ಒಟ್ಟು 4643 ಕಡೆಗಳಲ್ಲಿ , 128 ದಾಸರು , 3220 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂತ್ರಾಲಯನಿವಾಸ ಉತ್ತಮ ಹಂಸ | ಸಂತಾಪ ಪರಿಹರಿಸ ಕೊಡು ಎನಗೆ ಲೇಸÀ ಪ ಯತಿಗಳ ಶಿರೋರನ್ನ ಯೋಗಸಂಪನ್ನ | ಕ್ಷಿತಿಯೊಳಗೆ ನಿನಗೆ ಸರಿಗಾಣೆನೊ || ನುತಿಸುವೆ ಭಕ್ತಿಯಲಿ ಬಿಡದೆ | ಮುಕುತಿಯಲಿ ಸತತಾನಂದದಲಿಪ್ಪ 1 ಕಪಿಲ ತೀರ್ಥದಲಿ ಶರಣ ಶುದ್ಧಿಯಲ್ಲಿ | ತÀಪವ ಮಾಡುವ ಜ್ಞಾನಿ ಸೌಮ್ಯಜ್ಞಾನಿ || ಕೃಪೆಮಾಡಿ ಕೊಡು ಗುರುವೆ ಶಿಷ್ಯಸುರತÀರುವೆ 2 ತಮೋಗುಣ ಕಾರ್ಯ ಪೋಗಲಾಡು ವ್ಯಾಪ್ತಿಯಾ | ಶಮೆದಮೆಯಲ್ಲಿ ಉಳ್ಳ ಮಹಿಮೆಯಾ || ನಮಗೆ ಪೇಳುವೆ ವೇದಬಲ್ಲ ವಿನೋದ | ಸುಮನ ಸುಗುಣವ ಮೆಚ್ಚೆ ದುರ್ಮತಕೆ ಕಿಚ್ಚೆ 3 ಕಾಶಿ ಸೇತುವೆ ಮಧ್ಯೆ ಮೆರೆವೇ ಜನರಲ್ಲಿ | ಭೇದ ವಿದ್ಯಾ ಸಜ್ಜನಕೆ ತಿಳಿಸು ಮನಸು ನಿಲ್ಲಿಪೆ || ಪೋಷಿಸುವೆ ಅವರ ಅಟ್ಟುವ ಮಹದುರ | ದೋಷವ ಕಳೆವಂಥ ವಿಮಲ ಶಾಂತ4 ವರಹಜ ತೀರದಲ್ಲಿದ್ದ ಸುಪ್ರಸಿದ್ದ | ಮರುತ ಮತಾಂಬುಧಿ ಸೋಮ ನಿಸ್ಸೀಮ || ನರಸಿಜಾಪತಿ ನಮ್ಮ ವಿಜಯವಿಠ್ಠಲನಂಘ್ರಿ | ಸ್ಮರಿಸುವ ಸುಧೀಂದ್ರ ಸುತ ರಾಘವೇಂದ್ರ 5
--------------
ವಿಜಯದಾಸ
ಮತ್ಸ್ಯಾದಿ ದಶಾವತಾರಗಳು ಮತ್ಸ್ಯಾದ್ಯವತಾರವನು ತಾಳ್ದು ನೀ ಪರದೇವ ಮನ್ವಂತರ ಪ್ರಳಯಜಲಧಿಯನು ಪೊಕ್ಕು ಸೂರ್ಯಪುತ್ರನ ಮನುವ ದೋಣಿಯಲ್ಲಿರಿಸಿ ನೀನ್ ನೀರಾಟವಾಡಿದೆಯ ಲೀಲೆಯಿಂದಲಿ ನೀಂ 33 ಮಂದರ ಪೊಕ್ಕೆ ಕೂರ್ಮರೂಪವ ತಾಳ್ದು ಕಡಲಿನಡಿ ಸೇರಿ ದೇವತೆಗಳಿಗೆಯಮೃತ ಕಲಶವನು ತೆತ್ತು ನೀನ್ ದೈತ್ಯರನು ವಂಚಿಸಿದೆ ಮೋಹಿನಿಯದಾಗಿ34 ಸೂಕರದ ರೂಪವನು ತಾಳ್ದು ನೀನ್ ಸಿರಿವರನೆ ಚಿನ್ನ ಕಣ್ಣಿನ ದೈತ್ಯಸೇವಕನ ಕೊಂದು ದೈತ್ಯನಾತ್ಮಜ್ಯೋತಿಯನು ತನ್ನಲಿಯಿರಿಸಿ ವಾರಾಹ ರೂಪದಿಂದಲಿ ಆಟವಾಡ್ದೆ35 ಶಿಲ್ಪಿಯಿಂ ರೂಪುಗೊಂಡಿಹ ಕಂಬದಲಿಯಿದ್ದು ವಿಷ್ಣುವೇ ಪ್ರಹ್ಲಾದ ಮಗುವನುದ್ಧರಿಸೆ ನಂಬಿದೆಡೆಯೆಲ್ಲೆಲ್ಲು ಇರುವೆನೆಂಬುದ ತಿಳಿಸೆ ನರಸಿಂಹ ರೂಪವನು ತಾಳ್ದೆ ಪರಮಾತ್ಮ 36 ಇಂದ್ರಾವರಜನೊಮ್ಮೆ ವಟುವಾಮನನು ಬಂದು ಬಲಿಯ ಯಾಗದ ಸಮಯ ಮೂಹೆಜ್ಜೆ ಬೇಡೆ ರಾಜ ಕೊಡಬಯಸಲದ ಗುರು ಶುಕ್ರತಡೆದಾಗ ದಾನಿ ಬಲಿ ಕೊಟ್ಟವನು ಸಿದ್ಧಿಯನು ಪಡೆದಾ 37 ಸಂಹಾರ ಲೀಲೆಯನು ತೋರಲವ ಪರಮಾತ್ಮ ಪಿತೃವಾಕ್ಯಪಾಲನೆಗೆ ತಾಯ ತಲೆ ಕಡಿದು ಮಾತೆಯನು ಬದುಕಿಸುತ ದುಷ್ಟರಾಜರ ತರಿದು ರಾಜವಂಶವನು ನಿರ್ವಂಶ ಮಾಡಿದನು 38 ಎದೆಯೊಳಿಹ ಸೀತೆಯನು ಕಾಡೆಲ್ಲ ಹುಡುಕುತ್ತ ಜಲಧಿಗೇ ಕಟ್ಟಿ ಸೇತುವೆಯ ಸಿರಿವರನು ಕಪಿ ಸೈನ್ಯದೊಡಗೂಡಿ ಲಂಕೆಯನ್ನೈದುತ್ತ ರಾವಣನ ಕೊಂದು ಸೀತೆಯ ಮರಳಿ ತಂದೆ 39 ಇಬ್ಬರನು ತಾಯಂದಿರನು ರಮಿಸಿ ಮಗುವಾಗಿ ಪದಿನಾರು ಸಾಸಿರದ ಸತಿಯರನು ಒಲಿಸಿ ಏಕಕಾಲದಲಿ ಎಲ್ಲರನು ಮೆಚ್ಚಿಸಿದ ಹರಿ ಆನಂದರೂಪದವ ಪರಮಾತ್ಮ ನಿಜವು 40 ತಾಮಸದ ಜೀವರನಧೋಗತಿಗೆಯಿಳಿಸುತಲಿ ಬುದ್ಧ ರೂಪದಲಿ ತ್ರಿವಿಧ ಜೀವಂಗಳಿಗೆ ಯೋಗ್ಯತೆಗೆ ತಕ್ಕಂತೆ ಗತಿಯಾಗಿಸುವದೆ ನಿನ್ನ ಸಂಕಲ್ಪವದಲಾ 41 ಧರ್ಮವದು ನಶಿಸುತಲಿ ದುಷ್ಟರಾಜರು ತುಂಬೆ ಕಲಿಯುಗದ ಕೊನೆಯಲ್ಲಿ ಕಲ್ಕಿ ರೂಪದಲಿ ಅಶ್ವವನ್ನೇರುತಲಿ ದುಷ್ಟರನು ಸಂಹರಿಸಿ ಕೃತಯುಗವ ಮಾಡಿದೆಯ ಪರಮಾತ್ಮ ನೀನು 42 ಕಾಣದಾ ದೇವರಿಗೆ ಭಕ್ತಿಯಿಂ ಪೂಜಿಸಲು ಹತ್ತು ರೂಪಗಳಿವುಗಳೇ ಮುಖ್ಯವದರಿಂ ಅವತಾರ ರೂಪಗಳ ಪ್ರತಿಮೆಗಳ ಪೂಜಿಸುತ ಸರ್ವಾರ್ಥಸಿದ್ಧಿಗಳ ಪಡೆಯುವರು ಜನರು 43 ವೇದೋಕ್ತ ಪದಗಳಿಗೆ ಮುಖ್ಯಾರ್ಥ ಹರಿಯಿಹನು ಅಗ್ನ್ಯಾದಿ ನಾಮಗಳು ದೇವರಿಗೆಯಿಹವು ದೇವತೆಗಳಿಗೆಲ್ಲ ಅಗ್ರಣಿಯು ತಾನಾಗಿ ಅಗ್ನಿನಾಮವು ನಿನಗೆ ಒಪ್ಪುವುದು ಹರಿಯೆ 44 ಇಂದ್ರಿಯಂಗಳೆ ಕುದುರೆ ಬುದ್ಧಿಯೇ ಸಾರಥಿಯು ಮನವೆಂಬ ಕಡಿವಾಣ ಹಿಡಿದೋಡಿಸುವವನು ಜೀವನೇ ರಥಿಕನವ ವಿಷಯಬೇಟೆಗಳಲ್ಲಿ ಪರಮಾತ್ಮನರಿವೆಂತು ಮೂಡುವುದು ಅವಗೆ 45 ವಾಸದಿಂ ಬೆಳಗಿಸುವ ವಾಸುದೇವನು ತಾನು ವರುಣನಂತರ್ಗತನು ಶಿರದಲ್ಲಿಯಿಹನು ಸಪ್ತರಂಧ್ರಗಳಲ್ಲಿ ವಿದ್ಯುತ್ತ ಹರಿಸುತಲಿ ಜ್ಞಾನವನ್ನೊದಗಿಪನು ಶ್ರೀಕೃಷ್ಣನವನು 46 ವಿಜ್ಞಾನಿ ಭಗವಂತ ಹೃದಯ ಗುಹೆಯಲ್ಲಿಹನು ಅನಿರುದ್ಧ ಯಜ್ಞೇಶ ಮೊದಲಾದ ಪೆಸರಿಂ ಪ್ರಾಣವಾಯುಗಳ ಜೊತೆ ಪಾಕವನು ಗೈಯುತ್ತ ರಕ್ತರೂಪವ ಮಾಡಿ ಪಾಲಿಸುವ ನಮ್ಮ47 ಪ್ರಾಕೃತ ಜ್ಯೋತಿಯಾದೊಡೆ ದೇಹ ಸುಡದಿರದು ಅಪ್ರಾಕೃತ ಜ್ಯೋತಿ ಯಜ್ಞೇಶಗಿಹುದು ಭಕ್ಷ್ಯಭೋಜ್ಯಗಳೆಂಬ ಲೇಹ್ಯಪೇಯಗಳೆಂಬ ನಾಲ್ಕುವಿಧ ವಸ್ತುವಿನ ಪಾಕ ಮಾಡುವನು 48 ವಾಯುವಂತರ್ಗತನು ನೀಲರೂಪದ ದೇವ ಪ್ರದ್ಯುಮ್ನನಾಮಕನು ನಾಭಿಯಲ್ಲಿಹನು ಕಾಮರೂಪಿಯು ಅವನಪಾನಕ್ಕೆ ಒಡೆಯನವ ಪುರುಷರಿಂದಲಿ ಸೃಷ್ಟಿಗವನೆ ಕಾರಣನು 49 ಪೃಥ್ವಿವಿಯಪ್ ತೇಜಸ್ಸು ಮೂರು ದೇಹದ ಮೂಲ ಶ್ರೇಷ್ಠ ವಾಯುವು ಸೇರಿ ದೇಹಕ್ಕೆ ಚಲನೆ ಹೃದಯದಲ್ಲಾಗಸವು ಇರುವ ಕಾರಣದಿಂದ ಪಂಚಭೂತಂಗಳಿವು ದೇಹದಲ್ಲಿಹವು 50 ವಾಯುವಿನ ಜೊತೆಗೂಡಿ ದೇಹಚಾಲಕನು ಯಂತ್ರರೂಪದಲ್ಲಿದ್ದು ಯೋಗ್ಯತೆಗೆ ತಕ್ಕಂತೆ ಕಾರ್ಯವನು ಮಾಡಿಸುತ ಫಲವನ್ನು ಕೊಡುವ 51
--------------
ನಿಡಂಬೂರು ರಾಮದಾಸ
ಮದ ಮತ್ಸರವ ಬಿಡದನಕಾ ವಿಧ ವಿಧದ ಸಾಧನವ ಮಾಡಲೇನೋ ಪ ವೇದ ಶಾಸ್ತ್ರಗಳೋದಲೇನು ಗಂಗಾ ಗೋದಾವರಿಯಲಿ ಸ್ನಾನವ ಮಾಡಲೇನು ಸಾಧು ಕರ್ಮವಾಚರಿಸೇನು ವಿಷ್ಣು ಪಾದದಿ ಪಿಂಡ ದಾನವ ಮಾಡಲೇನು 1 ಸನ್ಯಾಸಾಶ್ರಮ ಧರಿಸಲೇನೂ ಗೋಹಿ ರಣ್ಯಾದಿಗಳಲಿ ಮಮತೆ ಬಿಟ್ಟರೇನು ಪುಣ್ಯ ಕ್ಷೇತ್ರಕೆ ಪೋಗಲೇನು ಅನ್ನ ಕನ್ಯಾದಿ ದ್ರವ್ಯದಾನವ ಮಾಡಲೇನು 2 ಪಾಪ ಕರ್ಮವ ತೊರೆದರೇನೊ ಲಕ್ಷ ದೀಪಾರಾಧನೆ ದಿನ ದಿನ ಮಾಡಲೇನು ಶಾಪಾನುಗ್ರಹ ಶಕ್ತಿ ಇದ್ದೇನು ಪೂಜಾ ಸೋಪಸ್ಕರ ಬಹುತರವಿರಲೇನು 3 ಶ್ವಾಸ ನಿರೋಧಿಸಲೇನು ಪಕ್ಷ ಮಾಸೋಕ್ತ ಧರ್ಮ ಕರ್ಮವ ಮಾಡಲೇನು ಆಸನ ಜಯ ಸಂಪಾದಿಸಲೇನು ಉಪ ವಾಸ ವ್ರತದಿ ದೇಹ ಬಳಲಿಸಲೇನು 4 ಜ್ಯೋತಿಷ್ಟೋಮ ಮಾಡಲೇನು ಲಕ್ಷ ಶ್ರೀ ತುಳಸಿ ಅರ್ಪಿಸಲೇನು ಭೂತದಯವು ಇದ್ದರೇನು ಜಗ ನ್ನಾಥ ವಿಠಲನಂಘ್ರಿ ಪೊಂದಿದ್ದವರೊಳು 5
--------------
ಜಗನ್ನಾಥದಾಸರು
ಮದನ ಜನಕ ಮುದ್ದುರಂಗ ನಿತ್ಯ ಹೃದಯದೊಳಗೆ ಭಜಿಸುವರಂತರಂಗ ಪ ಅಜ ಭವನ ಮಿತ್ರ ಸರ್ವೇಶ ನಿನ್ನ ಕ್ಲೇಶ ನಾಶ ಮಜಡ ನೆನಗೆ ನೀ ನುಡಿಸ ಕೊಡು ಸುಜನ ಸೇವಿತ ನರಹರಿ ಲಕ್ಷ್ಮೀಶ 1 ದಯವ ನೀ ಎನ್ನೊಳುಬೀರೋ ನಿನ್ನ ಸ್ವಯಂ ಮೂಲ ನಿಜದ ಮೂರ್ತಿಯನೀಗ ತೊರೋ ಭಯಗಳನೆಲ್ಲವ ತೋರೋ ಚೆಲ್ವ ನಯವಿದ ಸರ್ವ ಸದ್ಗುಣ ನಿಧಿ ಬಾರೋ 2 ಪರಮ ಪಾವನಮೂರ್ತಿ ನಿನ್ನ ಸಿರಿ ಚರಣ ಕೆರಗುವೆ ನಾ ಮುನ್ನ ಕರುಣದಿ ಸಲಹೋ ನೀ ಎನ್ನ ನಿತ್ಯ ಪೊರೆವ ಚಿಪ್ಪಳಿ ಗೋಪೀವರ ಸುಪ್ರಸನ್ನ 3
--------------
ಕವಿ ಪರಮದೇವದಾಸರು
ಮದನ ಜನಕ ಸದಯ ಎನ್ನ ಹೃದಯ ಮಂದಿರದಲಿ ಕಮಲ ನಿಲ್ಲಿಸೊ ಸತತ ಯದುತಿಲಕ ಪ ಮದ ಮತ್ಸರದಿಂದ ಬಹಳ ಚದುರುತಿರುವ ಎನ್ನ ಮನದ ಹದವಗೈದು ನಿನ್ನ ದಿವ್ಯ ಪದಸೇವೆಯ ಮುದವೊದಗಿಸೊ ಅ.ಪ ಮಲಿನವಾದ ಎನ್ನ ಮನವು ಹಲವು ವಿಧದÀ ಅನುಭವಗಳಿÀಂ ಪೊಂದಿರುವೆನೊ 1 ಕಲಿಪುರುಷನಿಗೆ ಸುಲಭದಲಿ ಸಿಲುಕದಂತೆ ಎನ್ನ ಮನಕೆ ಬಲವನಿತ್ತು ಹರುಷದಿಂದ ಒಲಿಯುತ ಪ್ರಸನ್ನನಾಗೊ 2
--------------
ವಿದ್ಯಾಪ್ರಸನ್ನತೀರ್ಥರು
ಮಂದರಧರ ಗೋವಿಂದ ಜಯ ನಂದನ ಕಂದ ಬಾಲಕುಲದಾಸಾನಂದ ಪ ಬೃಂದಾವನ ಗೋಪೀಜನ ವೃಂದ ಸುಂದರ ಮುರಳೀ ಗೀತಾನಂದ ಅ.ಪ ಶ್ರೀವತ್ಸಾಂಕಿತ ಪಾವನಚರಣ ದೇವ ದೇವಾನತ ದೇವಕಿತರುಣ ಭಾವ ಸಂಭವಪಿತ ರಾಧಾರಮಣ ಭಾವುಕ ಸೇವಿತ ಕರುಣಾಭರಣ1 ಮಂಗಳನಾಮಾ ಯದುಕುಲಸೋಮಾ ಸಂಗರಭೀಮ ಜಗದಭಿರಾಮ ಭೃಂಗಕುಂತಳ ಮಾಲಿಂಗನಿಸ್ಸೀಮ ರಂಗರಥಾಂಗ ಮಾಂಗಿರಿವರಧಾಮ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಧುರೆಗೆ ಪೋಗಬ್ಯಾಡಾ ರಂಗಯ್ಯ ರಂಗಾ ಪ. ಮಧುರೆಗೆ ಪೋದಾರೆ ಚದುರಿ ನಾರಿಯರು ಬೆದರುತಲಿರುವೆವು ಹರಿಯೇ ಎನ್ನಯ ದೊರೆಯೇ ಅ.ಪ. ಮಧುರಾಪುರದಿಂದ ಅಕ್ರೂರ ಕರಿಲಿಕ್ಕೆ ಬಂದಾನು ಮಲ್ಲನ ಕೊಂದನು ಕೃಷ್ಣ ರಜಕನ ಕೊಂದನು ರಕ್ತಾಲಂಕೃತನಾಗಿ ಕುಬಜಿಯಿಂದ ಗಂಧವಾ ಕೊಂಡನು ಡೊಂಕನು ತಿದ್ದಿದನು 1 ಚಾಣಿಕರ ಮುಷ್ಟಿಕರ ಕೂಡಾ ಮುಷ್ಟಿ ಯುದ್ಧವ ಮಾಡಿ ಕುಟಿಲರ ಕೊಂದು ರಂಗಮಂಟಪಕೆ ಬಂದು ನಾನಾಭರರಣ ಭೂಷಿತನಾಗಿ ರಾಜ ಬೀದಿಯೊಳು ಸಾಗಿ 2 ಮಧುರಾಪುರದ ನಾರಿಯರು ಬಲು ಚೆಲುವಿಯರು ನಿನ್ನನೆ ಮರುಳು ಮಾಡುವೋರು ಯಮ್ಮನಗಲಿಸುವೋರು ಇವರು 3 ಕನಿಕರವಿಲ್ಲವೆ ನಾವು ನಿನ್ನನು ಬಿಟ್ಟು ವೊಂದು ನಿಮಿಷವಾದರು ಕಾಲಹ್ಯಾಗ ಕಳಿಯೋಣ ಘನ ಮಹಿಮನ ಅಧರಾಮೃತ ಪರವಶವಾದೆವು 4 ಮಲ್ಲಯುದ್ಧವ ಮಾಡಿ ಮಾವ ಕಂಸನ ಕೊಂದು ಉಗ್ರಸೇನರಿಗೆ ಅನುಗ್ರಹವ ಮಾಡಿ ಶೀಘ್ರದಿ ಬರಬೇಕೆಂದು ಬೇಡುವೆ ನಾ ಬಂದು ಕಾಳಿಮರ್ಧನಕೃಷ್ಣ ನಿನಗಿಂದು 5
--------------
ಕಳಸದ ಸುಂದರಮ್ಮ
ಮಧ್ವ ಸರೋವರದ ಸ್ನಾನವ ಮಾಡಿರೊ ಬುದ್ಧಿವಂತರು ಕೇಳಿ ಇದರ ಮಹಾತ್ಮೆಯನು ಪ ತ್ರೇತಾಯುಗದಲ್ಲಿ ವರುಣತೀರ್ಥ ಕ್ಷಿತಿಯೊಳಗೆ ದ್ವಾಪರದಿ ಚಂದ್ರ ಪುಷ್ಕರಣಿ ಉ- ನ್ನತ ಕಲಿಯುಗದಲ್ಲಿ ಮಹಾ ತೀರಿಥ 1 ಸುರನದೀ ಮಿಕ್ಕಾದ ಸ್ಥಾನದಲಿ ಸೇವೆ ವಿ- ಸ್ತರವಾಗಿ ಕೊಳುತಿಪ್ಪಳು ಉಪೇಕ್ಷದಿ ಧರೆಯೊಳಗೆ ಇಲ್ಲಿ ಗುರು ಮಧ್ವಮುನಿ ಸರ್ವಾರ್ಥ ನಿರುತದಲ್ಲಿ ತೀವ್ರಗತಿ ಕೊಡುವಳೂ2 ಸಕಲ ವೇದಶಾಸ್ತ್ರ ಓದಿದವನಾದರೂ ಶಕುತಿವಂತನಾಗಿ ಇದ್ದನಾಗೆ ಸುಖ ತೀರ್ಥ ಸರೋವರದ ಸ್ನಾನ ಮಾಡದಿರಲು ಶಕಲ ಮತಿಯಲಿ ಮಹಾನರಕ ಭುಂಜಿಸುವಾ 3 ಮಜ್ಜನ ತಂದು ಕೊಡುವದು ನರಗೆ ಮಿಂದ ಫಲವೊ ಎಂದೆಂದಿಗೆ ಇಲ್ಲಿ ಬಿಡದೆ ವಾಸವಾದ ಮಂದಿಗಳ ಪುಣ್ಯ ಪ್ರತಾಪ ಎಣಿಸುವರಾರು 4 ಛೇದಿಸುವದಕೆ ಇದೇ ಸ್ನಾನವೆನ್ನಿ ಮೋದ ಮೂರುತಿ ನಮ್ಮ ವಿಜಯವಿಠ್ಠಲ ಕೃಷ್ಣ ಭೇದಾರ್ಥ ಮತಿಕೊಟ್ಟ ಭೇದವನು ತೊಲಗಿಸುವಾ5
--------------
ವಿಜಯದಾಸ
ಮಧ್ವನುದಿಸಿದನು ಭೂತಳದಲಿ ಪ ವದ್ದು ದುರ್ಮತ ತಿದ್ಧಿ ಸುಜನರ ಪದ್ಮನಾಭನ ಪಾದಸೇವಿಸೆ ಅ.ಪ ಕುಣಿದು ಕುಣಿಯೇ ಖೇದ ಉಕ್ಕಿಹರಿಯೆ ಸರ್ವಲಕ್ಷಣದಿಂದ ಶೊಭಿಪ ಸರ್ವತೆರದಲಿ ಪೂರ್ಣಕಾಯದಿ ಸರ್ವಜೀವರ ನಾಥನಾಯಕ ಸರ್ವರೀಶನ ಆಜ್ಞೆಧರಿಸುತ 1 ವಾಸುದೇವನಲ್ಲೆ ರತನು ವಾಸುದೇವನ ತೋರಿ ಪೊರೆವಾ ದೋಷವಿಲ್ಲದ ಮಹಾಮಹಿಮಾ ನಾಶವಿಲ್ಲದ ಜ್ಞಾನಸ್ವರೂಪಾ ವಾಸುದೇವ ಸುನಾಮಗೊಳ್ಳುತ ನಾಶಮಾಡುತ ದೋಷಜ್ಞಾನವ ಭಾಸಬೀರಲು ವೇದರಾಶಿಯ 2 ವನಜಜಾಂಡವ ಪೊತ್ತಿಹಧೀರ ವನಜನಾಭವ ಮುಖ್ಯದೂತ ಅನಿಲ ದೇವನ ತೃತೀಯ ರೂಪ ವನಜಸಂಭವ ಪದಕೆ ಬರುವ “ಶ್ರೀಕೃಷ್ಣವಿಠಲ” ದಣಿವು ಕಾಣದೆ ವೇದವತಿಯಲಿ 3
--------------
ಕೃಷ್ಣವಿಠಲದಾಸರು
ಮಧ್ವಮತವ ಪೊಂದಿ ಭಜಿಸಿರೊ | ಉದ್ಧಾರವಾಗಲು ಮಧ್ವಮತವ ಪೊಂದಿ ಭಜಿಸಿರೊ ಪ ಮಧ್ವಮತವ ಪೊಂದಿ ಭಜಿಸಿ ಶುದ್ಧ ಜ್ಞಾನ ಭಕುತಿಗಳಿಸಿ ಗೆದ್ದು ಈ ಭವಾಬ್ಧಿಯನ್ನು ಪದ್ಮನಾಭನ ಪಾದವ ತೋರೆ ಅ.ಪ. ನಾನೆ ವಾಸುದೇವನೆಂದು ಹೀನ ಪೌಂಡ್ರಕನು ತಾನು ಏನು ಗತಿಯ ಕಂಡನೆಂದು ಜ್ಞಾನದಿಂದ ತಿಳಿದು ಮುನ್ನ 1 ಹರಿಯೆ ಸರ್ವೋತ್ತಮನು | ವಿಶ್ವ ವಿರುವುದಯ್ಯ ಸತ್ಯವಾಗಿ ತಾರತಮ್ಯ ಪಂಚಭೇದ ಸ್ಥಿರವೆಂದು ಸಾರಿಪೇಳ್ವ 2 ಭಕುತಿಯಿಂದ ಸೇವಿಪ ಜನಕೆ ಮುಕುತಿಯಲ್ಲಿ ನೈಜ ಸುಖವ ಲಕುಮಿಕಾಂತನು ಪಾಲಿಪನೆಂದು ಯುಕುತವಾಗಿ ಪ್ರಕಟಿಸಿದಂತ 3
--------------
ಲಕ್ಷ್ಮೀನಾರಯಣರಾಯರು
ಮಧ್ವರಾಯರ ಶುದ್ಧಸಿದ್ಧಾಂತ ಪದ್ಧತಿಯಲಿ ಇದ್ದ ಮನುಜಗೆ ಕರಸಿದ್ಧವೈಯ್ಯಾ ಮುಕುತೀ ಪ ಬಿದ್ದು ಪೋಗುವುದಘ ವೃಂದಗಳೆಲ್ಲವು ಶುದ್ಧಜ್ಞಾನದಿ ಸತ್ಯ ಉದ್ಭರಿಪ ಹರಿ ವೇದಸಿದ್ಧವಿದುಕಾಣೋ ಅ.ಪ. ಖ್ಯಾತಿಯಿಂದಲಿಲಂಕೆ ಸುಟ್ಟು ಪ್ರೀತಿಲಿ ರಾಮನ ಭಜಿಸಿದರೋ ವ್ರಾತಖಳಕುಲ ಘಾತಿ ಮಾಡಿಸಿ, ವೀತಿಹೋತ್ರಗೆ ತುತ್ತು ನೀಡುತ ನಾಥರಾಮನ ವರದಿ ಮುಂದಿನ ಧಾತನಾಗಿ ಬರುವ ನಮ್ಮ 1 ದ್ವಾಪರದಲಿವರು ಪಾಪಿ ದುರ್ಯೋಧನನ ಭೂಪನಂದದಿ ಅಳಿಸಿ ಶ್ರೀಪತಿಸೇವೆನಡಿಸಿದರೋ ಶ್ಯಾಮಸುಂದರ ಕೃಷ್ಣರಾಯನ ನೇಮದಿಂದಲಿನಾಮ ಪಠಿಸುತ ತಾಮಸಾರನು ಯಮಗೆ ಕಳಿಸಿ ಕಾಮವಿಲ್ಲದೆ ಯಜ್ಞವನಡೆಸಿದ ಭಾಮೆ ದ್ರೌಪದಿ ಪ್ರೇಮ ಪತಿಯಾದ2 ಕಲಿಯುಗ ಕಳ್ಳರು ಸಲ್ಲದರ್ಥಗಳನ್ನು ಸುರರು ಮೊರೆಯಿಡಲು ವಲ್ಲಭನು ಶ್ರೀನಲ್ಲ ನಲ್ಲದೆ ಇಲ್ಲ ಜಗದೊಳು ಎಂದು ಸ್ಥಾಪಿಸಿ ಎಲ್ಲವೇದದ ಎಲ್ಲನಾದವು ನಲ್ಲ ಹರಿ ಯಂತೆಂದು ತೋರಿದ 3 ಜೀವೇಶ ಬೇಧವು ಪಂಚಬೇಧವು ಸುಳ್ಳು ತಾವೆ ನಾಥರು ಜಗಕೆ ತಾರತಮ್ಯವು ಠಕ್ಕೂ ಶಿವನೆ ಸರ್ವೋತ್ತಮ ಬ್ರಹ್ಮನಿರ್ಗುಣನು ಈ ವಿಧವಾದವ ವೇದವ್ಯಾಸರ ಕಂಡು ಬದರಿಲಿ ಸೂತ್ರ ಭಾಷ್ಯವ ಮಾಧವನೆ ಜಗದಾದಿಕಾರಣ ಮೋದ ನೀಡಿದ 4 ಮಧ್ವರಾಯರವಾಣಿ ಶುದ್ಧವೇದದಸಾರ ವೇದವ್ಯಾಸರ ಮತವು ಇದುಸಿದ್ಧ ಹರಿ ಆಣೆ ಕೇಳಿ ಗದ್ದರಾಗದೆ ಬಿದ್ದು ಇವರಡಿ ತಿದ್ದಿ ಮನವನು ಒದ್ದುದುರ್ಮತ ಪದ್ಮನಾಭನ ಪಾದಧ್ಯಾನದಿ ಅದ್ದಿ ಚಿತ್ತವ ಸಿದ್ಧಮಾಡಿರೋ ಮುಕ್ತಿಪಥವ 5 ಪರಿಸರನೀತನು ಪರಮಾಪ್ತನುಹರಿಗೆ ಗುರುವೊ ಜಗಕೆಲ್ಲ ಬರುವ ಬ್ರಹ್ಮನು ಕಾಣೋ ಓಡಿಸುಮಾರಿಮತಗಳ ಇಲ್ಲವೊ ಹರಿಯ ಧಾಮವು 6 ಮೂರುಹತ್ತು ಎರಡು ಗುರುಲಕ್ಷಣ ಕಾಯರು ನಿರುತ ಹಂಸೋಪಾಸನೆ ಮೂರುವಿಧದಲ್ಲಿ ಮಾಳ್ವರು ಭಾರತೀಶನ ಸಾರಗುಣಗಳ ಸೂರಿಗಳಿಗಳವಲ್ಲ ಅರಿಯಲು ಚರಣಪಿಡಿಯಿರೋ 7 ದಶದಿಶೆಗಳ ವಳಗೆ ಬಿಸಜನಾಭನ ಕೀರ್ತಿ ಎಸೆದು ಹಿಗ್ಗುವ ನಮ್ಮ ಅಸಮ ಮಧ್ವರನೋಡೋ ನಾಶಮಾಡುತ ಭಾಸಕರು ಎಂದೆನಿಸಿದ 8 ಅನಿಲದೇವನ ನಾಮ ಕನಸಿಲಾದರು ಒಮ್ಮೆ ನೆನೆದವನೇ ಧನ್ಯ ಮಾನ್ಯನೋ ಜಗದೊಳಗೆ ದೀನನೆನಿಸುತಲಿ ದಾನಿ ಜಯಮುನಿ ಅನಿಲನಂತರ ಶ್ರೀನಿವಾಸ ಕೃಷ್ಣವಿಠಲಗೆ ಶರಣು, ಶರಣು, ಶರಣೆಂದು 9
--------------
ಕೃಷ್ಣವಿಠಲದಾಸರು
ಮಧ್ವವರದಾ ಕೃಷ್ಣಾ ವಿಠಲ ಪೊರೆಯಿವಳ ಪ ಅಧ್ವರೇಡ್ಯನೆ | ದೇವ ಕಾರುಣ್ಯ ಮೂರ್ತೇ ಅ.ಪ. ಸುಸ್ತೇಶ ಸೂಚಿಸಿದ ಕ್ಲುಪ್ತಿಯನ್ನನುಸರಿಸಿಇತ್ತಿಹೆನು ಉಪದೇಶ ಚಿತ್ತಜನಪಿತನೆಅರ್ಥಿಯಲಿ ಮನ್ನಿಸುತ ಚಿತ್ತೈಸು ಬಿನ್ನಪವಕೃತ್ತಿವಾಸನ ತಾತ ಸ್ತುತ್ಯ ಸರ್ವೇಶ 1 ಸನ್ನುತ ಚರಣ ಸೀಮೆ ಮೀರಿದ ಮಹಿಮಭಾಮಿನಿಯ ಪೊರೆಯೆಂದು ಪ್ರಾರ್ಥಿಸುವೆ ಹರಿಯೇ2 ತರತಮದ ಸುಜ್ಞಾನ ಎರಡು ಮೂರ್ಭೇದಗಳುಅರಿವನೇ ಇತ್ತಿವಳ ಪೊರೆವುದೈ ಹರಿಯೆಮರುತ ಮತದಲ್ಲಿಹಳ ನಿರುತ ಕಾಯಲಿ ಬೇಕುಕರಿವರದ ಧೃವವರದ ತರಳೆಹಲ್ಯಯ ವರದ 3 ಪತಿಸೇವೆ ಹಿತದಿಂದ ಕೃತನಾಗಿಯಿವಳಿಂದಗತಿಗೆ ಸಾಧನವೆನಿಸೋ ಮರುತಾಂತರಾತ್ಮಹಿತ ವಹಿತವೆರಡರಲಿ ರತಿ ಸಮತೆ ಪ್ರದನಾಗಿಕೃತ ಕೃತ್ಯಳೆಂದೆನಿಸೊ | ಕೃತಿರಮಣದೇವ 4 ಜೀವ ಅಸ್ವಾತಂತ್ರ ದೇವ ನಿಜ ಸ್ವಾತಂತ್ರಜೀವ ಜಡರೂ ದೇವರಾಧೀನ ವೆಂಬಭಾವನೆ ತಿಳಿಸು ಗುರುಗೋವಿಂದ ವಿಠಲಯ್ಯಸಾವಧಾನದಿಯಿವಳ ಕೈಯನೇ ಪಿಡಿಯೋ 5
--------------
ಗುರುಗೋವಿಂದವಿಠಲರು
ಮನಮರಿಯಲಿದ್ದವಗೆಲ್ಲಿಹುದು ಆತ್ಮದ ಖೂನ ತನುವನಾಗಿದ್ದವಗೆಲ್ಲಿಹುದು ಙÁ್ಞನ ಧ್ರುವ ನಿಗಮ ಓದಿದರೇನು ಅಗಮ ಹೇಳಿದರೇನು ಬಗೆ ಬಗೆ ವೇಷ ಜಗದೊಳುದೋರಿದರೇನು 1 ಮಠವು ಮಾಡಿದರೇನು ಅಡವಿ ಸಾರಿದರೇನು ಸಠೆ ಮಾಡಿ ಸಂಸಾರ ಹಟವಿಡಿದರೇನು 2 ನಿಗದಿ ಹಾಕಿದರೇನು ಗಗನಕ್ಹಾರಿದರೇನು ಮಿಗಿಲಾಗಿದೋರಿ ಬಗವಿಯ ಪೊದ್ದರೇನು 3 ಗುಹ್ಯ ಸೇರಿದರೇನು ಬಾಹ್ಯ ಮೆರೆದರೇನು ದೇಹ ದಂಡಿಸಿ ಹರವ ತೊರೆದರೇನು 4 ಮನಕೆ ಮೀರಿಹ್ಯ ಸ್ಥಾನ ಘನಸುಖದಧಿಷ್ಠಾನ ದೀನಮಹಿಪತಿ ನೀ ಸಾಧಿಸೊ ಗುರುಜ್ಞಾನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನಮುಟ್ಟಿ ಮಾಡುವದೆ ಭಕ್ತಿಗಳು ಶ್ರುತದೃಷ್ಟನು ಮನದಿಂದ ಮಾಡುವ ನೇಮನಿತ್ಯಗಳು ಮಹಾ ಧರ್ಮಶಾಸ್ತ್ರಗಳು ಯತಿ ಕುಲದೀಪಗಳು 1 ತ್ರಿವೇಣಿ ಸಂಗಮ ಸ್ನಾನಗಳು ಮಹಾದಿವ್ಯ ಮಡಿಯಗಳು ಇಟ್ಟಿಹ ದ್ವಾದಶ ನಾಮಗಳು ಮನಗಂಡಿಹದೇ ಶ್ರೀಮುದ್ರೆಗಳು 2 ಸ್ಮರಣೆಯೊಳಿಹುದೆ ಸಂಧ್ಯಾನಗಳು ಜಪಸರ ಮಾಲೆಗಳು ಜಪತಪ ಧ್ಯಾನವೆ ಮೌನಗಳು ನಿರ್ಧಾರದಿ ಗುರುಪಾದ ನಿಶ್ಚೈಸಿಹ ವ್ರತ ಆಚಾರವೇ ನಿಷ್ಠೆಗಳು 3 ಮಾಡುವುದೇ ದೇವಪೂಜೆಗಳು ಅಂತ:ಕರಣದಿ ಗುರುಚರಣದ ಅಭಿಷೇಕಜ್ಞಾನ ಭಾಗೀರಥಿ ತೀರ್ಥಗಳು ಚಿತ್ತಚಿಂತನದಿ ದಿವ್ಯ ವಸ್ತ್ರಗಳು ಪರಿಮಳಪುಷ್ಪಗಳು 4 ಅನಿಮಿಷ ನೇತ್ರದಿ ನೋಡುವ ಘನ ಚಿತ್ಪ್ರಕಾಶವೆ ಸದಾನಂದದ ಮೊದಲಾದ ಸತ್ವರಜತಮ ಏಕಾರ್ತಿಗಳು ಸದ್ಭಾವನಿ ತಾಂಬೂಲಗಳಿಂದಲಿ ರತಿಮನ ಘನ ಮಂಗಳಾರ್ಚನಿ ಪಂಚ ಪ್ರಕಾಶಗಳು 5 ಶ್ರೀಗುರು ಸೇವೆ ಸತ್ಕಾರಗಳು ಜಯ ಲಕ್ಷ್ಮಿಯ ಷೋಡಶ ಉಪಚಾರಗಳಿಂದಲಿ ಮಹಾದಿವ್ಯ ಪೂಜೆಗಳು ತಲ್ಲೀನವು ಅಗಿಹ ಗುರುಪಾದದಿ ಪ್ರದಕ್ಷಿಣೆವೆ ಗುರುನಾಮವೇ ಸದ್ಗತಿ ಮುಕ್ತಿಗಳು 6 ಆತ್ಮಾನುಭವ ಗುರುದಾಸರಿಗಲ್ಲದೆ ಬಲ್ಲವೇನು ಪಶುಪ್ರಾಣಿಗಳು ಸಾಕ್ಷಾತ್ಕಾರಗಳು ಭಾಸ್ಕರ ಸ್ವಾಮಿಗಳು ತ್ರಾಹಿ ಜೀವನಮುಕ್ತಿಗಳು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನವ ಶೋಧಿಸದೆಲೆ ಡಂಭದಿ ದಿನದಿನದಲಿ ಕರ್ಮಮಾಡೆ ತನುವಿಗೆ ಬಲು ಕ್ಲೇಶವಲ್ಲದೆ ಅನುಕೂಲವೇನು ಪ ಕಾಮಕ್ರೋಧ ಲೋಭಮೋಹ ಮದ ಮತ್ಸರಗಳನು ಬಿಡದೆ ನಾಮಗಳನು ಬಳೆದು ಮರೆದರೆ ಶ್ರೀ ರಾಮನರಿಯನೆ 1 ಈಶ ಸೇವೆಗೆಂದು ಬಹಳ ಮೋಸದಿಂದ ಧನವ ಗಳಿಸಿ ಈಶನನ್ನು ಮರೆವ ನರನನು ಜಗದೀಶನರಿಯನೆ 2 ಪರಸತಿಯರ ಸರಸಗಳಿಗೆ ಜರಿದು ಮನವ ಮರುಳು ಮಾಡೆ ಸರಳತನದಿ ದಾನ ಮಾಡಲು ನರಹರಿಯು ಅರಿಯನೆ3 ಒಡಲು ಪೊರೆಯೆ ಸಡಗರದಲಿ ಮಡಿ ಮಡಿಯೆಂದು ನುಡಿವ ಮೂಢನ ಪೊಡವೀಶನರಿಯನೆ4 ಪನ್ನಗಾರಿವಾಹನ ಪ್ರಸನ್ನವದನ ಕೃಷ್ಣಮೂರ್ತಿಯ ಉನ್ನತ ಮಹಿಮೆಗಳನರಿತಗೆ ಇನ್ನೇನು ಬೇಕು 5
--------------
ವಿದ್ಯಾಪ್ರಸನ್ನತೀರ್ಥರು