ಕೇಳೇ ಯಶೋದೆ ನಿನ್ನ ತನಯನ ಲೀಲೆಯ
ಪೇಳಲು ಅಳವಲ್ಲವೇ ಪ
ಬಾಳುವ ಸತಿಯರ ಧಾಳಿ ಮಾಡುವ ಯದÀು
ಮೌಳಿ ಶ್ರೀ ಕೃಷ್ಣಗೆ ಪೇಳೀ ವಿವೇಕವ ಅ.ಪ
ಇಂದುವದನ ಎಮ್ಮ ಮಂದಿರಗಳ ಪೊಕ್ಕು
ಪೊಂದುವ ಪಾಲ್ಬೆಣ್ಣೆಯ
ಇಂದು ಸಿಕ್ಕಿದನೆಂದು ಕರಗಳಿಂ ಪಿಡಿಯಲು
ಮಂದಹಾಸವ ಬೀರಿ ಮನವ ಸೋಲಿಸುವನು 1
ನೀರಿಗೆ ಪೋಗಲು ಯಾರೂ ಇಲ್ಲದ ವೇಳೆ
ಸೇರುವ ಎಮ್ಮೊಡನೆ
ಮೀರಿ ಪೋಗಲು ಕಾಲು ಬಾರದ ಎಮ್ಮೊಳು
ಸಾರಸಾಕ್ಷ ಕೃಷ್ಣ ಸರಸವ ತೋರುವ 2
ನಿನ್ನ ತನಯ ಪ್ರಸನ್ನ ಶ್ರೀಕೃಷ್ಣನು
ಅನ್ಯಾಯಕಾರನಮ್ಮ
ಚನ್ನಾಗಿ ಇವನಿಗೆ ಬುದ್ಧಿ ಕಲಿಸದಿರೆ
ಬೆನ್ನು ಹತ್ತುವೆವು ಕನ್ಯೆಯರೆಲ್ಲರು 3