ಒಟ್ಟು 12410 ಕಡೆಗಳಲ್ಲಿ , 137 ದಾಸರು , 5990 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಡಂಭಕ ಹರಿದೂರ ಪ್ರಾಣೀ ಪ ಅಂಬುಜನಾಭನ ಇಂಬನ ಪಡಿಯದೇ| ಡೊಂಬನ ಪರಿಯಾಚಾರ ಪ್ರಾಣೀ ಅ.ಪ ಅಬ್ಧಿಶಯನ ಸಿರಿನಾಥನ ಒಲುಮೆಯ| ಲಬ್ಧ ದೊರೆಯದೆ ವಿಚಾರಾ|| ಲಬ್ಧನಾಗಿ ಧನ ಮಾನಕಬಿಟ್ಟಿನೀ| ಶಬ್ದದಂಗಡಿ ಪ್ರಸರಾ|ಪ್ರಾಣೀ 1 ಪೊಡವಿಯೊಳಗ ಉಗ್ರಸಾಧನದಿಂದಲಿ| ಬಿಡದೆವೆ ತವಶರೀರಾ||ಒಡನೆ ಮರೆದು ರಿಧ್ಧಿಸಿಧ್ಧಿಯ ಬಲದಲಿ| ಹಿಡದಿ ಮನದಿ ಅಹಂಕಾರ|ಪ್ರಾಣೀ 2 ಅದಿತತ್ವದಾಗಲೆ ಸಾಧಿಸೇನೆಂದರೆ| ಸಾಧನ ಕೇಳು ಸುಸಾರಾ|| ಭೇದಿಸು ಮಹಿಪತಿ ನಂದನ ಸಾರಿದ| ಸಾಧು ರಾಶ್ರಯ ಮನೋಹರ|ಪ್ರಾಣೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತÉೂೀರೆ ಬೇಗನೆ ತೋಯಜನಯನೆಮದವಾರಣ ಗಮನೆ ಪ ಮಾರನ ತಾಪವ ಸೈರಿಸಲಾರೆನೆನೀರೆ ನಿನಗೆ ಮುತ್ತಿನ್ಹಾರವ ಕೊಡುವೆನೆ ಅ.ಪ ನೀರೊಳು ಮುಳು ಮುಳುಗಾಡುತ ಬಂದುಮಥಿಸಿದ ಪಯ ಸಿಂಧುಧಾರುಣಿ ಚಿಮ್ಮುತ ಮೇಲಕೆ ತಂದುದನುಜನ್ನ ಕೊಂದುಮೂರುಪಾದವ ಬೇಡುತ ನಿಂದುಮುನಿಕುಲದಲಿ ಬಂದುನಾರಿಬಿಟ್ಟು ಪರನಾರಿಯರಾಳಿದತೋರೆರಮಣಿ ಹಯವೇರಿ ಮೆರೆದನ 1 ಕತ್ತಲೆ(ತಾಮಸ ದೈತ್ಯ)ನೊಡನೆ ಕಾದಿದನು ಧೀರಕಡೆದನು ಕೂಪಾರಕುತ್ತಿ ಮಣ್ಣಗಿದು ಮೆದ್ದನು ಬೇರದಾನವ ಸಂಹಾರ ಒತ್ತಿ ಬಲಿಯನು ಕಾಯ್ದನು ಶೂರಕುಜನ ಕುಠಾರ ಹತ್ತು ಶಿರನ ಕತ್ತರಿಸಿ ಗೋಕುಲದೊಳುಬತ್ತಲೆ ರಾಹುತನಾಗಿ ಮೆರೆದನ 2 ನಿಗಮ ಕದ್ದವನ ನೀಗಿದ ಧಿಟ್ಟನೆಗಹಿದ ಬೆಟ್ಟಅಗಿದು ಮಣ್ಣನೆ ಜಠರದಲ್ಲಿಟ್ಟಘುಡಿ ಘುಡಿಸುವಸಿಟ್ಟಜಗಕೆಲ್ಲ ನೋಡೆ ಎರಡಡಿಯಿಟ್ಟಕೊಡಲಿಯ ಪೆಟ್ಟಮೃಗವ ಕೆಡಹಿ ಕುಂತಿಮಗಗೆ ಸಾರಥಿಯಾಗಿಜಗವ ಮೋಹಿಸಿ ಹಯವೇರ್ದ ಶ್ರೀಕೃಷ್ಣನ 3
--------------
ವ್ಯಾಸರಾಯರು
ತಂಗಿ ಕೊಳಲನೂದುವ ಸುಂದರನಿವನೇತಂಗಿ ಕೊಳಲನೂದುವ ಸುಂದರನಿವನೇಸುಂದರನಿವನೇ ಮಂದರಧರನೇ ಪ ಪುರುಷರೂಪದಿ ಪಯೋಧಿಯ ಕಡೆದನೆ ತಂಗಿತರುಣಿರೂಪದಿ ಸುಧೆ ಸುರರಿಗಿತ್ತನೆ ತಂಗಿ 1 ಸತಿಯು ಇಲ್ಲದೆ ಸುತರನು ಪಡೆದನೆ ತಂಗಿಪತಿಯು ಇಲ್ಲದೆ ಅಪ್ರತಿಮ ರೂಪನೆ ತಂಗಿ 2 ಅತ್ತೆಯ ಕಾಲಿಲಿಂದಲೆ ಪಡೆದನೆ ತಂಗಿಚಿತ್ರ ಚರಿತ ವೃಜದೊಳಗಾಡಿದನೆ ತಂಗಿ 3 ಮುಂಜಿಯಾಗದೆ ಮಕ್ಕಳ ಪಡೆದನೆ ತಂಗಿಸಂಜೆಯಾಗದೆ ರಾತ್ರಿಯ ಮಾಡಿದನೆ ತಂಗಿ 4 ವಾಸುದೇವನು ಇಂದಿರೇಶನಿಗನೆ ತಂಗಿಕೂಸು ತರುಣನಾಗಿ ಮೋಸಗೊಳಿಪ ತಂಗಿ 5
--------------
ಇಂದಿರೇಶರು
ತಂಗಿ ಮೊಸರ ಸುತ್ತ ಚೆಲ್ಲಿದ ಮುದ್ದುರಂಗ ಬೆಣ್ಣೆಯ ಮೆದ್ದ ಬಲ್ಲಿದ ಪ. ಪುಟ್ಟ್ಟಿದಾಗಲೆ ಮೂಲರೂಪವ ತೋರಿಅಟ್ಟಿದ ಸುಜನರ ತಾಪವಕೊಟ್ಟ ನಮಗೆ ಜ್ಞಾನದೀಪವ ಕೃಷ್ಣತೊಟ್ಟ ದುರ್ಜನರೊಳು ಕೋಪವ1 ಯಶೋದೆಯ ಮೊಲೆವಾಲನುಂಬಾಗ ನಸುಬಿಸಿನೀರನೆ ಎರೆಸಿಕೊಂಡಾಗಶಿಶುವು ಪೂತಣಿಯ ಕೊಂದಿತೆಂಬಾಗ ರ-ಕ್ಕಸರಿಗೆ ಇವ ಬಲುದಿಮ್ಮಿಗ 2 ಇಂದಿರೆಯನು ಬಿಗಿದಪ್ಪಿದ ಸಖವೃಂದಾರಕರೊಳಗೊಪ್ಪಿದಕಂದರ ಕಲ್ಲಿಂದ ಜಪ್ಪಿದ ತಾಯಿಹಿಂದಟ್ಟಿ ಬರಲೋಡಿ ತಪ್ಪಿದ3 ಪುಟ್ಟ ಕೃಷ್ಣನ ಕಟ್ಟಬೇಕೆಂದು ತಂ-ದೊಟ್ಟಿ ಹಗ್ಗಗಳ ತಂದುಬೆಟ್ಟವಾಗಿರಲು ದುರ್ಜನರ ಕೊಂದು ಈಗಗಟ್ಟಿಮಾಡಿದಳಿವ ಹರಿಯೆಂದು4 ಒರಳನೆಳೆದ ಬಲುಮತ್ತಿಯ ದೊಡ್ಡಮರನ ಕಿತ್ತಿದ ನೋಡಿವನರ್ಥಿಯತರಳಾಕ್ಷಿ ಕೃಷ್ಣನ ನೆತ್ತಿಯ ಬೆಣ್ಣೆಸುರಿಯೆ ಪಾಡಿದಳವನ ಕೀರ್ತಿಯ5 ಗಗನಕೆ ಏರಿ ವಾತನ ಕೊಂದ ನೀರೊ-ಳಗೆ ಪೊಕ್ಕು ತಂದೆಯ ಕರೆತಂದಖಗನಂತೆ ಕಡಹದಮರದಿಂದ ಹಾರಿವಿಗಡ ಸರ್ಪನ ಹೆಡೆಯೇರಿ ನಿಂದ6 ತುಳಿದಹಿತಲೆಯನು ಬಿಚ್ಚಿದನಾಗಲಲನೆಯರುಕ್ತಿಗೆ ಮೆಚ್ಚಿದ ಅಲರು ಮಳೆಯ ಸುರಿಯ ಹಚ್ಚಿದ ಕೃಷ್ಣಖಳರಳಕೆಗಳ ಕೊಚ್ಚಿದ 7 ನಂದನ ರಾಣಿಗೆ ಮೆಚ್ಚಿದ ತಾಯಚಂದದ ಕೈಗಳಿಂದುಚ್ಚಿದಇಂದೆನ್ನ ಮನೆಯೊಳು ಸಚ್ಚಿದಾ-ನಂದ ಹಿಡಿಯೆ ಕೈಯ್ಯ ಕಚ್ಚಿದ 8 ಕಣ್ಣೊಳು ಪಾಲನುಗುಳಿ ಪೋದ ಈಚಿಣ್ಣಗೆ ನೋಡಿದೆ ವಿನೋದಮಣ್ಣಮೆದ್ದಖಿಳವ ತೋರಿದ ಕೃಷ್ಣಸಣ್ಣ ಬಾಯನು ಮುಚ್ಚಿ ಮಗುವಾದ 9 ಕುಸುಮವೆತ್ತ ಖಡುಗ ವೆತ್ತ ಈಹಸುಗೂಸು ಎತ್ತ ಪರ್ವತವೆತ್ತಹಸಿವು ತೃಷೆಯ ಬಿಟ್ಟು ಗಿರಿಯ ಪೊತ್ತ ಈಶಶಿಮುಖಿ ಜನಕಿವನು ಸುಖವಿತ್ತ10 ಮೂರು ಲೋಕವಾಳುವ ಸಖಿಯರ ಗಂಡ ನೀಲ-ವರ್ಣನು ತೊಂಡರತೊಂಡ ಬಾಲಕನೀತಸರ್ವೇಶ ಕಂಡಾ ಇವಕೀಳೆಂದವ ಜಗದಲಿ ಭಂಡ 11 ಅರಳೆಲೆ ಮಾಗಾಯಿ ಮುಂಗೈಯ್ಯಲಿಟ್ಟುಸರಭಂಗಿ ಕೂಡಿ ತ್ರಿಭಂಗಿಯವರವೇಣುವನು ತನ್ನಂಗೈಯಲಿಟ್ಟ-ಧರದಲ್ಲೂದಿದ ನಮ್ಮ ರಂಗಯ್ಯ12 ಪಶುಪಕ್ಷ್ಷಿಗಳು ತರತರದಲ್ಲಿಎಸೆವ ಗೀತವ ಕೇಳಿ ವನದಲ್ಲಿಹಸುಳೆಯ ನೆನೆಯುತ್ತ ಮನದಲ್ಲಿ ಪರ-ವಶವಾದುವು ಆಕ್ಷಣದಲ್ಲಿ13 ಕೊಳಲೂದಿ ಸುರರನ್ನು ಸೋಲಿಸಿದ ರಾಗಕಲೆಗಳಿಂದೆಲ್ಲವ ಒಲಿಸಿದಇಳೆಯೊಳು ಗೀತವ ಕಲಿಸಿದ ಇಂತುಒಲಿದು ವಿಠಲ ನಮ್ಮ ಪಾಲಿಸಿದ14 ತÀರುಲತೆಗಳು ಪುಳಕಿತವಾಗೆ ಈಚರ ಪ್ರಾಣಿಗಳೆಲ್ಲ ಸ್ಥಿರವಾಗೆಹರಿಯ ವೇಣುನಾದ ಹೊಸಬಗೆ ಅತಿಹರುಷವ ನೋಡಲೈದಿದೆವೀಗ 15 ಚೆಲ್ಲಿದ ಕೈಯಿಂದಮಲ ನೀರ ನಮ್ಮೆಲ್ಲರ ನೀರಿಗಂಜನು ಧೀರನಲ್ಲ ನಾವಂದ ಮಾತನು ಮೀರನಿವಸುಲಭನೊಮ್ಮೆ ಮೊಗವ ತೋರ 16 ಪಾಲನೊಲೆಯೊಳಿಟ್ಟು ಪೋದೆವು ಈಕಾಲಭೂಷಣ ಕೈಗಾದವುಬಾಲರ ಕೆಲರು ಮರೆತು ಪೋದೆವು ಗೋ-ಪಾಲ ಸಂಗಕ್ಕೆ ಮರುಳಾದೆವು 17 ಉಂಬುವರಿಗೆ ಬಡಿಸಲಿಲ್ಲ ಪತಿಎಂಬುವನಾಜ್ಞೆಯೊಳಗೆ ನಿಲ್ಲದೆನಂಬಿದೆವು ನಾವು ಹರಿಯಲ್ಲದೆ ಅನ್ಯರೆಂಬುದು ಭಕ್ತ ವರ್ಗಕೆ ಸಲ್ಲದೆ18 ಧೇನು ಮಾತ್ರದಿಂದ ಫಲವೇನು ಕಾಮ-ಧೇನು ಶ್ರೀಕೃಷ್ಣನ್ನ ಕರೆದೆನುಮಾನಿನಿ ಮೊದಲು ಕರೆವಧೇನು ಬಿಟ್ಟುಜಾಣೆ ಸೇರಿದಳು ಕೃಷ್ಣನ ಪದವನು 19 ಶಿಶುವ ಬಿಟ್ಟೊಬ್ಬಳು ನಿಜಕನ್ಯೆತನದೆಸೆಯ ತೋರಿಸಬಂದಳಚ್ಚುತನ್ನಎಸೆವ ಶ್ರೀಪತಿ ತನ್ನ ರಮಣನು ಎಂದುಸುಟಳು ಮೊದಲಾಳ್ದ ಗಂಡನ 20 ಲಲನೆ ಕಣ್ಣಂಜನವಬಿಟ್ಟಳು ಜ್ಞಾನಚೆಲುವನಂಜನಕೊಡಂಬಟ್ಟಳುಒಲೆಯಪಾಲಗ್ನಿಗೆ ಕೊಟ್ಟಳು ಕೃಷ್ಣ-ಗೊಲಿದಧರ ಮನವಿಟ್ಟಳು21 ಇಂತು ತೊರೆದು ವಿಷಯಂಗಳ ಆ ಶ್ರೀ -ಕಾಂತನೆ ಕಾವ ಜಗಂಗಳಚಿಂತೆಯ ತೊರೆದೆವು ಮಂಗಳ ಲಕ್ಷ್ಮೀ -ಕಾಂತನೆ ಕಾಯೊ ಜಗಂಗಳ 22 ಕೇಶಿಯೆಂಬ ದೈತ್ಯನ ಕೊಂದ ಖಳನಾಶದಲಿ ಸದಾ ಮುಕುಂದಆ ಸಮಯದಲಿ ಅಕ್ರೂರ ಬಂದ ಅವಂಗೆಲೇಸÀಪಾಲಿಸಿ ಕೃಷ್ಣ ನಡೆತಂದ 23 ಮಧುರೆಯಲಿ ಮಲ್ಲರ ಸೋಲಿಸಿದ ತನ-ಗಿದಿರಾದ ಕಂಸÀನನೊರೆಸಿದಕದನಕೋಲಾಹನೆನಿಸಿದ ನಮ್ಮಮದನಶರಕೆ ಗುರಿಮಾಡಿದ24 ಎಲ್ಲ ದೇವರನಿವ ಮೀರಿದ ಸಖಿಬಲ್ಲವರಿಷ್ಟವ ಬೀರಿದಕಲ್ಲಕಂಬದಿ ಬಂದು ತೋರಿದ ಖಳರೆÉಲ್ಲಿದ್ದರಲ್ಲಿಗೆ ಹಾರಿದ 25 ದಯದಿಂದ ಸಖನಮಗಾದವ ಚೆಲ್ವಹಯವದನ್ನ ಕೃಪೆಯಾದವನಯದಿ ಜಲವ ಪೊಕ್ಕು ಪೋದವ ವೈ-ರಿಯ ಕೊಂದು ವೇದವ ಕಾಯ್ದವ 26
--------------
ವಾದಿರಾಜ
ತಡವ ಮಾಡಲಿ ಬೇಡ ಹಡೆದವ್ವ ಎ ನ್ನೊಡೆಯನನು ಹುಡುಕಿ ತಾರೆ ಪಿಡಿವೆ ಪಾದವ ಪ ತಡವ ಮಾಡದೆ ಪೊಡವಿಯೊಳು ಕಡು ಸಡಗರಾರ್ಯನ ಹುಡುಕಿ ತಂದರೆ ಹಡೆದು ನಿನ್ನ್ಹೆಸರಿಸಿವುವೆನೆನ್ನವ್ವ ಸರಿಮಾಡ್ವೆನವ್ವ ಅ.ಪ ಜೀವದರಸನ ಹಂಬಲೆನಗವ್ವ ಅತ್ಯಧಿಕವಾಗಿ ಕಾಯಸೊರಗಿ ಕ್ಷೀಣವಾಯ್ತೆವ್ವ ಪ್ರಾಯಬಂದರೆ ಸುಮ್ಮನೆ ಹೋಗುತಾದವ್ವ ಪ್ರಾಯಕ್ಕೆ ತಕ್ಕ ಚಾಯಗಾರ ಕಂಡೇನ್ಹೇಗವ್ವ ಕಾಯರಹಿತ ಕಾರುಣ್ಯನಿಧಿ ಮಾಯತಿಳಿಯುವರಿಲ್ಲ ಆತನ ದಿವ್ಯಚರಿತ ನೆನೆದು ನೆನೆದು ಬಾಯ ಬಿಡುವೆನೆ ಆಯತಾಂಬಕಿ 1 ವಸ್ತೊಡೆವೈಷ್ಟಿರಲು ಏನವ್ವ ಅತಿಶೋಭೆಯೆನಿಪ ಮುತ್ತುಯಿಲ್ಲದ ಮೋರೆಯಾಕವ್ವ ಹತ್ತಿರಕೆ ಬರಗೊಡರವ್ವಾ ಮುತ್ತೈದೆರೆಲ್ಲರು ಅತ್ತ ಇತ್ತೆಂದೆಳೆಯುತಿಹ್ಯರವ್ವ ಮತ್ತೆ ಬೇಡಲು ದೊರೆಯದಂಥ ಹೊತ್ತು ಸುಮ್ಮನೆ ಹೋಗುತಿದೆ ಕರ್ತ ತುರ್ತು ದೊರೆಯದನಕ ಚಿತ್ತ ಸ್ವಸ್ಥವಾಗದವ್ವ 2 ಭೂಮಿತ್ರಯದೊಳಧಿಕ ಕೇಳವ್ವ ಆತನಹೆಸರು ಕಾಮಿತವನೀಗರಿತುಕೊಂಡೆನವ್ವ ನೇಮದಿಂದ ಭಜಿಸುತಿಹೆನವ್ವ ಎನ್ನಕಡೆಗಾತ ಪ್ರೇಮದಿಂದ ಸುಳಿಯದಿಹ್ಯನವ್ವ ಭಾಮೆಬಾರೆಂದು ಬದಿಲಿಕರೆದು ಪ್ರೇಮದಿಂದ ಅಪ್ಪಿ ನಿನ್ನಯ ಸ್ವಾಮಿ ಶ್ರೀ ರಾಮ ನಾನೆಂದ್ಹೇಳಲು ಕ್ಷೇಮ ಪಡೆದು ಬಾಳ್ವೆನವ್ವ 3
--------------
ರಾಮದಾಸರು
ತಡೆಯುತಲಿದೆ ಪುಷ್ಪಮಾಲೆ ಪ ಒಡಲೊಳಗಾತ್ಮನ ವರ ಮಕುಟಾಗ್ರದಿಅ ಕುಸುಮ ದಾಮವು ಕಿರಿದುವಿವರ ಬಲ್ಲ ಸದ್ಗುರು ತಮ್ಮ ಉದ್ದೇಶದನವ ವೈಜಯಂತಿಯ ಹಿರಿದಾಗಿ ಭಾವಿಸಿ1 ಸ್ಥಿರ ಮತಿಯೆಂಬ ಆಸನವನು ಅಳವಡಿಸಿ - ತ್ರಿಕರಣವೆಂಬ ತಾಂಬೂಲವನೊಪ್ಪಿಸುತ - ಮಾಯ ಮರವೆಯೆಂಬ ದಕ್ಷಿಣೆ ಕೊಟ್ಟು - ಮಮ ಭಾವದಿರುವಿನ ತಮವನೋಡಿಸಿ ನಿಂದ ಗುರುದೇವ2 ಅಜ್ಞಾನವೆಂಬ ನಿರ್ಮಾಲ್ಯವನು ಮಾಡಿಸುಜ್ಞಾನವೆಂಬಕ್ಷತೆಯ ಪಣೆಗೆ ಸೂಡಿಪ್ರಜ್ಞಾನವೆಂಬ ದೀವಿಗೆ ಸ್ತಂಭ ಹೂಡಿಪೂಜಿಸಿ ಪ್ರವಿಮಲ ಜ್ಯೋತಿಯ ದೇಶಿಕೋತ್ತಮ 3
--------------
ಕನಕದಾಸ
ತಣ್ಣನೆ ಹೊತ್ತಿಲಿ ನಾವು ಬೆಣ್ಣೆ ತೆಗೆಯುವ ಸಮಯದಿಚಿಣ್ಣ ಬಂದು ಕಣ್ಣು ಮುಚ್ಚಿ ಬೆಣ್ಣೆ ಸವಿದು ಪೋದನೆ ಪ ಹಿಂಡುಗೆಳೆಯರ ಕೂಡಿಕೊಂಡುಬಂದು ಬಾಗಿಲೊಳಾಡುತಚೆಂಡು ಬುಗುರಿಯ ಹುಡುಕುತ ನಮ್ಮದುಂಡು ಕುಚಗಳ ಪಿಡಿದನೆ1 ಆಕಳ್ಹಾಲನು ಕಾಸಿ ನಾವುಮೀಸಲೆಂದಿಟ್ಟಿದ್ದೇವೆಜÉೂೀಕೆಯಿಂದಲಿ ಕೃಷ್ಣ ಬಂದುಮೀಸಲಳಿದು ಪೋದನೇ2 ಇದ್ದ ಮಾನವನುಳುಹಿಕೊಂಡುಎದ್ದು ಪೋಗುವುದುಚಿತವೆಬುದ್ಧಿ ಪೇಳಬಾರದೆ ನಮ್ಮಮುದ್ದು ಶ್ರೀಪತಿ ಕೃಷ್ಣಗೆ 3
--------------
ವ್ಯಾಸರಾಯರು
ತತ್ತ ಪ್ರತಿಪಾದನೆ ದೂಡಿಸುವ ಸಂಸಾರ ದೇವ ರೂಢಿಯೊಳು ಭÀಕ್ತರೊಡನಾಡಿ ರಂಗ ಪ. ಭವ ನಾವಿಕನಾಗಿ ಗಾಢನೆ ನಡೆಸುತ ಜೋಡು ಕುಂಡಲಧರ ಅ.ಪ. ಭಕ್ತಿರಸವೆಂಬ ತೊಗಲನ್ನು ಹೂಡಿ ಯುಕ್ತಿಲಿ ಮಣ್ಣಿನ ಬೊಂಬೆಯೊಳಗಾಡಿ ಪರ ಶಕ್ತಿಯೆಂಬ ಹೊಲಿಗೆಯನ್ನು ಕೂಡಿ ಭಕ್ತಿಲಿ ಸ್ತುತಿಸುವ ಭಕ್ತರೊಳಾಡಿ 1 ಗುರುಹಿರಿಯರ ಸೇವೆಯೆಂಬ ಮನಕೊಟ್ಟು ಸರಸದಿ ಮನೆಗೆಲಸವ ಗುಟ್ಟಿಲಿಟ್ಟು ಸರಸಿಜನಾಭನÀ ಮನಸಿನೊಳಿಟ್ಟು ಹರುಷದಿ ಸ್ತುತಿಪರ ಸಲಹುವನೆಂಬೊ ಬಿರುದಿಟ್ಟು2 ಕರುಣಾಮಯನೆಂಬೊ ಪೆಸರನು ಇಟ್ಟು ಹರುಷದಿ ಕೂಗುವ ಭಕ್ತರೊಳಗೆ ತಾ ಗುಟ್ಟು ಕರುಣಾಸಾಗರ ವರ ಶೇಷಾಚಲವಾಸ ಭವ ಸಂಸಾರವ 3
--------------
ಸರಸ್ವತಿ ಬಾಯಿ
ತತ್ತ್ವ ತಿಳಿಯದು ಅಹಂಮತ್ವ ಅಳಿಯದನಕ ಧ್ರುವ ವಿದೇಹ ಸುದೇಹಾಗದನಕ ಸಂದೇಹ ಸಂಶಯ ಸಂಕಲ್ಪ ಹೋಗದನಕ 1 ಪ್ರವೃತ್ತಿ ನಿವೃತ್ತಿ ಸುವೃತ್ಯಾಗಕನಕ ಸ್ವಪ್ನ ಸುಷಪ್ತಿ ಜಾಗ್ರ್ಯತ್ಯಾಗದನಕ 2 ದೃಷ್ಟ ಅದೃಷ್ಟ ಸದ್ರಷ್ಟಾಗದನಕ ದುಷ್ಟನಷ್ಟಗಳ ಸಂಕಷ್ಟೋಗದನಕ 3 ಲಬ್ಧ ಅಲಬ್ಧ ಪ್ರಾಲಬ್ಧಾಗದನಕ ಶಬ್ಧ ನಿಶ್ಯಬ್ಧ ಸುಶಬ್ದಾಗದನಕ 4 ಭಾವ ಅಭಾವ ಸ್ವಭಾವಾಗದನಕ ಮಾಯ ಮೋಹದ ಮನೆಯು ಮುಕ್ಕಾಗದನಕ 5 ಸದ್ಗುರು ದಯಕರುಣ ಕೃಪೆ ಅಗದನಕಮಹಿಪತಿ ನಿನ್ನೊಳು ನೀ ಬೆರಿಯತನಕ 6
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತತ್ವ ಚಿಂತನೆ ಮಧ್ಯಮತವೇ ದೊಡ್ಡದೆಂದು ತಿಳಿದು ಮನ ಶುದ್ಧಿಯಿಂದ ಮತವನನುಸರಿಸೋ ಪ ಶ್ರೀ ಮಧ್ವಮತದಲ್ಲಿ ಹರಿಯೇ ಸವೋತ್ತಮ ಭೇದಪಂಚ ಜಗತೆರಡು ಸತ್ಯ ಶ್ರೀ ಬ್ರಹ್ಮಾದಿಗಳೆಲ್ಲ ಹರಿಪರಿವಾರರು ತಾರತಮ್ಯವೇ ಸದಾ ಇವರಲ್ಲಿ 1 ಮುಕ್ತಿ ಎಂಬುದು ನಿಜಾನಂದದ ಅನುಭವ ಭಕ್ತಿಯೆಂಬುದೇ ದೊಡ್ಡ ಸಾಧನವು ಅಕ್ಷಾನುಮಾಗಮ ಮೂರು ಪ್ರಮಾಣ ಶ್ರೀ ಲಕ್ಷ್ಮೀಶನೇ ಸರ್ವಶ್ರುತಿವೇದ್ಯನು 2 ಸ್ವತಂತ್ರ ಪರತಂತ್ರ ಎರಡು ತತ್ವಗಳು ಸ್ವತಂತ್ರ ತತ್ವವು ಹರಿಯೊಬ್ಬನೇ ಪ ರತಂತ್ರ ಮಿಕ್ಕಿದ್ದಲ್ಲಾ ಇದಕೆ ಪ್ರಮಾಣವು `ಏಷ ಸರ್ವೇಶ್ವರ ' ವೆನ್ನುತ ಶ್ರುತಿಯು 3 ಹರಿಯೇ ಸರ್ವೋತ್ತಮ ತದನು ರಮಾದೇವಿ ವಿಧಿ ಪ್ರಾಣರಿವರಿಬ್ಬರು ತದನು ಸರಸ್ವತಿ ಭಾರತೇರಿಬ್ಬರು ಶಿವ ಶೇಷ ಗರುಡ ಶ್ರೀ ಹರಿನಾರೇರು 4 ಸೌಪರ್ಣಿ ಪಾರ್ವತಿಯರು ಸಮ ಶಕ್ರ ಕಾಮರು ಸಮ ಸ್ಮರರಮಣಿ ಗುರು ಶಚಿ ಮನು ದಕ್ಷ ಸಮರು ಆ ಮಾನವಿ ಪ್ರವಹ ಯಮೇಂದ್ವರ್ಕ ಸಮರೈವರು 5 ನಿಖಿಲ ದಿವಿಜರಲ್ಲಿ ಈ ವಿಧ ತಾರತಮ್ಯ ನಿಖಿಲ ಸುರೋತ್ತಮ ಹರಿಯೊಬ್ಬನೇ ಮಿಕ್ಕವರಲವೆಂದು ಇಂದ್ರಿಯೇಭ್ಯಃ ಪರಃ ದ್ವಾವಿಮಾ ಇತ್ಯಾದಿ ಶ್ರುತಿವಚನ 6 ಈಶ್ವರ ಜಡ ಭೇದ ಜೀವ ಜಡಕೆ ಭೇದ ಜೀವ ಜೀವಕೆ ಭೇದ ಜಡ ಜಡಕೆ ಜೀವೇಶರಿಗೆ ಭೇದ ಈಶ ಲಕ್ಷ್ಮೀ ಭೇದ ಪರತಂತ್ರ ಚಿತ್ಪರ ಜೀವ ಶಬ್ದ 7 ಬ್ರಹ್ಮವಿಚಾರ ತತ್ಜ್ಞಾನಕೆ ಸಾಧನ ಜ್ಞಾನಪ್ರಸಾದಕೆ ಇದು ಮುಕ್ತಿಗೆ ಆದ ಕಾರಣದಿಂದ ಶಮದಮಯುತನಿಗೆ ಬ್ರಹ್ಮ ಜಿಜ್ಞಾಸವು ಕರ್ತವ್ಯವು 8 ಜಿಜ್ಞಾಸ್ಯಬ್ರಹ್ಮನು ಜೀವನಲ್ಲವೊ ಜಗ ತ್ಕಾರಣತ್ವವು ಜೀವಗೆಲ್ಲಿಹುದೊ ರುದ್ರಾದಿಗಳು ಜಗತ್ಕಾರಣರಲ್ಲವೊ ಶಾಸ್ತ್ರವೇದ್ಯನೆ ಜಗತ್ಕಾರಣನು 9 ಉಪಕ್ರಮಾದಿಗಳ ವಿಚಾರ ಮಾಡಲು ಸರ್ವ ಶಾಸ್ತ್ರ ತಾತ್ಪರ್ಯಗೋಚರ ಹರಿಯೆ ಅಕ್ಷಾದ್ಯವೇದ್ಯನ ಜ್ಞೇಯನಾಗುವ ಹರ್ಯ ವಾಚ್ಯನೆಂಬುವುದದು ಸರಿಯಲ್ಲವೊ10 ಆನಂದಮಯ ಮೊದಲಾದ ವಾಚ್ಯನು ಮತ್ತೆ ಸರ್ವಗತತ್ವಾದಿ ಲಿಂಗಯುತ ದ್ಯುಭ್ವಾದಿಗಳಿಗಾಧಾರನು ಅವ್ಯಕ್ತ ಜ್ಯೋತಿರಾದಿ ಶಬ್ದ ಮುಖ್ಯಾರ್ಥನು 11 ದೋಷವರ್ಜಿತ ಹರಿ ವಿಷಯವಿರಕ್ತಿ ಭಕ್ತ್ಯು ಪಾಸನದಿಂದಲೆ ಅಪರೋಕ್ಷನೊ ಇಂತು ಪ್ರಸನ್ನನು ಮುಕ್ತಿಯನೀವನು ಎಂಬುವುದೆ ಸರ್ವ ಶಾಸ್ತ್ರಾರ್ಥವೊ 12 ವರನಾಮಗಿರಿ ನರಹರಿಯ ಪಾದಾಂಬುಜ ನಿರತ ಹೃದಯನಾಗಿ ಅನುದಿನದಿ ಧರಣಿ ಸುರನು ಇದ ಪೇಳಲು ನರಹರಿ ಚರಣಕಮಲ ಭಕ್ತಿ ಪೊಂದುವನು 13
--------------
ವಿದ್ಯಾರತ್ನಾಕರತೀರ್ಥರು
ತತ್ವಚಿಂತನೆ ಪೇಳಬಹುದೊಬ್ಬರಿಗೆ ವ್ಯಾಸನೆ ಪೇಳಲು ನಿಮಗೆ ಮಾಡಲಶಕ್ಯವಲ್ಲ ಪ ಶ್ರವಣ ಕ್ಷಣಬಿಡದೆ ಮಾಡು ನೀಯೆಂಬಿ ಶ್ರವಣ ಬವಣೆಯು ಬಲ್ಲರೇ ಬಲ್ಲರೊ ಶ್ರವಣ ಮತಿಯೆಂದು ವಾಕ್ಯದಿಂದಲಿ ನಿಮಗಿ ಲ್ಲವರ ಗುರುವಾದಿ ವಾಯು ವಿರಂಚಿಗೆ 1 ಮನನ ಮಾಡೆಂದು ಮಂದಿಗೆ ನೀ ಬೋಧಿಸುವೆ ಮನನ ನಿಮಗೆ ಎಂದಿಗೆ ಇಲ್ಲವೊ ಮನನ ಶಾಸ್ತ್ರಗಳ ಮಾಡಿ ಹ್ಯಾಗ ತಿಳಿಯದೊ ಮನವೆ ಬಲ್ಲುದು ನಿನ್ನ ಮಹಿಮೆ ಎಲ್ಲ 2 ಧ್ಯಾನ ಮಾಡೆಂಬಿ ತಾ ಒಂದೆರೆಡು ವಿಷಯಗಳ ಜ್ಞಾನ ಬಿಡಲಾರೆನೊ ಬಹಳ ಬಿಡುವೆ ನೀನು ಒಂದನ್ನ ಒಮ್ಮೆನ್ನ ಬಿಡಲಾರಿಯೊ ಏನೊ ನೀ ಮಾಡುವುದು ಮಾತ್ರ 3 ನಿನ್ನ ಖಳಗುಣಗಳ ಪರೋಕ್ಷ ನಿಗಮನುದಿನ ಅನ್ಯ ಸಾಧನಗಳಿಂದಲ್ಲದಾಗಿ ನಿತ್ಯ ಮುಕುತಿ ಪೂರ್ಣ ತಾ ಅನ್ಯ ಜನರಿಗೆ ಬಂದ ದಣುವು ತಿಳಿಯೊ 4 ಏಸು ತಾನಂದರು ಖರಿಯ ಪುಸಿವೊಂದಿಲ್ಲ ಲೇಸು ಕೊಡುವವನೊಬ್ಬನಿಲ್ಲ ವಾಸುದೇವವಿಟ್ಠಲ ಒಲಿದು ಸಜ್ಜನರಿಂದ ಈಸು ಸಾಧನೆಗಳಿಂದ ನೀ ಮಾಡಿಸೊ 5
--------------
ವ್ಯಾಸತತ್ವಜ್ಞದಾಸರು
ತತ್ವಚಿಂತನೆ ಮತವೆಂದರೆ ಮಧ್ವ ಮತವೇ ಮತವು ಶ್ರುತಿ ಸ್ಮøತಿ ತತಿಗೆ ಸಮ್ಮತವಾದುದರಿಂದ ಪ ಮಧುವೆಂದರಾನಂದ ಒದಗಿ ಬರುವುದು ಸತ್ಯ ಮಧುವೈರಿ ಒಲಿದು ಪಾದವ ತೋರುವ ಸದಮಲ ಭಾವದಲಿ ಮೇದಿನಿಯೊಳಗಿನ್ನು ಮದಮತ್ಸರಿಲ್ಲದೆಲೆ ಮುದದಿಯೋಚಿಸಲಾಗಿ 1 ವ ವರ್ಣವೆಂದರೆ ಶ್ರೀ ವರನ ಜ್ಞಾನವು ಪವನಪಿತ ತಾ ಒಲಿದು ಈವನದನು ಹೇವವಿಲ್ಲದೆ ಶುದ್ಧ ಭಾವದಿಂದಾಚರಿಸೆ ಭವ ದೂರಗೈಸಿ ಪಾವನಮಾಳ್ಪೊದದರಿಂದ 2 ಪತಿ ಪಿತಭಾವ ಸತತ ಸಮ್ಮತಿಯಿತ್ತು ಖತಿಯಳಿವದೈ ಕ್ಷಿತಿಯೊಳಗೆ ಪಿತ ಶ್ರೀ ನರಹರಿಯ ಪದಪದುಮ ಅತಿ ತೀವ್ರದಲಿ ತೋರಿ ಖ್ಯಾತಿ ತಂದೀವುದಕೆ 3
--------------
ಪ್ರದ್ಯುಮ್ನತೀರ್ಥರು
ತತ್ವದರ್ಶನದಲ್ಲಿ ಮಂತ್ರಮಹಿಮೆ ಸ್ವಾಮಿಗರ್ಪಿಸೋ ಮಾನವಾ ಪ ಕಾಮಿತಾರ್ಥವ ಬೇಡದೆ ಶತ ಸಾಮಜಾಪತಿ ನೆನೆವ ಮಂತ್ರ ಅ.ಪ ದಿವಿಜರನಿಶ ಪಠಿಪ ಮಂತ್ರ ಜವನ ಭಟರ ಸದೆದ ಮಂತ್ರ 1 ಲಲನೆಪಾಂಚಾಲಿ ಹೇಳಿದ ಮಂತ್ರ ಬಲಿಗೆ ವರವನಿತ್ತ ಮಂತ್ರ 2 ಸಾರಸಭವನುಲಿದ ಮಂತ್ರ ಘೋರದುರಿತನಾಶಕ ಮಂತ್ರ ಸಂ ಸಾರಜಲಧಿ ದಾಟಿಪ ಮಂತ್ರ 3 ಉಸುರಲಳವೆ ಪರಮ ಮಂತ್ರ 4 ನರನ ಪಾಲಿಪೊಂದು ಮಂತ್ರ 5 ಸಿರಿಗೋವಿಂದನೆಂಬ ಮಂತ್ರ ಮಂಗಳಕರ ರಂಗಮಂತ್ರ ಗಂಗಾಜನಕನೇಂಬೀ ಮಂತ್ರ ಶೃಂಗಾರಾಬ್ಧಿ ಸೋಮಮಂತ್ರ ಮಾಂಗಿರೀಶನೆಂಬ ಮಂತ್ರ 6
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತತ್ವಸುವಾಲಿಗಳು ಓಂಕಾರ ಪ್ರತಿಪಾದ್ಯ ಶ್ರೀಕಾಂತನೇ ನಿನ್ನ ಭವ ಭಂಗವ ಗೈಸಿ ಶುಭಾಂಗನೆ ಕಾಯಯ್ಯ ಶ್ರೀರಂಗ 1 ಕಾಲತÀ್ರಯಕೃತ ವಿಕಾರವಿಲ್ಲದೆ ನೀನೆ ಮೂಲರೂಪನೆ ಬಹು ರೂಪ-ಬಹುರೂಪ ಸ್ವಗತಭೇದ ವಿವರ್ಜಿಕನೆ ಸಲಹಯ್ಯ 2 ಆವಕಾಲಕು ನೀನೆ ಚತುರ ರೂಪದೊಳಿದ್ದು ಜೀವ ನಿಯಾಮನು ನೀನಾಗಿ-ನೀನಾಗಿ ವಿಶ್ವ ತೈಜಸ ಪ್ರಾಜ್ಞ ತುರ್ಯಾತ್ಮ3 ಶುಭ ವಿಷಯಂಗಳಾ ಮಾಡಿ ಉಣಿಸುವೆ 4 ವಿಶ್ವದಲಿ ವ್ಯಾಪಿಸಿಹೆ ವಿಶ್ವನಂಬೋರು ನಿನ್ನ ನಾಶರಹಿತನೆಂದೂ ನರನೆಂದೂ-ನರನೆಂದೂ ನಿನ್ನ ವೈಶ್ವಾನರನು ಎಂದು ಪೇಳ್ವಾರೊ 5 ಹರಿ ನಿನ್ನ ವಿಶ್ವನೆಂದು ಉಪಾಸನೆಯನು ಮಾಡಿ ಹೇರಂಬ ನಿನ್ನ ಒಲಿಸಿದಾ-ಒಲಿಸಿದಾ ಗಜವಕ್ತ್ರನಾಗಿ ನಿನ್ನ ಸ್ತುತಿಪಾನೋ 6 ದೇಹದೊಳು ಸ್ವಪನದಲಿ ನೀ ನೀಡಿ-ನೀ ನೀಡಿ ಜೀವರುಪಭೋಗಿಸುವ ಸಾರವನು ರಕ್ಷೀಪೆ 7 ತೈಜಸನೆ ವಾಸನಾಮಯವೆಲ್ಲ ತೋರೀಪೆ8 ತತ್ವಗಳ ವ್ಯಾಪಾರವೇ ವ್ಯಾಪಾರ9 ಸುಪ್ತಕಾಲದಿ ಜೀವ ಸ್ವರೂಪಕೆ ತಕ್ಕ ಕ್ಲುಪ್ತ ಅಜ್ಞಾನ ಮೊದಲಾದ-ಮೊದಲಾದ ಕಾಲವನನುಸರಿಸಿ ಜೀವನಿಗೆ ತನ್ನ ತಿಳಿಯಗೊಡದೆ 10 ಪ್ರಾಜ್ಞಮೂರುತಿ ನೀನೆ ಹೃದಯಸ್ಥಾನದೊಳಿದ್ದು ಅಜ್ಞಾನಿ ಜೀವನ ಕಾಲಾವ-ಕಾಲಾವ ನನುಸರಿಸಿ ಜೀವ ಸ್ವರೂಪಾನಂದವÀನು ನೀನೀವೆ11 ಸ್ವಪನ ಜಾಗ್ರತ ಜ್ಞಾನವಿನಿತಿಲ್ಲವೆಂದು ಕೂಡುವ ಜೀವ ಆನಂದ ಹಿಂದೆಂದೂ ಕಾಣನೊ12 ಘನ ಬಹಿ ಪ್ರಾಜ್ಞ ತೈಜಸಾಂತ ಪ್ರಾಜ್ಞ ಘನ ಪ್ರಾಜ್ಞ ಮೂರುತಿ-ಮೂರುತಿ ಗಳುಪಾಸನೆ ಮಾಳ್ವ ಬುಧರೇನು ಧನ್ಯರೊ 13 ನಾಗಿ ನೀ ಕೊಡುತಿರುವೆ ಮುಕ್ತರಿಗೆ ಆನಂದ 14 ಮುಕ್ತರಿಗೆ ದೃಷ್ಟನೋ ಅದೃಷ್ಟನೋ ಅ- ಗುರುಪ್ರಾಣನನುಗ್ರಹದಿ ಲಭ್ಯನಹುದಯ್ಯಾ ಹೇ ಜೀಯ 15 ಕಣ್ಮನ ಹೃದಯ ತ್ರಿಧಾಮಗಳಲ್ಲಿ ಇದ್ದು ಉಣಿಸೂವೇ ಜೀವರಿಗೆ ಫಲಭೋಗ-ಫಲಭೋಗವು ವಿಶ್ವತೈಜಸ ಪ್ರಾಜ್ಞ ಸ್ಥಿತಿಯೊಳು 16 ಸರ್ವರೂಪವು ಪೂರ್ಣ ಸರ್ವಗುಣ ಸಂಪೂರ್ಣ ಸರ್ವೋತ್ಪಾದಕ ಸುಖರೂಪಿ-ಸುಖರೂಪಿ ಸರ್ವಲೋಕ ಜೀವರೊಳಿದ್ದು ನಿರ್ಲಿಪ್ತಾ 17 ವರ್ಣತ್ರಯಯುತ ಓಂಕಾರದೊಳಾದ್ಯವರ್ಣ ವಿಶ್ವ ನೀನೆ-ವಿಶ್ವನು ನೀನೆ ಉಕಾರವೇ ತೈಜಸನು ಮಕಾರ ವಾಚ್ಯನೇ ಶ್ರೀಪ್ರಾಜ್ಞ 18 ನಾದದೊಳು ನೀ ವಾಚ್ಯ ತುರ್ಯರೆಂಬೋರು ನಿನ್ನ ಸದನವಾಗಿಹುದೈ ಶಿರಸ್ಥಾನ-ಶಿರಸ್ಥಾನ ನಾಶಿಕಾಗ್ರದಿ ಊಧ್ರ್ವ ದ್ವಾದಶಾಂಗುಲದಲ್ಲಿ ನೆಲೆಸಿರ್ಪೆ 19 ತೈಜಸನೊಡಗೂಡಿ ವಾಸನಾ-ವಾಸನಾಮಯ ಕಳೆವ ಅಜ್ಞಾನಿ ಜೀವನನ್ನಾಡಿಸುವೆ ಶ್ರೀಪ್ರಾಜ್ಞ 20 ಸರ್ವಶಕ್ತನು ನೀನೆ ಸರ್ವಕತರ್Àನು ನೀನೆ ಸವೋತ್ತಮನು ನೀನೆ ಸರ್ವಜ್ಞ-ಸರ್ವಜ್ಞ ಪೂರ್ಣಪ್ರಜ್ಞಾಂತರ್ಯಾಮಿ ಸಲಹಯೈ21 ಪಲವಿಲ್ಲ ವಾಸುದೇವನೆ ನಿನ್ನ ದಯ ಬೇಕೊ 22 ನೀ ಸುಮ್ಮನಿರದೆ ಎನ್ನನೂ-ಎನ್ನನು ಪ್ರೇರಿಸುವೆ ಲೇಸುಮನ ನಿನ್ನಲ್ಲಿ ನೆಲೆಸಲೋ 23 ಕಂಡಕಂಡಲ್ಲಿ ನಾ ಉಂಡುಂಡು ಓಡಾಡಿ ಧಾಂಡಿಗನಾಗಿ ಬೆಳೆದೆನೊ-ಬೆಳೆದೆನೊ ಪುಂಡರೀಕಾಕ್ಷ ನಿನ್ನ ಮರೆತೆನೋ24 ಅವಾವ ಕಾಲದೊಳು ನೀನಿದ್ದು ಉಣಿಸುವೆ ಜೀವಕೃತ ಕರ್ಮಫಲಗಳ-ಫಲಗಳ ಶ್ರೀ ವೇಂಕಟೇಶ ನೀನಿತ್ತು ಸಲಹೂವೇ 25 ವಂದನೆಯು ಒಂದೆ ಮನದಿಂದೆ-ಮನದಲಿ ನಿನ್ನ ಪಾದಾರವಿಂದವ ತೋರಯ್ಯ26 ಬಂಧುಗಳು ಹಿತರೆನ್ನೆ ಬಂಧಕರಾಗಿಹರು ಬಂಧನಕೆ ನಾ ಇನ್ನು ಸಿಲುಕಿದೆ 27 ಘನವಾಗಿ ತನು ಬೆಳೆಸಿ ಹಿತದಿಂದ-ಹಿತದಿಂದ ಮುಂದೆ ಪರಗತಿಯ ಕಾಣುವುದೆಂತೊ ಗೋವಿಂದ28 ವಿತ್ತಾಪಹಾರಕರು ಹೃತ್ತಾಪಕಳೆವರೆ ಉತ್ತಮಗತಿಯ ತೋರಿಸು29 ಹರಿಕಥಾಪುರಾಣಶ್ರವಣ ನಿತ್ಯದೀ ಮಾಡೀ ಪರಿಯಿಂದ ನಿಜತತ್ವವರಿಯಾದೆ-ಅರಿಯಾದೆ ಬರಿದೇ ವಿಪರೀತ ಜ್ಞಾನಕೆ ವಶನಾದೆ30 ಮದ್ಯ ತುಂಬಿದ ಭಾಂಡ ಗದ್ಗುಗೆಯ ಮೇಲಿಟ್ಟು ಶ್ರಧ್ದೆಯಿಂದಲಿ ಅದನ ಪೂಜಿಸೆ-ಪೂಜಿಸೆ ಪೂತÀ ದುರ್ಗಂಧ ಫಲವದು ಬಿಟ್ಟೀತೆ 31 ಮಂದಹಾಸದಿ ಜನರ ಸಂದೋಹದಲಿ ಕುಳಿತು ನಿಂದೆ ಮಾತುಗಳಾಡಿ ಮದತುಂಬೀ-ಮದತುಂಬಿಬಿದಾ ದುರ್ಮ ದಾಂಧರಿಗೆ ಗತಿಯು ಮುಂದೆ ಇನ್ನೆಂತೊ32 ಕಂಡಕಂಡವರಲ್ಲಿ ಕೊಂಡೆ ಮಾತುಗಳಾಡಿ ಪುಂಡರೀಕಾಕ್ಷ ನಿನ್ನ ಸ್ಮರಿಸಾದೆ-ಸ್ಮರಿಸದಲೆ ಪರದಿ ಯಮದಂಡಕ್ಕೆ ಗುರಿಯಾದೆ33 ಹಿಂದೆ ಮಾಡಿದ ಪುಣ್ಯದಿಂದ ಇಂದಿನ ಭಾಗ್ಯ ವೆಂದು ತಿಳಿದು ಮುಂದೆ ನಡೆಯಾದೆ-ನಡೆಯಾದೆ ತಿಳಿಗೇಡಿ ಬುದ್ಧಿಯಿಂದ ಕುಂದುಪೊಂದುವೆ 34 ಬಾಯಿಮಾತಲ್ಲ ಶ್ರೀ ತೋಯಜಾಕ್ಷನ ಭಕ್ತ- ರಾಯತನ ತಿಳಿವುದು ಶ್ರಮಸಾಧ್ಯ-ಶ್ರಮಸಾಧ್ಯ ವನು ಸದುಪಾಯದಿಂದ ತಿಳಿದು ನಲಿದಾಡೊ 35 ನಿಂದಕರ ನುಡಿಯಿಂದ ಹಿಂದೆ ಮಾಡಿದ ಪಾಪ ಒಂದೊಂದು ಪರಿಯಲ್ಲಿ ಪರಿಹಾರ-ಪರಿಹಾರವಾಗಿ ನಿಂದಕರು ಬಂಧನಕೆ ಬೀಳ್ವಾರೋ 36 ಸ್ಮøತಿಯುಕ್ತಿಯನೆ ಬಿಟ್ಟು ಯುಕ್ತಿಮಾತುಗಳಿಂದ ಹೊತ್ತು ಕಳೆಯುತ ಉನ್ಮತ್ತನೆನಿಸಿ-ಉನ್ಮತ್ತನೆನಿಸಿದವ ಇ- ನ್ನೆತ್ತÀ್ತ ಭವಶರಧಿಯ ದಾಟÀುವ 37 ಅರೆಘಳಿಗೆ ಕಳೆದುದಿಹ ನರಜನ್ಮ-ನರಜನ್ಮ ಬಂದುದು ನರಕಯಾತನೆಗಲ್ಲದಿನ್ನಿಲ್ಲ 38 ಪರಿಯಂತ ಉದರಭರಣಕಾಗಿ ಉದಧಿಶಯನ ನಾ ನಿನ್ನ ಭಜಿಸಾದೆ-ಭಜಿಸಾದೆ ಮದದಿಂದ ಬುಧಜನರ ನಿಂದೆಯ ಮಾಡೀದೆ39 ಇನ್ನಲ್ಲ ಪರಗತಿಯ ಸಾಧನ-ಸಾಧನವು ತನ್ನೊಳು ತÀನ್ನಿರವರಿತು ಸುಮ್ಮನಿರುವುದು ಅದು ನಿಧಾನ40 ಭಿನ್ನಧರ್ಮಂಗಳ ಗ್ರಹಿಸಾದೆ-ಗ್ರಹಿಸಾದೆ ನೀನೆಣಿಸಿದೆ ತನ್ನಗುಣಧರ್ಮದಂತನ್ಯರಿಹನೇನೊ 41 ಕಾಯವೇ ತಾನೆಂದು ಮಾಯಕೆ ಒಳಗಾಗಿ ಕಾಯಯಾತನೆಗೊಂಡು ನೋಯುವಾ 42 ವಚನ ವಚನವು ಸರ್ವ ಉಚಿತ ದೇಹದ ಕಾರ್ಯ ನಿಚಯದೊಳು ಹರಿ ಪ್ರಚುರನಾಗಿ-ಪ್ರಚುರನಾಗಿ ಕಾಯಕುಪಚಯವಿತ್ತು ಸಲಹೂವ 43 ದೇಹ ಕಾಯದ ಕಾರ್ಯಪ್ರಕ್ರಿಯವ ತಿಳಿಯಾದೆ ಮಾಯೆಗೊಳಗಾಗದಿರು ಹೇ ಮಾನವಾ-ಮಾನವನೆ ತಿ- ಳಿಯೊ ಮಾಯಾರಮಣನ ಬಿಂಬಕ್ರಿಯವಾ44 ಅನ್ಯರೊಳು ನೀ ಹೋರಾಡಬಲ್ಲೆಯ-ಬಲ್ಲೆಯಾ ನಿನ್ನ ವೈರಿಗಳ ಜಯಿಸಲರಿಯದ ಖೂಳ ರಣಹೇಡಿ 45 ಕೊಳೆತು ನಾರುವ ದೇಹದೊಳಗಿರುವ ಹುಳುಕುಗಳ ಕೊಳೆಯ ಕಳೆಯದ ಮನುಜ ನೀನೆಂತೊ-ನೀನೆಂತೊ ಕೊಳೆತÀ ಸಗಣಿಯೊಳಗಿಹ ಹುಳುವೆ ನಿನ್ನ ಗತಿಯೆಂತೊ46 ಆದದ್ದು ಆಯಿತು ಯತ್ನ ತಪ್ಪಿತು ಎಂದು ಹೆದ್ದಾರಿ ಹಿಡಿದು ಪರಮಾರ್ಥ-ಪರಮಾರ್ಥವ ಬುದ್ಧಿ ತಿದ್ದಿಕೊಳ್ಳಲು ಮುಂದೆ ಅನುವಾಗೊ47 ತತ್ತ ್ವದೇವತೆಗಳು ತತ್ತತ್ವಕಾರ್ಯಜಿ- ವೋತ್ತಮನಾಜ್ಞೆಯಿಂ ತಾವ್ ಗೈವರೊ-ತಾವ್‍ಗÉೈ ಯುತ್ತಲಿರೆ ನಾನೆತ್ತ ಮೃತ್ತಿಕಾಪ್ರತಿಮೆಯೋ48 ಒಂದೊಂದು ರೀತಿಯಿಂ ಚೆಂದಾಗಿ ಯೋಚಿಸು ಮಂದಮತಿಯು ನೀನು ಹಿಂದೆಂತೂ-ಹಿಂದೇನು ವಂದನೆಯೊಂದಲ್ಲದಿನ್ನಿಲ್ಲ49 ಡಾಂಭಿಕತನ ಬಿಟ್ಟು ಡಿಂಬದೊಳು ಸರ್ವದಾ ಅಂಬುಜನಾಭನೇ ಇಂಬಾಗಿ-ಇಂಬಾಗಿ ಸರ್ವತ್ರ ತುಂಬಿಕೊಂಡಿಹನೆಂದು ನಲಿದಾಡೋ 50 ತುಷ್ಟಿಯಾಗಿರು ನೀನು ಕೊಟ್ಟಷ್ಟು ಲಾಭಕ್ಕೆ ದುಷ್ಟವಿಷಯಗಳಿಗೆ ಎರಗಾದೆ-ಎರಗಾದೆ ಇರಲು ಸಂ- ತುಷ್ಟ ನಾಗುವನಯ್ಯ ಶ್ರೀಕೃಷ್ಣ51 ಕಾಯ ನಿನ್ನದು ಅಲ್ಲ ಮನವು ಅಧೀನವಲ್ಲ ಹೇಯವಿಲ್ಲದೆ ಮಾಯಕೊಳಗಾಗಿ ಮರುಳಾಗದಲೆ-ಮರುಳಾಗದಲೆ ಮಾಯಾರಮಣನ್ನ ನೆನೆಯೊ ನಿರ್ಭಯದಿಂದ 52 ಹಲವು ಶಾಸ್ತ್ರವ ನೋಡಿ ತಲೆಹರಟೆಯ ಬಿಟ್ಟು ಅಲವಬೋಧರ ತತ್ತ ್ವಸುಧೆಯನ್ನು- ಸುಧೆಯನ್ನು ಸವಿದು ನಿ-
--------------
ಉರಗಾದ್ರಿವಾಸವಿಠಲದಾಸರು
ತತ್ವೋಪದೇಶತೋರಿಸಬೇಕು ನಿನ್ನ ನಿಜವನು ಕಾರುಣ್ಯನಿಧಿ ಗುರುರಾಯ ನೀನು ಪತೋರುವ ತೋರಿಕೆಯನು 'ುೀರಿ 'ುಕ್ಕಿಹ ಪಾರಮಾರ್ಥಿಕ ಸಚ್ಚಿದಾನಂದ ರೂಪವ ಅ.ಪಕಾಯ ಬಂದಂದವೆನಗೆ ಕಾಣಿಸದು ಮಾಯಾಪಾಶದ ತೊಡರೆನ್ನ ಬಿಡದುಜಾಯಾಸುತಾದ್ಯರ ಬರಿಯ ಮೋಹದಲಾಯು ಬೀಯವಾಗುತಲಿದೆ ಬಿಡಿಸಿದ ಬೇಗದಿ 1ಪ್ರಕೃತಿಯೊಳ್ ಕೂಡಿ ಪ್ರಕೃತಿಧರ್ಮಗಳಾದ ಸುಕೃತ ದುಷ್ಕøತ ಫಲ ರೂಪವಾದ'ಕರಿಪ ಸುಖದುಃಖದನುಭವಕದಕೊಳಗಾಗದಕಳಂಕದಿರ'ದೆಂಬುದು ತೋರದಿದೆ ದೇವ 2ಆಕಾಶದೊಳು ದೀಪಪ್ರಕಾಶವು ಏಕವಾದಂತೆ ಚಿದಚಿತ್‍ಸಂಮೇಳವುಐಕ್ಯವಾಗಿರಲಚಿದ್ಭಾವವಳಿದು ಚಿತ್ತು ಏಕವಾಗಿಹ ನಿತ್ಯನಿರ್ಗುಣ ರೂಪವ 3ಅರಿ'ದ್ದೂ ಮರವೆಯೊಳರಿವರಿಯದೆ ಪಿರಿದಾಗಿ ಹಮ್ಮು 'ಹರಿಸುತಿಹುದುಮರವೆಯಹಂಭಾವ ತೋರದರಿ'ನೊಳು ಬೆರೆದು ಬೆರೆದ ಪರಿ ತೋರದಿರುವ ಹಾಗೆ4ಮೃತ್ತಿನಿಂದಾದ ಘಟಶರಾವಾದಿಗಳು ಮತ್ತೊಂದು ರೂಪವಾದ ತೆರದಲಿಚಿತ್ತೊಂದುಪಾಧಿುಂ ನಾನಾತ್ವವಾಗಿರೆ ಕೃತ್ರಿಮ'ದ ಕಡೆಗೊಳಿಸಿ ನಿಜದೊಳಿರಿಸಿ5ಬೀಜದಿಂದಾದ ತರು ಭಿನ್ನರೂಪಾಗಿ ಬೀಜದಾಕಾರ ಮಾಜಿದಂದದಲಿವ್ಯಾಜರ'ತ 'ಭ್ರಾಜಮಾನ ಬ್ರಹ್ಮಬೀಜದಿಂ ಮೂಜಗವಾದ ಬಗೆಯದೇನು 6ನಂಬಿದೆ ನಿನ್ನ ಚರಣಸರೋಜವ ಅಂಬುಜನಾಭ ಗುರು ವಾಸುದೇವನಂಬುಗೆಯನು ಕೊಟ್ಟು ಕರುಣವೆನ್ನೊಳಗಿಟ್ಟುುಂಬಿಟ್ಟು ಸಲ'ದ ವೆಂಕಟರಮಣ ನೀ7
--------------
ತಿಮ್ಮಪ್ಪದಾಸರು