ಒಟ್ಟು 3326 ಕಡೆಗಳಲ್ಲಿ , 121 ದಾಸರು , 2343 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಹಯಗ್ರೀವ ವಿಠಲ | ಮೋಹ ಕಳೆದಿವನಾ ಪ ಸಾಹಸಿಗಗಾಭೀಷ್ಟ | ದೋಹನನು ಆಗೋ ಅ.ಪ. ಮಾಣವಕ ಭಕ್ತಿಯಲಿ | ಮಾನ್ಯರನು ಸೇವಿಸುವಜ್ಞಾನವಂತನ ಮಾಡಿ | ಪ್ರಾಜ್ಞನೆಂದೆನಿಸೋ ಜ್ಞಾನ ನಿಧಿ ನಿನ್ನೊಲಿಮೆ | ಕಾಣದಲೆ ಪರಿತಪಿಸಿಜ್ಞಾನದಂಕುರಕಾಗಿ | ಬಿನೈಸುತಿಹೆನೋ 1 ಸುಜನ ಸಂಗದಿ ಹರಿಯ | ಭಜನೆಯೊದಗಲಿ ಇವಗೆಋಜು ವಾದಿರಾಜರಲಿ | ನಿಜ ಭಕ್ತಿ ಬರಲೀಗಜ ವರದನಂಘ್ರಿಗಳ | ನಿಜ ಮನದಿ ಕಾಂಬಂಥಯಜನ ಭಜನೆಗಳೊದಗಿ | ಪ್ರಜೆಗಳಲಿ ಮೆರೆಸೋ 2 ಭೃತ್ಯ ವತ್ಸಲನೇ 3 ನಾನು ನನ್ನದು ಎಂಬ | ಹೀನ ಭಾವವ ಕಳೆದುಏನೇನು ತಾ ಮಾಳ್ಪ | ಮಾನಸಾದಿಗಳಾಪ್ರಾಣಾಂತರಾತ್ಮಕಗೆ | ದಾನ ಮಾಳ್ಪಂತೆಸಗಿಜ್ಞಾನಾಯು ರೂಪಕನ | ಮಾನ್ಯಮತ ತಿಳಿಸೋ 4 ಕೈವಲ್ಯ ಪ್ರದನೇತಾವಕನ ಸಲಹೆಂಬ | ಆವ ಭಿನ್ನಪ ಸಲಿಸೆಓವಿ ಪ್ರಾರ್ಥಿಪೆ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶ್ರೀಕರಮಾಗಿಹ ಗೋಕುಲದಲಿ ಕರು ಣಾಕರ ಕೃಷ್ಣನು ನೆಲೆಸಿರಲು ಸಿರಿ ತಾ [ಕರೆಯುವ] ಹರ್ಷದೊಳು 1 ಲಾವಣ್ಯಕೆ ಮೋಹಿಸಿ ಮನದಿ ಭಾವಜನಸ್ತ್ರದ ಬಾಧೆಯಿಂದ ಪತಿ ಭಾವದಿ ನೋಡುತ ಭರದಿ 2 ಕಾಮಿಸಿ ಕಾಡಲು ಕಾಕುತ್ಸ್ಥನು ಬಲ ರಾಮ ಸಹಜನವತಾರದಲಿ ಕಾಮಿತವಹದೆನೆ ಕಾಮಿನಿ ರಾಧಾ ನಾಮದಿ ಜನಿಸಿರೆ ಗೋಕುಲದಿ 3 ಒಂದಾನೊಂದಿನನಂದಾದಿಗಳಾ ನಂದಾನ್ವಿತಮತಿವೃತ್ತಿಯಲಿ ಒಂದಾಗಿ ಧರಾವೃಂದಾರಕರನು ವಿಂದಾರಾಧಿಪ ಭಕ್ತಿಯಲಿ 4 ನಂದನದಂತಿಹ ವನದೆಡೆಗೆ ಬಂಧುಗಳೊಂದಿಗೆ ಬಂಡಿಯನೇರಿ ಮು ಕುಂದನ ಧ್ಯಾನಿಸುತಡಿಗಡಿಗೆ 5 ಅಲ್ಲಿಗೆ ಭೂಸುರರೆಲ್ಲ ಬರಲು ಮಿತಿ ಯಿಲ್ಲದೆ ಗೋಧನ ದಾನದಲಿ ಬಲ್ಲಿದ ಭೋಜನದಲ್ಲಿ ದಣಿಸಿ ಸುಖ ದಲ್ಲಿರುತಿರಲಾ ಸಮಯದಲಿ 6 ಅಸ್ತಮಹೀಧರ ಮಸ್ತಕವನು ಸುಜ ನಸ್ತುತ ದಿನಕರನೈದಿರಲು ನಿಸ್ತುಲಮದಿ ಸಮಸ್ತರ ದೃಷ್ಟಿಗಳ ಸ್ತಗೊಳಿಸೆ ಜನ ಭಯಗೊಳಲು7 ನೆಂದು ರಾಧೆಯ ತಾ ನೋಡಿ ಎಂದರೆ ಬಂದಳು ನಗೆಗೂಡಿ 8 ಕಂದ ಬಾರೋ ಗೋವಿಂದ ಬಾ ಯದು ನಂದನ ಬಾ ಕಮಲಾಸನನ ನಂದವ ತೋರುವೆ ಶಶಿವದನಾ 9 ನೋಡಿಸುವೆನು ನೀನೊಲಿದುದನು ಬೇಡ ನಿನ್ನನೆ ಕೂಡಿಹೆನು 10 ರಾಧೆಯ ನುಡಿಗಳನಾದರಿಸುತ ಮಧು ಸೂದನ ತನ್ನಯ ಮನದೊಳಗೆ ಮೋದಚರಿತ್ರನು ಕಾಮಿನಿಗೆ 11 ಮುತ್ತನಿತ್ತು ಬಲು ಮುದ್ದಿಸಿ ಬಾಲಕ ನೆತ್ತಿಕೊಂಡು ಬಲು ಸಡಗರದಿ ನರ್ಥಿಗೆ ಸೊಕ್ಕುವ ಕಾತರದಿ 12 ಕರುಣನಾದೊಡೀಗಲೆ ಬೆರೆದು ಹರುಷದಿ ಬರುತಿರ್ದಳು ನಲಿದು 13
--------------
ವೆಂಕಟವರದಾರ್ಯರು
ಶ್ರೀಕರಾರ್ಚಿತ ವಿಠಲ | ಸಾಕ ಬೇಕಿವಳಾ ಪ ವಾಕು ಮನ್ನಿಸುತಾ ಅ.ಪ. ಕಂಸಾರಿ ತವಪಾದಪಾಂಸು ಸೇವಾ ಸಕ್ತೆ | ಸಂಶಯ ನಿರಹಿತಾಅಂಶ ಆವೇಶ ಅವ | ತಾರಗಳ ತಿಳಿಸುತಲಿಶಂಸನದಿ ತವನಾಮ | ಸಂಪ್ರೀತನಾಗೊ 1 ದುಷ್ಕರ್ಮಗಳ ಭಾದೆ | ದೂರಾಗುವಂತೆಸಗೊನಿಷ್ಕಾಮ ಕರ್ಮಕ್ಕೆ | ಮಾರ್ಗವನೆ ತೊರೋ |ಶುಷ್ಕ ಆಚಾರಗಳ | ತ್ಯಜಿಸುತ್ತ ತವನಾಮಅಕ್ಕರದಿ ಭಜಿಪಂಥ | ಚೊಕ್ಕಮನವೀಯೊ 2 ಶರ್ವವಂದ್ಯನೆ ದೇವ | ತವನಾಮ ಸಂಸ್ಕøತಿಯಸರ್ವದಾ ಸರ್ವತ್ರ | ಇವಳಿಗೊದಗಿಸುತಾಭವವನದಿ ಉತ್ತರಿಸೊ | ಭವರೋಗ ಭೇಷಜನೆದರ್ವಿಜೀವಿಯ ಕಾಯೊ | ಪವನಂತರಾತ್ಮ 3 ಸೃಷ್ಟಾದಿಕರ್ತನೇ | ಸುಗುಣಮೂರುತಿ ದೇವಕಷ್ಟಂಗಳ ಪರಿಹರಿಸಿ | ಕಾಪಾಡೊ ಹರಿಯೇಕೃಷ್ಣಮೂರುತಿ ದೇವ | ಕಾರುಣ್ಯ ಸಾಗರನೆಸುಷ್ಠಮನ ನಿಲಿಸೊ ತವ | ಚರಣದೊಳು ಹರಿಯೆ 4 ಸೂಚಿಸಲು ತೈಜಸನು | ಯೋಚನೆಯ ಕೈಕೊಂಡುವಾಚಿಸಿಹೆ ಅಂಕಿತದಿ | ದಾಸ ಸದ್ವೀಕ್ಷಾ |ಮೋಚ ಕೇಚ್ಛೆಯ ಮಾಡಿ | ಕೈಪಿಡಿಯೊ ಈಕೆಯನುಖೇಚರಾಂತಕ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶ್ರೀಗೋಪಾಲ ಕೃಷ್ಣಾತ್ಮಕ ಶ್ರೀರಾಮ ಭಜನೆ ರಾಮ ರಾಮ ಜಯರಾಮ ಪರಾತ್ಪರ | ನೌಮಿ ಪದಾಂಬುಜ ಶ್ರೀರಾಮಸೋಮ ಕುಲೋದ್ಭವ ಭೂಮ ಗುಣಾರ್ಣವ | ಕಾಮ ಪಿತನೆ ಶ್ರೀಕೃಷ್ಣ 1 ಖೂಳರ ಬಾಧೆಗೆ ಸುಜನರು ಮೊರೆಯಿಡೆ | ಪಾಲುಂಬುಧಿ ಶಯ ಶ್ರೀರಾಮಪಾಲಿಪೆನೆಂದ್ವರ ಪಾಲಿಸಿದನು | ಪಾಲಾಂಬುಧಿಶಯ ಶ್ರೀಕೃಷ್ಣ 2 ದಶಮುಖ ದೈತ್ಯನು ಲೋಕವ ಬಾಧಿಸೆ | ದಶರಥಗುದಿಸಿದ ಶ್ರೀರಾಮವಸುಧೆಯ ಭಾರವ ನೀಗುವೆನೆಂ | ದ್ವಸುದೇವ ಸುತನಾದ ಶ್ರೀಕೃಷ್ಣ 3 ಅನುಜರು ಲಕ್ಷ್ಮಣ ಭರತ ಶತೃಘ್ನರ | ಅನುಮೋದಿಸುತಲಿ ಶ್ರೀರಾಮಅನುಜನು ತಾ ಬಲರಾಮನಿಗಾಗುತ | ಅನುಜೆಯಳೊಂದಿಗೆ ಶ್ರೀಕೃಷ್ಣ4 ಶಿಶುತನ ಲೀಲೆಯ ದಶರಥಗೇ | ಕೌಸಲ್ಯಗೆ ತೋರಿದ ಶ್ರೀರಾಮಶಿಶುತನ ಲೀಲೆ ಯಶೋದೆಗೆ ನಂದೆಗೆ | ಸಂತೋಷವು ಶ್ರೀಕೃಷ್ಣ 5 ಯಾಗವ ರಕ್ಷಿಸೆ ಕರೆದೊಯ್ದನು | ಆ ಗಾಧಿಜ ನಿನ್ನನು ಶ್ರೀರಾಮಬಾಗುತ ಬಂದ ಕ್ರೂರನು ಧನು | ರ್ಯಾಗಕೆ ಒಯ್ದ ನಿನ್ನ ಶ್ರೀಕೃಷ್ಣ 6 ಮಾರ್ಗದಿ ಮಂತ್ರಗಳುಸುರಿದ ಮುನಿ | ನೈರರ್ಗಳದೀ ಶ್ರೀರಾಮಗರ್ಗಾಚಾರ್ಯನು ಭೋದಿಸೆ ಮಂತ್ರವ | ನಿರ್ಗಮಿಸಿದೆಯೋ ಶ್ರೀಕೃಷ್ಣ 7 ಪ್ರಥಮದಲಾಹುತಿ ಇತ್ತೆಯೊ ಕ್ರತುವಿಗೆ | ದಿತಿಜೆಯ ತಾಟಕಿ ಶ್ರೀರಾಮದಿತಿಜೆಯು ಪೂಥಣಿ ಅಸುವನು ಹೀರಿದೆ ಪ್ರಥಮದಿ | ಕವಳಕೆ ಶ್ರೀಕೃಷ್ಣ 8 ಅಸುರ ಸುಬಾಹುವನಳಿಯುತಲಬ್ದಗೆ | ಎಸೆದೆ ಮಾರೀಚನ ಶ್ರೀರಾಮ |ಉಸಿರನು ಹೀರಿದೆ ತೃಣವರ್ತನ ನೀ | ಅಸುರ ಶಕಟನ ಅಳಿದೆಯೊ ಶ್ರೀಕೃಷ್ಣ 9 ಚಾರು ಸುಂದರನೇ ಶ್ರೀರಾಮತೋರಿದೆ ವದನದಿ ವಿಶ್ವವ ಮಾತೆಗೆ | ಚಾರ್ವಾಂಗನೆ ಶ್ರೀಕೃಷ್ಣ 10 ವರಪದ ಶಿಲೆ ಸೋಕಲಹಲ್ಯಾ | ಶಾಪ ವಿಮೋಚನೆ ಶ್ರೀ ರಾಮವರಳೆಳೆಯುವಾಗ ಮಣಿಗ್ರೀವರ | ಶಾಪ ವಿಮೋಚನೆ ಶ್ರೀಕೃಷ್ಣ 11 ವ್ಯಾಕುಲರಾಗಿದ್ದಾ ಋಷಿಕುಲ ನಿ | ರಾಕುಲರಾದರು ಶ್ರೀರಾಮಗೋಕುಲವೂ ತವ ಲೀಲೆಗಳಿಂ ನಿ | ರಾಕುಲ ವಾಯಿತು ಶ್ರೀಕೃಷ್ಣ 12 ವೃಂದಾರಕ ವೃಂದವ ಸಲಹಿದನೂ | ಸುಂದರ ಮೂರುತಿ ಶ್ರೀರಾಮವೃಂದಾವನ ವೃಂದವ ಸಲಹೆ ದು | ರ್ವೃಂದವನಳಿದನು ಶ್ರೀಕೃಷ್ಣ 13 ಭಾಮಿನಿ ಸೀತೆಯ ಸ್ವಯಂವರ ನೇಮದಿ | ಪ್ರಾಣಿ ಗ್ರಹಣ ಶ್ರೀರಾಮಭೈಷ್ಮೀ ರುಕ್ಮಿಣಿ ಸ್ವಯಂವರ ನೇಮದಿ | ಪಾಣಿ ಗ್ರಹಣ ಶ್ರೀಕೃಷ್ಣ 14 ಭಾರ್ಗವನೂ ತಾ ನೊಂದೆಂಬುದ ನೈ | ರರ್ಗಳ ತೋರ್ದನು ಶ್ರೀರಾಮ |ವಾಕು ಸಲಿಸೆ ಬಹು ಪತ್ನಿಯರಾಳಿದ |ಏಕ ಮೇವ ತಾ ಶ್ರೀಕೃಷ್ಣ 15 ಏಕಮೇವ ತಾನೇಕ ಪತ್ನಿತ್ವವ | ಲೋಕಕೆ ತೋರಿದ ಶ್ರೀರಾಮ |ವಾಕು ಸಲಿಸೆ ಬಹು ಪತ್ನಿಯರಾಳಿದ | ಏಕಮೇವ ತಾ ಶ್ರೀಕೃಷ್ಣ 16 ರಾಜ್ಯವ ಬಿಟ್ಟನ ರಾಜ್ಯವ ಸಾರ್ದ ನಿ | ರ್ಲಜ್ಜರ ಸದೆಯಲು ಶ್ರೀರಾಮರಾಜ್ಯವ ಕಟ್ಟಿ ಸ್ವರಾಜ್ಯವ ಮಧುರೆಲಿ ನಿ | ರ್ಲಜ್ಜರ ಹನ ಶ್ರೀಕೃಷ್ಣ 17 ಭಂಜನ ಶ್ರೀಕೃಷ್ಣ 18 ದಂಡಕ ವನದಲಿ ಪುಂಡರ ದಂಡಿಸೆ | ದಂಡವ ಪಿಡಿದನು ಶ್ರೀರಾಮ |ಮಂಡೆಯ ಪಿಡಿದು ಕಂಸನ ಶಿರ | ಚೆಂಡಾಡಿದನು ಶ್ರೀಕೃಷ್ಣ 19 ಶಬರಿಯ ಭಕ್ತಿಗೆ ಎಂಜಲ ಮೆ | ದ್ದಬುಜಾಂಡೋದರ ಶ್ರೀರಾಮ |ಕುಬುಜೆಯ ಭಕ್ತಿಗೆ ವಕ್ರವ ತಿದ್ದಿದ | ಅಬುಜಾಂಡೋದರ ಶ್ರೀಕೃಷ್ಣ 20 ಕಾಯ ಛೇದ ಉ | ಪಾಯದ ಗೈದೆಯೊ ಶ್ರೀಕೃಷ್ಣ 21 ವಾಹನ ಗೈಯುತ | ಮೋಕ್ಷವನಿತ್ತನು ಶ್ರೀಕೃಷ್ಣ 22 ಸೀತೆಯ ಕಳಕೊಂಡ್ವೆಥೆಯನೆ ನಟಸಿದ | ಪೃಥ್ವೀಪತಿಯು ಶ್ರೀರಾಮಕೌತುಕ ತೋರಿದ ನಾರದಗೇ ಬಹು | ಪತ್ನಿಯರಲ್ಲಿ ಶ್ರೀಕೃಷ್ಣ 23 ಮಾಯಾ | ವೈಭವ ಪೊಗಳಿರಿ ಶ್ರೀಕೃಷ್ಣ 24 ಜೋಡಿಸಿ ಬಹು ಸೈನ್ಯವ ಹೂಡಿದ | ರಾವಣ ಸಂಗರ ಶ್ರೀರಾಮಜೋಡಿಸಿ ಬಹು ಸೈನ್ಯವ ಜರೆ ಜನು | ಹೂಡಿದ ಯುದ್ಧವ ಶ್ರೀಕೃಷ್ಣ 25 ಮುರ ನಬಕರು ಮಡಿದರು | ದೇವ ನೀ ಬಾಣವ ಬಿಡೆ ಶ್ರೀಕೃಷ್ಣ 26 ಸೀತೆಯನಗ್ನಿ ನಿವೇಶವ ಗೈಸುತ | ಪೂತಳು ಎನಿಸಿದ ಶ್ರೀರಾಮ |ಕೌತುಕಳು ವೇದ್ವತಿಯಳ ನೀ | ನಾಂತೆಯೊ ಶ್ರೀ ವೆಂಕಟ ಕೃಷ ್ಣ 27 ಪ್ರಥಮಾಂಗನು ಮಾರುತನಿಂ | ಪೃಥ್ವೀ ಭಾರವನಿಳುಹಿದೆ ರಾಮ |ಪ್ರಥಮಾಂಗನು ಭೀಮನಿಂ | ಪೃಥ್ವೀ ಭಾರವನಿಳುಹಿದೆ ಕೃಷ್ಣ 28 ಭರತನಿಂ ವಾರ್ತೆಯ ಕಳುಹಿ | ಭರತನ ಉಳುಹಿದೆ ಶ್ರೀರಾಮ |ಅರದಿ ರವಿ ಮರೆ ಮೌಡುತ ನೀ | ನರನನು ಉಳುಹಿದೆ ಶ್ರೀಕೃಷ್ಣ 29 ಸೀತೆಯ ಸಹ ಪುರಿ ಕೋಸಲೆಗೆ ನೀ | ಮಾತುಳಹಲು ಬಂದೆ ಶ್ರೀರಾಮ |ನೀತರು ನರಕನಿಂದಾ ತರುಣಿಯರ | ಪ್ರೀತಿಲಿ ತಂದೆಯೊ ಶ್ರೀಕೃಷ್ಣ 30 ಪಟ್ಟವಗಟ್ಟಲಯೋಧ್ಯಾಪುರಿಲಿ | ಶಿಷ್ಟರ ಸರ್ವರ ಮಾಡಿದೆ ರಾಮಪಟ್ಟ ಭದ್ರ ಪ್ರಭು ದ್ವ್ಯಷ್ಟಸಾಸಿರ ಪ | ತ್ನ್ಯಷ್ಟರನಾಳಿದೆ ಶ್ರೀಕೃಷ್ಣ 31 ಕುಶಲವರ್ಹ ಸುಳೆಗಳಾ ಮಗೆ | ಅಸಮ ಸಾಹಸಿಗಳ್ ಶ್ರೀರಾಮ |ಶಿಶುಗಳ್ಕøಷ್ಣಗೆ ಗಣನೆಗಸಾಧ್ಯವು | ಅಸಮ ಸಾಹಸಿಗಳ್ ಶ್ರೀಕೃಷ್ಣ 32 ರಾಜ್ಯ ಸುಭೀಕ್ಷವು ಪತಿವ್ರತೆರೆಲ್ಲರು | ವ್ಯಾಜ್ಯ ರಹಿತ ಸ್ವರಾಜ್ಯದಿ ಶ್ರೀರಾಮಪರ್ಜನ್ಯವರ್ಷಿಸಿ ರಾಜ್ಯ ಸುಭಿಕ್ಷವು | ಆರ್ಜವರು ಪ್ರಜೆ ರಾಜ್ಯದಿ ಕೃಷ್ಣ 33 ಪಾಲನ ಪಾಲನ ಶ್ರೀಕೃಷ್ಣ 34 ಭಕ್ತಲಿ ರಾಮನ ಚರಿತೆಯ ಕೇಳಿ | ಮುಕ್ತಿದನು ಕೃಷ್ಣಾತ್ಮಕ ರಾಮಭಕ್ತಿಯಿಂದಾಲಿಸೆ ಭಾಗವತಾ ಕಥೆ | ಮುಕ್ತಿದನು ಗುರು ಗೋವಿಂದ ವಿಠಲ 35
--------------
ಗುರುಗೋವಿಂದವಿಠಲರು
ಶ್ರೀದ ನರಹರಿ ವಿಠಲ | ಕಾದುಕೊ ಇವಳಾ ಪ ಸಾಧು ವಂದಿಯ ಹರಿಯೆ | ವೇದಗೋಚರನೆಅ.ಪ. ವಾಹನ ಹರಿಯ | ನಿರ್ಧಾರವನು ಸರಿಸಿಬದ್ದೆಳೆನಿಸಿಹೆ ದಾಸ | ಪದ್ದತಿಯ ಅವಳಾ 1 ಕರ್ಮನಿಷ್ಕಾಮನದಿ | ಪೇರ್ಮೆಯಲಿ ಗೈಯುತ್ತಭರ್ಮಗರ್ಭನ ಪಿತನ | ನಾಮ ಸುಧೆಯುಣುತಾಕರ್ಮಕ್ಷಯವನು ಪೊಂದಿ | ನಿರ್ಮಲಾತ್ಮಕಳಾಗಿಧರ್ಮಾಖ್ಯ ತವಪಾದ | ಪದ್ಮರತಳೇನಿಸೋ 2 ಪತಿ ಸೇವೆ ಹಿಂದೇಈತರದ ಸುಜ್ಞಾನ | ಮತಿಯಿತ್ತು ಪಾಲಿಸುತಕೃತಕಾರ್ಯಳೆಂದೆನಿಸೊ | ನತಜನ ಸುಪಾಲ 3 ವಜ್ರ ಕವಚವನೆಕರುಣಾದಿಂ ತೊಡಿಸೊ ಹರಿ | ಮರುತಂತರಾತ್ಮ 4 ಮೃಡ ವಂದ್ಯ ಹರಿಯೇಕಡು ಕರುಣಿಮನ್ಮಾತ | ಬಿಡದೆ ನೀ ಸಲಹಯ್ಯಬಡವಿಪ್ರಗೊಲಿದ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶ್ರೀಧರಾಕರ ಕಂಜ ಸೇವಿತ ಪಾದ ಪದ್ಮಜ ಪದದ ಪುರು ಕರು- ಣೋದಧಿಯೆ ಲಾಲಿಪುದು ಪಾಮರನೆಂಬ ಬಿನ್ನಪವ ಸೋದರ ಸ್ಥಿತ ಸಕಲ ಬ್ರಹ್ಮಾಂ- ಪತಿ ನೀನರಿವಿಯಾದರು ಮಾಧವನೆ ಮನದಿರವ ಪೇಳ್ವೆನು ಮನುಜಭಾವದಲಿ 1 ಸುಕೃತ ಫಲವೋ ದೋಷದೂರನೆ ನಿನ್ನ ಪದವನು ಮೀಸಲಳಿಯದೆ ಸೇವೆ ಮಾಳ್ವದು ಲೇಸುಲೇಸೆಂದು ದಾಸಕೂಟದಿ ಸೇರಿ ಮನೆಯಲಿ ವಾಸವಾಗಿರಲಿದರ ಮಧ್ಯಮ ರಾಶೆ ಬಲೆಯಲಿ ಸಿಲುಕಿದೆನು ಕರುಣಾ ಸಮುದ್ರಹರಿ 2 ತನ್ನಿಕೃಷ್ಟ ಮನೋವಿಕಾರಗ- ಳಿನ್ನು ಬಿಡದಲೆ ಪೀಡಿಸುವ ಪರಿ ಯನ್ನು ಪರಮ ಕೃಪಾಳು ನೀನೆಂದೊರವೆನಖಿಳೇಶ ಮಾನ್ನವರ ಮಧ್ಯದಲಿ ಮಾನದಿ ಎನ್ನ ಕಾಪಾಡುವದು ಭಾರವೆ ತನ್ನ ಫಲಗಳ ತಾನೆ ಕೆಡಹುವದುಚಿತವೇ ತೆಗೆ 3 ಯುಕ್ತಿಯಲಿ ನಿನ್ನಂಥ ದೇವರ ರೆತ್ತಿ ವೈದಮೃತವನು ಸುಲಭದೊಳಿತ್ತೆ ದಿವಿಜರಿಗೆ ಔತ್ತರೇಯನ ಕಾಯ್ದ ದ್ರೌಣಿಯ ನೆತ್ತಿಯೊಳಗಿನ ರತ್ನ ಭೀಮನಿ ಗಿತ್ತ ಪರಿಯನು ಪಠಿಸಿ ತಿಳಿದೆನು ಪಾವನಾತ್ಮಕನೆ 4 ಬ್ರಹ್ಮತೇಜೋ ವೃದ್ಧಿ ಬಲಿಯೊಳು ಬ್ಯಾಡ ಸಂಗರ ನಮಗೆನುತ ನಿ- ಮ್ಮಮ್ಮನೊಳ್ ನುಡಿದಂದು ಕಶ್ಯಪನಿಂದಲವತರಿಸಿ ಬ್ರಹ್ಮಚಾರಿಯ ರೂಪದಿಂದೀ ಕ್ಷಮ್ಮೆಯನು ಸೆಳೆದಿಂದ್ರಗಿತ್ತಮ- ಹಾನ್ಮಹಿಮ ನಿನಗಾವದಘಟಿತ ನೀರಜಾರಮಣ5 ನಾರದರ ನುಡಿ ನಿಜವೆನುತ ಮೂ- ರಾರು ಭಕ್ತಿಯ ತಾಳ್ದ ಮನುವಿನೊ- ಳಾರುಭಟಿಸುತ ಕಾಶ್ಯಪನು ಮದವೇರಿ ನಿಂದಿರಲು ಯಾರು ತಿಳಿಯದ ತೆರದಿ ಕಂಭದಿ ಮೃಗ ರೂಪವನು ಹೆ- ಮ್ಮಾರಿ ದೈತ್ಯನ ತರಿದು ತ್ವತ್ಪದವಿತ್ತೆ ದಾಸನಿಗೆ 6 ಏನು ಶ್ರಮವಿಲ್ಲದಲೆ ಪಿಡಿದು ದ- ಶಾನನನ ತೊಟ್ಟಿಲಿಗೆ ಕಟ್ಟಿ ಪ್ರ- ವೀಣತೆಯ ತೋರಿಸಿದ ವಾಲಿಯ ಪಕ್ಷವನು ತ್ಯಜಿಸಿ ದೀನ ಬಾಂಧವನೆಂಬ ಬಿರುದನು ದಿಟವೆ ನಿಶಿತದ್ರಾಜ್ಯ ಪದವಿಯ ಭಾನುಜನಿಗೊಲಿದಿತ್ತ ಭಕ್ತಜನಾರ್ತಿ ಭಂಜನನೆ 7 ಶಬ್ದಗೋಚರವಾದ ಕಥೆಗಳು ಬದ್ಧವೆಂಬುದು ಪೂರ್ವದನುಭವ ಸಿದ್ಧವಾಗಿಹುದೆನಗೆ ಸಜ್ಜನಲಬ್ಧಪದ ಪದ್ಮ ಬುದ್ಧಿಹೀನತೆಯಿಂದ ನುಡಿದರು ಮಧ್ವವಲ್ಲಭ ನಿನ್ನ ದಾಸನ- ನುದ್ಧರಿಸು ನೀನಲ್ಲದೆನಗಿನ್ನಾರು ಗತಿ ಹರಿಯೆ8 ಒಡೆಯರೆಂಬರನೆಲ್ಯುಕಾಣದೆ ಉಡುವದುಂಬುದಕೇನು ದೊರೆಯದೆ ಗಿಡವ ನಿಲುಕದ ಬಳ್ಳಿಯಂದದಿ ಬಡುವ ಕಷ್ಟವನು ತಡೆಯಲಾರದೆ ತಳಮಳಿಸುತಿರೆ ಪಿಡಿದು ಕರವನು ಕಾಯ್ದೆಯೆನ್ನನು ನುಡಿವದೇನಖಿಳಾಂಡ ನಾಯಕ ನಿನ್ನ ಮಹಿಮೆಯನು 9 ಮಾರಿಯಂದದಿ ಮಧ್ಯದೊಳಗೊ- ಬ್ಯಾರುವೇನೆಂಬಧಮ ಹೂಣನು ತೀರಿಸುವೆನೆಂದೆನ್ನೊಳಿಲ್ಲದ ದೂರ ಸಂಗ್ರಹಿಸಿ ಗಾರಗೊಳಿಸುವದರಿತು ಕಕ್ಷವ ಹಾರಿಸುತ ಸುರವಂದ್ಯ ಮೂರ್ತಿಯ ತೋರಿ ತಂದಿಲ್ಲಿರಿಸಿ ಪೊರೆದವನ್ಯಾರು ಪೇಳ್ದೊರೆಯೆ 10 ಶ್ರೀಶ ನಿನ್ನ ಪದಾಬ್ಜ ಪೊಗಳುವ ದಾಸ ಕೂಟದಿ ಸೇರಿ ಸೇವೆಯ ಬ್ಯಾಸರದೆ ನಡೆಸುತಿರೆ ಮತ್ತೊಬ್ಬಾಸುರನ ತೆರದಿ ದ್ವೇಷದಿಂದಿರೆ ದೂರ ಓಡಿಸಿ ದುರಿತ ಭಯಗಳ ಪರಿಹರಿಸಿದ ಮ- ದೀಶ ನೀನೆಂದನವರತ ನಂಬಿರುವೆ ಶ್ರೀಪತಿಯ 11 ಇಷ್ಟು ಪರಿಯಿಂದೆನ್ನ ರಕ್ಷಿಸು- ತಿಷ್ಟ ಫಲಗಳನೀವ ವೆಂಕಟ ಬೆಟ್ಟದೊಡೆಯನೆ ಬೇಡಿಕೊಂಬುವೆ ಒಂದು ಕೃತ್ಯವನು ಮಾನವ ನುಡಿಯಕಾಡನು ಸುಟ್ಟು ಸೂರೆಯಗೈದು ನಾ ಮನ ಸಿಟ್ಟ ತೆರದಲಿ ತೋರು ಚಿತ್ತವ ಸೃಷ್ಟಿಕರ ಶ್ರೀಶ 12
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀನಾಥ ಶ್ರೀನಾಥ ಶ್ರೀನಾಥ ಮೋಹಿನೀ ರೂಪ ತಾ ತಾಳಿದಾನೆ ಸುಕಲಾಪ ತಾನೋಡಿಸುವುದು ಹೃತ್ತಾಪ ವನಂಬೆನೆ ಹರಿಯ ಪ್ರತಾಪ ಪ ಬಂಗಾರದ ಲತೆಯಂತೆ ಬಳುಕುವಳು ಬಾಜು ಬಂದಿಗೆ ಗೊಂಡೆಗಳ ಕಟ್ಟಿಹಳು ಮುಂಗಾಲಿಲೆ ನಿರಿಗಿಗಳ ಚಿಮ್ಮುವಳು ಮೋಹನ ಮಾಲೆಗಳ ಕಟ್ಟಿಹಳು ಕುಂಭ ಕುಚದ ಭಾರಕ್ಕೆ ತಡಿಯಳೂ ತುದಿಬೆರಳಲಿ ಗಲ್ಲವನೊತ್ತಿಹಳು ಕೇಸರಿ ಗಂಧ ಹಚ್ಚಿಹಳು ಹೊಂಗ್ಯಾದಿಗೆ ಪೋಲುವ ಮೈಬಣ್ಣ ಹೊಮ್ಮಸದಲಿ ಹೋಲುವ ಈ ಹೆಣ್ಣು ಹಿಂಗಡೆಯಲಿ ವರ ಹೆರಳು ಭಂಗಾರ ಹಿಮ್ಮಡಿ ಬಡಿಯೋದು ಸರ್ಪಾಕಾರ ಭಂಗಿಸುವಳು ಬಹು ದೈತ್ಯರ ಹೃದಯ ಬಹು ವಿಲಾಸದಿ ತೋರ್ಪಳು ಸಖಿಯ ಅಂಗಜದರು ಗಂಧಕೆ ಅಳಿವೃಂದ ಆಡುತಲಿಗೆ ಝೇಂಕಾರಗಳಿಂದಾ ಸಂಗಡನೆರದ ಸುರಾಸುರರಿಂದ ಸತಿ ಚಲುವಿಂದಾ ಮಂಗಳಮುಖಿ ನಮ್ಮಂಗಳ ಮೋಹಿಸಿ ಭಂಗನ ಪಡಿಸುವಳೈ ತ್ರಿಜಗವ ಜಗಂಗಳ ಪಾಲಿಸುವಳು | ಮನ ಸಂಗಡ ಅಪಹರಿಸುವಳು | ಜಡ ಜಂಗಮಲಿಗೆ ಬಹು ಪ್ರೀತ್ಯಾಸ್ಪದಳು ಸಾರಂಗಿ | ಸಾರಂಗಿ | ಸಾರಂಗೀ ಸಾಂಬಮದ ಭಂಗಿ | ಬಹಳ ಸುಖಸಂಗಿ ಸುಂದರಿ ಲಲಿತಾಂಗಿ | ಮೋಹನಾಪಾಂಗೀ ಬಡು ಹೆಂಗಲ್ಲ ಈಕೆ ಬಹುಭಂಗ ಬಡುವಿರಿ ಜ್ವಾಕೆ || ಶ್ರೀನಾಥ || 1 ಕನ್ನಡಿಯಂದದಿ ಪೋಲುವ ಕಪೋಲ ಕರ್ಪೂರ ರಂಜಿತ ವರ ತಾಂಬೂಲ ಕಣ್ಣಿಗ್ಹಚ್ಚಿಹಳು ಕನಕದ ಕೋಲಾ ಕಾಮಿನಿಯಂದಡಿ ತೋರ್ಪಳು ಜಾಲಾ ಬಿನ್ನುಡಿ ಹಾಕಿದ ಚಂದ್ರದ ಕುಪ್ಪುಸ ಚಪಲಾಕ್ಷಿಯ ನೋಟದ ಬಲು ರಭಸಾ ಕರ್ಣಾಯತ ನೇತ್ರಗಳ ವುಲ್ಲಸಾ ವುನ್ನಂಕಾ ನಾಶಿಕದ ಬುಲಾಕು ವಜ್ರಮಯದ ವರಮಖರೆದ ಬೆಳಕು ಕರ್ಣದಿ ರತ್ನಖಚಿತ ತಟಾಂಕಾ ಕುಸುರು ಹಚ್ಚಿದ ಬಾಹುಲಿಗಳ ಬಿಂಕ ಸಣ್ಣ ನಡುವಿನೊಯ್ಯಾರದ ನಲ್ಲೆ ಸರಸಿಜನಾಭನ ಸೃಷ್ಟಿ ಇದಲ್ಲೆ ಬಣ್ಣಿಸಲಳವಲ್ಲವು ಸೌಂದರ್ಯ ಬಿಡಿಸುವುದು ಕೇಳ ಮುನಿಗಳ ಧೈರ್ಯ ಬೆಣ್ಣೆಯಂತೆ ಮೃದುವಾದ ಶರೀರ ಭಾಗ್ಯಹೀನರಿಗೆ ಇದು ಬಲುದೂರಾ ಕನ್ನೆ ಶಿರೋಮಣಿ | ಕಾಮನ ಅರಗಿಣಿ ಕೌಸ್ತುಭಮಣಿಗಳ ಹಾರೇ ಸುವರ್ಣವರ್ಣ ಸುಕುಮಾರೇ ಮೋಹನ್ನರಸನೆ ಗಂಭೀರೇ ಮೋಹನ್ನೆ ಮಧುರ ಮಧುರಾಧರ ಮಂಜುಳ ವಕುಜಲರೆ ಬಹೋಚ್ಚಧರೆ ಛÅಪ್ಪನ್ನ ಛಪ್ಪನ್ನ ದೇಶಗಳು ಚಲುವರಿದ್ದರೂ ಚಪಲಾಕ್ಷಿಗೆ ಸಮರಾರೇ ಗತ ಪುಣ್ಯದಿಂದ ಕೈಸೇರುವಳಲ್ಲದೇ ಕಾಮಾಂಧsÀರಿಗತಿ ದೂರೇ ಈ ಹೆಣ್ಣು | ಈ ಹೆಣ್ಣು | ಈ ಹೆಣ್ಣು ಸುರಾಸುರರನ್ನೆ ಮೋಹಿಸಳು ಚನ್ನ ಮನಕೆ ತರಳಿನ್ನ ಬಿಡು ವಿಷದ್ಹಣ್ಣು ಅಪೇಕ್ಷಿಸೆ ಮಣ್ಣು ಕೂಡಿಸುವಳು ತನ್ನ ಜನರಿಗಮೃತಾನ್ನ ಕೊಡುವಳು ಮಾನ್ಯಳು ಪರಮಸೋನ್ಯಳು | ಸುಗುಣ ಅರಣ್ಯ ವಿನಾಶೇ ಬ್ರಹ್ಮಾಂಡಜಾದ್ಯಂಗೀತೇ || ಶ್ರೀನಾಥ || 2 ಹುಡುಗಿ ನೋಡು ಹೊಸ ಪರಿಯಾಗಿಹಳು ಹದ ಮೀರಿದ ಯವ್ವನದಿ ಮೆರೆವಳು ಅರಳು ತುಂಬಿಹಳು ಮಂದಸ್ಮಿತದಲಿ ಮೋಹಿಸುತಿಹಳು ಬೆಡಗಿನಿಂ ನುಡಿಯ ಸವಿಯ ತೋರುವಳೂ || ಬಹು ವಿಧದಾಭರಣಗಳನ್ನಿಟ್ಟಹಳು ನಡಿಗಿಗಳಿಂದ ನಾಚುತ ಹಂಸ ನವಮಣಿ ಚಂದ್ರರ ಕೆಡಿಸಿತು | ನಂಬೆ ಜಡಿತ ಮುತ್ತಿನ ತಾಯಿತ ಕಠಾಣೀ ಜಗವನು ಮೋಹಿಸುವಳು ಸುಶ್ರೋಣೀ ಬಿಂಕದ ನುಡಿ ಸೊಬಗಿನ ಚಂದಾ ಅಡಗಿದವೆ ಪಿತಭೃಂಗಗಳಿಂದಾ ಹಿಡಗಿ ಮರಗಿ ಮಧ್ಯಶಮನ ಮರಗೀ ಕೇಸರಿ ಬಹು ಸೊರಗೀ ಉಡುಪತಿ ಕೋಟಿ ಪ್ರಭ ಧಿಕ್ಕಾರಾ ಉಲ್ಲಾಸದಿ ಮನ ಮುಖ ಚಂದಿರಾ ನಡಿಗಗಳಿಂದೆನೆ ರಾಜಿಸುತಿ ಹೋದೆ ನವರತ್ನದಯದೆ ಮಯದ ಫಣಿಕಟ್ಟು ಮೇಲ್ಪೊಡವಿವೊಳಗೆ ಪಡಿಗುಣಕ ಕಡಿಯಿಲ್ಲಾ ಸುಳ್ಳುನುಡಿಯಿಲ್ಲಾ ಯೆನ್ನೊಡೆಯಾ ಶ್ರೀ ವಿಜಯ ವಿಠ್ಠಲನಲ್ಲದೆ ಎಲ್ಲಿಂದ ಬಂದಳೋ ಕೆಳದೀ || ಶ್ರೀನಾಥ || 3
--------------
ವಿಜಯದಾಸ
ಶ್ರೀನಿಕೇತನ ಲಕ್ಷ್ಮೀ ಕಾಂತನ ಪದಪದ್ಮ ಧ್ಯಾನ ಮಾಡುತ ಎನ್ನ ಸ್ಥಿತಿಯ ದೀನಭಾವನೆಯಿಂದಲೊರೆವೆನು ಗುರುಪವ ಮಾನ ಪಾಲಿಸಲಿ ಸನ್ಮತಿಯ ಪ. ತಾನು ತನ್ನದೆಂಬ ಹೀನ ಭಾವನೆಯಿಂದ ನಾನಾ ಯೋನಿಗಳಲ್ಲಿ ಚರಿಸಿ ಮಾನವ ಜನ್ಮವನೆತ್ತಲು ಮುಂದಾದ- ದೇನೆಂಬೆ ಗರ್ಭದೊಳುದಿಸಿ 1 ಮಾತಾಪಿತರುಗಳು ಮೋಹದಿ ರಮಿಸಲು ಕೇತ ತತಿಗೆ ಸರಿಯಾಗಿ ಆತು ಬಂದಿಹೆನು ಗರ್ಭದಿ ಮೆಲು ನರ ವ್ರಾತ ಬಂಧಕೆ ಗುರಿಯಾಗಿ 2 ಸೇರಿದ ಕ್ರಿಮಿ ಪರಿವಾರ ಕಚ್ಚುತಲಿರೆ ಚೀರಲಾದರು ಶಕ್ತಿಯಿರದೆ ಭಾರ ವಸ್ತುವು ಕಣ್ಣಸಾರವು ತಡೆಯದೆ ಗಾರುಗೊಂಡೆನು ಗರ್ಭದೊಳಗೆ 3 ಮೂರರಾ ಮೇಲೆ ಮತ್ತಾರುಮಾಸಗಳಿಂತು ಭಾರಿ ಭವಣೆಗೊಂಡು ಕಡೆಗೆ ಭೋರನೆ ಭೂಮಿಗೆ ದೂರಿ ಬಂದೆನು ಮಲ ಧಾರೆಯಾ ಕೂಡಿ ಮೈಯೊಳಗೆ 4 ಹೇಸಿಗೆ ಮಲಮೂತ್ರ ರಾಶಿಯ ಒಳಗೆ ದು- ರ್ವಾಸನೆ ಬರುವ ಗೆರಸಿಯ ಹಾಸಿಗೆ ಒಳಗೆ ಹಾಕಿರುತಿರೆ ದೇಹದ ಲೇಶ ಸ್ವಾತಂತ್ರ್ಯವೇನಿರದೆ 5 ಮೂಸಿ ಮುತ್ತುವ ನುಸಿಮುತ್ಕುಣ ಬಾಧೆಗೆ ಘಾಸಿಗೊಳುತ ಬಾಯ ತೆರದೆ ದೋಷ ಶಂಕಿಸಿ ಮೈಯೊಳಿಕ್ಕಿದ ಬರೆಗಳ ಬಾಸಲೆಯುನು ತಾಳ್ದೆ ಬರಿದೆ 6 ನಾಲ್ಕು ಕಾಲುಗಳಿಂದ ನಾಯಿಗೆ ಪರಿಯಾಗಿ ಸೋಕಿದೆ ಸರ್ವತ್ರ ತಿರುಗಿ ಸಾಕುವ ಜನರೆಡಬಲಗಾಲ ತುದಿಯಿಂದ ದೂಕಿದರಲ್ಲಿಯೆ ಸುಳಿದೆ 7 ವಾಕುಗಳೆಂಬ ಕೂರಂಬನು ಸಹಿಸಿ ಪ- ರಾಕೆಂದು ಪರರ ಸೇವಿಸಿದೆ ಮಾಕಳತ್ರನೆ ನಿನ್ನ ಕೃಪೆಯಾದ ಬಳಿಕ ಮೋ- ಹಾಕಾರ ಮಡುವಿನೊಳಿಳಿದೆ 8 ಈಗಲಾದರು ದೇಹ ಭೋಗವೆ ಬಯಸುತ ನೀಗಿದೆ ವ್ರತ ನೇಮಾದಿಗಳ ಸಾಗದ ಫಲ ತನಗಾಗಬೇಕೆಂಬ ಮ- ನೋಗತಿಯಿಂದ ಕರ್ಮಗಳ 9 ಮೂಗಭಾವನೆಯನ್ನು ನೀಗದೆನಿಸಿ ಮುಂ- ದಾಗಿಯಾಡುವೆ ಮಥನಗಳ ಕಾಗೆಯು ಕುಂಭದ ಜಲ ಕುಕ್ಕುವಂತೆ ಬೆಂ- ಡಾಗಿ ಕೊಂಡೆನು ಝಗಳಗಳ 10 ಕಂತುಜನಕ ಕಂಜನಾಭ ವೆಂಕಟರಾಜ ಚಿಂತಾಮಣಿ ಸುರತರುವೆ ಎಂತಾದರು ನಿನ್ನ ದಾಸ್ಯ ಸೇರಿದ ಮೇಲೆ ಇಂತುಪೇಕ್ಷಿಸುವುದು ಥರವೆ 11 ಭ್ರಾಂತಿ ಎಂಬುದ ಬಿಡಿಸಿನ್ನಾದರು ಲಕ್ಷ್ಮೀ ಕಾಂತ ಕಾರುಣ್ಯ ವಾರುಧಿಯೆ ಚಿಂತಿತದಾಯಿ ಎನ್ನಂತರಂಗದಿ ಬೇಗ ನಿತ್ಯ ವಿಧಿಯೆ 12
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀನಿವಾಸ ಭಕ್ತಪೋಷಣಭೂಷ ಮನ್ಮಂದಿರವಾಸ ಶ್ರೀನಿವಾಸ ಪಾದಾತನ ಜನರನು ಸಾನುರಾಗದೊಳ್ಮಾನಿಸಿ ಸಲಹುವ ಪ. ಬಾಲತ್ವದಿಂದ ಬಹುವಿಧವಾದ ಭಕ್ತಿಯನಿತ್ತು ಲಾಲಿಸಿ ಪೊರೆದ ಪೂಜ್ಯಪಾದ ಈ ಮಧ್ಯದೊಳಾದ ಧಾಳಿಗಳನು ನಿರ್ಮೂಲಗೈದ ಕರು- ಣಾಳು ರಾಜ ನಿನ್ನಾಳಾಗಿಹೆನು 1 ಪಂಚಭೌತಿಕವಾದ ತನುವಿಂದ ಆಗುವ ತಪ್ಪ ಕಿಂಚಿನ ವರದ ನೀ ದಯದಿಂದ ಕ್ಷಮಿಸೈ ಗೋವಿಂದ ವಂಚಿಸಿ ದಾನವದಿತಿಜರ ಸುರರಿಗೆ ಹಂಚಿದಿ ಸುಧೆಯನು ಶುಭಕರದಿಂದ 2 ಕಮಲಾಬ್ಜಭವರುದ್ರೇಂದ್ರಾದಿಗಳು ಪಾದಯುಗ ಕಲ್ಪ ದ್ರುಮ ನಿನ್ನ ನೆಳಲನಾಶ್ರೈಸಿಹರು ಕರುಣಾರಸದೋರು ನಮಿಸುವೆ ಎಂಬೀ ಮಮತೆಯಿಂದ ಎ- ನ್ನಮಿತಪರಾಧವ ಕ್ಷಮಿಸುವ ಹರಿಯೆ 3 ಇಂದ್ರಿಯಂಗಳ ಭಾವನೆ ಬಹುಘೋರ ಅದರಲ್ಲಿ ಮುಳುಗಿದ- ರಿಂದಿರಾಧವ ನೀನೆ ಬಹುದೂರ ಆ ರೀತಿಯ ಭಾರ ಹೊಂದಿದ ದಾಸರಿಗೆಂದು ತಾರಾ- ಮಂದರಾದ್ರಿಧರಾ ಮಾಧವಧೀರ 4 ಚರಣ ಸಂಸ್ಮರಣೆ ಮಾತ್ರ ಬೇಕು ಇದರಿಂದ ಸರ್ವ ಪುರುಷಾರ್ಥ ಲಬ್ಧಿಗಿನ್ನು ಸಾಕು ಇರುವುದೆ ಈ ನಾಕು ಉರಗ ಗಿರೀಂದ್ರನ ಶಿರದಲಿ ಮಂಡಿಸಿ ಮೆರೆವ ಸುಖಾಂಬುಧಿ ಸುರವರ ನಾಥ5
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀನಿವಾಸ ಸುಜನೋದ್ಧಾರ ಏನು ತಾತ್ಸಾರ ನಾನು ನಿನ್ನ ದಾಸನೆಂದು ಮಾನವರು ನುಡಿದ ಮೇಲೆ ಪ. ಪುಟ್ಟಿದಾಕ್ಷಣಾದಿಯಾಗಿ ದುಷ್ಟಸಂಗಕೊಳಗಾಗಿ ನಷ್ಟಪ್ರಜ್ಞೆಯಿಂದ ಬಹು ಕಷ್ಟಿಯಾದೆನು ಕೃಷ್ಣ ಶಬ್ದ ವಾಚ್ಯಪರಮೇಷ್ಠಿ ಜನಕ ನಿನ್ನ ಮನ ಮುಟ್ಟಿ ಭಜಿಸದೆ ಬಯಲೆಷ್ಟವ ಬಯಸುವೆನಲ್ಲೊ 1 ದಾನಧರ್ಮ ಜಪತಪ ಮೌನ ಮೊದಲಾದ ಸ- ತ್ಸಾಧನ ಹೀನನಾದರು ನಿನ್ನಾನುರಾಗದಿ ಮನಮುಟ್ಟಿ ಕ್ಞಣವಾದರು ಧ್ಯಾನಿಸಲು ಸಕಲವಂದ್ಯ ಮುನಿಗಮ್ಯ ಪದವನೀವಾತನು ನೀನೆಂದೊಂದೆ ತಿಳಿದೆ 2 ಮನವಚನ ಕಾಯಕಾದನುದಿನ ಕೃತವಾದ ಘನ ಪಾಪಂಗಳಿಗೆ ನಾ ಕೊನೆಗಾಣೆನು ದನುಜಾರಿ ರಾಮ ಅನಿಮಿತ್ತಬಂಧು ಎಂಬ ಘನತೆ ತೋರಿಸಿ ನಿನ್ನ ತನಯನೆಂದೆಂನ ಸಲಹೊ 3 ವೀರವೇದೋದ್ಧಾರ ವರಮಂದರಧರ ನರ ಹರಿಕುಬ್ಜಾಕಾರ ಪೃಥ್ವೀಭಾರವಾರಕ ವಾರುಧಿ ಬಂಧಕಯದು ವೀರ ತ್ರಿಪುರ ಸ್ಮರ ಹರನಿಂದ ತರಿಸಿದ ತುರಗವೇರಿದ ಧೀರ 4 ಮಂದಮತಿಯಾದ ಎನ್ನ ಬಂಧುವಾಗಿ ಕೈಯ ಪಿಡಿದು ಮುಂದು ಗಾಣಿಸುವೆನೆಂದು ಹಿಂದೆ ರಕ್ಷಿಸಿ ಇಂದು ಎನ್ನ ಕುಂದನೆಣಿಸಿ ತಂದೆ ನೀನುಪೇಕ್ಷಿಸಲು ಮುಂದೆ ಕಾಯ್ವರಾರೊ ಕರುಣಾಸಿಂಧು ಅನಿಮಿತ್ತ ಬಂಧು 5 ಮಾನಗೇಡಿನಿಂದ ದ್ವೇಷಿ ಮಾನವಾಧಮರ ಮುಂದೆ ಶ್ವಾನಕಿಂತ ಕಡೆಯಾಗಿನ್ನೇನು ಮಾಡಲೊ ನೀನೆ ಗತಿಯೆಂಬ ಮನೋಧ್ಯಾನದಿಂದ ಬಂದೆ ನಿಂದು ಕಾನನದ ಶಿಶುವಿದೆಂದು ಮಾನಿಸಿ ರಕ್ಷಿಸೊ ತಂದೆ 6 ಘಾಸಿಗೊಳಿಸುತೀ ಆಶಾಪಾಶದಿಂದ ಎನ್ನ ಬಿಡಿಸಿ ದಾಸರ ದಾಸ್ಯವನಿತ್ತು ಪೋಷಿಸೆನ್ನುತ ಮೀಸಲಾಗಿಹೆನು ಶ್ರೀನಿವಾಸ ಬೇಗ ಸಲಹೊ ಬಂದು 7
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀನಿವಾಸ-ಶ್ರೀನಿವಾಸ-ದೀನರಕ್ಷಕ ದಾನಿ ನೀನೆಂದು ನಂಬಿದೆ ಪ ಜ್ಞಾನಗಮ್ಯನೆ ವಾಙ್ಮನೋಮಯ ಮಾನಿ ಮಾನಸರಾಜಹಂಸ ಅ.ಪ ಲೋಕಭರಿತ ಶ್ರೀಕಳತ್ರ-ತ್ರಿಕಕುದ್ಧಾಮದಧಿನಾಥ ಶ್ರೀಕಮಲಭವಾದಿವಂದಿತ ಮುಕುತಾಮುಕುತಜನ ಸಂಸೇವಿತ ಅಖಿಳಾಗಮಕೆ ಅತೀತ-ಶ್ರೀಕರಪಲ್ಲವಪೂಜಿತ ಅಖಿಳಾಜಾಂಡದಿ ವ್ಯಾಪ್ತ-ಭಕುತರಗತಿಯಪ್ರದಾತ1 ನಿಗಮವಿತ್ತೆ ನಗವಪೊತ್ತೆ ಬಗೆದು ಬೇರ ನರ- ಮೃಗಾಂಗನೇ ತ್ಯಾಗಿಯೊಳು ಪೋಗಿ ನೃಪರ ನೀಗಿಸಿ ವನವನವಾ ಚರಿಸಿದೆ ಬಗೆಬಗೆ ಆಟದಿ ಬಾಲ್ಯದಿ ಹಗೆಗಳ ಮಡುಹಿದೆ ಕಾರ್ಯದಿ ಆಗಮಕರ್ಥಮೋಹಿಸಿ-ಜಗದೊಳುತುರಗವನೇರ್ದೆ 2 ಅಂತರಾತ್ಮಪರಮಾತ್ಮ ಅನಂತಾನಂತರೂಪಾತ್ಮ ಪ್ರಾಂತಕಾಣದೇ ನಿರಂತರದಿ ನಿಂತು ಸಿರಿ ನಿತ್ಯಮುಕ್ತಳಾದಳೋ ಕಂತುಪಿತ ಎನ್ನಂತರದಿ ನಿಂತಿಹೆ ನಿರಂತರದಿ ಕಾಂತ ಶ್ರೀ ವೆಂಕಟೇಶನೆ-ಅಂತರ್ಬಹಿರದಿ ನಿಂತಿಹ ಪ್ರಭೊ 3 ಅಪ್ರಮೇಯ ಸ್ವಪ್ರಕಾಶ ಅಪ್ರಾಕೃತಗುಣಗಣಾರ್ಣವ ಸ್ವಪ್ರಯೋಜನರಹಿತ ಸತತ ತ್ವತ್ಪ್ರಸಾದದಿಂದ ಜಗವು ಕ್ಷಿಪ್ರದಿ ನೃಪಸಂಸ್ತುತಿಸೆ ವಿಪ್ರನಮನ ಸಂತೈಸಿದೆ ಅಪ್ರತಿಹತಮಹಿಮನು ಸುಪ್ರೀತನು ಜನರ್ಗೆ 4 ಪರಮ ಪುರುಷ ಪೂರ್ಣಾನಂದ ಪರಮಕರುಣಶರಧಿಯೆ ಉರಗಾದ್ರಿವಾಸ ವಿಠ್ಠಲ ಕರಾವಲಂಬನವಿತ್ತು ಸಲಹೆಲೋ ಪರಿಪರಿ ಎನ್ನಪರಾಧ ನೋಳ್ಪರೆ ಭೋ ಜಗದೊಡೆಯ ಕರುಣವು ತೋರದೆ ನೀನಿರೆ ನರಪಶು ನಾನೆಂತು ಬಾಳ್ವೆನೋ5
--------------
ಉರಗಾದ್ರಿವಾಸವಿಠಲದಾಸರು
ಶ್ರೀನಿವಾಸ-ಶ್ರೀನಿವಾಸ-ಶ್ರೀನಿವಾಸ ಪ ಶ್ರೀನಿವಾಸ ನಾನಿಹೆ ನಿನ್ನ ದಾಸ-ನಿನ್ನ ದಾಸ ನಿನ್ನದಾಸ ಅ.ಪ. ಈಶ, ತರಿಯುವೆ ಕ್ಲೇಶಾ ಕೊಡುಲೇಶ, ಕೊಡುಲೇಶ ಜೀಯ, ಸಡಗರ ದೈವ ಬಡವನು ನಾನು ಕೊಡುವುದು ಏನು, ಅಡಿಗಳನೀಡು, ಇಡುವೆನು ಮೌಳಿ, ಇಡುವೆನು ಮೌಳಿ ಘನಸುಖದಾತ, ಚಿನ್ಮಯಗಾತ್ರ, ವನರುಹ ನೇತ್ರ, ಅನಿಲನಸೂತ್ರ ಅನುದಿನ ತನುಮನನಾಥ ತನುಮನನಾಥ ಕುಂದುಗಳಳಿದು, ಕಂದನ ಸಲಹೋ ಕಂದನ ಸಲಹೋ 1 ವೇದವ್ಯಾಸ, ವಾದಾಗಾರ, ಬೋಧಿಸಿವಿದ್ಯೆ ಸಾಧನೆಗೈಸೋ ವೇಧನ ತಂದೆ ವೇಧನತಂದೆ ಸೋದರ ಪ್ರಜೆಗಳು ದೈತ್ಯರ, ಖೇದವನೀಡ್ಡೆ ಖೇದವನೀಡ್ದೆ ಧೀರವರಾಹ, ಯಾಗಶರೀರ, ಬಹುಗಂಭೀರ ಶೃತಿಗಳಸಾರ ಸಾರ ಸಾರಕೆ ಸಾರ ಕಂಭದಿಬಂದೆ ಕಂದನ ಪೊರೆದೆ ಕಂದನ ಪೊರೆದೆ 2 ಬಲಿಯೆಡೆನಿಂದ ಬೇಡುವೆನೆಂದ ಬೇಡುವೆನೆಂದ ಮೂರಡಿಯಿಂದ ಬೆಳೆಯುತ ಬಂದ ಬೆಳೆಯುತ ಬಂದ ಭೂಮಿಯು ಮುಗಿಯೆ ಶಿರವನ್ನೀಯೆ, ಭಕ್ತನಕಾಯೆ, ಬಾಗಿಲಕಾಯ್ದೆ, ಬಾಗಿಲಕಾಯ್ದೆ ವಿಪ್ರರ ಪೊರೆದ, ವರಸಮರಿಲ್ಲ ವರಸಮರಿಲ್ಲ ಭಾರ್ಗವರಾಮ, ಋಷಿಗಣಸ್ತೋಮ, ದೈತ್ಯವಿರಾಮ, ಸತ್‍ಜನಪ್ರೇಮ, ಮಂಗಳ ನಾಮ ಮಂಗಳನಾಮ 3 ತಾರಕನಾಮ, ಕಲಿಗಿವ ಭೀಮ, ದಶರಥರಾಮ, ಸೀತಾರಾಮ ಜಯಜಯರಾಮ ಜಯಜಯರಾಮ ಲಕ್ಷ್ಮಣನಣ್ಣ, ಸಗುಣಸಂಪನ್ನ, ಜಗಕಿವ ಅನ್ನ, ಬಿಡಬಿಡಬೆನ್ನ ಪ್ರಾಣನೆ ಅನ್ನ, ಕೇವಲನಣ್ಣ, ರವಿಶಶಿಕಣ್ಣ, ಸಿದ್ಧವಿದಣ್ಣ ಆಗಿಸಿ ಯಾಗ, ಸಾಗುತ ಬಂದ ಸಾಗುತ ಬಂದ ಕೊಂದನು ಖಳರ, ಮುಂದಕೆ ನಡೆದ 4 ಮುಟ್ಟಿ, ಕಳ್ಳನ ಮೆಟ್ಟಿ ರಾಜ್ಯವಕೊಟ್ಟ ಜಗಜ್ಜಟ್ಟಿಜಗಜ್ಜಟ್ಟಿ ನಿಜಮುನಿಇವನೆ, ನಿಜವಿಧಿ ಇವನೆ, ಸರ್ವೇಶ, ಸರ್ವೇಶ ಬೆಣ್ಣೆಯ ತಿಂದ ಪೋರನು ಎನಿಸಿ, ಚೋರನು ಎನಿಸಿ ಎನಿಸಿ, ಕ್ರೂರನು ಎನಿಸಿ, ನಾರೇರ ವರಿಸಿ, ಭೂರಿದನೆನಿಸಿ, ಲೀಲೆಯ ತೋರ್ದ 5 ಊರಿಗೆ ಬಂದೆ, ಜರೆಸುತ ಬಂದು, ಬಹುಮಡಿನೊಂದು, ಮರಳಿಯು ಬಂದು ಕದನಕೆ ನಿಂದ, ಬಲುಭಂಢ, ಬಲುಭಂಢ ರಾತ್ರಿಯಲೊಂದು ಸಾಗಿಸಿ ಬಂದು, ವೊಕ್ಕೂ, ತಾಮುಕುಂದ ತಾಮುಕುಂದ, ಸೂತ, ಜಗವಿಖ್ಯಾತ ಕೊಲ್ಲಿಸಿದಾತ ಸರ್ವಸಮರ್ಥ, ಸರ್ವಸಮರ್ಥ ಕಾಲದಿ ಭೇದ ಇಲ್ಲವು ಎಂದು ವಿಭುಶರಣೆಂಬೆ, ವಿಭುಶರಣೆಂಬೆ 6 ವೇದಸುವೃಂದ, ತ್ರಿಪುರರಕೊಂದ, ಬಲ್ಲ, ಎಲ್ಲವ ಬಲ್ಲ ನಿತ್ಯವಿದೆಲ್ಲ, ತಿಳಿದವರಿಲ್ಲ, ಸಾರಿಸಾಕಲ್ಯ ಜಗವನೆಲ್ಲ, ಬಿಗಿದಿಹನಲ್ಲ, ನಾಮದಿನಲ್ಲ, ನಾಮದಿನಲ್ಲ, ಆದಿಯು ಇಲ್ಲ, ಮಧ್ಯವು ಇಲ್ಲ, ಕೊನೆತಾನಿಲ್ಲ, ಖೇದವು ಇಲ್ಲ, ಮೋದವೆ ಎಲ್ಲ, ಭಗನಿಹನಲ್ಲ ಅಪಜಯವಿಲ್ಲ, ಶ್ರೀಗಿವನಲ್ಲ, ಅಪ್ರತಿಮಲ್ಲ, ಪ್ರಕೃತಿಯು ಅಲ್ಲ, ಸ್ವಾಮಿಯು ಇಲ್ಲ, ತಾನೇ ಎಲ್ಲ ಪ್ರೇರಿಪನೆಲ್ಲ, ಭಿನ್ನನು ನಲ್ಲ, ಸರ್ವೋತ್ಕøಷ್ಠ 7 ಕುಜನರ ಮುರಿಯೆ, ಎನಿಸಿ, ಧರ್ಮವನುಳುಹಿ, ಭಕ್ತರಿಗೊಲಿದು, ಪೊರೆವುದು ಸತ್ಯ, ಪೊರೆವುದು ಸತ್ಯ, ಸತ್ಯರ ಸತ್ಯ, ಸಂತರ ಮಿತ್ರ, ಪರಮ ಪವಿತ್ರ, ಲೋಕವಿಚಿತ್ರ ಸುಖಚಾರಿತ್ರ, ಮಂಗಳಗಾತ್ರ, ನಿಖಿಳಸುಭರ್ತ, ಭಕ್ತರ ಭೃತ್ಯ ನತ ಜನಪಾಲ, ವೇದಗಳೆಲ್ಲ, ಶಬ್ದಗಳೆಲ್ಲ, ಘೋಷಗಳೆಲ್ಲ ನಾಮಗಳೆಲ್ಲ, ಇವನನೆ ಎಲ್ಲ, ಪೊಗಳುವವಲ್ಲ, ಮುಕ್ತರಿಗೆಲ್ಲ, ಪ್ರಕೃತಿಯ ಸತ್ತಾ, ಸಕಲವ ನೀತ, ನೀಡುವ ದಾತ, ಸರ್ವಸುವ್ಯಾಪ್ತ, ಸರ್ವಸ್ವತಂತ್ರ8 ವೇದವ್ಯಾಸ, ಬದರೀನಿವಾಸ, ವೇದಸ ಪೀಠ, ಸಾಧಿಸುವಂತ್ಯ ಮೋದಕವೀಂದ್ರ, ಮಧ್ವನಪೋಷ, ಆದರವೀಯೊ ಪಾದಗಳಲ್ಲಿ ವೇದಗಳಳಿಯೆ, ವಿಧಿ ಮುಖಸುರರು, ಪಿಡಿದರು ಪಾದ ಮಾಧವ ನೀನು ಮೇದಿನಿಗಿತ್ತೆ ಸೂತ್ರ ಗೈದ ಮಹೇಶ, ವೇದಕುಮಿಗಿಲು, ಭಾರತಕರ್ತ, ಭಾರತ ಕರ್ತ ಛಂದದಸುಕಾಯ ಕುಡಿಸೈ ಜೀಯ ಹರಿಸುತಮಾಯ, ಹರಿಸುತಮಾಯ, ಹರಿಸುತಮಾಯ 9 ಶ್ರೀ ಇಹವಕ್ಷ, ಜ್ಞಾನಸುಪಕ್ಷ, ಸರ್ವಾಧ್ಯಕ್ಷ, ದಿವಿಜರಪಕ್ಷ ಬೃಹತೀಭಕ್ಷ, ತಾನಿರಪೇಕ್ಷ, ಆಶ್ರಿತರಕ್ಷ, ಕರುಣ ಕಟಾಕ್ಷ, ಕರುಣಿಸು ರಕ್ಷ, ನೀಜಗರಕ್ಷ, ಅಜಗರ ಶೈಯ್ಯ, ಮನ್ಮಥನಯ್ಯ ಭವಬಿಡಿಸಯ್ಯ, ಭಯಹರಿಸಯ್ಯ ದಯಮಾಡಯ್ಯ ಶರಣುಪರೇಶ ಇಚ್ಛೆ ಅನೀಶಾ, ಕಳೆಕಳೆ ಆಶಾ, ಕಡಿಕಡಿಪಾಶಾ, ನಾಬಡದಾಸ, ತೈಜಸ ಶರಣು, ಪ್ರಾಜ್ಞನೆ ಶರಣು, ತುರ್ಯನೆ ಶರಣು, ಕಪಿಲನೆ ಶರಣು ಶರಣು ಅನಂತ, ಶರಣು ಅನಂತ 10 ವೆಂಕಟರಮಣ, ಕಿಂಕರನಾನು, ಸಂಕಟಹರಿನೊ ಶಂಕರತಾತ ತಿದ್ದೊ, ಪಂಕಜನಯನ ದಡ್ಡನು ನಾನು ಭಕ್ತಿಗಡ್ಡೆಗೆಸೇರಿಸು ಪ್ರಾಣನ ಆಣೆ ರಾಜರ ಆಣೆ ಜಯಮುನಿ ಆಣೆ, ಗುರುಗಳ ಆಣೆ, ಉರಗಾದ್ರಿವಾಸ, ಪದ್ಮಜಳೀಶ, ಹರಿಸುತ ದೋಷ, ಚರಣದಿವಾಸ, ನಿರುತಲೀಯೊ, ಕರುಣವ ಸುರಿಸಿ, ಮರುತನ ಮತದ ಅರುಹುತಲೆನಗೆ, ಸಂತತ ವೆಂಬೆ, ಸಂತತವೆಂಬೆ, ಸಂತತವೆಂಬೆ ನಂದದಿ ಪಠಿಸೆ ನಂದವು ಶಾಶ್ವತ, ಜಯಮುನಿಹೃಸ್ಥ, ಮಧ್ಯರಮೇಶ ಶ್ರೀಕೃಷ್ಣವಿಠಲ ವಲಿಯುವ ಸಿದ್ಧ, ವಲಿಯುವ ಸಿದ್ಧ 11
--------------
ಕೃಷ್ಣವಿಠಲದಾಸರು
ಶ್ರೀನಿವಾಸನೆ ನಿನ್ನ | ವರ್ಣಿಸಲು ಅಳವೇ ಮಾನನಿಧಿ ಗುಣಪೂರ್ಣ | ನಿನ್ನಂಘ್ರಿ ಭಜಿಪರ ಬನ್ನ ಪ. ವೈನತೇಯನ ವರೂಥ ನಾನಾ ಹಾರ ಪದಕದಿ ಮೆರೆವ ಸುಂದರ ಕಾಮಪೂರ್ಣ ಮುಖಾರವಿಂದನ ನೀ ಮನದಿ ತೋರುತ್ತ ಪೊರೆಯೊ ಅ.ಪ. ಶೇಷಪರ್ವತವಾಸ | ಭಕ್ತರನು ಸಲಹೋ ಈ ಕ್ಷಿತಿತ್ರಯಕೀಶ ಪೋಷಿಸುವೋ ಭಕ್ತರವಾಸಿ ನಿನ್ನದೊ ಶ್ರೀಶ ಲಕ್ಷ್ಮೀನಿವಾಸ ದೋಷದೂರನೆ ಎನ್ನ ಅವಗುಣ ದೋಷಗಳನೆಣಿಸದಲೆ ಸಲಹೊ ಶೇಷವರ ಪರ್ಯಂಕಶಯನ ವಿ- ಭೀಷಣ ಪ್ರಿಯ ಭೀಷ್ಮವರದ1 ಮಾಘ ಸಪ್ತಮಿ ಕುಂಭ | ಸಂಕ್ರಮಣ ದಿವ್ಯ ಯೋಗ ಶುಕ್ಲದಿ ಎಂಬ | ಸ್ಥಿರವಾರದಲ್ಲಿ ಆಗ ರಥದಲ್ಲಿ ಬಿಂಬ | ಭಕುತರಿಗೆ ಕಾಂಬ ಜಾಗು ಮಾಡದೆ ಸೂರ್ಯಮಂಡಲ ಬೇಗ ಬಿಗಿದಿಹ ಸಪ್ತ ಹಯಗಳ ಬಾಗಿ ಭಜಿಸಲು ಭಕ್ತವರ್ಗವು ನೀ ಜಗದಿ ಮೆರೆಯುತ್ತ ಪೊರೆದೆ 2 ವಿೂನನಾಗಿ ಮತ್ತೆ ವೇದವನೆ | ತಂದು ಆ ನಳಿನಭವಗಿತ್ತೆ ಅಲ್ಲಿಂದ ಸುರರಿಗೆ ಪ್ರಾಣದಾನವನಿತ್ತೆ ಮೇದಿನಿಯ ಪೊತ್ತೆ ನಾನೆ ಜಗಕೆಂಬ ದಾನವನ ಕೊಂದು ದಾನ ಬೇಡಿ ಭೂಮಿ ಅಳೆದು ಮಾನಿನಿ ಶಿರ ತರಿದು ಸೀತಾ ಮಾನಿನಿಗೆ ಅಂಬುಧಿಯ ಬಿಗಿದೆ 3 ಮಾನಿನಿಯರಿಗೆ ಕಾಣದೆ | ಬೆಣ್ಣೆಯನು ಕದ್ದು ಮಾನವೆಲ್ಲವ ಕಳೆದೆ ಅಲ್ಲಿಂದ ಮುಂದೆ ಮಾನವ ಬಿಟ್ಟು ನಿಂದೆ ಏನ ಹೇಳಲಿ ಹಯವನೇರಿ ದಾನವರ ಸಂಹರಿಸಿ ಮೆರೆದೆ ನಾನಾ ರೂಪ ನಾಟಕಧರ ನೀನೀ ಪರ್ವತದಲಿ ನಿಂದಿಹೆ 4 ದೇಹವ್ಯಾಪ್ತಕ ನೀನೆ | ದೇಹಗಳ ಕೊಟ್ಟು ಮೋಹಗೊಳಿಸುವ ನೀನೆ ದೇಹಸ್ಥನಾಗಿ ತೋರುವ ಬಿಂಬ ನೀನೆ | ಜೀವಾಕಾರನೆ ಈ ಹದನ ಎನಗಿನ್ನು ತಿಳಿಯದೊ ಮೋಹ ಹರಿಸಿ ಸುಜ್ಞಾನ ನೀಡೊ ಸ್ನೇಹ ಗೋಪಾಲಕೃಷ್ಣವಿಠ್ಠಲ ಶ್ರೀ ಹರಿಯೆ ಹೃದಯದಲಿ ನಿಲಿಸೊ 5
--------------
ಅಂಬಾಬಾಯಿ
ಶ್ರೀನಿವಾಸನೆ ನಿನ್ನ ಮಹಿಮೆಯ ಏನ ಪೇಳ್ಪೆನಾ ಜ್ಞಾನರಹಿತಳು ಗಾನಲೋಲನೆ 1 ಮಂಕುಮಾನವರಿಂದ ಸಾಧ್ಯವೆ ಶಂಕರಾದಿ ವಂದಿತನ ಸ್ತುತಿಸಲು ಪಾದ ಪಂಕಜ ಧ್ಯಾನಿಸೆ ನಿನ್ನ ಕೃಪೆಯನಾತಂಕವಿಲ್ಲದೆ2 ನಿನ್ನ ಭಕ್ತರಾ ಕಾಯ್ವೆಯೆಂಬುವುದನ್ನು ಅರಿತೆಹೆ ಪನ್ನಗಾಚಲ ಚಿನ್ನಭೊಮ್ಮನಿಂದಳವೆ ದೇವನೆ 3 ಕಿರೀಟಶೋಭನÀ ವರ್ಣಿಪೆ ಕರ್ಣಕುಂಡಲ 4 ಪದ್ಮನಾಭಗೆ ಪದ್ಮದಕ್ಷಿಯ ತಿದ್ದಿದ ಚಂಪಕದ ನಾಸಿಕ ಮುದ್ದುದಂತ ಪಂಕ್ತಿಗಳ ಕಂಡೆನೊ ಪೂತನಿಯ ಅಸುಹೀರಿದ ಆ ಭುಜಕೀರ್ತಿಗಳ ಕಂಡೆನು ಭಕ್ತಪಾಶ ನಿನ್ನ ಹಸ್ತ ಕಂಕಣವಾ ಕಂಡೆನು 5 ಬೆರಳ ಮುದ್ರಿಕೆ ಕೊರಳೊಳ ಸಾಲಿಗ್ರಾಮದ ಸರ ವೈಜಯಂತಿ ಮಾಲೆಗಳ ಕಂಡೆನು 6 ವÀರ ಶ್ರೀ ತುಳಸಿಯ ಹಾರಗಳ ಮಧ್ಯದಿ ಮೆರೆವ ರಮಾದೇವಿಯಳ ಕಂಡೆನು ಜಾನು ಜಂಘೆಯೊಳ ಮೆರೆವ ಪೀತಾಂಬರ ಕಂಡೆನು 7 ಆಜಾನುಬಾಹು ನೀನ್ಹೊದ್ದವಲ್ಲಿ ವಜ್ರದ್ಪಡ್ಯಾಣಕಂಡೆನು ಸಾನುರಾಗದಿ ಸ್ತುತಿಸಿ ಹಿಗ್ಗುತ ನಾನುಸ್ತುತಿಪ ನಿನ್ನಂಘ್ರಿ ಕಮಲವ 8 ಚರಣಕೊಪ್ಪುವೊ ಗಗ್ಗರಿಪಾಡಗ ವರಗೆಜ್ಜೆ ಪೈಜಣಿ ಕಂಡೆ ದೇವನೆ ಶ್ರೀವೆಂಕಟೇಶನೆ 9 ಕಾಯ ಬೇಕೆÉಲೊ ಕ್ಷಮಿಸೊ ದೇವನೆ 10
--------------
ಸರಸ್ವತಿ ಬಾಯಿ
ಶ್ರೀಪತೀ-ಎನಗೇನು ಗತೀ ನನಗಾಗಲಿ ನಿನ್ನಲಿ ರತೀ ಪ ಚಪಲ ತನದಿ ಬಹು ಕಪಟಭಕುತಿನಟಿಸಿ ಗುಪಿತ ದೋಷಿಯು ಆದೆ ಅ.ಪ. ಬಟ್ಟೆ ನೋಡಲು ಬಹು ಛಂಧ-ಮೇಲೆ ಘಟ್ಟಿ ಬಣ್ಣದ ಕಾವಿ ಶಾಟಿ ಹಾಗೆ ಪಟ್ಟೆಮಡಿಗಳ ಭಾರೀ ಥಳಕೊ-ಬಹಳ ದಟ್ಟ ತುಳಸೀಸರಗಳ ಹೊಳಪೂ ಆಹಾ ಸೃಷ್ಠಿಗೊಡೆಯನೆ ಎನ್ನ ಕೆಟ್ಟ ತನಗಳನ್ನು ಎಷ್ಟೆಂದು ಬಣ್ಣಿಪೆ ನಿಟ್ಟ ನೆನೆಯದೆ ಪರರ ದೃಷ್ಟಿನೋಡುತ ಹಿಗ್ಗಿ ಅಟ್ಟಹಾಸದಿ ಕುಣಿದು ಮಾನವ ನನಗೇ 1 ವೇದ ವಾದಗಳೇನು ಕಾಣೆ-ಶುದ್ಧ ಸಾಧು ಕರ್ಮಗಳೊಂದು ಇಲ್ಲ-ಜನರ ಮೋದಗೋಸುಗವೇನೆ ಎಲ್ಲ_ಕಾಮ ಕ್ರೋಧವ ನಿಬಿಡಿತೇನೇ ಬಿಚ್ಚೆಹೃದಯಾ ಆಹಾ ಮಧ್ವರಾಯರ ಶಾಸ್ತ್ರ ಗ್ರಂಥ ಸಹ ತಿಳಿಯದೆಲೆ ಸಿದ್ಧ ಸಾಧಕನಂತೆ ಸಾಧುಲಿಂಗವ ತೋರಿ ಮುಗ್ಧಗೈಯ್ಯುತ ಮಂದಿ ಮೆದ್ದು ಪಕ್ವಾನ್ನಗಳ ಗೆದ್ದುಕೊಳ್ಳುವೆ ಬಹಳ ದಕ್ಷಿಣೆ ಬಹುಮಾನ 2 ನೇಮನಿಷ್ಠೆಗಳಾಟ ಹೊರಗೆ-ಗೃಹದಿ ಪ್ರೇಮವಿಲಾಸ ಆಟ ಕೂಟಜನ ಸ್ತೋಮರೆಲ್ಲವ ನುಡಿವ ನೀತಿ ಖ್ಯಾತಿ ಕಾಮುಕನಾಗಿ ಚರಿಸಿದೆ ಜಗದೀ ಆಹಾ ಹೇಮದಾಸೆಗೆ ಸೂಳೆ ಪ್ರೇಮವ ತೋರ್ಪಂತೆ ಕಾಮಿತಪ್ರದ ನಿನ್ನ ನಾಮ ಸವಿಯನುಣ್ಣದೆ ತಾಮಸರಿಗೆ ಉಪದೇಶ ನೀಡುತ ಸತ್ಯ- ಭಾಮೆಯರಸ ನಿನಗೆ ದೂರನಾದೆನಲ್ಲಾ 3 ಹಾಡಿಹಾಡುವೆ ಎತ್ತಿ ಸುತ್ತ ಜನರು ನೋಡಿ ಹಿಗ್ಗುತ ಬಾಪು ಬಾಪು ನುಡಿಗೆ ಹಾಡಿನಲ್ಲಿಹ ಸವಿಯುಣ್ಣ ದೇನೆ ಆಡಿ ಆಡಿಪೆ ಶಿರವ ಜ್ಞಾನಿಯಂತೆ ಆಹಾ ಕೇಡು ಚಿಂತಿಸಿ ಪರರ ಸ್ವಾರ್ಥಗೋಸುಗನಿತ್ಯ ಕಾಡಿ ಬೇಡುತ ಜನರ ದೂಡುತಿಹೆ ಸಂಸಾರ ಪ್ರೌಢ ಭಕ್ತರ ಗೋಷ್ಠಿಕೂಡಿ ಭಜಿಸದ ಎನ್ನ ಗಾಢ ಡಂಭಕೆ ಜಗದಿ ಈಡು ಕಾಣಿಸು ಸ್ವಾಮಿ4 ಭಾರಿ ಶಾಲುಗಳನ್ನೆ ಹೊದ್ದು-ನಿತ್ಯ ಕೇರಿಕೇರಿ ಪುರಾಣಗಳನ್ನು ಮೆದ್ದು-ಹಾರಿ ಹಾರುತ ತತ್ವರಾಶಿ ನುಡಿದು-ಊರು ಜ- ನರಮುಂದೆ ಪಾಂಡಿತ್ಯ ತೋರ್ಪೆ ಆಹಾ ತೋರಿ ತೋರುವೆ ಪರಮವೈರಾಗ್ಯ ಭಕ್ತಿಯ ದೂರಿ ದೂಡುವೆ ಪರರ ಹುಳುಕುಗಳನು ಎತ್ತಿ ಪಾರುಗಾಣದ ಕರುಣ ತೋರದಿದ್ದರೆ ಇನ್ನು 5 ಗುಡಿಗೆ ಹೋಗುವೆ ನಾನು-ನಿತ್ಯ ಅಲ್ಲಿ ಬೆಡಗು ಸ್ತ್ರೀಯರ ಹುಡುಕುವುದೇನೆ ಕೃತ್ಯ ದೃಢಭಕುತಿಯನು ಮಾಡಲೊಲ್ಲೆ ಸತ್ಯ-ನ ಮಡದಿ ಮಕ್ಕಳಿಗಿಲ್ಲ ಭೃತ್ಯಾನುಭೃತ್ಯಾ ಆಹಾ ಹುಡುಕೀ ನೋಡಿದಾಗ್ಯೂ ವಿರಕ್ತಿ ಭಕ್ತಿಗಳಿಲ್ಲ ಬಿಡಲು ಪೊರೆಯೆ ಪುರಾಣಶಾಸ್ತ್ರಗಳನ್ನು ನಿತ್ಯ ಎನ್ನ ಅನಾದಿ ನೀ ಕಲಿಸದಿದ್ದರೆ ಈಗ 6 ದೊಡ್ಡ ಪಂಡಿತ ನಾನೆಂಬ ಹೆಮ್ಮೆ-ಶುದ್ಧ ದಡ್ಡನೆಂಬುದ ಬಲ್ಲೆ ಮನದಿ-ಹಾಗೂ ಅಡ್ಡ ಬೀಳೆನು ಭಕ್ತ ಗಣಕೆ ಸುಳ್ಳು ವೊಡ್ಡುತವರನು ಹಳಿದೂ-ಕುದಿದೇ ಮನದೀ ಆಹಾ ದುಡ್ಡುಗೋಸುಗ ಬಹಳ ದೊಡ್ಡ ದಾಸನು ಎನಿಸೀ ಹೆಡ್ಡಮಂದಿಯ ಮುಂದೆ ದೊಡ್ಡ ಭಾಷಣ ಮಾಳ್ವೆ ಗುಡ್ಡದೊಡೆಯನೆ ಭಕ್ತಜಿಡ್ಡುಲೇಶವು ಕಾಣೆ ದೊಡ್ಡ ನಾಮವ ಹಾಕಿ ಸಡ್ಡೆ ಮಾಡದೆ ತಿರಿವ 7 ಕಚ್ಚಿ ಬಿಡದಿಹ ತುಚ್ಛ ಕಲಿಯು-ಬಹಳ ಮೆಚ್ಚಿ ಬಂದಿಹ ನವನು ಬಿಡುವನೇನು ಇಚ್ಛೆ ನನ್ನದು ನಡೆಯದೇ ನೊಂದು ತುಚ್ಛ ವಿಷಯದಿ ಸೆಳೆದು ಸೆಳೆಯುತಿಹನು ಆಹಾ ಇಚ್ಛೆಯಿಂದಲಿ ಜಗವ ಸೃಜಿಸಿ ಪಾಲಿಪಲೀಲೆ ಹಚ್ಚಿಕೊಂಡಿಹ ನಿನಗೆ ನನ್ನ ಪಾಲಿಪುದೇನು ಹೆಚ್ಚು ಕಾರ್ಯವೆ ಜೀಯ ಮುಚ್ಚಿಕೊಂಡಹ ನಿನ್ನ ಸ್ವಚ್ಛ ಬಿಂಬವ ತೊರಿ ಮೆಚ್ಚಿ ಕೊಡದಿರೆ ಜ್ಞಾನ 8 ಶ್ವಾಸಮತದಲಿ ಜನ್ಮ ವಿತ್ತೆ-ವಿಜಯ ದಾಸರ ಪ್ರಿಯ ಮೋಹನ್ನ ಪರಂಪರೆಯ ದಾಸನೆನಿಸಿ ಯೆನ್ನ ಮೆರೆಸಿ ಹೀಗೆ ದೋಷಿಗೈವುದು ಥರವೆ ಶ್ರೀಭಕ್ತಪ್ರಿಯ ಆಹಾ ವಾಸುದೇವನೆ ತುರ್ಯಲೇಸು ದೃಷ್ಟಿಯ ಬೀರೆ ನಾಶವಾಗದೆ ದೋಷ ಭಾಸವಾಗದೆ ಜ್ಞಾನ ಕಾಸುಬೀಡೆನು ಹಿರಿಯ ದಾಸರ ಗುಣ ನೋಡಿ ಲೇಸು ನೀಡೆಂತೆಂಬೆ ಶ್ರೀಕೃಷ್ಣವಿಠಲಾ9
--------------
ಕೃಷ್ಣವಿಠಲದಾಸರು