ಒಟ್ಟು 2717 ಕಡೆಗಳಲ್ಲಿ , 116 ದಾಸರು , 2082 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆನಂದನಿಲಯ ವಿಠ್ಠಲನೆ | ನೀನಿವಳ ಸಲಹಬೇಕೊಜ್ಞಾನಗಮ್ಯನೆ ದೇವ | ಮೌನಿಮಧ್ವರ ಹೃದಯಾ ಪ ಪಾದ ಸೂಸಿ ಸೇವಿಪಳೋ |ವಾಸುಕೀಶಯನ ಮ | ಧ್ವೇಶ ತವಪದ ಕಮಲದಾಸಳೆಂದೆನಿಸುತ್ತ | ನೀ ಸಲಹೊ ಹರಿಯೇ 1 ಉದ್ಯೋಗ ವ್ಯವಹಾರ | ವಿದ್ಯೆಯಲಿ ಚಾತುರ್ಯಮಧ್ಯೆ ಮಧ್ಯೇ ಬರುವ | ಹೃದ್ರೋಗಗಳು ಸರ್ವಪ್ರದ್ಯುಮ್ನ ತವ ಸೇವೆ | ಎಲ್ಲ ಇವು ಎಂಬಂಥಶುದ್ಧ ಜ್ಞಾನವಿತ್ತು | ಉದ್ಧರಿಸೊ ಹರಿಯೇ 2 ಭವ ಕಳೆಯೋಈರ ಕರುಣಾ ಪಾತ್ರ | ಗೌರಿಪತಿ ಶಿವವಂದ್ಯಗೌರಿದೇವಿಯ ಅಭಯ | ತೋರ್ದೆ ಸ್ವಪ್ನದಲೀ3 ಪತಿಸೇವೆ ಇತ್ತಿವಳ | ಕೃತಕಾರ್ಯಳೆಂದೆನಿಸುಹಿತಮಿತ್ರ ಪಿತೃಮಾತೃ | ಬಂಧು ಬಳಗದಲೀ |ಕೃತಿಪತಿಯು ಸರ್ವರಲಿ | ವ್ಯಾಪ್ತನಾಗಿಹನೆಂಬಮತಿಯಿತ್ತು ಸಲಹಿವಳ | ಗತಿ ಪ್ರದನೆ ಹರಿಯೇ 4 ಗುರುಧರ್ಮ ಗುರುಸೇವೆ | ಪರಮ ಭಕುತಿಯಲಿಂದಚರಿಪ ಸನ್ಮತಿಯಿತ್ತು ಕರುಣದಲಿ ಕಾಯೋಗುರುವಂತ ರಾತ್ಮನನ | ತೋರೆಂದು ಪ್ರಾರ್ಥಿಸುವೆಪರಮ ಪುರುಷನೆ ಗುರು | ಗೋವಿಂದ ವಿಠಲಾ5
--------------
ಗುರುಗೋವಿಂದವಿಠಲರು
ಆನಂದವಾಹನ ವಿಠಲ ನೀನಿವಳ ಕಾಯಬೇಕೋ |ಜ್ಞಾನಪೂರ್ಣನೆ ನಿನ್ನ ಸುಜ್ಞಾನ ಪಾಲಿಸುತ ಹರಿಯೆ ಪ ನಿಗಮವೇದ್ಯನೆ ದೇವ ಜಗದಂತರಾತ್ಮನೆಬಗೆಬಗೆಯ ಲೀಲೆಗಳ ನಗುನಗುತ ತೋರೀ ಬಗೆಹರಿಸು ಭವರೊಗ ಭಿನ್ನೈಪೆ ನಾನಿದನನಗಚಾಪ ಪರಿಪಾಲ ಖಗವಹನೆ ದೇವಾ1 ಪಂಚರೂಪಾತ್ಮಕನೆ ಪಂಚ ಬಾಣನ ಪಿತನೆಪಂಚ ಭೇದ ಜ್ಞಾನ ಸಂಚಿಂತನೆಯನಿತ್ತು |ವಾಂಚಿತಾರ್ಥದ ಹರಿಯೆ ವೈರಾಗ್ಯ ಸದ್ಭಕುತಿವಾಂಚಿಪಳಿಗೀಯೊ | ನಿಷ್ಕಿಂಚನರ ಪ್ರೀಯಾ 2 ಪತಿಸುತರು ಹಿತದಲ್ಲಿ ಮತಿ ಮತಾಂವರರಲ್ಲಿಕೃತಿಪತಿಯೆ ನಿನವ್ಯಾಪ್ತಿ ಅತಿಶಯದಿ ತೋರುತಲಿಹಿತದಿಂದ ಸೇವಿಸುವ ಮತಿಯಿತ್ತು ನೀನಿವಳ ಗತಿಗೆ ಸಾಧನನೆನಿಸು ಪ್ರತಿರಹಿತ ದೇವಾ 3 ನಾಮ ಮಹಿಮೆಯ ತಿಳಿಸಿ ಪ್ರೇಮದಿಂದಲಿ ನಿನ್ನನಾಮದುಚ್ಛಾರಣೆಯ ನೇಮವನೆ ಪಾಲಿಸುತ |ಕಾಮಿತವ ಸಲಿಸುವುದು ಭೂಮ ಗುಣ ನಿಸ್ಸೀಮರಾಮಚಂದ್ರನೆ ಸರ್ವ ಸ್ವಾಮಿ ಎನಿಸುವನೇ 4 ಶ್ರೀವರನೆ ಭವವನಧಿ ನಾವೆ ಎಂದೆನಿಸಿಹನೆಕಾವುದಿವಳನು ಸತತ ಸರ್ವಾಂತರಾತ್ಮ |ನೀವೊಲಿಯದಿನ್ನಾರು ಕಾವವರ ನಾಕಾಣೆದೇವವರ ವಂದ್ಯ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಆನಂದಾದ್ರಿ ಕ್ಷೇತ್ರದಲ್ಲಿ ಆನಂದವ ಕಂಡೆ ಪ. ಆನಂದ ಕಂದನ ಗುಣಗಳ ಆನಂದನಿಲಯರು ಪೇಳಲು ಅ.ಪ. ಆನಂದವಾಯಿತು ಮನಕೆ ಆನಂದಗೋಕುಲದೊಡೆಯನು ಆನಂದತೀರ್ಥರ ಕರದಲಿ ಆನಂದ ಸೇವೆಯ ಕೊಳುತಿರೆ 1 ಆನಂದಾದ್ರಿ ಶಿಖರದಲ್ಲಿ ಸ್ವಾನಂದ ಸೂಚನೆ ತೋರಲು ಏನೆಂದು ಬಣ್ಣಿಸಲಿನ್ನು ಸ್ವಾನಂದರು ಶ್ರೀ ಗುರು ದಯದಿ 2 ಆನೆಂದರೆ ಶಿಕ್ಷಿಸುವನು ಹರಿ ನೀನೆಂದರೆ ರಕ್ಷಿಸುವನು ದೊರಿ ಆನಂದವನ ತರುವಂತೆ ಆನಂದಭೀಷ್ಟವ ಕೊಡುವ 3 ಆನಂದಜ್ಞಾನಪೂರ್ಣ ಆನಂದ ನಿತ್ಯರೂಪ ಆನಂದ ಗುಣಪೂರ್ಣ ನಿ- ತ್ಯಾನಂದ ಭಕ್ತರಿಗೀವ4 ಗೋಪಾಲಕೃಷ್ಣವಿಠಲ ನೀ ಪರಮದೈವವೆನಲು ತಾಪವÀ ಭವಹರಿಸಿ ಕಾಪಾಡೊ ಹರಿಯ ಲೀಲೆ 5
--------------
ಅಂಬಾಬಾಯಿ
ಆನಂದಾದ್ರಿ ವಾಸ | ವಿಠಲ ಪೊರೆ ಇವನಾ ಪ ಮಾನಮೇಯ ಜ್ಞಾನ | ಸಾನುಕೂಲಿಸಿ ಇವಗೆನೀನಾಗಿ ಪೊರೆಯೊ ಹರಿ | ಕೋನೇರಿವಾಸಾ ಅ.ಪ. ಚಿತ್ರ ಚಾರಿತ್ರ | ಶುಭಗಾತ್ರನೇ ಶತಪತ್ರನೇತ್ರಕರವಾದ ದ್ವಂದ್ವ | ಸೂತ್ರಾಂತರಾತ್ಮ |ಮಿತ್ರನಾನುಗ್ರಹಕೆ | ಪಾತ್ರನ ಸಲಹೊ ಮಾಕಳತ್ರನೇ ನಿನ್ನ ಸುಪ | ವಿತ್ರ ಪದ ನಮಿಪೇ 1 ಕರುಣವೆಂತುಟೊ ನಿನಗೆ | ಶರಣಜನ ವತ್ಸಲನೇಕರೆದೊಯ್ದು ಸ್ವಪ್ನದಲಿ | ಹರ ಗಿರಿಜೆ ತೋರೀ |ಮರಳಿ ಬ್ರಹ್ಮನ ಲೋಕ | ದರುಶನಾನಂದದಲಿಕರೆದೊಯ್ದು ಕರುಣಾಳು | ಸುರಸೇವ್ಯ ಬದರಿಗೆ 2 ದಶಮತಿಗೆ ಬೋಧಿಸುವ | ವ್ಯಾಸದರ್ಶನ ಭಾವಿದಶಮತಿಯ ಸಹವಿರುವ | ವ್ಯಾಸ ಭಕ್ತನ್ನಾ |ಹಸನಾಗಿ ತೋರಿ ನೀ | ವಸುಮತಿಗೆ ಕರೆತಂದುಬೆಸಸಿದೆಯಾ ಫಲದೈವ | ದರ್ಶನಕೆ ಇವನಾ 3 ಬದ್ಧನಾದರು ಇಹದಿ | ಶುದ್ಧ ಸಂಸ್ಕøತನಿಹನುಮಧ್ವಮತ ದಾಸತ್ವ | ಶ್ರದ್ಧೆಯುಳ್ಳವನೇಬುದ್ಧಿಯಲಿ ಎನಗೆ ಉ | ದ್ಬುದ್ಭವನೆ ಮಾಡ್ದ ಪರಿತಿದ್ದಿ ಅಂಕಿತವಿತ್ತು | ಬುದ್ಧಿ ಪೇಳಿಹೆನೋ 4 ಸಂಚಿತ ಕರ್ಮ | ತೀವ್ರದಲಿ ದಹಿಸೇಗೋವುಗಳ ಪಾಲ ಗುರು | ಗೋವಿಂದ ವಿಠ್ಠಲನೆಭಾವದಲಿ ಬಿನ್ನವಿಪೆ | ನೀ ವೊಲಿದು ಸಲಿಸೋ 5
--------------
ಗುರುಗೋವಿಂದವಿಠಲರು
ಆನೆಂತು ತುತಿಪೆ ನಿನ್ನಾ ಶ್ರೀ ಗುರು ರನ್ನಾ ಆನೆಂತು ತುತಿಪೆ ನಿನ್ನಾ ಪ ಆನೆಂತು ತುತಿಪೆ ಪಂಚಾನನಸುತ ಪವ ಮಾನ ಹನುಮ ಭೀಮ ಆನಂದತೀರ್ಥನೆ ಅ.ಪ. ಸನಕನಂದನ ಸನತಕುಮಾರಾದಿ ಮುನಿಗಳು ಹರಿ ದರುಶನವ ಮಾಡುವೆವೆಂದು ಘನಹರುಷದಿ ಮೋಕ್ಷವನು ಕುರಿತು ಬಂದೊ ಡನೆ ಬಾಗಿಲಲಿ ನಿಲ್ಲೆನಲು ಜಯ ವಿಜಯ ರನ ನೋಡಿ ಎರಡೊಂದು ಜನುಮದಲಿ ಕ್ರೂರ ಸಿರಿ ವನಜಾಕ್ಷರಗೋಸ್ಕರಾ ಅವತರಸಿ ಗುಣಪೂರ್ಣ ಗುರು ಸಮೀರಾ ಸೇವಿಪೆನೆಂದಾ ಕ್ಷಣದಿ ಜನಿಸಿ ವಾನರಾ ರೂಪಿಲಿ ಭುವ ವನದೊಳು ಮೆರೆದೆ ಅಸಮಶೂರಾ ಹರಿಹರಾ 1 ಕೋತಿ ಕಟಕಮಾಡಿ ಜಾತರಹಿತ ಹರಿ ಗೇ ತಲೆಬಾಗಿ ಸುಪ್ರೀತಿಯಿಂದಲಿ ರವಿ ಜಾತನ ಸಲಹಿ ಅತೀ ತೀವ್ರದಿಂದಲಿ ವಾತವೇಗದಿ ವನಧಿಯ ತಡಿಲ್ಲದೆ ದಾಟಿ ಮಾತೆಗುಂಗುರವಿತ್ತ ಶೋಕತರುಗಳ ಭೀತಿ ಬಡದಲೆ ಕಿತ್ತಿ ರೋಮ ಬಳ ವ್ರಾತವೆಲ್ಲವ ನುಗ್ಗೊತ್ತೀ ಲಂಕಾಪುರ ಜಾತವೇದಸಗೆ ಇತ್ತೀ ಹನುಮಶಿರಿ ನಾಥನಿಗೆರಗಿ ಪಡೆದ ಬಹುಕೀರ್ತಿ 2 ದುರುಳ ಕಲ್ಯಾದ್ಯರು ಊರ್ವಿಯೊಳ್ಪುಟ್ಟಿ ಸಂ ಚರಿಸುತ್ತ ಇರಲಾಗಿ ಮರುತದೇವನು ಅವ ತರಿಸಿ ಅವನಿಯೊಳು ದುರಿಯೋಧನುಣಲಿತ್ತ ಗರಳವ ಭುಂಜಿಸಿ ಅರಗಿನ ಸದನದಿ ಪುರೋಚನಾದಿಗಳನ್ನು ಉರುಹಿ ಏಕಚಕ್ರಾ ಪುರದಲ್ಲಿದ್ದ ಬಕಾಸುರನ ಸದೆದು ಭೂಮಿ ಸುರವೇಷವನೆ ಧರಿಸೀ ಪಾಂಚಾಲಿ ಸ್ವಯಂ ವರ ಪತಿಕರಿಸಿ ಮಗಧದೇಶ ದರಸನ ಸಂಹರಿಸೀ ರಾಜಸೂಯಜ್ಞ ಹರಿಗೆ ಅರ್ಪಿಸಿದಿ ಮೆರೆಸೀ 3 ಭಕುತಳಾದ ಇಂದುಮುಖಿ ದ್ರೌಪದಿಗೆ ಸೌಗಂ ಧಿಕವ ತರುವೆನೆಂದು ವೃಕೋದರ ಪೋಗಲು ಅಕುಟಿಲ ಹನುಮಂತನನು ಅವಲೋಕಿಸ್ಯಂ ಜಿಕೆಯಿಂದ ನಿಂದು ಮಾರಕಜನರಿಗೆ ಮೋ ಕುಪಥ ಖಳರನೊರಿಸಿ ನೀ ಸಖಿಗೆ ಪೂವಿತ್ತು ಗುರುಕುಮಾರನಸ್ತ್ರಕ ಳುಕದೆ ಯುದ್ಧವ ಮಾಡಿದೆ ದುಶ್ಯಾಸನ ರಕುತ ವೆರಿಸಿ ಕುಡಿದೆ ಉಭಯಗಳ ರ ಥಿಕರ ಬಲವಕರೆದೆ ಭಯದಲಿ ಉ ದಕದಲಿರ್ದ ದುರ್ಯೋಧನನೂರು ಕಡಿದೆ 4 ಭೀಮ ಭಯಂಕರ ಕಾಮಕೋಟಿ ಚಲ್ವ ಧೀಮಂತಜನ ಮನೋಪ್ರೇಮ ಪಾವನ ಗುಣ ಸ್ತೋಮ ಸರ್ವಾಧಾರ ಭ್ರಾಮಕಜನ ವನ ಧೂಮಕೇತುವೆ ಸರ್ವಾಸೀಮ ಸೌಖ್ಯ ಪೂರ್ಣ ಸಾಮಜ ಹರಿಗುರು ರೋಮ ಕೋಟೇಶ್ವರ ಶ್ರೀಮಾನ್ಯ ಭಕುತಲ ಲಾಮ ಭವ್ಯ ಚರಿತಾ ಸೋಮಕುಲ ಸೋಮ ಸುಖ ಭರಿತಾ ಭಕುತ ಪ್ರೀತಾ ಕಾಯ ಹಿತದಿಂದ ನಿರುತಾ 5 ಮಣಿಮಂತನೆಂಬವನಿಯೊಳು ಪುಟ್ಟಿ ವೇ ನನ ಮತ ಪಿಡಿದು ಜೀವನೆ ಪರಮಾತ್ಮನೆಂ ದೆನುತ ಸ್ಥಾಪಿಸಿ ಪಣೆಗಣ್ಣೆನ್ವರದಿಂದ ಅನಿಮಿಷರೆಲ್ಲರು ವನಜಜಗುಸುರಲು ಮುನಿಗಳು ಸಹ ನಾರಾಯಣನ ಪದಕೆ ದಂಡ ಪ್ರಣಾಮವ ಮಾಡಿ ಸ್ತೋತ್ರವಿನಯದಿ ಗೈಯೆ ಅನಿಲನ ಅವಲೋಕಿಸಿ ಪೇಳಲು ಹರಿ ಮನ ಭಾವವನು ಗ್ರಹಿಸಿ ಮಧ್ಯಗೇಹ ಮನೆಯೊಳಗವತರಿಸಿ ಮೆರೆದೆ ಗುರು ಅನುಗಾಲದಲಿ ನಿನ್ನ ಗುಣಗಳಾಶ್ರೈಸೀ 6 ವಾಸುದೇವನೆಂಬ ಭೂಸುರನಾಮದಿ ಲೇಸಾಗಿ ಚರಿಸಿ ಸಂತೋಷ ಭರಿತರಾಗಿ ಸಂ ನ್ಯಾಸಾಚ್ಯುತ ಪ್ರೇಕ್ಷರಾ ಕರಸರಸಿಜ ದೀ ಸಂತೋಷದಿ ಕೊಂಡು ಆಶÀಂಕರರÀ ಭಾಷ್ಯ ದೂಷಿಸೆ ಗರುಗಳುಲ್ಲಾಸ ಸನ್ಮುಖದಲಿ ವಿ ಶೇಷದಿಂದಲಿ ವಿರಚಿಸುವುದೆನಲು ಉ ಲ್ಲಾಸದಿಂದಲಿ ಕೇಳಿ ಆಕ್ಷಣದಿ ಸಂ ತೋಷ ಮನದಲಿ ತಾಳಿ ಮೋಹಕವ ಪರಿಹ ಆಶೆ ಪೂರೈಸಿದ ಘನನಿನ್ನ ಲೀಲೆ 7 ತರಳತನದಲಿ ಬದರಿಗೈದಿ ಪಾರಾ ಶರ ನಾರಾಯಣನ ಸಂದರುಶನ ಕೊಂಡು ತೀ ವರದಿಂದ ಹರಿತತ್ವ ನಿರ್ಣಯ ಶಾಸ್ತ್ರವ ವಿರಚಿಸುವುದಕಿನ್ನು ವರವ ಪಡೆದು ಬಂದು ದುರುಳ ಭಾಷ್ಯಗಳೆಂಬ ಗರಳ ತರುಗಳ ಮುರಿದಿಕ್ಕಿ ನೀ ಮೂವ ತ್ತೆರಡೈದು ಗ್ರಂಥಗಳ ನಿರ್ಮಿಸಿ ವಿಬು ಧರಿಗೆಲ್ಲ ಪೇಳಿ ವ್ಯಾಳ ಭೂಷಣದೇವ ಪರನೆಂಬ ಯುಕುತಿಜಾಲ ಹರಿದು ಹರಿ ಪರ ಶ್ರೀ ಬೊಮ್ಮಾದ್ಯರೆ ಗುರುಗಳೆಂದೆನಲು 8 ನಮೋ ನಮೋ ಸಮೀರನೆ ನಮೋ ಶ್ರೀ ಮುಖ್ಯಪ್ರಾಣ ನಮೋ ನಮೋ ದಯಾಸಿಂಧು ನಮೋ ಭಕ್ತಜನ ಬಂಧು ನಮೋ ನಮೋ ಗುಣಶೀಲ ನಮೋ ಭಾರತಿಲೋಲ ನಮೋ ನಮೋ ಭವ್ಯಾಂಗ ನಮೋ ಅರಿಗಜಸಿಂಗ ನಮೋ ನಮೋ ಜಗದ್ವ್ಯಾಪ್ತ ನಮಿತಜನರಾಪ್ತ ನಮೋ ನಮೋ ಸುಖತೀರ್ಥ ನಮೋ ಮೂರ್ಲೋಕದ ಕರ್ತ ನಮೋ ಗುರುಕುಲ ತಿಲಕ ಪಾಲಿಸು ಎನ್ನ ತಮಹರದೂರಶೋಕ ಸಜ್ಜನರಿಗೆ ಅಮಿತ ಮೋದದಾಯಕ ಶ್ರೀಭೂ ದುರ್ಗಾ ರಮಣ ಜಗನ್ನಾಥವಿಠಲ ಭಕ್ತಾಧಿಕಾ 9
--------------
ಜಗನ್ನಾಥದಾಸರು
ಆರತಿಯನು ಎತ್ತಿರಮ್ಮ ವರ ಮಹಾಲಕ್ಷುಮಿಗೆ ಚಾರುಮತಿಗೆ ವರವನಿತ್ತಪಾರ ಕರುಣಾಂಬುಧಿಗೆ ಪ ಶ್ರಾವಣ ಶುಕ್ರವಾರದಲಿ ಸಾವಧಾನ ಮನದಿ ನಿತ್ಯ ಸೇವಿಸುವರಿಗೊಲಿದು ಭಾಗ್ಯವೀವ ಮಹಾಲಕ್ಷುಮಿಗೆ 1 ಹೆತ್ತತಾಯಿ ತನ್ನ ಶಿಶುವನರ್ಥಿಯಿಂದ ಸಲಹುವಂತೆ ಭೃತ್ಯವರ್ಗವನ್ನು ಪೊರೆದು ನಿತ್ಯಲೋಕ ಮಾತೆಗೀಗ 2 ಚಿಂತಿತಾರ್ಥನೀವ ಲಕ್ಷ್ಮೀಕಾಂತನುರ ಸ್ಥಳದಿ ನಿಂತು ದಂತಿವರದನನಂತ ಗುಣಗಳನಂತಗಾಣದಿರುವಳಿಗೆ 3
--------------
ಲಕ್ಷ್ಮೀನಾರಯಣರಾಯರು
ಆರತಿಯನೆತ್ತಿರೆ ನಾರೇರೆಲ್ಲರು ಪ ಕಾರುಣ್ಯ ಪಾಂಗಳಿಗೆ ಗೌರಿದೇವಿಗೆಅ.ಪ. ದೇವರಾಜ ಸೇವ್ಯಮಾನ ಪಾವನಾಂಘ್ರಿಗೆ ಜೀವಕೋಟಿಗನ್ನವಿತ್ತು ಕಾವ ದೇವಿಗೆ 1 ಸರ್ವ ಸೌಭಾಗ್ಯವೀವ ಶರ್ವಜಾಯೆಗೆ ಪರ್ವತೇಶ ತನಯಳಿಗೆ ಗರ್ವರಹಿತೆಗೆ 2 ರಕ್ಷೌಘ ಧ್ವಂಸಿನಿಗೆ ದಕ್ಷ ಕನ್ಯೆಗೆ ಲಕ್ಷ್ಮೀಕಾಂತನ ಭಗಿನಿ ಲಕ್ಷಣಾಂಗಿಗೆ 3
--------------
ಲಕ್ಷ್ಮೀನಾರಯಣರಾಯರು
ಆರತಿಯೆತ್ತಿದರೆ ಕೇಶವ ನಾರಾಯಣಗೆ ಪ. ಶಾಶ್ವತವೀವ ಮಾಧವ ವಾಸವವಂದ್ಯ ಗೋವಿಂದಗಾರತಿಯನೆತ್ತಿದರೆ ಅ.ಪ. ದ್ವಾಪರ ರಹಿತ ಶ್ರೀವಿಷ್ಣುವಿಗೆ ಅಪಾರ ಮಧುಸೂದನಗೆ ಪಾಪರಹಿತ ತ್ರಿವಿಕ್ರಮಗಾರತಿಯನೆತ್ತಿದರೆ1 ಸಾಧುಸೇವಿತ ವಾಮನಗೆ ಶ್ರೀಧರ ಹೃಷೀಕೇಶನಿಗೆ ಆದಿಮೂರುತಿ ಪದ್ಮನಾಭಗಾರತಿಯನೆತ್ತಿದರೆ 2 ದÁಮೋದರ ವಾಲುಳ್ಳವಗೆ(?) ಪ್ರೇಮದಿ ಸಂಕರ್ಷಣಗೆ ಕಾಮಿತಾರ್ಥವನೀವ ವಾಸುದೇವಗಾರತಿಯನೆತ್ತಿದರೆ 3 ಅನಿರುದ್ಧ ಪುರುಷೋತ್ತಮಗೆ ವಿನಯದಿಂದಲಿ ಅಧೋಕ್ಷಜಗಾರತಿಯನೆತ್ತಿದರೆ 4 ನರಸಿಂಹರೂಪನಾದವಗೆ ವರದ ಮೂರುತಿ ಅಚ್ಯುತಗೆ ಅರಿಭಯಂಕರ ಜನಾರ್ದನಗಾರತಿಯನೆತ್ತಿದರೆ 5 ಉಪೇಂದ್ರನೆಂದೆನಿಸಿಕೊಂಡವಗೆ ಅಪಾರಮಹಿಮ ಶ್ರೀಹರಿಗೆ ಗೋಪಾಲಮೂರುತಿ ಶ್ರೀಕೃಷ್ಣಗಾರತಿಯನೆತ್ತಿದರೆ 6 ಚತುರವಿಂಶತಿಮೂರುತಿಗಳಾ ಅತಿಶಯ ಧವಳವ ಪಾಡೆ ಸಿರಿ ಹಯವದನ 7
--------------
ವಾದಿರಾಜ
ಆರತಿಯೇತ್ತುವೆ ನಾಂ ಪ ಸತತ ಮನ್ಮನೋರತದೊಡೆಯಗೆ ಅ.ಪ ಯಾವಾಗಲು ನಾಮಾಡುತಿರುವ ಸಂ ಸೇವೆಯಕೈಕೊಂಬ ಮಹಾತ್ಮಗೆ 1 ಬೇಡಿದಭೀಷ್ಟವ ನೀಡುತ ಎನ್ನಯ ನಾಮವ ಜಪಿಸುತ ನಲಿಯುವ ಪತಿಗೆ 3
--------------
ಗುರುರಾಮವಿಠಲ
ಆರು ಕೊಟ್ಟರು ಕೊಟ್ಟರಾರುಂಡರಾರಿಲ್ಲಿಬೇರೆ ನಾ ನೀ ನಾನೆಂದು ಕೆಡುವುದೀ ಲೋಕ ಪಕಾಲ ಚ್ಟೇಸಿತು ಕರ್ಮವು ಕೊಟ್ಟಿತೀ ಕಿವಿಗಳಾಲಿಸಿತು ಕಂಡಿತಕ್ಷಿಗಳೆಂದಿತಂಘ್ರಿಲೀಲೆಯಲಿ ಕೈಪಿಡಿಯುತಾ ಘ್ರಾಣಿ ಘ್ರಾಣವೀ ಲೋಲ ಚಿತ್ತವನುಸಂಧಾನಗೆಯ್ತು 1ಪ್ರಾಣ ಒಳಕೊಂಡಿತನ್ನವನು ಸಂಕಲ್ಪಿಸಿತುದೀನ ಮನಮತಿಗೆ ನಿಶ್ಚಯವಾುತೂತಾನಿದರೊಳಾರು ಕೊಂಬವನೊ ಕೊಡುವನೊ ದುರಭಿಮಾನದಿಂ ಕೆಡುತಿಹರು ನೀನು ನಾನೆಂದು 2ಭಾನು ಜಲದಲಿ ಪೊಳೆಯಲದರ ಕಂಪಾದಿಗಳುಭಾನುವಿನದೆಂದು ಭ್ರಮಿತರು ಬಗೆವ ತೆರದಿಜ್ಞಾನಮಯ ನಾದಾತ್ಮ ಹಮ್ಮಿನೊಳ್ಪೊಳೆಯಲಜ್ಞಾನದಿಂದೀ ರಾಸಿ ನಾನೆನ್ನುತಿಹರೊ 3ಈಯನಿರ್ವಚನೀಯ ಜೀವತ್ವವೆಂದರಿದುಕಾಯದಲಿ ಕೂಟಸ್ಥ ಸತ್ಯವೆಂದೂಮಾಯದಿಂದ ತೋರಿ ತಾನೀ ವಿಶ್ವಪುಸಿ ಎಂದುಹೇಯ ಭೋಗದಲನಾಸಕ್ತನಾಗಿರದೆ 4ತಾನು ನಿರ್ಲೇಪನೆಂದರಿಯದೆ ಶರೀರಾಭಿಮಾನದಿಂ ಗೋಪಾಲ ಯತಿಯ ಚರಣವನೂಸಾನುರಾಗದಲಿ ಸೇವಿಸದೆ ಮಿಥ್ಯಾವಿಷಯದೀನತೆಯನೈದಿ ರಾಗಾದಿಗಳ ಬಿಡದೆ 5
--------------
ಗೋಪಾಲಾರ್ಯರು
ಆರು ನಿನ್ನಂಘ್ರಿ ಭಜಿಸುವರೈಯ್ಯಾ ಸಾರಹೃದಯರ ಪ್ರೀಯ ಸುರಮುನಿಜನ ಧ್ಯೇಯಾ ಪ ಕಮಲಭವಶಿವ ಇಂದ್ರ ನೀನಾಗೇನು ರಮೆ ಧರಾದೇವಿ ರಮಣಾದರೇನು ಯಮದೂತರೊಳಗಾದ ಆಜಮಿಳ ಪೆಸೆ ರ್ಗೊಳೆ ಸುಮನಿಸುರ ನಯ್ಯವನ ಕಾಯದಿದ್ದೊಡೆ 1 ಜಗದುತ್ಪತ್ತಿ ಸ್ಥಿತಿಲಯ ಕರ್ತನಾಗೇನು ಮಗುಳಿ ಸೂತ್ರಧಾರಿಯಾದರೇನು ಸುಗುಣ ಪ್ರಲ್ಹಾದಂಬರೀಷ ಕರಿವರ ಧ್ರುವಾದಿಗಳನುದ್ದರಿಸಿ ತಾರಿಸದಿದ್ದಡೆ 2 ಎಂದೆಂದು ಅರ್ತಜನ ಬಂದು ದೀನಾನಾಥ ತಂದೆ ಮಹಿಪತಿ ಸ್ವಾಮಿಯಂದಡೇನು ಮಂದಮತಿ ಕುಂದಘನವಂದು ನೋಡದ್ದೆ ಇಂದು ನಂದನಗೆ ಸೇವೆ ಪದಲಿಡದಿದ್ದರೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರು ಸಂಗಡ ಬಾಹೊರೆಲೆ ಮನುಜ ನಿನಗೆ ಹಾರೈಸಿ ಬಳಲುವೆ ಬರಿದೆ ಭವದೊಳಗೆ ಪ ಗುರುಹಿರಿಯರಗ್ನಿಯ ಪರಿಮುಖದಿ ನಿನ್ನಯ ಕರಪಿಡಿದು ಮಾಂಗಲ್ಯ ಧರಿಸಿಕೊಂಡರ್ಧ ಶರೀರವೆನಿಸುವ ಸತಿಯು ಮರಣ ಕಾಲದಿ ನಯನ ತಿರುಗುವುದ ಕಂಡಂಜಿ ತಿರಿಗಿನಿಂತಳುತಿಹ್ಯಳು 1 ತನುಜಮನುಜರಿವರೆಲ್ಲ ನಿನಗತಿಹಿತ ಬಂಧು ಮಣಿದು ಸೇವಿಪರು ನಿನ್ನನುದಿನವು ಬಿಡದೆ ತನುಬಿಟ್ಟ ಕ್ಷಣದಿ ನನನಿನಗೆನುತ ಮನೆಕೀಲಿ ಘನ ಜಗಳ ಕಾಣು ಬಿದ್ದ್ಹೆಣದ ಪರಿವಿಲ್ಲದೆ 2 ಕುಲವಿದ್ಯವ್ಯವಹಾರ ಕಳವುಕೊಲೆ ನೃಪಸೇವೆ ತಲೆ ಬಾಗಿ ಜನರಲ್ಲಿ ಬಲುದೈನ್ಯ ಬಟ್ಟು ಗಳಿಸಿ ಹೂಳಿದ ದ್ರವ್ಯ ಎಳೆದೊಯ್ಯಲ್ಯಮ ನಿನ್ನ ತಲೆಯೆತ್ತಿ ನೋಡದಲೆ ನೆಲದಿ ನಿಲ್ಲುವುದು 3 ಭೂಮಿ ನಿನ್ನದು ಎಂದು ನೇಮವನು ಬರಕೊಂಡು ಕೋಮಲ ಮನೆಕಟ್ಟಿ ತಾಮಸದಿ ನಲಿವಿ ಭೂಮಿಯ ರಿಣತೀರಿ ನೀ ಮಡಿದಾಕ್ಷಣ ಬಹಿ ರ್ಭೂಮಿಯೋಳ್ಹುತಿವರೆಲೆ ಪಾಮರ ಮನುಜ 4 ಬಂಧುಬಾಂಧವರೆಲ್ಲ ಹಿಂದೆ ಉಳಿಯುವರು ಮಂದನಾಗದೆ ತಂದೆ ಶ್ರೀರಾಮ ಪಾದಾರವಿಂದಮಂ ನಂಬಿ ಭವಬಂಧವನು ಗೆಲಿಯೊ 5
--------------
ರಾಮದಾಸರು
ಆರುತೀಯ ತಾರೆ ಶ್ರೀಹರಿಗೆ ಸುರಸಾರ್ವಭೌಮಗೆ ಪ ಬೇಗನೆ ಸಾರಸಾಂಬಕಿಅ.ಪ ಮಾರಜನಕಗೆ ವಾರಿಜಭವ ಕು- ಮಾರ ಜನಕ ಮುಖಾಮರೇಡ್ಯಗೆ ಚಾಪ ಮುರಿದ ಸುಕು- ಮಾರ ಶರೀರ ಸೀತಾರಾಮ ಚಂದ್ರಗೆ 1 ಇಂದಿರವರಗೆ ಮಂದರಧರ ಪು- ರಂದರಾನುಜ ಸಿಂಧುಶಯನಗೆ ಮಂದಯಾನೆ ಛಂದದಿಂದ ಬಂದೀಗ ವಂದೀಶ್ಯಾನಂದಾದಿ ಬೆಳಗಲು 2 ವಾರಣಭಯ ನಿವಾರಣ ಜಗ- ತ್ಕಾರಣಗೆ ಸುಖಪೂರ್ಣದೇಹಗೆ ಸೇರಿ ತನ್ನ ಸೇವಿಪರಘ ದೂರ ಕೊಪ್ಪರ ಶ್ರೀ ನಾರಸಿಂಹನಿಗೆ 3
--------------
ಕಾರ್ಪರ ನರಹರಿದಾಸರು
ಆರೂ ಸಂಗಡ ಬಾಹೋರಿಲ್ಲ ಪ ನಾರಾಯಣ ನಾಮ ನೆರೆ ಬಾಹೋದಲ್ಲದೆ ಅ ಪರಿಯಂತ ಗರ್ಭದಲಿಹೆತ್ತು ಅತ್ಯಂತ ನೋವು ಬೇನೆಗಳಿಂದಲಿತುತ್ತು ವಸ್ತ್ರವನಿಕ್ಕಿ ಸಲಹಿದಾ ತಾಯ್ತಂದೆಹೊತ್ತುಗಳೆವರಲ್ಲದೆ ಬೆನ್‍ಹತ್ತಿ ಬಹರೆ 1 ಹರಣ ದಾರು ಗತಿಯೆಂದಳುವಳು2 ಮನೆ ಮಕ್ಕಳು ತಮ್ಮ ಧನಕೆ ಬಡಿದಾಡುವರುಧನಕಾಗಿ ನಿನ್ನನೆ ನಂಬಿದವರುಅನುಮಾನವೇಕೆ ಜೀವನು ತೊಲಗಿದಾಕ್ಷಣದಿಇನ್ನೊಂದು ಅರಗಳಿಗೆ ನಿಲ್ಲಗೊಡರು 3 ಸುತ್ತಲು ಕುಳ್ಳಿರ್ದ ಮಿತ್ರ ಬಾಂಧವರೆಲ್ಲಹೊತ್ತು ಹೋದೀತು ಹೊರಗೆ ಹಾಕೆನುವರುಹಿತ್ತಲಾ ಕಸಕಿಂತ ಅತ್ತತ್ತ ಈ ದೇಹಹೊತ್ತುಕೊಂಡೊಯ್ದು ಅಗ್ನಿಯಲಿ ಬಿಸುಡುವರು 4 ಹರಣ ಹಿಂಗದ ಮುನ್ನು ಹರಿಯ ಸೇವೆಯ ಮಾಡಿಪರಗತಿಗೆ ಸಾಧನವ ಮಾಡಿಕೊಳ್ಳೊಕರುಣನಿಧಿ ಕಾಗಿನೆಲೆಯಾದಿಕೇಶವರಾಯನನಿರುತದಲಿ ನೆನೆನೆನೆದು ಸುಖಿಯಾಗೊ ಮನುಜ5 * ಈ ಕೀರ್ತನೆ ಪುರಂದರಾಸರ ಅಂಕಿತದಲ್ಲೂ ಇದೆ.
--------------
ಕನಕದಾಸ
ಆವ ಜನ್ಮದ ಪುಣ್ಯ ಫಲಿಸಿತೆನಗೆ | ಈ ಉಡುಪಿ ಕೃಷ್ಣನ ಪ್ರಸಾದ ಭುಂಜಿಸಿದೆ ಪ ಭವರಾಸಿಗಳು ಹಾರಿ ಬಯಲಾದವು| ನವವಿಧ ಭಕುತಿಯಾ ಮಾರ್ಗವನೆ ತಿಳಿದು ಮಾ | ಪರಿ ಶುದ್ಧನಾದೆ ಗುರು ಕರುಣದಲೀ1 ಶಾಖಫಲ ಕೈಕೊಳಲು ಅರಿಷಡ್ವರ್ಗಗಳಿಂದ | ಕಾಕೆಟ್ಟು ಪೋಗುವವು ಏನೆಂಬೆ ಸೋಜಿಗವು | ಲೋಕದೊಳಗೆ ನಮ್ಮ ಕುಲಗೋತ್ರಜರೆ ಧನ್ಯ 2 ಸೂಪವನು ಉಂಡರೆ ಮುಂದಟ್ಟಿ ಬರುತ್ತಿಪ್ಪ | ಸೋಜಿಗವು ಬಲು ತೀವ್ರದಲಿ 3 ಭಕ್ಷ್ಯಗಳು ಮೆಲಲಾಗಿ ಭಕ್ತಿ ಪುಟ್ಟುವದಯ್ಯಾ | ಅಕ್ಷಯವಾಗುವದು ಇದ್ದ ಪುಣ್ಯ | ಮಾಳ್ಪ ಮನಸು ಪುಟ್ಟಿತು ನೋಡಾ4 ಓದನವು ಉದರದಲಿ ತುಂಬಲಾಕ್ಷಣದಲ್ಲಿ | ಜ್ಞಾನ ಬಂದೊದಗುವದು ಗುರು ಪೂರ್ಣ | ಬೋಧರಾ ಮತದಲ್ಲಿ ಲೋಲಾಡುವಾನಂದಾ 5 ದಧಿ ತಕ್ರ ಮೊದಲಾದ ವ್ಯಂಜನ ಉಣಲು | ಸತತ ದುರ್ವಿಷಯಕ್ಕೆ ಪೋಗದಲೆ ಆವಾಗ | ರತಿಪತಿಪಿತನ ಪದಸೇವೆಯೊಳಗಿಪ್ಪವೊ 6 ಕೃಷ್ಣ ಸಂದರುಶನ ಮೃಷ್ಟಾನ ಭೋಜನ | ಇಷ್ಟ ಸುಖ ಸೌಖ್ಯಕರ ಮತ್ತಾವÀಲ್ಲಿ ಕಾಣೆ | ಸೃಷ್ಟಿಗೊಡೆಯ ವಿಜಯವಿಠ್ಠಲನು ದಯವಾಗೆ 7
--------------
ವಿಜಯದಾಸ