ |ವಂಚಿಸಿ ಎದೆಯ ಟೊಣೆದು ಹೋಗುವಾ 6
--------------
ಪುರಂದರದಾಸರು
ರಾಯರ ನೋಡಿರೈ ಶುಭತಮ ಕಾಯರ ಪಾಡಿರೈ ಪತೋಯಜ-ಪತಿನಾರಾಯಣ ಪದಯುಗxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಭೃಂಗಾ - ಭüಕ್ತಕೃಪಾಂಗಾ ಅ.ಪಮಂದಸ್ಮಿತಯುತ ದ್ವಂದ್ವ ಓಷ್ಠ,ಶ್ರುತಿಕಂಧರಯುತ ಪೂರಂದರ - ಕರಿಕರಸುಂದರ ಹೃದಯದಿ ನಾಮಾ ಹಚ್ಚಿಹÀ ಪ್ರೇಮಾ 1ಸ್ವಸ್ತಿಕಾಸನ- ಸ್ಥಿತ-ಮೋದಕೃತವಿನೋದವಸ್ತ್ರದಿ ಶೋಭಿಪಗಾತ್ರಶುಭಚರಿತ್ರಸ್ವಸ್ಥ ಮನದಿ ಪ್ರಶಸ್ತ ಹರಿಯಪಾದಸ್ವಿಸ್ತಿಕ-ಯುಗಳ- ಧ್ಯಾನ ಮಾಡುವಙ್ಞÕನಸ್ವಸ್ತಿದನೆನಿಸಿದ ಭೂಪಾ ಭವ್ಯ ಪ್ರತಾಪ 2ಕುಟಲವಿಮತರ ಪಟಲಾಂಧಕಾರಕೆಪಟುತರದಿನಮಣಿ ರೂಪಾ ನಿಜ ಜನ-ಸುರಪಾಸ್ಪುಟಿತ-ಹಾಟಕ- ಚಂದ್ರಾ ಸದ್ಗುಣಸಾಂದ್ರಚಟುಲಜನರ ಪರಿಪಾಲಾ ಕರುಣವಿಶಾಲಾಕಿಟಿರದ-ಭವ- ನದಿ - ತಟ-ಕೃತ - ಮಂದಿರಧಿಟ ಗುರುಜಗನ್ನಾಥಾ ವಿಠಲ ದೂತಾ 3
--------------
ಗುರುಜಗನ್ನಾಥದಾಸರು
ಲಾಲಿಪಂಪಾಂಬಿಕೆಲಾಲಿಭ್ರಮರಾಂಬಿಕೆಲಾಲಿಬಗಳಾಂಬಿಕೆಲಾಲಿಲಾಲಿಎಂದು ಪಾಡಿರಿ ಸಾಧು ಸಜ್ಜನರೆಲ್ಲದೇವಿ ತಾನೇ ಎಂದುಲಾಲಿಪಅದ್ವಯಾಗಮ ದ್ಯುತಿಗೋಚರ ಅನಾದಿಅಚಲಾನಂದವೇಲಾಲಿಶುದ್ಧ ಸಮ್ಯಕ್ ಜ್ಯೋತಿರ್ಮಯ ಸ್ವರೂಪಸುಚರಿತ್ರ ನಿಶ್ಚಲಲಾಲಿಚಿದ್ಬಯಲಿನೊಳು ಹೃದಯ ತೊಟ್ಟಿಲೊಳುಭಾವಹಾಸಿಗೆಯಲ್ಲಿ ಪವಡಿಸಿಹೆಲಾಲಿಸಿದ್ಧರಿ ಮಲಗಿನ್ನು ಜೋಗುಳ ಪಾಡುವೆಶ್ರೀ ಮಹಾಲಕ್ಷ್ಮಿಯೇಲಾಲಿ1ನಿತ್ಯನಿರ್ಗುಣ ನಿಷ್ಕಲಂಕ ನಿರ್ವಿಕಲ್ಪನಿಜನಿತ್ಯ ನಿರ್ಮಳೆಲಾಲಿಸತ್ಯ ವಸ್ತುವೆ ಸನಾಥ ವಿಶೋತ್ಪತ್ತಿಸರ್ವಪರಬ್ರಹ್ಮರೂಪಲಾಲಿಪ್ರತ್ಯಗಾತ್ಮಳೆ ಪೂರ್ಣಪರಮ ಪರತರವಂದ್ಯೆಪಾವನ ಚಾರಿತ್ರೆಲಾಲಿಕರ್ತೃನೀ ಅನಂತ ಬ್ರಹ್ಮಾಂಡಾದಿಗಳಿಗೆಕರುಣಾ ಸಮುದ್ರವೇಲಾಲಿ2ಪೃಥ್ವಿಅಪ್ಪುತೇಜವಾಯುರಾಕಾಶಕ್ಕೆಪೃಥಕಾಗಿ ಹೊಳೆದಿಹಳೆಲಾಲಿಸತ್ವರಜತಮಸು ಮೂರರೊಳಗೆ ನೀಸಾಕ್ಷಿರೂಪದಲಿರುವೆಲಾಲಿವೇದ ವೇದಾಂಗಗಳ ವಾಗ್ರೂಪಿನಲ್ಲಿನೆಲೆಸಿ ರಂಜಿಪಳೆಲಾಲಿತತ್ವವಿಂಶತಿ ಪಂಚಶರೀರಗಳೊಳಗೆ ನೀತೊಳ ತೊಳಗಿ ಬೆಳಗುತಿಹೆಲಾಲಿ3ಜಾಗೃತ ಸ್ವಪ್ನ ಸುಷುಪ್ತಿ ಮೂರವಸ್ಥೆಜನಿತದಿ ಕಾಣಿಸಿಲಾಲಿಪ್ರಾಜÕತೈಜಸವಿಶ್ವಮೂರು ಮೂರುತಿಯಾಗಿಪರಿಣಮಿಸಿ ತೋರುವೆಲಾಲಿಶೀಘ್ರದಲಿ ಸದ್ಭಾವ ಸಚ್ಛಿಷ್ಯರಾದರ್ಗೆಸ್ವಾನಂದ ಸುಖವೀವೆಲಾಲಿರೌದ್ರದಲಿ ಭುಗುಭುಗು ಭುಗಿಲೆಂಬ ಕಳೆಗಳುಅತ್ಯುಗ್ರದಿ ಝಂಗಿಸುವೆಲಾಲಿ4ವಿದ್ಯಾವಿದ್ಯವ ತೋರಿ ದೃಶ್ಯಾದೃಶ್ಯಕೆ ಮೀರಿಅದೃಶ್ಯರೂಪ ಶ್ರೀ ಲಕ್ಷ್ಮೀಲಾಲಿಸಿದ್ಧಿಗಳೆಂಬುವ ಛೇದಿಪ ಹರಿಹರಸರಸಿಜೋದ್ಭವ ಮಾತೆಲಾಲಿಸಿದ್ಧ ಪರ್ವತವಾಸ ಸಾಹಸ್ರದಳ ಮಧ್ಯೆಶ್ರೀ ಬಗಳಾಮುಖಿಲಾಲಿಸದ್ಗುರು ಚಿದಾನಂದಅವಧೂತಬಗಳಾಂಬ ಸಗುಣನಿರ್ಗುಣಮೂರ್ತಿಲಾಲಿ5
--------------
ಚಿದಾನಂದ ಅವಧೂತರು
ಲಿಸಂಗವಾಗಲಿ ಸಾಧು ಸಂಗವಾಗಸಂಗದಿಂದ ಲಿಂಗದೇಹ ಭಂಗವಾಗಲಿ ಪ.ಅಚ್ಯುತಾಂಘ್ರಿ ನಿಷ್ಠರಾದ್ಯದೃಚ್ಛಲಾಭ ತುಷ್ಟರಾಧನಿಶ್ಚಯ ಜ್ಞಾನವಂತರಾದ ಅಚ್ಚ ಭಾಗವತರನಿತ್ಯ1ತಂತ್ರಸಾರಅಷ್ಟಮಹಾಮಂತ್ರ ಪರಿಪೂರ್ಣ ಸ್ನೇಹಯಂತ್ರದಿಂದ ಜಗತ್ಸ್ವಾತಂತ್ರ್ರ್ಯನ ಗುರಿ ಮಾಡುವವರ 2ಪಂಚಸಂಸ್ಕಾರ ಭೇದ ಪಂಚಕಯುಕ್ತರಾಗಿ ಪ್ರಪಂಚಸೂತ್ರಪ್ರಸನ್ನವೆಂಕಟ ಪಂಚಬಾಣನಯ್ಯನವರ3
--------------
ಪ್ರಸನ್ನವೆಂಕಟದಾಸರು
ವಂದಿಸಿದರೆ ವಂದ್ಯರು ಪೂಜಿತರು ಮುಕುಂದಗೋವಿಂದ ಶ್ರೀಹರಿಯನ್ನುಎಂದೆಂದು ಕುಂದದಾನಂದವೈದಿಸುವಇಂದಿರೆಯರಸ ಭವಬಂಧಮೋಚಕನ ಪ.ಹತ್ತಶ್ವಮೇಧಾವಭೃಥಸ್ನಾನ ಮಾಡಲುಮತ್ರ್ಯರ್ಗೆ ಪುನರ್ಜನ್ಮಗಳಿಲ್ಲವೊಸತ್ಯಭಾಮಾಧವನಿಗೆ ನಿಷ್ಕಾಮದಿ ನಮಿಸಿಮತ್ತೊಮ್ಮೆ ನಮಿಸೆ ಮುಕ್ತಿಗೆ ಸಾಧನ 1ಕೋಟಿಸಹಸ್ರ ತೀರ್ಥಗಳಲಿ ಮಿಂದುಕೋಟಿಸಹಸ್ರ ವ್ರತಗಳಾಚರಿಸೆಕೋಟಿ ಭಾಂತಕಗೆ ನಮಿಸಿದ ಫಲಕೆ ಸರಿ ಪಾಸಟಿಷೋಡಶಕಳೆಯೊಳೊಂದಲ್ಲ2ಹೇಳೆನೆ ಇಂದಾದರು ನಮಿಸಿ ಶ್ರೀಲೋಲಶಾಙ್ರ್ಗಪಾಣಿಯನಸಾಲು ಜನ್ಮದಘವ ಹಾಳುಮಾಡಿ ಮುಕ್ತಿಓಲಗಕೆ ಕರೆವ ವೈಷ್ಣವ ಜನರ 3ಉರಶಿರದೃಷ್ಟಿಲಿ ಮನವಾಚದಲಿಚರಣಕರಗಳಲಿ ಜಾನುಗಳಲಿಧರೆಯಲಿ ಅಷ್ಟಾಂಗಪ್ರಣಾಮ ಮಾಳ್ಪರ್ಗೆಹರಿದು ಹೋಗೆ ಪಾಪವರ ಮುಕ್ತಿಈವ4ಸರುವಾಂಗವ ಧರೆಗೊಂದಿಸಿ ಭಕುತಿಲಿಹೊರಳಾಡಿ ಭೂಮಿಲಿ ಪರವಶದಿಹರಿಗೆ ನಮಿಸಲು ಮೈಗೊರೆದ ಧೂಳಿಯ ಕಣಾಪರಿಮಿತ ಸಹಸ್ರಾಬ್ದ ಪರಮಾಣ ಪದವಕ್ಕು 5ಸಿರಿಅಜಭವೇಂದ್ರಸುರರುಮಹಾಮುನಿನಿಕರನೃಪಮನುಜೋತ್ತಮರೆಲ್ಲಪರಮಭಕುತಿಲಿ ನಮಿಸೆ ಹರಿವಶನಾಗುವಹರಿಜನಕೆ ಮುಕ್ತಿಪಥಕಿದೆ ಪಾಥೇಯ 6ಅರ್ಚಿತ ಕೃಷ್ಣನ ನೋಡುತಾನಂದಾಶ್ರುಹುಚ್ಚನಂತೆ ನಮಿಸಿ ನಗುತ ಸುರಿಸಿಅಚ್ಯುತಾನಂತ ಸದ್ಗುಣನಿಧಿ ಭಕ್ತಪ್ರಿಯನಿಚ್ಚಪ್ರಸನ್ವೆಂಕಟನೆಂದುಚ್ಚರಿಸಿ7
--------------
ಪ್ರಸನ್ನವೆಂಕಟದಾಸರು
ವಂದಿಸಿದವರೆ ಧನ್ಯರು - ನಮ್ಮ - |ಇಂದಿರಾಪತಿಗಡ್ಡ ಬೀಳುತಲೊಮ್ಮೆ ಪ.ಒಂದೊಂದು ಸ್ತೋತ್ರದಿ ಒಂದೊಂದು ಮಂತ್ರದಿ |ಒಂದೊಂದು ನಾಮವ ನೆನೆಯುತಲಿ ||ಮಂದರೋದ್ಧರನನು ಕುಂದದೆ ಪೂಜಿಸಿ |ವಂದಿಸುವಾನಂದದಿಂದ 1ಬಿಟ್ಟು ಲಜ್ಜೆಯನು ದೃಷ್ಟಿಸಿ ನೋಡುತ |ವಿಟ್ಠಲ ವಿಟ್ಠಲ ಎನುತ ಮನ - ||ಮುಟ್ಟಿ ಮಾಡುವ ಭಕ್ತಿ - ಸ್ತೋತ್ರ - ಸ್ತುತಿಗಳಿಂದ |ಅಷ್ಟಾಂಗದಲಿ ವಂದನೆಯ ಮಾಡುತಲಿ 2ಸಿರಿಲಕ್ಷ್ಮೀಪತಿ ಶರಣಾಗತರನು |ಕರುಣಿಸೆಂದೆನುತಕರವ ಮುಗಿದು ||ಹರುಷ ಪುಳಕದಿಂದ ಹೊರತ ದೇಹವನು ಶ್ರೀ - |ಪುರಂದರವಿಠಲರಾಯನ ಚರಣಕೆ 3
--------------
ಪುರಂದರದಾಸರು
ವನಜನಾಭನ ಧಾಳಿ ಘನವಾಯಿತಿಂದಿಲಿಂದಮನೆಯೊಳು ನಿಲ್ಲಲಾರೆವಮ್ಮ ಪಚಿನ್ನನ ಸುದ್ದಿನಿತ್ಯಹೇಳುವರು ಹತ್ತರಗೂಡಾ |ಹನ್ನೊಂದೆನ್ನ ಬೇಡವಮ್ಮ ||ಅನ್ಯಾಯದ ಮಾತುಹುಸಿಹುಟ್ಟಿಸಿಯಾಡಿದರೆ ನಮ್ಮ |ಸಣ್ಣವರಾಣೆ ಗೋಪೆಮ್ಮ 1ಪೋರರಾಟಿಕೆಯಾದರೆ ಜನನೋಡೆ ನಿರ್ಭಯದಿ |ಕ್ಷೀರವ ಕುಡಿಯಬೇಕಮ್ಮ ||ಆರೂ ಮನೆಯೊಳಿಲ್ಲದ ಸಮಯದಲ್ಲಿ ಪಾಲು |ಸೋರೆ ಕದ್ದೊಯ್ಯುತಿದ್ದನಮ್ಮ2ಚಿಕ್ಕವರನ್ನು ರಂಬಿಸಿ ಸಕ್ಕರೆ ಕೊಟ್ಟು ಕದ್ದು |ರೊಕ್ಕವ ತನ್ನಿರೆಂಬುವನಮ್ಮ ||ಮಕ್ಕಳಾಟಿಕೆ ಆದರಾಯಿತೆ ನಿನ್ನ ಕಂದ |ರೊಕ್ಕವನೇನು ಮಾಡ್ಯಾನಮ್ಮ 3ಏಕಾಂತ ಮನೆಯೊಳು ಸರು ಹೊತ್ತಿನಲ್ಲಿ ಬಂದು |ಶ್ರೀಕಾಂತನಡಗಿದ್ದನಮ್ಮ ||ಹೇ ಕಾಂತೆ ನಿನ್ನ ಸಲಿಗಿಲ್ಲದೆಂತು ಬಂದನೆಂದು |ಆ ಕಾಂತ ಸಂಗ ಬಿಟ್ಟನಮ್ಮ 4ನೀರೊಳು ನೆರಳೆಂದು ತಿಳಿಯದ ಮಗುವಿಗೆ |ಪೋರನೆಳೆದು ತಾಯಂಬೊನಮ್ಮ ||ಹಾರುತಿರಲು ಸ್ವಾಮಿಯ ದಯೆಯಿಂದ ಕಂಡು ಒಬ್ಬ |ನಾರಿ ಕರಕೊಂಡು ಬಂದಳಮ್ಮ 5ತರಳರಿಗೆಲ್ಲ ಇದರಂತೆ ಹತ್ತಿರೆಂದು ಹೇಳಿ |ಹರಿವಂದು ಹತ್ತಿಕೊಂಬೊನಮ್ಮ ||ಕರುಗಳೆಲ್ಲವು ಹೀಗೆ ಹತವಾಗಿ ಪೋಪವು |ತುರುಗಳ ಗಡಹವಮ್ಮ6ಬಾಲನ ಮನೆಯೊಳಗಿರ ಹೇಳಿ ಉದಕವ |ವಾಲಯಕೆ ತರಹೋದೆನಮ್ಮ ||ಮೂಲೇಶ ಹುಡುಗನ ಕೈಯಕಟ್ಟಿಮನೆಯೆಲ್ಲ |ಹಾಳು ಮಾಡಿಯೇನೋ ತಂದನಮ್ಮ 7ಹುಡುಗರ ಅಂಬೆಯಾಗಿಯೇರಿಸಿಕೊಂಡಾಡಿಸಿ |ಕೆಡಹಿ ಕೈಕಾಲು ಮುರಿದನಮ್ಮ ||ಬಡವರೆಂದರೆ ಪುನಃ ಬಿಡದಲೆ ತಾ ಹತ್ತಿ |ನಡುವ ನೋಯಿಸೀಹ ನೋಡಮ್ಮ 8ಬಾಲೆ ಅದೇನು ಕಾರಣವೋ ತಿಳಿಯದು ನಮ್ಮ |ಮೂಲೆಯಲಡಗಿದ್ದನಮ್ಮ ||ಛೀ ಲಕುಮೀಶ ನಡೆಯೆಂದೆ ಕೈ ಸಂಧಿಸದಾಕಳ |ಮೊಲೆ ಉಂಡಿದ್ದನಮ್ಮ 9ಗಂಡಅತ್ತೆಯ ಮನೆಘೋಗಿ ನಡುವ ಹೆಣ್ಣಾ |ಪುಂಡ ಬಂದಪ್ಪಿಕೊಂಡನಮ್ಮ ||ಕಂಡು ನಾನಿದು ತರವೇನೆಲೆ ರಂಗಾಯೆನ್ನಲು |ಭಂಡು ಮಾಡಿದನು ನೋಡಮ್ಮ 10ಭ್ರಷ್ಟ ಮಾತಲ್ಲವೆ ಬಾಣಂತಿ ಮಂಚದಡಿ ಕೆಂಡ- |ವಿಟ್ಟರೆ ಕಾಸಿಕೊಂಡನಮ್ಮ ||ಥಟ್ಟನೆ ಕಂಡಂಜಿ ಪ್ರಾಣಾಂತಿಕ ಆಯಿತು ಪ್ರಾಣೇಶ |ವಿಠಲನಿಂಥವ ಕಾಣಿರಮ್ಮ 11
--------------
ಪ್ರಾಣೇಶದಾಸರು
ವಾಸುಕಿಶಯನನೆ ವೆಂಕಟಗಿರಿ |ವಾಸನೆಯಜ್ಞಾದ್ಯವತಾರನೆ |ಮೇಶಾ ನರಸಿಂಹಾ ಹಸಿಗೇಳೂ ಪಬೊಮ್ಮಾ ಶಂಕರ ಮುಖ ವಂದಿತ |ಸಮ್ಮೀರವಾಹನಗರುಡಧ್ವಜ |ಅಮ್ಮರೇಶಾನುಜ ಶ್ರೀ ಉಪೇಂದ್ರಾ || ಉಪೇಂದ್ರದಾಮೋದರಹರಿ| ತಮ್ಮನಾ ತಮ್ಮ ಹಸಿಗೇಳೂ 1ವಾಮನ ನಾರಾಯಣಅಚ್ಯುತ|ತಾಮಸಗುಣಜನ ಸಂಹಾರಕ |ಶ್ಯಾಮಾಂಗ ಕೋಟಿ ರವಿತೇಜಾ ||ರವಿತೇಜಾ ತ್ರೈಲೋಕದಗುರುಹೇಮಾಂಗದ ವರದಾ ಹಸಿಗೇಳೂ 2ಜಲಜಾಕ್ಷನೆಕೌಸ್ತುಭಶೋಭಿತ |ಜಲನಿಧಿ ಶಯನನೆ ನರಕಾಂತಕಾ |ಬಲಿಬಂಧಿಸೀದನೆ ಪರತತ್ವಾ ||ಪರತತ್ವರವಿದರ ಗದಧರಫಲುಗುಣನಾ ಸಖನೇ ಹಸಿಗೇಳೂ 3ಕನಕಾಂಬರ ಕಶ್ಯಪರಿಪುಹರಿ|ಧನಪತಿ ಮಿತ್ರನ ಭಯ ಬಿಡಿಸಿದ |ಇನಪುತ್ರಗೊಲಿದಾ ರಘುಪತೀ ||ರಘುಪತಿ ಭಕ್ತಸುರತರುಮನಸಿಜಾ ಪಿತನೆ ಹಸಿಗೇಳೂ 4ಶತಯಾಗನ ಗರ್ವ ವಿಭಂಜನ |ಕ್ಷಿತಿವಂದಡಿ ಮಾಡಿದವನೇ |ಸುತನಲ್ಲಿ ಪಾಲು ಕುಡಿದಾನೆ ||ಕುಡಿದಾನೆ ರುಗ್ಮಿಣಿವಲ್ಲಭಪತಿತಾ ಪಾವನ್ನಾ ಹಸಿಗೇಳೂ5ಝಗ ಝಗಿಸುವ ಪೀತಾಂಬರದುಡಿ |ಗಿಗಳಿಂದಲಿ ಹೊನ್ನುಡದಾರದಿ |ಮಿಗಿಲಾದ ವೈಜಯಂತೀ ವನಮಾಲೀ ||ವನಮಾಲಿ ಕೊರಳೊಳಗೊಪ್ಪುವಜಗದೀಶ ಕೃಷ್ಣಾ ಹಸಿಗೇಳೂ 6ಗಂಗೆಯ ಚರಣದಿ ಪಡದಿಹ ಬಹು |ಮಂಗಳ ಮೂರುತಿ ಶ್ರೀ ವಾಮನಾ |ಜಂಗುಳಿ ಹೆಣ್ಣುಗಳಾ ಒಲಿಸೂತಾ ||ಒಲಿಸುತಾ ಚಿಂತಿಗಳೆಲ್ಲನುಹಿಂಗಿಸುವಾ ದೇವಾ ಹಸಿಗೇಳೂ 7ಧ್ರುವ ದ್ರೌಪದಿಯ ಸುರಜ ಪೋಷಕ |ಅವಿವೇಕ ದಶಮುಖ ವಿನಾಶಕಾ |ಲವಣಾಸುರ ಕಂಸಾ ಮುರಾ ಧ್ವಂಸೀ ||ಮುರಧ್ವಂಸೀ ಐದೊಂದಬಲೆರಾಧವವಾಸುದೇವಾ ಹಸಿಗೇಳೂ 8ಕೇಶವ ಸತ್ರಾಯಣ ಸುತ ಪ್ರಾ- |ಣೇಶ ವಿಠ್ಠಲ ದಕ್ಷಿಣವಲ್ಲಭ|ದೋಷ ರಹಿತನೆ ಅನಿರುದ್ಧಾ ||ಅನಿರುದ್ಧಾ ಭಾಗವತರಘನಾಶಾ ಪರಮಾತ್ಮಾ ಹಸಿಗೇಳೂ 9
--------------
ಪ್ರಾಣೇಶದಾಸರು