ಒಟ್ಟು 2222 ಕಡೆಗಳಲ್ಲಿ , 115 ದಾಸರು , 1763 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ತ್ರೀಯ ತ್ಯಜಿಸಲು ಬೇಕು ಶಿವಧ್ಯಾನಕೆಬಯ್ಯಬೇಡಿರಿ ಬುದ್ಧಿ ಎಂದೆನ್ನಿರಯ್ಯಪಮಹಿಳೆಯ ಮೋಹದಲಿ ಮಗನು ತನ್ನವನೆಂಬೆಮಹಿಳೆಯು ತೆರಳೆ ಮಗನಿಗಾರೋಇಹುದು ಪ್ರಪಂಚವೆಲ್ಲ ಎಲ್ಲ ಸತಿಯಿಂದಲಿಮಹಾದೇವ ಚಿಂತನೆಗೆ ಮರೆವೆ ಸ್ತ್ರೀಯಯ್ಯಾ1ಮಗನು ಶಿಶುವಾಗಿರಲು ಮಾನಿನಿಯ ಬಡಿವನುಮಗ ಬಲಿಯೆ ಮುರಿವನು ನಿನ್ನೆಲುಬನುಮಗನು ಯಾರವ ಹೇಳು ಮನೆಯು ಯಾರದು ಹೇಳುನಗುವು ಅಲ್ಲದೆ ನನ್ನದೆಂತೆನಲಿಕಯ್ಯಾ2ಪತ್ನಿಯನು ಬಯ್ಯೆ ಮಗ ಬಡಿವನು ಎಂಬಹೆತ್ತಾಕೆ ಬಯ್ಯೆ ಹೇವಿಲ್ಲದಿಹನುತೊತ್ತಿನ ಮಗನಾಗಿ ನಿನ್ನ ತಳ್ಳುವನುಮಿತ್ರನಾಗಿಹನವನು ತಾಯಿಗಯ್ಯಾ3ಮನೆಯು ಸವತಿಯವಳದು ಮಕ್ಕಳೆಲ್ಲ ಸವತಿಯದುಎನಿತೆನಿತು ಭಾಗ್ಯ ಸೊದೆ ಎಲ್ಲ ಸವತಿಯಳದುಮನಕೆ ಹೇಸಿಗೆ ಹುಟ್ಟಿ ಮಹಾತ್ಮನಾಗಲುತನ್ನ ಹಿಂದೆ ತಿರುಗುವರೆ ತಿಳಿದು ನೋಡಯ್ಯ4ಸಂಗತಿಯ ಮೂಲದಲಿ ಸುತ್ತಿಹುದು ಪ್ರಪಂಚಕಂಗಳೊಳು ಕಸ ಚೆಲ್ಲಿದಂತೆ ಇಹುದುಮಂಗಳ ಚಿದಾನಂದಮುಕ್ತತಾನಾಗುವುದಕೆಅಂಗನೆಯ ಬಿಡಬೇಕು ಚಿಂತೆ ಯಾಕಯ್ಯಾ5
--------------
ಚಿದಾನಂದ ಅವಧೂತರು
ಸ್ಮರಿಸುವೆ ನಾ ನಿಮ್ಮ ಚರಣಕಮಲಗುರುವಿಜಯರಾಯಜನ್ಮಾರಭ್ಯವು ನಿಮ್ಮ ಗುಣಕರ್ಮಗಳೆಲ್ಲ ವಿಜಯರಾಯದಿವಿಜರ ವೇಷದಿಂದವನಿಯೊಳುದಿಸಿದ್ಯೊ ವಿಜಯರಾಯಭಾಗವತಧರ್ಮವಹಿಸಿ ತ್ರಿರಾವರ್ತಿ ವಿಜಯರಾಯಕಂಚಿಕಾಳ್ಹಸ್ತಿ ಶ್ರೀರಂಗ ಸೇತುಯಾತ್ರೆ ವಿಜಯರಾಯಮರಿಯಾದೆಯಿಲ್ಲದೆ ವರಗಿರಿಯಾತ್ರೆಯ ವಿಜಯರಾಯಮಹಿಯಲ್ಲಿ ತಿರುಗಿ ಸರ್ವಕ್ಷೇತ್ರದಿ ವಿಜಯರಾಯಗುರೂಪದೇಶಕನಾಗಿ ವ್ಯಾಸಕಾಶಿಯಲ್ಲಿದ್ಯೊ ವಿಜಯರಾಯಸ್ವಚ್ಛವಾಗಿ ಗಂಗಾತೀರ ವಾಸಮಾಡಿ ವಿಜಯರಾಯತುಂಗಾತೀರದಿ ಕುಳಿತು ಗಂಗೆ ಪೆಚ್ಚಿಸಿದಿ ವಿಜಯರಾಯಮಧ್ವಮತದಸಾರಕವನದಿ ರಚಿಸಿದ್ಯೊ ವಿಜಯರಾಯಶುದ್ಧ ತತ್ವಸಾರ ಸುಳಾದಿ ಪದಮಾಡಿ ವಿಜಯರಾಯಸದಾಚಾರಸಂಪತ್ತು ಮಧುಕರವೃತ್ತಿಯು ವಿಜಯರಾಯಭಕ್ತರ ಅಪಮ್ಯತ್ಯುಬಿಡಿಸಿ ಆಯುನಿತ್ತೆ ವಿಜಯರಾಯನಿತ್ಯಾನ್ನ ಪುತ್ರೋತ್ಸವಗಳು ಭೃತ್ಯರಿಗೆ ವಿಜಯರಾಯಭಕ್ತಜನರಿಗೆ ತತ್ವೋಪದೇಶವ ಮಾಡಿ ವಿಜಯರಾಯಎಲ್ಲರಲಿ ಸಿರಿನಲ್ಲನ ಅಂಶವ ವಿಜಯರಾಯಬಲ್ಲಿದನೀನೊಂದುರೂಪದಿ ಎನ್ನಲ್ಲಿ ವಿಜಯರಾಯನಿಮ್ಮ ಪುಣ್ಯದ ಶೇಷವಿನ್ನು ಉಂಬೆವೊ ನಾವು ವಿಜಯರಾಯಎನ್ನಿಂದ ಆಗೋ ಸಾಧನವೆಲ್ಲ ನಿನ್ನದೊ ವಿಜಯರಾಯಈಗ ಈ ಯುಗದಿ ಸಾಧನವೆಂಬುದು ಕಾಣೆ ವಿಜಯರಾಯಗುರುನಿನ್ನ ಕರುಣಕವಚತೊಟ್ಟ ಭಕುತರ್ಗೆ ವಿಜಯರಾಯ
--------------
ಗೋಪಾಲದಾಸರು
ಸ್ವಾಮಿ ನರಸಿಂಹ ಶರಣುಶ್ರೀಮಹಾ ಅಹೋಬಲನಿಲಯ ದೇವ ಶರಣು ಪ.ಭವನಾಶಿನಿಯ ಕೂಲಭವನ ಭಟಪ್ರತಿಪಾಲಭವಸಹಸ್ರಾಂಬಕರ ಭಯವಿದೂರಭುವನಕದ್ಭುತಗಾತ್ರಭಜಕಜನತಾಪತ್ರಭವಕರ್ದಮ ಶೋಷ ಬುಧರ ಪರಿತೋಷ 1ಅಣುರೇಣು ತೃಣ ವ್ಯಾಪ್ತ ಅಖಿಳರೊಳು ನಿರ್ಲಿಪ್ತದನುಜಹಿರಣ್ಯಕಹರ್ತ ದೀನನಾಥಕನಕಜಠರನ ಜನಕ ಕರುಣಾಂಕ ಕ್ರೂರಮುಖಪುನೀತಶುಭಚಾರಿತ್ರ ಪ್ರಹ್ಲಾದಮಿತ್ರ2ಪದುಮದೇವಿಯ ರಮಣ ಪ್ರದ್ವಿಷಾನ್ವಯದ ಮನಮುದಶಾಂತ ಪರಿಪೂರ್ಣಮೂರ್ತಿ ಪುಣ್ಯಪ್ರದನಾಮ ನವರೂಪ ಪತಂಗಾನಂತಪ್ರದೀಪ ನಿನ್ನಪದವೆಗತಿಹೊರೆಯೆನ್ನ ಪ್ರಸನ್ವೆಂಕಟರನ್ನ3
--------------
ಪ್ರಸನ್ನವೆಂಕಟದಾಸರು
ಸ್ವಾಮಿತ್ವದವರಿಗೆ ಅಯುಕ್ತವೇ ಯುಕ್ತ |ಶ್ರೀಮನೋರಮನೆ ಪೇಳುವೆ ಕೇಳು ಶಕ್ತ ಪಮಾವನಿಗೇ ಮಾವನಾದೆಯಲೊ ಜನ್ಮಾರಭ್ಯ |ನೀವೊಡಲ ಹೊರದೆ ಚೋರತನ ಮಾಡಿ ||ಕೋವಿದಂಗತಿ ಮೆಚ್ಚು ಜಾರತನ ಮಾಡಿದುದು |ಆ ವನಿತೆ ಮೆದ್ದ ಫಲ ಮೆದ್ದಿ ನಿರ್ದೋಷಿ 1ನರಸೇವೆಯ ಮಾಡಿ ಪೆಸರಾದಿ ಮಾತೆಯ ಕೊಂದೆ |ಧರೆಯೊಳಗೆ ಮಾತುಲನ ಕೊಲ್ಲಬಹುದೇ ||ತಿರುಕಿ ಬೇಡಿಸುವಳರಸರನ ನಿನ್ನಯ ರಾಣಿ |ಪರಿಮಿತಿಯಿಲ್ಲದ ದುರಾಚಾರಿ ನಿನ್ನಯ ಮಗನು 2ಮೈದುನನು ಗುರುದ್ರೋಹಿ ಮೊಮ್ಮಗನು ಬಹು ಚಾಡಿ |ಮೇದಿನಿಯೊಳಗೆ ಹೇಳುತಲೆ ತಿರುಗುವ ||ಶ್ರೀದ ಪ್ರಾಣೇಶ ವಿಠ್ಠಲನೇ ನೀನೇ ದೊರೆ |ಯಾದ ಕಾರಣ ದಕ್ಕಿತಿದು ಇಲ್ಲದರೆ ಸಲ್ಲ 3
--------------
ಪ್ರಾಣೇಶದಾಸರು
ಸ್ವಾಮಿಪರಾಕುಮಹಾಸ್ವಾಮಿ ಸಜ್ಜನಪ್ರೇಮಿಪ.ಕ್ಷೀರಸಾಗರಶಯನ ನಿವಾಸಾಪಾರಗುಣಗಣಾಶ್ರಯಪಾರಮೇಷ್ಠಿ ಪ್ರಮುಖಾಮರಪೂಜಿತಚಾರುಪದಾಬ್ಜದ್ವಯ ದನು-ಜಾರಿ ಧನಂಜಯಪ್ರಿಯ ಮದವಾರಣಕೃತನಿರ್ಭಯ ನಮ್ಮದೂರನುಲಾಲಿಸುಚಿನ್ಮಯ ಜಯ1ದುಷ್ಟ ನಿಶಾಚರರಟ್ಟುಳಿಘನಕಂಗೆಟ್ಟುದು ಸುರಮುನಿಗಣ ಆಭ್ರಷ್ಟರು ಮಾಡುವ ನಿಷ್ಠುರಕೆ ಮೈಗೊಟ್ಟೆವು ಸಂಕರ್ಷಣ ನಾವಿ-ನ್ನೆಷ್ಟೆಂಬುದು ದುರ್ಗುಣವಶ ಬಿಟ್ಟೆವು ಸುರಪಟ್ಟಣ ನಮ್ಮಕಷ್ಟವು ಪದಕರ್ಪಣ ಪರಾಯಣ 2ಅಂತರಂಗ ಬಹಿರಂಗ ಭ್ರಷ್ಟದನುಸಂತತಿ ಸಂತತಿ ಭಾರಿ ಬಲುಭ್ರಾಂತಿವಿಜ್ಞಾನವಿತಾನಧುರೀಣರ್ಸಂತಾಪಿಪರು ಮುರಾರಿ ನಮ್ಮಸಂತೈಸೈ ಗಿರಿಧಾರಿ ಶ್ರೀಕಾಂತ ಕೃಪಾರ್ಣವಶೌರಿಜಗ-ದಂತ ವಿಹಾರಿ ನಿರಂತ ಪರಂತಪ 3ಚೆನ್ನಕೇಶವ ಚರಾಚರಾತ್ಮ ಚೈತನ್ಯರೂಪ ಶ್ರೀರಂಗ ನಮ್ಮಬಿನ್ನಪಲಾಲಿಸುತ್ರಿಭುವನವನ್ನುಸನ್ನುತಶುಭಾಂಗ ಸ-ರ್ವೋನ್ನತ ಮಹಿಮತರಂಗದುರಿತಾನ್ವಯತಿಮಿರಪತಂಗ ಸುಪ್ರಸನ್ನಸದೋದಿತವಿಹಂಗತುರಂಗ4ನೀಲೇಂದೀವರ ಶ್ಯಾಮಲ ಕೋಮಲಕಾಲನಿಯಾಮಕ ಪ್ರಾಣ ನಿನ್ನೋಲಗ ಸೇವಕರಾಳಿಯೂಳಿಗವ ಕೇಳು ತ್ರಿಲೋಕತ್ರಾಣನತಪಾಲ ಪರೇಶ ಪುರಾಣ ಶ್ರೀಲೋಲ ವಿಗತ ಪರಿಮಾಣ ಹೃದ-ಯಾಲಯಮಣಿ ಲಕ್ಷ್ಮೀನಾರಾಯಣ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹಂಚಿನ ಇದಿರಲಿ ಹಲ್ಲನು ತೆಗೆಯಲುಮಿಂಚುವ ಕನ್ನಡಿಯಾದೀತೆ ? ಪ.ಮಿಂಚಿನ ಬೆಳಕಲಿ ದಾರಿಯ ನಡೆದರೆಮುಂಚುವ ಊರಿಗೆ ಮುಟ್ಟೀತೆ ? ಅಪಬಾಲರ ಭಾಷೆಯ ನಂಬಿ ನಡೆದರೆಶೀಲದ ಕೆಲಸಗಳಾದೀತೆ ?ಜೋಲುವ ಹೋತಿನ ಮೊಲೆಗಳ ಹಿಂಡಲುಹಾಲಿನ ಹನಿಯದು ಹೊರಟೀತೆ ?ಕಾಲುವೆ ಬಚ್ಚಲಕುಣಿ ನೀರಿಗೆ -ಘನಬಾಳೆಯ ತೋಟವು ಆದೀತೆ ?ಮೇಲುಬಣ್ಣಾದಾ ಆಲದ ಹಣ್ಣುನಾಲಿಗೆಸವಿಯನು ಕೊಟ್ಟೀತೆ ? 1ಭಾಷೆಯ ನುಡಿಗಳಿಗಾಸೆ ಮಾಡೆ ಮನದಾಸೆಯ ಕಾರ್ಯಗಳಾದೀತೆ ?ದೋಸೆಯ ಛಿದ್ರದಿ ಆರಿಸೆ ಕಾಳಿನರಾಶಿಯು ಹಸನವು ಆದೀತೆ ?ಕಾಸಿ ಕಬ್ಬಿಣವ ಗಟ್ಟಿ ಕೂಡಿಟ್ಟರೆಮಾಸದ ಮನೆ ಬದುಕಾದೀತೆ ?ಕಾಸಾರದೆದುರಿಗೆ ಹರಿಕಥೆ ಹೇಳ್ದರೆಸೋಸಿ ಕೇಳ್ದು ತಲೆದೂಗೀತೆ ? 2ಮಿಥ್ಯಾವಚನಿಯ ಮಾತನು ನಂಬಲುಹೊತ್ತಿಗೆ ಅದು ಬಂದೊದಗೀತೆ ?ಸತ್ತವನೆದುರಿಗೆ ಸುತ್ತಲು ಕುಳಿತುಅತ್ತರೆ ಆ ಹೆಣ ಕೇಳೀತೆ ?ನಿತ್ಯನಪುಂಸಕನೈದಲು ತರುಣಿಗೆಚಿತ್ತ ಸುಖವು ಸೂರಾದೀತೆ ?ಕುತ್ತಿಗೆಗೊಯ್ಕನ ಕಾಲು ಹಿಡಿದರೆಹತ್ಯದೊಳ್ಹೇಸಿಕೆಹುಟ್ಟೀತೆ ?3ಬೋರಗಲ್ಲಿನ ಮುಂದೆ ಬಡತನ ಹೇಳಲುಸಾರಸುಖಕ್ಕನುವಾದೀತೆ ?ಚೋರನು ಚಂದ್ರಗೆ ಕೈಮರೆ ಮಾಡಲುಚೌರ್ಯಕೆ ಕತ್ತಲು ಒದಗೀತೆ ?ನೀರಿಲ್ಲದ ಕೆರೆಯೊಳಗೆ ಮತ್ಸ್ಯದಾಹಾರಿಗೆ ಮೀನವು ದೊರಕೀತೆಕಾರಣವಿಲ್ಲದ ಲೌಕಿಕ ಕಥೆಯಿಂಘೋರನರಕ ಭಯ ತಪ್ಪೀತೆ ?4ಬೆಟ್ಟಕೆ ಕಲ್ಲನು ಹೊತ್ತೊಯ್ದೊಗೆಯಲುಹೊಟ್ಟೆಗೆಓದನ ಸಿಕ್ಕಿತೆ ?ಹುಟ್ಟು ಬಂಜೆಗೆ ಹಡೆಯುವ ವ್ಯಥೆ ಹೇಳಲುಹೊಟ್ಟೆಯಲಿ ಕಳವಳ ಹುಟ್ಟೀತೆ ?ಕೆಟ್ಟ ಬಯಸುವರಿಗೆ ಮೃಷ್ಟಾನ್ನವುಣಿಸಲುಕೆಟ್ಟ ಮಾತು ಅದು ಬಿಟ್ಟೀತೆ?ದಿಟ್ಟ ಪುರಂದರವಿಠಲರಾಯನಬಿಟ್ಟರೆ ಸದ್ಗತಿಯಾದೀತೆ? 5
--------------
ಪುರಂದರದಾಸರು
ಹನುಮ - ಭೀಮ - ಮಧ್ವ ಮುನಿಯನೆನೆದು ಬದುಕಿರೊಅನುಮಾನಂಗಳಿಲ್ಲದಲೆ ಮನದಭೀಷ್ಟಂಗಳನೀವ ಪಪ್ರಾಣಿಗಳ ಪ್ರಾಣೋದ್ದಾರ ಪ್ರಾಣರಲ್ಲುತ್ತಮ ಮತ್ತೆಪ್ರಾಣಾಪಾನ ವ್ಯಾನೋದಾನ ಸಮಾನರೊಳುತ್ಕøಷ್ಟ ||ಕಾಣಿರೇನೋ ಕಾಯಕರ್ಮ ಚಕ್ಷುರಿಂದ್ರಿಯಗಳಿಗೆತ್ರಾಣಕೊಟ್ಟು ಸಲಹುವ ಜಾಣಗುರುಮುಖ್ಯಪ್ರಾಣ1ಕಾಮಧೇನು ಚಿಂತಾಮಣಿ ಕಲ್ಪವೃಕ್ಷನಾದ ಸ್ವಾಮಿಪ್ರೇಮದಿಂದ ನೆನಯುವವರ ಭಾಗ್ಯಕ್ಕೆಣೆಯುಂಟೇ ? ||ಸಾಮಾನ್ಯವಲ್ಲವೊ ಈಗ ಮೋಕ್ಷಾದಿ ಸಂಪದದಾತಆ ಮಹಾ ಪರೋಕ್ಷಜ್ಞಾನ ದಾಢ್ರ್ಯ ಭಕುತಿ ಕೊಡುವ 2ಅವತಾರ ತ್ರಯಗಳಿಂದ ಶ್ರೀಹರಿಯ ಸೇವಿಸುವತವಕದಿ ಪೂಜಿಪ ಮಹಾಮಹಿಮೆಯುಳ್ಳವನು ||ಕವಿತೆವಾಕ್ಯವಲ್ಲವಿದು ಅವಿವೇಕವೆಂದೆಣಿಸಬೇಡಿಭವಬಂಧನ ಕಳೆದುಕಾವಪುರಂದರವಿಠಲನ ದಾಸ3
--------------
ಪುರಂದರದಾಸರು
ಹನುಮನ ಮತವೆ ಹರಿಯ ಮತವು |ಹರಿಯ ಮತವೇ ಹನುಮನ ಮತವು ಪಹನುಮನು ಒಲಿದರೆಹರಿತಾನೊಲಿವನು |ಹನುಮನು ಮುನಿದರೆ ಹರಿಮುನಿವ ಅ.ಪಹನುಮನ ನಂಬಿದ ಸುಗ್ರೀವ ಗೆದ್ದ |ಹನುಮನ ನಂಬದ ವಾಲಿಯು ಬಿದ್ದ 1ಹನುಮನು ಒಲಿದ ವಿಭೀಷಣ ಗೆದ್ದಹನುಮನು ಮುನಿಯಲು ರಾವಣ ಬಿದ್ದ 2ಹನುಮನುಪುರಂದರವಿಠಲನ ದಾಸ|ಹನುಮನೊಳ್ಪುರಂದರವಿಠಲನಾವಾಸ3
--------------
ಪುರಂದರದಾಸರು
ಹರಿದಿನ ಇಂಥ ಹರಿದಿನ ಪ.ಹರಿದಿನದ ಮಹಿಮೆ ಹೊಗಳಲಗಾಧಪರಮಭಾಗವತರಾಚರಣೆಗಾಹ್ಲಾದÀದುರಿತದುಷ್ಕøತ ಪರ್ವತಕೆ ವಜ್ರವಾದಮರುತ ಸದ್ವ್ವ್ರತಕೆಲ್ಲ ಶಿರೋರತ್ನವಾದ ಅ.ಪ.ಭಕ್ತಿಗೆ ಮೊದಲು ವಿರಕ್ತಿ ಬೀಜವೆಂಬಸಕಲ ತಪದೊಳೆಲ್ಲ ಮೇಲೆನಿಸಿಕೊಂಬಮಖಕೋಟಿಗಧಿಕ ಫಲಸ್ಥಿರ ಸ್ತಂಭಮುಕ್ತಿ ಸೋಪಾನ ನಿಧಾನತ್ವವೆಂಬ 1ತ್ವಕ್ ಚರ್ಮ ಅಸ್ತಿ ಮಜ್ಜ ಮಾಂಸರುಧಿರಯುಕ್ತ ಸಪ್ತ ಧಾತುಗಳಿಹ ಶರೀರನಖಕೇಶ ಕಫ ಸ್ವೇದ ಮಲ ಮೂತ್ರಾಗರ ಈನಿಖಿಳಪಾವನ ಮಾಡುವ ನಿರಾಹಾರ2ವರವಿಪ್ರಕ್ಷತ್ರಿಯ ವೈಶ್ಯ ಶೂದ್ರ ಜನರುತರಳಯೌವನ ವೃದ್ಧ ನಾರಿಯರುಕಿರಾತಪುಲತ್ಸ್ಯಾಂದ್ರ ಹೂಣ ಜಾತಿಯವರುಹರಿವ್ರತ ಮಾತ್ರದಿ ಮುಕ್ತಿಯೈದುವರು 3ದ್ವಿಜಗೋವಧ ನೃಪರನು ಕೊಂದ ಪಾಪನಿಜಗುರು ಸತಿಯರ ಸಂಗದ ಪಾಪಅಜಲಪಾನದ ದಿನದುಂಡ ಮಹಾಪಾಪನಿಜನಾಶ ಮೋಕ್ಷ ಪ್ರಾಪ್ತಿಯು ಸತ್ಯಾಲಾಪ 4ಯಾಮಿನಿಯಲಿ ಅನಿಮಿಷದ ಜಾಗರವುಶ್ರೀ ಮದ್ಭಾಗವತ ಶ್ರವಣ ಗೀತಾಪಠಣಪ್ರೇಮವಾರಿಧಿಲಿ ಮುಳುಗಿ ಸಂಕೀರ್ತನೆಯುಧಾಮತ್ರಯದ ಸುಖಕಿದೇ ಕಾರಣವು 5ಅರ್ಧಕೋಟಿ ತೀರ್ಥಸ್ನಾನವೆಲ್ಲ ಅಜಸ್ರಪ್ರಯಾಗ ಕಾಶಿವಾಸವೆಲ್ಲ ಸಹಸ್ರ ಕೋಟಿ ಭೂಪ್ರದಕ್ಷಿಣೆಯೆಲ್ಲಸುಶ್ರದ್ಧೆ ಸಹ ಜಾಗರಕೆ ಸರಿಯಲ್ಲ 6ಪಂಚಮಹಾ ಪಾಪ ಪ್ರಪಾಪವವಗೆವಂಚಕ ಪಿಶುನ ಜನರ ಪಾಪವವಗೆಮಿಂಚುವ ಕ್ಷೇತ್ರವಳಿ ಪಾಪವವಗೆಪಂಚಕವ್ರತ ಪೆತ್ತ ವ್ರತ ಉಲ್ಲಂಘಿಪಗೆ 7ಸರ್ಪಶಯನಗೆ ನೀರಾಜನವೆತ್ತಿ ನೋಡಿಉಪವಾಸದಿ ಭಗವಜ್ಜನ ನೃತ್ಯವಾಡಿಚಪ್ಪಾಳಿಕ್ಕುತ ದಂಡಿಗೆ ಮುಟ್ಟಿ ಪಾಡಿತಪ್ಪೆ ನಾಯಿ ನರಕ ಫಲ ಕೈಗೂಡಿ 8ಶ್ರುತಿಪಂಚರಾತ್ರಾಗಮವು ಸಾರುತಿವೆಯತಿ ಮಧ್ವರಾಯರುಕುತಿ ಪೇಳುತಿವೆಕ್ರತುಪ್ರಸನ್ವೆಂಕಟ ಕೃಷ್ಣ ಮತವೆಕ್ಷಿತಿಪತಿ ಸುರರತಿಶಯದ ಸದ್ವ್ವ್ರತವೆ 9
--------------
ಪ್ರಸನ್ನವೆಂಕಟದಾಸರು
ಹರಿನಾಮದರಗಿಣಿಯು ಹಾರುತಿದೆ ಜಗದಿ|ಪರಮಭಾಗವತರು ಬಲೆಯ ಬೀಸುವರು ಪಕೋಪವೆಂಬ ಮಾರ್ಜಾಲವು ಕಂಡರೆ ನುಂಗುವುದು |ತಾಪವೆಂಬ ಹುಲಿಯು ಕೊಂಡೊಯ್ವುದದನು ||ಕಾಪಾಡಿರದನು ಹೃದಯದೊಳಗಿಂಬಿಟ್ಟು |ಅಪತ್ತಿಗೊದಗುವುದು ಈ ಮುದ್ದು ಗಿಣಿಯು 1ದಾರಿಯ ನಡೆವಾಗ ಚೋರರ ಭಯವಿಲ್ಲ |ಮಾರಿಬಂದರದನು ಹೊಡೆದು ನೂಕುವುದು ||ಕ್ರೂರ ಯಮಭಟರನು ಮೂಗು ರೆಕ್ಕೆಯಲಿ ಬಡಿದು |ದಾರಿ ತೋರುವುದು ಮುರಾರಿಯ ಪಟ್ಟಣಕೆ 2ಎಷ್ಟೆಂದು ವರ್ಣಿಸಲಿ ಈ ಮುದ್ದು ಅರಗಿಣಿಯು |ಹೊಟ್ಟೆಯೊಳೀರೇಳು ಜಗವನಿಂಬಿಟ್ಟ ||ಸೃಷ್ಟೀಶ ಪುರಂದರವಿಠಲನ ನೆನೆ ನೆನೆದು |ಮುಟ್ಟಿ ಭಜಿಸುವುದು ಈ ಮುದ್ದು ಗಿಣಿಯು 3ಹರಿಯೆ................................................ ಪಹರಿನಿನ್ನ ಕೃಪೆಯೆನಗೆ ಚಂದ್ರ - ತಾರಾಬಲವು |ಹರಿನಿನ್ನ ಕರುಣವೇ ರವಿಯ ಬಲವು ||ಹರಿನಿನ್ನೊಲುಮೆಯೆನಗೆ ಗುರುಬಲವು ಭೃಗುಬಲವು |ಹರಿನಿನ್ನ ಮೋಹವೇ ಶನಿಯ ಬಲವು 1ಮಂಗಳಾತ್ಮಕ ನಿನ್ನ ಅಂಗದರುಶನವೆನಗೆ |ಮಂಗಳನ ಬಲವು ಎನ್ನಂಗಕೀಗ ||ರಂಗಯ್ಯ ನಿನ್ನ ಚರಣಾರವಿಂದವ ನೋಡೆ |ಹಿಂಗಿ ಪೋಪುದು ಅಘವು ಸೌಮ್ಯಬಲವು 2ಆದಿಪುರುಷನೆ ನಿನ್ನ ಅರಿಪುದೇ ಕೇತುಬಲ |ಅದಿಮೂಲನೆ ನಿನ್ನಗುಣಕಥನವ ||ಆದರಿಸಿ ಕೊಂಡಾಡುವುದೆ ಎನಗೆ ರಾಹುಬಲ |ಆದಿಮೂರುತಿ ಬ್ರಹ್ಮಪುರಂದರವಿಠಲ 3
--------------
ಪುರಂದರದಾಸರು
ಹರಿನೀನೆ ಸರ್ವಙÕ ಸ್ವತಂತ್ರ ಸರ್ವಾಧಾರಕxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಹರಿನೀನೆ ಸರ್ವೋತ್ಪಾದಕ ಸರ್ವೇಶಹರಿನೀನೆ ಸರ್ವಜನಕಹರಿನೀನೆ ಸರ್ವಪಾಲಕಹರಿನೀನೆ ಸರ್ವಮಾರಕಹರಿನೀನೆ ಸರ್ವಪ್ರೇರಕಹರಿನೀನೆ ಸರ್ವಗತಹರಿನೀನೆ ಸರ್ವವ್ಯಾಪ್ತಾಹರಿನಿನ್ನ ಕರುಣದಿಂದ ಶಿರಿ ಜಗಜ್ಜನನಿಯಾಗಿಹರಿನಿನ್ನ ಕರುಣದಿಂದಪರಮೇಷ್ಠಿಹರಿನಿನ್ನ ಕರುಣದಿಂದ ಗಿರಿಶೇಂದ್ರರುಪದವಿಪೊಂದಿದರುಹರಿನಿನ್ನ ಕರುಣದಿಂದ ಸಕಲರು ಸ್ಥಿತಿಯನೈದಿಹÀರೋಹರಿಗುರುಜಗನ್ನಾಥವಿಠಲಾ ನಿನಗೆ ನೀನೆ ಸಮನೋ
--------------
ಗುರುಜಗನ್ನಾಥದಾಸರು
ಹರಿನೀನೆಸರ್ವೋತ್ತಮ ಸರ್ವಙÕ ಸರ್ವಾಧಾರxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಹರಿನೀನೆ ಸರ್ವೋತ್ಪಾದಕ ಸರ್ವಪಾಲಕಹರಿನೀನೆ ಸರ್ವನಾಶಕ ಸರ್ವಪ್ರೇರಕಹರಿನೀನೆ ನಿಯಾಮಕÀ ನಿಯಾಮ್ಯನೋಹರಿನೀನೆ ಬಾಧ್ಯ ಭಾಧಕ ವ್ಯಾಪ್ಯ ವ್ಯಾಪಕಹರಿನೀನೆ ಕಾರ್ಯ ಕಾರಣಹರಿನೀನೆ ಕರ್ತೃಕರ್ಮಕ್ರಿಯಾ ಶಕ್ತಿಹರಿನೀನೆ ಧಾತೃ ದೇಯ ದಾನಪಾತ್ರನೊಹರಿನೀನೆ ಸಹಕಾರಿ ಸಹಿತ ಪೋಗುವೀಹರಿನೀನೆ ಮುಂಪೋಗಿ ಪರರೀಗೀಪರಿಹರಿನೀನೆ ಪ್ರೇರಿಸಿ ಕಾರ್ಯಮಾಳ್ಪಿಹರಿನೀನೆ ಸರ್ವದ ಸರ್ವತ್ರದಲಿ ನಿಂತೂಹರಿನೀನೆಜೀವರ ಪರಿಪಾಲಿಸುವಿಹರಿನೀನೆ ಸರ್ವರ ಬಿಂಬಮೂರುತಿ ಎಂದೂಹರಿನಿನ್ನ ಮಹಿಮೆಯನರಿಯಾದ ಮನುಜರುಹರಿನಿನ್ನ ಮರೆಯಾದ ಪರಮಜ್ಞಾನವನಿತ್ತುಹರಿನಿನ್ನಯ ನಾಮವ ಮರೆಯದೆ ಪೇಳಿಸೋಹರಿನಿನ್ನ ಸ್ಮರಣೆಯ ಕರುಣಿಸೋ ಕರುಣಿಸೋಹರಿನಿನ್ನ ಧ್ಯಾನ ಮನದಲ್ಲಿ ಮಾಡಿಸೋಹರಿನಿನ್ನ ಮೂರುತಿ ತೋರಿಸೊ ತೋರಿಸೋಹರಿನಿನ್ನ ಕಾಣುವ ಙ್ಞÕನವನಿತ್ತುಹರಿನಿನ್ನ ಭಕ್ತರ ಸೇವಕನೋಹರಿಎನ್ನನು ಭಾದಿಪ ದಿತಿಜರಪರಮದಯಾನಿಧೇ ಗುರುಗಳದ್ವಾರಾಹರಿನಿನ್ನ ಗುಣಗಳ ಕೀರ್ತನೆ ಮಾಡಿಸೋ
--------------
ಗುರುಜಗನ್ನಾಥದಾಸರು
ಹರಿಯೆನ್ನಬಾರದೆಜಿಹ್ವೆವಾರಂವಾರಪ.ಪರಗತಿ ಮಾರ್ಗವು ದುರಿತವನಾಗ್ನಿಯುಪರಿಪರಿಭವರೋಗಕೌಷಧಅ.ಪ.ಉರಿವ ಕಾಳಕೂಟ ಕಂಠದಿ ದಹಿಸಲುಹರಿನಾಮ ಹರನ ಕಾಯ್ತುಕರಿಉರಗವಿಷಾಗ್ನಿ ಶಸ್ತ್ರ ಭಯದಲಿಹರಿನಾಮ ಶಿಶುವ ಕಾಯ್ತುಶರಧಿಲಿ ನಕ್ಕರ ಚರಣವ ಕಚ್ಚಿ ಬರೆಹರಿನಾಮ ಕರಿಯ ಕಾಯ್ತುನಿರಯನಿವಾಸರಸುರಋಷಿಮುಖದಿಂದಹರಿನಾಮ ಎಲ್ಲರ ಕಾಯ್ತು 1ಹಿರಿಯರ ನಿಕ್ಕರ ನುಡಿಯಿಂದಡವಿಲಿರೆಹರಿನಾಮ ಧ್ರುವನ ಕಾಯ್ತುಕುರುಕಂಟಕರುÀ ಅಭಿಮಾನವ ಕೊಳುತಿರೆಹರಿನಾಮ ಸತಿಯ ಕಾಯ್ತುಮರಳೊಮ್ಮೆ ದುರ್ವಾಸ ದ್ರೌಪದಿಗುಣಬೇಡೆಹರಿನಾಮ ಇರುಳೆ ಕಾಯ್ತುಗುರುಪುತ್ರನುರಿಬಾಣದುರವಣೆಗಡ್ಡಾಂತುಹರಿನಾಮ ಭ್ರೂಣವ ಕಾಯ್ತು 2ವರಬಲದಿಂದಲ್ಲಿ ಅಸುರರು ನೋಯಿಸಲುಹರಿನಾಮ ಸುರರ ಕಾಯ್ತುಚಿರಪಾಪ ಭವಯಾತ್ರೆ ಘಟಿಸಲು ತುದಿಯಲಿಹರಿನಾಮ ಭಟರ ಕಾಯ್ತುಶರಣರ ಮಹಿಮೆಯಂತಿರಲಿ ಅಪಮರಣದಿಹರಿನಾಮ ನನ್ನ ಕಾಯ್ತುಗುರುಮಧ್ವವರದ ಪ್ರಸನ್ವೆಂಕಟೇಶ ಶ್ರೀಹರಿನಾಮಗತಿಎನ್ನೆ ಕಾಯ್ತು3
--------------
ಪ್ರಸನ್ನವೆಂಕಟದಾಸರು
ಹರಿಶರಣು ಮಧ್ವಗುರು ಶರಣೆಂಬೋದೆ ಬೀಜ ಮಂತ್ರ ಇಹಪರಕಿದೆ ಸಾಧನವೆಂದು ನಂಬಿಬಿಟ್ಟೆ ಹಲವು ತಂತ್ರ ಪ.ಹರಿಕೊಡದಾರು ಕೊಡುವರಿಲ್ಲ ನರರನು ಬೇಡಲ್ಯಾಕೆ ಶ್ರೀಹರಿಕೊಟ್ಟರುಂಟು ಹಗಲಿರುಳು ಒಣಹಂಬಲ್ಯಾಕೆ1ಇದು ನನ್ನದದು ನನ್ನದೆಂದು ಬರಿದೆ ಹೊತ್ತು ಹೋಯಿತಲ್ಲ ಶ್ರೀಪದುಮನಾಭನ ಕೃಪೆ ಭಕುತಿದಾರಿಯ ಹೊಂದಿ ಪಡೆಯಲಿಲ್ಲ 2ಎರವಿನ ಸತಿಸುತ ಪಶು ಧಾನ್ಯ ಒಂದೊಂದಾಗ್ಯಗಲುವಾಗ ಗತಹರುಷನಾಗಿ ರಂಗನಂಘ್ರಿಯ ಮರೆದುಂಡೆನಿರಯಭೋಗ3ಕರ್ಮತ್ರಯಗಳು ಕರಗವೆ ಶ್ರೀನಿವಾಸನೊಲುಮೆಯಿಂದ ದುಷ್ಕರ್ಮಾರಣ್ಯವು ಸುಟ್ಟು ಹೋಗದೆ ನಾಮಾಗ್ನಿಯಿಂದ 4ಬೇಡಿದುದೀವ ಪ್ರಸನ್ವೆಂಕಟೇಶನ ಬೇಡಬೇಕು ಅವನಹಾಡುತ ಹೊಗಳುತ ಜನ್ಮಾಯುಷ್ಯವ ಹೋಗಾಡಬೇಕು 5
--------------
ಪ್ರಸನ್ನವೆಂಕಟದಾಸರು
ಹಲವನು ಯೋಚಿಸಲೇನು ಫಲ ಬರಿ |ಜಲವನು ಮಥಿಸಲಿನ್ನೇನು ಫಲ ||ಕುಲಜನು ಶೂದ್ರನ ಲಲನೆಯ ಕೂಡುತ |ಸಲಿಲದಿ ಮುಳುಗಿದರೇನು ಫಲ ||ಜಲಜಾಕ್ಷನ ಪದದೊಲುಮೆಯಿಲ್ಲದೆನರ|ಬಲಯುತ ತಾನೆನಲೇನು ಫಲ1ಪರಸತಿ ಪರಧನದಾಸೆಯೊಳಿರ್ಪನು |ಸುರನದಿಮುಳುಗಿದರೇನು ಫಲ ||ಪರಮಾತ್ಮನ ತಮ್ಮ ಹೃದಯದಿ ಕಾಣದೇ |ಧರೆಯಲ್ಲರಸಿದರೇನು ಫಲ2ಕಾಣದೆ ಕುಣಿಯೊಳು ಬಿದ್ದಾನೆಯು ಬಲು |ತ್ರಾಣಿಯಂತಾದರಿನ್ನೇನು ಫಲ ||ಕ್ಷೋಣಿಯೊಳಗೆ ಹರಿದಾಸರ ಜರೆಯುತ |ಜ್ಞಾನಿಯು ತಾನೆನಲೇನು ಫಲ3ಧೂರ್ತತನದಿ ಹಣ ಗಳಿಸುತ ಲೋಭದಿಸ್ವಾರ್ಥವೆಂದೆನಿಸಿದರೇನು ಫಲ ||ಪಾತ್ರಾಪಾತ್ರವನೆಣಿಸದೆ ದಾನವ |ಅರ್ತಿಯೊಳೆಸಗಿದರೇನು ಫಲ4ಪತಿಯನು ವಂಚಿಸಿರೂಪಮಾರುವಸತಿ|ವ್ರತಗಳ ಮಾಡಿದರೇನು ಫಲ ||ರತಿಪತಿಪಿತಗೋವಿಂದನ ನೆನೆಯದೆ |ಗತಿಯನುಬಯಸಿದರೇನು ಫಲ5xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ