ಒಟ್ಟು 8888 ಕಡೆಗಳಲ್ಲಿ , 133 ದಾಸರು , 4838 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಧನ್ವಂತ್ರಿಯ ಪ್ರಾರ್ಥನೆ) ವೇದ ವೇದ್ಯ ವೈದ್ಯನಾದನು ಭಕ್ತಜನ್ಮಾದಿ ವ್ಯಾಧಿಗಳನ್ನು ಬಾಧಿಸಿ ದುಗ್ಧ ಮಹೋದಧಿ ಮಥಿಸಿದ ಸಮಯದಿ ಪಾರಿಜಾ ತೋದಯವಾದ ಮೇಲಾದರದಿ ಪ. ಧೀರದಿತೆಯಸುರಾರಿ ನಾಯಕರೆಲ್ಲ ಸೇರಿ ಕ್ಷೀರಾಂಬುಧಿ ತೀರದ ತಡೆಗಾಗಿ ಭಾರಿ ಮಂದರವೆತ್ತಿ ತಾರಲಾರದೆ ಮಧ್ಯ ದಾರಿಯೊಳಗೆ ಬಿದ್ದು ಚೀರಲಂದು ನೀರದನಿಭ ಕೃಪೆದೋರಿ ಬಂದಲ್ಲಿ ಸ- ರ್ಪಾರಿಯ ಶಿರದ ಮೇಲೇರಿಸಿ ಗಿರಿಯ ಗಂ- ಭೀರ ರವದಿ ಮುಂದೆ ಸಾರಿದ ಸುರಮೋದ- ಕಾರಿ ಸಂಸ್ಕøತಿ ಭಯವಾರಣನು 1 ಅಮರದೈತ್ಯರ ಭುಜ ಭ್ರಮಣೆಗೆ ನಿಲ್ಲದ ಕ್ಷಮೆಯಧರನ ಕಂಡು ಸುಮನಸ ಗಣಕಾಗಿ ಕಮಠಾವತಾರದಿಂದಮಿತಭಾರವ ಲಕ್ಷ್ಮೀ ರಮಣ ಬೆಂಬನಿಂದಲಾಕ್ರಮಿಸಿದ್ದನೂ ಕ್ಷಮೆಯಿಂತು ತೋರಿ ಸಂಭ್ರಮದಿಂದ ಸುರಕಲ್ಪ- ದ್ರುಮಕಂಠರತ್ನ ಚಂದ್ರಮ ಮುಖ್ಯರುದಿಸಲು ರಮೆಯೊಂದು ರೂಪದಿ ನಮಿಸುತ್ತ ಬರೆ ತನ್ನ ರಮಣೀಯ ಮದುವಿಯಾ ಕ್ರಮವ ತೋರಿ 2 ಇಂತು ವಿವಾಹದನಂತರದಲಿ ಶ್ರೀ- ಕಾಂತನು ದೇವರ್ಕಳಂತವರಿತು ನಿ- ಬೋಧ ಚಿನ್ಮಯನು ನಿರ್ಭಯದಿ ಧ- ನ್ವಂತರಿಯಾದುದನೆಂತೆಂಬೆನು ಕಂತುಕೋಟಿಯ ಗೆಲುವಂತೆ ಸಕಲ ಸುಜ ನಾಂತರ್ಬಹಿರ್ಗತ ಸಂತಾಪಗಳ ಬಲ- ವಂತದಿಂದಲಿ ಕಳವಂಥ ಮೂರುತಿಯಾಗಿ ನಿಖಿಳ ವೇದಾಂತೇಶನು 3 ಕುಂಡಲ ಹಾರ ವನರುಹಾಂಬಕ ವಲ್ಲುಹಾಸ ಕೌಸ್ತುಭಧರ ಕರಿ ಕರೋರುತರ ಕ್ಷಣಿತ ಕಿಂಕಿಣಿ ಕಾಂಚೀವರ ಮಂಜೀರಾ ಸುನಸ ಸುಂದರದಂತ ಶುಭನೀಲಕೇಶಾಂತ ವನಜ ಸಂಭವನೀಗರುಹುತಾಯುರ್ವೇದಾಂತ ನೆನೆಸುವವರಪಮೃತ್ಯುಹಾರಿ ರೂಪವ ತೋರಿ ವಿನಯದಿ ವಿಬುಧಾರ ಸೇರಿದನು 4 ಪಾತಕ ಸಂಘಾಧಾರದಿಂದ್ಯಮಪರಿ ವಾರವೆಂದೆನಿಪತ್ತಿ ಸಾರವ ಸ್ಮಾರಕ್ಷಯೋರಗಜ್ವರಕಫ ಗೂರು ಪ್ರಮೇಹಾದಿ ವಾರಕ ವರಸುಖ ಕಾರಕನು ಥೋರ ಕರದಿ ಸುಧಾಪೂರಿತ ಕಲಶವ ತೋರಿ ದಾನವ ಮೋಹಕಾರಿ ನಾರಾಯಣಿ ಸ್ತ್ರೀ ರೂಪದಿಂದ ದೈತ್ಯಾರಿಗಳಿಗೆ ಕೊಟ್ಟ ಧೀರ ವೆಂಕಟ ಶಿಖರಾರೂಢನು 5
--------------
ತುಪಾಕಿ ವೆಂಕಟರಮಣಾಚಾರ್ಯ
(ಧರ್ಮಸ್ಥಳ ಮಂಜುನಾಥನನ್ನು ನೆನೆದು) ಯಾಕೆನ್ನ ಮೇಲೆ ನಿರ್ದಯ ಶ್ರೀಮಂಜುನಾಥ ಲೋಕೇಶ ಮಾಡು ನಿರ್ಭಯ ಪ. ಪಾಕಹಪ್ರಮುಖದಿವೌಕಸಮುನಿಜನಾ- ನೀಕವಂದಿತಪದಕೋಕನದ ಕೋವಿದ ಅ.ಪ. ಪಾಪಾತ್ಮಪಾಪಸಂಭವ ನಾನೆಂಬುವದಕಾ- ಕ್ಷೇಪವೇನಿಲ್ಲೋ ಮಾಧವ ಶ್ರೀಪರಮೇಶ್ವರ ಕೋಪಕಲುಷಹರ ತಾಪತ್ರಯಶಮನಾಪದ್ಭಾಂಧವ ಗೋಪತುರಂಗ ಮಹಾಪುರುಷ ಗಿರೀಶ 1 ಸೋಮಸುರ್ಯಾಗ್ನಿಲೋಚನ ಸದ್ಗುಣಪುಣ್ಯ- ನಾಮ ಪಾಪವಿಮೋಚನ ವ್ಯೋಮಕೇಶಾಚ್ಯುತಪ್ರೇಮ ಮಹಾಮಹಿಮ ಕಾಮಾರಿ ನಿನ್ನ ನಾ ಮರೆಹೊಕ್ಕೆನು ಹೇ ವiಹಾದೇವ ಸೋಮಚೂಡಾಮಣಿ 2 ಧರ್ಮಮಾರ್ಗನಿಯಾಮಕ ಸತ್ಯಾತ್ಮ ಪರ- ಬ್ರಹ್ಮ ಸುಜ್ಞಾನದಾಯಕ ನಿತ್ಯ ಸತ್ಕರ್ಮಪ್ರೇರಕ ಗಜ- ಚರ್ಮಾಂಬರಧರ ದುರ್ಮತಿಪ್ರಹರ ಭರ್ಮಗರ್ಭಜ ಭವಾರ್ಣವತಾರಕ 3 ಕಪ್ಪ ಕಾಣಿಕೆಗಳನು ತರಿಸುವರ- ಣ್ಣಪ್ಪದೈವವೆ ದೂತನು ತಪ್ಪದೆ ಚಂದಯ ಹೆಗ್ಗಡೆಯರ ಮನದೊ ಳಿಪ್ಪ ದಧಿಮಥನ ತುಪ್ಪದಂತೆಸೆವ ಕರ್ಪೂರಗೌರ ಸರ್ಪವಿಭೂಷಣ 4 ಪೊಡವಿಗಧಿಕವಾಗಿಹ ಕುಡುಮಪುರ- ಕ್ಕೊಡೆಯ ಭಕ್ತಭಯಾಪಹ ಕಡಲಶಯನ ಲಕ್ಷ್ಮೀನಾರಾಯಣಗತಿ- ಬಿಡೆಯದವನು ನಿನ್ನಡಿಗೆರಗುವೆ ವರ ಮೃಡಶಂಕರ ಕೊಡು ಕೊಡು ಮನದಷ್ಟವ 5
--------------
ತುಪಾಕಿ ವೆಂಕಟರಮಣಾಚಾರ್ಯ
(ನವಗ್ರಹ ಸ್ತೋತ್ರ) ಸತ್ಕಟಾಕ್ಷವಿರಿಸು ದಕ್ಷನಖವಜ್ರಿರಿಪುಪಕ್ಷದಹಿಸು ವಿರೂಪಾಕ್ಷ ಶರಣು ಪಕ್ಷವೃತ್ವಯನ ಸಂವತ್ಸರಾಖ್ಯ ದಯಮಾಡು ಶರಣೆಂದು ನಮಿಪೆ ನಿನ್ನ 1 ತೇಜೊರಾಶಿಯಾಗಿ ಮೆರೆವ ಕಮಲ ಘೂಕ ತಸ್ಕರರ ಗಣವ ನಾದಿಪತಿ ಗ್ರಹರಾಜ ನಿನ್ನ ಪದವ ವ್ಯಾಧಿಗಳ ಪರಿಹರಿಸು ಪಾವನಾತ್ಮ ಸಲಹೆನ್ನ ನಿರ್ಮಲಾತ್ಮ2 ನೀರುಮರಬಳ್ಳಿಸಕಲೌಷಧಿಗಳ ತಾರೆಗೊಲಿದಾಕೆಯಲಿ ಬುಧನಪಡದೇ ರಾಶಿ ಸಂಚಾರ ಮಾಳ್ಪೆ ಮೋಹದ ಬಲೆಯ ನೀರಜಾಕ್ಷ ಸಮನೋಜ ಮಾದೇವಿಸಹಜ 3 ಗುರುಮಿತ್ರ ಸಜ್ಜನತ್ರ ವ್ಯಾಮೋಹಗೊಳಿಸದಿರು ದಂಡಪಾಣಿ ರಾಜಕರುಣಾ ಪಾತ್ರನೆ ಕಾಮಚಾರಜ ಬಹುವಿಧಾಮಯವ ಪರಿಹರಿಸಿ ನೀ ಮನೋಹರ್ಷ ಪಾಲಿಸು ಧೀರನೆ ಕಮನೀಯ ಕಾಂತಿ ಕುಹಕಜನವಾರಿ4 ಪದುಮಗಳಿಗೆರಗುವೆನು ಪಾಲಿಸೆಂದು ಮಧು ವಿರೋಧಿಯ ಮನೋಭವನಣುಗ ಮಾತಿನಲಿ ಚದುರತೆಯನಿತ್ತು ಚಾತುರ್ಯಗೊಳಿಸು ಸದಯಾವಲೋಕ ನೀನೆಂದು ತಿಳಿದೆ ಮಾತ್ಸರ್ಯವೆಲ್ಲಬಿಡಿಸು ಪಾದ ಸ್ವರ್ಣವರ್ಣ ಸುಲಲಿತಾಂಗ 5 ಮಂತ್ರಜ್ಞ ಚೂಡಾಮಣಿ ಸದುಪಾಯಗಳ ತಿಳಿಸಿ ಸುರರ ಕಾವ ಉದಿತನಾಗಿರೆ ಸಕಲ ಬುಧರಿಗನುಕೂಲ ನಿತ್ಯದಲಿ ನಿಖಿಳ ಗ್ರಹೋನ್ನತ ಶಕ್ತಿಯೇ ಸಕಲಾರ್ಥ ಪಡದೀವನೆ ನಿನ್ನ ನಮಿಸುವೆನು ನೀನೊಲಿದು ಸಲಹೊ6 ಭಾರ್ಗವನೆ ಭಜಿಪೆ ನಿನ್ನ ತಪ್ಪು ಮರತು ಮುಖ್ಯವೆಂಬರ್ಥವರಿತು ಸೇವೆಗನುಕೂಲನಾಗಿರುವೆ ಕುರಿತು ಕಾಪಾಡು ಕರುಣ ವಹಿಸು7 ಮುನಿಸದಿರು ನಮ್ಮಮೇಲೆಂದೆಂದಿಗು ನಿನ್ನ ಘನವ ತ್ಯಜಿಸು ಭಂಗ ಶಕ್ತರಹರೆ ಪೇಳು ಮನ್ನಿಸುವ ಮಮತೆ ತಾಳು ಕನಸಿಲಾದರು ಕ್ರೋಧವಿಡದೆ ಕಾಪುವುದೆಂದು ನಿರುತದಿಂ ಕೈ ಮುಗಿದು ಬೇಡಿಕೊಳುವೆ 8 ವೀರ್ಯ ವಹಿಸಿದ ರಾಹು ಕೇತುಗಳನು ಶೌರ್ಯಾದಿಗಳ ದಯ ಮಾಡಿರಿ ಧಾರವೆಂದಿತ್ತಹರ್ಯಜ್ಞೆಯಿಂದ ನಾರ್ಯತನವೇನಿವರೊಳಿದ್ದರರಿತು ಮಂಗಳವಿತ್ತು ಸೌಖ್ಯ ಪಾಲಿಸಲಿ9
--------------
ತುಪಾಕಿ ವೆಂಕಟರಮಣಾಚಾರ್ಯ
(ನಾರದ ಪ್ರಾರ್ಥನೆ) ನಾರದ ಮುನಿಯ ನಂಬಿರೋ ಸಜ್ಜನರೆಲ್ಲ ಪ. ನಾರದ ಮುನಿಯ ನಂಬಿ ಸೇರಿ ರಮೇಶನ ಘೋರದುರಿತ ಪರಿಹಾರಗೊಳಿಸುವಂಥ ಅ.ಪ. ಫಾಲದಿ ತಿಲಕ ನಾಮವು ಕಂಠದ ಮೇಲೆ ಜೋಲುವ ತುಳಸಿ ಮಾಲೆಯು ತಾಳ ವೀಣೆಗಳಿಂದ ಕಾಲಾನುಗುಣಸ್ವರ ಮಾಲೆ ತೋರುತ ಲಕ್ಷ್ಮೀಲೋಲನ ವಲಿಸಿದ 1 ವೇದೋಪನಿಷತ್ತುಗಳಗಾಂಧರ್ವ ವಿದ್ಯ ಹಾದಿಲಿ ತರಲು ಬಲ್ಲ ಬೋಧಿಪ ಪರತತ್ವ ವಾದವ ಸುರಕಾರ್ಯ ಸಾಧಿಸಿ ಹರಿಯ ಪ್ರಸಾದಕೆ ಪಾತ್ರನಾದ 2 ಪ್ರಲ್ಹಾದ ಧ್ರುವ ದ್ರೌಪದಿ ಮುಖ್ಯ ವೈಷ್ಣವ ರೆಲ್ಲರೀತನ ದಯದಿ ಎಲ್ಲ ಠಾವಲಿ ಲಕ್ಷ್ಮೀವಲ್ಲಭನಿಹನೆಂಬ ಸೊಲ್ಲ ತಿಳಿದು ಪರಮೋಲ್ಲಾಸ ಪಡೆದರು 3 ದೇವಾಸುರರ ಬಳಿಗೆ ಪೋಗುವ ತನ್ನ ಭಾವಾ ತೋರನು ಕಡೆಗೆ ಆವಾವ ಜನಕನುವೀವ ಮಾತುಗಳಾಡಿ ಪಾವನಾತ್ಮಕ ಹರಿ ಸೇವಾಫಲವ ಕೊಂಬ 4 ಬಂದನು ಕಲಿಯುಗದಿ ದಾಸರೊಳು ಪುರಂದರ ನಾಮದಲೀ ಮಂದಮತಿಯ ಕಳೆವಂದದಿ ಪ್ರಾಕೃತ ದಿಂದ ವೆಂಕಟಪತಿಯಂದವ ತಿಳಿಸಿದ 5
--------------
ತುಪಾಕಿ ವೆಂಕಟರಮಣಾಚಾರ್ಯ
(ನಾವೂರ ಅಗ್ರಹಾರದ ಕಟ್ಟೆ ಮುಖ್ಯಪ್ರಾಣ) ಕರವ ಪಿಡಿಯೋ ಜಾಣ ಘಟ್ಯಾಗಿರಲಿ ಕರುಣಾ ದುಷ್ಟ ಭಾವನೆಯನ್ನು ದೂರವೋಡಿಸಿ ಮನೋ- ಭೀಷ್ಟವ ದಯಮಾಡು ದುರಿತಾಬ್ಧಿ ಕಾರಣ ಪ. ಕೋಳಾಲ ಜನರಮೇಲ್ಕರುಣಾ ಕಟಾಕ್ಷಧಿ ಕೋಳಾಲ ಕರಯುಗದಿ ಪಿಡಿದು ಬಂದು ನೀಲ ಮೇಘನ ತೆರದಿ ಶೋಭಿಸುತಾಗ್ರ- ಮಾಲೆಯ ಶಿಖರದಲಿ ರಾಜಿಸುವ ಕೃಷ್ಣನ ಲೀಲೆಗಳಿಗನುಕೂಲನಾಗಿ ಸುಲೋಲ ನೇತ್ರಾವತಿ ಸರಿದ್ವರ ಕ- ಪಿಲದೊಳು ಪುಟ್ಟಾಲಯದೊಳನುಗಾಲ ನಿಂತ ಕೃಪಾಲವಾಲಾ 1 ಪ್ರಾಚೀನ ಯುಗದಿ ಮಾರೀಚ ವೈರಿಯ ಸೇರಿ ನೀಚ ರಕ್ಕಸರ ಗೆದ್ದೆ ದ್ವಾಪರದಲ್ಲಿ ಕೀಚಕ ಕುಲವ ಗೆದ್ದೆ ಕ್ಷಮೆಯೊಳು ತಿದ್ದೆ ಸೂಚಿಸಿದ ದೇವೋತ್ತಮರ ಬಲು ಸೂಚನೆಯ ಕೈಗೊಂಡು ಕಲಿಮಲ ಮೋಚನೆಯಗೊಳಿಸಿಲ್ಲಿ ನಿಂದು ನಿ- ರೋಚನಾತ್ಮಜ ವರದನೊಲಿಸುವ 2 ಕಾಯ ವಾಕ್ಕøತಾನಂತಾ ಪರಧಾಮ- ನೇನೊಂದನೆಣಿಸದಿರು ಕೃಪಾಪಾತ್ರ ನಾನೆಂದು ನೆನೆಸುತಿರು ಅಭಿಮಾನ ತೋರು ಪಾದ ಪಂಕಜ ಮಾನಿ ಕರುಣಿಸಹೀಂದ್ರ ಗಿರಿವರ ಶ್ರೀನಿವಾಸನ ಮುಖ್ಯಮಂತ್ರಿಯ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಬಂಟ್ವಾಳದ ವೆಂಕಟೇಶ ದೇವರನ್ನು ನೆನೆದು) ವಂದಿಸುವೆನು ಶ್ರೀನಿವಾಸ ಶ್ರೀ ವೆಂಕಟೇಶ ವಂದಾರುನಿಚಯಮಂದಾರ ಸದಾ- ಪ. ನಂದೈಕನಿಧಿವಿಲಾಸ ಚಂದ್ರಾದಿತ್ಯಸಹಸ್ರಪ್ರಕಾಶ ಹೊಂದಿದೆ ನಿನ್ನ ಪರೇಶ ಶ್ರೀ ವೆಂಕಟೇಶ 1 ಶಾಂತಾತ್ಮನಿಯಮ ಸಂತಾಪಪ್ರಶಮ ಸಂತಜನಮನೋಲ್ಲಾಸ ಭ್ರಾಂತಿಜ್ಞಾನವಿತಾನವಿನಾಶ ಚಿಂತನೀಯ ನಿರ್ವಿಶೇಷ ಶ್ರೀ ವೆಂಕಟೇಶ 2 ಶ್ರೀಧರಾಚ್ಯುತ ಸುಮೇಧನಾಮಕ ಪ- ಯೋಧಿಶಯನ ಪರಮೇಶ ನಿತ್ಯ ನಿರ್ದೋಷ ಸಾಧು ಕೌಸ್ತುಭಮಣಿಭೂಷ ಶ್ರೀ ವೆಂಕಟೇಶ3 ನೀರಜನಾಭ ನೀಲಾಭ್ರದಾಭ ಶ್ರೀರಾಮ ತ್ರಿದಶಗಣಪೋಷ ಪ್ರಾರಬ್ಧಕರ್ಮ ಬೋಧೋದ್ಭಾಸಾ- ಪಾರಮಹಿಮ ಜಗದೀಶ ಶ್ರೀ ವೆಂಕಟೇಶ 4 ನೇತ್ರಾವತಿ ಸುಪವಿತ್ರಚಿತ್ರಸು- ಕ್ಷೇತ್ರ ವಟಪುರನಿವಾಸ ಕರ್ತ ಲಕ್ಷ್ಮೀನಾರಾಯಣನೀತ ಪಾರ್ಥಸಾರಥಿ ಪೃಥಗೀಶ ಶ್ರೀ ವೆಂಕಟೇಶ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಬಪ್ಪನಾಡಿನ ಪಂಚದುರ್ಗೆ) ಮಂಗಲಂ ಶ್ರೀಪಂಚದುರ್ಗೆಗೆ ಜಯ ಮಂಗಲಾರತಿಯೆತ್ತಿ ಶ್ರೀಮಹೇಶ್ವರಿಗೆಪ. ಶಂಕರನಂಕಾಲಂಕಾರಿಗೆ ಕುಂಕುಮಬೊಟ್ಟಕಸ್ತೂರಿ ಲಲಾಟೆಗೆ ಪಂಕಜಗಂಧಿ ಶ್ರೀಪಾರ್ವತಿಗೆ1 ಕೋಕಿಲಗಾನೆಗೆ ಕೋಕಪಯೋಜೆಗೆ ಶ್ರೀಕಂಠನರ್ಧಾಂಗಿ ಶ್ರೀಗೌರಿಗೆ ಏಕದಂತನ ಜನನಿಗೆ ಜಗದಂಬೆಗೆ ಲೋಕನಾಯಕಿ ಶ್ರೀಮಹಾಕಾಳಿಗೆ2 ಕಂಜದಳಾಕ್ಷಿಗೆ ಕಲಧೌತಗಾತ್ರೆಗೆ ಕುಂಜರಗಮನೆ ಕಂಧರಜಾತೆಗೆ ಮಂಜೀರನೂಪುರರಣಿತಪದಾಬ್ಜೆಗೆ ನಂಜುಂಡನ ಮನಮಂಜುಳೆಗೆ3 ಅಂಗಜರೂಪೆಗೆ ಮಂಗಲದಾತೆಗೆ ಭೃಂಗಕುಂತಳೆ ಸರ್ವಮಂಗಲೆಗೆ ಬಂಗಾರಮಕುಟೋತ್ತಮಾಂಗದಿ ಧರಿಸಿದ ಸಂಗೀತಲೋಲೆಗೆ ಶರ್ವಾಣಿಗೆ4 ರೂಢಿಗಧಿಕ ಬಪ್ಪನಾಡಿಗೊಡತಿಯಾಗಿ ಮೂಡಿತೋರಿದ ಶ್ರೀಮುಕಾಂಬಿಕೆಗೆ ಕ್ರೋಡಾವತಾರ ಲಕ್ಷ್ಮೀನಾರಾಯಣ ಸೊಸೆ ಬೇಡಿದಿಷ್ಟವನೀವ ಸರ್ವೇಶೆಗೆ5
--------------
ತುಪಾಕಿ ವೆಂಕಟರಮಣಾಚಾರ್ಯ
(ಬ್ರಹ್ಮಣ್ಯತೀರ್ಥರು) ಬ್ರಹ್ಮಣ್ಯತೀರ್ಥರ ಚರಣಾಬ್ಜಯುಗ್ಮವ ಸಂಭ್ರಮದಲಿ ಸೇವಿಪೆ ಪ ಅಂಬುಜಬಂಧು ಸನ್ನಿಭಸಾಧುವೆನುತ ಶ್ರೀ ಕುಂಭಿಣಿ ಮುನಿವರ್ಯರಾ ಆರ್ಯರಾ ಅ.ಪ. ತಿದ್ದಿದ ಶ್ರೀಪುಂಡ್ರ ಮುದ್ರೆಗಳಿಂದಲಿ ಸಂ- ಶುದ್ಧಿ ಮಂಗಳಗಾತ್ರರ ರುದ್ರಗಳೊಲಿದು ಸದ್ವಿದ್ಯೆಗಳನಿತ್ತು ಉದ್ಧಾರ ಮಾಡಲೆಂದೂ ನಾ ಬಂದೂ 1 ಶಿಷ್ಯರುಗಳು ತಂದ ಭಿಕ್ಷಾನ್ನಂಗಳನಂದು ಆಕ್ಷಣ ಮಂತ್ರದಿಂದ ತÀಕ್ಷಣ ಕಲ್ಪಸಿದಂತೆ ಗೈದಾ ಧೀರ ರÀಕ್ಷಿಸೆಂದೆರಗುವೆ ನಾ ಬೇಡುವೆ 2 ಕಾಂತೆಯೋರ್ವಳು ತನ್ನ ಕಾಂತ ಸ್ವರ್ಗವನೈದೆ ಚಿಂತಿಸುತತಿ ಶೋಕದಿ ಕಾಂತೆ ವಂದಿಸಲು ಸೌಮಾಂಗಲ್ಯವರವನಿತ್ತು ಕಾಂತನ ರಕ್ಷಿಸಿದ ಕೋವಿದರಾದ 3 ಕುಂದದೆ ಸನ್ಮುನಿವೃಂದದೊಡನೆ ಬಹು ವೃಂದಾವನದಿ ಶೋಭಿಪ ಇಂದಿರೆಯರಸ ನರಸಿಂಹವಿಠ್ಠಲನ ಸನ್ನಿಧಿವರ ಪಾತ್ರರಾ ಪೂತಾತ್ಮರಾ 4
--------------
ನರಸಿಂಹವಿಠಲರು
(ಭಕ್ತಿ ಎಂಬ ಸ್ತ್ರೀಯ ವರ್ಣನೆ) ಸೇರಿರೊ ನವ ನಾರಿಕುಂಜರನನ್ನು ಧೀರಲಕ್ಷ್ಮೀವರನು ಮಂಟಪವೇರಿ ಮುಂದಕೆ ಬರುವನು ಪ. ಶ್ರವಣ ಕೀರ್ತನ ಸ್ಮರಣ ಸೇವನ ಪೂಜ ಪ್ರ- ಣವ ದಾಸ್ಯ ಸಖತ್ವ ಸರ್ವವ ವಹಿಪ ನವವಿಧ ಭಕುತಿಯ1 ದೂರ ನಿಂತರೆ ತೋರದು ಸರಿಯಾಗಿ ಸಾರಗೈಯಲು ಸಾಧನೆಗಳಿಂದಾರು ಮೂರಾಗಿರುವುದು 2 ಜೋಲುವಾ ಸೊಂಡಿಲೆಂಬುದೆ ಸುಜ್ಞಾನ ಕಾಲುಗಳೆ ಪುರುಷಾರ್ಥವೆನಿಪವು ಬಾಲ ಸದ್ಗುಣಭಾವವು 3 ಭಕ್ತಿ ಭುಕ್ತಿಗಳೆರಡು ನೇತ್ರಗಳು ವಿ- ರಕ್ತಿಯುದರವು ವಿಷ್ಣು ಗಾಥಾಸಕ್ತಿ ಸಕಲೇಂದ್ರಿಯಗಳು 4 ನಿತ್ಯ ನಿರ್ಮಲ ಚರಿತ ಲಕ್ಷ್ಮೀಶನ ಭೃತ್ಯಪಾದ ರಜಸ್ಸಮೂಹವನೆತ್ತಿ ನಾಲ್ದೆಸೆ ಸುರಿವದು 5 ಹತ್ತಿರೆಂದಿಗು ಸೇರಲೀಯದು ದು- ದುರಿತ ಕೂಪದಿ ಒತ್ತಿ ಕೆಡುಹುವ ವಹಿಲವು 6 ಛಲಕೆ ಮೆಚ್ಚುತ ನಲಿವುದು ಮನದಲಿ ಚೆಲುವ ಶೇಷಗಿರೀಂದ್ರನಾಥನ ವಲಿಸಿ ಕೊಂಡಿಲ್ಲಿಳಿವುದು 7
--------------
ತುಪಾಕಿ ವೆಂಕಟರಮಣಾಚಾರ್ಯ
(ಭಗವದ್ಭಕ್ತ ಸಂಮೋಹ ಪ್ರಾರ್ಥನೆ) ಗಜಮುಖನ ಪ್ರಪಿತಾಮಹನಹಿಮನ ಗಜೆಯರಸನ ಪಿತನ ಪೆತ್ತನ ಸಾರಥಿ ಪಾದ ಪಂಕಜವ ಭಜಿಸಿ ಭಾರತಿವರನ ನಮಿಸುವೆ ಅಜಭವಾದಿ ಗುರೂತ್ತಮರ ನಿಜ ವೃಜಿನಪಂಕ ನಿವೃತ್ತಿಗೊಳಿಸುವದೆಂದು ವಂದಿಸುವೆ 1 ಅವ್ಯವಹಿತಾಸದೃಶ ಭಕ್ತಿಯ ಸವ್ಯಸಾಚಿ ಸಹಾಯ ಸಲಿಸಾ ದಿವ್ಯ ಪದವಿಯ ಪಡೆವೆನೆಂದುಗತವ್ಯಳೀಕದಲಿ ಕಾವ್ಯ ವ್ಯಾಕರಣಗಳಿಂದ ವಹಿಸಿದ ಸೇವ್ಯ ಗುರು ಲಾ- ತವ್ಯ ಮುನಿವರರಂಘ್ರಿಕಮಲವ ನುತಿಸಿ ನಮಿಸುವೆನು 2 ಪುಂಡರೀಕ ದಲಾಯತಾಕ್ಷನೆ ಹಿಂಡು ದೈವದ ಗಂಡನೆಂದತಿ ಚಂಡ ಮೈಗಳ ಖಂಡಿಸಿದ ಯತಿಮಂಡಲೇಶ್ವರನ ಪಾಂಡ್ಯದೇಶದೊಳವತರಿಸಿದಾ ಖಂಡಲಾತ್ಮನ ನಮಿಪೆ ಮಮ ಹೃ- ನ್ಮಂಡಲದಿ ಪಾಲಿಸು ಸುಧಾರಸವುಂಡು ನಲಿವಂತೆ 3 ಮೋದತೀರ್ಥ ಮಹಾಬ್ಧಿಯನು ಕಡೆ- ದಾದಿಯಲಿ ನ್ಯಾಯಾಮೃತವ ತೆಗೆ- ದಾದರದಿ ಸಜ್ಜನರಿಗುಣಿಸಿದ ಗಾಢಮತಿಯುತನ ಮಾಧವನ ಗುಣತರ್ಕ ತಾಂಡವ ವೋದಿಸುತ ಚಂದ್ರಿಕೆಯ ತೋರಿದ ಬೋಧಕರ ಪ್ರಲ್ಹಾದಮುನಿ ಕರುಣದಲಿ ಸಲಹೆನ್ನ 4 ಮಂಗಳಾಂಬುತರಂಗ ತುಂಗಾ ಸಂಗಿ ಮಂತ್ರಾಲಯದಿ ನಿಂದು ಕು ರಂಗ ವೈರಿಯ ಪೂರ್ವ ಕರುಣಾಲಿಂಗನೋತ್ಸುಕನ ಪಂಗು ಬಧಿರಾದ್ಯಂಗ ಹೀನರ ಪಾಂಗ ನೋಟದಿ ಪಾಲಿಸುವ ಯತಿ ಪುಂಗವಾರ್ಜಿತ ರಾಘವೇಂದ್ರರ ನಮಿಪೆನನವರತ 5 ಜೋಲಿಸುವ ಕಂಠದಲಿ ತುಳಸೀ ಮಾಲೆಯನು ಕರಯುಗದಿ ವೀಣಾ ತಾಳಗಳ ಬಾರಿಸುತ ಸರ್ವತ್ರದಲಿ ಸಂಚರಿಸಿ ಶ್ರೀಲಲಾಮನ ಲೀಲೆಗಳಿಗನು- ಕೂಲರಾದ ಸುರರ್ಷಿ ನಾರದ ರಾಲಯಸಿ ತಪ್ಪುಗಳ ತಿದ್ದುವುದೆಂದು ನಮಿಸುವೆನು 6 ಸತ್ಯಭಾಮಾಕಾಂತನಿದಿರಲಿ ನಿತ್ಯ ನಡೆಸುವನೆಂಬ ಸೇವೆಗೆ ಒತ್ತಿಬಹ ವಿಘ್ನಗಳ ದೂರದಿ ಕಿತ್ತು ಬಿಸುಟುವರ ಹತ್ತು ದೆಶೆಯಲಿ ನಿಂತು ರಕ್ಷಿಪ ಕೃತ್ತಿವಾಸ ಸುರೇಶಮುಖ ದೇ- ವೋತ್ತುಮರ ನಾ ನಮಿಪೆ ತತ್ವದ ಭೃತ್ಯನಹುದೆಂದು 7 ಪಾವಮಾನ ಮತೀಯ ವೈಷ್ಣವ- ರಾವಳಿಗೆ ಶರಣೆಂಬೆ ನಿಮ್ಮ ಕೃ- ಪಾವಲಂಬನವಿತ್ತು ಕರುಣವ ಶುದ್ಧಿಕರಿಸುತಲಿ ದೇವ ದೇವವರೇಣ್ಯ ಭಕ್ತರ ಕಾವ ಶೇಷಗಿರೀಂದ್ರನಾಥನ ಸೇವಿಸುವ ಸುಖವಿತ್ತು ಸುಲಭದಿ ಸಲುಹಬೇಕೆಂದು 8
--------------
ತುಪಾಕಿ ವೆಂಕಟರಮಣಾಚಾರ್ಯ
(ಭೀಮಸೇನ ಪ್ರಾರ್ಥನೆ) ಭೀಮಸೇನ ಸಕಲಸತ್ವಧಾಮ ರಕ್ಷಿಸೆನ್ನ ಬೇಗ ಸಾಮಗಾನ ಲೋಲ ಕೃಷ್ಣ ಪ್ರೇಮರಸಕೆ ಪಾತ್ರನಾದ ಪ. ಮಂಗಲಾಚರಿತ್ರ ನಿನ್ನ ಅಂಗಸಂಗದಿಂದ ಬಹು ತುಂಗ ಗಿರಿಯು ಒಡೆದು ಶತಶೃಂಗವೆನಿಸಿತು ಅಂಗುಲಿ ಪ್ರಹಾರದಿಂದ ಶಿಂಗತತಿಗಳನ್ನು ಬಹಳ ಭಂಗಬಡಿಸಿ ಬಾಲಲೀಲ ರಂಗದಲ್ಲಿ ಬಲುಹ ತೋರ್ಪ 1 ಹಸಿದ ವೇಳೆಯಲ್ಲಿ ಮೆದ್ದ ವಿಷದ ಭಕ್ಷ್ಯ ಜೀರ್ಣಗೊಳಿಸಿ ಉಶನ ಮಂತ್ರದಿಂದ ಹಲ್ಲ ಮಸೆಯುತಾ ಬಂದ ಅಸುರ ವೇಶದಷ್ಟಾಕ್ಷಿಗಳ ಮಶಕದಂತೆ ಬಡಿದು ಕೆಡಹಿ ಕುಶಲದಿಂದ ನಿದ್ರೆಗೈದ ಅಸಮಶಕ್ತಿ ಪೂರ್ಣಮೂರ್ತಿ 2 ನಗಗಳ ಮೇಲೇರುತ್ತ ಹಣ್ಣುಗಳನೊಂದೊಂದಾಗಿ ಕರದಿ ತೆಗೆದು ತಿಂಬ ಕೌರವರನು ನಗುತ ನೋಡುತಾ ನೆಗೆದು ಬೀಳ್ವ ತೆರದಿ ತರುಮೂಲಗಳಾ ತುಳಿದು ಕೆಡಹಿ ದೇವಾ- ಕೊಂಡ 3 ಗೂಗೆಯಂತೆ ನಿನ್ನ ಬಳಿಗೆ ಸಾಗಿ ಬಂದು ಶಕುನಿಮುಖರು ಯೋಗನಿದ್ರೆ ತಿಳಿಯದೆ ಚೆನ್ನಾಗಿ ಬಂಧಿಸಿ ಭಾಗೀರಥಿಯ ಜಲದಿ ದೂಡೆ ವೇಗದಿ ಪಾತಾಳವೈದಿ ನಾಗಕನ್ಯೆರಿತ್ತ ರಸವ ಬೇಗ ಸವಿದು ತಿರುಗಿ ಬಂದ 4 ದುರುಳರಿಂದ ರಚಿತವಾದ ಅರಗಿನ ಮನೆಗೆ ಹೋಗಿ ಕಾಲ ನಿರುತಕಿನಿಸಿಲಿ ಇರುಳಿನಲ್ಲಿ ತಾನೆ ಅಗ್ನಿ ಇರಿಸಿ ಬೇಗಲೆದ್ದು ಸಹೋ ದರರನೆತ್ತಿ ಬಹು ಯೋಜನಕೆ ಸರಿದು ಪೋದ ಶಕ್ತರರಸ 5 ಡೊಂಬಿಮಾಳ್ಪನೆಂದು ಬಹಳ ಡಂಬರದಿಂದಿದಿರಾ ಹಿ- ಕದಂಬ ವೈರಿಯ ಅಂಬರದೊಳಗೈದಿ ವಜ್ರಕಂಬದಂತೆ ಹೊಳವ ಬಹು ಸ್ತಂಭದಿಂದ ಕೆಡಹುತ ಹೈಡಿಂಬನೆಂಬ ಮಗುವ ಪಡೆದ 6 ನಗರ ದೊಳ್ವೈದಿಕರಂತೆ ವಾಸವಾಗಿ ಪೋಕ ಬಕನ ಬಾಧೆಯಿಂದ ಶೋಕಗೊಳುವರ ಸಾಕುವೆನೆಂದೆದ್ದು ನಾನಾ ಶಾಖ ಭಕ್ಷಾನ್ನಗಳ ತಾನೆ ಸ್ವೀಕರಗೊಂಡಸುರನನ್ನು ಸೋಕಿ ಸೀಳಿ ಬಿಸುಟ ದೊರೆಯೆ 7 ವಿಪ್ರ ವೇಷದಿಂದ ದ್ರುಪದಸುತೆಯನೊಲಿಸಿ ಕೃದ್ಧ ನೃಪರ ಗೆದ್ದು ರುಕ್ಮಿಣೀಶ ಕೃಪೆಯಾ ಬಲಕೊಂಡು ಅಪರಿಗಣ್ಯ ಪೌರುಷಕಿಂನುಪಮೆಯಿಲ್ಲವೆಂದು ಸರ್ವ ಖಪತಿವರರು ಪೊಗಳುತಿರಲು ತ್ರಿಪುರವೈರಿಯಂತೆ ಮೆರೆದ 8 ಅಂಧ ನೃಪನ ಮಾತ ಕೇಳಿ ಇಂದ್ರಪ್ರಸ್ಥ ಪುರಕೆ ರಾಜ ನೆಂದು ನಿಂದು ಮಗಧಾದಿಗಳ ನೊಂದೆ ನಿಮಿಷದಿ ಕೊಂದು ರಾಜಸೂಯಮೇಧದಿಂದ ಸಕಲಯಜ್ಞೇಶಗೋ- ಕೊಂಡ 9 ದ್ಯೂತ ನೆವದಿ ಸಕಲ ರಾಜ್ಯ ಸೋತು ವನಕೆ ಪೋಗಿ ಲಕ್ಷ್ಮೀ- ನಾಥ ಕರುಣ ಬಲದಿಂದ ಸುರವ್ರಾತವಡಗಿಸಿ ಭೂತನಾಥನೋರದಿ ಬಹಳ ಖ್ಯಾತ ಕೀಚಕಾದಿಗಳನು ಘಾತಿಸಿ ಗಂಧರ್ವನೆಂದಜ್ಞಾತವಾಸ ಕಳದ ಧೀರ 10 ದುರುಳ ಕೌರವರನು ಗದೆಯ ತಿರುಹಿ ಕೆಡಹಿ ಧರಣಿಭರವ ಸುರಪಸೂನು ಸಹಿತಲ್ಲಿಳುಹಿ ಪರಮ ಹರುಷದಿ ಹರಿಯ ನೇಮದಿಂದ ನಾಗಪುರವನಾಳಿ ವಿಷ್ಣುಭಕ್ತಿ ಸುಜನ ತತಿಯ ಪೊರೆದು ಪದ್ಮಜಾತನಾಹ11 ದುಷ್ಟವೈರಿ ಜನರ ಗೆದ್ದು ಅಷ್ಟ ಭಾಗ್ಯ ಸಹಿತ ದೇಹ ಪುಷ್ಟಿ ಜ್ಞಾನ ದೃಷ್ಟಿಗಳನು ಕೊಟ್ಟು ಕರುಣಿಪಾ ಸೃಷ್ಟಿಗೊಡೆಯ ಸರ್ಪರಾಜ ಬೆಟ್ಟದಲ್ಲಿ ನಿಂದು ಭಕ್ತ- ಭೀಷ್ಟವರದನೊಲಿಪ ತೆರದಿ ಸುಷ್ಠುಪ್ರೇಮವಿಟ್ಟು ಕಾಯೊ 12
--------------
ತುಪಾಕಿ ವೆಂಕಟರಮಣಾಚಾರ್ಯ
(ಮಂಗಳ ಪದ) ಸೃಷ್ಟಿ ಸ್ಥಿತಿ ಕಾರಣಕೆ ಕರ್ತನಾದ ಶ್ರೀ ವಿಷ್ಣುವಿಗೆ ಜಯ ಮಂಗಳಂ ಪ ಕಚ್ಛಪ ವರಾಹಾದಿ ಅವತಾರ ಸ್ವೇಚ್ಛೆಯಾದರಿಸಿದವಗೆ ನೆಚ್ಚಿ ನೆನೆಯುವರು ಮನದಿಸ್ಟೆಪೂರಿಸುವ ಶ್ರೀ ಅಚ್ಯುತಗೆ ಜಯ ಮಂಗಳಂ ಹರಿಗೆ 1 ಸಿರಿ ಬ್ರಹ್ಮವಾಯು ಮೊದಲಾದ ಸನಕಾದ್ಯರಿಂ ಸ್ತೋತ್ರಗೊಳ್ವಗೆ ಮಂಗಳಂ ನಾರದ ಶುಕಾದಿ ಮುನಿಗಳು ಪಠಿಸುವ ಪುರಾಣ ಪುರುಷೋತ್ತಮಗೆ ಮಂಗಳಂ ಹರಿಗೆ 2
--------------
ಹನುಮೇಶವಿಠಲ
(ಮಂಗಳೂರಿನ ಗಣೇಶನನ್ನು ನೆನೆದು) ಶ್ರೀ ಗಜವಕ್ತ್ರ ಪವಿತ್ರ ನಮೋ ಮನುಮಥಜಿತಸುತನಯ ಪ. ಬಾಗುವೆ ಶಿರ ಶರಣೌಘಶರಣ್ಯ ಸು- ರೌಘಸನ್ನುತ ಮಹಾಗುಮ ಸಾಗರ ಅ.ಪ. ಸಿದ್ಧಸಮೂಹಾರಾಧ್ಯ ಪದದ್ವಯ ಶೋಭ ಸೂರ್ಯಾಭ ಕಟಿ ವಿಗತಲೋಭ ಹೃದ್ಯಜನದುರಿತಭಿದ್ಯ ವಿನಾಯಕ ವಿದ್ಯಾದಿ ಸಕಲ ಬುದ್ಧಿಪ್ರದಾಯಕ 1 ಏಕದಂತ ಚಾಮೀಕರ ಖಚಿತ ವಿಭೂಷ ಗಣೇಶ ಪಾಕಹ ಪ್ರಮುಖ ದಿವೌಕಸಪೂಜ್ಯ ವಿಲಾಸ ಶೋಕರಹಿತ ನಿವ್ರ್ಯಾಕುಲ ಮಾನಸ ಲೇಖಕಾಗ್ರಣಿ ಪರಾಕೆನ್ನ ಬಿನ್ನಪ 2 ವರಮಂಗಲಪುರ ಶರಭಗಣೇಶ್ವರ ಧೀರ ಉದಾರ ಸುರುಚಿರ ಶುಕ್ಲಾಂಬರಧರ ವಿಘ್ನವಿದಾರ ಹರಿ ಲಕ್ಷ್ಮೀನಾರಾಯಣಶರಣರ ಗುರು ಗುಹಾಗ್ರಜ ಮನೋಹರ ಸುಚರಿತ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಮಂಗಳೂರಿನ ಪ್ರಾಣದೇವರನ್ನು ನೆನೆದು) ಪಾಲಿಸೆನ್ನ ಪಾವಮಾನಿ ಪಾವನಾತ್ಮ ಸುಜ್ಞಾನಿ ಪ. ಮೂರ್ಲೋಕದ ಸಚರಾಚರಜಾಲದಂತರಂಗ ಕರುಣಿ ಅ.ಪ. ಮೂರವತಾರವ ಗೈದು ಮುರಾರಿಯ ಪೂಜಿಸಿದೆ ಪಾರಮೇಷ್ಠಿಪದ ಪೊಂದಿದೆ ಭಾರತಿಮನೋಹರ 1 ಪಾರಗಾಣರು ನಿನ್ನ ಮಹಿಮೆ ಫಾಲನಯನಾದಿಗಳು ಕ್ರೂರಕರ್ಮಿಗಳೇನರಿವರು ಶ್ರೀರಾಮಶರಣ್ಯ 2 ಅರಿವರ್ಗಗಳತಿಕ್ರಮವ ಧಿಕ್ಕರಿಸೈ ಸುಜ್ಞಾನವಿತ್ತು 3 ಸರ್ವಾಪರಾಧಗಳನು ಸಾಧುವರದ ಕ್ಷಮಿಸು ಗರ್ವಹಂಕಾರವೀಯದೆ ಗಜವರದನ ಭಕ್ತಿಯಿತ್ತು 4 ಕರಣೀಕಾಗ್ರಣಿ ಮಂಗಲಪುರವರ ಪ್ರಾಣೇಶ ವರ ಲಕ್ಷ್ಮೀನಾರಾಯಣ ಶರಣಾಗತರೀಶ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಮಂಗಳೂರಿನ ಶ್ರೀ ವೆಂಕಟರಮಣ ದೇವರನ್ನು ನೆನೆದು) ವೈರಿ ವಿದಾರಣ ವೀರ ವೆಂಕಟಪತಿಯಾ ಪ. ಸುಜನಾರ್ತಿ ವಾರಣಾ ಮೃತ್ಯಬ್ಧಿತಾರಣ ಧೀರತನದಿ ಕಠಾರಿ ನಡುವಿಗೆ ಸೇರಿ ದಟ್ಟಿಯನುಟ್ಟು ಕೊಂಕಣ ಸ್ವಾರಿ ಬರುವನ 1 ಪಿಡಿವುತ್ತ ನಡುನಡು- ಮತ್ತಲ್ಲಿ ಮೆರೆವಾ ಸಿರಿನಲ್ಲ ದಾಸರ ಮಸ್ತಕದಿ ಕರ ಪಲ್ಲವವನಿರಿಸೆಲ್ಲರನು ತಡವಿಲ್ಲದಲೆ ಸುಖದಲ್ಲಿ ಸಲಹುವÀ 2 ಮಂಗಳಾಭಿದ ಪಟ್ಟಣಾಧೀಶಾ ಪದ್ಮಾ ಪುರುಷಾ ಶ್ರೀ ವೆಂಕಟೇಶಾ ತುಂಗವಿಧಿ ಮಾಲಿಕಾಭೂಷಾ ಅತಸೀ ಭಾಸಾ ಸ್ಮಿತಪೂರ್ಣಭಾಷಾ ಇಂಗಿತಗಳರಿತೀವ ಸೌಖ್ಯ ತರಂಗಗಳ ಸುರ ಸಾರ್ವಭೌಮ ಕು- ರಂಗ ನಯನಾಲಿಂಗಿತಾಂಗ ಮತಂಗಜಾವರಮೋಹಿರೂಪನ 3
--------------
ತುಪಾಕಿ ವೆಂಕಟರಮಣಾಚಾರ್ಯ