ಒಟ್ಟು 1158 ಕಡೆಗಳಲ್ಲಿ , 99 ದಾಸರು , 936 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಷ್ಣಾ ಎನ್ನ ಕಷ್ಟ ಹರಿಸೊ ಜಿಷ್ಣು ಸಾರಥಿಯೆ ಪ ಪಾದ ಮುಟ್ಟಿ ಭಜಿಸುವರ ಇಷ್ಟಾರ್ಥಗಳನೀವೆ ಸೃಷ್ಟಿಗೊಡೆಯ ದೇವ ಅ.ಪ ಶಿಲೆಯಾದಹಲ್ಯೆಯ ದುರಿತವ ತರಿದೆ ಸಲಿಲ ಮಡುವಿಲಿ ಮಕರದಿ ಕರಿಯ ರಕ್ಷಿಸಿದೆ ಸುಲಭದಿಂದಜಮಿಳನ ದುರಿತವ ತರಿದೆ ಕಲಿ ಸುಯೋಧನನ ಓಲಗದಿ ಗರ್ವ ಮುರಿದೆ 1 ವಿಶ್ವರೂಪನು ನೀನೆ ವಿಶ್ವವ್ಯಾಪಕನೆ ವಿಶ್ವೋದರನೆ ಕೃಷ್ಣಾ ವಿಶ್ವನಾಟಕನೆ ವಿಶ್ವಬಾಯೊಳು ತೋರ್ದ ವಿಶ್ವೋದ್ಧಾರಕನೆ ವಿಶ್ವಮಯನೆ ಸರ್ವ ವಿಶ್ವನು ನೀನೆ2 ಅಗಣಿತ ಮಹಿಮ ಆಶ್ಚರ್ಯನು ನೀನೆ ಬಗೆ ಬಗೆ ನಾಮಗಳಿಂದ ಪೂಜಿತನೆ ಖಗವರವಾಹನ ಕಂಸ ಮರ್ದನನೆ ನಿಗಮಗೋಚರ ನಿತ್ಯತೃಪ್ತನು ನೀನೆ 3 ಕನಕಗರ್ಭನ ಪಿತ ಕರುಣದಿ ಸಲಹೊ ಇನಕುಲ ತಿಲಕ ಸುಂದರ ಮೇಘಶಾಮ ದಿನಕರ ತೇಜ ಶ್ರೀ ಸನಕಾದಿ ಮುನಿನುತ ಹನುಮನಂತರ್ಯಾಮಿ ಮಮತೇಲಿ ಸಲಹೊ 4 ಕಮಲ ಸಂಭವನಯ್ಯ ಕಮಲಜಾತೆಯ ಪ್ರಿಯ ಕಮಲ ಪುಷ್ಪ ಮಾಲಾಲಂಕೃತ ಹರಿಯೆ ಕಮಲಭವೇಂದ್ರಾದಿ ಸುಮನಸರೊಡೆಯ ಶ್ರೀ-ಕಮಲನಾಭ ವಿಠ್ಠಲ ಕರುಣದಿ ಸಲಹೊ 5
--------------
ನಿಡಗುರುಕಿ ಜೀವೂಬಾಯಿ
ಕೃಷ್ಣಾತೀರದಿ ಕುಳಿತಿಷ್ಟವ ಸಲಿಸುವನ್ಯಾರೇ ಪೇಳಮ್ಮಯ್ಯ ಪ ಕಷ್ಟರಹಿತ ಸಂತುಷ್ಟರೆನಿಪ ಸತ್ಯೇಷ್ಟತೀರ್ಥ ಕರಜಪರಾಕ್ರಮರೇ ಅ.ಪ. ಬೋಧ ಮುನಿಯು ಮತ ಶುಭವಾರಿಧಿ ತಾರಕೆ ತಾರೆನೆನಿಪ ಜೀವತಾರ ಶಶಿಕಾಣಮ್ಮ 1 ಶುಭ ತಿಲುಕಾಂಕಿತದಿಂದೊಪ್ಪುವನ್ಯಾರೆ ಪೇಳಮ್ಮಯ್ಯಚಂದ್ರಕಂಠಮಾಲೆ ಕರದಿ ದಂಡವ ಧರಿಸಿಹನ್ಯಾರೆ ಪೇಳಮ್ಮಯ್ಯ ಚಂದ್ರಚರಣ ನಖಶಿಖ ಪರಿಪೂರ್ಣದಿಂದೊಪ್ಪುವ ಗುರುವರ್ಯ ಕಾಣಮ್ಮ 2 ವೃಂದಾವನವರ ಮಂದಿರ ಮಧ್ಯದಿ ರಾಜೀವನ್ಯಾರೇ ಪೇಳಮ್ಮಯ್ಯ ವೃಂದಾರಕ ವರವೃಂದ ವಿನುತನ್ಯಾರೆ ಪೇಳಮ್ಮಯ್ಯ ವೃಂದಾವನ ಸುಂದರ ಗುಣಗಳಿಂಧೊಳೆ ಯುವನ್ಯಾರೆ ಪೇಳಮ್ಮಯ್ಯ ವೃಂದಾವನದೊಳಗಾಶ್ರಿತ ತಂದೆವರದಗೋಪಾಲವಿಠಲನಸೇವಿಪರೇ 3
--------------
ತಂದೆವರದಗೋಪಾಲವಿಠಲರು
ಕೆಡುವೆಯೇಕೋ ಮನುಜ ಕೆಡುವೆಯೇಕೋ ಪ ಪೊಡವಿಯಾ ಸುಖ ಸ್ಥಿರವದೆಂಬ ದೃಢವನಾಂತು ನೀ ಅ.ಪ ಧನವಗಳಿಸಲೇಂ ಮನುಜಾ ಮನೆಗಳೀಡಾಡೆ ಎನಿತು ಬಳಗಮಿರ್ಪೊಡೇನು ತನುವಿನಾಸೆಯಿಂ 1 ಮರೆವೆಯೇತಕೋ ಮನುಜಾ ಅರಿಯಲೆನ್ನುತಾ ಬರಿಯ ಮಾಯೆಯೀ ಪ್ರಪಂಚ ಚಿರವೆಂದೆನ್ನುತಾ 2 ರಂಗಮಾಲೋಲನಾ ಮಾಂಗಿರೀಶನ ನೆನೆ[ದರೆ] ಹಿಂಗದೇ ಭವಬಂಧಗಳನು | ಭಂಗಗೈಯನೇ 3 ಕಾಲದೂತ ರಂಗ ಕಾಲಿನಿಂದೊದೆಯುವಾಗ ಬಾಲರಾಮದಾಸ[ನುತನ] ನಲಿದು ನೆನೆಯದೆ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕೆಳದಿ ಕೇಳುವ ಬಾರೆ ನಳಿನಾಕ್ಷ ವನದಲ್ಲಿ ಕೊಳಲನೂದುವ ಬಗೆಯ ನಳಿನಜಾಂಡವು ತಾನೆ ತಲೆದೂಗುತಲಿದೆ ಕುಳಿತಿರೆ ವಶವಲ್ಲವೆ ಪ ಸರಸಿಜ ನಯನಾಳೆ ಧರೆಯ ಭಾಗ್ಯವ ನೋಡೆ ತರುಗುಲ್ಮಾಲತೆ ನೆವದಿ ಭರದಿ ಪುಲಕಿತಳಾಗೆ ಪರಿಪರಿ ಸುಮದಿಂದ ನೆರೆ ನಸುನಗುತಿಪ್ಪ ಮರುಳೆ ಕಣ್ಣಿಲಿ ನೋಡೆ ವರ ವಿಮಾನಗಳು ಸಂ- ಚರಿಸಿ ಮೆರೆವ ವೈಭವ ಧರೆಯೆಲ್ಲಾ ತಿಳಿಯದು ಲೋಲ್ಯಾಡದೆ ಬಿಡರು 1 ವಾಮಾಲೋಚನೆ ಸುರರ ಧಾಮಾವೆಂಬಿಯಾ ಇದು ಕಾಮತನಯ ಕಾಮದೇವ ಸೋಮಶೇಖರ ತಾನು ತಾಮರಸಾಸನ ಪ್ರೇಮಾದಿ ನಲಿಯುವ ಆ ಮಹರಾದಿ ಲೋಕವೆ ಸಾಮಜಗಮನೆ ಕೇಳೆ ನೀ ಮರುಳಾಗ ಬ್ಯಾಡಾ ಆ ಮುಕುತಿ ಸ್ಥಾನವೆ ಸೇವೆ ಮಾಡುವರು 2 ದೂರ ಜನರಿಗೆ ಸಾಲೋಕ್ಯ ಊರಲಿಪ್ಪರಿಗೆ ಸಾಮೀಪ್ಯ ಗೋರಕ್ಷಕರಿಗೆ ಸಾರೂಪ್ಯ ಸೇರಿದ ಯುವತಿಗೆ ಭರದಿ ಸಾಯುಜ್ಯವೆ ಮೀರಿದೆ ಮುಕುತಿಗಿದು ಭಾರಿ ಭಾರಿಗೆ ಸಾಮಾ ಪೂರೈಸಿ ಮುಕುತರು ತೋರುವರಿಲ್ಲಿ ಆನಂದ ಈ ರಭಸದಿ ವೇಣು ಪೂರೈಸಿ ಸುಖವೀವ ಧೀರ ವಾಸುದೇವವಿಠಲ 3
--------------
ವ್ಯಾಸತತ್ವಜ್ಞದಾಸರು
ಕೇಶವಾಚ್ಯುತ ಮಾಧವಾನಂತ|ಶ್ರೀ ಶಕಮಲದಳೇಕ್ಷಣಾ| ವಾಸುದೇವ ಮುಕುಂದ ಮುರಹರ ಕ್ಲೇಶಹರಣ ಜನಾರ್ಧನಾ|| ವಾಸುಕಿಯ ಪರಿಯಂಕನೆನುತಲಿ|ನೆನೆವನಾವ ನರೋತ್ತಮಾ| ಮೋಸಹೋಗದಿರವರೊಳೆಂದು|ಚರರಿಗ್ಹೇಳಿದನೈಯಮಾ 1 ರಾಮರಾಘವ ರಾಜಶೇಖರ|ರಾವಣಾಸುರಮರ್ದನಾ| ಶಾಮಸುಂದರ ಸಕಲ ಗುಣನಿಧಿ|ಶಬರಿಪೂರಿತ ವಾಸನಾ ಭೂಮಿಜಾಪತಿ ಭೂತನಾಥ|ಪ್ರಿಯನೆಂಬ ನರೋತ್ತಮಾ| ಪ್ರೇಮಿಕನ ನುಡಿಸದಿರಿಯೆಂದು|ಚರರಿಗ್ಹೇಳಿದನೈಯಮಾ 2 ಬಾಲಲೀಲವಿನೋದ ಶ್ರೀ ಗೋಪಾಲ ಗೋಕುಲ ಲಾಲನಾ| ಕಾಲಜಲಧರ ನೀಲಮುರಲೀ ಲೋಲಸುರವರ ಪಾಲನಾ| ಕಾಲಕಾಲನೆ ಕಂಸಹರನನು ತಾವ ನೆನೆವ ನರೋತ್ತುಮಾ| ಕಾಲಿಗೆರಗಿರಿ ಅವರಿಗೆಂದು|ಚರರಿಗ್ಹೇಳಿದನೈಯಮಾ 3 ಮಕರಕುಂಡಲ ಕಿರೀಟ ಕೌಸ್ತುಭ|ಕಟಕಕೇಯೂರ ಭೂಷಣಾ| ಅಖಿಲ ಜಗನುತ ಚರಣಪೀತಾಂಬರನೆ ಶ್ರೀವತ್ಸಲಾಂಭನಾ| ಪ್ರಕಟಿತಾಯುಧ ಶಂಖಚಕ್ರಗದಾಬ್ಜ ನೆನೆವನರೋತ್ತಮಾ| ಸುಖಿಸುವವರನು ತ್ಯಜಿಸಿರೆಂದು ಚರರಿಗ್ಹೇಳಿದನೈಯಮಾ 4 ಶ್ರವಣಪೂಜನೆ ಸ್ಮರಣಕೀರ್ತನೆ ವಂದನೆದಾಸ್ಯದಿ ಸಖ್ಯವಾ| ಬಿಡದನಾವನರೋತ್ತುಮಾ| ಅವನ ಸೀಮೆಯ ಹೋಗದಿರೆಂದು ಚರರಿಗ್ಹೇಳಿದನೈಯಮಾ 5 ಯಾರಮನೆಯಲಿ ತುಲಸಿವೃಂದಾವನದಿ ಶಾಲಿಗ್ರಾಮವು| ಚಾರುದ್ವಾದಶನಾಮ ಹರಿಚಕ್ರಾಂಕಿತದ ಶುಭಕಾಯವು| ಮೀರದಲೆ ಹರಿದಿನದ ವ್ರತದಲಿ ನಡೆವನಾವನರೋತ್ತಮಾ| ದಾರಿ ಮೆಟ್ಟದಿರೆಂದು ತನ್ನಯ ಚರರಿಗ್ಹೇಳಿದನೈಯಮಾ 6 ಸಾಧುಸಂತರು ಬಂದರೆರಗುತ ಪಾದೋದಕದಲಿ ಮೀವನು| ಆದಿನವಯುಗ ವಾದಿಚತುರ್ದಶ ಪರ್ವಕಾಲಗಳೆಂಬನು| ಸಾದರದಿ ಹರಿಪೂಜೆಯಿಂದರ್ಚಿಸುವ ನಾವನರೋತ್ತಮಾ| ಮೋದದಿಂದಲಿ ಬಾಗಿರೆಂದು ಚರರಿಗ್ಹೇಳಿದನೈಯಮಾ 7 ಅಂದು ಹೇಳಿದ ಕಥೆ ರಹಸ್ಯದ ಹರಿಯನಾಮದ ಮಾಲಿಕಾ| ತಂದೆ ಮಹೀಪತಿ ಎನ್ನ ಮುಖದಲಿ ನುಡಿಸಿದನು ಭೋಧಾಷ್ಟಕ| ತಂದು ಮನದಲಿ ಭಕುತಿಯಿಂದಲಿ ನೆನೆವನಾವನರೋತ್ತಮಾ| ಇಂದು ಜೀವನ್ಮುಕ್ತನಮಗಿನ್ನೇನು ಮಾಡುವನೈಯಮಾ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳಿದರೆನಗೇನು ಗೊತ್ತಿಲ್ಲ ಹೇಳುವದ್ಹುಟ್ಟನಾ ಕಲಿತಿಲ್ಲ ಪ ಹೇಳಿದ್ದೆ ಕೇಳಿ ನಾ ಮೂಲತಿಳಿದು ಭವ ಮಾಲನ ಭಜಿಸುವೆನಲ್ಲ ಅ.ಪ ವೇದಮೊದಲು ನಾನೋದಿಲ್ಲ ವೇದಮಂತ್ರ ಗೊತ್ತೆನಗಿಲ್ಲ ಮೇದಿನಿಯೊಳು ಹರಿಪಾದದಾಸರು ನಿ ವೇದಿಸಿದ ತೆರ ಸಾಧಿಪೆನಲ್ಲ 1 ನಿತ್ಯತತ್ತ್ವಗೊತ್ತೆನಗಿಲ್ಲ ಮತ್ತು ಆವಶಾಸ್ತ್ರ ಗತಿಯಿಲ್ಲ ಸತ್ಯರು ಪೇಳಿದ ನಿತ್ಯವಾಕ್ಯಗಳ ಚಿತ್ತವಿಟ್ಟರಿಯುತ್ತ ಸತ್ಯ ನಂಬಿಹೆನಲ್ಲ 2 ಛಂದಸ್ಸು ಲಕ್ಷಣ ನೋಡಿಲ್ಲ ಒಂದು ಪುರಾಣದರ್ಥ ಮಾಡಿಲ್ಲ ಬಂಧುಭಜಕರಾನಂದ ಶ್ರೀರಾಮನ ಬಂಧುರಂಘ್ರಿ ಸ್ಮರಣೊಂದೆ ಬಲ್ಲೆನಲ್ಲ 3
--------------
ರಾಮದಾಸರು
ಕೊಡುವೆ ವೀಳ್ಯವನು ಕಡಲ ಶಯನನೇ ನಾ ಪ. ಬುತ್ತಿ ಚಿಗುರು ಎಲೆಯು ಕತ್ತರಿಸಿದ ಅಡಕೆ ಮುತ್ತಿನ ಸುಣ್ಣವನ್ನು ನಾ 1 ಯಾಲಕ್ಕಿ ಲವಂಗ ಬಾಲ ಮೆಣಸು ಸಹ ಬಾಲೆ ನಾನು ಬೇಡುವೆನು ನಾ 2 ಶ್ರೀ ಶ್ರೀನಿವಾಸನೆ ಶ್ರೀ ರಮಾಲೋಲನೆ ಶಿರವನಿಂದು ಬಾಗುವೆನು ನಾ 3
--------------
ಸರಸ್ವತಿ ಬಾಯಿ
ಕೊಳಲಕೃಷ್ಣ ಬಂದು ನಿಲ್ಲೊ ಹೃದಯ ಕಮಲದಿ ನಳಿನನಾಭ ನಿನ್ನ ದಿವ್ಯ ಚಲುವ ರೂಪದಿ ಪ. ಶಿರದಿ ಮಕುಟ ಫಣೆಯ ತಿಲುಕ ಒಲಿವ ಮುಂಗುರುಳು ನಾಸಿಕ ಗಲ್ಲ ಹೊಳೆಯುತ 1 ಕರ್ಣದಲಿ ಕುಂಡಲಗಳು ಸ್ವರ್ಣ ಕಂಠವು ನಿನ್ನ ದಂತ ಹೊಳೆಯುತಿರಲು ಚನ್ನ ಶ್ರೀಹರಿಯೆ 2 ಅಧರ ಉರದಿ ಲಕ್ಷಿಯು ನಳಿತೋಳಿನಲಿ ಶಂಖ ಚಕ್ರ ವೇಣು ಪಿಡಿದಿಹ 3 ಕಮಲ ಮಾಲೆ ಮೇಲೆ ತುಳಸಿಯು ಮಾರಜನಕ ಹೊಳೆವೊ ಜರಿಯ ಪೀತ ವಸನವು 4 ರಕ್ತವರ್ಣ ವಸನ ಉಟ್ಟು ಕಟ್ಟಿ ಕಿರುಗೆಜ್ಜೆ ಮುಕ್ತರೊಡೆಯ ಮುಕ್ತಿಕೊಡುವ ಪಾದಕಮಲವು 5 ಕ್ಲೇಶ ಕಳೆಯುತ ದಾಸ ಜನರ ಕಾಯ್ವ ಕೃಷ್ಣ ಘಾಸಿಗೊಳಿಸದೆ 6 ಗುರುಗಳಲ್ಲಿ ನಿಂತು ಎನ್ನ ಹರುಷಪಡಿಸೊ ನೀ ಪರಮಪುರುಷ ನರಹರಿಯೆ ದುರಿತದೂರನೆ 7 ನೀರೊಳಾಡಿ ಭಾರಪೊತ್ತು ಕೋರೆ ತೋರಿದೆ ಘೋರರೂಪಿ ಬ್ರಹ್ಮಚಾರಿ ಕ್ಷತ್ರಿಯಾರಿ ನೀ 8 ಶ್ರೀ ಹರಿ ರಾಮ ಕೃಷ್ಣ ಬೌದ್ಧ ಕಲ್ಕಿಯೆ ಗೋಪಾಲಕೃಷ್ಣವಿಠ್ಠಲ ರೂಪ ತೋರೊ ನೀ 9
--------------
ಅಂಬಾಬಾಯಿ
ಕೊಳಲನೂದೆಲೋ ಕೃಷ್ಣ ಕೊಳಲನೂದೆಲೊ ಪ ಕೊಳಲನೂದು ಮನದ ದುಗುಡಕಳೆದು ಮತ್ತೆ ಮನಕೆ ಪ್ರಶಾಂತೆತಳೆಯುವಂತೆ ನಿತ್ಯಮಂ_ಜುಳ ಸ್ವರಗಳನ್ನು ತೆಗೆದು ಅ.ಪ. ತುಂಬಿ ನಳಿನಬೆರಳುಗಳು ತೂತು ಮುಚ್ಚಿತೆರೆದು ಸವಿಯ ನಾದದಲ್ಲಿ ನಿಸಾರ ನಿ ದ ಪ ಮ ಪ ನಿ ಎಂದು 1 ಇಲ್ಲಿ ಪೀಠದಿ ಎದ್ದು ನಿಲ್ಲು ಥಾ7ಟದಿಮಲ್ಲಿಗೆ ವನಮಾಲೆ ಕೊರಳೊಳಲ್ಲಾಡುತಿರಲು ರೂಪದಲ್ಲಿ ಮನವಿನೈಕ್ಯವಾಗಿತಲ್ಲೀನರಾಗುವಂತೆ ಕೃಷ್ಣಾ 2 ಎದ್ದುನಿಂತು ಮಾಟದಿ ನಿಂತು ಮುದ್ದು ನೋಟದಿಬಿದ್ದವರನು ನೋಡಿ ನಮಗೆಶುದ್ಧ ಬುದ್ಧಿ ಕೊಟ್ಟು ನಮ್ಮದುದ್ಧರಿಪುದು ಗದುಗಿನ ಪ್ರಸಿದ್ಧ ವೀರನಾರಾಯಣ 3
--------------
ವೀರನಾರಾಯಣ
ಕೋಲು ಉತ್ಸವಗೀತೆ ಕೋಲುವ ನೋಡುವ ಬನ್ನಿ ಶ್ರೀರಂಗನಾಯಕಿಯ ಕೋಲುವ ನೋಡುವ ಬನ್ನಿರೆಲ್ಲ ಪ ಚಪ್ಪರವನು ಶÀೃಂಗರಿಸಿ ಪಟ್ಟುಪೀತಾಂಬರದ ಮೇಲೆ ಕಟ್ಟುಗಳಿಂದ ವಿಸ್ತರಿಸಿ ಕದಳಿಯಕೊನೆ ಕಬ್ಬು ತೆಂಗಿನ ಫಲಗಳ ವಿಧವಿಧವಾಗಿ ಶೃಂಗಾರ ಮಾಡಿದರು 1 ಭಾದ್ರಪದ ಕನ್ಯಾಮಾಸದಲ್ಲಿ ಶುದ್ಧಪಾಡ್ಯದಲ್ಲಿ ಭದ್ರೆ ಶ್ರೀರಂಗನಾಯಕಿಯು ಬಂದು ಮಜ್ಜನವನು ಮಾಡಬೇಕೆನುತಲೆ ಮೂದ್ರ್ವಾರಮಧ್ಯದಲಿ ತಾ ನಿಂದಳು 2 ತಂದು ಹರವಿದರು ಬತ್ತವ ವಿಸ್ತಾರವಾಗಿ ತಂದಿಟ್ಟು ಕರ್ಪೂರಬಟ್ಟಲುಗಳು ತುಂಬಿ ಕಲ್ಪೋಕ್ತ ದಿಂದಲೆ ಪೂಜೆಯ ಮಾಡಿದರು 3 ಎಂಭತ್ತೊಂಬತ್ತು ಬಟ್ಟಲಲ್ಲಿ ಇರುವ ಉದಕವನು ರಂಭೆಗಭಿಷೇಕವ ಮಾಡೆ ಗಂಧವ ಅಂಬೆ ಶಿರದೊಳು ಧರಿಸಿ ಪೂಮಾಲೆಯ [ಸಂಭ್ರಮದಿ]ಧರಿಸಿ ನಿಂದಳು ದೇವಿ 4 ಸುಖನಿಧಿ ಪದ್ಮಾನಿಧಿಗೆ ಹಣ್ಣಿನ ಹರಿವಾಣವ ಶಂಕೆ ಇಲ್ಲದೆ ಭಕ್ತರು ಪಿಡಿದು [ನಿಂತಿರುವ] ಶಂಖನಾದವು ತಾಳಮೇಳ ವಾದ್ಯಗಳಿಂದ ಪಂಕಜಮುಖಿಗಭಿಷೇಕವ ಮಾಡಿದರು 5 ಪುಷ್ಪದ ಮಂಟಪದಲ್ಲಿ ಪುರುಷೋತ್ತಮನ ಒಪ್ಪವಾದ ಅಶ್ವವ ತಂದಿರಿಸಿದರು ಆನಂದದಿ ಕಲ್ಪೋಕ್ತದಿಂದಲೆ ಪೂಜೆ ನೈವೇದ್ಯವ ಮಾಡಿ ಒಪ್ಪುವ ಕಂಕಣವನು ಕಟ್ಟಿದರಾಗ 6 ರತ್ನದ ಕಿರೀಟವಿಟ್ಟು ಲಲಾಟದಲ್ಲಿ ಮತ್ತೆ ತಿದ್ದಿದ ಕಸ್ತೂರಿಬಟ್ಟು ರತ್ನದ ಪದಕವು ಇಟ್ಟು ಕೊರಳೊಳು ಇಂದಿರೆ ವಂದಾಳು 7 ಮಧ್ಯದ ಕೊಟ್ಟಿಗೆಯಲ್ಲಿ ವಿಪ್ರರು ಕೈಕಟ್ಟಿ ನಿಂದು ಸೇವೆಯ ಮಾಡುತಿರಲು ಅರ್ತಿ ಯಿಂದಲೆ ಧೂಪದೀಪ ನೈವೇದ್ಯದಿ ಲಕ್ಷ್ಮೀ ದೇವಿಗೆ ಪೂಜೆಯ ಮಾಡಿದರು 8 ಭೇರಿ ದುಂದುಭಿ ವಾದ್ಯಗಳಿಂದ ತಾಳಮೇಳವು [ನಾರಿಯರ] ರ ಸಾಲುಗಳಿಂದ ಬಾಣ ಬಿರುಸು ಮತಾಪು ಅಗರುಬತ್ತಿ [ಗಳ ನಡುವೆ] ನಾರಾಯಣನರಾಣಿ ಕೋಲುವಿನಲ್ಲಿ 9 ಛತ್ರಿಚಾಮರ ಸೂರೆಪಾನ ಪಿಡಿಯೆ ಮದ ಹಸ್ತಿಗಳು ಮಾಡುವ ಸಲಾಮು ಸುತ್ತಿ ದೀವಟಿಗೆಯು ತುತ್ತೂರಿ ನಾದವು ಮತ್ತಧಿಕಾರಿಗಳು ಮಂಟಪದಲಿ 10 ಆರುದಿವಸದಲ್ಲೊರೆಗೊಂಡು ಪಾನುಪಟ್ಟಿಯು ಸೂರ್ಯಚಂದ್ರರು ಮುತ್ತಿನಬಟ್ಟು [ಆ]ರಾಗಟೆಹೆರಳು ಭಂಗಾರಗೊಂಡೆಗಳಿಟ್ಟು ವ ಯ್ಯಾರದಿಂದಲೆ ಬಂದಳು ಮಂಟಪಕೆ 11 ಸಪ್ತದಿನದಲಿ ಲಕ್ಷ್ಮೀದೇವಿಗೆ ಉತ್ರಾಜಿಮಾಲೆ ಹಸ್ತವಡಗೆ ಹರಡಿವಂಕಿ ದಕ್ಷಿಣ ಹಸ್ತದಿ ರತ್ನದಹಂಸವು ವಾಮ ಹಸ್ತವ ಮೊಣಕಾಲಿನೊಳಿಟ್ಟಳು 12 ಅಂದುಗೆ ಗೆಜ್ಜೆ ಮುಂಗೈಮುರಾರಿ ಉಂಗುರವು ಕುಂದಣದ ಪಾಗಡವಿಟ್ಟು ಹಿಂದಿನತೋಳಿಗೆ ಬಂದಿ ತಾಯಿತನಿಟ್ಟು ಕುಂದಣದ ಮಂಟಪದಲಿ ಕುಳಿತಳು 13 ಅಷ್ಟಮ ದಿವಸದಲ್ಲಂದು ಸೃಷ್ಟಿಗಿರೀಶ್ವರಿಗೆ ಕಟ್ಟಿದರು ಕಲ್ಕೀತುರಾಯಿ ದೃಷ್ಟಿಯಬಟ್ಟು ರತ್ನದ ಕುಂಡಲ [ಇಟ್ಟು] ಮತ್ತರಗಿಣಿಯನು ಮಾತಾಡಿಸುತ 14 ಮುಕ್ತಿದಾಯಕಿಗೆ ಮೂರು ಪಾವಡೆಯನುಡಿಸಿ ಮತ್ತೆ ವಡ್ಯಾಣವನಿ[ಡಲು] ರತ್ನದ ಹಸ್ತದಿ ಅಭಯವ ಕೊಡುತ [ನಿಂತಳು] ಮೊರ್ನೋಮಿಯ ಮಂಟಪದಲ್ಲಿ 15 ಮುಂದೊಂಭತ್ತು ದಿನದಲ್ಲಿ ರಂಭೆರಂಗನಾಯಕಿಯು ಮಿಂದು ಮಡಿಗಳ ತಾನುಟ್ಟು ಚಂದದಿ ನೈವೇದ್ಯವ ಭಕ್ತರಿಗಿತ್ತು ಬಂದು ಆಸ್ಥಾನದಿ ನಿಂದಳು ದೇವಿ 16
--------------
ಯದುಗಿರಿಯಮ್ಮ
ಕೋಲು ಕೋಲೆನ್ನ ಕೋಲೆ ಕೋಲು ಕೋಲೆನ್ನ ಕೋಲೆ ಕೋಲು ಶ್ರೀಹರಿಯ ಬಲಗೊಂಬೆ ಕೋಲೆ ಧ್ರುವ ನಿಗಮ ಚೋರ ರಾಕ್ಷಸನ ಕೊಂದು ರಕ್ಷಿಸಿ ವೇದವನುಳುಹಿದ ಕೋಲೆ ರಕ್ಷಿಸಿ ವೇದವನುಳುಹಿದ ಕ್ಷಿತಿಯೊಳು ಮಚ್ಛಾವತಾರನ ಬಲಗೊಂಬೆ ಕೋಲೆ 1 ಧರ್ಮ ನಡೆಯಲಾಗಿ ವರ್ಮವ ತಾಳಿದ ಕರ್ಮಹರ ಶ್ರೀ ಮೂರ್ತಿಯ ಕೋಲೆ ಕರ್ಮಹರ ಶ್ರೀಮೂರ್ತಿಯ ಧರೆಯ ಪೊತ್ತ ಕೂರ್ಮಾವತಾರನ ಬಲಗೊಂಬೆ ಕೋಲೆ 2 ಧರೆಯ ಕದ್ದಸುರನ ಕೋರೆದಾಡಿಂದ ಸೀಳಿ ಹೋರಿ ಹೊಯ್ದಾಡಿದ ನರಹರಿ ಕೋಲೆ ಹೋರಿ ಹೊಯ್ದಾಡಿದ ನರಹರಿ ಧರೆಯ ಗೆದ್ದ ವರಹಾವತಾರನ ಬಲಗೊಂಬೆ ಕೋಲೆ3 ದುರುಳ ದೈತ್ಯನ ಕೊಂದು ಕರುಳು ವನಮಾಲೆಯ ಧರಿಸಿದ ಕೋಲೆ ಕರುಳು ವನಮಾಲೆಯ ಧರಿಸಿದಾ ಹರಿ ನರಸಿಂಹಾವತಾರನ ಬಲಗೊಂಬೆ ಕೋಲೆ 4 ಪಾದ ಭೂಮಿಯ ಬೇಡಿ ಹೆಮ್ಮೆಯ ತಾ ಪರಿಹರಿಸಿದ ಕೋಲೆ ಹೆಮ್ಮೆಯ ತಾ ಪರಿಹರಿಸಿದ ಬ್ರಾಹ್ಮಣನಾಗಿ ವಾಮನಾವತಾರನ ಬಲಗೊಂಗೆ ಕೋಲೆ 5 ಆಜ್ಞೆಯ ಮೀರದೆ ಅಗ್ರಜಳ ಶಿರ ಶೀಘ್ರದಿಂದಲಿ ಇಳುಹಿದ ಕೋಲೆ ಶೀಘ್ರದಿಂದಲೆ ಇಳುಹಿದ ಶಿರವನು ಭಾರ್ಗವ ರಾಮನ ಬಲಗೊಂಬೆ ಕೋಲೆ 6 ಕಾಮದಿ ಸೀತೆಯನೊಯ್ದ ತಾಮಸದವನ ಕೊಂದು ನೇಮ ಸ್ಥಾಪಿಸಿದ ಇಳೆಯೊಳು ಕೋಲೆ ನೇಮ ಸ್ಥಾಪಿಸಿದ ಇಳೆಯೊಳು ರಾಮಾವತಾರನ ಬಲಗೊಂಬೆ ಕೋಲೆ 7 ದುಷ್ಟ ದೈತ್ಯರನೆಲ್ಲ ಕುಟ್ಟಿ ಮಡುಹಿದ ನೆಟ್ಟನೆ ಗಿರಿಯನೆತ್ತಿದ ಕೋಲೆ ನೆಟ್ಟನೆ ಗಿರಿಯನೆತ್ತಿದ ಬೊಟ್ಟಿಲೆ ಕೃಷ್ಣಾವತಾರನ ಬಲಗೊಂಬೆ ಕೋಲೆ 8 ಕದ್ದು ತ್ರಿಪುರವ ಪೊಕ್ಕು ಇದ್ದ ಸತಿಯರ ವ್ರತ ಸಿದ್ದಿಯ ತಾನು ಅಳಿದನು ಕೋಲೆ ಸಿದ್ದಿಯ ತಾನು ಅಳಿದನು ಬುದ್ದಿಯಲಿ ಭೌದ್ದಾವತಾರನ ಬಲಗೊಂಬೆ ಕೋಲೆ 9 ಮಲ್ಲ ಮಾನ್ಯರನೆಲ್ಲ ಹಲ್ಲು ಮುರಿಯಲಾಗಿ ನಲ್ಲ ತೇಜಿಯನೇರಿದ ಕೋಲೆ ನಲ್ಲ ತೇಜಿಯ ನೇರಿದ ಬಲ್ಲಿಹನಾಗಿ ಕಲ್ಕ್ಯಾವತಾರನ ಬಲಗೊಂಬೆ ಕೋಲೆ 10 ವಸ್ತು ಪರಾತ್ಪರ ವಿಸ್ತಾರ ತೋರಲಾಗಿ ಹತ್ತಾವತಾರ ಧರಿಸಿದ ಕೋಲೆ ಹತ್ತಾವತಾರ ಧರಿಸಿದ ಮಹಿಪತಿಯ ಅಂತರಾತ್ಮನ ಬಲಗೊಂಬೆ ಕೋಲೆ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕ್ಷಣತೋರಿ ಇಲ್ಲದಂತಾಗುವ ವಿಷಮ ಮಹ ಕನಸಿನ ಮೋಹದಿಂ ಕೆಡಬೇಡ ಮನುಜ ಪ ಹಲವು ಜನಮದಿ ಬಿದ್ದು ತಿಳಿಯದೆ ಇಹ್ಯಪರಕೆ ತೊಳಲುತ ಬಳಲುತ ತಿರುತಿರುಗಿ ಗಳಿಸಿದ ನರಜನುಮ ವಿವರಿಸಿ ನೋಡದೆ ಕಳಕೊಂಡು ಬಳಿಕಿನ್ನು ಸುಲಭವಲ್ಲೆಲೆ ಖೋಡಿ 1 ನೀರಮೇಲಣ ಗುರುಳೆಯಂತೆ ಕಾಂಬುವ ಈ ನರಕ ಮೂತ್ರದ ತನುಭಾಂಡವಿದು ಅರಿಯದೆ ಮೋಹಿಸಿ ಪರಿಪರಿ ಕುಣಿಕುಣಿದು ಪರಮ ರೌರವ ನರಕಕ್ಹೋಗ ಬೇಡೆಲೆ ಖೋಡಿ 2 ಜವನÀದೂತರು ಬಂದು ಕವಿದುಕೊಳ್ಳಲು ಆಗ ಕಾಯುವರಾರಿಲ್ಲ ಕೈಪಿಡಿದು ದಿವನಿಶೆಯೆನ್ನದೆ ಭವಹರ ಶ್ರೀರಾಮ ದೇವನ ನೆರೆನಂಬಿ ಭವಮಾಲೆ ಗೆಲಿಯೊ 3
--------------
ರಾಮದಾಸರು
ಕ್ಷೇತ್ರ ದರ್ಶನ ಉಡುಪಿಯ ಯಾತ್ರೆಯ ಮಾಡಿ - ಉಡುಪಿಯಾ ಪ ಉಡುಪಿಯ ಯಾತ್ರೆಯನ್ನೆ ಮಾಡಿ | ಭಕ್ತಿಮುಡುಪಿತ್ತು ಪ್ರಮೋದ ಬೇಡಿ | ಆಹನಡುದೇಹ ದೋಳೀಹ | ನಡುನಾಡಿ ಕಮಲದಿಒಡೆಯ ಶ್ರೀ ಕೃಷ್ಣನ್ನ | ಧೃಡ ಭಕ್ತಿಯಿಂ ಭಜಿಸಿ ಅ.ಪ. ಆನಂದ ತೀರಥ ಸರಸಿ | ಯೊಳುಮೀನನಾಗಿ ಬಹು ಈಸಿ | ಹರಿಧ್ಯಾನದಿ ಸ್ನಾನ ಪೊರೈಸಿ | ಮತ್ತೆಮೌನವೆಂಬಾಸನ ಹಾಸಿ | ಆಹಮೂಧ್ರ್ನಿ ಲಲಾಟದೋಳ್ | ಗೋಣು ಮಧ್ಯೋದರಸ್ಥಾನಾದಿಯಲಿ ಹರಿ | ಧ್ಯಾನ ನಾಮವ ಹಚ್ಚಿ 1 ಮಧ್ವ ಕಿಂಕರನೆಂಬೊ ದೊಂದು | ಹರಿವಿದ್ವೇಷಿಗಳ ಬಡಿವೊದೆಂದು | ಮತ್ತೆಸದ್ವೈಷ್ಣವರ ಸೇರ್ವೋದೊಂದು | ಇನ್ನುಬುದ್ಧಿಪೂರ್ವಕ ಹರಿ ಪರನೆಂದು | ಆಹಶ್ರದ್ಧಾಳು ವೆಂದೆನಿಪ | ಮುದ್ದು ಮುದ್ರೆಗಳೈದುತಿದ್ದಿ ವಿಸ್ತರಿಸೂತ | ಕೃದ್ದೋಲ್ಕಾದಿಯನೆನೆ 2 ಸಂಧ್ಯಾ ಮೂಡಿಹುದು ನೀ ನೋಡು | ಕಾಲಮುದ್ಹಿಂದಾಗದಲೆ ನೀ ಮಾಡು | ಯಾವದೊಂದು ಮಂತ್ರಾರ್ಥವ ನೋಡು | ಇನ್ನುಸಂಧ್ಯಾ ನಾಮಕನ ಕೊಂಡಾಡು | ಆಹಛಂದದಿ ನಿನ ಜ್ಞಾನ | ಮುಂದು ಮುಕ್ಕಿಲು ಒಪ್ಪಮಂದೇಹ ದೈತ್ಯರ | ಮಂದಿಯ ಕೊಲ್ಲುತ 3 ಕಂಟಕ ಕಳೆದು ಶರೀರ | ಮಧ್ಯಮಂಟಪ ಚಿಂತಿಸೊ ಧೀರ | ಅದಕೆಎಂಟರ್ಧ ಮತ್ತೊಂದು ದ್ವಾರ | ಕಾಯ್ವಭಂಟ ಮಾರುತನ ವ್ಯಾಪಾರ | ಆಹಎಂಟ್‍ಟಾರು ನಾಲ್ಕು ಸ್ತಂಭ ಮಧ್ಯದಿ ಲಕ್ಷ್ಮಿಮಂಟಪ ಚಿಂತಿಸಿ ಒಂಟಿಯಾಗೊ ಮನದಿ 4 ಕೆಳ ಮುಖಾಬ್ಜವನೇ ನೀ ನೋಡೀ | ಮಂತ್ರಮೂಲದಿಂದ ಮೇಲು ಮಾಡಿ | ಅಲ್ಲಿಇಳೆಯಾಣ್ಮನನ ಚಿಂತೆ ಮಾಡಿ | ಸರ್ವಅಲಂಕಾರ ದಿಂದೊಡಗೂಡೀ | ಆಹನೆಲೆಸೀಹ ಕೃಷ್ಣನ್ನ | ಒಲಿಸೆ ಭಕ್ತಿಯಿಂದಸ್ಥಳ ತನ್ನ ಅರಮನೆ | ಯೊಳು ಕೊಟ್ಟು ಸಲಹುವ 5 ನಿತ್ಯ ಸ್ತವನ | ಆಹಇಂಬಿಟ್ಟು ಸ್ತೋತ್ರದಿ | ಉಂಬುಡುವೋ ಸರ್ವಬಿಂಬನೋಳರ್ಪಿಸಿ | ಸಂಭ್ರಮದಲ್ಲಿರು 6 ಮಧ್ವ ಸರೋವರ ಸ್ನಾನ | ಭಕ್ತಿಶುದ್ಧದಿ ಶ್ರೀಕೃಷ್ಣಧ್ಯಾನ | ಮಾಡೆಹೃದ್ಯನು ಹೃದ್ಯದಿಷ್ಠಾನ | ದಲ್ಲಿಸಿದ್ಧಿಸೂವನು ಗುಣ ಪೂರ್ಣ | ಆಹಮುದ್ದು ಕೃಷ್ಣನು ಗುರು | ಗೋವಿಂದ ವಿಠಲನುಶ್ರದ್ಧೆ ಸತ್ವಕ್ಕೊಲಿವ | ಸಿದ್ಧ ಕನಕನ ನೋಡಿ 7 ತೀರ್ಥ ಕ್ಷೇತ್ರ ಮಾಲಾ 1952 ರಲ್ಲಿ ಇಡೀ ಭರತ ವರ್ಷದಲ್ಲಿ ಪ್ರದಕ್ಷಿಣಾಕಾರವಾಗಿ ಹೊರಟು ಆಸೇತು ಹಿಮಾಚಲ ಪರ್ಯಂತವಿರುವ ಅನಂತ ತೀರ್ಥ ಕ್ಷೇತ್ರಗಳಲ್ಲಿ ಈ ಅಲ್ಪಾಧಿಷ್ಠಾನದ ಯೋಗ್ಯತಾಪ್ರಕಾರ ಬಿಂಬನು ಮಾಡಿ ಮಾಡಿಸಿದ ಯಾತ್ರಾ ಪ್ರಕರಣವೂ, ಮತ್ತೆ, 1954 ರಲ್ಲಿ ಉಡುಪಿ ಇತ್ಯಾದಿ ಪಶ್ಚಿಮ ಕ್ಷೇತಗಳ ಮತ್ತು 1957 ರಲ್ಲಿ ಮಲಖೇಡದಲ್ಲಿ ಬೃಹತೀ ಸಹಸ್ರವಾದಾಗ ಆಕಡೆ ಹೋದಾಗ ನೋಡಿದ ಅನೇಕ ಕ್ಷೇತ್ರಗಳ ಮತ್ತು 1961 ರಲ್ಲಿ ಸ್ವಾದಿ, ದ್ವಾರಕ, ಪುಷ್ಕರ, ಬದರಿ (ದ್ವಿತೀಯಾವರ್ತಿ) ಹೋಗಿ ಬಂದಾಗ ನೋಡಿದ ಯಾತ್ರಾ ಪ್ರಕರಣಗಳ ಜ್ಞಾಪಕಾರ್ಥವಾಗಿ ಈ ತೀರ್ಥಕ್ಷೇತ್ರಮಾಲಾ ಅಸ್ಮದ್ಗುರ್ವಂತರ್ಗತ ಬಿಂಬ ಮೂರುತಿ ಪ್ರೇರಿಸಿದಂತೆ ಬರೆಯಲ್ಪಡುತ್ತೆ :-
--------------
ಗುರುಗೋವಿಂದವಿಠಲರು
ಗಜಚರ್ಮಾಂಬರ ಗಂಗಾಧರನೇಗಜಮುಖಜನಕ ಗೌರಿಯ ರಮಣ ಓ ತ್ರಿಜಗದೊಂದಿತನೆ ಸಾಂಬಶಿವ ಮಹಾದೇವ ಪಫಾಲನೇತ್ರನೆ ರುಂಡಮಾಲಾಧರನೆನೀಲಕಂಠನೇ ನಿತ್ಯಾನಂದ ಓಕಾಲಾಂತಕನೆ ಸಾಂಬಶಿವ ಮಹಾದೇವ 1ಮದನ ಹರನೆ ಶಿವ ಕಂಬುಕಂಧರನೆಪದ್ಮಾಕ್ಷನಯನ ಪಾರ್ವತಿ ರಮಣ ಓಬುಧಜನಪ್ರಿಯನೆ ಸಾಂಬಶಿವ ಮಹಾದೇವ 2ಭೂತಿಭೂಷಣನೆ ಸರ್ವ ಭೂತಾತ್ಮಕಪಾತಕಹರ ಪಾರ್ವತಿ ರಮಣ ಓಅನಾಥ ರಕ್ಷನೆ ಸಾಂಬಶಿವ ಮಹಾದೇವ 3ಇಂದ್ರವಂದಿತ ಭುಜಗೇಂದ್ರ ಭೂಷಣನೆತಂದೆ ಏಳುಗಿರಿ ವೆಂಕಟಸಖನೇ ಓಚಂದ್ರಶೇಖರ ಸಾಂಬಶಿವ ಮಹಾದೇವ 4
--------------
ತಿಮ್ಮಪ್ಪದಾಸರು
ಗದ್ಯ ದಂಡಕ ಅಧರ ಚುಬುಕ ದಂತಗಳ 10 ಅಗರು ಚಂದನದಮುತ್ತಿನ ಮಲುಕು ಪೆಂಡೆಯಸರ ಕೊರಳಲ್ಲಿಹತ್ತೆಗಟ್ಟಿದ ವಾಗ್ಗೊರಳು ಮುತ್ತುಗಳಮುತ್ತು ಮಾಣಿಕ ನವರತ್ನದ ಚಿಂತಾಕ-ವತ್ತಿ ಸೇರಿದ ಕಂಠಮಾಲೆ ಸರಗಳ 20 ಮಣಿ ತಾಯಿತ್ತುಮೆರೆವ ಹಮ್ಮೀರ ತಾಯಿತಿ ಕಾಂತಿಗಳಕಡಗ ಕಂಕಣ ಸುರಿಗೆ ಬಿಚ್ಚು ಬಳೆಗಳುಹಿಡಿವುಡಿಯಲ್ಲಿ ವಜ್ರದ ಥಳವುಗಳಕಡು ಮೋಹವಾದ ಮುರುಡಿಯ ಸರಪಣಿಝಡಿವ ಮುಂಗೈಯ ಮುರಾರಿ ಕವಡೆಯ30 ನೀಲ ವೈಜಯಂತಿ ಮಾಲೆ ಶೋಭಿಸುವ 40 ಕದಳಿ ನಖ ಚಂದ್ರಿಕೆಯ 50 ಕಮಲ ವಾಸವಾಗಿಪ್ಪ ಕೃಷ್ಣನಪದುಮ ಚರಣಕ್ಕೆ ನಮೊ ನಮೊ ನಮೋ ಎಂಬೆ ನಾ. 60
--------------
ವ್ಯಾಸರಾಯರು