ಒಟ್ಟು 3819 ಕಡೆಗಳಲ್ಲಿ , 122 ದಾಸರು , 2723 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣಾಗತಿಯೊಂದೆ ಸಾಧನ ಮಾಧವ ಪ ಶರಣಾಗತಿಯಿಂದ ಹರಿಯ ಪ್ರಸಾದವು ಹರಿಯ ಪ್ರಸಾದವು ಪುರುಷಾರ್ಥಕೆ ಸಾಧನ ಅ.ಪ ಹರಿಯಲಿ ಚಿತ್ತವು ಹರಿಯಲಿ ಭಕುತಿಯು ಹರಿಯುದ್ದೇಶದಿ ಯಜನಾದಿಗಳು ಹರಿಯ ಚರಣದಲಿ ನಮ ನವು ಇದನೇ ಶರಣಾಗಿಯೆಂದರುಹಿದ ನುಡಿ ಕೇಳಿÀದೆ 1 ಸರ್ವೋತ್ತಮ ನೀನೊಬ್ಬನೆ ಎನ್ನುವ ದಿವ್ಯಜ್ಞಾನವ ಪೊಂದುತ ಮನದಲಿ ಸರ್ವಾಧಿಕ ನಿಶ್ಚಲ ಪ್ರೇಮ ಸಹಿತ ಸರ್ವಕರ್ಮ ನಿನ್ನೊಳಗರ್ಪಣೆ ಮಾಡುವೆ 2 ತ್ರಿವಿಧ ಪೂಜೆಗಳಲಿ ರತಿಯು ಹರಿಯ ಪ್ರಸನ್ನತೆಯಲಿ ನಂಬುಕೆಯು ಹರಿದಾಸನು ನಾನೆಂಬುವ ನಂಬಿಕೆ ಶರಣಾಗತಿಯಿದು ಮೋಕ್ಷಫಲಕೆ ಸಾಧನ 3
--------------
ವಿದ್ಯಾಪ್ರಸನ್ನತೀರ್ಥರು
ಶರಣಾಗು ಸಂಪೂರ್ಣ ಶರಣಾಗು ಜಿತಾರ್ಣ ಕರ ನೀಲವರ್ಣ ಪ ಅತಸೀ ಕುಸುಮಗಾತ್ರ ಅರವಿಂದ ನೇತ್ರ ಚಾರು ಚರಿತ್ರ ಧೃತ ಗೋವರ್ಧನ ಗೋತ್ರ ದಿವಿಜೇಂದ್ರ ಸ್ತೋತ್ರ ಶತಯಾಗಸುತಮಿತ್ರ ಸೌಪರ್ಣಯಾತ್ರ 1 ಸ್ಮರಕೋಟಿ ಲಾವಣ್ಯ ಪುರಜಿದ್ವರೇಣ್ಯ ಪುರುಹೂತಾದಿ ಶರಣ್ಯ ಪುರುಷಾಗ್ರಗಣ್ಯ ದುರಿತಾಪಹರೇಣ್ಯ ದಾನ ಸಾದ್ಗುಣ್ಯ ಪರಿಣತ ಲಾವಣ್ಯ ಪರಮಕಾರುಣ್ಯ 2 ಕಮಲರಮ್ಯವಿಲಾಸ ಕೌಸ್ತುಭೋದ್ಭಾಸ ಕಮನೀಯ ಸುವಿಭೂಪ ಕರಪೀತವಾಸ ಅಮಿತೇಂದು ರುಚಿಹಾಸ ಆದಿಶೇಷೋಲ್ಲಾಸ ಸುಮನಸಪುರವಾಸ ಪಾಹಿ ಲಕ್ಷ್ಮೀಶಾ 3
--------------
ಕವಿ ಲಕ್ಷ್ಮೀಶ
ಶರಣು ಗಜಾನನನೆ ಶರಣು ಲಂಬೋದರನೆ ಶರಣು ಪಾರ್ವತಿ ಪುತ್ರ ಶುಭಗಾತ್ರ ಪ ಆದಿಯಲಿ ನಿನ್ನ ಪಾದಭಜನೆಯ ಮಾಡೆ ಸಾದರದಿ ಸಲಹುವೆ ಮೋದವಿತ್ತು ಮೇದಿನಿಯಲಿ ನಿನ್ನಾರಾಧನೆಯ ಮಾಡದವ ನ- ರಾಧಮನೆನಿಸುವನಿದು ಪುಸಿಯಲ್ಲ 1 ಆಖುವಾಹನನೆ ನೀ ಕಳೆ ವಿಘ್ನಗಳ ಸಾಕು ಲಾಲಿಸೆನ್ನ ಏಕದಂತ ಮಣಿ ಭೂಷಣ ಕಾಕುಜನ ಕುಠಾರ ಲೋಕೈಕ ವೀರ 2 ಸಿತಿಕಂಠ ವರಪುತ್ರ ಪ್ರತಿ ವಾಸರವು ನಾ ನುತಿಸಿ ಬೇಡುವೆ ನಿನ್ನ ಸತಿರಹಿತನೇ ಸಿರಿ ರಂಗೇಶವಿಠಲನ ಅತಿಪ್ರೀತಿಯಿಂದ ಭಜಿಪ ಮತಿಯ ನೀಡೋ 3
--------------
ರಂಗೇಶವಿಠಲದಾಸರು
ಶರಣು ನಿನಗೆ ಶರಣೆಂದೆನೊ ಹರಿಯೇ ಕರುಣಿಸಿ ಕಾಯೋ ಎನ್ನಧೊರಿಯೆ ಪ ಪರಮಕೃಪಾಕರ ಪಾವನ ನರಹರಿ ಪಾಲಿಸೊ ಎನ್ನನಿ--- ಶರಣೆಂದ ವಿಭೀಷಣನ ಆದಿಭಕ್ತರ ಶ್ರಮ ಪರಿಹರಿಸಿದಂಥ ಶ್ರೀಧರಾ 1 ಭಕ್ತಾ ಪಾಂಡವ ಪಕ್ಷಾ ಬಲಿಯ ಭೂಮಿಯ ಭಿಕ್ಷಾ ಯುಕ್ತಿಲಿ ನೀ ಸಾಧಿಸಿದ ಯೋಧನೆ ಮುಕ್ತಿದಾಯಕ ದೇವ ಮುರಹರ ಮಾಧವನೆ ಮೌಕ್ತಿಕ ಮುಕುಟ ಧರಿಸಿದನೆ 2 ಸುಂದರ ಮೂರುತಿ-----ಜಗತ್ಪತಿ ಇಂದಿರಾ ಹೃದಯಾನಂದನೆ ಬಂದ ಭಕ್ತರ ಬಿಡದೆ ಅಂದಿಗೆ ನೀನೆ ಪೊರೆದೆ----ಹೆನ್ನ ವಿಠ್ಠಲಾ ಸಲಹೋ ಎನ್ನ 3
--------------
ಹೆನ್ನೆರಂಗದಾಸರು
ಶರಣು ಬಂದೆನೊ ಹರಿಯೆ ಶರಣು ಬಂದೆನೊ ಪ ಕರುಣದಿ ನೋಡೆನ್ನ ಸಲಹು ಎಂದೆನೊ ಅ.ಪ. ಜನನ ಮರಣ ಸುಳಿಗಳಲಿ ತೊನೆದು ಬಳಲಿ ನೊಂದೆನೊಘನಭವದಲಿ ಮೂರುತಾಪಗಳಲಿ ಸಿಲುಕಿ ಬೆಂದೆನೊ 1 ಧನಕೆ ಮೆಚ್ಚಿ ನಿನ್ನ ಮರೆತು ಕಹಿಯ ಫಲವ ತಿಂದೆನೊಅನುದಿನ ಘನ ಚಿಂತೆಯಿಂದ ಮನದ ಶಾಂತಿ ಹೊಂದೆನೊ 2 ವನಿತೆ ಸುತರು ಪೊರೆವರೆಂಬ ಭ್ರಮದೊಳಾತ್ಮ ಕೊಂದೆನೊಕೊನೆಗೆ ಗದುಗು ವೀರನಾರಾಯಣನೆ ಗತಿಯೆಂದೆನೊ 3
--------------
ವೀರನಾರಾಯಣ
ಶರಣು ಶರಣು ಕೃಷ್ಣಕೃಷ್ಣ ಶರಣು ಶರಣು ರಾಮ ರಾಮ ಶರಣು ಶರಣು ಶ್ರೀನಿವಾಸ ಶರಣು ಶರಣು ಶ್ರೀ ಹರೇ ಪ ಗುರುಸು ಭಕ್ತಿ ನೀಡಿ ಎನಗೆ ವರಿಸಿ ಶುದ್ಧ ದಾಸನೆಂದು ಕರುಣ ತೋರೊ ಕೇಶವ ಅನಂತ ರೂಪಿಯೇ ಅ.ಪ ಲೇಸಿನಿಂದ ಬ್ರಹ್ಮಶಿವರ ಪ್ರೇರಿಸುತ್ತ ಜಗವ ಪೊರೆವೆ ದಾಸನೆಂದು ಮೊರೆಯ ಹೊಕ್ಕೆ ಕಾಯೊ ಕೇಶವಾ 1 ವಾರಿನಿಲಯ ದೋಷದೂರ ಪೂರ್ಣಕಾಮ ಮುಕ್ತರೀಶ ಶರಧಿ ನಾರಾಯಣ 2 ವೇದಮಾತೆ ಶೃತಿ ಸುಗೀತೆ ವೇದಮಾನಿ ಲಕ್ಷಿರಮಣ ಶೂನ್ಯ ಮಾಧವ 3 ವಿನುತ ಸಾರ ವೇದಬಲ್ಲ ಸಾಧು ಪ್ರಾಪ್ಯ ವೇದಪಾಲ ಶರಣು ಗೋವಿಂದ 4 ವಿಶ್ವಜನಕ ವಿಶ್ವಪಾಲ ವಿಶ್ವವ್ಯಾಪ್ತ ವಿಶ್ವಭೋಕ್ತ ವಿಶ್ವಜೂತಿ ವಿಶ್ವಬಲನೆ ಶರಣು ವಿಷ್ಣುವೆ 5 ಆದಿ ದೈತ್ಯರನ್ನು ಕೊಂದು ಮೇದಿನೀಯ ಪೊರೆದ ದೇವ ಬಾಧೆ ಹರಿಸು ಮೂರು ವಿಧಧ ಮಧುಸೂದನ 6 ಲೋಕತ್ರಯವ ನಳೆದ ನೇಕ ಏಕನಿನಗೆ ಸಾಟಿಯಾರು ಜೋಕೆಯಿಂದ ಸಾಕಬೇಕು ತ್ರಿ-ವಿಕ್ರಮ 7 ಸೋಮ ಹಳಿದ ಕಾಂತಿಧಾಮ ನೇಮದಿಂದ ಬಲಿಯ ಕಾಯ್ದೆ ಹೇಮ ಜ್ಯೋತಿ ಪೂರ್ಣ ಸುಖಿಯೆ ಶರಣು ವಾಮನ 8 ಬೊಮ್ಮಶಿವರ ಕುಣಿಸಿ ಆಳ್ವ ಅಮ್ಮ ಪ್ರಕೃತಿಯನ್ನು ಧರಿಸಿ ಸುಮ್ಮಗೇನೆ ಜಗವ ಕಾವೆ ಶರಣು ಶ್ರೀಧರ 9 ಕರಣ ವ್ರಾತದಲ್ಲಿ ನಿಂತು ಕರಣಕಾರ್ಯಗಳನು ನಡಿಸಿ ಕರಣ ಪತಿಗಳನ್ನು ಪೊರೆವೆ ಹೃಷಿಕೇಶನೆ 10 ಉದರದಲ್ಲಿ ಜಗವ ಪೊತ್ತು ಸದರದಿಂದ ಒಪ್ಪಿಕೊಂಡೆ ಉದರದಲ್ಲಿ ರಜ್ಜುಭಂಧ ದಾಮೋದರ 11 ಚೊಕ್ಕವಿಧಿಯ ಹಾಗೆ ಜಗವ ಕುಕ್ಷಿಯಲ್ಲಿ ಪಡೆದ ದೇವ ಶರಧಿ ಶಯನ ಪದ್ಮನಾಭನೆ12 ಭಕ್ತಜನರ ಪಾಪಸೆಳೆವ ಶಕ್ತ ಪ್ರಲಯ ಸ್ತುತಿಗೈವ ದೇವ ಮುಕ್ತಿದಾತ ವಿಶ್ವಕುಕ್ಷಿ ವಾಸುದೇವನೆ 14 ಮೇರೆಯಿರದ ಕಾಂತಿಮಯನೆ ಸೇರಿ ಭಾಸ ಕೊಡುವೆ ರವಿಗೆ ಬೀರಿ ಜ್ಞಾನ ಭ್ರಾಂತಿ ಹರಿಸು ಪ್ರ-ದುಮ್ನನೆ 15 ನೀ ನಿರೋಧ ಕಾಣೆ ಎಂದು ನೀನೆ ಸಿಗುವೆ ಭಕ್ತಿ ಬಲೆಗೆ ಕೃಪಣ ಕ್ಷಮಿಸು ಅನಿ-ರುಧ್ಧನೆ 16 ಕ್ಷರರು ಜೀವ ರಾಶಿ ಎಲ್ಲಕ್ಷರ ವಿರುಧ್ಧ ಲಕ್ಷ್ಮಿತಾನು ವರನು ಭಿನ್ನ ಉಭಯರಿಂದ ಪುರುಷೋತ್ತಮ 17 ಕರಣಗಳಿಗೆ ಸಿಗುವನಲ್ಲ ಕರಣಗಳಲಿ ಭೇದವಿಲ್ಲ ಕರಣಜಯವ ಸಿಧ್ಧಿಸೆನಗೆ ಅ-ಧೋಕ್ಷಜ18 ದೋಶರಹಿತ ಮುಕ್ತರೀಶ ನಾಶರಹಿತ ಲಕ್ಷ್ಮಿರಮಣ ಈಶಬಿಂಬ ಜೀವ ಹೃಸ್ಥ ನಾರಸಿಂಹನೆ 19 ಜೀವರೊಡನೆ ವಿತತ(ಇರುವೆ) ಅಚ್ಯುತ 20 ಇಂದ್ರನನುಜ-ನಿಜಮಹೇಂದ್ರ ತಂದೆ ಸುಖವ-ದಿವಿಜಣಕೆ ವಂದ್ಯ ವಂದ್ಯ-ವಂದಿಸುವೆನು ಶ್ರೀ- ಉಪೇಂದ್ರನೆ 21 ಸೃಷ್ಠಿಗೈದು ಜಗವ ಲಯಿಪೆ ದುಷ್ಟದಮನ ಶಿಷ್ಟವರದ ಹುಟ್ಟು ಸಾವು ಕಟ್ಟು ಬಿಡಿಸೊ ಶ್ರೀ ಜನಾರ್ದನ 22 ಯಜ್ಞಭೋಕ್ತ ಮನುವ ಪೊರೆದೆ ಭಗ್ನಗೈಸಿ ದೋಷವೆನ್ನ ಜ್ಞಾನ ನೀಡೋ ಸುಜ್ಞನೆನಿಸು ವಾಜಿವದನ ಶರಣು ಶ್ರೀಹರೇ 23 ವಿಭವ ಮೂರ್ತಿ ಭಕ್ತಮನವ ಪಾಪ ಸೆಳಿವೆ ರಿಕ್ತನಾನು ಸರ್ವವಿಧಧಿ ಕಾಯೊ ಶ್ರೀಕೃಷ್ಣ 24 ಸರ್ವ ಶಬ್ದವಾಚ್ಯ “ಶ್ರೀಕೃಷ್ಣವಿಠಲ”ನನ್ನು ನೆನೆಯೆ ಸರ್ವಸುಖಗಳಿತ್ತುಕಾವ ಜಿಷ್ಣು ತೆರದಿ ಸತ್ಯಹೋ 25
--------------
ಕೃಷ್ಣವಿಠಲದಾಸರು
ಶರಣು ಶರಣುರಾಯಾ | ಸರಸಿ-ಜಾಲಯ ಪ್ರೀಯಾ | ಶರಣು ಪಾವನಕಾಯಾ | ಸಲಹುನಮ್ಮಾ ಪ ಸ್ತುತಿಯ ಮಾಡಲರಿಯೇ | ಯತಿ ಛಲಗುಣ ವರಿಯೇ | ಪಾವನ ದೇವ ದಯಾನಿಧಿಯೇ 1 ಶಿರಿವಧು ರಮಣನಾ ಚರಿತವ ಪೇಳುವೆ | ಕರುಣದಿ ಶ್ರೀಹರಿ ನುಡಿಸಿದಂತೆ | ಕೇಳಿ | ಧರಿಯೊಳು ಭಾಗವತರು ಯಲ್ಲಾ 2 ಬನ್ನಿ ಸಾತ್ವಿಕ ಗುಣ ಸಂಪನ್ನ ಮುತ್ತೈದೇರು | ಅನ್ಯ ಭಾವನೆಗಳಿಗೆ ತೊಡಕದೇ | ಯನುತಲಿ | ಉನ್ನತ ಸಂಭ್ರಮದಿ ನೆರೆದರು 3 ದಿವ್ಯಾಂಬರವನುಟ್ಟು ದಿವ್ಯಾಭರಣನಿಟ್ಟು | ದಿವ್ಯಾಕೃತಿಯಲಿ ವಪ್ಪುತಿಹಾ | ಮುನಿ | ಮದನ ಲಾವಣ್ಯನು 4 ಅನಾದಿ ಮಹಿಮ ಮೋಹನನಾದ ಕೃಷ್ಣನು | ಜ್ಞಾನಾಂಗನೇ ರುಕ್ಮಣಿ ವಧುವಿನಾ | ಈರ್ವರಾ | ಅನುಭವ ದೂಟಣಿಯನ್ನು ಮಾಡಲಾರಿ 5 ಸಡಗರದಿಂದಾ ಹೃದಯಾ ಪೊಡವಿಯೊಳೊಪ್ಪುದಾ | ದೃಢ ವಜ್ರದಿಂದಲಿ ರಚಿಸಿದಾ | ಜಗದಲಿ | ಒಡನೆ ರತಿ ರತ್ನಾಸನ ಹಾಕಿ 6 ಮ್ಯಾಲ ಭಾವಕಿಯರು ಮೂಲೋಕವಂದ್ಯರಾ | ಲೋಲವಧು ವರರನು ಕುಳ್ಳಿರಿಸಿ | ಹರುಷದಿ | ಮೇಲೆನಿಸಿ ಊಟಣಿಯ ಮಾಡಿಸಲು 7 ಶುದ್ಧ ಮತಿವಂತಿಯರು ಅಧ್ಯಕ್ಷರತರಾಗಿ | ಸಿರಿ | ಮುದ್ದು ಶ್ರೀ ಕೃಷ್ಣನು ವಲಿವಂತೇ 8 ನಾನಾ ಗಂಟಗಳುಳ್ಳಾ ಕಠಿಣವಾದಾ ಅಭಿ | ಮಾನ ಅರಿಷಿಣವನು ಸಣ್ಣ ಮಾಡೀ | ಈಗಾ | ಏನುಳಿಯದ್ಹಾಂಗ ವಿವೇಕದಿಂದ 9 ಹಮ್ಮಿನರಿಷಿಣವನು ಸಮ್ಯಜ್ಞಾನದ ಕದಿ | ಕಮ್ಯ ದೋರುವಂತೆ ಕಲಿಸುತಾ | ಶ್ರೀವರ | ಬ್ರಹ್ಮನ ಪಾಪಕ ಅರ್ಪಿಸಿದರು 10 ತ್ವರಿತ ಲಕ್ಷ್ಮೀ ಕಾಲಾ ಪರವಾ ವಪ್ಪಿಲೆ ಹಚ್ಚಿ | ಭರದಿಂದಾಕ್ಷಣ ಕ್ಷಣಕ ರುಕ್ಮಣಿ ಯಾಮುಖದಿಂದ | ಹರಿಯಾ ನಾಮಗಳನು ನುಡಿಸುತಾ 11 ಭಾವನಿಂದ ರಂಜಿಸುವ ಕುಂಕುಮ ಮ್ಯಾಲೆ | ಆ ವಿಮಲ ಮುಕ್ತಿಯ ಶೇಶೇ ನಿಟ್ಟು ಧ್ಯಾನಾ | ಲೇವಿಗಂಧವಾ ಲೇಪಿಸಿದರು 12 ಪರಿಮಳ ಸುವಾಸನೆಯ ಬೇರದ ಸುಮನ ಸರವಾ | ಕೊರಳಿಗೆ ಹಾಕಿದೆ ಪರಿಯಿಂದಾ ಕೃಷ್ಣನಾ | ಕರದಿ ನೇಮಿಸಿದರು ರುಕ್ಮಣಿಗೆ 13 ಆರ್ತ ಜಿಜ್ಞಾಸನು ಧನಾರ್ಥಿಯು ಬೈಲಿ ಘಳಿಗೆ | ಅರ್ತು ಮುಖದಲಿ ಕೊಟ್ಟು ಬಿಸುಡಿದರು ಬುಧರು | ನಿರ್ತದಿಂದಲಿ ನೋಡಿ ಇಬ್ಬರಿಂದ 14 ಮಗುಳೆ ಸಂಕಲ್ಪಾದಾ ಬಗೆದಾ ಕುಪ್ಪಸಿನ | ಬಿಗಿ ಬಿಗಿದು ಕಟ್ಟಿದಾ ಗಂಟವನು ಒಂದೇ | ಜಗದೀಶನಾ ಕೈಯಿಂದ ಬಿಡಿಸಿದರು 15 ಹರಿಯಾ ತೊಡೆಯ ಮ್ಯಾಲ ನಿಂದಿರಿಸಿ ರುಕ್ಮಿಣಿಯನು | ಕರದಿ ಶಾಂತಿ ಅಂಬಿ ಬಿಂಬಿಸಿದರು | ನೋಡಿ | ಧರಿಯೊಳಾನಂದವ ತೋರುವಂತೆ 16 ತನುವಿನಾರತಿಯೊಳು ಘನದೆಚ್ಚರ ದೀಪದಿ | ಮನದಿಂದಾ ಜಯಾ ಜಯಾವೆಂದೂ ಬೆಳಗೀ | ಮರಹು | ಅನುವಾಗಿ ತಾವು ನಿವಾಳಿಸಿದರು 17 ಮರೆವಾ ಪ್ರಕೃತಿ ಪುರುಷರ ಶರಗಂಗಳಾ ಯರಡಾ | ಭರದಿಂದ ಕಟ್ಟಿ ಸುವೃತ್ತಿಂದಾ | ಬಳಿಕಾ | ತ್ವರಿತ ನಿಜ ಮಂದಿರವ ಸಾರಿದರು 18 ಇಂತಿ ಪರಿಯಾಗಿಹ ಅಂತರನು ಭವದಾ | ಕಂತುಪಿತ ಲಕ್ಷ್ಮಿಯ ಚರಿತವನು | ನೋಡಿ | ಸಂತತ ಸುಖವನು ಪಡೆದರೆಲ್ಲಾ 19 ಇನಿತು ಸುಖ ಕರವಾದಾ ಅನುಭವ ದೂಟಣಿಯನು | ಅನುವಾಗಿ ನುಡಿಸಿದಾ ಯನ್ನ ಮುಖದೀ | ಈಗಾ | ಘನ ಗುರು ಮಹಿತಪಿ ಸುತ ಸ್ವಾಮಿ 20 ತಂದೆ ತಾಯಿ ಮಿತ್ರ ಬಂಧು ಬಳಗನಾದಿ | ಎಂದೆಂದೂ ಶರಣರ ಸಲಹುವಾ | ದೇವನೇ | ಇಂದೆನ್ನ ನುದ್ಧರಿಸು ದತ್ತಾತ್ರೇಯಾ 21
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶಿರೀಶ ಹರೇ ಪ ಭುವನದಲಿ ಶೃತಿ-ಯಡಗೇ| ಯವಿಗಳಾಡಿಸದೇ| ಜವದಲಿ ಬಂದು ನೀ ತಮನನು ಕೊಂದೇ| ಕಾವೋದೋ ಎನ್ನಾ ಮತ್ಸ್ಯರೂಪಾ 1 ಸುರಸುರರು ಕೊಡಿ| ಶರಧಿಯ ಮಥಿಸುದಕಿ| ಕರುಣದಿ ಬೆನ್ನವನಿತ್ತೆ ನೀನಗತಿ| ಕಾವೋದು ಎನ್ನ ಕಮಠೆ ರೂಪಾ 2 ಹಿರಣ್ಯಾಕ್ಷನ ಕೊಂದು| ಧರೆಯನು ದಂತದಲೆ| ಧರಿಸಿದೆ ನೀ ಅನವರತಗಳಿಂದಲೇ| ಕಾವುದೋ ಎನ್ನ ವರಹಾ ರೂಪ 3 ಛಲದಿ ಪ್ರಹ್ಲಾದ ಕರಿಯೇ| ಕುಲಿಶ ಸಮುಗುರುದಲೆ| ಮೆಳೆತನ ಸೀಳಿದೆ ಕರಳ್ಳೊನಮಾಲೆ| ಕಾವುದೋ ಎನ್ನ|ನರಹರಿ ರೂಪ 4 ಚಂಡ ಬಲಿವವರದನೇ| ದಂಡ ಕಾಷ್ಟಕರನೇ| ಕುಂಡಲ ಸುಕಮಂಡಲ ಭೂಷಿತನೇ| ಕಾವುದೋ ಎನ್ನ ವಾಮನ ರೂಪ 5 ಸುಜನರ ಪ್ರತಿ-ಪಾಲಾ ರಾಜಾಕುಲಾಂತಕನೇ| ರಾಜಿಸುತಿಹ ವರ ಪರಶುಧರನೇ| ಕಾವುದೋ ಎನ್ನಾ ಭಾರ್ಗವರೂಪಾ6 ಋಷಿಯ ಮಖ ಕಾಯಿದು ಶಶಿಧರಧನು ಮುರಿದೇ| ದಶಮುಖ ಕುಂಭಕರ್ಣರ ಮರ್ದಿಸಿದೆ| ಕಾವುದೋ ಎನ್ನಾ ರಾಘವ ರೂಪ7 ಎಣೆಗಾಣದ ಮಡುವಿನಲಿ| ಫಣಿವರ ಫಣಿಮ್ಯಾಲ| ಕುಣಿದೆ ಆನಂದದಿ ಕೊಳಲನೂದುತ್ತಲೇ| ಕಾವುದೋ ಎನ್ನಾ ಯಾದವ ರೂಪ8 ಮೂರೆನಿಪ ಪುರದಲಿ| ನಾರೇಶ ದೃತವಳಿದೇ| ಭೂರಿ ಸಜ್ಜನ ಹೃದ್ವ ನಜ್ಜದೊಳಾಡಿದೇ| ಕಾವುದೋ ಎನ್ನಾ ಬೌದ್ದ ಸ್ವರೂಪಾ9 ಸಲಹಬೇಕೆಂದು ಜಗವಾ| ಇಳೆಯಾ ಭಾರರ ತರಿದೇ| ಸುಲಲಿತ ಕುದುರೆಯ ಏರಿ ಮೆರೆದೆ| ಕಾವಿದೋ ಎನ್ನ ಕಲ್ಕಿಸ್ವರೂಪ 10 ಸಹಕಾರಿ ಭಕ್ತರಿಗೇ| ಮಹಿಮೆ ದೋರಿದೆ ಹೀಗೆ| ಮಹಿಪತಿ ಸುತ ಪ್ರಭು ಸಲಹು ನೀಯೆನಗೆ| ಕಾವುದೋ ಎನ್ನಾ ಅನಂತರೂಪ 11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶಿರೀಶ ಹರೇಗೋವಿಂದಾ ಪ ದಾನವ ಕುಲಸಂಹಾರಕಾ ದೀನ ತಾರಕಾ ದೀನ ತಾರಕಾ ಪರಮ ಪಾವನ ರೂಪಾ 1 ಈರೇಳು ಲೋಕದ ಜೀವನಾ ವರಪಾವನಾ ವಿನುತ ದಯಚರಣಾ2 ಭಯಹರ ಆನಂದಸಾಗರಾ ದಯ ಸಾಗರಾ ದಯಸಾಗರಾ ಗರುಡಗಮನ ವರ ಫಣಿಶಯನಾ3 ದುರಿತ ಕುಲಾಂಬುಧಿ ಶೋಷಣಾ ಖರದೋಷಣಾ ಖರದೋಷಣಾ ತನು ಪರ್ವತ ಕುತಿಲಿಶಾ4 ಸುರವರ ಮುನಿಜನ ಪಾಲನಾ ಧರಿಲೋಲನಾ ಧರಿ ಲೋಲನಾ ರಾಯಣ ಸರಜ ನೇತ್ರಾ5 ರವಿಕೋಟಿ ನಿಧನಂದ ನಂದನಾ ಭವಬಂಧನಾ ಪತಿ ಜನಕಾ6 ಅಸಮ ಪಯೋಧರ ಸುಂದರಾ ದಶಕಂಧರಾ ದಶಕಂಧರಾ, ಮರ್ಧನ ನಿರುಪಮ ಚರಿತಾ7 ಸಕಲ ವ್ಯಾಪಕ ಯದುನಾಯಕಾ ಸುಖದಾಯಕಾ ಸುಖದಾಯಕಾ ಮಹಿಪತಿ ನಂದನ ಪ್ರೀಯಾ8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶ್ರೀ ಗುರುರಾಯ | ಶರಣು ಬುಧ ಜನಪ್ರೀಯ | ಶರಣು ಪಾವನ | ಶರಣು ನಮ್ಮಯ್ಯ ಪ ಧರಣಿಯೊಳಗ ವಿದ್ಯ ದಾವರಣವಿಕ್ಷೇಪದಿ ಹರಿಯ ಭವ ಜನುಮ ಮರಣ ಬಲಿಗೆ ಸಿಲುಕಿ | ಹರಣ ಹಾಕುತಿದೆ ನೋಡೀ ಕರುಣದಿಂದ ಭಯ ನೀಡಿ | ತರಣೋಪಾಯ ದೋರಿ ದೀನೋದ್ಧರಣ ಮಾಡಿ ಹೊರೆದೇ 1 ನರದ ಹುಳುವ ತಂದು ಮಂದಿರದೊಳಿಟ್ಟು | ತನ್ನಂಗ ತೆರದಿ ಮಾಳ್ಪಾ ಭೃಂಗಿಯ ತೆರದೆ ನಂಬಿದವರಾ | ಕರೆದು ಬೋಧಾಮೃತದ ನುಡಿವೆರದು ಚಿನುಮಯಾನಂದ ಮರದ ಠಾವ ತಪ್ಪಿಸಿ ಎಚ್ಚರದೊಳು ನಿಲಿಸಿದೇ 2 ಮುಕುತಿ ಸಾಧನವಾದಾ ಭಕುತಿ ನವ ವಿಧ ಶಾಸ್ತ್ರ | ಯುಕುತಿ ಪ್ರಾಬಲ್ಯ ವಿರಕ್ತಿಯನಗಿಲ್ಲಾ | ಶಕುತ ಗುರು ಮಹಿಪತಿಯ ಭಕುತ ನೆನಿಸಿದಕಿನ್ನು ಅಕುತೋ ಭಯ ಹೊಂದುವಾ ಶಕುತಿ ನೀಡಯ್ಯಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶ್ರೀ ಗುರುಲಿಂಗ ಶರಣು ಮುನಿಜನಸಂಗ ಶರಣುಭವ ಭಯ ವಿಭಂಗಾ ಪ ಪಾವನಿ ಜಾನ್ಹವಿಯ ತೀರದಲಿ ಕಾಶೀ | ಪುರ ವಿಶ್ವನಾಥನೆನಿಸೀ | ಹರುಷದಲಿ ನಿಂದು ಮತ್ತೊಂದು ರೂಪದಲಿ ತೆರಳಿ | ಧರೆಯ ದೇಶವ ನೋಡುತಾ ಬರುತಾ 1 ಮೊದಲೆ ತಾ ಕೃಷ್ಣ - ವೇಣಿ ಮ್ಯಾಲುತ್ತರವಾಹಿನಿ | ಸದಮಲ ಸುಖ ಕಾರಿಣೀ | ಇದ ನರಿತು ನಡಿ ಮಧ್ಯೆ - ಉತ್ತರೇಶ್ವರ ನೆನಸಿ | ಮುದದಿಂದ ಬಂದು ನಿಂದು || 2 ಸಖನ ದರುಶನ ನೆವದಿ ಬರುತಿರಲು ನಾ ನಿಮ್ಮ ಪ್ರಕಟದಲಿ ಕಂಡೆ ನಿಂದು | ಭಕುತಿಯಚ್ಚರ ನೀಡು ಗುರು ಮಹೀಪತಿ ಸ್ವಾಮಿ | ಸಕಲ ಸುರರಾಜ ಮಾದ್ಯ ಧನ್ಯಾ || 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಸಹಜಭಾವ ಸಿರಿಯರ ಜೀವ ಶರಣು ಶರಣು ದೇವ ದೇವ ಪ ಶರಣು ನಿನ್ನ ಚರಣಸೇವೆ ಕರುಣಿಸೆನಗೆ ನಿರುತದಭವ ಪರಮಪಾವನ ನಿಮ್ಮ ಚರಿತ ಕರುಣಿಸೆನ್ಹøದಯಕ್ಕೆ ಸತತ ಪೊರೆಯೊ ಪ್ರೇಮದಿ ದುರಿತಪರ್ವತ ತರಿದು ತೊರೆಸಿ ಜಗದ ಮಮತೆ ಅ.ಪ ಸಾರ ಸುರಸಮೂಹಸೇವಿತ ಮಾರಾರಿವಿನುತ ಕ್ಷೀರವಾರಿಧಿ ಸುತೆಯ ಪ್ರಿಯನಾಥ ಸನಕಾದಿನಮಿತ ಸೇರಿ ಭಕ್ತರಗಣದಲಿ ಗುಪ್ತ ನಲಿಯುವಿ ಮಮತೆ ತೋರಿ ಎನ್ನನು ಮಾಡು ಪಾವನ ಮೀರದ ಸಂಸಾರಬಂಧನವಾರಿಯ ದಾಂಟಿಸುಯೀಕ್ಷಣ ಸೇರಿಸದೆ ಎನ್ನ ಮಾಯಾಜಾಲದಿಂ ಸೇರಿಸು ನಿಜಜ್ಞಾನ ದಯದಿ 1 ವೇದವೇದಂಗಳಿಗೆ ಅಗೋಚರ ವೇದಂಗಳಾಧಾರ ವೇದವೇದ್ಯಮಳೈರ್ಕ ಪರತರ ವೇದಗಳ್ಹಿತಕರ ವೇದವೇದಾಂಗ ಶ್ಯಾಮಸುಂದರ ವೇದಾದಿ ಮನೋಹರ ವೇದವಿದ್ಯೆ ಬೋಧಿಸಯ್ಯ ವೇದಸಾಧನ ತೋರಿಸಯ್ಯ ವೇದಮಂತ್ರ ಸಿದ್ಧಿಸಯ್ಯ ವೇದವೇದಾಂತದೊಳು ಗೌಪ್ಯವಾದ ತತ್ವದ ಮೂಲ ತಿಳಹಿ ವಾದಬುದ್ದಿಯ ನೀಗಿಸಿ ನಿಮ್ಮ ಪಾದಭಕ್ತಿಯ ಕರುಣಿಸಭವ 2 ಭುವನತ್ರಯದ ಪರಮ ಸುಸೂತ್ರ ವಾರಿಜನೇತ್ರ ಭುವನತ್ರಯದ ಪಾವನ ಸ್ತೋತ್ರ ಪರಮಪವಿತ್ರ ಭುವನಜಾತೆಯ ಮೋಹದ ಮಿತ್ರ ವನರುಹ ಗಾತ್ರ ಭುವನದ್ಹತ್ತವತಾರ ದೇವ ಭುವನವೀರೇಳು ಹೊತ್ತು ಆಳುವ ಜಯವ ಪೊಂದಿಸಿ ನಿಮ್ಮಯ ಕರುಣದೊರಕಿಸಿ ದಯದಿ ಮುಕ್ತಿಯ ಕೊಡು ಶ್ರೀರಾಮ 3
--------------
ರಾಮದಾಸರು
ಶರಣು ಹೈಮವತೀಶ ಶಿವಶಂಭು ಅವಿನಾಶ | ಶರಣು ಧನಪತಿ ಮಿತ್ರ ಪಾವನತರಚರಿತ್ರ | ಶರಣು ದಾನವವಿಪಕ್ಷಾ || ಶರಣು ಕರ್ಪೂರ ಗೌರಾಂಗ ಗುಣಮಂದಾರ | ಶರಣು ಶೃತಿಪೃತಿಪಾದ್ಯಯೋಗಿಮನಕಾಭೇದ್ಯ | ಶರಣು ಆನಂದ ಕಂದಾ ||
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣೆನ್ನಿ ಸಾಧುರಿಂಗೆ | ಹರಿ ಮೆಚ್ಚುಪರಮ ಭಾಗವತರಿಂಗೆ ಪ ತೀರ್ಥ ಕ್ಷೇತ್ರಂಗಳಲ್ಲಿ ಮಿಂದು ಘನ | ಯಾತ್ರೆಯನು ಮಾಡಿ ಬರಲಿ | ಧಾತ್ರಿಯಲಿ ಕೆಲವು ದಿನಕೆ ಆ ಪುಣ್ಯ | ವರ್ಥಿ ಬಹುದಯ್ಯ ಜನಕ | ಅರ್ತು ಸದ್ಭಾವದಿಂದ್ಹೋಗಿ ಸಂತರ ಕಂಡ | ಮಾತ್ರದಲಿ ಸರ್ವ ಸುಖ ಇದಿರಿಡುವದೆಂದು 1 ಮೆರೆವ ಭಾಗವತದಲ್ಲಿ ಉದ್ಭವಗೆ | ಹರಿತಾನೆ ಬೋಧಿಸುತಲಿ | ನೆರೆಯೋಗ ಯಾಗ ವೃತವು ಯನ್ನಹಿಡಿ | ಲರಿಯದಿದು ಸಾಂಖ್ಯ ತಪವು | ನಿರುತೆನ್ನ ಸತ್ಸಂಗ ತೋರಿ ಕೊಡುವಂತನ್ಯ | ಧರಿಯೊಳಗ ಸಾಧನಗಳಿಲ್ಲ ಕೇಳೆಂದಾ 2 ಚಲಮೂರ್ತಿ ಸಂತರುಗಳು ನೋಡಲಾ | ಚಲಮೂರ್ತಿ ಪ್ರತಿಮೆಯಗಳು | ನಲಿದವರ ಪೂಜೆಯಿಂದಾ ಪ್ರೀಯನಾಗಿ | ಸಲಹುವನು ಶ್ರೀ ಮುಕುಂದಾ | ತಿಳಿಯ ದೆಂದಿಗೆ ಅಭಾವಿಕ ವರ ಮಹಿಮೆಗಳು | ವಲಿದು ಗುರುಮಹಿಪತಿ ಸುತಗೆಚ್ಚರಿಸಿದಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣೆಂಬೆ ಗುರುರಾಯಾ ಶರಣ ಜನರಾಶ್ರಯಾ ಶರಣು ಸಮೀರ ಕುಮಾರ ಉದಾರನೆ ಶರಣು ಪಾವನ ಕಾಯಾ ಪ ಹರಿ ಪೂರ್ಣಾಂಶದಿ ಜನಿಸಿ ಹರಿ ಕುಲೋದ್ಬವ ನೆನಿಸಿ ಹರಿಯತುಡಕಿ ಬಂದು ಹರಿತೇಜದಿ ನಿಂದು ಹರಿಸೆ ಧನುಜ ಮೃಗವಾ ಹರಿರೂಪದಲಿ ನಿಂದೆಹರಿಮಂದಿರದಲಿನಲಿದೆ ಹರಿಬರಲು ನಮಿಸಿ ಹರಿದಶ್ವಜ ಗೊಲಿಸಿ ಹರಿಹಯಜಗ ಮುನಿದೇ 1 ಗೋಪೆಂದ್ರ ನಾಜÉ್ಞಯಲಿ ಗೋಪದಾಂಬುಧಿ ಪರಿಲಿ ಗೋಪನಲಂಘಿಸಿ ಗೋಪುತ್ರಿಯ ಕಂಡು ಗೋಪೀಡಕರ ಮುರಿದೇ ಗೋಪಾಲಗಿದಿರಾಗಿ ಗೋಪಾಸ್ತ್ರವಶವಾಗಿ ಗೋಪುರವ ನುರುಹಿ ಗೋಪಾನ್ವಯ ಗುರುಹಿ ಗೋಪದವಿಯ ಪಡೆದೆ 2 ಮಹಿದರಾನೇಕವತಂದು ಮಹೋದಧಿಯನೆ ಜಿಗಿದು ಅಹಿ ಮಹಿರಾವಣಾನ್ವಯ ಮಹಿರುಹದಲಿ ತರಿದೇ ಮಹಿಯೋಳು ಮೂರವತಾರಿ ಮಹಿಮಾನೆಕವಬೀರಿ ಮಹಿಪತಿ ಸುತಪ್ರಭು ಮಹಿಜಳ ಕೂಡಿಸಿ ಮಹದಾ ಗ್ರಣಿಯಾದೆ ||
--------------
ಕಾಖಂಡಕಿ ಶ್ರೀ ಕೃಷ್ಣದಾಸರು