ಒಟ್ಟು 2455 ಕಡೆಗಳಲ್ಲಿ , 118 ದಾಸರು , 1899 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳಾರತಿ ಕೀರ್ತನೆಗಳು259ಮಂಗಳಂ ಜಯ ಮಂಗಳಂ | ಜಯಮಂಗಳಂಪರಮೇಷ್ಟಿಜನಕ ಉಪೇಂದ್ರಾ ಪವೇದ ಉದ್ಧಾರ ಶ್ರೀಬಾದರಾಯಣಮಧು |ಸೂದನ ಅಮರರ ಕಾಯ್ದ ದಯಾಬ್ಧೀ 1ನಂದಗೋಪಾತ್ಮಜಸಿಂಧೂರಪಾಲ ಮು- |ಕುಂದಪಾಲಿಪುದೆನ್ನ ಇಂದೀವರಾಕ್ಷಾ 2ತುಂಗವಿಕ್ರಮನೆ ಕಾಳಿಂಗ ಮರ್ದನ ದೇವಾ |ಗಂಗ ಜನಕ ಶ್ರೀವಿಹಂಗವಾಹನನೇ 3ಸಣ್ಣರೂಪದಿ ಬಲಿಯನ್ನು ತುಳಿದ ಶ್ರೀ ವಾ- |ಮನ್ನ ಕ್ಷಿತಿಪಹರ ವನ್ನಜನಾಭಾ 4ಪ್ರಾಣೇಶ ವಿಠಲ ಶ್ರೀಮಾನಿನಿಪ್ರತಿಶತ|ಮೀನಾಂಕಲಾವಣ್ಯಭಾನುಪ್ರಕಾಶಾ 5
--------------
ಪ್ರಾಣೇಶದಾಸರು
ಮನೆಯೊಳಗಾಡೊ ಗೋವಿಂದ-ನೆರೆ-|ಮನೆಗಳಿಗೇಕೆ ಪೋಗುವೆಯೊ ಮುಕುಂದ ಪನೊಸಲಿಗೆ ತಿಲಕವನಿಡುವೆ-ಅಚ್ಚ-|ಹೊಸಬೆಣೆಯಿಕ್ಕಿ ಕಜ್ಜಾಯವ ಕೊಡುವೆ ||ಹಸನಾಧಾಭರಣಗಳಿಡುವೆ-ಚಿಕ್ಕ-|ಹಸುಳೆ ನಿನ್ನನು ನೋಡಿ ಸಂತೋಷಪಡುವೆ 1ಅಣ್ಣಯ್ಯ ಬಲರಾಮಸಹಿತ-ನೀ-|ನಿನ್ನೆಲ್ಲಿಯಾದರೂ ಆಡುವುದು ವಿಹಿತ ||ಹೆಣ್ಣುಗಳೇಕೋ ಸಂಗಾತ-ರಂಗ |ಬಿನ್ನಪಪರಿಪಾಲಿಸೊ ಜಗನ್ನಾಥ2ಜಾರನೆನಿಸಿಕೊಳಲೇಕೆ-ರಂಗ-|ಚೋರನೆನಿಸಿಕೊಂಬ ದೂರು ನಿನಗೇಕೆ ||ವಾರಿಜಾಕ್ಷಿಯರ ಕೂಡಲೇಕೆ-ನಮ್ಮ-|ಪುರಂದರವಿಠಲರಾಯ ಎಚ್ಚರಿಕೆ 3
--------------
ಪುರಂದರದಾಸರು
ಮರತೆ ಮರತೆ ಬಗಳ ಮಹಾಮಂತ್ರವಸುರತರುವಿಗೆ ತರುವಾದ ಬ್ರಹ್ಮಾಸ್ತ್ರವಪಭುಗುಭುಗಿಸಿ ಭುವನಗಳನ್ನೆಲ್ಲಾ ಪಾಲಿಪ ಮಂತ್ರಧಗಧಗಿಸಿ ಝಗ ಝಗಿಸಿ ನಿಗಿ ನಿಗಿವ ಮಂತ್ರಜಗದೊಡೆಯರಾದವರಿಗೆ ಒಡೆಯಳ ಮಂತ್ರತಗತಗನೆ ಶತಕೋಟಿರವಿಸೂಸುವ ಮಂತ್ರ1ಸರಸಿಜಾಸನ ತಾನೆ ಜಪಿಸುತಿಹ ಮಂತ್ರಹರಿಹರರುಅನವರತಸ್ಮರಿಸುವಾ ಮಂತ್ರಸುರಪ ಇಂದ್ರಾಗ್ನಿಗಳಿಗಭಯ ನೀಡಿಹ ಮಂತ್ರದುರುಳರಿಪು ವನಗಳಿಗೆದಾವಾಗ್ನಿಮಂತ್ರ2ಹರಿಯ ಸಮಭಾಗ್ಯ ಕೋ ಎಂದು ಕೊಡುವ ಮಂತ್ರಹರಗೆ ಸರಿಯಾದ ಸತ್ವವನೀವ ಮಂತ್ರಗುರುಚಿದಾನಂದ ತಾನಾದ ಬಗಳ ಮಹಾ ಮಂತ್ರಪರಬ್ರಹ್ಮ ಸತ್ಯ ಬ್ರಹ್ಮಾಸ್ತ್ರ ಮಂತ್ರ3
--------------
ಚಿದಾನಂದ ಅವಧೂತರು
ಮರೆಯದಿರು ಮರೆಯದಿರು ಗುರುರಾಯನ |ಲೋಕ ಪರಿಪಾಲಿಸುವಗುರುಸಾರ್ವಭೌಮನ್ನಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಪರಮೇಶ್ವರನು ತಾನೆಪರಮಪ್ರೇಮದಿಂದಗುರುರೂಪವನುಧರಿಸಿ ಧರೆಗೆ ಬಂದು, ತ್ವರದಿಂದ ಮಾನವರ ಮರವೆಯನುಪರಿಹರಿಸಿ | ಸ್ಥಿರ ಮುಕ್ತಿ ಸುಖವಿತ್ತು ಪೊರೆವ ಗುರುವರನ1ಕರುಣದಿಂ ಜನರ ರಕ್ಷಿಸುವ ಸದ್ಗುರುವರನ | ಶರಣು ಪೊಕ್ಕರೆಕೃಪಾ ಸುಧೆಗರೆವನ | ನಿರುತದಲಿ ಭಕುತರಿಗೆ |ನಿರತಿಶಯಸೌಖ್ಯವನು ಸರಿದಂತೆ ವರವಿತ್ತು | ಮೆರೆವ ದೇಶಿಕನ2ಕುವರ ಬಾರೆಂದಭಯಕರವಶಿರದಲ್ಲಿರಿಸಿ |ನೆರೆಸುಬೋಧೆಯಗೈದು ನರಭಾವ ಕಳೆದು |ಮರಣ ಭಯ ಹರಸಿ | ಬಹು ಹರುಷದಿಂದಿರುಎಂದ ಚಿರ ಸಿಂಧುಗಿಯವಾಸ |ಗುರುಶಂಕರನಪಾದ3
--------------
ಜಕ್ಕಪ್ಪಯ್ಯನವರು
ಮಾಧವಮಧುಸೂದನ- ಯಾದವಕುಲರನ್ನ ಯ-|ಶೋದೆ ಕರೆದಳು ಬಾರೆಂದು- ಮುದ್ದಿಸಿ ಮಗನ ಪಸಂಗಡಿಗರನೆಲ್ಲ ಬಿಟ್ಟು ಬಾರೈ ಚೆಲುವ |ಮುಂಗೈಯವಾಕು ಬೆರಳ ಹೊನ್ನುಂಗರ ||ಝಂಗಿಪ ಹುರಿಗೆಜ್ಜೆ ಉಡೆದಾರವನು ಕಂಡು |ಅಂಗನೆಯರು ನಿನ್ನನೊಯ್ವರೊ ||ಕಂಗಳ ಸಿರಿಯೆ ನೀ ಕಲ್ಪವೃಕ್ಷವೆ ಎಂದು |ಡಿಂಗರಿಗರು ಕಂಡರೆ ಬಿಡರೊ ನಿ- ||ನ್ನಂಘ್ರಿಯ ಮೇಲೆ ನೊಸಲನಿಡುವೆ ಕೃಷ್ಣ |ಕಂಗಳ ಸಿರಿಯೆ ಬಾರೋ- ರಂಗಯ್ಯ 1ಬಾಲಕರೊಡನಾಟ ಸಾಕು ಬಾ ಬಾರೈಯ |ನೀಲಾಂಗ ನಿನ್ನ ಮುಂದಲೆ ಮುತ್ತಿನರಳೆಲೆ ||ಕೀಲುಮಾಗಾಯಿ- ಮಾಣಿಕ ಪುಲಿಯುಗರ ಕಂಡು |ಸೋಲ್ವರೊ ನಿನಗೇಸೋ ಸೋಗೆಯರು ||ಶ್ರೀಲೋಲ ನಿನ್ನಲಿ ಕಂಸನ ತುಂಬಿದೊ-|ಡ್ಡೋಲಗದೊಳು ರಕ್ಕಸರು ಪಂಥವನಾಡೆ ||ವೀಳ್ಯವ ಪಿಡಿದೆ ಕೊಲುವೆನೆಂದು ನಿನ್ನಯ |ಕಾಲಿಗೆ ಎರಗುವೆ ಬಾರೊ-ರಂಗಯ್ಯ 2ಬೊಮ್ಮದ ಮರಿಯೆ ವಿಶ್ವವನೆಲ್ಲ ಹೃದಯದೊ-|ಳೊಮ್ಮೆ ತೋರುವನೆಂದು ಕಂಡು ನಾ ಬಲ್ಲೆ ||ಎಮ್ಮ ಮನಕೆ ಅಹಲ್ಲಾದನು ನೀನೆ |ಉಮ್ಮಯದಿಂ ಭಾಗವತರ ಪಾಲಿಸುತಿಪ್ಪ-||ಗಮ್ಯಗೋಚರ ಸಿರಿಪುರಂದರವಿಠಲ ತೊರೆ-|ದಮ್ಮೆಯ ಕೊಡುವೆನು ಬಾರೋ-ರಂಗಯ್ಯ 3
--------------
ಪುರಂದರದಾಸರು
ಮಾರ್ತಾಂಡಕುಲದೀಶ ದಶರಥನುದರದಿಪುತ್ರನಾಗಿಯೆ ಜನಿಸಿ ರಾಘವ ವಿಶ್ವಾಮಿತ್ರರೆಜÕವಪಾಲಿಸಿ ತಾಟಕೀ ಮುಖ್ಯಧೂರ್ತದೈತ್ಯರ ಮಥಿಸಿಅಹಲ್ಯೆದೇವಿಯ ಪಾಲಿಸಿ ಅರ್ಥಿಯಲಿ ವಿಥಿಲೇಖೆಗೆಗಮಿಸುತ ಪೃಥ್ವಿಜಾತೆಯನೊಲಿಸಿ ಮಾರ್ಗದಿ ಕಾರ್ತವೀರ್ಯಾಂತಕನ ಭಂಗಿಸಿ ತ್ವರಿತದಿಂದಯೋಧ್ಯೆಗೈಸಿದ ರಾಮಸೀತೆಗೆ ಮುತ್ತಿನಾರತೀಯ ಬೆಳಗೀರೆ ಶೋಭಾನೆ 1ಮಲತಾಯಿ ಕೈಕೆಯ ಮಾತಿಗೋಸುಗ ಪೋಗಿ ನೆಲಸಿದನಾರಣ್ಯದಿ ಪೋಗಿಮೃಗರಾಮ ತರಲುಪೋಗಲು ಭರದಿ ಸೀತೆಯ ರಾವಣೇಶನೊಯ್ಯಲುಮಾಯದೀ ರಾಮಲಕ್ಷ್ಮಣರ ವನದಿ ಚಲಿಸುತಲಿಕಪಿವರರ ಸ್ನೇಹದಿಜಲಧಿಬಂಧಿಸಿ ರಾವಣಾದ್ಯರಗೆಲಿದು ಶರಣಗೆ ಪಟ್ಟಗಟ್ಟುತ ಲಲನೆಸಹ ನಡೆತಂದಯೋಧ್ಯೆಗೆ ರಾಮಸೀತೆಗೆ ಹರಳಿನಾರತೀಯಾ ಬೆಳಗೀರೇ ಶೋಭಾನೆ 2ಚಂದದಿ ಧರಣಿಯ ಪಾಲಿಸುತಿರೆ ರಾಮನೊಂದಪವಾದವಕೇಳಿಸೀತೆಯ ಘೋರಾರಣ್ಯದಿ ಬಿಡಲು ಪೇಳಿ ಗರ್ಭಿಣಿ ಸೀತೆಬಂದ್ವಾಲ್ಮೀಕಿಯರೊಳು ಬಾಳಿ ಪಡೆದು ಲವಕುಶರನಲ್ಲಿಚಂದದಲಿ ಪಾಲಿಸುತಿರೆ ಗೋವಿಂದನೆಜ್ಞಾಶ್ವವನು ಬಂಧಿಸಿಬಂದು ಕಲಹದಿ ನಿಜವನರಿತಾ ನಂದನರ ಕರೆತಂದಯೋಧ್ಯೆಗೆರಾಮಸೀತೆಗೆ ಕುಂದಣದಾರತೀಂiÀi್ಞ ಬೆಳಗೀರೆ ಶೋಭಾನೆ 3
--------------
ಗೋವಿಂದದಾಸ
ಮುಖ್ಯ ಪ್ರಾಣನೆ ಕೈಯ ಮುಗಿದು ಬೇಡುವೆನಯ್ಯಭಕ್ತಿಪಾಲಿಸು ಹರಿಯ ಪಾದಬಳಿಯನಿನ್ನ ಮತ ಪೊಂದಿಸು ನಿನ್ನ ಚಿಹ್ನೆಯ ಧರಿಸುನೀನು ಪಿಡಿಯಲು ಹರಿಯು ತಾನು ಪಿಡಿವನುನವವಿಧ ನೀನು ಮುಖ್ಯಾಭಿಮಾನಿ
--------------
ಗೋಪಾಲದಾಸರು
ಯಾಕೆ ಕೈ ಬಿಡುವೆ ದೇವಾ |ತ್ರಿಜಗವನು ಸಾಕುವ ನೀನಭವ ||ಏಕೋ ಮೂರುತಿ ಶ್ರೀ ವೆಂಕಟಪತಿನಿನಗೆ ನಾ ಬೇಕಾದವನಲ್ಲವೆ ಸ್ವಾಮಿಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಬಾಲನ ಪತಿಕರಿಸಿ ಹಿರಣ್ಯಕನ | ಸೀಳಿ ರಕ್ಷಿಸಿದಂತೆ |ಶ್ರೀ ಲೋಲಾ ಗತಿಯೆಂಬೆ ||ಬ್ರಹ್ಮಸುತನಿಗೆಪಾಲನಮುದ್ರೆಯನಿತ್ತೆ ಸ್ವಾಮಿ |ಸಭೆಯೊಳು ದ್ರೌಪದಿ ಸ್ತುತಿಸೆ ನಿನ್ನ | ಅಭಿಮಾನ ಕಾಯ್ದೆ |ಗಂಡಇಭನಕ್ರನೊಳ .....................................ಧ್ರುವ ಅಂಬರೀಷಅಂಗದವಿಭೀಷಣ |ಪವನಜರುಕ್ಮಾಂಗದ |ಅವರಪಾಲಿಸಿದಂತೆ ರಕ್ಷಿಸು ಬಿಡದೆ ಎನ್ನ ||ಭವಹರಾ ಶ್ರೀ ಶಂಕರನಾತ್ಮಸಖಾ ||
--------------
ಜಕ್ಕಪ್ಪಯ್ಯನವರು
ಯಾಕೆ ಮೂಕನಾದೆಲೋ ಗುರುವೆ ನೀ -ನ್ಯಾಕೆ ಮೂಕನಾದ್ಯೋ ಪಸಾಕುವೊರಾರಯ್ಯಾ ಶ್ರೀಕರ ರಾಘವೇಂದ್ರ ಅ.ಪಮಂದಿಯಂದಿದ ಎನ್ನ - ಮಂದನ ಮಾಡೀಗ 1ಬೇಕಾಗದಿದ್ದರೆನ್ನ - ಯಾಕೆ ಕೈಯಾ ಪಿಡಿದಿಕಾಕುಜನರೊಳೆನ್ನ- ನೂಕಿ ಬಿಟ್ಟು ಈಗ2ನಿನ್ನಂಥ ಕರುಣಿಲ್ಲ - ಎನ್ನಂಥ ಕೃಪಣಿಲ್ಲಘನ್ನ ಮಹಿಮ ನೀ - ಎನ್ನನು ಬಿಟ್ಟೀಗ 3ಇಂದುನೀ ಬಿಟ್ಟರೆನ್ನ- ಮುಂದೆ ಕಾಯುವರ್ಯಾರೋ4ಜನ್ಯಾನು - ನಾನಯ್ಯ - ಎನ್ನ ಜನಕನು ನೀನುಮನ್ನಿಸು ನೀ ನಿತ್ಯಾ - ನನ್ನ ಶರಣನಲ್ಲೆ 5ಈಗ ಪಾಲಿಸದರೆ-ಯೋಗಿಕುಲವರ್ಯರಾಘವೇಂದ್ರನೇಭವ- ಸಾಗುವಧ್ಯಾಗಯ್ಯ6ನಾಥನು ನೀನಯ್ಯಾ - ನಾಥನು ನಾನಯ್ಯಾಪಾಥೋಜ ಗುರುಜಗ -ನ್ನಾಥ ವಿಠಲ ಪ್ರೀಯ 7
--------------
ಗುರುಜಗನ್ನಾಥದಾಸರು
ಯಾಕೆನ್ನೊಳು ಪಂಥಾ ಶ್ರೀಕಾಂತಾ ಪ.ಯಾಕೆ ಪಂಥ ಲೋಕೈಕನಾಥ ದಿ-ವಾಕರಕೋಟಿಪ್ರಭಾಕರ ತೇಜನೇ ಅ.ಪ.ಪೂರ್ವಾರ್ಜಿತ ಕರ್ಮದಿಂದಲಿಇರ್ವೆನು ನರಜನ್ಮ ಧರಿಸುತಗರ್ವದಿಂದ ಗಜರಾಜನಂತೆ ಮತಿಮರ್ವೆಯಾಯ್ತು ನಿನ್ನೋರ್ವನ ನಂಬದೆಗರ್ವಮದೋನ್ಮತ್ತದಿ ನಡೆದೆನುಉರ್ವಿಯೊಳೀ ತೆರದಿ ಇದ್ದೆನಾದರೂಸರ್ವಥಾ ಈಗ ನಿಗರ್ವಿಯಾದೆಯಹಪರ್ವತವಾಸ ಸುಪರ್ವಾಣ ವಂದಿತ 1ಯಾರಿಗಳವಲ್ಲಮಾಯಾಕಾರ ಮಮತೆ ಸಲ್ಲ ಸಂತತಸಾರಸಾಕ್ಷ ಸಂಸಾರಾರ್ಣವದಿಂದಪಾರಗೈದು ಕರುಣಾರಸ ಸುರಿವುದುಭಾರವಾಯ್ತೆ ನಿನಗೆನತಮಮಕಾರ ಹೋಯ್ತೆ ಕಡೆಗೆ ಏನಿದುಭಾರಿ ಭಾರಿಶ್ರುತಿಸಾರುವುದೈ ದಯವಾರಿಧಿನೀನಿರಲ್ಯಾರಿಗುಸುರುವುದು2ಬಾಲತ್ವದ ಬಲೆಗೆ ದ್ರವ್ಯದಶೀಲವಿತ್ತೆ ಎನಗೆ ಆದರೂಪಾಲಿಸುವರೆ ನಿನಗಾಲಸ್ಯವೆ ಕರು-ಣಾಳು ಶ್ರೀಲಕ್ಷ್ಮೀಲೋಲ ಮಮ ಮನಕೆಸಾಲದೆರಡು ಮೂರು ನಿನ್ನಯಮೂಲ ಸಹಿತ ತೋರು ಮುನಿಕುಲಪಾಲ ಶ್ರೀಲಕ್ಷ್ಮೀನಾರಾಯಣಗುಣಶೀಲ ಕಾರ್ಕಳ ನಗರಾಲಯವಾಸನೇ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯಾದವರನ್ನ ಪಾಲಿಸುವ ಮುನ್ನಕರುಣ ಕಟಾಕ್ಷದಿನೀ ದಯ ಮಾಡೊ ಪ.ಮತ್ತೆ ಭಾಗೀರಥಿ ಜಲವಮಿತ್ರೆ ದ್ರೌಪತಿ ಎರಿಯೆಅರ್ಥಿಲೆಪಾದತೊಳೆದರುಅರ್ಥಿಲೆಪಾದತೊಳೆದು ಪ್ರಾರ್ಥಿಸಿದರುಚಿತ್ತಕ್ಕೆ ತಂದು ಕೈಕೊಳ್ಳೊ 1ಹರದಿರುಕ್ಮಿಣಿಗೆರಗಿದ್ರೌಪತಿ ಭದ್ರಾಆದರದಿಂದಪಾದತೊಳೆದರುಆದರದಿಂದಪಾದತೊಳೆದು ಪ್ರಾರ್ಥಿಸಿದರುಶ್ರೀದೇವಿ ಪೂಜೆ ಕೈಕೊಳ್ಳೆ 2ಪಂಚ ಭಕ್ಷ್ಯಪರಮಾನ್ನಪಾಂಚಾಲಿ ಬಡಿಸಿದಳುಪಂಚಪಾಂಡವರ ಸಹಿತಾಗಿಪಂಚಪಾಂಡವರ ಸಹಿತಾಗಿ ಶ್ರೀಕೃಷ್ಣಚಂಚಲಾಗದಲೆ ಸವಿದುಂಡ 3ಅಕ್ಕ ರುಕ್ಮಿಣಿ ಭಾಮೆಮಿಕ್ಕ ತಂಗಿಯರ ಸಹಿತಸಖ್ಯ ಭಾವದಲಿ ಉಣುತಿರೆಸಖ್ಯ ಭಾವದಲಿ ಉಣುತಿರೆ ಹರುಷದಿದೇವಕ್ಕÀಳು ನೋಡಿ ಬೆರಗಾಗಿ 4ಇಂದುರಾಮೇಶ ತಾನುಮಿಂದು ಮಡಿಯನುಟ್ಟುಬಂಧು ಜನಸಹಿತ ಸವಿದುಂಡಬಂಧು ಜನಸಹಿತ ಸವಿದುಂಡ ಐವರಿಗೆಆನಂದ ಬಡಿಸಿದನು ಅತಿ ಬ್ಯಾಗ 5
--------------
ಗಲಗಲಿಅವ್ವನವರು
ರಕ್ಷಿಸೆನ್ನ ರಕ್ಷಿಸೆನ್ನನು ಸುರಯಕ್ಷರಕ್ಷಕ ಮಹಾದಕ್ಷ ಯತಿ ಮುನಿ ಪಕ್ಷ ವಿರೂಪಾಕ್ಷಕುಕ್ಷಿಯೊಳು ನೀ ನೆಲಸಿ ಎನ್ನ ಕೃಪೇಕ್ಷಣದಿ ಕೈವಿಡಿದುರಕ್ಷಿಪಅಕ್ಷಯರಾಕ್ಷಸಾಂತಕ ಪಕ್ಷಿವಾಹನ ದೇವಪ್ರಿಯಪವೇದವೇದ್ಯಸುಜನರಕ್ಷ ನಾದಭೇದ್ಯಸಾಧನ ನಾಲ್ಕನು ಸಾಧಿಪ ಸಾಧಕನಾದ ದೇವನೆ ನಿನ್ನ ಪಾದವ ಸ್ತುತಿಪೆನುವೇದ ಸ್ಮøತಿಗಳು ಆದಿಶೇಷನುಸಾಧಿಸುತ ಭೇದಿಸಿಯೆ ನಿನ್ನನುಹಾದಿ ಕಾಣದು ಪೊಗಳ್ವಡೆನಗೆ ಅರಿಯದಾ-ಗಿದೆ ಅನಾದಿ ಮೂರುತಿ1ಹಾರಹೀರ ಫಲಿಸಿದಂಥಾ ಶೂರ ವೀರಸಾರವಿಲ್ಲದ ಸಂಸಾರ ದೂರ ವಿ-ದೂರ ಭಯ ಜರ್ಜರ ಕರುಣಾಕರಸಾರಪೂರಿತಕಾರಣಾತ್ಮಕಮಾರವೈರಿಯೆ ಧೀರ ಜಗದುದ್ಧಾರ ಎನಗೆತೋರಿ ಶಕುತಿಯಸಾರಹೃದಯನೆಗೌರಿ ವಲ್ಲಭನೆ2ಪರಮಪುರುಷ ಪಾರ್ವತೀಪ್ರಿಯಶರಣ ಹೃದಯ ನಿರುತ ಪಾಲಿಪ ಶಂಭುಹರಪಿನಾಕಿಶಿವವರಚಿದಾನಂದಗುರುಅವಧೂತಾತ್ಮ ನಿರುಪಮ ನಿರ್ಮಾಯನಿರವಯ ನಿರುತಪರಮಶಿವ ವಿಶ್ವಹೃದಯಪರತರಾತ್ಮಕಪರಮಮಂಗಳಪರಮಚೈತನ್ಯಾತ್ಮ ವಸ್ತುವೇ3
--------------
ಚಿದಾನಂದ ಅವಧೂತರು
ರಕ್ಷಿಸೋ ಲೋಕನಾಯಕನೆ-ನೀ ಎನ್ನ-ರಕ್ಷಿಸೋ ಲೋಕನಾಯಕನೇ ಪಎಷ್ಟೆಷ್ಟು ಜನ್ಮ ಕಳೆದೆನೋ ಇನ್ನೆಷ್ಟೆಷ್ಟು ಜನ್ಮ ಪಡೆವೆನೋ ||ಕಷ್ಟವ ಪಡಲಾರೆ ಕೃಷ್ಣ ಕೃಪೆಯನಿಟ್ಟುಇಷ್ಟವ ಪಾಲಿಸು ಇಭರಾಜವರದನೆ 1ಬಾಲತನದಿ ಬಹು ಬೆಂದೆನೋ ನಾನಾಲೀಲೆಯಿಂದಲಿಕಾಲಕಳೆದೆನೋ ||ಲೋಲಲೋಚನ ಎನ್ನ ಮೊರೆಯ ಕೇಳುತ ಬೇಗಜಾಲವ ಮಾಡದೆ ಪಾಲಿಸೈ ನರಹರಿ 2ಮುದುಕನಾಗಿ ಚಿಂತೆಪಡುವೆನೋ ನಾಕದಡು ದುಃಖವ ಪಡಲಾರೆನೋ ||ಸದರವಲ್ಲವು ಶ್ರೀಪುರಂದರವಿಠಲಮುದದಿಂದ ರಕ್ಷಿಸೊ ಖಗರಾಜಗಮನ 3
--------------
ಪುರಂದರದಾಸರು
ರಕ್ಷೀಸಬೇಕೆಮ್ಮನನುದಿನದಲ್ಲಿ |ಪಕ್ಷಿರಾಜನೆ ಹರೀಸ್ಯಂದನಾ ಸ್ವಾಮಿ ಪಇಂದ್ರಲೋಕಕ್ಕೆ ಪೋಗಿ ಕಲಹ ಮಾಡಿಪೀಯೂಷ|ತಂದನುಜರಿಗಿತ್ತ ಧೀರನೆ |ಸಿಂಧೂವಿನೊಳಗಿದ್ದಕೂರ್ಮಗಜಮಂದಿಯಾ |ತಿಂದು ದಕ್ಕಿಸಿಕೊಂಡ ವೀರನೇ 1ಪಾದಪ ಮುರಿದು ವಾಲಖಿಲ್ಲ್ಯೆರ ಪೋಷಿಸಿ |ಮೋದದಿಂದ ವರವು ಪಡಿಯೋ ||ಮಾಧವನಂಘ್ರಿ ಕಮಲದೊಳಗೆ ಇಟ್ಟ |ಹೇ ದಯಾಂಬುಧಿ ನಿನಗೆಣೆ ಯಾರೋ 2ಅರುಣಾನುಜ ಮಾತೆಯ ಬಯಕೆ ಪೂರೈಸೀದ |ಪರಮಸಮರ್ಥ ಭಕ್ತವತ್ಸಲಾ ||ಉರಗಾಶನನೆ ನಿನ್ನ ಪ್ರಾರ್ಥಿಸುವೆನುನಿತ್ಯ|ಹರಿಸೇವೆ ವಿನಹ ಮತ್ತೊಂದೊಲ್ಲೆನೊ 3ಪ್ಲವಗರ ಪಾಲಿಸಿದೆ ರಘುಜಾನ ಒಲಿಸಿದೆ |ತವಕಬಲಿವೈದ ಮುಕುಟ ತಂದೆ ||ದಿವಿಜರಿಗೆ ಸಹಾಯವಾದೆ ವಿಪ್ರರ ಕಾಯ್ದೆ |ಅವರಾರೇನರಿಯರೊ ನಿನ್ನ ಲೀಲೆ 4ಶ್ರೀನಾಥನ ಪಾದಾಬ್ಜದಲ್ಲಿನಿರತಮನ |ತಾನಿರುವಂತಾಗಲಿ ಖೇಚರಾ ||ಮೌನಿ ಕಶ್ಯಪ ಜಾತಾ ಲಾಲಿಸುವದೆನ್ನ ಮಾತಾ |ಪ್ರಾಣೇಶ ವಿಠಲನ ನಿಜದೂತ 5
--------------
ಪ್ರಾಣೇಶದಾಸರು
ರಂಗನಹುದೋ ನೀನು ಕನಕಾಚಲರಂಗನಹುದೋ ನೀನುತುಂಗಮಹಿಮ ಕೃ-ಪಾಂಗ ಚೆಲುವ ಮುದ್ದು ರಂಗಲಕ್ಷ್ಮಿಯ ರಮ-ಣಾಂಗ ಜಪಿತಮೂರ್ತಿಪದುರುಳರಕ್ಕಸನು ವೇದ ಕದ್ದೊಯ್ಯೆಮೀನಾಗಿ ತಂದೆಯದನ ಕೂರ್ಮನಾಗಿಗಿರಿಯ ಪೊತ್ತು ಎರೆದೆ ಸುರರಿಗೆ ಅಮೃತವವರಾಹನಾಗಿ ಧರೆಯ ಕದ್ದವನಶಿರವ ಖಂಡಿಸಿ ನೃಕೇಸರಿಯಾಗಿಯೆಕಂಬವನೊಡೆದು ನಿಶಾಚರನ ಸಂಹ-ರಿಸಿದೆ ರಣಧೀರಮಾಧವ1ಪುಟ್ಟ ಮಾನವನಾಗಿ ಬಲಿಯ ದಾನವ ಬೇಡಿಅಷ್ಟು ಬ್ರಹ್ಮಾಂಡವನೆಲ್ಲಈರಡಿಮಾಡಿತುಟ್ಟ ತುದಿಗೆ ಅವನ ಶಿರದ ಮೇ-ಲಿಟ್ಟು ದ್ವಾರವ ಕಾಯ್ದನಾ ಭೂಸುರರಿಗೆಕೊಟ್ಟ ಮೇದಿನಿಯ ದಾನವ ಭಳಿರೆ ಜಗಜಟ್ಟಿ ಪರಶುರಾಮ ಕ್ಷತ್ರಿಯ ಛೇದನ2ದಶರಥನ ಸುತನಾಗಿ ವಸುಧಜೆಯ ಕಳೆದುಅಸಮ ಕಪಿವೀರರ ನೆರಪಿ ಸೇತುವೆಕಟ್ಟಿಅಸದಳ ರಾಕ್ಷಸರ ಇಂದ್ರಜಿತುದಶಶಿರಅತಿಕಾಯರ ಕುಂಭಕರ್ಣಅಸಹಾಯ ರಣಶೂರರ ಛೇದಿಸಿ ಸೀತಾಶಶಿಮುಖಿಯ ಕರೆತಂದ ರಘುರಾಮಕಂಠೀರವ3ದೇವಕೀಸುತನಾಗಿ ಬಾಣನ ಭಂಗಿಸಿಮಾವ ಕಂಸನ ಶಿಶುಪಾಲ ನರಕಾಸುರ ಕೌ-ರವ ವೀರರನು ಕೊಂದು ಪಾಂಡುರಾಜನ ಪುತ್ರ-ರನು ಪಾಲಿಸಿ ಪೃಥವಿ ಪಾವನರಾದರನು ರಕ್ಷಿಸಿ ಬೌ-ದ್ಧಾವತಾರ ತಾನಾಗಿ ವ್ರತ ಭಂಗಿಸಿದೆ ನೀನು4ತೇಜಿಯನೇರಿ ನೇಣನೆ ಹಿಡಿದು ಪಾಪದಬೀಜವನುರುಪಿ ಪುಣ್ಯದ ಬಿತ್ತನುರುಹಿಯೆಸೋಜಿಗಸಹಸ್ರರ ಕನಕಗಿರಿಮೂಜಗದೊಳು ವಿಸ್ತಾರವಾಗಿಹಘನತೇಜೋ ಮೂರುತಿ ಗಂಭೀರ ಸಿದ್ಧ ಪರ್ವತರಾಜ ಸದ್ಗುರು ಚಿದಾನಂದಾವಧೂತ5
--------------
ಚಿದಾನಂದ ಅವಧೂತರು