ಒಟ್ಟು 423 ಕಡೆಗಳಲ್ಲಿ , 80 ದಾಸರು , 357 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಂಚೀಕರಣಮಾಡಿ ತಾ ಸಂಚರಿಸುವ ಪ ಪಂಚೀಕರಣತಿಳಿಯದೆ ಪ್ರಪಂಚದೊಳು ಮುಳುಗಿ ನಾ ವಂಚಿತನಾದೆ ವಿರಿಂಚಿಭಕ್ತಿಗೆ ಅ.ಪ ಸಚ್ಚಿದಾನಂದ ರೂಪ ವ್ಯಾಪ್ತರೂಪಿ ನಾರಾಯಣ ಅಪ- ಅಚ್ಯುತ ತನ್ನಿಚ್ಛೆಯಿಂದ ವೈಕೃತಾಕಾಶಕ್ಕೆ ಅಂಭ್ರಣಿದೇವಿಯರನೆ ಮುಖ್ಯ ಮಾಡಿದಾ 1 ಗುಣರಾಶಿಯೊಳು ಸತ್ವಕ್ಕೆ ಶ್ರೀದೇವಿಯರು ಮುಖ್ಯ ರಜಕೆ ಭೂದೇವಿ ತಮಕೆ ದುರ್ಗಾದೇವೇರು ಸತ್ಯಜ್ಞಾನಾನಂದದಯೆ ಮೌನಪಂಚೇಂದ್ರಿಯ ಜಯ ಅಕ್ರೌರ್ಯಗುರು ಸೇವೆಯೇ ಸತ್ವಕಾರ್ಯವು2 ತಮಕ್ರೋಧ ಅಹಂಕಾರ ಮದೋನ್ಮಾದ ಚಪಲೋದ್ಯೋಗ ಡಂಭ ಸ್ವಚ್ಛಂದರಜದ ಕಾರ್ಯವು ತಮದ ಕಾರ್ಯ ಅಜ್ಞಾನ ಮೋಹ ನಿದ್ರಾಲಸ್ಯ ಬುದ್ಧಿಶೂನ್ಯ ತಾಪವಾದಿ ಹಿಂಸಾಕಾರ್ಯವು 3 ಸತ್ವಪ್ರಾಚುರ್ಯದಿ ಮದ ಗುಣತ್ರಯವೈಷಮ್ಯಹೊಂದಿ ಶ್ರೇಷ್ಠಕಾರ್ಯಕೆ ಮಹತ್ತತ್ವವಾಯಿತು ಸಾತ್ವತಾಂಪತಿಯ ಇಚ್ಛೆಯಿಂದ ಮಹತ್ತತ್ವದಿ ಅಹಂಕಾರ ತತ್ವವೆಂಬುದೇರ್ಪಟ್ಟಿತು 4 ತೈಜಸ ತಾಮಸ ಅಹಂಕಾರ ವೆನುತಲಿ ಮೂರಹಂ- ಕಾರದಿ ಮೂರು ರುದ್ರರೂಪಗಳು ಬ್ರಹ್ಮವಾಯು ಶೇಷರಿಂದುದಯಿಸಿದರು5 ವೈಕಾರಿಕ ಅಹಂಕಾರದಿ ದೇವತಾ ದೇಹ ಮನಸು ತೈಜಸದಿಂದ ದಶೇಂದ್ರಿಯ ಹುಟ್ಟಿತು ತಾಮಸಾಹಂಕಾರದಿಂದುತ್ಪನ್ನವಾದುವು6 ಸರ್ವ ಮಿಳಿತಮಾಡಿ ಬ್ರಹ್ಮಾಂಡವನೆ ಸೇರಿ ಹರಿಯು ಪದ್ಮನಾಭರೂಪದಿಂದ ಶಯನಗೈದನು ಸರ್ವಲೋಕೋದ್ಧಾರ ಹರಿಯು ನಾಭಿಯೊಳು ಪದ್ಮ ತೋರಿ ಪದುಮದಲ್ಲಿ ಪದ್ಮಸಂಭವನಾಸೃಜಿಸಿದ 7 ಸರ್ವರಂತರ್ಯಾಮಿ ಸಕಲಜೀವರನ್ನು ಸೃಷ್ಟಿಗೈಸಿ ಜೀವಯೋಗ್ಯತಾ ಕಾರ್ಯ ನಡೆಸುತಿರುವನು ಸರ್ವಜೀವಕಾರ್ಯವು ಪಂಚವಿಂಶತಿತತ್ವ ಈ- ಶರಿಂದಲೆ ಕಾರ್ಯನಡೆಯತಿರುವುದು8 ಶಬ್ದತನ್ಮಾತ್ರದಿಂದ ಆಕಾಶ ಹುಟ್ಟಿತು ವಾಯುಹುಟ್ಟಿತು ಸ್ಪರ್ಶತನ್ಮಾತ್ರದಿ ರೂಪತನ್ಮಾತ್ರದಿ ಅಗ್ನಿಭೂತ ಹುಟ್ಟಿತು ಆಗ ರಸತನ್ಮಾತ್ರದಿ ಅಷ್ಟು ಹುಟ್ಟಿತು 9 ಈ ಪರಿವಿರಾಟದಿಂದುಯಿಸಿದವು ಆಕಾಶ ಕೊಂದೆ ಶಬ್ದಗುಣವು ಮಾತ್ರ ಇರುವುದು ಅಹುದು ವಾಯವಿಗೆ ಶಬ್ದ ಸ್ಪರ್ಶವೆರಡುಗುಣಗಳು10 ತೋರುತಿರ್ಪುದಗ್ನಿ ಶಬ್ದಸ್ಪರ್ಶರೂಪ ಗುಣಗಳು ಗುಣ ಶಬ್ದ ಸ್ಪರ್ಶ ರೂಪ ರಸ ಗಂಧವೈದು ಪರಿ ಭೂತಪಂಚಕಗಳ ಅರಿವುದು 11 ಪಂಚಭೂತಗಳು ತಮ್ಮ ಸ್ವಾಂಶಗಳ ಭಾಗಗೈಸಿ ಪ್ರ- ಪಂಚ ಕಾರ್ಯಕಿತ್ತ ಪರಿಯದೆಂತೆನೆ ಆಕಾಶ ದರ್ಧಭಾಗ ಭೂತ ಪ್ರೇತ ಪಿಶಾಚಿಗಳಿಗೂ ಉಳಿ ಪಾದ ಪಾದವೆನ್ನೆ ಜೀವಕೋಟಿಗೂ12 ವಾಯು ತನ್ನರ್ಧಭಾಗ ಪಕ್ಷಿ ಪನ್ನಗಾದಿಳಿಗೂ ಪಾದ ಭಾಗ ಜೀವಕೋಟಿಗೂ ಅಗ್ನಿತನ್ನರ್ಧಭಾಗ ದೇವ ಋಷಿಗಳಿಗೂ ಮಿಕ್ಕಧರ್Àದೊಳ್ ಪಾದಭಾಗ ಜೀವಕೋಟಿಗೂ13 ಅಪ್ಪುತನ್ನರ್ಧಂಶ ಜಲಚರಪ್ರಾಣಿಗಳಿಗು ಮಿಕ್ಕರ್ಧದೊಳು ಪಾದಭಾಗ ಜೀವಕೋಟಿಗೂ ಪೃಥ್ವಿ ತನ್ನರ್ಧಂಶ ಜಡಜೀವಕೋಟಿಗೂ ಮಿಕ್ಕ ರ್ಧದೊಳ್ ಪಾದಭಾಗ ಜೀವಕೋಟಿಗೂ14 ಪೃಥ್ವಿ ಅಪ್ಪು ತೇಜೋ ವಾಯು ಆಕಾಶಗಳು ಸೂಕ್ಷ್ಮರೂಪದಿಂದೆರಡೆರಡಾದವು ಆಕಾಶತನ್ನರ್ಧಾಂಶದಲ್ಲಿ ವಾಯ್ವಗ್ನಿ ಅಪ್ಪು ಪೃಥ್ವಿಗಳಿ ಗೆ ಕೊಟ್ಟು ಸ್ವಾಂಶ ಅಂತಃಕರಣವೆನಿಸಿತು 15 ವಾಯು ಸ್ವಾಂಶದಿಂದುದಾನವೆಂದೆನಿಸಿ ಮಿಕ್ಕ ಪೃಥ್ವೈ ಪ್ತೇಜಾಕಾಶಗಳಿಗೆ ತನ್ನ ಚಲನ ಕೊಟ್ಟಿತು ಅಗ್ನಿ ತನ್ನಸ್ವಾಂಶದಿಂದ ಚಕ್ಷುಸೇಂದ್ರಿಯ ವೆನಿಸಿ ವಾಯ್ವಾಕಾಶಅಪ್ಪು ಪೃಥ್ವಿಗುಷ್ಣ ಕೊಟ್ಟಿತು 16 ಅಪ್ಪು ತನ್ನ ಸ್ವಾಂಶದಿಂ ರಸವೆಂದೆನಿಸಿ ಮಿಕ್ಕ ವಾಯ್ವಾಕಾಶಾಗ್ನಿ ಪೃಥ್ವಿಗೆ ದ್ರವವ ಕೊಟ್ಟಿತು ಪೃಥ್ವಿತನ್ನ ಸ್ವಾಂಶದಿಂ ಗಂಧವೆಂದೆನಿಸಿ ಮಿಕ್ಕ ಅಪ್ತೇಜವಾಯ್ವಾಕಾಶಕೆ ಕಠಿಣ ಕೊಟ್ಟಿತು 17 ಭೂತಪಂಚಕಗಳಿಗೆ ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನ ರೂಪವು ಅಧಿಷ್ಠಾನರಾಗಿ ಅವರಂತರ್ಯಾಮಿಯಾಗಿ ಅನಿರುದ್ಧಾದಿ ಐದು ಭಗವನ್ಮೂರ್ತಿ ಇರುವುದು 18 ನಾಮರೂಪ ವರ್ಣಗುಣ ಸ್ವಭಾವ ತೇಜ ಸುಮುಖ ದೇವರಶಕ್ತಿ ಅಕ್ಷರ ಕ್ರಿಯಾ ಎಂಬೀ ಹತ್ತು ಗುಣಗಳು ಭೂತ ಒಂದಕ್ಕೆ ತಿಳಿದು ಉಪಾಸನ ಮಾಳ್ಪಾದೂ ಬುಧರು ಎಲ್ಲರು 19 ನಾಮವೇ ಆಕಾಶ ರೂಪ ಒಟ್ಟು ಭಾವ ಬಯಲು ವರ್ಣ ಕಪ್ಪು ಗುಣಶಬ್ದ ಕ್ರಿಯ ಅನುಗ್ರಹ ಮುಖವೇ ಈಶಾನ ದೇವತೆ ಪರಶಿವಶಕ್ತಿ ಪರಾಶಕ್ತಿ ಅಕ್ಷರವೇ ನಾದವು20 ನಾಮ ವಾಯುರೂಪ ಷಟ್ಕೋಣ ವರ್ಣನೀಲ ಮುಖ ತತ್ಪುರುಷ ದೇವತೆ ಸದಾಶಿವ ಶಕ್ತಿ ಅಕ್ಷರ ಬಿಂದುವೆನಿಪುದು 21 ನಾಮ ಅಗ್ನಿರೂಪ ಮುಕ್ಕೋಣವರ್ಣ ರಕ್ತವರ್ಣ ಮುಖ ಅಘೋರ ದೇವತೆ ರುದ್ರಶಕ್ತಿ ಪಾರ್ವತಿ ಅಕ್ಷರ ಮಕಾರ 22 ನಾಮ ಅಪ್ಪುರೂಪ ಅಧರ್Éೀಂದು ಶ್ವೇತವರ್ಣ ಸ್ವಭಾವದ್ರವ ಗುಣ ಮಾಧುರ್ಯ ವಿಷ್ಣುಶಕ್ತಿ ಅಕ್ಷರಉಕಾರ ಎಂದು ಪೇಳ್ವರು 23 ನಾಮವೇ ಪೃಥ್ವಿರೂಪ ಚತುಷ್ಕೋಣ ವರ್ಣ ಹೇಮ ಸ್ವಭಾವವೇಕಠಿಣ ಕ್ರಿಯ ಸೃಷ್ಟಿ ಗುಣವೆ ಗಂಧವು ಮುಖಸದ್ಯೋಜಾತ ದೇವತೆ ಬ್ರಹ್ಮಶಕ್ತಿ ಸರಸ್ವತಿ ಅಕ್ಷರ ಅಕಾರವು 24 ಉಕ್ತರೀತಿ ಹತ್ತು ಗುಣಗಳೊಳ್ ಭೂತ ಒಂದ- ಕ್ಕೆತಿಳಿದು ಈ ಜ್ಞಾನೇಂದ್ರಿಯಗಳೆಂತಾದವು ಎಂದರಿವುದು ಆಕಾಶಸಮಾನಾಂಶ ಅಗ್ನಿಯು ಮುಖ್ಯಾಂಶದಿರೆ ಶ್ರೋತ್ರೇಂದ್ರಿಯ ಹುಟ್ಟಿ ತೋರುತಿರುವುದು25 ವಾಯುಸಮಾನಾಂಶ ಬಂದು ಅಗ್ನಿ ಮುಖ್ಯಾಂಶದಿರೆ ತ್ವಗೇಂದ್ರಿಯವು ತಾನೆ ತೋರುತಿರುವುದು ಜಿಹ್ವೇಂದ್ರಿಯವು ತೋರುತಿರುವುದು26 ಘ್ರಾಣೇಂದ್ರಿಯವು ತಾನೆ ತೋರುತಿರುವುದು ಅಗ್ನಿ ಸ್ವಾಂಶದಿಂದ ಚಕ್ಷುಷೇಂದ್ರಿಯವೆಂದು ಹಿಂದೆಯೇ ಈ ವಿವರ ಪೇಳಿರುವುದು27 ಪೃಥ್ವಿಸಮಾನಾಂಶದೊಡನೆ ಆಕಾಶ ಸಮಾಂಶಸೇರೆ ವಾಗೇಂದ್ರಿಯವೆ ತಾನೆ ತೋರುತಿರುವುದು ಪೃಥ್ವಿ ಮುಖ್ಯಾಂಶದೊಡನೆ ವಾಯು ಸಮಾಂಶಸೇರೆ ಘ್ರಾಣೇಂದ್ರಿಯವು ತಾನೆ ತೋರುವುದು 28 ಪೃಥ್ವಿಮುಖ್ಯಾಂಶದೊಡನೆ ಅಗ್ನಿ ಸಮಾಂಶಸೇರೆ ಪಾದೇಂದ್ರಿಯವು ತಾನೆತೋರುತಿರ್ಪದು ಪೃಥ್ವಿ ಮುಖ್ಯಾಂಶರೊಡನೆ ಅಪ್ಪು ಸಮಾವಾಂಶ ಸೇರೆ ಪಾಯೇಂದ್ರಿಯವೆಂದು ತೋರುತಿರ್ಪುದು29 ಪೃಥ್ವಿಸ್ವಾಂಶವೇ ಗುಹ್ಯೇಂದ್ರಿಯವೆಂದು ಪೂ ರ್ವೋಕ್ತ ರೀತಿಗಣನೆ ತರುವುದು ಈ ರೀತಿ ಕರ್ಮೇಂದ್ರಿಯಗಳೆಲ್ಲ ಪೃಥ್ವಿ ತತ್ವದಿಂದಲೇ- ರ್ಪಟ್ಟು ಬೆಳಗುತಿರುವುದು30 ಆಕಾಶ ಸಮಾನಾಂಶ ಅಪ್ಪು ಮುಖ್ಯಾಂಶದಿರೆ ಶಬ್ದ ವಾಯು ಸ್ವಯಾಂಶದಿ ಅಪ್ಪು ಮುಖ್ಯಾಂಶದಿ ಸ್ಪರ್ಶತೋರ್ಪುದು ಅಗ್ನಿ ಸಮಾನಾಂಶ ಅಪ್ಪು ಮು ಅಪ್ಪು ಮುಖ್ಯಾಂಶದಿಂದಲೆ31 ಅಪ್ಪುಸ್ವಯಾಂಶವೇ ರಸವು ಎಂದೆನಿಸಿತು ತನ್ಮಾತ್ರಪಂಚಕಕ್ಕೆ ಮೂಲ ಅಪ್ಪುತತ್ವವು ಪ್ರಾಣಾದಿಪಂಚಗಳ ಮುಂದೆ ವಿವರಿಸಿಹುದು ವಾಯುತತ್ವವೇ ಅದಕೆ ಮುಖ್ಯಕಾರಣ32 ವಾಯು ಮುಖ್ಯಾಂಶದೊಳು ಆಕಾಶ ಸಮಾನಾಂಶ ಸೇರೆ ಸಮಾನ ವಾಯುವೆಂತೆಂದೇರ್ಪಟ್ಟಿತು ವ್ಯಾನ ವಾಯು ಎಂತೆಂದೇರ್ಪಟ್ಟಿತು 33 ವಾಯು ಮುಖ್ಯಾಂಶದೊಳು ಅಪ್ಪು ಸಮಾನಾಂಶ ಸೇರೆ ಅಪಾನವಾಯುವೆಂತೆಂದೇರ್ಪಟ್ಟಿತು ವಾಯು ಮುಖ್ಯಾಂಶದೊಡನೆ ಪೃಥ್ವಿಸಮಾನಾಂಶ ಸೇರಲು ಪ್ರಾಣ ವಾಯು ಉತ್ಪನ್ನವಾಯಿತು34 ವಾಯುವಿನ ಸ್ವಯಾಂಶವೇ ಉದಾನವಾಯುವೆನಿಸಿತು ಮುಂದೆ ವಿವರಿಸುವುದು ಜ್ಞಾನ ಪಂಚಕ ಈ ಜ್ಞಾನ ಪಂಚಕಕ್ಕೆ ಆಕಾಶ ತತ್ವವೇ ಮುಖ್ಯಕಾರಣವೆಂದು ಬುಧರು ಪೇಳ್ವರು35 ಆಕಾಶ ಮುಖ್ಯಾಂಶದಿ ವಾಯು ಸಮಾನಾಂಶ ಸೇರಿ ದಾಗಲೆ ಮನಸು ಎಂಬುವುದು ಹುಟ್ಟಿತು ಆಕಾಶ ಮುಖ್ಯಾಂಶದಿ ಅಗ್ನಿ ಸಮಾನಾಂಶ ಸೇರಿ ದಾಗಲೆ ಬುದ್ಧಿ ಎಂಬುದು ಗೋಚರವಾಯಿತು 36 ಸೇರೆ ಚಿತ್ತವೆಂಬುದು ವ್ಯಕ್ತವಾಯಿತು ಆಕಾಶ ಮುಖ್ಯಾಂಶದೊಳು ಪೃಥ್ವಿಸಮಾನಾಂಶ ಸೇರಿ ಅಹಂಕಾರವೆಂಬುದೇರ್ಪಟ್ಟಿತು 37 ಆಕಾಶ ಸ್ವಾಂಶವೇ ಕತೃತ್ವವೆಂದೆನಿಸಿತು ಈಪರಿಯ ತಿಳಿವುದು ಜ್ಞಾನಪಂಚಕ ಜ್ಞಾನೇಂದ್ರಿಯ ಕರ್ಮೇಂದ್ರಿಯ ಪಂಚತನ್ಮಾ ತ್ರಗಳಿಗೆ ಆಧ್ಯಾತ್ಮಿಕಾದಿಭೌತಿಕದೇವತೆಗಳ ತಿಳಿವುದು 38
--------------
ಉರಗಾದ್ರಿವಾಸವಿಠಲದಾಸರು
ಪಡಿ ಇನಿಯನ ವಶದಿ ಮನಸಿಜನಯ್ಯನ ದಯದಿಂದ ಬಾಲೆ ಪ ಮನೆಗೆಲಸಗಳನು ದಿನಗೈಯುತ ಬಲು ವಿನಯ ಸೌಶೀಲ್ಯದಿ ವನಿತೆಯರೊಳು ನೀ 1 ಪತಿಯನು ಪರದೇವತೆಯೆಂಬುವ ಮಹಾ ಮತಿಯಲಿ ಸೇವಿಸಿ ಸುತರನು ಪಡೆದು ನೀ 2 ಗುರುಜನರಿಗೆ ಸದಾಶಿರಬಾಗುತ ಬಹು ಸರಸದಿ ಸದ್ಗುಣಾಭರಣಗಳಿಂದ ನೀ 3 ರತಿಪತಿ ಪಿತನಿಗೆ ಪ್ರತಿಮೆಗಳೆನ್ನುತ ಅತಿಥಿಗಳನು ಸಂತತ ಸತ್ಕರಿಸುತ 4 ಗಿರಿಜೆಯ ಪೂಜೆಯನು ನಿರುತದಿಗೈಯುತ ಸಿರಿಕಾರ್ಪರ ನರಹರಿಯನು ಸ್ಮರಿಸುತ 5
--------------
ಕಾರ್ಪರ ನರಹರಿದಾಸರು
ಪತಿಯೆ ಪರದೇವತೆಯು ಸತಿಯರಿಗೆ ಜಗದಿ ಮತಿಯರಿತು ಭಜಿಸಿ ಪರಗತಿಯ ಸಾರುವುದು ಪ. ಉದಯಕಾಲದೊಳೆದ್ದು ಸದಮಲ ಶುಧ್ಧಿಯಲಿ ಪಾದ ಮನದಿ ಸ್ಮರಿಸುತಲಿ ಪತಿ ಹೃದಯದಲಿರುವನು ಎಂದು ಪತಿ ಪದಕರ್ಪಿಸುವುದು 1 ಆದರದಲಿ ಪತಿಯ ಪಾದವನೆ ತೊಳೆದು ಆ ಸ್ವಾದೋದಕವ ಪಾನಗೈದು ಸುಖಿಸುವುದು ವೇದಗೋಚರ ಹರಿಯೆ ನೀ ದಯವ ಮಾಡೆಂದು ಆದರದಿ ಪತಿಯ ಮನವರಿತು ನುಡಿಯುವುದು 2 ಸ್ವಚ್ಛದಲ್ಲಿ ಮನದ ತುಚ್ಛ ವಿಷಯವ ತೊರೆದು ಇಚ್ಛೆಯಿಂದಲಿ ಹರಿಯ ನಾಮಗಳ ಭಜಿಸಿ ಅಚ್ಯುತಾನಂತ ಗೋವಿಂದನೆನ್ನುತ ಸತತ ಮಚ್ಚಾದ್ಯನೇಕ ಅವತಾರ ನೆನೆಯುವುದು 3 ಪತಿಯೆ ಹರಿಯೆಂದರಿತು ಪತಿಯೆ ಗುರುವೆಂದರಿತು ಪತಿಯ ಪೂಜೆಯನು ಅತಿ ಹಿತದಿ ಗೈಯ್ಯುವುದು ಪತಿಯಂತರ್ಗತನೆ ಎನ್ನತಿಶಯದಿ ಪೊರೆಯೆಂದು ಪತಿವ್ರತವ ನಡೆಸುತಲಿ ಹಿತದಿ ಬಾಳುವುದು 4 ಪತಿಯ ನಿಂದಕಳಿಗೆ ಗತಿಯಿಲ್ಲ ಪರದಲ್ಲಿ ಅತಿ ಬಾಧೆಪಡಿಸುವನು ಯಮನು ನಿರ್ದಯದಿ ಪತಿವ್ರತವ ಸಾಧಿಸುವ ಸತಿಯರಿಗೆ ಅನವರತ ಚ್ಯುತರಹಿತ ಪದವೀವ ಗೋಪಾಲಕೃಷ್ಣವಿಠಲ5
--------------
ಅಂಬಾಬಾಯಿ
ಪದುಮನಾಭನ ಚರಿತೆಯು ಪರಮಾದ್ಭುತವು ಪ ಯದುಕುಲ ಲೋಲನ ವಿಧ ವಿಧ ಲೀಲೆಯೊ ಪದೇ ಪದೇ ನೆನೆಯಲು ಪರಮಹರುಷ ಮನಕೆ ಅ.ಪ. ದೇವತೆಗಳ ಮೊರೆ ಲಾಲಿಸಿ ಭುವಿಯೊಳು ದೇವಕಿ ಸುತನಾಗಿ ಜನಿಸಿದನು ಗೋವಳರೊಡಗೂಡಿ ಗೋವ್ಗಳ ಕಾಯ್ದ ಬೃಂ ದಾವನ ಲೋಲನು ಶ್ರೀವೇಣುಗೋಪಾಲ 1 ಕಾಮಜನಕ ಸರ್ವಕಾಮಿತದಾಯಕ ಕಾಮಿನಿಯರ ಕೂಡೆ ಕ್ರೀಡಿಸಿದನನಘ ಆ ಮಹಾಭಕ್ತ ಅಕ್ರೂರನಿಗೊಲಿದನು ತಾಮಸ ಕಂಸನ ಧ್ವಂಸಗೈದನು ದೇವ 2 ಕರಿಗಿರೀಶ ಮುಚುಕುಂದ ವರಪ್ರದ ಸರಸಿಜಾಕ್ಷ ಶ್ರೀರುಕ್ಮಿಣಿರಮಣ ಸುರರಿಪು ನರಕಾಸುರ ಸಂಹಾರಕ ಸುರಮಾತೆಗೆ ಕುಂಡಲಿಗಳನಿತ್ತನು 3
--------------
ವರಾವಾಣಿರಾಮರಾಯದಾಸರು
ಪದ್ಮನಾಭ ಪದ್ಮನಾಭ ಉಡುಪಿನ ಶ್ರೀಕೃಷ್ಣಜಯ ದುರ್ಜನರಿಗೆ ಅತಿದೂರ ಸುವ್ವಿಸುವ್ವಿ ಸುವ್ವಾಲೆ ಪ. ಸುರರ ಶಿರೋರನ್ನ ಗರುಡವಾಹನನೆ ಕರುಣಸಂಪನ್ನ ಉಡುಪಿನಕರುಣಸಂಪನ್ನ ಉಡುಪಿನ ಶ್ರೀಕೃಷ್ಣಶರಣಾಗು ಧನ್ಯ ಜನರಿಗೆ1 ಮುಖ್ಯಪ್ರಾಣ ಭಾರತೀರಮಣಗೆ ಎರಗುವೆ 2 ರಾಮನಂಘ್ರಿಯ ಸೇವೆ ಪ್ರೇಮದಿಂ ಮಾಡಿದಶ್ರೀಮಂತ ನಮ್ಮ ಹನುಮಂತಶ್ರೀಮಂತ ನಮ್ಮ ಹನುಮಂತನೆಂದವಗೆಕಾಮಿತಾರ್ಥಗಳ ಕೊಡುವನೆ 3 ಭಾರತ ಯುದ್ಧದಲಿ ಬಾಹುಬಲ ತೋರಿದಧಾರಿಣೀಶ್ವರ ತಿಲಕನೆಧಾರಿಣೀಶ್ವರ ತಿಲಕನೆ ಶ್ರೀ ಭೀಮಸಾರಿದ ಜನರ ಸಲಹುವ 4 ಶುದ್ಧಶಾಸ್ತ್ರಗಳಿಂದ ಗೆದ್ದು ವಾದಿಗಳನು ಹೊದ್ದಿದ ಜನರ ಕರುಣದಲಿಹೊದ್ದಿದ ಜನರ ಕರುಣದಲಿ ಹೊರೆವ ಶ್ರೀಮಧ್ವಮುನಿಪನ ಭಜಿಸುವೆ 5 ಹರಿಯ ಸತ್ಕರದಲ್ಲಿ ಕರುಣಂಗಳೊಡನೆದುರುಳ ವಾದಿಗಳ ಗೆಲಿದನೆÀದುರುಳ ವಾದಿಗಳ ಗೆಲಿದನೆ ಹೃಷಿಕೇಶಗುರುಗಳಂಘ್ರಿಗೆ ನಮಿಸುವೆ 6 ದೇಶ ದೇಶದೊಳುಳ್ಳ ದೂಷಿವಾದಿಗಳನ್ನು ದೂಷಿಸಿ ಹರಿಯ ಮಹಿಮೆಯನುದೂಷಿಸಿ ಹರಿಯ ಮಹಿಮೆಯ ಮೆರೆದ ಶ್ರೀನೃಸಿಂಹತೀರ್ಥಯತಿರಾಯ7 ಅದ್ವೈತವಾದಿಗಳ ಗೆದ್ದು ನಿರ್ಮಲವಪ್ಪಮಧ್ವಮಾರ್ಗವನು ಜಗಕೆಲ್ಲಮಧ್ವಮಾರ್ಗವನು ಜಗಕೆಲ್ಲ ತೋರಿದ ಜ-ನಾರ್ದನತೀರ್ಥಯತಿರಾಯ8 ಇಂದಿರೆಯರಸನ ಎಂದೆಂದು ಪೂಜಿಸಿಮಂದಮಾಯಿಗಳ ಕುಮತವಮಂದಮಾಯಿಗಳ ಕುಮತವ ಗೆಲಿದ ಉ-ಪೇಂದ್ರÀತೀರ್ಥಯತಿರಾಯ9 ಈ ಮಹಿಯೊಳಗುಳ್ಳ ತಾಮಸ ಜನರನ್ನುಶ್ರೀಮಧ್ವ ಮುನಿಪನ್ನ ಮತದಿಂದಶ್ರೀಮಧ್ವಮುನಿಪನ್ನ ಮತದಿಂದ ಖಂಡಿಸಿವಾಮನತೀರ್ಥರೆಸೆದರು 10 ಧೀರ ತಾಪಸರಾಗಿ ಗುರುಮಧ್ವಮುನಿಯಚಾರುಚರಣಂಗಳ ಪಿಡಿದಿರ್ದಚಾರುಚರಣಂಗಳ ಪಿಡಿದಿರ್ದ ಶ್ರೀವಿಷ್ಣು-ತೀರ್ಥರಡಿಗೆ ನಮಿಸುವೆ11 ಕಾಮನ ನೆರೆ ಅಟ್ಟಿ ಶ್ರೀಮಹಾವಿಷ್ಣುವೇ ಸ್ವಾಮಿ ಎಂಬುದನು ಜಗಕ್ಕೆಲ್ಲ ಸ್ವಾಮಿ ಎಂಬುದನು ಜಗಕ್ಕೆಲ್ಲ ತೋರಿದ ರಾಮತೀರ್ಥಯತಿರಾಯ12 ಮನುಮಥನಯ್ಯನ ಘನತೆಯ ತೋರಿಸಿನರ ಮೋಹಗಳ ಬಿಡಿಸಿದಜನರ ಮೋಹಗಳ ಬಿಡಿಸಿದ ಅಧೋಕ್ಷಜಮುನಿಕುಲಾಗ್ರಣಿಗೆ ನಮಿಸುವೆ13 ಮಧ್ವಕಿಂಕರರಾದ ಪದ್ಮನಾಭಾರ್ಯರವಿದ್ಯಾವೈಭವಗಳ ಪೊಗಳುವವಿದ್ಯಾವೈಭವಗಳ ಪೊಗಳುವ ಕವಿಯಾರುಶುದ್ಧ ಮುನಿಗಳಿಗೆ ಅಳವಲ್ಲ 14 ಸ್ವದೇವ ಹಯವದನನ ಆವಾಗ ಪೂಜಿಪ ಪಾವನ್ನ ಮಧ್ವಮುನಿಪನಪಾವನ್ನ ಮಧ್ವಮುನಿಪನ ಶಿಷ್ಯರಾದದೇವತೆಗಳ ಮರೆಹೊಕ್ಕೆ 15
--------------
ವಾದಿರಾಜ
ಪರದೇವತೆ ಪದ್ಮಾವತಿ ಶರಣಾಗತೋದ್ಧಾರಣೆ ಜನನಿ ಪ ನಿರತವೂ ನಿನ್ನ ಚರಣಕಮಲ ನೆರೆನಂಬಿದೆಕರುಣಾವಾರಿಧೆ ಅ.ಪ ಶಾಪವಿತ್ತ 1 ಭೂವರನಿಗೆ ಮಗಳೆನ್ನಿಸಿ ಮಾಡಿಸಿದಾ 2 ಲೋಕವರಿಯೆ ಪದ್ಮ ಸರಸಿಯೋಳ್ ನೆಲಸಿದೆ ಭೂಕಾಂತ ಗುರುರಾಮವಿಠಲ ಅರಸಿ 3
--------------
ಗುರುರಾಮವಿಠಲ
ಪರಮ ಕಾರುಣ್ಯ ಗುರು ಕರುಣಿಸೆನಗ್ಹರಿ ಪದವ ಶರಣೆಂದು ನಮಿಪೆ ನಿಮಗೆ ಪ. ಹರಿಯ ದಾಸತ್ವದಲಿ ವರದೀಕ್ಷೆಯನೆ ಕೊಟ್ಟು ಕರುಣಿಸಿ ಕೃಪೆಗೈದಿರಿ ಗುರುವೆ ಅ.ಪ. ಅಂಕಿತವ ಮೊದಲಿತ್ತು ಹೃದಯಾಂಕದಲಿ ನಿಲಸಿ ಮಂಕುಬುದ್ಧಿಯ ತೊಲಗಿಸಿ ಶಂಖ ಚಕ್ರಾಂಕಿತನ ಪದಕಮಲವನು ಮನ ಪಂಕಜದೊಳಗೆ ತೋರಿ ಶಂಕರಾರ್ಚಿತನ ಕೃಪೆ ಎನ್ನೊಳಾಗಲಿ ಎಂದು ಶಂಕಿಸದೆ ವರವಿತ್ತಿರಿ ಗುರುವೆ 1 ಶ್ರೀನಿವಾಸನು ನಿಮ್ಮೊಳ್ ಸಾನುರಾಗದಿ ನೆಲಸಿ ತಾನಿತ್ತ ದಾಸತ್ವವ ಏನೆಂಬೆ ಈಗಭಿಮಾನವ ತೊರೆ ಎನುತ ತಾ ನುಡಿಸುತಿಹನು ನಿಮ್ಮೊಳ್ ಮಾನಾಭಿಮಾನ ಹರಿ ಗುರುವಶವಾಗಿರಲು ನಾನಳುಕಲಿದಕೇತಕೆ ಗುರುವೆ 2 ಸ್ವಪ್ನದಲಿ ದಾಸತ್ವ ಸಿದ್ಧಿಸಲಿ ಎಂದೆನುವ ಅಪ್ರತಿಮ ನುಡಿ ಕೇಳಿದೆ ಕ್ಷಿಪ್ರದಿಂದಲಿ ಕರುಣಿಸಿದಿರೆನಗಾಗಿದನಿನ್ನು ತಪ್ತವಾಯಿತು ಭವದ ದುರಿತ ಆಪ್ತಗುರು ನಿಮ್ಮಂಥ ಮಹಿಮರನು ನಾ ಕಾಣೆ ಗುಪ್ತದಲಿ ಜಗದಿ ಮೆರೆವ ಗುರುವೆ 3 ಇತ್ತಿರೆನಗೊಂದೊಂದೆ ದಾಸತ್ವ ಸಾಮಗ್ರಿ ಅತ್ಯಧಿಕ ಕರುಣೆಯಿಂದ ನಿತ್ಯವಾಗಿರಲಿ ಹರಿದಾಸತ್ವ ಇಹ ಪರದಿ ಸತ್ಯವಂತರ ಕೃಪೆಯಲಿ ನಿತ್ಯದಲಿ ನೀತ ಗುರು ನಿಮ್ಮಿಂದ ನಿಜ ರೂಪ ವ್ಯಕ್ತವಾಗಲಿ ಜ್ಞಾನದೀ ಗುರುವೆ 4 ಸಿರಿ ತಂದೆ ಮುದ್ದುಮೋಹನದಾಸರಾಯ ಗುರುವೆ ನಿಮ್ಮ ಕರುಣದಿ ಪರಿ ಪರಿ ಭವಪಾಶ ದುರಿತಗಳು ದೂರಾದವು ಪರಮ ಸಾತ್ವಿಕರೆ ಸಿರಿವರನ ಪದ ಭಜಿಪಂಥ ವರದೇವತಾಂಶರೆನಿಪ ಗುರುವೆ 5 ಮಂದರಿಗೆ ಬಹು ಮಲಿನರಂದದಲಿ ತೋರುತ ಕಂದರ್ಪಪಿತನ ಸ್ಮರಿಪ ಒಂದೊಂದು ವ್ಯಾಪಾರ ಅರಿಯಲಳವಲ್ಲಿನ್ನು ಮಂದಮತಿಯಾದ ಎನಗೆ ಬಂದು ಭೂಲೋಕದಲಿ ಸಜ್ಜನರನುದ್ಧರಿಪ ತಂದೆ ನಿಮ್ಮರಿವರ್ಯಾರೊ ಗುರುವೆ 6 ಅರಿಯೆ ಅನ್ಯರನಿನ್ನು ಶ್ರೀ ಗುರುವೆ ಕರುಣಿಸಿರಿ ವರಜ್ಞಾನ ಸುಧೆಯನಿತ್ತು ವರಶೇಷಶಯನನ ನಿರುತ ಸೇವಿಸುವಂಥ ಪರಮಭಾಗ್ಯವ ಕರುಣಿಸಿ ಸಿರಿವರ ಗೋಪಾಲಕೃಷ್ಣವಿಠ್ಠಲನ ರೂಪ ತ್ವರಿತದಿಂ ತೋರಿ ಪೊರೆಯೊ ಗುರುವೆ 7
--------------
ಅಂಬಾಬಾಯಿ
ಪರಮ ಪಾಪಿಷ್ಠ ನಾನು ಪ ನರಹರಿಯೆ ನಿಮ್ಮ ನಾಮ ಸ್ಮರಣ ಮಾಡದಲೆ ನರಕಕ್ಕೆ ಗುರಿಯಾದೆನೋ ಹರಿಯೆ ಅ.ಪ. ಹೊಸಮನೆಯ ಕಂಡು ಬಲು ಹಸಿದು ಭೂಸುರರು ಬರೆ ಕೊಸರಿ ಹಾಕುತ ದಬ್ಬುತ ಶಶಿಮುಖಿಯೆ ಬಾರೆಂದು ಅಸಮಸದಿ ಬಣ್ಣಿಸಿ ವಶವಾಗಿ ಅವಳೊಲಿಸುತ ದಶಮಿ ಏಕಾದಶಿ ದ್ವಾದಶೀ ದಿನತ್ರಯದಿ ಅಶನವೆರಡ್ಹೊತ್ತುಣ್ಣುತ ಘಸಘಸನೆ ತಾಂಬೂಲ ಪಶುವಿನಂದದಿ ಮೆದ್ದು ಕುಸುಮ ಗಂಧಿಯ ರಮಿಸುತ ಸತತ 1 ಕೆರೆ ಭಾವಿ ದೇವಾಲಯವ ಕೆಡಿಸಿ ದಿವ್ಯ ಹಿರಿದಾಗಿ ಮನೆ ಕಟ್ಟದೆ ನೆರೆ ನಡೆವ ಮಾರ್ಗದೊಳು ಅರವಟ್ಟಗೆಗಳನ್ನು ಧರಧರದಿ ಬಿಚ್ಚಿ ತೆಗೆದೆ ಪರಮ ಸಂಭ್ರಮದಿಂದ ಅರಳಿಯಾ ಮರ ಕಡಿಸಿ ಕೊರೆಸಿ ಬಾಗಿಲು ಮಾಡಿದೆ ಏಕ ಮಂದಿರವ ಮುಗಿಸಿ ಹರುಷ ಚಿತ್ರವ ಬರೆಸಿ ಪರಿಪರಿಯ ಸುಖ ಸಾರಿದೇ ಮೆರೆದೆ 2 ಸಾಕಲ್ಯದಿಂದ ಸಾಲಿಗ್ರಾಮದ ಅಭಿಷೇಕ ಆಕಳ ಹಾಲಲಿ ಮಾಡದೆ ನಾಕೆಂಟು ನಾಯಿಗಳ ಸಾಕಿ ಮನೆಯೊಳು ಬದುಕ ಬೇಕೆಂದು ಹಾಲು ಹೊಯ್ದೆ ಕಾಕು ಬುದ್ಧಿಗಳಿಂದ ಗುಡಿ ಗುಡಿ ನಸಿ ಪುಡಿ ಹಾಕಿ ಭಂಗಿಯಾ ಸೇದಿದೆ ಲೋಕ ನಿಂದಕ ನಾಗಿ ಪಾಪಕ್ಕೆ ಕೈ ಹಚ್ಚಿ ಅ ನೇಕ ಜೂಜುಗಳಾಡಿದೇ ಬಿಡದೆ 3 ಸ್ನಾನ ಸಂಧ್ಯಾನ ಅತಿಮೌನ ಗಾಯಿತ್ರಿ ಜಪ ಭಾನುಗಘ್ರ್ಯವನು ಕೊಡದೆ ಹೀನತ್ವ ವಹಿಸಿ ದಾನ ಧರ್ಮವ ಮಾಡದೆ ಶ್ವಾನನಂದದಿ ಚರಿಸಿದೇ ಶ್ರೀನಿವಾಸನೆ ನಿನ್ನ ಅನುಪೂರ್ವಕ ಪೂಜೆ ನಾನೊಂದು ಕ್ಷಣಮಾಡದೇ ಬೇನೆ ಬಂದಂತಾಗೆ ಹೀನ ಸಕೇಶಿಯ ಕೈಲೆ ನಾನ ವಿಧಾನ್ನ ತಿಂದೇ ನೊಂದೇ 4 ಭಾಗವತ ಕೇಳಲಿಕೆ ಆದರವೆ ಪುಟ್ಟಲಿಲ್ಲಾ ವಾದಿಗಳ ಮತವಳಿದ ಮಧ್ವ ಸಿದ್ಧಾಂತದ ಹಾದಿಗೆ ಹೋಗಲಿಲ್ಲ ಶೋಧಿಸಿದ ಚಿನ್ನಕೆ ಸಮರಾದ ವೈಷ್ಣವರ ಪಾದಕ್ಕೆ ಬೀಳಲಿಲ್ಲ ವೇದ ಬಾಹಿರನಾಗಿ ಅಪಸವ್ಯ ಮನನಾಗಿ ಓದಿಕೊಂಡೆನೋ ಇದೆಲ್ಲ ಸುಳ್ಳ 5 ಉತ್ತಮ ಬ್ರಾಹ್ಮಣರ ವೃತ್ತಿಗಳನೆ ತೆಗಸಿ ಬ್ರ ಹ್ಮಹತ್ಯಗಾರನು ಎನಿಸಿದೆ ಮತ್ತೆ ಮದುವೆ ಮುಂಜಿ ಸಮಯಕ್ಕೆ ನಾ ಪೋಗಿ ಸತ್ತ ಸುದ್ದಿಯ ಪೇಳಿದೆ ವಿತ್ತವಿದ್ದವರ ಬೆನ್ಹತ್ತಿ ದೂತರ ಕಳುಹಿ ಕುತ್ತಿಗೆಯ ನಾ ಕೊಯ್ಸಿದೆ ನಿತ್ಯ ಕಲ್ಲೊಡೆಯುತಿರೆ ಮೃತ್ಯು ದೇವತೆಯೆನಿಸಿದೆ ಬಿಡದೇ 6 ಕ್ಷಿತಿಯೊಳಗೆ ಇನ್ನಾರು ಹಿತವ ಬಯಸುವವರೆನಗೆ ಗತಿಯೇನು ಪೇಳೊ ಕೊನೆಗೆ ಸತತ ತವ ಧ್ಯಾನದಲಿ ರತನಾಗಿ ಇರುವ ಸ ನ್ಮತಿಯ ಪಾಲಿಸಯ್ಯ ಎನಗೆ ಪತಿತಪಾವನನೆಂಬ ಬಿರಿದು ಅವನಿಯ ಮೇಲೆ ಶ್ರುತಿ ಸಾರುತಿದೆಯೋ ಹೀಗೆ ಶಿತಕಂಠನುತ ಜಗನ್ನಾಥವಿಠ್ಠಲ ನಿನಗೆ ನುತಿಸದೆ ಬೆಂಡಾದೆ ಕಾಯೋ ಹರಿಯೆ 7
--------------
ಜಗನ್ನಾಥದಾಸರು
ಪರಿಣಯ ಮಹೋತ್ಸವವು ಪ ಮಂಗಳ ಮಂಟಪವು ಚಪ್ಪರದಲ್ಲಿ .ಶೃಂಗಾರ ವರ ಪೀಠವು ಕಂಗೊಳಿಪ ರುಚಿರಾಂಬರಾಳಿಯು ಮಂಗಳ ಸುವಾದ್ಯಂಗಳಿಂದಲಿ 1 ಸುತ್ತ ದೀಪಾವಳಿಯು ಸುವರ್ಣದ ಮುತ್ತಿನ ತೋರಣವು ವಜ್ರ ಪದ್ಮವು ಸುತ್ತು ವೀಳೆಯ ಪುಷ್ಪ ನಿಚಯವು ಸುತ್ತೆ ಜವ್ವಾಜಿಗಳ ಪರಿಮಳ ಸುತ್ತಿ ಸುಳಿವ ಸುಗಂಧ ಲಹರಿಯು 2 ಬೀಗರು ಹಸೆಯೊಳಿರೆ ಆ ಮಧ್ಯದಿ ಬೀಗಿತ್ತಿಯರು ಕುಳ್ಳಿರೆ ಆಗ ನಿಶ್ಚಿತ ಲಗ್ನದಲ್ಲಿ ವಧೂವರರ ಪೂಜಿಯನು ಗೈಯಲು ತುಂಬಿರಲು ಸಭೆಯೊಳು 3 ದಾರಾ ಮಹೊತ್ಸವವು ಅಕ್ಷತೆಗಳ ಸೇರೆಯೊಳೆರೆಯುವುದು ನಾರಿಯರ ವರದೇವತಾಸ್ತುತಿ ಸಾರೆ ಭೂಸುರರಾಶಿಷಂಗಳು ಸೇರೆ ಸಂಗೀತಗಳ ವೈಖರಿ ಸಾರಿ ಸುರಗಣ ಜಯಜಯನ್ನಲು 4 ಮಾಡೆ ದಾನದಕ್ಷಿಣೆಯಾಗಲು ಬಾನುರಾಗದೆ ಸರ್ವರನ್ನು ವಿನೋದದಿಂದುಪಚರಿಸುತಿರಲು ಹರಸೆ ಸಂತೋಷದಿ 5
--------------
ಬೇಟೆರಾಯ ದೀಕ್ಷಿತರು
ಪಾದ ಪಂಕಜವನು ಪ ಮಂಕುಮತಿಯ ಬಿಡಿಸಿ ನಿನ್ನ ಕಿಂಕರನೆಂದೆನಿಸೊ ಅ.ಪ. ಕಲಿಯುಗದೊಳು ನೀನು ಸಕಲ ಸುಜನರ ಕಲುಷ ಕಳೆಯುವೆನೆಂದು ಬಹುಮೋದದಿಂದ ಎಲರುಣಿ ಪರುವತದೊಳಗೆ ವಾಸನಾಗಿ ಕರ ಪಿಡಿದಂಥ 1 ತೆತ್ತೀಸಕೋಟಿ ದೇವತೆಗಳು ತನ್ನ ಸುತ್ತಲು ನಿಂತು ಪರಿಚರಿಯವನು ಮಾಡೆ ಎತ್ತ ನೋಡಲು ಸಿರಿಯು ಓ ಎನುತಿರೆ ಚಿತ್ತಜನೈಯ್ಯನು ನಗುತ ನಿಂದಿರುವಂಥ 2 ಭುವನತ್ರಯಂಗಳನೆಲ್ಲ ಲೀಲೆಯಿಂ ಕಾವ ಪವನವಂದಿತನೆ ಮಹಾನುಭಾವ ನವ ಮೋಹನಾಂಗ ಶ್ರೀ ರಂಗೇಶವಿಠಲಜವನ ಬಾಧೆಯ ಬಿಡಿಸಯ್ಯಾ ಶ್ರೀಲೋಲ 3
--------------
ರಂಗೇಶವಿಠಲದಾಸರು
ಪಾರ್ವತಿ ದೇವಿ ಉಮಾ - ನಿನಗೆ ಸರಿಯಾರೇಕಮ್ಮಗೋಲ್ವೈರಿಯ ಪ್ರೇಮ ಪಾತ್ರಳಾದ ಪ ಆಡೂವ ನುಡಿಗಳ - ಜೋಡಿಸಿ ಹರಿಯಲಿಮಾಡೀಸು ಸತ್ಸಾಧನಾ ||ಬೇಡಿಕೊಂಬೆನು ದೇವಿ - ರೂಢಿಗೊಡೆಯನ ತಡಮಾಡದೆ ತುತಿಪಂಥ - ಜೋಡಿಸು ಮನಾ 1 ಸುರಪಾದಿ ದೇವತೆ ಕರಗಳ ಜೋಡಿಸಿಶರಣೆಂದು ಪೇಳುವರೇ ||ಹರ್ಯಕ್ಷ ಯಕ್ಷನ ಈಕ್ಷಿಸಿ ಬರುತಿರೆಹರಿ ಪೇಳೆ ಸುರಪಗೆ ಬೋಧಿಸಿದೆ 2 ಸತಿ - ವ್ಯತ್ಯಸ್ತ ಮನವನುಸತ್ಯಾತ್ಮನಲಿ ನಿಲಿಸೇ ||ಅರ್ಥೀಲಿ ಹರಿಯ - ಅತ್ಯರ್ಥ ಪ್ರಸಾದಕ್ಕೆಪಾತ್ರನೆಂದೆನಿಸಿ - ಪಾಲಿಸೇ 3 ಪ್ರಾಣಂಗೆ ಪ್ರಾಣನ - ಗಾನ ಮಾಡಲು ಗುಣಶ್ರೇಣಿಗಳ ಜೋಡಿಸೇ ||ಗಾನ ವಿನೋದಿ - ಪ್ರ - ದಾನ ಪುರೂಷನಮಾಣದೆನಗೆ ತೋರಿಸೇ 4 ಹಿಮಗಿರಿಸುತೆತವ - ವಿಮಲಪದಾಬ್ಜಕೆನಮಿಸುವೆ ನೀ ಪಾಲಿಸೇ ||ಅಮಿತಾರ್ಕ ನಿಭ ಗುರು ಗೋವಿಂದ ವಿಠಲನಕಮನೀಯ ಪದ ಕಾಣಿಸೇ 5
--------------
ಗುರುಗೋವಿಂದವಿಠಲರು
ಪಾರ್ವತಿದೇವಿ ಪಾದ ನಂಬಿದೆ ಪ ಪಾದ ಜಗದಂಬೆ ಅರುಣೆ ಪಂಚಭೇದಾ ಆಹಾಶಂಭುವಿನರ್ಧಾಂಗಿ ಬಿಂಬನ ತೋರಿಸೆಅಂಬುಜೋದ್ಭವನ ಪ್ರತಿಬಿಂಬವ ರಾಣಿಯೆ ಅ.ಪ. ಮನದಭಿಮಾನಿ ದೇವತೆಯೆ ಯನಮನವ ನಿಲ್ಲಿಸು ಪಾರ್ವತಿಯೆ ಆಹಾಮುನಿಜನ ವಂದ್ಯಳೆ ಮನ್ಮಥ ಜನನಿಯೆಸಾನುರಾಗದಲಿ ನೀ ಜ್ಞಾನ ಕೊಡುವೆಯೆಂದು 1 ಸಾರಥಿ 2 ಶರಣು ಬಂದೆನೆ ನಾ ನಿನಗೆ ತವಚರಣ ಭಜನೆ ಕೊಡು ಎನಗೆ ಆಹಾಶರಧಿ ಶಯನ ತಂದೆವರದವಿಠಲನನ್ನುಪರಿಪರಿ ಸ್ತುತಿಸುವ ವರಕಾಳಿ ದೇವಿಯೆ3
--------------
ಸಿರಿಗುರುತಂದೆವರದವಿಠಲರು
ಪಾರ್ವತೀದೇವಿಯ ಸ್ತುತಿ (ಮಂಗಳೂರು ಮಂಗಳಾದೇವಿ) ಮಹಾಮಾಯೆ ದಯದೋರೆಲೆ ತಾಯೆ ಪ. ಸದರದೊಳೆಬ್ಬಿಸುತಿದಿರಾದ ಮದನಾಂಬಾ ಮುದ ದಾಯಿ ಶುಭಪದದಾಯಿ 1 ದೇವತೆಗಳ ಸೇರಿರುವಾ ಮನೋಹರ ತನುವಾಗಿ ನಿಕರ ಮಹಿಷಾಸುರನಾ ಮೃಗಪತಿಗಮನಾ 2 ಖಂಡ್ಯಧಾರೆಯೊಳ್ದಿಂಡರಿದೂ ಖಂಡಿಸುತಾ ರಣ ಮಂಡಲದಿ ಬ್ರಹ್ಮಾಂಡ ನಿದಾನಿ 3 ತ್ರಿಗುಣಜಮಲವು ದಾನವಾರಿಗಳ ಮಾನಿಸಿ ದಿತಿಜರ ಹಾನಿಗೊಳಿಸುವದು ಹರಿಪರವು ಮಹಭರವು ಮನದಿರವೂ 4 ರಕ್ಷಿಸು ಪುರುಕರುಣಿ ಕ್ಷಮೆಯಿಂದಂ ಭರಣಿ ಖೂಳ ವೈರಿಗಳನೇಳದಂತೆ ಪಾತಾಳಕೆ ಕೆಡಹಿಸು ಮಮ ಜನನಿನೀಲ ಮೇಘ ನಿಭ ವೆಂಕಟರಾಜನ ಲೋಲಕಟಾಕ್ಷಸದಾಕರುಣಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಪಾಲಿಸೀ ಪಸುಳೆಯನು ಪರಮ ಪುರುಷ ಪ. ಬಾಲೆ ನಿನ್ನವಳೆಂದು ಶ್ರೀ ಕರಿಗಿರೀಶ ಅ.ಪ. ನರಹರಿಯೆ ಲಕ್ಷೀಶ ತರಳೆ ನಿನ್ನವಳಿನ್ನು ತ್ವರಿತದಲಿ ಕಾಪಾಡು ತಡಮಾಡದೆ ಕರಕರೆಯ ರೋಗ ಬಾಧೆಯ ಬಿಡಿಸಿ ಹರಿ ನಿನ್ನ ಕರುಣಾಮೃತವಗರೆದು ಕಡುಕೃಪೆಯೊಳಿನ್ನು 1 ಫಣಿರಾಜಶಯನ ಪರ್ಯಂಕ ದೇವರದೇವ ಬಿನಗು ದೇವರ ಗಂಡ ಎಣೆಯುಂಟೆ ನಿನಗೆ ಮಣಿಯದಾಗ್ರಹದೇವಗಣ ಉಂಟೆ ನಿನಗಿನ್ನು ಕ್ಷಣ ಬಿಡದೆ ಸರ್ವಬಾಧೆಯ ಬಿಡಿಸಿ ಸತತ 2 ಪ್ರಾಣದೇವನೆ ಸರ್ವ ದೇವತೆಗಳಧಿನಾಥ ಪ್ರಾಣದೇವನು ನಿನ್ನ ಪ್ರಾಣ ಪದಕ ಪ್ರಾಣದೇವಗೆ ಪೇಳಿ ಪ್ರಾಣ ಭಯವನೆ ಬಿಡಿಸಿ ಪ್ರಾಣಸೂತ್ರವ ನಡಿಸಿ ತ್ರಾಣಗೆಡದಂತೆ 3 ನಿನ್ನ ದಾಸರ ದಾಸಳಿವಳು ಶ್ರೀಹರಿ ಕೇಳು ಎನ್ನ ಬಿನ್ನಪವ ನೀ ಬರಿದೆನಿಸದೆ ಚನ್ನಾಗಿ ಆಯುರಾರೋಗ್ಯ ಸಂಪದವಿತ್ತು ಮನ್ನಿಸಿ ಕಾಪಾಡು ಮಂಗಳಾತ್ಮಕನೆ 4 ಗುರುಕರುಣ ವರಬಲದಿ ಪುಟ್ಟಿದಾ ಶಿಶು ಇವಳು ಪರಮ ಮಂಗಳೆ ಎನಿಸಿ ಪಾಲಿಸೈ ಜಗದಿ ನಿರುತದಲಿ ನಿನ್ನ ಪದಭಕ್ತಿ ಜ್ಞಾನವ ಕೊಟ್ಟು ಹರಸಿ ಪೊರೆ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಪಾವಮಾನಿಯೆ ತವ | ಯಾವ ಮಹಿಮೆಯೊಳೇಕಭಾವ ಪೊಗಳಲು ಆವ | ದೇವತೆಗಳಿಗಳವೇ ಪ ಶ್ರೀವರನಂಘ್ರಿಯ | ಸೇವೆಗೈವಲಿ ಬಹು | ಧಾವಿಸೀ |ಬಹು ಎಚ್ಚರದಿ ಸೇವಿಸೀ ||ನಿರುತ ಭಕ್ತಿಯ | ಭಾವದಲಿ ದುರಿ | ತಾವಳಿ ವಿಭಾವಸುನೀ ವೊಲಿದು ಭೃ | ತ್ಯಾವಳಿಯ ಪಾಲಿಪೆ | ಸಾರ್ವಕಾಲ ಮ-ತ್ತೋರ್ವರಿಲ್ಲವೊ | ದೇವರೊತ್ತಮ | ದೇವ ನೀನೇ ಅ.ಪ. ಸೂರ್ಯ ಮೋಚನ |ಆಶಿಸುತಲಿ ಹಾರಿ | ದೋಷವ ಕಳೆಯಲು | ಯತ್ನೀಸೆ ಆ ಸುಮಹದಾಕಾರ ಶೃಣಗೈದೀವಾಸವನು ನಿನ ಘಾತಿಸಲು ಕುಲಿಶದೀ ಅದಕಂಡು ತವ ಪಿತಶ್ವಾಸಗಳ ಬಲು ಪರಿಯ ರುದ್ಧಿಸಲು | ಮೂರ್ಲೋಕ ತಪಿಸೇಅಸುರರು ವಿಧಿವಿಧದಿ ಮೊರೆ ಇಡಲೂ | ಆಲೈಸ ನಾಲ್ಮೊಗಶ್ವಾಸ ಸತಿಯನು ಸೂಸಿ ಸೂಚಿಸಲೂ | ಅದಕೇಳಿ ಮತ್ತೆಲೇಸುಗೈಯ್ಯಲು ಮನವ ಮಾಡಲೂ ವಾಸವಾದ್ಯರಶ್ವಾಸ ಮಾಡುವ ತೆರನ ಮಾಡೆಯ್ದೊಕ್ಲೇಶನಾಶನ ಶ್ವಾಸಮಾನಿ ಮಹಾ ಕೃಪಾಳೊ 1 ವ್ರಾತ ಮಣಿ ರಘು | ಜಾತಗಿತ್ತೆಯೊ | ಮಾತರಿಶ್ವಾ 2 ಪುಂಡರೀಕಾಕ್ಷ ಉರ ಬಗೆದು ಕರುಳಕೊಂಡು ಕೊರಳಲಿ ಧರಿಸೀ | ನರ ಮೃಗನ ಲೀಲೆಕಂಡು ದ್ವಯೆ ಬಲ ತಪಿಸೀ | ಅರಕ್ಷೌಹಿಣಿ ಮುಂ-ಕೊಂಡು ನೀನೆ ಸಂಹರಿಸೀ | ಕೌರವನ ತೊಡೆಖಂಡಿಸುತವನ ಛೇದಿಸೀ |ಅಂಡಜಾಧಿಪವಹಗೆ ಅರ್ಪಿಸಿ | ನಿಂದೆ ಭೀಮಾ 3 ಅದ್ವೈತ ಸಿದ್ಧಿಲಿಹೇಯ ಬಹಳವ ನೀನೆ ತೋರಿಸೀ | ಬದರಿಯಲಿ ಬಾದರಾಯಣರಿಂದ ಉಪದೇಶೀಸಿ | ಮತ್ತಿಲ್ಲಿ ಬರುತಲಿಧೇಯ ಸಾಧಿಸೆ ಗ್ರಂಥ ಬಹು ರಚಿಸೀ | ಕುಭಾಷ್ಯಗಳ ಬಹುಹೇಯತ್ವವನೆ ಸಾಧಿಸೀ | ವಾದ ಕಥೆಯಲಿಮಾಯಿಗಳ ಬಲುಪರಿಯ ಸೋಲಿಸೀ |ಕಾರ್ಯ ಸರ್ವವ | ರಾಯ ಕೃಷ್ಣಗೆ ಅರ್ಪಿಸಿದೆ ಮಧ್ವಾ 4 ಪರಿ ವ್ಯಾಪ್ತನೆ | ಅಧ್ಯರ್ಥ ರೂಪಿಅಪ್ರಾಪ್ಯ ಅಶಕ್ತಿ ರಹಿತಾನೇ |ವ್ಯಾಪಿಸುತ ಜಗ | ವೀಪರೀಯಲಿ | ಮಾಳ್ಪೆ ಪ್ರಾಣಾ 5 ಮೋಕ್ಷಾಧೀಚ್ಛೆಯ ವರ್ಜ | ಅಚ್ಛಿನ್ನ ಭಕುತಾನೇದಕ್ಷಿಣಾಕ್ಷಿ ಗೋ | ವತ್ಸ ರೂಪಾನೇ ||ಅಕ್ಷಿಯೋಳಿಹ ತ್ರಿದಶಾ | ದ್ಯಕ್ಷರಿಂದಲಿ ಸಂ | ಸೇವ್ಯಾನೇ |ಕಂಠದಲಿ ನೀ ಹಂಸೋಪಾಸಕನೇ |ಶಬ್ದಗಳ ನುಡಿದು ನುಡಿಸುತಿರುವಾನೆ | ಕೂರ್ಮರೂಪಿ ಸಲಕ್ಷಣದಿ ಬ್ರಹ್ಮಾಂಡ ಧಾರಕನೆ | ಸಪುತ ಸ್ಕಂದಗತಇಚ್ಛೆಯಲಿ ಲೋಕಧಾರಕನೆ | ಬೃಹತಿ ಸಾಸಿರವಾಚ್ಯನೆಂದೆನಿಸುತ್ತ ಸ್ತುತ್ಯಾನೆ | ಪತ್ಯಬಿಂಬ ಮುಖ್ಯನೆಈಕ್ಷಿಸುವೆ ಸರ್ವತ್ರ ಹರಿಯನ್ನೆ | ಮುಂದಿನಜ ಅಪರೋಕ್ಷವನು ಪಾಲಿಸೆಂಬೇನೆ ||ಮೋಕ್ಷದನೆ ಕರುಣಾ ಕಟಾಕ್ಷದಿ | ಈಕ್ಷಿಪುದು ಪವನ 6 ಜೇಷ್ಠ ಶ್ರೇಷ್ಠನೆ ಸ | ಮಷ್ಟಿ ರೂಪನೆ ಪವನ |ವ್ಯಷ್ಟಿರೂಪದಿ ಜಗದಿ | ವರೀಷ್ಟನೇ ||ನಿಷ್ಠೇಲಿ ಭಜಿಪರಿ | ಗಿಷ್ಟಾರ್ಥವನೆ | ಸಲಿಸೂವೇ |ಅತಿರೋಹಿತ ವಿಜ್ಞಾನಿ ಎನಿಸಿರುವೆ ||ಸಕಲ ಗುಣಗಣ ಭೋಕ್ತøವೆನಿಸಿರುವೆ | ಸಕಲ ಜ್ಞಾನೋಪದೇಷ್ಟನೆಂದೆನಿಸಿ ಕರೆಸೂವೆ | ಶಿವ ಶೇಷ ಖಗಪರಿನಿಷ್ಟ ಗುರು ನೀನೆ ಎನಿಸಿರುವೆ ಸಜಾತಿ ಗುಣ ಅಯುತವರಿಷ್ಟನು ನೀನು ಆಗಿರುವೆ | ವಿಜಾತ್ಯನಂತ ಗುಣಗರಿಷ್ಟ ರೂಪಿ ಎನಿಸಿರುವೇ | ವೇದಾನುಕ್ತ ಗುಣವಿಶಿಷ್ಟ ರೂಪದಲಿಂದ ಮೆರೆಯುವೇ ||ಇಷ್ಟ ಗುರು ಗೋವಿಂದ ವಿಠ್ಠಲ | ಪ್ರೀತಿ ಪಾತ್ರನು ಆದ ಪ್ರಾಣ 7
--------------
ಗುರುಗೋವಿಂದವಿಠಲರು