ಒಟ್ಟು 4256 ಕಡೆಗಳಲ್ಲಿ , 116 ದಾಸರು , 2832 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಿವಮಂಗಳಂ ಸದಾಶಿವ ಮಂಗಳಂಮಂಗಳಂ ರಜತಾದ್ರಿ ಮುಖ್ಯನಿಲಯಾಯ ಪಹಿಮಕರಾವತಂಸಾಯ ಹಿಮರುಚಿರಕಾಯಾಯಹಿಮರೂಪಗಿರಿಚಿತ್ತ ಹಾರಕಾಯಹಿಮಹರಾಮಿತಕಾಂತಿ ಸದೃಶಾಯ ಸೌಮ್ಯಾಯಹಿಮತಾಪರಹಿತಾಯ ಹೇಮವರ್ಣಾಯ 1ವರಜಟಾಮಕುಟಾಯ ವಾರಿಯುತಕೇಶಾಯಸ್ಫುರದಿನಾನಲಸೋಮಲೋಚನಾಯಗರನೀಲಕಂಠಾಯ ಕದ್ರುಸುತ ಹಾರಾಯಪರಶು ಮೃಗ ಶೂಲಾದಿ ಪರಮಾಯುಧಾಯ2ನಾಗೋಪವೀತಾಯ ನಾಗೇಶ ವಲಯಾಯನಾಗಧವಳಾಂಗಾಯ ನಾಯಕಾಯನಾಗವಾಹನ ಮುಖ್ಯ ನಾಕಜನನಾಥಾಯನಾಗಪರ್ಯಂಕಸ್ಥ ನಿತ್ಯಮಿತ್ರಾಯ 3ಗೌರೀಧೃತಾಂಗಾಯ ಗಂಧರ್ವಸೇವ್ಯಾಯಭೂರಿ ಗುಣಬ್ರಹ್ಮಾಂಡ ಭೂತಾಯಚಾರು ಕಟಿ ಶುಭ ಜಂಘಾಯನೀರಜಾಮಲ ಪೀಠ ನಿಹಿತ ಪಾದಾಯ 4ಮೃಗಚರ್ಮವಸನಾಯ ಮಂಜುಳ ಮಯೂಖಾಯಜಗದೇಕನಾಥಾಯ ಜೀವನಾಯಸುಗಮ ತಿರುಪತಿ ನಾಮ ಸದ್ಮಾಧಿನಾಥಾಯಗಗನಧುನಿ ಗಿರಿ ವಾಸ ಗಂಗಾಧರಾಯ 5 ಓಂ ನವನೀತನವಾಹಾರಾಯ ನಮಃ
--------------
ತಿಮ್ಮಪ್ಪದಾಸರು
ಶಿವಸ್ತುತಿ ಶಂಕರನೇ ಸೌಖ್ಯದಾತ ಸಂಕಟ ನಿವಾರಣ ಶಿವ ಪ ತನುಮನಕಾಧಾರನಾದ ಘನಪರಾನಂದಾರ್ತ ವಿನಂಯದಿಂದ ನೋಡಲಕ್ಷ ಚಿನುಮಯಾತ್ಮನೇ ನೀ 1 ಚಿದ್ದಿಲಾಸ ಜಗವಿದೆಲ್ಲಾ ಅದ್ವಯಾನಂದಾಖ್ಯನೇ ಸಿದ್ಧನಾಗಿ ತೋರುತಿರುವಬಿದ್ರೂಪಾರ್ತನೇ ನೀ 2 ವಾಗ್ಮನಗೋಚರನೇ ಸಂಗರಹಿತ ಸ್ವಪ್ರಕಾಶ ಮಂಗಳಾತ್ಮ ಜ್ಯೋತಿರ್ಮಯ ಗಂಗಾಧರನೇ ನೀ 3 ಅಂತರಾನಂದಾರ್ತ ಜ್ಞಾನ ಸಂತ ಸಾದು ಸಾಧ್ಯನೇ ಶಾಂತಿ ಪದವನಿತ್ತ ಗುರು ಶಾಂತರೂಪನೇ ನೀ 4
--------------
ಶಾಂತಿಬಾಯಿ
ಶುಕಮುನಿ ಕರ್ಣಾಧಾರನ ಕೂಡಿ ಅನುಗತ ಭವಸಿಂಧು ಭಯವ ದೂಡಿ ಪ. ಅಂತಪಾರವೆಂದಿಗಿಲ್ಲವು ನಾನಾ ಭ್ರಾಂತಿ ಸುಳಿಗಳು ತುಂಬಿರುವವು ಚಿಂತಾಪರಾಕ್ರಾಂತಿಯಳವು ಪೋಕ ತಿಮಿರ ಬಾಧೆ ಬಹಳವು ಅಂತರಂಗದಿ ಲಕ್ಷ್ಮೀಕಾಂತನೆಂಬ ನಾವೆ ಯಂತಾದರು ತಂದು ಪಂತರಗೊಳಿಸುವ 1 ಸ್ವರ್ಗಾದಿ ಸುಖವೆಂದು ದ್ವೀಪವು ನಾನಾ ಕರ್ಮ ಕಲಾಪವು ನಿರ್ಗಮಗೊಳುವ ಸಂತಾಪವು ವೈರಿ ಜನಿತ ಮತಿಲೋಪವು ಇಂತು ದೀರ್ಘವಾದ ದುಃಖ ವರ್ಗ ತಪ್ಪಿಸಿ ಶ್ರೀ ಭೂ ದುರ್ಗಾವರ ಸಂಸರ್ಗವಿತ್ತು ಕಾವ 2 ತಾನೆ ಕರ್ತುವೆಂದು ಪೇಳದೆ ಮೋಹ ಧಾನೀ ಕೂಪದ ಮಧ್ಯ ಬೀಳದೆ ಹೀನ ಕರ್ಮಗಳನ್ನು ಬೆಳಸದೆ ಸವ ಮಾನ ಜನ ವಿರೋಧ ಮಾಡದೆ ದೀನಬಂಧು ಸರ್ವದಾನವಾರಿ ಲಕ್ಷ್ಮಿ ಪ್ರಾಣನಾಯಕ ವೆಂಕಟೇಶನ ನೆನೆಯಿಲಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಶುಭ ಮಂಗಲಂ |ಮಂಜುಕರ ಲಾಲಿತ ಕುರಂಗಗೆ ||ಮಂಗಲ ಮೌನಿ ಮಾನಸ ಸಂಗಗೆ |ಮಂಗಲಂ ಮಂದಿರೀಕೃತ ಶೈಲಶೃಂಗಗೆಮಂಗಲಂ ಮಲ್ಲಿಕಾರ್ಜುನ ಲಿಂಗಗೆ ಪ ಚಾರು ಕಪರ್ದಿಗೆ ಗುಹ ಗಣಾಧಿಪ ಗುರುಗೆ | ಗೋರಾಜ ವಾಹನಗೆ |ಗಿರಿಜಾಂತರಂಗ ವಾರಿಜಭೃಂಗಗೆ 1 ಕರ್ಪೂರ ಗೌರಗೆ ಕಲ್ಪಾಂತವೀರಗೆ | ಕಾಲಾಗ್ನಿ ಕಿಲಕಾಲಿತ ಮಾರಗೆ |ಕಾಕೋಲ ಕಂಧರಗೆ ಕಾಶೀ ವಿಹಾರಗೆ |ಕಾಕೋದರಾಭರಣ ಕಮನೀಯಗೆ 2 ವಿಧು ಶಕಲಾಧಾರಿಗೆ ವಿಶ್ವಹಿತಕಾರಿಗೆ ವಿಯದಟನ ವಿಕಟ ಪುರ ಸಂಹಾರಿಗೆ | ವಿಮಲ ವಿದ್ಯಾನಿಧಿಗೆ |ವಿಧಿವಂದ್ಯ ರುಕ್ಮ ಪಾಡುಕ ಪಾದಗೆ 3 ಮಾಧವ |ಮಂಗಳ ಕರತರಂಗನ | ಅರಿತತಿ ಭಂಗವ ಬಿಡಿಸುತಕಂಗಳ ಸದೋದಿತ ರುಕ್ಮ 4
--------------
ರುಕ್ಮಾಂಗದರು
ಶುಭ ವಾಸುದೇವ ಮೂರುತಿಗೆ ಪಕುಂದಣಕೆ ಸರಿಯಾದ ಕಾಯದತಿ ಕಾಂತಿಗೆಸಿಂಧುವನು ಪೋಲ್ವ ಗಂಭೀರ ರಸಕೆಇಂದುಬಿಂಬವ ಜರೆವ ಮುಖದ ಸೊಂಪಿನ ಸಿರಿಗೆಕಂದರ್ಪ ಕೋಟಿ ಲಾವಣ್ಯ ನಿಧಿಗೆ 1ಅಭಯದಾನವ ಕೊಡುವ ಕರಗಳತಿ ಚೆಲು'ಕೆಗೆಶುಭಗಳಿಗೆ ನೆಲೆಯಾದ ನೇತ್ರಗಳಿಗೆ'ಭವಗಳಿಗೆಡೆಬಿಡದ ಮುಗುಳುನಗೆಯೊಗು'ುಗೆಗೆತ್ರಿಭುವನಂಗಳನಳೆದ ಪದ ನಳಿನಗಳಿಗೆ 2ಜ್ಞಾನಮುದ್ರೆಯ ಕರದಿ ಜ್ಞಾನೋಪದೇಶವನುತಾನೆ ಕರೆದಿತ್ತು ಭಕ್ತರ ಸಲಹುತಾ ಮಾನವನು ಕಡೆಗೊತ್ತಿ ಮಾನ್ಯ ತಾನೆಂದೆನಿಪಶ್ರೀನಿಕೇತನ ನಿಜದ ಚಿನ್ಮಯಾತ್ಮಕಗೆ 3ಕಾವೇರಿ ಗಂಗೆಯೊಲು ಕಮಲನಾಭನ ಕಥೆಯ ಪಾವನದ ತೀರ್ಥದಲಿ ಪಾಪವಳಿದು ಜೀವಭಾವವ ಬಿಟ್ಟು ಬ್ರಹ್ಮ ತಾನೇಯಾಗಿಯಾವಗವು ಸುಖಶರಧಿಯಾದ ಚಿನ್ಮಯಗೆ 4ರಾಗಾದಿರ'ತನಿಗೆ ರಾಗಿಗಳ ಸಂಸಾರಸಾಗರವ ದಾಟಿಸುವ ಬೋಧ ಘನಗೆಯೋಗಿಗಳ ಸಂಮತಗೆ ಗುರು ವಾಸುದೇವಗೆಯೋಗೇಶ ತಿರುಪತಿಯ ವೆಂಕಟೇಶ್ವರಗೆ 5ಓಂ ಶ್ರೀವತ್ಸಕೌಸ್ತುಭಧರಾಯ ನಮಃ
--------------
ತಿಮ್ಮಪ್ಪದಾಸರು
ಶುಭಫಲಪ್ರದಮೌನಿ ಮಾಂ ಪಾಲಯ ಶುಭಫಲಪ್ರದಮೌನೀಅಭಿನವರಂಗನಾಥ ಪರಕಾಲಧೀಮಣಿ ಪ'ಬುಧಜನಾರ್ಚಿತ 'ಮಲ ಸುಗಣ್ಯಾ ಅಭಿನುತಿಚೇಕೊನು ಆರ್ತಶರಣ್ಯಾ 1ಶಮದಮಶಾಂತಾದಿ ಸದ್ಗುಣಭರಿತ ಸುಮಶರಜಿತಯಾಶ್ರಮತ್ರಯತ್ಯಜಿತ 2ನಿಯತಿಯುಕ್ತ ಬ್ರಂಹತಂತ್ರಕೃಪಾಂಗಾಹಯಮುಖಚರಣಸರೊರುಹಭೃಂಗಾ 3ಸಕಲಾಗಮಶಾಸ್ತ್ರಾರ್ಥ ಪುರಾಣಪ್ರಕಟತ ಪರಿಶ್ರಮಪ್ರತಿಭಪ್ರ'ೀಣಾ 4ಧರಿಶ್ರೀಕೃಷ್ಣ ನೃಪದೇಶಿಕ ಪ್ರಮುಖಪರಮಶೀಲವ್ರತಪತಿತೋದ್ಧಾರಕ 5ಸರ್ವತಂತ್ರಸ್ವಾತಂತ್ರಯತೀಂದ್ರಾಯುರ್ವಿಯಾಮ್ಮುಕ 'ತಕರಸಾಂದ್ರಾ 6ನಿಗಮಾಂಗುರುಪದನಿತ್ಯಾರಾಧಕದ್ವಿಗುಣರ'ತಪರತತ್ವಸ್ಥಾಪಕ 7ಮಂಗಳತರಸತ್ಸಂಗಧುರೀಣಾರಂಗಸ್ವಾ'ುದಾಸಾರ್ಚಿತಚರಣಾ 8
--------------
ಮಳಿಗೆ ರಂಗಸ್ವಾಮಿದಾಸರು
ಶೂರ್ಪಾಲಯ ಕ್ಷೇತ್ರದ ನರಹರಿ ಸ್ತೋತ್ರ (ಕೃಷ್ಣಾತೀರ) ನರಹರೀ ಪಾಹಿ | ಮರನೂರ ನರಹರೀ ಪ ಪರಿ ಭವಣೆಯ | ಪರಿಹರಿಸುತ ಮುನ್ನವರ ವೈರಾಗ್ಯವನಿತ್ತು | ಕರುಣೀಸೊ ಸಂಪನ್ನ ಅ.ಪ. ಸತಿ | ಕೃಷ್ಣೆಗಕ್ಷಯ ವಸನಸೃಷ್ಟಿಗಿತ್ತವ ಹರಿ | ಕೃಷ್ಣನೆ ಸಲಹೆನ್ನ 1 ಬುದ್ಧ | ಆಘಹರ ಕಲ್ಕಿಯೆ 2 ಜನಿತ ಸುಖ ಜಲ ಕಣ್ಣ | ಬಿಂದುಯುಗಳವು ಬೀಳೆ ಪಾವನ್ನ | ವೃಕ್ಷಯುಗಳೋದಯವಾಯ್ತು ಮುನ್ನ | ಆಹಅಗಣಿತ ಮಹಿಮ | ಅಶ್ವತ್ಥ ಸನ್ನಿಹಿತನೆನಿಗಮ ವೇದ್ಯನೆ ಸರ್ವ | ಜಗದೀಶ ಸಲಹೆನ್ನ 3 ಶೂಲಿಯಿಂದೊಡಗೂಡಿ ರಾಮ | ಚಂದ್ರಪಾಲಿಸುತಿಹ ಸಾರ್ವಭೌಮ | ಸುಜನಾಳಿ ಪಾಪಾರಣ್ಯ ಧೂಮ | ಕೇತುಓಲೈಪ ಜನರಘ ಭಸ್ಮ | ಆಹಲೀಲೆಯಿಂದಲಿ ಗೈವ | ಆಲಯವಿದು ಶೂರಪಾಲೀಯ ಕ್ಷೇತ್ರದಿ | ಶ್ರೀಲೋಲ ನರಹರಿ 4 ನಡು ನದಿಯೋಳು ಕೋಟೇಶ | ಮತ್ತೆಪಡುವಲಯದೋಳು ಕಂಕೇಶ | ಇನ್ನುಬಡಗ ನರಹರಿ ಬಳಿ ಬೈಲೇಶ | ಆಹರೊಡಗೂಡಿ ನೆಲಸೀಹ | ಕಡು ಮುದ್ದು ರೂಪದಿದೃಢ ಭಕ್ತನೆನಿಸೀಹ | ಮೃಡನಿಂದ ಪೂಜಿತ 5 ಅಜಪಿತ ಪದಜಳು ಎನಿಪ | ಮತ್ತೆಅಜಾಂಡ ಕಟಹದಿಂ ಬರ್ಪ | ಇನ್ನುಅಜಸುತ ಶಿರದಲಿ ಧರಿಪ | ಸಗರಜರ ಪಾಪವನ್ನು ಹರಿಪ | ಆಹಮಝಬಾಪು ಗಂಗೆಯ | ನಿಜ ಪಾಪ ಕಳೆಯಲುಅಜಸುತ ನಾಜ್ಞೆಯಿಂ | ಬಿಜಯಿಸಿದಳು ಇಲ್ಲಿ 6 ಪರರಘಗಳ ಹೊತ್ತು ಗಂಗೆ | ಬಂದುಹರ ಪೇಳಿದಂಥ ದ್ವಿಜಂಗೆ | ಶೂರ್ಪವರ ವಾಯು ನ್ವಿತ್ತಳವಂಗೆ | ಪಾಪಹೊರದೂಡಿದಳು ಮಂಗಳಾಂಗೆ | ಆಹಗುರುಕನ್ಯಾಗತನಾಗೆ | ಸರಿದ್ವರ ಕೃಷ್ಣೇಲಿಬೆರೆಯುತ ಸುರ ನದಿ | ಹರಿಪಳು ಜನರಘ 7 ಮಧ್ವಾರ್ಯ ಸಂತತಿ ಜಾತ | ಗುರುವಿದ್ಯಾಧೀಶರು ಇಲ್ಲಿ ಖ್ಯಾತ | ದ್ವಾದಶಬ್ದ ಪರಿಯಂತನುಷ್ಠಾತ | ಪ್ರಾಣಮುದ್ದು ಪ್ರತಿಮೆ ಪ್ರತಿಷ್ಠೀತ | ಆಹಶುದ್ಧ ದ್ವಾದಶಿ ದಿನ | ಸದ್ವೈಷ್ಣ್ವ ಲಕ್ಷರ್ಗೆವಿಧ್ಯುಕ್ತ ಭೋಜನ | ಶ್ರದ್ಧೆಯಿಂದಲಿ ಗೈದರ್ 8 ಪರ ತತ್ವವೆನಿಸಿ | ಸ್ತುತಿಸ್ಕಂದೋಕ್ತ ಮಹಿಮೆಯ ಸ್ಮರಿಸಿ | ಆಹಇಂದುಪ ಗುರು ಗೋ | ವಿಂದ ವಿಠಲನಹೊಂದಿ ಭಜಿಪರ್ಗ | ಬಂಧನವೆಲ್ಲಿಹದೋ 9
--------------
ಗುರುಗೋವಿಂದವಿಠಲರು
ಶೃಂಗಾರವ ನೋಡಿದ್ಯಾ ಎಂಥ ಶೃಂಗಾರವ ನೋಡಿದ್ಯಾ ಪ. ಶಂಖ ಚಕ್ರಾಂಕಿತ ಬಿಂಕುಳ್ಳ ಶ್ರೀವತ್ಸಕುಂಕುಮಾಂಕಿತÀನ ಅರಮನೆ ಶೃಂಗಾರವನೋಡಿದ್ಯಾಅ.ಪ. ರಂಗು ಮಾಣಿಕ ಬಿಗಿದ ಅಂಗಳದೊಳಗಿನ್ನು ಬಂಗಾರದ ಬೆತ್ತಹಿಡಕೊಂಡುಬಂಗಾರದ ಬೆತ್ತಹಿಡಕೊಂಡು ನಿಂತಾರೆ ಮಂಗಳಾಂಗನ ಮನೆ ಮುಂದೆ1 ವ್ಯಾಲಶಯನನ ಮನೆಯೊಳು ಅಂತಸ್ತಿಗೆಜಾಳಿಗೆ ಮುತ್ತು ಜಡದಾವೆಜಾಳಿಗೆ ಮುತ್ತು ಜಡದಾವೆ ಅರಮನೆಸೊಬಗ ಹೇಳಲೊಶÀವಲ್ಲಜನರಿಗೆ2 ಕನಿಯಾದ ಕದಗಳು ಚಿನ್ನದ ಚೌಕಟ್ಟುಸನ್ನಹದಿ ಅರಮನೆಸನ್ನಹದಿ ಅರಮನೆ ಯೊಳಗಿನ್ನುಕನಿಯಾದ ಕದಗಳು ತಿಳಿಯವು3 ಹಲವು ಚಿನ್ನದ ನೆರಳುನೆಲದೊಳು ಬಿದ್ದಿರೆಕೆಲ ಸರೋವರ ಕಮಲವುಕೆಲ ಸರೋವರ ಕಮಲವು ಆದರಿಂದ ಜಲವು ನೆಲವೆಂದು ತಿಳಿಯದು 4 ಅಂತರಂತರದಲ್ಲೆ ಮಂತ್ರಿಗಳು ಕುಳಿತಾರೆ ಕಂತುನಯ್ಯನ ಅರಮನೆಕಂತುನಯ್ಯನ ಅರಮನೆಯೊಳಗೆಅನಂತಪ್ರಜೆ ಬರಲಿ ಬಯಲುಂಟು5 ಮಿಂಚಿನಂತೆ ಹೊಳೆಯೊ ಕೆಂಚೆÉಯರು ಮೈಬಣ್ಣಗೊಂಚಲ ಮುತ್ತು ಅಲುಗೂತಗೊಂಚಲ ಮುತ್ತು ಅಲುಗೂತಸುಳಿದಾಡೊಚಂಚಲಾಕ್ಷಿಯರು ಕಡೆಯಿಲ್ಲ6 ವಜ್ರಮಾಣಿಕ್ಯ ಬಿಗಿದು ಸಜ್ಜಾದ ಆಭರಣವು ಗೆಜ್ಜೆ ಸರಪಳಿಯು ಗಿಲುಕೆಂದು ಗೆಜ್ಜೆ ಸರಪಳಿಯು ಗಿಲುಕೆಂದುರಾಮೇಶನ ಗುಜ್ಜೆಯರು ಹೆಜ್ಜೆ ಇಡುವೋರು7
--------------
ಗಲಗಲಿಅವ್ವನವರು
ಶೃಂಗೇರಿ ಮಂಗಳಂ ಸರಸಿಜೋದ್ಭವನರಸಿಗೆ ಪ ಭಕ್ತರಿಗೆ ತಾನೊಲಿದು ಬಂದು ಪ್ರತ್ಯಕ್ಷಳಾದ ಶಾರದದೇವಿಗೆ 1 ಶಾರದದೇವಿಗೆ 2 ಕೆತ್ತನೆ ಅಡ್ಡಿಕೆ ಮುತ್ತಿನಕಟ್ಟಾಣಿ ಹಸ್ತಕಡಗ ಹರಡಿ ವಂಕಿನಿಟ್ಟು ಕಮಲ ಗಿಣಿ ಪುಸ್ತಕಕಂಠವು ಭಕ್ತರಿಗಭಯವ ತೋರುವ ದೇವಿಗೆ 3 ಅಂದುಗೆ ಇಂದಿರೆರಮಣನಸೊಸೆ ಶಾರದೆಗೆ 4 ಶ್ರೀನಿವಾಸನಪಾದ ತೋರ್ಪ ಶಾರದೆಗೆ 5
--------------
ಯದುಗಿರಿಯಮ್ಮ
ಶೇಷ ಅತಿ ಶೋಭಿಸುತಿದೆ ಶ್ರೀಪತಿವಾಹನ ಪ ಚತುರದಶ ಲೋಕದಲಿ ಅಪ್ರತಿವಾಹನ ಅ.ಪ. ವಿನುತಕಶ್ಯಪ ಮುನಿಗೆ ತನಯನೆನಿಸಿದ ವಾಹನ ಅನುಜರನು ಕದ್ದೊಯ್ದ ಅತ್ಯಾಢ್ಯ ವಾಹನ ವನಧಿ ಮಧ್ಯಧಿ ನಾವಿಕರ ಭಕ್ಷಿಸಿದ ವಾಹನ ಜನಪನಾಜ್ಞದಿ ಕೂರ್ಮಾಗಜರ ನುಂಗಿದ ವಾಹನ1 ಕುಲಿಶಪಾಣಿಯ ಕೂಡೆ ಕಲಹ ಮಾಡಿದ ವಾಹನ ಒಳಹೊಕ್ಕು ಪೀಯೂಷ ತಂದ ವಾಹನ ಮಲತಾಯಿ ಮಕ್ಕಳನು ಮರುಳುಗೊಳಿಸಿದ ವಾಹನ ವಾಹನ 2 ಕಾಲನಾಮಕನಾಗಿ ಕಮಲಭವನಲಿ ಜನಿಸಿ ಕಾಲಾತ್ಮಹರಿಯ ಸೇವಿಪ ವಾಹನ ಕಾಳಗದಿ ಕಪಿವರರ ಕಟ್ಟುಬಿಡಿಸಿದ ವಾಹನ ವಾಲಖಿಲ್ಲರ ಪಿಡಿದ ವರವಾಹನ 3 ವಾಹನ ನಿಜ ರೂಪದಿ ಹರಿಸೇವೆಗೈವ ವಾಹನ ಆ ಪಿತೃಗಳಿಗಮೃತ ಪ್ರಾಪ್ತಿಸಿದ ವಾಹನ ವಾಹನ 4 ಪನ್ನಗಾಶನವಾಹನ ಪತಿತ ಪಾವನ ವಾಹನ ಸನ್ನುತಿಪ ಭಕ್ತರನು ಸಲಹುವ ವಾಹನ ಪನ್ನಗಾದ್ರಿನಿವಾಸ ಜಗನ್ನಾಥ ವಿಠ್ಠಲಗೆ ಉನ್ನತ ಪ್ರಿಯವಾದ ಶ್ರೀ ಗುರುಡವಾಹನ 5
--------------
ಜಗನ್ನಾಥದಾಸರು
ಶೇಷ ಗೀರೀಶ ವಿಠಲ | ಪೋಷಿಸೊ ಇವಳಾ ಪ ಕಾಸು ವೀಸಕ್ಕೆ ಮನ | ಕ್ಲೇಶಗೊಳಿಸದಂತೆ ಅ.ಪ. ಪಥ ಮಾರ್ಗಕ್ಕೆ | ಸದ್ಗುರು ಕಟಾಕ್ಷವೆಉತ್ತಮೋತ್ತಮ ಹಾದಿ | ಎಂದು ಪೇಳಿದರೂ 1 ಹರಿಗುರೂ ಸದ್ಭಕ್ತಿ | ತರತಮ ಜ್ಞಾನವನುಕರುಣಿಸೀ ಕಾಪಾಡೊ | ಕರಿವರದ ಹರಿಯೇಕರುಣಾಳು ನಿನ್ಹೊರತು | ಆರಿಯೆ ನಾ ಅನ್ಯರನುಮರುತಾಂತರಾತ್ಮಕನೆ | ಆನಂದ ನಿಲಯಾ2 ಎರಡು ಮೂರರಿಗಳನು | ಪರಿಹರಿಸಿ ವೈರಾಗ್ಯವರಜ್ಞಾನ ಸಂಪದವ | ಕರುಣಿಸುತ ಹರಿಯೇಕರಪಿಡಿದು ಉದ್ಧರಿಸೊ | ಶರಣ ಜನ ಕಾರುಣ್ಯಮರುತಾಂತರಾತ್ಮ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಶೇಷ ಪರ್ಯಂಕ ಶಯನ ವಿಠಲ ಪೊರೆ ಇವಳ ಪ ವಾಸುದೇವನೆ ನಿನ್ನ | ದಾಸಿ ಎಂದೆನಿಸಿ ಭವಪಾಶವನೆ ಕಳೆಯೊ ಸುವಿ | ಶೇಷ ಹರಿಯೇ ಅ.ಪ. ಪತಿಸುತರು ಹಿತರಲ್ಲಿ | ವಿತತವಾಗಿರುವಂಥಅತಿಶಯದ ತವರೂಪ | ಸತತ ಚಿಂತಸುವಾ |ಮತಿಯನೇ ಕರುಣಿಸುತ | ಕೃತ ಕಾರ್ಯಳೆಂದೆನಿಸೊಕ್ಷಿತಿರಮಣ ಭಿನ್ನವಿಪೆ | ಪತಿಕರಿಸೊ ಇದನಾ 1 ಬುದ್ಧಿಯಲಿ ಸನ್ನಿಹಿತ | ವೃದ್ಧಿಗೈಸಿವಳಲ್ಲಿಮಧ್ವಮತ ಸಿದ್ಧಾಂತ | ಪದ್ಧತಿಗಳಾಅಧ್ವರೇಡ್ಯನೆ ಅನಿ | ರುದ್ಧ ಮೂರುತಿ ಹರಿಯೇಕೃದ್ಧಖಳ ಸಂಹಾರಿ | ಪದ್ಮನಾಭಾ 2 ಕೀಚಕಾರಿ ಪ್ರಿಯನೆ | ಮೋಚಕೇಚ್ಛೆಯ ಮಾಡಿಪ್ರಾಚೀನ ಕರ್ಮದಿಂ | ಮೋಚನವ ಗೈಸೋ |ಯಾಚಿಸುವೆನೋ ಸವ್ಯ | ಸಾಚಿಸಖ ನೀನೆಂದುಈಕ್ಷಿಪುದು ಕರುಣ ಕಟಾಕ್ಷದಲಿ ಹರಿಯೇ 3 ಸಾರ ಸುಖಸಾಂದ್ರಾ 4 ಕಾವ ಕರುಣಿಗಳರಸ | ಭಾಮಕರ ಪರಿಪಾಲಾಓವಿತವ ಸಂಸ್ಮರಣೆ | ಸಾರ್ವಕಾಲಿದಲೀಈವುದಿವಳಿಗೆ ಎಂದು | ಭಾವದಲಿ ಭಿನ್ನವಿಪೆಗೋವಿದಾಂ ಪತಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶೇಷಗಿರಯವಾಸಾ ಶ್ರೀವೆಂಕಟೇಶಾ ಶಾಶ್ವತ ಜಗದೀಶಾ ಪ ಸಾಸಿರ ನಾಮದೊಡೆಯಾ ಸಕಲ ಭಕ್ತರ ಪ್ರೀಯಾ ಕಾಯ ವಸುದೇವನಂದನ ಜೇಯಾ ಅ.ಪ ಕಟ್ಟಿಕೊಂಡು ಲಂಕೆಯಪುರವಾ ಪುಂಡಮಹಾನುಭಾವ ದಂಡಿದಾನವರನ ಹಿಡದಾ ಖಂಡಗಳು ಕತ್ತರಿಸಿನಿ ದಶಶಿರ ಪುಂಡರೀಕ ವರದ ದೇವ 1 ಪತಿ ಮಾಧವ ಶ್ರೀ ಮುಕುಂದಾ ಭೇದಿಸಿ ಹರಿಕೊಂದಾ ಪೊಗಳಲೊಶವೆ ವೈಭವ ದೇವ ದೇವಾ 2 ತ್ಯಜಿಸಿ ವೈಕುಂಠದಿಂದಾ ಭಜಕಾರ ಪೊರೆವ ನಿಜವುವುಳ್ಳ ಕನ್ನಿಕೆಯ ಸಂಗ ಭಜನಿಯನು ಕಳಕೊಂಡು ಬಂದ ತ್ರಿಜಗವಂದಿತ ಹೊನ್ನ ವಿಠಲಾ 3
--------------
ಹೆನ್ನೆರಂಗದಾಸರು
ಶೇಷಾದ್ರಿಯನು ನೋಡಿರೊ-ಸೇವಕ ಪರಿ- ತೋಷಾದ್ರಿಯಿದು ಕಾಣಿರೋ ಪ ಶೇಷಾದ್ರೀಶನ ಪರಿತೋಷದಿಂ ಪಾಡಿ ಅ.ಪ. ಸಣ್ಣದಾದರು ಗಿರಿ ರನ್ನವ ಪೊಲುವ- ದರ್ಣವಶಯನನ ಕಣ್ಣಿಲಿ ಕಾಣಿಪ 1 ಬಗೆಬಗೆ ವೃಕ್ಷಗಳು-ಬನಂಗಳು-ಬಗೆಬಗೆ ¥ಕ್ಷಿಗಳು ಬಗೆಬಗೆಮೃಗಗಳು ಸೊಗಸಿನೊಳಿರೆಬಹು ಬಗೆಬಗೆ ಧಾತುಗಳಿಗೆ ನೆಲೆಯಾಗಿಹ 2 ಯುಗಗಳ ಸಂಖ್ಯೆಯೊಳು-ನಾಮಂಗಳು- ಯುಗಮೊದಲೊಳಗೆ ಪನ್ನಗಗಿರಿಯೆನೆ ತ್ರೇತಾ ಯುಗದಲ್ಲಿ ಹೇಮದ ನಗವೆಂಬ ಪೆಸರಿನ 3 ದ್ವಾಪರಯುಗದೊಳಗೆ-ವೆಂಕಟನಾಮ- ವೀಪರ್ವತಕ್ಕೊದಗೆ ಶ್ರೀ ಪುಲಿಗಿರಿಯೆಂಬ ರೂಪವೀಯುಗದೊಳು ಶ್ರೀಪತಿಯಿತ್ತನಿರೂಪದೊಳೊಪ್ಪುವ 4 ದೂರದಿ ಶೋಭಿಸುವ ದುರ್ಜನರಿಗೆ-ದೂರನಮಂದಿರವ ವರದ ವಿಠಲ ನಿಹ 5
--------------
ಸರಗೂರು ವೆಂಕಟವರದಾರ್ಯರು
ಶೋಭನಂ ಶ್ರೀ ಶೋಭನಂ ಶ್ರೀಭೂವಲ್ಲಭ ವೆಂಕಟನಾಯಕ ಪಇಲ್ಲದ ಮಾಯೆಯ ನಿರ್ಮಿಸಲು ಉಳ್ಳವ ನೀನದರೊಳಗಿರಲುನಿಲ್ಲದೆ ನಲಿಯುತ ಹಬ್ಬುತ ಹಸರಲು ಯೆಲ್ಲವು ನೀನಾಗಿರುತಿರಲು 1ಯುಕ್ತಿಗಸಾಧ್ಯನು ನೀನಾಗಿ ಭಕ್ತರ ಪಾಲಿಸಬೇಕಾಗಿಶಕ್ತಿಗೊಡೆಯ ರಾಮಕೃಷ್ಣ ನೀನಾಗಿ ಭಕ್ತರ ಪಾಲಿಸಬೇಕಾಗಿ 2ಕರುಣಾರ್ಣವನ ಕಟಾಕ್ಷದಲಿ ಪರಿಪರಿ ಕಾಮವ ಪಡೆಯುತಲಿತಿರುಪತಿ ವೆಂಕಟರಮಣನ ಮನದಲಿ ಸ್ಮರಿಸುತಲಿರೆ ಸಂಪತ್ತಿನಲಿ 3 ಓಂ ಯೋಗಿನೇ ನಮಃ
--------------
ತಿಮ್ಮಪ್ಪದಾಸರು