ಒಟ್ಟು 3977 ಕಡೆಗಳಲ್ಲಿ , 126 ದಾಸರು , 2593 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾಸುದೇವನ ಪುರಕೆ ತೆರಳಿದಾರು |ಶ್ರೀಶನಾ ಪ್ರಿಯ ಗುರು ಪ್ರಾಣೇಶ ದಾಸಾರ್ಯ ಪ ಮೂರ್ತಿ ಧ್ಯಾನಮಾಡೀ ತತ್ವ |ಮಾನಿಗಳೊಳೊಂಮ್ಮಿಂದೊಮ್ಮೆ ಆನಂದದಿಂದಲೀ 1 ಹರಿಯೆ ಸರ್ವೋತ್ತಮಾ ತದ್ರಾಣಿ ಶಿರಿಬೊಮ್ಮ |ಮರುತ ದೇವರೆ ಗುರುವು, ತಾರತಮ್ಯ ||ವರಪಂಚಭೇದ ಜ್ಞಾನವನರಿತು ಮನದಿ ಹರಿ |ಪುರದೊಳಿಹ ಪರಮ ಭಕ್ತರ ಕಾಣಬೇಕೆನುತ 2 ಮೋಕ್ಷರೌದ್ರೀ ಅಬ್ಧಮಾಘದರ್ಶಾ ಪೂರ್ವಭಾದ್ಧರಾ |ನಕ್ಷತ್ರ ಸೋಮವಾರದಿದ್ದವ ದ್ವಿತಿಯ ಯಾಮದೀ |ಲಕ್ಷಿ ಇಟ್ಟೂ ಲಯದ ಚಿಂತನೆಯ ಗೈಯುತಲಿ |ಪಕ್ಷಿವಾಹನ ಶ್ರೀಶಪ್ರಾಣೇಶ ವಿಠಲೆನುತ 3
--------------
ಶ್ರೀಶಪ್ರಾಣೇಶವಿಠಲರು
ವಾಸುದೇವನ ಭಜಿಸೊ ಪ ವೇಷಹಾಕಿದರೇನು ವೇದಾರ್ಥ ತಿಳಿದೀತೆ ಅ.ಪ ಉದರಂಭರಣಕ್ಕಾಗಿ ಪದ ಪದ್ಯಗಳ ಹೇಳಿ ತುದಿಮೊದಲಿಲ್ಲದ ದೋಷಕೆ ಗುರಿಯಾಗಿ ಸದಮಲನೆಂದರೆ ಸರ್ವರು ನಗರೇನೊ 1 ದುರಿತ ಪರಿಹರವೆಂದು ಆಡುತಲಿದೆ ಶೃತಿಯು ಕರಣತ್ರಯವು ಶುದ್ಧಿಯಿರ ಬೇಕದಕೆ ಮುಖ್ಯ ಕಾರಣ ಬಾಯಿಂದ ನುಡಿದರೇನಾಯಿತು2 ಪಂಚಸದ್ವರ್ಣಾವು ಪರಮಾತ್ಮನ ನಾಮ ವಂಚನೆ ಇದರೊಳಿಲ್ಲಾ ಸರ್ವರು ನುಡಿವರು ಗರ್ವವೇತಕೆ ನಿನಗೆ 3 ಕಾಲಕಾಲಕೆ ಹರಿಯೋಲಗವ ಮಾಡಿ ವೇಳೆಗೆ ದೊರೆತದ್ದು ಭುಂಜಿಸುತಲಿ ಲಕ್ಷ್ಮೀ- ಲೋಲನ ಕಂಡ ಕಂಡಲಿ ಸ್ಮರಣೆಗೈದೂ 4 ಹೊರಗೆ ಡಂಭವ ಬಿಡು ಒಳಗೆ ನಿಶ್ಚಲನಾಗು ಪರರಿಗೆ ಹಿತವ ತೋರು ಗುರುರಾಮವಿಠಲನು ಕರುಣದಿ ಕೈಪಿಡಿದು ಪರಮಸೌಖ್ಯವನೀವ ನಿಜಭಕ್ತನಾದರೆ 5
--------------
ಗುರುರಾಮವಿಠಲ
ವಾಸುದೇವನ್ನಾ ಪಾದವ ನಂಬಬಾರದೇ | ಈಶನೊಲಮಿಂದಾ ಸದ್ಗತಿ ಸುಖವು ದೊರದೇ ಪ ವನಜಭವಾದಿಗಳು ದೋರುವೆನಾ ಮುಕುತಿಯು ಪಾಯಾ | ಯನುತ ಬಂದರೆಯುನೊಡದಿರು ಅವರ ಕಡೆಯಾ 1 ಜಠರ ಬಾಗಿಲವಾ ಕಾವಾಶ್ವಾನನ ಪರಿಯಂತೆ | ನಿಷ್ಠೆಯೊಂದನೆ ಬಿಟ್ಟು ತಿರುಗಬ್ಯಾಡ ಕಂಡಂತೆ2 ಇಂದಿಗೆ ನಾಳಿಗೇ ಹ್ಯಾಂಗೆಂದು ಚಿಂತಿಸದಿರು | ಛಂದದಿ ಗೀತೆಯಲಿ ಸಾರಿದ ವಾಕ್ಯಾ ಮರೆಯದಿರು 3 ಶಿಲೆಯೊಳಗಿರುತಿಹಾ ಕಪ್ಪಿಗಾಹಾರ ನೀಡುವರಾರೋ | ತಿಳಿದು ನೀನೀಗ ಹಲವ ಹಂಬಲವ ಹಿಡಿಯದಿರು 4 ಎರಡು ದಿನದಿದು ಸಂಸಾರವೆಂಬುದು ನೋಡಿ | ಅರಿತು ಇದರೋಳಗ ಸಾರ್ಥಕ ಸಾಧನವ ಮಾಡಿ 5 ಒಂದು ಭಾವದಲಿ ತ್ವರಿತದಿ ಹೊಕ್ಕರ ಶರಣವನು | ತಂದೆ ಮಹಿಪತಿ ಸುತ ಸನ್ಮಾರ್ಗ ಕೂಡಿಸುತಿಹನು 6 ಏನೆಂದರಿಯದಾ ಕಂದಗೆ ಉದ್ದರಿಸಿದ ನೋಡೀ | ತಂದೆ ಮಹಿಪತಿಯು ದಾರಿಯ ದೋರಿದ ದಯಮಾಡಿ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವಿಜಯದಾಸರ ಸ್ತೋತ್ರ ವಿಜಯರಾಯರ ಪಾದಕಮಲ ಭಜಿಸಲಾಕ್ಷಣ ದಿ- |ಗ್ವಿಜಯ ಮಾಡಿ ಸುಜನರನ್ನು ಪೊರೆವನನುದಿನ ಪ ದಾಸಪ್ಪನೆಂಬ ನಾಮದಿಂದ ಕರೆಸುತ ಉದರ ಗೋಸುಗದಿ ಪರರ ಬಳಿಯ ಆಶ್ರಿಸುತ ||ಯೇಸುಪರಿಯ ಬಡತನವು ಸೋಸಿ ದಣಿವುತ |ಕ್ಲೇಶಗೊಂಡು ಸುಲಿಸಿಕೊಂಡು ಕಾಶಿಗ್ಹೋಗುತ 1 ನಿತ್ಯ ಬ್ಯಾಸರದಲೆ ವ್ರತಗಳು ಉಪವಾಸ ಮಾಡುತ ||ರಾಶಿ ರಾಶಿ ಜನರ ಕೂಡಿ ದೇಶ ಚರಿಸುತ ಮ್ಯಾಲೆಕಾಶಿ ಬಿಟ್ಟು ಸೇತು ರಾಮೇಶನ್ನ ಹುಡುಕುತ 2 ತಿರುಗಿ ತಿರುಗಿ ಚೀಕಲಾಪರಿಗೆ ಬಂದನು ಕಂಡುಗುರುತು ಹಿಡಿದು ಆ ಕ್ಷಣದಿ ಕರೆದು ವೈದ್ಯರು ||ಪರಮ ಸಂತೋಷದಿಂದ ಭರಿತರಾದರು ಮೈನೆರೆದ ಶೋಭನಾದಿಗಳನು ತ್ವರಿತ ಮಾಡ್ದರು 3 ನಿತ್ಯ ಸಂಸಾರದಲ್ಲಾಸಕ್ತರಾಗುತ ದೊಡ್ಡ ಹತ್ತು ಎಂಟು ಗ್ರಾಮವನ್ನು ವತ್ತಿ ಆಳುತಾ ||ಗುತ್ತಿಗೆಯ ಹೊತ್ತ ರೊಕ್ಕ ಮ್ಯಾಲೆ ಬೀಳುತ ಯಿನ್ನುಎತ್ತ ಸೇರಲೆಂದು ಭಾಗೀರಥಿಗೆ ಹೋಗುತ 4 ಕಾಶಿಯೊಳಗೆ ಮಲಗಿರಲು ಸ್ವಪ್ನ ಕಂಡರು ಪುರಂದರ-ದಾಸರೇವೆಂಬುದು ವ್ಯಾಸ ಕಾಶಿಗೊಯ್ದರು ||ಶ್ರೀಶನಿಂದಲಿವರಿಗೆ ಉಪದೇಶ ಕೊಡಿಸೋರು ವಿಜಯ ದಾಸರೆಂದು ಕರೆಸಿರೆನ್ನೆ ಎದ್ದು ಕುಳಿತರು 5 ಕನಸಿನೊಳಗೆ ದೇವರ ದರುಶನಾಗುತ ಶ್ರೀ-ಮನಸಿಜನ ಪಿತನ ದಯವು ಘನ ಘನಾಗುತ ||ಜಿನಸು ಜಿನಸು ಪದ ಸುಳಾದಿಗಳನು ಪೇಳುತ ಆಗನೆನಿಸಿದಾಕ್ಷಣದಲಿ ಮುಖದಿ ಕವಿತ ಹೊರಡುತಾ 6 ಮತ್ತೆ ಹೊರಟು ಆದವಾನಿ ಸ್ಥಳಕೆ ಬಂದರು ಏನುಹತ್ತು ಜನರಿಗೆ ಪೇಳಿದ ವಾಕ್ಯ ಸತ್ಯವೆಂದರು ||ಸುತ್ತು ಮುತ್ತು ನೂರಾರು ದಾಸರು ನೆರೆದರು ಆನಿಸತ್ತಿಗಿ ಪಲ್ಲಕ್ಕಿಯವರೆ ಶಿಷ್ಯರಾದರು 7 ಯಾತ್ರಿ ತೀರ್ಥಗಳನು ಬಹಳ ಚರಿಸಿ ನೋಡುತ ಸ-ತ್ಪಾತ್ರರಲ್ಲಿ ನೋಡಿ ಧರ್ಮಗಳನೆ ಮಾಡುತ ||ರಾತ್ರಿ ಹಗಲು ವಿಜಯ ವಿಠ್ಠಲನೆಂದು ಪಾಡುತ ಜನರಶ್ರೋತ್ರಿಯಿಂದ್ರಿಯಗಳ ಉದ್ಧಾರ ಮಾಡುತ 8 ಪೂರ್ತಿ ಜ್ಞಾನದಿಂದ ಕರ್ಮವೆಲ್ಲ ಕಡಿದರು ಸ-ತ್ಕೀರ್ತಿವಂತರಾಗಿ ಬಹಳ ಖ್ಯಾತಿ ಪಡೆದರು ||ಕಾರ್ತಿಕ ಶುದ್ಧ ದಶಮಿ ದಿವಸ ನಡೆದರು ಶ್ರೀಸತ್ಯರಮಣ ಕೇಶವ ವಿಠಲನ್ನ ಕಂಡರು9
--------------
ಕೇಶವವಿಠ್ಠಲರು
ವಿಜಯರಾಯ | ಗುರು | ವಿಜಯರಾಯ ಪ ವಿಜಯರಾಯ | ಗುರು | ವಿಜಯರಾಯ ಅ.ಪ. ಎರಡನೆ ಯುಗದೊಳು | ವಿ | ಸುರಲೀಲ ಕಪಿಯಾದ್ನೊ |ವಿ|ಹರಿಕಾರ್ಯಕನುವಾಗಿ | ವಿ | ಹರಿಕರುಣ ಪಾತ್ರನೆ | ವಿ | 1 ಭಂಜನ ಪಾದ | ವಿ | ಸುಕಮಲವ ಸೇವಿಸೆ | ವಿ |ಪ್ರಕಟಿ ಯಾದವರಲ್ಲಿ | ವಿ | ನಿಕಂಪಾನೆನಿಸೀದೆ | ವಿ | 2 ಪುರಂದರ ದಾಸರೋಳ್ ತುರುಕರು ನೀನಾಗಿ | ವಿ | ಹರಿಚರಿತೆ ಕೇಳಿದೆ | ವಿ |3 ಪರ ವಿದ್ಯಾರ್ಜಿಸಿದ್ಯೊ | ವಿ | 4| ಗುರು ವಾಜ್ಞದಿ ಮತ್ತೆ | ವಿ | ತಿರಿಪಾದ ಪೂರೈಸೆ ವಿ |ವರ ಭೂಸುರನಾಗಿ | ವಿ | ಹರಿಚರಿತೆ ಪೇಳಿದೆ | ವಿ | 5 ವತ್ಸರ ಮಾಸ | ವಿ |ಎರಡು ಐದನೆ ದಿನ | ವಿ | ಗುರುವಾರ ಪ್ರಹರದಿ | ವಿ | 6 ವರಯೋಗ ಮಾರ್ಗದಿ | ವಿ | ಗುರು ಗೋವಿಂದ ವಿಠಲನ | ವಿ |ಚರಣಾಬ್ಜ ಸೇರುತ | ವಿ | ಮೆರೆವೆ ಭಕ್ತರ ಮನದಿ | ವಿ |7
--------------
ಗುರುಗೋವಿಂದವಿಠಲರು
ವಿಜಯರಾಯರ ಪಾದವ ನೀ ಮಾನವ ಪ ವೃಜಿನವೆಲ್ಲವ ಕಳೆದು ಕರುಣದಿ | ಅಜನನಯ್ಯನ ತೋರುವ ಅ.ಪ. ಜಗಕೆ ಹರಿ ಪರನೆಂದು ತಾ ಭುಜ ಯುಗಗಳೆತ್ತಿ ಸಾರಿದಾ || ಭೃಗು ಮುನಿ ಇವರೆಂದು ಭಾವಿಸಿ ಮಿಗೆ ಸುಭಕ್ತಿಲಿ ಸರ್ವದಾ 1 ವರಹಜಾ ತಟದಲ್ಲಿ ಚೀಕಲ | ಪರವಿಗ್ರಾಮದಿ ಜನಿಸಿದ || ಪರಿಪರಿಯಲನುಭವಿಸಿ ಬಡತನ ಭವ ವೈರಾಗ್ಯ ಧರಿಸಿದ 2 ಭಕುತಿ ಪೂರ್ವಕವಾಗಿ ಬಿಡದಲೆ | ಸಕಲಕ್ಷೇತ್ರವ ಚಲಿಸಿದಾ || ಮುಕುತಿ ಸುಖದಾತಾರನಾದ | ಲಕುಮಿ ರಮಣನ ತುತಿಸಿದಾ 3 ತಾ ಸುಸ್ವಪ್ನದೊಳೊಂದು ದಿನ ಶ್ರೀ ವ್ಯಾಸ ಕಾಶಿಗೆ ತೆರಳಿದಾ || ವಾಸುದೇವನ ಕಂಡು ನಮಿಸಿ ಲೇಸು ವರ ಸ್ವೀಕರಿಸಿದಾ 4 ಪುರಂದರಾರ್ಯರ ಕವನಗಳು ಮೂರೆರಡು ಲಕ್ಷಕೆ ತ್ರಯಪದ ಕೊರತೆ ತಾ ಪೂರೈಸಿದ 5 ಬಾಲೆಯೋರ್ವಳು ಬಂದು ಪ್ರಾರ್ಥಿಸೆ ಕೇಳುತಾಕೆಯ ಪತಿಯನು ಕಾಲ ಪಾಶವ ಬಿಡಿಸಿ ಕರುಣದಿ ಪಾಲಿಸಿದ ಸುಮಹಾತ್ಮರ 6 ಶ್ರೀಮನೋಹರ ಶಾಮಸುಂದರ ನಾಮ ಮಹಿಮೆಯ ವಿಧ ವಿಧ ಭೂಮಿ ಸುಮನಸ ಸ್ತೋಮಕನುದಿನ ಪ್ರೇಮದಿಂದಲಿ ಬೀರಿದ 7
--------------
ಶಾಮಸುಂದರ ವಿಠಲ
ವಿಜಯವಿಠ್ಠಲ ನಾಮ ಭಜಿಸಿದಾ ಮಾನವಗೆ ಸತತ ಸಂಪದವಕ್ಕು ಪ ಕಾಯ ಶುಚಿಯಾಗುವದು ಕಠಿನತನ ಪೋಗುವದು ಆಯು ಹೆಚ್ಚುವುದು ನಿಯೋಗಿ ಯಾಹಾ ನಾಯಿ ಮೊದಲಾದ ಪ್ರಾರಬ್ಧ ಜನುಮಗಳಿರಲು ಬಾಯಿಲಿಂದಾಕ್ಷಣ ತೀರಿ ಪೋಪವು ಕೇಳಿ 1 ದ್ವೇಷಿಗಳು ಎಲ್ಲ ಬಾಂಧವರಾಗಿ ಇಪ್ಪರು ದ್ವೇಷ ಪುಟ್ಟದು ತನಗೇತರ ಮೇಲೆ ದೇಶ ಮಧ್ಯದಲಿ ತಾನೆ ಎಲ್ಲಿ ಇದ್ದರೂ ಕೋಶಾಧಿಪತಿಯಾಗಿ ಸಂಚರಿಸುತಿಪ್ಪರು2 ಹೀನ ವಿಷಯಂಗಳಿಗೆ ಅವನ ಮನವೆರಗಿದರೆ ಕಾಣಿಸುವನು ತಾನೆ ಮುಂದೊಲಿದು ಏನು ಹೇಳಲಿ ಹರಿಯ ಅನುಕಂಪನಾತನಕೆ ಕಾಲ ಕಡೆಗಾಣನು 3 ದೇವಾದಿ ಮುನಿತತಿಯ ಮೊದಲಾದವರು ನೆನೆದು ಆವಾವ ಸೌಖ್ಯದಲಿ ಇಪ್ಪರದಕೋ ಭಾವದಲಿ ತಿಳಿದು ಭಕುತಿಯ ಮಾಡಿರೋ ಜನರು ಕಾವುತಲಿಪ್ಪ ಸರ್ವಾಶ್ರಯನಾಗಿ ಹರಿ4 ಕಂಡವಗೆ ದೊರಕದು ಈ ನಾಮ ಜಪಿಸಿದರು ಕಂಡವಗೆ ಬಲು ಸುಲಭ ಭಯವೆಯಿಲ್ಲಾ ಮಂಡಲವ ಚರಿಸಿ ನಾನಾ ವ್ರತ ಮಾಡದಿರಿ ಕೊಂಡಾಡು ವಿಜಯವಿಠ್ಠಲನ ಆಸರ ಸೇರಿ5
--------------
ವಿಜಯದಾಸ
ವಿಜಯವಿಠ್ಠಲ ಶ್ರೀ ವಿಜಯವಿಠ್ಠಲ ಪ ವನಚರ ನಗಧರ ಅವನಿಯ ಉದ್ಧಾರ ಕಾನನ ವೇಗದಿ ಭು- ವನ ದಾನದ ನೆವನನು ಮಾಡಿ ಗಂಗೆಯ ಹ - ವಣದಿ ಪಡದೋ ಶ್ರೀ ವಿಜಯವಿಠ್ಠಲಾ 1 ಛಲದಿಂದ ಕುಲ ಕೋಲಾಹಲ ಮಾಡಿಸಿ ನೀ ತರಿದೆ ಬಾಲೆಯರ ಬಾಲರ ಬಿಡದೆ ಸುಲಭದಿ ಕರ್ಣಗೆ ಒಲಿದು ಪೇಳಿದೆ ಆ ಸುಲಲಿತಾ ಭಾರ್ಗವ ವಿಜಯವಿಠ್ಠಲ2 ಶತಮಖರಿಪು ಲೋಕಪಿತನೊರವಿನಿಂದಲಿ ಖತಿ ಸಕಲರಿಗೆ ನೀವು ತರಿದಿರಲು ಪತಿತಪಾವನ ರಾಮ ಅತಿ ವೇಗ ದನುಜನ ಹತವ ಮಾಡಿದೆಯೊ ಶ್ರೀ ವಿಜಯವಿಠ್ಠಲ3 ಬಕಮುಖ ದನುಜರ ಹಕ್ಕಲಗೊಳಿಸಿ ಬಲು ಯುಕುತಿಯಿಂದಲಿ ಭಕುತರ ಪೊರದೆ ವಿಕಸಿತ ಕಮಲನಯನ ಕಂಜನಾಭನೆ ಸಕಲ ಸುರರ ಪಾಲ ವಿಜಯವಿಠ್ಠಲಾ 4 ರಕ್ಕಸ ಮರ್ದನ ದಿಕ್ಕು ಮೋಹಿಪ ಕೃಷ್ಣ ರುಕ್ಮಿಣಿ ಪತಿಯಾದಾ ಚಕ್ರಪಾಣಿ ಉಕ್ಕಿದ ಮಗಧನ ಸೊಕ್ಕು ಮುರಿದು ಕಪಿ ರೆಕ್ಕ ಆಳ್ವನಿಗೆ ಒಲಿದೆ ವಿಜಯವಿಠ್ಠಲಾ 5 ಘನವಾದ ವಿಶ್ವರೂಪವ ತೋರಿದೆ ದಿನಮಣಿ ಕೋಟಿ ಅಧಿಕ ಕಾಂತಿ ನರಹರಿ ವನಜ ಸಂಭವನಯ್ಯ ವಿಜಯವಿಠ್ಠಲಾ 6 ವನಿತೆಯರ ವ್ರತ ಭಂಗವ ಮಾಡಿ ದಾನವರ ಮೋಹಿಸಿದೆಯೊ ಪವನನೊಡಿಯಾ ಉನುಮತ ಜನ ಕುಲ ಸನುಮತ ಶಾಸ್ತ್ರವ ವ- ದನದಲಿ ಮೆದ್ದಿಯೊ ವಿಜಯವಿಠ್ಠಲಾ 7 ರಜೋತಮ ಗುಣವನು ಭುಂಜಿಸುತ ವ್ರಜ ಭೂಮಿ ನಿಜವಾಗಿ ವ್ಯಾಪಿಸಿರೆ ಸುಜನಪಾಲ ನೀನು ವದಗಿ ವಾಜಿಯನೇರಿ ಭಜನಗೈಸಿದ ವೇಗ ವಿಜಯವಿಠ್ಠಲಾ 8 ಗೋಕುಲದಲಿ ಅನೇಕ ಲೀಲೆಯ ತೋರಿ ಬೇಕಾದ ವರ ಪುಂಡರೀಕಗಿತ್ತೆ ಸಾಕಾರ ಗುಣ ಪೂರ್ಣ ವೇಣುಗೋಪಾಲ ವಿ ವೇಕವ ಕೊಟ್ಟ ಕಾಯನ್ನ ವಿಜಯವಿಠ್ಠಲಾ9
--------------
ವಿಜಯದಾಸ
ವಿಠಲಾ ಎನ್ನಿರೊ ಸುಜನರೆಲ್ಲಾ ಪ ವಿಠಲಾ ಎಂದಾರೆ ಸುಟ್ಟುಹೋಗೊದು ಪಾಪ ಅ.ಪ ಪ್ರಾತಃ ಕಾಲದೊಳು ಸ್ನಾನಾದಿಕರ್ಮ ಮುಗಿಸೀವಿಠಲಾ.... ವಾತದೇವನ ದ್ವಾರ ಅರ್ಪಿಸುತ್ತಾ ನೀವು | ವಿಠಲಾ....1 ಗುರುಗಳಲ್ಲಿಗೆ ಪೋಗಿ ವಂದಿಸಿ ಮೆಲ್ಲಾನೆ ವಿಠಲಾ.... ಮರÀುತಮತದ ಸಚ್ಛಾಸ್ತ್ರಗಳ ನೋಡುತಾ ವಿಠಲಾ.... 2 ಪಂಚÀಭೇದ ಪ್ರಾಪಂಚ ಸರ್ವವು ತಿಳಿದು ವಿಠಲಾ... ಪಂಚಬಾಣನಯ್ಯ ಪಂಚರೂಪದಿ ತೋರುವಾ ವಿಠಲಾ.... 3 ಪ್ರಾರಂಭಮಾಡಿ ಪರಮೇಷ್ಠಿ ಪರಿಯಂತ ವಿಠಲಾ.... ಶ್ರೀಪ್ರಣವ ಪ್ರತಿಪಾದ್ಯಗಿವರು ಪ್ರತಿಬಿಂಬರೆಂದು ವಿಠಲಾ.... 4ಮಾತುಮಾತುಗಳೆಲ್ಲಾ ಶ್ರೀಹರಿಸ್ತೋತ್ರವೆಂದು ವಿಠಲಾ.... ಆತುಮಾಂತಾರಾತ್ಮನೆಂದು ಕೂಗುತ ಒಮ್ಮೆ ವಿಠಲಾ.... 5 ತೀರ್ಥಕ್ಷೇತ್ರಗಳಿಗೆ ಪೋಗಿ ಬರುವಾಗ ವಿಠಲಾ.... ಪಾರ್ಥಸಖನ ಪ್ರೇರಣೆಯಿಂದ ಮಾಡಿದೆವೆಂದು ವಿಠಲಾ.... 6 ನಂಬೀದ ಜನರೀಗೆ ಬೆಂಬಲನಾಗುವ ವಿಠಲಾ.... ಸಂಭ್ರಮದಿಂದಾ ಸಂರಕ್ಷಿಸುವನೆ ಇವನೂ ವಿಠಲಾ.... 7 ಕಂಚಿಕಾಳಾಹಸ್ತಿ ಶ್ರೀರಂU ಮೊದಲಾಗಿರುವ ವಿಠಲಾ... ವಂಚನೆಯಿಲ್ಲಾದೆ ಭಜಿಸಿದವರ ಪೊರೆವಾ ವಿಠಲಾ.... 8 ಪಂಚಪ್ರಾಣಾರಲಿನಿಂತು ಕಾರ್ಯಮಾಳ್ಪ ವಿಠಲಾ.... ಕರ್ಮ ಇವನಿಂದ ನಾಶವೆಂದು ವಿಠಲಾ.... 9 ಊಧ್ರ್ವಪುಂಡ್ರಗಳು ದ್ವಾದಶನಾಮ ಇಡುವಾಗ ವಿಠಲಾ.... ಶುದ್ಧನಾಗೀ ಶುಭ್ರಹೊಸ ವಸ್ತ್ರ ಹೊದುವಾಗ ವಿಠಲಾ..... 10 ಪಂಚಮುದ್ರೆಗಳಲಿ ಪಂಚರೂಪದಿ ಇರುವ ವಿಠಲಾ... ನಿರ್ವಂಚನಾಗಿ ಧರಿಸಿದವರಿಗೊಲಿವಾ ವಿಠಲಾ... 11 ಪರಿಯಂತ ವಿಠಲಾ... ವೇದೈಕವೇದ್ಯ ವಿಶ್ವಾಮೂರ್ತಿ ಕಾರ್ಯಗಳೆಂದು ವಿಠಲಾ.... 12 ಚೇತನಾ ಚೇತನ ಜಡದೊಳಗೆ ನೀವು ವಿಠಲಾ... ಪ್ರೀತಿಯಿಂದಾಲಿ ಪೂಜೆಮಾಡಿದವರಾಗೆ ಒಲಿವ ವಿಠಲಾ.... 13 ಪರಿ ಚಿಂತಿಸಿ ವಿಠಲಾ... ಶಾರೀರದೊಳಿÀರುವ ಪ್ರಾಜ್ಞನಲಿ ಕೂಡಿಸಿ ವಿಠಲಾ.... 14 ಮಧ್ವಾಂತರ್ಯಾಮಿಯಾಗಿ ಉಡುಪಿಯಲ್ಲಿ ನಿಂತ ವಿಠಲಾ... ಕರ್ತು ವಿಠಲಾ..... 15
--------------
ಮುದ್ದುಮೋಹನವಿಠಲದಾಸರು
ವಿತ್ತ ಅಸಾರ್ಥಕತೆಯ ತಿಳಿದು ಪುರುಷಾರ್ಥ ಪ್ರದನು ಶ್ರೀ | ಹರಿಯ ಪ್ರಾರ್ಥಿಸೋ ಪ ಮಡದಿ ಮನೆ ಮಕ್ಕಳೆಲ್ಲ | ಬಿಡದೆ ನಿನ್ನ ಸೇವಿಸೋರುಹಿಡಿಯ ತುಂಬ ಹೊನ್ನು ಹಣವು | ಬಿಡದೆ ಬರುತಿರೇ 1 ಪ್ರಾಣ ಉತ್ಕ್ರಮಣ ಸಮಯ | ಮಾನಿನೀಯು ರೋದಿಪಾಳುಪ್ರಾಣ ಪೋದ ತನುವ ಸೋಕೆ | ತಾನೆ ಒಲ್ಲಳು 2 ಮಂದ ಮಾನವ 3 ಬಿಂಬ ಚಲಿಸೆ ತಾನು ಪ್ರತಿ | ಬಿಂಬ ಚಲಿಪ ಮತಿಯೆ ನಿಜವುಉಂಬು ಕೊಂಬ ಕೊಡುವುದೆಲ್ಲ | ಬಿಂಬದೆನ್ನೆಲೋ 4 ಇಂದಿರೇಶನರ್ಚಿಸೂತ | ಇಂದೆ ಗಳಿಸೊ ಪುಣ್ಯ ದ್ರವ್ಯನಂದ ಕಂದಗರ್ಪಿಸೋದು | ದ್ವಂದ್ವ ಕರ್ಮವ 5 ತನುವು ಮನವು ನಿನ್ನದಲ್ಲ | ಗುಣದ ಕಾರ್ಯ ನಿನ್ನದಲ್ಲನಾನು ನನ್ನದೆಂಬ ಮತಿಯು | ಹೀನ ತಿಳಿಯೆಲೋ 6 ನಿತ್ಯ ಬದ್ಧ ಜೀವಿ ನೀನು | ಸತ್ಯ ಸ್ವಾತಂತ್ರ ಹರಿಯುದತ್ತ ಕರ್ತೃತ್ವವಿಹುದು | ಕೃತ್ಯ ಉಂಬಲು 7 ಹರಿಯ ರೂಪ ಹೃದಯದಲ್ಲಿ | ಪರಿಕಿಸಾದೆ ಗತಿಯು ಇಲ್ಲಕರುಣಿಸಿಹನು ಮನುಜ ದೇಹ | ಹರಿಯ ಕಾಣಲು 8 ಮಧ್ವ ಮತದಿ ಜನ್ಮವಿರಲ | ಅವಿದ್ಯೆಗಳನ ನೀಗಿಕೊಂಡುಮಧ್ವಮುನಿಯ ಕರುಣ ಪಡೆದು | ಸಿದ್ಧನಾಗೆಲೋ 9 ಕಮಲ | ಭಾವದಿಂದ ಪೂಜಿಸಾದೆಸಾವು ಹುಟ್ಟು ತಪ್ಪೊದಿಲ್ಲ | ಕೋವಿದನಾದರು10 ಅಂಶದಿಂದ ಇರುತ ತಾವು | ಹಂಸ ಮಂತ್ರ ಸರ್ವರಲ್ಲಿವಿಂಶತ್ಯೇಕ ಸಾಸಿರಾವು | ಅಂತೆ ಷಟ್ಯತ 11 ದಿನಕೆ ಇಂತು ಜಪವ ಚರಿಸಿ | ವಿನಯದಿಂದನಿರುದ್ದನೀಗೆಎಣಿಕೆ ಮಾಡಿ ಅನಿಲ ಸಹಿತ | ತಾನೆ ಅರ್ಪಿಪ 12 ಪರ್ವಕಾಲದಿದನು ತಿಳಿದು | ಶರ್ವ ವಂದ್ಯ ಶೇಷಶಾಯಿಸರ್ವ ಕಾರ್ಯಗಳನು ಲಾ | ತವ್ಯ ಗಿತ್ತಿಹ 13 ದೈತ್ಯ ಜನರು ಅರಿಯದಂತೆ | ಯುಕ್ತನಾಗಿ ಬ್ರಹ್ಮ ವಾಯುಆಪ್ತ ವಾಕ್ಯ ಮೀರದಂತೆ | ಗುಪ್ತ ಚರಿಸುವ 14 ತತ್ವಕಿದು ವಿರುದ್ಧವಲ್ಲ | ವ್ಯಕ್ತ ವಿಹುದು ಲೋಕದಲ್ಲಿಮತ್ತೆ ಕ್ಷಣಕೆ ಒಪ್ಪೆನೆಂದು | ಇತ್ತು ಸ್ಥಾನವ 15 ಗೊತ್ತು ಮಾಡಿ ಪೋಗುವಂತೆ | ಭ್ರಾತೃ ವಾದಿರಾಜರೀಗೆಇತ್ತು ಪದವಿಗಳನು ತಾವು | ಸೂಕ್ತ ಪೇಳ್ವರು 16 ಭಾರತೀಶ ಕರ್ಮ ವೀಯೆ ಗುರುಗೋವಿಂದ ವಿಠಲ ಗತಿ ಇತ್ತು | ಕಾವ ಬಿಡದಲೆ 17
--------------
ಗುರುಗೋವಿಂದವಿಠಲರು
ವಿತ್ತ ವನಿತಾದಿ ವಿಷಯವೆಂಬಕನಸಿನ ಸಿರಿಯ ನೆಚ್ಚಿ ತೊನೆದುಕೊಂಬರಲ್ಲದೆ 1ಪೊಲೆಯ ಬೊಂಬೆಯೊಳು ತುಂಬಿದ ಕೀವುಮಲಮೂತ್ರಸಂದೋಹ ತೊಗಲು ರೋಮಎಲು ಮಜ್ಜೆ ಮಾಂಸದವ್ಯೂಹ ಎಷ್ಟು ತೊಳೆದರೂಹೊಲಸು ನಾರುವ ಚೋಹ ಮತ್ತಿದಕೊಂದುಕುಲಗೋತ್ರ ನಾಮರೂಪು ಚಲುವ ಚೆನ್ನಿಗನಿವ ಸಲೆ ಜಾಣನೆಂದು ಮೂಢರುಗಳಹಿಕೊಂಬರಲ್ಲದೆ 2ಮಡದಿಯಾದರಿಲ್ಲ ಮಕ್ಕಳು ಮಕ್ಕಳಾದರೆಒಡಮೆಲ್ಲವದು ಬರಲು ಸತಿಸುತರುಮಡಿದು ಹೋಗುವ ದುಃಖಂಗಳು ಗಳಿಸಿದರ್ಥಕೆಡುವಾ ಸಂಕ್ಲೇಶಂಗಳು ತನಗೆ ಮುಂಚಿಅಡಸಿ ಬರುವದೊ ಮೃತಿ ಜಡರು ಈ ಬದುಕನೆಚ್ಚಿಸಡಗರ ಬಡುತ ಹಿಗ್ಗಿ ಕೊಡಹಿಕೊಂಬರಲ್ಲದೆ 3ಬಾಲಕನಾಗ್ಯೊಂದು ಕ್ಷಣವು ಪ್ರಾಯದಿ ಕಾಮಲೋಲುಪನಾಗ್ಯೊಂದು ಕ್ಷಣವು ಧನಾಢ್ಯನೆಂಬಮೂಳ ಹೆಮ್ಮೆ ಒಂದು ಕ್ಷಣವು ದಾರಿದ್ರ್ಯ ಮುಪ್ಪುಜೋಲುವ ತನುವೊಂದು ಕ್ಷಣವು ನಾನಾವೇಷದಾಳಿದ ನಟನಂತಾಡಿ ಕಾಲನ ಬಾುಗೈದುವಬಾಳುವೆಗೆ ಖೂಳಜನರು ವೋಲಾಡಿಕೊಂಬರಲ್ಲದೆ 4ನೆರೆ ಭೋಗಕೆ ರೋಗಭಯ ಸುತ ಸಂಬಂಧಿನೆರವಿಗೆ ವಿಯೋಗ ಭಯ ದ್ರವ್ಯಕ್ಕೆ ಭೂಪರ ಭಯವು ಚೋರ ಭಯ ಕಾಯಕೆ ಭಯಂಕರನಾದ ಕೃತಾಂತ ಭಯ ತಾಪತ್ರಯವೀಪರಿಯನೇಕ ಚಿಂತೆಯಲ್ಲಿ ಕೊರಗುತುರಿವ ಮನೆಯೊಳಗಿರುವೆ ಸುಖದಲೆಂಬರು ಮೂಕೊರೆಯಮೊಂಡರಲ್ಲದೆ * 5
--------------
ಗೋಪಾಲಾರ್ಯರು
ವಿದ್ಯಾ ಪ್ರಸನ್ನ ಶ್ರೀ ಯತಿಕುಲ ಗುರುರನ್ನ ಸದ್ವ್ಯೆಷ್ಣವ ಘನ್ನ ಪ. ಸಿದ್ಧಸಾಧನ ಮಧ್ವಮುನಿಯ ಚಿನ್ಹ ಧರಿಸಿದ ಬಹುಮಾನ್ಯ ಅ.ಪ. ವಿದ್ಯಾರತ್ನಾಕರ ಯತಿ ಕರಕಮಲದಿ ಜಾತ ಮುದ್ದು ಕುವರನೀತ ವಿದ್ಯಾವಾರಿಧಿ ಮುನಿಕರ ಸಂಜಾತ ಯತಿವರನಾದಾತ ಮಧ್ವಗ್ರಂಥಗಳ ಮನನ ಮಾಡಿದಾತ ಬಹುಮತಿಯುತನೀತ ಬುದ್ಧಿಕುಶಲದಿ ಬುಧರನು ಪೊರೆವಾತ ಸುಜನರ ಮನದಾತ 1 ವ್ಯಾಸತೀರ್ಥನ ಆಸ್ಥಾನಕೊಡೆಯರಾಗಿ ದುರ್ಗುಣಗಳ ನೀಗಿ ಆಸೆಯಿಂದ ಶ್ರೀ ಕೃಷ್ಣನ ಚನ್ನಾಗಿ ಪೂಜಿಸುತಲಿ ಬಾಗಿ ದಾಸತ್ವದ ಲಕ್ಷಣ ತಿಳಿದವರಾಗಿ ವಿಷಯ ಸಂಗ ತ್ಯಾಗಿ ಪಸನ್ನ ಕೃಷ್ಣನೆಂಬಂಕಿತವನೆ ಇಟ್ಟು ಪದರಚಿಸಿದ ಗುಟ್ಟು 2 `ವಿ' ಎನ್ನಲು ನರವಿಷಯ ಸಂಗದೂರ `ಧ್ಯಾ' ಎನೆ ಧ್ಯಾನವರ `ಪ್ರ' ಎನಲು ಸದ್ಗುಣನು `ನ್ನ' ಎನ್ನಲು ಶ್ರೀ ನರಹರಿ ತಾನೊಲಿವ `ತೀ' ಎನೆ ತೀರ್ವ ಭವ `ರ್ಥಾ' ಎನ್ನಲು ಪುರುಷಾರ್ಥ ಪಡೆದ ಭೋಗಿ `ರು' ಎನೆ ರುಜುಮಾರ್ಗಿ 3 ವಿದ್ಯಾಪ್ರಸನ್ನತೀರ್ಥರು ಎಂದೆನ್ನುತಲಿ ಸ್ಮರಿಪರ ಸಲಹುತಲಿ ಮುದ್ದುಕೃಷ್ಣ ಪಟ್ಟಾಭಿರಾಮನಂಘ್ರಿ ಸಚ್ಚರಿತ ಪ್ರಸಂಗಿ ಸದ್ವಿದ್ಯಗಳಿಗೆ ಗರ್ವರಹಿತ ಭಾವ ಬಹು ಸರಳ ಸ್ವಭಾವ ಹೃದ್ವನಜಸÀ್ಥನ ಕಾಂಬ ಮುನಿವರೇಣ್ಯ ಸದ್ಭಕ್ತ ಶರಣ್ಯ 4 ಮಂದ ಮತಿಯು ನಾನು ಕ್ಷಮಿಸು ತಂದೆ ನೀನು ಕುಂದನೆಣಿಸದೆ ಗುಣಗ್ರಹಿಸುತಲಿನ್ನು ಶ್ರೀ ಹರಿ ನುಡಿಸಿದನು ತಂದೆ ಮುದ್ದುಮೋಹನರ ಕೃಪೆಯಿಂದ ರಚಿತ ಪದದಂದ ಮಂದರಧರ ಗೋಪಾಲಕೃಷ್ಣವಿಠ್ಠಲ ಗರ್ಪಿತ ಗುಣಮಾಲ 5
--------------
ಅಂಬಾಬಾಯಿ
ವಿದ್ಯಾಕಾಂತಯತಿಗಳ ಕೀರ್ತನೆ ಕಾಪಾಡಬೇಕೆಂದು ಗೋಪಾಲ ಕೃಷ್ಣಗೆ ನೀ ಪೇಳಬಾರದೆ ರುಕುಮಿಣಿ ನೀ ಪೇಳಬಾರದೆ ಸತ್ಯಭಾಮ ಪ ಪಾಪ ಮಾಡುವನೆಂದು ಕೋಪ ಮಾಡಿದಿರೆಂದು ನಾ ಪಾದಪದುಮಕ್ಕೆ ಶರಣೆಂಬೆ ತಾಯೆ 1 ನಿಮ್ಮ ನುಡಿಗಳಿಂದ ಸಮ್ಮತಿಸುವ ದೇವ ಸುಮ್ಮನೆ ತಿಳಿಸೆನ್ನ ಹಡದಮ್ಮ ತಾಯೆ 2 ಏನೊ ಪೇಳಿದನೆಂದು ನೀನೂಪೇಕ್ಷಿಸದಲೆ ಜಾನಕಿದೇವಿ ಪೇಳೆ ರಘೂಪತಿಗೆ ತಾಯೆ3 ಪಾದ ನಂಬಿದವರಿಗೆ ಮೋದವ ಕೊಡುವಂಥ ವೇದವ್ಯಾಸಗೆ ರಮೆ ತಿಳಿ ಹೇಳೆ ತಾಯೆ 4 ವಿದ್ಯಾಕಾಂತನ ಮನವಿದ್ದಂತೆ ಒಲಿಯುವ ಸದ್ದಯಾನಿಧಿ ನಮ್ಮ ನರಸಿಂಹ ತಾಯೆ 5 (ವಿದ್ಯಾಕಾಂತತೀರ್ಥರು (1824) ವ್ಯಾಸರಾಜ ಮಠದ 16 ನೇ ಯತಿಗಳು)
--------------
ವ್ಯಾಸತತ್ವಜ್ಞದಾಸರು
ವಿಮಲಮತಿಯ ಪಾಲಿಸಭವ ಅಮಿತದಯಾರ್ಣವ ದೇವ ಪ ದೀನಬಂಧು ಜ್ಞಾನಸಿಂಧು ದೀನನೊಳು ನೀನೆ ನಿಂದು ಹೀನಮತಿಯ ತರಿದು ತವ ಧ್ಯಾನ ಸದಾನಂದದಿಡುವ 1 ಆಶಾಪಾಶಗಳನು ತುಳಿದು ದೋಷರಾಸಿಗಳನು ಕಡಿದು ಶ್ರೀಶ ನಿಮ್ಮ ಸಾಸಿರನಾಮವ ಧ್ಯಾಸಕಿತ್ತು ಜ್ಞಾನ ಕೊಡುವ 2 ಸತ್ಯ ಶ್ರೀರಾಮ ನಿಮ್ಮ ಪಾದ ಭಕ್ತಿಯಿಂದ ಬೇಡ್ವೆ ಸದಾ ಚಿತ್ತ ಶುದ್ಧಿಗೈದು ಎನಗಾ ನಿತ್ಯ ಮುಕ್ತಿ ನೀಡಿ ಬೇಗ 3
--------------
ರಾಮದಾಸರು
ವಿರಹ ನಿಲ್ಲದು ಕಾಣೊ ನಿನ್ನ ಕೂಡದೆ | ಗುರುತ ಮಾಡಿದ ಸೊಗಸು ಮರಿಯದೊ ಗೋಪಾಲ ಪ ಕಣ್ಣುನೋಟ ತಿರುಹಿ ನೀ ಕೈಯ ಮುದರಿ ವರಹ | ಹೊನ್ನು ಕಂಭದಲಿ ನಿಂದು ತೋರಿ | ಭ್ರಮಿಸಿ ಕುನ್ನಿಗೆ ಕಣಿಯನಿಕ್ಕಿ ಹೊಡೆಯೊನಾಗಿ | ಹೆಣ್ಣು ಭಾವನ ಕರೆದು ಸೂಚನೆ ಮಾಡಿದನು 1 ಪುಟ್ಟ ಹೆಜ್ಜೆಲೆ ಸಾಗಿ ಮುದ್ದು ಕೊಡಲು ಬಯಸಿ | ದೃಷ್ಟಿಯಿಂದ ನೋಡಲು ಭ್ರಾಂತಳಾಗಿ | ಅಟ್ಟ ಅಡಿವೆಯೊಳು ನಡಿವೆ ನಾ ಪೋಗಲು | ದುಷ್ಟ ನಾದಿನಿ ಕಂಡು ಮಾವಗೆ ಪೇಳಿದಳು 2 ಇಂದಿರೇಶ ತಾನಾಗಿ ಎದೆ ಮುಟ್ಟಿ ನಿನಗೆ | ಇಂದಿನ ದಿವಸ ನಾ ಭ್ರಮಿಸಿದ್ದು | ಒಂದೊಂದು ಬಗೆ ನೆನಿಸಿ ಕಲೆಕಲೆಗಳು ಕೆರಿದ್ಯಾಸೆ | ಮುಂದೆಗಾಣದೆ ನಡಿಯೆ ಗಂಡಾ ತಲೆದೂಗಿದನು3 ಬೀದಿಯೊಳಗೆ ನೀನು ಕುದರಿಯ ಕುಣಿಸುತ ಹಾದು ಪೋಗಲು ನಮ್ಮ ಮನಿಯ ಮುಂದೆ | ಪಾದಕ್ಕೆ ಕಪ್ಪನೆ ಇಟ್ಟು ತೊಟ್ಟ ಕುಪ್ಪಸ ಬಿಚ್ಚೆ | ಮದನ ನೋಡಿ ಮನೆಯಲ್ಲರಿಗೆ ಬೀರಿದನು4 ಪರಮಪುರುಷ ನೀನೆ ನಿನ್ನಂಗ ಸಂಗಕ್ಕೆ | ಸರಿಗಾಣೆ ಸ್ಮರಿಸೆ ಮನಸು ನಿಲ್ಲದೊ | ಸುರತ ಕೇಳಿಯ ಜಾಣ ವಿಜಯವಿಠ್ಠಲ ಎನ್ನ | ಕರೆದು ಮಸಕು ತೆಗೆದು ತರ್ಕೈಸೊ ಚನ್ನಿಗಾ 5
--------------
ವಿಜಯದಾಸ