ಒಟ್ಟು 6613 ಕಡೆಗಳಲ್ಲಿ , 119 ದಾಸರು , 3317 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೇಡಲೇತಕೆ ಪರರ ದೇಹಿಯೆಂದು ಪ ನೀಡುವಾ ಧೊರೆ ಎನಗೆ ನೀನಿರಲು ಸರ್ವದಾ ಅ.ಪ. ಗ್ರಾಸವನು ಬೇಡೆ ದೂರ್ವಾಸ ಮುನಿಗಂದನ್ನ ಅನಾ ಯಾಸದಿಂ ತತ್ಕಾಲದಲಿ ಕಲ್ಪಿಸಿ ಆ ಸಂಯಮಿಗೆ ಉಣಿಸಿ ದಣಿಸಿದ ಮಹಾ ದಾತಾ ದಾಶರಥೆ ನಿನ್ನ ಬಿಟ್ಟನ್ಯ ದೇವತೆಗಳನು 1 ಖಳ ದುಶ್ಯಾಸನನು ದ್ರೌಪದಿಯ ಸಭೆಯೊಳು ದು ಕೂಲವನು ಸೆಳೆಯೆ ದ್ವಾರಕ ಮಂದಿರಾ ಶ್ರೀ ಲೋಲ ಶ್ರೀ ಕೃಷ್ಣ ಕರುಣಿಸು ಕರುಣಿಸೆನೆ ಪಾಂ ಚಾಲಿ ಮೊರೆ ಕೇಳಿ ದಿವ್ಯಾಂಬರ ನಿಚಯವಿತ್ತೆ 2 ಮಡದಿ ಕಳುಹಲು ಬಂದ ಬ್ರಾಹ್ಮಣನ ಪೀಡಿಸುವ ಬಡತನವ ಕಳೆದೆ ಒಪ್ಪಿಡಿಯವಲಿಗೆ ಪೊಡವಿಯನ್ನಾಳಿಸಿದೆ ಕ್ರಿಮಿಗೊಲಿದು ಕಾರುಣ್ಯದಲ್ಲಿ ಮೃಡ ಬಿಡೌಜರೀಪ್ಸಿತ ಕೊಡುವೆ 3 ತಾಪಸೋತ್ತಮ ಮೃಕಂಡಾತೃಜಗೆ ಕಲ್ಪಾಯು ನೀ ಪೂರ್ತಿ ಮಾಡಿ ಅಲ್ಪಾಯು ಕಳೆದು ಆ ಪರ್ವತೇಶ್ವರನ ಪಟ್ಟಣವ ಸಾರ್ದು ಸಾಂ ದೀಪ ತನಯನ ತಂದ ಸರ್ವಾಂತರ್ಯಾಮಿ 4 ವಿಶ್ವ ಜೀವರಿಗನ್ನ ಕಲ್ಪಕನೆ ನೀನಿರಲು ಜ್ಞಾನ ದ್ರವ್ಯ ಅಲ್ಪ ಮಾನವರಿಗಾಲ್ಪರಿರೇನಹುದು ಅಹಿ ತಲ್ಪ ಜಗನ್ನಾಥ ವಿಠ್ಠಲ ಕಲ್ಪತರುವಿರಲು 5
--------------
ಜಗನ್ನಾಥದಾಸರು
ಬೇಡವೋ ಬ್ರಾಹ್ಮಣ ದ್ರೋಹ ಬೇಡವೋ ಪ ಮಾಡಬೇಡವೋ ನಿನಗೆ | ಕೇಡು ತಪ್ಪದು ಕೊನೆಗೆನಾಡೊಳಗಪಕೀರ್ತಿ | ಗೀಡಾಗಿ ನೀ ಕೆಡ ಅ.ಪ. ಭಾರ ನೀನು - ಅಂಥಅತ್ಯಂತವಲ್ಲವಿದೇನು - ನಿನ್ನ ||ಚಿತ್ತ ದೃಢ ಮಾಡು ಉತ್ತಮ ವಿಪ್ರರವೃತ್ತಿಯ ಸೆಳದು ಉನ್ಮತ್ತನಾಗಿ ಕೆಡ 1 ಸೂಸುವ ನದಿಯೊಳು ಬಿದ್ದು - ಇನ್ನುಈಸಲಾರದೆ ಮುಳುಗೆದ್ದು - ಅಂಜಿ ||ಈಸು ಬುರುಡೆ ಬಿಟ್ಟು ಬೀಸೋ ಕಲ್ಲನೆ ಕಟ್ಟಿಈಸುವ ತೆರನಂತೆ ಭೂಸುರ ದ್ರವ್ಯವು 2 ನೃಗರಾಯನೆಂಬ ಭೂಪತಿಯು - ವಿಪ್ರ-ರಿಗೆ ಗೋದಾನವನಿತ್ತ ಬಗೆಯ ಕೇಳಿ ||ಅಗಲಿ ತಮ್ಮೊಳು ತಾವೆ ಜಗಳ ಪುಟ್ಟಿ ಆ ನೃ-ಪಗೆ ತೊಣ್ಣೆಯಾಗೆಂದ್ಹಗರಣವನೆ ಕೇಳು 3 ರಾವಣನೆಂಬುವ ದುಷ್ಟ - ಅವ-ದೇವತೆಗಳ ಸೆರೆಯಿಟ್ಟ ||ದೇವನರಸಿ ಸೀತಾದೇವಿಯ ನೆಪದಿಂದರಾವಣನ ಕೊಂದು ದೇವತೆಗಳ ಕಾಯ್ದನೊ 4 ಇನ್ನೆಷ್ಟು ಹೇಳಲೊ ಸಾಕ್ಷಿ - ಬ್ರಾಹ್ಮ -ರನ್ನವ ತೆಗೆದರೆ ಶಿಕ್ಷಿ ಮೋ-ಹನ್ನ ವಿಠ್ಠಲರಾಯ ತನ್ನಯ ಭಜಕರಬೆನ್ನ ಬಿಡದಲೆ ಕಾಯ್ವ ಇನ್ನಾದರು ಕೆಡ 5
--------------
ಮೋಹನದಾಸರು
ಬೇಡವೋರಂಗ ಹೆಂಗಳ ತಳ್ಳಿ ಹೋಗ ಬೇಡವೋನಾ ಬೇಡಿ ಕೊಂಬೆನುದಮ್ಯಯ್ಯ ಪ ಊರೊಳಗೆಲ್ಲ ನಿನ್ನಯ ದೂರೇ ರಂಗ ಬಾರೋ ನಿನ್ನನು ಕಾಣದಿರಲಾರೆ ಯಾರಿಗೆಂಬೆನು ಗೋಕುಲದೊಳಗಿರ್ದ ನಾರಿಯರೆಲ್ಲರು ಕಿವಿಗೆಡಸಿದರೆನ್ನ 1 ಚಿಕ್ಕವನಾಗಿ ನೀನಿರುತಿರೆ ಹೆಣ್ಣು ಮಕ್ಕಳ ಮೇಲÉ ಕಣ್ಣಿಡುವರೆ ಪೊಕ್ಕು ಪಾಲ್‍ಬೆಣ್ಣೆಯ ಕದ್ದರೆ ಗೋಪರ ಮಕ್ಕಳು ಕಂಡರೆ ಪ್ರಾಣವ ತೆಗೆವರು 2 ಎಲ್ಲ ಜೀವರಿಗೂ ನೀಹಿತನಾಗಿ ಪ್ರೀತಿಯಲ್ಲಿರು ಭಾರಿ ಪುರುಷನಾಗಿ ಹಲ್ಲ ಕಡಿದಿಹರಂತೆ ಗೋಪರು ಮಾನಕೊಳ್ಳಲು ಯತ್ನವ ಮಾಡಿ ಕೊಂಡಿಹರಂತೆ 3 ಕಂಡರೆ ಹಿಡಿದು ಕಟ್ಟುವರಾಗಿ ಪುಂಡ ನಿಲ್ಲಿಸ ಬೇಕೆನುತ್ತೆಲ್ಲಿ ಗೋಪರು ಕಂಡಿ ಕಣೆವೆ ಕಟ್ಟಿಕೊಂಡು ಸಾಧಿಪರಂತೆ 4 ಪಾಲು ಬೆಣ್ಣೆಯ ಕದ್ದು ಮೆಲುವರೆ ಕೃಷ್ಣ ಬಾಲೆಯರನು ಗೋಳು ಹೊಯ್ವರೆ ನಿ ನ್ನಾಲಯದೊಳಗೇನು ಕಡಿಮೆಯಾಗಿದೆ ಲಕ್ಷ್ಮೀಲೋಲನ ದಯದಿಂದ ಸಕಲ ಸಂಪತ್ತಿದೆ 5
--------------
ಕವಿ ಪರಮದೇವದಾಸರು
ಬೇಡಿಕೊಂಬೆಗೋಪಾಲ ಬೇಡುವೆನೈ ದಯ ಪ ಮಾಡಿ ಎನ್ನೊಳು ಬೇಗ ಗಾಢ ಮಹಿಮ ವರ ನೀಡೋ ಕೃಪಾಂಬುಧೇ ಅ.ಪ ಮರುಳನಾಗಿ ನಾನು ತಿರುಗುವೆ ಧರೆಯೊಳು ಸಿರಿವರ ನಿಮ್ಮಯ ಚರಣವ ಸ್ಮರಿಸದೆ ಪರಿ ನರಕಕ್ಕೆ ಗುರಿಯಾದೆ ಮುರಹರ ಕರುಣದಿಂ ಮನ್ನಿಸಿ ಪೊರೆ ಸುರವರ 1 ದೀನದಯಾಪರ ಜಾನಕೀ ಮನೋಹರ ನೀನೆ ಗತಿಯೆಂದು ಧ್ಯಾನಿಸಿ ಬೇಡುವೆ ಹೀನನ ಮಾಡದೆ ಧ್ಯಾನಿಪ ಭಕ್ತನಂ ಮಾನದಿಂ ರಕ್ಷಿಸು ವೇಣುಧರಹರಿ2 ಸುರುಪರೀಶ ಹರಿ ಚರಣದಾಸರ ಮೊರೆ ಕರುಣದಿ ಆಲಿಸಿ ಕರಪಿಡಿದು ಪೊರೆ ನೆರೆನಂಬಿದೆ ನಿಮ್ಮ ಚರಣವ ಪರಿಪರಿ ಪರಮಪಾವನ ಮಾಡು ಸಿರಿವರ ಶ್ರೀರಾಮ 3
--------------
ರಾಮದಾಸರು
ಬೇಡಿಕೊಂಬೆನು ನಿನ್ನ ಮನಬಿಚ್ಚಿ ತೋರಿಸುವೆ ಪ ಪಶುವಾದ ಎನ್ನ ಮನಸು ಪಿಸುಮಾತು ಹೇಳುತಿಹುದು ತುಸುಗುಣವಿಲ್ಲ ನಿನಗಂತೆ ಬಕುತಿಯೇಕಯ್ಯ ನಿನಗೆ ಅ.ಪ ಬದುಕು ತಪ್ಪಿಸಿ ನಿಲ್ಲು ನೀನಾಗಿ ಎನ್ನುತಿದೆ ಕದಿಮೋಸ ಮನವನು ನಂಬಿ ಬಾಳುವೆನೆಂತು ಬುದ್ಧಿ ಕಲಿಸಯ್ಯ ಮನಕೆ ಬೆಳಕು ತೋರಿಸು ನಿನ್ನ ಬದ್ಧಗೆಳೆಯನಾಗಿಸು ಅದನು ಬದುಕಿ ಬಾಳುವೆನಯ್ಯ 1 ಹಿಡಿಯಾಸೆ ಎನಗುಂಟು ಗಂಟುಕಟ್ಟಿ ನಿನ್ನೊಡನೆ ನಡೆವೆ ದಿಟ್ಟತನದಲಿ ಕಮಲಾಕ್ಷ ಲಾಲಿಸಯ್ಯ ಬಿಡಲಾರೆ ನಿನ್ನನೀಗ ಬೆಳಕು ಕಂಡಿತು ಎನಗೆ ಒಡೆಯ ಶೆಲ್ವರಾಯ ನನಸು ಕನಸಾಗಿ ಮಾಡದಿರು 2
--------------
ಸಂಪತ್ತಯ್ಯಂಗಾರ್
ಬೇಡಿಕೊಂಬೆನೊ ಗೋಪಾಲ ನಿನ್ನ ಬೇಡಿಕೊಂಬೆ ಕರಗಳೆರೆಡ ಪ ಜೋಡಿಸಿ ನಿನ್ನೊಳು ಸುದೃಢ ಭಕುತಿ ಮಾಡಿ ಸತತ ಭಜಿಸುವಂಥ ರೂಢಿ ಎನಗೆ ಕೊಡು ನೀನೆಂದು ಅ.ಪ ಕ್ಲೇಶಪಡಿಸದೆ ಸಲಹೆನ್ನ ಜಗಂಗಧೀಶ ಮರೆಯದೆ ಬಾರದ್ಯಾಕೊ ಕರುಣ ಲೇಶಗುಣನಿಧೆ ಆಶಾಪಾಶ ಬದ್ಧನಾಗಿ ದೇಶ ದೇಶ ತಿರುಗಿ ಕರುಣ ದುರುಳ ವಸುಮತೀಶರೊಳ್ ಬೇಡಿಸದಂತೆ 1 ಇಂದುವzನÀನೆ ಮುನಿವರ್ಯಹೃದರ ವಿಂದಸದನೆ ವರಗೋಪಯುವತಿ ಬೃಂದಮದನನೆ ಇಂದಿರೇಶ ನಿನ್ನ ಪಾದಾರವೃಂದಗಳನು ಹೃದಯವೆಂಬೊ ಮಂದಿರದೊಳಗೆ ನಿಲ್ಲಿಸಿ ಚಿದಾ- ನಂದಮೂರ್ತಿಯ ಪೂಜಿಪೆನೆಂದು 2 ಧೀರ ಚರಣನೆ ಮುರಾರಿ ಧರಣಿ ಭಾರಹರಣನೆ ಭುಜಗೇಶಫಣಿ ವಿದಾರಿ ಚರಣನೆ ಮಾರಜನಕ ನೀರಜಾಕ್ಷ ನಾರಸಿಹ್ಮ ನಾಮಗಿರೀಶ ಸಾರ ಎನಗೆ ತಿಳಿಬೇಕೆಂದು 3
--------------
ವಿದ್ಯಾರತ್ನಾಕರತೀರ್ಥರು
ಬೇಡಿಗೊಂಬೆನೊ ದೇವ ಮಹಾನುಭಾವ ಪ ಮೂಡಲುಗಿರಿವಾಸ ಶ್ರೀ ಶ್ರೀನಿವಾಸ ಅ.ಪ ನಾನಾ ಯೋನಿಗಳಲಿ ನಾ ಬಂದು ನೊಂದೆನೋ ನೀನೇ ಸಲಹಬೇಕೋ ಎನಗೆ ಜನುಮವು ಸಾಕೊ 1 ತನುವೂ ಮನಗಳನ್ನೂ ನಿನಗರ್ಪಿಸಿದೆನೊ ವನಜಾಕ್ಷ ಬಿಡಿಸು ಸಿಕ್ಕುಯೆನಗೆ ನೀನೇ ದಿಕ್ಕು 2 ಮಾನಾಪಮಾನವು ನಿನ್ನದು ಎನಗೇನೊ ದೀನ ಜನರ ಪಾಲ ರಂಗೇಶವಿಠಲ 3
--------------
ರಂಗೇಶವಿಠಲದಾಸರು
ಬೇಡಿದರೆ ನೀಡುವುದೇನು ಹಿರಿದೆ ಗೋವಿಂದ ಬೇಡದೆ ನೀಡೆ ನಿನ್ನಂತಸ್ತಿಗತಿಚೆಂದ ಪ ನೀಡುವನು ನೀನಿರಲು ಬೇಡಿಕೆಗೆ ಕೊನೆಯುಂಟೆ ಬೇಡಿ ಬೇಸತ್ತರೂ ಆಸೆಯಿಂಗುವುದುಂಟೆ ಬೇಡಿದಮಣಿ ನೂರುಜನುಮ ಸಾಕಹುದುಂಟೆ ಬೇಡದೇ ಭಜಿಪವಗೆ ಹುಟ್ಟು ಸಾವುಗಳುಂಟೆ 1 ಹಿಂದೆ ನೀನಿತ್ತುದನು ಇಂದುಣುತಲಿಹೆವಯ್ಯ ಮುಂದೆ ನಾನುಣಲೇನು ಬೇಡವಯ್ಯ ಸಂದಿರ್ಪುವೈ ಸಾಲಸೋಲಂಗಳೇನಯ್ಯ ಮುಂದೇನು ಬೇಡ ಮಾಂಗಿರಿವಾಸ ರಂಗಯ್ಯ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೇಡಿದೆನು ಕೊಡುಕಂಡ್ಯ ಬೇಡಿದೆನು ಕೊಡುಕಂಡ್ಯಬೇಡಿದೆನು ನೀ ನೀಡು ಕಂಡ್ಯಾ ಪ ನಿನ್ನ ಹಾಡನು ಹಾಡಿ ನಿನ್ನ ನಿಜದೊಳಗಾಡಿನಿನ್ನನೇ ಕಾಡಿ ನಿನ್ನನೇ ಬೇಡಿನಿನ್ನ ಓಲಗವ ಮಾಡಿ ನಿನ್ನ ನಿಟ್ಟಿಸಿ ನೋಡಿನಿನ್ನ ಲೀಲೆಯೊಳು ನಾನಿರುತಿಹುದದನಾ 1 ನೋಟದೊಳಗಿನ ನೋಟ ಕೂಟದೊಳಗಿನ ಕೂಟಆಟದೊಳಗಿನ ಆಟ ಇಂಥ ಆಟನೀಟದೊಳಗಿನ ನೀಟ ನಿನ್ನಲ್ಲಿ ಬೆರೆದಾಟಪಾಟ ಮಾಡಿಯೆ ಎನಗೆ ಪಾಲಿಸುವುದನ2 ಶರೀರದಿಚ್ಚೆಯನುಳಿದು ಶರೀರ ವಾಸನೆ ಕಳೆದುಶರೀರ ವಿಷಯದ ಹೊಲಬೆಲ್ಲ ಬಳಿದುಶರೀರದ ನೆಲೆಯು ತಿಳಿದು ಶರೀರದೊಳೊಬ್ಬನನುಳಿದುಶರೀರದ ಸಂಗ ದೊರಕದಿಹದದನಾ 3 ನಾದಲಕ್ಷಿಸಿ ಹಿಡಿದು ನಾದ ಸಂಗವ ಪಡೆದುನಾದಾಮೃತವ ಕಿವಿತುಂಬ ಕುಡಿದುನಾದ ದಾರಿಯ ನಡೆದು ನಾದ ದೊಳ್ವೆಳ ಗೊಡದುನಾದವನೆ ಮರೆತು ಸುಖಿಸುತಿಹದದನ 4 ನಿನ್ನ ನೀನುಳಿದಿಲ್ಲ ನೀ ದೈವ ಜಗಕೆಲ್ಲನಿನ್ನಂತೆ ಆಪ್ತರಿಲ್ಲ ನಿನ್ನ ನಂಬಿದೆನಲ್ಲನೀ ಕಾಯಬೇಕಲ್ಲ ಚೆನ್ನ ಚಿದಾನಂದನೆನೆಹಂಬತಾತ್ವಿಕ ಹಿನ್ನೆಲೆಯ ಕೀರ್ತನೆಗಳುದದನಾ 5
--------------
ಚಿದಾನಂದ ಅವಧೂತರು
ಬೇಡುವೆ ನಾ ಯಾದವಾ ಬÉೂೀತಿ ಮನದ ಮೋಹವಾ ಓಡಿಸುತಲಿ ಮಾಧವಾ ನಿನ್ನ ಸೇರಿಕೊಂಬುವಾ ನೀಡು ಇನಿತು ಭಾಗ್ಯವಾ ನಾನು ಇದುವೆ ನನ್ನದು ಮಾನವಗಿದು ಪಾಶವು ದೀನಬಂಧು ಇವನು ನೀ ಮಾಣದೆ ಬಿತಿಸೈ ಪ್ರಭೋ ಬೇಡಿಕೊಂಬೆ ಹೇ ವಿಭೋ ನೀನೆ ಪರಮಸದ್ಗುರು ಹೃದಯದಲ್ಲಿ ನೆಲೆಸಿದಾ ಆತ್ಮರೂಪವನು ಸದಾ ಮುದದಿ ತಿಳಿಯುವಂತೆ ನೀ ಸನ್ಮತಿ ದಯಪಾಲಿಸೈ ಸದಮಲಾತ್ಮಶಂಕರಾ ಬೇಡುವೆ ನಿನಗೀಶ್ವರಾ
--------------
ಶಂಕರಭಟ್ಟ ಅಗ್ನಿಹೋತ್ರಿ
ಬೇಡುವೆನು ಇದನೊಂದ ಕರುಣಿಸೋ ಹರಿಯೇ ಬೇಡವೆಂಬುದನೆಲ್ಲ ಏಕೀವೆ ಹರಿಯೇ ಪ ಒಪ್ಪಿಡಿಯ ಅವಲಕ್ಕಿಗೊಲಿದವನು ನೀನಂತೆ ಒಪ್ಪದಿಂದೆಲೆಯ ತಿಂದು ತೇಗಿದೆಯಂತೆ ತಪ್ಪುನೂರೆಂಟುಗಳು ಮನ್ನಿಸಿದೆ ನೀನಲ್ತೇ ಸರ್ಪಶಯನನೆ ನಿನ್ನ ನಾಮಭಜನೆಯ ಮಾತ್ರ 1 ಘೋರ ಪಾಪಿಯು ಮಗನ ಕರೆದಾಗ ಕರುಣಿಸಿದೆ ನಾರಿ ಹೊರದೂಡಿದ ತರಳನನು ಕಾಯ್ದೆ ಭಾರಿ ಮಕರಿಯ ಸೀಳಿ ಕರಿಯನೊಂದನು ಕಾಯ್ದೆ ನೀರಜಾಸನಪಿತನೆ ನಿನ್ನ ಸ್ಮರಣೆಯ ಮಾತ್ರ 2 ನಿನ್ನ ನಾಮದ ಭಜನೆ ಎನ್ನ ರಸನೆಯೊಳಿರಲು ಇನ್ನಾವ ಭಾಗ್ಯಗಳ ಬೇಡಲಾರೆನೋ ದೇವ ಪನ್ನಗೇಂದ್ರ ವಿಭೂಷಣ ಪರಿಪಾಲಿಸೈ ಶ್ರೀಶಾ ನಿನ್ನ ಧ್ಯಾನವ ಮಾತ್ರ ಮಾಂಗಿರೀಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೇಡುವೆನು ಶ್ರೀಕೃಷ್ಣ | ಕಾಡುತಿಹ ಭವರೋಗಓಡಿಸುವುದು ತಡೆಯದೇ ಪ ನಾಡಾಡಿ ದೈವಗಳ | ಬೇಡ್ವನಲ್ಲವೊ ಕೃಷ್ಣನೋಡೆನ್ನ ದಯದಿಂದ | ಸಾರ್ವಭೌಮಾ ಅ.ಪ. ಪರ ಕಂಬು ಚಕ್ರಾಂಕಿತನೆನಂಬಿಹೆನೊ ನಿನ್ನ ಪದವ ||ಕುಂಭಿಣಿಯ ಪರಿಪಾಲ | ಅಂಭ್ರಣಿಯ ಸುವಿಲೋಲಇಂಬಿಟ್ಟು ವದಗಿಸುತ | ಸಂಭ್ರಮದಿ ಕಾಯೋ | ಕರುಣೀ 1 ಪ್ರೇರ್ಯ ಪ್ರೇರಕ ನೀನೆ | ಬಾಧ್ಯ ಬಾಧಕ ನೀನೆಸೇವ್ಯ ಸೇವಕನೆ ಹರಿಯೇ ||ವಾಪ್ಯ ವ್ಯಾಪಕ ಸ್ವಾಮಿ | ಪೋಷ್ಯ ಪೋಷಕ ರೂಪಿಕಾರ್ಯ ಕಾರಣ ರೂಪನೇ ||ಭಾವ್ಯನೇ ನಿನ್ನಿಂದ | ಧಾರ್ಯ ಈ ಜಗವೆಲ್ಲವೀರ್ಯ ಔದಾರ್ಯ ಶೌರ್ಯ ||ಪೂಜ್ಯ ಪೂಜಕನೆನಿಪ | ಬಹಿರಂತರಾತ್ಮಕನೆಪ್ರಾಪ್ಯ ಪ್ರಾಪಕ ನಿನ್ನ | ಪ್ರಾಪ್ತಿಯನೆ ತಿಳಿಸೋ | ಸ್ವಾಮಿ 2 ತಾರತಮ್ಯ ಜ್ಞಾನ ಸದ್ | ವೈರಾಗ್ಯ ಹರಿ ಭಕುತಿಬಾರಿ ಬಾರಿಗೆ ಬೇಡುವೇ ||ಸೂರಿ ಸಂಗವ ನೀಯೊ | ದೂರಗೈ ದುಸ್ಸಂಗಮಾರಪಿತ ದಯಾಪಾಂಗನೆ ||ಕಾರುಣಿಕ ನೀನೆಂದು | ಸಾರಿರುವ ತವಪಾದದೂರ ಮಾಡಲಿ ಬೇಡವೊ ||ಆರು ಕಾಯುವರಿಲ್ಲ | ವಾರೀಜ ಜಾಂಡದೊಳುಧೀರ ಗುರು ಗೋವಿಂದ | ವಿಠಲ ಬಹು ಆಪ್ತಾ | ಗೋಪ್ತಾ 3
--------------
ಗುರುಗೋವಿಂದವಿಠಲರು
ಬೇಡುವೆನೋ ಗೋವಿಂದಾ ಬೇಡಬೇಡವೀ ಬಂಧ ಪ ಪಾಡಿಪಾಡಲಾನಂದಾ ನೋಡಿ ನೋಡಲತ್ಯಾನಂದ ಅ.ಪ ಕಡವರವೀಯಬೇಡ ಪೊಡವಿಯ ಸುಖಬೇಡ ಕಡುಲೋಭ ಮೋಹಬೇಡ ದೃಢ ಭಕ್ತಿಯನು ಮಾತ್ರ 1 ನರಕದ ಬಾಧೆಯು ಪರಿಹರಿಸಲು ಬೇಡ ನಿರುತ ನಿಮ್ಮಯ ನಾಮ ಸ್ಮರಣೆ ಸುಖವು ಮಾತ್ರ 2 ಜನನ ಮರಣಗಳ ಕೊನೆಗಾಣಿಸಲಿ ಬೇಡ ಅನಿತು ಜನುಮದಿ ನಿನ್ನ ನೆನೆವ ಬುದ್ಧಿಯು ಮಾತ್ರ 3 ಮಾಂಗಿರಿಯರಸನೆ ತುಂಗ ಕೃಪಾಂಗನೆ ಹಿಂಗದೆ ನೀನೆನ್ನಂತರಂಗದೊಳಿರುವುದ ಮಾತ್ರ4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೈಯದವನಿಗಿಂತಲೂ ಬೈಯುವವನೇ ಮೇಲು ಹೊಯ್ಯದವಗಿಂತಲೂ ಹೊಯ್ಯುವವನೆ ಮೇಲು ಪ ಬಾಯೆನಲು ಬರಲೊಲ್ಲೆ ಮಾಯಾಕಾರ ನಿನ್ನಅ.ಪ ಒಬ್ಬ ಧರಣಿಯನೊಯ್ದ ಒಬ್ಬ ಖಡ್ಗವ ಹಿಡಿದ ಒಬ್ಬ ಧರಣಿಯನೆ ಕದ್ದ ಒಬ್ಬ ಬೈದಾ ಉಬ್ಬಿ ನೀ ಸಂತಸದಿ ಅಬ್ಬರಿಸಿ ಪರಿದೈದೆ ಒಬ್ಬೊಬ್ಬರಿಗೂ ದಿವ್ಯ ದರ್ಶನವನು 1 ಜಾರನೆಂದರು ಕೆಲರು ಚೋರನೆಂದರು ಕೆಲರು ಪೋರನಿವನೆಂದರು ನಾರಿಯರು ಪಲರು ಆರೇನ ಬೈದರೂ ದೂರಿ ನಿಂದಿಸಿದರೂ ಸ್ಮರಿಸಿದಾ ನಿಮಿಷಾರ್ಧ ಹರಿ ನಿನ್ನ ಭಕ್ತರ 2 ಇರಬಹುದು ಹಸಿವು ಬಾಯಾರಿಕೆಗಳಿಂದ ಅರಿವು ನಿದ್ರಾ ನೀರಡಿಕೆಗಳ ತೊರೆದು ಅರಸುವಾ ಸಮಯದಲಿ ಬರುವೆ ನೀನದರಿಂದ 3 ಇಳೆಯನೇ ತೆತ್ತವನ ತುಳಿದು ಕೈಸೆರೆ [ಮಾಡ್ದೆ] ಹಳಿದು ನಿಂದಿಸಿದವನ ಬಳಿಗೆ ಹೋದೆ ಮುಳಿಸಿನಿಂದೊದ್ದವನ ಕಾಲುಗಳ ನೀತೊಳೆದೆ ಹಳಿವು ಬೈಗಳು ನಿನಗೆ ಹಿತವು ಮಾಂಗಿರಿಯ ರಂಗ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೋಧ ಬಂದನು ಮಾ | ಪ್ರಪಂಚ ಗೆಲುವವ ನಾರೆಲಮಾ ನಮ್ಮ | ಪತಿ - ಭಕ್ತರು ಕಾಣಿಲಮಾ ಪ ಎನಗಾರು ಇದಿರಿಲ್ಲ ಸ್ವರಾಜ್ಯದೊಳಗಿಂದು | ನೀನಾರೋ ಪರದೇಶಿ ಹೇಳಲಮಾ | ನಾನೆಂಬ ಹಮ್ಮಿನ ಬಿರುದನ ಬಿಡಿಸುವ | ನಾನೆಂಬ ಹಮ್ಮಿನ ಬಿರುದವ ಬಿಡುಸುವ | ಜ್ಞಾನ ಶಸ್ತ್ರಧಾರಿ ಬೋದನುಮಾ 1 ಸರಸಿದ ಭವರುದ್ರ ಇಂದ್ರರ ಬಗೆಯದ | ನೆರೆ ಕಾಮ ಗೆಲುವವ ರಾರೆಲಮಾ | ಭಾಗವತ ಶುಕ ಹನುಮಂತನು ಮೆರೆವ ಭೀಷ್ಟ ದೇವ ನಲ್ಲೇನುಮಾ 2 ವೈಕುಂಠದೊಳು ಸನಕಾದಿಕರೊಳು ಹೊಕ್ಕ | ಆ ಕೋಪ ಕಾನುವ ನಾರೆಲಮಾ | ಸಾಕಿ ಬೆಳೆಸಿದ ಶಾಂತಿಯ ನೆಲೆಯಿಂದ | ಪ್ರಖ್ಯಾತ ಕದರಿಯು ಕೇಳಲಮಾ 3 ಧರಿಯಿತ್ತ ರಾಮಗ ಸ್ಥಳ ವಿಲ್ಲೆಂದರು ಬ್ರಾ | ಹ್ಮರು ಲೋಭಗೆದ್ದ ವನಾರೆಲಮಾ | ಮರುಳ ಕೇಳು ಧನ ತೃಣ ಸಮ ಬಗೆದರು | ಕರ್ಣ ರಲ್ಲೇನು ಮಾ 4 ಬೆಟ್ಟದಿ ಉಡಿಹಾಕಿ ಕೊಳ್ಳಲು ಹೋದನ | ಶಿಷ್ಯ ಮೋಹನ ಗೆಲುವ ನಾರೆಲ ಮಾ | ಮುಟ್ಟಿ ಬೇಡಲುಳಿವ ಮಹನ ತಂದಿಟ್ಟನು | ಸೃಷ್ಟಿ ಮನುಜ ಚಿಲ್ಹಾಳಲ್ಲೇನು ಮಾ 5 ಭ್ರಗು ಮುನಿದಕ್ಷನು ಕಾರ್ತೃ-ವೀರ್ಯಾದಿಯ | ಬಗೆಯದ್ದ ಮದ-ವಳಿ ದಾರೆಲ ಮಾ | ಜಗ ಹೊಡೆತನವಿದ್ದು ಬಾಗಿ ನಡೆದ ನಮ್ಮ | ಸುಗುಣ ಜನಕರಾಯ ನಲ್ಲೇನು ಮಾ 6 ಹುಚ್ಚಾದ ವಶಿಷ್ಟನೊಳು ವಿಶ್ವಾಮಿತ್ರನು | ಮತ್ಸರಿಲ್ಲದವ ನಾರೆಲ ಮಾ | ಎಚ್ಚರಿಸಿದ ಸುಯೋಧನಗ ವಿಜಯತನ | ಸಚ್ಚರಿತ ಧರ್ಮ ನಿಲ್ಲೇನು ಮಾ 7 ಬಗೆ ಬಗೆ ವಿಷಯ ದುಪಾಯಗಳೆನಗುಂಟು | ನಿಗದಿಯ ನಡೆನುಡಿ ಕೇಳೆಲ ಮಾ | ಭಗವದ್ಭಾವ ಸರ್ವ ಭೂತದಿ ನೋಡಲು | ವಿಗುಣವೆ ಸದ್ಗುಣ ಭಾಸುದ ಮಾ 8 ನಿನ್ನ ಬಲವ ಕಂಡೆ ಶರಣವ ಹೊಕ್ಕೆನು | ಬೋಧ ಕೇಳೆಲ ಮಾ | ಸನ್ನುತ ಮಹಿಪತಿ ಸುತ ಪ್ರಭು ನೆಲೆದೋರಿ ಮನ್ನಿಸಿ ಹೊರೆವನು ಬಾರೆಲಮಾ 9
--------------
ಕಾಖಂಡಕಿ ಶ್ರೀ ಕೃಷ್ಣದಾಸರು