ಒಟ್ಟು 40875 ಕಡೆಗಳಲ್ಲಿ , 138 ದಾಸರು , 10069 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರದಿಂದ ಅಲುಗಿಸುತರುಹುವಳೂ ಪ ನರರು ತವ ದ್ವಾರದಲಿ ತಮ್ಮಯ | ಭರದಿ ನಿದ್ದೆಯ ತ್ಯಜಿಸುತೇಳೆಂದು ಅ ನೇಕೆ ಮಲಗಿಹೆ ಏಳು ಎನ್ನುತ 1 ಸಡಗರ ನೀ ನೋಡು ಎನ್ನುತ2 ಬಾತುರದಿ ಚಿಲಿಪಿಲಿಯ ಗುಟ್ಟುತ್ತಾ ತಿನಿಸನ್ನು ತಹೆವೆಂದು | ಪ್ರೀತಿಯಿಂದಲಿ ಅರುಹಿ ಪಕ್ಕವ ರ್ಭೀತ ಪಾವಂಜೇಶ ಎನ್ನುತ 3
--------------
ಬೆಳ್ಳೆ ದಾಸಪ್ಪಯ್ಯ
ಕರದೊಳಿನ ಮಣಿಗೆ ಕನ್ನಡಿಯೇತಕೆ ಪ ಸಿರಿ ರಮಣನಲತಿ ಸಂಶಯವೇತಕೆ ಅ.ಪ ಶರಧಿಯ ಜಲವನ್ನು ಪರಿಪರಿ ದೇಶಕೆ ಬಿರುಗಾಳಿಗಳಿಂದ ದೊರಕಿಸುವನು ಯಾರು ಧರೆಯೊಳು ನವನಾಗರಿಕರೆಂದರಿಯುವ ಪರಿ ತರವೆ ಯೋಚಿಸೆಲೊ 1 ಎಲ್ಲಾ ದೇಶಗಳ ವಿಚಾರ ನೋಟಗಳನ್ನು ಇಲ್ಲೇ ತೋರಿಸುವಂಥ ನಲ್ಲರು ಇರುವರು ಎಲ್ಲಿಂದ ಬಂದೆ ಎಲ್ಲಿಗೆ ಹೋಗುವೆ ಎಂದು ಬಲ್ಲರೇ ಇವರು ತಲ್ಲಣಿಸುತಿಹರು 2 ಘಾಸಿಯ ಮಾಡದೆ ಪೋಷಿಸುವನು ಯಾರು ಈಶನ ಕರುಣವು ಲೇಶ ತಪ್ಪಿದರೆ ಆ ಶಿಶುವಿನ ಜೀವದಾಶೆ ಎಂತಿಹುದೊ 3 ಎಲ್ಲಾ ನಾರಿಯರು ಗರ್ಭ ಧರಿಸುವರೆ ಎಲ್ಲಾ ಬೀಜಗಳಿಂದ ತರುಗಳು ಬರುವುದೆ ಬಲ್ಲವರುಂಟೆ ಇದಕೆ ಕಾರಣ ಲಕ್ಷ್ಮೀ ಪರಿ 4 ಭಿನ್ನದೇಶಗಳಲ್ಲಿ ಭಿನ್ನ ರೂಪಗಳುಳ್ಳ ಭಿನ್ನ ಗುಣಗಳುಳ್ಳ ಭಿನ್ನ ಜಂತುಗಳಿಗೆ ಭಿನ್ನ ಕಾಲಗಳಲ್ಲಿ ಅನ್ನವನೀಯಲು ಅನ್ಯರಿಗಳವೆ ಪ್ರಸನ್ನನಿಗಲ್ಲದೆ 5
--------------
ವಿದ್ಯಾಪ್ರಸನ್ನತೀರ್ಥರು
ಕರಪಿಡಿದು ಕಾಯೊ ಶ್ರೀ ಕರುಣಾಳು ಧನ್ವಂತ್ರಿ ವರ ವೆಂಕಟಾದ್ರಿವಾಸ ಪ. ತರಳೆ ಸೇವೆಯ ಕೊಂಡು ಪರಿಪರಿಯ ಬಗೆಯಿಂದ ವರ ಕೃಪೆಯ ಮಾಡೊ ಸ್ವಾಮಿ ಪ್ರೇಮಿ ಅ.ಪ. ಆವ ಪರಿಯಿಂದ ಜಗದೊಳು ನೋಡೆ ಕಾವರಿ ನ್ನಾವರುಂಟೆಲೊ ದೇವನೆ ಪಾವಮಾನಿಯ ಪ್ರೀಯ ಪರಿಪರಿಯ ಪಾಪ ಫಲ ದೀವಿಧದ ಬವಣೆಯನ್ನೇ ನೀ ವಿಚಾರಿಸಿ ಕಾಯೊ ನಿನ್ನ ಶರಣ್ಹೊಕ್ಕಮೇ- ಲಾವ ಸಂಶಯ ಕಾವನೇ ಪಾವಕನ ತೆರದಿ ಭಸ್ಮವ ಮಾಡಿ ದುಷ್ಕರ್ಮ ಜೀವಕ್ಹಿತ ಕೊಡು ಪ್ರೀತನೇ | ಇನ್ನೇ 1 ಸುರರ ವ್ಯಾಕುಲ ಬಿಡಿಸಿ ಅಮರ ಪಕ್ಷವ ವಹಿಸಿ ವರ ಸುಧೆಯನವರಿಗುಣಿಸೀ ದುರುಳ ಸಂಘವ ಕೊಲಿಸಿ ಸುರ ರಾಜ್ಯಸ್ಥಿರಪಡಿಸಿ ಪರಿಪರಿಯ ಸೌಖ್ಯ ಸುರಿಸೀ ಮೆರೆದೆಯೋ ಗುಣಸಿಂಧು ನಿನ್ನ ಸೇವಕಳೆಂದು ಪರಿಕರಿಸಿ ನೀನೀಕ್ಷಿಸೀ ಪರಿ ಕಾಣೆ ಹರಿಸು ಭಯ ಶ್ರೀ ನರಹರೇ | ಶೌರೇ 2 ಬರಿದು ಮಾಡದೆ ಎನ್ನ ಬಿನ್ನಪವ ಪೊರೆಯ ಬೇ- ಕರವಿಂದ ದಳ ನೇತ್ರನೇ ಗುರು ಹಿರಿಯರುಕ್ತಿಯಲ್ಲದೆ ಎನ್ನದೆಂಬುವೋ ಗರುವ ನುಡಿಯಲ್ಲ ನೀನೇ ಚರಣ ಸೇವಕರ ಪೊರೆವಂಥ ವಿಶ್ವಾತ್ಮಕನೆ ಪರಿಹರಿಸು ಕ್ಲೇಶಗಳನೇ ಕರುಣಿ ಶ್ರೀ ಗೋಪಾಲಕೃಷ್ಣವಿಠ್ಠಲ ಶೇಷ- ಗಿರಿನಿಲಯ ಭಕ್ತ ಪ್ರೀಯಾ | ಜೀಯಾ 3
--------------
ಅಂಬಾಬಾಯಿ
ಕರವ ಜೋಡಿಸಿ ಎಲ್ಲರಿಗೊಂದಿಸಿ ಪ. ಎಲ್ಲರಿಗೊಂದಿಸಿ ಫುಲ್ಲನಾ¨sನÀ ಮುಖ್ಯವಲ್ಲಭೆಯರುನಾವು ಗೆಲ್ಲಬೇಕೆಂದುಅ.ಪ. ಮಡದಿ ಇಂದಿರಾದೇವಿ ಕಡೆಗಣ್ಣನೋಟದಿ ಪಡೆದಾಳು ಲೋಕಬ್ರಹ್ಮರುದ್ರಾದಿ ಪಾದಂಗಳಿಗೆ ನೀವೆ ಮಹಾಲಕ್ಷ್ಮಿಪಾದಂಗಳೆಗೆ ನೀವೆ ಮಹಾಲಕ್ಷ್ಮಿ ದೇವಿಯಶುಭಾಂಗಿಯ ಮೊದಲೆ ಬಲಗೊಂಬೆ 1 ಪರಮೇಷ್ಠಿ ಪರಮೇಷ್ಠಿ ಪಾದ ಪದ್ಮವನೆ ಮೊದಲೆ ಬಲಗೊಂಬೆ2 ವಾಣಿ ಅಜನ ಪಟ್ಟದರಾಣಿ ಪನ್ನಂಗ ವೇಣಿಜಾಣಿ ಕೊಡು ಎಮಗೆ ಮತಿಗಳಜಾಣಿ ಕೊಡು ಎಮಗೆ ಮತಿಗಳ ನಿನ್ನಪಾದರೇಣುವ ಮೊದಲೆ ಬಲಗೊಂಬೆ 3 ಪಾದ ವನಜವ ಮೊದಲೆ ಬಲಗೊಂಬೆ4 ಭಾರತಿ ನಿನ್ನ ಪಾದವಾರಿಜ ಚರಣವ ಬಾರಿ ಬಾರಿಗೆ ಸ್ಮರಿಸುವೆಬಾರಿ ಬಾರಿಗೆ ಸ್ಮರಿಸುವೆ ನಮಗಿನ್ನುತೋರೆ ಬೇಗ ಮತಿಗಳು5 ಇಂದ್ರನ ಗೆದ್ದು ಸುಧೆಯ ತಂದ ಮಾತೆಯ ಬಂಧನ ಕಡೆದ ಬಲು ಧೀರಬಂಧನ ಕಡೆದ ಬಲುಧೀರನಾದ ಖಗೇಂದ್ರನ ಮೊದಲೆ ಬಲಗೊಂಬೆ6 ಸಾಸಿರ ಮುಖದಿಂದ ಶ್ರೀಶನ ಸ್ತುತಿಸಿದವಾಸುದೇವಗೆ ಹಾಸಿಗೆವಾಸುದೇವಗೆ ಹಾಸಿಗೆ ಯಾದಶೇಷಗೆ ಮೊದಲೆ ಬಲಗೊಂಬೆ7 ಅಪಾರ ಮಹಿಮನೆ ತ್ರಿಪುರಸಂಹಾರಕಚಂದ್ರ ಶೇಖರನೆ ಸರ್ವೇಶ ಚಂದ್ರ ಶೇಖರನೆ ಸರ್ವೇಶ ನಿನ್ನಪಾದದ್ವಂದ್ವವ ಮೊದಲೆ ಬಲಗೊಂಬೆ 8 ವಾರುಣಿ ಅಪರ್ಣಾದೇವಿಯರು ಕರುಣಿಸಿನಮಗೆ ಕಾಲಕಾಲಕರುಣಿಸಿನಮಗೆ ಕಾಲಕಾಲಕೆರಾಮೇಶನ ತರುಣಿಯರೆ ಗೆದ್ದು ಬರಬೇಕ9
--------------
ಗಲಗಲಿಅವ್ವನವರು
ಕರವ ಪಿಡಿದು ರಕ್ಷಿಸೈ ಪ ಸಿರಿ ಅ.ಪ ಉರಿವಕಿಚ್ಚಿನೊಳುನಿಂದು ಸ್ಮರಿಸಬಾರದಕೆಟ್ಟಪಾಪದಿ ಬೆರತುಸತಿಸುತಬಂಧುಮೋಹದಿ ಮರತು ವಿಷಯದಿ ಮುಳುಗಿಪೋದೆನು 1 ಇಂದು ನತಪಾಲ ನೀನೆ ಎಂದು ನುತಿಸಿ ಬೇಡುವೆ ಕರವಜೋಡಿಸಿ ಮತಿಯ ನೀನೆನಗಿತ್ತು ಬೇಗದಿ 2 ಬಾಧೆ ಘನವಾಗಿ ಇರುವದಯ್ಯ ಹರಡಿ ವೈಷ್ಣವರನ್ನು ದುಃಖದೊ ನಿರಂತರ ವ್ಯಾಪಿಸಿರ್ಪುದ 3 ಶ್ರೀಶನೀಕೋಪಬಿಟ್ಟುಸಂತತರಂಗ ದಾಸನೋಳ್ಮನವನಿಟ್ಟೂ ನಾಶಮಾಡದೆ ಬಿಟ್ಟರಿಳೆಯೊಳು ಪೋಷ ಯದುಗಿರಿವಾಸಪರಮನೆ4
--------------
ರಂಗದಾಸರು
ಕರವ ಪಿಡಿಯೋ |ಮಾ ಕಮಲಭವ ವಂದ್ಯ | ಭಕ್ತರುದ್ಧರಿಸೋ ಪ ನಿನ್ನ ನಾಮಾಮೃತವು ಜಿಂಹ್ವೆಗೆಪೊದಗಲೀ |ನಿನ್ನ ಕಥಾಶ್ರವಣ ಕಿವಿಗಾಗಲೀ ||ನಿನ್ನ ಚಾರಿತ್ರಗಳ ನಿರುತಕೊಂಡಾಡಲಿ |ನಿನ್ನ ದಾಸರು ಕೇಳಿ ಶಿರದೊಗಲೀ 1 ಪಂಚಭೇದ ಜ್ಞಾನವೇ ತಿಳಿಯಲಿ |ಮಾರುತಾ ಮತವನ್ನು ಅನುಸರಿಸಲಿ ||ಆರೆರಡು ನಾಮ ಊಧ್ರ್ವಪುಂಡ್ರವನೆ ಧರಿಸಲಿ |ಧೀರ ಗುರು ಮಧ್ವರಾಯರೇ ಮುಖ್ಯರೆನಲಿ 2 ಏಸುಪರಿ ತುತಿಸಿ ವಾಣೀಶಗಸದಳವೋ ಶ್ರೀ |ವಾಸುದೇವನನು ತುತಿಸಲೊಶವೇ |ಶ್ರೀಶ ಪ್ರಾಣೇಶ ವಿಠ್ಠಲರಾಯ ದಯದಿನ್ನು |ದಾಸರ ದಾಸನೆಂದೆನಿಸಿ ಪೊರಿಯೊ 3
--------------
ಶ್ರೀಶಪ್ರಾಣೇಶವಿಠಲರು
ಕರವ ಮುಗಿದು ಪ ಅಷ್ಟಸೌಭಾಗ್ಯ ಕೊಟ್ಟು ನೀ ಎನ್ನ ಕಟ್ಟುಬಿಡಿಸೆಂದು ಬೇಡೆನೊ ಕೃಷ್ಣರಾಯ 1 ಸೃಷ್ಟಿಗೊಡೆಯ ನಿನ್ನಿಷ್ಟವಿದ್ದಂತಾಗಲಿ ಶಿಷ್ಟಜನರ ಸಂಗ ಕೊಟ್ಟ ರಕ್ಷಿಸು ಎಂದು 2 ಜ್ಞಾನಿಗಳರಸ ಜಾಣ ಪ್ರಾಣನಾಥ ವಿಠಲರಾಯ ಮಾನಿಯೆಂದೆನಿಸೆಂದು 3
--------------
ಬಾಗೇಪಲ್ಲಿ ಶೇಷದಾಸರು
ಕರವ ಮುಗಿಪರಘವ ತೆಗೆವ ಗುರು ವಿಜಯದಾಸರಿಗಿನ್ನು ಪ ಭೇದವಿಲ್ಲಯೆಂಬ ಮಾಯವಾದಿ ರಾಮಶಾಸ್ತ್ರಿ ಬಂದುಪಾದಕೆರಗೆ ಅವನ ತಮವ ಛೇದಿಸಿ ಸುಜ್ಞಾನವಿತ್ತೆ 1 ವಾದಿಗಿರಿಗೆ ಇಂದ್ರಸ್ಥಾನೀಯರಾದ ಗುರುಗಳಿಂದ ಮು-ದ್ರಾಧಾರಣಿಯ ಕೊಡಿಸಿ ಪರಮ ಆದರದಿಂದ ಅವನ ಕಾಯ್ದೆ2 ಭಸುಮವನ್ನೆ ತೆಗಸಿ ಅವನ ನೊಸಲಲೂಧ್ರ್ವ ತಿಲಕ ಪಚ್ಚಿಸಿಎಸವ ಪಂಚಮುದ್ರಿ ದ್ವಾದಶ ನಾಮ ಧರಿಪಂತೆ ಮಾಡಿದೆ 3 ಸುರರು ಆತನತಾಮರಸ ಪದ ಧೂಳಿಗಯೆಂದು ಈ ಮರಿಯಾದಿಗಳ ಪೇಳಿದೆ 4 ಧರೆಯೊಳಿದ್ದ ಭಕ್ತ ಜನರ ಪೊರೆವನೆಂಬ ಬಿರಿದು ವೊಹಿಸಿಸಿರಿ ಮೋಹನ್ನ ವಿಠಲನಂಘ್ರಿ ಸರಸಿರುಹವ ಎನಗೆ ತೊರ್ದೆ 5
--------------
ಮೋಹನದಾಸರು
ಕರವ ಮುಗಿವೆ ಚರಣಕ್ಕೆರಗುವೆ ಭರದಿ ರಕ್ಷಿಸು ಬಿಡದೇ ಶ್ರೀ ಪ ಮಾನವ ಕಾಯ್ದೆಯೊ ಹೀನರ ಮದಗರ್ವವನೆಲ್ಲ ಅಳಿದೆಯೊ ಧ್ಯಾನ ಮಾಡುವ ಸ್ವಾನುಭವಿಗಳ ಸ್ಥಾನ ಹೃದಯವಾಸ ಶ್ರೀ 1 ಧ್ಯಾನಿಸಿವಂಥಾ ಗಜರಾಜನ ಕಾಯ್ದೆ ಮಾನಿನಿ ಅಹಲ್ಯೆಯ ಪಾದದೊಳುದ್ಧರಿಸಿದೆ ದೀನರಕ್ಷಕ ಬಿರುದ ಪೊತ್ತ ವಿ ಜ್ಞಾನದೊಳಗಿರಿಸೆನ್ನಾ 2 ಶಬರಿಯ ಭಕ್ತಿಗೆ ಮೆಚ್ಚನೀ ಬಂದೆಯೊ ಬದರಿಯ ಹಣ್ಣನೆ ಸವಿಸವಿ ದುಂಡೆಯೊ ವಿಭು ಪರಮಾನಂದಾ ಪ್ರಭೆಯೊಳಗಿರಿಸಿದೆ 3 ಸ್ವರ್ಣಕಶ್ಯಪನ ಸೊಕ್ಕಗಿಸಿದೆ ದೇವಾ ಮನ್ನಿಸಿ ಪಾಂಡವರೈವರ ಸಲಹುವಾ ಚನ್ನ ಗೋಪಿಯರ ಕೂಡಿ ಮನ್ನಣೆಕ್ರೀಡೆಯ ನಾಡಿ 4
--------------
ಶಾಂತಿಬಾಯಿ
ಕರವ ಪಿಡಿ ಗುರುರಾಯ | ಶಿರಬಾಗಿ ಬೇಡುವೆ ಪೊರೆಯೊ ಸತ್ಕವಿಗೇಯ | ನೆರೆನಂಬಿದೆನು ನೀ ಮರೆಯದಿರು ಶುಭಕಾಯ | ಹೇ ಸೂರಿವರ್ಯ ಪ ಉರಗಕೇತನ ಮೊರೆಯ ಲಾಲಿಸಿ ತರಣಿಜನಿಗೆರಡೊಂದು ಯುಗದಲಿ ಧುರದಿ ಸಾರಥಿಯಾಗಿ ಸ್ಯಂದನ ಭರದಿ ನಡೆಸಿದ ಪರಮ ಪುರುಷನೆ ಅ.ಪ ಶರಣು ಜನ ಸುರಧೇನು | ಹೇ ತಾತ ನೀ ಮೂರೆರಡು ಜನುಮಗಳನ್ನು | ಕಳೆದು ಮ ತ್ತುರುವ ಅವತಾರವನು ಭಕ್ತಿಪೂರ್ವಕ ಪಿರಿಯರಾಜ್ಞದಿ ನೀನು ಪೂರೈಸಲಿನ್ನು ಧರಣಿಯೊಳಗವತರಿಸಿ ನರರಿಗೆ ಅರಿಯದಂದದಿ ಹರಿಯ ದಿಸೆಯೋಳ್ ಹರಿಯ ಸ್ಮರಿಸುತ ಚರಿಪ ಧೊರೆ ತವ ಚರಣ ದರುಶನಗರೆದು ಕರುಣದಿ 1 ಕ್ಲೇಶ ತಡಮಾಡದಲೆ ನೀ ಭವ ಪಾಶ | ದೃಢಮನವ ಕೊಡು ನಿ ನ್ನಡಿಗಳಲಿ ನಿರ್ದೋಷ | ನುಡಿಯಲಾಲಿಸಿ ಬಿಡದೆ ಮಾಡುಪದೇಶ ಪೊಡವೀಶದಾಸ ಒಡೆಯನೇ ನೀನಡಗಿ ಎನ್ನನು ಕಡೆಗೆ ನೋಡಲು ಪಡೆದ ಜನನಿಯು ಪಿಡಿದು ಬಾಲನ ಮಡುವಿನೋಳ್ ತಾ ಬಿಡುವ ತೆರ ತವ ನಡತೆ ಎನಿಪುದು 2 ಮಂದನಾನಿಜವಯ್ಯ | ಸಂದೇಹವಿಲ್ಲದೆ ಕುಂದು ಎಣಿಸದೆ ಜೀಯ ಬಂದೆನ್ನ ಮನದಲಿ ನಿಂದು ನೀಸಲಹಯ್ಯ ವಂದಿಪೆನು ಶ್ರೀ ಪು ರಂದರಾರ್ಯರ ಪ್ರೀಯ ಆನಂದ ನಿಲಯ 3
--------------
ಶಾಮಸುಂದರ ವಿಠಲ
ಕರವ ಪಿಡಿಯೋ ಬ್ರಹ್ಮಣ್ಯಾ ಗುರುವೇ ದುರಿತ ನೋಡದಲೆನ್ನ ಪರಮ ನಿರ್ಮಲ ಜ್ಞಾನ ತ್ವರಿತದಿಂದಿತ್ತೆನ್ನ ಪ ದೂರದೂರದಲಿದ್ದ ನರರು ನಿಮ್ಮಯ ಚರಣ ಸೇರಿ ಸೇವೆಯ ಮಾಡೆ ಕರುಣದಿ ಕಾಯ್ವೆ ನೀ 1 ದಿಟ್ಟತನದಿ ಭಕ್ತಿ ಇಟ್ಟು ಸೇವಿಸಲಾಗ ಕುಷ್ಟಾದಿ ರೋಗಗಳಟ್ಟುವೀ ಬೇಗನೆ 2 ಪರಿ ಭವದೊಳು ತಿರುಗಿಸದೆ ಎನ್ನ ನರಹರಿ ಚರಣದ ಸ್ಮರಣೆಯನ್ನೆ ಇತ್ತು 3
--------------
ಪ್ರದ್ಯುಮ್ನತೀರ್ಥರು
ಕರವ ಮುಗಿದು ಗುರುವಿನ ನೀ ಅರಿಯೊ ಸುಹಿತಾರ್ಥಿಯ ನೆರೆಯೊ ದೀರ್ಘದಂಡಹಾಕಿ ತರಣೋಪಾಯ ಮೂರ್ತಿಯ ಬೆರಿಯೋ ಕುರುವ್ಹ ತಿಳಿವ ಪರಮಭಕ್ತಿ ಮನೆಮೂರ್ತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 1 ಕರೆವ ಮಳೆಯು ಕರುಣಿಸಿನ್ನು ಪರಮದಯ ವೃತ್ತಿಯ ಶರಣ್ಹೋಕ್ಕಾಶ್ರೈಸೊ ನೀನು ತ್ವರಿತ ಶ್ರೀಪತಿಯ ಮರಿಯದೆ ಕೊಂಡಾಡಬೇಕು ಧರೆಯೊಳಿದೆ ಕೀರ್ತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣ ಗುರುಮೂರ್ತಿಯ 2 ಯರಕವಾಗಿ ಸರಕನಿನ್ನು ನೀನು ಕರಕೊ ದೃಢಭಕ್ತಿಯಾ ಅರಕಕೋಟಿ ತೇಜನಂಘ್ರಿ ಹರಿಕಿಸೊ ನೀ ಪೂರ್ತಿಯಾ ಗರಕನೆವೆ ಅರಿಕೆಮಾಡಿಕೊಂಡು ಸುಸಂಗತಿಯ ತರಕೈಸಿಕೊಳ್ಳು ಶ್ರೀಪಾದ ಪೂರ್ಣಗುರುಮೂರ್ತಿಯ 3 ಏರು ಅರು ಚಕ್ರ ನೋಡಿ ತಾರಿಸುವ ಸ್ಥಿತಿಯ ಅರವೆ ಅರವೆ ಆಗಿ ದೋರುತದೆ ಸುಜಾಗ್ರತಿಯ ಎರಗಿ ಹರುಷದಿಂದ ಪಡೆಯೊ ಪರಮ ವಿಶ್ರಾಂತಿಯ ಸ್ಮರಿಸೊಮನವೆ ಚರಣಕಮಲ ಪೂರ್ಣ ಗುರುಮೂರ್ತಿಯ 4 ಸುರರ ವಂದ್ಯ ಪರಮಭೇದ್ಯ ಅರಿಯಾ ಪರಗತಿಯ ಸಾರತಿಹ ಶ್ರುತಿವಾಕ್ಯ ಕೇಳೊ ಇಟ್ಟು ಪ್ರೀತಿಯ ತ್ಯರನೆ ತಿಳುಹಿಸಿಕೊಟ್ಟ ಗುರುವಿಗೆ ನಿತ್ಯಪ್ರತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 5 ಗುರುಮೂತ್ರ್ಯಾಭೇದ್ಯವೆಂಬ ಗುರುತಕೇಳೋ ಅರ್ಥಿಯ ಕುರಹು ದೋರಿಕೊಟ್ಟ ಗುರುವಿಗೆ ನೀ ಮಾಡೊ ಸ್ತುತಿಯ ಮರೆದುಬಿಡೊ ತರಳತನದ ಹರುವಾ ನಿನ್ನಭ್ರಾಂತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ6 ತರತರದಿ ಸಾಂದ್ರವಾಗಿ ದೋರುತಿಹ ದೀಪ್ತಿಯ ಪ್ರಾರ್ಥಿಸಬೇಕೊಂದೆ ಸರ್ವಕಾಲ ವಸ್ತುಗತಿಯ ಪರಿಪರಿಸುಖ ದೋರುವ ಕರುಣಾನಂದ ಯತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 7 ಸರ್ವಸುಖದೋರ್ವದೊಂದೆ ಸರ್ವಫÀಲ ಶ್ರುತಿಯ ಸರ್ವದಾವೆಂಬುವದು ನವರತ್ನಮಾಲೆ ಸ್ತುತಿಯ ಪೂರ್ವಕರ್ಮ ಹರಿಸುವ ಸದ್ಗುರು ಸಾಮಥ್ರ್ಯಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 8 ಶರಣಜನರಾಭರಣವಿದೆ ಅರಿಯಬೇಕೀವಾರ್ತೆಯ ತರಳ ಮಹಿಪತಿ ನೀ ಮಾಡೊ ಇರುಳ ಹಗಲ ಆರ್ಥಿಯ ಕರವ ಪಿಡಿದು ಪಾರಗೆಲಿಸುವ ನಿನ್ನ ಸಾರ್ಥಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರವೀರಪುರವ ಸೇರಿದಳು ಹದಿನಾರು ಸಾವಿರ ನಾರಿಯರ ಭಾಗ್ಯವ ನೋಡಿ ಸೇರಿದಳುಲಕುಮಿ ಜರಿದಾಳು ಪ. ಶ್ರೀವೈಕುಂಠಕ್ಕೆ ಸರಿಯೆಂದು ದ್ವಾರಕೆಹರಿ ಬ್ರಹ್ಮ ಕೇಳಿ ಹರುಷಾಗಿಹರಿ ಬ್ರಹ್ಮ ಕೇಳಿ ಹರುಷಾಗಿ ತಮ್ಮ ತಮ್ಮಪುರದಿಂದ ಇಳಿದು ಬರುತಾರೆ 1 ವೃಂದಾರಕರೆಲ್ಲ ಬಂದರು ದ್ವಾರಕೆಗೆ ಚಂದ್ರ ನೊಬ್ಬ ಬರಲಿಲ್ಲಚಂದ್ರ ತಾನೊಬ್ಬ ಬರಲಿಲ್ಲ ತನ್ನಕಾಂತಿ ಕುಂದೀತೆಂಬೊ ಭಯದಿಂದ2 ಸಾರು ದೇವತೆಗಳು ದ್ವಾರಕೆಗೆ ಬರಲುಸೂರ್ಯ ತಾನೊಬ್ಬ ಬರಲಿಲ್ಲಸೂರ್ಯ ತಾನೊಬ್ಬ ಬರಲಿಲ್ಲ ತನ್ನತೇಜ ಕುಂದೀತೆಂಬೊ ಭಯದಿಂದ 3 ಜಾಣ ನಾರದ ತಮ್ಮ ವೀಣೆ ನುಡಿಸುತ ವಾಣಿ ಮಾವನ ಸ್ತುತಿಸುತವಾಣಿ ಮಾವನ ಸ್ತುತಿಸುತ ತಾಒಂದು ಓಣಿಯ ಹಿಡಿದು ಬರುತಾನೆ4 ವಶಿಷ್ಠ ಮೊದಲಾದ ಮಹಾಶಿಷ್ಠರು ಮುನಿಗಳು ತಮ್ಮ ಕೃಷ್ಣ್ಣಾಜಿನ ಕಾಷ್ಠ ಸಹಿತಾಗಿಕೃಷ್ಣ್ಣಾಜಿನ ಕಾಷ್ಠ ಸಹಿತಾಗಿ ಬಂದರು ಧಿಟ್ಟ ರಾಮೇಶÀನರಮನೆಗೆ 5
--------------
ಗಲಗಲಿಅವ್ವನವರು
ಕರವೇ ವಂದಿಸಿ-ನಮಸ್ಕರಿಸಿ ಮಾತನುಸುರುವೆ ಪ ಪರಮಾದರದಲಿ ಕರುಣ ಎನ್ನ ಮೇಲೆ ಹರಹಿ ದುರುಮತಿಯ ಪರಿಹರಿಸುವುದು ಅ.ಪ. ವಾತತನಯ ವಾರಿಜಾತ ಬಾಂಧವ ಸಂ ಭೂತ ಸಹಾಯ ರಘುನಾಥನ್ನ ಪ್ರಿಯದೂತ ಶಾತಕುಂಭ ಮಕುಟ ಶೀತಕರ ಕುಂಡಲ- ತೀತ ಸುಂದರ ಕಾಯ-ಜಾತ ಶರವರ್ಜಿತ ದಾತನಿಂದಲಿ ಬಹಳಾತುರದಲಿ ಗು- ರುತು ಪಡೆದು ನಿರ್ಭೀತನಾಗಿ ಪೋಗಿ ಮಾತೆಗೆರಗಿ ಖಳವ್ರಾತವ ಘಾತಿಸಿ ಪ್ರೀತಿಯಿಂದಲಿ ನಿಜರಾತಿಯ ತಣಿಸಿದ 1 ಉದ್ದಂಡ ವಿಷವನುಂಡು ಕುಂಡಲಿಯಿಂದ ಕೈಗೊಂಡು ಮನ್ನಣೆಯ ಚಂಡಗದೆಯ ದಿಟ್ಟ ಗಂಡುಗಲಿ ಪ್ರಚಂಡ ಹಿಂಡು ಖಳರ ಶಿರ ಚೆಂಡಾಡಿ ಗುರು ಕೋ ದಂಡ ರುದ್ರನ ಮುಂಕೊಂಡು ಭಜಿಸಿ ರಣ ಮಂಡಲದೊಳು ಜಗಭಂಡನ ಕರುಳನು ದಂಡೆಯ ಮುಡಿಸಿದ ಖಂಡ ಪ್ರತಾಪ 2 ದ್ವಿಜನ ಉದರದಲ್ಲಿ ಸೃಜಿಸಿ ಮೆರೆದೆಯೊ ತ್ರಿಜಗದೊಳಗೆ ಶುದ್ಧ ಸುಜನಾಂಬುಧಿಗೆ ಚಂದ್ರ ಕುಜನ ಮತ ಭುಜಂಗ ದ್ವಿಜರಾಜನೆನಿಸಿದೆ ಅಜನ ಪಿತನ ಪಾದಾಂಬುಜವ ಬಿಡದೆ ನಿತ್ಯ- ಭಜಿಸುವೆ ಯತಿ ದಿಗ್ವಿಜಯ ಮೂರುತಿ ಸುರ- ಪಂಕಜ ಭವ ಪದವಿಯ ನಿಜವಾಗಿ ಕೈಗೊಂಡು ಋಜುಗಣದಧಿಪ ತಿವಿಜಯವಿಠ್ಠಲನಂಘ್ರಿರಜವನು ಧರಿಸಿದ 3
--------------
ವಿಜಯದಾಸ
ಕರಿ ಬಲಿ ಧ್ರುವ ಪ್ರಹ್ಲಾದನಲ್ಲಿ ಬಂದಂತೆ ಎನ್ನಲ್ಲಿ ಪ ನಿನ್ನಾಗಮನಕೆ ಹೃದಯ ಮನ ಬುದ್ಧಿ ಅರಳುವುದು ಸರ್ವದಾ ನಿನ್ನಾಗಮನಕೆ ಸರ್ವ ಮಾನಿಗಳೆಲ್ಲ ಕಾದು ನಿಂದಿಹರು ನಿನ್ನಾಗಮನಕೆ ಸರ್ವ ಕಾಲಾಕರ್ಮ ಅನುಕೂಲವಾಗಿಹವು ನಿನ್ನಾಗಮನಕೆನೇನೆ ಸರ್ವತ್ರ ಅನುಕೂಲ1 ಸೊಲ್ಲು ಲಾಲಿಸಬೇಕು ಶೀಲರುಕ್ತಿಬಲ್ಲಿದ ಮಹದೇವನೊಡೆಯ ಶುಕತಾತ ಹಲ್ಲಲ್ಲು ಕಿರಿದು ಕಾದು ನಿಂದಿಹರೊ2 ಕರಿಗಿರಿ ಮುದಮಯ ಗುರುತಂದೆವರದಗೋಪಾಲವಿಠಲಹೆದ್ದೈವ ಪಾಂಡುರಂಗಾ ವೆಂಕಟತಡವ್ಯಾಕೆ ಬರಲು ಯೋಚಿಪುದು ಏಕೆ ಬಾರಯ್ಯ ಭಕ್ತ ಬಂಧು ನಿನ್ನವರೆ ನಿಜ ಬಂಧೊ 3
--------------
ಗುರುತಂದೆವರದಗೋಪಾಲವಿಠಲರು