ಒಟ್ಟು 1076 ಕಡೆಗಳಲ್ಲಿ , 109 ದಾಸರು , 890 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರಿ ಬಲಿ ಧ್ರುವ ಪ್ರಹ್ಲಾದನಲ್ಲಿ ಬಂದಂತೆ ಎನ್ನಲ್ಲಿ ಪ ನಿನ್ನಾಗಮನಕೆ ಹೃದಯ ಮನ ಬುದ್ಧಿ ಅರಳುವುದು ಸರ್ವದಾ ನಿನ್ನಾಗಮನಕೆ ಸರ್ವ ಮಾನಿಗಳೆಲ್ಲ ಕಾದು ನಿಂದಿಹರು ನಿನ್ನಾಗಮನಕೆ ಸರ್ವ ಕಾಲಾಕರ್ಮ ಅನುಕೂಲವಾಗಿಹವು ನಿನ್ನಾಗಮನಕೆನೇನೆ ಸರ್ವತ್ರ ಅನುಕೂಲ1 ಸೊಲ್ಲು ಲಾಲಿಸಬೇಕು ಶೀಲರುಕ್ತಿಬಲ್ಲಿದ ಮಹದೇವನೊಡೆಯ ಶುಕತಾತ ಹಲ್ಲಲ್ಲು ಕಿರಿದು ಕಾದು ನಿಂದಿಹರೊ2 ಕರಿಗಿರಿ ಮುದಮಯ ಗುರುತಂದೆವರದಗೋಪಾಲವಿಠಲಹೆದ್ದೈವ ಪಾಂಡುರಂಗಾ ವೆಂಕಟತಡವ್ಯಾಕೆ ಬರಲು ಯೋಚಿಪುದು ಏಕೆ ಬಾರಯ್ಯ ಭಕ್ತ ಬಂಧು ನಿನ್ನವರೆ ನಿಜ ಬಂಧೊ 3
--------------
ಗುರುತಂದೆವರದಗೋಪಾಲವಿಠಲರು
ಕರಿಮುಖದ ಗಣಪತಿಯ ಚರಣಕ್ಕೆಯೆರಗಿ ಶಾರದೆಗೆ ಸೆರಗೊಡ್ಡಿ ವರವನು ವರವ ಬೇಡಿಕೊಂಡೆ ಸ್ಥಿರವಾದ ಭಕುತಿ ಕೊಡುಯೆಂದು 1 ವಾಯು ಬ್ರಹ್ಮ ಭಾರತಿಗೆ ಬಾಳ ಬೇಡಿಕೊಂಡ್ವೇ- ದವ್ಯಾಸರಿಗೆ ನಮೋಯೆಂಬೆ ನ- ಮೋಯೆಂದು ನಾರದರ ಪಾದಪದ್ಮಗಳಿಗೆರಗುವೆ 2 ಅತ್ರಿ ಅಂಗೀರಸ ವಸಿಷ್ಠಗೌತಮ ವಿಶ್ವಾ- ಮಿತ್ರ ಮಾರ್ಕಾಂಡೇಯ ಚ್ಯವನರು ಚ್ಯವನ ಭಾರದ್ವಾಜ ಬಕದಾಲ್ಭ್ಯರಿಗೆ ನಮಿಸುವೆ 3 ಪಂಡಿತ್ವಾಲ್ಮೀಕಿ ಕೌಂಡಿಣ್ಯ ಕೌಂಡಿಣ್ಯ ಅಗಸ್ತ್ಯಮುನಿ ಮರೀಚರಿಗೆ ನಾನು ನಮೋಯೆಂಬೆ4 ಶೇಷಗಿರಿವಾಸನ ಆಕಾಶನಳಿಯನೆ ವೆಂಕ- ಟೇಶ ನೀ ನಮ್ಮನೆ ದೈವ ಮನೆದೈ- ವ ಸಲಹೆನ್ನ ಪದ್ಮಾವತೀಶ ಪರಮಾತ್ಮ 5 ಮಂಗಳಾಂಗನೆ ನೀನು ಮಂಗಳಮಹಿಮನೆ ಮಂಗಳದೇವಿ ರಮಣನೆ ನೀನೆಮಗೆ ಜಯ ಮಂಗಳವ ಕೊಟ್ಟು ಸಲಹೆನ್ನ 6 ವಾಸುದೇವನೆ ನೀನು ವಾಸುಕಿಶಯನನೆ ವಾಸವಿಯ ರಥವ ನಡೆಸಿದೆ ನಡೆಸಿದಂಥ ಶ್ರೀನಿ- ವಾಸ ನೀನೆಮಗೆ ದಯಮಾಡು 7 ಎನ್ನಲ್ಲೆ ನೀನಿದ್ದು ನಿನ್ನಗುಣ ಬಹುರೂಪ- ವನ್ನು ತಿಳಿಸದಲೆ ಇರುವೋರೆ ಇರುವೋರೆ ನೀನು ಪ್ರ- ಸನ್ನನಾಗೆನಗೆ ದಯಮಾಡು 8 ಕಾಲ ಕಾಲಕೆ ನಿನ್ನ ನಾಮವನು ನಾಲಿಗೆ ಮ್ಯಾಲಿಟ್ಟು ನಿನ್ನ ನೆನೆವಂತೆ ನೆನೆವಂತೆ ಅನಿರುದ್ಧ 9 ಕಾಮಕ್ರೋಧವು ಮದ ಮಾತ್ಸರ್ಯ ಲೋಭಗಳು ಮೋಹ ಮಡುವಿನಲಿ ಮುಣುಗಿದೆ ಮುಣುಗಿದೆನೊ ಎನ್ನ ಕೈ ನೀನೆ ಪಿಡಿದೆತ್ತಿ ಕರೆದೊಯ್ಯೊ 10 ಐದು ಮಂದ್ಯೆನ್ನಲ್ಲಿ ಐದಾರೆ ಮಾರಾಯ ಬೈದರು ಬಿಡರೋ ಎನ್ನೀಗ ಎನ್ನೀಗ ಕಟ್ಟಿ ಕೊಂಡೊಯ್ದು ಹಾಕುವರೊ ಯಮನಲ್ಲಿ 11 ಆರು ಮಂದ್ಯರಿಗಳು ಕ್ರೂರ ಶತ್ರುಗಳುಂಟು ಘೋರಬಡಿಸುವರೊ ಅನುಗಾಲ ಅನುಗಾಲ ದುರ್ವಿಷಯ ತಾವೆನಗೆ ಕಲಿಸಿ ದಣಿಸೋರು 12 ಹತ್ತು ಮಂದಿ ಯೆನ್ನ ಸುತ್ತ ಮುತ್ತಿರುವರೊ ಕೂಪ ಭವದೊಳು ಭವದೊಳಗೆ ಬಳಲುವೆನು ಚಿತ್ತಕ್ಕೆ ತಂದು ದಯಮಾಡು 13 ಸಂಚಿತಾಗಾಮಿಗಳ ಮುಂಚೆ ದಹಿಸಿ ಈ ಪ್ರ- ಪಂಚವನು ಬಿಡಿಸೊ ಪರಮಾತ್ಮ ಪರಮಾತ್ಮ ನೀಯೆನ್ನ ವಂಚನಿಲ್ಲದಲೆ ಸಲಹೈಯ್ಯ 14 ಜ್ಞಾನ ಭಕ್ತಿ ಗಾನ ವೈರಾಗ್ಯ ಭಾಗ್ಯಗಳು ಜಾನಕಿರಮಣ ಜಗದೀಶ ಜಗದೀಶ ಜನಕನ ಜಾಮಾತ ನೀನೆ ತಿಳಿಸಯ್ಯ 15 ದ್ವಾಸುಪರುಣನಂತೆ ಈ ಶರೀರದೊಳಿದ್ದು ಏಸೇಸು ಜನ್ಮಕ್ಕಗಲದೆ ಅಗಲದಂತಿದ್ದು ಉ- ದಾಸೀನವ ಮಾಡೋದೊಳಿತಲ್ಲ 16 ಇಂದುಕುಲಜಾತ ನಿನ್ನೊ ್ಹಂದಿಕೊಂಡಿದ್ದು ಎಂದೆಂದಿಗು ಬಿಡದೆ ಗೆಳೆತನ ಗೆಳೆತನವಿದ್ದಲ್ಲಿ ಸಂದೇಹವ್ಯಾಕೊ ಸಲಹಲು 17 ಮುಕ್ತಿದಾಯಕ ನಿನ್ನ ಭಕ್ತರೇಸುಮಂದಿ ಹೆತ್ತಾಯಿಸುತರೇನವರೆಲ್ಲ ನಾ ಹುಟ್ಟಿದೆನೆ ಮತ್ತೆ ಮಲತಾಯಿ ಉದರದಿ 18 ಶ್ರೀಶನೆ ಕೇಳ್ ನಿನ್ನ ದಾಸರಂಗಳದಲ್ಲಿ ಬೀಸಿ ಬಿಸಾಕೊ ಎನ್ನನು ಎನ್ನ ಹರಿದಾಸರ ದಾಸತ್ವಯೆನಗೆ ಕೊಡಿಸಯ್ಯ 19 ಅಂಬರೀಷ್ವರದ ನಿನ್ನ ್ಹಂಬಲೆನಗಿರಲಯ್ಯ ಬಿಂಬ ಮೂರುತಿಯೆ ಬಿಡದೆನ್ನ ನಿನ್ನೂರಲ್ಲಿ ಇಂಬುಕೊಟ್ಟೆನ್ನ (ಅ)ಲ್ಲಿರಿಸಯ್ಯ 20 ಕಡಿದು ಹೊಡೆದು ಬಯ್ದು ಬಂದು ಕಾಲಿಂದೊದ್ದ- ರ್ಹಿಡಿಯದೆ ಅವರ ಅಪರಾಧ ಅಪರಾಧವೆಣಿಸದಿರೆ ನಡೆದರೊ ನಿನ್ನ ಪುರಕಾಗ 21 ಪುಟ್ಟ ಪ್ರಹ್ಲಾದ ಧ್ರುವ ಕೊಟ್ಟರೆಷ್ಟು ಭಾಗ್ಯ ಕಷ್ಟಕ್ಕೆ ಬಂದು ಒದಗಿದೆ ಒದಗಿ ಬಂದವರ ಆಪತ್ತು ಬಂಧನ ಬಿಡಿಸಿದೆ 22 ತನ್ನ ಮಗನ ಕರೆಯೆ ಎನ್ನ ಕರೆದನೆಂದು ನಿನ್ನ ದೂತರನು ಕಳಿಸಿದೆ ಕಳಿಸಿದ್ಯಜಮಿಳಗೆ ಮನ್ನಿಸಿ ಕೊಟ್ಟ್ಯೊ ನಿನಲೋಕ 23 ತಿರುಕ ತಂದವಲಕ್ಕಿ ಕರಕÀರನೆ ನೀಮುಕ್ಕಿ ದೊರೆತನವ ಕೊಟ್ಟು ದಾರಿದ್ರ್ಯ ದಾರಿದ್ರ್ಯ ಕಳೆದದ್ದು ಅರಿಕಿಲ್ಲವೇನೊ ಜನಕೆಲ್ಲ 24 ನಿಲ್ಲಬೇಕೆಂದಿಟ್ಟಿಕಲ್ಲು ಕೊಟ್ಟವಗೆ ಕೈ- ವಲ್ಯವನು ಕೊಟ್ಟ್ಯೋ ಕರುಣಾಳು ಕರುಣಾಳು ಬುಕ್ಕಿ ್ಹಟ್ಟು ಮಲ್ಲಿಗೆಯ ಮಾಲೆಗೊಲಿತೀಯೊ 25 ಕರೆದು ಕಂಸಗೆ ಕೊಟ್ಟು ಕೊಲಿಸಬಂದ- ಕ್ರೂರ(ಗೆ) ನದಿಯಲ್ಲೆ ನಿನ್ನ ನಿಜರೂಪ ನಿಜರೂಪ ತೋರಿದ್ದು ಇದುಯೇನು ನಿನ್ನ ಮಹಿಮೆಯು 26 ಗಂಧಕ್ಕೆ ಒಲಿದು ಕುಬ್ಜೆಯ ಡೊಂಕನೆ ತಿದ್ದಿ ಸುಂದರಿಯ ಮಾಡಿ ಸುಗುಣನೆ ಸುಗುಣನೆ ನೀನಾಕೆ- ಯಂಗಸಂಗ್ಯಾಕೆ ಬಯಸಿದಿ 27 ಕಲ್ಲಾದಹಲ್ಯೆಯನು ಕಡು ಚೆಲ್ವೆಯನು ಮಾಡಿ ಎಲ್ಲಿ ಮಲಗಿದ್ದ ಮುಚುಕುಂದ ಮುಚುಕಂದನ ಗುಹೆ- ಕೈವಲ್ಯ ಕೊಡಹೋದ್ಯೊ 28 ಮಗ್ಗವನೆ ಹಾಕಿ ಮಾರುಬಟ್ಟೆ ನೇದಿಲ್ಲ ರೊಕ್ಕವನೆ ಕೊಟ್ಟು ತರಲಿಲ್ಲ ತರಲಿಲ್ಲ ದ್ರೌಪದಿಗೆ
--------------
ಹರಪನಹಳ್ಳಿಭೀಮವ್ವ
ಕರುಣದಿ ಕೊಡು ವರವಾ ಗುರು ಮಹಾದೇವ ಪ ನಿರುತ ಸ್ಮರಿಸುವ ಶರಣ ಸಂಜೀವಾ ಅನುದಿನ | ಹರಿಕುಮಾರನ ಗರ್ವವನದಾವಾನಲ ಮಹಾನುಭಾವ ಅ.ಪ ಸ್ಪಟಿಕ ಸನ್ನಿಭ ಧವಳ ಶುಭಗಾತ್ರ ಕಟಕ ವಂಚಕ ಯಕ್ಷಪತಿ ಮಿತ್ರ ನಿಗಮ ಹಯ ಧೂರ್ಜಟಿಯ ಸುಚರಿತ್ರ ಹೇ ನಿಟಲ ನೇತ್ರ 1 ಅದ್ರಿವೈರಿಯತನಯನೊಡನೆ ಯುದ್ಧಗೈದಾತ ಭದ್ರದಾಯಕ ರುದ್ರದೇವ ಪ್ರಸಿದ್ಧ ಮುನಿ ನಮಿತ ಶ್ರೋದ್ರು ನೀಧರ ದದ್ದಲಾಪುರ ಸದ್ಮಸುಖದಾತ ಹೇ ಸದ್ಯೋಜಾತ 2 ಶಾಮಸುಂದರ ಸ್ವಾಮಿ ಪ್ರಿಯ ಸಖ ಸೋಮಶೇಖರನೆ ಪ್ರೇಮದಿಂದಲಿ ರಕ್ಷಿಸೆನ್ನನು ಭೂಮಿಶ್ಯಂದನನೆ ಕಾಮಿತ ಪ್ರದ ವಾಮದೇವನೆ ಹೇಮಾತಿಧವನೆ ನಿಸ್ಸೀಮ ಮಹಿಮನೆ 3
--------------
ಶಾಮಸುಂದರ ವಿಠಲ
ಕರುಣದಿ ಬಂದು ನಿನ್ನ ಚರಣ ಕಮಲವೆನ್ನ ಶಿರದ ಮೇಲಿಟ್ಟು ನೀ ಪೊರಿಯೊ ಕೃಪಾರಸ ಸುರಿಯೋ ಗರುಡಧ್ವಜ ನೀನು ಸ್ಮರಮಣ ನಿನ್ನ ಭಕುತರ ಸುರಧೇನೆಂದು ಕರೆವರು ನಿನ್ನನು ಪ ಸರಸಿಯೊಳ್ಕರಿರಾಜ ಭರದಿಂದ ತನ್ನವುದ್ಧರಿಸೆಂದು ಮೊರೆಯಿಡೆ ಪೊರೆದೆಯಲ್ಲೊ ಶಿರಿಯೊಳುನುಡಿಯದೋ ಶರಣಾಗತರನ್ನು ಪೊರೆವೆನೆಂಬ ನಿಜ ಬಿರಿದನು ಮೆರಿಸಿದಿ1 ಆಗಮವಂದಿತ ನಾಗಭೂಷಣ ತಾತ ಮೇಘವಾಹನ ಸುತನ ಬ್ಯಾಗ ರಕ್ಷಿಸಿದಿ ಜಾಗುಮಾಡದೆ ಎನ್ನ- ದಾಗಲು ರಕ್ಷಿಸೆಂದು ಬಾಗಿ ಬೇಡುವೆನು 2 ಕಾವನು ನೀನಲ್ಲದೆ ಯಾವ ದೇವರನು ನಾ ಆವಲ್ಯು ಕಾಣೆನು ಭಾವಜಜನಕನೆ ಶ್ರೀವಾಸುದೇವನ ಗೋವೃಂದ ರಕ್ಷಕನೆ ಪತಿ ಶ್ರೀವತ್ಸಾಂಕಿತನೆ 3
--------------
ಸಿರಿವತ್ಸಾಂಕಿತರು
ಕರುಣದಿಂದಲಿ ಪ್ರಕಾಶ ದೇವನ ಪ ಹೇಮ ಮುಕುಟ- ಮಾಣಿಕ್ಯಯುಕ್ತವಾಗಿರೆ ಇರುವ ಶಂಖಚಕ್ರವು ಮುತ್ತಿನಹಾರ ಮೋಹನನೆ ಮತ್ತೆ ಅಂದಿಗೆ ಗೆಜ್ಜೆಯುಕ್ತದಿ ವಸ್ತುಗಳು ಅಕೋ ಭೂಷಣವು ಪ್ರತಿರೂಪ-----ಭಾವನಾ 1 ದಿವಿಜ ಪೋಷಕನಾದ ಶ್ರೀಹರಿ ಜ್ಞಾನಿಗಳ ಬಿಡದಿನ್ನು ಸಲಹುವಾ---- ನ ವಾಧಿಪನೊಳಾದನು ? ಗಾನಲೋಲನಾಗಿ ಕನಸು ಮನಸಿನಲ್ಲಿ ಕರುಣರಸದಲ್ಲಿ ಸಾನುರಾಗದಿ ನಾಟ್ಯವಾಡುತ ಸಾರಿ ಸಾರಿಗೆ ಬಂದ ಕೃಷ್ಣನ 2 ಕಟಿ ಸುದರ್ಶನ----ಡುವಣಿ ಬಂದು ಎನ್ನ ಹೃದಯ ಪರಿ ಪರಿಯಿಂದ ತೋರುವ ನಿರುತ ದೃಷ್ಟಿಯಿಂದ ನಾನು 3
--------------
ಹೆನ್ನೆರಂಗದಾಸರು
ಕರುಣಾಕರ ಧರಣೀಧರೇಂದ್ರ ಪ ದಶರಥಸುಪುತ್ರ ಶಶಧರ ಸುವಕ್ತ್ರ ಪಶುಪತಿಮಿತ್ರನೆ ಪೊರೆಯೊ ಎನ್ನನು 1 ವನರುಹದಳಾಕ್ಷ ದನುಭುಜವಿಪಕ್ಷ ಮುನಿಜನ ಸುರಕ್ಷ ರಕ್ಷಿಸೆನ್ನನು ದೇವನೆ 2 ಸುರಜನ ಸುಪೋಷ ಖರಹರ ಸುರೇಶ ನಿರತವು ನಾ ನಿನ್ನ ನಮಿಸುವೆನೈ ಹರೇ 3 ದಾನವಖಂಡನ ಧೇನುಪುರೀಶನೆ ಮಾನವ ಪುಂಗವ ದೇವನೆ ಪೊರೆಯೈ 4
--------------
ಬೇಟೆರಾಯ ದೀಕ್ಷಿತರು
ಕರುಣಾಕರ ಭಕ್ತ ಪಾರಾಯಣ ಸತ್ಯನಾರಾಯಣ ಪ ಭಕ್ತಿ ಭಾವದೆ ನಿನ್ನ ಸೇರಿದೆನು ವ್ರತ ಮಾಡಿದೆನು ಸತ್ಯ ದೇವನೆ ಕೃಪೆ ತೋರುವುದು ವರ ನೀಡುವುದು ಸತ್ಯ ದೇವೇಶನೆÀ ಬೇಡುವೆನು ನುತಿ ಮಾಡುವೆನು 1 ಗಂಧ ಪುಷ್ಪಾಕ್ಷತೆ ದೀಪಗಳಿಂ ಪಂಚಫಲಂಗಳಿಂ ಇಂದಿರೇಶನೆ ನಿತ್ಯ ಭಾವಿಸಿದೆ ವಂದಾರು ಮಂದಾರ ಪಾಲಿಸೆನ್ನನು ಬೇಡಿಕೊಂಬೆನು 2 ಮೌನೀಶ ವಂದ್ಯನೆ ಸರ್ವೇಶನೆ ದೀನಪಾಲಕನೆ ಸುಜ್ಞಾನ ಭಾವಿಪುದು ನಿಜತೋರುವುದು ದಯೆಯಿಂದ ಬಹು ವಿಧದಿಂದ 3
--------------
ಬೇಟೆರಾಯ ದೀಕ್ಷಿತರು
ಕರ್ಪೂದಾರುತಿ ತಾರೆ ಕೊಪ್ಪರದಪ್ಪನಿಗೆ ಸರ್ಪಸುತಲ್ವಗೆ ಮುಪ್ಪಾದ ದೇವನಿಗೆ ಅಪ್ರತಿಮರಿಹಿಮೆಗೆ ಪ ನೀರೆ ನಲುವಿಂದಲಿ ನೀಮುದದಿಂದಲಿ | ಸಖಿ ನಿಜಮನದಲಿ ಅ.ಪ ಫಾಲಾಕ್ಷ ವಂದಿತಪಾದ ಪಾಲಾಬ್ಧಿವಾಸಗೆ | ಪಾಂಚಾಲಿವರದರಂಗಗೆ | ಶಿಶುಪಾಲ ಖರಮುರ ಹಾರಿಗೆ | ಕಾಳಿಂಗನ ಫಣೆಯಲ್ಲಿ ತಥೈವಿಎಂದು ಕುಣಿದವಗೆ | ಬಾಲೆಯರಾಲಯ ಪೊಕ್ಕು ಪಾಲು ಬೆಣ್ಣೆ ಕದ್ದವಗೆ | ಗೋಪಾಲಕೃಷ್ಣನಿಗೆ ನೀರೆ ನಲುವಿಂದಲಿ | ನೀ ಮುದದಿಂದಲಿ | ಸಖಿ ನಿಜಮನದಲಿ 1 ದೇವಾಧಿದೇವನಾದ ಭಾವಜನಯ್ಯನಿಗೆ | ವÀಸುದೇವದೇವಕಿ ಕಂದಗೆ ಭೂದೇವೌಕ್ಷವಂದ್ಯಗೆ | ಪಾವನ್ನ ಮೂರುತಿಯಾದ ಶ್ರೀದೇವಿ ಅರಸಗೆ | ಗೋವಳರಿಂಧ ಕೂಡಿ ಗೋಹಿಂಡು ಕಾಯ್ದವಗೆ | ದೇವಾರಿ ವೈರಿಗೆ ಶ್ರೀವಾಸುದೇವಗೆ 2 ಮಂಗಳಾಂಗ ಗಂಗಾಜನಕ | ತುಂಗವಿಕ್ರಮದೇವಗೆ | ಜಯ ಸಂಗೀತ ಪ್ರಿಯಲೋಲಗೆ | ಪತಂಗಜವೈರಿ ದೇವಗೆ ಶೃಂಗಾರದಿ ಶಾಮಸುಂದರ ಗಾಂಗೆಯಂಬರಧಾರಿಗೆ 3
--------------
ಶಾಮಸುಂದರ ವಿಠಲ
ಕಲಭಯಾನೆ ಕಂಜಲೋಚನೆ ಕದವತೆಗೆಯೆಲೆ ಭಾಮಿನಿ ನಾಂ ಬಳಲಿ ಬಂದೆನು ಭಾಮಿನೀ ಪ. ಬಳಲಿ ಬಂದರೆ ಒಳ್ಳಿತಾಯಿತು ತಳರ್ವುದಿಲ್ಲಿಂ ನಿಲ್ಲದೆ ನಾಂ ಕದವ ತೆಗೆಯೆನು ಸಾರೆಲೆ ಅ.ಪ. ಭಾಪುಭಾಪೆಲೆ ಕೋಪಗೈವುದು ಚಾಪಲ್ಯಾಂಬಕಿ ಯೆನ್ನೊಳು ಓವನಲ್ಲೇ ಕೋಪಸಲ್ವುದೆ ಈ ಪರಿಯೊಳ್ ಪೇಳ್ವುದು ನೀ ನೀಪರಿಯೊಳ್ ಪೇಳ್ವುದು 1 ಪರಿ ಕಪಟನಾಟ್ಯವ ಮಾಳ್ಪರೇ ಓಪೆÀನೆಂದು ಕೂಗುತಿರುವ ಭೂಪನಾವನು ಸಾರೆಲೋ ನಾನೋಪೆ ಯಾರಿಗೆ ಸಾರೆಲೊ 2 ನೀರೆ ಮುಕ್ತಾಹಾರೆ ಸ್ಮರವೈಯ್ಯಾರೆಯಿಂತು ಪೇಳ್ವರೇ ಕೇಳ್ ನೀರನಾನೆಲೆ ಶ್ರೀಕರೆ 3 ನೀಂ ಜಾರನಂದದಿ ಕಾಣುವೆ ನೀನಾರು ಪೇಳು ನೋಡುವೆ 4 ದೇವಿಕೇಳು ವಸುದೇವ ದೇವಕಿಕುಮಾರ ನಾನೆಲೆ ಭಾಮಿನೀ ಸುಕುಮಾರನಾನೆಲೆ ಭಾಮಿನೀ ಭಾವಜಾತನ ಬಾಣಕೀಯದೆ ಕಾವುದೆನ್ನನು ಕಾಮಿನೀ ದಯೆತೋರು ಮನೋಮೋಹಿನೀ5 ದೇವಕೀಸುತನಾದರೊಳ್ಳಿತು ನಾವು ಬಲ್ಲೆವು ಸಾರುನೀಂ ಮಾವನನ್ನೆ ಮಥಿಸಿ ಬಂದ ಮಹಾಮಹಿಮನೆ ಸಾರು ನೀಂ, ಆಹ ಭಾವಿಸೀ ಭಯಪಡುವೆನೇಂ 6 ಭೀಷ್ಮಕಾತ್ಮಜೆ ಭೇಷಜಾಂಬಕಿ ಹಾಸ್ಯ ಮಾಡದೆ ಬೇಗನೆ ನಾಂ ಬೇಡಿಕೊಂಬೆನು ನಿನ್ನನು 7 ದೋಷವೆಣಿಸದೆ ಪೋಷಿಸೆನ್ನ ಮದೀಶ ಹಾಸ್ಯವ ಮಾಡಿದೆ ಶೇಷಶೈಲನಿ ವಾಸ ಎನ್ನನು ಪೋಷಿಸೆಂದಳು ವಿನಯದಿ ಕೈಪಿಡಿದ ದೇವನ ಮೋದದಿ 8 ಜಯಜಗನ್ನಾಥ ಭಕ್ತಾಭಯಪ್ರದ ಶ್ರೀಕರ ಜಯದೇವ ದಯಾಸಾಗರ ಶೇಷಗಿರೀಶ ಶ್ರೀಧರ 9
--------------
ನಂಜನಗೂಡು ತಿರುಮಲಾಂಬಾ
ಕಲ್ಲಿನಿಂದ ಸರ್ವ ಫಲ ಬಾಹುದೊ | ಪ ಕೈವಲ್ಯ ತೋರುವುದೊ ಅ.ಪ ಕಲ್ಲು ಕಡೆಯುತ್ತಿರಲು ಅಮೃತವೆ ಪುಟ್ಟಿತು | ಕಲ್ಲು ಎತ್ತಲು ಮಳೆಯೊಳೆಲ್ಲವರು ಉಳಿದರು | ಕಲ್ಲು ಹರಿಪಾದವನು ಸೋಕೆ ಹೆಣ್ಣಾಯಿತು | ಕಲ್ಲು ಲಂಕೆಗೆ ಮಾರ್ಗ ಚೆನ್ನಾಗಿ ಶೋಭಿಸಿತು1 ಕಲ್ಲಿನೊಳಗೆ ದೇವನೊಡಮೂಡಿ ಕಾಣಿಸುವ | ಮೂರ್ತಿ ಮಂತಾಹುದು | ಕಲ್ಲು ದೇವರ ಗುಡಿಗೆ ಗರುಡ ಗಂಬವು ಆಯ್ತು | ಕಲ್ಲು ಕೋಟ್ಯಾನು ಕೋಟಿಗೆಲ್ಲ ಬೆಲೆಯಾಯ್ತು2 ಕಲ್ಲೆಂದುಪೇಕ್ಷಿಸದೆ ಕಾಲಕಾಲದಿ ನಿಮ್ಮ | ಕಲ್ಲು ಮನಸನು ಬಿಟ್ಟು ಪೂಜೆಮಾಡಿ | ಸಿರಿ ವಿಜಯವಿಠ್ಠಲ ಒಳ್ಳೆ | ಕಲ್ಲು ಪದವಿಯ ಕೊಟ್ಟು ಸತತ ಪಾಲಿಪನೊ 3
--------------
ವಿಜಯದಾಸ
ಕವಿಗಳು ಪೊಗಳುವ ವಿವರವ ಪೇಳುವೆ ಪ ಅವನಿಯೊಳ್ ಕೃಷ್ಣನು ಅವತರಿಸುವ ಕಥೆ ಅ.ಪ ಸುರರೊಡೆಯನ ದಿವ್ಯ ತರುವನು ಬಲದಲಿ ಸರಸಿಜನಾಭನು ಧರೆಗೆ ತರುವನೆಂದು ಅರಿಯುತ ವರ ಸುಮನಸರೆಲ್ಲ ಕರಗಳಿಂದಲಿ ಸುಮ ಸುರಿದರೆಂದೆನುತಲಿ 1 ಅಂಬುಜನಾಭನು ಶಿಶುವಾಗಿರಲವನ ಸಂಭ್ರಮದಲಿ ತನ್ನ ವಶಗೊಳುವುದಕೆ ತುಂಬುರು ಗಂಧರ್ವರು ಪಾಡಿದರು ರಂಭೆ ಊರ್ವಶಿಯರು ನೃತ್ಯ ಮಾಡಿದರೆಂದು2 ವಾಸುದೇವನು ತನ್ನ ಶಿಶುವೆಂದರಿಯುತ ವಸುದೇವನ ಬಲು ಆಸೆಗೆ ನಗುತಲಿ ವಸುಗಳು ದೇವರು ವಾಸುದೇವನು ತಮ್ಮ ಕೂಸು ಏಕಲ್ಲವೆಂದು ಹರುಷ ಪೊಂದಿದರೆಂದು 3 ಇಂದುವದನನ ಅಂದವ ನೋಡುತ ಚಂದ್ರಕಲೆಯರ್ಧ ಕುಂದಿದನೆನ್ನುತ ಸುಂದರಕೃಷ್ಣನು ಅಂದು ತನ್ನಯ ಕುಲ ದಿಂದ ಬಂದಿರೆ ಬಲು ನಂದ ಪೊಂದಿದನೆಂದು 4 ಪನ್ನಗಶಯನನು ಸಣ್ಣ ಕೂಸಾಗಿರೆ ತನ್ನ ವಿಭುತನಕೆ ಇನ್ನು ಕುಂದಿಲ್ಲವೆಂದು ಉನ್ನತ ಗಗನ ಪ್ರಸನ್ನನಾಗಿ ದಿವ್ಯ ಸಣ್ಣ ತಾರೆಗಳಿಂದ ಬೆಡಗು ತೋರಿದ ಕಥೆ 5
--------------
ವಿದ್ಯಾಪ್ರಸನ್ನತೀರ್ಥರು
ಕಾಮಾನ ಜನನಿಯೆ ಸೋಮಾನ ಸೋದರಿ ಸಾಮಾಜ ವರದನ ಪ್ರೇಮವ ಕೊಡಿಸಮ್ಮ ಪ ನೇಮಾದಿಂದಲಿ ಹರಿ ನಾಮಾವ ನುಡಿಸುತ ತಾಮಾಸ ಓಡುವಂತೆ ನೀಮಾಡಬೇಕಮ್ಮ ಅ.ಪ ನಿತ್ಯ ತೃಪ್ತಳೆನಿನ್ನ ನಿತ್ಯದಿ ಬೇಡಿಕೊಂಬೆ ಭೃತ್ಯರೊಳಗೆ ಎನ್ನ ಎತ್ತಿ ಸೇರಿಸೆ ತಾಯೆ || ಮತ್ತನಾಗದೆ ಭವದಿ ಉತ್ತುಮನೆನಿಸುತ ಆತ್ಮದಿ ಹರಿ ತೋರಿ ಕೃತಕೃತ್ಯನೆನಿಸಮ್ಮ 1 ದೇಶಕಾಲದಿನೀನು ಶ್ರೀಶಗೆ ಸಮಳಮ್ಮ ನಾಶಮಾಡುತ ದೋಷ ದಾಸಾನು ಎನಿಸಮ್ಮ || ಶ್ವಾಸಾಶೇಷರನೆಲ್ಲ ಲೇಸಾಗಿ ಆಳುವಳೆ ವಾಸುದೇವನಲ್ಲಿ ಆಸೇಯ ನೀಡಮ್ಮ 2 ಶೃತಿಯಲ್ಲಿ ನೀನಿದ್ದು ಸ್ತುತಿಸೀ ಶ್ರೀಹರಿಯನ್ನ ಮತ್ತೆಸೃಜಿಸುವಂತೆ ಎತ್ತಿಗಾನವ ಮಾಳ್ವೆ || ಎತ್ತ ನೋಡಲು ಬಲು ಕತ್ತಲೆಕಣಿ ತಾಯೆ ಸತ್ಯವ ಬಿಡದಂತೆ ಹತ್ತೀಸೆ ಹರಿದಾರಿ3 ಹರಿಯಂತೆ ಅವತಾರ ನಿರುತನೀ ಮಾಡುತ ಪರಿ ರೂಪದಿಂದ ಪರಿಚರಿಯ ನೀಮಾಳ್ವೆ || ಸರ್ವೇಶ ಹರಿಯಿಂದ ಸರ್ವಕಾಲದಿ ಕೂಡಿ ಸರ್ವಕಾರ್ಯವ ಮಾಳ್ವೆ ಸರಿಯಾರೆ ನಿನಗಮ್ಮಾ 4 ಅಕ್ಷರ ರೂಪಳೆ ಈಕ್ಷಿಸುಕರುಣದಿಂದ ತ್ರ್ಯಕ್ಷೇಶ ವಿಧಿಮಾತೆ ಅಕ್ಷರನರ್ಧಾಂಗಿ || ಕುಕ್ಷೀಲಿ ಬ್ರಹ್ಮಾಂಡ ಲಕ್ಷ್ಯವಿಲ್ಲದೆ ಪಡೆದಿ ಅಕ್ಷಯ ಮಾಡಿ ಜ್ಞಾನ ಮೋಕ್ಷಾವ ಕೊಡಿಸಮ್ಮಾ5 ವಿಕಾರ ಶೂನ್ಯಳೆ ಪ್ರಕೃತಿಗೆ ಮಾನಿಯೆ ನೀಕಾರ್ಯ ಕಾರಣಕ್ಕೆ ಮುಖ್ಯ ಹೇತುವೆ ತಾಯೆ || ಪ್ರಕೃತಿ ಬಂಧವ ಬಿಡಿಸಿ ಸಾಕಾರ ಮೂರುತಿ ಲೋಕನಾಯಕ ಹರಿಯ ಏಕಾಂತದಲಿ ತೋರೆ6 ತ್ರಿಗುಣ ಕಾರ್ಯಗಳೆಲ್ಲ ಸುಗುಣಿ ನೀ ಮಾಡುತ ನಿತ್ಯ ಪೊಗಳಿ ಹಿಗ್ಗುವೆ ಮಾತೆ || ಜಗವೆಲ್ಲ ಕುಣಿಸುತ ನಗುತಲೀಲೆಯಿಂದ ನಿಗಮಾದಿಗಳ ಮೀರಿ ಬಗೆ ಬಗೆ ಲೀಲೆ ಕಾಂಬೆ 7 ನಿತ್ಯಾ ಮುಕ್ತಳು ನೀನು ಪ್ರೀತಿಲಿ ನಮಿಪೆನೆ ಮಾತುಲಾಲಿಸಿ ಎನ್ನ ನಿತ್ಯದಿ ಸಲಹೆಮ್ಮ || ಹೆತ್ತ ತಾಯಿಯು ನೀನು ಎತ್ತಿ ಪೊರೆಯದಿರೆ ಎತ್ತ ಪೋಗಲಿ ನಾನು ಉತ್ತುಮರಮೆ ಹೇಳೆ 8 ಸಾಗರನ ಮಗಳೆ ಆಗಮರೂಪಳೆ ಹೋಗೀಸುಲಿಂಗವ ಸಾಗಿಸಿಗುಣಕಾರ್ಯ || ಭಾಗ್ಯ ಸ್ವರೂಪಳೆ ಬಾಗಿ ನಮಿಸುವೆ ಆಗು ಮಾಡಿಸು ಹರಿ ಗೀತೆಗಳೆನ್ನಿಂದ 9 ಮರುತ ದೇವನ ಪಿತನ ಉರದಲಿ ವಾಸಿಪಳೆ ಹರಿಗುರು ಚರಣದಿ ನಿರುತ ಭಕ್ತಿಯ ಕೊಟ್ಟು || ವಾರಿಜನಾಭನಲ್ಲಿ ಧಾರೆ ಧಾರೆಯ ಭಕ್ತಿ ಸಾರಸ ದಳನಯನೇ 10 ಮಾತು ಮಾತಿಗೆ ನಮ್ಮ ಖ್ಯಾತಾಜಯತೀರ್ಥ ನವನೀತ ಧರಿಸೀಹ || ಶ್ರೀ ತಾಂಡವ ಕೃಷ್ಣ ವಿಠಲರಾಯನ ಸ್ಮರಣೆ ಆತ್ಮಾದೊಳಗೆ ನಿಂತು ಖ್ಯಾತೀಲಿನಡಿಸಮ್ಮಾ 11
--------------
ಕೃಷ್ಣವಿಠಲದಾಸರು
ಕಾಯ ಪಾದ ಪದುಮ ದಾಸ್ಯವನಿತ್ತು ಪ ಕಂಸಾರಿ ತವ ಪಾದಪಾಲಿಸುವನೆ ಶಿರದೊಳಗಸಂಶಯದಿ ಧರಿಸೀ |ವಿಂಶತಿಯ ಮತ್ತೊಂದು ಭಾಷ್ಯ ದೂಷಕ ಮರು-ತ್ತಂಶ ಸಂಭೂತ ಶ್ರೀ ಮಧ್ವ ಮತದವನಾ 1 ಆವ ಭವರೋಗ ಹ | ಭಾವ ಕ್ರಿಯ ದ್ರವ್ಯಾಖ್ಯಅದ್ವೈತ ತ್ರಯಗಳನು ಸಂಧಾನವಿತ್ತೂ |ದೇವ ದತ್ತದಿ ತೃಪ್ತಿ ಭಾವವನೆ ನೀನಿತ್ತುಭಾವದಲಿ ತವರೂಪ ಓವಿ ತೋರುವುದೂ 2 ಆಗಮಸುವೇದ್ಯ ಭವರೋಗ ವೈದ್ಯನೆ ದೇವನಾಗಾರಿ ವಾಹನನೆ | ಯೋಗಿಧ್ಯೇಯಾಆಗು ಹೋಗುಗಳೆರಡು | ನೀನಿತ್ತುದೆಂಬಂಥಜಾಗ್ರತೆಯ ನೀನಿತ್ತು ಕಾಪಾಡು ಹರಿಯೇ 3 ಕುಡುತೆ ಪಾಲನು ಭಕ್ತ ಕೊಡಲದನು ಕುಡಿಯುತ್ತಕಡಲಂತೆ ಹಾಯಿಸಿದೆ ಬಡವರಾಧಾರೀ |ಧೃಡಭಕ್ತಿ ಸುಜ್ಞಾನ ವೈರಾಗ್ಯ ಭಾಗ್ಯಗಳಕಡು ಕರಣಿ ನೀನಿತ್ತು ಕಡೆಹಾಯ್ಸು ಭವವಾ 4 ಸರ್ವಜ್ಞ ಸರ್ವೇಶ ಸರ್ವಾಂತರಾತ್ಮಕನೆದರ್ವಿಜೀವನ ಕಾಯೊ ದುರ್ವಿಭಾವ್ಯಾ |ಗುರ್ವಂತರಾತ್ಮ ಮತ್ಪ್ರಾರ್ಥನೆಯ ಸಲಿಸಯ್ಯಶರ್ವವಂದ್ಯನೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಕಾಯಬೇಕೋ ಶಂಕರೇಶ್ವರ ನೀನೆನ್ನನೂ ದೇವಾ ಪ ಮಾಯಧಾರಿಪ್ರೀಯನಹುದೋ ಕಾಯಜಾಂತಕನೇ ಆಯತಾರ್ಥವನ್ನು ತೋರೋ ಪಾರ್ವತೀಶನೆ ದೇವನೆ 1 ಇಂತುದಿನವು ಗಳಿಸಿಯಿರುವ ಅಂತು ದು:ಖಕ್ಕೆ ಪಂತವ್ಯಾಕೊ ಪಾಲಿಸೆನ್ನೊಳಂತರಂಗಮಂ ಶಂಭೂ 2 ದಾಸ ತುಲಸಿರಾಮ ನಿನ್ನ ದಾಸನಾದೆನೂ ದೋಷ ರಹಿತನ ಮಾಡೆನ್ನ ಮೋಸಹೋದೆನೂ-ಗುರುವೇ 3
--------------
ಚನ್ನಪಟ್ಟಣದ ಅಹೋಬಲದಾಸರು
ಕಾಯಯ್ಯ ರಘುನಾಥ ಧೀನಜನೋದ್ದಾರಿ ಪ ಕೇವಲ ಪತಿತ ಪಾಮರ ನಾನು ಕೇವಲ ಪಾವನ ಮೂರುತಿ ನೀನು ಕೇವಲ ಘನ ಅಪರಾಧಿಯು ನಾನು ದೇವನೀ ಕರುಣಾ ಸಾಗರ 1 ಭಾವ ಭಕ್ತಿಯ ಕೀಲವ ನರಿಯೇ ವಿವೇಕ ಮತಿ ನೀ ನೀಡುವ ಧೊರೆಯೇ ಆವಾಗ ವಿಷಯಾ ಸಕ್ತನು ಹರಿಯೇ ಕಾದ ದೈವನು ನೀನೈ 2 ನತ ನಾದೇ ತರಳನ ಕುಂದಾಲಿಸದಿರು ತಂದೇ ಗುರು ಮಹಿಪತಿ ಪ್ರಭು ನಮೋಯಂದೇ ಶರಣಾಗತ ಸಹಕಾರೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು