ಒಟ್ಟು 251 ಕಡೆಗಳಲ್ಲಿ , 59 ದಾಸರು , 220 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀನಿವಾಸದೇವರು ಬಾರಯ್ಯ ವೇಂಕಟ ಮನ್ಮನಕೆ ತ್ವರಿತದಿ ನಿಜನಾರೀಸಹಿತದಿ ಈ ಸಮಯಕೆ ಶರಣೆಂಬೆನು ಪದಯುಗಕೆ ಪ ಸಾರಿದ ನಿಜಶÀರಣನ ಈ ಭವಭÀವ ಘೋರಭಯವ ಪರಿಹÀರಿಸುವುದಕ್ಕೆಅ.ಪ ವ್ಯಕ್ತಾವ್ಯಕ್ತ ತ್ರಿಜಗದ್ವ್ಯಾಪ್ತಾ ದೋಷ ನಿರ್ಲಿಪ್ತಾ ಮುಕ್ತಾ ಮುಕ್ತ ಜೀವರ ಗಣದಾಪ್ತಾ ನೀ ಸರ್ವತ್ರದಿ ವ್ಯಾಪ್ತ ಭಕ್ತನ ಹೃದಯದಿ ವ್ಯಕ್ತನಾಗಿ ನಿಜ ಮುಕ್ತಿಪಥವ ತೋರೊ ಭಕ್ತಿಯನಿತ್ತು 1 ಕವಿಜನಗೇಯಾ ಆನಂದದಾಯಕ ನಿರ್ಜಿತಮಾಯಾ ಕಾಯಯ್ಯಾ ಜೀಯಾ ಆನತಜನಸನ್ಮಾನದ ಮನ್ಮನ ವನಜದಿ ನೀ ಸನ್ನಿಹಿತಾಗುವುದಕೆ 2 ಸೋಮಾಸುರನಾಮಕ ದೈತ್ಯನ ಕೊಂದೂ ವೇದವ ತಂದೂ ಕೂರ್ಮ ಕಿಟ ನರಹರಿ ರೂಪದಿ ನಿಂದೂ ವಾಮನನೆಂದೂ ರಾಮ ಭಾರ್ಗವ ಯದುಕುಲಸಾಗರ - ಸೋಮ ಬೌದ್ಧ ಕಲ್ಕಿ ಪ್ರೇಮದಿ ಮನಕೆ 3 ನಿಗಮಗೋಚರ ನಿತ್ಯಾನಂದಾ ಬಗೆಬಗೆ ಜನ್ಮವನೈದಿದೆ ಮುಕುಂದಾ ಮುಗಿವೆನೊ ಕರದಿಂದಾ ಅಗಣಿತ ಗುಣನಿಧಿ ಸುಗಮದಿ ಭವದ ಬಗೆಯನು ತಿಳಿಸೊ ನಗೆ ಮೊಗದಿ ಬಾ 4 ವಿಧಿಶಂಭುವಂದಿತ ಪದಯುಗಕಮಲಾ ನಿತ್ಯ ನಿರ್ಮಲಾ ಆಧಿಭೂತಾಧ್ಯಾತ್ಮಿಕತಾಪದ ಶಮಲಾ ನೀ ಮಾಡೆನ್ನನು ವಿಮಲಾ ಸದಯ ಸುಧಾಕರ ಹೃದಯದಿ ತವಪದ ಪದುಮ ಭಜಿಪೆ ನೀ ಮುದದಲಿ ಮನಕೆ5 ಸಾಸಿರನಾಮ ನತಜನಪ್ರೇಮಾ ಪೊರೆಯೋ ಶ್ರೀ ರಾಮಾ ಆಶೀ ಪೂರ್ತಿಸಿ ಮಾಡೆನ್ನಲಿ ಪ್ರೇಮಾ ಸುರಸಾರ್ವಭೌಮಾ ವಾಸಮಾಡಿ ಅಭಿಲಾಷೆಯ ಪೂರ್ತಿಸೊ ವಾಸುದೇವ ವಾರಾಸಿಜರಮಣಾ 6 ಶರಣಾಗತಜನಪರಿಪಾಲಾ ಕರುಣಾಲವಾಲಾ ಕರುಣಿಸೆನ್ನನು ಹೇ ಶಿರಿಲೋಲಾ ನಮಿತಜನಸುgಸಾಲ ಅಜ ಭವ ಸುರ ನಿಕರಾರ್ಚಿತಪದ ಸರಸಿಜಯುತ ನೀ ಸುರವರದೇವಾ 7 ಪನ್ನಗಗಿರಿ ನಿಜಕೃತವಾಸಾ ಪೊರೆ ಎನ್ನನು ಶ್ರೀಶಾ ಬಿನ್ನಪ ಮಾಳ್ಪೆನು ಹೇ ಶ್ರೀನಿವಾಸಾ ಕೊಡು ಎನಗೆ ಲೇಸಾ ಎನ್ನ ಸಲಹೋದಕೆ ಅನ್ಯರ ಕಾಣೆನೊ ಮನ್ನಿಸು ನೀನಾಪನ್ನಜನಸುಖದಾ 8 ಲಕ್ಷ್ಮೀನಾಯಕ ವರಪಕ್ಷಿಗಮನಾ ಅಕ್ಷಯ ಫಲವನ್ನ ರಕ್ಷಿಸಿ ಕಾಯ್ವದೋ ನೀ ಎನ್ನಾ ಲಕ್ಷ್ಮಣನಣ್ಣಾ ಕ - ಟಾಕ್ಷದಿ ಎನ್ನ ವೀಕ್ಷಿಸು ಕ್ಷಣ ಕ್ಷಣ..... 9 ಧರ್ಮಾರ್ಥಕಾಮಮೋಕ್ಷವ ನಾನೊಲ್ಲೇ ಕರ್ಮದ ಸುಳಿಯಲ್ಲೇ ಮರ್ಮವ ತಿಳಿಯದೆ ಬೀಳುವೆ ನಾನಲ್ಲೇ ನಿರ್ಮಿಸದಿರು ಎನ್ನಲ್ಲೇ ಕರ್ಮಭವದ ಮಹÀ ಮರ್ಮವ ತಿಳಿಸೀ ದುರ್ಮನ ಬಿಡಿಸೆಲೊ ಬೊಮ್ಮನ ತಾತಾ 10 ದಿಟ್ಟ ಗುರು ಜಗನ್ನಾಥವಿಠಲ ನಾನನಾಥಾ ಥಟ್ಟಾನೆ ನೀ ಎನ್ನನು ಕಾಯೋ ಶ್ರೀನಾಥಾ ಇಷ್ಟೇ ಎನಮನದರ್ಥ ಸೃಷ್ಟಿಯೊಳಗೆ ಬಹು ಭ್ರಷ್ಟರಸ್ತುತಿಸಿ ನಿ - ಕೃಷ್ಟನಾದೇನೋ ಶ್ರೇಷ್ಠ ಮೂರುತೀ 11
--------------
ಗುರುಜಗನ್ನಾಥದಾಸರು
ಶ್ರೀಮದನಂತಸ್ವಾಮಿ ರಕ್ಷಿಸು ಪುಣ್ಯ- ನಾಮ ಸರ್ವಾಂತರ್ಯಾಮಿ ಪ. ಸೋಮಾರ್ಕಕಾಮಸೂತ್ರಾಮ ಪ್ರಮುಖಸುರ- ಸ್ತೋಮವಂದಿತ ಭೀಮಬಲ ಗುಣ- ಧಾಮ ವರನಿಸ್ಸೀಮ ಮಹಿಮನೆ ಅ.ಪ. ಅಂತರ್ಬಹಿವ್ರ್ಯಾಪ್ತನೆ ಸತತ ರಮಾ- ಕಾಂತಗೆ ಪರಮಾಪ್ತನೆ ಚಿಂತಿಪ ಭಕ್ತರ ಚಿಂತಾಮಣಿ ನಿ- ಶ್ಚಿಂತನೊಂದೆ ಶಿರದಿ ಸಾಸವೆ- ಯಂತೆ ಲೋಕವನಾಂತುಕೊಂಡಿಹೆ 1 ರಾಮನ ಸೇವೆಗಾಗಿ ಲಕ್ಷ್ಮಣನೆಂಬ ನಾಮವ ತಾಳ್ದ ಯೋಗಿ ಯಾಮಿನೀಚರರ ನಿರ್ನಾಮಗೈದ ವೀರಲ- ಲಾಮ ನಿರ್ಜಿತಕಾಮ ಸಜ್ಜನ- ಪ್ರೇಮ ಭೌಮ ನಿರಾಮಯನೆ ಜಯ 2 ಸಂಕರ್ಷಣ ಸುಗುಣಾ-ಭರಣ ನಿ- ಶ್ಯಂಕ ವೈರಿಭೀಷಣ ಶಂಕರಾದಿಸುರಸಂಕುಲನುತಪಾದ- ಪಂಕಜನೆ ತಾಟಂಕಗೋಪಾ- ಲಂಕೃತಾಂಗ ಶುಭಂಕರನೆ ಜಯ 3 ಸಾರತತ್ತ್ವಬೋಧನೆ ಶರಣುಜನ ವಾರಿಧಿಚಂದ್ರಮನೆ ಘೋರಭವಾರ್ಣವತಾರಕನಮಲ ಪಾ- ದಾರವಿಂದದ ಸೌಂದರ್ಯ ನಿಜ ಭೂರಿ ನೇತ್ರಗಳಿಂದ ಕಾಣುವೆ 4 ಮಂಜುಳ ನಗರೇಶನೆ ಭಕ್ತಭಯ- ಭಂಜನ ಸುವಿಲಾಸನೆ ಕಂಜಾಕ್ಷಸಖ ಲಕ್ಷ್ಮೀನಾರಾಯಣನ ತೇಜಃ- ಪುಂಜ ಭಗವದ್ಭಕ್ತಜನಮನೋ-ರಂಜನಾತ್ಮ ನಿರಂಜನನೆ ಜಯ 5
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀವಿನಾಯಕ ಪಿನಾಕಿ ಸುತ ಜಗ ದೇಕನಾಥನ ನಾಭಿಮಂದಿರ ಲೇಖಕಾಗ್ರಣಿ ವಿಷ್ಣುಕೀರ್ತನ ಮಾನಿ ಸಾಧಕನೆ ಪರಾಕು ನುಡಿಯುವೆ ನೂಕಿ ವಿಘ್ನವ ಸಾಕು ನಮ್ಮನು ನೋಕನೀಯನ ಭಜಿಸಲನುವಾಗೆಂದು ಬೇಡುವೆನು 1 ಕಾಣೆ ನಿನಗೆಣೆ ಮೂರುಲೋಕದಿ ಮಾನ್ಯನಾಗಿಹೆ ಸರ್ವರಿಂದಲು ಶ್ರೀನಿಧಿಯ ದಯದಿಂದ ಪ್ರಾಣಾವೇಶಸಂಯುತನೆ ಧ್ಯಾನ ಮಾಡುವೆ ವಿಶ್ವತೈಜಸ ನನ್ನು ಮಹದಾಕಾಶಮಾನಿಯೆ ಆನತಾಮರಧೇನು ಸಿದ್ಧಿವಿನಾಯಕನೆ ನಮಿಪೆ 2 ದೈತ್ಯಗಣಗಳಿಗಿತ್ತು ವರವು ನ್ಮತ್ತರನು ಮಾಡುತಲಿ ಶ್ರೀಪುರು ಷೋತ್ತಮನ ಸೇವಿಸುವೆ ವಿದ್ಯಾಧೀಶ ಸುಖಭೋಕ್ತ ಮಾತರಿಶ್ವನ ದಾಸರಿಗೆ ಹರಿ ಭಕ್ತಿ ವಿಷಯ ವಿರಕ್ತಿ ನೀಡುವೆ ಶಕ್ತಿ ನೀ ನಾಲ್ಕೆರಡು ಕಲ್ಪದಿ ಸಾಧಿಸಿರೆ ಪದವಿ 3 ವಕ್ರ ತುಂಡನೆ ನೀಗಿಸೆನ್ನಯ ವಕ್ರಬುದ್ಧಿ ವಿವೇಕನೀಡುತ ದಕ್ಕಿಸೈ ಶಾಸ್ತ್ರಾರ್ಥ ಚಯನವ ಚಾರುವಟು ಗಣಪ ರಕ್ತಗಂಧಪ್ರೀಯ ಸೋಮನ ಸೊಕ್ಕು ಮುರಿದೆಯೊ ಭೂಪ ಭಕ್ತಿಯ ಉಕ್ಕಿ ಸೈ ಹರಿಯಲ್ಲಿ ತವಕದಿ ಮಂಗಳಪ್ರದನೆ 4 ರಂಗ ಮಂದಿರ ದಕ್ಷಿಣಸ್ಥವಿ ಹಂಗಗಮನನ ರಾಣಿ ರುಕ್ಮಿಣಿ ಯಂಗದಲಿ ಪುಟ್ಟುತಲಿ ದಿತಿಜಾಂತಕನೆನಿಸಿಕೊಂಡು ಗಂಗೆಪಿತನನು ಸೇವಿಸಿದೆ ಮಾ ತಂಗಮುಖ ಮಹಕಾಯ ನಾರೀ ಸಂಗವರ್ಜಿತ ಬೀರು ಕರುಣಾಪಾಂಗ ದೃಷ್ಟಿಯನು 5 ಮೊದಲು ಪೊಜೆಯ ನಿನಗೆ ವಿಹಿತವು ವಿಧಿ ಭವಾದ್ಯರ ಪೊರೆವ ವಿಶ್ವನು ಮುದದಿ ನೀಡಿಹ ವರವ ಸಿದ್ಧಿಯ ಕೊಡುವೆ ಭಕ್ತರಿಗೆ ಮದದಿ ಬಿಡುವರಿಗೆಲ್ಲ ಖೇದವೆ ಒದಗಿ ಬರ್ಪುದು ಬಾಗಿ ಭಜಿಸುವೆ ಸದಯನಾಗುತ ವಿಷ್ಣು ಭಕ್ತರ ಸಂಗ ನೀಡೆನಗೆ 6 ವ್ಯಾಪ್ತ ದರ್ಶಿಯೆ ವಂದಿಸುವೆ ಪರ ಮಾಪ್ತ ಹರಿ ಭಕ್ತರಿಗೆ ನೀನಿಹೆ ಸೂಕ್ತ ಸಾಧನೆ ಗೈಸು ಖೇಶನೆ ಸೋಮಪಾನಾರ್ಹ ಆರ್ತನಿಹೆ ಬಹುಮೂಢ ಖರೆವೇ ದೋಕ್ತಮರ್ಮವ ಭಾಸಗೈಸಿ ಕೃ ತಾರ್ಥನೆನಿಸೈ ಮೃದ್ಭವ ವಿರೂಪಾಕ್ಷ ತತ್ವೇಶ 7 ಬರೆದೆ ಭಾರತ ವೇದವ್ಯಾಸರ ಕರುಣದಿಂದಲಿ ಭಕ್ತಿಯೋಗಿಯೆ ಶರಣು ಶೇಷಶತಸ್ಥರಿಗೆ ಗುರುವಿರ್ಪೆ ಹೇರಂಭ ದುರಳ ಗಣಗಳ ಕಾಟತಪ್ಪಿಸಿ ಹರಿಗೆ ಸಮ್ಮತವಿಲ್ಲ ದೆಡೆಯಲಿ ಮರುಳುಗೊಲ್ಲದ ಮನವು ನನಗಿರಲೆಂದು ಹರಸೆಂಬೆ 8 ಜಯಜಯತು ವಿಶ್ವಂಭರ ಪ್ರೀಯ ಜಯಜಯವು ಮೈನಾಕಿತನಯಗೆ ಜಯಜಯವು ಶ್ರೀಕೃಷ್ಣವಿಠ್ಠಲನ ದಾಸವರ್ಯನಿಗೆ ಜಯಜಯವು ಸದ್ವಿದ್ಯೆಕೋಶಗೆ ಮೀನಾಂಕ ಭ್ರಾತೃವೆ ಜಯಜಯವು ವಿಘ್ನೇಶ ಮಂಗಳಮೂರ್ತಿ ಗಣಪನಿಗೆ 9
--------------
ಕೃಷ್ಣವಿಠಲದಾಸರು
ಶ್ರೀಹರಿ ಸ್ತೋತ್ರ ಪಾಲಿಸೆನ್ನನು ಶ್ರೀ ಹರಿಯೆ ಸಿರಿದೇವಿ ಧೊರೆಯೇ | ಸರಸಿಜಾಸನ ಪಿತನೇ|| ಪ ಪಾರ್ಥಸೂತ ಪನ್ನಗಗಿರಿ ನಿಲಯ ಪವಮಾನ ವಂದ್ಯ | ಶ್ರೀ ಭೂರಮಣನೇ ಸೃಷ್ಟಿಗೊಡೆಯನೆ | ಕ್ಲೇಶ ಕಳೆಯುವ ಕೈಟಭಾರಿ ಕರುಣ ಶರಧಿಯೆ ಅ.ಪ ಬ್ರಹ್ಮಾದಿ ಮನುಜಾಂತ ಶ್ರವಣ ಮನನ ಧ್ಯಾನ ದಿಂದಲೇ ಕಾಂಬೋರು ನಿನ್ನ ರೂಪ ಯೋಗ್ಯತಾನುಸಾರ | ನಿಯಮ ಭಂದ ಮೋಕ್ಷ ಕರ್ತನೆ | ಶಾಂತಿ ಕೈತಿ ಜಯಾ ರಮಣನೀನೇ ಮೋಕ್ಷದಾಯಕ ಮಾಯಾಪತಿಯೇ ಸರ್ವ ಆಶ್ರಯ ಲಕ್ಷ್ಮೀ ರಮಣನೇ ಸಮರು ಅಧಿಕರು ಇಲ್ಲದಂಥಾ | ಸಾರ್ವಭೌಮನೇ ಆದಿಮೂಲನೆ ಅಪ್ರಮೇಯನೆ ಅನಿರುದ್ಧ ಮಾರುತಿ | ಎನ್ನ ಅಪವಳಿಗಳನೆ ತಂದು ಚÉನ್ನವಾಗಿ ನಿನ್ನ ತೋರಿಸಿದ 1 ಸದೋಷಿ ನಾನಹುದೋ ಸಂಕರ್ಷಣ ಮದ್ದೋಷ ಪರಿಹರಿಸೋ ನಿಗಮ ವೇದ್ಯನೆ ನಿನ್ನಧೀನವು ಎಲ್ಲಾ | ವಿಶ್ವ ತೇಜಸ ಪ್ರಾಜ್ಞರೂಪನೇ ಮೂರು ಸ್ಥಿತಿಯಲ್ಲಿ ಮುಖ್ಯ ಪ್ರವರ್ತಕ | ಅಂಡ ಪಿಂಡ ಬ್ರಹ್ಮಾಂಡದಲ್ಲಿ ಒಳ ಹೊರಗೆ ವ್ಯಾಪ್ತನೆ ವಿಶ್ವತೋಮುಖ ವಿಧಿಭವ ನುತ ವಿಚಿತ್ರ ಮಹಿಮ ವಿಭೂತಿರೂಪನೇ ವಾಸುದೇವನೇ ವಾರಿಜಾಸನ ವಂದ್ಯ ವರಾಹನೆ ಇರುವ ತಾ¥ಟಿÀ ಹರಿದು 2 ನಿರ್ಗುಣ ಗುಣ ಭರಿತಾ ನಿನ್ನ ಪರೋಕ್ಷ ಬೇಡುವೆ ಬಹುವಿಧದಿ ಭವದ ಕ್ಲೇಶಗಳ ಬಿಡಿಸೋ ಭಕ್ತವತ್ಸಲ | ಪತಿ ಸನ್ನುತ | ಪರಮ ಹಂಸೋಪಸ್ಯ ತುರ್ಯನೆ ಆತ್ಮ ಅಂತರಾತ್ಮ | ಪರಮ ಆತ್ಮ ಜ್ಞಾನಾತ್ಮ ನೀನೆ | ಕೂರ್ಮ ಕ್ರೋಢ ನರಹರಿ ಮಾಣವಕ | ಮೋದ ಕೊಡುವ ಮುದ್ದು ಬುದ್ಧನೆ | ಕಠಿಣ ಖಳರ ಕಡಿವ ಕಲ್ಕಿಯೆ ಅನಂತ ಗುಣ ಕ್ರಿಯಾ ರೂಪದಲಿ ನೀ ಸ್ವಗತ ಭೇದ ವಿವರ್ಜಿತಾತ್ಮನೇ | ನಿರಂಜನ ನಾರಾಯಣನೇ | ಪತಿ ಪ್ರಭಂಜನ ಪ್ರಿಯ ರಾಗರಹಿತ ರಾಘವೇಂದ್ರ ಸಂಸೇವ್ಯ ನರಹರಿಯೆ | ಅಜನ ತಾತ ಪ್ರಸನ್ನ ಶ್ರೀನಿವಾಸ ಲಕ್ಷ್ಮೀ ಈಶ ಹರಿಯೆ | ಪ್ರಣತಾರ್ತಿಹರ ಪ್ರಮೋದಿ ನೀನೇ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಹರಿಯ ಮಂಗಳ ಪದಗಳು ಆರುತಿ ಬೆಳಗುವೆನು ಮಾಧವಗಾರುತಿ ಬೆಳಗುವೆನು ಪ ಆರುತಿ ಬೆಳಗುವೆ ಮಾರುತಿ ಪ್ರಿಯ ಯದು-ಕೀರುತಿಕರ ಪಾರ್ಥಸಾರಥಿ ಹರಿಗೆ ಅ.ಪ. ನೀರೊಳು ಪೊಕ್ಕವಗೆ ಕಡಲೊಳು ಭಾರವ ಪೊತ್ತವಗೆಮೂರು ಪಾದದಿ ಸರ್ವಧಾರುಣಿ ಅಳೆಯುತಧೀರ ಬಲಿಯ ಮನೆ ದ್ವಾರ ಕಾಯ್ದವಗೆ 1 ಕ್ಷತ್ರಿಯರ ಗೆಲಿದವಗೆ ಗಾರ್ಜಿತ ಸತ್ರವ ಕಾಯ್ದವಗೆಸತ್ಯ ರುಕ್ಮಿಣಿ ಮುಖ್ಯ ಪತ್ನಿಯರಾಳಿದಬತ್ತಲೆ ಕುದುರಿಯ ಹತ್ತಿ ಮೆರೆದವಗೆ 2 ಸೃಷ್ಟಿಯು ಇಲ್ಲದವಗೆ ಜಗವನು ಸೃಷ್ಟಿ ಪಾಲಿಪಗೆಬಟ್ಟಿಲಿಂದಲೇ ಗಿರಿ ಬೆಟ್ಟನೆತ್ತಿದ-ಭೀಷ್ಟ ನೀಡಲು ಸುಖ ಪುಷ್ಪವಂದಿತಗೆ 3 ನಂದಗೋಕುಲದಲ್ಲೆ ಬೆಳೆಯುವ ಮಂದಜಾಕ್ಷಿಯರಲ್ಲೆಒಂದೊಂದು ಆಟಗಳಾಡಿ ಸುಖವನಿತ್ತನಂದ ಬಾಲಕನಾದ ಇಂದಿರೇಶನಿಗೆ4
--------------
ಇಂದಿರೇಶರು
ಷಟ್ಪದಿ ಕೂಟವಾಳುವ ಶ್ರೇಷ್ಠ ಶಾರದೆ | ಕೈಟ ಭಾರಿಯ ಭಕ್ತಿ ವೃಕ್ಷವ| ನಾಟಿ ಹೃದಯದಿ ಬೆಳಸೆ ಶುಭಗುಣ ಖಣಿಯೆ ಮಂಗಳೆಯೆ 1 ಪೋಲ್ವ ಮೂಢನ | ಭಾರ ನಿನ್ನದೆ ದೀನ ವತ್ಸಲೆ ಯೆ| ಶುಭಮರ್ಮ ಕಳಿಸುತ | ಶ್ರೀನಿವಾಸನ ಭಕ್ತಿ ಜ್ಞಾನವಿರಕ್ತಿ ಕೊಡಿಸಮ್ಮ 2 ವೇಣಿ ವೀಣೆಯ | ಗಾನ ನುಡಿಸುವ ಜಾಣೆ ವಿಧಿಮನ ಹಾರಿ ಕೋಮಲೆಯೆ | ಶೂನ್ಯ ಮೂರು ರೂಪಳೆ | ಸಾನುರಾಗದಿ ವಲಿದು ಹರಿಪಥ ಸಿಗಿಸಿ ಪೊರೆಯಮ್ಮ 3 ರಮ್ಯರೂಪಗಳಿಂದ ನಾ ನಾ | ರಮ್ಯಸೃಷ್ಟಿಗಳಿಗನುವಾಗುತ ಹರಿಯ ಸೇವಿಸಿದೆ | ನುಡಿಸಿ ಕರಿಸುವಿ | ಯಮ್ಮ ಜಗದಿ ಸರಸ್ವತೀಯಂತೆಂದು ವಿಪಮಾತೆ 4 ಮಾಯ್ಗಳ ಗೆಲ್ವ ಬಗೆ ತೋರು | ಮಾತೆ ಯೆನಿಸಿಹೆ ವಿಕಟ ಜಗದವತಾರ ವರ್ಜಿತೆ ಶರಣು ಶ್ರೀ ಸೊಸೆಯೆ 5 ಕೃತಿ ಸುತೆಸು | ಮಧ್ವಶಾಸ್ತ್ರದಲಿ ಮನದಕು| ಬುದ್ದಿಗಳ ಕಡಿಸಿ ಪ್ರಸಿದ್ಧಿಯ ನೀಡಿ ಸಾಕಮ್ಮ | ಪದ್ಮನಾಭನ ವೇದ ಸಮ್ಮತಿ | ಯಿಂದ ಪಾಡುತ ಭಾಗ್ಯವಾಹುದೆ | ಎಂದಿಗಾದರು ನೀನೆ ಮನದಲಿ ನಿಂತು ನುಡಿಸದಲೆ 6 ವಿನೋದ ಗೊಷ್ಠಿಯ | ಹಾದಿ ಹಿಡಿದವಿವೇಕಿ ನಾನಲೆ ಕೇಳು ವಿಪತಾಯೆ | ಮಾಧವನು ಸಿಗನಮ್ಮ | ಆದರದಿ ಸಾರಿದೆನು ಕವಿಜನಗೇಯೆ ವಿಧಿಜಾಯೆ 7 ನೀರಜ ರುದ್ರರ ಬಿಂಬೆ ಭಕ್ತರ | ಸ್ತಂಭೆ ಶಾಂಭವಿ ವಂದ್ಯೆ ನಿತ್ಯದಿ | ಉಂಬೆ ಸುಖಗಳನೂ | ಸಾರ ಕೈಗೊಡಿಸಮ್ಮ ಸಮೀರ ಗ್ಹೇಳುತಲಿ 8 ಭೃತ್ಯ ನಿತ್ಯ ಭಕ್ತಳೆ | ವಿತ್ತ ವನಿತಾ ವ್ಯಾಧಿ ಹರಿಸುತ ಚಿತ್ತ ಶುದ್ಧಿಯನು | ಸಪ್ತ ಶಿವಗಳ ಮರ್ಮ ಬೇಗನೆ ವತ್ತಿ ಮಿಥ್ಯಾಜ್ಞಾನ ತಿಮಿರವ ಭಕ್ತಿ ಭಾಸ್ಕರಳೆ 9 ಸುಖಗಳನುಂಬೆ ಭುಜಿವಿದಿ| ತಳಿಹೆ ಪತಿತೆರದ್ವಿಶತ ಕಲ್ಪಗಳಲ್ಲಿ ಸಾಧನೆಯು | ಶಾಪವ ಶ್ಯಾಮಲಾಶಚಿ | ಗಳಿಗೆ ದ್ರೌಪತಿ ಇಂದ್ರ ಸೇನಾಕಾಳಿ ಚಂದ್ರಾಖ್ಯೆ 10 ನಿಂತು ಶಶಿಯಿಲ್| ಭೂತ ಗುಪಚಯವಿತ್ತು ಸೃಷ್ಠಿಯ ಕಾರ್ಯಗನುವಾಹೆ | ಪತಿ ನಿನಗಹುದಮ್ಮ ಕೊರತೆಯು | ಯಾತರಿಂದಲು ಯಾವಕಾಲುಕು ಇಲ್ಲರಯಿ ನಿನಗೆ 11 ಕವಚ ತೊಡಿಸುತ | ಶ್ರೀನಿವಾಸನಭಕ್ತನಿಚಯಕ್ಕೆ ಕೈಮುಗಿದು ಆನತಾಮರಧೇನು ಮುಖ್ಯ | ಪ್ರಾಣಮಂದಿರನಾದಶುಭಗುಣ ಪೂರ್ಣಪೂರ್ಣಾನಂದ ತದ್ವನ ಬಾದರಾಯಣಗೆ 12 ದೈನ್ಯ ದಿಂದಸಮರ್ಪಿಸುತ ಪವಮಾನರಾಯನ ಕರುಣವೆಲ್ಲೆಡೆ ಅನ್ಯ ವಿಷಯವ ಬೇಡದಂದದಿ ಮಾಡುತಲಿಯನ್ನ | ಜ್ಞಾನ ಭಕ್ತಿ ವಿರಕ್ತಿ ಸಂಪದ | ನೀನೆ ನೀಡುತ ಸಲಹೆ ಕೃತಿಸುತೆ | ನೀನೆ ಸಾಸರಿ ನಮಿಪೆ ಬೃಹತೀಖ್ಯಾತ ಭಾರತಿಯೆ 13 ಸೇರಿ ತಾಂಡವ ಮಾಡಿ ಪಾದ ಪಂಕಜವ ಸೂರಿ ಸಮ್ಮತ ವೇದ ಗಾನದಿ | ಸಾರಿ ಸಾರಿಸೆ ಸೇರು ವದನದಿ | ನೀರ ಜಾಕ್ಷನ ಸೊಸೆಯೆ ಶುಚಿಶತಿ ನಮಿಪೆ ಭೂಯಿಷ್ಠ 14
--------------
ಕೃಷ್ಣವಿಠಲದಾಸರು
ಸಕಲವೆಲ್ಲವು ಹರಿಸೇವೆ ಎನ್ನಿ ಯಕುತಿವಂತರು ಹರಿಭಕುತಿ ಯೆನ್ನಿ ಧ್ರುವ ಹುಟ್ಟಿ ಬಂದಿಹ್ಯದೆ ವಿಠ್ಠಲನ ಸುಸೇವೆಗೆನ್ನಿ ಸೃಷ್ಟಿಯೊಳಿಹ್ಯದೆ ಶ್ರೀ ವಿಷ್ಣು ಸಹವಾಸವೆನ್ನಿ 1 ಬದುಕಿ ಬಾಳುದೇ ಇದು ಶ್ರೀಧರ ಉದ್ದೇಶವೆನ್ನಿ ಸಾಧನ ಸಂಪತ್ತು ಶ್ರೀ ಮಾಧವನದು ಎನ್ನಿ 2 ಉಂಬುಂತಿಂಬುದೆಲ್ಲ ಅಂಬುಜಾಕ್ಷನ ನೈವೇದ್ಯವೆನ್ನಿ ಕೊಂಬುಕೊಡುವ ಹಂಬಲ ಶ್ರೀ ಹರಿಯದೆನ್ನಿ 3 ಇಡುವ ತೊಡುವದೆಲ್ಲ ಪೊಡವಿಧರನಾಭರಣವೆನ್ನಿ ಉಡುವ ಮುಡಿವದೆಲ್ಲ ಹರಿಯ ಸಡಗರವೆನ್ನಿ 4 ನುಡಿವ ನುಡಿಗಳೇ ಹರಿಬಿಡದೆ ಕೊಂಡಾಡುದೆನ್ನಿ ಬಡುವ ಹರುಷವೆಲ್ಲ ವಸ್ತುದೇ ಎನ್ನಿ 5 ನಡೆವ ನಡಿಗೆಯಿಲ್ಲ ಹರಿಯ ಪ್ರದಕ್ಷಿಣಿ ಎನ್ನಿ ಎಡವಿ ಬೀಳುದು ಹರಿನಮವೆನ್ನಿ 6 ಏಳುವ ಕೂಡುವದೆಲ್ಲ ಹರಿಯ ಊಳಿಗವೆನ್ನಿ ಹೇಳಿ ಕೇಳುದೆಲ್ಲ ಹರಿಪುರಾಣವೆನ್ನಿ 7 ನೋಡುವ ನೋಟಗಳೆಲ್ಲ ಹರಿ ಸುಲಕ್ಷಣವೆನ್ನಿ ಮಾಡುವ ಮಾಟಗಳೆಲ್ಲ ಹರಿಯದೆನ್ನಿ 8 ಮಲಗಿ ನಿದ್ರೆಗೈವದೇ ಹರಿಯ ಕಾಲಿಗೆರಗುದೆನ್ನಿ ಬಲಕ ಎಡಕ ಹೊರಳುದೇ ಲೋಟಾಂಗಣ(?) ವೆನ್ನಿ 9 ವನಿತೇರ ಸಂಗವೇ ತಾ ಹರಿಯ ಲೀಲೆಯು ಎನ್ನಿ ತನುಮನವೆಲ್ಲಾ ಹರಿಸ್ಥಾನವೆ ಎನ್ನಿ 10 ಸತಿಸುತ ಮಿತ್ರರೆಲ್ಲ ಹರಿಸೇವೆ ದೂತರೆನ್ನಿ ಮತ್ತೆ ಬಂಧುಬಳಗೆಲ್ಲ ಹರಿಯದೆನ್ನಿ11 ಸುಖದು:ಖವೆಂಬುದೇ ಶ್ರೀಹರಿಯ ಸಂಕಲ್ಪವೆನ್ನಿ ನಕ್ಕು ನುಡುವುದೆಲ್ಲ ಹರಿ ಆಖರವೆನ್ನಿ 12 ಹೆಣ್ಣು ಹೊನ್ನಾರ್ಜಿತವೆಲ್ಲ ಹರಿಯ ಕಾಣಿಕೆ ಎನ್ನಿ ನಾನೀನೆಂಬುದೆಲ್ಲ ಹರಿಚೇತನವೆನ್ನಿ 13 ಸ್ವಾರ್ಥ ಹಿಡಿವದೆಲ್ಲ ಪಾರ್ಥನ ಸ್ವಾಮಿಗೆ ಎನ್ನಿ ಅರ್ತು ಮರ್ತು ನಡೆವ ಹರಿಕರ್ತೃತ್ವವೆನ್ನಿ 14 ಅಂತ್ರಬಾಹ್ಯವೆಲ್ಲ ಹರಿಗುರು ಮಾತೃಪಿತೃವೆನ್ನಿ ಗುರ್ತುವಾದದ್ದೆಲ್ಲ ತೀರ್ಥಕ್ಷೇತ್ರವೆನ್ನಿ 15 ಲಾಭಾಲಾಭವೆಲ್ಲ ಹರಿಪಾದಕರ್ಪಿತವೆನ್ನಿ ಶುಭಾ ಶುಭವೆಲ್ಲ ಹರಿಶೋಭೆಯು ಎನ್ನಿ 16 ಕನಸು ಮನಸುಗಳೆಲ್ಲ ಹರಿಯ ನೆನೆವ ಸೇವೆನ್ನಿ ಧೇನಿಸಿ ಬಯಸುದೇ ಹರಿಧ್ಯಾನವೆನ್ನಿ 17 ನಿತ್ಯಕರ್ಮವೆಲ್ಲ ಹರಿಪಾದಕ ಸಮರ್ಪಣವೆನ್ನಿ ಸತ್ಯಾಸತ್ಯವೆಲ್ಲ ಹರಿ ಅಗತ್ಯವೆನ್ನಿ 18 ಹೆಜ್ಜೆಗೊಮ್ಮೆ ಬೆಜ್ಜರ್ಹಿಡಿದು ರಾಜೀವನಯನನೆನ್ನಿ ಸಜ್ಜನರೊಡೆಯ ಗಜವರದ ಎನ್ನಿ 19 ಸೋಹ್ಯ ಸೂತ್ರವೆಲ್ಲ ಹರಿಯ ಮಹಾಮಹಿಮೆ ಎನ್ನಿ ಗುಹ್ಯಗೂಢವೆಲ್ಲ ಹರಿಯಗುರುತ ಎನ್ನಿ 20 ಇಹಪವೆಲ್ಲ ಹರಿಸೇವೆಗನುಕೂಲ ವೆನ್ನಿ ಸೋಹ್ಯ ಮಾಡುದೆಲ್ಲ ಹರಿಯ ದಯವೆನ್ನಿ 21 ಸಕಲ ಧರ್ಮಗಳೆಲ್ಲ ಹರಿಯ ಶಿಖಾಮಣಿಯೆನ್ನಿ ಪ್ರಕಟವಾಗಿ ದೋರುದೇ ಪ್ರತ್ಯಕ್ಷವೆನ್ನಿ 22 ನೇಮನಿತ್ಯ ಇದೇ ಮಹಿಪತಿಯ ಸ್ವಾಮಿಯದೆನ್ನಿ ಪ್ರೇಮದಿಂದ ಒಪ್ಪಿಸಿಕೊಂಬ ದಯಾಳುವೆನ್ನಿ 23
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಚ್ಚಿದಾನಂದಾತ್ಮ ಪರಿಪಾಹಿ ಪಾಹಿ ಪರಮಾತ್ಮ ಪ ಸಚ್ಚಿದಾನಂದಾತ್ಮ ಮುಕುಂದ ಅಚ್ಯುತಾನಂತ ಗೋವಿಂದ ಆನಂದಾ ಅ.ಪ ಜನರುದ್ಧಾರ ನೀರಜಾಂಡ- ಚರ ಬಾಹಿರಾಂತರ ನಿರುತ ಚರಾಚರದೊಳಗೆ ಸಂಚಾರಾ ಗಂಭೀರ ಗಂಭೀರ ಗಂಭೀರ ವಾರಿವಿಹಾರ ಮಂದರೋದ್ಧಾರಾ ಧರಣಿಸೂಕರ ನರಮೃಗಾಕಾರ ಯಾಚಕ ಧೀರ ನರಪರ ಶಿರತರಿದೆತ್ತಿ ಬಿಲ್ಲನು ದಶಕತ್ತನು ಕ್ಷಣದೊಳು ಕ- ತ್ತರಿಸಿ ತುರುಗಳ ಕಾಯ್ದ ಬತ್ತಲೆ ನಿಂದ ತೊರೆಯುತ ಬಂದ ಗೋವಿಂದಾ ಈ ಭೂ- ಧರದೊಳು ನಲವಿಂದ ಕ್ರೀಡಿಪ ಪರಿಪರಿಯಿಂದ ಸುರಮುನಿಗಣ ಸಂಸ್ತುತಿಯಿಂದ ಗೋವಿಂದ ಗೋವಿಂದ 1 ಕಾಂತಾ ಕಾಂತಾ ಕಾಂತಾ ಕಾಂತಾ ಜಗದಾ- ದ್ಯಂತ ನಿರುತ ನಿಶ್ಚಿಂತ ಗುಣಗಣಭರಿತ ಸಂತತ ನಿನ್ನ ವಾಕ್ ತಂತಿನಾಮ ಧಾಮದಿ ಈ ಜಗ ಬಂಧಿಸಿಹುದು ಆದ್ಯಂತ ಶ್ರೀಕಾಂತ ಶ್ರೀಕಾಂತ ಶ್ರೀಕಾಂತ ಶ್ರೀಕಾಂತ ಶ್ರೀಕಾಂತಾ ಶ್ರೀಕರಾರ್ಚಿತತ್ರಿಗುಣವರ್ಜಿತ ಅನುಪಮಚರಿತ ಆದ್ಯಂತರಹಿತ ಸ್ವರಸಸುಭೋಕ್ತ ಸ್ವಗತಭೇದವಿವರ್ಜಿತ ಅಚ್ಯುತ ಮಚ್ಛಕಚ್ಛಪಾದ್ಯಜಿತಾದಿರೂಪನಿ- ನ್ನಿಚ್ಚೆಯಂತೆ ಸಿರಿಮೆಚ್ಚಿಸಿ ನಿನ್ನ ವಿಚಿತ್ರಕರ್ಮಗಳ ನಿಚ್ಚದಿ ನೋಡಿ ನಲವಿಂದ ಈ ಸೃಷ್ಟಿಲೀಲೆ- ಯ ಚಂದಾ ಚತುಷ್ಟಾತು ನಿನ್ನಯ ದಯದಿಂದ ಈ ಜಗಬಂಧಕ ಶಕುತಿ ನಿನ್ನಿಂದ ಗೋವಿಂದ 2 ದೇವ ದೇವ ದೇವ ದೇವಾದಿವಿಜಯವಂದ್ಯಸ್ವಭಾವ ದೇವ ನಿಜಸದ್ಭಾವ ಭಜಕರ ಕಾವ ಅಭಯವ- ನೀವ ವಿಶ್ವಾದಿ ರೂಪದಿಂದ ಜೀವರ ಭೋ- ಗಾವಸ್ಥಾತ್ರಯದಲಿ ನಡೆಸುತ್ತಿರುವ ಭೂ ದೇವ ಶ್ರೀ- ದೇವ ಭೂದೇವ ದುರ್ಗಾಧವ-ದುರ್ಗಾಧವಾ ನೀವ್ಯಾಪ್ತನು ಸರ್ವ-ತತುವರ ಕ್ರಿ- ಯವಾ ಪ್ರೇರಿಸಿ ನಡೆವ ದೇವ ವ್ಯಾಪಾ ರವ ಮಾಡಿ ಮಾಡಿಸಿ ಎತ್ತಲು ಚೇತನಚಿ- ತ್ತವಿತ್ತು ಪ್ರವೃತ್ತಿಗೈಸಿ ಫಲವಿತ್ತು ಜನು- ಮವ ಸುತ್ತಿಸುತ್ತಿಸಿತಂದಿತ್ತಪೆ ಶ್ರೀಪುರುಷೋತ್ತಮ ನೀನಿರ್ಲಿಪ್ತ ನೀನಂಚಿತ್ಯ ಅನಂತ ಶ್ರೀ ವೇಂಕಟೇಶ ನಿನ್ನಂಥ ಪೊರೆವರಕಾಣೆ ಉನ್ನಂತ ಉರಗಾದ್ರಿವಾಸವಿಠಲ ಶಾಂತ ಮಹಂತ3
--------------
ಉರಗಾದ್ರಿವಾಸವಿಠಲದಾಸರು
ಸಂತರೆನಬಹುದು ಸಜ್ಜನರಿವರನಾ ಪ ಇಂಥ ಗುಣಗಳಿಂದ ಯುಕ್ತರಾಗಿಪ್ಪರ ಅ.ಪ. ಸ್ವಾಂತಸ್ಥಾ ನುತ ಸರ್ವಾಂತರಾತ್ಮಕನೆಂದು ಚಿಂತಿಸುತ ಮನದೊಳು ನಿರಂತರದಲಿ ನಿಂತಲ್ಲಿ ನಿಲ್ಲದೆ ದುರಂತ ಮಹಿಮನ ಗುಣವ ಸಂಸ್ತುತಿಸುತನವರತ ಶಾಂತರಾಗಿಹರಾ 1 ಲೇಸು ಹೊಲ್ಲೆಗಳು ಪ್ರದ್ವೇಷ ಗೇಹಗಳು ಸಂ ತೋಷ ಕ್ಲೇಶಗಳಿಗವಕಾಶ ಕೊಡದೆ ದೋಷ ವರ್ಜಿತ ಹೃಷಿಕೇಶ ಮಾಡುವನೆಂದು ಭೇಶನಂದದಲಿ ಪ್ರಕಾಶಿಸುತಲಿಹರಾ 2 ಮೇದಿನಿ ದಿವಿಜರೊಳು ಸಾಧು ಜನರೊಳು ಧರ್ಮಕರ್ಮಗಳೊಳು ಶ್ರೀದನೊಳು ಗೋವುಗಳೊಳಗೆ ದ್ವೇಷಿಪರಿಗೆ ಅ ನ್ನೋದಕಗಳೀಯದೆ ನಿಷೇಧಗಯ್ಯುತಲಿಹರಾ 3 ಎನ್ನ ಪೋಲುವ ಪತಿತರಜ್ಞಾನಿಗಳು ಜಗದೊ ಳಿನ್ನಿಲ್ಲ ಪತಿತ ಪಾವನನೆನಿಸುವ ಜಾಹ್ನವೀ ಜನಕಗಿಂದಧಿಕರ್ಯಾರಿಲ್ಲೆಂದು ಉನ್ನತೋತ್ಯಂಶದಿಂದ ಸನ್ನುತಿಸುತಿಪ್ಪವರ 4 ಸತ್ಯ ಸಂಕಲ್ಪ ಏನಿತ್ತಿದ್ದೆ ಪರಮ ಸಂ ಪತ್ತು ಎನಗೆನುತ ಸದ್ಭಕ್ತಿಯಿಂದಾ ನಿತ್ಯದಲಿ ಕೀರ್ತಿಸುತ ಪುತ್ರಿಮಿತ್ರಾದಿಗಳು ಭೃತ್ಯಾನುಭೃತ್ಯರೆಂದರ್ತಿಯಲಿ ಸ್ಮರಿಸುವರಾ 5 ಜನುಮ ಜನುಮಗಳಲ್ಲಿ ಎನಗೆ ಜನನೀ ಜನಕ ಅನುಜ ತನುಜಾಪ್ತ ಪೋದನ ಭೂಷಣಾ ಅನಿಮಿತ್ತ ಬಂಧು ಒಬ್ಬನೇ ಎನಿಸುತಿಪ್ಪ ಸ ಪರ ಸೌಖ್ಯ ರೂಪನೆಂಬುವರಾ 6 ನಾಗೇಂದ್ರಶಯನ ಭವರೋಗಾಪಹರ್ತ ಪಾ ವಜ್ರ ಅಮೋಘ ಶೌರ್ಯ ತ್ರೈಗುಣ್ಯ ವರ್ಜಿತ ಜಗನ್ನಾಥ ವಿಠಲಗೆ ಕೂಗಿ ಕೈಮುಗಿದು ತಲೆಬಾಗಿ ನಮಿಸುವರಾ 7
--------------
ಜಗನ್ನಾಥದಾಸರು
ಸತ್ಯ ಭಕ್ತೇಶ | ನತೋಸ್ಮ್ಯಹಂ | ಸತತಂ ಪ ಪ್ರತ್ಯುಹರರ್ಥಿತ ಸಜ್ಜನ ನಿವಹಂಸ್ತುತ್ಯ ಸದ್ವೈಷ್ಣವ ಸನ್ಮತ ಪ್ರಚುರಂ |ದೈತ್ಯಹರಂ | ಪೃಥೆ ಕುವರಂ || ಆರ್ತಿದ ಮಾಯ್ಮತ ಧ್ವಂಸಕರಂಪ್ರಾರ್ಥಿತ ಫಲ್ಗುಣ ರಥ ಸ್ಥಿತಂ | ಭೋ ಸುಮತಿ ಜ್ಞಂ ಅ.ಪ. ಭವ ಭಯ ನಿರ್ಗಮೋಪಾಯಂ |ಕರ್ಗಳು ಶೀರ್ಷ ಸಮಗ್ರೋಪಾಂಗ ನಿ |ರರ್ಗಳ ವ್ಯಾಪ್ತ ಶ್ರೀ ಹರಿ ರೂಪಂ ||ವಿತತ ಸಂದರ್ಶನ ಸಚ್ಚಿತ್ಸುಖಮಯ ದೇಹಂ | ನಮಾಮಿ ಧರ್ಮಂ 1 ಹಸ್ತಿ ಭವಾರ್ಣವ ಊರ್ಜಿತ ಸ್ವಜನಗರ್ಜನೆ ಮಿಶ್ರರ ಲಿಂಗಪಸರಣಂ |ಕಲಿವಪು ಹರಣಂ | ಭೋಪ್ರಥಮಾಂಗಂ 2 ರಜತ ಪೀಠ ಪುರವರ ದಾಸಂ |ಹೃತ್ಸರೋಜದೃತ ವೇದವ್ಯಾಸಂ |ತತ್ವ ? ವಿಚಾರೆ ಅಸದೃಶ ಮಹಿಮಂ |ಭಕ್ತಾಭಯ ಪ್ರದ ವಿತತ ತ್ರೈಭುವಂ |ಕರ್ಮೆಂದೀಂದ್ರಂ | ಮುಕ್ತ ಸುಸೇವ್ಯಂ ದೋಷ ರಹಿತ ಹರಿ ತೋಷಿತ ಹೃದಯಂ | ಸದ್ಗುಣಾರ್ಣವಂ |ವಿತತಾತಥ್ಯ ಸಚಾದ್ಧ ಜೈನ | ದುರ್ಮತನಿವಹ ವಿಧ್ವಂಸನ ಶೀಲಂ |ಆಸ್ತಿಕ ಹರಿಮತ ಸುಸ್ಥಿರ ಸ್ಥಾಪಿಸುವ್ಯಕ್ತ ಭಕ್ತ ಹೃತ್ಸರಸಿಜ ಪೀಠ ವಿನ್ಯಸ್ತ | ಸುರೂಪ |ಗುರು ಗೋವಿಂದ ವಿಠಲಜ | ಮಹಿಮಾ ಗಾಧಂ | ಸ್ತೋತ್ರಾ ಸೌಧ್ಯಂ 3
--------------
ಗುರುಗೋವಿಂದವಿಠಲರು
ಸತ್ಯಧರ್ಮ ಸದ್ಗುರುವರ ರಕ್ಷಿಸು ಪ ಭೃತ್ಯ ನೀನಾಗೆಂದು ಕೃತ್ಯ ವಿಪರ್ಯಯ ವೆತ್ತಣಿಸದೆ ಕೃತಕೃತ್ಯನ ಮಾಡಿಂದು ಅ.ಪ ಸತ್ಯವರರ ವರ ಕುವರನೆ ನೀನತ್ಯುತ್ತಮ ಸುಖ ಚಿನ್ನ ಯತ್ಯಾಶ್ರಮ ಸದ್ಧರ್ಮಾಚರಣದಿ ನಿತ್ಯಾರ್ಜಿತ ರಾಮ ಭೃತ್ಯಜನಕೆ ಸದ್ಬುದ್ಧಿ ಬೋಧಿಸಿ ಕೃತಕೃತ್ಯರ ಮಾಡುತಲಿ ಸುನಾಮ ಯಥಾರ್ಥಪಡಿಸಿ ಕ್ಷಿತಿಗುತ್ತಮನೆಸಿದ 1 ಭದ್ರಾತೀರನೆ ಇತ್ತು ಸುಭದ್ರಗಳ್ ನಿದ್ರಾರಹಿತರಿಗೆ ಆದ್ರಾಂತಃಕರುಣನೆ ಸೌಹಾರ್ದದಿ ಭದ್ರಾರಮಣನಲಿ ಛಿದ್ರರಹಿತ ಶಿಲೆ ಮಧ್ಯದಿ ಪಡೆದು ಸುಭದ್ರಾಪತಿ ಸಖ ಮುದ್ರಾಧರನೆ 2 ಶ್ರೀ ನರಹರಿ ಪದ ನೀನನುದಿನದಲಿ ಧ್ಯಾನಮಾಡುತ ಬಾಹ್ಯ ಜ್ಞಾನವಿಲ್ಲದೆ ಅನುಮಾನ ವಿಪರ್ಯಯ ಹೀನಗೈಸಿ ಸಾಕ್ಷಿ ಮಾನದಿಂದ ಕೊಟ್ಯಾರ್ಭುದ ರವಿಪ್ರಭೆ ಕಾಣುತ ಪ್ರತಿಮುಖವೋಲ್ ಏನು ಇದಕೆ ಅನುಮಾನವಿಲ್ಲ ಹಂ ಮನಿಯವನೆನ್ನುವೆ ನೀ ಸರಿಲಿಂಗರೂಪಧರ3
--------------
ಪ್ರದ್ಯುಮ್ನತೀರ್ಥರು
ಸತ್ಯಧ್ಯಾನತೀರ್ಥರು ಇಷ್ಟು ಸುಲಭದಲಿ ಈ ಮುದ್ದು ಯತಿ ವರರಿಗೆ ಪ್ರೇಷ್ಠತಮ ನೀ ನೊಲಿದ ಬಗೆಯೇನೋ ರಾಮಾ ಪ ಪಟ್ಟ ಪುತ್ರನ ಶ್ರೇಷ್ಠ ಪೀಠದಲಿ ಕುಳಿತಿಂದು ಮುಟ್ಟಿ ಪೂಜಿಪ ಭಾಗ್ಯಗಿಟ್ಟಹುದೆ ಏನೆಂಬೆ ಅ.ಪ. ಚಿಕ್ಕತನದಲೆ ನೂಕಿ ವಿಷಯ ವಿದ್ಯೆಗಳನ್ನು ಚೊಕ್ಕ ಶಾಸ್ತ್ರಗಳಲ್ಲಿ ಇಕ್ಕಿ ದಾಸರ ಮನವಲಿದ್ಯೋ ಕಕ್ಕಸವುಭವವೆಂದು ವೈರಾಗ್ಯ ಧರಿಸುತಲಿ ಭಕ್ತಿ ಮಾಳ್ಪುದ ನೋಡಿ ಮುಕ್ತರಾಶ್ರಯ ವಲಿದ್ಯೋ 1 ದಾನಶೂರರು ಬಹು ನಿದಾನ ವಂತರು ಹಾಗೆ ಮಾನ ಸಾಗರರೆಂದು ಜ್ಞಾನಿ ಪ್ರಾಪ್ತನೆ ವಲಿದ್ಯೋ ದೀನ ಜನ ಮಂದಾರ ಮಾನ್ಯ ಮುನಿಕುಲ ತಿಲಕ ಶೂನ್ಯವಾದಧ್ವಾಂತ ಭಾನು ವೆಂದೊಲಿದ್ಯೋ 2 ಮೋದವಿತ್ತರು ಸತ್ಯಧ್ಯಾನ ತೀರ್ಥರು ಹಿಂದೆ ಸಾಧಿಸುತ ಸುಖಮತದ ಜಯ ಭೇರಿ ಜಗದೀ ಸಾಧು ಜನರ ಜ್ಞಾನ ಖೇದವಳಿಯುತ ಪ್ರಮೋದ ವೀಯುವರೀಗೆ ಸಿದ್ದವೆಂದೊಲಿದ್ಯೋ 3 ಹಿಂದಿ ನ್ಹಿರಿಯರ ವಲವೊ ಮಂದಿ ಪುಣ್ಯವೊ ಮತ್ತೆ ತಂದೆ ಕರುಣವೊ ಕಾಣೆ ಬಂದುದೀ ಪೀಠದಲಿ ವಿಧಿ ವಿನುತ ರಾಮ ನಿನ್ನೊಲಸಿಹ ಪ್ರ ಮೋದ ತೀರ್ಥರುಸತ್ಯ ಪಾಮರರಿಗಾಗುವುದೆ ಸ್ತುತಿಸೆ 4 ಸಾಧು ಸಜ್ಜನ ಪ್ರಾಪ್ಯ ಬಾದರಾಯಣ ಶರಣು ಮೋದ ಮಯ ನಿರ್ದೋಷ ವೇದ ವೇದ್ಯನೆ ಶರಣು ಮಾಧವ ಶ್ರೀ ಕೃಷ್ಣ ವಿಠಲರಾಯನೆ ಶರಣು ಗಾಧವರ್ಜಿತ ಮಹಿಮ ಶ್ರೀ ರಾಮ ಶರಣು ಶರಣು 5
--------------
ಕೃಷ್ಣವಿಠಲದಾಸರು
ಸಮೀರನ ಮಹಿಮೆ ಪೇಳುವೆವಾಸುದೇವ ವಿಧೀರ ಮುಖಸುರರಾಶಿತಸ್ತ್ರೀ ಮುನಿಯತೀಶ ಸು-ದಾಸರಭಿ ನಮಿಪೆ ಪ ವಾರಿಧಿಯನು ದಾಟುಲೋಸುಗಶ್ರೀ ರಮೇಶನ ನಮಿಸಿ ಗಿರಿಯನುಚಾರು ಚರಣದಿ ಮೆಚ್ಚಿ ಮೇಲಕೆ ಹಾರಿದನು ಹನುಮಾ 1 ಹರಿಯ ಬಲವನು ಸರಿಸಿ ಪೋದುವುತರುಗಳಬ್ಧಿಯು ಯಾದಸಂಗಳುಶರಧಿ ತಳಗತ ಕಪಿಯಗೋಸುಗಗಿರಿಯು ಎದ್ದಿಹನು 2 ಧರಣಿಧರ ಪಕ ನಾಶ ಕಾಲದಿಮರುತ ರಕ್ಷಿತ ಪಕ್ಷ ಹೈಮನುಶರಧಿ ಭೇದಿಸಿ ಹನುಮ ವಿಹೃತಿಗೆತ್ವರದಿ ಬಂದಿಹನು 3 ಪರಮ ಪೌರುಷ ಬ ಲನು ಕಪಿವರಚರಿಸದಲೆ ವಿಶ್ರಮವನದರೊಳುಹರುಷದಿಂದಪ್ಯವನ ಕಂಡನುಉರಗ ಮಾತೆಯನು 4 ಸುರಸೆಯೆಂಬುವ ನಾಗಮಾತೆಗೆವರವ ನೀಡುತ ಕಪಿಯ ಬಲವನುಅರಿಯಲೋಸುಗ ಕಳುಹಿಸೀದರುಸುರರು ಶರಧಿಯಲಿ 5 ಯಾವ ವಸ್ತುವ ತಿನ್ನೋ ಇಚ್ಛೆಯು ೀವಿ ನಿನಗಾಗುವದೊ ಅದು ತವಬಾಯಿಗನ್ನಾಗಿರಲಿ ಎಂದರುದೇವತೋತ್ತುಮರು 6 ಸುರರ ವರವನು ಕಾಯೊಗೋಸುಗಸುರಸೆ ಮುಖದೊಳು ಹೊಕ್ಕು ಹೊರಡುತಪರಮಮಣು ರೂಪದಲಿ ದಿವಿಜರಹರುಷ ಬಡಿಸಿದನು 7 ಅಸುವರಾತ್ಮಜನುರು ಪರಾಕ್ರಮಹೃಷಿತರಾಗುತ ನೋಡಿ ದಿವಿಜರುಕುಸುಮವೃಷ್ಟಿಯ ಮಾಡುತವನಲಿಯಶಸು ಪಾಡಿದರು 8 ಛಾಯಾ ಪ್ರಾಣಿಗಳನ್ನು ಹಿಡಿಯುವಮಾಯಾ ಸಿಂಹಕೆ ನಾಮ ಕಸುರಿಯವಾಯುಸುತ ನೋಡಿದನು ಎದುರೆ ವಿಹಾಯ ಮಾರ್ಗದಲಿ 9 ವಿಧಿಯು ಲಂಕೆಯ ಕಾಯಲೋಸುಗಸುತಿಗ್ವರಗಳನಿತ್ತು ಕಾದಿಹಾಮದದಿ ಅಸುರಿಯು ತನ್ನ ಛಾಯವವದಗಿ ಪಿಡಿದಿಹಳು 10 ಆಗ ಆಕೆಯ ಪೊಕ್ಕು ಪೊಟ್ಟೆಯಯೋಗದಿಂದಲಿ ಪಾವಮಾನಿಯುಬೇಗ ಬಂದನು ಹೊರಗೆ ತತ್ತನುಭಾಗ ಮಾಡುತಲೆ 11 ಆತ್ಮಬಲವಮಿತೆಂದು ತೋರಿವಿಧಾತೃ ವರವುಳ್ಳವಳ ಕೊಲ್ಲುತವಾತನಂತೆ ತ್ರಿಕೂಟ ಪರ್ವತಕೀತ ಹಾರಿದನು 12 ಬೆಕ್ಕಿನಂದದಿ ಹನುಮ ತನ್ನಯಚಿಕ್ಕ ರೂಪವ ಮಾಡಿ ಲಂಕೆಯಪೊಕ್ಕು ನಿಶಿಯಲಿ ಮಧ್ಯಮಾರ್ಗದಿರಕ್ಕಸಿಯ ಕಂಡಾ 13 ಬಟ್ಟಿಯಲಿ ಬಂದಡ್ಡಗಟ್ಟುವದುಷ್ಟ ರಾಕ್ಷಸೀಯನ್ನು ಗೆಲ್ಲುತಮುಷ್ಟಿಯಿಂದಲಿ ಹೊಡೆದು ಲಂಕಾಪಟ್ಟಣವ ಪೊಕ್ಕಾ 14 ಪುರದ ಹೊರಗೊಳಗ್ಹೊಕ್ಕು ರಾಮನತರುಳೆ ಕಾಣದೆ ಹನುಮ ಶಿಂಶುಪತರುನ ಮೂಲದಿ ಕಂಡ ಸೀತೆಯಉರುತರಾಕೃತಿಯಾ 15 ನರಜನಂಗಳ ಮೋಹ ಮಾಡುವಪರಮ ಪುರುಷನ ಚೇಷ್ಟೆಗಳನನುಸರಿಸಿ ನಡೆಯುವ ದೇವಿ ಚರಿಯನುಸರಿಸಿ ಚೇಷ್ಟಿಸಿದಾ 16 ರಾಮನಿಂದಲಿ ಅಂಗುಲಿಯನುಪ್ರೇಮದಿಂದಲಿ ಕೇಸರಿಯ ಸುತಾಭೂಮಿ ಜಾತೆಗೆ ಕೊಟ್ಟು ಸುಖಿಸಿದಾನಾಮ ಹದ್ದನದಿ 17 ರುಚಿ ನೀಡಿದವು ರಾವಣನ್ಹರಣ ಕಾಲದಲಿ 18 ಧರಣಿದೇವಿಯ ಸುತೆಯ ತನ್ನಯಪರಮ ಚೂಡಾಮಣಿಯನಿತ್ತಳುಗುರುತು ತೋರಿಸು ರಾಮದೇವಗೆಮರುತಾ ಸುತನೆಂದು 19 ಸೀತೆ ಹನುಮರದೀ ವಿಡಂಬನಯಾತು ಧಾನರಿಗಲ್ಲಾ ನಾಕಗಭೂತ ವಿಡಂಬನ ಧೈತ್ಯವಂಚನಹೇತು ಆಗುವದು 20 ಇಂಥ ಕಾರ್ಯವ ಮಾಡಿ ತನ್ನಯಾನಂಥ ಪೌರುಷ ಪ್ರಕಟ ಮಾಡುವದಿಂತು ಮನವನು ಮಾಡಿದನು ಮತಿವಂತ ವಾನರನು 21 ಚಾರು ಶಿಂಶುಪ ಬಿಟ್ಟು ರಾಕ್ಷಸವಾರ ವಳಿಸುವ ಮನದಿ ಹನುಮನುಭೂರಿವನವನು ಮುರಿದು ಲಂಕೆಯತೋರಣೇರಿದನು 22 ಭೃತ್ಯ ಜನರಿಗೆಕಟ್ಟಿ ಹಾಕಿರಿ ಕಪಿಯನೆಂದನುರುಷ್ಟನಾಗುತಲೆ 23 ಹರನ ವರದಲಿ ಮರಣ ವರ್ಜಿತಸರವ ಭೃತ್ಯರು ರಾಕ್ಷಸೇಶನಮರುತ ಸೂನುನ ಮೇಲೆ ಬಂದರುಪರಮ ವೇಗದಲಿ 24 ಹತ್ತು ಒಂದು ಕೋಟಿ ಯೂಥವತತ್ಸಮಾನ ಪುರಃ ಸರಾನ್ವಿತಎತ್ತಿ ಆಯುಧ ಸೈನ್ಯ ಹನುಮನಸುತ್ತಿಕೊಂಡಿಹುದು 25 ಹಿಡಿದು ಕರದಲಿ ಆಯುಧಂಗಳಹೊಡೆವ ಸೈನ್ಯವ ನೋಡಿ ಹನುಮನುಹೊಡೆದು ಕರತಳದಿಂದಲೆಲ್ಲರಪುಡಿಯ ಮಾಡಿದನು 26 ನೀಲಕಂಠನ ವರಗಿರಿಪ್ರಭಏಳುಮಂದಿಯ ಮಂದಿ ಪುತ್ರರಕಾಲಿನಿಂದಲಿ ಒದ್ದು ಕೆಡಹಿದನಾಳು ಮಾಧವನಾ 27 ಧುರದಿ ಮುಂಭಾಗದಲಿ ಪೋಗುವಗರುವ ಮಾಡುವ ರಾಕ್ಷಸಂಗಳಮುರಿದು ಸೈನ್ಯದ ತೃತೀಯ ಭಾಗವಹರಿಯು ಕೊಂದಿಹನು 28 ಪೋರ ಬಲವನು ಕೇಳಿ ಹನುಮನಚಾರ ಮುಖದಲಿ ಸ್ವಾತ್ಮ ಸದೃಶರುಮಾರ ಕಾಕ್ಷಾಭಿಧನ ಕಳುಹಿದ ವೀರ ರಾವಣನು 29 ಉತ್ತುಮಾಸ್ತ್ರಗಳಿಂದ ಮಂತ್ರಿತವೆತ್ತಿ ಬಾಣಗಳ್ಹೊಡೆದು ಹನುಮನಕೆತ್ತಿ ಹಾಕಲು ಅಕ್ಷ ಸಾಲದೆಶಕ್ತಿ ನಿಂತಿಹನು 30 ಮಂಡ ಮಧ್ಯೆಯ ತನಯ ಅಕ್ಷನುಪುಂಡ ರಾವಣ ಸಮನು ಸೈನ್ಯದಹಿಂಡಿನೊಳು ತೃತೀಯಾಂಶ ಯಂದುದ್ದಂಡ ಚಿಂತಿಸಿದಾ 31 ಹತ್ತು ತಲೆಯವನನ್ನೆ ಕೊಲ್ಲುವದುತ್ತಮಾತ್ಮವು ಆದರೀತನುತುತ್ತು ರಾಮಗೆ ಕಾರಣಿಂಥಾಕೃತ್ಯ ಥರವಲ್ಲಾ 32 ಇಂದ್ರಜಿತನನು ನಾನು ಈಗಲೆಕೊಂದು ಹಾಕಿದರಿವನ ಕೃತಿಗಳಛಂದ ನೋಡುವುದಿಲ್ಲಾ ಕಪಿಗಳವೃಂದ ಯುದ್ಧದಲಿ 33 ತತ್ಸಮಾಗಿಹ ಮೂರನೆಯವನ್ಹತ್ಯೆ ಮಾಡುವೆನೆಂದು ಹನುಮನುಚಿತ್ತದಲಿ ಚಿಂತಿಸುತ ತತ್ವದ ವೆತ್ತಿ ಹಾರಿದನು 34 ತಿರುಹಿ ಚಕ್ರದ ತೆರನೆ ರಾಕ್ಷಸರರಸೀನಾತ್ಮಜನನ್ನು ಕ್ಷಣದಲಿಧರಿಯ ಮೇಲಪ್ಪಳಿಸಿ ಒಗೆದನುಮರುತನಾತ್ಮಜನು 35 ಹನುಮನಿಂದಲಿ ತನ್ನ ಕುವರನುಹನನ ಪೊಂದಲು ನೋಡಿ ರಾವಣಮನದಿ ಶೋಕಿಸುತಾತನಣ್ಣನರಣಕೆ ಕಳುಹಿದನು36 ಇಂದ್ರಜಿತು ಪರಮಾಸ್ತ್ರಯುತ ಶರವೃಂದದಲಿ ಹೊಡೆದು ಹನುಮನಹಿಂದಕಟ್ಟಲು ಶಕ್ತಿ ಸಾಲದೆನಿಂದು ಚಿಂತಿಸಿದಾ 37 ಸರವ ದುಃಸಹವಾದ ಬ್ರಹ್ಮನಪರಮಮಸ್ತ್ರವ ಬಿಡಲು ರಾವಣಿಹರಿಯು ವ್ಯಾಕುಲನಾಗದಲೆ ಈಪರಿಯ ಚಿಂತಿಸಿದಾ 38 ವಾಣಿನಾಥನ ಎಷ್ಟೊ ವರಗಳನಾನು ಮೀರಿದೆ ದುಷ್ಟ ಜನದಲಿಮಾನಿನೀಯನು ಕಾರಣಾತನಮಾನ ಮಾಡುವೆನು 39 ದುಷ್ಟ ರಾಕ್ಷಸರೆಲ್ಲ ಎನ್ನನುಕಟ್ಟಿ ಮಾಡುವದೇನು ಪುರಿವಳಗಿಷ್ಟು ಪೋಗಲು ರಾಕ್ಷಸೇಶನಭೆಟ್ಟಿಯಾಗುವದು 40 ಹೀಗೆ ಚಿಂತಿಸಿ ಹನುಮನಸ್ತ್ರಕೆಬಾಗಿ ನಿಲ್ಲಲು ಅನ್ಯ ಪಾಶಗಳಾಗೆ ಬಿಗಿದರು ಬ್ರಹ್ಮನಸ್ತ್ರವುಸಾಗಿತಾಕ್ಷಣದಿ 41 ಕಟ್ಟಿ ಕಪಿಯನು ರಾಕ್ಷಸೇಶನ ಭೆಟ್ಟಿಗೊಯ್ಯಲು ಆತನೀತನದೃಷ್ಟಿಯಿಂದಲೆ ನೋಡಿ ಪ್ರಶವನೆಷ್ಟೊ ಮಾಡಿದನು 42 ಕಪಿಯೆ ನೀನು ಕುತೋಸಿ ಕಸ್ಯವಾಕೃತಿಯ ಮಾಡಿದಿ ಯಾತಕೀಪರಿಕಿತವ ಕೇಳಲು ರಾಮನೊಂದಿಸಿ ಚತುರ ನುಡಿದಿಹನು 43 ಹೀನ ರಾವಣ ತಿಳಿಯೇ ಎನ್ನನು ಮಾನವೇಶ್ವರ ರಾಮದೂತನುಹಾನಿಮಾಡಲು ನಿನ್ನ ಕುಲವನುನಾನು ಬಂದಿಹೆನು 44 ಜಾನಕೀಯನು ರಾಮದೇವಗೆಮಾನದಿಂದಲಿ ಕೊಡದೆ ಹೋದರೆಹಾನಿ ಪೊಂದುವಿ ಕೇಳೊ ನೀ ನಿಜಮಾನವರ ನೀ ಕೂಡಿ 45 ಶಕ್ತರಾಗರು ಸರ್ವ ದಿವಿಜರುಮತ್ರ್ಯನಾತನ ಬಾಣ ಧರಿಸಲುಎತ್ತೋ ನಿನಗಿವಗಿನ್ನು ಧರಿಸಲುಹತ್ತು ತಲೆಯವನೆ 46 ಸಿಟ್ಟು ಬಂದರೆ ಆತನೆದುರಿಲಿಘಟ್ಟಿನಿಲ್ಲುವನಾವ ರಾಕ್ಷಸಇಷ್ಟು ಸುರದಾನವರೊಳಾತನದೃಷ್ಟಿಸಲು ಕಾಣೆ 47 ಇಂಥಾ ಮಾತನು ಕೇಳುತಾತನಅಂತ ಮಾಡಿರಿಯನ್ನೆ ವಿಭೀಷಣಶಾಂತ ಮಾಡಲು ಪುಚ್ಛ ದಹಿಸಿರಿಯಂತ ನುಡಿದಿಹನು 48 ಅರಿವೆಯಿಂದಲಿ ಸುತ್ತಿ ಬಾಲಕೆಉರಿಯನ್ಹಚ್ಚಲು ಯಾತುಧಾನರುಮರುತ ಮಿತ್ರನು ಸುಡದೆ ಹನುಮಗೆಹರುಷ ನೀಡಿದನು 49 ಯಾತುಧಾನರು ಮಾಡಿದಂಥಪಘಾತವೆಲ್ಲವ ಸಹನ ಮಾಡಿದವಾತಪೋತನು ಲಂಕೆ ದಹಿಸುವಕೌತುಕಾತ್ಮದಲಿ 50 ತನ್ನ ತೇಜದಿ ವಿಶ್ವಕರ್ಮಜಘನ್ನಪುರಿಯನು ಸುಟ್ಟು ಬಾಲಗವನ್ಹಿಯಿಂದಲೆ ಸರ್ವತಃ ಕಪಿಧನ್ಯ ಚರಿಸುತಲೆ 51 ಹೇಮರತ್ನಗಳಿಂದ ನಿರ್ಮಿಸಿದಾಮಹಾ ಪುರಿಯನ್ನು ರಾಕ್ಷಸಸ್ತೋಮದಿಂದಲಿ ಸಹಿತ ಸುಟ್ಟುಸುಧಾಮ ಗರ್ಜಿಸಿದಾ 52 ಹನುಮಸಾತ್ಮಜ ರಾಕ್ಷಶೇಶನತೃಣ ಸಮಾನವ ಮಾಡಿ ನೋಡಲುದನುಜರೆಲ್ಲರ ಭಸ್ಮ ಮಾಡುತಕ್ಷಣದಿ ಹಾರಿದನು 53 ಕಡಲ ದಾಟುತ ಕಪಿಗಳಿಂದಲಿಧಡದಿ ಪೂಜಿತನಾಗಿ ಮಧುವನುಕುಡಿದು ರವಿಜನ ವನದಿ ರಾಘವನಡಿಗೆ ಬಂದಿಹನು 54 ಸೀತೆ ನೀಡಿದ ಚೂಡಾರತ್ನವನಾಥನಂಘ್ರಿಯೊಳಿತ್ತು ಸರ್ವಶಗಾತ್ರದಿಂದಲಿ ನಮಿಸಿ ರಾಮಗೆಶಾತ ನೀಡಿದನು 55 ರಾಮನಾದರು ಇವಗೆ ನೀಡುವಕಾಮ ನೋಡದೆ ಭಕ್ತಿಭರಿತಗೆಪ್ರೇಮದಿಂದಲಿ ಅಪ್ಪಿಕೊಂಡನುಶ್ರೀ ಮನೋಹರನು 56 ಇಂದಿರೇಶನೆ ಎನ್ನ ಚಿತ್ತದಿನಿಂದುಮಾಡಿದ ನೀಸುಕವನವನಿಂದು ಭಕ್ತಿಲಿ ತತ್ಪುದಾಂಬುಜದ್ವಂದ್ವಕರ್ಪಿಸುವೆ 57 ಇತಿ ಶ್ರೀ ಸುಂದರ ಕಾಂಡಃ ಸಮಾಪ್ತಃ (ಪ್ರಾಕೃತ)ಶ್ರೀ ಗುರುವರದ ಇಂದಿರೇಶಾರ್ಪಣಮಸ್ತು ನೋಡುವೆನು ನೋಡುವೆನು ತೋರಿಸುನಿಮ್ಮ ನೋಡುವೆ ಪ ನೋಡುವೆ ಮಾಡು ದಯ ಎನ್ನೊಳುರೂಢಿಯೊಳಗೆ ನಿಮ್ಮ ಪಾಡುತ ಮಹಿಮೆ ಅ.ಪ. ಮದನ ಜನಕನೊಳು ಕದನ ಮಾಡಿದ ದು-ರ್ಯೋಧನನ ಶಿರದೊಳಿಟ್ಟ ಪದುಮ ಪಾದಗಳನು 1 ನೂರುಗಾವುದ ಜಲ ಹಾರುವಾಗಲೆ ದಿವ್ಯಭೂರುಹ ಕೆಡದಿಹ ಊರುಗಳನ್ನು ಸ್ವಾಮಿ 2 ಕೆಟ್ಟ ಬಕನ ಕೊಂದು ಅಷ್ಟು ಅನ್ನವನುಂಡಹೊಟ್ಟಿ ನೋಡುವೆ ದಿವ್ಯ ದೃಷ್ಟಿ ನೀಡಿರಿ ಸ್ವಾಮಿ 3 ಭೂಮಿ ಸುತೆಯ ವಾರ್ತೆ ರಾಮನು ಕೇಳಿದಾಪ್ರೇಮಾಲಿಂಗನವಿತ್ತ ಆ ಮಹಾವುರವನ್ನೆ 4 ಮದಗಜಗಳ ಕೂಡ ಕದನ ಮಾಡಿದ ದಿವ್ಯಗದೆಯ ಪಿಡಿದ ಕರವದು ಮಗಳನು ಸ್ವಾಮಿ 5 ಅಜಗರ ನಹುಷನ ವಿಜಯ ಸಹೋದರ ಪದುಮನಾಭನ ಗುಣಮುದದಿ ಸಾರುತ ದೈತ್ಯ ಕದನಗೆಳೆದ ನಿನ್ನ ವದನಕಮಲವನ್ನು 6 ವೇದ ಶಾಸ್ತ್ರಗಳನ್ನು ಓದಿ ಹೇಳುತ ಶಿಷ್ಯಮೋದಗರೆವ ನಿನ್ನ ವಾಣಿ ಸ್ವಾದು ಕೇಳುವೆ ನಿನ್ನ 7 ಇಂದಿರೇಶನ ದಯದಿಂದ ಗೆಲಿದಿ ಇಪ್ಪ-ತ್ತೊಂದು ಮತವ ಆನಂದ ತೀರ್ಥರೆ ನಿಮ್ಮ 8
--------------
ಇಂದಿರೇಶರು
ಸಿಕ್ಕಿದೆಲ್ಲೊ ಕೃಷ್ಣ ನೀನು ಸಿಕ್ಕಿದೆಲ್ಲೊ ನಮ್ಮ ಕೈಯ ಹೊಕ್ಕು ಮುನಿಯ ಹಕ್ಕಿಯೊಳಾದ್ಯೊ ತೆಕ್ಕಿಯ ಪುಕ್ಕಸಾಟಿಯ 1 ಬಿಟ್ಟರ ಗೊಲ್ಲತೇರಲ್ಲೊ ಕಟ್ಟಿದ ಸೊಲ್ಲೊ ಮುಟ್ಟಿ ಬಿಡುವವರಲ್ಲೊ ಘಟ್ಯಾಗಿ ನಿಲ್ಲೊ 2 ನಾವು ಬಲ್ಲೆವು ನಿನ್ನಾಟ ಎವಿ ಹಾಕುನೋಟಿ ಹವಣಿಸಿ ಹಿಡಿದೆವೊ ನೀಟ ಭಾವಿಸಿ ಈ ಮಾಟ 3 |ಬಲ್ಲತನವದೋರಿದೊ ಇಲ್ಲಿ ಮರುಳಾದ್ಯೊ ನಿಲ್ಲೊ ನಮ್ಮೊಳು ನೀನಾದ್ಯೊ ಎಲ್ಲಿಗೆ ಹೋದ್ಯೊ 4 ವಶವಾಗಲಿಕ್ಕ ನಮಗ ವಸುಧಿಯೊಳಗ ಯಶೋದೆ ಹಡೆದಳು ತಾ ಈಗ ಲೇಸಾಗಿ ನಿನಗ 5 ನಾವು ಹಿಡಿದೇವೆಂಬುವ ಮಾತ ಪೂರ್ವಾರ್ಜಿತ ನವನೀತ ಸವಿದೋರಿ ಹಿತ 6 ಭಾನುಕೋಟಿ ಸು ಉದಯ ಮುನಿಜನರಾಶ್ರಯ ನೀನಾಗಿ ಸಿಕ್ಕಿದ್ಯೊ ಕೈಯ ದೀನ ಮಹಿಪತಿಯ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಿರಿ ಪಾಂಡುರಂಗನಾ ಪಾಡಿದೆನೊ ಜಗದಂತರಂಗನ ಖಗ ತುರಂಗನ ಬೇಡಿದೆನೊ ಗುಣಾಂತರಂಗನಾ ಪ ಕಪಿಲ ವಿಭುಹರಿ ಸಾರ್ವಭೌಮ ಸು ತಪನಂದನ ಕೃಷ್ಣ ಕೃಷ್ಣ ಗೀರ್ವಾಣ ತಪಯಜ್ಞ ಜಿತದತ್ತ ಧನ್ವಂತ್ರಿ ವಿನುತ ವೃಷಭ ಹಯ ಲಪನ ವೈಕುಂಠ ಹಂಸ ತಪನಾ ಕುಪಿತ ಜಿತ ಮುನಿ ನರನಾರಯಣ ಅಪರಿಮಿತ ರೂಪ ಧರಿಸಿದಾನಂದ ಗುಪಿತ ಮಹಿಮನ 1 ಮುನಿವನ ಜಿತ ಚಿತ್ತ ಶುದ್ಧದಿ ಜನನಿ ಜನಕನ ಚರಣ ಸೇವೆಯ ಅನುದಿನದಿ ಘನವಾಗಿ ಮಾಡುತ ಗುಣಗಳಿಂದಲಿಯಿರಲು ಇತ್ತಲು ಮುನಿ ನಾರದನು ಗಾಯನವ ಗೈಯುತ ಇನಿತು ಸೋಜಿಗ ನೋಡಿ ತನ್ನಯ ಜನಕಗರುಹಲು ನಗುತಲಾ ಮನದಿ ಕೈಕೊಂಡ ಮೂಲ ಮೂರ್ತಿಯ 2 ಪೊಡವಿಯೊಳು ನೀನವತರಿಸಿ ಆ ದೃಢü ಬಕುತನಿಗೆ ದರುಶನವೆ ಇ ತ್ತಡಿಗಡಿಗೆ ಸುಖಬಡಿಸಿ ಅಲ್ಲಲ್ಲಿ ಬಿಡದೆ ನಿಲ್ಲುವೆ ನಿಮ್ಮ ಸಹಿತಲಿ ವಿನುತ ಕಳುಹಿದ ಒಡನೆ ಸಲ್ಲಿಪೆನೆಂದ ಯಮುನಾ ತಡಿಯ ಜನಿಸಿದ ಜಗನ್ಮೋಹನಾ 3 ನಿಧಿಯ ನೋಡುವೆನೆನುತ ಗೋವುಗಳ ಮುದದಿ ಮೇಯಿಸಿಕೊಳುತ ಕಾವುತ ಒದಗಿ ಗೋವಳರೊಡನೆ ಬಂದನು ವಿಧಿ ಸಂಭವಾದ್ಯ ಭಕ್ತನ ಎದುರಲಿ ನೋಡಿದನು ಹೋ ಹೋ ಇದೇ ಸಮಯವೆಂದು ನಿಂದಾ ಹಿಂಭಾ ಗದಲಿ ಭಕ್ತಿಗೆ ಮೆಚ್ಚಿ ಬಲು ವೇಗಾ4 ತಿರುಗಿ ನೋಡದಲಿರಲು ಭಕುತನ ಮರಳೆ ಮಾತಾಡಿಸಲು ಇಟ್ಟಿಗೆ ಭರದಿ ಹಿಂದಕೆ ಒಗಿಯೆ ವಿಠ್ಠಲ ಹರುಷದಲಿ ವಶವಾಗಿ ನಿಲ್ಲಲು ಕರುಣರಸ ಸಂಪೂರ್ಣ ದೇವನ ನಿರೀಕ್ಷಿಸಿದ ಜಯವೆಂದು ಪೊಗಳಿ ವರವ ಬೇಡಿದ ಪುಂಡರೀಕನು ಗಿರಿಯನೆತ್ತಿದ ಗೋಕುಲೇಶನ 5 ಭಕುತ ಮನೋರಥ ಎನ್ನ ಪೆಸರಿಲಿ ಸಕಲ ಲೋಕದೊಳಗೆ ನೀನೆ ಮುಕುತಿ ಕೊಡುತಲಿ ಇಲ್ಲೆ ನಿಲುವದು ಅಖಿಳ ಬಗೆಯಿಂದ ಭಜನೆಗೊಳುತ ನೀ ರುಕ್ಮಿಣಿಪತಿ ಒಲಿದು ಪಾಲಿಸಿ ವ್ಯಕುತವಾದನು ಪೂರ್ವಮುಖನಾಗಿ ಸುಖವಯೋನಿಧಿ ಮೆರೆಯುತಲಿ ಇಂದೂ 6 ಕ್ರೋಶ ಯೋಜನ ಯೋಜನತ್ರಯ ದೇಶ ಪರಿಮಿತ ಕ್ಷೇತ್ರವಿಪ್ಪುದು ವಾಸ ಒಂದಿನಮಲ ಮನುಜರನ ಲೇಸು ಪುಣ್ಯಗಳೆಣಿಸಿ ಸರಸಿ ಜಾಸನನು ಬೆರಗಾಗಿ ನಿಲ್ಲುವ ದೋಷ ವರ್ಜಿತ ಹರಿಯ ನೆನೆಸುತ ಆ ಸೇತು ಮಧ್ಯದಲಿ ವಿಶೇಷವಾಗಿದ್ದ ಈ ಕ್ಷೇತ್ರ ಮೂರ್ತಿಯಾ 7 ನಂದಾ ಮಂದಾಕಿನಿ ಮಧ್ಯಾಹ್ನಕೆ ನಿಂದಿರದೆ ಬರುತಿಪ್ಪ ಪ್ರತಿದಿನ ಚಂದ್ರಭಾಗಾ ಪ್ರಸೂನುವತಿ ಅರ ಕುಂಡಲ ಚತುರ ದಿಕ್ಕಿನಲಿ ಪೊಂದಿಪ್ಪವು ಓರ್ವನಾದರು ಮಿಂದು ತೀರ್ಥದಲಿ ಆ ನಂದ ಸತ್ಕರ್ಮ ಚರಿಸಲಾಕ್ಷಣ ಇಂದಿರೇಶನು ಒಲಿವ ನಿಶ್ಚಯಾ 8 ದ್ವಾರಸ್ಥ ಜಯ ವಿಜಯ ನಾರದ ಭಾರತಿ ಪಂಚ ಕೋಟಿ ದೇವರು ಶ್ರೀರಮಣಿ ಮಿಕ್ಕಾದ ಜನರೆಲ್ಲ ಈರೆರಡು ದಿಕ್ಕಿನಲಿಯಿಹರು ಸುತ್ತಲಿ ಪಾಡುತ್ತ ಕುಣಿಯುತ್ತ ಹಾರುತಲಿ ಹಾರೈಸಿ ನಾನಾ ವಿ ಹಾರದಲಿ ಪುರಿ ಪ್ರದಕ್ಷಣಿ ವಿ ಸ್ತಾರ ಮಾಡುತಲಿಪ್ಪ ಸೊಬಗನಾ 9 ಎರಡು ವಿಂಶತಿ ಗುದ್ದು ಮೊಳವೆ ಕರಿಸಿ ಕೊಂಬೊದೊಂದೆ ನಿಷ್ಕವು ಇರದೆ ಇವು ನಾನೂರುಯಾದಡೆ ವರಧನಸ್ಸು ಪ್ರಮಾಣವೆನಿಸೊದು ಗುರುತು ತಿಳಿವದು ಇಂಥ ಧನಸ್ಸು ಅರವತ್ತು ಪರಿಮಿತಾ ಈ ಭೀಮಾ ಸರಿತೆಗಳು ಪರಿಪರಿ ತೀರ್ಥಗಳಕ್ಕು ನಿರೀಕ್ಷಿಸಿ ವಂದನೆಯ ಮಾಡುತಾ 10 ಜ್ಞಾತಿ ಗೋತುರ ಹತ್ತದೊಂದೆ ಮಾತು ಮನ್ನಿಸಿ ಕೇಳಿ ಸುಜನರು ವಾತದೇವನ ಕರುಣತನವನು ನೀತಿಯಲಿ ಪಡಕೊಂಡು ಸತ್ವದಿ ಜ್ಞಾತ ಅನುಷ್ಠಾನದಲಿ ನಡೆದು ಪು ಮಾನವ ಬಂದರಾದಡೆ ಆತುಮದೊಳು ಹರಿ ಪೊಳೆದು ಬಲು ಕೌತುಕವ ತೋರಿಸುವ ರಂಗನಾ 11 ಶಯ್ಯಾ ಹರಿ ದಿನದಲಿ ಮಾನವ ಕಾಯ ನಿರ್ಮಳನಾಗಿ ಫಂಡರಿ ರಾಯ ರಾಜೀವನೇತ್ರ ತ್ರಿಭುವನ ನಾಯಕನ ಕ್ಷೇತ್ರಕ್ಕೆ ಮನಮುಟ್ಟಿ ಗಾಯನವ ಮಾಡುತಲಿ ಬಂದ ನಿ ರ್ಮಾಯದಲಿ ಕೊಂಡಾಡಿ ದಮ್ಮಯ್ಯ ಕೈಯ ಪಿಡಿಯನೆ ಕರುಣದಿಂದ ಸಾ ಹಾಯವಾಗುವ ವಾಣಿ ಜನಕನಾ 12 ಮಕುಟ ಕುಂಚಿ ಕುಲಾಯ ಕುಂತಳ ಕುಂಡಲ ಮಣಿ ಕಿರಣ ಸ ನ್ನುಖ ಮುಕರ ಸೋಲಿಸುವ ಕಾಂತಿ ಚಂ ನಾಸಿಕ ಮುಖ ಮೃಗನಾಭಿ ಸಣ್ಣ ತಿ ಲಕ ಕೌಸ್ತುಭಗಳ ತುಲಸಿ ಮಾಲಿಕಾ ನಖ ಪದಕ ಕಟೆಕಂಬು ಕರದ್ವಯ ನಖ ಪಾದ ಭೂಷಣ ಮಾ ಣಿಕ ಇಟ್ಟಿಗೆ ಮೇಲೆ ನಿಂದ ವಿಠ್ಠಲನ 12 ಸಂಗಮ ಸುರ ಮಥನ ಕಾಳಿಂಗ ಭಂಗ ಭಾವುಕ ಭಕ್ತಜನಲೋಲ ಶೃಂಗಾರಾಂಬುಧಿ ರೋಮ ಕೋಟಿ ಕೋಟಿ ಲಿಂಗಧರ ಗೌರೀಶ ಸುರಪ ನಂಗ ಮಿಗಿಲಾದ ಮುನಿವಂದಿತಾ ಮಾ ತುಂಗ ವರದ ಗೋವಿಂದ ವರದೇಶ ಸಂಗ ನಿಃಸಂಗ ಸುಪ್ರಸನ್ನ ನೀ ಅನುದಿನ 14 ಪೇಳಲೊಶವೇ ಲೋಹದಂಡಿ ಹಿ ಯ್ಯಾಳಿ ಕ್ಷೇತ್ರದ ಮಹಿಮೆ ಸಾವಿರ ನಾಲಿಗಿಂದಲಿ ಪೊಗಳಿ ಸುಮ್ಮನೆ ವ್ಯಾಳಪತಿ ಬೆರೆಗಾಗಿ ನಿಲ್ಲುವ ಸಲಿಗೆ ನಾ ಮಾಳ್ಪರು ವಿಲಿಂಗರು ಮೇಲು ಮೇಲೀ ಭುವನದೊಳಗಿದ್ದು ಹೇಳಿ ಕೇಳಿದ ಜನರಿಗಾನಂದಾ ಬಾಲಾ ವಿಜಯವಿಠ್ಠಲರೇಯನಾ 15
--------------
ವಿಜಯದಾಸ