ಒಟ್ಟು 1513 ಕಡೆಗಳಲ್ಲಿ , 109 ದಾಸರು , 1293 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂದಿಗಾಹುದೋ ನಿನ್ನ ದರುಶನ | ಇಂದಿರೇಶ ಮುಕುಂದ ಕೇಶವ ಪ ಗಾನಲೋಲನೆ ದೀನವತ್ಸಲ | ಮಾನದಿಂದಲಿ ನೀನೆ ಪಾಲಿಸೋ 1 ಯಾರಿಗೆ ಮೊರೆ ಇಡುವೆ ಶ್ರೀ ಹರಿ | ಸಾರಿ ಬಂದು ನೀ ಈಗಲೆ ಪೊರಿ 2 ಗಜವ ಪಾಲಿಸೊ ಗರುವದಿಂದಲಿ | ಭುಜಗಶಯನ ಶ್ರೀ ವಿಜಯವಿಠಲಾ 3
--------------
ವಿಜಯದಾಸ
ಎಂದು ಕಾಂಬೆನು ನಂದ ಗೋಪನ | ಕಂದ ಶ್ರೀ ಗೋವಿಂದನ ಮಂದರಾಚಲಧರ ಶ್ರೀಯದುಕುಲ | ಚಂದ್ರಗುಣಸಾಂದ್ರ ವಿಜಯಸೂತನ ವಿಶ್ವಪಾಲನ | ಭುಜಗವರ ಪರಿಯಂಕನ ರಜನಿಚರರಳಿದ ಜನ ಜನಕನ | ಶ್ರೀ ಜಗಪತಿ ದ್ವಿಜವರಗಮನನ 1 ನವನೀತ ಚೋರನ ಬಾಲಕೃಷ್ಣ ಗೋಪಾಲನ ಶೈಲ ಬೆರಳಿಲಿ ತಾಳಿ ಗೋಕುಲ ಪಾಲಿಸಿದ ಪರಮಾತ್ಮನ2 ಭಾಮೆ ರುಕ್ಮಿಣಿ ರಮಣ ರಂಗನ ಸಾಮಗಾನ ವಿಲೋಲನ ಶ್ರೀಮದಾನಂದ ಮುನಿಕರಾರ್ಚಿತ ಶಾಮಸುಂದರ ವಿಠಲನ 3
--------------
ಶಾಮಸುಂದರ ವಿಠಲ
ಎಂದು ನಿನ್ನ ದಯವು ಆಗೋದೋ ಇಂದಿರೇಶ ದುರಿತ ಹಿಂದಕ್ಕ್ಹೋಗೋದೊ ಮಂದಬುದ್ಧಿಯಿಂದ ನಾಲಿಗೆ ಹಿಂದೆ ಮುಂದೆ ನೋಡುತಿಹುದು ಸಂದೇಹ ಬಿಟ್ಟು ಗೋವಿಂದನ್ನ ನೆನೆಯಲಿಕ್ಕೆ ಪ ಹರಿಯ ತನಯ ಹರಿಯು ಹರಿಯೆಂದು ಒರೆಯುತಿರಲು ಗಿರಿಯನ್ಹತ್ತಿಸಿ ಉರಿಗೆ ಕೆಡುಹಿದ ಕರುಣವಿಲ್ಲದ ಹಿರಣ್ಯಕನು ಪರಮ ಬಾಧೆ ಬಡಿಸುತಿರಲು ಕರೆಯೆ ಕಂಬದಿ ಬಂದು ನರ- ಹರಿಯ ನಾಮ ಕಾಯ್ತು ಅವನ 1 ಕಂತುಪಿತನೆ ನಿನ್ನ ಭಜಿಸದೆ ದ್ವಿಜನು ಕೆಟ್ಟು ಅಂತ್ಯಜ ಸ್ತ್ರೀಯಳ ಕೂಡಿ ಮೆರೆಯಲು ಅಂತ್ಯಕಾಲದಲ್ಲಿ ಏಕಾಂತದಿಂದ ಮಗನ ಕರೆಯೆ ಕಂತುನಯ್ಯ ನಿನ್ನ ನಾಮ ಎಂಥಗತಿಯ ಕೊಟ್ಟಿತವಗೆ2 ದುಷ್ಟಪತ್ನಿ ನುಡಿಗೆ ಉತ್ತಾನಪಾದ ತನ್ನ ಪುತ್ರನಿಂದ ರಹಿತನಾಗಲು ಅಚ್ಚುತನ ಧ್ಯಾನದಲಾಸಕ್ತನಾಗೆ ಉಗ್ರತಪಕೆ ಮೆಚ್ಚಿಕೊಟ್ಟ ನಮ್ಮ ಸ್ವಾಮಿ ಹೆಚ್ಚಿನ ಲೋಕ ಪದವಿ ಧ್ರುವಗೆ 3 ಬಂದು ಭರದಿ ಮಡುವ ಕಲಕುವೋ ಮದಡಗಜವ ಕಂಡು ಮಕರಿ ಕಾಲು ಹಿಡಿಯಲು ಬಂಧುಗಳಿಂದ ರಹಿತವಾಗಿ ಒಂದು ಸಾವಿರ್ವರುಷ ಬಾಳಲು ಇಂದಿರೇಶ ನಿನ್ನ ಸ್ಮರಣೆಯಿಂದ ಶಾಪ ವಿಮೋಚಿತನಾದ 4 ಸೃಷ್ಟಿಗಧಿಕ ನಿನ್ನ ದಯವಿರೆ ಪಾಂಡುಸುತರ ಪಟ್ಟದ ರಾಣಿ ಸಭೆಗೆ ಎಳೆಯಲು ವಸ್ತ್ರಹರಣ ಕಾಲದಲ್ಲಿ ಭಕ್ತಿಯಲ್ಲಿ ಭೀಮೇಶ- ಕೃಷ್ಣನ ಮುಟ್ಟಿ ಭಜಿಸೆ ಕೃಷ್ಣೆಗಾಕ್ಷಣ ತೃಪ್ತನಾಗಿ ಕೊಟ್ಟೆಯೊ ವಸನ 5
--------------
ಹರಪನಹಳ್ಳಿಭೀಮವ್ವ
ಎನ್ನ ಕಂದ ಹಳ್ಳಿಯ ಹನುಮ ಪ ಚೆನ್ನಾಗೈದಾರ ಲಕ್ಷ್ಮಣ ದೇವರು ಅ ತುಪ್ಪ ಪಂಚಾಮೃತವಂದು ಅಡವಿಗಡ್ಡೆಗಳಿಂದುಕರ್ಪೂರ ವೀಳ್ಯವಂದು ಕುರುಕು ಇಂದುಸುಪ್ಪತ್ತಿಗೆ ಮಂಚವಂದು ಹುಲ್ಲು ಹಾಸಿಗೆಯಿಂದುಶ್ರೀಪತಿ ರಾಘವ ಕ್ಷೇಮದಲೈದಾರೆ1 ನವ ವಸ್ತ್ರಗಳು ಅಂದು ನಾರಸೀರೆಗಳಿಂದುಹೂವಿನ ಗಂಟು ಅಂದು ಜಡೆಗಳಿಂದುಜವ್ವಾಜಿ ಕತ್ತುರಿಯಂದು ಭಸಿತ ಧೂಳಿಂದುಶ್ರೀವರ ರಾಘವ ಕ್ಷೇಮದಲೈದಾರೆ2 ಕನಕ ರಥಗಳಂದು ಕಾಲುನಡಿಗೆಯಿಂದುಘನ ಛತ್ರ ಚಾಮರವಂದು ಬಿಸಿಲು ಇಂದುಸನಕಾದಿಗಳೋಲೈಪ ಆದಿಕೇಶವ ನಮ್ಮಹನುಮೇಶ ರಾಘವ ಕ್ಷೇಮದಲೈದಾರೆ 3
--------------
ಕನಕದಾಸ
ಎನ್ನನು ನೀ ಜರೆವೆ ಜೀವನೆನಿನ್ನನೀ ತಿಳಿದೆನೆಂದೂಮುನ್ನ ಮಾಡಿದ ಪುಣ್ಯಕರ್ಮಂಗಳೆನ್ನಿಂದ ಮನ್ನಿಸದುಪಕಾರವಾ ಜೀವಾ ಪದೇಹವು ಹೇಯವೆಂಬೆ ಮತ್ತೀಗದೇಹದೊಳಿರುತಿರುವೆದೇಹದಾಧಾರದಲ್ಲೀ ಧ್ಯಾನಿಸಿಸೋಹಂ ಭಾವನೆ ಬಂದುದೂಉಹಾಪೋಹಗಳಲ್ಲಿ ಚದುರನು ನಾನೆಂಬೆಓಹೊ ನಾನಿಲ್ಲವೆ ಜೀವಾ 1ಚಿತ್ತೆ ತಾ ಪ್ರಕೃತಿಯಾಗೀ ಭೂತದಮೊತ್ತವೆಂದೆನಿಸಿತಲ್ಲೈಮತ್ತೆ ಭೂತಂಗಳವೂ ನಾಲ್ಕುಳ್ಳತತ್ವವಿಪ್ಪತ್ತಾುತುಹತ್ತಿಂದ್ರಿಯಂಗಳಿಂದ ವಿಕರ್ಮಗಳು ಪುಟ್ಟಿಮುತ್ತೆರನಾುತಲ್ಲೈ ಜೀವಾ 2ಕನಕವೆ ಕುಂಡಲಾದಿ ಭೂಷಣಭಣಿತೆಯ ತಾಳಿರಲುಕನಕವಲ್ಲವೆ ಭೂಷಣ ಯೆಣಿಸಲುಚಿನುಮಯಾತ್ಮಕನಿಂದಲೆಜನಿಸಿ ದೃಶ್ಯತ್ವದಿ ತೋರಿದಡೇನಾುತುತನುವಾತ್ಮನಲ್ಲವೇನೈ ಜೀವಾ 3ಮಾಡಿದ ಉಪಕಾರವ ಮರೆಯುವಮೂಢಗೆ ನರಕವೆಂದುಆಡದೆ ಶೃತಿನಿಕರ ನೀನದನೋಡದೆ ನುಡಿಯುತಿಹೆಕೂಡಿಕೊಂಡೆನ್ನನು ನಿಜದೊಳು ಬೆರೆದರೆಪ್ರೌಢ ನೀನೆನಿಸಿಕೊಂಬೆ ಜೀವಾ 4ಕಾರ್ಯಕಾರಣ ರೂಪವಾ ನೋಡಲುಕಾರ್ಯಕಾರಣವಲ್ಲವೆಸೂರ್ಯನಿಂದಾದುದಕ ಬೆರೆಯದೆಸೂರ್ಯನ ಮರಳಿ ನೋಡೂಧೈರ್ಯಶಾಲಿಯೊಳಿಪ್ಪ ಧೈರ್ಯತ್ವವಾತನವೀರ್ಯವಲ್ಲವೆ ನೋಡಲೂ ಜೀವಾ 5ರೂಪನಾಮಗಳೆರಡೂ ಸತ್ತಾನುವ್ಯಾಪಿಸಿ ಜಗವಾದುದುದೀಪದೊಳಗೆ ಕಾಳಿಕೆ ತೋರ್ಪಂತೆಈ ಪರಿಯಲಿ ಮಾಯೆಯುವ್ಯಾಪಾರಂಗಳನುಪಸಂಹರಿಸಲು ಕಾಯವ್ಯಾಪಕನೊಳು ನಿಂದುದೂ ಜೀವಾ 6ಪೊಳೆದೆನು ನಾ ಮೊದಲೂ ಆಮೇಲೆಪೊಳೆದೆ ನೀ ಪ್ರತಿಫಲಿಸಿಜಲಗತ ಪ್ರತಿಬಿಂಬವೂ ನಿಜವಲ್ಲದಳಿವಂತುಪಾಧಿುಂದಾನಿಲುವುದು ನಿಜಬಿಂಬವಾಭಾಸ ನೀ ಪುಸಿನಿಲುವೆ ನಾ ನಿಜದೊಳಗೆ ಜೀವಾ 7ಬಂಜೆಯ ಮಗ ನಿಜವೊ ಅವನಿಗೆಮುಂಜಿಯೆಂಬುದು ನಿಜವೋಅಂಜಿಕೆದೋರಿಸಿತು ರಜ್ಜುವುರಂಜಿಸಿ ಸರ್ವನಾಗಿವ್ಯಂಜಿಸಿ ಕರಣದಿ ನಿದ್ರೆಯೊಳಭಂಜಿಸಿ ಮಂಜಿನಂದದಿ ಪೋಪೆಯೈ ಜೀವಾ 8ಇರಿಸಲು ಬೇರೆನ್ನನು ತೆರಹಿಲ್ಲಬೆರೆಸಾತ್ಮನೊಳು ಬಿಡದೆಕಿರಣಂಗಳು ರವಿಯ ಬಿಟ್ಟೊಮ್ಮೆಇರಬಲ್ಲವೆ ನೋಡಲುತಿರುಪತಿನಿಲಯ ಶ್ರೀ ವೆಂಕಟರಮಣನಚರಣನಾನಲ್ಲವೇನೈ ಜೀವಾ 9 ಕಂ||ಇಂತೀ ಪರಿಯಲಿ ಜೀವನನಿಂತಿರುವವನಿಲ್ಲದವನ ನುಡಿವದು ಸಹಜವುಎಂತಾದರು ತನ್ನ ತಿಳಿಯದೆಮುಂತೋರದ ನುಡಿುದೇನೆನೆ ಮುಳಿದಂ ಜೀವಂ
--------------
ತಿಮ್ಮಪ್ಪದಾಸರು
ಎಂಬ ನಾಮವನು ಉಚ್ಚರಿಸೆ ಸಾರುವರು ಭಕುತರಾದವರು ವೈಕುಂಠವನು ಆರಾದರೇನು ಮರೆಯದೆ ಹರಿಯಧ್ಯಾನಿಸಲು ಸಿರಿಯರಸ ಕಾಯ್ದು ಕೊಂಬ ಪ ಅರಸಕೇಳೈ ಬಳೀಕ ಪಾಂಡ್ಯದೇಶದೊಳೋರ್ವ ಪತಿ ಪೆಸರು ಇಂದ್ರ ದ್ಯುಮ್ನಧರಾತ್ಮ ಹರಿ ಪರಾಯಣನೆನಿಸಿ ನಿರುತಸತ್ಯ ಸುಶೀಲ ಕರಿತುರಗದಾಸೇಯ ತೊರೆದು ವಿರತನಾಗಿಯೆ ಪುರವ ಪೊರಟು ಸುಸ್ಥಿರನಾಗಿ ಬರವಾಯ್ತ ಗಸ್ತ ಶಿಷ್ಯವೆರಸಿ 1 ಸದಮಳಾತ್ಮರನ ಚಿಂತೆಯಿಂದ ಭೂಪೇಳದಿರೆ ಮದಮುಖನ ತಪವ ನೋಡುವೆನೆನುತ ಮುನಿ ಮುನಿದು ತದುಬಿಗರ್ಜಿಸಿ ಶಾಪವೀಯಗಜವಾಗೆನುತ ಸದು ಹೃದಯನೆದ್ದು ಬಳಿಕ ಪಾದಕ್ಕೆ ವಂದಿಸಿ ಶಾಪ ವೆಂದು ಬಿಗುಗಡೆಯೆನಲು ಸಾದರದಿಂ ಮುನಿಪನೆಲ ನೆಗಳು ಪಿಡಿಯೆಗತಿನಿನ ಗೆಂದು ಹೋದ ಮುನಿಪತಿ ಇತ್ತಲು 2 ಇಂತು ಭೂಮೀಶ ಶಾಪವ ತಾಳ್ದು ಬಿಸುಸುಯ್ದು ಕಂತು ಜನಕನೆ ಬಲ್ಲನೆಂತು ಗೆಲಿದಪೆನ್‍ನುತ ದಂತಿ ಮುಖವಾಗಿ ಭೂಕಾಂತೆಯೊಳು ಜನಿಸಿ ಸುರ ಸಂತತಿಗಳಲ್ಲು ಮಾ ಇಂತೆಸೆದನು 3 ತರುನಿಕರ ಚೂತಾಮಲಕ ಸುರಹೊನ್ನೆ ಪುನ್ನಾಗ ಮೆರೆವಬಿಲ್ವಶ್ವತ್ಥಮಾ ಕಿರುಗಿಡುವಿನೊಳಗೆ ಚರಿಸುವ ಕರಡಿ ಸೀಳ್ನಾಯಿ ಭೇರುಂಡ ಮುಂತಿರುತಿರಲು ಗರುಡ ಗಂಧರ್ವ ಚಾರಣರು ಸುರಕಿನ್ನರರು ಇರುತಿಹರು ಕಿಂಪುರುಷರು 4 ತ್ರಿಜಗದೊಳಗೆಣೆ ಗಾಣೆ ಭುಜಗಶಯನನೆ ಬಲ್ಲ ಗಜರಾಜ ಬೆಳೆದು ಕುಜನರ ಮಾರ್ಗವಂ ಪಿಡಿದು ಅಜಸೃಷ್ಟಿ ಬಿರಿಯೆ ಒದರಿ ನಿಜಪುತ್ರ ಮಿತ್ರಸ್ತ್ರೀಜನ ಸಹಿತಲೊಡಗೊಂಡು ಬುಜ್ಜಸತ್ವದಿಂದ ವನವನು ಮುರಿದು ಸಂಹರಿಸಿ ಭೂಜಲವ ನರಸಿ ಬಂದ 5 ಗಂಡು ಹೆಣ್ಣಾನೆಗಳ ತಂಡ ಸಹಿತಲೆ ಬಂದು ಕಂಡು ಜಲವನು ಈಂಟಿಗುಂಡಿ ಮಡುವನುಸಾರಿ ಚಂಡಿಗೊಳಿಸುತ ಧರಣಿಯ ಅಂಡೆಲೆವ ಮದದ ಸ್ತ್ರೀಯರ ಕೂಡಿ ನೆಗಳು ಖತಿಗೊಂಡು ಮಡುವಿನೊಳಗೆಳೆಯಲು 6 ನೆಗಳು ಸುತ್ತಲಿಹ ಕರಿಘಟೆಗಳೇನಿದದ್ಬುತವೆಂದು ಮತ್ತೆ ಸತ್ವದಲೆಳೆಯೆ ತೆತ್ತಿಗನು ಬಾರದಿರೆ ತಮ್ಮಗುತ್ತಿಗುಳಿದಿಹ ಹಸ್ತಿ ಇತ್ತ ಗಜರಾಜ ಕಾದುತಿರಲು ಹಲಕಾಲ ಬತ್ತಿ ಅಸುಗುಂದಿ ಚಿತ್ತದಿ ತಿಳಿದು ಧ್ಯಾನಿಸುತ ಮತ್ತಾರು ಕಾಯ್ವರೆನುತ 7 ಇಕ್ಕರ್ತರಿಂತು ಕಾದುತ್ತಿರಲು ಕರಿವರನ ಸೊಕ್ಕು ಮುರಿದುದು ತಮವುಚೊಕ್ಕಿ ಮುಖವನು ನಭಕೆ ಸೊಕ್ಕಿದುದುನೆಗಳು ಬಳಿಕ ಮುಕ್ಕುರು ದಿವ್ಯಸಾಗರ ವರುಷ ಪರಿಯಂತ ಸಿಕ್ಕಿ ನಗಳೊಳು ಕಾದಿ ಕುಕ್ಕುರಿಸಿ ನೀರಿನೊಳು ದಿಕ್ಕನೊಡುತ್ತ ಕಕ್ಕನೆ ಕರಗಿ ಜ್ಞಾನದಲಿ ಭಕ್ತವತ್ಸಲನ ನೆನೆದ 8 ರಕ್ಷಿಸೆನ್ನನು ಬಿಡದೆ ಪಕ್ಷಿವಾಹನಗಮನ ಸೇವ್ಯ ಕುಕ್ಷಿಯೊಳಗಿಂಬಿಟ್ಟು ರಕ್ಷಿಸುವೆ ಭಜಕರನು ಮೋಕ್ಷದಾಯಕನೆ ಕಾಯೋ ಲಕ್ಷ್ಮೀಶ ಕೇಶವ ಉಪೇಕ್ಷಿಸದೆ ನೀ ಬಂದು ಭಕ್ಷಿಸುವ ನೆಗಳನೀ ಶಿಕ್ಷಿಸಲು ಬೇಕು ಅಕ್ಷಿಯನು ಇಟ್ಟುಬಂದು 9 ಸರಸಿರುಹದಳನಯನ ಮೂರ್ತಿ ಪರಿ ಹರಿಸೋ ಕ್ಷೀರಾಬ್ಧಿ ಶಯನನೆಂದು ಪರಿ ಪರಿಯ ಸ್ತುತಿಸಲಾಕ್ಷಣ ಮಹಿಮ ಧ್ವನಿಗೇಳ್ದು ನಾಗಿಕರದಿ ಚಕ್ರವ ಕೊಂಡು ಭರದಿ ಭಕುತನ ಕಂಡು ಕರಿರಾಜಗಭಯವಿತ್ತ 10 ಸಿರಿ ಮೊಗದ ನಳಿನಾಯತೇಕ್ಷಣದ ತೊಳಪ ಕದಪಿನ ಮಿಸುಪ ನವರತ್ನ ಕುಂಡಲದ ಕೌಸ್ತುಭ ಹಾರದುರಸ್ಥಳದ ಹೊಳೆವ ಮಣಿಮಕುಟ ನೇಳಿವದಂತಪಂಕ್ತಿಯ ಚಾರು ಕೋರವಿಸೆ ಕಂಡ 11 ಮೇಲೆ ಕೈವಾರಿಸುವ ಸುರರ ದುಂದುಭಿ ಮೊಳಗೆ ಹೊಳೆಯ ಎತ್ತಿದ ತೋರ ಸತ್ತಿಗೆಯ ತೋರಣದ ಸಾಲುಗಳ ಸಂದಣಿಯ ಸಂಭ್ರಮದ ಜಾಲವನು ಕಂಡುಗಜವು ಪಾಲಿಸೈ ಗೋವಿಂದನಾಥ ಬಂಧು ತ್ರಾಹಿ ಭವಾಬ್ಧಿಸಾರ ತ್ರಾಹಿ ಪಾಲಿಸೈ ತ್ರಾಹಿ ಎನುತ 12 ಗಡಗಡನೆ ನಡುಗತಿರೆ ಕಡಲಶಯನನು ಕಂಡು ಕಡುಕೃಪೆಯೊಳೈ ತಂದು ಮಡುವ ಧುಮುಕಿಯ ಗಜವ ಪಿಡಿದಾಗ ವಾಮಕರದಿಂದಳೆಯನೆಗಳು ಸಹತಡಿಗೆ ಬರಲಾಗಕಂಡು ಘುಡು ಘುಡಿಸಿ ಕೋಪದಿಂ ತುಡುಕಿ ಚಕ್ರವತೆಗೆದು ಪಿಡಿದು ನೆಗಳನು ಕಡಿಯೆ ಒಡನಾಗ ನಿಜರೂಪ ಬಿಡುಗಡೆಯಾಯಿತೆಂದು ನಡೆದು 13 ಹರಿ ಬಳಿಕ ಕರಿವರಗೆ ವಿಶ್ವರೂಪವತೋರಿ ತರಣಿಕೋಟಿ ಸಹಸ್ರತೇಜದಿಲ ರಂಜಿಸಿಯೆ ಪರಿದುಹರಿವೋಲೆಸೆದನು ಬಳಲಿದೆಯಾ ಎಂದು ಕರುಣಾಕಟಾಕ್ಷದಿಂ ಕರಿವರನ ಸಹಿತ ವಾಸ ದೆಡೆಗೆ 14 ಅವನುದಯ ಕಾಲದೊಳೆದ್ದು ಪೇಳುವನು ಆವರಿದ ಭಕ್ತಿ ಭಾವದಲಿದನು ಕೇಳುವರು ಪಾವನರು ಪುಣ್ಯಾತ್ಮರು ಕೋವಿದರು ಧರಗೆ ಗಜರಾಜೇಂದ್ರ ಮೋಕ್ಷವನು ಸಾವದಾನ ದಲಿದನು ನೇಮದಲಿ ಕೇಳ್ವವರ ನೆನೆದವರ ಕಾಯ್ವನೆಂದು 15
--------------
ಕವಿ ಪರಮದೇವದಾಸರು
ಎಂಬೆನು ವಿವೇಕ ಮನುಜಗೆ ಇರೆ ಎಂಬೆನು ಬ್ರಹ್ಮನು ಎಂಬೆಎಂಬೆನು ವಿವೇಕ ಮನುಜಗೆ ಇಲ್ಲದಿರೆ ಕತ್ತೆಯಮರಿಯದು ಎಂಬೆ ಪ ವೇದದ ನಿಜ ಅರ್ಥವ ತಿಳಿದಡೆ ಉತ್ತಮೋತ್ತಮನು ಎಂಬೆಕ್ರೋಧದಿ ತರ್ಕದಿ ಕಾದಾಡುವವನು ಕೋಳಿಯ ಹುಂಜನು ಎಂಬೆನಾನಾರೆನುತಲಿ ನಿಜವನು ತಿಳಿವನ ನಾರಾಯಣನು ಎಂಬೆನಾದದ ತಿಳಿವನು ನಿಂದಿಸುವಾತನ ಸರಸವಾಡೋ ಪಶು ಎಂಬೆ 1 ಮತಿಯ ವಿಚಾರದಿ ಜಗ ಬ್ರಹ್ಮವೆಂಬನ ವಿಚಾರವಾದಿಯು ಎಂಬೆಯತಿಗಳು ಬರೆ ಕುಳಿತೇಳದ ಮನುಜನಎಮ್ಮೆಯ ಮಗನವನೆಂಬೆಸುತ್ತಮುತ್ತಂಗನೆ ಮೋಹವ ತೊರೆದನ ಯೋಗಪುರುಷ ತಾನೆಂಬೆಗತಿಮತಿ ತೊರೆದಿಹ ನರನನು ಈಗಲೆ ಎಂಜಲು ತಿಂಬುವ ನಾಯೆಂಬೆ 2 ಪರಮಾರ್ಥದಿ ಶಮದಮದಿಂದಿಹನನು ಪಂಡಿತನೀಗಲು ಎಂಬೆಹಿರಿಯರ ಕಾಣಲು ಹಲ್ಲನೆ ಕಿರಿವನ ಹಿರಿಯಮುಸುವನು ತಾನೆಂಬೆಗುರಿಯನು ತಪ್ಪದೆ ದೃಷ್ಟಿಸಿ ನಡೆವನ ಗುಣಕೆ ಅತೀತನು ಎಂಬೆಬರಿಯ ಪ್ರತಿಷ್ಟೆಯ ಸಾಧಿಸುತಿರುವನ ಬರಡು ಗೊಡ್ಡು ಎಂದೆಂಬೆ 3 ನಾದದ ಧ್ವನಿಯನು ಕೇಳುತಲಿಹನನು ಜಗಜೀವನನು ಎಂಬೆನಾದದ ಸುಖವನು ಅರಿಯದ ನರನನು ಜೀನುಗಾರನು ಎಂದೆಂಬೆದಿನಕರ ಕೋಟಿಯ ತೇಜದಿ ಹೊಳೆವನ ದಿವ್ಯ ಮೂರುತಿ ಎಂದೆಂಬೆವನವನ ಅಲೆಯುವ ಬರಡು ಮುನಿಯನುವನಕೆಯ ತುಂಡದು ತಾನೆಂಬೆ4 ಆತ್ಮದ ಕಳೆಯನು ಅರಿತವನಿದ್ದರೆ ದೃಢದಲಿ ಬ್ರಹ್ಮನು ಎಂಬೆಸತ್ವಶಾಲಿ ಆ ಮಹಿಮರ ಜರೆವರ ಗುಡ್ಡದ ಗೂಗೆಯಮರಿ ಎಂಬೆಚಿನುಮಯ ಚಿನ್ಮಾತ್ರನೆ ತಾನಾದವನನು ಚಿದಾನಂದ ಗುರುವೆಂಬೆಕರೆಕರೆ ಎನಿಸುವ ಸಾಧು ವೇಷವನು ದೂರಕೆ ನೀ ನಿಲ್ಲೆಂಬೆ5
--------------
ಚಿದಾನಂದ ಅವಧೂತರು
ಎರಿ ಮುಂಡೆ ಇವನೆರಿ ಮುಂಡೆ ಏನುಅರಿಯದೆ ಒದರುವ ಎರಿಮುಂಡೆ ಪ ತನ್ನ ನಿಜವ ತಾನು ಅರಿಯದೆ ತತ್ವದಕುನ್ನಿಯಂತೆ ಒದರುವ ಎರಿಮುಂಡೆಭಿನ್ನ ಬುದ್ಧಿಯಲಿದ್ದು ನಾ ಬ್ರಹ್ಮವೆಂಬುದನುಚೆನ್ನಾಗಿ ಅರಿಯದ ಎರಿಮುಂಡೆ 1 ಯೋಗವ ತಿಳಿಯದೆ ಯೋಗವ ಹಳಿವನುಈಗ ಹೇಳಿವನೀಗ ಎರಿಮುಂಡೆಆನಿಹೆ ಬ್ರಹ್ಮವು ನಾನೆಂದು ಎತ್ತೆತ್ತೆನುಡಿವನು ಎರಿಮುಂಡೆ 2 ಕೋಟಿ ಸೂರ್ಯರ ತೇಜ ಪಾಟಿಸಿ ಕಾಣದೆಬೂಟಕ ನುಡಿವವ ಎರಿಮುಂಡೆದಾಟಿ ಸಹಸ್ರಾರ ಬ್ರಹ್ಮರಂಧ್ರದ ನಾಳ ಕೇಳದ ನರನಾಗ ಎರಿಮುಂಡೆ 3 ಮಾತರಿಯದೆ ಜ್ಞಾನ ನುಡಿಯಿದ್ದುದಕಳೆದು ಮಣ್ಣು ಹೋಯ್ಯೆಂಬುವ ಎರಿಮುಂಡೆಮಾತಿಲಿ ಬ್ರಹ್ಮವು ಆಗಬೇಕಾದರೆ ಮಹಾಸಾಧನವೇಕೆ ಎರಿಮುಂಡೆ 4 ಒಂದು ಹೋಗಲಿಲ್ಲ ಒಂದೇ ನಾನೆಂಚಿನುಇಂದು ಕೇಳುವನೀಗ ಎರಿಮುಂಡೆಸುಂದರ ಚಿದಾನಂದ ಸ್ವರೂಪ ತಿಳಿಯದೆ ಸುಲಭ ಎಂದೆಂಬುವ ಎರಿಮುಂಡೆ 5
--------------
ಚಿದಾನಂದ ಅವಧೂತರು
ಎಲೆ ಮಾನವಾ ಅಭಿಮಾನವಾ ಅವಿವೇಕವಾ ದೂಡೈ ಸುಖದುಃಖದಾ ಘನ ಮೂಲವಾ ಸುವಿವೇಕದೀ ನೋಡೈ ಪ ಪರರಿಂದ ಈ ಪರಿತಾಪವು ಬರುತಿರ್ಪುದೆಂಬುದಿದೋ ಬರಿ ಬ್ರಾಂತಿಯೋ ನಿಜವಲ್ಲವೋ ಅಲೋಚಿಸಿ ನೋಡೈ 1 ಗ್ರಹಕಾಲಗಳ್ ಘನ ಕರ್ಮಗಳ್ ಇವು ಕಾರಣಲ್ಲವಿದೋ ಮನವೇ ಇದೇ ಪರಿತಾಪದ ಘನಮೂಲವೈ ನೋಡೋ 2 ಸಟೆಯಾಗಿಹ ಸಂಸಾರವ ದಿಟವೆಂದು ತೋರ್ಪುದಿದೋ ಮನದಿಂದಲೇ ಇದು ಕಾಂಬುದೋ ಮನವಿಲ್ಲದಾಗಿಲ್ಲ 3 ಪರಮಾತ್ಮನ ಪರಿಪೂರ್ಣನ ಮರೆಮಾಡುತೀಮನವು ಹರಿದಾಡುತಾ ಸುಖದುಃಖವಾ ಗುಣಿಸುತ್ತ ತಾನಿಹುದೋ 4 ವನದಾಟಕೇ ಮರುಳಾಗದೇ ಗುರುಶಂಕರಾರ್ಯನಲಿ ಮನ ನಿಲ್ಲಿಸಿ ಈ ಮೋಹವಾ ಬಿಡು ಬೇಗ ನೀನೀಗ 5
--------------
ಶಂಕರಭಟ್ಟ ಅಗ್ನಿಹೋತ್ರಿ
ಎಲ್ಲಡಗಿದನೊ ಹರಿ ಎನ್ನಯ ಧೊರಿ ಪ ಎಲ್ಲೆಲ್ಲಿ ಪರಿಪೂರ್ಣನೆಂಬೊ ಸೊಲ್ಲನು ಮುನ್ನಾ ಮಲ್ಲಮರ್ದನ ಪುಲ್ಲಲೋಚನ ಹರಿಅ ಪ ಶರಣೆಂದವರ ಕಾಯ್ವ ಕರುಣಾ ಸಮುದ್ರನು ಕರುಣನ ಅರಿಯದೆ ಹರಿಣಾಂಕ ನಿಭವಕ್ತ್ರ 1 ಕರಿರಾಜನ ಮೊರೆ ಕೇಳಿ ತ್ವರಿತದಿಂದ ಗರುಡನೇರಿ ಬಂದ ಗರ್ವರಹಿತ ದೇವ 2 ವರ ಭುಜದಲಿ ಶಂಖ ಚಕ್ರವ ಧರಿಸಿದ ಪರಮೇಷ್ಠಿ ಜನಕನು 3 ವನಜ ಮಲ್ಲಿಗೆ ಜಾಜಿ ವನದಲ್ಲಿ ಚಲಿಸುವ ವನಿತೆಯರಾಟಕ್ಕೆ ಮನಮೆಚ್ಚಿ ನಡೆದಾನೊ 4 ಹಿಂಡು ಗೋಪಾಲರನು ಕಂಡು ಕಾವ ವಿಷಯಕ್ಕಾಗಿ ಕಮಲಲೋಚನ ಹರಿ5 ಇನ ಚಂದ್ರ ನಿಭವಕ್ತ್ರ ಕನಕಾಂಬರಧರ ವಿನಯದಿಂದಾಡುತ್ತ ಮುನಿಗಳಲ್ಲಿಗೆ ದೇವ 6 ಗಜ ಧ್ರುವ ಬಲಿ ಪಾಂಚಾಲಿ ವರದನೆಂಬ ನಿಜವಾದ ಬಿರುದುಳ್ಳ ವಿಜಯವಿಠ್ಠಲರೇಯ7
--------------
ವಿಜಯದಾಸ
ಎಲ್ಲವು ನಿನ್ನಾಧೀನ | ನಾ ಬಲ್ಲೆನೆಂಬುದಜ್ಞಾನ ಪ ವಿಧಿ ಪರಿಯಂತವು ನೀ- ನಿಲ್ಲದೆ ಕದಲದು ನಿಜವಿದು ನಿಜವಿದು ಅ.ಪ ಸುಖವನಪೇಕ್ಷಿಸುತಿಹರು | ದು- ಸಖ ನೀನೆನ್ನದೆ ದಾರಾ ಪುತ್ರಾ- ದ್ಯಖಿಳ ಸಂಪದವ ಬಯಸಿ ಕೆಡುವರು 1 ಹಣ ಸಂಪಾದಿಸುವದಕು | ಸ- ದ್ಗುಣ ವಂತನೆನಿಸುವದಕೂ ಹೆಣಕೆ ಸಮಾನನು ಇವನೆಂಬುವದಕೂ | ಹಿರಿಯ- ನೆನಿಸಿ ಪೂಜಿಸಿ ಕೊಂಬುವುದಕೂ 2 ನೀನೊಲಿದರೆ ವಿಷವಮೃತ | ಬರಿ- ಜ್ಞಾನಿಗಳರಿಯುವರೀ ನಾನಾ ಬಗೆ 3 ಜ್ಞಾನ ಭಕ್ತಿಯು ವಿರಾಗ | ವೆಂ- ಬೀನಿದಾನವೇ ಯೋಗ ಆನಂದ ಪಡುವುದೇ ಬಲು ತ್ಯಾಗ 4 ಕ್ಷೇಮದಿಂದಲಿರುವದಕೂ | ನಿ- ರ್ನಾಮವೈದಿ ಕೆಡುವುದಕೂ ಪಾಮರ ಜೀವರು ತಾವರಿಯರು ಗುರು ರಾಮ ವಿಠಲ ನೀನಾ ಮಮತೆ ಕೊಡದಿರೆ 5
--------------
ಗುರುರಾಮವಿಠಲ
ಎಲ್ಲಾ ಶಾಸ್ತ್ರದ ಸಾರದ ತಿಳಲ್ಮನ ದಲ್ಲಿ ಹರಿಯನು ಕಾಂಬುದಕೆ ಪ. ಮನದಲಿ ಹರಿಯನು ಕಾಂಬುವ ಸೊಬಗು ಬಲ್ಲಿದ ವೈಕುಂಠಕೋಡ್ವದಕೆ ಅ. ವಿಧಿನೀಷೇಧಗಳಾಚರಿಸುವುದು ವಿಧ ವಿಧ ಜೀವರ ಸಾಧನಕೆ ವಿಧ ವಿಧ ಸಾಧನ ನಂತರ ತಿಳಿವುದು ವಿಧಿ ಜನಕನ ಪದಪಿಡಿವುದಕೆ 1 ಸ್ನಾನಜಪಾಹ್ನೀಕಗಳೆಲ್ಲವು ತನ್ನ ಧ್ಯಾನಕೆ ಶ್ರೀಹರಿ ನಿಲ್ವುದಕೆ ಧ್ಯಾನಕೆ ಶ್ರೀಹರಿ ನಿಂತ ಮೇಲೆ ಸು ಜ್ಞಾನದಿಂದ ತನ್ನರಿವುದಕೆ 2 ನೆಲೆ ಇಲ್ಲದ ಕರ್ಮಾಳಿಗಳ್ ದೇಹದ ಮಲಿನ ತೊಳೆದು ಶುದ್ಧಿಗೈವುದಕೆ ಮಲಿನ ತೊಳೆದು ಮನಶುದ್ಧದಿ ಹೃದಯದಿ ಇಳೆಯರಸನ ನೆಲೆ ಅರಿವುದಕೆ 3 ಅಗ್ನಿ ಹೋತ್ರಯಜ್ಞಾದಿ ಕಾರ್ಯಗಳ್ ಶೀಘ್ರದಿ ಹರಿಯನು ಕಾಂಬುದಕೆ ಶೀಘ್ರದಿ ಹರಿಯನು ಕಂಡ ಮ್ಯಾಲೆ ಇವು ಅಗ್ರಜವಲ್ಲೆಂದರಿವುದಕೆ 4 ರಂಗನ ಮೂರ್ತಿಯನಿಟ್ಟು ಪೂಜಿಸುವುದು ಅಂಗÀದಲ್ಲಿ ತಾನು ಕಾಂಬುದಕೆ ಅಂಗದಲ್ಲಿ ತಾನು ಕಂಡ ಮೇಲೆ ಇವು ಅಂಗಡಿ ಎಂತೆಂದರಿವುದಕೆ 5 ನಿತ್ಯ ನೈಮಿತ್ತಿಕ ಕರ್ಮಗಳೆಲ್ಲವು ಚಿತ್ತದಿ ಹರಿಯನು ತೋರ್ಪುದಕೆ ಚಿತ್ತದಿ ಹರಿಯನು ಕಂಡ ಮೇಲೆ ಇವು ಮತ್ರ್ಯರಿಗೆಸಗಿ ಮೌನಾಗ್ವುದಕೆ 6 ಚಾಂದ್ರಾಯಣ ವ್ರತ ಉಪವಾಸಗಳು ಇಂದ್ರಿಯ ನಿಗ್ರಹ ಮಾಡ್ವದಕೆ ಇಂದ್ರಿಯ ಚಲಿಸದೆ ಮನ ಧೃಡವಾಗಲು ಹಿಂದಿನ ಹಂಬಲ ತ್ಯಜಿಪುದಕೆ 7 ಮಧ್ವಶಾಸ್ತ್ರದ ಸಾರತತ್ವ ಮನ ಶುದ್ಧಿಯಗೈಸುತ ಸುಖಿಪುದಕೆ ಶುದ್ಧರಾದ ಶ್ರೀ ಗುರು ಕರುಣವು ಅನಿ- ರುದ್ಧನ ಹೃದಯದಿ ತೋರ್ವದಕೆ 8 ನೇಮದಿ ದ್ವಾದಶ ನಾಮಧಾರಣೆ ಹರಿ ನಾಮದ ದೇಹ ಬೆಳಗ್ವದಕೆ ಕಾಮಕ್ರೋಧವ ಬಿಡುವುದು ವಳಗಿನ ಶ್ರೀ ಮನೋಹರನನು ಕಾಂಬುದಕೆ 9 ಹೊರಗಿನ ವಸ್ತು ದೃಷ್ಟಿಸುವುದು ಶ್ರೀ ಹರಿ ವರ ವಿಶ್ವರೂಪವ ತಿಳಿವುದಕೆ ವರ ವಿಶ್ವರೂಪಧ್ಯಾನದಿಂದ ತನ್ನ ವರ ಬಿಂಬನ ಕಂಡು ನಲಿವುದಕೆ 10 ಅರಗಣ್ಣ ಮುಚ್ಚುವ ಅಭ್ಯಾಸಗಳೆಲ್ಲ ಸ್ಥಿರಮನವಾಗುವ ಕಾರಣಕೆ ಸ್ಥಿರಮನ ಶ್ರೀ ಹರಿ ದಯ ಮಾಡಲು ನೇತ್ರ ತೆರೆಯದೆ ಬಿಂಬನ ಕಾಂಬುದಕೆ 11 ಶಾಸ್ತ್ರದಿ ಪೇಳುವ ಧ್ಯಾನ ಪ್ರಕರಣವು ಶ್ರೋತ್ರದಿ ಕೇಳುತ ತಿಳಿವುದಕೆ ಗಾತ್ರದಿ ಶ್ರೀ ಗುರು ಕೃಪೆ ಮಾಡಲು ವಳ ನೇತ್ರದಿ ಸರ್ವವು ಕಾಂಬುದಕೆ 12 ಪಕ್ಷಮಾಸ ವ್ರತ ಪಾರಾಯಣ ಅಪ- ರೋಕ್ಷ ಪುಟ್ಟಲು ದಾರಿ ತೋರ್ವದಕೆ ಶಿಕ್ಷ ರಕ್ಷಕರಾದ ಗುರುಕರುಣವು ಅಪ- ರೋಕ್ಷ ಪುಟ್ಟಿಸಿ ನಿಜವರಿವುದಕೆ13 ಪರಿ ಜನರನು ಸೇವಿಸುವುದು ತನ್ನ ಪರಮಾರ್ಥತೆ ದೂರಾಗ್ವದಕೆ ಗುರುಚರಣವ ಸೇವಿಸುವುದು ಶ್ರೀ ಹರಿ ಅರಘಳಿಗಗಲದೆ ಪೊರೆವುದಕೆ 14 ಡಾಂಭಿಕ ಸಾಧನವೆಲ್ಲವು ಶ್ರೀ ಹರಿ ಡಿಂಬದೊಳಗೆ ಮರೆಯಾಗ್ವದಕೆ ನಂಬಿ ಶ್ರೀ ಹರಿ ಗುರು ಚರಣವ ಪೊಗಳ್ಪದು ಡಿಂಬದೊಳಗೆ ಹರಿ ಕಾಂಬುದಕೆ15 ಕರ್ಮ ವೈರಾಗ್ಯಗಳೆಲ್ಲವು ಪುಟ್ಟಿಸಲೂ ಭಕ್ತಿ ಜ್ಞಾನಕ್ಕೆ ಪುಟ್ಟಲು ಭಕ್ತಿ ಜ್ಞಾನ ಪಾಂಡುರಂಗ ವಿಠ್ಠಲನೊಬ್ಬನ ಪಿಡಿವುದಕೆ 16 ಯಾತ್ರೆ ತೀರ್ಥ ಚರಿಪುದು ಶ್ರೀ ಹರಿ ತನ್ನ ಗಾತ್ರದಲ್ಲಿರುವನೆಂದರಿವುದಕೆ ಗಾತ್ರವೆ ಕ್ಷೇತ್ರವೆಂದರಿತ ಮೇಲೆ ಸ ರ್ವತ್ರದಿ ವಿಠಲನ ಕಾಂಬುದಕೆ17 ಎಂತೆಂತೋ ಮಾರ್ಗಗಳರಸುವುದು ಚಿಂತನೆಗೆ ಹರಿ ನಿಲ್ವುದಕೆ ಚಿಂತನೆಗೆ ಹರಿ ನಿಂತ ಮೇಲೆ ತಾನು ಶಾಂತನಾಗಿ ಜಡನಾಗ್ವದಕೆ 18 ಹೊರಗಿನ ಸಂಸ್ಕಾರಗಳೆಲ್ಲವು ತನ್ನ ವಳಗಿನ ಸಂಸ್ಕಾರ ತೆರೆವುದಕೆ ವಳಗಿನ ಸಂಸ್ಕಾರ ತೆರೆದಮ್ಯಾಲೆ ತನ್ನ ಇರವರಿತು ಸುಖ ಸುರಿವುದಕೆ19 ಸಾಸಿರ ಜನ್ಮದ ಸಾಧನಗಳು ಹರಿ ದಾಸನಾಗಿ ತಾನು ಮೆರೆವುದಕೆ ದಾಸನಾದ ಮೇಲೆ ಕ್ಲೇಶಕೆ ಸಿಲುಕದೆ ಶ್ರೀಶನ ಹೃದಯದಿ ಕಾಂಬುದಕೆ 20 ಸಾರತತ್ವವನು ಅರಿವುದು ಗುರು ಮಧ್ವ- ಚಾರ್ಯರ ಮಾರ್ಗವ ಪಿಡಿವುದಕೆ ಪ್ರೇರಕ ಗೋಪಾಲಕೃಷ್ಣವಿಠಲ ಮನ ಸೇರಲು ಕಂಡು ತಾ ನಲಿವುದಕೆ 21
--------------
ಅಂಬಾಬಾಯಿ
ಎಲ್ಲಿ ತಿಳಿವುತದೆ ನಿಮ್ಮಾಟದ ಸುಧ್ಯೇಯ ಧ್ರುವ ನಾಲ್ಕಾರು ಹದಿನೆಂಟು ಮಂದಿಯ ಕೇಳಿದೆ ಸಿಲುಕನೆಂದವರಾಡುದೆ ಮಲಕು ಎಂಬತ್ತು ನಾಲ್ಕು ಲಕ್ಷ ನೂ ಸೋಸಿದೆ ನಿಲುಕಿ ನಿನ್ನ ನೆಲೆ ನಿಜವು ದೋರದೆ 1 ನಾನಾ ಮತ ನಾನಾ ಮಾರ್ಗ ಶೋಧಿಸಿದೆ ಖೂನ ನಿನ್ನದು ತಿಳಿಯದೆ ನಾನು ನಾನೆಂಬವರಿಗೆ ಅನುಸರಿಸಿದೆ ನೀ ನಿಹ ಸ್ಥಳದ ಗಾಳಿಯು ಬೀಸದೆ 2 ಬೀಳದವರ ಕಾಲುಬಿದ್ದು ನಾ ಕೇಳಿದೆ ಸುಳಹು ನಿನ್ನದು ತೋರದೆ ತಲೆ ಕೆಳಗನೆ ಮಾಡಿ ತಪಸವ ಮಾಡಿದೆ ಒಲವು ನಿಮ್ಮದು ಎಂದಿಗೆ ಅಗದೆ 3 ಬಡದ ಬವಣೆ ಬಟ್ಟು ಹುಡುಕದಾ ಹುಡುಕಿದೆ ತುಡಕು ನಿಮ್ಮದು ತಿಳಿಯದೆ ಒಡನೆ ಎನ್ನೊಳು ಬಂದು ಅಡಕವ ಹರಿಸಿದೆ ಬಡವನಾಧಾರೆಂದು ಕೈ ಬಿಡದೆ 4 ಮನೋನ್ಮನವಾಗಿ ಕಂಗಳ ತೆರೆಸಿದೆ ಸ್ವಾನುಭವನೇ ಬೀರಿದೆ ದೀನಮಹಿಪತಿ ಮನೋಹರಣ ಮಾಡಿದೆ ಅನುದಿನ ಘನಸುಖದೊಳಗಿರಿಸಿದೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಲ್ಲಿ ಮತಿಯು ಎಲ್ಲಿ ಗತಿಯು ಎಲ್ಲವೀಗ ಹುಸಿಯು ಕಂಡ್ಯಎಲ್ಲವಿಹುದು ಬಹುದು ಬಹಳ ಸಂಸ್ಕಾರಿಯೊಬ್ಬಗೆ ಪ ಭಕ್ತಿಯನ್ನು ಮಾಡುವರು ಹಲವು ಮಂದಿ ನೋಡಲಿಕೆಭಕ್ತಿಯಿಹುದು ತಾನೀಗ ಅದರೊಳೊಬ್ಬಗೆಮುಕ್ತಿಮಾತ ಕೇಳುವರು ಮುಗಿದ ಕೈಗಳಿಂದಮುಕ್ತಿ ಮೇಲೆ ಚಿತ್ತವಿಹುದು ಅದರೊಳೊಬ್ಬಗೆ1 ಕಣ್ಣುಗಳ ಮುಚ್ಚಿಕೊಂಡು ನೋಡವರು ಆತ್ಮನಕಣ್ಣು ಕುಳಿತು ಕಾಣಬಹುದದರೊಳೊಬ್ಬಗೆಹುಣ್ಣಿಮೆಯ ಬೆಳಕಿನಂತೆ ಹರಹಿಯಿಹುದು ಎಂಬರುತಣ್ಣನೆಯ ಕಳೆಯು ತೋರುವುದದರೊಳೊಬ್ಬಗೆ2 ಜ್ಞಾನಗಳ ಹೇಳುವರು ಜ್ಞಾನಿಗಳೊ ಎಂಬಂತೆಜ್ಞಾನ ನಿಶ್ಚಯಹುದು ತಾನು ಅದರೊಳೊಬ್ಬಗೆಮಾನನಿಧಿ ಚಿದಾನಂದ ತಾನೀಗ ಎನುತಲಿಹರುತಾನೆ ತಾನಾದ ನಿಜವು ಅದರೊಳೊಬ್ಬಗೆ 3
--------------
ಚಿದಾನಂದ ಅವಧೂತರು
ಎಲ್ಲಿ ಶ್ರೀ ಗುರುವಿನ ದಯದೊಲವಿಹುದು | ದುರಿತ ಭಯ ಮುಟ್ಟ ಲರಿಯದು 1 ದಿವಸಾಧಿಪನಾ ಮಂಡಲವನು ಸಾರಿಹಗ | ಜವದಿ ಕತ್ತಲೆಯು ಮುಸುಕುವದೇನವಗ 2 ಸಕಲ ಗಜಗಳು ಮುದದಲಿ ಒಂದಾಗಿ | ಶಕ್ತಿ ಸಿಂಹನ ಮುಂದೆ ನಿಲ್ಲುವವೇ ಪೋಗಿ 3 ಪ್ರತ್ಯಕ್ಷದಲಿ ಅನಳನಿಹು ಸ್ಥಳದಲಿ | ಮತ್ತೆದೋರುದೇ ಮುಖ ಹಿಮವು ಇದಿರಲಿ 4 ಕಂದನ ಪ್ರಿಯ ಮಹಿಪತಿಯ | ಸ್ಮರಿಸದೇ | ಅಂಧಕನಂತೆ ಬಾಳುತಿಹಾವರಿಗಲ್ಲದೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು