ಒಟ್ಟು 1331 ಕಡೆಗಳಲ್ಲಿ , 94 ದಾಸರು , 990 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನೆಂದೀದೇಹ್ಯವನು ನಂಬಿದಿ ಮನವೆ ನೀ ಏನೆಂದೀ ದೇಹ್ಯವನು ನಂಬಿದಿ ಪ ಏನೆಂದು ನಂಬಿದ್ಯೋ ಆನಂದದ್ಹಿಗ್ಗುತ ಕ್ಷೀಣವಾಗೊಂದುದಿನ ಮಣ್ಣು ಗೂಡುವುದರಿತು ಅ.ಪ ತಳಕ್ಹಾಕಿ ಜೋಡಿಸಿ ಹಲವು ನರಗಳಿಂದ ಬಲವಾಗಿಬಿಗಿದ ಈ ಎಲುವಿನ ಹಂದರ 1 ರೋಗಕ್ಕೆ ಇದು ತವರಾಗಿ ಒಂದಿನ ನಾಶ ವಾಗಿ ತಾ ಕೈಬಿಟ್ಟು ಪೋಗುವ ಮಂಟಪ 2 ಹಲವು ವಿಧದಿ ಮಜ್ಜ ಮಲ ಮೂತ್ರ ಬಲುಹೇಯ ಕುಂಡಲ 3 ಬಿಲದ್ವಾರ ಒಂಬತ್ತು ತುಳುಕಿತುಂಬ್ಹರಿಯುತ ತೊಳೆಯದಿರಲು ನಿಮಿಷ ಹೊಲಸಿಕ್ಕಿ ನಾರುವುದು 4 ತಂದೆ ಶ್ರೀರಾಮನಂ ಹೊಂದಿ ಭಜಿಸದೆ ಗಾಢ ಅಂಧಕಾರದಿ ಬಿದ್ದು ನಂದಿಪೋಗುವ ತನು 5
--------------
ರಾಮದಾಸರು
ಏನೊ ಜೀವ ನನ್ನ ನುಡಿವ ನಾಲಗೆಯು ನಿನ್ನದೇನೊ ಕಾಣೆ ನಿನ್ನಾ ಬಣ್ಣವನೆನ್ನಾಣೆ ಕೇಳು ಪೇಳುವೆನೂ ಪಭೂತಂಗಳು ಪುಸಿಯೇನೊ ಮಾತೆ ಮಾಯೆಯಲ್ಲವೇನೊಏತಕೀಗರ್ವವು ನೀನು ಜಾತನಾದ ಬಗೆಯೇನೊಕೈತವವ ಬಿಡುುನ್ನೂ ಹೇತು ಹೀನೋಕ್ತಿಗಳೇನುನೀತಿಯಾಗಿ ಪೇಳು ನಾನು ತಾತಪ್ಯಮಾನನಪ್ಪೆನೂ 1ಬಿಸಿಲು ದೊರೆದೇರನೆ ನಾನು ಮಸಿಯಮಾತ ನುಡಿವೆ ನೀನುನಶಿದು ಪೋಪೆನಹುದು ನಾನು ಹಸದೊಳಿಪ್ಪುದುಂಟೆ ನೀನುಸಸಿನೆ ತಿಳಿದುಸುರಿನ್ನು ಕುಸಿಯ ಹಾಕದಿರೆನಿನ್ನೂನುಸುಳುದಾರಿ ಮನವನ್ನು ಹೊಸದು ಕೊಂಡಾಡಿದರೇನು 2ನೋಡುವ ಕಣ್ಣು ನಿನ್ನದೇನೊ ಆಡುವಾಟನಿನ್ನದೇನೊಓಡುವ ಕಾಲು ನಿನ್ನದೇನೊ ನೀಡುವ ಕೈ ನಿನ್ನದೇನೊಬೀಡ ಬಿಡುವರೆ ನೀನು ಗೂಡಾಗಿುದ್ದೆ ನಾನುಕೂಡಲಿಂದ್ರಿಯ ಕರಣ ತಾನು ಕಾಡುಪಾಲಾಗುವೆನೀನು 3ಎದ್ದು ನಡೆದಾಡುವೆ ನಾನು ನಿದ್ರೆಗೈವೆ ಮಲಗಿ ನಾನುಹೊದ್ದುಕೊಂಬೆ ಹೊದಿಕೆಗಳನು ಗದ್ದುಗೆಗಧಿಕಾರಿ ನಾನುಸಿದ್ದಿಯೆನ್ನಿಂದಲೆ ತಾನು ನಿರ್ಧರಿಪುದಿದ ನೀನುಬುದ್ದಿಹೀನನಾಗದಿರಿನ್ನು ಬದ್ಧವಾಡು ಕೇಳ್ವೆ ನಾನು 4ತಿರುಪತೀಶನಂಘ್ರಿ ನಾನು ಬರಿಯ ಪ್ರತಿಬಿಂಬ ನೀನುಗುರುವಾಸುದೇವಾರ್ಯರನ್ನು ಎರಗಿ ಸಂಪಾದಿಸಿದೆ ನಾನುಕರೆದು ಬಿಗಿದಪ್ಪಿದರೆನ್ನುವನು ಒರೆಯೆ ಕಿವಿಯೊಳ್ಮಂತ್ರವನ್ನುಭರದಲೆನ್ನ ಜಿಹ್ವೆ ಜಪಿಸಿ ಅಂತೆನೆಂಬೆ ನಿನ್ನ ನೀನು 5ಕಂ||ಒರಟುತ್ತರದಿಂದ ದೇಹವು ಬರಿ ಜಗಳವ ತೆಗೆಯೆ ಜೀವನರಿತಿದರಂದವ ನೆರೆಮೂರ್ಖರ ದಾರಿಯೊಳಗೆಬರುತರುಪುವ ಜಾಣನೆಂದು ನೀತಿಯ ನುಡಿದಂ
--------------
ತಿಮ್ಮಪ್ಪದಾಸರು
ಏನೋ ಮನವೇ ನೀಹೀಂಗಾದಿ ಧ್ರುವ ಏನೋ ಮನವೇ ನೀ ಹೀಂಗಾದಿ | ಸ್ವಾನಂದ ಸುಖ ತಿಳಿಯದೆ ಬಳದಿ | ಮಾನುಭವರ ವಿಡಿನಿಜ ಹಾದಿ | ಭವ ವ್ಯಾಧಿ 1 ಮಂದ ಮತಿತನ ಬಿಡು ಗುಣದಾ | ಹೊಂದೋ ಸದ್ಗುರುವಿನ ಪಾದಾ | ಛಂದದಿ ಪಡಿಯೋ ನಿಜ ಬೋಧಾ | ಸಂದೇಹ ಬಿಡಿಸೆಚ್ಚರಿಸುವದಾ2 ಹೊಗೆ ಅಗ್ನಿಯ ಮುಸುಕಿಹ ಪರಿಯಾ | ಮಾಯಾ | ಬಿಗಿದಾವರಿಸಿಹುದು ನೋಯಾ | ಬ್ಯಾಗನೆ ತಿಳಿ ಗೆಲುವ ಉಪಾಯಾ 3 ಮುಂದ ಹಾಕಿದ ಹೆಜ್ಜೆಯನು | ಹಿಂದಕ ತಿರುಗಿಸದಿರು ನೀನು | ನಿಂದಿಸಲೊಂದಿಸಲಾರೇನು | ಮುಂದಗಿಡದೆ ಬೆರಿ ವಸ್ತವನು 4 ನಿನ್ನ ಸುದ್ದಿಯು ತಾ ನಿನಗಿಲ್ಲಾ | ಇನ್ನಾರೆ ತಿಳಿತನು ಸ್ಥಿರವಲ್ಲಾ | ಮುನ್ನಿನ ಪರಿಕೆಡುವುದು ಸಲ್ಲಾ | ಮನ್ನಿಸು ಮಹಿಪತಿ ಜನ ಸೊಲ್ಲಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏಸು ಜನ್ಮದ ಸುಕೃತವದು ಬಂದು ಒದಗಿತೋದೇಶಿಕೋತ್ತಮನ ದಯದಿಆಸೆಗಳು ಮರೆಯಾಗಿ ಆಷ್ಟ ಪಾಶಗಳಳಿದುಈಶ ಸರ್ವೇಶನಾಗಿ ಹೋದೆ ಪ ಕಂಗಳ ಮುಚ್ಚಿ ದೇಹದೊಳು ದಿಟ್ಟಿಸಿ ನೋಡೆಮಂಗಳವೆ ತೋರುತಿಹುದು ಅಹುದುತಿಂಗಳಿನ ಕಳೆಯಂತೆ ಬೆಳಕಬೀರುತ ಬೆಳು-ದಿಂಗಳನೆ ಹರಡಿದಂತೆ ಅಂತುಕಂಗೊಳಿಸುತಿಹುದು ಬಗೆಬಗೆಯ ವರ್ಣಛಾಯೆಅಂಗ ವರ್ಣಿಸುವರಾರೋ ಆರೋಬಂಗಾರ ಪುಟದಂತೆ ನಡುಮಧ್ಯೆ ಹೊಳೆಹೊಳೆದುಹಿಂಗದನುದಿನ ತೋರುವ ಗುರುವಾ 1 ಅಮೃತ ಕಳದಿ ಝಳದಿ 2 ನಿತ್ಯವಹ ಪರಮಾತ್ಮ ನಿಶ್ಚಲದಿ ತೋರುತಿದೆಚಿತ್ತವೆಂಬುದು ಸಾಯೇ ಬೇಯೆಮತ್ತೆ ಮನ ದೃಗ್ ದೃಶ್ಯ ಧಾರಣರವರುಎತ್ತ ಹೋದರೋ ಎಲ್ಲರೂಸತ್ಯವಾಗಿಹ ಪರಮ ಬಾಹ್ಯಾಂತರೀಯ ಹೆಸರುಎತ್ತುವರು ಇಲ್ಲದಾಯ್ತು ಹೋಯ್ತುಪ್ರತ್ಯಗಾತ್ಮನು ಚಿದಾನಂದ ಗುರು ತಾನಾದಅತ್ಯುಕ್ತಿ ಹೇಳ್ವುದೇನು ಏನು 3
--------------
ಚಿದಾನಂದ ಅವಧೂತರು
ಒಡಲೆರಡಂತೆ ಅಸುವೊಂದಂತೆ ನುಡಿಯಿದು ನಿಜವೇ ಪೇಳೇ ಗೋಪಮ್ಮ ಪ ನಡೆ ನುಡಿ ಭಾವಗಳೊಂದೇಯಂತೆ ಹುಡುಗನೇನೇ ಕೃಷ್ಣ ಪೇಳೇ ಗೋಪಮ್ಮ ಅ.ಪ ಸೋದರಿಯರು ಇದ ಹೇಳುವರಮ್ಮ ನಾದ ನರ್ತನ ದೇಹಕಾಂತಿಗಳಲ್ಲಿ ಭೇದವಿಲ್ಲೆಂಬರು ನಿಜವೇನಮ್ಮಾ 1 ಬಾಲೆಯು ತಾನೆ ಗೋಪಾಲನೆನುವಳಂತೆ ಬಾಲಕೃಷ್ಣನು ರಾಧೆ ತಾನೆಂಬನಂತೆ ಬಾಲನಾರಿದರಲ್ಲಿ ಬಾಲೆಯಾರಿವರಲ್ಲಿ ಮೂಲತತ್ವವ ನೀನೆ ಹೇಳೇ ಗೋಪಮ್ಮ 2 ಯುಗ ಯುಗದಲ್ಲಿ ತಾನವತರಿಸುವ ಕೃಷ್ಣ ಜಗದೀಶ್ವರನೆ ತಾದಿಟವಮ್ಮ [ಮಿಗೆ] ಭಾಗ್ಯವೆ ನಿನ್ನದಾಗಿಹುದಮ್ಮ 3 ನಿರುಪಮ ಭಕ್ತಿಯಮೂರ್ತಿಯು ರಾಧೆ ಮುರಳೀಧರನಲಿ ಒಂದಾಗಿಹಳು ಅರಿತುದ ಪೇಳ್ವೆನು ಮಾಂಗಿರಿರಂಗನ ಶರಣರಿಗೀತತ್ವ ಕರಗತವಮ್ಮಾ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಒಡಿಯ ನೀನಹುದೊ ಎನ್ನ ಬಡವನಾಧಾರಿ ನೀನು ಧ್ರುವ ಪೊಡವಿಯೊಳಗೆ ಎನ್ನ ಬಿಣದೆ ಸಲಹುತಿಹ್ಯ ಅಡಿಗಡಿಗೆ ತಂದು ನೀ ಪಡಿಯ ನಡೆಸುವ ಸ್ವಾಮಿ 1 ಪಿಡಿದು ಎನ್ನ ನೀ ಕೈಯ ಕಡೆಗಾಣಿಸುವಿ ಪೂರ್ಣ ಬಿಡಿಸಿ ಧಾವತಿಯಿಂದ ಕೊಡುವಿ ತಂದು ನಿಧಾನ 2 ಕೊಂಡಾಡಲಳವೆ ನಿನ್ನ ಮಂಡಲದೊಳು ಕೀರ್ತಿ ಪಿಂಡ ಬ್ರಹ್ಮಾಂಡ ಪರಿಪೂರ್ಣವಾಗಿಹ ದೇಹ 3 ಕೊಳದೆ ಸೇವೆಯ ನಿನ್ನ ಅಳೆದು ನಡೆಸುವ ಪಡೆಯ ಪಾಲಕನಹುದೊ ಎನ್ನ ಮೂಲೋಕದೊಡಿಯನೆ 4 ನಿತ್ಯನಿಜವಾಗ್ಯಾಗ ಹೊತ್ತು ನಡೆಸುವ ಪಡೆಯ ಭೃತ್ಯ ನಿಜ ದಾಸಮಹಿಪತಿಗಿನ್ನು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಒಂದರಿಂ ಸುಖವಿಲ್ಲ ಹುಟ್ಟು ಮೊದಲು ಡಂಭ- ಪ ದಿಂದ ಭೈರೂಪ ತೊಟ್ಟು ತಿರುಗುತಿದೆಅ.ಪ ಬಟ್ಟೆ ಸಂಸಾರ ವಿಷಯ ಕೋಟಲೆಗೊಂಡುನಾಯ್ ಬಾಯ ಕೊಚೆಯಂತೆ ನಸಿಯುತಿದೆ ದೇಹ 1 ಬುದ್ಧಿ ದೃಢ ದುರ್ಮಾರ್ಗದಿಂದ ನೋಡದೆ ಹೋಯ್ತುಶುದ್ಧ ಸತ್ಕರ್ಮವಿಲ್ಲದೆ ಸೂರೆ ಹೋಯ್ತುದುರ್ದೆಸೆಯ ಪಥದ ಲಂಪಟ ಮಾಯಕೆ ಸಿಲುಕಿಮದ್ದಳೆಯ ಇಲಿಯಂತೆ ಆಯಿತೀ ದೇಹ 2 ಭೋಗ ಸಂಗವಮಾಡಿ ಪೋಗಲೈಸಿತು ದೇಹರಾಗಲೋಭವು ಹೆಚ್ಚಿ ವೈರಾಗ್ಯ ಹೊಯ್ತುಆಗಮವ ತಿಳಿಯದೆ ಕೃಷ್ಣನ್ನ ಧ್ಯಾನಿಸದೆಜೋಗಿ ಕೈ ಕೋಡಗನಂತೆ ತಿರುಗುತಿದೆ 3
--------------
ವ್ಯಾಸರಾಯರು
ಒಂದಾನು ಒಂದು ದಿನ ಶಿಂಧುವಿನೊಳ್ ನೆರೆದು ಬಂದಾರು ದೇವತೆಗಳುವೃಂದಾವು ದುಷ್ಟ ಜನರಿಂದಾಲೆ ಭೂಮಿ ನೊಂದಾಳುಎಂದುಸುರಿತಾ ಪ ಕಂದರ್ಪತಾತ ನಿನಗೊಂದಿಸಿ ಬೇಡುವೆನು ಛಂದಾದಸೂರ್ಯಸುತನಾಮಂದಿರದೋಳ್ ಜನಿಸಿ ನಂದಾದಿ ಗೋಕುಲದಿ ನಿಂದಾತ್ಮಲೀಲೆ ತೋರೊ ಅ.ಪ. ಅಂದಾಡಿದೂತ ಸುರವೃಂದಾರ ವಾಕ್ಯಗಳ ಕಿವಿಯಿಂದಾಲೆಕೇಳಿ ಹರಿಯುಛಂದಾದಿ ನೀವುಗಳು ಮುಂದಾಗಿ ಜನಿಸುವದು ಹಿಂದಾಗಿನಾ ಜನಿಸುವೇಅಂದಾಡಿದಂಥ ಹರಿ ಸುಂದರಾ ಮಾತವನು ತಂದಾನುಬ್ರಹ್ಮ ಮನದೀಇಂದ್ರಾದಿಗಳಿಗೆಲ್ಲ ಅವನಂದದ್ದು ಪೇಳೆ ನಿಜಮಂದಿರಖೋಗಿರೆಂದಾ 1 ಎಲ್ಲಾ ಅಮರರೂ ನಿಜವಲ್ಲಾಭಿಯರು ಸಹ ಅಲ್ಲಲ್ಲೆಜನಿಸುತಿಹರೂಫುಲ್ಲಾಕ್ಷತಾ ಮಥುರೆಯಲಿಟ್ಟು ಗೋಕುಲದಿ ಮೆಲ್ಲಾನೆಬೆಳೆಯುತಿರಲುಅಲ್ಲಿದ್ದ ಗೋಪಿಯರು ಯಲ್ಲಾರು ತಾವು ನಿಜವಲ್ಲಾಭೆರೆಂದು ಹರಿಯೋಳ್‍ಎಲ್ಲಾನು ಬಿಟ್ಟು ಅವನಲ್ಲಿಗೆ ಸ್ನೇಹವನು ಉಲ್ಹಾಸಮಾಡುತಿರಲು 2 ವ್ರಜ ಕರ ವೃಂದಾವನದಲ್ಲಿಳುಹಿದಾ 3 ವಂದೀನ ರಾತ್ರಿ ರವಿನಂದಿನಿಯೋಳ್ ಹರಿಯುನಿಂದೂದಲಾಗ ಕೊಳಲುವೃಂದಾದರಾಗಗಳಿಂದಾಲೆ ಕೇಳಿ ವ್ರಜದಿಂದಾವರಾನಿಹರೂಮಂದೀರದೊಳಗೆ ನಿಜ ಕಂದಾರು ನಾಥಗಳು ಛಂದಾದವಸ್ತ್ರಂಗಳುವಂದಾನು ನೋಡದಲೆ ವಂದಾರು ಯಮುನೆಯಲಿಂದಾರುಮೈಯ್ಯ ಮರೆತು 4 ಬಂದೇವು ನಾವು ನಿಜ ಮಂದೀರ ಬಿಟ್ಟು ನಿಮ್ಮ ಸುಂದರಕೊಳಲ ಧ್ವನಿಗೇಛಂದಾದ ಸ್ಮರಣೆ ಸುಖದಿಂದಿತ್ತು ನಮಗೆ ದ್ವಿಜೇಂದ್ರೇತಕಾಯೋ ಯನಲುಅಂದಾವರಾಮಾತು ನಂದಾನುಸೂನ ದಯದಿಂದಾಲೆಕೇಳಿ ಹರಿಯೂಮುಂದಣಿಯಾಗ ಅವರಿಂದಾಲೆ ಕೂಡಿ ದಯದಿಂದಾಲೆನಲಿದು ಮರೆದೂ 5 ಬಂದಾನು ಮಥುರೆಯಲಿ ಕೊಂದಾನು ಮಾತುಳನೆತಂದೀಯಾ ಬಂಧನವ ಬಿಡಿಸೀಸಾಂದೀಪಗಿತ್ತು ಕಂದಾನಸೂನ ಕುರು ನಂದಾರಕೊಲ್ಲಿಸಿದನೂಇಂದ್ರತ್ವ ಜ್ವಾಲೆಗಳೂ ಅಂತಿತ್ತು ರಾಜ ಸುಖ ಸಂದೇಹ ಸಂತೋಷದೀಇಂದ್ರಾದಿ ಸರ್ವಸುರ ಸಂದೇಹ ಪ್ರಾರ್ಥಿಸಿದ ಒಂದೊಂದೆ ಮಹಿಮೆಗಳನೂ 6 ಛಂದಾಗಿ ಮಾಡಿದ್ವಶ ಮಡುಹಿಕರ ವೃಂದಾವಪಾಲಿಸಿದನೂನಂದಾತ್ಮ ಜಾತವು ಒಂದೊಂದೆ ಮಹಿಮೆಗಳ ತಂದೊಮ್ಮೆಮನದಿ ಸ್ಮರಿಸೀಬೆಂದಾವು ಪಾಪಗಳು ಬಂದಾವು ಸೌಖ್ಯಗಳುಸಂದೇಹವಿಲ್ಲನಿದರೋಳ್‍ಕಂದಾರ ಕೊಡುವ ಧನ ವೃಂದಾವು ಪೊರೆವಾ ಮಂದೀರವಿತ್ತು ಸಲಹುವ 7 ಇಂದೆನ್ನ ಮಾನಸದಿ ತಂದಾತ್ಮ ರೂಪವನೂ ಛಂದಾಗಿ ಸಂತೈಸಲೀನಂದಬಾಲಾಷ್ಟಕವನೂ ಇಂದುವಾವರು ಪಠಿಸುವಾ ಇಂದಿರೇಶನು ಪಾಲಿಸುವನೂ 8
--------------
ಇಂದಿರೇಶರು
ಒಂದು ಪ್ರಕಾರವೆ ಸ್ವಾಮಿ ಮಂದಿಯ ರಕ್ಷಿಸುವುದು ನಿಂದವರ ದೇಹದಲ್ಲಿ ಹಿಂದೆಮುಂದಭಯವನಿತ್ತು ಪ. ಅಪಾರ ಮಹಿಮ ನೀನು ಒಪ್ಪುವ ಹಯಾಸ್ಯನಾಗಿ ಎಪ್ಪತ್ತೆರಡು ಸಾವಿರ ಇಪ್ಪ ನಾಡಿಗಳೊಳಿದ್ದು 1 ಮುಖ ನಾಸ ನೇತ್ರ ಶ್ರೋತ್ರ ತ್ವಕ್ ನಖೇಂದ್ರಿಯ ತದ್ಗೋಳಕ ಸಕಲರೂಪಗಳಲ್ಲಿ ನೀನೆ ಆಧಾರವಾಗಿದ್ದು 2 ಶ್ವಾಸೋಚ್ಛ್ವಾಸ ಚೇಷ್ಟವಿಚÀಕ್ಷಣ ಹಾಸವಿಲಾಸ ಭೂಷಣ ಗ್ರಾಸಾವಾಸಂಗಳಿಗೆ ನಿವಾಸವಾಗಿ ಪ್ರೇರಿಸುವೆ 3 ಅನಂತ ರೂಪಗಳಲ್ಲಿ ನೀನೆ ಆಧಾರವಾಗಿದ್ದು 4 ಪ್ರಾಣೋಪಾನ ರೂಪಿನಿಂದ ವ್ಯಾನೋದಾನರೂಪನಾಗಿ ವ್ಯಾನೋದಾನ ರೂಪಿನಿಂದ ಉದಾನ ಸಮಾನನಾಗಿದ್ದು 5 ಪೂಜಾ ವ್ಯಾಖ್ಯಾನ ಕೀರ್ತನ ಭೋಜನ ಮಜ್ಜನಸುಖ ಭಾಜನೆಗಳಲ್ಲಿದ್ದು ಪೂಜ್ಯನಾಗಿ ಪ್ರೇರಿಸುವ 6 ವಿಶ್ವ ತೇಜಸ್ಸು ಪ್ರಾಜ್ಞಾ ತುರ್ಯಾ ಅವಸ್ಥಾತ್ರಯಂಗಳೆಲ್ಲ ಕೊಡುವೆ ಜಾಗ್ರತ್ಸ್ವಪ್ನ ಸುಷುಪ್ತಿಯಲ್ಲಿ ವಿಶ್ವಪ್ರೇರಕನಾಗಿದ್ದು 7 ಆತ್ಮರೂಪ ಆದ್ಯ ಅನಂತ ಅಂತರಾತ್ಮ ರೂಪನಾಗಿ ಜ್ಞಾ- ನಾತ್ಮ ರೂಪಿನಿಂದ ಪರಮಾತ್ಮರೂಪನಾಗಿ 8 ಅನಿರುದ್ಧ ಸಂಕರ್ಷಣ ಪ್ರದ್ಯುಮ್ನ ಘನ ವಾಸುದೇವ ನೆನೆವರ ಪಾಪ ಪರಿಹರಿಸುವ ನರಹರಿ 9 ನೀನು ನಿನ್ನ ದಾಸರಿಗಾಗಿ ಮನುಷ್ಯಮುಖದಿಂದ ತತ್ವ ತನುಗಳಿಂದ ಕುಡುವ ಅವರವರ ದೇಹ್ಯದೊಳಿದ್ದು 10 ಸರ್ವರೊಳಗೆ ನೀನಿದ್ದು ಅವರವರ ವಿಭಾಗದ ಕರ್ಮ ಪರೀಕ್ಷಿಸಿ ಪ್ರೇರಿಸುವ ವರ ಶ್ರೀಹಯವದನ 11
--------------
ವಾದಿರಾಜ
ಒಂದು ಮೂರುತಿಯಲ್ಲಿ ಹರಿಹರದೇವರಿಬ್ಬರು ಬಂದು ನೆಲೆಗೊಂಡುದನ ಕಂಡೆನದ್ಭುತವ ಪ. ಭಾವಜನಪಿತನೊಬ್ಬ ಅವನ ಕೊಂದವನೊಬ್ಬ ಹಾವ ತುಳಿದವನೊಬ್ಬ ಧರಿಸಿದವನೊಬ್ಬ ಗೋವ ಕಾಯಿದನೊಬ್ಬ ಅದನೇರಿದವನೊಬ್ಬ ಭಾವಿಸಲು ವಿಪರೀತಚರಿತರಂತಿರ್ದು1 ಬಾಣನ ಗೆಲಿದವನೊಬ್ಬ ಬಾಗಿಲ ಕಾಯಿದವನೊಬ್ಬ ದಾನವರ ರಿಪುವೊಬ್ಬ ವರವೀವನೊಬ್ಬ ಏನನೆಂಬೆನೊ ಜಗವ ಕಾವುತಿಹನೊಬ್ಬ ನಿ- ಧಾನಿಸಲು ಸಂಹರಿಸಿ ಕೊಲ್ಲುತಿಪ್ಪನೊಬ್ಬ 2 ಯಾಗ ಪಾಲಕನೊಬ್ಬ ಯಾಗಭಂಜನನೊಬ್ಬ ನಾಗರಕ್ಷಕನೊಬ್ಬ ನಾಗಶಿಕ್ಷಕನು [ಒಬ್ಬ] ಈಗ ನಲ್ಲಳಿಗÀರ್ಧದೇಹವನಿತ್ತ ಶಿವನಂತೆ ಭೋಗದೊಳು ಹೊಂದಿಹ ಹಯವದನ ಬಲ್ಲ 3
--------------
ವಾದಿರಾಜ
ಒಲಿದವಳ ಬಿಡುವುದು ಧರ್ಮವಲ್ಲ | ಚಲುವ ನಿನಗಾಗಿ ನಾ ಯೇಸು ಕಾಲಕೆ ತಪವಿದ್ದೆ ಪ ತಂದೆತಾಯಿಗಳಲ್ಲಿ ಪುಟ್ಟಿದಾಕ್ಷಣದಲ್ಲಿ | ಅಂದೆ ನೇಮಿಸಿದರು ಪೆಸರನಿಟ್ಟು | ಸಂದೇಹಗೊಳದಿರು ಮೈಲಿಗೆಯವಳೆಂದು | ಬಂದ ಪ್ರಾಣವÀ ನೋಡು ಬರಿದೆ ಪೇಳುವಳಲ್ಲ 1 ಕನ್ಯಾವಸ್ಥಿಯಲಿಂದ ನಿನ ನಿನ್ನ ಧ್ಯಾನವಲ್ಲವೇ | ಅನ್ಯಪುರುಷರಾಪೇಕ್ಷೆ ಮಾಡಲಿಲ್ಲ | ಅನ್ಯಾಯವೇನು ಆಗಲಿ ಪೋಗುವರೇನೊ | ಅನ್ಯಥಾ ಈ ನುಡಿಗೆ ನಿಜಕೆ ನಿಲ್ಲುವೆ ನಾನು 2 ಮಲದಲ್ಲಿ ಮೂರುದಿನ ಪೋಗಾಗಿ ಹೋಗಿದ್ದೆ | ಬಲು ಶುಚಿಯಾದೆನೊ ಶುದ್ಧ ಜಲದಿ | ಘಳಿಗೆ ಕಡೆದರೆ ಎನ್ನ ಪ್ರಾಣನಿಲ್ಲವೊ | ಎನ್ನನಗಲಿ ಮೈ ತಪ್ಪಿಸಿ | ದೂರ ಕರೆದೊಯ್ಯೊ ಕರುಣದಲಿ 3 ನಗೆಗೇಡಿ ಮಾಡದಿರು ಜಗದೊಳಗೆ ಇಪ್ಪವಳ | ಸೊಗಸಿಗನೆ ಸರಸವಾಡುವನೆ ಬಾರೊ | ಮಗುಳೆ ಮತ್ತೊಬ್ಬರು ಮೆಚ್ಚಿದರೆ ಇದೆ ಪಾಟು | ಮಗುಳೇನು ಹೊಸ ಪರಿಯು ತೋರುವುದು ನೋಡಿದರೆ 4 ಕಂಡ ಕಾಣದ ಹಾಗೆ ಮಾತನಾಡಿದಿರೆನ್ನ | ಅಂಡೊಲಿವ ಖ್ಯಾತಿ ಎಂದಿಗೆ ತೀರದೂ | ಕುಂಡಲಿಗಿರಿವಾಸ ವಿಜಯವಿಠ್ಠಲ ವೆಂಕಟ | ಹಿಂಡು ಬಂಧುಗಳಿದ್ದರೇನು ಮಾನವನು ತೊರೆದೆ 5
--------------
ವಿಜಯದಾಸ
ಕಂ||ಇಂದುವಿನ ವಾರದರ್ಚನೆಸಂದುದು ನಿನ್ನಡಿಗಳಿಂಗೆ ಗ್ರಹಗತಿ ಸೂಚಿಸೆಹಿಂದಣ ಕರ್ಮದ ಫಲವನುಸಂದೇಹವು ಬಿಡದು ಬಿಡಿಸು ವೆಂಕಟರಮಣನೆದುರಿತವನು ಪರಿಹರಿಸು ಸ್ಥಿರಭಕ್ತಿುರಿಸುತಿರುಪತಿಯ ಸ್ಥಿರವಾಸ ಶ್ರೀ ವೆಂಕಟೇಶ ಪಭಯವಾಗುತಿದೆ ದೇವ ಭಯಬಡಿಸುತಿರೆ ಕರ್ಮಭಯವಿಲ್ಲದಿರುವದೆಂತುಭಯನಿವಾರಕನಾಮ ಭಯತಿಮಿರ ರವಿಯಹುದುಭಯ ಹೋಗಿ ಸ್ಥಿರವಾಗಿ ಮನ ನಿಲ್ಲದಿಹುದು 1ಪರಮ ಯೋಗ್ಯನಿಗೊಂದು ಪಿರಿದಾದ ದುಃಖವಿದೆಪರಿಹರಿಸದಾವ ವಿಧದಿಕರಗಿ ಕಂದುತಲಿರಲು ಬಿರಿಸು ಕರ್ಮದ ಗತಿಯುನರಹರಿಯೆ ಮಹಿಮೆಯನು ನೆರೆ ತೋರಿಸೀಗ 2ಭಜನೆಯನು ಮಾಡಿದರೆ ಭಜನೆ ಕಾಮನೆಯಾಗಿನಿಜ ದೊರಕದೆಂಬ ಭಯವುಭಜಿಸಿ ಪಾಪವ ಕಳೆಯೆ ಭಜನೆಯದಕಾಗುವುದುಭಜನೆ ದೇಹದಿ ನಿಂದು ಭವ ತಾನು ನಿಲ್ಲುವುದು 3ಕರ್ಮಕೀ ಪರಿ ಬಲವು ಧರ್ಮವಾಗಿರೆ ಬಲಿತುಕರ್ಮವೇ ಬೆಳೆಯುತಿಹುದುಮರ್ಮವರಿತರು ಬಿಡದು ಹೆಮ್ಮೆಯದು ಬಲ್ಲವಿಕೆಧರ್ಮ ಬರುವದು ನಿನಗೆ ಕರ್ಮವಿದ ಕಡೆಗೊಳಿಸು 4ಇಚ್ಛೆುಂದಿದ ಸೃಜಿಪೆ ುಚ್ಛೆುಂ ಪರಿಹರಿಪೆಇಚ್ಛೆಯೇ ತೋರುತಿಹುದುಇಚ್ಛೈಸಿ ನಿನ್ನಡಿಯನಚ್ಯುತನೆ ಭಜಿಪರಿಗೆ 5ತುಚ್ಛವಾದೀ ಕರ್ಮ ಬಿಚ್ಚದಿಹುದೇನುಗರ್ವ ಬರುವದು ಜನಕೆ ಸರ್ವಗತನೆನಿಸಿದರೆನಿರ್ವಹಿಪೆನೆನಲು ಹೀಗೆಸರ್ವೇಶ ನೀನೊಲಿದು ಸರ್ವದೋಷವ ಕಳೆಯೆಗರ್ವವೆಡೆಗೊಳ್ಳದೈ ಪೂರ್ವದವನೆನಿಸು 6ಸೂತ್ರವನು ನಿರ್ಮಿಸಿದೆ ಸೂತ್ರ ನಿನ್ನಾಧೀನಸೂತ್ರಕ್ಕೆ ಶಕ್ತಿಯೆಂತುಯಾತಕೀ ಕರ್ಮಗತರನು ಮಾಡಿ ಜನರುಗಳ ಪಾತಕರು ಹೊರಗೆಂದು ಯಾತನೆಯ ಮಾಳ್ಪೆ 7ಮೃಷೆಯೆಂದ ಮಾತ್ರದಲಿ ಮೃಷೆಯಾಗದೀ ದುಃಖವಿಷಮವೇ ಬಳಲಿಸುವದುವಿಷವು ಮೊದಲಾಗಿ ತದ್ವಿಷಮ ಕರ್ಮದಿ ಹರವುವಿಷಮವಿದು ನಿನ್ನ ನಿಜದಲಿ ತೊಲಗದೆಂತು 8ಕರುಣಾಕರನೆ ನೀನು ಗುರುಮುಖದಿ ಕರ್ಮಗಳಬರಸೆಳೆದು ಬಯಲಮಾಡೆಮರೆವೆಯಾವರಣವಿರಬೇಕೆ ತಿರುಪತಿವಾಸವರದ ಶ್ರೀ ವಾಸುದೇವಾರ್ಯ ವೆಂಕಟರಮಣ 9ಓಂ ಪಾರ್ಥಸಾರಥಯೇ ನಮಃ
--------------
ತಿಮ್ಮಪ್ಪದಾಸರು
ಕಂಗೆಡದಿರು ಮನವೆ ಕಂಗೆಡದಿರು ಒಡನೊಡನೆ ನೆರೆದು ಬಂದು ಪ ಜನಕೆ ಗ್ರಾಸವೆಂತಹುದೆಂದು ಅನುಮಾನ ಹಚ್ಚಿಕೊಂಡು ಬಡವಾಗದಿರೆಲೆ ಆಲೋಚನೆ ಮಾಡು ನಿನ್ನೊಳಗೆ ತಿಳಿದು ಮರಳಿ ಮರಳಿ ಘನಮಹಿಮ ನಾರಾಯಣ ಅನಾದಿ ಸ್ವಾಭಾವಿಕ ಚಿನುಮಯ ಸತ್ಯಸಂಕಲ್ಪ ದೇವ| 1 ಇನಿತು ಜೀವಿಗಳಿಗೆ ಕಾಲಕಾಲಕೆ ಗ್ರಾಸ ಮಾಡಿಯಿಪ್ಪಾ ಕ್ಷಣಮಿರಗೊಡದೆ ಆವಲ್ಲಿಯಿದ್ದರೂ ವುಣಿಸುವ ಉಚಿತವನ್ನೆ ತಿಳಿದು ನೋಡಿ ದಿನ ದಿನಕೆ ಅಧಿಕವಿಲ್ಲಾ ತತ್ಪೂರ್ವ ಚೇತನಕೆ ನಿರ್ಮಾಣ ಮಾಡಿದಂತೆ ಬೊಮ್ಮಾ2 ಫಣಿತಿಯಲ್ಲಿ ಬರೆದಿರುವ ಆಯು:ಕರ್ಮವಿದ್ಯಾ ಧನ ನಿಧಾನನೆನೆಸಿ ಶ್ರೀಹರಿಯ ಆಜ್ಞಾದಿ ಜನಿಸುವಾಗಲೆ ಅವರವರವಾಡಿಪನಾ ಕೊನೆಯ ಸೆರಗಿನಲಿ ಕಟ್ಟಿಹನೋ ನಿನಗೆ ಕಾಣಬಾರದೋ ಪದಶಾಸ್ತ್ರಗಳಿಂದೆ ಗುಣಿಸಿ ನೋಡಿದರೆ ಕಾರುಣಿಕÀವಹುದೊ 3 ಅಣುಮಾತ್ರನಿಂ ನಿಂದಾ ಆಗುವಾ ಶೌರ್ಯವೇನೋ ಅನುಭವಕೆ ತಂದುಕೊಂಡು ಗ್ಲಾನಿಯಾಗೋ ಮಿನುಗು ಚಿಂತೆಗಳಿಂದಾ ಬರುವ ಲಾಭವೇ ಕಾಣೆ ತನುವ ಶೋಷಿಸಿ ವಿರೋಧಾವಾಗಿ ಕೊಂಬೆ ಸಿರಿ ನಮ್ಮ ವಿಜಯವಿಠಲರೇಯಾ ಮನುಜಾದಿ ದೇಹಿಗಳಿಗೆ ಸ್ವಾಮಿಯಾಗಿಪ್ಪನೋ
--------------
ವಿಜಯದಾಸ
ಕಂಜ ಬಿಂಬಾನನೆ ಕಂಜ ಸತ್ಕೂಲಪರ ಕಂಜ ಸಾಸಿರ ಶಿರನಾ | ತಂದು ತೋರೇ ಪ ಕೂಡಾ ನಿತ್ಯದಿ ಕ್ರೀಡಿಪನಾ | ನೆತ್ತಿಯೊಳನುಹಾನೆ ಇಪ್ಪಳ ಸಂಗಡ ಅತ್ತಿತ್ತಗಲ ದವನಾ | ಚಿತ್ತೆದೊಲ್ಲಭ ನೈಯನಾ | ಬಂದ ಸತ್ಯ ಶಾಶ್ವತನ ತೋರೆ 1 ಚಿನಿಗಡಿದ ಕುವರನಾ | ಹಿರಿಯಳಿಯನಾ ತಂದೆಯಾ ಪಿತನಾ | ವನವ ಶರಭಿ ಧಾನ | ಶ್ರೀ ವನಜನಾಭನಾ ತಂದು ತೋರೆ 2 ಸರಸಿಜ ಸಖ ಸುತನಾ | ಅಸುರನ ಮಾತೆಯರಸನಾ | ಕರದಿಂದ ಸಂದಿದ್ದ ದೇಹಿಯ ಕೊಳೆ ಭಕ್ತರ ದುರಿತರ್ಹಿಸಿದನಾ | ಗುರುವರ ಮಹಿಪತಿ ಸುತನ ಅಭಯವಿತ್ತು ಪೊರೆವನ ತಂದು ತೋರೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಂಡು ಕಂಡು ನಾನು ಹೇಗೆ ಸುಮ್ಮನಿರಲಿ ಪ ಯಲ್ಲಮ್ಮ ಎಕನಾತಿ ಮೊದಲಾದ ಚಿಲ್ಲರೆ ದೇವರುಗಳಲ್ಲಿ ನಿಷ್ಠೆ ಇಟ್ಟು ||ನಿಲ್ಲದೇ ಭಜಿಸಿ ಸಂತತಾಪುಲ್ಲನಾಭನ ಬಿಟ್ಟು ಕ್ಷುಲ್ಲಕರನ 1 ದೇವರೆಲ್ಲಾ ಸಮ್ಮತವೆಂದುಬೇವಿನ ಉಡಿಗೆ ಊಟಾನಿಟ್ರು ||ಜೀವ ಹರಿಗೆ ಐಕ್ಯವ ಪೇಳುವಕೇವಲ ತಾಮಸ ಜೀವಿಗಳನ 2 ಅಹಂಕಾರದಿಂದಲಿ ಕೆಟ್ಟುದೇಹಿ ಎಂಬೋ ವಾಕ್ಯವ ಬಿಟ್ಟು ||ರಹಸ್ಯದಿಂದಲಿ ಶ್ರೀ ಹರಿಯ ಬಿಟ್ಟುಮೋಹನ್ನ ವಿಠಲನ ಸೋಹಂ ಎಂಬರ 3
--------------
ಮೋಹನದಾಸರು