ಒಟ್ಟು 19041 ಕಡೆಗಳಲ್ಲಿ , 136 ದಾಸರು , 7982 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೌಸಲ್ಯಾಗರ್ಭಾಬ್ಧಿಸೋಮಾ ಸ್ವಾ'ು ಕೌಶಿಕ ಮಖಪಾಲ ರಾಮ ಪಆಶಯೇಶಯ ಜನಕ ಪಾಪ'ನಾಶ ತಾಪಸಹೃದಯ ಕಮಲಾವಾಸ ಭದ್ರ ಗರೀಶ ರಘುಕುಲಭೂಷ ದಶ'ಧ ವೇಷಧಾರಿ 1ತೃತಿಯರಾಮಕೋಟಿ ಕೂಡು ಭಕ್ತತತಿಗೆ ಲಭಿಸುವಂತೆಮಾಡುಪತಿತಪಾವನ ಪದ್ಮನಯನ ಶತಧೃತಿ ಶಿವಸೇವ್ಯಚರಣಾಸತತವೂ ತವಸೇವೆಗೆ ಮನ 'ತವತೋರಿಸಿ ಸಲಹೋ ಶೌರಿ 2ಭರತಪೂರ್ವಜ ದೀನಪ್ರೇಮಾ ದನುಜಹರಣಧುರೀಣ ನಿಸ್ಸೀಮಕರಿಧ್ರುವ ಪ್ರಹ್ಲಾದ ಶಬರೀ ನರಸತಿಪರಮಾರ್ಥದಾಯಕನಿರುಪಮಾನದ ರಾಮಕೋಟಿಯಾಚರಣ ಕೀರ್ತಿಯ ನಿಲಿಸು ಧೊರೆಯೆ 3ಧಾರುಣೀ ಚನ್ನಪಟ್ಣೇಶಾ ಲಕ್ಷ್ಮೀನಾರಾಯಣ ಕಾಯೊ ಶ್ರೀಶಾಮಾರಸುಂದರ ರಾಮನಾಮವ ಹಾರವಾಯಾಗಿ ಸಮರ್ಪಿಸಿದೆವುಕೋರಿಕೆ ಸಪ್ತೋತ್ಸವಂಗಳು ಪೂರ್ತಿಮಾಡುವರೆಂದು ನಂಬಿದೆ 4ಗುರುತುಲಸೀರಾಮಸ್ವರೂಪ ನಿಮ್ಮಕರುಣದಿಂದಲಿಸಾರಿಭೂಪಾಜರುಗಿಸಿದಿರೀ ಜಪಾಧ್ವರವನು ಮುರಹರೀಮದ್ದುರಿತ ಹರಣನೆನಿರತಭಕ್ತಿಯ ಕೊಟ್ಟು ಪ್ರಜಗಳುನುದ್ಧರಿಸುವ ಕರ್ತವ್ಯ ನಿನದೇ 5ಭೂ'ುಜನರ ಗರುಡುತುರಗಾ ರಂಗಸ್ವಾ'ುದಾಸೊಲ್ಲಾಸಾ ಈಗಪ್ರೇಮ ತೋರಿಸಬೇಕು ಬೇಡುವೆ ಕಾ'ುತಾರ್ಥದ ಕಲ್ಪಭೂಜಸೋಮಜಿತಮುಖ ಸಕಲ ಸುಗುಣಸ್ತೋಮ ತುಲಸೀದಾಮ ಧರಣಾ * 6* 20-8-1933 ಎಂದು ದಿನಾಂಕ ಇದೆ.(ಈ) ರಂಗಸ್ವಾ'ುದಾಸರನ್ನು ಕುರಿತ ಕೆಲವು ಕೃತಿಗಳು
--------------
ಮಳಿಗೆ ರಂಗಸ್ವಾಮಿದಾಸರು
ಕ್ರಿಯ ರೂಪ ಗುಣ ನಾಮ ದರ್ಶನ ಕರ್ತಾ ಪ ದಯವನಧಿ ಗೋಪಾಲಗೈಸು ಅಹಂ ನಾಶ ಅ.ಪ ಉಂಡು ಉಣಿಸುವಿ ನೀನು ದಣುವಿಕೆಗೆ ನಾನಯ್ಯ ಥಂಡ ಥಂಡದಿ ನಿನ್ನ ಲೀಲ ಜಾಲ ಕಂಡರೂ ಕಾಣದಲೆ ಬೆಂಡಾದೆ ಬಹುನೊಂದು ಮಂಡೆ ತಾಗಿದರು ಮನಕೆಚ್ಚರಾಗದು ಸ್ವಾಮಿ 1 ನಾಯಿಯಂದದಿ ವಿಷಯಕ್ಹಾರುವುದು ಈ ಮನಸು ದಾಯಾದಿಗಳ ವಶದಿ ಸಿಕ್ಕಿ ಸತತ ಕಾಯಜಾಪಿತ ನಿನ್ನ ರೂಪ ಧ್ಯಾನಕೆ ಬರದು ಮಾಯೇಶ ಮಾರಮಣ ಕಾಯೆನ್ನ ಕರುಣಾಬ್ಧಿ 2 ತೆಗಿ ನನ್ನ ಭೋಗ ಬಲೆ ನಗೆ ಮುಖವ ತೋರಯ್ಯ ನಿಗಮ ವೇದ್ಯ ಜಯೇಶವಿಠಲರಾಯ ಖಗಧ್ವಜ ಪರೆ ತೆಗೆದು ಜ್ಞಾನ ಚಕ್ಷುಸು ನೀಡು 3
--------------
ಜಯೇಶವಿಠಲ
ಕ್ಲೇಶ ಕಷ್ಟದಿ ಮುಳುಗಿ ಬಳಲಬೇಡ ಪ ಹಿಂದೆ ನಾನಾ ಯೋನಿಯಲ್ಲಿ ಹಡಿಕೆಯೊಳು ಜನಿಸಿ ಜನಿಸಿತಂದೆ ತಾಯಿ ಹೆಂಡಿರೇಸು ಲೆಕ್ಕವಾಯ್ತು ನೋಡಮುಂದೆ ಬಹ ದುಃಖಕೆ ಮುಳುಗಿ ಮುಳುಗಿ ಧೈರ್ಯ ಪಡೆದುಮಂದ ಮತಿಯಾಗಿ ಗುರುವ ಮರೆಯಲಿ ಬೇಡ 1 ದುರ್ಜನರ ಸಂಗ ಮಾಡಿ ದುಷ್ಟ ನಡತೆಯಲ್ಲಿ ನಡೆದುಸಜ್ಜನರ ಸಂಗ ನೀ ಮರೆಯಲಿ ಬೇಡಜಜ್ಜುಗಟ್ಟಿ ಪಾಪಕರ್ಮ ಜರಿದು ಜರಿದುಜೋಕೆಯಲ್ಲಿ ಸದ್ಗುರುನಾಥ ಸ್ಮರಣೆ ಮಾಡು2 ಮನೆಯು ಮಕ್ಕಳೆಂಬ ಧನವು ಪಶುಗಳಲ್ಲಿ ಆಸೆಯಿಟ್ಟುನೆನೆಸಿ ನೆನೆಸಿ ಬಿಕ್ಕಿ ಬಿಕ್ಕಿ ಅಳಲು ಬೇಡಚಿನ್ಮಯ ಚಿದಾನಂದಾವಧೂತನೊಳು ಬೆರೆತುಘನವನೈದಿ ಸದ್ಗುಣಾದಿ ತಿಳಿದು ನೋಡ 3
--------------
ಚಿದಾನಂದ ಅವಧೂತರು
ಕ್ಲೇಶ ಪ ಅಸ್ತಿತ್ವಕ್ಚರ್ಮಾದಿ ಮಾಂಸ | ಧಾತುಸಪ್ತಾವರಣ ಕಾಯದೊಳಗೆ ಆ ವಾಸ |ಲಿಪ್ತನಾಗದೆ ಇದ್ದು ಶ್ರೀಶ | ಜೀವರಾಪ್ತ ಸಾಧನ ಮಾಡಿ ಮಾಡಿದೆ ಅನಿಶಾ 1 ಸಪ್ತವು ದಶದ್ವಯ ಸಹಸಾ | ನಾಡಿಸಪ್ತಾಬ್ಜದೊಳು ಸನ್ನಿವಾಸ |ಭಕ್ತರಿಗೊಲಿವೆಯೊ ಮೇಶ | ನಿನ್ನಗುಪ್ತ ಮಹಿಮೆ ನೀನೆ ತಿಳಿಸೊ ಸರ್ವೇಶ 2 ಭೋಕ್ತ | ನಾಗಿಮುಕ್ತಾನಂದದಲಿದ್ದು ಮೆರೆವೆ ವಿಧಾತಾ 3 ಆರ್ತನಾಗುತ ಬೇಡ್ವೆ ಹರಿಯೇ | ನಿನ್ನವ್ಯಾಪ್ತಿ ತೋರೋ ಸರ್ವ ಲೋಕದ ಧೊರೆಯೆಮೂರ್ತಿ ನಿಲ್ಲಲಿ ಮನದಿ ಹರಿಯೇ | ನಿನ್ನಕೀರ್ತಿ ಕೊಂಡಾಡಿಸು ಸತತದಿ ಶೌರೀ 4 ತಪ್ತ ಕಾಂಚನದಂತೆ ಹೃದಯ | ದಲ್ಲಿದೀಪ್ತನಾಗಿದ್ದರು ಕಾಣದ ಪರಿಯೆ |ಸುಪ್ತಿಯ ಕಳೆ ತವ ಮೂರ್ತಿಯ | ತೋರೊಗೋಪ್ತ ಗುರು ಗೋವಿಂದ ವಿಠಲಯ್ಯ 5
--------------
ಗುರುಗೋವಿಂದವಿಠಲರು
ಕ್ಲೇಶಮಾಡಲಿ ಬೇಡ ಮನವೆ ನೀನೂ ದೇಶದೊಳಗೆ ಕೇಳು ಜ್ಞಾನಿಗಳ ಸಮ್ಮತಾ ಪ ವಸಿಷ್ಠ ಮಹಾಋಷಿಗೆ ನೂರುಮಂದಿ ಸುತರು ಅಸಮಸಾಹಸರು ಬಲು ಶೀಲಜ್ಞರು ಕಾಲ ಮೃತ್ಯುವಿನ ಕೈ ವಶವಾಗಿ ಹೋದರದು ನೋಡು ದು:ಖವ ಬಿಡು 1 ಕೃಷ್ಣ ಸೋದರಮಾವ ಮತ್ತೆ ಭೀಮಸೇನ ಜೇಷ್ಠಪಿತ, ಪಾರ್ಥನು ಪಡೆದ ಶೂರ ಇಷ್ಟು ಜನ ಇರಲಾಗಿ ಅಭಿಮನ್ಯು ದೇಹವನು ಬಿಟ್ಟು ಪೋಗಲು ಒಬ್ಬರಾದರು ಉಳುಹಿದರೆ2 ಇಂಥವರಿಗೀತ್ಯರನು ನಿನಗಾವ ಸ್ವಾತಂತ್ರ್ಯ ಸಂತೋಷವೆ ಬಡು ಧೈರ್ಯದಲ್ಲಿ ಕಂತು ಜನಕ ನಮ್ಮ ವಿಜಯವಿಟ್ಠಲನಂಘ್ರಿ ಅಂತರಂಗದಲಿಡು ಮುಂದಿನಗತಿ ಬೇಡು 3
--------------
ವಿಜಯದಾಸ
ಕ್ಷಣತೋರಿ ಇಲ್ಲದಂತಾಗುವ ವಿಷಮ ಮಹ ಕನಸಿನ ಮೋಹದಿಂ ಕೆಡಬೇಡ ಮನುಜ ಪ ಹಲವು ಜನಮದಿ ಬಿದ್ದು ತಿಳಿಯದೆ ಇಹ್ಯಪರಕೆ ತೊಳಲುತ ಬಳಲುತ ತಿರುತಿರುಗಿ ಗಳಿಸಿದ ನರಜನುಮ ವಿವರಿಸಿ ನೋಡದೆ ಕಳಕೊಂಡು ಬಳಿಕಿನ್ನು ಸುಲಭವಲ್ಲೆಲೆ ಖೋಡಿ 1 ನೀರಮೇಲಣ ಗುರುಳೆಯಂತೆ ಕಾಂಬುವ ಈ ನರಕ ಮೂತ್ರದ ತನುಭಾಂಡವಿದು ಅರಿಯದೆ ಮೋಹಿಸಿ ಪರಿಪರಿ ಕುಣಿಕುಣಿದು ಪರಮ ರೌರವ ನರಕಕ್ಹೋಗ ಬೇಡೆಲೆ ಖೋಡಿ 2 ಜವನÀದೂತರು ಬಂದು ಕವಿದುಕೊಳ್ಳಲು ಆಗ ಕಾಯುವರಾರಿಲ್ಲ ಕೈಪಿಡಿದು ದಿವನಿಶೆಯೆನ್ನದೆ ಭವಹರ ಶ್ರೀರಾಮ ದೇವನ ನೆರೆನಂಬಿ ಭವಮಾಲೆ ಗೆಲಿಯೊ 3
--------------
ರಾಮದಾಸರು
ಕ್ಷಣದಲಿ ಸೌಖ್ಯ ಕ್ಷಣದಲಿ ದುಃಖ ಬಣಗು ಸಂಸಾರದಿ ಎಣಿಸಿದರೆ ಪ ಕೊಟ್ಟರೆ ತಂದರೆ ಸಂತೋಷ ಬಿಟ್ಟರೆ ಕೊಡದಿರೆ ಬಲುರೋಷ 1 ಎರೆಡು ಘಳಿಗೆ ಬಹಳಾಯಾಸ ಏನು ಇಲ್ಲ ಕೊನೆಗೆ ನಿರಾಶ 2 ತಾನೇಕಾದಶಿ ಪಿಕ್ನಿಕ್‍ವೂಟ ಭಾನುವಾರ ಇಸ್ಪೇಟಾಟ3 ಕೋಟುಷರಟು ಜುಬ್ಬ ಇಜಾರು ನೋಟಕೆ ಮೇಲೆ ಕಾರ್ಬಾರು 4 ಕರುಡು ಕುಂಟ ಮೂಕರು ಮಾತ್ರ ಸತ್ಪಾತ್ರ 5 ಅತಿಜಾರಿಗೆ ಕೆಂಪು ಬೆಂಡೋಲೆ 6 ಹಾದರಗಿತ್ತಿಗೆ ದೂದ್‍ಫೇಢ ಸಾಧುಸ್ತ್ರೀಗನ್ನವು ಬೇಡ 7 ಹಿರಿಯರ ಮಾತಿಗೆ ನಾನ್ಸೆನ್ಸು ದುರುಳರ ಬೋಧೆಗೆ ತಾ ಒಳ್ಳೆಮನಸು 8 ಮೋಕ್ಷವಿದ್ಯೆ ಕೆಲಸಕೆ ಬಾರದು ಕುಕ್ಷಿಂಬರ ವಿದ್ಯೆ ಬಲು ದೊಡ್ಡದು 9 ಹರಿಕಥೆ ಕೇಳ್ವುದು ಬೇಜಾರು ಹರಟೆ ಹರಟುವುದು ಬಲು ಜೋರು 10 ಪರರ ನೋಡಿ ನನ್ನಾಚರಣೆ ಗುರುರಾಮ ವಿಠಲನಲಿಲ್ಲ ಸ್ಮರಣೆ 11
--------------
ಗುರುರಾಮವಿಠಲ
ಕ್ಷಮಾ ಪ್ರಾರ್ಥನೆ ಗುರುಹಿರಿಯರೆಡೆಯಲ್ಲಿ ಶಿರಬಾಗಿಸಿನಯದಲಿ ಎರೆವೆನೀಪರಿಯಲ್ಲಿ ಕರವಮುಗಿದು ಯತಿನಿಯಮ ಛಂದಸ್ಸು ಗತಿತಾಳಲಯಬಂಧ ನುತಶಬ್ದ ತತ್ವಾರ್ಥ ಸಂಗತಿಯನು ವರಕವಿಗಳೊರೆದಿರ್ಪ ತರತರದ ಪ್ರಾಸಗಳ ವರಲಕ್ಯಣಲಂಕಾರ ಮೆಂಬ ಪರಿಕರಂಗಳನರಿದು ಪರಿಪರೀಸಿಂಗರಿಸ ಲರಿಯೆ ಕವಿತಾಮಣಿಯ ಪರಿಯನರಿಯೆ ಸರಿಸದೋಳ್‍ನಿಂದೆ ನೆಂದರಿಯ ಬೇಡಿ ಅರಿಯದಾತರಳೆ ರಚಿಸಿದುದನುನೋಡಿ ಹಿರಿಯರೊಳುಗರುವತೋರಿದೆನೆನ್ನ ಬೇಡಿ ಸರಿದೋರಿದಂತೆಸಿಗೆ ಕೃಪೆಮಾಡಿ ಸಮರ್ಪಣೆ ತ್ವದ್ದತ್ತವಾಚಾ ತವಕಿಂಕರೇಣ ತ್ಪತ್ಪ್ರೀತಿ ಕಾಮೇನ ಮಯಾಕೃತೇನ | ಸ್ತೋತ್ರೇಣ ಲಕ್ಷ್ಮೀನೃಹರೇ ಸವಿಷ್ಣುಃ ಪ್ರೀತೋಭವತ್ಪಂ ಕರುಣಾದ್ರ್ರದೃಷ್ಟಿಃ ||
--------------
ನಂಜನಗೂಡು ತಿರುಮಲಾಂಬಾ
ಕ್ಷಮಾಸಮುದ್ರನೆ ನಮಾಮಿ ಗುರು ನಿನ್ನ ಸಮಾನರ್ಯಾರಿನ್ನೂ |ಪ|| ಕಮಲ ಭ್ರಮರ ತವಪದ | ನಮಿಸುವೇ ಅ.ಪ. ತತ್ವ ಪ್ರದರ್ಶಕ ಶೃತ್ಯರ್ಥ ಬೋಧಕಗೀತಾರ್ಥ ಸಂಗ್ರಹ ಕೃತೇ ನಮೋ |ಪ್ರತ್ಯರ್ಥಿಮತ್ತೇಭ ಪಂಚಾಸ್ಯ ನಿನ್ನಯಭೃತ್ಯನ ಅಪಮೃತಿ ತಪ್ಪಿಸಿದೇ 1 ಅದ್ವೈತ ದುಸ್ಸಹ ವಾಸನ ನಿರಸನಖದ್ಯೋತ ಸಮ ವ್ಯಾಪ್ತ ಪರಿಮಳಾ |ಸದ್ವೈಷ್ಣ್ವ ಕುಮುದೇಂದು ವಿದ್ವಾಂಸನತ ಪದದ್ವಂದ್ವಾ ವಿಮಲ ಕಮಲಾ 2 ಕುಷ್ಠಾದಿ ರೋಗಹರ ಕಷ್ಟ ನಿವಾರಣಶ್ರೇಷ್ಠ ನಿಮ್ಮಯ ಸ್ಮರಣಾ |ನಿಷ್ಟೇಲಿ ಭಜಿಪರ ಇಷ್ಟಾರ್ಥ ಸಲಿಸುವ ದುಷ್ಟವಾದಿಯ ದಮನಾ3 ಪ್ರಹ್ಲಾದ ಬಾಲನೆ ವಿಮಲಾ ವಿಭೀಷಣಬಾಹ್ಲೀಕ ಸೂನಾದೆ ಪ್ರತೀಪಗೆ |ವಿಹ್ವಲ ಹೃದಯರ ಚಂದ್ರಿಕೆಯಿಂದಲಿಆಹ್ಲಾದ ಪಡಿಸಿದ ಸಲ್ಹಾದಾಗ್ರಜನೇ 4 ಸದನ ಗುರುವೇ |ಮಂತ್ರಾಗಮ್ಯ ಗುರು ಗೋವಿಂದ ವಿಠಲನಅಂತರದಿ ತೋರಿಸಿ ರಕ್ಷಿಸಯ್ಯಾ 5
--------------
ಗುರುಗೋವಿಂದವಿಠಲರು
ಕ್ಷಿತಿಭಾರ ಹರಣನೇ ಶ್ರೀಜಾನಕೀ ಪತಿಯೇ |ಶಿತಿಕಂಠ ಸಖ ಹರಿಯೇ ಪ ಅತಿ ವಿಮಲನಂತಾರ್ಕ ನಿಭ ಪದಾಗತಿ ವಹನೆ ಪೊರೆ ಶ್ರೀರಾಮಚಂದ್ರಾನೇ ಅ.ಪ. ಪರಮ ಮಂಗಳ ನಾಮ | ಪರಿಹರಿಸಿ ಸಂಸೃತಿಯನಿರುತ ಮಹದಾನಂದ | ಪ್ರದವೆನಿಪುದೋ ||ಮರುತಾಂತರಾತ್ಮ ತವ | ನಾಮ ಸುಧೆ ಸುಖ ಸವಿದುಇರುವಂತೆ ಮಾಡಯ್ಯ | ಕರುಣ ನಿಧಿಯೇ 1 ಕಮಲ ಸಂಭವನಯ್ಯ | ಸುಮನಸರಿಗತಿ ಪ್ರೀಯಕಮಲದಳ ನೇತ್ರನೇ | ಕಾಮಿತ ಪ್ರದನೇ ||ಭ್ರಮ ಮೂರ ಪರಿಹರಿಸೊ | ಕಮಲಾಪ್ತ ಕುಲಜನೇಶಮದಮಾನ್ವಿತನೆನಿಸಿ | ವಿಮಲ ಮತಿ ಈಯೋ 2 ದಶಕಂಠ ಹರ ನಿನ್ನ | ಯಶವನ್ನೆ ಪೊಗಳಲುಶೇಷ ವಿಪ ರುದ್ರಾದಿ | ಗಸದಳವು ಇಹುದೂ |ಕಸರು ಕರ್ಮಾದಿಗಳ | ಕೆಸರು ಕಳೆ ಪ್ರಾರ್ಥಿಸುವೆಅಸಮ ಮಹಿಮನೆ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಕ್ಷೀರವಾರಿಧಿಜಾತೆ ಚಾರುಸುಂದರಗಾತ್ರೆ ಪ ವೋರು ವರಮಣಿ ಪೀಠಕೆ ಬಾರೆಯ ಹಸೆಗೇ ಕರೆ 1 ಇಂದಿರಾದೇವಿ ಬಾ ಇಂದುಸೋದರಿ ಬಾ ಕುಂದಣದ ಹಸೆಗೇ ಮಂದಹಾಸವ ತೋರಿ ಬಂದೆಮ್ಮ ಮನೆಯೊಳು ಎಂದೆಂದಗು ಬಿಡದಾನಂದವತೋರೆಂದು 2 ರೂಢಿಗೊಡೆಯ ಗರುಢಾರೂಢನೆಂದೆಸಿದ ಪೊಡಮಟ್ಟು ಬೇಡುವ ದೃಢ ಭಕ್ತರ ಕೈ ಬಿಡದಾದರಿಸುತ್ತ ಬಾರೆಂದು ಹಸೆಗೆ 3 ಸುರವರಪೂಜಿತ ಚರಣಸರೋಜವ ನಿರುತ ಸೇವಿಪ ವರವ ಕರುಣೆಸೆಂದೆನುತಾನು ಕರಮುಗಿದೆರೆವೆನು ವರಶೇಷಗಿರಿವಾಸನರಸಿನೀಂ ನಲವಿಂದ ಬಾರೆಂದು4
--------------
ನಂಜನಗೂಡು ತಿರುಮಲಾಂಬಾ
ಕ್ಷೀರಶರಧಿಶಯನ ನಾರಾಯಣ ಪ ತೋರೊ ಎನ್ನಲಿ ಕರುಣ ನಾರಾಯಣ ಅ.ಪ ಕ್ಷಿತಿಯೊಳೆನಗೆ ಸ್ಥಿತಿ ಗತಿಯು ಬೇರಿಲ್ಲವೊ ಶ್ರಿತಜನ ಕಲ್ಪತರು ಶ್ರೀರಮಣ 1 ಅರಿಷಡ್ಪರ್ಗವ ಮುರಿದು ಎನಗೆ ನಿನ್ನ ವರ ಸೇವೆಯ ನೀಡೊ ಶ್ರೀ ನರಹರಿ 2 ಪಾಮರ ಭಕುತರ ಕ್ಷೇಮವಹಿಸಿ ಅವರ ಕಾಮಿತಗಳ ನೀಡೊ ಕಾಮಧೇನು 3 ಸಂತತ ಹೃದಯದಿ ನೆಲೆಸಿ ಎನಗೆ ಮನ ಶಾಂತಿಯ ದಯಮಾಡೊ ಚಿಂತಾಮಣಿ 4 ನಿನ್ನ ದಾಸರದಾಸನೆನ್ನಲಿ ದಯದಿ ಪ್ರ ಸನ್ನ ನಾಗೊ ಶ್ರೀಶ ಲಕ್ಷ್ಮೀಶ5
--------------
ವಿದ್ಯಾಪ್ರಸನ್ನತೀರ್ಥರು
ಕ್ಷೀರಾಂಬುಧಿ ಸಂಭವೆ ಅಮ್ಮ ನಾರಾಯಣಾಂತರ್ಯ ಭಾವೇ ಸ್ವಭಾವೇ ಪ ಶ್ರೀರಂಗ ಧಾಮೆ | ಕೈವಲ್ಯನಾವೆ ಅ.ಪ ರಾಕೇಂದು ಸಹಜಾತೆ ಸಾಕಾರ ಹರಿಪ್ರೀತೆ ಲೋಕೇಶ್ವರಿ ಮಾತೆ ಸೌಭಾಗ್ಯದಾತೆ ಸಾಕೇತ ರಾಜಿತೆ ಪ್ರೇಮಾನ್ವಿತೇ 1 ಗಂಗಾಪಿತಾನಂದ ಸಂದಾತೆ ಸುರಗೀತೆ ಸಂಗೀತ ಸಾಹಿತ್ಯ ಪೂರ್ಣೇ ವಿಖ್ಯಾತೆ ಗಂಗಾಧರಾದಿತ್ಯ ರಾಕೇಂದ್ರ ವಿನುತೆ ಶೃಂಗಾರ ಸದನೆ ಮಾಂಗಿರೀಂದ್ರ ಸಹಿತೇ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕ್ಷೀರಾಬ್ಧಿಜಾರಮಣ ಕ್ಷೀರಾಂಬುನಿಧಿಶಯನ ಸದನ ಗರುಡಗಮನ ಕಾಕುತ್ಸ್ಥವಂಶಾಬ್ಧಿ ರಾಕೇಂದು ಗುಣನಿಧೀ ಪಾಕಾರಿಮುಖದೇವ ನಿಕರಜೀವ ನಿಟಿಲಾಕ್ಷನುತನಾಮ ಜಟಾವಲ್ಕಲಧಾಮ ತಾಟಕಾಂತಕರಾಮ ಸಮರಭೀಮ ಇಂದುಸನ್ನಿಭವದನ ಕುಂದಕುಟ್ಮಲರದನ ಇಂದೀವರ ಸುನಯನ ಕನಕವಸನ ಕವಿಜನಮನೋಲ್ಲಾಸ ಶಶಿಸುಹಾಸ ಸೇವ್ಯ ದೇವದೇವ ಭವಭೀತಿಹರ ಶೇಷಶೈಲನಿಲಯ ಸುವಿಮಲಯಶಶ್ಚಂದ್ರ ರಾಘವೇಂದ್ರ
--------------
ನಂಜನಗೂಡು ತಿರುಮಲಾಂಬಾ
ಕ್ಷೇತ್ರ ದರ್ಶನ ಉಡುಪಿಯ ಯಾತ್ರೆಯ ಮಾಡಿ - ಉಡುಪಿಯಾ ಪ ಉಡುಪಿಯ ಯಾತ್ರೆಯನ್ನೆ ಮಾಡಿ | ಭಕ್ತಿಮುಡುಪಿತ್ತು ಪ್ರಮೋದ ಬೇಡಿ | ಆಹನಡುದೇಹ ದೋಳೀಹ | ನಡುನಾಡಿ ಕಮಲದಿಒಡೆಯ ಶ್ರೀ ಕೃಷ್ಣನ್ನ | ಧೃಡ ಭಕ್ತಿಯಿಂ ಭಜಿಸಿ ಅ.ಪ. ಆನಂದ ತೀರಥ ಸರಸಿ | ಯೊಳುಮೀನನಾಗಿ ಬಹು ಈಸಿ | ಹರಿಧ್ಯಾನದಿ ಸ್ನಾನ ಪೊರೈಸಿ | ಮತ್ತೆಮೌನವೆಂಬಾಸನ ಹಾಸಿ | ಆಹಮೂಧ್ರ್ನಿ ಲಲಾಟದೋಳ್ | ಗೋಣು ಮಧ್ಯೋದರಸ್ಥಾನಾದಿಯಲಿ ಹರಿ | ಧ್ಯಾನ ನಾಮವ ಹಚ್ಚಿ 1 ಮಧ್ವ ಕಿಂಕರನೆಂಬೊ ದೊಂದು | ಹರಿವಿದ್ವೇಷಿಗಳ ಬಡಿವೊದೆಂದು | ಮತ್ತೆಸದ್ವೈಷ್ಣವರ ಸೇರ್ವೋದೊಂದು | ಇನ್ನುಬುದ್ಧಿಪೂರ್ವಕ ಹರಿ ಪರನೆಂದು | ಆಹಶ್ರದ್ಧಾಳು ವೆಂದೆನಿಪ | ಮುದ್ದು ಮುದ್ರೆಗಳೈದುತಿದ್ದಿ ವಿಸ್ತರಿಸೂತ | ಕೃದ್ದೋಲ್ಕಾದಿಯನೆನೆ 2 ಸಂಧ್ಯಾ ಮೂಡಿಹುದು ನೀ ನೋಡು | ಕಾಲಮುದ್ಹಿಂದಾಗದಲೆ ನೀ ಮಾಡು | ಯಾವದೊಂದು ಮಂತ್ರಾರ್ಥವ ನೋಡು | ಇನ್ನುಸಂಧ್ಯಾ ನಾಮಕನ ಕೊಂಡಾಡು | ಆಹಛಂದದಿ ನಿನ ಜ್ಞಾನ | ಮುಂದು ಮುಕ್ಕಿಲು ಒಪ್ಪಮಂದೇಹ ದೈತ್ಯರ | ಮಂದಿಯ ಕೊಲ್ಲುತ 3 ಕಂಟಕ ಕಳೆದು ಶರೀರ | ಮಧ್ಯಮಂಟಪ ಚಿಂತಿಸೊ ಧೀರ | ಅದಕೆಎಂಟರ್ಧ ಮತ್ತೊಂದು ದ್ವಾರ | ಕಾಯ್ವಭಂಟ ಮಾರುತನ ವ್ಯಾಪಾರ | ಆಹಎಂಟ್‍ಟಾರು ನಾಲ್ಕು ಸ್ತಂಭ ಮಧ್ಯದಿ ಲಕ್ಷ್ಮಿಮಂಟಪ ಚಿಂತಿಸಿ ಒಂಟಿಯಾಗೊ ಮನದಿ 4 ಕೆಳ ಮುಖಾಬ್ಜವನೇ ನೀ ನೋಡೀ | ಮಂತ್ರಮೂಲದಿಂದ ಮೇಲು ಮಾಡಿ | ಅಲ್ಲಿಇಳೆಯಾಣ್ಮನನ ಚಿಂತೆ ಮಾಡಿ | ಸರ್ವಅಲಂಕಾರ ದಿಂದೊಡಗೂಡೀ | ಆಹನೆಲೆಸೀಹ ಕೃಷ್ಣನ್ನ | ಒಲಿಸೆ ಭಕ್ತಿಯಿಂದಸ್ಥಳ ತನ್ನ ಅರಮನೆ | ಯೊಳು ಕೊಟ್ಟು ಸಲಹುವ 5 ನಿತ್ಯ ಸ್ತವನ | ಆಹಇಂಬಿಟ್ಟು ಸ್ತೋತ್ರದಿ | ಉಂಬುಡುವೋ ಸರ್ವಬಿಂಬನೋಳರ್ಪಿಸಿ | ಸಂಭ್ರಮದಲ್ಲಿರು 6 ಮಧ್ವ ಸರೋವರ ಸ್ನಾನ | ಭಕ್ತಿಶುದ್ಧದಿ ಶ್ರೀಕೃಷ್ಣಧ್ಯಾನ | ಮಾಡೆಹೃದ್ಯನು ಹೃದ್ಯದಿಷ್ಠಾನ | ದಲ್ಲಿಸಿದ್ಧಿಸೂವನು ಗುಣ ಪೂರ್ಣ | ಆಹಮುದ್ದು ಕೃಷ್ಣನು ಗುರು | ಗೋವಿಂದ ವಿಠಲನುಶ್ರದ್ಧೆ ಸತ್ವಕ್ಕೊಲಿವ | ಸಿದ್ಧ ಕನಕನ ನೋಡಿ 7 ತೀರ್ಥ ಕ್ಷೇತ್ರ ಮಾಲಾ 1952 ರಲ್ಲಿ ಇಡೀ ಭರತ ವರ್ಷದಲ್ಲಿ ಪ್ರದಕ್ಷಿಣಾಕಾರವಾಗಿ ಹೊರಟು ಆಸೇತು ಹಿಮಾಚಲ ಪರ್ಯಂತವಿರುವ ಅನಂತ ತೀರ್ಥ ಕ್ಷೇತ್ರಗಳಲ್ಲಿ ಈ ಅಲ್ಪಾಧಿಷ್ಠಾನದ ಯೋಗ್ಯತಾಪ್ರಕಾರ ಬಿಂಬನು ಮಾಡಿ ಮಾಡಿಸಿದ ಯಾತ್ರಾ ಪ್ರಕರಣವೂ, ಮತ್ತೆ, 1954 ರಲ್ಲಿ ಉಡುಪಿ ಇತ್ಯಾದಿ ಪಶ್ಚಿಮ ಕ್ಷೇತಗಳ ಮತ್ತು 1957 ರಲ್ಲಿ ಮಲಖೇಡದಲ್ಲಿ ಬೃಹತೀ ಸಹಸ್ರವಾದಾಗ ಆಕಡೆ ಹೋದಾಗ ನೋಡಿದ ಅನೇಕ ಕ್ಷೇತ್ರಗಳ ಮತ್ತು 1961 ರಲ್ಲಿ ಸ್ವಾದಿ, ದ್ವಾರಕ, ಪುಷ್ಕರ, ಬದರಿ (ದ್ವಿತೀಯಾವರ್ತಿ) ಹೋಗಿ ಬಂದಾಗ ನೋಡಿದ ಯಾತ್ರಾ ಪ್ರಕರಣಗಳ ಜ್ಞಾಪಕಾರ್ಥವಾಗಿ ಈ ತೀರ್ಥಕ್ಷೇತ್ರಮಾಲಾ ಅಸ್ಮದ್ಗುರ್ವಂತರ್ಗತ ಬಿಂಬ ಮೂರುತಿ ಪ್ರೇರಿಸಿದಂತೆ ಬರೆಯಲ್ಪಡುತ್ತೆ :-
--------------
ಗುರುಗೋವಿಂದವಿಠಲರು