ಒಟ್ಟು 3819 ಕಡೆಗಳಲ್ಲಿ , 122 ದಾಸರು , 2723 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಮಕೃಷ್ಣವಿಠಲ | ಪೊರೆಯ ಬೇಕಿವಳಾ ಪ ಸನ್ನುತ ಹರಿಯೆ | ಪ್ರಾರ್ಥಿಸುವೆ ಧೊರೆಯೇ ಅ.ಪ. ಮೋದ ತೀರ್ಥರ ಮತದಿ | ಉದುಭವಿಸಿ ಇರುತಿರ್ಪಸಾಧು ಕನ್ನಿಕೆ ಇವಳಾ | ವೇದಾಂತ ವೇದ್ಯಾ |ಮೋದದಾಯಕನಾಗಿ | ಶ್ರೀಧರನೆ ತರತಮವಭೇಧ ಪಂಚಕ ತಿಳಿಸಿ | ಕಾದುಕೋ ಬಿಡದೆ 1 ಅಹಿಕ ಪಾರತ್ರಿಕದಿ | ಬಹುಸಖ್ಯಗಳ ಕೊಟ್ಟುಮಹಿತ ನಿನ್ನಯ ನಾಮ | ರೂಪಕ್ರಿಯ ಗುತಾಮವಿಹಿತ ಮಾರ್ಗದಿ ತುತಿಸಿ | ತವಚರಣಕರ್ಪಿಸುವಮಹಭಾಗ್ಯ ಇವಳೀಗೆ | ಓದಗಿಸೋ ಹರಿಯೇ 2 ಅಡಿಗಡಿಗೆ ಬರುತಿರ್ಪ | ಕಡುವಿಘ್ನ ಪರಿಹರಿಸೊಕಡುದಯಾ ಪರಿಪೂರ್ಣ | ಕರಿವರದ ಕೃಷ್ಣಾ ಬಡವಿಪ್ರಗೊಲಿದಂತೆ | ಭಕುತ ಜನ ಪರಿಪಾಲಪಿಡಿಯುವುದು ಕೈ ಇವಳ | ಬಾಲ ಗೋಪಾಲ 3 ಕಲಿಯುಗದಿ ಸಾಧನವು | ಬಲುಕಷ್ಟವೆನಿಸಿಹುದುಕಲಿಮಲಾಪಹಗಂಗೆ | ಪಿತನ ಚರಣಾಬ್ಜಾಓಲುಮೆಯಿಂ ಭಜಿಪರ್ಗೆ | ಭವಭಂಧ ಪರಿಹಾರಅಳವಡಿಸೊ ಇವಳೀಗೆ | ತವನಾಮಕವಚಾ 4 ಕೋವಿದರ ಪರಿಪಾಲ | ಪಾವಮಾನಿಯ ಪ್ರೀಯನೋವು ಸುಖ ದ್ವಂದ್ವಗಳ | ಸಮತೆಯಲಿಯುಂಬಾಭಾವವನೆ ಕರುಣಿಸುತ | ಭವವ ನುತ್ತರಿಸೆಂದುದೇವ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ರಾಮಕೋಟಿ ನಾಮಭಜನಾ ನೇಮದಿಂದ ಮಾಳ್ಪನು ಧನ್ಯ ಪ ಪ್ರೇಮಪಾಶದಿಂದಬಿಗಿದುಸ್ವಾಮಿಯನ್ನ ಹೃದಯದಿನೆನೆದು ಅ.ಪ ಶಂಭು ತನ್ನ ಮನದಿನಿತ್ಯ ಇಂಬಿನಿಂದ ಧ್ಯಾನಿಸುತ್ತ ಅಂಬಿಕೆಗನುಮೋದಿಸುತ್ತ ಸಂಭ್ರಮದಿಂದೊರೆದ ಸತ್ಯ1 ನೇಮದಿ ಕಾರ್ಯವನು ಬಗೆದು ಭೂಮಿಜಾತೆಯ ಕಂಡವಗೊಲಿದ 2 ಕರುಣಾಮೂರುತಿಯೊಲುಮೆವಡೆದು ಪರಮಪುಣ್ಯ ವಿಭೀಷಣ ಒರದ 3 ಭರತಭೂಮಿಯೊಳಗೆ ಜನಿಸಿ ಹರಿಯ ಭಕ್ತ ಗಣ್ಯರೆನಿಸಿ ಪುರಂದರ ಕನಕದಾಸರು ಕರುಣದೊರೆದ ಭವತಾರಕವಾ 4 ಸಾಸಿರನಾಮವ ಪಠಿಸಿ ವಾಸುದೇವನಿಗೆ ವಂದಿಸಿ ಭೂಸುರರಾನಂದಿಸುವ ಕೇಶವ ಜಾಜೀಶನ ತೋರ್ಪ 5
--------------
ಶಾಮಶರ್ಮರು
ರಾಮಚಂದ್ರನೇ ಪರದೈವನೋ ನಮ್ಮ | ಶಾಮ ಸುಂದರ ಕೃಷ್ಣ ಪರದೈವನಯ್ಯ ಪ ರಾಮಭಕ್ತ ನಿದ್ದೆಡೆಗಾಗಿ ಯದುಕುಲ | ಸ್ವಾಮಿಯ ಶರಣನು ಬಂದ ಕೀರ್ತಿಸುತ | ಪ್ರೇಮದಲೀರ್ವರ ಭಕ್ತಿಯವಾದವು | ನೇಮದಿ ಬೆಳೆಯಿತು ಕೇಳಿ ಸಜ್ಜನರು1 ಚಿಕ್ಕ ತನದಿ ತಾಟಿಕೆಯನು ಕೊಂದು ಮುನಿಮುಖ | ಅಖರದಲಿ ಕಾಯದನಾರು ಹೇಳಯ್ಯ | ಠಕ್ಕಿಸಿ ಬಂದ ಪೂತನಿಅಸುಹೀರಿಜ | ನಕ್ಕಭಯ ನಿತ್ತ ಕೃಷ್ಣ ನೋಡಯ್ಯ2 ಚರಣ ಸೋಕಿಸಿ ಶಿಲೆ ಹೆಣ್ಣವ ಮಾಡುತ | ಹರಧನು ಮುರಿದವ ನಾರು ಹೇಳಯ್ಯಾ | ಮರಗಳಾದವರ ನುದ್ಧರಿಸುತ ಕಂಸಾ | ಸುರಧನು ಹಬ್ಬವ ಗೆದ್ದ ರಂಗೈಯ್ಯಾ3 ನೆರದಿಹ ದೇವ ದಾನವರೋಳುದ್ದಂಡದಿ | ಧರಣಿ ಜೆಯ ತಂದನಾರು ಹೇಳೈಯ್ಯಾ | ವರಚೈದೈ ಘೋಷರ ಭಂಗಿಸಿ ರುಕ್ಮಿಣಿ | ಕರವಿಡಿದೊಯ್ದಿದ ಕೃಷ್ಣ ನೋಡಯ್ಯಾ 4 ವನದೊಳು ಹಣ್ಣವ ನಿತ್ತಂ ಶಬರಿಗೆ | ಚಿನುಮಯ ಪದವಿತ್ತ ನಾರು ಹೇಳಯ್ಯಾ | ಅನುವರದಲಿ ದ್ರೌಪದಿಯ ಶಾಕದಳ | ವನೆ ಕೊಂಡು ಸುಖವಿತ್ತ ಕೃಷ್ಣ ನೋಡಯ್ಯಾ5 ಜಲ ನಿಧಿಯೊಳಗ ಸೇತುಗಟ್ಟಿಸಿ ವಾನರ | ದಳನಡಿಸಿದ ವೀರನಾರು ಹೇಳಯ್ಯಾ | ಗಳಿಗಿಯೊಳರಿಯದಂದದಿ ಮಧುರ ಜನ | ನೆಲೆಮಾಡಿ ನೀರೋಳಗಿಟ್ಟ ರಂಗೈಯ್ಯಾ6 - ಅಪೂರ್ಣ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಾಮಚಂದ್ರವಿಠ್ಠಲನೆ ನೀನಿವನ ಕಾಮಿತಾರ್ಥಗಳಿತ್ತು ಕಾಪಾಡೊ ಹರಿಯೇ ಪ ಭೂಮಿಜೆಯ ರಮಣ ಸುರಸಾರ್ವಭೌಮನೆ ದೇವಪ್ರೇಮ ಈಕ್ಷಣದಿಂದ ನೋಡೊ ದಯಾಸಾಂದ್ರ ಅ.ಪ. ಗುರುದ್ವಾರವಿಲ್ಲದಲೆ | ಗರುಡವಾಹನ ಕರುಣದೊರಕಲಾರದು ಎಂಬ | ಸ್ಥಿರಮತಿಯನಿತ್ತೂಗುರುಭಕ್ತಿ ಹರಿ ಭಕ್ತಿ | ಕರುಣಿಸುತ ವೈರಾಗ್ಯಸ್ಥಿರಮಾಡಿ ಪಾಲಿಪುದು | ತರತಮದ ಜ್ಞಾನಾ 1 ಪತಿ ಪ್ರೀಯಪ್ರಾಕ್ಕುಕರ್ಮವ ಕಳೆದು ಕಾಪಾಡಬೇಕೋ 2 ಮಧ್ವಮತ ಸಿದ್ಧಾಂತ ಪದ್ಧತಿಯ ತಿಳಿಸುತ್ತಬುದ್ಧಿಪೂರ್ವಕ ನಿನ್ನ ಗುಣರೂಪ ಕ್ರಿಯೆಗಳಾಶ್ರದ್ಧೆಯಿಂದಲಿ ಭಜಿಪ ಸದ್ಬುದ್ಧಿ ಪಾಲಿಸುತಮಧ್ವೇಶ ಇವನ ಹೃನ್ಮಧ್ಯದಲಿ ಪೊಳೆಯೋ 3 ಶರ್ವಾದಿ ದಿವಿಜೇಡ್ಯ ದುರ್ವಿಭಾವ್ಯನೆ ದೇವಸರ್ವತ್ರ ಸರ್ವದಾ ತವಸ್ಮøತಿಯನಿತ್ತೂನಿರ್ವಿಘ್ನತೆಯಲಿವನ ಸಾಧನವ ಪೂರೈಸಿಅಸ್ವತಂತ್ರನ ಬಂಧ ಪರಿಹರಿಸಿ ಕಾಯೋ 4 ಭಕ್ತವತ್ಸಲನೆಂಬೊ ಬಿರಿದುಳ್ಳ ಶ್ರೀಹರಿಯೆಭೃತ್ಯನಿಗೆ ಬಪ್ಪ ಅಪಮೃತ್ಯು ಪರಿಹರಿಸೀಸತ್ಯ ಗುರು ಗೋವಿಂದ ವಿಠ್ಠಲನೆ ನೀನಿವಗೆನಿತ್ಯಾಯು ಪ್ರದನಾಗು ಎಂದು ಪ್ರಾರ್ಥಿಸುವೆ 5
--------------
ಗುರುಗೋವಿಂದವಿಠಲರು
ರಾಮತಾರಕ ಮಂತ್ರ ಜಪಿಸಿ | ಸರ್ವಕಾಮಗಳ ಪಡೆದವನೆ ನಮಿಸಿ | ಬೇಡ್ವೆಕಾಮದುಷ್ಟಗಳ ಪರಿಹರಿಸಿ | ಹೃದ್‍ಧಾಮೆ ಹರಿ ತೋರೊ ಕರುಣಿಸೀ ಪ ಗಜ ಅಜಿನ ಧರಿಸಿ | ಮತ್ತೆಕರ್ಪರವ ಕೈಯಲ್ಲಿ ಇರಿಸಿ | ನೀನುಅಪವಿತ್ರ ಅಶಿವ ನೆಂದೆನಿಸೀ | ವರಮಸಫಲ ಶಿವ ಅಮಂಗಳವ ಹರಿಸೀ 1 ಪರಮ ಸದ್ಭಾಗವತ ಮೂರ್ತೇ | ಲಕ್ಷ್ಮೀನರಹರಿಯ ಆಣತಿಯ ಪೊತ್ತೇ | ವಿಷಯನಿರತರನು ಹರಿವಿಮುಖ ಶಕ್ತೆ | ಕಾಯೊಹರ ಸದಾಶಿವ ಭಾವ ಮೂರ್ತೇ 2 ತಪದಿಂದ ಹರಿಯೊಲಿಸೆ ನೀನು | ಹತ್ತುಕಲ್ಪ ಲವಣಾಂಭುದಿಯಲಿನ್ನು | ಗೈದೆತಪ ಉಗ್ರದಲಿ ಪೇಳ್ವುದೇನು | ನೀನು`ತಪ` ನೆಂದು ಕರೆಸಿದೆಯೊ ಇನ್ನು 3 ಶುಕಿಯಾಗಿ ಬಂದ ಅಪ್ಸರೆಯ | ಕೂಡ್ಡಅಕಳಂಕ ವ್ಯಾಸಾತ್ಮ ಧೊರೆಯ | ಮಗನುಶುಕನಾದೆ ಶಿವನೆ ಇದು ಖರೆಯ | ನುತಿಪೆಪ್ರಕಟ ಭಾಗವತಕ್ಕೆ ಧೊರೆಯ 4 ಮಾರುತನು ನಿನ್ನೊಳಗೆ ನೆಲಿಸಿ | ಗೋಪ್ಯದೂರೆಂಬ ನಾಮವನೆ ಧರಿಸಿ | ಇರಲುದೂರ್ವಾಸನೆಂಬ ಕರೆಸಿ | ಮೆರೆವಭೂ ಭೃತರ ಮಾನವನೆ ಕೆಡಿಸಿ 5 ಪತಿ ಸಂಗ ರಹಿತೆ | ಎನಿಸೆಭಾರತಿಯ ದೇಹದಲಿ ಜಾತೆ | ಇರಲುಪ್ರಾರಬ್ಧ ಭೋಗಿಸುವ ಮಾತೆ | ಎನಿಸಿವೀರ ಅಶ್ವತ್ಥಾಮ ಕೃಪೆ ಜಾತೆ 6 ಧಾಮ ಈಶಾನ್ಯದಲಿ ಇದ್ದು | ನಿನ್ನವಾಮದಲಿ ವಾಸುದೇವಿದ್ದು | ನೀನುವಾಮದೇವನ ಪೆಸರು ಪೊದ್ದು | ಧರಿಪೆಸ್ವಾಮಿ ಪೂಜಕನೆಂಬ ಮದ್ದು 7 ಕಾಲಾತ್ಮ ನಿನ್ನೊಳಗೆ ನೆಲಸಿ | ಪ್ರಳಯಕಾಲದಲಿ ಜಗವ ಸಂಹರಿಸಿ | ನಿನ್ನಕಾಲಾಖ್ಯ ನೆಂತೆಂದು ಕರೆಸಿ | ಮೆರೆವಲೀಲಾತ್ಮ ನರಹರಿಯು ಎನಿಸಿ 8 ಶಫರ ಹರಿದ್ವೇಷಿಗಳು ಎನಿಪ | ದೈತ್ಯತ್ರಿಪುರಸ್ಧರನು ಸಂಹರಿಪಾ | ಶಿವನೆವಪು ಧರಿಸಿ ಅಘೋರ ನೆನಿಪಾ | ಗೈದಅಪವರ್ಗದನ ಸೇ5ರೂಪ 9 ಹೃದ್ಯ ಹರಿಸೇವೆಂi5Àು ಗೈವಾ | ಮನದಿಬದ್ಧ ದ್ವೇಷಿಗಳೆಂದು ಕರೆವಾ | ದೈತ್ಯಕ್ರುದ್ಧರ ತಪಕೆ ಸದ್ಯ ವರವಾ | ಇತ್ತುಸಧ್ಯೋಜಾತನೆನಿಸಿ ಮೆರೆವ 10 ಹರಿಯಂಗ ಸೌಂದರ್ಯ ನೋಡಿ | ನೋಡಿಪರಮಾನಂದವನೆ ಗೂಡೀ | ಇಂಥಹರಿಪದ ದೊರಕೆ ಚಿಂತೆ ಗೂಡಿ | ಅತ್ತೆಹರುಷದಿ ಊರು ಸುತ ಪಾಡಿ 11 ಊರು ನಾಮಕ ರುದ್ರನಿಂದ | ಜಾತಕಾರಣ ಔರ್ವಭಿಧದಿಂದ | ಕರೆಸಿಉರ್ವರಿತ ರೋದನದಲಿಂದ | ಮೆರೆದೆಮಾರಾರಿ ಔರ್ವಭಿಧದಿಂದ 12 ವಿಷಯದಲಿ ಆಸಕ್ತರಾದ | ಮುಕ್ತಿವಿಷಯಕೆ ಬಹುಯೋಗ್ಯರಾದ | ಜನರವಿಷಯಾನುಕಂಪಿತನು ಆವ | ರುದ್ರಹಸನಾಗಿ ರೋದಿಸಿದಗಾಢ 13 ಕಮಲಾಕ್ಷಿ ದಕ್ಷಸುತೆ ತನ್ನ | ದೇಹವಿಮಲಯೋಗಾಗ್ನಿಯಲಿ ಭಗ್ನ | ಮಾಡಿಹಿಮದಾದ್ರಿ ಯೊಳಗೆ ಉತ್ಪನ್ನ | ವಾಗೆವಿಮಲ ಶಿವಗೊಂಡ ವ್ರತ ಕಠಿಣ 14 ಆದ್ಯಕಾಲದಲಿಂದ ಊಧ್ರ್ವ | ರೇತಬುದ್ಧಿಮಾಡುತ ತಪವು ಶುದ್ಧ | ಗೈದುಸಿದ್ಧನಾಗಿರುತಿರಲು ರುದ್ರ | ಕೇಳಿಊಧ್ರ್ವ ನೆಂಬಭಿಧಾನ ಪೊದ್ದ 15 ಕಾಮಹರ ತಪದಿಂದಲೆದ್ದು | ಬಹಳಪ್ರೇಮದಲಿ ಅದ್ರಿಸುತೆ ಮುದ್ದು | ಮಾಡಿಕಾಮಲಂಪಟನೆಂಬ ಸದ್ದು | ಗಳಿಸಿನಾಮ ಲಂಪಟ ನೆಂದು ಪೊದ್ದು 16 ಹರಪೊತ್ತ ಹನ್ನೆರಡು ನಾಮ | ದಿಂದಹರಿಮುಖ್ಯನಿಹನೆಂಬ ನೇಮ | ತಿಳಿದುಹರನ ಪೂಜಿಸೆ ಈವ ಕಾಮ | ನೆಂದುಗುರು ಗೋವಿಂದ ವಿಠ್ಠಲನ ನೇಮ17
--------------
ಗುರುಗೋವಿಂದವಿಠಲರು
ರಾಮದುರ್ಗದ ಪರಮ ಪೂಜ್ಯ ಆಚಾರ್ಯರನುನೇಮದಿಂದ ಸ್ಮರಿಸೊ ಮನುಜಾಕಾ'ುತಾರ್ಥವ ಕೊಟ್ಟು ಪ್ರೇಮದಿಂದ ಕ್ಕೆಪಿಡಿದುಸನ್ಮಾರ್ಗ ತೋಗಿಸುವರರು ಅವರು ಪಮಧ್ವಮತದೊಳು ಜನಿಸಿ ಸಚ್ಛಾಸ್ತ್ರಗಳನೋದಿ ಪ್ರಸಿದ್ಧಪಂಡಿತರಾಗಿ ಶುದ್ಧ ಆಚರಣೆ ಸದ್ದೈರಾಗ್ಯಸದ್ಭಕ್ತಿ ಸುಜ್ಞಾನ ಪೂರ್ಣರಾಗಿದುಡ್ಡಪ್ಪ ದೊಡ್ಡಪ್ಪ ಧಡ್ಡಪ್ಪರೆನ್ನದೆ ಸರ್ವಸಮದ್ಟೃ ಇಟ್ಟು'ದ್ಯಾರ್ಥಿಗಳಿಗೆಲ್ಲ ಅನ್ನವಸ್ತ್ರವ ಕೊಟ್ಟು ಗುರುಕುಲನಡಿಸಿದ ಋಗಳವರು 1ಸ್ನಾನಸಂಧ್ಯಾನ ಜಪಿತಪ ಅನುಷ್ಠಾನ ಅಗ್ನಿಹೋತ್ರವನಡಿಸುತ ಧ್ಯಾನಮೌನವು ಸದಾ ರಾಮನಾಮ ಸ್ಮರಣೆಪಾಠಪ್ರವಚಿನ ಪುರಾಣ ದಾನಧರ್ಮವು ದಿವ್ಯ ಸಂತಾನಸಂಪತ್ತು ರಾಜಮನ್ನಣೆ ಪಡೆದರು ಕ್ಷಣ ವ್ಯರ್ಥಕಳೆಯದೆ ವ್ಯರ್ಥಮಾತಾಡದೆ ದಿನಚರಿ ನಡಿಸಿದರು ಕಡೆತನರ 2ಘನವೈಯ್ಯಾಕರಣಿ ಗರ್ವವು ಎಳ್ಳೆಷ್ಟು ಇಲ್ಲಾ'ನಯ ಪೂರ್ಣಸ್ವಭಾವ ಹಣಹೆಣ್ಣು ಮಣ್ಣಿನಾಶೆಯುಪೂರ್ಣಬಿಟ್ಟವರು ಜನ'ತದಿ ಸತತ ನಿಂತರುಧನ ಮಾನ ಮರ್ಯಾದೆಗಳಿಗಾಗಿ ಎಂದೆಂದೂ ಧಡಪಡ-ಮಾಡಲಿಲ್ಲಾ ಗುಣನಿಧಿ ಭೂಪತಿ 'ಠ್ಠಲನ ಭಜನೆಯಾಕುಣಿಕುಣಿದು ಮಾಡುವ ಪರಮ ಭಾಗವತರು 3ಗಲಗಲಿ ನರಸಿಂಹಾಚಾರ್ಯರು
--------------
ಭೂಪತಿ ವಿಠಲರು
ರಾಮದೂತನಪಾದ ತಾಮರಸವ ಕಂಡ ಆ ಮನುಜನೆ ಧನ್ಯನು ಪ. ಸೋಸಿಲಿ ಹರಕೆಗಳ ಸಲಿಸುವರೊ ಏಸು ಮಮತೆಯಿಂದವರ ಕಷ್ಟಗಳನು ಘಾಸಿ ಪಡಿಸದಲೆ ಪರಿಹರಿಪ ವೆಂಕಟನ 1 ಎಷ್ಟೆಂದು ಪೊಗಳಲೊ ದಿಟ್ಟ ಮೂರುತಿ ನಿನ್ನ ಉತ್ಕøಷ್ಟ ರೂಪ ಲಾವಣ್ಯಗಳಾ ಇಷ್ಟ ಮೂರುತಿ ಶ್ರೀ ಶ್ರೀನಿವಾಸ ಧೊರೆ ಶ್ರೇಷ್ಟ ಭಕ್ತರನೆಲ್ಲ ಪೊರೆವ ವೈಕುಂಠಪತಿ2
--------------
ಸರಸ್ವತಿ ಬಾಯಿ
ರಾಮನ ನೆನ ಮನವೇ-ಹೃದಯಾ-ರಾಮನನೆನೆ ಮನವೇ ಪ ಸದ್ಗುಣ ಧಾಮನಾ ಸೀತಾ ಅ.ಪ. ದಶರಥ ನಂದನನಾ-ಧರಣಿಯೊಳಸುರರ ಕೊಂದವನ ಪಶುಪತಿ ಚಾಪವ ಖಂಡಿಸಿಮುದದಿಂ ವಸುಮತಿ ಸುತೆಯಂ ಒಲಿದೊಡಗೂಡಿದ-ರಾಮನ 1 ತಂದೆಯ ಮಾತಿನಲಿ-ವನಕೈತಂದು ಸರಾಗದಲಿ ಬಂದ ವಿರಾಧನ ಕೊಂದು ನಿಶಾಚರಿ ಯಂದವಳಿದು ಖಳವೃಂದವ ಸವರಿದ 2 ಸೀತೆಯನರಸುತಲಿ-ಕಬಂಧನ ಮಾತನು ಸರಿಸುತಲಿ ವಾತನಮಗನೊಳು ಪ್ರೀತಿಯಿಟ್ಟು ಪುರುಹೂತನ ಸುತನಂ ಘಾತಿಸಿ ದಾತನ-ರಾಮನ 3 ತರಣಿ ತನಯನಿಂದ-ಕಪಿಗಳ ಕರೆಸಿ ವಿಲಾಸದಿಂದ ತರುಣಿಯನರಸಲು ಮರುತನ ಮಗನಿಗೆ ಬೆರಳುಂಗುರವನು ಗುರುತಾಗಿತ್ತನ-ರಾಮನ4 ಗುರುತು ಕೊಂಡು ಅರಿಪುರವನು ಸುಟ್ಟುರುಹಿದ ವಾನರ- ವರನಿಗೆ ಸೃಷ್ಠಿಪಪದವಿತ್ತಾತನ-ರಾಮನ 5 ಶರನಿಧಿಯನು ಕಟ್ಟಿ-ಶತ್ರುನಿಕರವನು ಹುಡಿಗುಟ್ಟಿ ಶರಣನ ಲಂಕೆಗೆ ಧೊರೆಯನು ಮಾಡಿ ಸಿರಿಯನಯೋಧ್ಯಗೆ ಕರೆತಂದಾತನ-ರಾಮನ 6 ಸರಣಿಯ ಲಾಲಿಸುತ ಶರಣಾಭರಣ ಪುಲಿಗಿರಿಯೊಳು ನೆಲೆಸಿದವರದವಿಠ್ಠಲ ಧೊರೆ ಪರಮೋದಾರನ-ರಾಮನ 7
--------------
ಸರಗೂರು ವೆಂಕಟವರದಾರ್ಯರು
ರಾಮನ ನೋಡಿದೆ ರಘುಕುಲ ತಿಲಕನ ಕಾಯ ಕೌಸಲ್ಯ ತನಯನ ಪ ತಾಮಸ ದೈತ್ಯರ ಲೀಲೆಯಲಿ ಕೊಂದು ಭೂಮಿ ಭಾರವನಿಳುಹಿದ ನಿಸ್ಸೀಮನಅ.ಪ. ತಾಟಕಾದಿಗಳ ಘೋರಾಟವಿಯಲಿ ಪಾಟುಪಡಿಸಿದ ಹಾಟಕಾಂಬರನ ತೋಟಿಗೊದಗಿದ ಮಾರೀಚಾದಿಗಳ ಆಟನಾಡಿಸಿದ ನೀಟುಗಾರ 1 ಹಲವು ಕಾಲದಿ ಶಿಲೆಯಾಗಿರ್ದ ಲಲನೆ ಅಹಲ್ಯೆಯ ಶಾಪವ ಹರಿಸಿ ಕಲುಷವ ಕಳೆಯುತ ಕುಲಸತಿ ಮಾಡಿದ ನಳಿನ ನಯನನ 2 ಹರನ ಧನುವನು ಸ್ಮರನ ಧನುವಿನಂತೆ ತ್ವರದಿ ಮುರಿದು ನಿಂದ ಸುಕುಮಾರನ ಧರಣಿಪ ಜನಕನ ಭಕ್ತಿಗೆ ಒಲಿದು ಧರಣಿಜೆಯ ವರಿಸಿ ಹರುಷವಿತ್ತನ 3 ತಾತನ ಭಾಷೆಯ ಪ್ರೀತಿಯಿಂ ಸಲಿಸೆ ಸೀತೆ ಸಹಿತ ಭ್ರಾತ ಲಕ್ಷ್ಮಣವೆರಸಿ ಆತುರದಿಂದಲಿ ಅರಣ್ಯವನೈದಿ ಕೌತುಕ ತೋರುತ ಚರಿಸಿದವನ4 ಖರದೂಷಣ ತ್ರಿಶಿರಾದಿ ರಕ್ಕಸರ ಅರೆಕ್ಷಣದಲಿ ತರಿದು ಬಿಸುಟವನ ಹಿರಣ್ಯಮೃಗವ ಬೆನ್ನಟ್ಟಿ ಕೆಡಹುತ ವರ ಜಟಾಯು ಶಬರಿಗೆ ಒಲಿದವನ 5 ವಾತಸುತನ ಕಂಡಾತನ ಪದುಳಿಸಿ ತರಣಿ ಸುತಗೆ ಅಭಯವನಿತ್ತ ಜಾತವೇದನೆದುರಲಿ ಸಖ್ಯವ ಮಾಡಿ ಘಾತಕ ವಾಲಿಯ ನಿಗ್ರಹಿಸಿದನ 6 ಕೋತಿ ಕರಡಿಗಳ ಹಿಂಡನು ಕೂಡಿಸಿ ಸೇತುವೆಗಟ್ಟಿಸಿ ಜಲಧಿಯ ದಾಟಿ ಪಾತಕಿ ರಾವಣನÀ ಶಿರಗಳ ಕಡಿದು ಸೀತೆಯ ಸೆರೆಯನು ಬಿಡಿಸಿದಾತನ 7 ಮೊರೆಯನು ಪೊಕ್ಕಾ ವರ ಭೀಷಣನ ಕರುಣದಿ ಕರೆದು ಕರವನು ಪಿಡಿದು ಧರೆಯಿದು ಸ್ಥಿರವಾಗಿರುವ ಪರಿಯಂತ ದೊರೆತನ ಮಾಡೆಂದ್ಹರಸಿದಾತನ 8 ಅಕ್ಕರೆಯಿಂದಲಿ ಅರ್ಚಿಸುವರಿಗೆ ತಕ್ಕಂತೆ ವರಂಗಳ ನೀಡುತಲಿ ಮಿಕ್ಕು ರಾಜಿಸುತಿಹ ಪಂಪಾಪುರದ ಚಕ್ರತೀರ್ಥದಿ ನೆಲೆಸಿಹನ 9 ಕಂತುವೈರಿ ವಿರುಪಾಕ್ಷಗೆ ತಾರಕ ಮಂತ್ರ ನಾಮಕನಾಗಿರುತಿರ್ಪನ ಯಂತ್ರೋದ್ಧಾರನಾಗಿರುವ ಹನುಮನ ಮಂತ್ರಿಯ ಮಾಡಿಕೊಂಡು ರಾಜಿಪನ 10 ದುಷ್ಟ ರಕ್ಕಸ ದಮನವ ಮಾಡಿ ಶಿಷ್ಟ ಜನರುಗಳಿಷ್ಟವ ಸಲಿಸುತ ಶ್ರಿಷ್ಟಿಗೊಡೆಯನೆನಿಸಿ ಮೆರೆಯುತಲಿರುವ ದಿಟ್ಟ ಶ್ರೀ ರಂಗೇಶವಿಠಲನ 11
--------------
ರಂಗೇಶವಿಠಲದಾಸರು
ರಾಮನ ನೋಡಿರೈ ನಿಮ್ಮಯ ಕಾಮಿತ ಬೇಡಿರೈ ಪ ತಾಮರಸಸಖ ಸುವಾಂಶಾಬ್ಧಿಶರ ತ್ಸೋಮಾ ಕಮಲಧೀಮ ಅ.ಪ. ಅಜ ಜ್ಯೋತಿರ್ಮಯ ಜಾಬಾಲಿ ಮುನಿಯ ತಪವರಿದಾ ಕಾಮಿತ ನೆರೆದಾ ಭೂತಾಧಿಪನ ಭವನದೊಳರ್ಚನೆಗೊಂಡಾ ದೃತಕೋದಂಡಾ ಮಾತಂಗಾರಿ ವರೂಥಿಯ ಜನಕ ಮೇದಾಗಾರಕೆ ಪೋದಾ 1 ಸೌಭರಿ ಮುನಿಪಗೆ ಸೌಖ್ಯವ ಕರುಣಿಸಿ ಕೊಟ್ಟ ಜಗಕತಿಧಿಟ್ಟ ನಾಭಿಜನ್ಮನಿಹ ನಗವರ ಸ್ಥಾನಕೆ ಬಂದ ಶುಭಗುಣ ವೃಂದಾ ವೈಭವದಿಂದಲಯೋಧ್ಯಾ ನಗರದಿ ಮೆರೆದಾ ಕಾಮಿತವೆÀರೆದಾ ಸ್ವಾಭಿಮಾನದಲಿ ಸತಿಯಳಿಗಿತ್ತನು ವರವಾ ದೇವರ ದೇವಾ 2 ಜಾಂಬವಂತನಿಗೆ ಜಾನಕಿರಮಣನು ಇತ್ತ ತನ್ನಯಧ್ಯಾತ ಸಂಭ್ರಮದಲಿ ವೇದಗರ್ಭನೊಡನಾಡ್ದಾ ಮುಕ್ತಿಯ ನೀಡ್ದಾ ಕುಂಭೀಶ್ವರನ ಸುಕೋಶದಿ ಬಹುದಿನ ವಾಸ ವೆಸಗಿದನೀಶಾ ಒಲಿದಾ ಮೋದದಿ ನಲಿದ 3 ಅಲವಬೋಧಮುನಿ ಅತಿಮೋದದಲರ್ಚಿಸಿದ ಸಲೆ ಮೆಚ್ಚಿಸಿದ ಇಳೆಯೊಳು ಬಹು ಯತಿಕರ ಪೂಜಿತನಾದ ಲೀಲ ವಿನೊದಾ ಕಳೆದ ಮನದೊಳು ಪೊಳೆದ ಪ್ರೀಯ ಕವಿಜನಗೇಯ 4 ವಾರಿಧಿಬಂಧನ ವಾನರ ನಾಯಕರಾಳ ದೈತ್ಯರ ಸೀಳ್ದಾ ಪದಾಂಬುಜನೀತಾ ತ್ರಿಗುಣಾತೀತ ಆರಾಧಿಪರಿಗೆ ಅಖಿಳಾರ್ಥಗಳನು ಕೊಡುವಾ ದುರಿತವ ತಡೆವ ನೀರಜಾಕ್ಷ ಜಗನ್ನಾಥ ವಿಠ್ಠಲ ನಿಶ್ಚಿಂತಾ ಸೀತಾಕಾಂತ 5
--------------
ಜಗನ್ನಾಥದಾಸರು
ರಾಮನಾಮವ ನೆನೆ ಮನವೆಪ ರಾಮ ಎಂದವನೆ ಧನ್ಯನೆಂದು ಶ್ರುತಿತತಿಗಳು ಪೊಗಳುತಿರೆ ಅ ತರುಣತನದಿ ದಿನ ದಾಟಿತು ಸುಮ್ಮನೆಶರೀರದೊಳು ಸ್ವರವಾಡುತಲೆತರುಣಿ ಸುತರು ಸಂಸಾರವೆಂಬಶರಧಿಯೊಳಗೆ ಮುಳುಗಿರದೆ ಮನವೆ 1 ಬಗೆಬಗೆ ಜನ್ಮದಿ ಜನಿಸಿದೆ ನಾಳೆಗೆಸಿಗುವುದೆ ನಿಜದಿಂ ಈ ಸಮಯಮುಗುಧನಾಗಿ ಮತ್ತೆ ಜನಿಸಿ ಬರುವುದುಸೊಗಸು ಕಾಣುವುದೆ ಛಿ ಮನವೆ 2 ಚಿಂತೆಯನೆಲ್ಲ ಒತ್ತಟ್ಟಿಗಿಟ್ಟುಅಂತರಂಗದಲಿ ಧ್ಯಾನಿಸುತಕಂತುಪಿತ ಕನಕಾದಿಕೇಶವನಎಂತಾದರೂ ನೀ ಬಿಡಬೇಡ ಮನವೆ3
--------------
ಕನಕದಾಸ
ರಾಮನಾಮವ ಪಾಡೆಲೊ ಮನುಜಾ ಪ ರಾಮನಾಮವ ಪಾಡಿ ಈ ಸಭೆಯೆಲ್ಲಾ ನೋಡಿ ಕಾಮಾಕಲಭಿಮಾನನು ಕಾಮಿನಿಗೇಳಿದ ಸೀತಾ 1 ಸಾಧಿಸಿದಾರೊಳು ನೀ ಸಂಭ್ರಮವಾಗೊ ಯೆಲೊ ಶೋಧಿಸಿ ನಿನ್ನೊಳು ನಿಜಸಾಧನ ಕೇಳುವ ಸೀತಾ 2 ಇಂತೀ ಪರಿಯೊಳು ಮಹದಂತರವಿಹುದಿದಾ ಹಂತವರ ಕಂಡು ನೀ ವೇದಾಂತದೊಳು ನಿಂದು 3 ಭರತಪುರೀಶನನ್ನು ಮರೆತರಾಗುವುದುಂಟೆ ಅರಿತು ನೋಡಿಕೊಂಡು ನೀ ಪರಮತತ್ವವಿದೆಂದು 4
--------------
ಚನ್ನಪಟ್ಟಣದ ಅಹೋಬಲದಾಸರು
ರಾಮನಾಮವೆನ್ನು ಮನವೆ ನಿನ್ನ ಪಾಮರಪಾತಕನಾಶನವೆ ಬರಿನೇಮವ್ರತಗಳು ನಿಷ್ಫಲವೆ ಪರಂಧಾಮ ಭಜನೆ ಮೋಕ್ಷಪ್ರದವೆ ¥ಶೀಲತನವುನೀಬಿಡಬೇಡಾ ನಾನ್ ಶೀಲನೆಂದುನೀಹೇಳಬೇಡಾ ಶ್ರೀ ಲೋಲನಸ್ಮರಣವ ಮರಿಬೇಡಾ ಇಹ ಜಾಲಿಮನಸಿನಲಿ ತರಬೇಡಾ 1ಕಾಲದೇಶವನನುಸರಿಸಿ ನೀನು ಲೀಲೆಯಾಗಿ ಕ್ರಮದಲಿ ನಡಸಿ ಶ್ರೀಫಾಲಯನಸ್ತುತ ಘನತೆನಿಸೀ ಏವೇಳೆಯು ಶ್ರೀರಾಮನ ಜಪಿಸಿ 2ಕುಲಧನಯೌವನ ಬಲದಿಂದಾ ನಿಜ ತಿಳಿಯದೆಸುಮ್ಮನೆ ಮದಬಂದದಲಿಸಿಲುಕದೆ ಸುಜ್ಞಾನದಿಂದಾ ಗುರಿ ತಿಳಿದುಭಯಭೇದಸ್ಥಿತಿ ಚಂದಾ 3'ಮಲತುಲಸಿರಾಮನೆನ್ನುವದು ರಂಗಸ್ವಾ'ುದಾಸನಿಗೆ ಪ್ರಾಪ್ತವದುಸಮರಸ ಸದ್ಗುಣ ಲಭಿಸುವದು ಸರ್ವ ಶೇಷೈಕ್ಯವು ಒಂದಾಗುವದು 4
--------------
ಮಳಿಗೆ ರಂಗಸ್ವಾಮಿದಾಸರು
ರಾಮಪದಸರಸೀರುಹಭೃಂಗರೋಮಕೋಟಿಲಿಂಗ ಅಸುರಮದಭಂಗ ಪ ಒಂದು ನಿಮಿಷಕೆ ಪೋಗಿ ಸಂಜೀವನವ ತಂದೆÀಂದುಗೊರಳನ ಭಜಕ ನಂದನನ ನೀ ಕೊಂದೆಇಂದ್ರಸೂನುವಿನ ಭಕುತಿಗೆ ರಥಾಗ್ರದಿ ನಿಂದೆಮಂದರಧರನ ಮುಂದೆ ಸುರ-ವೃಂದವರಿಯೆ ಪುರವ ಹೋಮಗೈದು ಬಂದೆ 1 ಉರುಗದೆಯಿಂದ ಕೌರವನ ತೊಡೆಗಳ ತರಿದೆಧುರದಲ್ಲಿ ಮಾಗಧನ ಮರ್ಮಸ್ಥಳ ಮುರಿದೆದುರುಳ ದುಶ್ಶಾಸನನ ಕರುಳುಗಳನೆ ಹಿರಿದೆಕರವೆತ್ತಿ ಬಲವೆರಡ ಕರೆದೆಗುರು ಮಧ್ವಮುನಿಯಾಗಿ ಶಾಸ್ತ್ರ್ರಗಳನೊರೆದೆ 2 ಧರೆಯೊಳತ್ಯಧಿಕ ಸೋದೆಪುರನಿವಾಸಸಿರಿ ಹಯವದನನ ಪರಮಪ್ರಿಯ ದಾಸನೆರೆನಿನ್ನ ನಂಬಿರ್ದ ಭಕ್ತರಿಗೆ ಕೊಡು ಲೇಸಕರುಣವಾರಿಧಿ ಪುಣ್ಯವಾಸ ಜಗಕೆಗುರುವೆನಿಸಿ ಮೆರೆದೆ ಮುಖ್ಯಪ್ರಾಣೇಶ 3
--------------
ವಾದಿರಾಜ
ರಾಮಭಜೇ ತೇ ಪದಯುಗಳಂ ಸೀತಾ ಪ ರಾಮಭಜೇ ತೇ ಪದಯುಗಳಂ ರಾಮ ಸುಂದರ ಘನಶ್ಯಾಮ ರಘೂದ್ವಹ ಅ.ಪ ದಶರಥ ಹೃದಯಾನಂದಕರಂ ತ್ರಿ ದಶಗಣ ಚಿತ್ತಾಮೋದಕರಂ 1 ಪೂರಿತ ಕೌಶಿಕಜನಂ ಸಂ ತಾರಿತ ಗೌತಮ ಲಲನಾಂ 2 ಖಂಡಿತ ಶಂಕರಚಾಪಂ ಪರಿ- ದಂಡಿತ ಭಾರ್ಗವ ಕೋಪಂ 3 ಸ್ವೀಕೃತ ಜಾನಕೀಹೃದಯಂ ದೂ ರೀಕೃತ ಪಾತಕನಿಚಯಂ 4 ಪಾಲಿತ ಮಾತಾಪಿತೃ ವಚನಂ ಸಂ ಲಾಲಿತ ಮುನಿಜನ ಸ್ತುತಿರಚನಂ 5 ಭರತ ಸಮರ್ಪಿತ ನಿಜರಾಜ್ಯಂ ಮುನಿ ವರಭಾರದ್ವಾಜಾರ್ಪಿತ ಭೋಜ್ಯಂ 6 ದಂಡಕಾರಣ್ಯಂ ಪಾವನಚರಣಂ ಉ- ದ್ದಂಡ ವಿರಾಧಾ ಪಾತಕಹರಣಂ 7 ಕುಂಭಜಾರ್ಪಿತ ಶರಕೋದಂಡ ಸಂ ರಂಭ ನಿರ್ಜಿತ ರಾಕ್ಷಸದಂಡಂ 8 ಪಂಚವಟೀತಟ ಕೃತವಾಸಂ ದೃ ಗಂಚಲ ಧೃತಗಜದುಲ್ಲಾಸಂ 9 ಶೂರ್ಪನಖೀ ವಚನಾಲೋಲಂ ಸಹ ಜಾರ್ಪಿತ ವಿವಿಧಾಯುಧ ಜಾಲಂ 10 ರೂಪನಿರ್ಜಿತ ಸುಮಬಾಣಾಂಗಂ ವಿ ರೂಪಿತ ದುಷ್ಟ ಶೂರ್ಪನಖಾಂಗಂ 11 ಖರತರ ಖರದೂಷಣಕಾಲಂ ಸುರ ನರವರ ಮುನಿಗಣ ಪರಿಪಾಲಂ 12 ಮಾಯಾಮೃಗಾರ್ಪಿತ ಬಾಣವರಂ ಜ- ಟಾಯು ಸಂಪಾದಿತ ಲೋಕವರಂ13 ರಾವಣಹೃತ ನಿಜಪತ್ನೀಕಂ ಲೋ- ಕಾವನಗತ ಕೋಪೋದ್ರೇಕಂ14 ಸಾಧಿತ ಶಬರೀ ಮೋಕ್ಷಕರಂ ಕ- ಬಂಧ ಬಂಧನ ಮೋಚನ ಚತುರಂ 15 ವಾತ ತನೂಭವ ಕೃತಸ್ತೋತ್ರಂ ಪಂ ಪಾತಟ ನಿರ್ಮಿತ ಸುಕ್ಷೇತ್ರಂ 16 ಶಿಕ್ಷಿತ ಸಂಕ್ರಂದನ ತನುಜಂ ಸಂ- ರಕ್ಷಿತ ಚಂಡಕಿರಣ ತನುಜಂ 17 ಸೀತಾಲೋಕನ ಕೃತಕಾಮಂ ನಿಜ ದೂತಾಮೋದನ ಸುಪ್ರೇಮಂ 18 ನಿಜಕರ ಭೂಷಣ ದಾತಾರಂ ಧುರ ವಿಜಯ ವನಾಲಯ ಪರಿವಾರಂ 19 ಧೂತಾಹೃತ ಶುಭದೃಷ್ಟಾಂತಂ ವಿ- ಜ್ಞಾತ ನಿಜಸ್ತ್ರೀ ವೃತ್ತಾಂತಂ 20 ಭೀಷಣ ಜಲನಿಧಿ ಬಂಧಕರಂ ವಿ ಭೀಷಣ ಸಂರಕ್ಷಣ ಚತುರಂ21 ಶೋಷಿತ ರಾವಣ ಜಲಧಿಂ ಸಂ- ತೋಷಿತ ದೈವತಪರಿಧಿಂ 22 ಸೀತಾ ಸಮಾಶ್ರಿತ ವಾಮಾಂಕಂ ಪರಿ- ಪಾತಕ ನಿಜನಾಮಾಂಕಂ 23 ಸ್ವೀಕೃತ ಸಾಕೇತಾವಾಸಂ ಅಂ- ಗೀಕೃತ ಮಾನುಷವಿಲಾಸಂ 24 ವರವ್ಯಾಘ್ರ ಪ್ರಭೂಧರ ಕಲ್ಪತರುಂ ಶ್ರೀ ವರದವಿಠಲಮತಿಶಯ ರುಚಿರಂ 25
--------------
ವೆಂಕಟವರದಾರ್ಯರು