ಒಟ್ಟು 18204 ಕಡೆಗಳಲ್ಲಿ , 138 ದಾಸರು , 7712 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೂಸನು ಕಂಡೀರ್ಯಾ ಸುಪ್ರ-ಹ್ಲಾದನ ಕಂಡೀರ್ಯಾ ನಮ್ಮಕೂಸನು ಕಂಡೀರ್ಯಾ ಪ ರಾಕ್ಷಸ ಕುಲದಲಿ ಜನಿಸಿತು ಕೂಸುರಾಧಾಕೃಷ್ಣನ ಭಜಿಸಿತು ಕೂಸುರಾಗ ದ್ವೇಷಗಳ ಬಿಟ್ಟಿತು ಕೂಸುರಾಮ ಪಾದವ ನೆನೆಯುವ ಕೂಸು 1 ಘನ ಹರಿ ಕಂಬದಿ ತೋರಿತು ಕೂಸುಗಳಿಸಿತು ಕೃಷ್ಣನ ಪ್ರೇಮವ ಕೂಸುಘನ ಪಂಪಾಲಯದಿ ವಾಸಿಪ ಕೂಸುಗಣೆ ಗೋಪಾಲನ ಪ್ರೀತಿಯ ಕೂಸು2 ಪ್ರಸಿದ್ಧ ವ್ಯಾಸರಾಯರೆಂಬ ಕೂಸುಪ್ರವೀಣ ವಿದ್ಯೆಯೊಳೆನಿಸಿದ ಕೂಸುಪ್ರಹ್ಲಾದನೆಂಬುವ ಆಹ್ಲಾದ ಕೂಸುಪ್ರಸನ್ನ ಕಾಗಿನೆಲೆಯಾದಿಕೇಶವನ ಕೂಸು3
--------------
ಕನಕದಾಸ
ಕೂಸಿನಲ್ಲಿ ಬಾಲಕೃಷ್ಣ ಕೇಶವಾರ್ಯ ಪುತ್ರನಲ್ಲಿವಾಸಮಾಡಿ ಸತತ ಮನವ ಪೋಷಿಸೂವನು 1 ತರುಣಿಯಲ್ಲಿ ಮಾಧವವಿರುವ ಶರಣರೊಳಗೆ ವಸುದೇವನರಿತು ತೋಷಿಸುವುದು ಸತತ ಹರುಷದಿಂದಲೀ 2 ವಾಸುದೇವ ಖಗವರೇಣ್ಯನು 3 ದಿವಿಜ ನಾರಾಯಣನು ವಸ್ತಿ ಮಾಡಿಹನು4 ಸುರಭಿಯಲ್ಲಿ ವಿಷ್ಣುರೂಪಿ ತುರಗದಲ್ಲಿ ವಾಮನಾತ್ಮಇರುವ ಸಂಕರ್ಷಣಾಖ್ಯ ಚರಮ ಜಾತಿಯಲೀ 5 ನಿತ್ಯ ವೈಶ್ಯ ಪ್ರದ್ಯುಮ್ನಭೃತ್ಯರಲ್ಲಿ ಮಹಿದ್ರಾಸ ಕೃತ್ಯ ನಡೆಸುವಾ 6 ಮಹಿಷಿಯಲ್ಲಿ ಉಪೇಂದ್ರ ಗಜದಲ್ಲಿ ಚಕ್ರಪಾಣಿಬೆಕ್ಕಿನಲ್ಲಿ ವಿಶ್ವರೂಪ ಸತತ ತಿಳಿವುದೂ 7 ಶುನಕ ಭೂತ ಭಾವನಸರ್ವರೊಳಗೆ ಅನಂತರೂಪ ಹರಿ ನಿವಾಸಿಪ 8 ನಿತ್ಯದಲ್ಲಿ ಹರಿಯು ಹೀಗೆ ಚಿತ್ತವಿಟ್ಟು ಲಕ್ಷಣೀಯುವರ್ತಿಸುತಲಿ ಯದುವರೇಣ್ಯನ ಪತ್ನಿಯಾದಳು 9 ಪರಮಪುರುಷನಮಲ ರೂಪ ಸ್ಮರಿಸುತಲೆ ಪೋಷ್ಯರಲ್ಲಿತೊರೆದು ಕರ್ಮಲೇಪ ಶಿರಿಯ ಹೋದುವಾ 10 ನಂದಸುತನ ತಿಳಿದು ಪೋಷ್ಯ ವೃಂದದಲ್ಲಿ ಭೋಗ ನೀಡಿಇಂದಿರೇಶ ನಮಗೆ ಮೋಕ್ಷಾನಂದ ಕೊಡುವನು 11
--------------
ಇಂದಿರೇಶರು
ಕೂಸು ಕಂಡಿರ್ಯಾ ಧ್ರುವ ವೇದವ ತಂದು ಉಳುಹಿತೀ ಕೂಸು ಮೇದಿನಿ ಭಾರವ ತಾಳಿತೀ ಕೂಸು ಸಾಧಿಸಿ ಧಾರುಣಿ ಗೆದ್ದಿತೀ ಕೂಸು ಉದಿಸಿ ಸ್ತಂಭದೊಳು ಮೂಡಿತೀ ಕೂಸು 1 ಭೂಮಿಯು ಮೂರಡಿ ಮಾಡಿತೀ ಕೂಸು ನೇಮದಿ ಪರಶುವ ಹಿಡಿಯಿತೀಕೂಸು ಸಮುದ್ರ ಸೇತುವೆ ಕಟ್ಟಿತೀ ಕೂಸು ಕಾಮ ಪೂರಿಸಿತೀ ಕೂಸು 2 ಬೆತ್ತಲೆ ತ್ರಿಪುರದಲಿ ಸುಳಿಯಿತೀಕೂಸು ವಸ್ತಿ ಕುದುರೆ ನಾಳಿತೀ ಕೂಸು ಸತ್ಯಸನಾತನಾಗಿಹ್ಯ ಕೂಸು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೃತ ಕೃತ್ಯನಾದೆನಿಂದಿನ ದಿನದೊಳು ಕ್ಷಿತಿಸುತ ವೆಂಕಟರಾಮಾರ್ಯರನ ಕಂಡು ಪ ಭೂಮಂಡಲದೊಳುಳ್ಳ ಸಕಲ ತೀರ್ಥಸ್ನಾನ ಹೇಮಾದ್ರಿ ಮೊದಲಾದ ಕ್ಷೇತ್ರ ಯಾತ್ರೆ ನೇಮ ಜಪತಪ ವ್ರತಾದಿಗಳ ಮಾಡಿದ ಪುಣ್ಯ ಈ ಮಹಾತ್ಮರ ಕಂಡ ಮಾತ್ರ ಸಮನಿಸಿತು 1 ಪರಿಯಂತ ಹರಿಮಹಿಮೆಗಳ ಸನ್ನುತಿಯಲೀ ಶ್ರುತಿಸ್ಮøತಿಗಳಿಂದ ಧನ್ಯರೆಂದೆನಿಸಿ ಮಹಿಯೊಳಗೆ ಪೂರಿತರಾದ ಪುಣ್ಯಚರಿತರ ದಿವ್ಯ ಪಾದವನೆ ನಾ ಕಂಡು 2 ಹೀನ ಜನರೇ ಬಹಳ ಕ್ಷೋಣಿಯ ಮೇಲೆ ಸು ಜ್ಞಾನಿಗಳು ದುರ್ಲಭರು ಕಲಿಯುಗದಲಿ ಆನತೇಷ್ಟಪ್ರದ ಜಗನ್ನಾಥ ವಿಠಲ ತಾನೆ ಕರೆತಂದು ತೋರಿ ಪುನೀತನ ಮಾಡ್ದ 3
--------------
ಜಗನ್ನಾಥದಾಸರು
ಕೃತ್ತಿಕೋತ್ಸವ ಗೀತೆ ಕೃತ್ತಿಕೋತ್ಸವ ನೋಡುವ ಬಾರೆ ನ ಮ್ಮಾರ್ತಿಯ ಪರಿಹರಿಪನು ನೀರೆ ಪ. ಬಹುಚಂದದಿ [ನಿಂದ]1 ಚಂದಂದಾಭರಣ ತೊಟ್ಟನೆ ಅರ್ತಿಯಿಂದಲೆ ತಾ ಪೊರಟಾನೆ 2 ಮಹಾಧ್ಯಾನದ ಮೇಲಿರಿಸಿ ಭಕ್ತವತ್ಸಲನಾಲಯಕೆಲ್ಲ 3 ಯಾರದಿಂದಲೆ ಶ್ರೀರಂಗನೇರಿ ಚಕ್ರಮೂರುತಿಯಮಂಟಪದಲ್ಲಿ 4 ಪಂದ (?)ವನಿತ್ತಾನೆ ಮುದದಿ ಲಕ್ಷ್ಮಿಗೆ ಸೇವೆ ಕೊಟ್ಟಾನೆ 5 ಆಳುಗಳ ಕೈಲಿತ್ತು ಪೊರೆದಾನೆ ಭಕ್ತರ ಹಸ್ತದಲಿ ಚಿತ್ತೈಸಿದನೆ 6 ಇಂದಿರೆರಮಣ ಗೋವಿಂದನೆ ಭವಬಂಧನಂಗಳನೆಲ್ಲ ಕಳೆವನೆ 7 ಅರ್ತಿಯಿಂದಲೆ ನೋಡಿದವರಿಗೆ ಮುಕ್ತಿಯ ಕೊಡುವನು ಸತ್ಯವಿದು 8
--------------
ಯದುಗಿರಿಯಮ್ಮ
ಕೃತ್ತಿವಾಸನ ಪ್ರಿಯ ಪುತ್ರನೆ ಗುಹ ಸ- ರ್ವೋತ್ತಮ ಚಿದ್ರೂಪ ಪ ಚಿತ್ತಜ ಪ್ರತಿರೂಪಾ ಪ್ರತಾಪಾಅ.ಪ ದೀನತನದಿ ಕಡುಬೇನೆಯ ಪಡುತಲಿಹೀನಮನುಜನೆನ್ನಾ | ದಾನಿಯಾಗಿಹ ಕರುಣಾನಿಧಿ ಕೈಪಿಡಿ ಧ್ಯಾನಿಪೆ ನಾ ನಿನ್ನ ಪ್ರಸನ್ನ 1 ಸುತ್ತಮುತ್ತಿರುವ ವಿಪತ್ತುಗಳಾ ಭಯ ಮೆತ್ತಿಕೊಂಡಿದೆ ತಾನೇ ಸತ್ವಶಾಲಿಯೇ ನೀ ಕಿತ್ತೊಗೆಯದಿರೆ ಅ- ನ್ಯತ್ರ ಗತಿಯ ಕಾಣೆ ನಿನ್ನಾಣೆ 2 ಪಾಶ ಅಂಕುಶಧರ | ನಾ ಸಹೋದರ ಪಾವಂ- ಜೇಶ ಮಹಾನುಭಾವ | ದಾಸರಿಗೊದಗುವ ತ್ರಾಸವ ಕಳೆ ಸ- ರ್ವೇಶನೆ ಮಹದೇವಾ | ದೇವರ ದೇವಾ 3
--------------
ಬೆಳ್ಳೆ ದಾಸಪ್ಪಯ್ಯ
ಕೃತ್ಯವನು ತಿಳಿಸಯ್ಯ ಕೃತ್ತಿವಾಸನ ಪ್ರೀಯಾ ಪ ಭೃತ್ಯವತ್ಸಲ ಭಾಗ್ಯ ಸಂಪನ್ನ ಮೋಹನ್ನಾ ಅ.ಪ ಹಾಸರಲಿ ನಿಂತು ಕ್ಲೇಶಪಡಿಸುವ ವಾಕ್ಯ ಅಕ್ಲೇಶಪಡಿಸುವಾ 1 ಭಾವದಿಂದೊಮ್ಮೆ ಭಯನಿತ್ತಭಯ ಪಾಲಿಪ ಭಕ್ತ ಬಂಧೊ 2 ಕಾಲಕಾಲಕೆ ಕಾಲೋಚಿತದ ಮರ್ಮ ಸೂಚಿಸೆನಗೆ 3 ವಚನ ಸತ್ಯವ ಮಾಡು ವಾಚನಸ್ವತಿಯ ಸಖಚಾಚುವ್ಯನೋಕರ 4 ವಾಚಾಮಗೋಚರ ತಂದೆವರದಗೋಪಾಲವಿಠಲನ ಚರಣ ಭಜಕ ಸುಖೇಚರೇಂದ್ರಾಧಿಪ 5
--------------
ತಂದೆವರದಗೋಪಾಲವಿಠಲರು
ಕೃಪಣ ಶಿಷ್ಯನಿಗೇಅಪವರ್ಗಪ್ರದ ಹರಿಯೆ | ಅಪವಾದ ಕಳೆಯೋ ಅ.ಪ. ದಾಸನಾದವನು ನಿ | ರ್ದೋಷಿ ಎನುವುದು ನಿಜದಾಸನೆನೆ ಹನುಮಂಗೆ | ಲೇಸು ಸಲ್ಲುವುದೋ |ದಾಸರನುಯಾಯಿ ನರ | ದೂಷಣೆಗೆ ಒಳಗಾಗಿಕ್ಲೇಶ ಪಡುವುದು ಉಚಿತೆ | ಶ್ರೀಶ ಸರ್ವೇಶಾ 1 ಫಲವು ತುಸು ಕೆಟ್ಟಿರಲು | ಆ ಉಪಭಾಗವ ಬಿಸುಟುಮೆಲುವುದಿಲ್ಲವೆ ಫಲವ | ಹಲವು ಜನರೂಕಲಿಮಲಘ್ನನೆ ಹರಿಯೆ | ಕಲುಮಷವನೆ ಕಳೆಯುತ್ತಕಲುಷ ದೂರನ ಗೈಯ್ಯೋ | ಬಲು ದಯಾ ಪೂರ್ಣಾ 2 ಶಿರಿಮಾಧವಾ ಭಿನ್ನ | ಗುರು ಗೋವಿಂದ ವಿಠಲಕರುಣಾಪಯೋನಿಧಿಯೆ | ಸರ್ವಾಂತರಾತ್ಮತರಳಗೊದಗಿಹ ವಿಪದ | ಪರಿಹರವ ಗೈಯ್ಯುತ್ತಕರುಣಿಸೆನೆ ಮನಶಾಂತಿ | ಹರಿಯೆ ಭಿನ್ನವಿಪೇ 3
--------------
ಗುರುಗೋವಿಂದವಿಠಲರು
ಕೃಪಣ ಶ್ರೀಪಾದಾರ್ಚನೆಯನಿತ್ತು ಪ ಅಪಾರ ಜನುಮದ ಪಾಪೌಘ ಬೆನ್ನಟ್ಟಿ ತಾಪಗೊಳಿಸುತ್ತಿದೆ ಈ ಪರಿಭವದೊಳು ಅ.ಪ. ಪತಿತ ನಾನಾದರೂ ಪತಿತ ಪಾವನ ನೀನು ಪಶುಪತಿ ಪಾಪಹರ ಗತಿಹೀನರಿಗೆ ನೀನೆ ಗತಿದರ್ಶಕನೆಂದು ತುತಿಸುತ್ತಿಹುದು ವೇದತತಿ ಸಮ್ಮತವಾಗಿ 1 ಭವಭವದಲಿ ಬಂದು ಬವಣೆಗಳಲಿ ಬೆಂದು ಬಳಲಿದೆ ಭಕ್ತ ಬಂಧು ಭವಹರ ನೀನೆಂಬುದನು ಭವಿಗಳಿಂ ನಿತ್ಯ ಶ್ರವಣದಿ ಕೇಳಿ ನಿನ್ನವರವನೆನಿಸಿದೆ 2 ಗೌರಿ ಮನೋಹರ ಗೌರಾಂಗ ಭಕ್ತರು ದ್ಧಾರಿಯೆ ಶೂಲಧರ ಸಾರಿದೆ ನಿನ್ನಂಘ್ರಿವಾರಿಜಯುಗಳವ ಕಾರುಣ್ಯದಲಿ ನೋಡು ಅಭಯವ ನೀಡು 3 ಮುಪ್ಪುರಹರ ಮುಕ್ಕಣ್ಣ ಗಂಗಾಧರ ಮೃತ್ಯು ಮೃತ್ಯುವೆ ಶಂಕರಾ ಸರ್ಪಭೂಷಣ ಅಪಮೃತ್ಯು ನಿವಾರಣ ಕಪ್ಪುಗೊರಳ ಕೃತ್ತಿವಾಸ ಸುರೇಶ 4 ಅಜ ಸಂತನಧ್ವರ ಭಜನೆಯ ಕೆಡಿಸಿದ ವಿಜಯ ವಿಗ್ರಹ ಶರೀರ ಸುಜನರ ಹೃದಯಾಂಬುಜದಲ್ಲಿ ಮಿನುಗುವ ರಜದೂರ ಶ್ರೀಕಾಂತ ನಿಜಭಕ್ತ ಗುರುವರ 5
--------------
ಲಕ್ಷ್ಮೀನಾರಯಣರಾಯರು
ಕೃಪೆ ನಿಮ್ಮದಾಗಬೇಕು ಸ್ವಾಮಿ ನಿಮ್ಮರಿಯಲಿಕ್ಕೆ ಅಪಾರ ಮಹಿಮೆ ನಿಮ್ಮ ಸುಂಪಾದ ತಿಳಿಯಲಿಕ್ಕೆ ಧ್ರುವ ಭ್ರಾಂತಗೆಲ್ಲಿಹುದಯ್ಯ ಪೂರ್ಣನಿಂತ ನಿಲಕಡೆಙÁ್ಞನ | ಎಂತುಹೇಳಿದರ ಖೂನ ಶಾಂತಹೊಂದದಯ್ಯಮನ | ಪಂಥ ಪರಮ ಗುಹ್ಯಸ್ಥಾನ ತಂತುವಿಡಿಯಲು ನಿರ್ಗುಣ | ಅಂತು ಇಂತು ಎಂಬುಂದೆ ನಾನಂತ ಗುನ ನಿಧಾನ 1 ಖೂನ ತಿಳಿಯಲಿಕ್ಯಗಾಧಗುರು ನಿಮ್ಮಶ್ರೀಪಾದ | ಬೋಧ ನೀಡಬೇಕು ಸುಪ್ರಸಾದ | ನೀನೆವೆ ನಿತ್ಯವಾದ ವಸ್ತು ಪರಿಪೂರ್ಣ ಸದಾ | ದೀನ ಬಂಧು ದಯದಿಂದ ಖೂನದೋರೊ ಆಶ್ರಯದ 2 ಮಂದ ಮತಿ ನಾನು ಭಕ್ತಿ ಮಾಡಲರಿಯೆನು ಒಡಿಯನಹುದಯ್ಯ ನೀನುಮಹಿಪತಿಯ ಕಾಮಧೇನು ಕೊಡಲಿಕ್ಕೆ ಪೂರ್ಣ ನೀನು ಸ್ವಾಮಿ ಕಾವ ಕರುಣನು ಪಿಡಿದಿಹ್ಯ ನಿಮ್ಮ ನಾನು ದಿವ್ಯ ಪಾದಪದ್ಮವನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೃಪೆ ಮಾಡೋ ಕೃಷ್ಣ ಕೃಪೆಮಾಡೋ ತಪ್ಪದೆ ಪ್ರಾತಃ ಸಂಜೆ ನಿನ್ನ ಸ್ತುತಿ ಮಾಡುವಂತೆ ಪ ಚಂದ್ರಹಾಸನಂತೆ ವ್ರತ ಮಾಡಲರಿಯೆ ಅಂದಿನ ಧ್ರುವನಂತೆ ತಪಗೈಯಲಾರೆ ಕಂದ ಪ್ರಹ್ಲಾದನಂತೆ ಬಿಡದೆ ನುತಿಸಲಾರೆ ಸಂದ ನಚಿಕೇತನಂತೆ ಮೃತ್ಯುಗೆಲ್ಲಲರಿಯೆ 1 ಕರಿರಾಜನಂತೆ ಕೂಗಲರಿಯೆನೋ ಗರುಡನಂತೆ ಸದಾ ಹೊತ್ತು ತಿರುಗಲಾರೆ ಮರುತಜನಂತೆ ಭಂಟನಾಗಲರಿಯೆ ಉರಗರಾಜನಂತೆ ಶಯನಕಾಗಲಾರೆ 2 ದ್ರೌಪದಿಯಂತೆ ಅತ್ತು ಮೊರೆಯಿಡಲಾರೆ ರೂಪೆ ಭಾಮೆಯಂತೆ ಬಲು ಮೋಹಿಸಲಾರೆ ಆಪಾಟಿ ಸಖನಾಗರಿಯೆನು ಮಕರಂದನೊಲು ವಿಪ್ರನಾರಾಯಣನಂತೆ ಭಕ್ತಿಯರಿಯೆನೊ ಹರಿಯೆ 3 ಜಾಜಿಪುರೀಶ ನಿನ್ನ ಚರಣ ಸೇವೆಯ ಕೊಡೊ ಸಾಜದಿ ಮಾಡುವೆ ತಿಳಿದಂತೆ ಪಾಮರನು 4
--------------
ನಾರಾಯಣಶರ್ಮರು
ಕೃಪೆಯಾಗೆನ್ನೊಳು ಜಗತ್ಪತಿ ಶ್ರೀ ಗೋವಿಂದ ಪ ಸತಿ ಮಾಯಾ ಧಾತ ನಿರ್ಭೀತ ಅನಾಥ ಸಂಜೀವಾ 1 ನಿತ್ಯ ಕರ್ತು ಮೈದೋರೋ 2 ವೆಂಕಟರಾಯನೆ ದಯಮಾಡಯ್ಯಾ 3 ದಾತ ಪಾದ ಸಾಮೀಪ್ಯ ಸಾಲೋಕ್ಯವಿತ್ತೂ 4 ಳ್ತರಳನ ಸಲಹಯ್ಯ ದೊರೆ ಶ್ರೀನಿವಾಸಾ 5
--------------
ಸದಾನಂದರು
ಕೃಷ್ಣ ಗೋಪಿ ಬಾಲನೆ ಬಹುಗುಣಶೀಲನೆಗೋವಳಪಾಲನೆ ನೋಡುವೆ ಬಾ ಬಾ ಬಾ ಪ ಗೋಪ ರೂಪನೆ ಪಾಪ ದೂರನೆನೀಪದೊಳು ಕುಳಿತು ಗೋಪೇರ ವಸ್ತ್ರವಶ್ರೀಪತಿ ನೀಡಿದಿ ಬಾ ಬಾ ಬಾ 1 ಸಿಂಧು ಮಂದಿರ ಸುಂದರಾಂಬರಮಂದಹಾಸವ ಮಾಡಿ ವಂದಾರುಗಳ ಮಾಡಿಆನಂದದಿ ನೋಡುವೆ ಬಾ ಬಾ ಬಾ 2 ದೋಷದೂರನೆ ವಾಸುದೇವನೆಶೇಷಗಿರಿಯಲಿ ನಿಂತು ದಾಸ ಜನರಿಗೆಲ್ಲಇಂದಿರೇಶನೆ ಕಾಯುವಿ ಬಾ ಬಾ ಬಾ3
--------------
ಇಂದಿರೇಶರು
ಕೃಷ್ಣ ಎಂಥಾದೊ ನಿನ್ನ ಕರುಣ ಶಿಷ್ಯ ಜನರುದ್ದೇಶಬಂದ್ಯೊ ನೀ ಕರುಣ ದುಷ್ಟಜನರ ಮಾಡಿದ್ಯೊ ನೀ ಮರ್ದನಿ ದೃಷ್ಟಿಸಿ ಮಾಡುವೆ ಸಾಧು ಸಂರಕ್ಷಣೆ 1 ಹುಟ್ಟಿ ವಸುದೇವನಲ್ಲಿ ಬಂದು ಹೊಳೆದ್ಯೊ ದಿಟ್ಟತನದಲಿ ನಂದಗೋಕುಲದಿ ಬೆಳೆದ್ಯೊ ಮೆಟ್ಟಿ ವಿಷದ ಹಾವಿನ ಹೆಡೆಯ ತುಳಿದ್ಯೊ ಕುಟ್ಟಿ ಕಂಸಾಸುರನ ಪ್ರಾಣವೆಳೆದ್ಯೊ 2 ಮೊಲಿಯನುಂಡು ಕೊಂಡಿ ಪೂತನಿ ಪ್ರಾಣ ಕಾಲಿಲೊದ್ದು ಕೊಂದ್ಯೋ ಶಕಟಾಸುರನ ಬಾಲತನದಲಿ ಕೆಡಹಿದ್ಯೊ ಮಾವನ ನೆಲೆಯು ತಿಳಿಯದು ಇನ್ನೊಬ್ಬರಿಗೆ ಪೂರ್ಣ 3 ತುರುಗಳ ಕಾಯ್ದ್ಯೊ ನೀ ಗೋವಿಂದ ಬೆರಳೆಲೆತ್ತಿದ್ಯೊ ಹಿರಿಯ ಮುಕುಂದ ಮರುಳು ಮಾಡಿದ್ಯೊ ಗೋಪಿಕೇರ ವೃಂದ ಹರುಷಗೈಸಿದೆ ಅನೇಕ ಪರಿಯಿಂದ 4 ಹಾಲು ಬೆಣ್ಣೆ ಕದ್ದು ತಿಂಬು ನಿನ್ನಾಟ ಬಾಲಗೋಪಾಲರ ಕೂಡಿ ನಿನ್ನೂಟ ಚಲುವ ನಾರೇರ ನೋಡುವ ನಿನ್ನೋಟ ಒಲಿದು ಕುಬ್ಜಿಯ ಬೆನ್ನ ಮಾಡಿದ್ಯೊ ನೀಟ 5 ಗುರುಮಗನ ತಂದುಕೊಟ್ಯೋ ನೀ ಪ್ರಾಣ ಸುರಬ್ರಹ್ಮಾದಿಗಳರಿಯರು ನಿನ್ನ ತ್ರಾಣ ಶರಣಾಗತರ ವಜ್ರಪಂಜರು ಪೂರ್ಣ ವರಮುನಿಗಳಿಗಾಗಿಹೆ ನೀ ನಿಧಾನ 6 ಒಲಿದು ಪಾಂಡವರಿ ಗಾದಿ ಸಹಕಾರಿ ಬಲವ ಮುರಿದ್ಯೊ ನೀ ಕೌರವರ ಸಂಹಾರಿ ಪರಿ ಅಟ ನಿನ್ನದೊ ಶ್ರೀ ಹರಿ ಪರಿ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೃಷ್ಣ ಎನಗೆ ಬಂದರಿಷ್ಟವ ಕಳೆದು ನಿನ್ನ ನಿಷ್ಠೆಯಲಿ ಇರುವಂತೆ ಇಷ್ಟೆ ಮಾತುರವೀಯೋ ಪ ನಿರ್ದೋಷ ಗುಣವಾರುಧಿ ನಿರ್ಧಾರವಾಗಿ ನುಡಿವೆ ಸಿದ್ಧಾಂತ ಮತದಲಿ ಪೊದ್ದಿಪದೆ ಸಾಕು 1 ಅಜ ಭವಾದ್ಯರು ನಿನ್ನ ಭಜಿಪರಾರು ದೋಷ ಮಾನವ ತಿಳಿದು ಭಜಿಸಬಲ್ಲೆನೆ ದೇವಾ 2 ಮಧ್ವ ಸರೋವರದಲ್ಲಿ ಇದ್ದು ಪೂಜೆಯಗೊಂಬ ಮುದ್ದು ವಿಜಯವಿಠಲ ಬಿದ್ದೆ ನಿನ್ನಯ ಪದಕೆ 3
--------------
ವಿಜಯದಾಸ