ಒಟ್ಟು 4461 ಕಡೆಗಳಲ್ಲಿ , 126 ದಾಸರು , 3134 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳಂ ರಘುರಾಮಗೇ ಜಯಮಂಗಳಂ ಗುಣಧಾಮಗೆ ಮಂಗಳಂ ಮದನಾರಿವಂದ್ಯಗೆ ಮಂಗಳಂ ಮನ್ನಾಥಗೆ ಪ. ರಾಮಗೇ ನತಕಾಮಗೆ ಘನಶ್ಯಾಮಗೆ ಸುಪ್ರೇಮಗೇ ಕಾಮಿತಾರ್ಥಪ್ರದಾತಗೆ ವರ ರಮಣೀಯಕರೂಪಗೆ 1 ಶ್ರೀಶಗೆ ಜಗಧೀಶಗೆ ಭಯನಾಶಗೇ ಸರ್ವೇಶಗೆ ರಾಸಮನೋಲ್ಲಾಸ ಲಕ್ಷ್ಮೀಶ ಕೇಶವಮೂರ್ತಿಗೆ 2 ಮಾರುತಾತ್ಮಜ ಸೇವೆಗೇ ನತಪಾರಿಜಾತ ಸಮಾನಗೆ ವಾರಿಜಾಯತನೇತ್ರಗೇ ಶ್ರೀ ಶೇಷಶೈಲನಿವಾಸಗೆ 3
--------------
ನಂಜನಗೂಡು ತಿರುಮಲಾಂಬಾ
ಮಂಗಳಂ ವೆಂಕಟೇಶಗೆ ಅಲಮೇಲ್ ಮಂಗಾ ಮನೋಹರಗೆ ಪ ಭವ ಶುಭ ಅ.ಪ ಆಕಾಶರಾಯನಳಿಯಗೆ | ಪಿ ಲೋಕವಿಶೃತಗೆ ಶ್ರೀ ಭೂರಮಣಗೆ 1 ತೊಂಡಮಾನ ನೃಪ ಪೂಜಿತಗೆ | ಬ್ರ ಕುಂಡಲಿ ಶಯನಗೆ ಗೋಪಾಲಗೆ ಮೃ ದ್ಭಾಂಡವ ರಚಿಸುವಗೆ ಭೀಮಗೊಲಿದವಗೆ 2 ವರ ಚಕ್ರಗಧಾಧರ ಹಸ್ತಗೆ 3
--------------
ಗುರುರಾಮವಿಠಲ
ಮಂಗಳಂ ಶ್ರೀ ರಾಮಚಂದ್ರನಿಗೆ ಕಂಗೊಳಿಪ ದೇವಗೆ ಪ. ಬಿಟ್ಟು ಪಟ್ಟ ತೊಟ್ಟು ವ್ರತವ ಮೆಟ್ಟಿ ವನವನೂ ದುಷ್ಟರನ್ನು ಕುಟ್ಟಿ ಬಂದು ಪಟ್ಟವಾಳ್ದ ಶ್ರೇಷ್ಠ ಮೂರ್ತಿಗೆ 1 ಸೀತೆ ಅನುಜರೊಡನೆ ವೆರಸಿ ವಾತತನಯನ ಪ್ರೀತಿ ಸೇವೆ ಕೊಳುತ ರಾಜ್ಯ ನೀತಿಯಿಂದ ನಡೆಸಿದವಗೆ 2 ಶ್ರೇಷ್ಠ ಭಕ್ತರೊಡನೆ ವೆರಸಿ ದಿಟ್ಟತನದಲಿ ಪಟ್ಟವಾಳಿ ಪ್ರಜರ ಪೊರೆದು ಇಷ್ಟ ಸಲಿಸಿ ಮುದವಿತ್ತವಗೆ 3 ರಾಮನಾಮ ಪಠಿಪ ಜನರ ಕಾಮಿತಾರ್ಥವ ಪ್ರೇಮದಿಂದ ಕೊಟ್ಟು ಪೊರೆವ ಸ್ವಾಮಿ ಸುಗುಣಧಾಮ ಹರಿಗೆ4 ಭೂಪರೊಳಗೆ ಶ್ರೇಷ್ಠ ರಾಮರೂಪ ಮಂಗಳಂಗೋಪಾಲಕೃಷ್ಣವಿಠ್ಠಲಗೆ ದೀಪದಾರತೀಯ ಬೆಳಗಿ 5
--------------
ಅಂಬಾಬಾಯಿ
ಮಂಗಳಂ ಶ್ರೀಕೃಷ್ಣವೇಣಿಗೆ ಜಯ ಮಂಗಳಂ ಜಗದುದ್ಧಾರಳಿಗೆ ಪ ರಂಗನ ಪಾದದಿ ಗಂಗೆ ಉದ್ಧವಿಸಲು ಅಂಗದಿಂದಾಗಲೆ ತಾನುದಿಸಿ ಬಂದು ಗಂಗಾಧರನ ದೇಹದಿ ಬಂದು ವೇಣಿಯ ಸಂಗಮವಾಗಿ ಬಂದ ದೇವಿಗೆ ಅ.ಪ ಮುನ್ನೂರು ಅರವತ್ತು ನದಿಗಳೆಲ್ಲ ಕೂಡಿ ಕನ್ಯಾರಾಶಿಗೆ ಗುರು ಬಂದಿರಲು ವಾಸವ ಮಾಡಲು ಅವರ ಪಾಪವ ಕಳೆದ ಶ್ರೀ ಕೃಷ್ಣವೇಣಿಗೆ 1 ಇಂದ್ರನ ಪಾಪವ ನದಿಗಳಿಗೆ ಬಿಡಲು ನಿಂದಿತರಾಗಿ ದುಃಖಿಸುತ ಪೋಗಿ ಬಂದ ಕೃಷ್ಣವೇಣಿಗೆ ಗಂಗಾದೇವಿಗೆ 2 ವೇಣುಶೂರ್ಪಗಳಲ್ಲಿ ನಾನಾ ಫಲಗಳ ಇಟ್ಟು ನೇಮದಿಂ ಬಾಗಿನಂಗಳ ಕೊಡಲು ಮಾನಿನಿಯರೆಲ್ಲ ಮೌನದಿಂ ಕೊಡಲು ಮಾಂಗಲ್ಯವಿತ್ತು ಸಲುಹುವ ದೇವಿಗೆ 3 ಕೃಷ್ಣತೀರದಲ್ಲಿದ್ದ ವೃಕ್ಷದೇವತೆಗಳು ಋಷಿಗಳು ಪಾಷಾಣವಾಗಿರಲು ನಕ್ರ ಮೊದಲಾದ ಜಂತುಗಳೆಲ್ಲ ಯಕ್ಷರು ವಾಲೂಕ ಹರಿದ ಧೂಲಿಯಾಗಿಹರು 4 ಇಂದ್ರದಂಡಕ ದಂತ್ರಿಪಾಲ ಸೋಮಕ ಧರ್ಮ ನಂದನ ನಳ ಹರಿಶ್ಚಂದ್ರರೆಲ್ಲ ಬಂದು ಸ್ನಾನವ ಮಾಡೆ ಅವರ ಪಾಪಗಳ ಆ ನಂದದಿಂ ಕಳೆದ ಕೃಷ್ಣವೇಣಿಗೆ 5 ಮಲಾಪಹಾರಿ ಭೀಮೆ ತುಂಗಭದ್ರೆಯು ಮೊ [ಒಲವಿ]ಂದ ಸ್ನಾನಪಾನವ ಮಾಡಿದವರಿಗೆ [ಲೋಲ] ಶ್ರೀನಿವಾಸನ ಪಾದತೋರ್ಪ ಕೃಷ್ಣವೇಣಿಗೆ 6
--------------
ಯದುಗಿರಿಯಮ್ಮ
ಮಂಗಳಂ ಶ್ರೀರಂಗಗ ಮಂಗಳಂ ಇಂಗಿತ ಭಕ್ತರ ಅಂಗಸಂಗಾದವಗ ಪ ಸಿರಿತಳಕ ಮಂಗಳ ಕಾಲಿಯ ವರದನಾ ವರನಖಮಂಗಳ ಗಂಗೆ ಪಡಿದನಾ ಚರಣ ಕಮಂಗಳ ಅಹಿಲ್ಯ ಉದ್ಧಾರಗ ನೆರೆಜಂಘಗೆ ಮಂಗಳೆ ಶೊದಾನಂದನಾ 1 ತೊಡೆಗಳಿಗೆ ಮಂಗಳ ಗರುಡ ವಾಹನನಾ ನಡುವಿಗೆ ಮಂಗಳ ಧೃವ ಗೊಲಿದನ ಒಡಲ ಕಮಂಗಳ ಜಗವಳ ಕೊಂಬನಾ ಧೃಡ ನಾಭಿಗೆ ಮಂಗಳ ಬ್ರಹ್ಮ ಪಿತನಾ 2 ಉರ ಸಕ ಮಂಗಳ ಉಪಮನ್ಯು ಪ್ರೀಯನಾ ಸಿರಿವಕ್ಷಕ ಮಂಗಳ ಭೃಗು ರಕ್ಷನಾ ಕರಗಳಿಗೆ ಮಂಗಳ ಕರಿರಾಜ ವರದನಾ ಕೊರಳಿಗೆ ಮಂಗಳ ತುಳಸಿ ಧರನಾ 3 ಇದು ಶೃತಿಗೆ ಮಂಗಳ ಹನುಮನೇ ಕಾಂತನಾ ವದನಕ ಮಂಗಳ ವಿದುರ ಗೊಲಿದನಾ ಅದೇ ಫ್ರಾಣಕೆ ಮಂಗಳ ಪ್ರಲ್ಹಾದ ವತ್ಸಲನಾ ಮದನ ಮೋಹನನಾ 4 ಸಿರಸಕ ಮಂಗಳ ಫಣಿರಾಜಶಯನನಾ ದೊರೆತನಕ ಮಂಗಳ ಶ್ರೀ ಭೂರಮಣನಾ ಗುರುತನಕ ಮಂಗಳ ಉದ್ಬವತಾರಕನಾ ಕರುಣಿಗೆ ಮಂಗಳಾರ್ಜುನ ಬೋಧನಾ 5 ಪ್ರಭುಗೆ ಮಂಗಳ ಬಲಿ ವಿಭೀಷಣರ ಸ್ಥಾಪನಾ ಅಭಯಕ ಮಂಗಳಾಜಮೀಳ ಪಾಲನಾ ಅಭಿಮಾನಿಗೆ ಮಂಗಳಾ ಪಾಂಚಾಲಿಕಾಯಿದನಾ ಪ್ರಭೆಗೆ ಮಂಗಳಾ ರವಿ ಸೋಮಾತ್ಮಕನಾ 6 ಸಿರಿನಾಮಕ ಮಂಗಳ ನಾರದ ಪ್ರೀಯನಾ ಕ ಮಂಗಲ ಶಿವ ವಂದ್ಯನಾ ಗುರುವರ ಮಹಿಪತಿ ನಂದನಸಾರಥಿ ಬಿರದಿಗೆ ಮಂಗಳಾಂಬರೀಷ ನೊಡಿಯನಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಂಗಳಂ ಸುಗುಣಾಭಿರಾಮಗೆ ಮಂಗಳಂ ಶ್ರೀರಾಮಗೆ ಪ ಮಂಗಳಂ ಲೋಕಾಭಿರಾಮಗೆ ಮಂಗಳಂ ಗುಣಧಾಮಗೆ ಅ.ಪ. ದಶರಥನ ಸುತನಾಗಿ ಮುನಿವರ ಕುಶಿಕಯಜ್ಞವ ಪಾಲಿಸಿ ಶಶಿಮುಖಿಯ ಸೀತೆಯನು ಒಲಿಸಿದ ದಿಶಿಸುಭಾಸುರ ನಾಮಗೆ 1 ತಂದೆಯಾಜÉ್ಞಯ ಪೊಂದುತಾಗಲೆ ಬಂದು ವನದಲಿ ನೆಲಸಿದ ಛಂದದಿಂದಲಿ ಕಂದಭರತನಿಗಂದು ಪಾದುಕೆ ಇತ್ತಗೆ 2 ದಂಡಕಾವನದಲ್ಲಿ ನೆಲಸುತ ಖಂಡಿಸುತ ರಾಕ್ಷಸರನು ಭಂಡರಾವಣ ಹರಿಸೆ ಸೀತೆಯ ಚಂಡ ಹನುಮನ ಕಂಡಗೆ 3 ವೀರ ವಾಲಿಯ ಕೊಂದು ರಾಜ್ಯವ ಸೂರ್ಯಸುತನಿಗೆ ಪಾಲಿಸಿ ವಾರಿಜಾಕ್ಷಿಯ ಪುಡುಕಲೋಸುಗ ವೀರರನು ಕಳುಹಿಸಿದಗೆ 4 ಮಾರುತಾತ್ಮಜನಿಂದ ಸೀತಾ ನೀರಜಾಕ್ಷಿಯ ವಾರ್ತೆಯಂ ಸಾರಿ ಮದನು ಪೊಂದಿ ದಯದಿಂ ವೀರ ಕಪಿವರಗೊಲಿದಗೆ 5 ಧೀರರಾವಣನನ್ನು ಕೊಂದು ನಾರಿ ಸೀತೆಯನೊಲಿಸುತ ಸಾರಿ ಸಾಕೇತವನು ಮುದದಿಂ ವೀರ ಪಟ್ಟವನಾಳ್ದಗೆ 6 ಜಾನಕೀ ಲಕ್ಷ್ಮೀ ಸಮೇತಗೆ ಮೌನಿವರಗಣ ಸೇವ್ಯಗೆ ಮಾನವಾಂಬುಧಿ ಪೂರ್ಣ ಚಂದ್ರಗೆ ಧೇನುಪುರ ಶ್ರೀರಾಮಗೆ 7
--------------
ಬೇಟೆರಾಯ ದೀಕ್ಷಿತರು
ಮಂಗಳನಾಮಾ ನಮೋ ನಮೋ ಪ ಮಾಂಗಿರಿಧಾಮಾ ನಮೋ ನಮೋ ಅ.ಪ ಅಂಗಜಾತ ಪಿತ ಸುರಪತಿವಿನುತಾ ತುಂಗ ಕೃಪಾಂಬಕ ನಮೊ ನಮೋ 1 ರಂಗನಾಥ ನೀಲಾಂಗ ಮಹಾದ್ಭುತ ಸಿಂ[ಗಾನ]ನ ಹರೇ ನಮೋ ನಮೋ 2 ನಾಗಾಲಂಕೃತ ಸರೋಜ ಭೂಷಿತ ಕಮಲಭವಾನತ ನಮೋ ನಮೋ 3 ತಾರಕ ನಾಮ ನಮೋ ನಮೋ ರಘುರಾಮಾ ನಮೋ ನಮೋ 4 ಸುರಮುನಿ ನಾರದ ಗೌತಮ ಪ್ರೇಮಾ ಧರೆಗಭಿರಾವೂ ನಮೋ ನಮೋ 5 ಗಿರಿಜಾಧವನುತ ಗುಣ ಮಣಿಧಾಮಾ ರಾಕ್ಷಸ ಭೀಮಾ ನಮೋ ನಮೋ 6 ರಾಮಾ ರಘುರಾಮ ಕ್ಷೀರಾಬ್ಧಿಶಾಯಿ ಸೋಮಾ ಮಾಂಗಿರಿವರ ನಮೋ ನಮೋ7
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಂಗಳವೆನ್ನಿರೆ ಮದನಗೋಪಾಲನಿಗೆ ಮಂಗಳವೆನ್ನಿರೆ ಮಾಧವಗೆ ಪ ಮಂಗಳವೆನ್ನಿರೆ ಮಾಮನೋಹರನಿಗೆ ಮಂಗಳವೆನ್ನಿರೆ ಮುರಹರಗೆ ಅ.ಪ ಭುವನಮೋಹನ ಶಾಮಲಸುಂದರಾಂಗಗೆ ಅಮಿತಪರಾಕ್ರಮ ಅಚ್ಚುತಗೆ ನವನವಲೀಲೆಯ ತೋರಿದ ದೇವಗೆ ಸುವಿನಯದಿಂದ ಶ್ರೀ ಶ್ರೀಧರಗೆ1 ಶಂಖು ಚಕ್ರಪೀತಾಂಬರಧಾರಿಗೆ ಬಿಂಕದಿಂದ ಮುರಳಿಯನೂದಿದಗೆ ಶಂಕರಾದಿ ಸುರಸೇವಿತಗೆ ನಿಷ್ಕ- ಳಂಕದಿ ಭಜಿಪರ ಪೊರೆದವಗೆ2 ಪರಿಪರಿ ವಿಧದಲಿ ಹರಿ ಸ್ಮರಣೆಯ ಮಾಡೆ ಪರಾಭವನಾಮ ಸಂವತ್ಸರದಿ ದುರಿತಗಳೆಲ್ಲವ ಪರಿಹರಿಸುತ ಕಾಯ್ವ ಸಿರಿವರ ಕಮಲನಾಭ ವಿಠ್ಠಲನಿಗೆ3
--------------
ನಿಡಗುರುಕಿ ಜೀವೂಬಾಯಿ
ಮಂಗಳಾ ವರಯೋಗಿ ರಾಯಗೆ | ಮಂಗಳಾ ಪರಮ ಅವಧೂತಗೆ |ಮಂಗಳಾ ಪರಮಾತ್ಮ ಶ್ರೀ ಗುರು ಸಿದ್ಧ ಬಸವಂಗೆ | ಜಯ ಜಯ ಮಂಗಳಾ ಪ ಆದಿ ಮಧ್ಯಾವಸಾನವಿಲ್ಲದ ನಾದ ಬಿಂದು ಕಲಾ ಶೂನ್ಯಗೆ |ಸಾಧಿಸುವ ಸಿದ್ಧಾಂತ ಅಗಣಿತವಾದ ಬ್ರಹ್ಮವನು | ವೇದ ವೇದಾಂತವ ವಿಚಾರಿಸಿ ನಾದ ಋಷಿ ಅಪಾರ ಚಿಂತ್ಯನು | ಮೇದಿನಿಯ ಭಕ್ತರನುಗ್ರಹಕಿತ್ತ ಬಂದ ಬಸವರಾಜಯೋಗದಲಿ 1 ಮತ್ಸ್ಯ ಕೂರ್ಮ ವರಾಹನಾದ ಮಾಧವಗೆ 2 ಮಾಧವ ಕಲಿಯೊಳಗವತರಿಸಿದ ಬಳಿಕಾ ಬಾಲಕೃಷ್ಣಂಗೆ 3 ನೋಡಿದರೆ ದುರಿತವನು ಕೆಡುವನು, ಬೇಡಿದರೆ ಸಾಯೋಜ್ಯನೀವನು ಮಾಡಿ ಪಾದದ ತೀರ್ಥಕೊಂಡಡೆ ಮರಳಿ ಪುಟ್ಟಗಡ | ಖೇಡನಾಗದೆ ನಾಮಕೀರ್ತಿಯ ಮಾಡು ಮರುಳೆ ಆದಿಪುರುಷನರೂಢಿಯೊಳು ಈಡ್ಯಾಡಿ ಮೆರೆದ ಬಸವರಾಜಯೋಗದಲಿ 4 ಇಂತು ಭಕ್ತರ ಭಕ್ತಿಗೋಸುಗ ಅಚಿಂತ್ಯ ಮಹಿಮನು ಶರೀರವತಾ- ನಂತು ಧರಿಸಿಹನಿಲ್ಲದಿದ್ದಡೆ ದೇಹ ತಾನೇ ತಾ |ಕಂತು ಹರನವತಾರವಲ್ಲದೆ ಭ್ರಾಂತಿ ಬಿಡಿಸಿದ ಕೊಳಕೂರದಲಿಸಂತತವೆ ನೆಲೆಸಿಹನು ಬಸವರಾಜಯೋಗದಲಿ 5
--------------
ಭೀಮಾಶಂಕರ
ಮಂಗಳಾಂಗನ ಭಜಿಸೆ ಹಿಂಗಿಸುವ ಭವವ ಎನ್ನಂಗದೊಳಡಗಿಹನೊ ಶ್ರಿಂಗಾರ ಮೂರುತೀ ಪ. ಧ್ಯಾನಕೆ ತಂದು ನಿಧಾನದಲಿ ಯೋಚಿಸು ಜ್ಞಾನಿಗಳರಸನ ಮಾನಸದೊಳಗೆ ಕಾನನದೊಳು ವೃದ್ಧ ಶಬರಿಯೆಂಜಲನುಂಡು ದಾನಶೀಲನು ರಾಮ ಕೈವಲ್ಯವನಿತ್ತಾ 1 ದುಷ್ಟ ಕಂಸನ ಹರಿಸಲು ಉತ್ಕøಷ್ಟ ಕೃಷ್ಣ ಬರೆ ಸೃಷ್ಟಿಗೊಡೆಯಗೆ ಗಂಧವಿತ್ತಳಾ ಕುಬ್ಜಿ ದಿಟ್ಟ ರೂಪವ ಉಂಗುಷ್ಠದಿಂದೊತ್ತುತ್ತ ಭಕ್ತ ರಿಷ್ಟವನು ಸಲಿಸಲು ಕಷ್ಟವೇ ಹರಿಗೆ 2 ಯಾವಾಗ ಸ್ತುತಿಸಿದರು ಮತ್ತಾವಲ್ಲಿ ಕರೆದರೂ ಧಾವತಿಗೊಂಡು ಬಹ ಶ್ರೀ ಶ್ರೀನಿವಾಸ ಹಾವಭಾವದ ತೆರದಿ ದೇವ ಬಂದೊದಗುವ ಮತ್ತಾವ ದೇವರ ಕಾಣೆ ಶ್ರೀವರನಲದೇ 3
--------------
ಸರಸ್ವತಿ ಬಾಯಿ
ಮಂಗಳಾರತಿ ಎತ್ತಿರೆಲ್ಲ ಮಹಾತ್ಮರೆಲ್ಲಮಂಗಳಾರತಿ ಎತ್ತಿರೆಲ್ಲಸಂಗಾತೀತ ಚಿದಾನಂದಾವಧೂತಾಂಗ ಶ್ರೀಬಗಳಾಮುಖಿ ದೇವಿಗೆ ಪ ಕರದೊಳು ಚೂಡೆ ಕಂಕಣವಿಟ್ಟುಕೊರಳೊಳು ಸರಿಗೆಯ ಧರಿಸಿಶಿರದಿ ರತ್ನದ ಕಿರೀಟವಿಟ್ಟು ಸರ್ವಾಭರಣವಧರಿಸಿ ದುರುಳರ ದುಷ್ಟರ ಛೇಧಿಸಿ ಭ-ಕ್ತರ ಪಾಲಿಪ ಬಗಳಾಮುಖಿಗೆ 1 ನಿತ್ಯ ನಿರ್ಗುಣ ನಿರಾಮಯಗೆ ನಿಂದಕವಿದಾರಣೆಗೆಭಕ್ತ ವತ್ಸಲೆ ಭುವನೇಶ್ವರಿ ಮಾತೆಗೆಭಕ್ತಾಧಾರೆಗೆ ಪ್ರತ್ಯಗಾತ್ಮೆಗೆ ಪರಬ್ರಹ್ಮ ರೂಪಿಣಿಭಕ್ತ ಪ್ರಾಣಿಗೆ ಬಗಳಾಮುಖಿಗೆ 2 ಅದ್ವಯ ಆಗಮಗೋಚರಗೆ ಅಚಲಾನಂದಳಿಗೆ ಶುದ್ಧಸಂವಿಜ್ಯೋತಿರ್ಮಯಳಿಗೆಸರ್ವಸಾಕ್ಷಿಗೆ ಸದ್ಗುರು ಚಿದಾನಂದಾವಧೂತಗೆ ಸಿದ್ಧಪರ್ವತವಾಸಿ ಬಗಳಾಮುಖಿಗೆ 3
--------------
ಚಿದಾನಂದ ಅವಧೂತರು
ಮಂಗಳಾರತಿ ಎತ್ತುವೆ ಮಾರಮಣಗೆ ಪ ಅಂಗಜ ಜನಕ ಶುಭಾಂಗ ಶ್ರೀರಂಗಗೆ ಅ.ಪ ವೈರಾಜ್ಯ ಸ್ಯಾರಾಜ್ಯ ಮಹ ಪರಮೇಷ್ಠಿ ರಾಜ್ಯ ಸಾರ್ವಭೌಮ ನೀನೆಂದು 1 ವೇದೋಕ್ತ ಮಂತ್ರ ಪುಷ್ಪಾಂಜಲಿಯಿಂದ ನಿನ್ನಯ ಪಾದಕ್ಕೆರಗಿ ಪುನಃ ಪ್ರಾರ್ಥನೆಗೆಯ್ಯುತ 2 ಪಾಪಿಗಳೊಳಗತಿ ಪಾಪಿಯು ನಾನೆನ್ನ ತಾಪತ್ರಯವ ಬಿಡಿಸಿ ಕಾಪಾಡು ನೀನೆಂದು 3 ಪದಜಾನುಕರಗಳಿಂ ಉದರ ಹೃದಯದಿ ಶಿ- ರದಿ ದೃಷ್ಟ್ಯಮನಸವಚನಸಾಷ್ಟಾಂಗದಿಂ ಮಣಿದು 4 ಕಂದರ್ಪ ಕೋಟಿ ಲಾವಣ್ಯ ಸರ್ಪಶಯನ ನಮ್ಮಪ್ಪಾ ತಿಮ್ಮಪ್ಪನೆಂದು 5 ವಾಹನ ವಸ್ತೂಗಳರ್ಪಿಸಿ ಸರ್ವೋತ್ತಮ ನೀನೆಂದ್ಹೊಗಳಿ 6 ಅಪರಾಧವೆಮ್ಮಿಂದಲಾಗುವುದೆಲ್ಲ ಕ್ಷಮಿಸು ಕಪಟನಾಟಕ ಸೂತ್ರಧಾರೀ ಗುರುರಾಮವಿಠಲ 7
--------------
ಗುರುರಾಮವಿಠಲ
ಮಂಗಳಾರತಿ ನಮ್ಮ ರಂಗನಾಥನಿಗೆ ಜಂಗಮಾರ್ಚಿತಪಾದ ಕಲುಷವಿಭಂಗರಂಗನಿಗೆ ಪ ಜಾಜಿಯ ಪುಷ್ಪಂಗಳಂ ದಿವ್ಯ ಸ ಭಾಜ ಭಜಂತ್ರಿಗಳಿಂ ಮೂಜಗದೊಯನೆ ಮುಕ್ತಿಕೃಪಾಕರ ಶ್ರೀಜಯವೆನ್ನುತಲಿ 1 ವಾರುಧಿ ಶಯನನಿಗೆ ದಿವ್ಯ ಸು ಚಾರುಸನಯನಗೆ ನಮ್ಮ ನಾರಿಯರೆಲ್ಲರು ನಮಿಸುವ ಲಕ್ಷ್ಮೀ ನಾರಾಯಣನಿಗೆ 2 ರಾಧಾರುಕ್ಮಿಣಿ ಜಯಪತಿಗೆ ಸಂತೆ ಸರಗೂರೊಳಗಿಹ ನಮ್ಮಯ ಶ್ರೀ ಗುರು ತುಳಸೀರಾಮನಿಗೆ 3
--------------
ಚನ್ನಪಟ್ಟಣದ ಅಹೋಬಲದಾಸರು
ಮಂಗಳಾರತಿ ಮಾಡಿ ಮಂಗಳ ಮಹಿಮಾನಂಗಜನಕ ಹರಿ ತುಂಗವಿಕ್ರಮಗೆ ಮಂಗಳಾರತಿಯ ಧ್ರುವ ಅಗಣಿತಗುಣ ಅಗಮ್ಯಗೋಚರ ಸುಗಮದಲಾಡುವ ನಿಗಮೋದ್ಧಾರಗೆ 1 ಬಗೆದು ಬೆನ್ನಿಲಿ ಭಾರವ ನೆಗೆದಿಹ ನೋಡಿ ಭಗತವತ್ಸಲ ಸ್ವಾಮಿ ನಗಧರಗೆ 2 ಜಗತಿಯ ಕದ್ದೊಯ್ದ ಸುರನ ಸೀಳಿದ ಜಗದೋತ್ತಮನಾದ ಜಗದೋದ್ಧಾರಗೆ 3 ದುರುಳದೈತ್ಯನ ಬೆರಳುಗುರಿಲಿ ಸೀಳಿದ ತರಳ ಪ್ರಹ್ಲಾದಗೊಲಿದ ನರಹರಿಗೆ 4 ಬಲಿಯ ದಾನವ ಬೇಡಿ ನೆಲೆಗೆ ಅಳೆದುಕೊಂಡು ಬಲಿಯ ಬಾಗಿಲ ಕಾಯ್ದ ಶ್ರೀನಿಧಿಗೆ 5 ಪರಶುಪಿಡಿದು ಕ್ಷತ್ರಿಯರ ಸಂಹರಿಸಿದ ಪರಮಪುರುಷನಾಗಿಹ ತಪೋನಿಧಿಗೆ 6 ದೇವತಿಗಳ ಸೆರೆಯ ಬಿಡಿಸಿದ ದೇವನು ಪಾವನಮೂರುತಿ ಅಹಲ್ಯೋದ್ದಾರಗೆ 7 iÀುದುಕುಲತಿಲಕ ವಿದುರವಂದಿತನಾದ ಬುಧಜನಪಾಲ ಮದನಮೋಹನಗೆ 8 ಸುಳಿದು ತ್ರಿಪುರದಲಿ ಹಳಿದು ನಾರೆರ ವ್ರತ ಹೊಳೆವದೋರಿದ ಚಲುವಿಲಿ ಮಹಾಮುನಿಗೆ 9 ಮುದ್ದು ತೇಜಯನೇರಿ ತಿದ್ದಿ ರಾವುತನಾದ ಮಧ್ವಾಂತ್ರದ ಮಹಿಪತಿ ಪ್ರಾಣಪತಿಗೆ 10
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಗಳೆ ಜಾನಕಿ ನಿನ್ನ ಸುಗುಣಸನ್ಮೋಹನ್ನ ಖಗಕುಲರನ್ನ ಮನೋರಮಣ ಮನೋರಮಣ ಕಾಂತ ಶ್ರೀರಾಮನ ಅಗಲದಿರು ಕಾಣೆ ಮರಿಯಾನೆ ಶೋಭಾನೆ 1 ಪತಿಯೇಳ್ವ ಮೊದಲು ಜಾಗ್ರತೆಯಾಗಿ ಯೆದ್ದು ಗೃಹ- ಕೃತ್ಯಕೆಲ್ಲಕ್ಕನುಸರಿಸಿ ಅನುಸರಿಸಿ ನಡೆ ನೀ ಮಗಳೆ ಹಿತವಾಗಿ ಬಾಳು ಪತಿಯೊಳು ಶೋಭಾನೆ 2 ಗಂಡನ ಮಾತಿಗೆ ದುರ್ಚಂಡಿಸದಿರು ಮಗಳೆ ಗಂಡನುಣ್ಣದ ಮೊದಲು ನೀ ಮೊದಲು ನೀನುಣ್ಣದಿರು ಪುಂಡರೀಕಾಕ್ಷಿ ಪುಣ್ಯರಾಶಿ ಶೋಭಾನೆ 3 ಮುಗುಳು ನಗೆಯ ಬೀರು ಜಗಳವ ಮಾಡದಿರು ಜಗದೊಳು ಕೀರ್ತಿಯುತಳಾಗು ಯುತಳಾಗು ಬಂಧುಗಳಲಿ ನೀ ಹಗೆಯ ಮಾಡದಿರು ಕೃಪೆದೋರು ಶೋಭಾನೆ 4 ಪಾದ ಹೊದ್ದಿ ಸೇವೆಯ ಮಾಡು ಸುದ್ಧ ಭಾವದೊಳು ನಡೆ ಮಗಳೆ ನಡೆ ಮಗಳೆ ನಿತ್ಯಸುಮಂಗಲೆ ಮುದ್ದಾಗು ಬಂಧು ಬಳಗಕ್ಕೆ ಶೋಭಾನೆ 5 ಅತ್ತೆಯ ಮಾತಿಗೆ ಪ್ರತ್ಯುತ್ತರ ಕೊಡದಿರು ಪ್ರತ್ಯೊಬ್ಬಳೆ ಸ್ಥಳದಿ ನಿಲದಿರು ನಿಲದಿರು ನೀರಜಗಂಧಿ ಸತ್ಯ ವಚನವನೆ ಸವಿಮಾಡು ಶೋಭಾನೆ 6 ಮೈದುನರನ್ನು ತನ್ನ ಮಕ್ಕಳೆಂಬಂತೆ ನೋಡು ಸಾಧುಭಾವದದಲಿ ನಡೆ ಮಗಳೆ ನಡೆ ಮಗಳೆ ಪಂಕ್ತಿಯಲಿ ಭೇದ ಮಾಡದಿರು ಕೃಪೆದೋರು ಶೋಭಾನೆ 7 ಕಂಡರೆ ಶಿಷ್ಟರ ದಂಡ ನಮಸ್ಕರಿಸು ಹಿಂಡು ದಾಸಿಯರ ದಣಿಸದಿರು ದಣಿಸದಿರು ಉತ್ತಮಳೆಂದು ಭೂ- ಮಂಡಲದಿ ಕೀರ್ತಿಪಡು ಪೂರ್ತಿ ಶೋಭಾನೆ8 ಚಂಡಿತನವ ನಿನ್ನ ಗಂಡನೊಳ್ಮಾಡದಿರು ಗಂಡಸರ ಮುಂದೆ ಸುಳಿಯದಿರು ಸುಳಿಯದಿರು ಸಂತತ ಸೌಖ್ಯ- ಗೊಂಡು ಬಾಳಮ್ಮ ಸೀತಾಭಾಮಾ ಶೋಭಾನೆ 9 ಕ್ಷಮೆಯಲ್ಲಿ ಧಾತ್ರಿಯುಂಬ ಕ್ರಮದಲ್ಲಿ ಮಾತೆ ಸುರತ ಸಮಯದಿ ವೇಶ್ಯಾ ತರುಣಿಯಳ ತರುಣಿಯಳ ತೆರದಿ ರಾಮನ ಸತಿಯಂ- ತೆ ಮಾಡವ್ವ ಸುಖಂ ಜೀವಾ ಶೋಭಾನೆ 10 ಲಕ್ಷ್ಮೀನಾರಾಯಣರಂತೆ ಸೀತಾರಾಮರು ನೀವು ಕುಕ್ಷಿ ಈರೇಳು ಜಗವನ್ನು ಜಗವನ್ನು ನಮ್ಮನ್ನು ಸರ್ವರ ರಕ್ಷಣ್ಯ ಮಾಡಿ ಸುಖಿಯಾಗಿ ಶೋಭಾನೆ 11
--------------
ತುಪಾಕಿ ವೆಂಕಟರಮಣಾಚಾರ್ಯ