ಒಟ್ಟು 1067 ಕಡೆಗಳಲ್ಲಿ , 92 ದಾಸರು , 853 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರ್ಮನಾಮಕ ಧರ್ಮಕಾರಿ ಪ ನಿರ್ಮಮನ ಮಾಡೆನ್ನ ನಿರ್ಮಮರ ದೊರೆ ಹರಿಯೆ ಅ.ಪ ಸೂರ್ಯ ಸುಂದರಮೂರ್ತಿ ಭೂರಿ ಕರುಣಿ ಮೀರಿಹ ಅಹಂಜ್ಞಾನ ತಿಮಿರವನು ಪರಿಹರಿಸು ಮಾರಮಣ ಮಾಂ ರಕ್ಷ ರಕ್ಷಿಸು ದಯವನಧಿ 1 ಅಜ ರುದ್ರ ಸುರರೆಲ್ಲ ವಂದಿಸಲು ಬಧಿರರಂತಿರುವರಯ್ಯ ಹಿಂದು ಮುಂದೆಂದೆಂದು ಎನ್ನಲ್ಲಿ ನೀ ಕುಣಿಸಿ ದಂದದಲಿ ನಾ ಕುಣಿದೆ ಅರ್ಪಿತವಾಗಲಿ ನಿನಗೆ 2 ಮೋಚಕನೆ ಜಯೇಶವಿಠಲನೆ ವಿಧಿವಂದ್ಯ ಯಾಚಿಪೆನು ವಿಜ್ಞಾನ ಕರುಣಿಸೆಂದು ಊಚುನೀಚದಿ ನಿನ್ನ ಪೂರ್ಣ ಮೂರ್ತಿಯ ಮಹಿಮೆ ಗೋಚರಕೆ ಬರುವಂತೆ ಆಚರಿಸು ಎನ್ನಲ್ಲಿ3
--------------
ಜಯೇಶವಿಠಲ
ಕವಿ ಅಭಯ ಬೇಡೋ ಸುಮನ ಸುಂದರ ಶ್ರೀ ಹರಿಯ ಪ್ರಿಯ | ಅಭಯ ಬೇಡೋ ಸುಮನ ಸುಂದರ ಪ ಅಭಯ ಬೇಡೋ ಪ್ರಿಯ ರಮಾವಿಭು ಜಗನ್ನಿವಾಸನೊಡನೆ ಉಭಯ ಸುಖವ ನೀವ ಚೆಲ್ವ ಅಂಬುಜನೇತ್ರ ಸೊಬಗನೆಂದು ಅ.ಪ ಚಾರು ಮಾರ ಪಿತನ 1 ನೊಂದು ವಾರಣೇಂದ್ರ ತನ್ನ ದಂದುಗದಲಿ ನುತಿಸಲು | ಬಂದು ರಕ್ಷಿಸಿದ ಮುಕುಂದ ಸಿಂಧುಶಾಯಿಯೆಂದು ಹರಿಯ 2 ಪರಾಕು ಎನುತ 3 ಕಿಂಕರೌಘ ಸುಪ್ರಸನ್ನ ಸಂಕಟೌಘಧ್ವಂಸನ ವೆಂಕಟೇಶವರದ ಒಳಲಂಕೆಯಧಿಪ ಗುರು ನೃಹರಿಯ 4
--------------
ಅನ್ಯದಾಸರು
ಕಷ್ಟಹರಿಸೊ ಪರಮೇಷ್ಟಿಪಿತನೆ ನೀ ಕೈ ಬಿಟ್ಟರೆ ಸೃಷ್ಟಿಯೊಳು ಪಾರುಗಾಣುವುದೆಂತೂ ಪ ಇಷ್ಟದಿಂದಲೋ ಅನಿಷ್ಟದಿಂದಲೋ ನಾನೇ ಹುಟ್ಟಿಬಂದೆನೆ ದೇವ-ನಿನ್ನಿಷ್ಟದಿಂದಲ್ಲವೇ ಅ.ಪ ಬಿಂಬನೆನಿಸಿದೆ ಎನಗೆ ಪ್ರತಿಬಿಂಬ ನಾ ನಿನಗೆ ಬಿಂಬ ಪ್ರತಿಬಿಂಬಕೆ ಉಪಾಧಿಯು ನಿತ್ಯ- ವೆಂಬನ್ವಯಕೆ ಗುಣತ್ರಯಬದ್ಧವೇ ಕಾರಣ- ವೆಂಬ ಗುಣಜೀವಸ್ವರೂಪೋಪಾಧಿಯು ಬೆಂಬಲನೀನಿದ್ದೂ ಗುಣಕಾರ್ಯಕನುವಾಗಿ ಇಂಬುಕೊಡುವೆ ಫಲಭೋಗಿಸಲೀವೇ ಎಂಬನುಡಿ ಶ್ರುತಿಶಾಸ್ತ್ರಸಿದ್ಧವು ನಂಬಿಹುದು ಜಗವೆಲ್ಲ ಸತ್ಯವು ಶಂಬರಾಂತಕ ಪಿತನೆ ಎನ್ನ ಹೃದ- ಯಾಂಬರದಿ ನಿನ್ನ ಬಿಂಬ ತೋರೈ 1 ಕಾಲಕರ್ಮಾದ್ಯಷ್ಟಗುಣಗಳೆಲ್ಲವು ನಿಜ- ವೆಲ್ಲಜಡಗಳು ಮತ್ತು ಅಚೇತನಂಗಳೈ ಶೀಲ ಮೂರುತಿ ನೀ ಪರಮ ಚೇತನನಾಗಿ ಎಲ್ಲ ಕಾಲದಿ ನಿನ್ನ ನಿಯಮನಂಗಳೈ ಕಾಲಕರ್ಮಗುಣಂಗಳೇನಿಹುದೆಲ್ಲ ಫಲಪ್ರದಾನವ ಮಾಡೆ ಶಕ್ತಿ ಜಡಕೆಂತಿಹುದಯ್ಯ ಕಾಲನಾಮಕ ನೀನೆ ಸರ್ವ ಕಾಲದಲಿ ಸ್ವಾತಂತ್ರ್ಯ ನಿನ್ನದೋ ಇಲ್ಲ ಘನ ಸಮರಿಲ್ಲ ಸರ್ವಕರ್ಮ ಫಲವೆಲ್ಲ ನೀನೆ ದಾತೃವೋ 2 ಮರ್ಮವರಿಯೆನೊ ದೇವ ಧರ್ಮಭ್ರಷ್ಟನಾದೆ ಕರ್ಮಫಲಾನುಭವಮಾಡಿ ಬೆಂಡಾದೆನು ಕರ್ಮ ತಾ ಶಿಕ್ಷಿಸಲರಿಯದು ನ್ಯಾಯ ಧರ್ಮಾಧಿಪತಿ ಭೀಕರ ಫಲಕೊಟ್ಟು ಶಿಕ್ಷಿಪಂತೆ ಧರ್ಮಮೂರುತಿ ಶುದ್ಧನಿಷಿದ್ಧಕರ್ಮಂಗಳಿಗೆ ಪೂರ್ಣಫಲವಿತ್ತು ಸಮನೆಂದೆನಿಸಿರುವೆ ಕರ್ಮಮೋಚಕ ನೀನೆ ಸಕಲ ಕರ್ಮಪ್ರದನೆಂದೆನಿಸಿ ಪೂರ್ವ- ಕರ್ಮಫಲ ಭೋಗಿಸಲು ಜನ್ಮವನಿತ್ತು ಕರ್ಮಪ್ರವಹದೊಳಿಡುವೇ 3 ವಿಮುಖನಾಗಿಹೆ ಶ್ರುತಿಸ್ಮøತಿಶಾಸ್ತ್ರಧರ್ಮಕೆ ಪ್ರಮುಖನಾಗಿಹೆ ದುಷ್ಕರ್ಮ ಮಾರ್ಗದಲ್ಲಿ ಕರ್ಮಕಲಾಪದ ಧರ್ಮ ಮರ್ಮವನರಿಯೆ ಹೆಮ್ಮೆಯಿಂದಲಿ ನಾನಾ ಕರ್ಮಕೂಪದಲಿರುವೆ ಪೆರ್ಮೆಗೋಸುಗ ಅಧರ್ಮವೆಷ್ಟೋ ಮಾಡ್ದೆ ಒಮ್ಮೆಗಾದರು ಸದ್ಧರ್ಮಾಚರಿಸಲಿಲ್ಲ ಕರ್ಮ ಅಕರ್ಮ ವಿಕರ್ಮ ಪರಿಚಯವಿಲ್ಲ ಜನ್ಮಕೆ ಧರ್ಮಪುತ್ರನೆ ದ್ವಂದ್ವಕರ್ಮಸಮರ್ಪಿಸಲು ಸನ್ಮತಿಯ ಕೊಟ್ಟಿನ್ನು 4 ಬೆಟ್ಟದೊಡೆಯನೆ ಶ್ರೀ ವೇಂಕಟೇಶ ನೀ ತುಷ್ಟಿಯಾದರೆ ನಿನ್ನಿಷ್ಟದಂತೆ ಫಲವು ಸೃಷ್ಟಿಯೊಳು ಪುಟ್ಟಿಸಿ ದುಷ್ಟಕರ್ಮದ ಪಾಶ ಕಟ್ಟಿನೊಳಿಟ್ಟೆನ್ನ ಕಷ್ಟಪಡಿಸುವರೇ ಸೃಷ್ಟೀಶ ಉರಗಾದ್ರಿವಾಸ ವಿಠಲ ಎನ್ನ ನೀನಿಟ್ಟಿರುವಷ್ಟುಕಾಲ ಧಿಟ್ಟಭಕುತಿಯ ಕೊಟ್ಟು ದಿಟ್ಟ ರಕ್ಷಿಸು ಇಷ್ಟಮೂರುತಿಯೆ ಇಷ್ಟದಾಯಕನೆಂದು ನಾನಿಷ್ಟು ನುಡಿದೆನೋ ನಿನ್ನ ಎನ್ನ ಮನೋಭೀಷ್ಟೆ ಸಲಿಸೆ ನಿನ್ನಿಷ್ಟವಯ್ಯ5
--------------
ಉರಗಾದ್ರಿವಾಸವಿಠಲದಾಸರು
ಕಂಸಾರಿ ಬೇಗ ಬಾರೋ ಹರಿ ಭೇಷಜ ಕೃಷ್ಣ ಪ. ಸಾಗರ ಶಯನ ಮನೋಗತ ಫಲಕಾರಿ ಅಕ್ರಮದಲಿ ಬರುವ ಭಯಂಕರ ವಕ್ರ ಮುಖವ ತೋರುವ ಹರಿವು ಚಕ್ರವ ಕರಧೃತ ಚಕ್ರದಿ ತರಿದು ಪರಾಕ್ರಮವ ತೋರಿ 1 ದಾಸರ ರಕ್ಷಿಪುದು ಎಂದಿಗು ಶ್ರೀನಿ- ವಾಸ ನಿನ್ನಯ ಬಿರುದು ದ್ವೇಷಿ ಜನರ ಮೂಲ ನಾಶಗೈದನುಗಾಲ ಶ್ರೀಶತ್ವದ ಸೇವಾವಾಸನ ಬೆಳಸುತ್ತ 2 ನೀ ನೆಟ್ಟು ಬೆಳಸಿರುವ ವೃಕ್ಷವನು ನಿ- ಧಾನದಿಂದಲಿ ಪೊರವ ಮಾನ ನಿನ್ನದು ಪದ್ಮಮಾನ ವೆಂಕಟರಾಜ ದೀನ ಬಂಧು ನಿನಗೇನ ಪೇಳುವದಿನ್ನು 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಯಬೇಕೆನ್ನ ಕರುಣದಲಿ ಧನ್ವಂತ್ರಿ ಶ್ರೀಯರಸ ನರಹರಿಯೆ ಪ್ರಾರ್ಥಿಸುವೆ ನಿನ್ನ ಪ. ಸುರರಿಗೆ ಮರಣ ಕಾಲವು ಪ್ರಾಪ್ತವಾಗಲು ಗಿರಿಯಿಂದ ಶರಧಿಯನು ಮಥಿಸೆ ಪೇಳಿ ಕರುಣದಿಂದಮೃತ ಕರದಿಂದ ಸುರರಿಗೆ ಎರೆದು ಜರೆ ಮೃತ್ಯು ಬಿಡಿಸಿದಗೆ ಇದು ಒಂದು ಘನವೆ 1 ಸಕಲ ನಾಡಿಗಳಲ್ಲಿ ಚೇಷ್ಟಪ್ರದ ನೀನಾಗಿ ಸಕಲ ವ್ಯಾಪಾರಗಳ ನಡೆಸುತಿರಲು ಯುಕುತಿಯಿಂದಲಿ ನಾಡಿ ನೋಡಿ ತಿಳಿಯುವನ್ಯಾರೊ ಮುಕುತಿದಾಯಕ ನಿನಗೆ ಇದು ಒಂದು ಘನವೆ 2 ಅನಾದಿಯಿಂದ ಅಪಥ್ಯದಲಿ ನರಳುವೆನೊ ಈಗ ಪಥ್ಯವ ಮಾಳ್ಪ ಬಗೆ ಯಾವುದೊ ಶ್ರೀನಿವಾಸನೆ ನಿನ್ನ ಧ್ಯಾನವೆ ಔಷಧವೊ ಶ್ರೀ ಗುರುಗಳಾಜ್ಞೆಯೆ ಪಥ್ಯವೆನಗಿನ್ನು 3 ಭಕ್ತಪ್ರಹ್ಲಾದನನು ಯುಕ್ತಿ ಶಕ್ತಿಗಳಿಂದ ಮುಕ್ತಿಮಾರ್ಗವ ತೋರಿ ಸಲಹಲಿಲ್ಲೇ ಭಕ್ತಿಹೀನರನೆ ಕಂಡು ಎನ್ನ ರಕ್ಷಿಸದಿರಲು ಯುಕ್ತವೇ ನಿನಗಿನ್ನು ಭಕ್ತಪಾಲಕನೆ 4 ನಿನ್ನ ದಾಸತ್ವದಲಿ ನೆಲಸಬೇಕಾದರೆ ಬಿನ್ನಣದ ರೋಗಗಳ ಪರಿಹರಿಸಿ ಸಲಹೊ ನಿನ್ನವರಾದ ಮೇಲಿನ್ನು ಕಾಯದೆ ಇಹರೆ ಘನ್ನ ಶ್ರೀ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಕಾಯಬೇಕೆನ್ನ ಕೇಶವನೇ ಬಂದು ಪಾಯವನರಿಯೆನು ಹರಿಯೇ ಮಾಧವನೇ ಪ ಭವಸಾಗರವÀ ದಾಟಿ ಬಂದೇ ಇನ್ನು ಭವವನ್ನು ಬಂಬಿದೆ ಹರಿಯೇ ಶರಣೆಂದೆ ಅ.ಪ. ಜವನ ಬಾಧೆಗೆ ಅಂಜಿ ಬಂದೇ ಭವರೋಗ ವ್ಯೆದ್ಯನೇ ರಕ್ಷಿಸೋ ತಂದೇ 1 ಯೋನಿಗೆ ಬರಲಾರೆ ಹರಿಯೇ ಬಂದು ಮೌನದಿ ವೇಳೆಯನನ್ಯರೊಳ್ತಳೆಯೇ 2 ಜನ್ಮವ ಕಳದೆನು ಬರಿದೇ ಗಾನಲೋಲನೆ ಎನ್ನ ರಕ್ಷಿಸೋ ತಂದೇ 3
--------------
ಕರ್ಕಿ ಕೇಶವದಾಸ
ಕಾಯಬೇಕೆನ್ನ ನೀನು ಶ್ರೀ ಗುರು ಎನ್ನ ಧ್ರುವ ಪಕ್ಷ ಪಾಂಡವ ಪ್ರಿಯ ಅಕ್ಷಯಾಪದನಿಶ್ಚಯ ಲಕ್ಷುಮಿ ಸುಹೃದಯ ರಕ್ಷಿಸೊ ನೀ ಎನ್ನಯ್ಯ 1 ಪವಿತ್ರ ಪ್ರಣವರಿಸಿ ಸುವಿದ್ಯದೊಳು ಬೆರಸಿ ಭವ ಭಯವು ಹಿಂಗಿಸಿ 2 ಸೋಹ್ಯ ಸೊನ್ನೆಯದೋರಿ ದಯಮಾಡೊ ಮುರಾರಿ ಸಾಹ್ಯ ಮಾಡೊ ಸಹಕಾರಿ ಮಹಿಪತಿ ಸ್ವಾಮಿ ಶ್ರೀಹರಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯಯ್ಯ ಕಂಜಲೋಚನ ದಯಲೆನ್ನ ಕರುಣಾ ದಯಲೆನ್ನ ಧ್ರುವ ಅಕ್ಷಯಾನಂದ ನೀ ಪೂರ್ಣ ಲಕ್ಷುಮೀ ರಮಣ ಸಗುಣಾ ಲಕ್ಷ್ಮೀರಮಣ ಪಕ್ಷಪಾಂಡವರ ಪ್ರಾಣ ರಕ್ಷಿಸೊ ನಾರಾಯಣ 1 ಅಣುರೇಣು ವೊಳನುಕೂಲ ಮುನಿಜನಪಾಲ ಲೋಲಾ ಘನಸುಖದ ಕಲ್ಲೋಳ ನೀನೆ ದೀನದಯಾಳಾ 2 ಕರುಣಾಸಾಗರ ಪೂರ್ಣ ಹೊರಿಯೊ ಮಹಿಪತಿಪ್ರಾಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕರುಣಾಕರನೆ ನೀಯನ್ನಾ ಕಾಯೋ ಆನಾಥರಕ್ಷಕ ದಯಾಸಿಂಧೂ ಪ. ಕಾಯೊಯನ್ನನು ಕರವಿಡಿದು ಕೃಪೆಯಿಂದ ನೀಯನ್ನಾ ಕಾಯೊದೇವರದೇವ ಶ್ರೀ ವೆಂಕಟೇಶ್ವರನೆ ಕಾಯೊ ಅ.ಪ. ನೀನಲ್ಲದೆ ಅನ್ಯತ್ರ ತಾಯಿ ತಂದೆಗಳಿಲ್ಲಾ ನೀನಲ್ಲದೆ ಬಂಧುಬಳಗವೆನಗಿಲ್ಲಾ ನೀ ಯನ್ನ ಕಾಯೊ ಶ್ರೀ ವೆಂಕಟೇಶ್ವರನೆ 1 ತರುಳ ಕರಿಯಲು ಕಂಭದಿ ಬಂದು ಹಿರಣ್ಯಾಕ್ಷಕನ ಕರುಳ ತೆಗದು ವನಮಾಲೆ ಹಾಕಿ ನಿಂದೀ ನರಮೃಗರೂಪಿನಲಿ ಪ್ರಹ್ಲಾದಗೆ ವರವಿತ್ತೆ ನೀಯನ್ನ ಕಾಯೊ ಶ್ರೀ ವೆಂಕಟೇಶ್ವರನೆ 2 ಜಲದೊಳಗೆ ನೆಗಳೆಯು ಹಿಡಿದು ಎಳೆಯುತ್ತಿರೆ ಬಹುಬಾಧೆಬಡಿಸೆ ನಿಮ್ಮ ನೆನೆಯಲು ನಿಲ್ಲದೆ ಬಂದೊದಗಿನೆಗಳೆಯನು ಶೀಳ್ದು ಕರಿರಾಜಗೊಲಿದು ರಕ್ಷಿಸಿದೊ ಶ್ರೀ ವೆಂಕಟೇಶ್ವರನೆ 3 ದುರುಳದುಶ್ಯಾಸ ದ್ರೌಪತಿ ಸೀರೆಯನು ಸೆಳೆಯೆ ಹರಿಣಾಕ್ಷಿ ಸಭೆಯೊಳಗೆ ಕೃಷ್ಣಾಯೆಂದುವದರೆ ಪರಿಪರಿ ವಸ್ತ್ರವನು ಕೊಟ್ಟೆ ಅಭಿಮಾನವನು ಕಾಯ್ದೊ ದೇವರದೇವ ಶ್ರೀ ವೆಂಕಟೇಶ್ವರನೆ 4 ಶಂಖಚಕ್ರಧರ ನಿನ್ನ ಚರಣವನು ನಂಬಿದೆ ಪಕ್ಷಿವಾಹನಸ್ವಾಮಿ ಕರುಣಾನಿಧೆ ಹೆಳವನಕಟ್ಟೆಯೊಳು ನಿಂದು ಭಕ್ತರನ್ನೆಲ್ಲಾ ಕಾಯ್ದ ದೇವರದೇವ ಶ್ರೀ ವೆಂಕಟೇಶ್ವರನೆ 5
--------------
ಹೆಳವನಕಟ್ಟೆ ಗಿರಿಯಮ್ಮ
ಕಾಯೊ ಕರುಣಾನಂದ ಶ್ರೀಗುರು ಕೃಪಾನಿಧೆ ಕಾಯೊ ಕರುಣಿಸಿ ಎನ್ನ ಪೂರ್ಣ ನೀ ಕಾಯೊ ಪರಮದಯಾನಿಧೆ ಧ್ರುವ ತೊಡಿಸಿ ಕರುಣಾನಂದ ಕವಚವ ಇಡಿಸೊ ಭಗುತಿ ವೈರಾಗ್ಯವ ದೃಢಗೊಳಿಸುವ ಙÁ್ಞನಪೂರ್ಣ ನೀ ಕಡಿಸೊ ಕಾಮಕ್ರೋಧವ ನಡೆಸಿ ನಿತ್ಯವಿವೇಕ ಪಥದಲಿ ಕೂಡಿಸೊ ನಿಜಸುಬೋಧವ ಬಿಡಿಸೊ ಭವಭವ ಮೂಲದಿಂದಲಿ ಬಡಿಸೊ ಹರುಷಾನಂದವ 1 ಬಟ್ಟೆ ಕೊಟ್ಟು ಕಾಯೊ ಸತ್ಸಂಗವ ಮುಟ್ಟಿಮುದ್ರಿಸೊದೃಷ್ಟಾಂತವ ಸಟೆಯ ಮಾಡೊ ಅವಿದ್ಯವ ನಿಷ್ಠತನ ನೆಲೆಗೊಳಿಸಿ ಕಾಯೊ ನೀ ಇಟ್ಟು ಶಿರದಲಿ ಅಭಯವ 2 ಭಿನ್ನವಿಲ್ಲದೆ ನೋಡಿ ಎನ್ನನು ಧನ್ಯಗೈಸೊ ನೀ ಪ್ರಾಣವ ಕಣ್ದೆರಿಸಿ ಅಣುರೇಣುದಲಿ ಪೂರ್ಣಖೂನದೋರೊ ಸಾಕ್ಷಾತವ ಎನ್ನೊಳಗೆ ನಿಜಾನಂದ ಸುಖದೋರಿ ಪುಣ್ಯಗೈಸೊ ನೀ ಜೀವನ ಚಿಣ್ಣಕಿಂಕರ ದಾಸ ಮಹಿಪತಿ ರಕ್ಷಿಸೊ ಸಂತತವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕರುಣಾಭಯ ಕೃದ್ಭಯ ನಾಶನ ಧ್ರುವ ಕಂದ ಪ್ರಲ್ಹಾದಗಾಗಿ ಸಂಧಿಸೊದಗಿನಿಂತು ಬಂದು ರಕ್ಷಿಸಿದೆ ಪ್ರಾಣ ಚಂದವಾಗಿ ನೀ 1 ಕರಿಯ ಮೊರೆಯ ಕೇಳಿ ನೆರಯ ಬಿಡಿಸಿದೆ ಎಂದು ಮೊರೆಯ ಹೊಕ್ಕೆನು ನಿಮಗೆ ಹರಿಹರಿಯೆಂದು 2 ದ್ರೌಪದಿಯ ಅಭಿಮಾನ ಕೃಪೆಯಿಂದ ನೀ ಪೂರ್ಣ ಉಪಾಯದಲಿಗಾಯ್ದ ಅಪಾರ ಮಹಿಮ 3 ಸ್ಮರಿಸಿದಾಕ್ಷಣ ಬಂದು ಕರುಣದಿಂದನ್ಯರಿಗೆ ಪರಿಪರಿಯಿಂದ್ಹೊರೆದೆ ವರಮುನಿಗಳ 4 ಶರಣು ಹೊಕ್ಕೇನು ನಿಮ್ಮ ತರಳ ಮಹಿಪತಿ ಪ್ರಾಣ ಹೊರೆದು ರಕ್ಷಿಸು ಎನ್ನ ಪರಮಪಾವನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೋ ಕಾಯೋ ಪ ಕಾಯೋ ಕಾಯೋ ಕಮಲಯತಾಕ್ಷ ಭವ ತೋಯಧಿಯೊಳು ಬಿದ್ದು ಬಾಯ ಬಿಡುವನ ಅ ಅದ್ವೈತ ತ್ರಯದಧ್ವ ಪ್ರವರ್ತಕ ಸದ್ವೈಷ್ಣವರ ಪದದ್ವಯತೋರಿ 1 ಸಂಜೆಯ ತೋರಿ ಧನಂಜಯನುಳುಹಿದ ನಿರಂಜನ ಮೂರ್ತೆ 2 ಸತ್ಯಕಾಮ ತವ ಭೃತ್ಯೆಗೆ ಬಂದಪ ಮೃತ್ಯು ಕಳೆದು ಸಂಪತ್ತು ಪಾಲಿಸಿದೆ 3 ಕುಕ್ಷಿಯೊಳಂದು ಪರೀಕ್ಷಿದ್ರಾಜನ ರಕ್ಷಿಸಿದಂತೆ ಪ್ರತಿಕ್ಷಣದಲಿ 4 ಎಲ್ಲರೊಳಿಹ ಕೈವಲ್ಯದರಸು ನೀ ಬಲ್ಲಿದನೆಂಬುದ ಬಲ್ಲೆ ಬಹು ಬಗೆ 5 ನೀ ದಯ ಮಾಡದಿರೀ ದಿವಿಜರು ಒಲಿ ದಾದರಿಸುವರೆ ವೃಕೋದರ ವಂದ್ಯ 6 ಅಧಮ ನಾನಹುದುದಧಿ ಮಥನ ಸ ನ್ಮುದ ಮುನಿಮತ ಪೊಂದಿದವರಣುಗನು 7 ಕ್ಷುದ್ರ ಭೂಮಿಪರುಪದ್ರವ ಕಳೆದು ಸು ಭದ್ರವೀಯೋ ಕ್ಷುದ್ರುಮದಂತೆ 8 ವೀತಭಯ ಜಗನ್ನಾಥ ವಿಠಲ ಸುಖೇತರ ಕಳೆದು ಮಹಾತಿಶಯದಲಿ 9
--------------
ಜಗನ್ನಾಥದಾಸರು
ಕಾಯೋ ಕೇಶವ ದೇವ ದೂರ್ವೆಶಾ ಪಾಯವ ನರಿಯೆನು ಪೊರೆಯೊ ಸರ್ವೇಶಾ ಪ ಸುಜನರ ರಕ್ಷಿಸಿ ಭಜಕರ ಸಲಹುವ ಅಜಪಿತ ಶ್ರೀಹರಿ ಸೇವೆಯ ಗೈವೆ 1 ಸಾಸಿರ ನಾಮಗಳಿಂದ ರಂಜಿಪ ದೇವ ವಾಸುಕಿಶಯನನ ಸೇವೆಯ ಗೈವೆ 2 ವೇದವ ಪಾಲಿಸಿ ಧರಣಿಯ ಸಲಹಿದ ಮಾಧವ ಶ್ರೀಹರಿ ಸೇವೆಯ ಗೈವೆ 3
--------------
ಕರ್ಕಿ ಕೇಶವದಾಸ
ಕಾರುಣ್ಯ ಮೂರುತಿ ಕರುಣಾಸಾಗರ ಪ ಘೋರದುರಿತ ಸಂಹಾರ ಜಗತ್ಕರ್ತ ಮಾರ ಜನಕ ಶ್ರೀ ಮನೋಹರನ ವಾರಿಜಾಂಬಕ ಕೃಷ್ಣ ವಾರಧಿ ಶಯನನ ಪಾರಿಮಾರ್ಥಿಕ ನರಿತು ಪರಮ ಹರುಷದಿಂದ 1 ಕುಂಭಿನೀ ಪತಿರಾಮ ಕೋದಂಡಧರ ಗುಣ ಗಂಭೀರ ಪುರುಷ ಶ್ರೀ ಘನ ಮಹಿಮನ ಶಂಬರಾರಿಯ ಕೊಂದ ಶಿವನ ರಕ್ಷಿಸಿದಂಥ ಕಂಬು ಕಂಧರ ಕನಕಾಂಬರ ಭೂಷಣನಾ 2 ಅಗಣಿತ ಚರಿತ ಅನಂತ ಅವತಾರನ ನಿಗಮಗೋಚರ ವಿಷ್ಣು ನಿಜ ನಾಮವು ಬಗೆ ಬಗೆಯಲಿ ಅತಿ ಭಕುತಿಯಿಂದಲಿ ಜಯ ಜಗದೊಡೆಯ ಹೆನ್ನ ವಿಠ್ಠಲನ ಜಿವ್ಹದಿ 3
--------------
ಹೆನ್ನೆರಂಗದಾಸರು
ಕಾಲ ಬಂತು ಪ್ರಜೆಗೆ ಎಷ್ಟು ಪೇಳ್ವರೇನು ಕೆಲಸ ದಿಟ್ಟ ಅರಿಗಳನು ಕುಟ್ಟಿ ತೆಗೆಯದಿದ್ದಮೇಲೆ ಪ ದಂಡು ಬಂತು ಎಂದು ಜನರು ಗಂಡು ಹೆಣ್ಣು ಮಕ್ಕಳೆಲ್ಲ ಕಂದುಗಳನು ಕಟ್ಟಿ ಗೋವಿನ ಹಿಂಡ ನೆಲ್ಲ ದಾರಿಗೊಳಿಸಿ ಕಂಡ ಕಡೆಗೆ ಹೋಗಿ ಸೇರಿಕೊಂಡುಯಿರಲು ಸೋವಿನಿಂದ ದಂಡಿನವರು ದಾರಿಗಟ್ಟಿಕೊಂಡು ಸುಲಿದು ಕಡಿದ ಮೇಲೆ 1 ಅಲ್ಲಿ ಬಂತು ಇಲ್ಲಿ ಬಂತು ಎಂದು ಬೆದರಿಕೊಂಡು ಕುಣಿಗಳಲ್ಲಿ ಭತ್ತಭಾಂಡವಿಕ್ಕಿ ನಿಲ್ಲದೆಲ್ಲ ಊರಬಿಟ್ಟು ಕಲ್ಲು ಮುಳ್ಳು ಗುಡ್ಡಕಾನಿನಲ್ಲಿ ಸೇರಿಕೊಂಡು ಬಚ್ಚಿಯಿಟ್ಟ ವಸ್ತು ವಡವೆ ಅಲ್ಲಿ ನಷ್ಟವಾದ ಮೇಲೆ 2 ಮತ್ತೆ ಕುದುರೆಯಿಲ್ಲ ಮಂದಿಹೊತ್ತು ಪ್ರಜೆಗಳನ್ನು ಮಾರ್ಗ ದೊತ್ತಿನಲ್ಲಿ ತರುಬಿ ನಿಂದು ಕತ್ತಿಯನ್ನು ಕಿತ್ತು ಗೋಣ ಬರಿಸಿ ಯಾವತ್ತು ವಡವೆ ವಸ್ತುಗಳನು ಮತ್ತು ಮತ್ತು ಸುಲಿದಮೇಲೆ 3 ಮುಟ್ಟು ಪಟ್ಲೆ ಸಹಿತವರಡಿಯೆತ್ತ ಕೊಟ್ಟು ಬೀಳ ಭೂಮಿ ನಷ್ಟ ತೆತ್ತು ಹಳೆಯ ಅರಿವೆ ಬಟ್ಟೆಗಟ್ಟಿ ಬೀದಿ ಬದಿಗೆ ಹಿಂಡು ಗುರಿಯ ಕೆಟ್ಟ ಗೌಡಿ ದ್ವಿಗುಣಿಸಂಕ ತೆತ್ತು ಕೊಟ್ಟು ಪ್ರಜೆಗೆ ಘಟ್ಟ ಬೆಟ್ಟ ವಾಸ ವಾದಮೇಲೆ 4 ಇಕ್ಕಿ ಕದವ ರಾಜ್ಯವನ್ನು ಹೊಕ್ಕು ಅರಿಗಳೆಲ್ಲ ಸುಲಿದು ಸೊಕ್ಕಿನಿಂದ ಪಾಳ್ಯವನ್ನು ಹೊಕ್ಕರಯ್ಯ ನಮ್ಮ ಕಡೆಗೆ ದಿಕ್ಕಕಾಣೆ ಪ್ರಜೆಗಳನ್ನು ರಕ್ಷಿಸುವರು ಬೇರೆಉಂಟು ನಂಬಿ ಜನರು 5
--------------
ಕವಿ ಪರಮದೇವದಾಸರು