ಒಟ್ಟು 2557 ಕಡೆಗಳಲ್ಲಿ , 114 ದಾಸರು , 1974 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೆದ್ದೆಯೊ ಹನುಮಂತಾ-ಅಸುರರಒದ್ದೆಯೊ ಬಲವಂತಾ ಪಬದ್ಧಾಂಜಲಿಯಿಂದ ರಘುಪತಿ ಪಾದವಹೃದ್ಯದಿ ಭಜನೆ ಮಾಡುವ ಬುದ್ಧಿವಂತ ಅ.ಪಅಂಜನಿಸುತನೀತ-ಲಂಕಾಪುರದಿ-ಅಕ್ಷಯನ ಕೊಂದಾತ ||ಕಂಜಾಕ್ಷಿ ಸೀತೆಯ ಕಂಡು ಮುದ್ರಿಕೆಯಿತ್ತು |ಮಂಜುಳವಾರೆಯ ತಂದ ರಾಮನ ದೂತ 1ಈರೇಳು ಜಗದೊಳಗೆ-ಇನ್ನು ಮತ್ತೆ ಯಾರು ಸರಿಯೊ ನಿನಗೆವೀರ ಮಹಾಬಲ ಶೂರ ಪರಾಕ್ರಮ |ಧೀರಸಮೀರಉದಾರ ಗಂಭೀರ2ವಾಂಛಿತಫಲವೀವ-ನಾದ ಮುಖ್ಯ- ಪ್ರಾಣ ಮಹಾನುಭಾವ ||ಕಿಂಚಿತ್ತು ಕಷ್ಟವ ಪಡಲೀಸ ಭಕ್ತರ್ಗೆ |ಪಾಂಚಜನ್ಯಪುರಂದರವಿಠಲದಾಸ3
--------------
ಪುರಂದರದಾಸರು
ಗೋವಿಂದ ನಮೋ ಗೋವಿಂದ ನಮೋ ಗೋವಿಂದ - ನಾರಾಯಣ |ಗೋವರ್ಧನ ಗಿರಿಯೆತ್ತಿದ ಗೋವಿಂದ - ನಮ್ಮ ರಕ್ಷಿಸೊ ಪ.ಅರ್ಥವಾರಿಗೆ ಪುತ್ರರಾರಿಗೆ ಮಿತ್ರಬಾಂಧವರಾರಿಗೆ |ಕರ್ತು ಯಮನವರೆಳೆದು ಒಯ್ಯಲು ಅರ್ಥ- ಪುತ್ರರು ಕಾಯ್ವರೆ 1ಮಂಚ ಬಾರದು ಮಡದಿ ಬಾರಳು ಕಂಚುಗನ್ನಡಿ ಬಾರದು |ಸಂಚಿತಾರ್ಥವ ದ್ರವ್ಯಬಾರದು ಮುಂಚೆ ಮಾಡಿರಿ ಧರ್ಮವ 2ಒಡವೆಯಾಸೆಗೆ ಒಡಲ ಕಿಚ್ಚಿಗೆ ಮಡದಿ ಬೆನ್ನಲ್ಲಿ ಬಾಹಳು |ಬಿಡದೆ ಯಮನವರೆಳದು ಒಯ್ಯಲು ಎಡವಿಬಿದ್ದಿತು ನಾಲಗೆ 3ಪ್ರಾಣವಲ್ಲಭೆ ತನ್ನ ಪುರುಷನ ಕಾಣದೆಯೆ ನಿಲಲಾರಳು |ಪ್ರಾಣ ಹೋಗಲು ಮುಟ್ಟಲಂಜುವಳುಜಾಣೆ ಕರೆದರೆ ಬಾರಳು 4ತಂದು ಬಂದರೆ ತನ್ನ ಪುರುಷಗೆ ಬನ್ನಿ ಬಳಲಿದಿರೆಂಬಳು |ಒಂದು ದಿನದಲಿ ತಾರದಿದ್ದರೆ ಹಂದಿನಾಯಂತೆ ಕೆಲೆವಳು 5ಉಂಟುಕಾಲಕೆ ನಂಟರಿಷ್ಟರು ಬಂಟರಾಗಿಯೆ ಕಾಯ್ವರು |ಕಂಟಕರು ಯಮನವರು ಎಳೆವಾಗ ನಂಟರಿಷ್ಟರು ಬಾರರು 6ದಿಟ್ಟತನದಲಿ ಪಟ್ಟವಾಳಿದ ಮೆಟ್ಟಿ ದಿತಿಜರಸೀಳಿದ |ಮುಟ್ಟಿ ಭಜಿಸಿರೊ ಶ್ರೀ ಪುರಂದರವಿಠಲೇಶನ ಚರಣವ 7
--------------
ಪುರಂದರದಾಸರು
ಘಟಿಕಾಚಲದಿ ನಿಂತ-ಶ್ರೀ ಹನುಮಂತ ಪಘಟಿಕಾಚಲದಿ ನಿಂತ-ಪಟು ಹನುಮಂತ ತನ್ನಪಠನೆಯ ಮಾಡಲುತ್ಕಟದಿ ಪೊರೆವೆನೆಂದು ಅ.ಪಚತುರ ಯುಗದಿ ತಾನು-ಮುಖ್ಯ ಪ್ರಾಣ- ಚತುರ ಮುಖನಯ್ಯನ |ಚತುರಮೂರ್ತಿಗಳನು ಚತುರತನದಿ ಭಜಿಸಿ |ಚತುರ್ಮುಖವಾಣಿ ಜಗಕೆ ಚತುರ್ವಿಧ ಫಲವ ಕೊಡುತ 1ಸರಸಿಜಭವಗೋಸುಗ- ಕರ್ಮಠ ದೂಮವರಚಕ್ರತೀರ್ಥಸರ |ಮೆರೆವ ಛಲದಿನಿತ್ಯನರಹರಿಗೆದುರಾಗಿಸ್ಥಿರ ಯೋಗಾಸನದಲಿ ಕರೆದು ವರಗಳ ಕೊಡುತ 2ಶಂಖಚಕ್ರವ ಧರಿಸಿ-ಭಕ್ತರ ಮನಃ-ಪಂಕವ ಪರಿಹರಿಸಿ |ಪಂಕಜನಾಭಶ್ರೀ ಪುರಂದರವಿಠಲನ |ಬಿಂಕದ ಸೇವಕ ಸಂಕಟ ಕಳೆಯುತ 3
--------------
ಪುರಂದರದಾಸರು
ಚೌತಿಯ ದಿವಸರಂಭೆ : ವಾರಿಜಗಂಧಿನಿ ನೋಡಿತ್ತ ಶ್ರುತಿ-ಮೌರಿರಭಸದಿ ಲಕ್ಷ್ಮೀಕಾಂತಭೂರಿವೈಭವದಿ ಪೊರಟನೆತ್ತ ಯಾವಕಾರಣವೆಂದು ಪೇಳೆಲೆ ಸತ್ಯ 1ದೇವರ ಪೂಜೆಗೋಸುಗ ಬಂದಪಾವನಮೂರ್ತಿಯಾದುದರಿಂದ ನಮ್ಮಕಾವನು ಕರುಣಾಕಟಾಕ್ಷದಿಂದ 2ರಂಭೆ : ನೂತನವಾಯ್ತೆ ಕೇಳಲೆ ಜಾಣೆ ಜಗ-ನ್ನಾಥನಿಗ್ಯಾವ ಕುಲವು ಕಾಣೆರೀತಿಯನರುಹಬೇಕೆಲೆ ಬಾಲೆ ಸರ್ವಚೇತನಾತ್ಮನ ನಾಟಕದ ಲೀಲೆ 3ಕೊಂಡಕಾರಣದಿ ಪೂಜೆಗಳೆಲ್ಲಕಂಡು ಪೊಗಳಲು ಕವಿಗು ಸಲ್ಲ ಇನ್ನುಪುಂಡರೀಕಾಕ್ಷನವನೆ ಬಲ್ಲ 4ರಂಭೆ : ರಾಜವದನೆ ಪೂಜೆಯಾದ ಮೇಲೆ ಅಂ-ಭೋಜನಾಭನು ತಾಕ್ಷ್ರ್ಯನ ಮೇಲೆರಾಜಬೀದಿಯೊಳ್ ಬರುವದೇನೆ ಇಂಥಸೋಜಿಗವೇನು ಪೇಳೆಲೆ ಜಾಣೆ 5ಬಟೆನಿಸ್ಸಾಳರವದಿ ಬರುವ ಚಂದಸಟೆಯಲ್ಲ ಕೇಳು ಕರುಣದಿಂದ ನಮ್ಮಕಟಕರಕ್ಷಿಸಲು ಬರುವ ಗೋವಿಂದ6ರಂಭೆ : ಬಳಿಕ ಪಲ್ಲಂಕಿಯೇರಿದ ಕಾಣೆ ಜನ-ಗಲಭೆಗಳಿಂದ ಪೋಗುವದೇನೆನಲವಿನಿಂದಲಿ ಪೊರಟೆಲ್ಲಿಗೆನೆ ಮಹಾ-ಜಲಜನಾಭನ ಮಹಿಮೆಯ ಜಾಣೆ 7ದೀಪವೆಂದೆನುತ ಭಕ್ತರು ಮುದದಿಶ್ರೀಪರಮಾತ್ಮ ವಿಲಾಸದಿ ಭಕ್ತ-ರಾಪೇಕ್ಷೆಗಳನು ಸಲ್ಲಿಸುವಂದದಿ 8ರಂಭೆ : ಸೋಮಾರ್ಕಜ್ಯೋತಿಹಿಲಾಲುಗಳು ಜನ-ಸ್ತೋಮಜೇನುಂಡೆಬಿರುಸುಮಿಗಿಲುವ್ಯೋಮಕೇಶಗಳ ಪೊಗಳತೀರದು ಸರಿಭೂಮಿಯೊಳ್ ಕಾಣೆನೆಂಬಂತಾದುದು 9ಅಮಮ ಇದೇನೆ ಇಂದಿನ ಲೀಲೆ ಜನ-ರಮರಿಕೊಂಡಿಹರೇನಿದು ಬಾಲೆಸಮವಿಲ್ಲ ಇಂತೀ ವೈಭೋಗಕ್ಕೆಲೆ ನ-ಮ್ಮಮರಾವತಿಗಿಂತಧಿಕ ಬಾಲೆ 10ಲಾರ್ತಿ ಹರಣವಾಗ್ವದು ಜಾಣೆಕೀರ್ತಿತರಂಗಮಾಗಿಹುದೇನೆ ಶೇಷ-ತೀರ್ಥವೆಂದರೆ ಕೇಳಿದು ಪ್ರವೀಣೆ 11ರಂಭೆ :ಏಸುದೊಡ್ಡಿತೆ ಕೇಳಲೆ ಬಾಲೆ ಅನಂ-ತಾಸನದಂತೆ ಮರೆವುದಲ್ಲೇನಾಸಿರ ದೀಪಸೋಪಾನದಲೆ ಮಹಾ-ಶೇಷನಿಹನು ಮಧ್ಯದೊಳಿಲ್ಲೇ 12ಊರ್ವಶಿ :ಕರುಣಾಕರನು ನಮ್ಮೆಲ್ಲರನುನಿತ್ಯಪೊರೆಯಲೋಸುಗ ಬಂದನು ತಾನುಸುರುಚಿರ ಮಂಟಪವೇರಿದನು ಭೂ-ಸುರರಿಂದ ವೇದಘೋಷವ ಕೇಳ್ವನು 13ದೃಷ್ಟಾಂತವಾಗಿ ಪೇಳುವದೇನೆ ಬ್ರಹ್ಮಸೃಷ್ಟಿಗೆ ಪೊಸತಾಗಿಹುದು ಕಾಣೆಕಟ್ಟಿಸಿದವನು ಪುಣ್ಯೋತ್ತಮನು ಪರ-ಮೇಷ್ಠಿ ಜನಕನ ಕೃಪೆಯಿನ್ನೇನು 14ಭಜಕರ ಮುಖದಿಂದೆಲ್ಲ ತಾನು ಭೂ-ಭುಜನಾಗಿ ನಡೆಸುವನಿದನೆಲ್ಲನುನಿಜವಾಗಿನಿತ್ಯಸಾಕಾರವನು ತೋರಿತ್ರಿಜಗವನೆಲ್ಲ ರಕ್ಷಿಸುತಿಹನು 15ರಂಭೆ : ಬಿಡದೆ ಇನ್ನೊಂದು ಕೇಳುವೆ ನಾರಿ ಜಗ-ದೊಡೆಯ ಪೊರಡುವ ಕಾಲದಿ ಭಾರಿಬೆಡಿಖಂಬ ಧ್ವನಿಯು ಇದೇನೆ ಪೇಳೆ ಇಂಥಕಡು ಬೆಡಗನು ಉಸುರೆಲೆ ಬಾಲೆ 16ಊರ್ವಶಿ: ಜನರು ಎಲ್ಯಾದರಂಜಿದÀ ಭಯವ ತಮ್ಮತನುವಿಗೆ ಸೋಂಕಲದನೆಲ್ಲವಮನದಿ ಝುಮ್ಮೆನಿಸಿ ಬೆಚ್ಚೋಡಿಸುವ ಖಂಬ-ಧ್ವನಿಯೆಸಗಿದರು ಕೇಳಿದರಂದವ 17ತಿರುಗಿಯೇರಿದನು ಪಲ್ಲಂಕಿಯಲ್ಲಿ ಸುತ್ತು-ಬರುವನು ವೇದನಿನಾದದಲಿವರರತ್ನ ಖಚಿತ ಮಂಟಪದಲ್ಲಿ ನಿಂತನಿರವದಿ ಸುಖದಾಯಕನಲ್ಲಿ 18ಶರಣರ ಪಾಪ ಮನಕೆ ತಾರ ದುಡಿದವರಭೇರಿಗೆರೆವ ಬಿಸಿನೀರವರಲಕ್ಷ್ಮೀನಾರಾಯಣಧೀರ ಸುರು-ಚಿರ ಸಿಂಹಾಸನವೇರಿದ ವೀರ 19
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯ ಜಯಜಗತ್ಪ್ರಾಣತ್ರಾಣ ಜನನ ಮರಣಕ್ಲೇಶಹರಣಜಯ ಪಾವನ ದಿವ್ಯಚರಣ ಪ.ಸರ್ವದೇವತಾಗ್ರಗಣ್ಯ ಸರ್ವಜೀವೋತ್ತಮ ಶರಣ್ಯಪೂರ್ವಾಮರಪುರದಹನ ಪೂರ್ಣಗುಣಗಣ 1ವೈಷ್ಣವ ಜನ ಶಿರೋರತುನ ವಿಶ್ವಾಂತರ್ಗತಭಾವನತೀಕ್ಷ್ಣಮನೋದುಷ್ಟದಮನ ಶಿಷ್ಟಜೀವನ 2ಭಕುತಿಜ್ಞಾನನಿಧಿ ಕಲ್ಯಾಣ ಭಜಕಜನಭವಾಬ್ಧಿತರಣಲಕುಮಿನಾರಾಯಣಶರಣ ಬಕವಿದಾರಣ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಲಧಿತಕ್ಕದೊ ನಿನ್ನಳಿಯಗೂ ನಿನಗೂ |ಹಲವು ಬಗೆಯಿಂದಲಿ ಪರೀಕ್ಷಿಯನು ಮಾಡಿದರೆ ಪಮೊದಲೆ ತಿಳದಷ್ಟು ನಿನ್ನ ಮಹತ್ಮಿ ವರ್ಣಿಸುವೆ |ತುದಿಗಂಡು ಬಲ್ಲೆನೇ ಅಧಮ ನಾನೂ ||ಎದುರಿಗಂಬುವದಾಡಿಕೊಂಡ ಬಗೆ ಬ್ಯಾರೆಲ್ಲೀ |ಮುದದಿಂದ ದಯಮಾಡಿ ಕೇಳೊ ರತ್ನಾಕರನೇ 1ನಿನ್ನಿಂದ ಹುಟ್ಟಿಹುದು ವಿಷವು, ಗುರುವಿನ ಪತ್ನಿ |ಯನ್ನು ಸ್ವೀಕರಿಸಿದನು ನಿನ್ನ ಮಗನೂ ||ಘನ್ನತರ ಮಕರಾದಿಗಳು ನಿನ್ನ ಪರಿವಾರ |ಇನ್ನೆಷ್ಟು ಪೇಳಲಿ ಚರಿತ್ರ ಪಾರಾವಾರ 2ನಿನ ಒಡಲಿಗೆಷ್ಟಾದರನ್ನ ಸಾಕೆನಿಸದೂ |ದಣಿದು ಬಂದವರಿಗಾಶ್ರಯವು ಕಾಣೇ ||ಉಣಲಿಕ್ಕೆ ಅನ್ನೆಂಬದೆಂಟನೆ ರಸದಂತೆ |ಘನಖ್ಯಾತಿ ದೂರದಲಿ ಬಳಿಗೆ ಬರಲಿಂತಿಹದು 3ಪ್ರೀತಿಯಂ ಬಂದವರು, ಗ್ರಹಣ ವೈಧೃತಿ ವೇತೀ |ಪಾತದಲಿ ನಿನ ದರುಶನಾಗಬೇಕೂ ||ಭೂತ ಬಡದವರಂತೆ ನಿನ್ನ ಕಲ್ಲುಗಳಿಂದ |ಘಾತಿಸಲಿ ಬೇಕು ನೋಡಲ್ಕೆ ಬಹು ಸೋಜಿಗವು 4ತುಳಿದದಕೆ ಹಿಗ್ಗಿದಿಯೋ ಬಹುಮಾನಿ ನೀನೆಲವೊ |ಲಲನಿ ಹಡದೇಳು ಶಿಶುಗಳ ಕೊಂದಳೂ ||ಬಲುಭಂಟಹಿರಿಯಮಗಗರಸುತನ ಕೊಡಲಿಲ್ಲ |ಇಳಿಯೊಳಗೆ ನೀ ಮಾಡಿದನ್ನ್ಯಾಯಕೆಣಿಯುಂಟೆ 5ಸತಿಸಂಗ ಬಿಡಲೊಲ್ಲಿ ಪರ್ವಕಾಲಗಳಲ್ಲಿ |ಸುತಗೆ ಕಡಿಮೆದರಿಂದೆ ಆದಿ ಹ್ಯಾಗೊ ||ಪತಿವ್ರತಾ ಮಗಳಾದಳೊಂದೆ ಸುಗುಣದರಿಂದೆ |ಕ್ಷಿತಿಯೊಳನವರತ ಪೂಜಿಸಿಕೊಂಬಿ ಜನರಿಂದ 6ಜಾಮಾತನಿಗೆ ಇಹವು ಮುಖವು ಹತ್ತೊಂಬತ್ತು |ಆ ಮಧ್ಯ ಗಜಲಪನದಂತೆ ಒಂದೂ ||ಭೂಮಿಯೊಳಗಾಶ್ಚರ್ಯ ತಾನೆ ಮಕ್ಕಳ ಪಡೆವ |ಈ ಮಗಳು ಬಹುಸುಖವ ಬಡುವಳಿವನಿಂದಲ್ಲಿ 7ಬೆರಳು ಚೀಪುವನೋಡುಸುಳ್ಳಲ್ಲ ದಾನ |ಪುರುಷ ಬದುಕುವ ಚೋರತನದಿ ಜಾರಾ ||ತರುಣಿಯಾಗಿದ್ದ ನಿನ ಬಳಿಯಲ್ಲಿ ನೀ ಬಲ್ಲಿ |ತುರುಗಾಟವ ಕೊಡಲಿ ಕೊಂಡಡವಿಯೊಳಗಿರುವ 8ಗುರುಸ್ವಾಮಿ ಪಿತ ಬ್ರಹ್ಮ ವಂಶದ್ರೋಹಿಗಳವನ |ಪರಿವಾರ ಮಕ್ಕಳಿಗೆ ಮಾವನಾದಾ ||ಉರುಗ ಶಯನಂಡಜಾಧಿಪ ವಹನ ನೀಲಾಂಗ |ಅರಿತನೃಪಋಷಿಗಳೊಳಗೊಬ್ಬರಿಗ್ಯು ಮಗನಲ್ಲ 9ಕುಲಸೂತ್ರವಿಲ್ಲ ಒಂದೇ ರೂಪನಲ್ಲ ನಿ- |ಶ್ಚಲನಲ್ಲ ವತಿ ಕಠಿಣ ವಕ್ರವದನಾ ||ಬಲು ಕೋಪಿ ತಿರದುಂಬ ಸ್ತ್ರೀಯರಿಬ್ಬರ ಕೊಂದ |ಅಲವಜಾರನು, ಬತ್ತಲಿರುವ, ಕಲಹಕೆ ಪ್ರೀಯ 10ಕೊಟ್ಟೆಲ್ಲ ಅವನಿಗೀ ಕನ್ನಿಕಿಯ ಸವತಿಯರು |ಎಷ್ಟೋ ಮಲಸುತರಿಹರದಕೆ ದಶ ಮಡೀ ||ಸಿಟ್ಟಾಗ ಬ್ಯಾಡವನ ವಾರ್ತಿ ಕೇಳಲು ಜನರು |ಬಿಟ್ಟು ಸಂಸಾರವೆಂದಿಂದಿಗೊಲ್ಲದಿಹರೂ 11ನಿನ್ನ ಮಗಳವನಿತ್ತವನ ಮಗಳ ಮದಿವ್ಯಾದಿ |ಕನ್ಯ ವಿಕ್ರಯ ಪರಸ್ಪರವೆನಿಸಿತೂ ||ಇನ್ನೇಸೊ ನಿಮ್ಮ ನಿಮ್ಮಲ್ಲಿದ್ದ ನಡತಿಗಳು |ಅನ್ಯರಿದುಕೇಳಿಭಜಿಸರೊ ಶುದ್ಧ ಭಕುತಿಯಲೀ 12ಏನಾದರೇನು ಶ್ರೀ ಪ್ರಾಣೇಶ ವಿಠಲನಿಗೆ |ನೀನೆಗತಿನಿರ್ದೋಷ ವಸ್ತುವೆಂದೂ ||ಶ್ರೀನಳಿನಭವಮುಖರುನಿತ್ಯವಂದಿಸುತಿಹರೊ |ನೀನವನ ಮಾವನಾದಿನ್ನು ಪೂಜಿತನಲ್ಲೆ 13
--------------
ಪ್ರಾಣೇಶದಾಸರು
ಜಾಲಿಯ ಮರದಂತೆ - ದುರ್ಜನರೆಲ್ಲಜಾಲಿಯ ಮರದಂತೆ ಪ.ಬಿಸಿಲಲಿ ಬಳಲಿ ಬಂದವರಿಗೆ ನೆರಳಿಲ್ಲಹಸಿದು ಬಂದವರಿಗೆ ಹಣ್ಣಿಲ್ಲವೊಕುಸುಮವಾಸನೆಯಿಲ್ಲ ಕುಳ್ಳಿರಲು ಸ್ಥಳವಿಲ್ಲವಿಷಮರ ದುಸ್ಸಂಗ ಪಡೆದರೇನುಂಟು 1ಊರ ಹಂದಿಗೆ ಅಲಂಕಾರವ ಮಾಡಲುನಾರುವ ದುರ್ಗಂಧ ಬಿಡಬಲ್ಲುದೆಸಾರ ತತ್ತ್ವಜಾÕನ ಪಾಪಿಗೆ ಹೇಳಲುಕ್ರೂರಬುದ್ಧಿಯ ಬಿಟ್ಟು ಸಜ್ಜನವಪ್ಪಗೆ ? 2ತನ್ನಿಂದ ಉಪಕಾರ ತೊಟಕಾದರೂ ಇಲ್ಲಬಿನ್ನಣ ಮಾತುಗಳು ಮೊದಲೆ ಇಲ್ಲಪನ್ನಗಶಯನ ಪುರಂದರವಿಠಲನಲ್ಲದೆಅನ್ಯದೈವಂಗಳ ಭಜಿಸದೆ ನರರು 3
--------------
ಪುರಂದರದಾಸರು
ತನುವ ನೀರೊಳಗದ್ದಿ ಫಲವೇನುಮನದಲ್ಲಿ ದೃಢಭಕುತಿ ಇಲ್ಲದ ಮನುಜನು ಪ.ಧಾನ - ಧರ್ಮಗಳನು ಮಾಡುವುದೇ ಸ್ನಾನಜಾÕನ - ತತ್ತ್ವಂಗಳ ತಿಳಿಯುವುದೇ ಸ್ನಾನಹೀನಪಾಪಂಗಳ ಬಿಡುವುದೆ ಸ್ನಾನಧ್ಯಾನದಿ ಮಾಧವನ ನಂಬುವುದೆ ಸ್ನಾನ 1ಗುರುಗಳ ಶ್ರೀಪಾದತೀರ್ಥವೆ ಸ್ನಾನಹಿರಿಯರ ದರುಶನ ಮಾಡುವುದೆ ಸ್ನಾನಕರೆದು ಅನ್ನವನು ಇಕ್ಕುವುದೊಂದು ಸ್ನಾನಸಿರಿಹರಿತರಣ ನಂಬುವುದೊಂದು ಸ್ನಾನ 2ದುಷ್ಟರ ಸಂಗವ ಬಿಡುವುದೊಂದು ಸ್ನಾನಕಷ್ಟಪಾಪಂಗಳನು ಹರಿವುದೆ ಸ್ನಾನಸೃಷ್ಟಿಯೊಳಗೆ ಸಿರಿಪುರಂದರವಿಠಲನಮುಟ್ಟಿ ಭಜಿಸಿ ಪುಣ್ಯ ಪಡೆವುದೇ ಸ್ನಾನ 3
--------------
ಪುರಂದರದಾಸರು
ತಾಸು ಬಾರಿಸುತಿದೆಕೇಳಿ - ಹರಿದಾಸರೆಲ್ಲ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ತಾಸು ಬಾರಿಸುತಿದೆಕೇಳಿಪ.ಹಾಸುಮಂತ ಸುಪ್ಪತ್ತಿಗೆಯಲಿ - ಹಗಲು ಇರುಳು |ಹೇಸರಗತ್ತೆಯಂತೆ ಹೊರಳಿ - ಸ್ತ್ರೀಯರಗೂಡ |ಬೇಸರದೆ ನಿತ್ಯವು ಉರುಳಿ ||ಈಪರಿ ಕಾಲವ ಕಳೆದೆಯೊಕಾಲ ಸ |ಮೀಪವಾಯಿತು ಎಂದೀಗಲೆ 1ವೃಧ್ಧ ಯಾವನ ಬಾಲಕಾಲ - ವಿವೇಕವಿಲ್ಲದ |ಬುದ್ಧಿ ಮಾಂದ್ಯವು ಹಲವುಕಾಲ - ಆಹಾರಸಂಗ |ನಿದ್ರೆಯಿಂದಲಿ ಅತಿಲೋಲ ||ಈಶನ ಭಜಕರ ಭಜಿಸದೆ ಮಾನುಷಾ |ಯುಷ್ಯವೆಲ್ಲವು ವ್ಯರ್ಥವಾಯಿತಾಯಿತೆಂದು 2ಕಂಡ ವಿಷಯವ ಕಾಮಿಸಿ - ಕಷ್ಟಪಡದೆ |ತಾಂಡವ ಕೃಷ್ಟನ ಭೇಸಿ - ಪುಂಡನೆನಿಸದೆಭಂಡಧಾವತಿಯನು ತ್ಯಜಿಸಿ ||ಪುಂಡರೀಕಾಕ್ಷ ಪುರಂದರವಿಠಲನ |ಕೊಂಡು ಭಜಿಸಿರೈಯ ಢಂ ಢಂ ಢಂ ಡಣ್ಣೆಂದು 3
--------------
ಪುರಂದರದಾಸರು
ತೋರುತಲೈದಾನೆ ಮುಕ್ತಿಯ ತೋರುತಲೈದಾನೆಸಾರಿ ಶರಣರೆಂದು ಶ್ರೀನಿವಾಸದೇವ ಪ.ಹುಲ್ಲು ಕಲ್ಲಿನ ಪೂಜೆಯ ಮಾಡಿ ಕೆಡದೆಬೆಲ್ಲದಾಸೆಗೆಂಜಲು ತಿನ್ನದೆಸೊಲ್ಲುಸೊಲ್ಲಿಗೆ ಹರಿಸರ್ವೋತ್ತಮನೆಂದುಬಲ್ಲವರು ಭಕ್ತಿಲಿ ಭಜಿಸಿರೆಂದು 1ಭುವಿಯ ವೈಕುಂಠವು ನೋಡಿರಾನತರೆಂದುನವನವ ಉತ್ಸಾಹದೊಳಿಹನುಯುವತಿ ಲಕುಮಿ ಕೂಡ ಸ್ವಾಮಿ ಪುಷ್ಕರಕೂಲಭವನದೊಳಗಿಪ್ಪ ಭಕ್ತ ಚಿಂತಾಮಣಿ 2ನೆಲೆಯೆ ಸಿಕ್ಕದ ಧರ್ಮಕರ್ಮದ ತೊಡರ ಬಿಟ್ಟಲಸದೆ ತನ್ನಂಘ್ರಿಯಾತ್ರೆ ಮಾಡಿಸುಲಭದಿ ಮೋಕ್ಷವ ಗಳಿಸಿಕೊಳ್ಳೆನುತಲಿಕಲಿಯುಗದೊಳಗೆ ಪ್ರಸನ್ನವೆಂಕಟಪತಿ 3
--------------
ಪ್ರಸನ್ನವೆಂಕಟದಾಸರು
ದಣಿಯ ನೋಡಿದೆನೋ ವೆಂಕಟನ ಮನದಣಿಯೆ ನೋಡಿದೆ ಶಿಖಾಮಣಿಯ ನಿರ್ಮಲನ ಪಕೇಸಕ್ಕಿಅನ್ನ ಉಂಬುವನ ದುಡ್ಡುಕಾಸು ಬಿಡದೆ ಹೊನ್ನುಗಳಿಸಿಕೊಂಬುವನ ||ದೋಸೆ ಅನ್ನವ ಮಾರಿಸುವನತನ್ನ ದಾಸರ ಮೇಳದಿ ಕುಣಿದಾಡುತಿಹನ 1ಗಂಟಿನೊಲ್ಲಿಯ ಹೊದ್ದಿಹನ-ಹೊರಹೊಂಟು ಹೋಗಿ ಬೇಟೆಯಾಡುತಲಿಹನ ||ಗಂಟೆ ನಾದಕೆ ಒಲಿಯುವನ ಭೂವೈ-ಕುಂಠವಿದೆಂದು ಹಸ್ತವ ತೋರಿದವನ 2ಬೆಟ್ಟದೊಳಗೆ ಇದುತಿಹನ ಮನಮುಟ್ಟೆ ಭಜಿಪ ಭಕುತರಿಗೊಲಿದವನ ||ಕೊಟ್ಟ ವರವ ತಪ್ಪದವನ ಈಸೃಷ್ಟಿಗಧಿಕಪುರಂದರವಿಠಲನ3
--------------
ಪುರಂದರದಾಸರು
ದಯಮಾಡು ದಯಮಾಡು ಶ್ರೀನಿವಾಸಭವಭಯ ನಿವಾರಣ ಭಜಕ ಭಕ್ತರಘನಾಶ ಪ.ನೇಮವೆನ್ನಲಿಲ್ಲ ನಾಮದರಿಕೆಯಿಲ್ಲನಾ ಮಹಾಪಾಪಿಯು ಸ್ವಾಮಿ ನೀನೊಲಿದು ಗಡ 1ಸದ್ಧರ್ಮ ಸರಕಿಲ್ಲ ಶುದ್ಧ ಬುದ್ಧಿಯಿಲ್ಲಉದ್ಧರಿಸೆನ್ನನಿರುದ್ಧಹರಿಕರುಣಿ2ಸತ್ಕುಲ ಹೊಂದೇನು ಸತ್ಕರ್ಮ ಮಾರ್ಗಿಲ್ಲಭಕ್ತರಕ್ಷಕ ಪಾಪಮುಕ್ತ ದೇವರ ದೇವ 3ಅವಗುಣದೆಣಿಕೆಯ ವಿವರ ನೋಡದೆ ಅಯ್ಯಜವನ ಬಲೆಯನು ತಪ್ಪಿಸುವ ಸರೀಸೃಪಶಯ್ಯ4ಅಜಾಮಿಳವ್ಯಾಧಆಗಜಅಹಲ್ಯೋದ್ಧರನಿಜ ಪ್ರಸನ್ವೆಂಕಟೇಶಸುಜನಪರಿಪೋಷ5
--------------
ಪ್ರಸನ್ನವೆಂಕಟದಾಸರು
ದಾತಹರಿಯು ದಯ ಮಾಡುವನಿರಲುಸಂಸಾರದ ಸುಖಪ್ರಾಶನ ಮಾಡದೆ |ಕಂಸಾರಿಯ ಪದಪಾಂಸುಗಳ ಭಜಿಸು ||- - - - - - - - - - - -- - - - - - - - - - - -ನೀರಬೊಬ್ಬಳಿಯಂತೆ ನಿತ್ಯವಲ್ಲದ ದೇಹ |
--------------
ಪುರಂದರದಾಸರು
ದಾರಿಯ ತೋರೊ ಮುರಾರಿ ಮುಂದಣದಾರಿಯ ತೋರೊ ಮುರಾರಿ ಪ.ದಾರಿತೋರುಕಂಸಾರಿಭವಾಂಜನಪಾರಾವಾರಉತ್ತಾರಣಗೈಯುವಅ.ಪ.ಮಾಯಾಶ್ರಿತನಾಗಿಹೆನಲ್ಲೊ ಮೋಕ್ಷೋ-ಪಾಯಭೇದಂಗಳ ಮರತೆನಲ್ಲೊಕಾಯಜಪಿತ ಕಮಲಾಯತಲೋಚನಕಾಯದೊಳಗೆ ಸನ್ನಾಯದಿ ನೋಡುವ 1ದುಃಖವಿಲ್ಲದೆ ಸುಖವಿಲ್ಲ ಇದಒಕ್ಕಣಿಪರೆ ತುದಿಬುಡವಿಲ್ಲಸೊಕ್ಕಿ ನಡೆದು ಭವಯಿಕ್ಕುಳ ಬಾಯೊಳುಸಿಕ್ಕಿದೆನಲ್ಲವೊ ರಕ್ಕಸವೈರಿಯೆ 2ಬಲ್ಲೆನೆಂಬರೆ ಬಲವಿಲ್ಲಭವಬಲ್ಲೆಯೊಳಗೆ ಸಿಲುಕಿದೆನಲ್ಲಕಲ್ಲೊಳಗ್ನಿ ಕಲಕಿರುವಂದದಿ ಮನದಲ್ಲಿ ನಿನ್ನ ಪದಪಲ್ಲವ ಭಜಿಸುವ 3ಸಾರರಹಿತ ಸಂಸಾರದಿಮಾಯಾನಾರಿ ಗೈದ ಮಮಕಾರದಿಘೋರದುರಿತವಪಹಾರಗೈವ ಲಕ್ಷ್ಮೀನಾರಾಯಣನು ಸೇರಿ ಸೇವಿಸುವಂಥ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ದಾಸನೆಂತಾಗುವೆನು ಧರೆಯೊಳಗೆ ನಾನು |ವಾಸುದೇವನಲಿ ಲೇಸ ಭಕುತಿಯ ಕಾಣೆ ಪ.ಗೂಟನಾಮವ ಹೊಡೆದು ಗುಂಡು ತಂಬಿಗೆ ಹಿಡಿದು |ಗೋಟಂಚುಧೋತರ ಮುಡಿಯನುಟ್ಟು ||ದಾಟುಗಾಲಿಡುತ ನಾಧರೆಯೊಳಗೆ ಬರಲೆನ್ನ |ಬೂಟಕತನ ನೋಡಿ ಭ್ರಮಿಸದಿರಿ ಜನರೆ 1ಅರ್ಥದಲ್ಲಿಯ ಮನಸು ಆಸಕ್ತವಾಗಿದ್ದು |ವ್ಯರ್ಥವಾಯಿತು ಜನ್ಮ ವಸುಧೆಯೊಳು ||ಅರ್ತಿಯಿಂದಲಿ ಹರಿಯ ಅರ್ಚಿಸಿದ್ದಿಲ್ಲ ನಾ |ಸತ್ಯ - ಶೌಚಗಳರಿಯೆ ಸಜ್ಜನರುಕೇಳಿ2ಇಂದಿರೇಶನ ಪೂಜೆ ಬಂದು ಮಾಡಿದ್ದಿಲ್ಲ |ಸಂಧ್ಯಾನ - ಜಪ - ತಪವೊಂದನರಿಯೆ||ಒಂದು ಸಾಧನ ಕಾಣೆ ಪುರಂದರವಿಠಲನ |ದ್ವಂದ್ವಪಾದವ ನಂಬಿ ಅರಿತು ಭಜಿಸಿದರೆ 3
--------------
ಪುರಂದರದಾಸರು