ಒಟ್ಟು 4045 ಕಡೆಗಳಲ್ಲಿ , 127 ದಾಸರು , 2776 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಘವೇಂದ್ರ ಸ್ವಾಮಿಗಳ ಸ್ತೋತ್ರ ವೃಂದಾವನ ನೋಡಿರೋ - ಗುರುಗಳವೃಂದಾವನ ಪಾಡಿರೋ ಪ ವೃಂದಾವನ ನೋಡಿ - ಆನಂದ ಮದವೇರಿಚೆಂದದಿ ದ್ವಾದಶ ಪೌಂಡ್ರಾಂಕಿತಗೊಂಬ ಅ.ಪ ತುಂಗಭದ್ರಾ ನದಿಯ ತೀರದಿ ಇದ್ದತುಂಗ ಮಂಟಪ ಮಧ್ಯದಿಶೃಂಗಾರ ತುಲಸಿ ಪದ್ಮಾಕ್ಷ ಸರಗಳಿಂದಮಂಗಳಕರ ಮಹಾ ಮಹಿಮೆಯಿಂದೊಪ್ಪುವ 1 ಕರ ಮಹಾಮಹಿಮೆಯಿಂದೊಪ್ಪುವ 2 ಸಿಂಧು ನಿತ್ಯ ಸನ್ನಿಧಿಯಿಂದ ನಿರುತ ಪೊಜೆಯಗೊಂಬ 3
--------------
ವೆಂಕಟೇಶವಿಟ್ಠಲ
ರಾಘವೇಂದ್ರ ಸ್ವಾಮಿಗಳು ಅಂತರಂಗದಿ ಹರುಷವಾಂತೆವೈ ಗುರುವೆ ಪ ಸಂತಸದಿ ಸೇವೆಗಳ ಸ್ವೀಕರಿಸು ಪ್ರಭುವೆ ಅ.ಪ ಮಂಗಳಾಂಗಿಯರೆಲ್ಲ ಮಿಂದು ಮಡಿಗಳನ್ನುಟ್ಟು | ಮಂಗಳಾತ್ಮಕ ನಿನಗೆ ಮಜ್ಜನವ ಗೈಸೆ || ಅಂಗಳದಿ ದಧಿಕ್ಷೀರ ಘೃತಕುಂಭಗಳಧರಿಸಿ | ಸಿಂಗರದಿ ನಿಂದಿಹರೊ ಗುರುರಾಘವೇಂದ್ರ 1 ಧಾರುಣೀಸುರರೆಲ್ಲ ಧೀರಯತಿವರ ನಿನಗೆ | ಚಾರುವಿಭವದಿ ಕವಚ ಧಾರಣೆಯ ಗೈಸೆ || ಸೇರಿ ನುತಿಸುತೆ ನಿನ್ನ ಸಾರಗುಣ ಸಂಪನ್ನ | ಸಾರಿಹರೊ ನಿನ್ನಡಿಗೆ ಗುರುರಾಘವೇಂದ್ರ 2 ನಿಂದು ಭೂಸುರರೆಲ್ಲಾ ಜಯಜಯ ಜಯವೆನಲು| ಮಂದಹಾಸದಲವರ ಸೇವೆಯನು ಕೊಂಡೆ || ಇಂದು ಬೃಂದಾವನದಿ ನಿಂದು ದರ್ಶನವಿತ್ತೆ | ಕುಂದದಿಷ್ಟವ ಸಲಿಸೊ ಗುರುರಾಘವೇಂದ್ರ 3 ಉಡುರಾಶಿಗಳ ಮಧ್ಯೆ ಉಡುಪ ಮೆರೆಯುವ ತೆರದಿ | ಉಡುಗಣಿಕ್ಷೇತ್ರದೊಳು ನಿಂದು ಮೆರೆದೆ || ಕಡುಮಮತೆಯಲಿ ನಿನ್ನ ಸಡಗರದಿ ಸೇವಿಪರ | ಎಡರುಗಳ ಪರಿಹರಿಸೊ ಗುರುರಾಘವೇಂದ್ರ4 ನರಹರಿಯ ಮೆಚ್ಚಿಸಿದೆ ಪ್ರಹ್ಲಾದನೆನಿಸುತಲೆ | ಸಿರಿಕೃಷ್ಣನೊಲಿಸಿದಿಯೊ ವ್ಯಾಸಮುನಿ || ಸಿರಿರಾಮಚಂದ್ರಪ್ರಿಯ ಗುರುರಾಘವೇಂದ್ರನೆ | ಕರುಣದಲಿ ತೋರೀಗ ಶ್ರೀಶಕೇಶವನ5
--------------
ಶ್ರೀಶ ಕೇಶವದಾಸರು
ರಾಘವೇಂದ್ರಯತಿಗಳು ಗುರುರಾಯರ ನಂಬಿರೋ ರಾಘವೇಂದ್ರ ಗುರುರಾಯರ ನಂಬಿರೋ ಜಗದೊಳು ಪ. ಗುರುರಾಯರ ನಂಬಿ ವರಗಳ ಬೇಡಿರೊ ನರಹರಿ ಪದ ಧ್ಯಾನಿಪ ಕರುಣವ ಬೀರುವಂಥ 1 ಆದಿ ಪ್ರಹ್ಲಾದರು ಮೋದದಿ ಹರಿಪದ ಆದರದಿಂದ ಜಗಕೆ ಸಾಧಿಸಿ ಬೀರಿದರೊ 2 ದ್ವಿತೀಯ ವ್ಯಾಸರಾಜ ಸ್ತುತ ಬ್ರಹ್ಮಣ್ಯಾರ್ಯ ಕರ ಗತಪುರುಷೋತ್ತಮ ಗುಹ ಪಥದೊಳಗಿಪ್ಪರ 3 ತೃತೀಯ ರಾಘವೇಂದ್ರ ಪತಿತ ಪಾವನ ನಾಮ ರತ್ನ ಖಚಿತವಾಗಿದೆ ಭಕ್ತ ಸುಚರಿತರೆಲ್ಲ ಬೇಗ 4 ಭೂತ ಪ್ರೇತಗಳ ಪ್ರೀತಿಯೊಳಳಿದು ಶ್ವೇತ ಕುಷ್ಠಗಳ ದೂರ ಮಾಳ್ಪವರ 5 ಪಾದ ಪಂಕಜ ದುರಿತ ದೂರ ಶ್ರೀ ಶ್ರೀನಿವಾಸನ ಭಜಿಪ ಗುರು 6
--------------
ಸರಸ್ವತಿ ಬಾಯಿ
ರಾಘವೇಂದ್ರರಾಯರೆಂಬ ರತುನ ದೊರೆಕಿತೋ ಪಾದಸೇವೆ ಮಾಡುವಂಥ ಭಾಗ್ಯ ಲಭಿಸಿತೋ ಪ ಮಂಗಳಾರಿಗರು ತುಂಗಾತೀರದಿ ನಿಂದಿಹರೋ ಕಂಗಳಿಂದಲಿ ಕಂಡು | ಮನದಿ ಹರುಷಗೊಳುವರೋ1 ನಿತ್ಯ ನಿತ್ಯದಿ ಭಕ್ತಾದಿಗಳು ಹಾಡಿ ಪೊಗಳುವರೋ ತುಷ್ಟ ಬಾಗುತಲವರ ಮನದಿಷ್ಟಗಳನೆ ಸಲಿಸುವರೊ 2 ಬಂದ ಬಂದ ಜನರಿಗೆಲ್ಲ ಮೃಷ್ಟಾನ್ನ ಉಣಿಸುವರೊ ಉಣಿಸಿ, ದಣಿಸಿ, ಹರಸಿ, ಅವರನಾದರದಿ ಕಳಿಸಿಕೊಡುವರೋ 3 ಶ್ರೀ ರಾಘವೇಂದ್ರರೂ ನಂತ ಮಹಿಮರೂ 4 ಅಂದಣವೇರಿ ರಾಯರು ಬರುವಾ ವೈಭವ ನೋಡುತ್ತಾ ಮುಂದೆ ಬಂದು ಶ್ರೀ ರಾಘವೇಂದ್ರರಿಗೊಂದಿಸೂವರೂ 5
--------------
ರಾಧಾಬಾಯಿ
ರಾಘವೇಂದ್ರರು ಸುಂದರ ಗುರು ರಾಘವೇಂದ್ರರೆಂತೆಂಬುವೋ ಕರ್ಮಂದಿಗಳರಸನೆ ವಂದಿಸುವೆ ಪ ಸನ್ನುತ ಮಹಿಮರೆಂದು ನಾ ಬೇಡುವೆ ಅ.ಪ. ಪರಮ ಕರುಣೀ ನಿಜ ಚರಣ ಸೇವಕರನ್ನು ಉದ್ಧರಿಸುತಲನುದಿನ ಪೊರೆವನೆಂದೂಕರವ ಪಿಡಿದು ತ್ವರ ಪರಿಪರಿಯಲಿ ನಿನ್ನಾತಪೊರೆಯುವೆ ಕೈ ಪಿಡಿಯೆಂದು ಕರೆಯುವೆಧರೆಯೊಳಗೆ ನಿಮ್ಮಯ ಸರಿ ಧ್ವರೆಗಳ ಕಾಣೆ ಮ-ದ್ಗುರುವೆ ಯನ್ನಂಥ ಪಾಮರ ನರನ ಕಾಯೋದು ನಿಮಗಾಶ್ಚರ್ಯವೇವರಯೋಗಿವರ್ಯನೆ ನಿರುತ ಬೃಂದಾವನದಿ ರಾಜಿಪೊಮೆರೆವ ಮಂಗಳ ಚರಣ ತವಪದಸ್ಮರಿಪೆ ಸಂತತ ನೀಡು ತ್ವರಿತದಿಹರುಷದಲಿ ನಿರ್ಜರರ ತರುವೆ 1 ಪಾದ ಚಾರು ಭೂರಿ ಕಿಟೀತಜಧೀರ ನಿನ್ನನು ಸಾರಿದವರನು ಪಾರುಗಾಣಿಪನೆಂದು ಡಂಗುರಸಾರುತಲಿದೆಯದು ವೀರಸಲಿಸೊ 2 ಏಸೇಸು ಜನ್ಮದಿ ಕ್ಲೇಶವನನುಭವಿಸಿಘಾಸಿ ಮಾಡೆನೊ ಮನದಾಶೆಯಿಂದಾಹೇಸಿ ವಿಷಯಂಗಳು ಲೇಸುತಿಳಿದು ಮರೆಮೋಸಾದಿ ದುಷ್ಟರ ಸಹವಾಸದಿ ಸೇರಿದೆಮಂದಹಾಸಾದಿ ಸಂತೈಸು ರವಿ ಸಂಕಾಶಜನಹೃದೋಷ ಸಾಗರದಿಕಾಷಾಯವಸನ ಭೂಷಿತಾಂಗ ವ್ಯಾಸಮುನಿ ಭರದೀಗಜರಾಮಪುರದೀಶ ಮುಖರಿಗೆ ತೋಷ ನೀ ಗರದಿಈ ಸಮಯ ಸ್ತುತಿಸುವೆನುಶ್ರೀ ಸಮೀರ ಮತಾಬ್ಧಿ ಚಂದಿರಈಶಗೆದುರ ರತೀಶ ಸನ್ನುತಶ್ರೀಶ ಗುರು ಇಂದಿರೇಶನಂಘ್ರಿಗೆದಾಸ್ಯ ಭಾವ ರಹಸ್ಯ ತೋರಿದೆ 3
--------------
ಗುರುಇಂದಿರೇಶರು
ರಾಘವೇಂದ್ರಸ್ವಾಮಿಗಳ ಸ್ತೋತ್ರ ಕಂಡು ಧನ್ಯನಾದೆ ಗುರುಗಳ - ಕಣ್ಣಾರೆ ನಾಕಂಡು ಧನ್ಯನಾದೆ ಈ ಗುರುಗಳ ಪ ತುಂಗಾತಟದಿ ಬಂದು ನಿಂತ ಪಂಗು ಬಧಿರಾದ್ಯಂಗ ಹೀನರಅಂಗಗೈಸಿ ಸಲಹುವಾ - ನರಸಿಂಗನಂಘ್ರಿ ಭಜಕರಿವರ 1 ಗುರುವರ ಸುಗುಣೇಂದ್ರರಿಂದಪರಿಪರಿಯಲಿ ಸೇವೆಗೊಳುತವರಮಂತ್ರಾಲಯ ಪುರದಿ ಮೆರೆವಪರಿಮಳಾಖ್ಯ ಗ್ರಂಥಕರ್ತರ 2 ಸೋ ಅಹಂ ಎನ್ನದೆ ಹರಿಯ ದಾಸೋ ಅಹಂ ಎನ್ನಲು ಒಲಿದು ವಿಜಯಮೋಹನ ವಿಠ್ಠಲನ್ನ ಪರಮಸ್ನೇಹದಿಂದ ತೋರುವವರ 3
--------------
ಮೋಹನದಾಸರು
ರಾಜೀವದಳನೇತ್ರ ರಾಮಚಂದ್ರನೆ ಶುಭ- ನಾಮಧೇಯನೆ ನಿನಗಾನಮಿಸುವೆನು ಪ ರಾಮರಾಕ್ಷಸಕುಲ ಭಯಂಕರ ರಾಮದಶರಥ ಪುತ್ರನೆ ವರ ಸಾಮಗಾನ ವಿಲೋಲ ಶ್ರೀವರ ರಾಮ ಭರತ ಶತ್ರುಘ್ನ ಪಾಲಕ ಅ.ಪ ಸುರರೆಲ್ಲ ನೆರೆದು ಋಷಿವರರೆಲ್ಲ ಒಂದಾಗಿ ವರ ಕ್ಷೀರಾಂಬುಧಿಯ ಸಾರುತ ವೇಗದಿ ಪರಮಾತ್ಮ ನಿನ ಕಂಡು ಪರಿಪರಿ ಸ್ಮರಿಸುತ ನೆರೆದರು ದೇವ ಗಂಧರ್ವ ನಾರದರೆಲ್ಲ ಗರುಡ ಗಮನನೆ ಉರಗಶಯನನೆ ಪರಮ ಪುರುಷನೆ ಪುಣ್ಯಚರಿತನೆ ತ್ವರದಿ ಎಮ್ಮಯ ಮೊರೆಯ ಕೇಳೆಂದು ಭರದಿ ಪ್ರಾರ್ಥನೆ ಮಾಡುತಿಹರು 1 ಖೂಳ ದೈತ್ಯರು ನಮ್ಮ ಬಾಳಗೊಡರೊ ದೇವ ಭಾಳ ವ್ಯಾಕುಲರಾಗಿ ದು:ಖಿಪೆವು ಕೇಳಿ ತಡಮಾಡದೆ ಪಾಲಿಸಿ ಸಲಹಯ್ಯ ಶ್ರೀಲೋಲ ಶ್ರೀವರ ಶ್ರೀವತ್ಸಲಾಂಛನ ಶ್ರೀಶ ಶ್ರೀ ಭೂದೇವಿ ರಮಣನೆ ಮಾತುಳಾಂತಕ ಮದನಜನಕನೆ ವಾಸುದೇವನೆ ಭಜಿಪ ಭಕ್ತರ ಸೋಸಿನಲಿ ರಕ್ಷಿಸುತ ಪೊರೆಯುವೆ 2 ಭಕ್ತವತ್ಸಲ ಸ್ವಾಮಿ ಭಕ್ತರ ಸುರಧೇನು ಯುಕ್ತ ಮಾತುಗಳಾಡಿ ಸಂತಯಿಸಿ ಸತ್ಯ ಸಂಕಲ್ಪನು ಮತ್ತವರನು ಕಳುಹಿ ಸತ್ಯಸಂಧನ ದಶರಥನುದರದಿ ಪುಟ್ಟಿ ಮತ್ತೆ ವಿಶ್ವಾಮಿತ್ರ ಬರಲು ಅರ್ಥಿಯಲಿ ಯಾಗವನೆ ನಡೆಸಲು ಸುತ್ತಿ ಬರುವ ಸುರರನೆ ಸದೆದು ಮತ್ತೆ ಯಾಗ ನಿರ್ವಿಘ್ನ ಮಾಡಿದ 3 ಸೀತಾಸ್ವಯಂವರಕ್ಕಾಗಿ ಬರುತಿರಲಾಗವರು ಗೌತಮ ಸತಿಯ ಶಾಪಹರಿಸಿ ಪಾತಕಿ ತಾಟಕಿಯನು ಕೊಂದು ಹರುಷದಿ ನಿ- ರ್ಭೀತನಾಗಿ ಮಿಥಿಲಾಪುರಕೆ ಸೇರಲು ಬಂದು ಆತ ಲಕ್ಷ್ಮಣನೊಡನೆ ಶಿವಧನು ನೀತಿಯಿಂದೆತ್ತುತಲಿ ಸೀತೆಯು ಪ್ರೀತಿಯಲಿ ವನಮಾಲೆ ಹಾಕಲು ಆಕೆಯ ಕೈಪಿಡಿದ ರಾಮನೆ 4 ರಾಮಲಕ್ಷ್ಮಣ ಭರತ ಶತ್ರುಘ್ನರಿಗೆ ಲಗ್ನ ನೇಮದಿಂದಲಿ ಮಾಡಿ ಕಳುಹಲಾಗ ಸಾಮಜವರ ಅಯೋಧ್ಯಾಪುರದಿ ಭಕ್ತ- ಸ್ತೋಮವನೆರಹಿ ರಾಜ್ಯಾಭಿಷೇಕವ ನಡಸೆ ಆ ಮಹಾಮುನಿ ಸ್ತೋಮ ಸುರಗಣ ರಾಮನಿಗೆ ಪಟ್ಟವೆನುತ ಹರುಷಿಸೆ ಆ ಮಹಾಕೈಕೆ ವರವ ಬೇಡುತ ರಾಮನಿಗೆ ವನವಾಸವೆನಲು 5 ವನವನ ಚರಿಸುತ ಘನರಕ್ಕಸರ ಕೊಂದು ವನಜಾಕ್ಷಿ ಮಾಯಾಮೃಗವೆ ಬೇಡಲು ವನಮೃಗ ಬೆನ್ನಟ್ಟಿ ತರುವೆನೆನುತ ಪೋಗಿ ಬಣಗು ರಾವಣ ಸೀತಾಹರಣವ ಮಾಡಲು ಕುರುಹು ಕಾಣದೆ ಸೀತೆಯ ವನವನದಿ ಚರಿಸುವ ಸಮಯದಲಿ ಕಪಿ ವರರ ಸೈನ್ಯವ ಕಳುಹಿ ಮುದ್ರಿಕೆ ಇತ್ತು ಜನಕ ಜಾತೆಯ ನೋಡಿ ಬರಲು 6 ಕಡಲ ಕಟ್ಟುತ ಸೈನ್ಯ ನಡಿಸಿ ಯುದ್ಧವ ಮಾಡೆ ಬಿಡದೆ ರಾವಣ ಸಹಿತೆಲ್ಲರನು ಕೊಂದು ಕಡು ಭಕ್ತನಿಗೆ ಲಂಕಾಪುರದಲಿ ಪಟ್ಟವ ಕಟ್ಟಿ ಮಡದಿ ಸಹಿತ ಪುಷ್ಪಕವನೇರಿ ಬರುತಿರೆ ಸಡಗರದಿ ಹನುಮಂತ ಭರತಗೆ ಒಡೆಯ ಬರುತಿಹನೆಂದು ಪೇಳಲು ಕಡುಹರುಷದಿ ಅಯೋಧ್ಯೆಯನಾಳಿದ ಕಡಲೊಡೆಯ ಕಮಲನಾಭ ವಿಠ್ಠಲನೆ 7 ಬಂದ ಶ್ರೀರಾಮಚಂದ್ರ ಭಾಗವತರ ಕೂಡಿಇಂದಿರೆ ಜಾನಕಿ ಸೌಮಿತ್ರಿ ಸಹಿತದಿ
--------------
ನಿಡಗುರುಕಿ ಜೀವೂಬಾಯಿ
ರಾಜೀಸುವದು ನಾಭಿಯಾ ಸುರಗಂಗೆಯಂ ಶೇಧೀಭಿಯಾ ಪ ನೇತ್ರನ್ನದಯ ಪೂರ್ಣದಾ ಕಮಲಂ ಹಾರಿಸಿ ನೀಡುವ ಬುದ್ದಿ ವಿಮಲಂ ನೇ ಶ್ರೀ ವೆಂಕಟೇಶಂ ಸದಾ1 ಪೊಗಳಲಿಲ್ಲ ಮತಿ ಸಲ್ಲದೇ ಆಶ್ರಯಸಿ ನೆಲೆಗೊಳ್ಳದೇ ಭವಕಾದೆ ಪರಿಹಾರ ದಾ ಪರಿಯಂ ಕಾಣದೆ ಬೇಡಿ ಕೊಂಬೆ ಧೋರಿಯಂ ಶ್ರೀ ವೆಂಕಟೇಶಂ ಸದಾ 2 ಪಟನಾದೆ ನೆರೆ ಭಾಗ್ಯದೀ ನಡಲಂ ದೀಗಳಿ ಪಶ್ಚಾತ್ತಾಪ ಒಡಲಂ ಮನವಿಲ್ಲ ವೈರಾಗ್ಯ ದೀ ಮುಸುಕಿಷ್ಟು ದನಿವಾರ ದಾ ಕಡಲಂ ಮನಿಯೆ ಕಾಯೋ ಸಾಖರದಿಡಲಂ ಶ್ರೀ ವೆಂಕಟೇಶಂ ಸದಾ3 ಬಿದಿರೀಸಿ ವಢ ಮಾಡಿದೇ ಕೊನಿಯಿಂದ ಕಲಕ್ಯಾಡಿದೆ ಮುದವಿತ್ತೆ ಭಕ್ತಂಗದಾ ಮರಳಂ ಕಾವದು ಭಕ್ತಿಗಿಲ್ಲ ಹುರಳಂ ಶ್ರೀ ವೆಂಕಟೇಶಂ ಸದಾ 4 ಕಾಂತಿಚರಣಾಂಬುಜಭಾವ ಭಕ್ತಿಂದಲಿ ಶರಣಂ ಪೊಕ್ಕವರಿಂಗೆ ಜನ್ಮಮರಣಂ ಹರಿಸೂವದಯದಿಂದಲಿ ಸ್ಮರಣಂ ಮಾಡಲು ಪಾಪಹರಣಂ ಸಲೆ ಸಾಧ್ಯಸುರ ಸಂಪದಾ ಕರುಣ ಬೀರುತ ಕಾಯೋಯನ್ನಹರಣಂ ಶ್ರೀವೆಂಕಟೇಶಂ ಸದಾ 5 ಮಾನವ ತನುಂಪಡದೀಗ ಸದ್ಗತಿಯಾ ಗಡ ಹೊಂದಿ ವಿಷಯೇಚ್ಛೆಯಾ ಅಪರಾಧವನು ಗಣಿ ಸದಾ ಪಿತನಂ ತನ್ನಯ ಕಾಯೋ ಜ್ಞಾನ ಚ್ಯುತ ನಂ ಶ್ರೀ ವೆಂಕಟೇಶಂ ಸದಾ 6 ಮೆಚ್ಚಿ ಸುಮನ ನರಿಯೆನು ಯಂತ್ರಿಪ್ಪ ದಾಂನರಿಯೆನು ಗಜವಂ ತಾರಿಸಿದಂತೆಯನ್ನ ವೃಜಿನಂ ದಾಟೀ ಸುವಾ ಬಿರದಾ ಕುಜನಂ ಸೇರಿದಂತೆ ಯನ್ನಂ ಕಾಯೋದ್ವಿಜನಂ ಶ್ರೀ ವೆಂಕಟೇಶಂ ಸದಾ 7 ಸದನಂ ಸುದ್ಗುಣ ಗಾಣದಬ್ಜವದನಂ ಸ್ಪರ್ಧಿಸುತಿದನುಜರಾ ಕದನಂ ಕರ್ಕಶವಾಗಿ ಸೌಖ್ಯ ಪ್ರದನಂ ಭಾವಿಸುತಿಹ ಮನುಜರಾ ಸುಕುಮಾರ ಘನ ಶಾಮದಾ ಇದನಂ ಬಣ್ಣಿಪರಾರು ವೇದವಿದಿನಂ ಶ್ರೀ ವೆಂಕಟೇಶಂ ಸದಾ8 ಶಿಖಿ ಕೇತನಾ ಕಾಯ ಭಂಡಿಯವಾಧನು ಪ್ರಾರ್ಥನಾ ಪರಬ್ರಹ್ಮ ತುರುಗಾಯ್ವನೆಂದು ಪೊಗಳ್ವಾರಿಂತರಿವರೈ ಚರಿತದಾ ಗುರು ಮಹಿಪತಿ ಕಂದಸಲಹೋ ಸ್ಮರಿಸಲು ಅಷ್ಟಕವಾ 9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಾಜೋಪಚಾರರಾಜೋಪಚಾರರಾಜೀವನೇತ್ರ ನೀನವಧರಿಸು ಬೇಗ ಪಸಾವಿರದ ದಳವುಳ್ಳ ಕಮಲವೊಂದಕೆ ಶಕ್ತಿಸಾವಿರದ ಮೌಕ್ತಿಕದ ಸರಗಳೊಪ್ಪಿಹವುಕಾವಿಹುದು ಸಕಲ ದೇವಾತ್ಮಕದ ಶಾರದೆಯುನಾ ವಹಿಸಿ ತುರಿಯ ಕಲಶದ ಛತ್ರವೆಂದೆಂಬ 1ಆವಗವು ಸತ್ವಾದಿ ಗುಣಗಳಿಂದೊಪ್ಪಿರುವಆವರಣ ವಿಕ್ಷೇಪ ಶಕ್ತಿಯೆಂಬೆರಡುದೇವ ನಿನ್ನುಭಯ ಪಾಶ್ರ್ವದಲೊಲವುತಿಹ ಸರ್ವಭಾವದಿಂದುಭಯ ಚಾಮರವೆರಡರಿಂದ 2ಗಂಧರ್ವ ನಗರದಿಂದೈತಂದ ನಾರಿಯರುಛಂದದಿಂ ನರ್ತಿಸುತಲಿಹರೈವರಿವರುಒಂದಾಗಿ ಬಳಿಕಿವರ ಹೊಂದಿ ಮತ್ತೈವರಿರೆಹಿಂದೆ ನಾಲ್ವರುವೆರಸಿ ನಲಿವ ನರ್ತನವೆಂಬ 3ಪರವೆಂದು ನಾಭಿಯಲಿ ಪಶ್ಯಂತಿ ಹೃದಯದಲಿಸ್ವರವಿಹುದು ಕಂಠದಲಿ ಮಧ್ಯಮಾಖ್ಯೆಯಲಿಸ್ಫುರಿಸಿ ಮುಖಕಮಲದಲಿ ವೇದಶಾಸ್ತ್ರಗಳಾಗಿಮೆರೆವ ವೈಖರಿಯೆಂಬ ಗೀತವಿದ ಕೇಳು 4ತಾಳ ಮರ್ದಳೆ ಘಂಟೆ ಭೇರಿ ಶಂಖಗಳಿಂದಮೇಲಾದ ವೀಣೆ ವೇಣುಗಳ ರವದಿಂದಲಾಲಿಸುವ ಛಿಣಿ ಛಿಣೀ ಛಿಣಿಗಳೆಂಬವರಿಂದನೀಲ ಮೇಘಧ್ವಾನ ದಶನಾದದಿಂದ 5ಪರಿಪರಿಯ ಗತಿಯುಳ್ಳ ಚಿತ್ತವೆಂಬಶ್ವವನುವರ ಸತ್ವ ಗುಣವೆಂಬ ಹಲ್ಲಣವ ಬಿಗಿದುನಿರತ ಪರಮಾತ್ಮನೀಕ್ಷಣದ ಕಡಿವಾಣವನುಪಿರಿದಾಗಿಯಳವಡಿಸಿ ಮುಂದೆ ನಿಂದಿಹುದಾಗಿ 6ಒಲವುತಿಹ ಸುಖ ದುಃಖವೆರಡು ಘಂಟೆಗಳಿಂದನೆಲನ ಸೋಕುವ ಕಾಮ ಸುಂಡಿಲದರಿಂದಫಲ ಚತುಷ್ಟಯ ಪಾದ ಮೇಲು ಮಂಟಪದಿಂದಬಲುಮೆಯಹ ಮೂಲ ಕಾರಣವೆಂಬ ಗಜವು 7ಹಿಂದೆಮುಂದರುವರೊಂದಾಗಿ ವಹಿಸಿರಲದಕೆಹೊಂದಿಸಿದ ಚೌಕಿ ಮನವೆಂಬುದದರಲ್ಲಿಮಂದ ಮೃದು ಬಹು ವಿಷಯ ಸುಖದ ಹಾಸಿಕೆ ಹಾಸಿದಂದಳವಿದನುಭವದ ಕೊಂಬಿನಿಂದೊಪ್ಪಿರುವ 8ಆರು ನೆಲೆಯುಳ್ಳ ರಥವದಕೆ ಶಕ್ತಿಗಳೆಂಬಮೂರು ಕಲಶಗಳಲ್ಲಿ ನಾಲ್ಕು ಸತ್ತಿಗೆಯುಮೂರವಸ್ಥೆಗಳದರ ತುರಿಯವೆಂಬುದೆ ನಾಲ್ಕುಮೂರುಲೋಕವನಾಳ್ವ ಮಹಿಮ ನೀ ಪ್ರತಿಗ್ರಹಿಸು 9ನುಡಿವುದೆಲ್ಲವು ವೇದ ನಡೆವುದೆಲ್ಲವು ಶಾಸ್ತ್ರಬಿಡದೆ ನಿನ್ನಾಜ್ಞೆಯೊಳಗಿರೆ ಪುರಾಣದೃಢವಾಗಿ ನಿನ್ನ ಭಜನೆಯ ಮಾಳ್ಪ ದಿವಸವದುಕಡುಪುಣ್ಯವಾದ ಪಂಚಾಂಗವೆನಿಸುವದು 10ಉದಯದಲಿ ನಿನ್ನ ಸ್ಮರಣೆಯ ಮಾಡೆ ಪುಣ್ಯತಿಥಿಒದಗಿಸುವ ಸತ್ಕರ್ಮ ವಾರವೆನಿಸುವದುಅದರಲ್ಲಿಯನುಭವವೆ ನಕ್ಷತ್ರ ನಿನ್ನಲ್ಲಿಹುದುಗೆ ಜೀವನು ಯೋಗ ಹುದುಗುವದೆ ಕರಣ 11ಸಕಲ ವೇದಂಗಳಲಿ ಪ್ರತಿಪಾದಿಸಿದ ಫಲವುವಿಕಳವಿಲ್ಲದೆ ನಿನ್ನ ನಿಮಿಷ ಧ್ಯಾನಿಸಲುಸಕಲ ತೀರ್ಥಸ್ನಾನ ದಾನ ಜಪ ತಪ ಯಜ್ಞಸಕಲವೂ ಬಹುದೆಂಬ ಸರ್ವೋಪಚಾರ 12ಸುರ ಸಿದ್ಧ ಮುನಿವೃಂದ ನಿರತ ಸೇವಿತ ಚರಣಶರಣಾಗತೋದ್ದರಣ ಶರಧಿಜಾರಮಣತಿರುಪತಿಯ ಸ್ಥಿರವಾಸ ನಿರುಪಮ ಮಹಾಕರುಣಮರೆಯೊಕ್ಕೆ ಸಲಹೆನ್ನ ಪ್ರಾಣ ವೆಂಕಟರಮಣ 13ಓಂ ಜುನೇ ನಮಃ
--------------
ತಿಮ್ಮಪ್ಪದಾಸರು
ರಾಧಾರಮಣ ವಿಠಲ ನೀನಿವಳಸಾದರದಿ ಕಾಪಾಡೊ ಹರಿಯೇ ಪ ವೇದವೇದ್ಯನೆ ಪೂರ್ಣ ಬೋಧಸನ್ನುತ ನಿನ್ನಪಾದ ಭಜಕಳ ಬಿಡದೆ ಕಾಪಾಡೊ ಹರಿಯೇಅ.ಪ. ದಾಸದೀಕ್ಷೆಯಲಿ ಅಭಿಲಾಷೆ ಪೊಂದಿಹಳಿವಳುಶ್ರೀತ ತವ ಪಾದಾಬ್ಜ ದಾಸ್ಯವನೆ ಇತ್ತೂನೀಸಲಹೊ ಸುಜ್ಞಾನ ಭಕುತಿ ಭಾಗ್ಯವನಿತ್ತುಶೇಷಾದಿ ದಿವಿಜೇಡ್ಯ ವಾಸುದೇವಾಖ್ಯಾ 1 ನಿತ್ಯ ಮಂಗಳ ಮೂರ್ತೇಸತ್ಯಭಾಮಾ ಪತಿಯೆ ಪ್ರತ್ಯಹರ ನಿನ್ನ ಸ್ಮøತಿಇತ್ತು ಪಾಲಿಸು ಎಂದು ಪ್ರಾರ್ಥಿಸುವೆ ನಿನ್ನಾ 2 ಆಪನ್ನ ಪರಿಪಾಲಕಾಪಾಡ ಬೇಕಿವಳ ಗೋಪಾಲ ಬಾಲಾ 3 ಪತಿಯೆ ಪರದೈವವೆಂಬುನ್ನತದ ಮತಿಯಿತ್ತುಹಿತದಿಂದ ಮಧ್ವಮತ ತತ್ವಾಮೃತವನುಣಿಸೀಕೃತ ಕಾರ್ಯಳೆಂದೆನಿಸಿ ಹೃತ್ಸರೋಜದಿ ಚರಣಶತ ಪತ್ರ ತೋರಯ್ಯ ಶ್ರುತಿವಿನುತ ಹರಿಯೆ 4 ಘೋರ ದುರಿತಾಬ್ಧಿಯನು ಪಾರಗೈಸುವ ನಿನ್ನಕಾರುಣ್ಯಕೆಣೆಯುಂಟೆ ನೀರಜಾಕ್ಷಾಚಾರುಗುಣವಂತೆ ಬಾಲೆಯನು ಉದ್ಧರಿಸುಮಾರಾರಿ ಸಖ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ರಾಮ ನಿನ್ನಯ ದಿವ್ಯ ನಾಮವೇ ಗತಿಯೆಂಬೆ ಪಾಮರನೆಂದೆನ್ನ ಪಾಲಿಸು ತಂದೆ ಪ. ಸುರರಾಜನಂಗಸಂಗವಗೈದು ಶಿಲೆಯಾದ ವರಮುನಿ ಗೌತಮನರಸಿಯು ನಿನ್ನ ಚರಣಾರವಿಂದ ಸಂಸ್ಪರ್ಶಮಾತ್ರದಿ ದಿವ್ಯ ತರುಣಿಯಾಗಿಹಳೆಂಬ ಪರಿಯ ನಂಬಿದೆನು 1 ಪ್ರಥಮ ವರ್ಣವು ಪಾಪ ತತಿಗಳ ತರಿವುದು ಜತನ ಮಾಡುವುದನ್ಯ ವರ್ಣವೆಂದೆನುತ ನಿತ್ಯ ಸಂಸ್ತುತಿಮಾಳ್ಪವದರಿಂದಾ- ಶ್ರಿತ ಕಲ್ಪತರು ನೀನೆ ಗತಿಯೆಂಬೆ ನಿರತಾ 2 ನಿತ್ಯ ನಿರ್ನಾಮಗೊಳಿಸು ಪನ್ನಗಾಚಲನಾಥ ಪರಿಪೂರ್ಣ ಕೃಪೆಯಿಂದ ಮನ್ನಿಸಿ ಮನಸನ್ನು ನಿನ್ನಲ್ಲಿ ಇರಿಸು 3
--------------
ತುಪಾಕಿ ವೆಂಕಟರಮಣಾಚಾರ್ಯ
ರಾಮ ಭಜನೆ ಮಾಡೋ ಮನುಜ ರಾಮ ಭಜನೆ ಮಾಡೋ ಪ ರಾಮ ರಾಮ ಜಯ ರಾಘವ ಸೀತಾ ರಾಮನೆಂದು ಸುಸ್ವರದಲಿ ಪಾಡುತಅ.ಪ ತಾಳವನು ಬಿಡಬೇಡ ಮೇಳವನು ಮರೆಬೇಡ ತಾಳಮೇಳಗಳ ಬಿಟ್ಟು ನುಡಿದರೆ ತಾಳನು ನಮ್ಮ ಇಳಾಸುತೆಯರಸನು 1 ಭೃತ್ಯ ಮನೋಭಾವದಲಿ ಸತ್ಯ ಜ್ಞಾನ ಅನಂತ ಬ್ರಹ್ಮನು ಹೃದ್ಗತನೆಂದರಿಯುತ ಭಕುತಿಯಲಿ 2 ಭಲರೆ ಭಲರೆಯೆಂದು ತಲೆದೂಗುವ ತೆರದಿ ಕಲಿಯುಗದಿ ವರಕೀರ್ತನೆಯಿಂದಲಿ ಸುಲಭದಿ ಹರಿಯ ಪ್ರಸನ್ನತೆ ಪಡೆಯಲು 3
--------------
ವಿದ್ಯಾಪ್ರಸನ್ನತೀರ್ಥರು
ರಾಮ ರಸಾಯನವಾ ಬನ್ನಿರಯ್ಯ ಸೇವಿಸುವಾಪ ಅವನಿಲಿ ನಾನಾವಿಪತ್ತದ ಪಡುವಾ | ಭವರೋಗ ಮೂಲ ಛೇದಿಸುವಾ 1 ಭ್ರಮೆಗೊಂಡು ಮತ್ತೆ ಜನ್ಮಕ ಬಾರದಿರುವಾ | ಅಮರತ್ವವನು ಬ್ಯಾಗ ಪಡೆವಾ 2 ಗುರು ಮಹಿಪತೀ ಪ್ರಭು ದಾಸರು ಮೆರೆವಾ | ವರಸಂಗದಲಿ ಸುಖಿಸುವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಾಮ ರಾಮ ರಾಮ ಶ್ರೀರಾಮನೆನ್ನಿರೊ ಪ್ರೇಮದಿಂದ ಶ್ರೀ ಜಾನಕಿ ಪ್ರೇಮನನೆನೆಯಿರೊ ಪ ಅಂದದಿಂದ ಈ ದಶರಥನಂದನೆಂದು ---- ಚಂದದಿಂದ ಚಲನೆಯಿಲ್ಲದೆ ಚಿತ್ತಸ್ವಸ್ಥದಿ ಕಾಲ ಕಳೆಯ ಹೊಂದಿ ದೇವರ ಚರಣ ಕಮಲಾ ನಂದ ಅರ್ಚಿಸುವ ಮಂದಿರದಿ ಭಜಿಸಿರೊ 1 ಕಾಮನಯ್ಯನ ಕಡಲೊಳಾಳ್ದÀ್ದನ ಕೂರ್ಮರೂಪ ವರಾಹನಾದನ ಸ್ವಾಮಿ ನರಹರಿ ವಾಮನ ಪರಶುರಾಮನಾದನಾ ರಾಮಕೃಷ್ನ ಬೌದ್ಧಕಲ್ಕಿ ನಾಮವುಳ್ಳ ನಾರಾಯಣನ ನೇಮದಿಂದ ನಿತ್ಯದಲ್ಲಿ ನಾಮ ಸ್ಮರಿಸಿರೊ 2 ಪಿತೃವಾಕ್ಯ ಪಾಲಿಸಿದವನು ಸತತ ಭಕ್ತರ ಸಲಹುತಿಹನು ಕ್ಷಿತಿಗೆ ಒಡೆಯನಾದ ದೇವನು 'ಶ್ರೀ ಹೊನ್ನ ವಿಠ್ಠಲಾ’ ನತಿಶಯದಿಂದಲಿ ಹೃದಯನಂಬಿ ಇರುವ ನರರಿಗೆ--------ಸದ್ಗತಿಯ ತೋರುವನಧಿಕ ಸಂಪನ್ನ 3
--------------
ಹೆನ್ನೆರಂಗದಾಸರು
ರಾಮಚಂದ್ರನೆ ನಿನ್ನ ನಾಮಮೃತವು ಎನ್ನ ನಾಲಿಗೆಯೊಳು ನಿಲಿಸು ಪ ದಾನವಾಂತಕ ನಿನ್ನ ಧ್ಯಾನ ಬಿಡದೆ ಇತ್ತು ದೀನ ರಕ್ಷಕ ಹರಿ ಜಾನಕಿ ರಮಣನೆ ಅ.ಪ ಕ್ಷೀರವಾರಿಧಿ ಶಯನ ಶ್ರೀ ಹರಿಯನು ಸ್ಮರಿಸುತ ಧ್ಯಾನವ ಮಾಡಿ ಭಕುತಿಲಿ ನಾರದ ಹರ ಬ್ರಹ್ಮಾದಿ ಋಷಿ ಗಂಧರ್ವರು ಸುರರೆಲ್ಲರು ಕೂಡಿ ಮಾರಮಣನ ಕೊಂಡಾಡುತ ಸ್ತೋತ್ರವ ಮಾಡಿ ಪಾರುಮಾಡು ಜಗದೀಶನೆ ಎನುತಲಿ ತವಕದಿ ಶ್ರೀ ಭೂರಮಣನು ದೀನರ ನುಡಿಗಳ ಕೇಳುತ ಆಲೋಚಿಸುತಲಿ ಬೇಗದಿ ಭೂನಾಥನ ಮನೆಯೊಳಗವತರಿಸುವೆ ಎನ್ನುತವರಿಗೆಲ್ಲಾಭಯವ ನೀಡಿದ 1 ದಶರಥನುದರದಿ ಜನಿಸಲು ನಾಲ್ವರು ಅಂದು ಯಾಗಕೆ ಕೌಶಿಕನಲ್ಲಿ ವಿದ್ಯೆಗಳನ್ನು ಕಲಿಯುತ ಬಂದು ಶಶಿಮುಖ ಜಾನಕಿ ಕರಪಿಡಿದನು ತಾನಂದು ಅಯೋದ್ಯದಿ ಎಸೆವ ಸಿಂಹಾಸನವೇರುವ ಸಮಯದಿ ಬಂದು ರಸಕಸಿ ಮಾಡಲು ಕೈಕೇಯಿಯು ತಾ ಶಶಿಮುಖ ಸೀತೆಯ ಒಡಗೂಡುತಲಿ ಬಿಸಿಲು ಗಾಳಿಮಳೆಯೊಳು ವನಚರಿಸುತ ಸತಿಯು ಬೇಡೆ ಮಾಯಮೃಗವ ಬೆನ್ನಟ್ಟಿದ 2 ಶಶಿಮುಖ ಸೀತೆಯ ದಶಶಿರನೊಯ್ಯಲು ಕೇಳಿ ದಶರಥಸುತ ಅರಸುತ ಬಲು ಶೋಕವ ತಾಳಿ ಚಿಂತಿಸಿ ಎಸೆವ ಗಿರಿ ಗುಹೆಗಳ ಹುಡುಕಲು ಮಾರುತಿ ನೋಡಿ ಮುದ್ರಿಕೆ ವಸುಧೆ ತನಯಳಿಗರ್ಪಿಸೆ ಆಕೆಯು ಮುದ ತಾಳಿ ಚೂಡಾಮಣಿ ಕೊಡಲು ಶ್ರೀ ರಘುವೀರನು ಸೇತುವೆ ಕಟ್ಟುತ ಕ್ರೂರ ಖಳರನು ಸಂಹರಿಸಿದ ಕಮಲ-ನಾಭ ವಿಠ್ಠಲ ಅಯೋದ್ಯದಿ ಮೆರೆಯುವ 3
--------------
ನಿಡಗುರುಕಿ ಜೀವೂಬಾಯಿ