ಒಟ್ಟು 1466 ಕಡೆಗಳಲ್ಲಿ , 103 ದಾಸರು , 1222 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉದಯಾದ್ರೀಶ ವಿಠಲ ಮುದವನಿತ್ತವನೀಗೆಉದ್ಧರಿಸ ಬೇಕೆಂದು ಪ್ರಾಥಿಸುವೆ ಹರಿಯೇ ಪ ಸದಯ ನೀನಿರೆದೇವ ಸಂಸ್ಕøತಿಯ ಶೃಂಖಲೆಗೆಬೆದರಿಕಿಲ್ಲವೊ ಇವಗೆ ನರಹರಿಯೆ ಸ್ವಾಮಿಅ.ಪ. ಸ್ವಾಪದಲಿ ನಭದಲ್ಲಿ ರೂಪವನೆ ತೋರಿದ ಯೊಪಯೋನಿಧಿಯಾಗಿ ಮೆರೆವೆ ವೆಂಕಟೇಶ |ಆಪಯೋಜಾಸನ ವಿಷಾದ್ಯರಿಗೆ ನಿಲುಕದಅಪಾರ ತವಮಹಿಮೆ ನಾ ಪೇಳಲೊಶವೇ 1 ಸಾರನಿಸ್ಸಾರವೆನೆ ಜಗದೊಳಗೆ ನೀನೊಬ್ಬಸಾರತಮನೆಂದೆಂಬ ಪಾರಮಾರ್ಥಿಕವ |ತಾರತಮ್ಯ ಜ್ಞಾನ ಮೂರೆರಡು ಭೇಧಗಳಸಾರವನೆ ತಿಳಿಸಿ ಸಂಸಾರ ನಿಧಿ ದಾಟಿಸೋ 2 ಗರ್ವರಹಿತನು ಇವಗೆ ಕವನ ಶಕ್ತಿಯನಿತ್ತುಸರ್ವತ್ರ ಸರ್ವದಾ ಸರ್ವಕಾರ್ಯಗಳಲ್ಲಿಸರ್ವೇಶ ತವನಾಮ ಸ್ಮøತಿಯನ್ನೆ ಕರುಣಿಸುತದರ್ವಿ ಜೀವನಕಾಯೊ ಸರ್ವಾಂತರಾತ್ಮಾ 3 ಶ್ರೀದ ಶ್ರೀ ವೆಂಕಟನ ನೋಡಿದೆ ಎಂಬಂಥಮೋದದಾಯಕ ಪದವು ಉದಯ ವಿಠಲಾಂಕಿತವಾದಿರಾಜರ ಶಿಷ್ಯ ಪಾಡಿ ಪೂರೈಸುತಿರೆನೀದಯದಿ ತವರೂಪ ತೋರ್ದುದನು ಮರೆ ಮಾಡಿದೆ4 ಪಾವಮಾನಿಯ ಪ್ರೀಯ ಭಾವುಕರ ಪರಿಪಾಲಗೋವತ್ಸ ಧ್ವನಿ ಕೇಳಿ ಧಾವಿಸೀ ಬರುವಂತೆತೀವ್ರುಪಾಸನೆ ಇತ್ತು ಇವನ ಹೃತ್ಕಂಜದಲಿದೇವ ಗುರು ಗೋವಿಂದ ವಿಠಲ ತವರೂಪ ತೋರೊ5
--------------
ಗುರುಗೋವಿಂದವಿಠಲರು
ಉರುಟಣೆ ಪದ ಜಯ ಜಯ ರಾಮ ಜಯಜಯ ಜಯ ನಮ್ಮ ಜಾನಕೀ ರಮಣಗೇ ಪ ಇಂದಿರಾದೇವಿ ರಮಣಿ ಶರಣ್ಯಮಂದರ ಗಿರಿಧರ ಶರಣ್ಯಕಂದನ ನುಡಿ ಕೇಳಿ ಕಂಬದಿಂದಲಿ ಬಂದಸಿಂಧು ಶಯನ ಸಲಹುವಾದೆನ್ನ 1 ಗುರು ವಿಜಯದಾಸರ ಚರಣಾಸರಸಿರುಹವ ಮನದೊಳಾಗಿರಿಸಿಹರಿ ಸರ್ವೋತ್ತಮ ಮಂಗಳ ಚರಿತೆಯವಿರಚಿಸುವೆನು ಸುಜನರು ಕೇಳಿ 2 ಮುತ್ತೈದೆರೆಲ್ಲಾ ಬೇಗಾದಿ ಬಂದುಅರ್ತಿಯಿಂದಲಿ ಶೃಂಗಾರವಾಗಿಚಿತ್ತಜನಯ್ಯನ ಉರುಟಣೆ ಎನುತಾಲಿಮತ್ತ ಗಮನೇರು ಬಂದರಾಗಾ 3 ಸರಸ್ವತಿ ಭಾರತಿ ಮೊದಲಾದಸರಸಿಜ ಮುಖಿಯರೆಲ್ಲಾರು ನೆರೆದುಸರಸ ಉರುಟಣಿಯ ಮೊಡಬೇಕೆನುತಾಲಿಕರೆಸಿದರಾಗ ಮುತ್ತೈದೆರಾಗ 4 ಹೇಮಮಯದ ಮಂಟಪದೊಳಗೆಪ್ರೇಮದಿಂದಲಿ ಹಾಸಿಕೆ ಹಾಕಿಸೋಮವದನನ ಗುಣವ ಕೊಂಡಾಡುತಕಾಮಿನಿಯರು ಕರೆದಾರು ಹಸೆಗೇ 5 ಕೌಸಲ್ಯಾದೇವಿ ತನಯಾನೆ ಕೇಳುಹರ್ಷದಾಯಕ ರಕ್ಷಕನೇಳುಹಂಸವಾಹನನಯ್ಯನೆ ಹಸೆಗೆ ಏಳೇಳೆಂದುಹಂಸಗಮನೆಯರು ಕರೆದರು ಹಸೆಗೆ 6 ನಿಗಮವ ತಂದಾ ಮಚ್ಚ್ಯಾನೇಳುನಗವ ಬೆನ್ನಿಲಿ ಪೊತ್ತ ಕೂರ್ಮನೇಳುಜಗವನುದ್ಧರಿಸಿದ ವರಹ ಮೂರುತಿ ಏಳುಮೃಗ ನರ ರೂಪ ಹರಿಗೇಳೆಂದಾರು 7 ಸುರನದಿಯ ಪಡೆದ ವಾಮನನೇಳುಪರಶುರಾಮ ಮೂರುತಿ ಏಳುಶರಧಿಯ ದಾಟಿ ಸೀತೆಯ ತಂದಶಿರಿ ರಾಮಕೃಷ್ಣ ಹಸೆಗೇಳೆಂದರು 8 ವ್ರತವನಳಿದ ಬೌದ್ಧನೇಳುಅತಿಬಲ ರಾಹುತನೇಳುಪೃಥಿವಿಗೊಡೆಯ ರಾಮನೇಳೆಂದುಅತಿ ಚಮತ್ಕಾರದಿ ಕರೆದರಾಗ 9 ಇಂತು ಬಗೆಯಾಲಿ ತುತಿಸಿ ಕರೆಯೇಕಂತುಜನಕನು ಹರುಷದಾಲೆದ್ದುಕಾಂತೆ ಕೈ ಪಿಡಿದು ನಡೆ ತರಲಾಗಲುನಿಂತಾರು ನಾರಿಯರೆಲ್ಲರಾಗ 10 ಎತ್ತಿಕೊಂಬುವದು ರಾಘವ ನಿಮ್ಮಪತ್ನಿಯ ನಡೆಸಲಾಗದು ಕೇಳಿನೀ ಪೃಥ್ವೀಶನಾದರೆ ನಮಗೇನೆನುತಾಲಿಸುತ್ತು ಕಟ್ಟಿದರು ವಾಮಾಕ್ಷಿಯರು 11 ಮಂಗಳಾಂಗಿಯನು ಎತ್ತಿಕೊಂಡು ರಾಮಹಿಂಗಾದೆ ದ್ವಾರದಲ್ಲಿಗೆ ಬರಲುಮಂಗಳದೇವಿಯ ಹೆಸರು ಹೇಳೆನುತಾಲಿಅಂಗನೆಯರು ಅಡ್ಡಗಟ್ಟಿದರಾಗಾ 12 ನಾಳೆ ಹೇಳುವೆನು ಇವಳ ಹೆಸರುತಾಳಲಾರೆನು ಭಾರವು ಎನಲುಶ್ರೀ ಲಕ್ಷ್ಮೀದೇವಿಯ ಹೆಸರು ಹೇಳಿದೆ ಬಿಡೆವೆಂದುಬಾಲೆಯರೆಲ್ಲಾರು ಇಟ್ಟರು ಕದವಾ 13 ಪುತ್ಥಳಿ ಗೊಂಬೆ ಹೆಸರು ಹೇಳೆನೆ ರಘು-ನಾಥಾನು ಎಂದಾಳು ಜಾನಕೀ 14 ಅಂಗಜನಯ್ಯಾ ಸತಿಯು ಸೀತೆಯ ಸಹಿತರಂಗು ಮಾಣಿಕದ ಹಾಸಿಕೆಯ ಮೇಲೆಶೃಂಗಾರದಿಂದಾಲಿ ಬಂದು ಕುಳ್ಳಿರಲಾಗಸುರರೆಲ್ಲಾ ಹಿಗ್ಗಿ ಕರೆದರು ಪೂ ಮಳೆಯಾ 15 ಸಾಸಿರ ನಾಮದ ಒಡೆಯ ಬಂದಾಶೇಷಶಯನಾ ಮೂರುತಿ ಬಂದಾಭಾಸುರಾಂಗನೆ ಸೀತೆ ಆಳಿದಾ ರವಿಕುಲಾ-ಧೀಶ ಬಂದಾನು ಎಂದಾರು ಕೇಳೆ 16 ವಾನರಾಧೀಶನೊಡೆಯಾ ಬಂದಾದಾನವಾಂತಕ ರಾಘವ ಬಂದಾ ಶ್ರೀ-ಜಾನಕೀದೇವಿ ಪ್ರಾಣದೊಲ್ಲಭ ಜಗ-ತ್ರಾಣ ಬಂದಾನು ಎಂದಾರು ಕೇಳೆ 17 ಸತ್ಯ ಸಂಕಲ್ಪ ಶ್ರೀ ಹರಿಯು ಬಂದಾಭೃತ್ಯ ಪಾಲಕ ದೊರೆಯು ಬಂದಾಮಿತ್ರೆ ಜಾನಕಿದೇವಿ ಪ್ರಾಣದೊಲ್ಲಭ ಸ-ರ್ವೋತ್ತಮ ಬಂದನೆಂದಾರು ಕೇಳೇ 18 ಸುಗ್ರೀವನ ಪರಿಪಾಲಕ ಬಂದಾ ಕ-ರಿಗ್ರಾಹ ಸಂಹಾರಿಕ ಬಂದಾವ್ಯಾಘ್ರ ಚರ್ಮಾಂಬರ ಸಖ ಸುಂದರವಿಗ್ರಹ ಬಂದಾ ಎಂದಾರು ಕೇಳೇ 19 ಇಂದ್ರನ್ನ ಪರಿಪಾಲಕ ಬಂದಾಚಂದ್ರನ್ನ ಪ್ರಭೆಯಾ ಸೋಲಿಪ ಬಂದಾಇಂದುವದನೆ ಸೀತೆ ಪ್ರಾಣದೊಲ್ಲಭ ರಾಮ-ಚಂದ್ರ ಬಂದನೆಂದಾರು ಕೇಳೇ 20 ಚಂದನ ಗಂಧೆಯರು ಎಲ್ಲಾರು ಕೂಡಿಗಂಧ ಕುಂಕುಮ ಅರಿಷಿಣ ಕಲಿಸಿಇಂದುವದನೆ ಸೀತೆಯ ಕೈ ಒಳಗಿಟ್ಟು ಶ್ರೀರಾಮ-ಚಂದ್ರಗೆ ಹಚ್ಚಿಸಿರೆಂದರಾಗ 21 ವಾರಿಜೋದ್ಭವ ಮೊದಲಾದವರುತಾರತಮ್ಯದಿಂದಾಲಿ ಕುಳಿತುವಾರಿಜಾಮುಖಿ ಸೀತೆ ನುಡಿಯೆಂದೆನುತಾಲಿಸಾರಿದರಾಗ ಸಂದಣಿಯರೆಲ್ಲಾ 22 ವಾಕು ಕೇಳಬೇಕೆಂದುಜಲಜ ಸಂಭವನು ನುಡಿದಾನು ನಗುತಾ 23 ಕಂಜವದನೆ ಜಾನಕೀದೇವಿಅಂಜಲಾಗ ನಿಮ್ಮ ಪುರುಷಾರಿಗೆಕುಂಜರ ವರದಾ ದಾಕ್ಷಿಣ್ಯ ಬ್ಯಾಡೆಂದುಅಂಜಾದೆ ನುಡಿದಾರು ನಸುನಗುತಾ 24 ದೋಷ ವರ್ಜಿತನೇ ಹರಿ ನಿಮ್ಮದೂಷಣೆ ಮಾಡಿದಳೆನ ಬ್ಯಾಡಿಮೋಸದಿಂದಲಿ ಬಲು ದೈತ್ಯರ ಕೊಂದ ಜಗ-ದೀಶ ನಿಮ್ಮ ಮುಖವಾ ತೋರೆಂದಾಳು 25 ದೇವಿ ಹಸ್ತದೊಳು ಅರಿಶಿನವ ಪಿಡಿದುಭಾವಜನಯ್ಯನ ನುಡಿದಾರಾಗದೇವರ ದೇವೋತ್ತಮ ಶಿಖಾಮಣಿದೇವಾ ನಿಮ್ಮಯ ಮುಖವಾ ತೋರೆಂದಾಳು 26 ಭಸ್ಮಾಸುರನ ಕೊಂದಾ ಬಹು ಶೂರನಾರಿಕಂಸನಳಿದಾ ಧೀರ ಅಸುರ ಹಿರಣ್ಯಕನಅಸುವ ಹೀರಿದ ದೊಡ್ಡಅಸುರಾಂತಕ ಮುಖವಾ ತೋರೆಂದಾಳು 27 ವಾಲಿಯ ಸಿಟ್ಟಿನಿಂದಾಲಿ ಕೊಂದುಕಾಲ ಯಮನಾನಸುವ ಯುಕ್ತಿಯಿಂದಾಭಳಿರೆ ಮಧುಕೈಟಭರ ಕೊಂದಾಕಾಲಾಂತಕ ಮುಖವ ತೋರೆಂದಾಳು 28 ಶ್ರೀನಾಥ ದ್ವಾರಕಾಪುರ ಮಾಡಿಆ ನಂದಿ ಗೋಮಂತಾ ಗಿರಿಗೊಲಿದೆವಾನರಾಧೀಶನಾ ಬಲು ಕೊಂಡಾಡುತ್ತದಾನವಾಂತಕಾ ಮುಖವಾ ತೋರೆಂದಾಳು 29 ಅರಿಶಿನವಾನು ಹಚ್ಚಿದಳು ಸೀತೆಅರಸನ ಫಣೆಗೆ ಕುಂಕುಮವಾ ಹಚ್ಚಿಸರಸದಿ ವದನಕ್ಕೆ ಗಂಧವಾ ಹಚ್ಚಲುಸುರರೆಲ್ಲಾ ನಕ್ಕಾರು ಕೈ ಹೊಡೆದು 30 ಪತಿ ಮೊದಲಾಗಿ ಚಪ್ಪಾಳೆನಿಟ್ಟುಹರಸಿದರಾಗ ಜಾನಕಿದೇವಿಶಿರಿಯು ಗೆದ್ದಳು ಅಯೋಧ್ಯದಅರಸು ಸೋತನೆಂದು ನಗುತೆ 31 ಬಾಹುಗಳಿಗೆ ಗಂಧವಾ ಹಚ್ಚಿಸಿಮ್ಯಾಲೆ ಪರಿಮಳಾ ಪೂಸಿದಳುಶ್ರೀ ಹರಿಯ ಚರಣಾವ ಪಾಲಿಸಬೇಕೆನುತಲಿಸರಸಾದಿಂದಾಲಿ ನುಡಿದಾಳು ಜಾನಕೀ 32 ಪಾಷಾಣ ಪೆಣ್ಣಾ ಮಾಡಿದಾ ಚರಣಶೇಷನಾ ಮ್ಯಾಲೆ ಮಲಗಿದ ಚರಣಭಾಸುರಾಂಗಿ ನಿನ್ನ ಲೀಲೆಯಾ ತೋರಿದಾಶೇಷಶಯನ ಚರಣಾ ಪಾಲಿಸೆಂದಾಳು 33 ಆಕಾಶಗಂಗೆಯ ಪಡೆದಾ ಚರಣಾಶಕಟನ ಮುರಿದೊಟ್ಟಿದ ಚರಣಾಭಕುತ ಜನರ ಸೇವೆ ಕೊಂಬ ಚರಣರಕ್ಕಸ ದಲ್ಲಣ ಚರಣಾವ ಪಾಲಿಸೆಂದಾಳು 34 ಅಂಕುಶದೊಜ್ರ ರೇಖೆಯ ಚರಣಾಕುಂಕುಮಾಂಕಿತ ರಾಶಿಯ ಚರಣಾಬಿಂಕದಿಂದ ಕುರುಪತಿಯ ಕೆಡಹಿದ ಬಿರು-ದಾಂಕ ನಿನ್ನಯ ಚರಣಾ ಪಾಲಿಸೆಂದಾಳು 36 ನಸುನಗುತ ಹರಿ ಚರಣ ವೀಕ್ಷಿಸಿಶಶಿಮುಖಿ ಸೀತೆ ಆನಂದದಿಂದಾಮಿಸಣಿಯಂತೊಪ್ಪುವ ಅರಿಶಿನೆಣ್ಣೆಯಾಎಸೆವ ಪಾದಕ್ಕೆ ಹಚ್ಚಿದಳಾಗ 37 ಪಾದ ಪದ್ಮಕ್ಕೆ ಎರಗಿಪಾಲಿಸಬೇಕೆಂದಾಳು ಅಂಗನೆ 38 ಕರಗಳ ಪಿಡಿದೆತ್ತಿದನು ರಾಮಾಹರಸಿದ ಮುತ್ತೈದಾಗೆಂದುಪರಮ ಪತಿವ್ರತೆಯೆನಿಸು ಎನುತಾಲಿಹರಿ ಹರಸೀದಾನು ಹರುಷದಲ್ಲಾಗ 39 ಅಂಡಜವಾಹ ಭಗವಂತನುಹೆಂಡತಿಯ ಮುಖವ ನೋಡೆನುತಲಿಗಂಡು ಮಕ್ಕಳ ಘನವಾಗಿ ಪಡೆಯೆಂದುಪುಂಡರೀಕಾಕ್ಷ ಹರಸಿದನಾಗ 40 ಮಂದಗಮನಿಯ ಕುಳ್ಳಿರಿಸಿಇಂದಿರೇಶ ಮುಂಗುರಳಾ ತಿದ್ದಿಎಂದೆಂದಿಗೆ ಅಗಲದಿರೆಂದು ರಾಮ-ಚಂದ್ರಾನು ಹರಸಿದನಾಗ 41 ಭೂಲೋಕದೊಡೆಯ ರಾಘವರಾಯನಶ್ರೀಲತಾಂಗಿಯ ಕುಳ್ಳಿರಿಸಿದನುಬಾಲಕಿಯರೆಲ್ಲಾರು ಗಲಿಬಿಲಿ ಮಾಡಾದಿರೆಂದುಫಾಲಾಲೋಚಾನು ನುಡಿದನು ನಗುತ 42 ಕಂತುಜನಕ ರಾಘವಾ ನಿಮ್ಮಾಪಂಥ ಸಲ್ಲಾದು ಜಾನಕಿಯೊಡನೆಯಂತ್ರವಾಹಕ ಶ್ರೀರಾಮ ಏಳೇಳೆಂದುಕಾಂತೆಯರೆಲ್ಲರು ನುಡಿದಾರು ನಗುತಾ 43 ಭಾಗೀರಥಿ ಪಾರ್ವತಿದೇವಿಬೇಗದಿ ಅರಿಷಿನ ಕೈಲಿ ಕಲಿಸಿಸಾಗರ ಶಯ್ಯನ ಕೈಯೊಳಗಿಟ್ಟುಬಾಗಿ ಸೀತೆಯ ಮುಖಕೆ ಹಚ್ಚೆಂದಾರು 44 ನಿಂದಲ್ಲಿ ನಿಲ್ಲಾದೆ ಚಂಚಳೆ ಲಕ್ಷ್ಮೀಬಂಧು ಬಳಗವನಗಲಿಸುವ ತರಳೆತಂದೆ ಮಕ್ಕಳೊಳಗೆ ಕದನವ ನಿಡುವಂಥಮಂದಹಾಸೆ ಮುಖವ ತೋರೆಂದಾನು ರಾಮಾ 45 ಅಣ್ಣನ ವಂಚಿಸಿ ಬೇಡಿದವಳೇಮನ್ನೆ ಮನ್ನೆಯರಾ ಕಳಿಸಿದವಳೇಚೆನ್ನಾಗಿ ಮನೆಯೋಳಿದ್ದು ಪೋಗುತಚೆನ್ನಾಯಿತೆ ಮುಖವ ತೋರೆಂದಾನು 46 ಭಾಷೆಯನು ಕೊಟ್ಟು ತಪ್ಪಿಸುವಳೆಕಾಸುವೀಸಾಕೆ ವತ್ತಿ ಬೀಳುವಳೆಹೇಸಿಕಿಲ್ಲದೆ ಕುಲಹೀನನ ಮನೆಯೊಳುವಾಸವಾಗಿರುವಾ ಮುಖವ ತೋರೆಂದಾನು 47 ರಾಮಚಂದ್ರಾನು ಅರಿಶಿನ ಗಂಧವಭೂಮಿಜಳಿಗೆ ಹಚ್ಚಿದನಾಗಾಸಾಮಜಗಮನೆಯ ಹಣೆಗೆ ಕುಂಕುಮ ಹಚ್ಚಿಪ್ರೇಮದಿ ಪರಿಮಳ ಪೂಸಿದಾನು 48 ಕುಸುಮ ದಂಡೆಯ ಮಾಡಿದರುಬಾಸಿಂಗವನು ಕಟ್ಟಿದಾರುಭೂಸುರರೆಲ್ಲರು ಮಂತ್ರಾಕ್ಷತೆ ತಳಿದು ನಿ-ರ್ದೋಷನಾಗೆಂದು ಹರಸಿದರು 49 ಇಂದುಮುಖಿಯರೆಲ್ಲಾರು ಕೂಡಿನಂದದಿ ಜಾನಕಿಗೆ ವೀಳ್ಯವನಿತ್ತುಅಂದಮಾಣಿಕದ ಅಕ್ಷತೆಗಳ ತಳಿದುಮಂದರೋದ್ಧರನ ಹರಿಸಿದರು 50 ದೇವಿಯನ್ನೆತ್ತಿಕೊಂಡು ರಾಮದೇವರ ಮನೆಗೆ ಬಾಹೋದು ಕಂಡುಭಾವುಕರೆಲ್ಲಾ ಹೆಸರು ಪೇಳೆಂದೆನುತದೇವಿ ರಘುನಾಥನೆಂದು ಪೇಳಿದಳಾಗ 51 ಇಂದುಮುಖಿಯರೆಲ್ಲಾರು ಕೂಡಿಇಂದಿರೇಶಾನೆ ಹೆಸರು ಪೇಳೆನಲುಎಂದಾ ಮೇಲೆ ಜಾನಕಿಯೆಂತೆಂದುಮಂದರಧರನು ನುಡಿದನಾಗ 52 ಸತಿಪತಿಯರಿಬ್ಬರು ಕೂಡಿಅತಿಶಯದಲಿ ನಮಸ್ಕರಿಸಿದಾರುಕ್ಷಿತಿಯ ಸುರರಿಗೆ ಲೀಲೆಯ ತೋರಿದ ದೇವಾಪತಿತ ಪಾವನ್ನ ಎನ್ನ ಸಲಹು ಎಂದಾನು 53 ಈ ಕಥೆಯನು ಆದರದಿಂದಾ ಬರೆದು ಹೇ-ಳಿ ಕೇಳುವ ಜನರಾಶ್ರೀಕಾಂತನೊಲಿದು ಕರುಣಿಸುವ ತಾ ಸಿದ್ಧನೇಮದಿಂದಾ ಪಾಡಿರಿ ಜನರು 54 ಕುರುಡಾನು ಈ ಕಥೆಯಾನು ಕೇಳಿದರೆಕರುಣದಿಂದಾಲಿ ಕಂಗಳ ಬರಿಸುವಶರಣವತ್ಸಲ ತನ್ನ ಶರಣರೊಳಿಟ್ಟುಪರಿಪಾಲಿಸುವನು ಶತಸಿದ್ಧ 55 ಸಿರಿ ಒದಗುವದುದಾರ ಇಲ್ಲದ ಬ್ರಹ್ಮಚಾರಿ ತಾ ಕೇಳಲುನಾರಿಯ ಸಹಿತೆ ವಾಸಿಸುವನು 56 ಉದ್ಯೋಗ ಇಲ್ಲದವನು ಕೇಳಿದರೆಸದ್ಯ ಐಶ್ವರ್ಯ ಒದಗುವದು ಸಿದ್ಧಮುದ್ದು ಸುತರಿಲ್ಲದ ಸ್ತ್ರೀಯು ಕೇಳಲುಬುದ್ಧಿವಂತ ಸುತರಾಗುವರು ಸಿದ್ಧ 57 ಮೂರ್ತಿ 58 ಕಮಲ ಧರಿಸಿಪ್ಪಪಾವನ ಮೂರುತಿ ಹೃದಯಾದಲ್ಲಿದೇವಿ ಸಹಿತವಾಗಿ ಕಾವನು ಕರುಣಾದಿನೀವೆಲ್ಲಾರು ತಿಳಿರಿ ಜನರು 59 ಜಾಹ್ನವಿ ಜನಕನುಜಯ ಜಯವೆಂದು ಮಂಗಳವ ಪಾಡೇ 60
--------------
ಮೋಹನದಾಸರು
ಎಚ್ಚರಿಕೆಚ್ಚರಿಕೆ ಮನವೆ ಇನ್ನು | ಎಚ್ಚರಿಕೆಚ್ಚರಿಕೆ ಯಮನ ಪುರದ ಬಾಧೆ ಪ ಕಿಚ್ಚನಾದರು ಕೇಳಿ ದುಶ್ಚಿಂತನ ಬಿಡು ಅ.ಪ ಗಂಡ ಅತ್ತೆ ಮಾವ ಮೈದುನರ ಬೈವರ | ಖಂಡ ತುಂಡನೆ ಮಾಡಿ ಖಂಡವ ಕೊಯಿದು | ಕಂಡದೊಳಗೆ ಬೇಯ್ಸಿ ದಿಂಡುಗೆಡಹಿ ಕಟ್ಟಿ | ಮಂಡೆಯ ಒಡೆದು ಡಂಡದಿ ಶಿಕ್ಷಿಸಿ | ಹಿಂಡಿ ಹಿಪ್ಪೆಯ ಮಾಡಿ ಕೊಂಡೊಯ್ದು ಅಗ್ನಿಯ ಕುಂಡವ ಹೋಗಿಸುವರೊ-ಎದೆಯ ಮೇಲೆ | ಗುಂಡನೆ ಹೊರಿಸುವರೊ-ಬಾಯೊಳಗೆ | ಕೆಂಡವ ಸುರಿಸುವರೊ-ಕೋಟಿ ಜನ್ಮ ಚಂಡಾಲ ಯೋನಿಯಳಿಟ್ಟು ಬಾಧಿಸುವರೊ 1 ಉತ್ತಮ ಗುರು ಹಿರಿಯರುಗಳ ಬೈವರ | ತಿತ್ತಿಯ ಸುಲಿದು ಕತ್ತರಿಪ ಬಾಚೆಯ ತಂದು | ಕೆತ್ತಿ ಶರೀರಕ್ಕೆ ಹತ್ತೊ ನೀರನೆ ಚೆಲ್ಲಿ | ನೆತ್ತಿಯ ಕೊರೆದು ಖಾರವನೊತ್ತಿ ಹಾವಿನ ಹುತ್ತವ ಹೊಗಿಸಿ ವಿಷವನಿತ್ತು ಕೈ ಕಾಲು | ಕಿತ್ತು ಹೊಟ್ಟೆಯ ಕೊಯ್ವರೊ ಬೊಬ್ಬಿರಿ | ಯುತ್ತುರುಳು ಹಾಕುವರೊ ಬೆನ್ನೊಳಗೇ | ಎತ್ತಿ ಕರುಳ ತೆಗೆವರೊ ದೊಡ್ಡ ಬೆಟ್ಟ | ಹತ್ತಿಸಿ ತಲೆಕೆಳಗಾಗಿ ನೂಕಿಸುವರೊ 2 ಪರಧನ ಪರಸತಿ ಪರನಿಂದೆಗೆಳೆವರ | ಮರುಳುವ ಮರಳಿನೋಳ್ ಹೊರಳಿಸಿ ಅಸ್ಥಿಯ | ಮುರಿದು ಮುಟ್ಟಿಗೆ ಮಾಡಿ ಉರೆದ ಗುಂಡಿಗೆ ಸೀಳಿ | ಜಿಹ್ವೆ ಕೊರೆದು ತೈಲದೊಳಗೆ | ಅರಿವೆಯೆದ್ದಿ ಮೈಗೆ ಉರಿಯ ಸುತ್ತಲಿಕ್ಕೆ | ಉರವಣಿಸು ಕುಣಿಸುವರೊ-ಹೆರೆದಂಬಿಗೆ | ಗುರಿಮಾಡಿ ನಿಲಿಸುವರೊ ಉಕ್ಕಿನ ಕಂಭ | ಕ್ಕೊರಗಿಸಿ ನಿಲಿಸುವರೊ ಶೂಲಕೆ ಹಾಕಿ | ಎರಡು ಕಾಲೆಳೆದು ಕಾವಲಿ ಮೇಲೆ ನಿಲಿಸೀರೊ 3 ಹೆಣ್ಣುಮಾರಿ ಹೊನ್ನು ಕಟ್ಟಿದ ಮನುಜರ | ತುಂಬಿ | ಸುಣ್ಣದೊಳಗೆ ಹೂಳಿ ಜನ್ಮ ಕಳೆದು ಶಿರ | ವಣ್ಣಿಕಲ್ಲನೆ ಆಡಿ ಇನ್ನು ಉಕ್ಕಿನ ಕಾದ- | ಎಣ್ಣೆಯ ಸುರಿದು ನೀರನ್ನೆರದು ನರಮಾಂಸ- | ಉಣ್ಣೆಂದು ತಿನಿಸುವರೊ-ತಿತ್ತಿಯನಿಕ್ಕಿ | ಹಣ್ಣಣ್ಣು ಮಾಡುವರೊ-ಅಸೀಪತ್ರಾ- | ರಣ್ಯವ ಹೊಗಿಸುವರೊ-ಕ್ಷುಧೆಯೆನ್ನೆ | ತುಂಬಿ ಕುಟ್ಟಿ ಮೆಲ್ಲಿಸುವರೊ4 ವಾಸುದೇವನ ವಾಸರದಲ್ಲಿ ಉಂಬರ | ಹಾಸುಗಲ್ಲಿನ ಮೇಲೆ ಬೀಸಿ ಅಪ್ಪಳಿಸಿ ಆ- | ಕಾಶಕ್ಕೊಗೆದು ಖಡ್ಗ ರಾಸಿಯೋಳ್ ಬೀಳಲು | ಕೇಶ ಪಿಡಿದು ಕೆಡಹಿ ಘಾಸಿಸಿ ಬಾಯೊಳು | ತುಂಬಿ | ನಾಸಿಕ ಕೊಯ್ಸುವರೋ-ಕೀಸಿಸಿ ಗೂಟ | ಹೇಸದೆ ಬಡಿಸುವರೊ ಹಂದಿಯಂತೆ | ಈ ಶರೀರ ಸುಡಿಸವರೊ-ತಮಸಿನೊಳು | ಏಸು ಜನ್ಮಕೆ ಗತಿಯಲ್ಲವೆನಿಸುವರೊ 5 ಎಲ್ಲ ಒಂದೇ ಎಂಬ ಪಂಚ ಮಹಾಪಾತಕಿಯ | ಹಲ್ಲನ್ನು ಮುರಿದು ಗಂಟಲ ಶೀಳಿ ಅಂಗುಳಿಗೆ | ಮುಳ್ಳನ್ನು ತಂದೂರಿ ತಪ್ತ ಲೋಹದ ಮೇಲೆ | ಕುಳ್ಳಿರಿಸಿ ಕೊಡಲಿಯೊಳ್ ಎಲ್ಲವನು ಕಡಿದು | ಕೊಲ್ಲ ಬಡಿದು ಅಂಬಿನಲಿ ಚುಚ್ಚಿ ರಕ್ತ- | ಚೆಲ್ಯಾಡಿ ಬಗೆಯುವರೊ-ಉರಿಯ ಕೊಂಡ- | ದಲ್ಲಿ ಮುಳುಗಿಸಿಬಿಡವರೊ-ಹೊತ್ತು ಒಯ್ದು | ಕಲ್ಲುಗಾಣಕೆ ಹಾಕುವರೋ-ಕುಂಭೀಪಾಕ | ದಲ್ಲಿ ಕುದಿಸಿ ಬೇಯ್ಸಿ ಬೆಂಡು ಮಾಡುವರೊ6 ಒಂದು ನೋಡಿದರೊಂದು ಅಧಿಕ ಪಾಪಗಳಿವೇ- ನೆಂದು ಪೇಳಲಿ ಎನಗೊಂದಾದರಳವಲ್ಲ | ಹಿಂದಿನ ದುರ್ವಾರ್ತೆ ಮರೆದು ಮುಂದಾದರು | ನಂದತೀರ್ಥರ ಪಾದಾನಂದದಿ ಭಜಿಸಿ ಪು | ರಂದರನನು ಸರಿಸಿ-ವಿಜಯವಿಠ್ಠಲ | ನ್ಹೊಂದಿ ಪತಿಕರಿಸಿ-ಮುಕ್ತಿ ಮಾರ್ಗ- | ವಿಂದು ಆಶ್ರಿಯಿಸೊ ಗೋವಿಂದನ ಸ್ತುತಿಸಿ | 7
--------------
ವಿಜಯದಾಸ
ಎಣೆಯಾರೊ ನಿನಗೆ ಹನುಮಂತರಾಯ ಪ. ಎಣೆಯಾರೊ ನಿನಗೆ ತ್ರಿಭುವನದೊಳಗೆಲ್ಲಪ್ರಣತಜನಮಂದಾರ ಪವನಸುಕುಮಾರ ಅ.ಪ. ಅಡಿಗಡಿಗೆ ರಾಮ ಪದಾಂಬುಜಕೆ ವಂದಿಸುತನಡೆನಡೆದು ಮುದ್ರಿಕೆಯ ಪಡೆದು ಮುದದಿದಡದಡನೆ ಅಂಬುಧಿಯ ದಾಟಿ ಸೀತೆಗೆ ಗುರುತಕೊಡುಕೊಡುತ ಕುಸ್ತ್ತರಿಸಿದಂಥ ಹನುಮಂತ1 ಗರಗರನೆ ಪಲ್ಗಡಿದು ಕಲುಷದೈತ್ಯರನೆಲ್ಲಚರಚರನೆ ಸೀಳಿ ಸಂಭ್ರಮದಿಂದಬಿರಬಿರನೆ ಕಣ್ಬಿಡುತ ಬಿಂಕದಲಿ ಲಂಕೆಯನುಸುರಸುರನೆ ಬಾಲದಲಿ ಸುಟ್ಟ ರಣದಿಟ್ಟ 2 ಫಳಫಳನೆ ಆರ್ಭಟದಿಂದ ರಾವಣನ ನಳನಳನೆ ಬೆಳೆದ ನಂದನವ ಕಿತ್ತುಖಳಖಳನೆ ನಗುತ ದಶಕಂದರನ ಗುದ್ದಿ ಬಂದೆಭಳಿಭಳಿರೆ ಹಯವದನ ದಾಸ ನಿಸ್ಸೀಮ 3
--------------
ವಾದಿರಾಜ
ಎಂತವಗೊಲಿದು ನೆರೆದೆ ಎಲೆ ಬಾಲೆ ನೀ ಬರಿದೆ ಪ ಕಾಂತೆಯುದರದಲಿ ತಾಳ್ದ ಕಮನಿಯೊಳ್ ಬಾಳ್ದಅ.ಪ ಮೈಮೊಗ ಬೇರಾದವಗೆ ಮಾತೃಘಾತಕನಿಗೆ ಬೈಯಲು ಭಾವನಕೊರಳ ಭಾವಿಸದರಿದವಗೆ ಕೈವಿಡಿದ ಕಾಂತೆಯನು ಕಾಡಿಗಟ್ಟಿದವಗೆ ತಮ್ಮಯ್ಯನರ್ಧಾಂಗಿಯನು ಅಣ್ಣನ ನೆರೆಸಿದವಗೆ1 ಹದ್ದನೇರಿದವಗೆ ಹಾವಿನಮೇಲೊರಗಿದವಗೆ ಶುದ್ಧ ಕರಡಿಯಮಗಳ ಸರಿ ಎಂದು ಆಳ್ದವಗೆ ಮುದ್ದಾಡಿ ಮೊಲೆಯೂಡಿದವಳಸುವನೆ ಕಳೆದವಗೆ ಕದ್ದು ಬೆಣ್ಣೆಯ ಮೆದ್ದ ಕರಿಮೈಯವಗೆ2 ಸುರನಿಶಾಚರ ಮಧ್ಯೆ ಅರಿಯೆ ಪೆಣ್ಣಾದವಗೆ ಸುರಪನಂದನ ಶಕಟನ ನೆರೆ ಹೊಡೆದವಗೆ ಸುರಪುರದರಸು ಶ್ರಿ ಲಕ್ಷ್ಮೀರಮಣಗೆ 3
--------------
ಕವಿ ಲಕ್ಷ್ಮೀಶ
ಎಂತು ಜೀವಿಸಲಯ್ಯ ಯಾದವೇಶ ಪ ಎನ್ನಸುವಿಗಸು ನೀನು ಭಿನ್ನ ಜ್ಞಾನದಿ ಎನ್ನ ಅ.ಪ ಬನ್ನ ಬಡಿಸುವಿ ಮಾಯ ಜೈಸಲರಿಯೆ ವಿಧಿ ವಾಯು ಶಿವ ಶಕ್ರ ಸುರನಿಕರ ನಿನ್ನಲ್ಲಿ ಸುಖಿಸುವರೊ ಅನ್ನೆಲ್ಲಿ ಅಸತೆಂದು 1 ನೀರಗುಳ್ಳೆಯಂತೆ ಸಂಸೃತಿಯ ಸುಖವೆಂದು ದಾರಿತೋರ್ವವ ನೀನು ಕಣ್ಣುಕಟ್ಟೆ ಆರು ಬಿಚ್ಚುವರಯ್ಯ ಆ ಪಟಲಕಿಕ್ಕಟ್ಟು ವಾರಿಜಾಸನನಯ್ಯ ವಂಚಿಸದೆ ಮೈದೋರು 2 ಕಾಮಾದಿ ಷಡ್ವರ್ಗ ದುಷ್ಕರಣ ದುಮ್ಮಾನದ ತಾಮಸದಿ ಸಿಗಬಿದ್ದು ಪಾಮರಾದೆ ವ್ಯೋಮಕೇಶನ ಮಿತ್ರ ಜಯೇಶವಿಠಲ ನೀ ಮನಸು ಮಾಡಲು ಆತ್ಮಾಪಿ ವೈಕುಂಠ 3
--------------
ಜಯೇಶವಿಠಲ
ಎಂತು ಬಿನ್ನೈಸಲೊ ಮುರಾರಿ ಸಾರಿಗೆ ಸಾರಿ | ಸಂತ ಜನರ ಆಧಾರಿ ಪ ಶ್ಲೋಕ - ಘನ ಅನವರತÀ ಕಾಯಾ | ಸ್ವಾಮಿ ಲಕ್ಷ್ಮೀ ಸಹಾಯ | ಅನಿಮಿಷ ಮುನಿಗೇಯಾ ಹೇಯ ಧರ್ಮ ವಿಹಾಯ | ನಗರ ನಿಲಯಾ | ಅಮಿತÀ ಆನಂದ ಕಾಯಾ | ನಾಗ ತಲ್ಪೋರು ಗಾಯಾ 1 ಪದ - ಶರಣು ಶರಣು ಶಾರಣ್ಯನೆ | ಗುಣ ಗುಣ್ಯನೆ | ನಮಗಾನನ್ಯನೆ | ನಿರುತರಂತರ ಕಾರುಣ್ಯನೆ ಪ್ರದದಾನ್ಯನೆ | ಅಪ್ರತಿ ಧನ್ಯನೆ | ಪರಮ ಪುರುಷ ಅಸಮಾನ್ಯನೆ | ಮಹ ಪುಣ್ಯನೆ | ಪ್ರಳಯ ಕನ್ಯೆನೆ | ಕರುಣ ಸಾಕ್ಷಿಗನೆ ಲಾವಣ್ಯನೆ | ಅನುಗಣ್ಯನೆ ಪ್ರಾಕೃತ ಶೂನ್ಯನೆ 1 ಶ್ಲೋಕ - ಪರಿಪರಿ ಹೇಯ ಗಾತ್ರಾ ತೆತ್ತನೊ ಇಷ್ಟ ಮಾತ್ರಾ | ಚರಿಸಿದೆ ವಿಷಯ ಯಾತ್ರಾ | ಪಾರಗಾಣೆನೋ ಮಿತ್ರಾ | ಕೊರಳಿಗೆ ಮಮತೆ ಸೂತ್ರಾ | ಉರುಲು ಬಿದ್ದಿದೆ ಚಿತ್ರಾ | ಸುರಕು ಬಡಿಪ ತನುತ್ತಾ | ಕಮಲ ನಿನೇತ್ರಾ | 2 ಪದ - ನರಕ ನರಕ ಉಂಡು ಬೆಂದೆನೊ | ಇಲ್ಲಿ ನಿಂದೆನೊ | ಗತಿಗೆ ಮುಂದೇನೊ | ಕುರುಡ ಕಿವುಡನಾಗಿ ನೊಂದೆನೊ | ಇನ್ನೊಂದೇನೊ | ಉಪಾಯವಂದೆನೊ | ಮರಹು ಸಾಗರದೊಳು ಸಂದೆನೊ | ಅಂದು ಹಿಂದೆನೊ | ಸುಜನರಿಗಂದೇನೊ 2 ಶ್ಲೋಕ - ಸುಲಲಿತ ರುಚಿರಪಾಂಗಾ | ಶುದ್ದ ಸ್ವಭಾವÀ ರಂಗಾ | ಪಲಿಪರಮಾಣು ಸಂಗಾ | ಪಾವನ ಕೋಮಲಾಂಗಾ | ವೊಲಿಸಿದವರ ಭಂಗಾ | ಪರಿಸುವ ಶಿಂಗ ಶಿಂಗಾ | ವರಬಲಗುಣ ತರಂಗಾ | ಸರಸಿಜ ಹೃತ್ಪುಂಗಾ3 ಪದ - ಚಿಂತಿಸುವೆನೊ ನಿನ್ನ ವಿಗ್ರಹಾ | ಮನೋನಿಗ್ರಹಾ | ವಾಗಲಿ ಅನುಗ್ರಹಾ | ಸಂತತ ಎನಗಿದೆ ಸಂಗ್ರಹಾ | ದೇಹವೈಗ್ರಹಾ | ದುರುಳರ ಪ್ರತಿ ಗ್ರಹಾ | ಮುಂತೆ ಕೈಕೊಂಬ ದುರಾಗ್ರಹಾ | ಯೈವ ವಿಗ್ರಹಾ | ಮಾಣಿಸು ಶಿರಿಗ್ರಹಾ | ಸಂತೈಸು ಕರುಣವಾರುಣಗ ಅನಿಗ್ರಹಾ 3 ನವನೀತ ಗೋಪಿ ವಸ್ತ್ರಾಪಹಾರಾ | ಕಾಲ ಧಾರಾ | ಕಂಸದಾನವ ಸಂಹಾರಾ | ಧ್ರುವ ಬಲಿಕರಿ ಉದ್ಧಾರಾ | ನಾನವತಾರ ಧೀರಾ | ಪವನ ಮನಮಂದಿರಾ ಪಾಲಿಸೊ ವಾರಂ ವಾರ4 ಪದ - ವಿಜಯನಗರಾಧೀಶ ಸರ್ವೇಶಾ | ಮಣಿಮಯ ಭೂಷಾ | ಸೂರ್ಯ ಕೋಟಿ ಪ್ರಕಾಶಾ | ತ್ರಿಜಗದೊಳಗೆ ನೀನೆ ನಿರ್ದೋಷಾ | ಶಕ್ತಿ ವಿಶೇಷಾ | ಐಶ್ವರ್ಯ ವಿಲಾಸಾ | ಋಜುಜ್ಞಾನ ಕೊಡುವದೊ ಮನೋತ್ತರಿಸಾ | ಮಂಜುಳ ಭಾಷಾ | ಭೂದಾ ರಜವಾಸಾ | ನಿರ್ಜರ ಕೋಶಾ | ಹೃದಯ ಕಾಶಾ | ನಾಮಕ ಮಹಿದಾಸಾ 4
--------------
ವಿಜಯದಾಸ
ಎಂತೋ ಪೂಜಿಪುದಂತರ್ಯಾಮಿಯನನಂತಾದಿರಹಿತನ ಚಿಂತಾದೂರನ ಚಿನುಮಯರೂಪನನೆಂತೋ ಧ್ಯಾನಿಪುದು ಪ ಈಶ ವೀಸ ವಾಹನಗೀಸನ ಚರಾಚರ ಮೀಸಲಿಗಳವಲ್ಲಾ ವಾಸುಕಿ ಭೋಗ ನಿವಾಸಿಗೆ ತರವಲ್ಲಾ 1 ಚರಣದಿ ಗಂಗೆಯ ಧರಿಸಿತುವಾತನ ಚರಣವ ತೊಳೆಯುವರೇ ತರಣಿಗೆ ತೇಜದ ಭರಣಿಗೆ ದೀಪದ ಸರಣಿಯ ತೋರುವರೆ 2 ವಿಗ್ರಹರಹಿತನಿಗಘ್ರ್ಯದ ಪೂಜೆಯು ದುರ್ಘಟ ಕಾರ್ಯವಲೆ ಭರ್ಗಾದ್ಯಮರರ ವರ್ಗವು ತಮ್ಮ ನಿಸರ್ಗದಿ ಕಾಣದಲೆ 3 ಕಲಶಾಂಬುಧಿಯೊಳು ನೆಲೆಸಿಹ ಮೂರ್ತಿಗೆ ಸಲಿಲ ಸ್ವರ್ಶನವೆ ಜಲರುಹ ನೇತ್ರಗೆ ಜಲರುಹಗಾತ್ರಗೆ ಜಲದಲಿ ಮಜ್ಜನವೆ 4 ಸ್ವರ್ಣಾಂಬರಗಳ ಬಣ್ಣಿಸುತುಡುವಗೆ ಬಣ್ಣದ ವಸ್ತ್ರಗಳೆ ಕೌಸ್ತುಭ ರನ್ನದ ತೊಡವಿಗೆ ಬಿನ್ನಣದೊಡವೆಗಳೆ 5 ಬಿಸಜನಾಭನಿಗೆ ಕುಸುಮಾಸ್ತ್ರನ ಮಾನಸದಿಂ ಪಡೆದವಗೆ ಮಿಸುಪ ತುಲಸಿಯಿಂದೆಸೆವಗೆ ಪೂಗಳ ವಿಸರ ಮನೋಹರವೇ 6 ಗಂಧವಾಹನ ಸುವಿಂದ ಅಸೃಜಿಸಿದ ಗಂಧವತೀತನಿಗೆ ಗಂಧಧೂಪಗಳು ಬಂಧುರಂಗಳೆ ಗಂಧರ್ವಾತನಿಗೆ 7 ವೇದಗೋಚರಿಸುವೇದಾತ್ಮಕನು ವೇದೋದ್ಧಾರಕನು ವೇದವೇಶದಿಂ ಮೋದಿಸುವನೋ ಸಮ್ಮೋದ ಪರಾತ್ಮಕನೇ 8 ಕುತ್ತಿಗೆನೆನೆಯದ ವಸ್ತು ಪರಾತ್ಪರ ಪೊಕ್ಕರೆ ಜಲವನ್ನ ನಿತ್ಯ ತೃಪ್ತನಂ ಚಿತ್ರಾನ್ನಗಳಿಂ ತೃಪ್ತಿಪುದೆಂತು ಜನಾ 9 ಮಂತ್ರ ಮೂರುತಿಗೆ ಮಂತ್ರಜ್ಞನಿಗೆ ಸ್ವತಂತ್ರವಿಹಾರನಿಗೆ ಮಂತ್ರಯಂತ್ರಗಳ ತಂತ್ರವದೆಂತೊ ಮಂತ್ರಾಧಾರನಿಗೆ 10 ಅಂತರ್ಬಹಿಯೊಳಗಂತರ ವಿಲ್ಲದನಂತರ ಗುಣಾತ್ಮಕನ ಎಂತು ಪ್ರದಕ್ಷಿಣಿಯಾಂತು ನಮಿಪೆ ಜಗದಂತರೀಕನ 11 ಸರ್ವಾಧಾರನ ಸರ್ವಶರೀರನ ಸರ್ವವ್ಯಾಪಕ ನಾ ಸರ್ವನ ನಮಿಸುವ ಗರ್ವವೆಂತುಟೊ ಶಕ್ರ ಸಮಸ್ಕøತನಾ12 ಧರೆಯೊಳು ಪುಲಿಗಿರಿವರದ ವಿಠಲನ ಚರಣವ ಭಜಿಸುವರ ನಿರುತದಿ ಪೂಜಿಪ ಹರುಷವು ಸಾಲದೆ ಹರಿ ಸರ್ವೋತ್ತಮ13
--------------
ವೆಂಕಟವರದಾರ್ಯರು
ಎಂತೋಪೂಜಿಪುದಂತರ್ಯಾಮಿಯಾ-ನಂತಾದಿರಹಿತನ ಚಿಂತಾದೂರನ ಚಿನುಮಯ ರೂಪನಾ ದೆಂತೋಧ್ಯಾನಿಪೆ ನಾ ಪ ಈಶ-ವೀಶ-ವಾಹನಗೀಸಚರಾಚರ ಮಿಸಲಿಗೊಳಗಲ್ಲಾ ವಾಸುಕಿ ಭೋಗನಿವಾಸಿಗೆ ತರವಲ್ಲಾ 1 ಚರಣದಿ ಗಂಗೆಯ ಧರಿಸುವಾತನ ಚರಣವ ತೊಳೆಯುವರೇ ತರಣಿಗೆ ತೇಜದ ಭರಣಿಗೆ ದೀಪದ ಸರಣಿಯ ತೋರುವರೆ 2 ವಿಗ್ರಹರಹಿತನಿಗಘ್ರ್ಯದ ಪೂಜೆಯು ದುರ್ಘಟ ಕಾರ್ಯವಲೆ ಭರ್ಗಾದ್ಯಮರರ ವರ್ಗವು ತಮ್ಮ ನಿಸರ್ಗದಿ ಕಾಣದಲೆ 3 ಕಲಶಾಂಬುಧಿಯೊಳು ನೆಲಸಿಹಮೂರ್ತಿಗೆ-ಸಲಿಲ ಸ್ಪರ್ಶನವೆ ಜಲರುಹನೇತ್ರಗೆ ಜಲರುಹಗಾತ್ರಗೆ ಜಲದಲ್ಲಿ ಮಜ್ಜನವೆ 4 ಸ್ವರ್ಣಾಂಬರಗಳ ಬಣ್ಣಿಸುಡುವಗೆ ಬಣ್ಣದವಸ್ತ್ರಗಳೆ ಉನ್ನತ ಕೌಸ್ತುಭರನ್ನದ ತೊಡವಿಗೆ ಬಿನ್ನಣದೊಡವೆಗಳೆ 5 ಬಿಸಜನಾಭನಿಗೆ ಕುಸುಮಾಸ್ತ್ರನ ಮಾನಸದಿಂಪಡೆದವಗೆ ಮಿಸುಪ ತುಲಸಿಯಿಂದೆಸವಗೆ ಪೂಗಳ ವಿಸರ ಮನೋಹರವೇ 6 ಗಂಧವಾಹನ ಸುವಿಂದಲಿಸೃಜಿಸಿದ ಗಂಧವತೀಶನಿಗೆ ಗಂಧಧೂಪಗಳು ಬಂಧುರಂಗಳೆ ಗಂಧರ್ವಾನತನಿಗೆ 7 ವೇದ ಗೋಚರಿಸು ವೇದಾತ್ಮಕನು ವೇದೋದ್ಧಾರಕನು ವೇದಲೇಶದಿಂ ಮೋದಿಸುವನೋ ಸಮ್ಮೋದ ಪರಾತ್ಮಕನೆ 8 ಪೊಕ್ಕರೆ ಜಲಮಂ ಕುತ್ತಿಗೆ ನೆರೆಯದವಸ್ತು ಪರಾತ್ಪರನಾ ನಿತ್ಯತೃಪ್ತನಂ ಚಿತ್ರಾನ್ನಗಳಿಂ ತೃಪ್ತಿಪುದೆಂತುಜನಾ 9 ಮಂತ್ರ ಮೂರುತಿಗೆ ಮಂತ್ರಜ್ಞನಿಗೆ ಸ್ವತಂತ್ರವಿಹಾರನಿಗೆ ಮಂತ್ರ ಯಂತ್ರಗಳ ತಂತ್ರವದೆಂತೊ ಮಂತ್ರಾಧಾರನಿಗೆ 10 ಅಂತರ್ಬಹಿಯೊಳಗಂತರವಿಲ್ಲದ ನಂತ ಗುಣಾತ್ಮಕನಾ ಎಂತು ಪ್ರದಕ್ಷಿಣೆಯಾಂತು ನಮಿಪೆ ಜಗದಂತ ಶರೀರಕನಾ 11 ಸರ್ವಾಧಾರನ ಸರ್ವ ಶರೀರನ ಸರ್ವವ್ಯಾಪಕನಾ ಸರ್ವನ ನಮಿಸುವಗರ್ವವೆಂತುಟೊ ಶಕ್ರನಮಸ್ಕøತನಾ 12 ಧರೆಯೊಳು ಪುಲಗಿರಿವರದ ವಿಠಲನ ಚರಣವ ಭಜಿಸುವರ ನಿರುತದಿ ಪೂಜಿಪ ಹರುಷವು ಸಾಲದೆ ಹರಿದಾಸೋತ್ತಮರಾ 13
--------------
ಸರಗೂರು ವೆಂಕಟವರದಾರ್ಯರು
ಎಂಥ ದಯವಂತನೋ | ಮಂತ್ರ ಮುನಿನಾಥನೊ ಸಂತಸದಿ ತನ್ನನು | ಚಿಂತಿಪರಿಗೆ ಸುರಧೇನು ಪ ವರ ಪ್ರಹ್ಲಾದನು | ಮರಳಿ ಬಾಹ್ಲೀಕನು | ಶ್ರೀ ಗುರುವ್ಯಾಸರಾಯನೊ | ಪರಿಮಳಾಚಾರ್ಯನೊ 1 ಇರುವ ತುಂಗಾತಟದಲ್ಲಿ | ಬರುವ ತಾನು ಕರೆದಲ್ಲಿ ಕರಪಿಡಿದು ಪೊರೆವಲ್ಲಿ ಸರಿಗಾಣೆ ಧರೆಯಲ್ಲಿ 2 ದುರಿತ ಕಳೆವ ಶಕ್ತನು ತರಣಿ ನಿಭಗಾತ್ರನು | ಪರಮಸುಚರಿತ್ರನು 3 ಶಿಶುವಿಗವುಗರೆದನು | ವಸುಧಿ ಸುರರ ಪೊರೆವನು ಅಸಮ ಮಹಿಮನೊ | ಸುಶೀಲೇಂದ್ರ ವರದನೊ 4 ಭೂಮಿಯೊಳು ಖ್ಯಾತನು | ಶಾಮಸುಂದರ ಪ್ರೀತನು ಕಾಮಿತಾರ್ಥದಾತನು | ಸ್ವಾಮಿ ನಮಗೆ ಈತನು 5
--------------
ಶಾಮಸುಂದರ ವಿಠಲ
ಎಂಥ ಶೂರನೊ ರಾಮ ಎಂಥ ಧೀರನೊ ಪ ಕಂತುಹರನ ಧನುವನೆತ್ತ ಪಂಥದಿಂದ ಮುರಿದು ಬಿಸುಟ ಅ.ಪ. ಹಲವು ಶೂರರಾಜರದನು ಚಲಿಸಲಾಗದ ಧನುವ ಸುಲಭದಿಂದಲೆತ್ತಿ ಮುರಿದು ಲಲನೆ ಸೀತೆಯೊಲಿಸಿದವನು 1 ಸಕಲ ಕ್ಷತ್ರಿಯರನು ಗೆಲಿದು ಪ್ರಕಟನಾದ ಪರಶುರಾಮ ಶಕುತಿಯನ್ನು ತಾನು ಪರಮ ಯುಕುತಿಯಿಂದ ಗೆಲಿದು ಬಂದ 2 ಸಾಲು ಶಿರನ ಕೀಟವೆಂದು ಬಾಲದಲ್ಲಿ ತಂದ ವೀರ ವಾಲಿಯನೇಕ ಬಾಣದಲಿ ಲೀಲೆಯಿಂದಲಿರಿದ ಜಾಣ 3 ಹತ್ತನಾಲ್ಕು ಲೋಕಗಳನು ಸುತ್ತಿಗೆಲಿದು ಖ್ಯಾತನಾದ ಹತ್ತು ತಲೆಯ ದುಷ್ಟನನ್ನು ಕತ್ತು ಕಡಿದು ಕೆಡಹಿದವನು 4 ರಾಸಿ ದೈತ್ಯರನ್ನು ಕೊಂಡು ದೇಶವನ್ನು ಉದ್ಧರಿಸಿದ ವಾಸವಾದಿ ಸುರನುತ ರಂ- ಗೇಶವಿಠಲರೇಯನವನು 5
--------------
ರಂಗೇಶವಿಠಲದಾಸರು
ಎಂಥಾ ಭಾಗ್ಯವೆ ಎಂಥಾ ಪುಣ್ಯವೆ ಗೋಪಿ ಪ. ಎಂತು ಸಾಕಲಿಂಥ ದುಷ್ಟನ ಎಂತನಿಂತು ಚಿಂತೆಯಾಂತು ಅ.ಪ. ಪುಟ್ಟಿದೇಳು ದಿವಸದಲ್ಲಿ ದುಷ್ಟಪೂತನಿ ಕೊಂದ ದೇವ ದೃಷ್ಟಿವಂತನೆ ದಿಟ್ಟ ತೃಣ ಕೇಶೀಯರ ಪುಟ್ಟಕಾಲಲಿ ಶಕಟನಳಿದ ಕಟ್ಟಿ ಸಕಲ ದನುಜರನ್ನು ದೃಷ್ಟಿ ತಾಕಿತೆ ಕೃಷ್ಣಗೆನುತ 1 ವಿಪ್ರನು ನಿನ್ನ ಮನೆಗೆ ಬಂದು ಕ್ಷಿಪ್ರದಿ ಪೂಜೆ ಕೃಷ್ಣೆಗೆನಲು ಅಪ್ರಮೇಯನು ವಿಪ್ರನ ಮುಟ್ಟೆ ಕಟ್ಟಿ ಕಂಬಕೆ ಬರಲು ನಿಂದು ಕೃಷ್ಣಗರ್ಪಿಸೆ ನೈವೇದ್ಯವಾಗ ಸುಪ್ರಕಾಶದಿ ತೆಗೆದುಕೊಂಡ ಕೃಷ್ಣನನು ನೀನಪ್ಪಿ ಮುದ್ದಿಸೆ2 ಚಂದಿರನ ನೀ ತೋರು ಎನಲು ಇಂದುವದನ ಕೇಳಲಾಗ ಸುಂದರಾನನನಂದದಿ ಗೋವ ಚಂದದಿಂದ ಕಾದು ಕಾಳಿಂಗನಂದದಿ 3 ಸುರರು ಶ್ರೀ ಶ್ರೀನಿವಾಸನ ಶಿರದಿ ಪುಷ್ಪ ಮಳೆಗೆರೆಯಲು ನೆರೆದು ಗೋಪೇರ ಸೀರೆ ಸೆರಗ ಸೆಳೆದು ವರಳನೆಳೆದು ಮುರಿದು ಮರವ ಗರೆದು ಅಮೃತಸದೃಶ ವಾಣಿ ನೆರೆದು ಗೋಪಿಯರೊಡನೆ ನಾಟ್ಯಗರೆದು ರಾಸವಾಡೆ ರಂಗನಕರೆದೆರೆವೆ ಮಗುವೆನ್ನುವ 4
--------------
ಸರಸ್ವತಿ ಬಾಯಿ
ಎಂಥಾ ಮೋಹನನೇ ನೋಡಮ್ಮಯ್ಯಾ| ಸಂತತ ತೃಪ್ತನು ಬಾಲಕನಾದಾ|ಅ- ನಂತ ಚರಿತೆಯಾ ದೋರುವ ಕೃಷ್ಣ ಪ ಮೂಡಣ ದೇಶಕೆ ಪಡರಲು ಗೋಪಿಯು| ತಡೆಯದೆ ದುಮುಧುಮು ಧುಮುಕೆನುತ| ಕಡೆಯಲು ಧುಡು ಧುಡು ಧುಡುನಡೆಯುತ ಬಂದು| ಪಿಡಿದೆನ್ನ ಸೆರಗ ಬೆಣ್ಣೆ ಬೇಡುವಾ ಕೃಷ್ಣ 1 ಸಮಗೆಳೆಯರ ಸಂಗಡ ಧ್ವನಿವೇಣಿಯ| ಉಮಟೆಸುತಲಿ ಧಿಗಿಧಿಗಿಲೆನುತಾ| ಧಿಮಿಕಿಟ ಧಿರಕಿಟ ತಿರುಕಿಟವೆಂಬೋ| ಕ್ರಮದಿ ವಾದ್ಯವ ಬಾರಿಸುವಾ ಕೃಷ್ಣ 2 ಗುರು ಮಹೀಪತಿ ಪ್ರಭುವಿನ ಪದರಜ| ದೊರಕದು ಅಜಭವ ಮುಖ್ಯರಿಗೆ! ಹರುಷದಿ ತೋಳ್‍ದೊಡೆ ಮೇಲೆ ಓಡಾಡುವಾ| ಧರೆಯೊಳು ಯಶೋಧೆ ಸುಕೃತವೆಂತೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂದಿಗೆ ನಿಮ್ಮ ಪದ ಕಾಂಬೆನೊ | ಗುರು ಎಂದಿಗೆ ನಿಮ್ಮ ಪದ ಕಾಂಬೆನೊ ಪ. ಎಂದಿಗೆ ನಿಮ್ಮ ಕಾಂಬೆ ಅಂದಿಗೆ ಮುಕ್ತಳಹೆ ಅ.ಪ. ಸಕಲ ಶಾಸ್ತ್ರಗಳನೆ ಶೋಧಿಸಿ | ಬಹು ಅಕಳಂಕ ತತ್ವವ ಸಾಧಿಸಿ | ಬೇಗ ಮುಕುತಿ ಯೋಗ್ಯರಿಗೆಲ್ಲ ಸುಖವ ತೋರುವ ಗುರು 1 ಮನದಿ ನೆಲಸಿ ಲೀಲೆ ತೋರುತ | ದೃಢ ಮನದಿ ಮನಸಿಜನ ಗೆಲ್ಲುತ | ದೇವ ಮನಸಿಜನಯ್ಯನ ಮನಸಿನೊಳ್ ತೋರುತ 2 ಕಷ್ಟಪಡುವುದು ಕಾಣುತ | ಬಹು ತುಷ್ಟರಾಗಿ ಅಭಯ ನೀಡುತ | ಮನ ಮುಟ್ಟಿ ರಕ್ಷಿಪೆನೆಂದು ಇಷ್ಟು ಸಲಿಪ ಗುರು 3 ನರಹರಿ ಧ್ಯಾನಿಪ ಶ್ರೀ ಗುರು | ಬಹು ಕರುಣಾಳುವೆ ದೇವತರು | ನಿಮ್ಮ ಅರಘಳಿಗೆ ಬಿಟ್ಟು ಇರಲಾರೆ ಧರೆಯೊಳು 4 ಮುಕ್ತಿ ಸೌಭಾಗ್ಯವ ನೀಡುವ | ಬಹು ಶಕ್ತರಹುದು ನಿಮ್ಮ ಭಾವವ | ನಾನು ಎತ್ತ ಯೋಚಿಸೆ ಕಾಣೆ ಸತ್ಯವಚನವಿದು 5 ಆನಂದಪಡಿಸುವ ಶ್ರೀ ಗುರು | ನಿಮ್ಮ ಏನೆಂದು ಸ್ತುತಿಹಲಿ ಪಾಮರರು | ನಿಮ್ಮ ಕಾಣರು ಜಗದಲಿ ಏನೆಂಬೆ ಮಹಿಮೆಯ 6 ಗೋಪಾಲಕೃಷ್ಣವಿಠ್ಠಲನ | ಶುಭ ರೂಪವ ತೋರುವ ಕಾರುಣ್ಯ | ದೇವ ಪರಿ ನಿಮ್ಮ ಸ್ತುತಿಸಿ ನಾ ಪಾರು ಕಾಂಬೆನು 7
--------------
ಅಂಬಾಬಾಯಿ
ಎಂದು ಕಾಂಬುವೆ ನಿನ್ನ ಚರಣ ನಾರಾಯಣತಂದು ತೋರಯ್ಯ ನಾ ಬಂದೆನು ಶರಣ ಪ ನಿತ್ಯ ಒತ್ತುವ ಚರಣತೋರ ಗಂಗೆಗೆ ಜನ್ಮ ಕೊಟ್ಟಂಥ ಚರಣಮೂರು ಲೋಕವ ಹಿಡಿದ ಚರಣನಾರಿ ಅಹಲ್ಯೆಯ ಪೊರೆದ ಚರಣ 1 ಪ್ರ್ರಳಯ ಕಾಲದಿ ನೆಕ್ಕುತಿಹ ಚಿಕ್ಕ ಚರಣಇಳೆಗೆ ಸುಯೋಧನನಿಳಿಸಿದ ಚರಣಎಳೆಯ ಧ್ರುವ ತಾ ಕಂಡ ಚರಣತುಳಸಿ ವನದಲಿ ಕುಣಿದ ಚರಣಸುಳಿದು ಭಕ್ತರ ಪೊರೆವ ಚರಣ 2 ಅಖಿಲಾಂಡದ ಸೃಷ್ಟಿ ಸ್ಥಿತಿ ಲಯ ಕಾರಣಭಕುತರು ಕರೆಯಲೋಡುವ ದಿವ್ಯ ಚರಣಶಕಟ ದೈತ್ಯನ ಒದೆದ ಚರಣಯುಕುತಿ ಶಕುತಿಗೆ ಬರದ ಚರಣಯುಕುತಿ ಪಥವನು ತೋರ್ಪ ಚರಣಪ್ರಖರ ಗದುಗಿನ ವೀರನಾರಾಯಣ 3
--------------
ವೀರನಾರಾಯಣ