ಒಟ್ಟು 14277 ಕಡೆಗಳಲ್ಲಿ , 133 ದಾಸರು , 6728 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಿಂತೆ ಪರಿಹರ ಮಾಡೋ ಎನ್ನಯ್ಯ ಸಜ್ಜನರ ಪ್ರಿಯ ಪ ಚಿಂತೆ ಪರಿಹರ ಮಾಡೊ ಎನ್ನಯ ಚಿಂತೆ ಪರಿಹರ ಮಾಡಿ ಎನ್ನ ಅಂತರಂಗದಿ ನಿಮ್ಮ ನಿರ್ಮ ಲಂತ:ಕರುಣದ ಚರಣವಿರಿಸಿ ಸಂತಸದಿ ಪೊರೆ ಸಂತರೊಡೆಯ ಅ.ಪ ನಿಮ್ಮ ಪಾದವ ನಂಬಿಕೊಂಡಿರುವ ಈ ಬಡವನನ್ನು ಕಮ್ಮಿ ದೃಷ್ಟಿಯಿಂ ನೋಡದಿರು ದೇವ ನಿನ್ನ ಬಿಟ್ಟೆನ ಗ್ಹಿಮ್ಮತನ್ಯರದಿಲ್ಲ ಜಗಜೀವ ಭಜಕಜನ ಕಾವ ಮೂಡಿಮುಳುಗುತಿಹ್ಯದೈ ಸಮ್ಮತದಿ ಸಲಹೆನ್ನ ದಯಾನಿಧಿ ಬ್ರಹ್ಮಬ್ರಹ್ಮಾದಿಗಳ ವಂದ್ಯನೇ 1 ಆರುಮೂರರಿಕ್ಕಟ್ಟಿನೊಳು ಗೆಲಿಸೋ ಘನಪಿಂಡಾಕಾರ ಆರು ಎರಡರ ಸಂಗ ತಪ್ಪಿಸೋ ಮಹಬಂಧ ಬಡಿಪ ಘೋರ ಸಪ್ತಶರಧಿ ದಾಂಟಿಸೋ ತವದಾಸನೆನಿಸೊ ಗಾರುಮಾಡಿ ಕೊಲ್ಲುತಿರ್ಪ ದೂರಮಾಡೆನ್ನ ದುರಿತದುರ್ಗುಣ ಸೇರಿಸು ತ್ವರ ದಾಸಸಂಗದಿ ನಾರಸಿಂಹ ನಾರದವಿನುತ 2 ಪಾಮರತ್ವ ತಾಮಸವ ಬಿಡಿಸೋ ವಿಷಯಲಂಪಟ ಪ್ರೇಮ ಮೋಹ ಕಾಮ ಖಂಡ್ರಿಸೋ ಹರಲಿರುಳು ನಿಮ್ಮ ಭಜನಾನಂದ ಕರುಣಿಸೊ ಸುಚಿಂತದಿರಿಸೊ ಕಾಮಿತಜನಕಾಮಪೂರಿತ ನಾಮರೂಪರಹಿತಮಹಿಮ ಸ್ವಾಮಿ ಅಮಿತಲೀಲ ವರ ಶ್ರೀರಾಮ ಪ್ರಭು ತ್ರಿಜಗದ ಮೋಹ 3
--------------
ರಾಮದಾಸರು
ಚಿಂತೆ ಬಿಡಲಿಲ್ಲಾ ಎನ್ನಂತ ತಿಳಿಯಲಿಲ್ಲಾ ಪಾದ ಕಾಣದೇ ವ್ಯರ್ಥ ಸತ್ತೆನಲ್ಲಾ ಪ ನೀರಮೇಲಣಗುಳ್ಳೆ ಸಂಸಾರವೆಂಬುವ ಬಳ್ಳಿ ತೋರಿ ಯಡಗೋದಿಲ್ಲ ಆಧಾರ ಗತಿಗೆ ಅಲ್ಲಿ ನೀರಜದೆನೆ ನೀರಿನ ಸಂಗ ಪರಿ ಇರುತಿಹೆ 1 ಹೆಣ್ಣು ಹೊನ್ನು ಮಣ್ಣು ಜೀವ ಭವ ಪೆಣ್ಣು ಫಣಿಗಣ್ಣಗೆ ಬಿಡದಿನ್ನು ಬೆಣ್ಣೆ ಜಲವ ಉಣ್ಣದ ಪರಿ ಕುನ್ನಿ ವಿಷಯಗಣ್ಣಿಸದಿಹೇ 2 ಶುಭಗುಣಗಣ ಹೃದಯ ಎನಗಭಯವೀಯೋ ಸದಯಾ ಪ್ರಭು ನರಸಿಂಹ ವಿಠಲಯ್ಯಾ ನಿನ- ಗಭಿನಮಿಸುವೆನಯ್ಯಾ ಸುಭಗ ನಿನ್ನ ಪಿಡಿದೆನಯ್ಯಾ ಶುಭಕರ ಸಿರಿಮೊಗ ತೋರಯ್ಯಾ 3
--------------
ನರಸಿಂಹವಿಠಲರು
ಚಿಂತೆ ಮಾಡುವುದ್ಯಾಕೆ ಮನವೆ ನೀನು ಕರ್ಮ ಎಂದಿಗಾದರೂ ಬಿಡದು ಪ ಮಗÀನಾರು ನೀನಾರು ಪೇಳೊ ಸಿದ್ಧ ನಿಗಮಾರ್ಥಗಳಿಂದ ಸಜ್ಜನರ ಕೇಳೊ ತಗಿದು ಕಳಿ ಶೋಕದ ಗೋಳು ನಿತ್ಯ ನಗಧರನ ಭಕ್ತಿಯಲಿ ಸುಖದಲ್ಲಿ ಬಾಳೋ 1 ಸಾಹನಶಕ್ತಿಯನ್ನು ಮಾಡೊ ಬರಿದೆ ಸ್ನೇಹ ಮಾಡಿದರಿಂದ ಜ್ಞಾನಕ್ಕೆ ಕೇಡು ತಾಹಾದು ಸ್ಥಿರವೆಂದು ನೋಡೊ ನೀನೂ ಮಾಹಪದವಿಗೆ ಬಂದೆ ಸುದೃಢವೆ ಬೇಡು2 ವಿರಕ್ತಿ ತೊಡು ತೊಡು ಬಿಡದೆ ಎಂದು ಸಾರಿದೆ ಪೇಳಿ ಧರ್ಮದಲಿನ್ನು ನುಡಿದೆ ವಾರವಾರಕೆ ಹೀಗೆ ಕೆಡದೇ ಶ್ರಿಂ ಗಾರ ಶ್ರೀ ವಿಜಯವಿಠ್ಠಲಲೆನ್ನು ದು:ಖಬಡದೆ 3
--------------
ವಿಜಯದಾಸ
ಚಿಂತೆಯ ಮಾಡದಿರು ಚದುರೆ ನಿನಗೆ ನಾನು ಕಂತುಪಿತನನು ತೋರುವೆ ಪ ಸಂತೋಷದಿಂದ ಸರ್ವಾಭರಣವಿಟ್ಟುಕೊಂಡು ನಿಂತು ಬಾಗಿಲೊಳು ನೋಡೆ ಪಾಡೆ.ಅ.ಪ ಕುಸುಮ ಹಾರವನು ಸುಖನಿಧಿಗೆಕಂದರದಿ ನೀಡಿ ನೋಡೆಸಂದೇಹ ಬಿಟ್ಟು ಬಿಗಿದಪ್ಪಿ ಮನವೊಂದಾಗಿಎಂದೆಂದಿಗಗಲದಿರೆನ್ನ ರನ್ನ 1 ಆಸನವ ಕೊಟ್ಟು ಕಮಲಾಸನನ ಪಿತಗೆ ಸವಿ-ಯೂಟಗಳನುಣ್ಣಿಸಿಲೇಸಾಗಿ ತಾಂಬೂಲ ತವಕದಲಿ ತಂದಿಟ್ಟುವಾಸನೆಗಳನೆ ತೊಟ್ಟು ಸೂಸುವ ಸುಳಿಗುರುಳುಗಳ ತಿದ್ದುತಲಿ ನಕ್ಕುಶ್ರೀಶನ್ನ ಮರೆಯ ಹೊಕ್ಕುಆ ಸಮಯದಲಿ ನಿನಗೆ ದಾಸಿ ಎನ್ನಯ ಮನದಿವಾಸವಾಗು ಬಿಡದೆ ಎನ್ನ ರನ್ನ 2 ಇಂತು ಈ ಪರಿಯಲ್ಲಿ ಶ್ರೀಕಾಂತನನು ಕೂಡಿ ಏ-ಕಾಂತದಲಿ ರತಿಯ ಮಾಡಿಸಂತೋಷವನು ಪಡಿಸಿ ಸಕಲ ಭೋಗವ ತಿಳಿಸಿಸಂತತ ಸ್ನೇಹ ಬೆಳೆಸಿಅಂತರಂಗಕ್ಕೆ ಹಚ್ಚಿ ಅವನಾಗಿ ತಾ ಮೆಚ್ಚಿಪ್ರೀತಿಯಿಂದಧರ ಕಚ್ಚಿಕಂತು ಕೇಳಿಯೊಳು ಕಡುಚೆಲ್ವ ರಂಗವಿಠಲಇಂತು ನಿನ್ನಗಲ ಕಾಣೆ-ಜಾಣೆ.3
--------------
ಶ್ರೀಪಾದರಾಜರು
ಚಿಂತೆಯಾತಕೆ ಮನವೆ ಗುರುಗಳ ಪಾದ ಚಿಂತನೆಯನು ಮಾಡದೆಪ ಸಂತತ ಬಿಡದಲೆ ಚಿಂತನೆ ಮಾಳ್ಪರ ಅಂತರಂಗವ ತಿಳಿವರು ಗುರುವರರು ಅ.ಪ ಉದಯ ಕಾಲದಲಿವರ ಧ್ಯಾನವ ಮಾಡೆ ಮದಗರ್ವ ಪರಿಹರವು ಮುದದಿಂದ ಮೂರು ವೇಳೆಗಳಲ್ಲಿ ಸ್ಮರಿಸಲು ಹೃದಯ ತಾಪವ ಕಳೆವರು ಗುರುವರರು1 ದೇಶದೇಶವ ತಿರುಗಿ ತನುಮನಗಳ ಬೇಸರಗೊಳಿಸಲೇಕೆ ಪೋಷಿಪ ಗುರುಗಳಪಾದ ನಂಬಿದ ಮೇಲೆ ವಾಸುದೇವನೆ ನಲಿವ ಮುಂದೊಲಿವ 2 ವೇದವಾದಿಗಳೆಲ್ಲರೂ ವಾದವ ಮಾಡಿ ಮಾಧವನನು ಕಾಣಿರೊ ಮೋದತೀರ್ಥರ ಮತಬೋಧನೆ ಮಾಡುವ ಸಾಧು ಗುರುಗಳನೆ ಕೂಡು ಸಂಶಯಬಿಡು3 ಚಿತ್ತದಿ ಸ್ಮರಿಸುವರು ಹರಿ ಮಹಿಮೆಯ ಭಕ್ತಿಲಿ ನಲಿಯುವರು ಚಿತ್ರಗಾಯನ ನೃತ್ಯಗಾನಗಳಿಂ ಪುರು- ಷೋತ್ತಮನನೊಲಿಸುವರು ಹರುಷಿತರು4 ಕತ್ತಲೆ ಮನೆಗಳಲ್ಲಿ ಅಡಗಿಹ ವಸ್ತು ಲಕ್ಷಪರಿಮಿತಿ ಇದ್ದರು ಹಸ್ತದಿ ಜ್ಯೋತಿಯನೆತ್ತಿ ತೋರುವ ಪರಿ ಭಕ್ತರ ಸಲಹುವರು ಗುರುವರರು 5 ಸರಸೀಜಾಕ್ಷನ ನಾಮವು ಹಗಲಿರುಳು ಬಿಡದೆ ಧ್ಯಾನಿಸುತಿರ್ಪರು ಸಿರಿನಾರಾಯಣನನ್ನು ಸ್ಮರಿಸುತ್ತ ಮನದೊಳು ಪರಮಸಂಭ್ರಮ ಪಡುವರು ಗುರುವರರು 6 ಕರುಣದಿ ಸಲಹುವರು ಶಿಷ್ಯರ ಮನ ವರಿತು ವರಗಳನೀವರು ವರ ಕಮಲನಾಭವಿಠ್ಠಲನ ಧ್ಯಾನಿಪಉರಗಾದ್ರಿವಾಸ ವಿಠ್ಠಲದಾಸರನೆ ನಂಬು7
--------------
ನಿಡಗುರುಕಿ ಜೀವೂಬಾಯಿ
ಚಿಂತೆಯಾತಕೆ ಮನವೆ ನಿನಗಿದು ಸತತ ಸಲ್ಲದು ಕಾಣೊ ಪುರಂದರ ದಾಸರನುದಿನ ಇಂತು ಬಗೆಯಲಿ ಪಾಲಿಸೊ ಪ ಅಗ್ರ ಬುದ್ಧಿಯ ತಾಳು ನಿನಗೆ ಸಾ ಮಗ್ರಿ ಆಲೋಚನಿ ಯಾತಕೆ ಸ ಮಗ್ರ ಸೋಪಸ್ಕರವನು ಅನುಗ್ರಹವನು ಮಾಡುತಾ ಉಗ್ರ ಮನುಜರ ಕೂಡಿಸದೆ ಪಾ ಅಂದು ಪೊಗಳಲು ಶೀಘ್ರದಲಿ ನಿಂದಿಹರೊ 1 ಹರಿಗುರುಗಳ ಸಂಕಲ್ಪ ತಪ್ಪದು ಗಿರಿಗಹ್ವರದೊಳಗಿದ್ದರು ಅದು ಬರಿದೆಯಾಗದು ಕೇಳು ಸ್ಮರಿಸಿ ಬಳಲಿ ನಲಿದಾಡಿ ಪರಿದ ಕಾಲಕೆ ಬಿಡದೆ ಅಹಿಕದ ಚರಿತೆ ಅವರಿಗೆ ಗಣಣೇನೊ2 ತೆತ್ತಗಿನ ಸ್ವಭಾವ ಆವದೊ ಎತ್ತಲಟ್ಟಿದರತ್ತ ತೊಲಗದೆ ಹೊತ್ತುಹೊತ್ತಿಗೆ ಪೋಗಿ ಬಾಗಿ ತೊತ್ತಿನಂದದಿ ಪ್ರಯೋಜನ ಹೊತ್ತು ಮೀರದೆ ಮಾಳ್ಪುದು ಧರ್ಮ ಮೊತ್ತವಲ್ಲದೆ ಇನ್ನೊಂದಿಲ್ಲವೊ ಇತ್ತ ಭಾಗ್ಯವಿತ್ತ ನಿರ್ಮಳ ಚಿತ್ತದಲಿ ಅರ್ಪಿಸುತಿರು3 ನೀನು ಮಾಡಿದ ಪುಣ್ಯಗಳಿಗೆ ತಾ ನಡದು ಬರುವುದೇ ಮರುಳೆ ನಾನಾ ಪರಿಯಲಿ ತಿಳಿದು ನೋಡು ಧ್ಯಾನದಿಂದಲಿ ದಿನಪ್ರತಿ ಜ್ಞಾನನಿಧಿ ನಿಜಗುರು ಶಿರೋಮಣಿ ಅನಂತಾನಂತ ಜನುಮದಲೀಗ ಗಾನಮಾಡಿದ ನಿಷ್ಟ ಪುಣ್ಯವು ತಾನೊಲಿದು ಫಲವಿತ್ತದೋ4 ಕಲ್ಲು ಕರಗಿಸಿ ಬೆಣ್ಣಿ ತೆಗುವಂಥ ಬಲ್ಲಿದರು ನಿನ ಗೊಲಿದಿರಲು ಎಲ ಎಲ್ಲಿ ಇಲ್ಲವೆಂಬೊ ಸೊಲ್ಲುಗಳಲ್ಲದೆ ಇದು ಸಲ್ಲದೊ ಸಕಲ ಮನೋಭೀಷ್ಟಾ ತುಲ್ಯ ವಲ್ಲಭ ಮಲ್ಲದಲ್ಲಣ ನಿಲ್ಲದಲೆ ವೊಲಿದಿಹನೊ 5 ನೂನ್ಯಪೂರ್ಣವು ಅವರನ ಕೂಡಿ ತನ್ನ್ಯೋಪಾಯವು ಯಾಕೆ ನಿನಗೆ ಕಣ್ಣೆವೆ ಇಡುವನಿತರೊಳು ಕಾರುಣ್ಯವರುಷಗರೆದು ಬಿಡುವ ದೈನ್ಯವೃತ್ತಿಯ ಬಿಡಿಸಿ ನಿಷ್ಕಾಮ ಪುಣ್ಯವನಧಿಯೊಳಿಡುವರೊ 6 ಊರ್ವಿಗೀರ್ವಾಣರಿಗೆ ಉಣಿಪುದು ಗರ್ವವನು ತಾಳದಲೆ ಚೆನ್ನಾಗಿ ಸರ್ವಬಗೆಯಲಿ ನಾನು ಎಂಬೊ ದುರ್ವಚನಗಳ ನುಡಿಯದೆ ಪೂರ್ವತನೆ ಬಯಸುತಾರಾಧಿಸು ಶರ್ವಸನ್ನುತ ವಿಜಯವಿಠ್ಠಲ ಪೂರ್ವನೆಂತ ಪ್ರಬಲನೆ7
--------------
ವಿಜಯದಾಸ
ಚಿಂತೆಯಾತಕೊ ಮಾನವಾ ಭಜಿಸು ಶ್ರೀ- ಕಾಂತಾಖ್ಯ ಸುರಕಾಮಧೇನುವಾ ಅಂತಪಾರಗಳಿಲ್ಲದಾಸೆ ಕಡಲೊಳು ಬಿದ್ದು ಭ್ರಾಂತಿಗೊಳಿಸದೆ ಮನವ ಬಳಲಿಸದಿರು ತನುವ ಪ. ಸಂಸಾರವೆಂಬುವುದು ಸುಖ ದುಃಖ ಮಿಶ್ರಿತವು ಕಂಸಾರಿವಶದೊಳಿಹವು ಶೋಣಿತ ಪೂಯ ಕೇಶ ಕ್ರಿಮಿ ದಂಶ ಪೂರಿತ ದೇಹವು ಹಿಂಸೆಯಾಗುವ ಮೊದಲೇ ಹರಿಕೃಪಾಸುಧೆಯ ಲೇ- ಶಾಂಶ ಸಂಪಾದಿಸಿ ನಿಜಾಂಶ ಸುಖವನು ಸೇರು 1 ಹಿಂದಿನನುಭವ ಗ್ರಹಿಸು ಹರಿಯ ಮಹಿಮೆಯ ಸ್ಮರಿಸು ಮಂದ ಭಾವನೆ ವಾರಿಸು ಮುಂದಾಹದೇನೆಂದು ಕುಂದದಿರು ಧೈರ್ಯದಿಂ- ದಿಂದಿರೇಶನ ಪೂಜಿಸು ತಂದೆ ತಾಯಿಗಳು ತಮ್ಮ ಕಂದನನು ಪೊರೆವ ಪರಿ- ಯಿಂದ ಸಲಹೆಂದು ಗೋವಿಂದನಲಿ ಮೊರೆಯಿರಿಸು 2 ದೃಢ ಭಕುತಿಯಿಂದ ತನ್ನಡಿಯ ಸೇರಿದ ಜನರ ಬಿಡನು ಭಕ್ತಾರ್ತಿಹರನು ಪುಡಿಮಾಳ್ಪದುರಿತಗಳ ಪೂರ್ವದಲಿ ಪೊರೆದಂತೆ ಕೊಡವನಖಿಳಾರ್ಥಗಳನು ಮೃಡವಂದ್ಯ ಶೇಷಾದ್ರಿ ಒಡೆಯನಿರಲ್ಯಾಕೆ ಕಂ- ಗೆಡುವಿ ಎಂದಿಗು ನಿನ್ನ ಕಡೆ ಹಾಯಿಸುವ ಹರಿಯು 3
--------------
ತುಪಾಕಿ ವೆಂಕಟರಮಣಾಚಾರ್ಯ
ಚಿತ್ತಗೊಟ್ಟು ಸಿರಿಕೃಷ್ಣ ಕಾಯಿ ಕಂಡ್ಯ ಪ ಮತ್ತೊಬ್ಬ ನಾನಲ್ಲ ನಿನ್ನ ಭೃತ್ಯರ ಭೃತ್ಯಅ.ಪ ಕಾಲನವರ ಮುನ್ನ ಮುಂಚೂಣಿ ದಾಳಿಗೆಕೀಳು ಮನಮಂತ್ರಿ ಮೂಲೆಯ ಪೊಗಲುಮೂಲ ಬಲದಾಳಿಗೆ ಮುರಿದು ನಾನೋಡಲುಕಾಲಗೆಟ್ಟು ನಾನಿಹ ಕಾಲದಲ್ಲಿ 1 ಪಿತ್ತವೆಂಬ ಕಿಚ್ಚು ವಾತಕೂಡ್ಹೆಚ್ಚಿತುಹತ್ತಿಕೊಂಡು ದೇಹಪುರ ಸುಡುವಾಗಮತ್ತೆ ಶ್ಲೇಷ್ಮವು ಕೂಡಿ ಸುತ್ತು ಮುತ್ತೆಳೆವಾಗಎತ್ತ ಹೋಗಲೆಂಬ ಸಂಕಟದೊಳಗೆ 2 ತಿಂದೋಡಿ ಬಂಧುಗಳೆಲ್ಲ ಕೈಬಿಟ್ಟರುಮುಂದೆಮದೂತರು ಬಂದು ನಿಂದಾಗಎಂದಿಗಾದರು ಒಮ್ಮೆ ನೆನೆದುದ ಕೈಗೊಂಡುಹಿಂದಿಟ್ಟುಕೊಂಡೆನ್ನ ಕಾಯಿ ಕಂಡ್ಯ ಕೃಷ್ಣ3
--------------
ವ್ಯಾಸರಾಯರು
ಚಿತ್ತಜನೈಯನ ಕೂಡ ಅರ್ಥಿಲೆ ಹೋಗುವಾಗ ಹಸ್ತಿನಾವತಿಯ ಕಂಡರು ಜತ್ತಾಗಿ ಜನರು ಪ. ನದ ನದಿಗಳ ದಾಟಿ ಮುದದಿಂದ ಮುಯ್ಯಕ್ಕೆ ಬರಲು ಅದ್ಭುತವಾಗಿ ಬೆಳಗೋದೆಅದ್ಭುತವಾಗಿ ಬೆಳಗೋದೆ ನಗರಿಯುಇದೇ ವೈಕುಂಠ ಹೌದೇನ1 ತರಣಿ ತರಣಿ ಸರೋವರ ಇವ ನೋಡಗಗನಕ್ಕೆ ಸರಳಾಗಿ ಬೆಳೆದ ಮರನೋಡ2 ಆಲ ಅಶ್ವತ್ಥ ಶಾಲ ಶಾಬರವೃಕ್ಷ ಸಾಲು ಮಂಟಪ ನೋಡ ಸಾಲು ಮಂಟಪ ಇವ ನೋಡ ದೇವಾಲಯವು ವಿಶಾಲವಾಗಿದ್ದ ಬಗಿ ನೋಡ3 ಪ್ಯಾಟಿ ಬಾಜಾರ ಸಾಲು ಥಾಟಾಗಿ ತೋರುವುದೆ ಕೋಟಿ ಸೂರ್ಯರ ಬೆಳಕಿಲೆಕೋಟಿ ಸೂರ್ಯರ ಬೆಳಕಿಲೆ ಒಪ್ಪೊ ನಗರಿಯ ಮಾಟ ವರ್ಣಿಸಲು ವಶವಲ್ಲ4 ಹತ್ತಿ ಗೋಪುರ ಕೋಟಿ ಹಚ್ಚಿದೆ ಧ್ವಜ ಕೋಟಿಮತ್ತ ಪತಾಕೆಗೆ ಮಿತಿ ಇಲ್ಲಮತ್ತ ಪತಾಕೆಗೆ ಮಿತಿಯಿಲ್ಲ ಹರಿಣಾಕ್ಷಿಸತ್ಯ ಲೋಕವು ಹೌದೇನ5 ಅಟ್ಟಾಲದ ಮ್ಯಾಲೆ ಧಿಟ್ಟಾದ ಗೊಂಬೆಗಳು ಕೃಷ್ಣಗೆ ಕೈಯ್ಯ ಮುಗಿವಂತೆ ಕೃಷ್ಣಗೆ ಕೈಯ್ಯ ಮುಗಿವಂತೆ ನಿಲ್ಲಿಸಿದ್ದುಎಷ್ಟು ವರ್ಣಿಸಲು ವಶವಲ್ಲ6 ಜತ್ತಾದ ಮನೆಗಳಿಗೆ ರತ್ನದ ಶೋಭೆ ನೋಡಹತ್ತು ದಿಕ್ಕುಗಳ ಬೆಳಗೋವೆÉಹತ್ತು ದಿಕ್ಕುಗಳ ಬೆಳಗೋವೆÉ ಸ್ವರ್ಗವಎತ್ತಿಟ್ಟರೇನ ಐವರು7 ಚಂದದ ಮನೆಗಳಿಗೆ ಮುತ್ತಿನ ಹಂದರ ತೋರಣUಳೆಷ್ಟುಶ್ರೀ ಗಂಧದ ಥಳಿಯ ಸೊಬಗೆಷ್ಟುಶ್ರೀ ಗಂಧದ ಥಳಿಯ ಸೊಬಗೆಷ್ಟ ರಂಗವಾಲಿಅಂದವಾಗಿದ್ದ ಜಗುಲಿ ಎಷ್ಟ 8 ತಾರಕ್ಕಿ ಹೊಳವಂತೆ ತೋರೋದೀವಿಗೆ ಎಷ್ಟನೀರೆ ನಿಲಿಸಿದ್ದ ಕನ್ನಡಿ ಎಷ್ಟನೀರೆ ನಿಲಿಸಿದ್ದ ಕನ್ನಡಿ ಎಷ್ಟ ಉಪ್ಪರಿಗಿಏರಿ ನೋಡುವ ಜನರೆಷ್ಟ 9 ಶ್ರೀಶನ ಮುಖವನೆ ಸೋಸಿಲೆ ನೋಡುತ ಈಜಾಡಿ ಸುಖದ ನದಿಯೊಳು ಈಜಾಡಿ ಸುಖದ ನದಿಯೊಳುಬಹುಜನ್ಮಕ ಲೇಸಾದ ಪುಣ್ಯ ಫಲಿಸಿತು10 ಮೇಲಾದ ಮನೆಗಳ ಮ್ಯಾಲೆ ಸಾಲು ಗೊಂಬಿಗಳ ನೋಡ ಶ್ರೀಲೋಲ ರಾಮೇಶಗೆ ಕೈ ಮುಗಿವಂತೆಶ್ರೀಲೋಲ ರಾಮೇಶಗೆ ಕೈ ಮುಗಿದುಹರಿಣಾಕ್ಷಿ ಕಾಲಿಗೆ ಎರಗುವ ಪರಿಯಂತೆ 11
--------------
ಗಲಗಲಿಅವ್ವನವರು
ಚಿತ್ತದ ಕ್ಲೇಶವ ಭಂಜಿಸಿ ವಾಸುದೇವನೆ ದಯದಿ ಹರೆ ಪ ಇಂದಿರಾವದನಾರವಿಂದ ಭಾಸ್ಕರ ಕುಂದರದನ ವದನ ಹರೆ 1 ಪಾವನ ಮೂರುತಿಯೆ ಹರೆ 2 ಚಿನ್ಮಯ ರೂಪನೆ ಬ್ರಹ್ಮಕಾರಣಗುಣ ನಿರ್ಮಲ ನಿರ್ಗುಣನೆ ಹರೆ 3 ಭೋಗಿ ಭೂಷ ನುತನೆ ಹರೆ 4 ಧ್ಯಾನವ ಗೈಯುವೆನೈ ಹರೆ 5
--------------
ಬೇಟೆರಾಯ ದೀಕ್ಷಿತರು
ಚಿತ್ತಾಭಿಮಾನಿ ನೀನು ಮತ್ತೆ ನಾ ಬಲಗೊಂಡು ದುಷ್ಟವಿಷಯಕ್ಕೆ ಎರಗುವÀ ಮನವನ್ನು ಅಚ್ಚುತನ ಚರಣದಲಿ ಇರಿಸುವೆ1 ಮನದಭಿಮಾನಿಯೆ ಇವನ ನಾ ಬಲಗೊಂಡು ದುರುಳ ವಿಷಯಕೆ ಎರಗುವ ಮನವನ್ನು ನರಹರಿಯ ಚರಣದಲಿ ಇರಿಸುವೆ 2 ಅಚ್ಚುತನೆ ನಾ ನಿನ್ನ ಹೆಚ್ಚು ಬೇಡೋದಿಲ್ಲ ಕಷ್ಟಕಾಲದಲ್ಲಿ ಹರಿಯೆಂಬ ಸ್ಮರಣೀಯೊ ರಕ್ಷಿಸೋ ಲಕ್ಷ್ಮೀರಮಣನೆ 3 ನರಹರಿಯೆ ನಾ ನಿನ್ನ ಹಿರಿದ ಬೇಡೋಳಲ್ಲ ಸರ್ವಕಾಲದಲಿ ಹರಿಯೆಂಬೋ ಸ್ಮರಣೀಯ ಕರುಣಿಸೋ ಲಕ್ಷ್ಮೀರಮಣನೆ 4 ಪಾಲ್ಗಂಜಿಯೆಂದರೆ ಅರಗಂಜಿಯಾಹೋದೆ ಲಕ್ಷ್ಮೀರಮಣಗೆ ಎಂಟುಗುಣಳುಂಟೆಂದರೆ ಮೇಲಿದ್ದ ಗುಣಗಳಡಗೋದೆ 5 ಪಂಚಕನ ದೇಹದಲಿ ನಿಂತೆರಡು ಪಕ್ಷಿಗಳು ಸಂತತ ದುಃಖಿ ಸುಖಿಯೊಬ್ಬ ಜೀವಗೆ ನಿಂತು ಸುಖ ದುಃಖ ಕೊಡುತಿತ್ತು 6 ಪಂಚಮೂರುತಿ ಹರಿಯ ಅಂತರಂಗದಿ ಇಟ್ಟು ಸಂತತ ಸ್ವಪ್ನ ಸುಷುಪ್ತಿ ಏರಿಸುವ ಪ್ರಾರ್ಥಿಸಿ ಪ್ರಾಜ್ಞರಿಗೆ ಸರಿಯೆಂಬೆ7 ಈ ಜಾಗ್ರದವಸ್ಥೆಯಲಿ ನಾನಾವಿಧ ಕರ್ಮಗಳ ಪ್ರೇರಿಸಿ ಸಕಲ ಶ್ರೀಕಾರ ಮಾಡುವೊ ಸ್ವಾಮಿ ಶ್ರೀಹರಿಗೆ ಶರಣೆಂಬೆ 8 ನಡೆವುದು ನಿನ್ನ ಯಾತ್ರೆ ನುಡಿವುದು ನಿನ್ನ ನಾಮಸ್ಮರಣೆ ಅಡಿಯಿಡೋದೆಲ್ಲ ಹರಿಯಾತ್ರೆ ಗುರುಪೂಜೆ ಸ್ಮರಣೇಯ ಪಾಲಿಸೋ ಲಕ್ಷ್ಮೀರಮಣನೆ 9 ವಿಷ್ಣುಭಕ್ತಿಯಿಲ್ಲದೋರ ಹತ್ತಿರ ನಾನಿರೆ ಎಚ್ಚರಿತು ಮಾಡೆ ಗೆಳೆತನವ ಅವರ ಕಂಡರೆ ನಾನು ಕಿಚ್ಚ ಕಂಡಂತೆ ಕೊಲ್ಲಿಸುವೆ 10 ಹರಿಭಕ್ತಿಯಿಲ್ಲದೋರ ಹತ್ತಿರಲಿ ನಾನಿರೆ ಅರೆಘಳಿಗೆ ಮಾಡಿ ಗೆಳೆತನವ ಅವರ ಕಂಡರೆ ತಾನು ಉರಿಯ ಕಂಡಂತೆ ತೊಲಗುವೆ 11 ಕಾಶೀಪಟ್ಟಣ ಶ್ರೀ ವಾಸುದೇವರು ಭೂಮಿ ಹರಿದಾಸರು ಕಟ್ಟಿಸಿದ ಸ್ಥಳದಲ್ಲಿ ಹರಿಯ ನಿಜದಾಸಗೆ ವಿಶ್ವನಾಥನೆಂತೆಂಬೊ ಪೆಸರುಂಟು 12 ಹರಿದಾಸರ ಒಳಗೆ ಪರಮ ವೈಷ್ಣವನ್ಯಾರೆ ಕಿರಿಯ ಕೆಂಜೆÉಡೆಯ ಮಕುಟನೆ ಅಜನ ಸುತನಾ ಶಿವನು ಹರಿದಾಸಕಾಣೆ ಹುಸಿಯಲ್ಲ13 ಗುಣಮಣಿಧಾಮಗೆ ಮಣಿದೊಮ್ಮೆ ಇಕ್ಕದೆ ಹಲವು ದೈವಗಳ ಭಜಿಸಿದ ಪಾಪಿ ನೀನು ಮಣಿಮಂತ ಹೋದಗತಿಗ್ಹೋಗ್ವೆ 14 ಎದ್ದು ತಮಸಿಗೆ ಉರುಳುವೊ ಪಾಪಿ ನೀ ಅದ್ವೈತ ಹ್ಯಾಗೆ ಬಿಡದ್ಹೋದಿ 15 ಅಳಿದ್ಹೋಗೊ ಶರೀರವನು ನರಹರಿಗೆ ಸರಿಯೆಂಬೆ ಬಿಡದೆ ತಮಸಿಗೆ ಉರುಳವೊ ಪಾಪಿ ನೀ ಚಲಹವನು ಹ್ಯಾಗೆ ಬಿಡದ್ಹೋದಿ 16 ನಾಶ್ವಾಗೊ ಶರೀರವನು ವಾಸುದೇವಗೆ ಸರಿಯೆಂಬೆ ಹೇಸದೆ ತಮಸಿಗೆ ಉರುಳವೊ ಪಾಪಿ ನೀ ವಾಸನೆ ಹ್ಯಾಗೆ ಬಿಡದ್ಹೋದಿ 17 ಈ ಸೃಷ್ಟಿಯೊಳಗೆ ಅಚ್ಚುತಗೆ ಸರಿಯುಂಟೆ ಮೆಚ್ಚಿ ನೀ ಮನವೆ ಕೆಡಬೇಡ ಅಲ್ಲಿತ್ತಾರಾ(ಅಲ್ಲದ?) ಎಲೆಯ ಒತ್ತಿ ಹಿಂಡಿದರೆ ರಸವುಂಟೆ 18 ಭೂಮಿಯೊಳಗೆ ಶ್ರೀರಾಮನಿಗೆ ಸರಿಯುಂಟೆ ಮಾನುನೀ ಮನವೇ ಕೆಡಬೇಡ ಅಲ್ಲಿತ್ತಾರಾ(ಅಲ್ಲದ?)ಎಲೆಯ ಒತ್ತಿ ಹಿಂಡಿದರೆ ರಸವುಂಟೆ 19 ಭೂಮಂಡಲದೊಳಗೆ ರಂಗಗೆ ಸರಿಯುಂಟೆ ಅಂದು ನೀ ಮನವೆ ಕೆಡಬೇಡ ಅಲ್ಲಿತ್ತಾರಾ (ಅಲ್ಲದ?) ಎಲೆಯ ಒತ್ತಿ ಹಿಂಡಿದರೆ ರಸವುಂಟೆ 20 ವಿಷ್ಣು ಸರ್ವೋತ್ತಮನೆಂದು ಇಟ್ಟರೆ ಮುಂಡಿಗೆಯ ಮುಟ್ಟಲಂಜಿದನೆ ಪರವಾದಿ ಪರವಾದಿ ತತ್ವದ ಬಟ್ಟೇನೂ ಕಾಣದಿರುತಿದ್ದ21 ಹರಿಸರ್ವೋತ್ತಮನೆಂದು ಇರಿಸಿದರೆ ಮುಂಡಿಗೆಯ ಹಿಡಿಯಲಂಜಿದನೆ ಪರವಾದಿ ಪರವಾದಿ ತತ್ವದ ವಿವರವನು ಕಾಣದಿರುತಿಹ 22 ಅರಣ್ಯದ ಅಡವೀಲಿ ಗೋಡೇನು ಹಾಕಿದರೆ ಯಾರು ಕೂಲೀನಕೊಡುವೋರು ಸಂಕರನ ಮತವನು ಮಾಯದಿಂ ಮೆಚ್ಚಿ ಕೆಡಬ್ಯಾಡ 23 ಅತ್ತಿಹಣ್ಣಿನಂತೆ ಮಿಥ್ಯವಾದಿಮತ ಬಿಚ್ಚಿನೋಡಿದರೆ ಕ್ರಿಮಿರಾಶಿ ಮಧ್ವರಾಯರ ಮತ ಮುತ್ತಿನ ಸರವ ತೆಗೆದಂತೆ 24 ಆಲಹಂಣೀನಸಂತೆ ಮಾಯಾವಾದಿಮತ ಸೀಳಿ ನೋಡಿದರೆ ಕ್ರಿಮಿರಾಶಿ ಮಧ್ವರಾಯರ ಮತ ಹೂವ್ವಿನ ಸರವ ತೆಗೆದಂತೆ 25 ಭಾಗವತ ಅರ್ಥಸಾರವೆಲ್ಲವ ತಿಳಿದು ಹೇಳಿದನೆ ತತ್ವ ಕಥೆಗಳ ಜ್ಞಾನ ಭಕ್ತಿವೈರಾಗ್ಯವ ಈವನೆ ನಮ್ಮ ಹಯವದನ 26
--------------
ವಾದಿರಾಜ
ಚಿನ್ಮನೆಂದುಪೇಕ್ಷಿಸದೇ ದತ್ತಾತ್ರೇಯಾ ಪ ಸರಸಿರುಹ ಸಖ ಶತಕೋಟಿ ತೇಜಾ ಪರಭಕ್ತ ಜನ ಸುರ ಭೂಜಾ ಕರುಣಾ ಸಾಗರ ಅತ್ರಿ ತನುಜಾ ಮೊರೆ ಹೊಕ್ಕವರ ರಾಜಾಧೀರಾಜಾ 1 ಪತಿತ ಜನರ ಮಾಡುತಿಹೆ ಉದ್ಧಾರಾ ಚತುರ್ದಶ ಭುವನಾಧಾರ ಅತಿಕೀರ್ತಿ ಸು ಶೋಭಿತ ದಿಗಂಬರಾ ನುತಗುಣ ಮಂಡಿತ ಮುನಿ ಮನೋಹರಾ 2 ಪರಮ ಪುರುಷ ಸದ್ಗುರು ಸಿರಿಲೋಲಾ ಸರಸಿಜ ನೇತ್ರ ದಯಾಳಾ ಧರಿಯೊಳನೇಕ ರೂಪವ ದೋರ್ಪೆ ಘನಲೀಲಾ ಗುರುವರ ಮಹಿಪತಿ ನಂದನ ಪಾಲಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಚೆನ್ನಕೇಶವದೇವರಾಯಇನ್ನು ಸುಖಿಪೆನೆಂತೆನಗೆ ಅನ್ಯಥಾ ಗತಿಯಿಲ್ಲ ಪ. ಅನುದಿನ ಸಂದಣಿಸೆ 1 ಉಡುವಾಸೆ ನುಡಿವಾಸೆ ಬೇಡುವಾಸೆ ಕೊಡುವಾಸೆಒಡಲ ತುಂಬಬೇಕೆಂಬ ಆಸೆಕೊಡದವನ ಬಡಿದು ಜಡಿವಾಸೆ ಬಿಡದಿರಲು 2 ಹಯವದನನೆ ದೇವ ನಿನ್ನ ನೆನೆಯದಿದ್ದೀಮನಕೆಭಯವೆಲ್ಲಿಹುದು ಜಗನ್ನಾಥ ನಿನ್ನದಯವನೆ ಬೀರಿ ನಿರ್ದಯನನ್ನುದ್ಧರಿಸೊ 3
--------------
ವಾದಿರಾಜ
ಚೆಲ್ವೇರಾರತಿಯ ತಂದೆತ್ತಿರೆ ಪ ಹುಟ್ಟಿದಳಾ ಕ್ಷೀರಸಾಗರದಲಿ ಸ- ಮಸ್ತ ಜನರಿಗೆ ಸುಖವ ನೀಡುತ ಶ್ರೇಷ್ಠರೊಳಗೆ ಜೇಷ್ಠಾದೇವಿ ಶ್ರೀನಾಥನ ಪಟ್ಟದರಸಿ ಮುದ್ದು ಮಾಲಕ್ಷ್ಮಿಗೆ 1 ಮುದ್ದು ಮೋರೆಗೆ ತಕ್ಕ ಮುಖುರ್ಯ ಬುಲಾಕ- ನಿಟ್ಟ ್ವಜ್ರದ ಬುಗುಡಿ ವೈಯಾರದಿಂದ ತಿದ್ದಿ ಬೈತಲು ಜಡೆಬಂಗಾರ ರಾಗಟೆ ಪದ್ಮನಾಭನ ರಾಣಿ ಮಾಲಕ್ಷ್ಮಿಗೆ 2 ವಾಲೆ ಸರಪಳಿ ಚಳತುಂಬು ಚಿನ್ನದ ಸರಿಗೆ ಮೋಹನ್ನಮಾಲೆ ಕಣ್ಣಕಾಡಿಗೆ ಹಚ್ಚಿ ಕಸ್ತೂರಿ ಕುಂಕುಮ ಚೆನ್ನಾರ ಚೆಲುವೆ ಶ್ರೀ ಮಾಲಕ್ಷ್ಮಿಗೆ 3 ಸೆಳೆನಡುವಿಗೆ ತಕ್ಕ ಬಿಳಿಯ ಪೀತಾಂಬರ ನಳಿತೋಳಿನಲಿ ನಾಗಮುರಿಗೆ ವಂಕಿ ಕಮಲ ದ್ವಾರ್ಯ ಹರಡಿ ಕಂಕಣನಿಟ್ಟು ಕಳೆಯ ಸುರಿವ ಚೆಲ್ವೆ ಮಾಲಕ್ಷ್ಮಿಗೆ 4 ಗರುಡವಾಹನನ್ಹೆಗಲಿಳಿದು ಶ್ರೀನಾಥನ ಹರಡಿ ಕಂಕಣ ಕರವ್ಹಿಡಿದುಕೊಂಡು ಮುಡಿದ ಮಲ್ಲಿಗೆ ಪಾರಿಜಾತಗಳುದುರುತ ನಡೆದು ಬರುವೊ ಮುದ್ದು ಮಾಲಕ್ಷ್ಮಿಗೆ 5 ಪಾದದಿ ರುಳಿ ಗೆಜ್ಜೆ ನಾದ ಝೇಂಕರಿಸುತ ಆದರದಿಂದೆನ್ನ ಮನೆಗೆ ಬಂದು ಶ್ರೀಧರ ಭೀಮೇಶಕೃಷ್ಣನೆದೆಯ ಮ್ಯಾಲ್ವಿ- ನೋದದಿ ಕುಳಿತಿದ್ದ ಮಾಲಕ್ಷ್ಮಿಗೆ 6
--------------
ಹರಪನಹಳ್ಳಿಭೀಮವ್ವ
ಚೋದ್ಯ ಚೋದ್ಯ ಸರ್ವದ ವೇದ ವೇದ್ಯ ನಂಬಿದ ಭಕ್ತ ಜನರಿಗಾಗುವ ಸುಖಸಾಧ್ಯ ಪ. ಶ್ರೀ ಮಹೀಶ ಸತ್ಯಭಾಮೆಯರರಸ ಸು- ಧಾಮ ತಂದವಲಕ್ಕಿ ಪ್ರೇಮದಿಂದಲಿ ಮೆದ್ದ 1 ಅಂಡಜವಾಹ ಬ್ರಹ್ಮಾಂಡಗಣಾತತ ಪಾಂಡುಕುವರನಿಗಾದನು ಭಂಡಿಸೂತ 2 ಆದರೀ ಕೃತಮಾಯ ಕೃತ್ಯಕದಂಡ ಸ- ನ್ಮುದದಿಂದ ವಿದುರನ ಮನೆಯ ಪಾಲುಂಡ 3 ಶ್ರೀವರೀವರಿಯಿಂದ ಸರಸಮಾಡುತಲಿರೆ ಗೋಪಿಯರಿಗೆ ಮೆಚ್ಚಿ ಗೋವುಗಳ ಕಾಯ್ದ 4 ಗೊಲ್ಲರ ಹುಡುಗರ ಪೆಗಲೇರಿ ಮೆರೆದ 5 ಘೋರ ಸಂಸಾರಪಹಾರಿ ನಾರದ ವಂದ್ಯ ಜಾರ ಚೋರ ಕೃತ್ಯ ತೋರಿದ ವರದ 6 ಮಾನವ ದೈತ್ಯ ಗಣರಿಗಾಧಾರ ಮ- ತ್ತಾವ ಕಾಲಕು ಭೇದಭೇದವ ಸೇರಾ 7 ತೇಜಸ್ತಿಮಿರಾದಿ ಸೋಜಿಗ ಶಕ್ತಿಮ- ಹೋಜಸನೀತ ಪರಾಜಯ ರಹಿತಾ 8 ಪರದೇಶಿಯ ಮೇಲೆ ಕರುಣ ಕಟಾಕ್ಷದಿ ಸಿರಿಯೊಡಗೂಡಿ ಬಂದಿರುವ ಶೃಂಗಾರ 9 ಸರ್ವಕಾಲದಿ ತನ್ನ ನೆನವಿತ್ತು ದುಷ್ಕøತ ಪರ್ವತಗಳ ಪುಡಿ ಮಾಡುವ ಧೀರ 10 ತನಯನ ಕಲಭಾಷೆ ಜನನಿ ಲಾಲಿಸುವಂತೆ ಸಾರ 11 ಪೋರಭಾವವ ಶುಭವೇರಿಸುವನು ತುಷ ವಾರಿಯು ಗಂಗೆಯ ಸೇರುವಾಕಾರ 12 ವಿದ್ಯ ಬುದ್ಧಿಗಳಿಲ್ಲದಿದ್ದರು ದಾಸರ ನಿರವದ್ಯ ಬೇಗದಲಿ 13 ಸನ್ನುತ ಕರ್ಮವ ಮನ್ನಿಸನೆಂದಿಗು ಮುರನರಕಾರಿ 14 ಚಿಂತಾಕ್ರಾಂತಿಗಳಿರದಂತೆ ಸರ್ವದ ನಿ- ರಂತರ ಪೂಜೆಗೊಂಬರ ಚಕ್ರಧಾರಿ 15 ನಿರುಪಮಾನಂದ ನಿರ್ಭರ ಪುಣ್ಯಮೂರ್ತಿ ಶ್ರೀವರ ಶೇಷ ಭೂಧರವರನ ಸತ್ಕೀರ್ತಿ 16
--------------
ತುಪಾಕಿ ವೆಂಕಟರಮಣಾಚಾರ್ಯ