ಒಟ್ಟು 3676 ಕಡೆಗಳಲ್ಲಿ , 118 ದಾಸರು , 2510 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಂತರೆನಬಹುದು ಸಜ್ಜನರಿವರನಾ ಪ ಇಂಥ ಗುಣಗಳಿಂದ ಯುಕ್ತರಾಗಿಪ್ಪರ ಅ.ಪ. ಸ್ವಾಂತಸ್ಥಾ ನುತ ಸರ್ವಾಂತರಾತ್ಮಕನೆಂದು ಚಿಂತಿಸುತ ಮನದೊಳು ನಿರಂತರದಲಿ ನಿಂತಲ್ಲಿ ನಿಲ್ಲದೆ ದುರಂತ ಮಹಿಮನ ಗುಣವ ಸಂಸ್ತುತಿಸುತನವರತ ಶಾಂತರಾಗಿಹರಾ 1 ಲೇಸು ಹೊಲ್ಲೆಗಳು ಪ್ರದ್ವೇಷ ಗೇಹಗಳು ಸಂ ತೋಷ ಕ್ಲೇಶಗಳಿಗವಕಾಶ ಕೊಡದೆ ದೋಷ ವರ್ಜಿತ ಹೃಷಿಕೇಶ ಮಾಡುವನೆಂದು ಭೇಶನಂದದಲಿ ಪ್ರಕಾಶಿಸುತಲಿಹರಾ 2 ಮೇದಿನಿ ದಿವಿಜರೊಳು ಸಾಧು ಜನರೊಳು ಧರ್ಮಕರ್ಮಗಳೊಳು ಶ್ರೀದನೊಳು ಗೋವುಗಳೊಳಗೆ ದ್ವೇಷಿಪರಿಗೆ ಅ ನ್ನೋದಕಗಳೀಯದೆ ನಿಷೇಧಗಯ್ಯುತಲಿಹರಾ 3 ಎನ್ನ ಪೋಲುವ ಪತಿತರಜ್ಞಾನಿಗಳು ಜಗದೊ ಳಿನ್ನಿಲ್ಲ ಪತಿತ ಪಾವನನೆನಿಸುವ ಜಾಹ್ನವೀ ಜನಕಗಿಂದಧಿಕರ್ಯಾರಿಲ್ಲೆಂದು ಉನ್ನತೋತ್ಯಂಶದಿಂದ ಸನ್ನುತಿಸುತಿಪ್ಪವರ 4 ಸತ್ಯ ಸಂಕಲ್ಪ ಏನಿತ್ತಿದ್ದೆ ಪರಮ ಸಂ ಪತ್ತು ಎನಗೆನುತ ಸದ್ಭಕ್ತಿಯಿಂದಾ ನಿತ್ಯದಲಿ ಕೀರ್ತಿಸುತ ಪುತ್ರಿಮಿತ್ರಾದಿಗಳು ಭೃತ್ಯಾನುಭೃತ್ಯರೆಂದರ್ತಿಯಲಿ ಸ್ಮರಿಸುವರಾ 5 ಜನುಮ ಜನುಮಗಳಲ್ಲಿ ಎನಗೆ ಜನನೀ ಜನಕ ಅನುಜ ತನುಜಾಪ್ತ ಪೋದನ ಭೂಷಣಾ ಅನಿಮಿತ್ತ ಬಂಧು ಒಬ್ಬನೇ ಎನಿಸುತಿಪ್ಪ ಸ ಪರ ಸೌಖ್ಯ ರೂಪನೆಂಬುವರಾ 6 ನಾಗೇಂದ್ರಶಯನ ಭವರೋಗಾಪಹರ್ತ ಪಾ ವಜ್ರ ಅಮೋಘ ಶೌರ್ಯ ತ್ರೈಗುಣ್ಯ ವರ್ಜಿತ ಜಗನ್ನಾಥ ವಿಠಲಗೆ ಕೂಗಿ ಕೈಮುಗಿದು ತಲೆಬಾಗಿ ನಮಿಸುವರಾ 7
--------------
ಜಗನ್ನಾಥದಾಸರು
ಸಂತರೆನಬಹುದುದಯ್ಯ ಇಂತಿವರಿಗೆ ಅಂತರಂಗಲಿ ಹರಿಯ ಏಕಾಂತ ಭಕ್ತರಿಗೆ ಧ್ರುವ ಸುಖಕ ಮೈಯವ ಮರಿಯಾ ದು:ಖಗಳಿದಿರಿಡೆ ನೋಯಾ ಚಕಿತನಾಗನು ಕುಮತಿ ವಿಕಳ ನುಡಿಗೆ ಪ್ರಕಟಸ್ತೋತ್ರಕ ಹಿಗ್ಗ ನಿರಹಂಕೃತಿಯನ್ನುಳ್ಳರಿಗೆ 1 ಕ್ಲೇಶ ಕರ್ಮಗಳಿರಲು ಈ ಶಿರಿಯ ಸುಖದ ಮನದಾಶೆವಿರಲು ವಾಸುದೇವನ ಪದ ಧ್ಯಾಸದನುಭವ ದಿಟ ವೇಶ ಹರಿ ಸಂಸಾರ ಲೇಶದೋರ್ವರಿಗೆ 2 ಪರಮ ಭಾಗವತೆನಿಸಿ ಪರರ ಮನಗಳಿಗ್ಹೋಗಿ ಕರ ವಿಕರ ಪರಸತಿಯರಿಗೆ ಕೂರವು ಪರನಿಂದೆಗೆ ಮೂಕ ಪರವಶಾದರಿಗೆ 3 ಹರಿಯ ನಾಮವ ನೆನಿದು ಹರಿದು ಕೀರ್ತನೆಯಲ್ಲಿ ಹರುಷಗುಡಿಗಟ್ಟಿ ತನುಮರದು ನಿಂದು ಬರುದೆ ಪ್ರೇಮಾಂಜಲಿಗೆ ಭರಿತ ಲೋಚನನಾಗಿ ತರಿಸಿ ತಾರಿಸುವಂದ್ಯನ ಕರುಣವಂತರಿಗೆ 4 ಇಂತು ದುರ್ಗಮವಿರಲು ಸಂತರಾವು ನೀವೆಂದು ಸಿರಿತರವ ಹೋಗಿ ಜನ ಸಿಂತರಿಸುವಾ ಭ್ರಾಂತವೇಷಕ್ಕೆ ಸಿರಿಕಾಂತ ಮೆಚ್ಚನಲ್ಲಾ ಶಾಂತಗುಣ ಮಹಿಪತಿ ಸ್ವಂತಗೆಂದಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸತಿ ಸುತರು ನಾವಿವರೊಳೇಕೆ ಮರುಳಾದೆವಿಂತು ಗುರುವೆಪ್ರಾಕು ಜನ್ಮದ ವಾಸನೆಗಳೆಂಬ ಪಗೆಗಳಿಲ್ಯಾಕೆ ನೂಕಿದರೆಮ್ಮನೂ ಸ್ವಾಮಿ 1ಎಂತು ಬಂತೀ ರಕ್ತ ಮಾಂಸಾಸ್ತಿ ಚರ್ಮಗಳಿವೆಂತು ವಿಣ್ಮೂತ್ರಂಗಳೂ ದೇವಾಎಂತು ರಾಗದ್ವೇಷ ಮದಮತ್ಸರಂಗಳಲ್ಲೆಂತು ನರಕ ಸ್ವರ್ಗವೂ ಪರಮಾಎಂತು ಬಂತೀ ಭೋಗ ರೋಗ ವಾಸನೆಗಳಿಲ್ಲೆಂತು ವ್ಯಾಮೋಹಂಗಳು ಗುರುವೆಎಂತು ಚಿಂತೆಗಳಿದರೊಳಭಿಮಾನ ಕಷ್ಟಂಗಳೆಂತೆಂದು ನಾವರಿಯೆವೂ ಸ್ವಾಮಿ 2ಎಂತು ರಾಗ ದ್ವೇಷ ಪೋಗಿ ಸಾಧನೆಗಳೆಮಗೆಂತಹುದು ಚಿತ್ತ ಶುದ್ಧಿ ಪರಮಾಎಂತು ವೇದಾಂತ ತಿಳವದು ಬೊಮ್ಮ ನಿತ್ಯ ತೃಪ್ತೀ ಗುರುವೆಅಂತು ಕರುಣಿಸಿ ಸಕಲಚಿಂತೆಗಳ ಪರಿಹರಿಸನಂತ ಗೋಪಾಲಾರ್ಯನೆ ಸ್ವಾಮಿ3
--------------
ಗೋಪಾಲಾರ್ಯರು
ಸತ್ಯ ಸಂಕಲ್ಪ ಸ್ವಾತಂತ್ರ ಸರ್ವೇಶ ಸರ್ವೋತ್ತಮನೆ ಸಾರ್ವಭೌಮಾ ಪ ಭೃತ್ಯರಿಗೆ ಬಂದ ಪರಿಪರಿ ಭಯಗಳನೆ ಕಳೆದುನಿತ್ಯದಲಿ ಕಾಯ್ವ ಸ್ವಾಮೀ ಪ್ರೇಮೀ ಅ.ಪ. ಆವ ಜನುಮದ ಫಲವೊ | ಆವ ಕ್ರಿಯಗಳಿಂದಆವ ಸಾಧನದ ಬಗೆಯೋ ||ಆವುದಿಂದಾವುದಕೆ ಘಟನೆಯನು ಮಾಳ್ಪೆಯೊಆವುದೊ ನಿನ್ನಾಟವೋ ||ಆವ ಪರಿಯಿಂದಲ್ಲಿ ಜೀವಿಗಳ ಸಲಹುವಿಯೊಆವ ನಿನ್ನಾಧೀನವೋ |ದೇವ ದೇವೇಶ ನಿನ್ನ | ಭಾವ ಬಲ್ಲವರಾರೊಭಾವಜನ ಪಿತ ಕೃಪಾಳೊ | ಕೇಳೋ 1 ತೈಜಸ ಪ್ರಾಜ್ಞ ವಿಶ್ವರೂಪಗಳಿಂದಸ್ವಪ್ನ ಕಾಲದಲಿ ನೀನೂ ||ಸುಪರ್ವಾಣ ದೈತ್ಯರ ಸೃಜಿಸಿ ಮನೆಯನು ಮಾಡಿಅಪರಿಮಿತ ಕಾರ್ಯಗಳನೂ |ಸುಫಲ ದುಷ್ಕರ್ಮಗಳ ತೋರಿಸೀ ಜೀವಕ್ಕೆಕ್ಲುಪುತವಾಗಿದ್ದವೆಲ್ಲಾ |ಕೃಪೆಯಿಂದ ತೋರಿ ಬದಾಪತ್ತುಗಳ ಕಳೆವಅಪರಿಮಿತ ಸಾಗರಾ | ಶೂರಾ 2 ಎನ್ನಂಥ ಪಾಪಿಷ್ಠರಿನ್ನಿಲ್ಲ ಧರೆಯೊಳಗೆ ನಿನ್ನಂಥ ಕರುಣಿಯಿಲ್ಲಾ ||ಚೆನ್ನಗುರು ವಿಜಯರಾಯರ ಪೊಂದಿದವನೆಂದೂಮನ್ನಿಸಿ ಸಲಹಬೇಕೋ |ಘನ್ನ ಸಂಸಾರದೊಳು ಬವಣೆ ಬಂದಟ್ಟಿದರುನಿನ್ನ ಸ್ಮøತಿಯೊಂದು ಬರಲೀ |ಸನ್ನುತಾಂಗಿಯ ರಮಣ ವ್ಯಾಸವಿಠಲ ಮಧ್ವಮುನಿಗೊಲಿದೆ ಉಡುಪಿವಾಸಾ | ಶ್ರೀಶಾ 3
--------------
ವ್ಯಾಸವಿಠ್ಠಲರು
ಸತ್ಯಜ್ಞಾನ ತೀರ್ಥರಿತ್ತರಂಕಿತವನ್ನು ಇನ್ನೇನಿನ್ನೇನು ನಿತ್ಯ ಹರಿಯ ಭಜಿಸುವ ಅಧಿಕಾರಿಯಾದೆನಿನ್ನೇನಿನ್ನೇನು 1 ಕಷ್ಟಬಟ್ಟ ದಿವ್ಯ ಶ್ರೇಷ್ಠಮಾರ್ಗವು ಸಿಕ್ಕಿತಿನ್ನೇನಿನ್ನೇನು ಎಷ್ಟು ಪೇಳಲಿ ಎನ್ನಾದೃಷ್ಟವು ತೆರೆಯಿತು ಇನ್ನೇನಿನ್ನೇನು 2 ಹನುಮೇಶವಿಠಲನೆಂಬೊ ನಾಮ ಅಂಕಿತವಿತ್ತರಿನ್ನೇನಿನ್ನೇನು ದಿನವು ದೈವಗಳಿಗೆ ನಮಿಸಿ ಬೇಡ್ವದು ತಪ್ಪಿತಿನ್ನೇನಿನ್ನೇನು 3
--------------
ಹನುಮೇಶವಿಠಲ
ಸತ್ಯವೋ ಏನು ಮಿಥ್ಯವೋ ಚಿತ್ತಜಪಿತ ಭಕ್ತವತ್ಸಲನೆಂಬೋಕ್ತಿ ಪ ಕಷ್ಟನಿವಾರ ಭಕ್ತರಿಷ್ಟದಾಯಕನೆಂದು ಅಟ್ಟಹಾಸದಿ ವೇದ ಕಟ್ಟಳಿಲ್ಲದೆ ಕೂಗ್ವುದು 1 ಧಾತ್ರಿತ್ರಯಕೆ ತಾನೆ ಸೂತ್ರಧಾರಕನೆಂದು ಸ್ತೋತ್ರ ಪೊಗಳಿದು ಮನು ಗೋತ್ರರ್ವಚನಂಗಳು 2 ಭಕ್ತವತ್ಸಲ ನೀನು ಸತ್ಯವಾಗಿರ್ದೊಡೆ ಭೃತ್ಯನ ಮನಕೀಗ ಪ್ರತ್ರ್ಯಕ್ಷಾಗಲಿ ರಾಮ 3
--------------
ರಾಮದಾಸರು
ಸತ್ಯಾದ ನಡಿ ಹಿಡಿರೋ ಮನಜರು ಸತ್ಯದಾ ನಡಿಗಿನ್ನು ಮತ್ತೊಂದು ಭಯವಿಲ್ಲ ಧ್ರುವ ಸತ್ಯದಾನಡಿಗಿನ್ನು ಸತ್ಯ ನುಡಿಯಲು ಬೇಕು ಸತ್ಯಂ ಸತ್ಯ ಶರಣರೆಲ್ಲಾ ಎತ್ಯಾಡಿಸುವಂತೆ ಮೈಯೊಳಗಿಹ ಕಾವನೈಯನ ಮರಿಯಬ್ಯಾಡಿ 1 ಹುಸಿಯಾಡಿ ನೀವಿನ್ನು ಘಾಸಿಗೆ ಬೀಳಲಿ ಬ್ಯಾಡಿ ವ್ಯಸನಕಾಗಿ ಬಿದ್ದು ದೆಶೆಗೆಟ್ಟು ಹೋಗಬ್ಯಾಡಿ 2 ಅಶೆಯಕೊಟ್ಟು ನಿರಾಶಯೆ ಮಾಡಲಿಬ್ಯಾಡಿ ಘಾಸಿ ಮಾಡಲಬ್ಯಾಡಿ 3 ಘಟ್ಟಿಸಿ ಒಬ್ಬರ ಹೊಟ್ಟೆಹೊರಿಯಬ್ಯಾಡಿ ಸಿಟ್ಟಿಲಿ ನೆಂಟರು ತುಟ್ಟಿಸಿ ಬಿಡಬ್ಯಾಡಿ4 ಗುಟ್ಟಿನೊಳಿಹ ಮಾತು ತುಟ್ಟಿಗೆ ತರಬ್ಯಾಡಿ ಹೊಟ್ಟೆಲೆ ಹಡೆದವರ ಕಟ್ಟಿಗೆ ತರಬ್ಯಾಡಿ 5 ಲೆತ್ತಪಗಡಿ ಅಡಿ ಹೊತ್ತುಗಳಿಯಬ್ಯಾಡಿ ತುತ್ತುಕುಡಿಯೊಳಿದ್ದಾ ಪತ್ತಬಡಲಿಬ್ಯಾಡಿ 6 ಹರಿಹರ ಭಕ್ತಿಗೆ ಬ್ಯಾರೆ ನೋಡಲಿಬ್ಯಾಡಿ ಗುರುಕೃಪೆ ಪಡೆದಿನ್ನು ಗುರುತಿಟ್ಟು ನೋಡಿರೋ 7 ಅನ್ನಬೇಡಿದವ ಗಿಲ್ಲೆನ ಬ್ಯಾಡಿ ಹೊನ್ನು ಹೆಣ್ಣಿನ ಮ್ಯಾಲೆ ಕಣ್ಣಿಟ್ಟು ಕೆಡಬ್ಯಾಡಿ 8 ಅಂತರಾತ್ಮದ ಪರಮಾತ್ಮನ ತಿಳಕೊಳ್ಳಿ ಸ್ವಾತ್ಮ ಸುಖದ ಸವಿ ಸೂರ್ಯಾಡಿಕೊಳಲಿಕ್ಕೆ 9 ಸ್ವಹಿತ ಸುಖದ ಮಾತು ಸಾಧಿಸಿಕೊಳಲಿಕ್ಕೆ ಮಹಿಪತಿ ಹೇಳಿದ ಮಾತು ಮನ್ನಿಸಿ ತಿಳಿಕೊಳ್ಳಿ 10
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸತ್ಸಂಗದ ಫಲ ಸದ್ಭಾವಿಯಾದವ ಸೇವಿಸಿಕೊಂಬುವನೈ | ಮತ್ಸರ ಮದದಲಿ ಯಚ್ಚರಗೊಳದಾಧಮ ಬದಿಲಿದ್ದೆ ನೈ ಪ ಬದಿಲಿಹ ಮಂಡೂಕಗೇನೈ | ಶ್ರೀಮಂತರು ಹಾಲವಕರಕೊಂಬರು | ಉಣ್ಣಿಗೆ ಫಲವೇನೈ 1 ಬಿದಿರು ಬೊಬ್ಬುಹಳಿಗೇನೈ | ಆಗಮಜ್ಞರ ವಿದ್ಯಾ ವ್ಯುತ್ಪನ್ನಗಲ್ಲದೇ ಜಡಮತಿಗಳಿಗೇನೈ | 2 ಭೂಗತ ಧನವದು ವಂಶಜಗವಲ್ಲದೇ | ಕಾದಿಹ ಫಣಿಗೇನೈ | ನುಡಿಯಿದು ನಂದನು ಸಾರಿದನೈ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸತ್ಸಂಗವಿನಾ ಏನಸಾಧಿಸುವದೇನರದು ಪ ರಾಜಸೂಯಾಶ್ವಮೇಧಾ | ಮುಖ್ಯಯಾಗಗಳಿಂದಾ | ತ್ಯಾಜ್ಯಾ ಲೋಕಂಗಳ ಪಡೆಯಬಹುದು 1 ಮೆರೆವ ರಾಜಯೋಗದಿ | ಹಲವುಯೋಗಗಳಿಂದಾ | ಪರಿಪರಿ ಸಿದ್ಧಿಯಾ ಪಡಿಯಬಹುದು 2 ಗುರು ಮಹಿಪತಿ ಸುತಪ್ರಭು | ಮಾರ್ಗವರಿಯದೇ ನಿರರ್ಥಕ ಸಾಯಾಸವಾ ಬಡುವುದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸನಿಹದಲೆ ದೆಸೆದೆಸೆಗೆ ಪ ಇನಿತುಪಾದಗಳಿಂದ ಅನಿಲನ ಸೋಲಿಸಿ ಅ.ಪ ಕಾಮಕ್ರೋಧಗಳೆಂಬ ನೇತ್ರಗಳಿದಕಿದೆ ವ್ಯಾಮೋಹ ಲೋಚನ ಎಂಬ ಕರ್ಣಂಗಳಿವೆ ದುರ್ಮದವೆಂಬುವ ಪುಚ್ಚವೊಂದಿಹುದಯ್ಯ ಈ ಮದಹಯಕೆ ಮಾತ್ಸರ್ಯ ನಾಸಿಕವಯ್ಯ1 ಮೃಡನು ತಾ ಎಂಬುವ ಕಡಿವಾಣದ ಹಿಡಿ ದೃಢಭಕ್ತಿಯೆಂಬ ಪಾಶ ಕೊರಳೊಳಗಿರಲಿ ಎಡಗೈಯೊಳು ಹರಿಯೆಂಬ ಕೊಳಲನು ಹಿಡಿ ತಡವೇಕೆ ಮನುಜ ಓಡಿ ಹಯವ ತಡಿ 2 ಆಡಲು ನಿಲಬೇಡ ನೋಡಿ ನಲಿಯಬೇಡ ಓಡಾಡಿ ತುರಗವ ಹಿಡಿ ಹಿಡಿ ಮನುಜ ಓಡಿ ಹಯವ ಪಿಡಿದು ಬಂಧಿಸದಿದ್ದರೆ ಕಾಡಿಗೈದಿ ದೊಡ್ಡ ಮಡುವ ಸೇರುವುದು 3 ನರಹರಿಯೆಂಬ ಕುಣಿಕೆಯ ಗೈದು ತ್ವರಿತದಿ ತುರಗದ ಕೊರಳಿಗೆ ಬಿಗಿದು ಕರದೊಳಗಿರುವ ಕಡಿವಾಣ ಒಂದಿಡಿ ನೆರೆ ಭಕ್ತಿಪಾಶದಿ ತುರಗವ ಸೆರೆಗೈ 4 ನಾರಾಯಣಾ ಎಂಬ ನೀರ ಕುಡಿಸುತಲಿ ಶ್ರೀರಮಣ ಎಂಬ ಹುರಳಿಯ ನಿಡುತೆ ಮಾರ[ಮಣ] ಎಂಬ ತೃಣವನೆಣಿಸಿ ದಿವ್ಯಾ ಕಾರದಿ ಮಾಂಗಿರಿರಂಗಗರ್ಪಿಸಿರೋ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸನ್ನುತ ವಿಠಲ | ಕಾಪಾಡೊ ಇವನಾ ಪ ಭದ್ರಮೂರುತಿ ದೇವ | ಪ್ರಾರ್ಥಿಸುವೆ ಹರಿಯೇ ಅ.ಪ. ಸುವಿನೀತ ನಿಹನಿವನು | ಸುವಿವೇಕ ಕೊಟ್ಟಿವಗೆವಿವಿಧ ಭೋಗಗಳಿತ್ತು | ಕಾಪಾಡೊ ಹರಿಯೇ |ಅವನಿಸುರರಾ ಸೇವೆ | ಅವಿರತದಿ ದೊರಕಿಸುತಪವನಮತದಲಿ ಚರಿಪ | ಭಾಗ್ಯ ಕರುಣಿಸುತಾ 1 ತಂದೆ ತಾಯ್ಗಳಸೇವೆ | ಬಂದುರದಿ ಗೈವಂಥಬಂದೆ ಮನವನು ಇತ್ತು | ಕಾಪಾಡೊ ಹರಿಯೇಇಂದಿರಾ ರಮಣ ನೀ | ನಂಘ್ರಿ ಭಕ್ತಿಯನಿತ್ತುಛಂದದಲಿ ಸಾಧನವ | ನೀಗೈಸಬೇಕೊ 2 ಗುರುವಂತರಾತ್ಮ ಗುರು | ಗೋವಿಂದ ವಿಠಲನೆಶರಣು ಬಂದವ ನನ್ನ | ಕೈಯ ಬಿಡದೇತರತಮಜ್ಞಾನಾದಿ | ಅರಿವ ನೀ ಇತ್ತಿವಗೆಕರುಣದಿಂದ್ದುರಿಸೆ | ಪ್ರಾರ್ಥಿಸುವೆ ಹರಿಯೇ 3
--------------
ಗುರುಗೋವಿಂದವಿಠಲರು
ಸನ್ಮಾರ್ಗಪಿಡಿದು ಸದ್ವಸ್ತಿಯೊಳು ಬೆರೆದಿಹ ಸದ್ಬ್ರಹ್ಮರಿಗೆ ನಮಸ್ಕಾರ 1 ಸದ್ಗುರು ಕೃಪೆಯಿಂದ ಸದ್ಗತಿಯ ಪಡೆದಿಹ ಸದ್ಭಕ್ತರಿಗೆ ನಮಸ್ಕಾರ 2 ಅಧ್ಯಾತ್ಮವಿದ್ಯ ಸಾದ್ಯ ಮಾಡಿಕೊಂಡಿಹ ಬುದ್ಧಿವಂತರಿಗೆ ನಮಸ್ಕಾರ 3 ಸಿದ್ಧಾಂತ ಅನುಭವದ ಸಾಧನವು ಬಲಿದಿಹ ಶುದ್ಧ ಬುದ್ಧರಿಗೆ ನಮಸ್ಕಾರ 4 ಇದೆ ನಿಜತಿಳಿದಿಹ ಸದ್ಬೋಧದಲ್ಲಿ ಪೂರ್ಣ ಸದ್ಭಾವಿಗಳಿಗೆ ನಮಸ್ಕಾರ 5 ಆದಿತತ್ವದ ನೆಲೆಯು ಭೇದಿಸಿ ಬೆರೆದಿಹ ಬುದ್ದಜನರಿಗೆ ನಮಸ್ಕಾರ 6 ಕ್ರೋಧ ಕಳೆದು ಸದಾ ಶಾಂತಪದಹೊಂದಿದ ಸಾಧುರಿಗೆ ನಮಸ್ಕಾರ 7 ಭಿನ್ನ ಭೇದವನಳಿದು ತನ್ನ ತಾ ತಿಳಿದ ಸುಜ್ಞಾನಿಗಳಿಗೆ ನಮಸ್ಕಾರ 8 ಮೇಲ್ಗಿರಿಯೊಳಗಿಪ್ಪ ಮೂಲಮೂರ್ತಿಯ ತಿಳಿವ ನೆಲೆವಂತರಿಗೆ ನಮಸ್ಕಾರ 9 ಮಾಯಮೋಹವನಳಿದು ಸೋಹ್ಯ ಸೊನ್ನೆಯ ತಿಳಿದ ಮಹಾಮಹಿಮರಿಗೆ ನಮಸ್ಕಾರ 10 ಆರುಮೂರನೆ ಗೆದ್ದು ಏರಿ ತ್ರಿಪುರ ದಾಟಿ ಮೀರಿಹರಿಗೆ ನಮಸ್ಕಾರ 11 ಮನಕರಗಿ ಘನ ಬೆರೆದು ತಾನೆ ತಾನಾಗಿಹ ಮೋನ ಮುಗ್ಧರಿಗೆ ನಮಸ್ಕಾರ 12 ತತ್ವಮಸಿ ಅರ್ಥದಿತ್ಯರ್ಥವನು ತಿಳಿದಿಹ ಮುಕ್ತಜನರಿಗೆ ನಮಸ್ಕಾರ 13 ತಾನರಿತು ಸುಖಿಯಾಗಿ ಇನ್ನೊಬ್ಬರಿಗೆ ಕಣ್ದೆರೆಸುತಿಹರಿಗೆ ನಮಸ್ಕಾರ 14 ತರಳ ಮಹಿಪತಿ ಹೊರೆವ ಅರುಹು ಕುರುಹವನಿತ್ತ ಗುರುಹಿರಿಯರಿಗೆ ನಮಸ್ಕಾರ 15
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಂಪತ್ತು ನಿನಗಿಂದು ಪೊಸದಾಯಿತೆ | ಸಿಂಪಿನಲಿ ಪಾಲುಗುಡಿದದು ಮರದಿಯಾ ರಂಗ ಪ ಪಾಲು ಮೊಸರು ಕದ್ದು ಗೋವಳರೆಂಜಲನುಂಡು | ತಾಳ ಫಲಗಳ ಮೆದ್ದದು ಮರದಿಯಾ || ಕಾಲ ಕಾಲಕೆ ಇಲ್ಲಿ ಷಡುರಸಾಯನ ಸವಿದು | ಮೇಲಾಗಿ ಪೊಟ್ಟೆಯೆ ಪೊರೆವ ಅತಿಶಯವೇನು 1 ಕಂಡವರ ಕೈಯ್ಯ ಪಳ್ಳಿಯಲಿ ಹಳ ಹಳ ಎನಿಸಿ | ಕೊಂಡು ಭಂಡಾಗಿ ಇದ್ದದು ಮರದಿಯಾ || ವಾಹನ | ಕರ ಮುಗಿದು ಕೊಂಡಾಡುವ ಭರವೊ 2 ಮತಿಹೀನ ಖಳಗಂಜಿ ವನಧಿಯೊಳಗೆ ದ್ವಾರ | ವತಿಯಲ್ಲಿ ವಾಸವಾದದು ಮರದಿಯಾ || ಪ್ರತಿದಿವಸದಲ್ಲಿ ಸದ್ಭಕ್ತಿಯುಳ್ಳ ಶುದ್ಧ | ಯತಿಗಳಿಂದಲಿ ಪೂಜೆ ಕೈಗೊಂಬ ಸಂಭ್ರಮವೊ 3 ಈ ವೈವಸ್ವತ ಮನ್ವಂತರ ಉಳ್ಳತನಾಕಾ | ಕರ್ಮ ತಪ್ಪಲರಿಯದು || ಕೋವಿದರು ಪೇಳುವದು ಪುಸಿ ಎನ್ನದಿರು ದೇವ | ಈ ಉಡಪಿನ ಸ್ಥಾನ ನೆಚ್ಚಕೇನೊ ನಿನಗೆ 4 ಕ್ಲೇಶ ಕಳಿಯದಿರಲು | ಭಕುತವತ್ಸಲನೆಂಬ ಬಿರಿದು ಬರಿದೇ || ಮುಕುತೀಶ ಶಿರಿ ಕೃಷ್ಣ ವಿಜಯವಿಠ್ಠಲ | ವಿ |ರುಕತಿಯೆ ಇತ್ತರೆ ಕೀರ್ತಿ ಬಾಹದು ನಿನಗೆ 5
--------------
ವಿಜಯದಾಸ
ಸಂಪ್ರದಾಯ ಶೃಂಗಾರದಂಥ ಶುಭಾಂಗಿ ನೀ ಏಳು ಕಂಗಳ ನೋಟದ ಕಡು ಚೆಲ್ವೆ ನಿನ್ನ ಪಾ- ದಂಗಳಿಗೆರಗುವೆ ಎನುತ ಮಾಲಕ್ಷುಮಿ(ಯ?) ಅಂಗನೆಯರ್ಹಸೆಗೆ ಕರೆದರು 1 ಅಜನಜನಕನರಗಿಳಿಯೆ ನೀ ಏಳು ಪದಮನಾಭನ ಪಟ್ಟದರಸಿ ನೀ ಏಳು ತ್ರಿಜಗಭೂಷಿತನೆದೆ ಮ್ಯಾಲೆ ಹೊಂದಿರುವಂಥ ಮದಗಜಗಮನೆ ಮಾಲಕ್ಷ್ಮಿ ಬಾರೆನುತಲಿ ಮುದದಿಂದಲಿ ಹಸೆಗೆ ಕರೆದರು 2 ಸೋಮವದನೆ ಸುಗುಣೆ ಜಾಣೆ ನೀ ಏಳು ಕೋಮಲ ಕೋಕಿಲವಾಣಿ ನೀ ಏಳು ಹೇಮಮಾಣಿಕ್ಯ ನಾಗವೇಣಿಯೆ ನಮ್ಮ ಭೀಮೇಶಕೃಷ್ಣನ ನಿಜರಾಣಿ ಮಾಲಕ್ಷುಮಿ ಪಟ್ಟದರಾಣಿ ಬಾ ಹಸೆಗೆ ಕರೆದರು 3
--------------
ಹರಪನಹಳ್ಳಿಭೀಮವ್ವ
ಸಂಪ್ರದಾಯದ ಹಾಡು ವೆಂಕಟೇಶನ ಉರುಟಣೆಯ ಹಾಡು ಭಾರ್ಗವಿ ರಮಣಾ | ಜಗದಾಭಿ ರಮಣಾ ಪ ಲೋಕನಾಯಕ ಸ್ವಾಮಿ | ವೈಕುಂಠಾದಿಂದ ಬಂದೂಏಕಾಂತವಾನಾಡಿದಾ | ಲಕ್ಷೀಯರೊಡನೆ 1 ಧರೆಗೆ ವೈಕುಂಠಾದ | ಚರ್ಯವ ತೋರುವೆನೆಂದುಶಿರಿ ಮಹಾಲಕ್ಷೀಯೊಡನೆ | ಸಂಧಿಸಿದಾನೂ 2 ಸ್ವಾಮಿ ಕಾಸಾರದಲೀ | ಧಾಮಾವ ರಚಿಸೂವೆಆ ಮಹಾ ವೈಕುಂಠಾವ | ಅಗಲೀ ಬಂದೂ 3 ವತ್ಸರ ಕಾಲದಲೊಂದು | ಉತ್ಸವ ಮಾಡುವೆನೆಂದುಇಚ್ಛೆ ಮಾಡಿದನೂ ವೆಂಕಟ ಇಂದಿರೆಗೂಡಿ 4 ನವರಾತ್ರಿ ದಿವಸದಲೀ | ವಿವಾಹ ಲಗ್ನವ ರಚಿಸೀಅವನಿಯೊಳು ಡಂಗುರವನ್ನು ಹೊಯಿಸೀದ ಸ್ವಾಮೀ 5 ಕಾಶಿ ಕರ್ನಾಟಕದ | ದೇಶಾ ದೇಶದ ಜನರುಶ್ರೀಶಾನುತ್ಸವಕೇ ಜನರು ಒದಗೀದರಾಗಾ 6 ಹದಿನಾಲ್ಕು ಲೋಕಾದ | ಪದುಮಜಾದಿಗಳೆಲ್ಲಾ ಮದುವೆಯಾ ದಿಬ್ಬಣದಾ | ಜನರು ಬಂದರಾಗಾ 7 ಗರುಡಾ ಕಂಬದ ಸುತ್ತಾ | ಪರಿಪರಿ ವೈಭವದಿಂದಗಿರಿಯಾ ವೆಂಕಟಗೇ | ಕಂಕಣ ಕಟ್ಟಿದರಾಗಾ 8 ಆಗಮಾ ಪುರಾಣ | ರಾಗ ಮದ್ದಳೆ ತಾಳಭಾಗವತರೂ ಸುತ್ತ ಮಾಡುತಿರಲೂ 9 ತಾಳ ತಮ್ಮಟೆ ಕಾಳೆ | ಭೋರೆಂಬೋ ವಾದ್ಯಗಳೂವರ ನಾರಿಯರು ಸುತ್ತಾಗ್ಹಾಡುತಿರಲೂ 10 ಚಿನ್ನದ ಕರಿಮಣಿ | ರನ್ನ ಮಂಗಳಸೂತ್ರಹಿರಿಯಾ ವೆಂಕಟನೂ ಲಕ್ಷ್ಮೀಗೆ ಕಟ್ಟಿದ ನಗುತಾ 11 ಮುತ್ತಿನಾ ಕರಿಮಣಿ | ರತ್ನ ಮಂಗಳಸೂತ್ರಾಸ್ವಾಮಿ ವೆಂಕಟ ಲಕ್ಷ್ಮೀಗೆ ಕಟ್ಟಿದ ನಗುತಾ 12 ಅಂತರಾ ಮಾರ್ಗದೊಳೂ | ನಿಂತು ದೇವತೆಗಾಳು ಸಂತೋಷದಿಂದಲಿ ಜಯ ಜಯವೆಂದು ಪಾಡಿದರಾಗ 13 ಅಂಗಾನೆ ಶ್ರೀ ಭೂಮಿ | ರಂಗಾಮಂಟಪದೊಳಗೆಬಂಗಾರ ಗಿರಿಯಾ ವೆಂಕಟ ಒಪ್ಪಿದ ಸ್ವಾಮೀ 14 ಅತಿರಸಾ ಮನೋಹರ | ಮಿತಿಯಿಲ್ಲದ ಪದಾರ್ಥಗಳೂಸತಿಯರೆಲ್ಲರು ಭೂಮಕೆ ತಂದು ಬಡಿಸಿದರಾಗ 15 ಬೆರದ ನಾರಿಯರೆಲ್ಲ | ಹರಿಭೂಮಾ ನಂತರದೀಭರದಿ ಉರುಟಣಿಗೆ ಅಣಿ ಮಾಡಿದರಾಗಾ 16 ಮಿತ್ರೆ ಲಕ್ಷ್ಮೀಗೆ ತಕ್ಕ | ಹಿರಿಯರು ಪೇಳಲುಛಂದದಿಂದಲಿ ಅರಿಷಿನ ಕಲಸಿ ನಿಂತಳಾಗ 17 ಪನ್ನಗ ನಗವಾ | ಸೇರಿದ ಮಹರಾಯದುಡ್ಡು ದುಡ್ಡಿಗೆ ಬಡ್ಡಿಯನ್ನು ದುಡಿವಾ ಲೋಭಿ 18 ವಂಚಿಸಿ ಜನರನ್ನು | ಲಂಚಾ ಲಾವಣಿ ತೆಗೆದುಹಿಂಚಾಸಿ ವರ ಕೊಡುವಾ ಹಿತದಾ ದೇವಾ 19 ಬಡವಾ ಬಲ್ಲಿದರೆಂದು | ಬಿಡದಾಲೆ ಅವರಿಂದಮುಡುಪು ಹಾಕಿಸಿಕೊಂಡು (ಮುಂದಕೆ) ಬಿಡುವೋ ದೇವಾ 20 ಅನ್ನವೆಲ್ಲವ ಮಾರಿ | ಹೊನ್ನು ಕಟ್ಟುವೆಯಲ್ಲೊಅನ್ನದಾನವ ಮಾಡಲೊಲ್ಲಿ ಅನ್ಯಾಕಾರಿ 21 ಹೊನ್ನು ಸಾಲವ ತೆಗೆದು | ಎನ್ನಾ ಕಟ್ಟಿಕೊಂಡುಮನೆ ಮನೆಗೆ ಭಿಕ್ಷವ ಬೇಡುವ ಮಾನವಂತಾ 22 ಹೊನ್ನು ಸಾಲದು ಎಂದು | ಎನ್ನ ಸಾಕುವೆ ಹೇಗೋನಿನ್ನಾ ಕೃಪಣತನಕೆ ನಾನು ಎಣೆಗಾಣೆನೋ 23 ಇಪ್ಪತ್ತು ದುಡ್ಡೀಗೆ | ಸೇರು ತೀರ್ಥವ ಮಾರಿದುಡ್ಡು ಕಟ್ಟಿ ಜಾಳಿಗೆ ಗಳಿಸುವ ಜಾಣ ನೀನೂ 24 ಅಟ್ಟಾ ಮಡಿಕೆಯಲ್ಲಾ | ಕುಟ್ಟಿ ನಾಮವ ಮಾಡಿಗಟ್ಟಿಯಾಗಿ ಗಂಟು ಗಳಿಸುವ ಘನವಂತಾ 25 ದೇಶದೊಳು ನಿಮ್ಮಂಥಾ | ಆಸೆ ಉಳ್ಳವರಿಲ್ಲಕಾಸು ಕಟ್ಟಿ ಕವಡೆ ಗಂಟು ದುಡಿವ ಲೋಭಿ 26 ಮಡದಿ ನಾನಿರಲಿಕ್ಕೆ | ಕಡಿಮೆ ಏನಾಗೋದುಬಡತನ ನಿನಗೆ ಯಾತಕೆ ಬಂತೂ ಸ್ವಾಮೀ 27 ನಾರೀಯಾ ನುಡಿ ಕೇಳಿ | ವಾರೆ ನೋಟದಿ ನೋಡಿಮೋರೆ ತಗ್ಗಿಸಿ ವೆಂಕಟ ಮುನಿದು ನಿಂತಾ 28 ಕಡುಕೋಪಾ ಮಾಡುವರೆ | ಹುಡುಗನಂತಾಡುವರೆಕೊಡಲೀಯ ಪಿಡಿವಾರೆ ನಾನು ನುಡಿದಾ ನುಡಿಗೇ 29 ಕಣ್ಣಾನೆ ಬಿಡಬ್ಯಾಡ | ಬೆನ್ನ ತೋರಲಿ ಬ್ಯಾಡಾಇನ್ನು ಮುಖವಾ | ತಗ್ಗಿಸಬ್ಯಾಡ ಇತ್ತ ನೋಡೂ 30 ಎನ್ನರಸಾ ಹೊನ್ನರಸಾ | ಚೆನ್ನಿಗ ವೆಂಕಟರಾಯಾನಿನ್ನ ಪೋಲುವರ್ಯಾರೊ | ಜಗದೊಳು ನೀಲಗಾತ್ರಾ 31 ಎನ್ನರಸಾ ಚೆನ್ನರಸಾ | ಚೆನ್ನಿಗ ವೆಂಕಟರಮಣಾನಿನ್ನ ಮುದ್ದು ಮುಖವ ತೋರೊ ಅರಿಷಿಣ ಹಚ್ಚೇನು 31 ಎನ್ನುತ ಅರಿಷಿಣ | ಹಚ್ಚಿ ಕುಂಕುಮವಿಟ್ಟುರನ್ನ ಹಾರವ ಹಾಕಿ ತಾನು ಕುಳಿತಾಳಾಗ 33 ಮಂದರಧರ ತಾನೂ | ಛಂದದರಿಶಿನ ಪಿಡಿದೂಇಂದಿರಾದೇವಿಯನ್ನು ಮಾತನಾಡಿಸಿದಾ 34 ಎನ್ನರಸಿ ಹೊನ್ನರಸಿ | ಚೆನ್ನಿಗ ಮಾಯಾದೇವಿನಿನ್ನ ಮುದ್ದು ಮೊಗವಾನೆ ತೋರು ಅರಿಷಿನ ಹಚ್ಚೇನು 35 ಭಿಡೆಯಾ ನೋಡದೆ ಇಂಥಾ | ನುಡಿಗಳಾಡಿದ ಮ್ಯಾಲೆನಡುಗಿ ಮೋರೆಯ ತಗ್ಗಿಸಲಿಹುದೆ ನಾಚಿಕೆ ಯಾಕೆ 36 ಭಾಗ್ಯಾದ ಮೊಬ್ಬಿಲಿ | ಬಾಗಿ ನೀ ನಡೆಯಾದೇಅಗ್ಗಳಿಕೆ ಮಾತುಗಳನ್ನು ಆಡಿದೆಯಲ್ಲೇ 37 ಮಿಂಚಿನಂದದಿ ಬಹಳಾ | ಚಂಚಲ ಬುದ್ಧ್ಯವಳೇವಂಚಿಸೂವಳೆ ಜಗವಾ ವಾರಿಜಾಕ್ಷೀ 38 ಬಂಗಾರಾ ಮುಡುಪಿಗೆ | ಎನ್ನ ಕಂಗೊಳಿಸೀಗಾ ಹಿಂಗಾದೆ ಮಂಕು ಮಾನವರ ಮಾಡುವುದರಿದೇ 39 ಕಂಚುಕ ವೆಂಕಟ ಬಿಗಿದಾ ನಗುತಾ 40 ತಾಂಬೂಲವನೆ ಮೆದ್ದು | ಮಡದಿಯಾ ಮುಖ ಸೂಸೆಇಂಬೀಲ್ಹಚ್ಚೆ ಬರೆದರಾಗ ಅತಿ ಸಂಭ್ರಮದೀ 41 ತಿರುಮಲೇಶನು ತನ್ನ | ಮಡದೀಯನು ಎತ್ತಿಭರದಿಂದಾ ತನ್ನರಮನೆಗಾಗಿ ತೆರಳಿದಾನು 42 ದ್ವಾರದಾದಡಿಯಲ್ಲಿ | ನಾರೇರೆಲ್ಲರು ನಿಂತುವಾರಿಜಾಕ್ಷಿ ಪತಿಯ ಹೆಸರಾ ಹೇಳೆಂದರು 43 ಕಿರುನಗೆಯಿಂದ ಲಕ್ಷ್ಮೀ | ಗಿರಿಯಾ ವೆಂಕಟನೆನಲೂಹರಿಯೆ ನಿನ್ನ ರಮಣಿ ಹೆಸರಾ ಹೇಳೆಂದರೂ 44 ಜಾತಿ ನಾಚಿಕೆ ತೊರೆದು | ಶ್ರೀ ತರುಣಿ ಎನುತಾಲೆಪ್ರೀತಿಯಿಂದಲಿ ಸಿಂಹಾಸನದಿ ಕುಳಿತರಾಗಾ 45 ಮತ್ತೆ ನಾರಿಯರೆಲ್ಲಾ | ಮುತ್ತಿನಾರತಿ ಪಿಡಿದೂಸತ್ಯಾಭಾಮೆಗೆ ಜಯ ಜಯವೆಂದರಾಗ 46 ವಿಭುವಿನ ಗುಣವನ್ನು ವಿಸ್ತರ ಪೇಳಿದ ಜನಕೆಸಮಯದಂಥ ಭಾಗ್ಯವನಿತ್ತು ಸಲಹುವ ಸ್ವಾಮಿ 47 ಮಂಗಳ ವೆಂಕಟರಾಯಾ | ಮಂಗಳ ಮಾಧವರಾಯಾಮಂಗಳ ಮಾನಸಗೇಯಾ | ಮಂಗಳ ಮಾಧವರಾಯಾ 48 ಧರೆಯೊಳಧಿಕನಾದ | ದೊರೆ ವ್ಯಾಸವಿಠಲಾನುಪರಮ ಭಕ್ತಿ ಸುಜ್ಞಾನವನು ಪಾಲಿಸೂವಾ 49
--------------
ವ್ಯಾಸವಿಠ್ಠಲರು