ಒಟ್ಟು 661 ಕಡೆಗಳಲ್ಲಿ , 84 ದಾಸರು , 550 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯದೇವ ಜಯದೇವ ಜಯ ರಾಘವ ರಾಮಾ ದಯದಲಿಯಚ್ಚರನೀವದು ಸ್ಮರಿಸಲುತವನಾಮಾ ಪ ಹಭವ ಭವಮುಖರಮೊರೆಯನು ಕೇಳುತಲಿ ದಶರಥ ಕೌಲಸ್ಯರಾ ಬಸಿರಿಂದುದಿಸುತಲಿ ರುಷಿ ಮುಕರಕ್ಷಿಸಿ ತಾಟಕಿ ದೇಹದಿಬಿಡಿಸುತಲಿ ವಸುಧಿಲಿ ಶಿಲೆಯನು ಪಾದದದಿಮೆಟ್ಯುದ್ಧರಿಸುತಲಿ 1 ಹರುಷದಿ ಕೌಶಿಕನೊಡನೆ ಮಿಥಿಲೆಗೆ ಪೋಗುತಲಿ ಹರದು ಮುರಿದು ಜನಕಜೆ ಮಾಲೆಯ ಧರಿಸುತಲಿ ಬರಲಾನಂದದಿ ಭೃಗುಪತಿ ದಶರಥ ದರಶನ ಪಾಡುತಲಿ ಅರಸುತನಕ ಕೈಕೆಯು ಬ್ಯಾಡೆನೆ ನಡೆದೈತ್ವರಿಲಿ 2 ವನದಲಿ ಭಂಗಿಸಿಶೂರ್ಪನಖಿಖರ ದೂಶಣರಾ ಅನುವರ ಕಾಂಚನ ಮೃಗವಾ ಬೆಂಬೆತ್ತಲು ದೂರಾ ಜನಕಜೆಯಾಕೃತಿ ವೈಯ್ಯಲು ಕಪಟದಿದಶಶಿರಾ ಅನುಭಜಟಾಯುವಿನಿಂದಲಿ ಕೆಳಿ ನಡದೆ ಧೀರಾ 3 ಪಥದಲಿ ಮುರಿದುಕಬಂಧವ ಶಬರಿಗೆ ಗತಿನೀಡಿ ಪ್ರಥಮದಿ ಹನುಮನ ಕಂಡು ವಾಲಿಯ ಹತಮಾಡಿ ರತಿಯಲಿ ಸುಗ್ರೀವಜಾಂಭವ ಸೈನ್ಯದ ಲೋಡಗೂಡಿ ಕ್ಷಿತಿಜೆಯಾ ಸುದ್ದಿಯತರಿಸಿ ನಡೆದೈನಲಿದಾಡಿ 4 ಸೇತುವೆ ಗಟ್ಟಿಸಿ ಶರಣವ ಬರಲು ವಿಭೀಷಣನು ಭೀತಿಯ ಹಾರಿಸಿಸೈನ್ಯದಿ ದಾಟಿದೆ ಶರಧಿಯನು ನೀತಿಯ ತಪ್ಪಿದ ರಾವಣ ಕುಂಭಶ್ರವಣರನು ಖ್ಯಾತಿಲಿ ಮಡಹಿದೆ ಅವರಾಸಂತತಿ ಸಂಪದನು 5 ಶರಣಗಸ್ಥಿತಪರಪದವಿತ್ತು ದೇವರ ಶೆರೆಬಿಡಿಸಿ ಮರಳಿದಯೋಧ್ಯಕಪುಷ್ಪಕದಿಂ ಸೀತೆಯವರೆಸೀ ಮೆರೆವತ್ಸಜರಜನನಿಯರ ಸಕಲರಸುಖಬಡಿಸಿ ಸುರಮುನಿಜನರನುಸಲಹಿದೈ ಸಾಮ್ರಾಜ್ಯವನು 6 ನಾಮದಮಹಿಮೆ ಹೊಗಳಲು ಶೃತಿಗಳಿಗಳವಲ್ಲಾ ಪ್ರೇಮದಿಸವಿಸದುಂಬುವ ಶಿವ ಸೀತಾಬಲ್ಲಾ ನೇಮದಿಸುರನಂದಾನ್ನರ ಬವ ತರಿಸಿದರಲ್ಲಾ ಕಾಮಿತ ದಾಯಕ ಗುರುಮಹಿಪತಿ ಪ್ರಭುಶಿರಿನಲ್ಲಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯಮಂಗಳಂ ಶುಭೋದಯ ಮಂಗಳಂ ಜಯ ಕಕುದ್ಗಿರಿ ಗಂಗಾಧರ ಲಿಂಗಗೆ ಪ ಜಡೆಯುಡುಪತಿಯು ಗಂಗೆಯೊಡಗೂಡ್ದ ಮಸ್ತಕಕೆ ಮಡುಹಿ ಮಾರನ ಭಸಿತದಾಳ್ದ ಪಣೆಗೆ ಪೆಡೆಯೆತ್ತಿ ಗಾನಗೈವಹಿ ಕುಂಡಲಂಗಳಿಗೆ ದೃಢಭಕತರಿಷ್ಟದಾಯಕ ಶಿವನಿಗೆ 1 ಸೋಮಸೂರ್ಯಾಗ್ನಿ ಲೋಚನೆಗೆ ವಿಷದಾಳಿ ಸುರ ಸ್ತೋಮವನು ಕಾಯ್ದ ಶೋಭನ ಕಂಠಕೆ ಭೀಮನಿಗೆ ಭಯಹರಗೆ ಪರಶುಮೃಗ ಹಸ್ತನಿಗೆ ಕಾಮಿತಾರ್ಥದ ವರಾಭಯ ಕರನಿಗೆ 2 ನಾಗಕಂಕಣಧರಗೆ ನಾಗೋತ್ತರೀಯನಿಗೆ ನಾಗಯಜ್ಞೋಪವೀತವ ತಾಳ್ದಗೆ ನಾಗಚರ್ಮಾಂಬರಗೆ ನಗರಾಜ ಚಾಪನಿಗೆ ಗಮನ ಬಾಣಗೆ ಶಿವನಿಗೆ 3 ಗಿರಿಜೆಗರ್ಧಾಂಗವನ್ನಿತ್ತ ಶುಭವಿಗ್ರಹಗೆ ವರ ವೃಷಭವನ್ನೇರಿ ಸಂಚರಿಪಗೆ ಬರೆದುಂಗುಟದಿ ಹೊಳೆದ ಚಕ್ರದಿಂ ದೈತ್ಯಕುಲ ಹರಣ ವರದಾಯಕಗೆ ಸರ್ವೆಶಗೆ 4 ತಿರುಪತಿಯ ವಾಸವನು ದೃಢಗೈದು ಕಕುದ್ಗಿರಿಯ ಪರಮ ಕ್ಷೇತ್ರದಿ ಮಹಿಮೆಗಳ ತೋರ್ಪಗೆ ವರದ ವೆಂಕಟಪತಿಗೆ ಗಂಗಾಧರೇಶ್ವರಗೆ ಶರಣಾಗತರ ಕಾಯ್ವ ಸಾಂಬಶಿವಗೆ 5
--------------
ತಿಮ್ಮಪ್ಪದಾಸರು
ಜಯಾ ಜಯಾ ಪ ಈ ಮುದ್ದುಮುಖವೊ ಮತ್ತೆ ತನುವಿನ ಕಾಂತಿ ಈ ಬಿಲ್ಲು ಈ ಬಾಣ ನಿಂತಭಾವ 1 ಬಂಟ ಈ ಭಾಗ್ಯ ಆವ ದೇವರಿಗುಂಟು ಮೂಲೋಕದೊಳಗೆ 2 ಜಯ ಇನಕುಲೋದ್ಧರಣ ಜಯ ಮುನಿಕೃತ ಶರಣ ಜಯ ದನುಜವಿದಾರಣ ಜಯ ತಮಹರಣ 3 ಧರೆಯೊಳತಿಭಾರವನು ಇಳುಹಿ ಕಮಲಜ ಮುಖ್ಯ ಸುರರ ಮೊರೆಯನು ಕೇಳ್ದು ನರರೂಪ ತಾಳ್ದು 4 ದಶರಥನ ಗರ್ಭದಲಿ ಜನಿಸಿ ಮುನ್ನ ಮುನಿ ಮನೋರಥ ಕಾಯಿದ ಪುಣ್ಯಚರಿತ್ರ5 ಅಸುರರನು ಅಳಿದು ಅಹಲ್ಯಳಿಗಿತ್ತ ವರವಿತ್ತು ಮಿಥಿಳ ಪುರದಿ ಹರನ ಧನುವನುರೆ ಮುರಿದು 6 ಅತುಳ ಬಲದಲಿ ಸೀತೆಯ ಒಲಿಸಿದ ಭಾರ್ಗವ ಮ- ಹಿತÀಳ ಬಲವಂತ ದೇವೋತ್ತುಂಗ ಜಯತು 7 ಭರದಿಂದಲಯೋಧ್ಯಾಪುರವನು ಶೃಂಗರಿಸೆ ಹರುಷತನದಲಿ ರಾಮಗರಸುತನವೆನಲು 8 ಕಿರಿಯ ಮಾತೆಯು ಬಂದು ಭರತನಿಗೆ ಪಟ್ಟವೆನೆ ಸಿರಿಸಹಿತ ಹೊರಹೊಂಟ ಕರುಣಾಳು ಜಯತು 9 ಅನುಜ ಅವನಿಜೆ ಸಹಿತ ವನವಾಸವ ಮಾಡಿ ವನಜಾಕ್ಷ ಪತಿಯಾಗೆಂದು ರಾಕ್ಷಸಿಯು ಬರಲು 10 ಅನುವಾಯಿತೆಂದು ನಾಸಿಕವ ಹರಿದು ಭಂಗಿಸಿದೆ ಬಿನುಗು ಹೊಮ್ಮøಗವೆಚ್ಚ ಘನಮಹಿಮ ಜಯತು 11 ಜಕ್ಕಿದ ವಾಲಿಯನು ಕೊಂದು ಕುಲಸೈನ್ಯ ಸಹವಾಗಿ ನಿಲ್ಲದೆ ಸೇತುವೆಗಟ್ಟಿ ಅಸುರರೊಡಗೂಡಿ 12 ಖುಲ್ಲ ದಾನವ ಕುಂಭಕರ್ಣ ರಣಮುಟ್ಟಿ ಎಲ್ಲರನು ತರಿದಂಥ ಬಲ್ಲಿದನೆ ಜಯತು 13 ದÉೀವಕ್ಕಳು ಹರುಷದಲ್ಲಿ ಪೂಮಳೆಗರೆಯೆ ಭೂಮಿಜೆಯ ಸಹಿತ ಸೌಮಿತ್ರಿಯೊಡಗೂಡಿ 14 ಕ್ಷೇಮದಿಂದಯೋಧ್ಯಪುರದಿ ಸುಖದಲ್ಲಿರ್ದ ಸ್ವಾಮಿ ಶ್ರೀಹಯವದನ ರಘುಕುಲತಿಲಕನಲ್ಲವೆ 15
--------------
ವಾದಿರಾಜ
ಜಾಹ್ನವಿ ಜಗತ್ರಯ ಪಾವನಿ ಪ್ರಣತಕಾಮದೆ ಪದ್ಮಜಾಂಡ ಸಂಭೂತೆ ಪ ಸೃಷ್ಟೀಶ ಪದಜಾತೆ ವಿಶ್ವಮಂಗಳ ಮಹೋ ತ್ಕøಷ್ಟ ತೀರ್ಥಗಳೊಳುತ್ತಮಳೆನಿಸುವೇ ಕಷ್ಟವರ್ಜಿತವೆನಿಪ ತ್ರಿಪಥಗಾಮಿನಿ ದಯಾ ದೃಷ್ಟಿಯಿಂದಲಿ ನೋಡು ಪ್ರತಿದಿನದಿ ಎನ್ನಾ 1 ಕರ್ಮ ಸಾಕ್ಷಿಯೆನಿಸುತಿಹ ಅರ್ಕದೇವನು ಬಂದ ಸಮಯದಲ್ಲಿ ಶರ್ಕರಾಹ್ವರು ಸ್ನಾನಗೈಯೆ ದುರಿತಗಳು ಸಂ ಪರ್ಕವಾಗದ ತೆರದಿ ಸಂತೈಪೆ ದಯದಿ 2 ಕಾರುಣಿಕ ಬಹಿರಾವರಣದಿಂದ ನೀ ಪೊರಟು ವಾರಾಹಿಯೊಡಗೂಡಿ ಭಕ್ತಜನರ ಪ್ರಾರಬ್ಧ ಕರ್ಮಗಳನುಣಿಸಿ ಮುಕ್ತರನ ಮಾಳ್ಪೆ ದೂರಗೈಸುವೆ ಸಂಚಿತಾಗಾಮಿಗಳನೂ 3 ನಂದಿನೀ ನಳಿನಿ ಸುಸೀತಾ ಮಲಾಪಹರ ಳೆಂದ ಮಾತ್ರದಿ ಪುನೀತರನು ಮಾಳ್ಪೆ ಸಂದರುಶನ ಸ್ವರುಶನ ಸ್ನಾನಗಳ ಫಲ ಪು ರಂದರಾರ್ಯರೆ ಬಲ್ಲರಲ್ಪರು ಅರಿಯರು 4 ಮಾತೆ ವಿಜ್ಞಾಪಿಸುವೆ ಬಿನ್ನಪವ ಕೇಳು ಸಂ ಪ್ರೀತಿಯಿಂದಲಿ ಕರುಣಿಸೆನಗೆ ಇದನೆ ಶ್ರೋತವ್ಯ ವಕ್ತವ್ಯ ಮಂತವ್ಯ ಸ್ತವ್ಯ | ಜಗ ನ್ನಾಥ ವಿಠ್ಠಲನೊಬ್ಬನೆಂದು ತಿಳಿವಂತೇ5
--------------
ಜಗನ್ನಾಥದಾಸರು
ಜಿತಮನವ ನೀಡೆನಗೆ ಜಿಷ್ಣುಸಖನೆ ರತಿಪತಿಪಿತ ನಿನ್ನ ಹಿತದಿ ಭಜಿಸುವೆನೊ ಪ. ದುಷ್ಟ ಇಂದ್ರಿಯಗಳು ಕೆಟ್ಟ ವಿಷಯಗಳಲ್ಲಿ ಕಟ್ಟ್ಟೆ ಎನ್ನಯ ಮನವ ಸೆಳೆಯುತಿಹವೊ ಕೃಷ್ಣಮೂರುತಿ ನೀನೆ ದೃಷ್ಟಿಯಿಂದಲಿ ನೋಡಿ ಒಟ್ಟುಗೂಡಿಸಿ ನಿನ್ನ ಪಾದದಲ್ಲಿಡಿಸೊ 1 ಎಂಟು ಜನ ದುಷ್ಟರು ಆರು ಜನ ಕಳ್ಳರು ಕಂಟಕರಾಗಿನ್ನು ಕಾಡುತಿಹರೋ ಎಂಟುದಳಗಳಿಪ್ಪ ನೆಂಟರೆನಗಾಗರೊ ಎಂಟೆರಡು ಇಂದ್ರಿಯವ ಬಂಧನದೊಳಿರಿಸೊ 2 ಮೂರು ತಾಪಗಳಿಂದ ಮೂರು ಗುಣದೊಳು ತಿರುಗಿ ಮೂರು ಮಾರ್ಗವ ಕಾಣೆ ಮುರವೈರಿಯೆ ಮೂರು ಅವಸ್ಥೆಗಳ ವಿವರವರಿಯದ ಎನಗೆ ದಾರಿ ತೋರಿ ಸಲಹೊ ಕಾರುಣ್ಯನಿಧಿಯೆ 3 ಡಿಂಬ ಮಧ್ಯದಲಿರುವ ಅಂಬರದಲಿ ನಿನ್ನ ಬಿಂಬರೂಪವ ತೋರೊ ಶಂಭು ಸಖನೆ ಅಂಬುಜನಾಭ ಎಪ್ಪತ್ತೆರಡು ಸಾಹಸ್ರ ತುಂಬಿದ ನಾಡಿಯೊಳು ರೂಪಗಳ ತೋರೊ4 ಮನದಲ್ಲಿ ನೆಲಸಿಹನೆ ಮನುಶಬ್ದವಾಚ್ಯನೆ ಮನದಿಂದ ಭಿನ್ನನೆ ಮನಪ್ರೇರಕ ಮನವ ನಿನ್ನಲಿ ನಿಲಿಸಿ ಅನುಗಾಲ ಸಲಹುವುದು ಚಿನುಮಯನೆ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಜ್ಞಾನದ ಬೆಳೆಯನು ಬೆಳೆಯೊ ಶ್ರೀಗುರುಬಲವನು ನೀ ಪಡೆಯೋ ಪ ನಾದಗಳೆತ್ತನು ಹೂಡು ಅದಕೆ ತ್ರಿಗುಣದ ಕೂರಿಗೆ ಜೋಡುಬೋಧದ ಬೀಜವು ನೋಡು ಮನಸಿನ ಹೊಲದಲಿ ಬಿತ್ತಿಬಿಡು 1 ಕರ್ಮ ಕಸವ ಕಳೆದುನಿರ್ಮಳ ಬೆಳೆಗೊಂಡು ಗುರು ತಾ ಸ್ವರ್ಮಣಿ ಬಲಗೊಂಡು 2 ತೇಜರಾಶಿಗಳನೆಳೆದು ರಾಜಿಪ ರಾಜ ಕೊಳಗದಲಿ ಅಳೆದುಭೋಜನಕೆ ಎಡೆಮಾಡಿ ಚಿದಾನಂದ ಸಹಜ ಮೂರುತಿಗೂಡಿ3
--------------
ಚಿದಾನಂದ ಅವಧೂತರು
ಡಂಕಿ ಹೊಯ್ಸಿದ ನಮ್ಮ ವೆಂಕಟರಾಯನು ಪಂಕಜಾಕ್ಷರ ಮುಯ್ಯ ತಿರುಗಿಸಿ ಅಸಂಖ್ಯ ರಾಜರು ಬರಬೇಕೆಂದುಪ. ಸುರರು ಮೊದಲೆ ತೀವ್ರದಿಂದ ಬರಬೇಕೆಂದುಭೇರಿನಾದವ ಮಾಡಿದ ಕೃಷ್ಣಬಾರೆ ಬಾರೆ ಭಾಗ್ಯನಿಧಿಯೆ1 ಬೊಮ್ಮಮೊದಲಾದ ಸುರರುತಮ್ಮ ತಮ್ಮ ಸತಿಯರಿಂದ ಝಮ್ಮನೆ ಮುಯ್ಯಕ್ಕೆ ಬರಬೇಕೆಂದುರಮ್ಯಕಾಳಿ ಹಿಡಿಸಿದ ಕೃಷ್ಣ2 ಇಂದ್ರ ಮೊದಲಾದ ಸುರರುಚಂದ್ರ ಸೂರ್ಯರೊಡಗೂಡಿತಂದೆ ರಾಮೇಶನರಮನೆಗೆಒಂದು ಕ್ಷಣದಿ ಬರಬೇಕೆಂದು3
--------------
ಗಲಗಲಿಅವ್ವನವರು
ತತ್ವಸುವಾಲಿಗಳು ಓಂಕಾರ ಪ್ರತಿಪಾದ್ಯ ಶ್ರೀಕಾಂತನೇ ನಿನ್ನ ಭವ ಭಂಗವ ಗೈಸಿ ಶುಭಾಂಗನೆ ಕಾಯಯ್ಯ ಶ್ರೀರಂಗ 1 ಕಾಲತÀ್ರಯಕೃತ ವಿಕಾರವಿಲ್ಲದೆ ನೀನೆ ಮೂಲರೂಪನೆ ಬಹು ರೂಪ-ಬಹುರೂಪ ಸ್ವಗತಭೇದ ವಿವರ್ಜಿಕನೆ ಸಲಹಯ್ಯ 2 ಆವಕಾಲಕು ನೀನೆ ಚತುರ ರೂಪದೊಳಿದ್ದು ಜೀವ ನಿಯಾಮನು ನೀನಾಗಿ-ನೀನಾಗಿ ವಿಶ್ವ ತೈಜಸ ಪ್ರಾಜ್ಞ ತುರ್ಯಾತ್ಮ3 ಶುಭ ವಿಷಯಂಗಳಾ ಮಾಡಿ ಉಣಿಸುವೆ 4 ವಿಶ್ವದಲಿ ವ್ಯಾಪಿಸಿಹೆ ವಿಶ್ವನಂಬೋರು ನಿನ್ನ ನಾಶರಹಿತನೆಂದೂ ನರನೆಂದೂ-ನರನೆಂದೂ ನಿನ್ನ ವೈಶ್ವಾನರನು ಎಂದು ಪೇಳ್ವಾರೊ 5 ಹರಿ ನಿನ್ನ ವಿಶ್ವನೆಂದು ಉಪಾಸನೆಯನು ಮಾಡಿ ಹೇರಂಬ ನಿನ್ನ ಒಲಿಸಿದಾ-ಒಲಿಸಿದಾ ಗಜವಕ್ತ್ರನಾಗಿ ನಿನ್ನ ಸ್ತುತಿಪಾನೋ 6 ದೇಹದೊಳು ಸ್ವಪನದಲಿ ನೀ ನೀಡಿ-ನೀ ನೀಡಿ ಜೀವರುಪಭೋಗಿಸುವ ಸಾರವನು ರಕ್ಷೀಪೆ 7 ತೈಜಸನೆ ವಾಸನಾಮಯವೆಲ್ಲ ತೋರೀಪೆ8 ತತ್ವಗಳ ವ್ಯಾಪಾರವೇ ವ್ಯಾಪಾರ9 ಸುಪ್ತಕಾಲದಿ ಜೀವ ಸ್ವರೂಪಕೆ ತಕ್ಕ ಕ್ಲುಪ್ತ ಅಜ್ಞಾನ ಮೊದಲಾದ-ಮೊದಲಾದ ಕಾಲವನನುಸರಿಸಿ ಜೀವನಿಗೆ ತನ್ನ ತಿಳಿಯಗೊಡದೆ 10 ಪ್ರಾಜ್ಞಮೂರುತಿ ನೀನೆ ಹೃದಯಸ್ಥಾನದೊಳಿದ್ದು ಅಜ್ಞಾನಿ ಜೀವನ ಕಾಲಾವ-ಕಾಲಾವ ನನುಸರಿಸಿ ಜೀವ ಸ್ವರೂಪಾನಂದವÀನು ನೀನೀವೆ11 ಸ್ವಪನ ಜಾಗ್ರತ ಜ್ಞಾನವಿನಿತಿಲ್ಲವೆಂದು ಕೂಡುವ ಜೀವ ಆನಂದ ಹಿಂದೆಂದೂ ಕಾಣನೊ12 ಘನ ಬಹಿ ಪ್ರಾಜ್ಞ ತೈಜಸಾಂತ ಪ್ರಾಜ್ಞ ಘನ ಪ್ರಾಜ್ಞ ಮೂರುತಿ-ಮೂರುತಿ ಗಳುಪಾಸನೆ ಮಾಳ್ವ ಬುಧರೇನು ಧನ್ಯರೊ 13 ನಾಗಿ ನೀ ಕೊಡುತಿರುವೆ ಮುಕ್ತರಿಗೆ ಆನಂದ 14 ಮುಕ್ತರಿಗೆ ದೃಷ್ಟನೋ ಅದೃಷ್ಟನೋ ಅ- ಗುರುಪ್ರಾಣನನುಗ್ರಹದಿ ಲಭ್ಯನಹುದಯ್ಯಾ ಹೇ ಜೀಯ 15 ಕಣ್ಮನ ಹೃದಯ ತ್ರಿಧಾಮಗಳಲ್ಲಿ ಇದ್ದು ಉಣಿಸೂವೇ ಜೀವರಿಗೆ ಫಲಭೋಗ-ಫಲಭೋಗವು ವಿಶ್ವತೈಜಸ ಪ್ರಾಜ್ಞ ಸ್ಥಿತಿಯೊಳು 16 ಸರ್ವರೂಪವು ಪೂರ್ಣ ಸರ್ವಗುಣ ಸಂಪೂರ್ಣ ಸರ್ವೋತ್ಪಾದಕ ಸುಖರೂಪಿ-ಸುಖರೂಪಿ ಸರ್ವಲೋಕ ಜೀವರೊಳಿದ್ದು ನಿರ್ಲಿಪ್ತಾ 17 ವರ್ಣತ್ರಯಯುತ ಓಂಕಾರದೊಳಾದ್ಯವರ್ಣ ವಿಶ್ವ ನೀನೆ-ವಿಶ್ವನು ನೀನೆ ಉಕಾರವೇ ತೈಜಸನು ಮಕಾರ ವಾಚ್ಯನೇ ಶ್ರೀಪ್ರಾಜ್ಞ 18 ನಾದದೊಳು ನೀ ವಾಚ್ಯ ತುರ್ಯರೆಂಬೋರು ನಿನ್ನ ಸದನವಾಗಿಹುದೈ ಶಿರಸ್ಥಾನ-ಶಿರಸ್ಥಾನ ನಾಶಿಕಾಗ್ರದಿ ಊಧ್ರ್ವ ದ್ವಾದಶಾಂಗುಲದಲ್ಲಿ ನೆಲೆಸಿರ್ಪೆ 19 ತೈಜಸನೊಡಗೂಡಿ ವಾಸನಾ-ವಾಸನಾಮಯ ಕಳೆವ ಅಜ್ಞಾನಿ ಜೀವನನ್ನಾಡಿಸುವೆ ಶ್ರೀಪ್ರಾಜ್ಞ 20 ಸರ್ವಶಕ್ತನು ನೀನೆ ಸರ್ವಕತರ್Àನು ನೀನೆ ಸವೋತ್ತಮನು ನೀನೆ ಸರ್ವಜ್ಞ-ಸರ್ವಜ್ಞ ಪೂರ್ಣಪ್ರಜ್ಞಾಂತರ್ಯಾಮಿ ಸಲಹಯೈ21 ಪಲವಿಲ್ಲ ವಾಸುದೇವನೆ ನಿನ್ನ ದಯ ಬೇಕೊ 22 ನೀ ಸುಮ್ಮನಿರದೆ ಎನ್ನನೂ-ಎನ್ನನು ಪ್ರೇರಿಸುವೆ ಲೇಸುಮನ ನಿನ್ನಲ್ಲಿ ನೆಲೆಸಲೋ 23 ಕಂಡಕಂಡಲ್ಲಿ ನಾ ಉಂಡುಂಡು ಓಡಾಡಿ ಧಾಂಡಿಗನಾಗಿ ಬೆಳೆದೆನೊ-ಬೆಳೆದೆನೊ ಪುಂಡರೀಕಾಕ್ಷ ನಿನ್ನ ಮರೆತೆನೋ24 ಅವಾವ ಕಾಲದೊಳು ನೀನಿದ್ದು ಉಣಿಸುವೆ ಜೀವಕೃತ ಕರ್ಮಫಲಗಳ-ಫಲಗಳ ಶ್ರೀ ವೇಂಕಟೇಶ ನೀನಿತ್ತು ಸಲಹೂವೇ 25 ವಂದನೆಯು ಒಂದೆ ಮನದಿಂದೆ-ಮನದಲಿ ನಿನ್ನ ಪಾದಾರವಿಂದವ ತೋರಯ್ಯ26 ಬಂಧುಗಳು ಹಿತರೆನ್ನೆ ಬಂಧಕರಾಗಿಹರು ಬಂಧನಕೆ ನಾ ಇನ್ನು ಸಿಲುಕಿದೆ 27 ಘನವಾಗಿ ತನು ಬೆಳೆಸಿ ಹಿತದಿಂದ-ಹಿತದಿಂದ ಮುಂದೆ ಪರಗತಿಯ ಕಾಣುವುದೆಂತೊ ಗೋವಿಂದ28 ವಿತ್ತಾಪಹಾರಕರು ಹೃತ್ತಾಪಕಳೆವರೆ ಉತ್ತಮಗತಿಯ ತೋರಿಸು29 ಹರಿಕಥಾಪುರಾಣಶ್ರವಣ ನಿತ್ಯದೀ ಮಾಡೀ ಪರಿಯಿಂದ ನಿಜತತ್ವವರಿಯಾದೆ-ಅರಿಯಾದೆ ಬರಿದೇ ವಿಪರೀತ ಜ್ಞಾನಕೆ ವಶನಾದೆ30 ಮದ್ಯ ತುಂಬಿದ ಭಾಂಡ ಗದ್ಗುಗೆಯ ಮೇಲಿಟ್ಟು ಶ್ರಧ್ದೆಯಿಂದಲಿ ಅದನ ಪೂಜಿಸೆ-ಪೂಜಿಸೆ ಪೂತÀ ದುರ್ಗಂಧ ಫಲವದು ಬಿಟ್ಟೀತೆ 31 ಮಂದಹಾಸದಿ ಜನರ ಸಂದೋಹದಲಿ ಕುಳಿತು ನಿಂದೆ ಮಾತುಗಳಾಡಿ ಮದತುಂಬೀ-ಮದತುಂಬಿಬಿದಾ ದುರ್ಮ ದಾಂಧರಿಗೆ ಗತಿಯು ಮುಂದೆ ಇನ್ನೆಂತೊ32 ಕಂಡಕಂಡವರಲ್ಲಿ ಕೊಂಡೆ ಮಾತುಗಳಾಡಿ ಪುಂಡರೀಕಾಕ್ಷ ನಿನ್ನ ಸ್ಮರಿಸಾದೆ-ಸ್ಮರಿಸದಲೆ ಪರದಿ ಯಮದಂಡಕ್ಕೆ ಗುರಿಯಾದೆ33 ಹಿಂದೆ ಮಾಡಿದ ಪುಣ್ಯದಿಂದ ಇಂದಿನ ಭಾಗ್ಯ ವೆಂದು ತಿಳಿದು ಮುಂದೆ ನಡೆಯಾದೆ-ನಡೆಯಾದೆ ತಿಳಿಗೇಡಿ ಬುದ್ಧಿಯಿಂದ ಕುಂದುಪೊಂದುವೆ 34 ಬಾಯಿಮಾತಲ್ಲ ಶ್ರೀ ತೋಯಜಾಕ್ಷನ ಭಕ್ತ- ರಾಯತನ ತಿಳಿವುದು ಶ್ರಮಸಾಧ್ಯ-ಶ್ರಮಸಾಧ್ಯ ವನು ಸದುಪಾಯದಿಂದ ತಿಳಿದು ನಲಿದಾಡೊ 35 ನಿಂದಕರ ನುಡಿಯಿಂದ ಹಿಂದೆ ಮಾಡಿದ ಪಾಪ ಒಂದೊಂದು ಪರಿಯಲ್ಲಿ ಪರಿಹಾರ-ಪರಿಹಾರವಾಗಿ ನಿಂದಕರು ಬಂಧನಕೆ ಬೀಳ್ವಾರೋ 36 ಸ್ಮøತಿಯುಕ್ತಿಯನೆ ಬಿಟ್ಟು ಯುಕ್ತಿಮಾತುಗಳಿಂದ ಹೊತ್ತು ಕಳೆಯುತ ಉನ್ಮತ್ತನೆನಿಸಿ-ಉನ್ಮತ್ತನೆನಿಸಿದವ ಇ- ನ್ನೆತ್ತÀ್ತ ಭವಶರಧಿಯ ದಾಟÀುವ 37 ಅರೆಘಳಿಗೆ ಕಳೆದುದಿಹ ನರಜನ್ಮ-ನರಜನ್ಮ ಬಂದುದು ನರಕಯಾತನೆಗಲ್ಲದಿನ್ನಿಲ್ಲ 38 ಪರಿಯಂತ ಉದರಭರಣಕಾಗಿ ಉದಧಿಶಯನ ನಾ ನಿನ್ನ ಭಜಿಸಾದೆ-ಭಜಿಸಾದೆ ಮದದಿಂದ ಬುಧಜನರ ನಿಂದೆಯ ಮಾಡೀದೆ39 ಇನ್ನಲ್ಲ ಪರಗತಿಯ ಸಾಧನ-ಸಾಧನವು ತನ್ನೊಳು ತÀನ್ನಿರವರಿತು ಸುಮ್ಮನಿರುವುದು ಅದು ನಿಧಾನ40 ಭಿನ್ನಧರ್ಮಂಗಳ ಗ್ರಹಿಸಾದೆ-ಗ್ರಹಿಸಾದೆ ನೀನೆಣಿಸಿದೆ ತನ್ನಗುಣಧರ್ಮದಂತನ್ಯರಿಹನೇನೊ 41 ಕಾಯವೇ ತಾನೆಂದು ಮಾಯಕೆ ಒಳಗಾಗಿ ಕಾಯಯಾತನೆಗೊಂಡು ನೋಯುವಾ 42 ವಚನ ವಚನವು ಸರ್ವ ಉಚಿತ ದೇಹದ ಕಾರ್ಯ ನಿಚಯದೊಳು ಹರಿ ಪ್ರಚುರನಾಗಿ-ಪ್ರಚುರನಾಗಿ ಕಾಯಕುಪಚಯವಿತ್ತು ಸಲಹೂವ 43 ದೇಹ ಕಾಯದ ಕಾರ್ಯಪ್ರಕ್ರಿಯವ ತಿಳಿಯಾದೆ ಮಾಯೆಗೊಳಗಾಗದಿರು ಹೇ ಮಾನವಾ-ಮಾನವನೆ ತಿ- ಳಿಯೊ ಮಾಯಾರಮಣನ ಬಿಂಬಕ್ರಿಯವಾ44 ಅನ್ಯರೊಳು ನೀ ಹೋರಾಡಬಲ್ಲೆಯ-ಬಲ್ಲೆಯಾ ನಿನ್ನ ವೈರಿಗಳ ಜಯಿಸಲರಿಯದ ಖೂಳ ರಣಹೇಡಿ 45 ಕೊಳೆತು ನಾರುವ ದೇಹದೊಳಗಿರುವ ಹುಳುಕುಗಳ ಕೊಳೆಯ ಕಳೆಯದ ಮನುಜ ನೀನೆಂತೊ-ನೀನೆಂತೊ ಕೊಳೆತÀ ಸಗಣಿಯೊಳಗಿಹ ಹುಳುವೆ ನಿನ್ನ ಗತಿಯೆಂತೊ46 ಆದದ್ದು ಆಯಿತು ಯತ್ನ ತಪ್ಪಿತು ಎಂದು ಹೆದ್ದಾರಿ ಹಿಡಿದು ಪರಮಾರ್ಥ-ಪರಮಾರ್ಥವ ಬುದ್ಧಿ ತಿದ್ದಿಕೊಳ್ಳಲು ಮುಂದೆ ಅನುವಾಗೊ47 ತತ್ತ ್ವದೇವತೆಗಳು ತತ್ತತ್ವಕಾರ್ಯಜಿ- ವೋತ್ತಮನಾಜ್ಞೆಯಿಂ ತಾವ್ ಗೈವರೊ-ತಾವ್‍ಗÉೈ ಯುತ್ತಲಿರೆ ನಾನೆತ್ತ ಮೃತ್ತಿಕಾಪ್ರತಿಮೆಯೋ48 ಒಂದೊಂದು ರೀತಿಯಿಂ ಚೆಂದಾಗಿ ಯೋಚಿಸು ಮಂದಮತಿಯು ನೀನು ಹಿಂದೆಂತೂ-ಹಿಂದೇನು ವಂದನೆಯೊಂದಲ್ಲದಿನ್ನಿಲ್ಲ49 ಡಾಂಭಿಕತನ ಬಿಟ್ಟು ಡಿಂಬದೊಳು ಸರ್ವದಾ ಅಂಬುಜನಾಭನೇ ಇಂಬಾಗಿ-ಇಂಬಾಗಿ ಸರ್ವತ್ರ ತುಂಬಿಕೊಂಡಿಹನೆಂದು ನಲಿದಾಡೋ 50 ತುಷ್ಟಿಯಾಗಿರು ನೀನು ಕೊಟ್ಟಷ್ಟು ಲಾಭಕ್ಕೆ ದುಷ್ಟವಿಷಯಗಳಿಗೆ ಎರಗಾದೆ-ಎರಗಾದೆ ಇರಲು ಸಂ- ತುಷ್ಟ ನಾಗುವನಯ್ಯ ಶ್ರೀಕೃಷ್ಣ51 ಕಾಯ ನಿನ್ನದು ಅಲ್ಲ ಮನವು ಅಧೀನವಲ್ಲ ಹೇಯವಿಲ್ಲದೆ ಮಾಯಕೊಳಗಾಗಿ ಮರುಳಾಗದಲೆ-ಮರುಳಾಗದಲೆ ಮಾಯಾರಮಣನ್ನ ನೆನೆಯೊ ನಿರ್ಭಯದಿಂದ 52 ಹಲವು ಶಾಸ್ತ್ರವ ನೋಡಿ ತಲೆಹರಟೆಯ ಬಿಟ್ಟು ಅಲವಬೋಧರ ತತ್ತ ್ವಸುಧೆಯನ್ನು- ಸುಧೆಯನ್ನು ಸವಿದು ನಿ-
--------------
ಉರಗಾದ್ರಿವಾಸವಿಠಲದಾಸರು
ತನ್ನ ತಾ ತಿಳಿಯುವದೆ ಜ್ಞಾನ ಮನಮುಟ್ಟು ಪೂರ್ಣ ಚೆನ್ನಾಗಿ ಸದ್ಗುರುವಿನ ಕೇಳಿರೊ ಖೂನ ಧ್ರುವ ತನು ಮನವಿಟ್ಟು ತಿಳಿವದೀ ಗುರುಗುಟ್ಟು ಧನ ದ್ರವ್ಯಾರ್ಜಿತವನಿಟ್ಟು ಕೇಳಿ ಕಿವಿಗೊಟ್ಟು ಅನುಬವದ್ಹೆಚ್ಚಿ ಮೆಟ್ಟು ಸಾಧಿಸಿ ವೈರಾಗ್ಯ ಕೊಟ್ಟು ಖೂನಮಾಡಿಕೊ ಬೇಕಿಟ್ಟು ಅನುಮಾನ ಬಿಟ್ಟು 1 ಗಿಳಿಯಾಡಿದಂತೆ ನುಡಿಯಾತಕ ಬಾಹುದು ನೋಡಿ ಹೇಳ್ಯಾಡಕೊಂಬುದೀಡ್ಯಾಡಿ ಮಾತಿನ ರೂಢಿ ಬೆಳಗಿನೊಳು ಬೆರದಾಡಿ ಘನಕ ಘನ ಕೂಡಿ 2 ನುಡಿ ನಡಿ ಒಂದಾದರೆ ವಸ್ತು ತಾನಿಹುದು ದೂರ ಬಿಡಲರಿಯದು ಹಾಂಗಾದರ ಎಂದಿಗಾರು ಒಡಗೂಡಿ ನೋಡಿದರೆ ತನ್ನೊಳು ತಾಂ ನಿಜ ಖರೆ ಸಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಪ್ಪು ಕ್ಷಮೆ ಮಾಡೊ ಕೃಪೆಯಿಂದ ನೋಡೊ ಧ್ರುವ ನೀನೆ ದಯಾನಿಧಿ ನಾನೆ ಅಪರಾಧಿ ಖೂನ ದೋರು ಹಾದಿ ಸ್ಥಾನ ನಿಜಗಾದಿ 1 ಅನಾಥನೆಂದು ನೋಡಿ ಸುನಾಥ ಎನ್ನ ಮಾಡಿ ಸ್ವಾನಂದ ಸುಖ ನೀಡಿ ಮನ್ನಾಥ ನಿಜಗೂಡಿ 2 ಹೆಳಲಾರೆ ಬಹಳ ಕೇಳೋ ನೀ ದಯಾಳ ತಾಳಿ ಎನ್ನ ತೋಳ ಬಾಳ ವಿಶ್ವಪಾಲ 3 ಸೇವೆ ಇದೆ ನಮ್ಮ ಭಾವಿಸುದು ನಿಮ್ಮ ಪಾವನಗೈಸು ವರ್ಮ ಸುವಿದ್ಯ ಪರಬ್ರಹ್ಮ 4 ಬಂದ ಮ್ಯಾಲೆ ಶರಣಕುಂದಬ್ಯಾಕೊ ಪೂರ್ಣ ಕಂದ ಮಹಿಪತಿ ಗುಣ ಚಂದಮಾಡೊ ಕರುಣ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಪ್ಪು ಕ್ಷಮೆ ಮಾಡೋ ಕೃಪೆಯಿಂದ ನೋಡೋ ಪ ನೀನೆದಯಾನಿಧಿ ನಾನು ಅಪರಾದಿ ಖೂನದೋರೋ ಹಾದಿ ಸ್ಥಾನ ನಿಜಾನಾದಿ 1 ಅನಾಥನೆಂದು ನೋಡಿ ಸನಾಥನೆನ್ನಮಾಡಿ ಸ್ವಾನಂದ ಸುಖನೀಡಿ ಮನ್ನಾಥ ನಿಜಗೂಡಿ2 ಹೇಳಲಾರೆ ಬಹಳಾ ಕೇಳೋನೀದಯಾಳಾ ತಾಳಿಯನ್ನ ತೋಲಾಬಾಲವಿಶ್ವಷಾಲಾ 3 ಸೇವಿ ಇದೇನಮ್ಮ ಭಾವಿಸುದು ನಿಮ್ಮ ಪಾವನ್ನಗೈಸು ವರ್ಮಾ ಸುನಿತ್ಯ ಪರಬ್ರಹ್ಮಾ 4 ಬಂದ ಮ್ಯಾಲೆ ಶರಣಾ ಕುಂದವ್ಯಾಕೋ ಪೂರ್ಣ ಕಂದ ಮಹಿಪತಿಗುಣಾ ಛಂದ ಮಾಡೋಕರುಣಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಾಂಬೂಲ ಪ್ರತಿಗ್ರಹವ ಮಾಡು ಮಾರಮಣಾಜಾಂಬೂನದಾಕಾರ ಜಲಜದಳನಯನಾ ಪಜಾಂಬವತಿ ಮೊದಲಾದ ಅಷ್ಟಮಹಿಯರೆಲ್ಲಸಾಂಬಾದಿ ಪುತ್ರರೊಡಗೂಡಿ ಸೇವಿಸಲುಸಾಂಬರಾಲಂಕಾರ ಸಕಲ ಭೋಗಂಗಳನುತಾಂಬೂಲವಿದು ಶೋಭನವ ಮಾಡುತಿಹುದಾಗಿ 1ಶ್ವೇತವರ್ಣದ ದಿವ್ಯ ನಾಗವಲ್ಲಿಗಳಿಂದಖ್ಯಾತಿವಡೆದಿಹ ಕ್ರಮುಕಫಲಗಳಿವರಿಂದನೂತನದ ಮೌಕ್ತಿಕದ ಚೂರ್ಣ ಕರ್ಪುರದಿಂದಪ್ರೀತಿುಡುವಂದದಲಿ ರಮ್ಯವಾಗಿರುತಿರುವ 2ಸ್ಫುರಿಸುತಿದೆ ನಿನ್ನ ಮಂಗಳಕಾಂತಿ ಸೂರ್ಯನಲಿಸ್ಫುರಿಸುತಿದೆ ಚಂದ್ರಾಗ್ನಿಗಳಲೀ ಪರಿಯಲಿಸ್ಮರಿಸಿದರೆ ಕೈವಲ್ಯ ಮೊದಲಾದ ಪದವೀವತಿರುಪತಿಯ ಸ್ಥಿರವಾಸ ಶ್ರೀ ವೆಂಕಟೇಶ 3 ಓಂ ನವನೀತ ನಟಾಯ ನಮಃ
--------------
ತಿಮ್ಮಪ್ಪದಾಸರು
ತಿಗಣೆಯ ಕಾಟವೇ ಕಾಟ-ಚಲ್ವ-ಸುಗುಣೆಯ ಕೂಟವೇ ಕೂಟಪ ಹಗಲಿರುಳೆನ್ನದೆ ಬಗೆಬಗೆ ರತಿಯೊಳು- ಸೊಗಯಿಸಿದೇಹಧಾತುಗಳನು ಕೆಡಿಸುವ ಅ.ಪ. ನಿಶಿಯೊಳಗನುದಿನ ಬಾಧಿಪ 1 ಹಾಸಿಗೆ ಮಂಚಾದಿಗಳಲಿ ಶರೀರದ ನಾಡಿಯನಿಲ್ಲಿಸುವ 2 ಸದ್ದಡಗಲು ಜತೆಗೂಡುತ-ಸುಖ-ನಿದ್ರೆಯ ಸಮಯವನೊಡುತ ನಮ್ಮ ನೊದ್ದಾಡಿಸುತಿಹ 3 ಹೆಗಲಿನ ಮೂಲದೊಳೇರಿ-ನಮ್ಮಬಗಲಿನ ಸಂದಿಗೆ ಸೇರಿ ಬೇಗದಿನುಗುಳಿಕದ್ದೋಡುವ 4 ಚಿಗಟದ ಹಿಂದೊಡಗೂಡಿ-ನಮ್ಮ-ತೊಗಟೆ ರಕ್ತದ ಸವಿನೋಡಿ ಬುಗುಟಿದ್ದಗಾಯವ ವಿಗಟವಮಾಡುವ 5 ನೋಟಕ ನೀನಾಗ ಬಹುದೆ-ಕಪಟ-ನಾಟಕಧಾರನೆ ಬರಿದೆ ನಿಶಾಟದಲ್ಲಣ ನಿನ್ನಕೂಟದ ಜನರಿಗೆ 6 ದುರಿತ ಕೋಲಾಹಲನೆಂದೆ-ನಿನ್ನ ಬಿರುದನು ಪೊಗಳುತ ನಿಂದೆ ಧರೆಯೊಳುತ್ತಮ-ಪುಲಿಗಿರಿಯೊಳು ನೆಲಸಿಹವರದವಿಠಲ ನಿನ್ನ ಶರಣರಾದವರಿಗೆ 7
--------------
ಸರಗೂರು ವೆಂಕಟವರದಾರ್ಯರು
ತೀರ್ಥಯಾತ್ರೆ ಎಂಬುದು ಇದೆ ನೋಡಿ ಪಾದ ಕೂಡಿ ಧ್ರುವ ಭ್ರೂಮಧ್ಯವೆಂಬುದಿದೆ ಕಾಶಿ ಬ್ರಹ್ಮಸುಖ ತುಳುಕುತಿದೆ ಸೂಸಿ ನೇಮದಿಂದಲಿ ನೋಡಲು ಧ್ಯಾನಿಸಿ ಕರ್ಮಪಾಶ ಹೋಯಿತು ಛೇದಿಸಿ 1 ತ್ರೀವೇಣಿ ಸಂಗಮ ಸುಕ್ಷೇತ್ರ ಜೀವ ಪ್ರಾಣ ಮಾಡಿತು ಪವಿತ್ರ ದಿವ್ಯ ದೇಹವಾಯಿತು ಸರ್ವಗಾತ್ರ ಭವಹಿಂಗಿ ಹೋಯಿತು ವಿಚಿತ್ರ 2 ಭ್ರಮರ ಗುಂಫ ಎಂಬುದು ಗಯಾ ನೇಮದಿಂದ ಕಂಡವಗ ವಿಜಯ ಪ್ರೇಮಭಾವೆಂಬುದು ಸರ್ವಕ್ರಿಯ ವರ್ಮದೋರಿತು ಗುರು ಪುಣ್ಯೋದಯ 3 ಪೃಥ್ವಿ ಪರ್ಯವಣಿದೆವೆ ನೋಡಿ ತತ್ವದೊಳೇಕತ್ವ ಸಮಗೂಡಿ ಹಿತತ್ವವೆಂಬ ದಯ ಮಾಡಿ ಕಥತ್ವವೆಂಬು ದೀಡಾಡಿ 4 ಕಣ್ಣ ದೋರಿ ಬಂತೆನಗ ತಾರ್ಕಣ್ಯ ಕಣ್ಣು ಕಂಡುಗೆಯಿತು ಧನ್ಯಧನ್ಯ ಚಿಣ್ಣ ಮಹಿಪತಿಗಿದೆ ಸರ್ವಪುಣ್ಯ ಇನ್ನೊಂದು ಪಥವ್ಯಾಕೆ ಅನ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತುತಿಸಬಲ್ಲೆನೆ ನಾ ನಿನ್ನೆ ವೆಂಕಟರನ್ನ ಪ ಪತಿ ನಿನ್ನ ಬ್ರಹ್ಮ ಪಾ ರ್ವತಿ ಪತ್ಯಾದ್ಯಳವಡದುತುಳ ಮಹಿಮೆಗಳ ಅ.ಪ. ನಮಿಪ ಜನರ ಕಲ್ಪದ್ರುಮ ದುಷ್ಟದಾನವ ದಮನ ದಿವಿಜಕುಲೋತ್ತಮ ಲಕ್ಷ್ಮೀ ಪವನಾದಿ ಸುಮನಸಾರ್ಚಿತ ಪಾದಕಮಲ ಯುಗ್ಮನೆ ಅನು ಕಾಯ ಹೃ ತ್ತಿಮಿರ ಭಾಸ್ಕರ ಶ್ರೀ ಭೂರಮಣ ಸರ್ವಗ ಸದಾ ಗಮವೇದ್ಯ ವೇದವ್ಯಾಸ ಕಪಿಲ ದತ್ತ ಕುಮುದಾಪ್ತ ಕೋಟಿ ಭಾಸಾ ತದ್ಭಕ್ತರ ಸಮುದಾಯಕೀಯೋ ಲೇಸಾ ಆನತ ಬಂಧು ಸುಮುಖ ಸುಲಭನೆಂದಾ ನಮಿಪೆ ಎನ್ನರಸಾ 1 ಘನಮಹಿಮನೆ ವೃಂದಾವನವಾಸಿ ಸ್ವಪ್ರಯೋ ಜನವಿವರ್ಜಿತ ಗೋವರ್ಧನಧಾರಿ ಗೋ ಗೋಪೀ ಜನ ಮನೋರಂಜನ ಜನಕಜಾರಮಣ ಪೂ ತನಿ ಪ್ರಾಣಾಂತಕ ವೇದವಿನುತ ಶ್ರೀ ವತ್ಸಲಾಂ ಕೌಸ್ತುಭ ಮಣಿ ವೈಜಯಂತೀ ಸ ದ್ವನ ಮಾಲಾಂಚಿತ ಕಂಧರಾ ಸತ್ಕಲ್ಯಾಣ ಗುಣ ಜ್ಞಾನಾತ್ಮಕ ಶರೀರಾ ಸಂತತ ನಿಷ್ಕಿಂ ಚನ ಭಕ್ತಜನಮಂದಾರಾ ವಂದಿಸುವೆ ಮ ನ್ಮನದಲಿ ನಿಲಿಸೋ ಕರುಣಾ ಪಾರಾವಾರಾ 2 ಕವಿಭಿರೀಡಿತ ಪುಣ್ಯ ಶ್ರವಣ ಕೀರ್ತನ ಮತ್ಸ್ಯಾ ದ್ಯವತಾರಂತರ್ಯಾಮಿ ಪ್ರವಿವಿಕ್ತ ಭುಗ್ವಿಭು ಭುವನ ನಿಧಿಯ ಪೆತ್ತ ಸವನ ತ್ರಯಾಹ್ವಯ ಶಿವರೂಪಿ ಶಿವದ ಭೂರ್ಭೂವಸ್ವಸ್ಥ ಸ್ವಶ ಭಾ ರ್ಗವ ನಿನ್ನೊಳಿಪ್ಪ ದಾನವನ ಸಂಹರಿಸುವ ನೆವದಿಂದ ದಾಶರಥೀ ಸಂಗಡ ಯುದ್ಧ ತವಕದಿ ಮಾಡಿ ಭೀತಿ ಬಟ್ಟವನಂತೆ ಅವನಿಗೆ ತೋರ್ದ ರೀತಿ ವರ್ಣಿಸಲಿನ್ನು ಪವನಮುಖಾದ್ಯರಿಗವಶ ನಿನ್ನಯ ಖ್ಯಾತಿ3 ಗತಶೋಕ ಗಾಯಿತ್ರಿ ಪ್ರತಿಪಾದ್ಯ ತತ್ವಾಧಿ ಪತಿಗಳೆನಿಸುವ ದೇವತೆಗಳೊಳಗಿದ್ದು ಮಾ ರುತನಿಂದ ಒಡಗೂಡಿ ಪ್ರತಿದೇಹಗಳಲಿ ಯೋ ಗ್ಯತೆಯನರಿತು ಕರ್ಮಗತಿಗಳನೀವೆ ಸಾಂ ಪ್ರತ ಬೇಡಿಕೊಂಬೆ ಆನತರ ಸಂತೈಸೆಂದು ಪ್ರಥಮಾಂಗ ಪ್ರಿಯ ಸತ್ತಮ ಸೌಭಾಗ್ಯ ಸಂ ಭೃತಸಾರ ಸರ್ವೋತ್ತಮ ನೀನೆ ಪಾಂಡು ಸುತರಾದ ಧರ್ಮ ಭೀಮಾ ಪಾರ್ಥರ ಕಾಯ್ದೆ ಪ್ರತಿಗಾಣೆ ನಿನಗೆ ಸಂತತ ಪರಂಧಾಮಾ 4 ಕಲಿ ಮುಖ್ಯ ದೈತ್ಯ ಗಂಟಲಗಾಣ ಗುರುತಮ ಬಲಿಬಂಧಮೋಚಕ ಸುಲಭ ಚೆತ್ಸುಖದಾಯಿ ಫಲ ಚತುಷ್ಟಯನಾಮ ಫಲಸಾರ ಭೋಕ್ತø ಶಂ ಬಲನಾಗಿ ಭಕತರ ಸಲಹುವ ಕರುಣಿ ಶಂ ಫಲಿಪುರವಾಸಿ ಬಾಂಬೊಳೆಯ ಜನಕ ಲಕ್ಷ್ಮೀ ನಿಲಯ ನಿರ್ಗತ ದುರಿತಾ ಮನ್ಮನದ ಚಂ ಚಲವ ಬಿಡಿಸೋ ನಿರುತಾ ಬೇಡಿಕೊಂಬೆ ತಲೆ ಬಾಗಿ ಸರ್ವಗತಾ ನೀನಹುದೆಂದು ತಿಳಿಸೋ ತೀವ್ರದಿ ಮುಪ್ಪೊಳಲುರಿಗನ ತಾತಾ 5 ಉದಿತ ಭಾಸ್ಕರನಂತೆ ಸುದತೇರಿಂದೊಡಗೂಡಿ ಉದರ ನಾಮಕ ನೀನು ಉದರದೊಳಿದ್ದೆನ್ನ ಉದಕಗಳಿಗೆ ನಿತ್ಯಾಸ್ಪದನಾಗಿ ಜೀವರ ಹೃದಯದೊಳಿರುತಿಪ್ಪೆ ಸದಸದ್ವಿಲಕ್ಷಣಾ ವಿಧಿಭವ ಶಕ್ರಾದಿ ತ್ರ್ರಿದಶರೊಂದಿತ ಪಾದ ಬದಿಗನಾಗಿರಲು ಪಾಪ ಕರ್ಮಗಳು ಬಂ ದೊದಗುವುವೇನೋ ಶ್ರೀ ಪಾ ಬಿನ್ನೈಸುವೆ ಬುಧ ಜನರಂತಸ್ತಾಪಾ ಕಳೆದು ನಿತ್ಯ ಬೆದರದಂದದಲಿ ಮಾಳ್ಪುದು ದೋಷ ನಿರ್ಲೇಪಾ 6 ಪಣಿಗಣ್ಣ ಸ್ವರದಿಂದಾಗ್ರಣಿಯಾದ ದುಷ್ಟ ರಾ ವಣನ ಬಾಹುಬಲ ಗಣಿಸಿದೆ ನಿಶಿತ ಮಾ ರ್ಗಣದಿ ಸದೆದು ವಿಭೀಷಣಗೆ ನೀ ಲಂಕಾಪ ಟ್ಟಣ ಭೋಗ ತತ್ಕಾಲ ಉಣಲಿತ್ತು ಭಕ್ತಗೆ ಪ್ರಣತ ಕಾಮದನೆಂಬೋ ಗುಣ ನಿನ್ನಲ್ಲಿದ್ದ ಕಾ ರÀಣದಿ ಪ್ರಾರ್ಥಿಸುವೆ ನಿನ್ನಾ ದಾಸರೊಳು ಗಣಿಸು ನೀ ದಯದಿ ಎನ್ನಾ ತಪ್ಪುಗಳ ನೀ ನೆಣಿಸಲಾಗದು ಪ್ರಸಾನ್ನಾ ಪಾಲಕನೆ ಕುಂ ಭಿಣಿಸುರರನು ಕಾಯೊ ಕ್ಷಣಾ ಲಕ್ಷ್ಮನಣ್ಣಾ 7 ಬಿಸಜ ಸಂಭವನ ನಿರ್ಮಿಸಿ ನಾಭಿಕಮಲದಿ ಸಶರೀರದೊಳು ಸುಮನಸರ ಪಡೆದು ನಿನ್ನಾ ಪೆಸರಿಟ್ಟು ಅವರವರೊಶನಾದೋಪಾದಿ ತೋ ರಿಸಿದಿ ನೀ ಸ್ವಾತಂತ್ಯ ಅಸಮನೆಸಿಕೊಂಡು ಬಸಿರೊಳಗಿಟ್ಟು ಪೊಂಬಸರಾದಿ ಸುರರ ಪಾ ಲಿಸುವಿ ನೀ ಪ್ರತಿ ಕಲ್ಪದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ವಾಸಿಸುತ ರ ಕ್ಕಸರನಂಧಂತಮದಿ ದಣಿಸುತಿಪ್ಪ ಪ್ರಸವಿತ್ತ ನಾಮ ವಂದಿಸುವೆ ಪ್ರಮೋದೀ 8 ಆಪದ್ಭಾಂಧವ ಬಹುರೂಪಾ ರುಕ್ಮಿಣೀಶಾ ತಾಪಸ ಜನರ ಹೃತ್ತಾಪದರ ಧರ್ಮ ಸುಜನ ಲೋ ಕೋಪಕಾರಕ ಧರ್ಮ ವ್ಯೂಪ ಊಧ್ರ್ವಗ ನಿರ್ಗು ಣೋಪಾಸಕರ ಸಲಹಲೋಸುಗದಿ ಸ ಲ್ಲಾಪದಿ ಬಹ ಕಲಹಾ ಮನ್ನಿಸೋ ಭವಾ ಕೂಪಾರ ನಾವಿಕ ಭೂಪತಿ ವರಹಾ 9 ಕೂರ್ಮ ಕ್ರೋಡ ವಪುಷ ಹಿರಣ್ಯಕ ಶಿಪುವಿನ ಸೀಳ್ದ ಕಾಶ್ಯಪಿಯಾಚಿಕನೆ ದುಷ್ಟ ನೃಪರ ಸಂಹರಿಸಿದ ಕಪಿವರ ಪೂಜಿತ ದ್ರುಪದಾತ್ಮಜೆಯ ಕಾಯ್ದ ತ್ರಿಪುರಾರಿ ಕಲಿಮುಖ್ಯ ರುಪಟಳ ಬಿಡಿಸಿದ ಕೃಪಣವತ್ಸಲ ಕಲ್ಕಿ ಅಮಿತ ರೂಪಾತ್ಮಕ ಸುಫಲ ಚಿತ್ಸುಖ ಭರಿತಾ ತ್ರೈ ಲೋಕಕ್ಕೆ ಪ್ರಪಿತಾಮಹನೆ ನಿರುತಾ ಪ್ರಾರ್ಥಿಸುವೆ ನಿ ನ್ನಪರೋಕ್ಷವಿತ್ತು ಪಾಲಿಪುದೆಮ್ಮ ಸ್ವರತಾ 10 ವಟಪತ್ರಶಯನ ವೆಂಕಟಗಿರಿ ನಿಲಯ ನಿ ಷ್ಕುಟಿಲ ದುರ್ವಿಷಯ ಲಂಪಟವ ಸದೆದು ನಿನ್ನ ಭಟಜನರಿಗೆ ಧರ್ಮ ಘಟಕನಾಗುವೆ ನಿತ್ಯ ವಟುರೂಪಿ ಎಡಪಾದಂಗುಟದಿ ಅಬ್ಬಜಾಂಡ ಕಟಾಹ ಭೇದಿಸಿ ದೇವ ತಟನೀಯ ಪಡಿಯೋ ಧೂ ರ್ಜಟಿ ತಲೆಯೊಳು ಧರಿಸಿ ನಿನ್ನ ನಾಮ ಪರಿಸುತ್ತ ಸತಿಗೆರಸಿ ಕುಣಿದನೆಂದು ತ್ಕಟದಿ ಕೈಗಳ ಬಾರಿಸಿ ಜಗನ್ನಾಥ ವಿಠಲ ಸರ್ವೋತ್ತಮ ದಿಟನೆಂದುದ್ಫಟಸೀ11
--------------
ಜಗನ್ನಾಥದಾಸರು