ಒಟ್ಟು 2434 ಕಡೆಗಳಲ್ಲಿ , 116 ದಾಸರು , 1874 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಜರ ನೋಡಿರೈ ಇನತತಿತೇಜರ ಪಾಡಿರೈ ಪಪೂಜಕÀರಾ ಸುರಸನ್ನುತರ ಅ.ಪವರಪಾಷ್ರ್ಣಿದ್ವಯ ಪರದಲಿ ಶೋಭಿಪಜಾನುಗಳೋ ಶಶಿಬಿಂಬಗಳೋ 1ಕಟಿತಟವೋಕೇಸರಿನಡುವೋತುಂಬಿದ ಕರುಣನ ಗುಂಭಸುನಾಭೀ -ತಾವರೆಯೋ ಗಂಗಾಸುಳಿಯೋ 2ಸುಂದರಕುಕ್ಷಿಸುಚಂದನ ಚರ್ಚಿತದಂಡಗಳೋಕರಿಶುಂಡಗಳೋ3ಯತಿಕುಲವರ್ಯನ ಸ್ಮಿತಯುತವಕ್ತ್ರಕ್ಷಿತಿಸುರ ವಂದ್ಯನ ಅತಿ ಸುಂದರ -ನಯನಗಳೋ ನೈದಲಿಯುಗಳೋ 4ಘಣೆಯೋ ಅಕ್ಷತಮಣಿಯೋ 5ಮಂದಿರವೆನಿಸುವ ವೃಂದಾವನಶುಭವೃಂದಾರಕಘನವೃಂದದಿ ರಾಜಿಪದಾತಾಜಗದೊಳು ಖ್ಯಾತಾನೀತಾ ಭಾವಿ ವಿಧಾತಾ 6ಶಿಷ್ಟರ ಸುಮನೋಭೀಷ್ಟದ ಗುರುಜಗ -ನ್ನಾಥವಿಠಲ ದೂತಾ 7
--------------
ಗುರುಜಗನ್ನಾಥದಾಸರು
ರಾಮ ರಾಮ ರಘುನಾಥನೆ ಸುರಸ್ತೋಮತಿಲಕ ವಿಶ್ವಕರ್ತನೆ ದಿವ್ಯಸ್ವಾಮಿ ಪುಷ್ಕರತೀರವಾಸನೆ ನನ್ನಸ್ವಾಮಿವರಾಹವೆಂಕಟೇಶನೆಪ.ಕಾಯೊ ಕಾಯೊ ಮಧುಮರ್ದನಭವಸಾಯಕದೂರ ಜನಾರ್ದನ ಯದುನಾಯಕಧೃತಗೋವರ್ಧನ ನಾರಾಯಣ ನಿಜಜನವರ್ಧನ 1ಹೊಂದಿದಭಟಕಲ್ಪವೃಕ್ಷನೆ ನನ್ನತಂದೆ ತಾಯಿ ವಿಶ್ವಕುಕ್ಷನೆಕ್ಷೀರಸಿಂಧುಮಂದಿರ ಅಧ್ಯಕ್ಷನೆ ನಿನ್ನಿಂದಾರುಗತಿ ಪದುಮಾಕ್ಷನೆ 2ಅಡಿಗಡಿಗೊದಗದ ತಪ್ಪನೆ ಇಕ್ಕಡಿಮಾಡುದೇವ ತಿಮ್ಮಪ್ಪನೆಮಾಯಾಸಡಕ ತಪ್ಪಿಸು ಸುಪ್ರದೀಪನೆನಿತ್ಯಬಿಡದೆ ಕ್ರೀಡಾದ್ರಿಯೊಳಿಪ್ಪನೆ 3ಲೇಶಭಕ್ತಿಗೆ ಮನ ಹಾರಿತು ವಿಷಯಾಸೆಯಟವಿಯನೆ ಸೇರಿತು ಈಹೇಸಿ ಚಂಚಲಚಿತ್ತ ಹೋರಿತು ತವದಾಸರ ಸಂಗಕೆ ಜಾರಿತು 4ಕುಸುಮಶರನಂತ:ತೇಜನೆ ಮಹಮಿಸುನಿವೆಟ್ಟದ ಕಲ್ಪಭೂಜನೆ ಅಜÕನಿಶಾಕುಲ ಉಡುಗಣರಾಜನೆ ಶ್ರೀಪ್ರಸನ್ವೆಂಕಟ ರಾಜಾಧಿರಾಜನೆ 5
--------------
ಪ್ರಸನ್ನವೆಂಕಟದಾಸರು
ರಾಮ ರಾಮ ಸೀತಾರಾಮ ರಘುರಾಮ ಪ.ರಾಮ ರಾಮ ರಘುನಂದನ ತೋಷನಆಮಿಷ ಪಾದಾಂಬುಜ ಪಾವನನಾಮ ವಿಮಲ ಕಮಲಾಯತ ಲೋಚನಭೂಮಿಜಾರಮಣ ಸದಾ ಶುಭಮಹಿಮನೆ 1ದಂಡ ಕುಖರಹರ ವಂದಿತ ಸುಜಟಾಮಂಡಿತಮೌಳಿಮುನೀಂದ್ರ ಕರಾರ್ಚಿತಚಂಡಕುಲೇಶಖಳನಿಶಾಚರದಂಡನವರಕೋದಂಡವಿದಾರಿ2ವಾರಿದಶಾಮ ದಯಾಂಬುಧಿ ಭಕ್ತ ಸಮೀರಜಸೇವ್ಯವಿಭೀಷಣವರದ ಸುಸ್ಮೇರವದನ ಸಾಮ್ರಾಜ್ಯ ಪಾರಾಯಣಭೂರಿಪ್ರಸನ್ವೆಂಕಟ ಕೃಷ್ಣ ನಮೊ3
--------------
ಪ್ರಸನ್ನವೆಂಕಟದಾಸರು
ರೂಹ ಹೇಳುವೆ ಕೃಷ್ಣನ ಕೃಪೆಯಲ್ಲಿನವೀನ ಜನನ ಮೃತ್ಯು ಭಯವೆಲ್ಲಿ ಪ.ಕುಶತಲ್ಪ ತಂತ್ರಸಾರಾರ್ಚನೆಯೆತ್ತಖಳಪ್ರಸರದ ಗೊಂದಣದಾರಿಯೆತ್ತಹೊಸಮಲ್ಲಿಗೆಯ ಹಾರ ಸುರಭ್ಯೆತ್ತ ಮಲಕಶ್ಮಲರತ ಗ್ರಾಮಸೂಕರೆತ್ತ 1ಚಕ್ರಪಾಣಿ ಒಲುಮೆ ವಿರತರಿಗುಂಟುಕರ್ತವಿಕ್ರಮವಾದಶೀಲಗೆ ಮತ್ತ್ಯೆಲ್ಲುಂಟುತಕ್ರಭಿನ್ನ್ವಾದರೆ ಹಾಲ ಹೋಲಲಿಲ್ಲ ಭಕ್ತಿವಕ್ರನೆಂದೆಂದಿಗೆ ಭಾಗವತನಲ್ಲ 2ಡಂಬರ ಶ್ರದ್ಧೆಗೆಹರಿಮೆಚ್ಚಲಿಲ್ಲ ಸಲೆಡೊಂಬ ರಾಷ್ಟ್ರ ತಿರುಗೆ ಭೂ ಪ್ರದಕ್ಷಿಣೆಯಲ್ಲಅಂಬುಜಾಕ್ಷನನ್ನು ನಂಬದವ ಕ್ಷುಲ್ಲ ಗತಅಂಬಕನ ನೋಟ ಬದಿಯ ಧನದಲಿಲ್ಲ 3ಇಂದಿರೇಶಮಹಿಮೆ ಮತಿಮಂದಗೇನು ದೀಪಹೊಂದಟ್ಟೆ ಭೋಜನಸುಖ ಶ್ವಾನಗೇನುಎಂದೂ ಸಾಧುಸಂಗಸೌಖ್ಯ ಕುಹಕಗಿಲ್ಲ ಕೆಚ್ಚಲೊಂದಿದ ಉಣ್ಣೆಗೆ ಕ್ಷೀರಸ್ವಾದವಿಲ್ಲ 4ಪೂರ್ವಕೃತಪುಣ್ಯ ಒದಗದೆಂದಿಗಿಲ್ಲ ಯತಿಸರ್ವಜÕರಾಯನ ಮತ ಸುಲಭವಲ್ಲಉರ್ವಿಯೊಳು ಸಮೀರಮತಸ್ಥರಕಾವತಂದೆಸರ್ವೇಶ ಪ್ರಸನ್ನವೆಂಕಟಾಧಿದೇವ 5
--------------
ಪ್ರಸನ್ನವೆಂಕಟದಾಸರು
ವಂದಿಸಿದರ ಕಾವೆ ವರವನೀವೆ ಅಹಿಪವೀಂದ್ರಭವಸುರರಗುರುಮಧ್ವಮುನಿರಾಯಪ.ಒಂದೊಂದುಶ್ರುತಿಸ್ಮøತಿಗೆ ಬಹ್ವಾರ್ಥಗಳ ಪೇಳದೆಒಂದೆರಡು ತತ್ವವಿಸ್ತರವ ಪೇಳಿದೆಒಂದು ಮೂರವತಾರದಲ್ಲಿ ಹರಿಯನೆ ಒಲಿಸಿಒಂದು ನಾಲ್ಕರ ಭೇದ ನಿಜರಿಗರುಹಿದೆಯ 1ಒಂದೈದು ರಿಪುವರ್ಗ ನಿಗ್ರ್ರಹವ ಮಾಡಿಸಿದೆಒಂದಾರು ತ್ರಿಗುಣಿಸಿದ ಮತವ ಮುರಿದೆಒಂದೇಳು ಮದವ ಕಾಲಲಿ ಮೆಟ್ಟಿ ಹರಿಪುರಕೆಒಂದೆಂಟು ಭಕುತಿಪಥ ತೋರ್ದೆ ವೈಷ್ಣವರಿಗೆ 2ಒಂದು ಒಂಬತ್ತು ಹರಿಯವತಾರ ಕಥೆ ರಚಿಸಿಒಂದು ಹತ್ತೇಂದ್ರಿಯದ ಗೆಲವ ಕಳಿಸಿಒಂದು ಹನ್ನೊಂದು ಸ್ತೋತ್ರದಿ ಕೃಷ್ಣನ ಮೆಚ್ಚಿಸಿದೆಒಂದು ಹನ್ನೆರಡು ತತ್ವದಾಗ 3ಒಂದು ಹದಿಮೂರು ಭುವನಗಳಲ್ಲಿ ನೀ ವ್ಯಾಪ್ತಒಂದು ಹದಿನಾಲ್ಕು ದ್ವಿಗುಣಿಸಿದ ಮ್ಯಾಲೇಳೊಂದಿದ ಸದ್ಗ್ರಂಥಗಳ ನಿರ್ಮಿಸಿ ಬುಧರಿಗಿತ್ತೆಒಂದು ಹದಿನೈದು ಗುಣದ ಲಕ್ಷಣಾಂಗ 4ಒಂದು ಹದಿನಾರೆಂಟು ತತ್ವ ಸಿದ್ಧಾಂತದಲಿಒಂದು ಹದಿನೇಳು ಪರ್ವಮೋಹಕ ಬಿಡಿಸಿದೆಒಂದು ಮನದಿಂದ ಶಿರಿ ಪ್ರಸನ್ನವೆಂಕಟ ಕೃಷ್ಣನಒಂದೊಂದು ಗುಣಕೆ ಅನಂತ ವ್ಯಾಖ್ಯಾನ 5
--------------
ಪ್ರಸನ್ನವೆಂಕಟದಾಸರು
ವರವ ಕೊಡೆ ತಾಯೆ ವರವ ಕೊಡೆ ಪ.ಶರಧಿಯ ಕನ್ನೆ ನೀ ಕೇಳೈ ಸಂಪನ್ನಳೆಸೆರಗೊಡ್ಡಿ ಬೇಡುವೆನಮ್ಮ ವರವ ಕೊಡೆನೆರೆನಂಬಿದೆನು ನಿನ್ನ ಚರಣಕಮಲವನುಪರಿಹರಿಸೆಮ್ಮ ದಾರಿದ್ರ್ಯ ಕಷ್ಟವ ತಾಯೆ 1ಹೊಳೆವಂಥ ಅರಸಿನ ಹೊಳೆವ ಕರಿಯಮಣಿಸ್ಥಿರವಾಗಿ ಕಟ್ಟುವಂಥ ವರವ ಕೊಡೆತಾಳೋಲೆ ಹೊನ್ನೋಲೆ ತೊಳೆದೊಯ್ದ ಬಿಚ್ಚೋಲೆಯಾವಾಗಲಿರುವಂಥ ವರವ ಕೊಡೆ 2ಬಾಗಿಲ ತೋರಣ ಮದುವೆ ಮುಂಜಿ ನಾಮಕರಣಯಾವಾಗಲಾಗುವಂಥ ವರವ ಕೊಡೆಬಂಧುಬಳಗ ಹೆಚ್ಚಿ ಹೆಸರುಳ್ಳಮನೆಕಟ್ಟಿಉಂಡಿಟ್ಟಿಡುವಂಥ ವರವ ಕೊಡೆ 3ಹಾಲ ಕರೆಯುವ ಮೇಲಾದ ಸರಳೆಮ್ಮೆಸಾಲಾಗಿ ಕಟ್ಟುವಂಥ ವರವ ಕೊಡೆಕಂಡಕಂಡವರಿಗೆ ಕರೆದು ಮೃಷ್ಟಾನ್ನವತಿಳಿ ನೀರು ಕೊಡುವಂಥ ವರವ ಕೊಡೆ 4ಲಕ್ಷ್ಮೀನಾರಾಯಣನ ವಕ್ಷಸ್ಥಳದಲ್ಲಿಲಕ್ಷ್ಮಣವಾಗಿರುವಂಥ ಮಹಾಲಕ್ಷ್ಮಿಅಷ್ಟೈಶ್ವರ್ಯವು ಪುತ್ರಸಂತಾನವಕೊಟ್ಟು ರಕ್ಷಿಸುವವಮ್ಮ ವರವ ಕೊಡೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವರುಣಗೂ ನಾರಾಯಣಗು ನೆಂಟತನ ಮಾಡುವದಕೆ |ಸರಿಯೆ ಸಂದೇಹವೇನು ಸಮ್ಮೀಸಿ ನೋಡಿರಿ ಪಹೆಂಡಾರು ಬಹು ಮಂದಿ ಜಾರಾ ಪುತ್ರನು ಒಬ್ಬ |ಪಂಡೀತ ಮಗನೊಬ್ಬ ಸಮನೆಲ್ಲಿ ನೋಡಿ1ವಂಶಾ ವಂದೆ ಇಬ್ಬರದು ಛಲದಿಂದ ಕೊಲ್ಲುವಂಥಾ |ಕೂಸು ಪಾಲಿಸಿದಾರು ಸಮನೆಲ್ಲಿ ನೋಡಿ 2ಸ್ಥೂಲಾ ವಿಗ್ರಹದವರು ಜಡ ಚೇತನಗಳಿಗೆ |ಆಲಯವಾಗಿಹರು ಸಮನೆಲ್ಲಿ ನೋಡಿ 3ಕನಕಾ ಭೂಮಿ ವಜ್ರದಾಹಾರ ಒಬ್ಬಾಗೊಬ್ಬಾಗೆ |ವನಮಾಲಿವೈಜಯಂತಿಸಮನೆಲ್ಲಿ ನೋಡಿ 4ತುಳಿಸೀಕೊಂಡೂ ಕೋಪಿಸದೆಲೆವೇ ಹಿಗ್ಗಿದಾರು |ಕಲುಷಾ ವಿದೂರರೂಪಸಮನೆಲ್ಲಿ ನೋಡಿ 5ದ್ವಾರಕ ಪಟ್ಟಣವ ಪ್ರೀತಿಂದ ಪಾಲೀಸೀ |ಹಾರಾವ ಮಾಡಿದಾರು ಸಮನೆಲ್ಲಿ ನೋಡಿ 6ವೃದ್ಧಿ ಹ್ರಾಸಗಳಿಲ್ಲಾ ಅನ್ನಾದಾಪೇಕ್ಷವಿಲ್ಲ |ನಿದ್ರಾ ಶೂನ್ಯರಾಗಿಹರು ಸಮನೆಲ್ಲಿ ನೋಡಿ 7ಸರಸೀಜಾರೂಪಉಳ್ಳವರು ಪೂರ್ತಿ ಮಾಡಿದಾರು |ಸುರರಾ ಮನೋಭೀಷ್ಟಿಯಾ ಸಮನೆಲ್ಲಿ ನೋಡಿ 8ವಿಧಿಯಿಂದ ಜನಿಸಿದಾರು ಜನರೀಗಸಹ್ಯವಾಗಿ |ಒದರುವರು ಇದರಿಂದ ಸಮನೆಲ್ಲಿ ನೋಡಿ 9ನೂತನ ಯಜೊÕೀಪವೀತಾವ ಧರಿಸುವರು ಪ್ರ- |ಖ್ಯಾತಿ ವಸ್ತು ಕೊಟ್ಟಾರು ಸಮನೆಲ್ಲಿ ನೋಡಿ 10ದಾರಿ ತೋರಿದಾರು ವಾನರಾಗಳಿಗೆ ಗುಂಜಿ |ಹಾರಾಯೀಸೂವರಿದು ಸಮನೆಲ್ಲಿ ನೋಡಿ11ವಾಸಾವಿವರ್ಜಿತಾರು ದ್ವೇಷಿಗಳ ಶರೀರ |ನಾಶಾಗೈಸಿದರಿದು ಸಮವೆಲ್ಲಿ ನೋಡಿ12ಶೋಧಿಸೀ ನೋಡಿದಾರೆ ಕರ್ದಾಮ ಜಾಲಯಳ |ಭ್ಯೋದಯಕ್ಕೆ ಕಾರಣರು ಸಮವೆಲ್ಲಿ ನೋಡಿ13ಧರಿಗಾನಂದಾವಿತ್ತಾರಾಲಂಕಾರವಾಗಿ ಖಳರಾ |ತರಿದು ಭಾರವ ಕಳದು ಸಮವೆಲ್ಲಿ ನೋಡಿ 14ಶ್ರೀನಿವಾಸಾಗೆ ಮಾವನೀತಾ ನೀತಾಗು ಹಾಗೆ |ಪ್ರಾಣೇಶ ವಿಠ್ಠಲನು ಸಮವೆಲ್ಲಿ ನೋಡಿ 15
--------------
ಪ್ರಾಣೇಶದಾಸರು
ವಲ್ಲೀದೇವಿಯ ವಲ್ಲಭನೆಬಲ್ಲಿದಭಕ್ತರ ಸುಲ್ಲಭನೆಪ.ಸಲ್ಲಲಿತ ಪಾದಪಲ್ಲವ ಭಜಿಸುವ-ರೆಲ್ಲರ ಮನಸಿನೊಳುಲ್ಲಸನೆ ಅ.ಪ.ವೃಂದಾರಕಮುನಿವಂದಿತನೆಕಂದರ್ಪಾಮಿತಸುಂದರನೆಸ್ಕಂದನೆ ಸಚ್ಚಿದಾನಂದನೆ ಪಾರ್ವತೀ-ನಂದನ ಸದ್ಗುಣಮಂದಿರನೆ 1ತಾರಕದೈತ್ಯ ಸಂಹಾರಕನೆಸೇರಿದ ಭಕ್ತೋದ್ಧಾರಕನೆಮಾರಾರಿಯ ಸುಕುಮಾರನೆ ಧೀರನೆಚಾರುಮಯೂರ ತುರಂಗಮನೆ2ಲಕ್ಷುಮಿನಾರಾಯಣ ಪ್ರಿಯನೆರಕ್ಕಸರಿಂಗತಿದುಃಖದನೆಕುಕ್ಕುಟವಜ್ರಾಭಯಶಕ್ತಿಹಸ್ತನೆಪ್ರಖ್ಯಾತ ಪಾವಂಜಾಖ್ಯ ಪುರವರನೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವಾರಿಜನಾಭನ ಕರುಣವೆ ಸ್ಥಿರ ಸಂಸಾರ್ಯೆರವು ಕೇಳಾತ್ಮಜಾರುತದಾಯು ದೂರದ ಮುಕುತಿಯದಾರಿಯ ಪಾಥೇಯ್ಯೆಲ್ಲಾತ್ಮ ಪ.ಧರ್ಮದ ಸರಕಿಲ್ಲದವನೆಂದು ಬೇಗ್ಯಮಧರ್ಮ ಭಟರು ಬಂದರಲ್ಲೊಚರ್ಮದ ಮನೆ ಬಿಡಿಸಿದರು ಮುಟ್ಟಲು ನೋವಕರ್ಮಯಾತನೆ ಕೊಟ್ಟರಲ್ಲೊಹಮ್ರ್ಯನಿಕೇತನ ವೃತ್ತಿಕ್ಷೇತ್ರವನು ಅಧರ್ಮಿಗಳಗಲಿಪರಲ್ಲೊಮರ್ಮವರಿತು ತ್ರಾಟಿಸುವಾಗ ಶ್ರೀವಿಶ್ವಕರ್ಮನ ಪೂಜೆ ಹೋಯಿತೆಲ್ಲೊ 1ಹೆಡಗೈಯಕಟ್ಟಿಪರಿಘದೊಳು ಬಡಿವಾಗಮಡದಿ ಮಕ್ಕಳ ಸಹಾಯವೆಲ್ಲೊಒಡೆಯ ದಮ್ಮಯ್ಯ ನಮ್ಮಯ್ಯನೆಂದರೆಕಾಲಹಿಡಿದರೆ ಕೊಡಹಿದರಲ್ಲೊಸುಡುವ ಮಳಲು ಹುಡಿ ಕಲ್ಮುಳ್ಳೊಳೆಳೆವಾಗಹಿಡದೇಜಿ ಕೊಂಬುಕಾಳೆಲ್ಲೊಪೊಡವಿಲಿ ಬಂದಾಗ ಹರಿಸೇವೆ ಮಾಡದೆಕಡುಹುಂಟಾದರೆ ತೋರದೆಲ್ಲೊ 2ಕೀವು ರುಧಿರವಿಟ್ಟ ಕುಂಡದಿ ಮುಣುಗುವಾಗ್ಹ್ಯಾವಿನ ಮಾತೇನಾಯಿತಣ್ಣಸಾವುತೀನವ್ವಪ್ಪಾ ಮೊರೆಯ ಕೇಳೆಂದರೆಆವಾಗಬಾಧೆ ಕಾಣಣ್ಣಆವೈವಸ್ವತದಂಡ ಕೊಟ್ಟು ಬೊಗಳೆಂಬಾಗಚಾರ್ವಾಕತನವೆಲ್ಲಣ್ಣಆ ವಾಸುದೇವನ ಭಟಸಂಗ ನಿನಗೀಗ ವೈರ ಆಗೆಲ್ಲಿದಣ್ಣ 3ನಾಲಿಗೊಣಗಿ ನೀರು ಕೂಳೆಂದು ಅಳುವಾಗಹಾಲ ಶಾಲ್ಯೋದನವೆಲ್ಲೊಮ್ಯಾಲೆ ಮ್ಯಾಲ್ವೈತರಣಿ ಸ್ನಾನವ ಮಾಡುವಕಾಲಕೆ ಅಭ್ಯಂಗನವೆಲ್ಲೊಕಾಲನ ದೂತರ್ಗೆ ಕೊಟ್ಟುಳಿವೆನೆಂದರೆಹೂಳಿದ ಧನ ದೂರಾಯಿತಲ್ಲೊಕಾಲಕಾಲಕೆ ದ್ವಿಜಪಂಕ್ತಿಭೋಜನಸುಖವ್ಯಾಳೆ ತಪ್ಪಿತನ್ನವೆಲ್ಲೊ 4ಕಷ್ಟಿಸಿ ಬಳಲುವೆ ಹಾಹಾಯೆಂದಳಲುವೆಇಷ್ಟನೆಂಟರು ಹೋದರೆತ್ತಮುಷ್ಟಿಕುಠಾರಪ್ರಹಾರನೋಡುನಿನ್ನವರಿಷ್ಟತನವು ನಿಂತಿತೆತ್ತಶಿಷ್ಟರ ನೋಡದೆ ಸತ್ಕಾರ ಮಾಡದೆನಿಷ್ಠುರ ನುಡಿದೆ ಪ್ರಮತ್ತಕೃಷ್ಣ ನಮೊ ಎಂದು ಕಡೆಗಾಣಲರಿಯೆ ಎಳ್ಳಷ್ಟು ಪುಣ್ಯವ ಕಾಣೆನೆತ್ತ 5ಕಂಗೆಟ್ಟು ತಕ್ರನ್ನೆ ಕಾಸಿ ಸೀಸ್ಯೆರೆವಾಗಅಂಗಣದ ಪಶು ಬಹುದೂರಕೆಂಗೆಂಡಗಂಭವಪ್ಪಿಸುವರು ನಿನ್ನ ಪರಾಂಗನೆಭೋಗಿಚದುರಅಂಗ ಶೃಂಗಾರದ ಕೊನಬುಗಾರ ನಿನಗ್ಹಿಂಗುವದೆ ಯಮದ್ವಾರಮಂಗಳ ಮಹಿಮ ಮುಕುಂದ ಮುರಾರಿ ಶ್ರೀರಂಗನ ಭಕುತಿವಿದೂರ 6ಸುಟ್ಟರೆ ಹಿಡಿಬೂದಿ ಕೆಟ್ಟರೆ ಕ್ರಿಮಿಕಾಯಇಟ್ಟರಿರದು ವಾಯುವಿರದೆಹುಟ್ಟಿ ಸುಜನ್ಮದಿ ಜಾಣರಾಗದೆಬುಧರಟ್ಟುವರೆ ದಿವಸ ಬರಿದೆಇಟ್ಟಣಿಸಿದ ಭವಗತ ಸುಖದು:ಖವುಂಡುಟ್ಟು ರಾಮನ ಮನವಿರದೆಕಟ್ಟಕಡೆಲಿ ನರಕವನುಂಬೋದುಚಿತಲ್ಲದಿಟ್ಟನಾಗು ಮಾಯೆಯಜರಿದು7ನಿತ್ಯನೈಮಿತ್ಯಕಾಮ್ಯಾದಿ ಸತ್ಕರ್ಮವಮತ್ತೆ ತಿಳಿದು ನಡೆ ಆತ್ಮಹತ್ಯವಸತ್ಯ ಅನ್ಯವಧೂಜನಸಖ್ಯಪರವಿತ್ತದಂಜಿಕೆ ಇರಲ್ಯಾತ್ಮಕರ್ತಮೂರವತಾರಿ ಪೂರ್ಣ ಬೋಧಾಚಾರ್ಯರಭೃತ್ಯನಾಗಿ ಬಾಳೊ ಆತ್ಮಎತ್ತೆತ್ತ ನೋಡಲು ಬೆನ್ನಬಿಡದೆಕಾವಪ್ರತ್ಯಕ್ಷನಾಗಿ ಪರಮಾತ್ಮ 8ಮಂಗಳಾತ್ಮರಿಗೆಅಹರ್ನಿಶಿಶ್ರೀವರಅಂಗಜಜನಕನೆಚ್ಚರಿಕೆಸಂಗಡಿಸಿದ ವಿಷಯಂಗಳಿದ್ದರೇನುತಂಗಳ ಅನ್ನದೋಕರಿಕೆಹಿಂಗದೆ ವರಸಂಗ ಮಾಡಿದರೊಯಿವರುಮಂಗಳಾತ್ಮಕನಿದ್ದ ಪುರಕೆಬಂಗಾರ ಮನೆಯ ಪ್ರಸನ್ವೆಂಕಟೇಶನಡಿಂಗರರಿಗೆ ನರ್ಕಸರ್ಕೆ 9
--------------
ಪ್ರಸನ್ನವೆಂಕಟದಾಸರು
ವಾಸುಕಿಶಯನನೆ ವೆಂಕಟಗಿರಿ |ವಾಸನೆಯಜ್ಞಾದ್ಯವತಾರನೆ |ಮೇಶಾ ನರಸಿಂಹಾ ಹಸಿಗೇಳೂ ಪಬೊಮ್ಮಾ ಶಂಕರ ಮುಖ ವಂದಿತ |ಸಮ್ಮೀರವಾಹನಗರುಡಧ್ವಜ |ಅಮ್ಮರೇಶಾನುಜ ಶ್ರೀ ಉಪೇಂದ್ರಾ || ಉಪೇಂದ್ರದಾಮೋದರಹರಿ| ತಮ್ಮನಾ ತಮ್ಮ ಹಸಿಗೇಳೂ 1ವಾಮನ ನಾರಾಯಣಅಚ್ಯುತ|ತಾಮಸಗುಣಜನ ಸಂಹಾರಕ |ಶ್ಯಾಮಾಂಗ ಕೋಟಿ ರವಿತೇಜಾ ||ರವಿತೇಜಾ ತ್ರೈಲೋಕದಗುರುಹೇಮಾಂಗದ ವರದಾ ಹಸಿಗೇಳೂ 2ಜಲಜಾಕ್ಷನೆಕೌಸ್ತುಭಶೋಭಿತ |ಜಲನಿಧಿ ಶಯನನೆ ನರಕಾಂತಕಾ |ಬಲಿಬಂಧಿಸೀದನೆ ಪರತತ್ವಾ ||ಪರತತ್ವರವಿದರ ಗದಧರಫಲುಗುಣನಾ ಸಖನೇ ಹಸಿಗೇಳೂ 3ಕನಕಾಂಬರ ಕಶ್ಯಪರಿಪುಹರಿ|ಧನಪತಿ ಮಿತ್ರನ ಭಯ ಬಿಡಿಸಿದ |ಇನಪುತ್ರಗೊಲಿದಾ ರಘುಪತೀ ||ರಘುಪತಿ ಭಕ್ತಸುರತರುಮನಸಿಜಾ ಪಿತನೆ ಹಸಿಗೇಳೂ 4ಶತಯಾಗನ ಗರ್ವ ವಿಭಂಜನ |ಕ್ಷಿತಿವಂದಡಿ ಮಾಡಿದವನೇ |ಸುತನಲ್ಲಿ ಪಾಲು ಕುಡಿದಾನೆ ||ಕುಡಿದಾನೆ ರುಗ್ಮಿಣಿವಲ್ಲಭಪತಿತಾ ಪಾವನ್ನಾ ಹಸಿಗೇಳೂ5ಝಗ ಝಗಿಸುವ ಪೀತಾಂಬರದುಡಿ |ಗಿಗಳಿಂದಲಿ ಹೊನ್ನುಡದಾರದಿ |ಮಿಗಿಲಾದ ವೈಜಯಂತೀ ವನಮಾಲೀ ||ವನಮಾಲಿ ಕೊರಳೊಳಗೊಪ್ಪುವಜಗದೀಶ ಕೃಷ್ಣಾ ಹಸಿಗೇಳೂ 6ಗಂಗೆಯ ಚರಣದಿ ಪಡದಿಹ ಬಹು |ಮಂಗಳ ಮೂರುತಿ ಶ್ರೀ ವಾಮನಾ |ಜಂಗುಳಿ ಹೆಣ್ಣುಗಳಾ ಒಲಿಸೂತಾ ||ಒಲಿಸುತಾ ಚಿಂತಿಗಳೆಲ್ಲನುಹಿಂಗಿಸುವಾ ದೇವಾ ಹಸಿಗೇಳೂ 7ಧ್ರುವ ದ್ರೌಪದಿಯ ಸುರಜ ಪೋಷಕ |ಅವಿವೇಕ ದಶಮುಖ ವಿನಾಶಕಾ |ಲವಣಾಸುರ ಕಂಸಾ ಮುರಾ ಧ್ವಂಸೀ ||ಮುರಧ್ವಂಸೀ ಐದೊಂದಬಲೆರಾಧವವಾಸುದೇವಾ ಹಸಿಗೇಳೂ 8ಕೇಶವ ಸತ್ರಾಯಣ ಸುತ ಪ್ರಾ- |ಣೇಶ ವಿಠ್ಠಲ ದಕ್ಷಿಣವಲ್ಲಭ|ದೋಷ ರಹಿತನೆ ಅನಿರುದ್ಧಾ ||ಅನಿರುದ್ಧಾ ಭಾಗವತರಘನಾಶಾ ಪರಮಾತ್ಮಾ ಹಸಿಗೇಳೂ 9
--------------
ಪ್ರಾಣೇಶದಾಸರು
ವಾಸೂಕಿ ಶಯನ ಅಶೋಕ ಪರಾಕೂ |ವಾಸುದೇವಾನಿರುದ್ಧ ಶ್ರೀ ಕೃಷ್ಣ ಪರಾಕೂ ||ಸಾಸಿರನಾಮದ ಹರಿಯೆ ಪರಾಕೂ |ದೋಷರಹಿತ ರಘುಪತಿಯೆ ಪರಾಕೆಂದು ||ಮೀಸಲಾರುತಿಯಾ ಬೆಳಗೀರೆ ಪವೃಂದಾವನದೊಳಗಿಹನೆ ಪರಾಕೂ |ತಂದಿ ತಾಯ್ಗಳ ಬಿಡಿಸಿಹನೆ ಪರಾಕೂ ||ಸಿಂಧುರವರದ ಗೋಪಾಲ ಪರಾಕೂ ||ಸಿಂಧುಶಯನಪದ್ಮನಾಭಪರಾಕೆಂದು ||ಛಂದದಲಾರುತಿಯಾ ಬೆಳಗೀರೆ1ಸತ್ಯಾಭಾಮಿ ರುಗ್ಮಿಣಿ ರಮಣಾ ಪರಾಕೂ |ಮುತ್ಯಗ ಪಟ್ಟಗಟ್ಟಿದವನೆ ಪರಾಕೂ ||ಭಕ್ತ ಪೋಷಕ ತ್ರಿವಿಕ್ರಮನೆ ಪರಾಕೂ |ಸತ್ಯಸಂಕಲ್ಪಹೃಷಿಕೇಶ ಪರಾಕೆಂದು ||ಮುತ್ತಿನಾರುತಿಯಾ ಬೆಳಗೀರೆ 2ಮಾಧವಖರ ದೂಷಣಾರಿ ಪರಾಕೂ |ಬಾದರಾಯಣಪುರುಷೋತ್ತಮ ಪರಾಕೂ ||ಯಾದವರೊಳು ಪುಟ್ಟಿದನೆ ಪರಾಕೂ |ವೇದ ಉದ್ಧರ ಮತ್ಸ್ಯರೂಪಿ ಪರಾಕೆಂದು ||ಮೋದದಲಾರುತಿಯಾ ಬೆಳಗೀರೆ3ಇಂದ್ರ ಬಲಿಯನುಂಡಾ ಧೀರ ಪರಕೂ |ಕಂದಗೊಲಿದ ನರಸಿಂಹ ಪರಾಕೂ ||ನಂದನಂದನಶೌರಿಪರಾಕೂ |ಮಂದರಪರ್ವತ ಧರನೆ ಪರಾಕೆಂದು ||ಕುಂದಣದಾರುತಿಯಾ ಬೆಳಗೀರೆ 4ಜಟ್ಟೇರ ಹುಡಿಗುಟ್ಟೀದವನೆ ಪರಾಕೂ |ದುಷ್ಟ ಕಂಸನ ತರಿದವನೆ ಪರಾಕೂ ||ಕೆಟ್ಟಾಜಾಮಿಳಗೊಲಿದವನೆ ಪರಾಕೂ |ಅಷ್ಟು ಲೋಕವ ಸಲಹುವನೆ ಪರಾಕೆಂದು ||ತಟ್ಟಿಯೊಳಾರುತಿಯಾ ಬೆಳಗೀರೆ5ಮಾರನಯ್ಯಾ ಪ್ರಾಣೇಶ ವಿಠಲ ಪರಾಕೂ |ನೀರಜಾಂಬಕ ಶ್ರೀನಿವಾಸ ಪರಾಕೂ ||ದ್ವಾರಕಿನಿಲಯಮುರಾರೆ ಪರಾಕೂ |ಕ್ಷೀರಾಬ್ಧಿ ಸುತಿಯ ವಲ್ಲಭನೆ ಪರಾಕೆಂದು ||ನಾರಿಯರಾರುತಿಯಾ ಬೆಳಗೀರೆ 6
--------------
ಪ್ರಾಣೇಶದಾಸರು
ವಿದುರನ ಭಾಗ್ಯವಿದು |ಪದುಮಜಾಂಡ ತಲೆದೂಗುತಲಿದೆ ಕೊ ಪಕುರುರಾಯನು ಖಳನನುಜನು ರವಿಜನು |ಗುರುಗಾಂಗೇಯರು ಎದುರಿರಲು ||ಹರಿಸಿ ರಥವ ನಡು ಬೀದಿಯಲ್ಲಿ ಬಹ |ಹರಿಯ ತಾನು ಕಂಡನು ಹರುಷದಲಿ 1ದಾರಿಯಲಿ ಬಹ ಮುರವೈರಿಯ ಕಾಣುತ |ಹಾರುತ ಚೀರುತ ಕುಣಿಯುತಲಿ ||ವಾರಿಧಾರೆಯನು ನೇತ್ರದಿ ಸುರಿಸುತ |ಬಾರಿಬಾರಿಗೆ ಹಿಗ್ಗುವ ಸುಖದಿ 2ಆಟಕೆ ಲೋಕಗಳೆಲ್ಲಾ ಸೃಜಿಸುವ |ನಾಟಕಧರ ತನ್ನ ಲೀಲೆಯಲಿ ||ನೀಟಾದವರ ಮನೆಗಳ ಜರೆದು |ಕುಟೀರದಲಿ ಬಂದುಹರಿ ಕುಳಿತ3ಅಡಿಗಡಿಗೆ ತನ್ನ ತನುಮನ ಹರಹಿ |ಅಡಗೆಡೆಯುತ ಬಲು ಗದ್ಗದದಿ ||ನುಡಿಗಳ ತೊದಲಿಸಿ ರೋಮವ ಪುಳಕಿಸಿ |ದುಡುದುಡು ಓಡುವ ದಶದಿಶೆಗೆ 4ಕಂಗಳುದಕದಿ ಪದಂಗಳ ತೊಳೆದು |ಗಂಧವ ಪೂಸಿದ ತನುಪೂರಸಿ ||ಮಂಗಳ ಮಹಿಮನ ಚರಣಕೆರಗಿ ಪು-ಷ್ಪಂಗಳಿಂದ ಪೂಜೆಯ ಮಾಡಿದನು 5ನೋಡಿದ ಭಕುತನ ಮನದ ಹವಣಿಕೆಯು |ಪಾಡುವ ಪೊಗಳುವ ಹರುಷದಲಿ ||ನೀಡಿದ ಕರದಲಿ ಬಿಗಿದಪ್ಪಿದ ಕೊಂ -ಡಾಡಿದ ಕರುಣದಿ ಜಗದೊಡೆಯ 6ಕ್ಷೀರವಾರಿಧಿ ಶಯನಗೆ ವಿದುರನು |ಕ್ಷೀರವನುಣ ಬಡಿಸಿದ ನೋಡಾ ||ವಾರಿಜನಾಭನು ಕರಸಂಪುಟದಲಿ |ಆರೋಗಣಿಸಿದ ಘನತೆಯನು 7ಒಂದು ಕುಡಿತೆ ಪಾಲುಹರಿ ತಾ ಸವಿದು |ಮುಂದಕೆ ನಡೆಸಿದ ಧರೆಮೇಲೆ ||ಇಂದಿರೆಯರಸನ ಚರಿತೆ ವಿಚಿತ್ರವು |ಚೆಂದದಿ ಹರಿದುದು ಬೀದಿಯಲಿ 8ಕರುಣಾಕರ ಸಿರಿಹರಿ ತನ್ನ ಭಕುತರ |ಪೊರೆವನುಅನುದಿನ ಆಯತದಿ ||ಸಿರಿಯ ಅರಸು ನಮ್ಮಪುರಂದರ ವಿಠಲನ |ಶರಣರು ಧನ್ಯರು ಮೇಲೆ 9
--------------
ಪುರಂದರದಾಸರು
ವಿಧಾತೃದೇವತೆಗಳೂ ವಿಷ್ಣುವಿನ ಹಿಂದೆ |ಇದಕೆ ತಪ್ಪಿದರೆ ಫಣಿಫಣವ ಪಿಡಿವೆ ಪ.ಸಕಲ ತೀರ್ಥಗಳೆಲ್ಲ ಸಾಲಗ್ರಾಮದ ಹಿಂದೆ |ಪ್ರಕಟಗ್ರಂಥಗಳೆಲ್ಲ ಭಾರತದ ಹಿಂದೆ ||ಸಕಲ ವೃಕ್ಷಗಳೆಲ್ಲ ಶ್ರೀ ತುಳಸಿಯ ಹಿಂದೆ |ಸಕಲ ಪರ್ವತಗಳು ಮೇರುವಿನ ಹಿಂದೆ 1ಮತಗಳೆಲ್ಲವು ಮಧ್ವಮತದ ಸಾರದ ಹಿಂದೆ |ಇತರ ವರ್ಣಗಳೆಲ್ಲ ವಿಪ್ರರ ಹಿಂದೆ ||ವ್ರತಗಳೆಲ್ಲವು ಹರಿಯ ದಿನದ ವ್ರತದ ಹಿಂದೆ |ಅತಿಶಯದ ದಾನಗಳು ಅನ್ನದಾನದ ಹಿಂದೆ 2ಉತ್ತಮಗುಣಗಳೆಲ್ಲ ಉದಾರತ್ವದ ಹಿಂದೆ |ಮತ್ತೆ ಕರ್ಮಗಳು ಮಜ್ಜನದ ಹಿಂದೆ ||ಪೃಥ್ವಿಯೊಳಗೆ ನಮ್ಮ ಪುರಂದರವಿಠಲನ |ಭಕ್ತವತ್ಸಲನೆಂಬ ನಾಮವೇ ಮುಂದೆ 3
--------------
ಪುರಂದರದಾಸರು
ವೀರ ಬಂದ ವೀರ ಬಂದಘೋರಹಮ್ಮುಎಂಬ ದಕ್ಷನತೋರ ಶಿರವರಿಯಲೋಸುಗಪಭಯನಿವಾರಣವೆಂಬ ಕಾಸೆಯನೆ ಹೊಯ್ದಜಯಶೇಖರನೆಂಬ ವೀರ ಕಂಕಣಕಟ್ಟಿನಿಯತ ಸಾಹಸವೆಂಬ ರತ್ನ ಮುಕುಟವಿಟ್ಟುಸ್ವಯಂ ಸೋಹಂ ಎಂಬ ಕುಂಡಲವ ತೂಗುತ1ಆಡಲೇನದ ಶುದ್ಧವೆಂಬ ಭಸಿತವಿಟ್ಟುರೂಢಿಯ ಸತ್ಪವೆಂದೆಂಬ ಹಲಗೆಯಾಂತುಇಡಾಪಿಂಗಳವೆಂಬ ಪಾವುಗೆಗಳ ಮೆಟ್ಟಿಗಾಢ ಧೈರ್ಯವೆಂಬ ಖಡುಗ ಝಳಪಿಸುತ2ಒಂದೊಂದೆ ಹೆಜ್ಜೆಯನಂದು ಪಾಲಿಸುತಾಗಹಿಂದೆಡಬಲ ನೋಡದೆ ಮುಂದು ನಿಟ್ಟಿಸಿಛಂದಛಂದದಲಾಗುವಣಿ ಲಗುವಿನಿಂದಬಂದನು ಬಹು ಶೂರಧೀರ ಮಹಾವೀರ3ದಾರಿ ಊರುಗಳನೆ ಧೂಳಿಗೋಂಟೆಯ ಮಾಡಿಆರಾಧರೇನು ಶಿಕ್ಷಿಸುವೆನೆಂದೆನುತಭೇರಿಕರಡಿ ಸಮ್ಮೇಳಗಳೊಡಗೂಡಿಕಾರಣವಹ ಯಜÕಮಂಟಪದೆಡೆಗಾಗಿ4ಸುಷುಮ್ನವೆಂದೆಂಬ ಬಾಗಿಲ ಮುರಿಯುತ ಆಸಮಯದಿ ಬಂದ ಅಸುರರ ಕೊಲ್ಲುತಭೇಸರಿಸುವ ದೊರೆ ದೊರೆಗಳನಿರಿಯುತದ್ವೇಷರೆನಿಪ ಷಡುರಥಿಕರ ಕಟ್ಟುತ5ಅಷ್ಟಸಿದ್ಧಿಗಳೆಂಬ ದಿಕ್ಪಾಲಕರ ನಟ್ಟಿಭ್ರಷ್ಟ ಮೋಹವದೆಂಬ ಯಮನ ಹಲ್ಮುರಿದೆತ್ತಿನಷ್ಟಮನವೆಂಬ ಬೃಗುವಿನ ಮೀಸೆಯ ಕಿತ್ತುಶಿಷ್ಟಶಿಷ್ಟರನು ಎಲ್ಲರ ಕೆಡೆಮೆಟ್ಟಿ6ಹಮ್ಮುತಾನಾಗಿರುತಹಉನ್ಮತ್ತದಕ್ಷನ ಶಿರವನು ತರಿಯುತಲಾಗಗಮ್ಮನೆ ತ್ರಿಕೂಟ ಯಜÕಕುಂಡದೊಳುಸುಮ್ಮನಾಹುತಿಯಿಟ್ಟು ಸುಲಭದಲಿ ನಲಿಯುತ7ಪಾಪರೂಪನಾದ ಜೀವದಕ್ಷನನುಈ ಪರಿಯಲಿ ಕೊಂದು ನಾಟ್ಯವಾಡಲುಭಾಪುರೇ ಎಂದು ಸಾಧು ಪ್ರಮಥರು ಹೊಗಳಲುತಾಪಹರನಾಗಿ ಶಾಂತಿಯ ಹೊಂದುತ8ನಿರುಪಮನಿತ್ಯನಿರಾಳನೆ ತಾನಾಗಿಪರಮೇಶಪರವಸ್ತುಪರತರವೆಯಾಗಿಭರಿತ ಚೇತನ ಪ್ರತ್ಯಗಾತ್ಮನೆ ತಾನಾಗಿನಿರುತ ನಿತ್ಯಾನಂದ ಚಿದಾನಂದಯೋಗಿ9
--------------
ಚಿದಾನಂದ ಅವಧೂತರು
ವೀರೆಯ ನೋಡಿರೋ ಅಸುರರ ಮಾರಿಯ ನೋಡಿರೋಶೂರಾದಿ ಶೂರರ ದಾರಿಯ ಹಚ್ಚಿಸಿಮುರಿದ ಮಹಿಷಾಸುರನ ತರಿದಪರಿಶಿಲೋಮನು ಶಕ್ತಿಯ ಪಡೆದು ನಡೆದು ಕಣ್ಕೆಂಪಿಡಿದುಮಸಗುತಲಿಡಲು ಶಕ್ತಿಯ ದೇವಿಯು ಹಿಡಿದೆ ಹಲ್ಲನು ಕಡಿದೆಕೊಸರಿಯೆ ಇಟ್ಟಳು ಅಸುರನ ಎದೆಗೆ ಹೊಯ್ದು ರಕ್ತದಿ ತೊಯ್ದುಬಸವಳಿಯುತ ರಿಶಿಲೋಮನು ಭೂಮಿಗೆ ಬೀಳೆ ಬಹು ಹುಡಿಯೇಳೆ1ವರರುದಗ್ರನು ಗದೆಯನು ಹೊತ್ತು ಬರಲು ದೇವಿಗೆರಗಲುಶರದಿಂದಲಿ ತಲೆಯುರುಳಿಸಿ ಶಿರ ಬೊಬ್ಬಿರಿದು ಡಿಂಬವು ನಡೆದುಭರದಲಿ ಹೊಯ್ದುದು ಗದೆಯಲಿ, ಶರ ಸೋನೆಯ ಸುರಿದು ಖಡ್ಗವಹಿರಿದು ಪರಮೇಶ್ವರಿ ಭಾಪೆನಲು ನಡೆದು ಬಿತ್ತು ಪ್ರಾಣ ಹೋಗಿತ್ತು2ದಳಪತಿಯಹ ಚಿಕ್ಷುರಗೆ ಸಮನೆ ತ್ರಿಣಯನ ಕಾಣೆನು ಎಣೆಯನಹೊಳಕಿದ ನಾನಾಪರಿಆಯುಧದಿ ಮುಂದೆ ಧಿರುಧಿರು ಎಂದೆಒಳ ಹೊಕ್ಕಿರಿದನು ದೇವಿಯ ಶೂಲದಿ ಎದೆಯ ಶೌರ್ಯ ಶರಧಿಯಬಳಿಯದ ದೇವಿಯು ತಪ್ಪಿಸಿ ಶೂಲದಿ ತಿವಿಯೆ ಕಂಗಳ ಮುಗಿಯೆ3ದುಷ್ಟ ಬಿಡಾಲನು ಶರಗಳ ಸುರಿದನು ಮುಚ್ಚೆ ಸುರರೆದೆ ಬಿಚ್ಚೆಎಷ್ಟನು ಹೇಳಲಿ ಮಾಯದಿ ಮುಸುಕಿ ಇರಿದ ಬಹು ಬೊಬ್ಬಿರಿದಮುಷ್ಟಿಯಲಿ ತಿವಿದನು ದೇವಿಯ ಕೋಪವು ಹೆಚ್ಚಿ ತಾನವುಡುಗಚ್ಚಿಬಿಟ್ಟನು ದೇಹವ ದೇವಿಯು ಶೂಲದಿ ತಿವಿಯೆ ರಿಪುಭವವಳಿಯೆ4ಎಡಬಿಡದಲೆ ರೌದ್ರದಿ ಮಹಿಷಾಸುರನೊತ್ತೆ ದೇವಿಯು ಮತ್ತೆಕಿಡಿಕಾರುತ ಹೊಕ್ಕೊದೆದಳು ಬೀಳಲು ಕವಿದು ಶೂಲದಿ ತಿವಿದುಕಡಿದಳು ಕೊರಳನು ತಲೆಯನು ಮೆಟ್ಟಿ ಓಡಿತು ಭಯ ಹಿಮ್ಮೆಟ್ಟಿಮೃಡಚಿದಾನಂದನು ತಾನಾದ ಬಗಳ ಕರುಣಿ ಭಕ್ತರಭರಣಿ5
--------------
ಚಿದಾನಂದ ಅವಧೂತರು