ಒಟ್ಟು 3655 ಕಡೆಗಳಲ್ಲಿ , 119 ದಾಸರು , 2543 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅವತಾರತ್ರಯ ಮೂರು ರೂಪವ ತೋರೋ ಮಾರ್ಜಿವದೊಡೆಯಾ ಪ. ಸಾರುವೆನು ಶರಣೆಂದು ಚಾರುತವ ಚರಣಕ್ಕೆ ಅ.ಪ.ಅಂಜನೆಯಲುದ್ಭವಿಸಿ ಸಂಜೀವನವ ತಂದುಕಂಜನಾಭನ ದಯದಿಅಂಜದತಿ ಕೆಂಜಡೆಯ ಪಿತಗಂಜಲಿ ಮುಗಿಯುವೆನು 1 ವಾರಿಧಿಯ ನೆರೆದಾಂಟಿ ನಾರಿಗುಂಗುರವಿತ್ತುಕ್ರೂರ ಕೀಚಕನ ಸಂಹಾರವನೆ ಮಾಡುತಲಿವೀರ ಬದರಿಲಿ ಪೋಗಿ ಸಾರಶಾಸ್ತ್ರವ ತಿಳಿದಧೀರ ಮಧ್ವಾಚಾರ್ಯ ಭೀಮ ಕರುಣವ ತೋರೋ 2 ಎರಡೈದು ಶಿರದವನ ಪುರವನೇ ನೀನುರುಹಿದುರುಳ ದುರ್ಯೋಧನನ ಧುರದಿ ಗೆಲಿದುವರ ಉಡುಪಿ ಕ್ಷೇತ್ರದಲಿಸಿರಿಯ ರಮಣಾ ತಂದೆ ವರದ ವಿಠ್ಠಲರೇಯಾ3
--------------
ಸಿರಿಗುರುತಂದೆವರದವಿಠಲರು
ಅಶೆ ಅಳಿಯದೆ ಮನದ ರೋಷವಡಗದೆ | ವೇಷ ದಂಭಕಗೆಲ್ಲಿ ಶಿವಯೋಗವು ಪ| ತನ್ನ ತಾನರಿಯದೆ ಉನ್ಮತ್ತದಿಂದಲಿ ನನ್ನದು ನಾನೆಂದು ಜಲ್ಪಿಸುತ || ಕುನ್ನಿಯಂದದಿ ಕೋಟಲೆ ಯೊಳಗಿಹ ಹೀನ ಮನುಜಗೆಲ್ಲಿ ಶಿವಯೋಗವು 1 ಎಲಬು ತೊಗಲು ಮಲ ಮೂತ್ರದಿ ತೋರುವ | ಹೊಲಸಿನ ದೇಹವು ತಾನೆನುತ || ಹಲವು ಪಾಪಂಗಳನು ಹೇಸದೆ ಮಾಡುವ | ಕುಲಹೀನನಿಗೆಲ್ಲಿ ಶಿವ ಯೋಗವು 2 ಆರು ವೈರಿಗಳಿಗೆ ವಶವಾದನು ಈ ದೀನ | ವಾರಿಜನಾಭನ ಚರಣವನು || ಸೇರಿ ತನ್ನ ಹಿತವ ಮಾಡಿಕೊಳ್ಳದಾ- |ಚಾರಿಗೇಡಿಗೆಲ್ಲಿ ಶಿವ ಯೋಗವು 3 ಮೂರು ದೇಹಕೆ ಮೀರಿ ಬೇರೆ ತಾನಾಗದೆ | ಆರು ಇಂದ್ರಿಯಗಳಿಗೆ ವಶವಾಗಿಯು || ನಾರಿಯರ ಸಂಗ ಸುಖವ ಬಯಸುವ | ಕ್ರೂರ ಮನುಜನಿಗೆಲ್ಲಿ ಶಿವ ಯೋಗವು 4 ಶ್ರೀ ಗುರು ವಿಶ್ವಪತಿಯ ಪದ ಕಮಲವ | ಬೇಗದಿ ಸೇರಿ ಸುಖಿಯಾದೆ || ರಾಗರೋಷದಿ ತನ್ನಾಡಿತವ ತಾ ಮರೆತಂಥ | ಭೋಗಲಂಪಟಗೆಲ್ಲಿ ಶಿವಯೋಗವು ? 5
--------------
ನರಸಿಂಹ
ಅಶ್ವಧಾಟೀ ಕೃಷ್ಣನೆ ಎಮ್ಮನು ಪ ಕಾಯ ನಂಬಿದೆ ನಿನ್ನನುಅ.ಪ ಸಾರ ಮಾರ್ಗದ ದಾರಿ ಕಾಣದೆ ಸಾರಿ ಬೇಡುವೆ ನಿನ್ನನು ನೀರಜಾಕ್ಷನೆ ಘೋರಭವದಿ ಪಾರುಗಾಣಿಸೊ ಎಮ್ಮನು 1 ದುಷ್ಟನಾಶಕ ಶಿಷ್ಟಪಾಲಕ ಶ್ರೇಷ್ಠಮೂರುತಿದೇವನೆ ಕಷ್ಟಓಡಿಸಿ ಇಷ್ಟಪಾಲಿಸೊ ಅಷ್ಟಕರ್ತನೆ ಬೇಗನೆ 2 ವೇದಗೋಚರ ಯಾದವೇಂದ್ರ ಸುಧಾಮ ರಕ್ಷಕ ಕೃಷ್ಣನೆ ನಂದಗೋಪ ಸುಕಂದ ನಾಮಕ ರಾಧೆವಂದಿತ ಚರಣನೆ 3 ಗೋಪಿ ಮೋಹಕ ಪಾಪಮೋಚಕ ತಾಪಸ ಪ್ರಿಯರೂಪನೆ ಕೋಪಮಾಡದೆ ಪಾಪಿ ಎನಗೆ ರೂಪ ತೋರಿಸೊ ಬೇಗನೆ 4 ದೋಷದೂರ ವಿನಾಶವರ್ಜಿತ ಕೇಶಿ ಸೂದನ ಶೂರನೆ ಕ್ಲೇಶ ಓಡಿಸಿ ದಾಸನೆನಿಸೊ ಬಿಂಬನೆ 5 ವೇಣುನಾದ ವಿನೋದ ಸುಂದರ ಜಾಣೆ ರುಕ್ಮಿಣಿ ಅರಸನೆ ಸಾನುರಾಗದಿ ಜ್ಞಾನದಂಬಕ ದಾನ ಮಾಡೊ ದಾನಿಯೆ6 ಶ್ಯಾಮಸುಂದರ ಮಾಮನೋಹರ ಭೀಮ ವಿಕ್ರಮ ಭೂತಿಯೆ ಸಾಮಸನ್ನುತ ರಾಮಚಂದಿರ ಕಾಮಜನಕನೆ ಕಲ್ಕಿಯೆ 7 ಸಿಂಧು ಶಯನನೇ ಬಂಧಮೋಚಕ ಮಂದರಾದ್ರಿಧಾರನೇ ಬಿಂಧುಮಾಧವ ಮಂದಹಾಸದ ಸುಂದರಾಂಗ ರೂಪನೆ8 ಲಕ್ಷ್ಮಣಾಗ್ರಜ ಪಕ್ಷಿವಾಹನ ಅಕ್ಷರೇಡ್ಯ ಸುಲಕ್ಷಣ ಮೋಕ್ಷದಾಯಕ ಲಕ್ಷ್ಮಿರಮಣನೆ ರಕ್ಷಿಸಯ್ಯ ಸರ್ವದಾ 9 ವಾರಿಜನೇತ್ರ ವಾರಿಜನಾಭ ವಾರಿಜಾಸನ ವಂದ್ಯನೆ ಸೂರಿ ಶೇಖರ ಮೇರೆಗಾಣದ ಮಹಿಮನೆ 10 ಸರ್ವವ್ಯಾಪ್ತನೆ ಸರ್ವವಂದ್ಯನೆ ಸರ್ವವಾಚ್ಯದ ಈಶನೆ 11 ಪೂರ್ಣಗುಣನೆ ಪೂರ್ಣಶಕ್ತನೆ ಪೂರ್ಣಭೋಧರ ಪ್ರಿಯನೆ ಪೂರ್ಣರೂಪನೆ ಪೂರ್ಣಪೂರ್ಣನೆ ಪೂರ್ಣ ತಂತ್ರ ಸ್ವತಂತ್ರನೆ12 ಬಾಲ ಲೀಲ ಕಲಾವಿಭೂಷಿತ ಲೀಲ ಮಾನುಷ ವಿಗ್ರಹ ಲೋಲ ಸುಂದರ ಜಾಲ ಮೋಹಕ ಕಾಲನಾಮಕ ಪುರುಷ 13 ಕಾಳಿಮರ್ಧನ ಕಾಳಿವರದ ಕಾಳಿಯನುಜ ಕೇವಲ ಮೌಳಿಯಿಂದಲಿ ಕಾಲಿಗೆರಗುವೆ ಪಾಲಿಸಯ್ಯ ಈಗಲೇ 14 ಭಂಜನ ನಿಕಟ ಸರ್ವರ ಕುಟಿಲ ವರ್ಜಿತ ಶ್ರೇಷ್ಟನೆ ನಕ್ರತರಿದ ಚಕ್ರಪಾಣಿಯೆ ಫಕ್ಕನೊಲಿಯೊ ಶುಕ್ರನೇ 15 ವಿಪ್ರಸತಿಯರ ಕ್ಷಿಪ್ರದಿಂದಲಿ ತಪ್ಪದೆ ಪೊರೆದಾತನೆ ತಪ್ಪುನೋಡದೆ ಒಪ್ಪಿಕೊಂಡು ಅಪ್ಪ ಒಲಿಯೊ ವೆಂಕಟ 16 ಪಾಂಡವ ಪ್ರಿಯ ಪುಂಡಮರ್ದನ ಅಂಡಜಾಧಿಪ ಅಂಡಗ ಭಂಡನೆನಿಸದೆ ತೊಂಡನೆನಿಸೊ ಪಾಂಡುರಂಗ ವಿಠ್ಠಲಾ 17 ಸೋಮಶೇಖರ ಭಾಮೆ ಪೂಜಿತ ಕಾಮಿತ ಪ್ರದಸಾಮನೆ ತಾಮಸಾರಿಯ ನೇಮದಿಂದಲಿ ನಾಮನುಡಿಸೊ ಶೀಲನೆ 18 ಸೋಮಕಾಂತಕ ಭಾಮ ರೂಪದಿ ಸೋಮಹಂಚಿದ ಜಾಣನೆ ವಾಮದೇವಗೆ ಭ್ರಮೆಯ ಮಾಡಿದ ಶ್ರೀಮನೋಹರವಾಮನ 19 ಇಂದ್ರಗೊಲಿದ ವೀಂದ್ರವಾಹನ ನಂದಗೋಕುಲ ಚಂದ್ರನೆ ಬಂಧನಪ್ರದ ಬಂಧು ಸರ್ವರ ತಂದೆ ಕಾಯೋ ಬೇಗನೆ 20 ವಿಜಯಸಾರಥಿ ವೃಜಿಜನಾರ್ದನ ಅಜಭವಾದಿ ಪೂಜಿತ ತ್ರಿಜಗವಂದಿತ ಭುಜಗಶಯನನೆ ಅಜಿತ ಶಾಶ್ವತ ವಿಷ್ಣುವೆ 21 ಕಳತ್ರ ಅನೀಕನೆ ವಾಕು ಲಾಲಿಸು ನೂಕುಭವವನು ಏಕರೀತಿಲಿಮೆರೆವನೆ 22 ಜೀವ ಪ್ರೇರಕ ಜೀವಭಾಸರ ಜೀವರಾಶ್ರಯ ಭಿನ್ನನೇ ದೇವದೇವನೆ ಕಾವುದೆಮ್ಮನು ಕೋವಿದಪ್ರಿಯ ಕಪಿಲನೆ 23 ಅನ್ನನಾಮಕ ಅನ್ನದಾಯಕ ಅನ್ನುಉಂಬುವ ಅತಿಥಿಯೆ ಮಾನ್ಯಮಾನದ ಜ್ಞಾನಿಗಮ್ಯನೆ ಬೆನ್ನುಬಿದ್ದೆ ಅನಂತನೆ 24 ಸಾರ ಉಣ್ಣುವ ಗಾರು ಉಣ್ಣದ ಮಾರುತೀಶನೆ ಸ್ವರತನೆ ಧೀರ ಜಯಮುನಿ ವಾಯು ಅಂತರ ಮೆರೆವ ಸಿರಿಪತಿ ಕೃಷ್ಣವಿಠಲನೆ ಬಿಂಬನೆ 25
--------------
ಕೃಷ್ಣವಿಠಲದಾಸರು
ಅಸಾಧಾರಣ ವಿಠಲ ನೀ ಸಲಹೊ ಇವಳಾ |ಈಶಾದಿ ದಿವಿಜೇಡ್ಯ | ಶ್ರೀರಾಮಚಂದ್ರಾ ಪ ವಿಶ್ವ ಮೂರುತಿಯೇ |ಮೀಸಲ ಮನದಲಿರೆ | ನೀ ಸ್ವಪ್ನ ಸೂಚಿಸಿದೆಏಸು ಕರುಣವೊ ನಿನಗೆ | ದಾಸ ಜನರಲ್ಲೀ1 ಪರಿಪರಿಯ ಭವಣೆಗಳ | ಪರಿಹರಿಸಿ ಭಕ್ತಳಿಗೆಪೊರೆಯೊ ಕರುಣಾವನಧಿ ನರಹರಿಯೇ ಸ್ವಾಮೀ |ತರತಮದ ಜ್ಞಾನ ಸ | ದ್ವೈರಾಗ್ಯ ಭಕುತಿಯನುಕರುಣಿಸೀ ಪೊರೆ ಇವಳ | ಮರುತಾಂತರಾತ್ಮ 2 ಪಂಚಾತ್ಮಕನೆ ಪ್ರಾ | ಪಂಚ ಸುಖದೊಳಗೆ ತವಸಂಚಿಂತನೆಯ ಕೊಟ್ಟು | ಕಾಪಾಡೊ ಹರಿಯೇಪಂಚಭೇದವು ಅಂತೆ | ನೀಚೋಚ್ಚ ಕ್ರಮ ತಿಳಿಸೀವಾಂಛಿತಾರ್ಥದ ಕಳೆಯೊ | ಸಂಚಿತಾಗಮವಾ 3 ಸೃಷ್ಟಾದಿಕರ್ತನೇ | ಕೃಷ್ಣ ಮೂರುತಿ ದೇವಭ್ರಷ್ಟಸಂಗವ ಕೊಡವೆ | ಶಿಷ್ಟರಲ್ಲಿಡಿಸೋ |ಇಷ್ಟ ಮೂರ್ತಿಯ ಮನದಿ | ಸ್ಪಷ್ಟ ತೋರುತ ಸಲಹೋಶಿಷ್ಟ ಜನ ಸದ್ವಂದ್ಯ | ವಿಷ್ಣು ಪ್ರಾರ್ಥಿಸುವೇ 4 ಗೋವರ್ಧನೋದ್ದರಗೆ | ಭಾವುಕರ ಪರಿಪಾಲಪಾವನಕೆ ಪಾವನನೆ | ಕಾವುದೀಕೆಯನುದೇವನೀನಲ್ಲದಲೆ | ಕಾವರನ್ಯರನ ಕಾಣೆಗೋವಿದಾಂಪತಿ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಅಹಹ ಮರುಳನಾದೆ ಸುಮ್ಮನೆ ಪೂರ್ವ ಮಹಿಮ ಹರಿಯ ಸೇವೆಯನ್ನು ಸಹಿಸಿಕೊಂಡು ಗ್ರಹದೊಳಿರದೆ ಪ. ಇಂದಿರೇಶನಿರವನರಿಯದ ಮೂರ್ಖರಾದ ಮಂದಮತಿಗಳಾದ ಕುಜನರ ಬಂದು ಸೇರಿ ಬುದ್ಧಿಹೀನರೆಂದ ನುಡಿಯ ಕೇಳಿ ಬಹಳ ಮೂರ್ತಿ ಬಿಟ್ಟು 1 ತರಣಿ ತಿಮಿರವಟ್ಟಿಲಿರುವದೆ ಸಿಂಹರಾಜ ಮರಿಯ ಕೂಡೆ ನರಿಯು ಬರುವುದೆ ಮರುಳತನದ ಭಾಗ್ಯವೆಂಬೀ ನರಕ ಪಾತ್ರರಾದ ಜನರು ಪಾದ ಪದ್ಮದಾಸ ಚರಿಯವೆಂದು ತಿಳಿವರುಂಟೆ 2 ನೀರಗುಳ್ಳೆಕಿಂತ ಲಘುತರವಾದ ಸಂಸಾರ ಸಂಬದ್ಧ ಪರಿಸರ ಸೇರಿ ಹಿಂದೆ ನಡೆದ ತಪ್ಪ ನೀರಜಾಕ್ಷ ಕ್ಷಮಿಸಿ ಮಹಾ- ದ್ವಾರದೆಡೆಗೆ ಕರಸಿಕೊಳ್ಳೊ ಭೂರಮೇಶ ವೆಂಕಟೇಶ 3
--------------
ತುಪಾಕಿ ವೆಂಕಟರಮಣಾಚಾರ್ಯ
ಅಹುದಹುದೊ ಭಕುತಭಮಾನಿ ನೀನಹುದೋ ಪ ಮಹ ಭಕ್ತಿಯಿಂ ನಿಮ್ಮ ಭಜಿಪ ಜನರಿಗೊದಗಿ ಬಹ ದು:ಖ ಪರಿಹರಿಸಿ ಸಹಾಯದಿಂ ಕಾಯುವಿ ಅ.ಪ ಮೂರು ಜಗಕೆ ಆಧಾರ ಮಾಧವನೆಂದು ಸಾರಿಭಜಿಪರ ಕಷ್ಟ ದೂರಮಾಡುವಿ ನೀ1 ಹರಿಸರ್ವೋತ್ತಮನೆಂದು ಸ್ಮರಿಪರ ಜರಾಮರಣ ತರಿದು ಪರಿಭವಶರಧಿ ಕರುಣದಿಂ ಗೆಲಿಸುವ 2 ಭಕ್ತರ ಸೌಭಾಗ್ಯ ಸತ್ಯ ಶ್ರೀರಾಮನೆಂದು ನಿತ್ಯದಿ ನೆನೆವರ್ಗೆ ಮುಕ್ತಿ ನೀಡುವಿ ನೀ 3
--------------
ರಾಮದಾಸರು
ಆ ನಮಿಪೆ ಗುರುಸಂತತಿಗೆ ಸತತ ಗೆ ಜ್ಞಾನ ಭಕ್ಯಾದಿಗಳ ಕರುಣಿಸಲಿ ಎನಗೆಂದು ಪ ಹಂಸನಾಮಕ ಹರಿ ಬ್ರಹ್ಮಗುರುವರ ಸರೋ ಜಾಸನ ಪುತ್ರರೆನಿಸಿಕೊಂಬಾ ಆ ಸನಕ ಸನಂದನ ಕುಮಾರಕರ ಶಿಷ್ಯ ದೂ ರ್ವಾಸಮುನಿ ಜ್ಞಾನನಿಧಿ ತೀರ್ಥ ಪದಾಬ್ಜಗಳಿಗೆ 1 ಗರುಡವಾಹನತೀರ್ಥ ಕೈವಲ್ಲಜ್ಞಾನೇಶ ಪರತೀರ್ಥ ಸತ್ಯ ಪ್ರಜ್ಞ ಪ್ರಾಜ್ಞರಾ ವರಕುಮಾರಕ ತಪೋರಾಜ ಸಂಯಮಿ ವಿಮಲ ಅಚ್ಯುತ ಪ್ರೇಕ್ಷರಿಗೆ 2 ಪದ್ಮನಾಭ ನರಹರಿಮುನಿಪ ಶ್ರೀ ಮಾಧವಕ್ಷೋಭ್ಯಯತಿ ಜಯಾರ್ಯ ಧೀಮಂತ ವಿದ್ಯಾಧಿರಾಜ ಸುಕವೀಂದ್ರ ನಿ ಸ್ಸೀಮ ವಾಗೀಶಯತಿ ರಾಮಚಂದ್ರಾರ್ಯರಿಗೆ 3 ವಿದ್ಯಾನಿಧಿ ರಘುನಾಥ ರಘುವರ್ಯೋತ್ತಮ ಕರ ಪದ್ಮ ಸಂಜಾತ ವೇದವ್ಯಾಸರಾ ವಿದ್ಯಾಪತಿ ಅಧೀಶನಿಧಿ ಸತ್ಯವ್ರತ ನಿಧಿಯಾ ಪಾದ ಕಮಲಗಳಿಗೆ 4 ಸತ್ಯಾಭಿನವ ಪೂರ್ಣ ಸತ್ಯವಿಜಯ ಪ್ರೀಯಾ ಸತ್ಯಬೋಧರ ಸತ್ಯಸಂಧವರರಾ ನಿತ್ಯದಲಿ ನೆನೆದು ಕೃತಕೃತ್ಯನಾಗುವೆ ಬಿಂಬ ಮೂರ್ತಿ ಜಗನ್ನಾಥವಿಠಲನ ತೋರಿಸಲೆಂದು 5
--------------
ಜಗನ್ನಾಥದಾಸರು
ಆ ನಮಿಪೆ ವಿಷ್ಣು ಶ್ರೀ ಬ್ರಹ್ಮ ವಾಯು ವಾಣಿ ಭಾರತಿ ಮುಖ್ಯರವತಾರ ಆವೇಶಕಾನಮಿಪೆ ಪ ಮತ್ಸ್ಯ ಕೂರ್ಮ ಭೂವರಹ ನರಸಿಂಹ ದಧಿ ವಾಮನ ತ್ರಿವಿಕ್ರಮ ಭೃಗುಕುಲೋದ್ಭವ ಬುದ್ಧ ಕಲ್ಕಿ ಹಯಾಸ್ಯ ನಾಮ ತಾಪಸ ಮನು ಉಪೇಂದ್ರ ಅಜಿತಾದಿಗಳಿಗಾ ನಮಿಪೆ 1 ದಾಸ ಧನ್ವಂತ್ರಿ ಹರಿ ಹಂಸ ದತ್ತಾ ವ್ಯಾಸ ಕಪಿಲಾತ್ಮಂತರಾತ್ಮ ಪರಮಾತ್ಮ ಯ ಜ್ಞೇಶ ವೈಕುಂಠ ನಾರಾಯಣಾಧ್ಯವತಾರಕಾನಮಿಪೆ 2 ನಾರಾಯಣೀ ಋಷಭ ಐತರೇಯ ಶಿಂಶು ಮಾರ ಯಜ್ಞ ಪ್ರಾಜ್ಞ ಸಂಕರುಷಣಾ ಕ್ಷಿರಾಬ್ದಿ ನಿಲಯ ಯಮನಂದನಾ ಕೃಷ್ಣ ಹರಿ ನಾರಾಯಣ ಧರ್ಮಸೇತು ರೂಪಾದಿಗಳಿಗಾನಮಿಪೆ 3 ಗುಣಗಳಭಿಮಾನಿ ಶ್ರೀ ಭೂ ದುರ್ಗ ದಕ್ಷಿಣಾಂ ಭೃಣಿ ಮಹಾಲಕ್ಷ್ಮೀ ಶ್ರೀ ವಿಷ್ಣುಪತ್ನೀ ಮಾಯಾ ಕೃತಿ ಶಾಂತಿ ಶುದ್ಧ ರು ಕ್ಮಿಣಿ ಸತ್ಯ ಸೀತಾದ್ಯಮಿತ ರೂಪಗಳಿಗಾನಮಿಪೆ 4 ಹೀನಳೆನಿಸುವಳನಂತಾಂಶದಲಿ ಸುಖ ಬಲ ಜ್ಞಾನಾದಿ ಗುಣದಿ ಮಹಾಲಕ್ಷ್ಮಿ ಹರಿಗೆ ಆನಂದ ವಿಜ್ಞಾನ ಮಯನ ವಕ್ಷಸ್ಥಳವೆ ಸ್ಥಾನವಾಗಿಹುದು ಇಂದಿರೆಗೆ ಆವಾಗ 5 ವಿಧಿ ವಿರಿಂಚಿ ಮಹನ್ ಬ್ರಹ್ಮ ಸೂತ್ರ ಗುರು ಮಹಾಪ್ರಭು ಋಜ ಸಮಾನ ವಿಜ್ಞ ಪ್ರಾಜ್ಞ ಹರಿಭಕ್ತಿ ಮೇಧಾವಿ ಮುಕ್ತಿ ಧೃತಿ ಅಮೃತನಿಗೆ 6 ಸ್ಥಿತಿ ಯೋಗ ವೈರಾಗ್ಯ ಚಿಂತ್ಯ ಬಲಸುಖ ಬುದ್ಧಿ ವಿತತಾದಿ ಗೋಪ ಹನುಮ ಭೀಮ ವೃಷಿವರಾನಂದ ಮುನಿ ಮೊದಲಾದ ರೂಪಶ್ರೀ ಪತಿಗಧಿಷ್ಟಾನ ಕೋಟಿಗುಣಾಧಮರು ರಮೆಗೆ ಆ ನಮಿಪ 7 ಸರಸ್ವತಿ ಗಾಯತ್ರಿ ಬುದ್ಧಿ ವಿದ್ಯಾ ಪ್ರೀತಿ ಗುರುಭಕ್ತಿ ಸರ್ವ ವೇದಾತ್ಮಿಕ ಭುಜಿ ಪರಮಾನು ಭೂತಿ ಸಾವಿತ್ರಿ ಸು ಸುಖಾತ್ಮಿಕಾ ಪತಿ ನಾಮಗಳಿವೆಂದರಿದು 8 ಶಿವಕನ್ಯ ಇಂದ್ರಸೇನಾ ಕಾಶಿಜಾ ಚಂದ್ರ ಯುವತಿ ದ್ರೌಪದಿಯು ಭಾರತಿ ರೂಪವು ಪವಮಾನ ಬ್ರಹ್ಮರಿಗೆ ಶತಗುಣಾಧಮ ಸದಾ ಶಿವನ ರೂಪಗಳ ಈ ಪರಿಯ ಚಿಂತಿಸುತ 9 ತತ್ಪುಮಾನ್ನೂಧ್ರ್ವಪಟ ದುರ್ವಾಸ ವ್ಯಾಧ ಅ ಶ್ವತ್ಥಾಮ ಜೈಗೀಷವ್ಯ ತಪ ಅಹಂಕ್ರತು ಶುಕ ವಾಮದೇವ ಗುರು ಮೃತ್ಯುಂಜಯೋರ್ವ ಸದ್ಯೋಜಾತ ತತ್ಪುರುಷಗಾನಮಿಪೆ 10 ನರ ವಯು ಶುಕಕೇಶವೇಶ ಬಲಗೆ ಸಂ ಕರುಷಗಾವೇಶ ಲಕ್ಷ್ಮಣದೇವಗೆ ಗರುಡ ಶೇಷಾಘೋರ ಸಮರು ಶತಗುಣದಿಂದ ಕೊರತೆಯೆನಿಸುವರು ಮೂವರು ವಾಣಿ ದೇವಿಗೆ 11 ಶೇಷಗೆ ಸಮಾನನೆನಿಪಳು ಜಾಂಬವತಿ ರಮಾ ವೇಶ ಕಾಲದಿ ಷಣ್ಮಹಿಷಿಯರ ಒಳಗೆ ಹ್ರಾಸಕಾಲದಿ ಸಮಳು ಐವರಿಗೆ ಜಾಂಬವತಿ ವೀಶಾದ್ಯರಿಗೆ ಹರಿ ಸ್ತ್ರೀಯರ ಸಮರೈದುಗುಣ12 ರೇವತಿ ಶ್ರೀಯುತ ಶ್ರೀ ಪೇಯ ರೂಪತ್ರ ಯಾವಕಾಲದಿ ವಾರುಣಿಗೆ ಪಾರ್ವತೀ ದೇವಿ ಸೌಪರಣಿಗೆ ಸಮ ಷಣ್ಮಹಿಷಿಯರಿಗೆರಡು ಮೂವರೀರೈದು ಗುಣ ಕಡಿಮೆ ಪತಿಗಳಿಗೆ 13 ಕುಶ ವಾಲಿ ಗಾಧಿ ಮಂದ್ರದ್ಯುಮ್ನನು ವಿಕುಕ್ಷಿ ಶ್ವಸನ ಹರಿ ಶೇಷ ಸಂಯುಕ್ತಾರ್ಜುನಾ ಅಶನೀಧರನ ಸುರೂಪಂಗಳಿವು ಮನ್ಮಥನ ನಿತ್ಯ 14 ಪ್ರದ್ಯುಮ್ನ ಸಂಯುಕ್ತ ರುಕ್ಮಿಣೀ ದೇವಿ ಸುತ ಪ್ರದ್ಯುಮ್ನ ಭರತನು ಸನತ್ಕು ಮಾರಾ ಸಾಂಬ ಸ್ಕಂಧ ಸುದರುಶನ ರುದ್ರ ನಾರ್ಧಾಂಗಿನಿಗೆ ದಶಗುಣಾಧಮರೆಂದು15 ಭವ ಪ್ರಾಣ ನಾಮರಗೆ ರೂಪ ಸರ್ಮೋತ್ತುಂಗನು ಕಾಮ ಪುತ್ರಾನಿರುದ್ದಾದಿಗಳು ದಶ ಹೀನ ಈ ಮಹಾತ್ಮರ ದಿವ್ಯ ಅವತಾರರೂಪಗಳಿಗಾನಮಿಪೆ 16 ಪ್ಲವಗ ಬ್ರಹ್ಮಾಂಶಯುಗ್ದೋಣ ಮಾರುತಾವೇಶ ಸಂಯುತ ವುದ್ಧವಾ ಮುರು ರೂಪವು ಬೃಹಸ್ಪತಿಗೆ ಪ್ರದ್ಯುಮ್ನನ ಕು ಮಾರಾನಿರುದ್ಧ ಶತೃಘ್ನ ಅನಿರುದ್ಧನಿಗೆ 17 ತಾರ ಚಿತ್ರಾಂಗದ ಶಚಿ ರೂಪ ಲಕ್ಷುಣ ಈ ರುಗ್ಮವತ್ರಿ ಎರಡು ರತಿರೂಪವು ಆರುಜನ ದಕ್ಷ ಸ್ವಯಂಭುವ ಮನು ಪ್ರಾಣ ಗಿರೈದು ಗುಣಗಳಿಂದಧಮರೆಂದರಿದು 18 ಭೂತಾಭಿಮಾನಿ ಪ್ರವಹ ಪಂಚಗುಣದಿ ಪುರು ಹೊತ ಪತ್ನ್ಯಾದಿಗಳಿಗಧಮನೆನಿಪ ಈತಗವತಾರವಿಲ್ಲವನಿಯೊಳು ಚಂದ್ರ ಪ್ರ ದ್ಯೋತನಾಂತಕ ಸ್ವಯಂಭುವ ಪತ್ನಿ ಶತರೂಪಿ 19 ಸತ್ಯಜಿತ ಜಾಂಬವಾನ್ ವಿದುರ ಗುರು ವಾಯು ಸಂ ಯುಕ್ತ ಧರ್ಮಜ ಯಮಗೆ ರೂಪ ನಾಲ್ಕು ರಾತ್ರಿ ಚರನವತಾರ ಯಿಂದ್ರ ಯುಕ್ತಾಂಗದಾ ದಿತ್ಯ ನವತಾರ ಬ್ರಹ್ಮ ವಿಷ್ಟ ಸುಗ್ರೀವ 20 ಹರಿಯುಕ್ತ ಕರ್ನ ಮನು ಪತ್ನಿ ಶತರೂಪ ನಾ ಲ್ವರು ಸಮರು ಪ್ರವಹಗಿಂದೆರಡು ಗುಣದೀ ಕೊರತಿ ಮಹ ಭಿಷಕು ಮಂಡೂಕ ಶಂತನು ಸುಶೇ ಪಾದ ಪಾದಾರ್ಧಿಕಾನಮಿಪೆ21 ನಾರದಾಧಮ ವರುಣಗಿಂತಗ್ನಿ ಅವ ತಾರ ದೃಷ್ಟದ್ಯುಮ್ನ ಲವ ನೀಲರೂ ಪಾದ ಗುಣದಾಧಮರು ಎಂದು22 ಅಂಗೀರ ಪುಲಸ್ತ್ಯಾತ್ರಿ ಪುಲಹನು ಮರೀಚಿ ಮುನಿ ಪುಂಗವ ದಶಿಷ್ಠ ಕೃತು ಬ್ರಹ್ಮ ಸುತರೂ ತುಂಗ ವಿಶ್ವಾಮಿತ್ರ ವೈವಸ್ವತರು ಸದಾ ಕೆಂಗದಿರಗಧಮರೊಂಭತ್ತು ಜನರೆಂದು 23 ಸಪ್ತ ಋಷಿಗಳಿಗೆ ಸಮನೆನಿಪ ವೈವಸ್ವತನು ಲುಪ್ತವಾಗಲು ಕಡಿಮೆಯೆನಿಪ ಪ್ರಾವಹ ತಾರ ಕ್ಲುಪ್ತ ಒಂದೇ ರೂಪ ಕೃಪೆಯೆಂದು ಕರೆಸುವಳಿಗಾನಮಿಪೆ24 ಹರನಾವೇಶಯುತ ಘಟೋತ್ಕಚ ದುರ್ಮಖನು ನಿಋಋತಿ ಕರೆಸುವನು ರಾಹು ಯುಗ್ಭೀಷ್ಟಕ ನೃಪಾ ನರೆ ಮಿತ್ರ ನಾಮಕನ ರೂಪ ನಾಲ್ವರು ಅಗ್ನಿ ಗೆರಡು ಗುಣದಿಂಧಮರೆನಿಪರೆಂದೆಂದು 25 ಮಾರಾರಿಯುಕ್ತ ಭಗದತ್ತ ತತ್ತನÀಯ ಕು ಬೇರಗೆರಡವತಾರ ವಿಘ್ನೇಶಗೆ ಚಾರುದೇಷ್ಣನು ಒಂದೆ ಇಂದ್ರನಾವೇಶಯುತ ಆರುರೂಪಗಳುಳ್ಳ ನಾಸತ್ಯ ದಸ್ರರಿಗೆ 26 ವಿವಿಧÀ ಮೈಂದ ತ್ರಿಸಿಖ ನಕುಲ ಸಹದೇವ ವಿಭು ಅವತಾರ ಅಶ್ವಿನೀ ದೇವತೆಗಳ ಲವಣಾದಿ ಷಡ್ರಸಗಳೊಳಗಿದ್ದು ಜೀವರಿಗೆ ವಿವಿಧ ಭೋಗಗಳಿತ್ತು ಸಂತೈಪರೆಂದೆಂದು 27 ದ್ರೋಣಾರ್ಕ ದೋಷಾಗ್ನಿ ಧ್ರುವ ವಿಭಾವಸು ವಸ್ತು ಪ್ರಾಣಾಷ್ಟ ವಸುಗಳೊಳಗೆ ದ್ಯುನಾಮಕ ವಾಣೀಶಯುಕ್ತ ಭೀಷ್ಮನು ನಂದಗೋಪಾಲ ದ್ರೋಣನಾಮಕ ಪ್ರಧಾನಾಗ್ನಿಗಿಂದಧಮರೆಂದಾ ನಮಿಪೆ 28 ಭೀಮರೈವತ ವೋಜಜ್ಯೆಕಪಾದ ಹಿರ್ಬದ್ನಿ ಭವ ವಾಮ ಬಹುರೂಪೋಗ್ರಜ ವೃಷಾಕಪಿ ಈ ಮಹನ್ನೆಂಬ ಹನ್ನೊಂದು ರುದ್ರರು ಭೂರಿ ನಾಮಕ ಜೈಕ ಪಾದಹಿರ್ಬದ್ನಿ ಭೂರಿಶ್ರವಗಾನಮಿಪೆ29 ತ್ರ್ಯಕ್ಷನುಳಿಧತ್ತು ರುದ್ರರು ಸಮರು ಶಲ್ಯ ವಿರು ಪಾಕ್ಷನವತಾರ ಕೃಪ ವಿಷ್ಕಂಭುನೂ ಅಕ್ಷೀಣಬಲ ಪತ್ರತಾಪಕ ಸಹದೇವ ರಕ್ಷಘ್ನ ಸೋಮದತ್ತನು ಎನಿಸುತಿಹಗೆ 30 ವಿರೂಪಾಕ್ಷ ವಿಷ್ಕಂಭ ಪತ್ರತಾಪಕ ಮೂರು ಹರನ ರೂಪಾಂತರಗಳಿವು ವಿವಸ್ವಾನ್ ಅರಿಯಮ ಪೂಷ ಭಗ ಸವಿತು ತೃಷ್ಟಾಧಾತ ವರುಣ ಶಕ್ರೋರುಕ್ರಮನು ಮಿತ್ರ ಪರ್ಜನ್ಯಗಾನಮಿಪೆ 31 ಶೌರಿನಂದನ ಭಾನು ಸವಿತ್ರ ನಾಮಕ ಸೂರ್ಯ ವೀರಸೇನನು ಯಮಾವಿಷ್ಟ ತ್ವಷ್ಟಾ ಆರುಜನ ರುಕ್ತರೆನಿಪರು ವುರುಕ್ರ್ರಮ ಶಕ್ರ ವಾರಿಧಿ ವಿವಸ್ವಾನ್ ಮಿತ್ರ ಪರ್ಜನ್ಯರಿಗೆ 32 ಪ್ರಾಣ ನಾಗ ಪಂಚಕ ಅಹಂಕಾರಿಕ ಪ್ರಾಣ ಪ್ರವಹ ನಿವಹ ಸಂವಹ ಸ್ವಹಾ ಕಾಲ ಶ್ವಾಸ ಏ ಕೋನ ಪಂಚಾಶನ್ ಮರುದ್ಗಣಸ್ಥರು ಎಂದು 33 ಶ್ವೇತ ಶಂ ಹನುಮ ಭೀಮ ಯತಿವುದಿತ ಕಾಮ ಜಡಪಿಂಗ ಕಂ ಪನ ವೃದ್ವಹ ಧನಂಜಯ ದೇವದತ್ತರಿಗೆ 34 ಶುಕ್ರ ಶಂಕು ಗುರು ಕಾಂತ ಪ್ರತಿಭ ಸಂವರ್ತಕನು ಪಿಕ ಕಪಿಗಳಿವರು ಮುರುತರು ಸಮೀರಾ ಯುಕುತ ಪಾಂಡು ವರಾಹನು ಎನಿಪ ಸಂಪಾತಿ ಕೇಸರಿ ಶ್ವೇತ ಮರುತನವತಾರ ವೆಂದಾನಮಿಪೆ35 ಪ್ರತಿಭವಂಶನು ಚೇಕಿತಾನೆಂದೆನಿಪ ವಿ ಪ್ರಥು ಸೌಮ್ಯ ಕುಂತೀಭೋಜನೆ ಕೂರ್ಮನು ಕ್ಷಿತಿ ಯೊಳಗೆ ಪ್ರಾಣಪಂಚಕರೊಳು ಪ್ರಾಣ ಗಜ ಅಥ ಗವಾಕ್ಷಾಪಾನ ವ್ಯಾನ ಗವಯನು ಎಂದು 36 ವೃಷನು ಸರ್ವತ್ರಾತನು ವುದಾನಗಂಧ ಮಾ ದ ಸಮಾನನರಿವರು ವಿತ್ತಪನ ಸುತರು ಶ್ವಸನಗಣದೊಳು ಕಿಂಚಿದುತ್ತ ಮರಹಂ ಪ್ರವಹ ಗಸಮರೆನಿಪರು ಪ್ರಾಣ ಪಂಚಕರು ಎಂದೂ 37 ಪ್ರತಿ ವಿಂಧ್ಯ ಧರ್ಮಜನ ಭೀಮಸೇನನ ಪುತ್ರ ಶೃತಸೋಮ ಅರ್ಜುನಜ ಶೃತಕೀರ್ತಿಸಾ ಶತಾನೀಕÀನ ಕುಲಜ ಸಹದೇವಾತ್ಮಜನು ಶೃತಕರ್ಮರಿವರು ದ್ರೌಪದಿ ದೇವಿಗಾತ್ಮಜರಿಗಾನಮಿಪೆ38 ಚಿತ್ರರಥ ಅಭಿಪೌಮ್ರಬಲ ಕಿಶೋರ ಗೋಪಾಲ ರುತ್ತಮರು ಗಂಧರ್ವರೈವರಿಂದ ಯುಕ್ತರಾಗಿಹರು ಕೈಕೇಯರೈವರು ಪಾಂಡು ಪುತ್ರಜರು ವಿಶ್ವದೇವತೆಗಳಿವರೆಂದು39 ಕಾಲ ಕಾಮಲೋಚನದಕ್ಷ ಕೃತು ಪುರೂ ರವ ಸತ್ಯ ವಸು ಧುರಿಗಳಿವರು ವಿಶ್ವೇ ಋಭು ಗುಣ ಪಿತೃತ್ರಯ ದ್ಯಾವ ಅವನಿಪರು ಗಣಪಾದ್ಯರಧಮ ಮಿತ್ರನಿಗೆಂದು 40 ವಸುಗಳೆಂಟಾದಿತ್ಯರೀರಾರು ಒಂದಧಿಕ ದಶರುದ್ರಗಣ ಪಿತೃತ್ರಯ ಬೃಹಸ್ಪತೀ ವಿಶ್ವ ದೇವ ಅಶ್ವಿನಿಗಳೆರಡೈವತ್ತು ಶ್ವಸನಗಣರು ಋಭುವೊಂದು ಎರಡು ದ್ಯಾವಾಪೃಥವಿ 41 ಒಂಭತ್ತು ಕೋಟಿ ದೇವತೆಗಳೊಳು ನೂರು ಜನ ಅಂಬುಜಾಪ್ತರ ಒಳಗುರುರುಕ್ರಮನುಳಿದು ಪದ್ಮ ಸಂಭವನ ಸಹರಾಗಿಹರು ಶತಸ್ಥರಿಗೆ 42 ಮರುತತ್ರಯರು ವನಿಯಮ ಸೋಮ ಶಿವದಿವಾ ಕರರಾರು ರುದ್ರ ಗುರು ಇವರುಕ್ತರೂ ಉರವರಿತ ಎಂಭತ್ತೈದು ಸಮರು ತಮ್ಮೊಳಗೆ ಸರಸಿಜೋದ್ಭವನ ಸುತರೆನಿಪ ಸನÀಕಾದಿಗಳಿಗಾನಮಿಪೆ43 ಸನಕಾದಿಗಳೊಳುತ್ತಮ ಸತತ್ಕುಮಾರ ಶಿಖಿ ತನುಜ ಪಾವಕನು ಪರ್ಜನ್ಯನು ಮೇಘಪ ಎನಿಸುವನು ಶರಭವೊಂದೇರೂಪ ಧರ್ಮರಾ ಜನ ಪತ್ನಿ ದೇವಕಿಯು ಶಾಮಲೆಯ ರೂಪವೆಂದಾ ನಮಿಪೆ44 ಯಮ ಭಾರ್ಯ ಶಾಮಲಾ ರೋಹಿಣಿದೇವಿ ಚಂ ದ್ರಮನ ಸ್ತ್ರೀ ಅನಿರುದ್ಧದೇಹಿ ಉಷಾ ದ್ಯುಮಣಿ ಭಾರ್ಯಾ ಸಂಜ್ಞ ಗಂಗಾ ವರುಣ ಭಾರ್ಯ ಸುಮರಾರು ಜನರು ಪಾವಕಗೆ ಕಿಂಚಿದಧಮರೆಂದಾ ನಮಿಪೆ45 ಪರ್ಜನ್ಯ ಈ ರೆರಡು ವನ್ಹಿಗೆ ಕಡಿಮೆ ಪಾದಮಾನೀ ಸುರಪನಂದನ ಜಯಂತನು ಪ್ರಹಲ್ಲಾದ ಈ ರ್ವರು ಮುಖ್ಯರಧಮ ಪರ್ಜನ್ಯಗೆಂದೆಂದು 46 ಎರಡು ಗುಣ ಪರ್ಜನ್ಯಗಿಂದಧಮಳು ಸ್ವಹಾ ರೆರಡಧಿಕ ಗುಣದಿ ಸ್ವಪತಿಗೆ ನೀಚಳೂ ಹರಿ ಶಕ್ರಸತಿ ಅಶ್ವಿ ಯುಕ್ತಾಭಿಮನ್ಯು ಚಂ ದಿರಜ ಬುಧನವತಾರ ಸ್ವಾಹಾ ದೇವಿಗಧಮಳೆಂದಾ ನಮಿಪೆ 47 ಎನಿಸುವಳು ಶಲ್ಯ ಜರಾಸಂಧನಾತ್ಮಜಾ ಶ್ವಿನಿ ಭಾರ್ಯಾನಾಮಾಭಿಮಾನಿ ಉಷಾ ಘನರಸಾಧಿಪ ಬುಧಗೆ ಕಿಂಚಿದ್ಗುಣ ಕಡಿಮೆ ಅವಳ ಪತ್ನಿಗೆ ದಶಗುಣಾಧಮಳುಯೆಂದು 48 ಧರಣಿಗಭಿಮಾನಿ ಎನಿಸುವ ಸೂರ್ಯಸುತ ಶನೇ ಶ್ವರ ಉಷಾದೇವಿಗೆರಡು ಗುಣಾಧಮ ತರಣಿ ನಂದನಗೆ ಸತ್ಕರ್ಮಾಭಿಮಾನಿ ಪು ಷ್ಕರ ಕಡಿಮೆ ಪಂಚಗುಣದಿಂದ ಎಂದೆಂದು 49 ನಾರದನ ಶಿಷ್ಯ ಪ್ರಹ್ಲಾದ ಬಾಲ್ಹೀಕ ಸ ಮೀರ ಸಂಯುಕ್ತ ಸಹ್ಲಾದ ಶಲ್ಯಾ ಮೂರನೆಯನುಹ್ಲಾದ ಸವಿತ್ರನಾವೇಶದಲಿ ತೋರಿದನು ದೃಷ್ಟಕೇತು ಎನಿಸಿ ಧರೆಯೊಳಗೆ 50 ತಾಮಾಂಶಯುಗ್ ಜಯಂತನು ಬಭ್ರುವಹ ವರು <ಈ
--------------
ಜಗನ್ನಾಥದಾಸರು
ಆ ವೆಂಕಟಗಿರಿನಿಲಯನಂಘ್ರಿ ರಾ ಜೀವಯುಗಳಗಾನಮಿಸುವೆನು ಪ ಸೇವಿಪ ಜನರಿಗಮರ ತರುವೆನಿಸಿ ಧ ರಾವಲಯಾಖ್ಯ ದಿವಿಯೊಳೆಸವ ಅ.ಪ. ನಿಖಿಳ ಜಗತ್ತಿಗೆ ಪಾವನತರವೆಂದೆನಿಸುವುದು ಶ್ರೀ ವಿಧಿಭವ ಶಕ್ರಾದ್ಯರು ಆವನ ಸೇವಕ ಸೇವಕರೆನಿಸುವರು ತಾ ಉತ್ತಮ ಪುರುಷನೆನಿಸಿ ಜಗವ ಸ ದಾವಕಾಲ ಸಂತೈಸುವನು ಜೀವಾಂತರ್ಗತನಾಗಿ ವಿವಿಧ ವೇ ದಾವಳಿಯಿಂದ ತುತಿಸಿ ಕೊಂಬಾ 1 ಪಾತನೊಳಹಿಪ ವಿರೋಧಿಸೆ ತವಸ ತ್ವಾತಿಶಯನ ತೋರೆಂದೆನುತಾ ಜಾತರೂಪ ಶೈಲಾತ್ಮಜನಪ್ಪಿರೆ ವೀತಿ ಹೋತ್ರ ಸಖ ಕಿತ್ತೊಗೆಯೆ ವೀತ ಕರ್ನನಳವಳಿದು ವೇಗ ಧಾತ ಮಹಿಳೆ ತೀರ್ಥದಿ ಭೂ ಲಕ್ಷ್ಮೀಸ ಮೇತನಾಗಿ ಮೋದಿಸುತಿಪ್ಪೆ 2 ಭೂಸುರನೊರ್ವನು ತೊಂಡಮಾನ ಧರ ಣೀಶÀನ ನಿಲಯದೊಳುಳುಹಿ ಸತಿಯ ನೃಪತಿ ಮರೆಯೆ ನಿ ಶ್ವಾಸ ವನೈದಿದಳಾ ಸತಿಯು ಆ ಸಮಯದಿ ದ್ವಿಜವರ್ಯನು ಬೆಸಗೊಳೆ ಕ್ಲೇಶದಿ ಭೂಮಿಪ ಸಂಸ್ತುತಿಸೆ ಕೇಶವ ತಾನಸ್ಥಿಗಳ ತರಿಸಿ ಸು ವಾಸಿನಿ ಶಿಶು ಸಹ ಒಲಿದಿತ್ತಾ 3 ವೃದ್ಧ ಬ್ರಾಹ್ಮಣನು ತುತಿಸೆ ಸಲಿಲದೊಳ ಗದ್ದಿ ಕುಮಾರತ್ವವನಿತ್ತ ಅಧ್ವರವೆಸಗಿದ ಋಷಿಗಳ ಮಂತ್ರದ ಪದ್ದತಿ ತಿದ್ದಿಯಜ್ಞವ ಮಾಡ್ದ ಮಧ್ಯರಾತ್ರಿಯೊಳು ಬೆಸಗೊಂಡ ನೃಪನು ಪದ್ರವ ಕಳೆದಾಯುಧವಿತ್ತು ಮೃದ್ಭಾಂಡವ ರಚಿಸುವನಿಗೊಲಿದವನ ಚೋದ್ಯ ತೋಂಡಮಾನಗೆ ತೋರ್ದ 4 ಸಂಚಿತ ಕುಕರ್ಮಗಳ ಮನೆಯ ಮುರಿದು ಆಗಾಮಿ ಫಲಂಗಳ ಅನುಭವಕೀಯದೆ ಪ್ರಾರಬ್ದಾ ಮೂರ್ತಿ ಚಿಂ ತನೆ ಇತ್ತು ಸ್ವರೂಪಸುಖಾ ಅನುದಿನದಲಿ ವ್ಯಕ್ತಮಾಡಿಸಿ ಕೊ ಟ್ಟನಿಮಿತ್ತಾಪ್ತನೆನಿಸುತಿಪ್ಪ 5 ಏಕಮೇವ ರತ್ನಾಕರ ಮಂದಿರ ಆಕೂತಿಜ ಯಜ್ಞಾಕರನೇ ಲೊಕವಿಲಕ್ಷಣ ಸೂಕರಾತ್ಮ ಪಿ ವಿನುತ ಲಕ್ಷ್ಮೀ ಕಾಂತಾ ಗೋಕುಲ ಮಂದಿರ ಏಕಾಂತಿಗಳ ನಿ ರಾಕರಿಸಿದೆ ಲೋಕೈಕ ಸುಖ ಶೋಕ ರಹಿತ ನಿಜಲೋಕವಿತ್ತು ನಿ ರಾಕುಲ ಸುಖಗಳ ತಾ ಕೊಡುವಾ 6 ದಿನಪನೊಳಗೆ ವೃಜಿನಿ ವಸು ತಾ ಎಂ ದೆನಿಸಿ ಜಯಾಪತಿ ಪ್ರದ್ಯುಮ್ನ ಅನಿರುದ್ಧಾದಿ ಚತುರ್ಮೂತ್ರ್ಯಾತ್ಮಕ ತನಗೆ ತಾನೆ ಪೂಜಕ ಪೂಜ್ಯ ಅನುಪಮ ನಾಮದಿ ಕರೆಸುತಲಿಹ ತ ನ್ನನು ಈ ಪರಿಧೇನಿಸುತಿಪ್ಪ ಮನುಜರಿಗೊಲಿದು ಜಗನ್ನಾಥವಿಠ್ಠಲ ಜನನ ಮರಣಗಳ ಪರಿಹರಿಪಾ 7
--------------
ಜಗನ್ನಾಥದಾಸರು
ಆಟವಾಡಬೇಕು ಒಳ್ಳೆ ಊಟಮಾಡಬೇಕು ಪ ಆಟ ಬಲ್ಲ ಮಾನವನಿಗೆ ರೋಗದ ಕಾಟವಿರದೆ ತಾ ಊಟ ಮಾಡುವನು ಅ.ಪ ಪಂಡಿತರಾಗಿ ಅಖಂಡ ಕಲೆಗಳನು ಚಂಡಿನಂತೆ ಕರತಲದಲಿ ಪಿಡಿಯುತ 1 ಕಣ್ಣಮುಚ್ಚಿ ಇಂದ್ರಿಯಗಳ ನಿಲ್ಲಿಸಿ ಹೃನ್ಮಂದಿರದಲಿ ಹರಿಯನು ಹಿಡಿಯುವ 2 ಈಶ ಜೀವ ಜಡರೆಂಬೊ ಮೂವರಲಿ ಈಶನೇ ಹಾಸೆಂದರಿಯುತ ಮೂರೆಲೆ 3 ಹಿಂದಿನ ದಿನ ಹರಿದಿನ ಮರುದಿನಗಳು ಇಂದಿರೆಯರಸನ ಕೂಡಿ ಏಕಾದಶಿ 4 ಸಿಕ್ಕಿದ ಸ್ಥಾನವು ದಕ್ಕದೆಂಬುದಕೆ ಭಕ್ತ ಪ್ರಸನ್ನ ತೋರಿದ ಕೊಕ್ಕಿನ5
--------------
ವಿದ್ಯಾಪ್ರಸನ್ನತೀರ್ಥರು
ಆಡುವರೇಚಕ ಪೂರಕ ನಂದಿಯ | ಜೋಡಿಸಿ ಎರಡನು ಮೆರೆವಸುಷಮ್ನಿಯ | ನಾಡಿಯ ರಥಿಕರ ಹೂಡುತ ಮೆಲ್ಲನೆ | ನಿಜಮನ ಸಾರಥಿಯಾ | ಕೂಡಿಸಿ ಹರುಷಲೇರಿ ನಡೆಸುತ ಸ | ವಾಡಿಕಿಯಿಂದಲಿ ಮೇಲ್ಗುರಿಯಾತ್ರೆಯ | ಮಾಡಿ ವಿಲಾಸದಲಾಡಿದ ಮಹಿಪತಿ | ಗುರುಮೂರ್ತಿಗೆ ಶರಣು
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆತ್ಮನಿವೇದನಾ ಸ್ತುತಿಗಳು ಅಗಲಿಸದಿರು ಎನ್ನನು ನಿನ್ನ ಬಿಟ್ಟಗಲಿಸದಿರು ಎನ್ನನು ಪ ಅಗಣಿತ ನಿಗಮಗೋಚರ ನಿನ್ನ ಪಾದವ ಬಿಟ್ಟು ಅ.ಪ ವ್ಯಾಕುಲವನು ಬಿಡಿಸಿ ಅನೇಕ ಸೇವೆಗಳಿತ್ತು ಲೋಕನಾಯಕ ಎನ್ನ ಸಾಕಿಸಲಹಿಕೊ 1 ನಿತ್ಯ ಸಂಸಾರವನು ರಂಗಯ್ಯ ನಾ ಸತ್ಯವೆಂದು ತಿಳಿದು ಸತ್ಯಮೂರುತಿ ನಿಮ್ಮ ಪಾದಪದ್ಮದ ಭಕ್ತಿ ಹತ್ತದೆ ಈ ಮನಸು ವ್ಯರ್ಥವಾಯಿತು ದೇವ 2 ತಂದೆತಾಯಿಯು ನೀನೆ ರಂಗಯ್ಯ ಬಂಧುಬಳಗವು ನೀನೆ ಆ ನಂದದಿಂದಲೆ ರಕ್ಷಿಪ ಜಗತ್ಪತಿ ನೀನೇ ಬಂಧನವನು ಬಿಡಿಸಿ ಮುಕ್ತಾನಂದವ ತೋರಿಸು 3 ವಾಸವ ಮಾಡಿಸಿಲ್ಲಿ ರಂಗಯ್ಯ ಘಾಸಿಯ ಪಡಿಸದೆ ಅನಾ ಯಾಸದ ಮರಣವನಿತ್ತು ಎನಗೆ ವಸುದೇವನೆ ನಿಮ್ಮ ಪಾದವಾಸವ ಮಾಡಿಸು 4 ನಿಂದೆನ್ನ ಹೃದಯದೆ ವಾಸಮಾಡಿ ಆ ನಂದದಿಂದಲೆ ರಕ್ಷಿಸು ವೆಂಕಟರಂಗ 5
--------------
ಯದುಗಿರಿಯಮ್ಮ
ಆತ್ಮನಿವೇದನೆ ಅಚಿಂತ್ಯಾದ್ಭುತ ಮಹಿಮ ಈ ಸಚರಾಚರದೊಳು ಪ್ರಚುರನಾಗಿಹೆ ದೇವಾ ಮುಚುಕುಂದವರದಾ ಪ ಅಚಲಭಕುತಿಯು ನಿನ್ನ ಚರಣದಿ ಕಿಂಚಿತಾದರೂ ಪ್ರಚುರಮಾಡಿಸು ಅತಿಚಂಚಲನು ಬಲು ವಂಚಕನು ನಾ ಅನು- ಚಿತೋಚಿತ ಕರ್ಮವರಿಯೆನೋ ಅ.ಪ ವಿಪಿನವಾಸದಿ ಎನಗೆ ವಿಪರೀತವನು ತೋರಿ ಅಪರಾಧವೆಣಿಸದೆ ಪಾಲಿಸಿದೇ ಕೃಪಣವತ್ಸಲ ನೀನೇ ಕೃಪೆಮಾಡಿ ಸ್ವಪನದಿ ಅಪರಿಮಿತದ ವಿಶ್ವರೂಪವ ನೀ ತೋರ್ದೆ ಅಪರಾಧಿ ನಾನಹುದೋ ಸ್ವಾಮಿ ಅಪವರ್ಗಪ್ರದನು ನೀನು ಸಫಲಗೊಳಿಸಿದೆ ಎನ್ನ ಮನದನು- ತಾಪವನು ಪರಿಹರಿಸಿ ಕಾಯ್ದೆ ನಿನ್ನಡಿದಾವರೆಯ ನಂಬಿದೆನೋ ಶ್ರೀ ಪರಮಹಂಸರಿಂದ ನುಡಿಸಿದ ರಹಸ್ಯಗಳು ಅದುಏನೋ ಶ್ರೀ ಪುರುಷೋತ್ತಮನೆ ನೀನೆನ್ನಭಯಹಸ್ತದಿ ಕರೆದ ಪರಿಯೇನೋ ಅದನೊಂದನರಿಯೆನೊ ಈಪರಿಯ ಕರಚರಣದಲಿ ಚರಿಸಿದ ಅನುಪಮ ಕ್ರಿಯೆಯ ನೋಡಿ ಮನದೊಳು ಸುಪುತಕಾಲದಿ ತೈಜಸನೆ ನೀನೆನ್ನ ಪುಳುಕಾಂಕಿತನ ಮಾಡಿದೇ 1 ಅಮಿತ ಕಾರ್ಯವನೆಸಗೀ ಬಲು ಯಾತನೆಗೊಂಡು ಇಳೆಯೊಳು ಬಾಳೀ ದು- ರ್ಬಲನಾಗಿದ್ದರು ಎನ್ನ ಛಲವು ತೊಲಗಲಿಲ್ಲ ಜಲಜನಾಭನೆ ನೀನೆ ಕರುಣಿಸಿ ಸಲಹದಿರ್ದೊಡೆ ಪ್ರ- ಬಲರೆನ್ನನು ಕವಿದು ಮನಚಂಚಲವ ಪುಟ್ಟಿಸೀ ವಲೀಮುಖನಂತಾಡಿಸುವರೋ ಕಲಿಮಲವನ್ನೆ ಪರಿಹರಿಸುವುದೋ ಮನದಿ ಎಡೆಯು ದುರ್ಲಭವೋ ಒಲುಮೆಯಿಂದಲಿ ಸಾಧಿಸಲು ಎಲ್ಲೆಡೆಯ ಸರ್ವತಂತ್ರ ಸ್ವಾತಂತ್ರ್ಯ ನಿನ್ನದೋ ಭೋ ಜಗತ್ಪತೇ ಕಾಲನಾಮಕ ನೀನೆ ಆಪತ್ಕಾಲಬಾಂಧವವೆಂದು ನಂಬಿದೆ ಜಾಲಮಾಡದೆ ಎನ್ನ ಜೀವಿತದಲ್ಪಕಾಲದಿ ಕರುಣೆ ತೋರೈ2 ತುಷ್ಟನೆಂತಾಗುವೆಯೊ ಭ್ರಷ್ಟಪಾತಕಿ ನಾನು ಕಷ್ಟವಲ್ಲವೋ ನಿನಗೆ ಶ್ರೇಷ್ಟಮೂರುತಿಯೆ ಇಷ್ಟಮೂರುತಿಯೆಂದು ಇಷ್ಟು ನುಡಿದೆನೊ ಸಾಷ್ಟಾಂಗ ನಿನ್ನೊಳು ಇರಲೋ ಇಷ್ಟೇ ಎನ್ನದೊ ದೇವಾ ಕಷ್ಟಕಷ್ಟವೊ ಬೆಟ್ಟದೊಡೆಯ ಕೊಟ್ಟುದಷ್ಟು ನಿನ್ನದಯ್ಯಾ ಇಷ್ಟೆಬೇಡುವೆ ಎನಗೆ ಎ- ಳ್ಳಷ್ಟು ಭಕುತಿಯ ಕೊಡದಿರುವೆಯಾ ಸೃಷ್ಟಿಸ್ಥಿತಿಲಯನಿಯಮನಾದ್ಯಷ್ಟ ಕತೃತ್ವವು ನಿನ್ನದೊ ಅಷ್ಟಾಂಗಯೋಗದಿ ತುಷ್ಟಪಡಿಸೆ ತನುಮನೋಧಿಷ್ಟಾನವು ನಿನ್ನದೊ ಶ್ರೇಷ್ಠಮೂರುತಿ ಸುಲಭದಲಿ ನೀ ದೃಷ್ಟಿಗೋಚರವಾಗುವುದು ಇನ್ನೆಂತೋ ಹಾ ಕಷ್ಟಕಷ್ಟವೋ ಸೃಷ್ಟಿಯೊಳು ನಾನೆಷ್ಟರವ ನಿನ್ನಿಷ್ಟಬಂದಂತಾಗಲಿ ಭವ- ಶ್ರೀ ವೇಂಕಟೇಶ ಉರಗಾದ್ರಿವಾಸವಿಠಲ 3
--------------
ಉರಗಾದ್ರಿವಾಸವಿಠಲದಾಸರು
ಆತ್ಮನಿವೇದನೆ ಅಪಮೃತ್ಯು ಪರಿಹರಿಸೊ ಶ್ರೀ ವೆಂಕಟೇಶ ಅಪರಾಧವೆಣಿಸದಲೆ ಉದ್ಧರಿಸೊ ಶ್ರೀಶಾ ಪ ಅಪರಾಧ ಸಹಸ್ರಗಳ ಮಾಡುತನುದಿನದಿ ಅಪರಿಮಿತ ಮಹಿಮ ನಿನ್ನನ್ನು ಸ್ಮರಿಸದೆ ಚಪಲ ಬುದ್ಧಿಗಳಿಂದ ತಪಿಸಿದೆನೊ ಭವದೊಳಗೆ ಗುಪಿತದಿಂ ಸಲಹಯ್ಯ ಪಿತನೆ ಕೈ ಮುಗಿವೆ 1 ಪೂರ್ವಕಾಲದೊಳೊಬ್ಬ ರಾಜಶೇಖರ ತನ್ನ ಮೋಜಿನಿಂದಲೆ ನಿನ್ನ ಸ್ಮರಣೆ ಮರೆತು ಮೂರ್ಜಗತ್ಪತಿಯ ಪೂಜಿಸದೆ ಕಾಲವ ಕಳೆಯೆ ಆ ಜವನ ದೂತರೆಳೆ ತಂದರೈ ಹರಿಯೆ 2 ಅಂದು ಯಮ ಭಟರುಗಳ ಬಂಧನದೊಳಿರೆ ನೃಪನು ಚಂದದಿಂ ಪಾಪಕರ್ಮಗಳ ನೋಡೆ ತುಂಬಿದ ಪಾಪವೆ ಬಹಳವಾಗುತಿರಲು ಇಂದಿರೇಶನ ಪೂಜೆ ಒಂದೆ ದಿನವೆನಲು 3 ಬಿಡದೆ ಇವನಿಗೆ ಶಿಕ್ಷೆ ಕೊಡಿರಿ ಎಂದೆನಲು ನುಡಿದರಾ ಭಟರುಗಳು ಮೊದಲು ಯಾವದು ಎನಲು ಮೊದಲು ಪುಣ್ಯವು ಎಂದು ನುಡಿದನಾ ನೃಪನು4 ತಕ್ಷಣವೆ ವಿಷ್ಣುದೂತರು ಬಂದು ನೃಪವರನ ಚಿತ್ತಜನಯ್ಯನಿಹ ಉತ್ತಮ ಸ್ಥಳಕೆ ಸತ್ಯವಂತರು ಬಹಳ ಕೀರ್ತಿಸುತ ಶ್ರೀಹರಿಯ ಮತ್ತೆ ವೈಕುಂಠದಲಿ ಮೆರೆಸಿದರು ಕ್ಷಣದಿ 5 ಒಡನೆ ಪುಣ್ಯವು ಮುಗಿಯೆ ನಡಿ ನರಕಕೆಂದೆನಲು ಒಡೆದು ಎದೆ ನಡುಗಿ ಕಳವಳಿಸಿ ನೃಪನು ನುಡಿದ ಹೀಗೆನುತ ಘರ್ಜಿಸುತ ಯಮದೂತರಿಗೆ ಬಿಡಿರಿ ನಿಮ್ಮಯ ಸತ್ಯ ನಿಜವಲ್ಲವೆನುತ 6 ನಾರಾಯಣನ ನೋಡಿದವರಿಗೆ ನರಕ ಭಯ ನಾರದರೆ ಈ ರೀತಿ ಸಾರಿ ಡಂಗುರವ ಹೀಗೆನಲು ನುಡಿಕೇಳಿ ಸಾರಿ ಪೇಳಿದರಾಗ ದೇವ ದೇವನೆ ಇದಕೆ ಉಪಾಯವೇನೆನಲು7 ಪರಮ ಕೃಪಾಳು ಹರಿ ಪರಮ ಭಕ್ತರನೆಲ್ಲ ಕರೆದು ಏಕಾಂತದಲಿ ಸರಸವಾಕ್ಯದಲಿ ಇರಲಿ ಈ ನರನ ವಾಕ್ಯದ ಜಾಣತನವನು ಸುರ ಲೋಕದವರು ಸ್ತುತಿ ಮಾಡಲೆಂದೆನಲು8 ಭಾಗವತ ಜನಪ್ರಿಯ ಬಾಗಿ ನಮಿಸುತಲಿ ವಂದನೆ ಮಾಡುವೆ ನಾಗಶಯನನೆ ನಿನ್ನ ಮಹಿಮೆಗೆಣೆಗಾಣೆನೊ ಬೇಗ ಪಾಲಿಸು ಕಮಲನಾಭ ವಿಠ್ಠಲನೆ 9
--------------
ನಿಡಗುರುಕಿ ಜೀವೂಬಾಯಿ
ಆತ್ಮನಿವೇದನೆ ಆದಿಮೂರುತಿ ಪರಂಜ್ಯೋತಿಪಿತನೇ ದಾಶರಥಿ ಪ. ಕೊಡು ಭಕ್ತಿಶಕ್ತಿ ಸಂಪದಸಿರಿಯ ಕಡು ಬಾಲಕರೊಳು ಕೆಡುಕು ಮಾಡದೆ ನಡು ಕಡೆಗಳಿಲ್ಲದ ಜಗದೊಡೆಯ ಜನಾರ್ದನ 1 ಶತಕೋಟಿ ಬ್ರಹ್ಮಾಂಡಘಟವ ನಿರುತದಿ ಧರಿಸಿರುವ ಪ್ರಥಮಪುರುಷ ನಿನ್ನ ಪದವ ಕ್ಷಿತಿಯೊಳೀಕ್ಷಿಪಗೆ ಚೋದಿಗವೆನೆ ರತಿ- ಪತಿಪಿತನೆ ಬಂದು ನಡೆಸೆನ್ನ ಮುಂದು 2 ಕುಕ್ಷಿಯೊಳೀರೇಳು ಜಗವ ಧರಿಸಿರುವ ಕ್ಷಯ ಗುಣದಿಂದ ಮೆರೆವ ಲಕ್ಷ್ಮೀನಾರಾಯಣ ಲಕ್ಷ ಅವಗುಣಗಳ ಈಕ್ಷಿಸದೆನ್ನನು ರಕ್ಷಿಸಬೇಕೆಂದು 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ