ಒಟ್ಟು 24320 ಕಡೆಗಳಲ್ಲಿ , 137 ದಾಸರು , 9123 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯೊ ಕರುಣ ಕೃಪಾಳ ಸದ್ಗುರು ಘನಲೋಲ ದ್ರುವ ಎನ್ನಹೊಯಿಲ ನಿಮಗೆಂತು ಮುಟ್ಟುವದಾನಂತಗುಣಮಹಿಮೆ ಚಿಣ್ಣ ಕಿಂಕರನಾದ ಅಣುಗಿಂದತ್ತಲಿ ಹೀನ ದೀನ ನಾ ಪರಮ ಖೂನತಿಳಿಯಲು ನಿಮ್ಮ ಕೃಪಾಸಿಂಧು ನಿಮ್ಮ 1 ಅನಂತಕೋಟಿ ಬ್ರಹ್ಮಾಂಡನಾಯಕನೆಂದೊದರುತಿಹಾನಂತ ವೇದ ಅನಂತಾನಂತಾನಂತ ಮಹಿಮರು ಸ್ತುತಿಸುತಿಹರು ಸರ್ವದ ಗುಹ್ಯ ಅಗಾಧ ತಿಳಿಯದು ಮಹಿಮ್ಯಂಗುಷ್ಠದ 2 ಮಾಡುವರಾನಂದ ಘೋಷ ದೋರುವ ಹರುಷ ತಾ ಶೇಷ ಸುರಮುನಿ ಜನರೆಲ್ಲ ಚರಣಕಮಲಕೆ ಹಚ್ಚಿದರು ನಿಜಧ್ಯಾಸ ಸಿರಿಲೋಲ ನೀ ಸರ್ವೇಶ 3 ಸಕಲಾಗಮ ಪೂಜಿತ ಸದ್ಗುರು ಶ್ರೀನಾಥ ಕಾಮಪೂರಿತ ಕರುಣಾನಂದಮೂರುತಿ ಯೋಗಿಜನ ವಂದಿತ ಜನರಿಗೆ ಸಾಕ್ಷಾತ 4 ಸಲಹುವದೋ ನೀ ಶ್ರೀಹರಿಯೆ ನೀ ಎನ್ನ ಧೊರೆಯೆ ಮುರ ಅರಿಯೆ ಸಕಲಪೂರ್ಣಸಿರಿಯೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕರುಣಾಕರ ಕೃಪಾಲ ಶ್ರೀ ಗುರು ಎನ್ನ ಕಾಯೊ ದಯದಿಂದೆನ್ನ ಪರಮಪಾವನ ಧ್ರುವ ಹುಟ್ಟಿಸಿಹ್ಯ ಜೀವನ ಸೃಷ್ಟಿಯೊಳು ನಾ ನಿಮ್ಮ ದೃಷ್ಟಿಸಿ ನೋಡಲು ಎನ್ನ ಕಷ್ಟಪರಿಹಾರ ಶಿಷ್ಟಜನ ಪ್ರತಿಪಾಲ ದುಷ್ಟಜನ ಸಂಹಾರ ಎಷ್ಟೆಂದು ಪೊಗಳಲಯ್ಯ ಕೃಷ್ಣಕೃಪಾಲ 1 ಇನ್ನೊಂದು ಅರಿಯೆ ನಾ ಅನ್ಯಪಥÀವೆಂಬುದನು ನಿನ್ನ ಚರಣಕೆ ಪೂರ್ಣ ನಂಬಿಹ್ಯನು ಭಿನ್ನವಿಲ್ಲದೆ ಎನ್ನ ಚನ್ನಾಗಿ ಸಲಹಯ್ಯ ಧನ್ಯಗೈಸೊ ಪ್ರಾಣ ಚಿನ್ಮಯನೆ 2 ವಾಸನೆಯ ಪೂರಿಸೊ ವಿಶ್ವವ್ಯಾಪಕ ಎನ್ನ ಭಾಸ್ಕರಕೋಟಿ ಪ್ರಕಾಶ ಪೂರ್ಣ ಲೇಸು ಲೇಸಾದಿ ಪಾಲಿಸೊ ವಾಸುದೇವನೆ ದಾಸಾನುದಾಸ ನಿಜದಾಸ ಮಹಿಪತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕರುಣಾಕರನೆ ಕಡು ಪಾಪಿ ನಾನುನ್ಯಾಯವೆಂಬುದು ಎನ್ನೊಳೆಳ್ಳನಿತಿಲ್ಲ ಪ ಎಣ್ಣೆ ಕೊಪ್ಪರಿಗೆಯೊಳ್ಬಿದ್ದು ಸ್ತುತಿಸಿದವನಲ್ಲಚಿನ್ನಕಶಿಪು ಬಾಧೆಗೊಳಗಾದವನಲ್ಲಬಣ್ಣಗೆಟ್ಟಡವಿಯಲಿ ತಪಸು ಮಾಡಿದವನಲ್ಲಹೆಣ್ಣನೊಲ್ಲದೆ ನಿನ್ನ ಬಂಟನಾದವನಲ್ಲ 1 ಒಲಿದು ದಾನವನಿತ್ತ ವೈರಿಕುಲದವನಲ್ಲಬಲು ಭಕುತಿಯ ದಾಸಿ ಪುತ್ರ ನಾನಲ್ಲಕಲಹದಲಿ ಪಣೆಗೆ ಬಾಣವ ನೆಡಿಸಿದವನಲ್ಲಕಳವಳದಿ ಕರೆದ ಪಾಂಚಾಲಿ ನಾನಲ್ಲ 2 ಡಿಂಗರಿಗ ಮಾತ್ರ ನಾನಾಗಿಹೆನೆಂದು 3
--------------
ಕನಕದಾಸ
ಕಾಯೊ ಕರುಣಾಕರನೆ ನೀಯನ್ನಾ ಕಾಯೋ ಆನಾಥರಕ್ಷಕ ದಯಾಸಿಂಧೂ ಪ. ಕಾಯೊಯನ್ನನು ಕರವಿಡಿದು ಕೃಪೆಯಿಂದ ನೀಯನ್ನಾ ಕಾಯೊದೇವರದೇವ ಶ್ರೀ ವೆಂಕಟೇಶ್ವರನೆ ಕಾಯೊ ಅ.ಪ. ನೀನಲ್ಲದೆ ಅನ್ಯತ್ರ ತಾಯಿ ತಂದೆಗಳಿಲ್ಲಾ ನೀನಲ್ಲದೆ ಬಂಧುಬಳಗವೆನಗಿಲ್ಲಾ ನೀ ಯನ್ನ ಕಾಯೊ ಶ್ರೀ ವೆಂಕಟೇಶ್ವರನೆ 1 ತರುಳ ಕರಿಯಲು ಕಂಭದಿ ಬಂದು ಹಿರಣ್ಯಾಕ್ಷಕನ ಕರುಳ ತೆಗದು ವನಮಾಲೆ ಹಾಕಿ ನಿಂದೀ ನರಮೃಗರೂಪಿನಲಿ ಪ್ರಹ್ಲಾದಗೆ ವರವಿತ್ತೆ ನೀಯನ್ನ ಕಾಯೊ ಶ್ರೀ ವೆಂಕಟೇಶ್ವರನೆ 2 ಜಲದೊಳಗೆ ನೆಗಳೆಯು ಹಿಡಿದು ಎಳೆಯುತ್ತಿರೆ ಬಹುಬಾಧೆಬಡಿಸೆ ನಿಮ್ಮ ನೆನೆಯಲು ನಿಲ್ಲದೆ ಬಂದೊದಗಿನೆಗಳೆಯನು ಶೀಳ್ದು ಕರಿರಾಜಗೊಲಿದು ರಕ್ಷಿಸಿದೊ ಶ್ರೀ ವೆಂಕಟೇಶ್ವರನೆ 3 ದುರುಳದುಶ್ಯಾಸ ದ್ರೌಪತಿ ಸೀರೆಯನು ಸೆಳೆಯೆ ಹರಿಣಾಕ್ಷಿ ಸಭೆಯೊಳಗೆ ಕೃಷ್ಣಾಯೆಂದುವದರೆ ಪರಿಪರಿ ವಸ್ತ್ರವನು ಕೊಟ್ಟೆ ಅಭಿಮಾನವನು ಕಾಯ್ದೊ ದೇವರದೇವ ಶ್ರೀ ವೆಂಕಟೇಶ್ವರನೆ 4 ಶಂಖಚಕ್ರಧರ ನಿನ್ನ ಚರಣವನು ನಂಬಿದೆ ಪಕ್ಷಿವಾಹನಸ್ವಾಮಿ ಕರುಣಾನಿಧೆ ಹೆಳವನಕಟ್ಟೆಯೊಳು ನಿಂದು ಭಕ್ತರನ್ನೆಲ್ಲಾ ಕಾಯ್ದ ದೇವರದೇವ ಶ್ರೀ ವೆಂಕಟೇಶ್ವರನೆ 5
--------------
ಹೆಳವನಕಟ್ಟೆ ಗಿರಿಯಮ್ಮ
ಕಾಯೊ ಕರುಣಾನಂದ ಶ್ರೀಗುರು ಕೃಪಾನಿಧೆ ಕಾಯೊ ಕರುಣಿಸಿ ಎನ್ನ ಪೂರ್ಣ ನೀ ಕಾಯೊ ಪರಮದಯಾನಿಧೆ ಧ್ರುವ ತೊಡಿಸಿ ಕರುಣಾನಂದ ಕವಚವ ಇಡಿಸೊ ಭಗುತಿ ವೈರಾಗ್ಯವ ದೃಢಗೊಳಿಸುವ ಙÁ್ಞನಪೂರ್ಣ ನೀ ಕಡಿಸೊ ಕಾಮಕ್ರೋಧವ ನಡೆಸಿ ನಿತ್ಯವಿವೇಕ ಪಥದಲಿ ಕೂಡಿಸೊ ನಿಜಸುಬೋಧವ ಬಿಡಿಸೊ ಭವಭವ ಮೂಲದಿಂದಲಿ ಬಡಿಸೊ ಹರುಷಾನಂದವ 1 ಬಟ್ಟೆ ಕೊಟ್ಟು ಕಾಯೊ ಸತ್ಸಂಗವ ಮುಟ್ಟಿಮುದ್ರಿಸೊದೃಷ್ಟಾಂತವ ಸಟೆಯ ಮಾಡೊ ಅವಿದ್ಯವ ನಿಷ್ಠತನ ನೆಲೆಗೊಳಿಸಿ ಕಾಯೊ ನೀ ಇಟ್ಟು ಶಿರದಲಿ ಅಭಯವ 2 ಭಿನ್ನವಿಲ್ಲದೆ ನೋಡಿ ಎನ್ನನು ಧನ್ಯಗೈಸೊ ನೀ ಪ್ರಾಣವ ಕಣ್ದೆರಿಸಿ ಅಣುರೇಣುದಲಿ ಪೂರ್ಣಖೂನದೋರೊ ಸಾಕ್ಷಾತವ ಎನ್ನೊಳಗೆ ನಿಜಾನಂದ ಸುಖದೋರಿ ಪುಣ್ಯಗೈಸೊ ನೀ ಜೀವನ ಚಿಣ್ಣಕಿಂಕರ ದಾಸ ಮಹಿಪತಿ ರಕ್ಷಿಸೊ ಸಂತತವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕರುಣಾಬ್ಧಿ ಗುರು ಎನಗೆ ದಯವುಳ್ಳ ಸ್ವಾಮಿ ನೀನಹುದೊ ಜಗದೊಳಗೆ ಧ್ರುವ ಶಿರದಲಭಯವ ನೀಡಿ ಕರುಣದಯದಲಿ ನೋಡಿ ಹರುಷ ಮನವನು ಮಾಡಿ ದುರಿತಭವ ಈಡ್ಯಾಡಿ ಗುರುತ ನಿಜ ಮಾಡರಹು ನೀಡಿ ಪರಮ ಗತಿ ಇದರಿಡಿ ವರಕೃಪೆಯ ಮಾಡಿ 1 ಒಂದು ಪಥವನು ತಿಳಿಸಿ ದ್ವಂದ್ವ ಭೇದವನಳಿಸಿ ಕುಂದ ದೋಷವ ತೊಳಿಸಿ ಒಂದರೊಳು ನಿಲಿಸಿ ನೆಲೆಗೊಳಿಸಿ ಸಂದು ಜನ್ಮಗಳಳಿಸ್ಯಾನಂದ ಸುಖ ಹೊಳಿಸಿ 2 ಕರುಣಿಸೊ ಗುರು ಎನಗೆ ಶರಣ ಹೊಕ್ಕಿದೆ ನಿಮಗೆ ದೋರುದನುಭವ ಈಗೆ ಕರಗಿ ಮನವೆರಗುವ್ಹಾಂಗೆ ಸ್ಮರಣ ಸುಖ ಎದುರಿಡು ಬ್ಯಾಗೆ ತರಣೋಪಾಯದಲೆನೆಗೆ ಪೊರೆಯೊ ಮಹಿಪತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕರುಣಾಳು ಅಂಬುದಛಾಯ ಬಿನ್ನಹ ಕೇಳು ತಾಯೊಳು ಶಿಶು ಗುಡಪಾಯಸಗೋಸುಗ ಬಾಯತೋರ್ಪುದು ನ್ಯಾಯವೇ ಪೇಳು ಪ. ಭೂತಿದೇವಿಯ ರಮಣಾ ನೃಪ ಸಂಪ್ರೀತಿ ಪೂರ್ತಿ ಕರಣಾ ಚಾತೂರ್ಯ ಕರಣಾ ದಿವಿಜಾರಾತಿ ಶಿರೋಹರಣಾ ಮಾತು ಮಾತಿಗೆ ವಿಖ್ಯಾತಿಗೊಳಿಪ ತೆರ ನೀ ತಿಳಿಯೇಯ ಖಗಕೇತನ ಶುಭದಾ 1 ಮಧುಮಯ ಮೃದುಭಾಷಾ ಮಧುಹರ ಮಧುಕರ ಮುಖಭೂಷಾ ಅಧರೀಕೃತ ತೋಷಾ ದಾನವ ಮದಜಲನಿಧಿಶೋಷಾ ಮಧುರಾ ಪಟ್ಟಣ- ಕಧಿಪನೆಂದೆಸೆವ ಬುಧರಿಪು ಕಂಸನ ಸದೆದ ಪರೇಶಾ 2 ಶ್ರೀಪತಿ ಸರ್ವೇಶಾ ದುರಿತಮಹಾಪದ್ಗಣನಾಶಾ ತಾಪೋನ್ಮಥನೇಶಾ ಪಾಲಿಸು ಭೂಪ ಶೇಷಗಿರೀಶಾ ನೂಪುರ ಕಿಂಕಿಣಿಕ್ವಣಿತ ಚರಣ ಲ- ಕ್ಷ್ಮೀ ಪರಿರಂಭಿತ ಪರಮಾನಂದದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಯೊ ಕಾಯೊ ಕರುಣಕಾರ ಗೋವಿಂದ ಕಾಯೊ ನಮ್ಮ ಕೃಪಾಸಿಂಧು ಹರಿ ಮುಕುಂದ ಧ್ರುವ ಬೊಮ್ಮನಾ ಪಡೆದ ಪರಾವರ ದೊರಿಯೆ ಸಮ್ಯಜ್ಞಾನವಿತ್ತು ಕಾಯೊ ಮುರಾರಿಯೆ ನಿಮ್ಮ ವಿನಾ ಅನ್ಯಪಥವ ನಾನರಿಯೆ ನಮ್ಮ ದೈವ ನೀನಹುದೊ ನರಹರಿಯೆ 1 ದುರಿತ ಪರಿಹರಿಸೊ ಭಾವ ಭಕ್ತಿಯೊಳೂ ಮನಪೂರ್ಣವಿರಿಸೊ ಕಾವಕರುಣನೆ ನಿಮ್ಮ ದಯ ಬೀರಿಸೊ ದಿವಾರಾತ್ರೆಯಲಿ ನಿಮ್ಮ ಸ್ಮರಣಿಲಿರಿಸೊ 2 ಕಾಯೊ ಕಾಯೊ ಕೊಟ್ಟು ನಿಮ್ಮ ನಿಜಧ್ಯಾನವ ಕಾಯೊ ಕರುಣಿಸಿ ಎನ್ನ ಜೀವನದ ಕಾಯೊ ದಯದಿಂದ ಎನ್ನ ಅಭಿಮಾನ ಕಾಯೊ ನಿಜ ದಾಸ ಮಹಿಪತಿ ಪ್ರಾಣವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕಾಯೊ ಕಾಯೊ ಕಾಯೊ ಕೃಪಾನಿಧಿ ಕಾಯೊ ಕೃಪಾಳು ಸದ್ಗುರು ದಯ ನೀ ಪಾಲಿಸಿ ಸೋಹ್ಯಸೊನ್ನೆ ಸೂತ್ರಗುಹ್ಯ ಗೂಢದೋರಿ ಸಾಹ್ಯಮಾಡೊ ಸ್ವಾಮಿ ಸಾಕ್ಷಾತ್ಕಾರ ನೀ ದೋರಿಸಿ ನ್ಯಾಯದಲಿ ಮಿಥ್ಯಾಮಾಯ ಮೊನೆಮುರಿಸಿ ತೋಯಜಾಕ್ಷ ನಿಮ್ಮ ಶ್ರಯ ಸುಖ ಬೀರಿ ಭವ ಭಯ ಹರಿಸೊ ಗುರು ಕರುಣಿಸೊ 1 ನಾನಾರು ಎಂದು ಸಾಖೂನ ತಿಳಿಯದೆ ನಾನಾ ಯೋನಿಮುಖ ಜನಿಸಿ ಬಂದೆÀನಯ್ಯ ಜನುಮ ಜ್ಞಾನಗಮ್ಯವಾದ ಸ್ಥಾನದೋರಿ ನಿಜ ಧ್ಯಾನ ಮೌನದನುಭವ ಸುಖ ನೀಡೊ ನಿಮ್ಮ ನ್ಯೂನ ಪೂರ್ಣ ಎನ್ನ ನೀ ನೋಡದೆ ಸ್ವಾಮಿ ಸ್ವಾÀನುಭವದ ಸುಜ್ಞಾನ ದೀಪಲಿಡೊ ನಮ್ಮ ಮನೋನ್ಮನವಾಗಿ ಘನ ಕೈಗೂಡುವಾ ಸನ್ಮತ ನೋಡಿ ಸುವರ್ಮ 2 ನೋಡದೆ ಗುಣದೋಷ ಮಾಡಿ ಉಪದೇಶ ದೃಢಭಾವದ ಸುಪಥ ಒಡನೆ ಗೂಡಿಸೊ ನೋಡಿ ದೃಷ್ಟಿಲೆನ್ನ ಒಡೆಯ ಸದ್ಗುರು ಪೂರ್ಣ ಓಡಿಹೋಗುವಂತೆ ಭಕ್ತಿ ಜ್ಞಾನ ವೈರಾಗ್ಯವಿಡಿಸೊ ನೀಡಿ ಅಭಯಕರುಣಕವಚವ ತೊಡಿಸೊ ಪಿಡಿದು ಎನ್ನ ಕೈಯಾ ಮೂಢ ಮಹಿಪತಿಯ ಬಿಡದೆ ಕಡೆಗಾಣಿಸೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕಾಯೊ ಗುರು ವಿಜಯರಾಯಕಾಯೊ ಕಾಯೊ ವರವೀಯೊ ವಿಜಯ ಗುರುರಾಯ ನೀನಲ್ಲದೆ ಉಪಾಯವೆ ಯಿಲ್ಲ ಪ ಪರಿ ಪರಿ ಥರವೆ 1 ಪಾಪಗಳೆಣಿಸದೆ ಪಾವನ ಮಾಳ್ಪದುಶ್ರೀಪತಿ ಪಡೆದ ಸುರಾಪಗದಂತೆ 2 ದುರಿತ 3 ಮಾಳ್ಪದು ನೀ ಕರಿಸದೆ ಬಲುವ್ಯಾಕುಲನಾಗಿಹೆ ನೀ ಕರುಣದಲಿ 4 ಪರಿಹರಿಸಲಿ ಸಲ್ಲ ಕರವಿಡಿ ಬ್ಯಾಗನೆಗುರುವೆ ನಿಮ್ಮಯ ಚರಣ ಸೇವಕನ 5 ನೀನಾಳುವರೊಳು ಈ ನರಮೂರ್ಖನುಏನು ಅರಿಯೆ ಬಲು ದೀನವಾಗಿಹನೊ 6 ಆಲಸ ತಾಳದು ಪಾಲಿಸು ವೇಣು ಗೋ- ಪಾಲ ವಿಠಲನ ಆಳು ಕೃಪಾಳೊ 7
--------------
ವೇಣುಗೋಪಾಲದಾಸರು
ಕಾಯೊ ಕಾಯೊ ಗುರುನಾಥತ್ರಯಗುಣಾತೀತ ಧ್ರುವ ಭಾನುಕೋಟಿ ಸುಪ್ರಭೆಯ ಅನುದಿನಕ್ಷಯ ಘನಮಹಿಮರ ಹೃದಯ ಆನಂದೋದಯ ಅನಾಥರಿಗೆ ಆಶ್ರಯ ನೀನಹುದೊನÀಮ್ಮಯ 1 ದೇಶಿಕÀರಿಗೆ ನೀ ದೇವ ಲೇಸಾಗಿ ಕಾವ ಋಷಿ ಮುನಿಗಳ ಸಂಜೀವ ವಾಸವಾಗಿವ್ಹ ವಿಶ್ವಾತ್ಮನಹುದೊ ಶ್ರೀದೇವ ಭಾಸುತಲಿವ್ಹ ಭಾಷೆಯ ಪಾಲಿಸುವ ಈಶ ನೀನೆ ಕೇಶವ 2 ಬಾಹ್ಯಾಂತ್ರ ನೀ ಸದೋದಿತ ಗುಹ್ಯಗುರುತು ಶ್ರೀಹರಿ ನೀನೆ ಸಾಕ್ಷಾತನಹುದೊ ಸ್ವಹಿತ ಇಹಪರ ನೀನು ದಾತಮಹಿಪತಿ ಪ್ರಾಣನಾಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕಾಯೊ ಜಿತಕಾಯ ಗುರು ಬಾದ ರಾಯಣ ತತ್ವಜ್ಞರಾಯ ಪ ನಾ ಯಾರಿಗೆ ಬಿನ್ನೈಪೆ | ಹೇಯಸಂಸಾರದ ಎರಡೊಂದು ಮಠದಲಿ ಧರಿಸಿ ತೂರ್ಯಾಶ್ರಮ ಸಿರಿಯರಸನ ದಿವ್ಯ ಮೂರ್ತಿಗಳ ಕರದಿಂದ ಪೂಜಿಸಿ | ಮರುತ ದೇವನ ಮತ ಪರಮಾನಂದವೆಂದು ಧರೆಗೆ ಬೀರಿದ ಕರುಣಿ 1 ಜ್ಷಾನಿಗಳರಹುವ | ವಾಣಿಯಿಂದಲಿ ದೇ ಮೌನಿವರಿಯ ಎನ್ನ | ಹೀನಪಾತಕವೆಂಬ ಕಾನನ ದಹಿಸೆಂದು | ಸಾನುರಾಗದಿ ನೋಡಿ 2 ಭೂಸುರ ಪರಿಪಾಲ | ಶ್ರೀ ಶಾಮಸುಂದರನ ಲೇಸಾಗಿ ಒಲಿಸುತಲಿ ಕಿಟಜದಲಿ ಭಾಸುರ ಘನವೇಣಿ | ಭೇಶಪುರದಿ ನೆಲಸಿ ದಾಸರ ಮನದಭಿಲಾಷೆ ನೀಡುವ ದಾನಿ 3
--------------
ಶಾಮಸುಂದರ ವಿಠಲ
ಕಾಯೊ ಕಾಯೋ | ಗುರುವರ್ಯ | ಕಾಯೊ ಕಾಯೋ ಪ ಕಾಯೊ ಕಾಯೊ ಗುರುವರ್ಯ ಪರಮ ಪ್ರಿಯಜೀಯ ನಿನ್ನಯ ಪಾದಕೆರಗುವೆನಯ್ಯಾ ಅ.ಪ. ಒಂದರಿತವನಲ್ಲ | ಕಂದನು ಎಣಿಸದೆಬಂದು ಸಲಹೊ | ತಂದೆ ಮುದ್ದು ಮೋಹನ್ನ 1 ಹಿಂದಿನ ಸುಕೃತದಿ | ಬಂದು ಜನಿಸಿದೆನಂದ ಮುನಿಯ ಮತ | ಸಿಂಧುವಿನಲ್ಲಿ 2 ಇಂದಾದರು ತವ | ದ್ವಂದ್ವಪದವ ಮನಮಂದಿರದಲಿ ತೋರಿ | ದಂದುಗ ಬಿಡಿಸೋ 3 ಎಂದಾಗುದೊ ತಂದೆ | ಇಂದಿರೇಶ ಪದದ್ವಂದ್ವ ಸಂದರ್ಶನ | ಸಂಧಿಸೊ ಬೇಗನೆ 4 ತಂದೆ ನಿನ್ನಲಿ ಗುರುಗೋ | ವಿಂದ ವಿಠಲನಅಂದ ಮೂರುತಿಯನು | ಛಂದದಿ ತೋರೊ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾಯೊ ಬಾರೊ ಹರಿಯೆ ಕರುಣಾ ಪಯೋಂಬುಧಿ ಪ. ಕಾಯೊ ಬಾರೊ ಕರುಣಾಂಬುಧಿ ಕಮಲದ- ಳಾಯತ ನೇತ್ರ ರಸಾಯನ ಸುರಿವುತ ಅ.ಪ. ಸಿಲುಕಿ ಬಾಧೆಗೊಂಡು ಬಹು ಬೆದರುವ ದಾಸನ ಕಾದುಗೊಳ್ಳು ಕಂಬ್ವರಿಗದಾಬ್ಜಧರ ಮಾಧವ ಮಧುಮಥನ ಮನದಿ ವಿನೋದಿಸುವ ಕಥನ ಶ್ರೀ ಪದಾಬ್ಜಾಮೋದಯುಗ ಸಾಸ್ವಾದನಾತ್ಮಕ ವಿನೋದ ನಲಿವುತ 1 ಕತ್ತಲೆ ಮುಸುಕಿರುವ ಸಮಯದಿ ಸುತ್ತ ವ್ಯಾಘ್ರವಿರುವ ವನದಲಿ ಸತ್ವಹೀನವಾದೆತ್ತಿನ ಕೆಡಹುವದುತ್ತಮವೆ ಪುರುಷೋತ್ತಮ ನಿನ್ನಯ ತತ್ವಮಾರ್ಗ ತಿಳಿಸಿ ತ್ರಿಕರಣವೆತ್ತಿ ಬೋಧೆಗೊಳಿಸಿ ಜನೋತ್ತಮನೆನಿಸುತ 2 ಇಂದಿರೇಶ ನಿನ್ನ ಚರಣವನೆಂದಿಗು ನಂಬಿದನ ಬಂಧ ಬಿಡಿಸಿ ಕೃಪೆಯಿಂದ ಪೊರೆವನೆಂಬಂದಕಪಾಯವ ಕರುಣಾಸಿಂಧು ನಿನ್ನ ಕೀರ್ತಿ ಮನೋಗತ ಸಂದಣಗೊಳಿಸುತ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಯೊ ಸುಖಸಾರ ಮಾಯಾವಿದೂರ ಭಾವಜನಯ್ಯ ಭಕುತರ ಪ್ರಿಯಕರ ಪ ಕಾಯಕಾಂತಾರದೊಳು ನೋಯುತ ವಿಧ ವಿಧ ಬಾಯ ಬಿಡುವೆನಯ್ಯ ತೋಯಜಾಕ್ಷನೆ ನೋಡೊ 1 ಸಂಸಾರತೆರೆಯೊಳು ಹಿಂಸೆ ಪಡುತ ಮತಿ ಕಂಸಾರಿ ಕರುಣಿಸೊ 2 ಜಡಭವತೊಡರನು ಕಡೆಹಾಯ್ಸಿ ಕೊಡುಮುಕ್ತಿ ಕಡುದಯಾನಿಧೆ ಎನ್ನೊಡೆಯ ಶ್ರೀರಾಮನೆ 3
--------------
ರಾಮದಾಸರು