ಒಟ್ಟು 4316 ಕಡೆಗಳಲ್ಲಿ , 124 ದಾಸರು , 3032 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೊದಲನೇ ಅಧ್ಯಾಯ ಪಾತಿವ್ರತ್ಯ ಮಹಾತ್ಮೆ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ನಿರ್ದೋಷ ಗುಣಪೂರ್ಣ ವಿಷ್ಣು ಸರ್ವೋತ್ತಮ ಸ್ವತಂತ್ರ ಶ್ರೀದ ಶ್ರೀಪತಿ ಜಗಜ್ಜನ್ಮಾದಿಕರ್ತನು ಸಚ್ಛಾಶ್ರ - ದಿಂದಲೇ ವೇದ್ಯನು ಮೂರು ವಿಧ ಜೀವರಿಗೆ ಯೋಗ್ಯ ಸಾಧನಕೆ ಗತಿಯ ಮಾಡುವ ಅವತಾರ ಲೀಲಾ 1 ಸುಪುಷ್ಪಭವ ಬ್ರಹ್ಮದೇವನೋಳ್ ತತ್ ಶಬ್ದವಾಚ್ಯನು ಶ್ರೀ ಪುರುಷೋತ್ತಮನೆ ಪ್ರಜಾಸೃಷ್ಟಿ ಮಾಡಿಸುವನು ತ್ರಿಪುರಾರಿ ಭಸ್ಮಧರ ರುದ್ರನೋಳ್ ತನ್ನಾಮದಲಿ ಶ್ರೀ ಪುರುಷೋತ್ತಮನೇ ಸಂಹಾರ ಮಾಳ್ಪ ಅಂತರ್ಯಾಮಿ 2 ಉರುಜ್ಞಾನ ಸುಖ ಬಲಾದ್ಯಮಿತ ಗುಣಧಾಮನ ಕರ ಚರಣಾದ್ಯವಯವಕ್ಕೂ ಅವಗೂ ಅವನು ಧರೆಯಲ್ಲಿ ಅವತಾರ ಮಾಡುವ ರೂಪಗಳಿಗೂ ಪರಿಪೂರ್ಣವಾಗಿ ಅಭೇದ ಭೇದಲೇಶವೂ ಇಲ್ಲ 3 ದ್ವಿ ಷೋಡಶ ಶುಭಲಕ್ಷಣ ತನುವುಳ್ಳ ಬ್ರಹ್ಮಗೂ ವಿಷಕಂಠ ರುದ್ರಗೂ ಪರಸ್ಪರ ಭೇದ ಅಂತಸ್ಥ ವಿಷ್ಣುಗೂ ಇವರುಗಳಿಗೂ ಭೇದವು, ಅಂತರ್ಯಾಮಿ ವಿಷ್ಣು ಒಬ್ಬನೇ ದ್ವಿರೂಪದಲ್ಲಿ ಇವರಲ್ಲಿಹ 4 ಹತ್ತಾವತಾರ ಮತ್ಸ್ಯಾದಿರೂಪಗಳು ಮಾತ್ರವಲ್ಲ ಅನಂತರೂಪನು ಅನಂತಗುಣ ಕ್ರಿಯಾವಂತನು ಕ್ಷಿತಿಯಲ್ಲಿ ಬಲಕಾರ್ಯಕ್ಕೆ ಕೆಲವು ಅವತಾರ ಹಿತಕರ ಹಲವು ಜ್ಞಾನಬೋಧಕ್ಕೇವೇ ಕೆಲವು 5 ಧ್ಯಾತ್ಮನು ಜ್ಞಾನಕಾರ್ಯಕ್ಕಾಗಿ ಅವತರಿಸುವನು ಶ್ರೀಮಾನ್ ಹಯಗ್ರೀವ ಸನತ್ಕುಮಾರ ದತ್ತ ಕಪಿಲ ಧೀಮಾನ್ ಪರಾಶರ ವಾಸವೀಸೂನು ಐತರೇಯಾದಿ 6 ದ್ವಾಪರದಲ್ಲೇವೆ ಅಲ್ಲಲ್ಲಿ ಕಲಿವಿಷ ಹರಡಿ ತಪೋಧನರು ಗೌತಮರು ಶಪಿಸೆ ಜ್ಞಾನಕುಂದೆ ಶ್ರೀಪ ವೇದವ್ಯಾಸ ಜ್ಞಾನ ತೇಜಃಪುಂಜ ಬಂದು ತೋರಿ ಆ ಪೀಡಿಸುವ ಅಜ್ಞಾನ ತರಿದು ಸಜ್ಞಾನ ಇತ್ತ 7 ಹಿಂದೆ ಬ್ರಹ್ಮದೇವರಾಜÉ್ಞಯಿಂ ಅತ್ರಿಋಷಿವರ್ಯರು ನಿಂತರು ಋಕ್ಷಗಿರಿಯಲ್ಲಿ ಅಪತ್ಯಾಪೇಕ್ಷೆಯಿಂದ ಅದ್ಭುತ ತಪವಚರಿಸಿ ಜಗದೀಶ್ವರ ಸಮ - ಪುತ್ರ ಕೊಡೆ ಚಿಂತಿಸಿ ಹರಿಯಲ್ಲಿ ಶರಣಾದರು 8 ಹರಿ ತಾನು ತನ್ನ ಅಧಿಷ್ಟಾನರಾದ ಬ್ರಹ್ಮೇಶ್ವರ ಕರಕೊಂಡು ಋಷಿ ಮುಂದೆ ನಿಂತು ಯುಕ್ತಮಾತನ್ನಾಡಿ ಮೂರು ಮಂದಿಗಳು ತಾವು ಪುತ್ರರಾಗುವೆವು ಎಂದ ತರುವಾಯ ತಾನಿತ್ತ ವರವ ಒದಗಿಸಿದನು 9 ಭಾಗವತ ಈ ವಿಷಯ ಒಳಗೊಂಡು ಇಹುದು ಪತಿ ವೇದವ್ಯಾಸ ಸಂಕೃತ ಈ ಭೂರಾದಿ ಜಗತ್ತಿನಲ್ಲಿ ಪ್ರಖ್ಯಾತ ಪುರಾಣಂಗಳೊಳ್ ಶ್ರೀ ಭಗವಾನ್ ದತ್ತಾತ್ರಯನ ಅವತಾರವು ವೇದ್ಯ 10 ಗೀರ್ವಾಣ ಛಂದಸ್ಸು ಅಷ್ಟಿಯಲಿ ಬರೆಯುವದೆಂದು ಶ್ರೀವರನ ಹಿತಾಜÉ್ಞಯಿಂ ಪ್ರಸನ್ನ ಶ್ರೀನಿವಾಸೀಯ ಶ್ರೀವಿಷ್ಣು ಸಹಸ್ರನಾಮ ಭಾಷ್ಯ ಕನ್ನಡದಲ್ಲಿ ಅಳವಡಿಸಿದಂತೆ ಅಷ್ಟೀ ಛಂದಸ್ಸಲಿ ಈ ಗ್ರಂಥವ 11 ಈ ಗ್ರಂಥದಲಿ ಶ್ರೀಭಾಗವತವು ಮಾರ್ಕಂಡೇಯವು ಭಾಗವತರಿಗೆ ಉಪಾಸನಾ ಹೇತು ಪಂಚರಾತ್ರ ಆಗಮವು ಒಳಗೊಂಡ ವಿಷಯಗಳು ಇವೆಯು ಕಾಯ ಶುದ್ಧಿಯಿಂ ಪಠಣೀಯವು 12 ಗುರುಮಂತ್ರ ಉಪದೇಶವಿಲ್ಲದಂತಹ ಸ್ತ್ರೀ ಜನ ಶೂದ್ರರು ಬ್ರಹ್ಮಬಂಧುಗಳು ಈ ಗ್ರಂಥ ಪಠಿಸಲು ಹರಿಭಕ್ತ ಸಾಧು ವೈದಿಕ ಬ್ರಾಹ್ಮಣರ ಅಪ್ಪಣೆ ಕೋರಿ ಅವರ ಅಪ್ಪಣೆಯಿಂದ ಓದಬಹುದು 13 ಪ್ರತಿಷ್ಠಾನಪುರದಲ್ಲಿ ಕೌಶಿಕಾಹ್ವಯ ದ್ವಿಜನು ವ್ಯಾಧಿ ಪೀಡಿತನು ಕುಷ್ಠಿ ನಡಮಾಡಲು ಅಶಕ್ತ ಆತನ ಪತ್ನಿಯು ಸಾಧುಗುಣವತಿ ಬಲುಶ್ರೇಷ್ಠ ಪತಿ ಹೇಳಿದಂತೆ ನಡೆಯುವಳು 14 ಒಂದು ದಿನ ಆ ಬ್ರಾಹ್ಮಣನು ನೋಡಿದ ಬಾಗಿಲಾಚೆ ಬೀದಿಯಲಿ ಹೋಗುತ್ತಿದ್ದ ಸುಂದರಿ ವೇಶ್ಯೆಯೋರ್ವಳಲಿ ಸೋತು ಮನ ಅವಳನ್ನು ತಾನು ಹೊಂದಬೇಕೆನ್ನಲು ಸಾಧ್ವಿಸತಿ ಪತಿಯನ್ನು ಎತ್ತಿದಳು ಸೊಂಟದಲಿ 15 ರಾತ್ರಿ ಕತ್ತಲೆಮಾರ್ಗ ತಿಳಿಯದಲೆ ಪತಿಯನ್ನು ಹೊತ್ತುಕೊಂಡು ಹೋಗುವಾಗ ಪತಿಯ ಕಾಲು ತಾಕಿತು ಹಾದಿಯಲ್ಲಿ ಕಬ್ಬಿಣ ಸಲಾಕದಲ್ಲಿ ಚುಚ್ಚಿಸಿ ಇದ್ದ ಕಟಿ ಸಮೀಪ ಹಾಹಾ 16 ಅನ್ಯಾಯದಿ ಆ ರಾಜ್ಯದರಸ ಆ ಮಹಾಮುನಿಯ ಧನಚೋರನೆಂದು ಶೂಲಕ್ಕೆ ಹಾಕಿಸಿದ್ದ ಆ ಶೂಲ ಕಾಣದೇ ಕೌಶಿಕನ ಕಾಲ್ತಗಲಿ ಬಲು ನೋವಾಗಿ ಮುನಿ ಶಾಪವಿತ್ತರು ಸೂರ್ಯೋದಯಲ್ಲೇ ಸಾಯೆಂದು 17 ಹಾಹಾ ಇದು ಏನು ಮುನಿಗಳಿಗೆ ನೋವಾಯಿತಲ್ಲಾ ಮಹಾತ್ಮರ ಶಾಪ ವೀಣಾಗಲಾರದು ಮಾಂಗಲ್ಯವ ಪತಿ ಅಂತಸ್ಥ ಶ್ರೀಹರಿಯ ಸ್ಮರಿಸಿ ಆ ಪತಿವ್ರತೆ ಹೇಳಿದಳು 18 ಸೂರ್ಯೋದಯವಾಗದಿದ್ದರೆ ಶಾಪವು ಫಲಿಸದು ಸೂರ್ಯೋದಯವಾಗಬೇಡಿ ಎಂದು ಹೇಳಿದಳು ಸಾಧ್ವಿ ಆರ್ಯಧರ್ಮ ಲೋಕಕಾರ್ಯ ಸರ್ವವೂ ಸ್ತಬ್ಧವಾದವು ಎಲೆಲ್ಲೂ ಕತ್ತಲೆಯು ಭಾನು ಉದಯಿಸಲಿಲ್ಲ 19 ಇಂದ್ರಾದಿ ದೇವರ್ಗಗಳು ಬ್ರಹ್ಮನಲಿ ಮೊರೆಯಿಡಲು ಪತಿವ್ರತೆ ಮಹಾತ್ಮನೆ ಮತ್ತೊಬ್ಬ ಪತಿವ್ರತೆಯೇ ಪ್ರತಿ ಮಾಡುವಳು ಅತ್ರಿಋಷಿ ಪತ್ನಿ ಅನಸೂಯಾ ಪತಿವ್ರತಾ ರತ್ನಳಾ ಸಹಾಯ ಕೇಳೆಂದರು ವೇಧ 20 ಶಕ್ರಾದಿ ಸುರರುಗಳು ಅನಸೂಯಾದೇವಿಯಲಿ ಕೋರಿಕೆ ಮಾಡಲು ಆಕೆ ದೇವತೆಗಳ ಸಮೇತ ಧೀರ ಪತಿವ್ರತೆಯಾದ ಕೌಶಿಕಾ ಗೃಹಕೆ ಹೋಗಿ ಪರಿಚಯ ಮಾಡಿಕೊಂಡು ಕೊಂಡಾಡಿದಳಾ ಸಾಧ್ವಿಯ 21 ಮಹಾಭಾಗರು ಇಂದ್ರಾದಿಗಳಿಗೂ ಅನಸೂಯಗೂ ವಿಹಿತೋಪಚಾರ ಪೂಜಾದಿಗಳ ಮಾಡಿ ಆ ಸಾಧ್ವಿ ಮಹಾಭಾಗ್ಯ ಆಗಮನ ಎನ್ನುತ್ತ ಕಾರಣವನು ಬಹು ಹಿತದಲಿ ಕೇಳಿದಳು ತನ್ನ ಸ್ಥಿತಿ ಹೇಳಿ 22 ಸೂರ್ಯ ಉದಿಸುವದಕ್ಕೆ ಪತಿ ಬದುಕಿಸಲ್ಪಡುವನು ಎನ್ನುತೆ ಕೌಶಿಕಾ ಸಾಧ್ವಿಯು ಅನುಮೋದನೆ ಕೊಂಡು ಇನ ಉದಿಸಲಿ ಎಂದ ಅಘ್ರ್ಯ ಕೊಟ್ಟಳು ಮುದದಿ 23 ಸೂರ್ಯ ಮುನಿಶಾಪ ಫಲಿಸಿತು ಬಿದ್ದ ಕೆಳಗೆ ಕೌಶಿಕ ತತ್‍ಕ್ಷಣವೇ ಬದುಕಿ ಎದ್ದ ಪತಿವ್ರತಾ ಶಿರೋಮಣಿ ಅನಸೂಯಾ ದೇವಿ ಪ್ರಭಾವ ಪತಿವ್ರತಾ ಮಹಾತ್ಮೆ ಜ್ವಲಿಸಿತು ಲೋಕದಲ್ಲಿ 24 ಕೌಶಿಕನ್ನ ಬದುಕಿಸಿದ್ದು ಮಾತ್ರವಲ್ಲದೇ ಸರ್ವ ಕುಷ್ಠಾದಿ ರೋಗ ಪರಿಹರಿಸಿ ಯುವವಾಗಿ ಮಾಡಿ ಅಯುಷ್ಯ ಬಹುನೂರು ವರ್ಷಗಳ ಅನುಗ್ರಹಿಸಿ ತುಷ್ಠಿ ಸುಖಜೀವನ ಒದಗಿಸಿದಳ್ ಅನಸೂಯಾ 25 ಅನಸೂಯೆಯ ಪಾತಿವ್ರತ್ಯ ಮಹಾತ್ಮೆಯ ಶ್ಲಾಘಿಸಿ ಏನು ವರ ಕೇಳಿದರೂ ಕೊಡುವವೆಂದು ಸುರಪ ಆನಿಮಿಷರು ಹೇಳಲು ಪತಿವ್ರತಾ ಶಿರೋಮಣಿ ವಿಧಿ ಶಿವ ತನ್ನಲ್ಲವತರಿಸಲೆಂದಳು 26 ತಥಾಸ್ತು ಎಂದ ದೇವತೆಗಳ ವರ ಸತ್ಯಮಾಡೆ ಸುತಪಸ್ವಿ ಅತ್ರಿಗೆ ಹಂಸ ವೃಷಾರೂಡರು ಪ್ರತ್ಯಕ್ಷದಿ ಹೇಳಿದಂತೆಯೂ ಅನಸೂಯ ಅತ್ರಿಗೆ ಪುತ್ರರೆಂದುದಿಸಿದರು ಸೋಮಸ್ತ ಬ್ರಹ್ಮೇಶ ವಿಷ್ಣು 27 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಾಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯನಮೋ ಪ್ರಿಯತಾಂ ಶರಣು 28 ಎರಡನೇ ಅಧ್ಯಾಯ ಶ್ರೀ ದತ್ತಾತ್ರಯ ಪ್ರಾದುರ್ಭಾವ ಸಾರ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಭೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಬ್ರಹ್ಮಾವಿಷ್ಟನು ಸೋಮ ಔಷಧಿಗಳ ರಾಜನಾದ ಉನ್ಮಾದ ಚರ್ಯದಿ ಕೋಪ ಪ್ರಕಟಿಸಿ ಮೆರೆವರು ತಮ್ಮ ಶಿಷ್ಯರೊಡಗೂಡಿ ಶಿವಾವತಾರ ದೂರ್ವಾಸ ಸುಮ್ಮನಸ ಸಜ್ಜನ ಹಿತರು ದುಷ್ಟನಿಗ್ರಹರು 1 ತನ್ನನ್ನ ತಾನೇ ಸುತನಾಗಿ ದತ್ತಮಾಡಿಕೊಂಡನು ವಿಷ್ಣು ಅತ್ರಿ ದಂಪತಿಗೆ ಆದ ಕಾರಣ ಪ್ರಖ್ಯಾತೆ ಉನ್ನಾಮ ದತ್ತಾತ್ರಯ ಕ್ಷೋಣಿ ಯೋಗ್ಯಾಧಿಕಾರಿಗಳಿಂ ಘನಭಕ್ತಿಯಿಂ ಶುಚಿಯಿಂ ಜಪ್ಯ ಸ್ಮರಣೀಯಿಂ ಶ್ರೋತವ್ಯ ಜಯತು 2 ಕಲ್ಯಾಣತಮ ಪೂರ್ಣ ಅಮಲ ಗುಣಗಣ ಸಿಂಧು ಮಾಲೋಲ ಶ್ರೀವಕ್ಷ ಶ್ರೀಶನೇ ಪ್ರಾದುರ್ಭವಿಸಿದನು ಚೆಲುವ ಅನುಪಮ ಸೌಂದರ್ಯಸಾರ ಸರ್ವೋತ್ತಮ ಲೀಲಾನಂದಮಯ ಚಿನ್ಮಾತ್ರಗಾತ್ರ ಭಕ್ತೇಷ್ಟದಾತ 3 ಕಮಲಾಸನಾವಿಷ್ಟ ಸೋಮ ರುದ್ರಾವತಾರ ದೂರ್ವಾಸ ತಮ್ಮ ತಮ್ಮ ಉದ್ಯೋಗಸಾಧನಕೆ ಬೇರೆ ಬೇರೆ ಹೋಗೆ ಸುಮನೋಹರ ರೂಪ ಶ್ರೀಮನೋರಮ ದತ್ತಾತ್ರಯ ಸುಮಹಾ ಯೋಗಿಯಾದ ನಿಸ್ಸಂಗ ಯೋಗೇಶ್ವರೇಶ್ವರ 4 ಅತ್ರೇಯರು ಮೂವರು ಹೀಗೆ ಬೇರೆ ಬೇರೆಯಾಗಿಯೇ ತಮ್ಮ ತಮ್ಮ ರೂಪದಲ್ಲೇ ಇದ್ದರು ಒಂದಾಗಿ ಅಲ್ಲ ಸೋಮ ಶಿವ ದತ್ತರಿಗೆ ಬೇರೆ ಬೇರೆ ಮಂತ್ರವುಂಟು ಸೋಮ ಪಂಚ ಶಿವ ಪಂಚ ದತ್ತ ನವಅಕ್ಷರವು 5 ಪ್ರೋದ್ಯ ದಿವಾಕರ ಪೋಲ್ವ ವರ್ಣವುಳ್ಳ ಶುಭಗಾತ್ರ ಆದಿತ್ಯ ಸಹಸ್ರಾಮಿತ ಮಹೋತ್ಕøಷ್ಟ ತೇಜಃಪುಂಜ ವ್ಯಾಪ್ತ ಸರ್ವತ್ರ ಜ್ಞಾನಾಭಯಕರನು ಬ್ರಹ್ಮಾದಿ ತ್ರಿದಿವ ಸುಬೋಧಕನು ಕಪಿಲನು ದತ್ತಾತ್ರಯ 6 ಇಂಥ ಮಹಾಮಹಿಮನು ಕಪಿಲ ದತ್ತಾತ್ರಯನು ಅಧಿಕಾರಿಗಳಿಗೆ ಅಪರೋಕ್ಷಜ್ಞಾನ ಮೋಕ್ಷದಾತ ಶ್ರೋತೃ, ಮಂತ್ರ, ಧ್ಯಾತೃಗಳಿಗೆ ಕಪಿಲ ದತ್ತಾತ್ರಯ ಭಕ್ತಿ ಮೆಚ್ಚಿ ಸದಾ ಸಂರಕ್ಷಿಸಿ ಇಷ್ಟಾರ್ಥ ಕೊಡುವ 7 ಪದ್ಮ ಭವಾದ್ಯಮರರಿಂ ಧ್ಯಾತ ದತ್ತಾತ್ರಯ ಹರಿ ಮೇದಿನಿ ನರರಂತೆ ಅವತಾರ ಲೀಲೆ ಚರಿಸಿ ಅದ್ಭುತ ಯೋಗಾನುಷ್ಠಾನದಿ ಇರುತಿರೆ ಜನರು ಈತನ ಸೌಂದರ್ಯ ಯೋಗಸಾಮಥ್ರ್ಯ ಹೊಗಳಿದರು 8 ಸಹಸ್ರಾರು ಋಷಿಪುತ್ರ ಬ್ರಹ್ಮಚಾರಿಗಳು ಬಂದು ಅಹರ್ನಿಶಿ ಯೋಗೇಶ್ವರೇಶ್ವರ ದತ್ತನಾಶ್ರಮದಿ ಬಹಳುತ್ಸಾಹದಲಿ ಸುತ್ತು ಮುತ್ತು ಗುಂಪುಗೂಡಿ ಮಹಾಯೋಗಾಭ್ಯಾಸಕ್ಕೆ ಚ್ಯುತಿಯ ಕಲ್ಪಿಸಿದರು 9 ಯೋಗ್ಯರು ಸಜ್ಜನರು ಈ ಭಕ್ತ ಋಷಿಕುವರರು ಯೋಗ್ಯಸಾಧನೆ ಅವರವರ ಆಶ್ರಮದಲ್ಲಿಯೇ - ಗೈಯಲಿ ಬೇಕೆಂದು ಅವರುಗಳು ಹೋಗೋ ಉಪಾಯ ನಿಶ್ಚೈಸಿ ಮುಳುಗಿದ ದತ್ತನು ಸರೋವರದೊಳು 10 ಸುರಮಾನದಿ ಸಾವಿರವರ್ಷ ಭಗವಾನ್ ದತ್ತನು ಸರೋವರದೊಳಿದ್ದನು ಹೊರಜನಕ್ಕೆ ಕಾಣದೆ ಆ ಋಷಿಪುತ್ರರು ತೀರದಲಿ ಇಕೋ ಈಗ ನಾಳೆ ಬರುವನು ಮೇಲೆ ಎಂದು ಕಾಯುತ್ತಿದ್ದರು ದೃಢದಿ 11 ಜಲಧಿ ಉಕ್ಕಿ ಹರಿದು ಕ್ಷೋಣಿಯ ಮುಳುಗಿಸದೆ ಜಲಮಧ್ಯ ತಾನಿದ್ದು ಕಾಯುವ ವಡವಾ ಮುಖಾಗ್ನಿ ಜಲಮಧ್ಯದಿ ಈಗ ಹೊಕ್ಕಿರುವ ದತ್ತಾತ್ರಯನು ಮುಳುಗಿರುವುದು ಆಶ್ಚರ್ಯವಲ್ಲ ಈರ್ವರೂ ಏಕ 12 ಬಲುದೀರ್ಘ ದೇವವರ್ಷಗಳು ಸಾಸಿರವಾದರೇನು ಶೀಲತಮ ವರವಾಯುವು ವರುಣನು ಬುಧಾದಿ ಜಲಾಭಿಮಾನಿಗಳು ಕಿಂಕರರಾಗಿ ಇರುತಿಹರು ಜಲಶಾಯಿ ನಾರಾಯಣ ಅವತಾರ ದತ್ತನಿಗೆ 13 ಒಂದು ದಿನ ಕೆರೆನೀರು ಚಲಿಸಲು ಸಂತೋಷದಿ ಬಂದರೂ ಬಂದರೂ ಎಂದು ಕೂಗೆ ಋಷಿಕುವರರು ಇಂದಿರಾಪತಿ ದತ್ತ ಮೇಲೆದ್ದು ಬಂದ ಬದಿಯಲ್ಲಿ ಇಂದಿರಾಂಗಿ ನಾರೀಮಣಿ ಓರ್ವಳ ಆಲಿಂಗಿಸುತ 14 ಯಾರನ್ನೂ ಲೆಕ್ಕಿಸದೆ ಕಾಮವಿಲಾಸ ಕೇಳಿಯ ಆ ಸ್ತ್ರೀಯೊಡನೆ ಮಾಡುತ್ತಿದ್ದುದು ಕಂಡು ಯುವಕರು ಯೋಗಿ ಹೀಗಾದರೆ ಎನ್ನುತ ತ್ವರಿತ ತೆರಳಿದರು ಜುಗುಪ್ಸೆಯಲ್ಲಿ ತ್ಯಜಿಸಿ 15 ಆ ಪುಣ್ಯವಂತ ಋಷಿಪುತ್ರರು ತಿಳಕೊಳ್ಳಲಿಲ್ಲ ಆ ಸ್ಛುರದ್ರೂಪಿಣಿ ನಾರಿ ಸಾಕ್ಷಾತ್ ಲಕ್ಷ್ಮೀದೇವಿಯೆಂದು ವಿಪುಲ ಮನ ಹರುಷ ತೋರಿಸಿ ದತ್ತಾತ್ರಯನು ಕೈಪಿಡಿದು ಲಕ್ಷ್ಮಿಯ ಕರೆದುಹೋದ ಆಶ್ರಮಕೆ 16 ಯಾವ ತನ್ನಾಶ್ರಮದಿ ಸ್ವಾಧ್ಯಾಯ ಪ್ರವಚನಗಳ್ ದಿವ್ಯ ಯೋಗ ಅಭ್ಯಾಸ ಶಿಷ್ಯರ್ಗೆ ಶೀಕ್ಷಾದಿಗಳ್ ಯಾವಾಗಲೂ ಹಿಂದೆ ನಡೆಸುತ್ತಿದ್ದನೋ ಅಲ್ಲಿ ಈಗ ದೇವಿಯೊಡನೆ ಲೀಲಾವಿಲಾಸಗಳ ತೋರಿಸಿದ 17 ಮಂದ ಧೀಗಳು ಈ ವಿಡಂಬನೆ ಕಂಡು ಮೋದದಲಿ ಶ್ರೀದತ್ತ ಈ ರೀತಿ ಆದನಲ್ಲಾ ಎಂದು ಮಾತನಾಡೆ ಸುಧೀಗಳು ಬೃಹಸ್ಪತ್ಯಾದಿಗಳು ದತ್ತಾತ್ರಯನು ಮೋದಚಿನ್ಮಯ ನಿರ್ದೋಷ ಹರಿ ಶ್ರೀಶನೆ ಎಂದರÀು 18 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯ ನಮೋ ಪ್ರಿಯತಾಂ ಶರಣು 19 -ಇತಿ ಎರಡನೇ ಅದ್ಯಾಯ ಸಂಪೂರ್ಣಂ - ಮೂರನೇ ಅದ್ಯಾಯ ಸಂಪತ್‍ಲಕ್ಷ್ಮೀ ವೃತ್ತಾಂತ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೊಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಸುರಪ ಜಂಭಾಸುರನಿಂದ ಅಪಜಯವ ಕೊಂಡು ಸುರಗುರು ಪ್ರೇರಣೆಯಿಂ ದತ್ತಾತ್ರಯನಲಿ ಹೋಗಿ ಶರಣು ಹೊಕ್ಕು ಸೇವಗೈಯಲು ಆಗ ಅವನನ
--------------
ಪ್ರಸನ್ನ ಶ್ರೀನಿವಾಸದಾಸರು
ಮೊರೆಹೊಕ್ಕೆ ಹರಿ ನಿಮ್ಮ ಚರಣಕಮಲವ ನಾನುಮರೆಯದೆ ಸಲಹೆನ್ನ ವರದಾ ಪಕರಿ ಧ್ರುವ ಪ್ರಹ್ಲಾದ ವಿಭೀಷಣರ ರಕ್ಷಿಸಿದೆಪರಂದೇವಿ ವಲ್ಲಭನೆ ವರದಾ ಅ ಎಂಬತ್ತು ನಾಲ್ಕು ಲಕ್ಷ ಜೀವರಾಶಿ ಯೋನಿಯೊಳುಹಂಬಲಿಸಿ ನಾ ಬಂದೆ ವರದಾಅಂಬುಜೋದ್ಭವನ ಬರೆಹವ ಮೀರಲಾರದೆ ನರಬೊಂಬೆ ಗರ್ಭದೊಳಿದ್ದೆ ವರದಾ 1 ತುಂಬಿದ್ದ ಕೀವು ಮಲಮೂತ್ರ ರಕ್ತದಿಂ ಹೊರಳುವಸಂಭ್ರಮದೊಳಿದ್ದೆ ನಾ ವರದಾಒಂಬತ್ತು ಮಾಸವು ಕಳೆದು ಗುಂಡಿಯೊಳಿಳಿದು ಈಕುಂಭಿನಿಗೆ ನಾ ಬಂದೆ ವರದಾ 2 ನಸುನುಡಿಯನು ಕಲಿತು ನಸುನಗೆಗಳ ನಕ್ಕು ಈ ಕುಶಲದಾಟವ ಕಲಿತೆ ವರದಾಎಸೆವ ಯೌವನ ಬಂದು ಶಶಿಮುಖಿಯರೊಳು ಕಾಮತೃಷೆಗೆ ನಾನೊಳಗಾದೆ ವರದಾ 3 ನುಸುಳಿಸುವ ಚಾಂಡಾಲ ಗುಣವನೆಣಿಸದೆ ಕಾಮವಶನಾಗಿ ನಾನಿದ್ದೆ ವರದಾಉಸುರಲೆನ್ನಳವಲ್ಲ ಬೆಸನಿತ್ತು ಸಲಹೆನ್ನಬಿಸರುಹಾಕ್ಷನೆ ಕಂಚಿ ವರದಾ 4 ಗುರು ಹಿರಿಯರ ಕಂಡು ಸರಿಸಮಾನದಿ ನಾನುಬೆರೆದುಕೊಂಡಿದ್ದೆನೋ ವರದಾನರರ ಕೊಂಡಾಡಿ ನಾಲಗೆಯೊಣಗಿ ಅತಿಯಾಗಿನರನರಳಿ ಬೆಂಡಾದೆ ವರದಾ 5 ಕಾಸಿಗಾಸೆಯ ಪಟ್ಟು ಸಹಸ್ರ ಲಕ್ಷದ ಪುಸಿಯಬೇಸರಿಸದೆ ಬೊಗಳಿದೆ ವರದಾವಿಶೇಷ ನಿಮ್ಮಂಘ್ರಿಯ ನಂಬಲಾರದೆ ಕೆಟ್ಟದೋಷಕನು ನಾನಾದೆ ವರದಾ 6 ಪಂಚೇಂದ್ರಿಯಗಳೊಳಗೆ ಸಂಚರಿಸುವೀ ಮನವುಕೊಂಚ ಗುಣಕೆಳೆಯುತಿದೆ ವರದಾಪಂಚತ್ರಿಂಶತ್ಕೋಟಿ ಭೂಮಂಡಲದೊಳೆನ್ನಂಥಪಂಚಪಾತಕನುಂಟೆ ವರದಾ 7 ಮುಂಚೆ ಶ್ರೀ ಹರಿಯೆ ನಿಮ್ಮ ವರಧ್ಯಾನ ಮಾಡುವರಪಂಚೆಯಲ್ಲಿರಿಸೆನ್ನ ವರದಾಪಂಚಬಾಣನ ಪಡೆದ ನೆಲೆಯಾದಿ ಕೇಶವ ಈ ಪ್ರಪಂಚವನು ಬಿಡಿಸೆನ್ನ ವರದಾ 8
--------------
ಕನಕದಾಸ
ಮೋಕ್ಷವಿಲ್ಲಾ | ಗುರು ಕೃಪೆ ವಿನಾ ಪ ಮಾನ್ಯ ಸ್ವದೇಶದಿ ಧನ್ಯ ವಿದೇಶದ | ಉನ್ನತ ಕುಲದುತ್ಪನ್ನ ನೋಡಲು | ಸನ್ನುತ ಕರ್ಮಗಳನ್ನಸುವ ಸಂ | ಪನ್ನನು ಗುಣದಲಿ ಮುನ್ನಾಗೇನು 1 ಪುಸ್ತಕ ಹಿಡಿಯಲು ವಸ್ತು ಬೃಹಸ್ಪತಿ | ವಿಸ್ತರಿಸ್ಹೇಳುವ ಶಾಸ್ತ್ರದರ್ಥವ | ದುಸ್ತರ ಯೋಗದ ನಿಸ್ತರಿಸುವ ಘನ | ಪ್ರಸ್ತುತ ತಪಸಭ್ಯಸ್ತ್ರಾಗೇನು 2 ಸುಂದರಿ ಮಾನಿನಿಗೊಂದೇ ಮಂಗಳ | ಹೊಂದದೇ ಆಭರಣೆಂದೇನು ಫಲ | ಇಂದಿರೆ ಪತಿ-ವಲುವಂದದಿ ಭಾವದಿ | ತಂದೆ ಮಹಿಪತಿಗೊಂದಿಸದನಕಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮೋದ ಪ್ರದ ನರಹರಿ | ವಿಠಲ ಪೊರೆ ಇವಳಾ ಪ ಪಾದ್ಯ ಪ್ರ | ಹ್ಲಾದ ರಕ್ಷಕನೇ ಅ.ಪ. ನೀನೇವೆ ಗತಿಯೆಂದು | ಆನೇಕ ವಿಧ ನಿನ್ನಸಾನುರಾಗದಿ ಪೊಗಳ್ವ | ಮಾನುನೀ ಮಣಿಗೇಜ್ಞಾನೋದಯವ ಗೈದು | ಕಾಣಿಸೋ ಸದ್ಗತಿಯಮಾನ ಮಾನ್ಯದ ಹರಿಯೆ | ಆನತೇಷ್ಟದನೇ 1 ಜೀವ ಅಸ್ವಾಂತಂತ್ರ | ದೇವ ನಿಜ ಸ್ವಾತಂತ್ರಈ ವಿಧದ ಸುಜ್ಞಾನ | ಓದಿ ಪಾಲಿಸುತಾ |ಕೇವಲಾನಂದ ಮಯ | ದೇವ ತವ ಸೇವೆಯನುಭಾವ ಭಕ್ತಿಯಲಿಂದ | ಗೈದ ಮನನೀಯೋ2 ನೆರೆಹೊರೆಯ ಜನರೇನು | ಮರಳಿ ಬಹು ಬಾಂಧವರುಹರಿ ನಿನ್ನ ಪರಿವಾರ | ಸರಿಯೆಂಬ ಮತಿಯಾಕರುಣಿಸುತ ತರಳೆಗೇ | ಪರುಷಾರ್ಥ ಸಾಧನದಪರಿಯನರುಹುತ ಪೊರೆಯೊ | ವರಲಕ್ಷ್ಮಿ ಪತಿಯೇ 3 ಸಾಧನ ಸುಜೀವಿಗಳ | ಕಾದು ಬಾಯ್ದೆರೆಯುತಿರೆಮೋದ ಬಡಿಸುವುದು ಚಿತ್ | ಸಾಧು ಜನವಂದ್ಯಾಮೋದ ಮುನಿ ಪಾದಾಬ್ಜ | ಆದರದಿ ವಂದಿಪಳೋಹೇ ದಯಾಂಬುಧೆ ಮನದಿ | ಮೈದೊರೊ ಹರಿಯೇ 4 ಬೋವ ನೀನಾದೇನೀ ವೊಲಿಯಲಿನ್ನೇನು | ಆವುದಾಸಾಧ್ಯವೋಪೂವಿಲ್ಲನಯ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮೋದದಲಿರಬೇಕಮ್ಮ | ಸುಮ್ಮನೆ ನೀನು ಮೋದದಲಿರಬೇಕಮ್ಮ ಪ. ಮೋದ ಶ್ರೀ ಗುರುಗಳ ಚರಣ ಕಮಲವನ್ನು ಮೋದದಿಂದಾಶ್ರಯಿಸಿ ಸುಖದಲಿರಲಿಬೇಕು ಲೋಕದ ಜನಗಳ ನುಡಿಗಳ ಲೆಕ್ಕಿಸದೆ ಲೋಕವಂದ್ಯನ ಚರಣ ಕಮಲವ ಸ್ಮರಿಸುತ ಅ.ಪ. ಪರಮಾತ್ಮನ ಕೃಪೆಗೆ ಕಾರಣವಿದು ಗುರುಕರುಣದ ಬಲವು ಅರಿಯದ ಮನುಜರ ಬಿರುನುಡಿಗೆ ಮನ ಕೊರಗಿಸದಂದದಿ ಹರುಷಪಡಲಿಬೇಕು 1 ಎಚ್ಚತ್ತು ನಡಿಯಬೇಕು | ಶ್ರೀ ಗುರುಸೇವೆ ಇಚ್ಛೆಯಿಂ ಮಾಡಬೇಕು ತುಚ್ಛ ಮಾತುಗಳಿಗೆ ಮನಕೊಡದೆ ಹರಿ ಮೆಚ್ಚುವಂದದಿ ಗುರು ಇಚ್ಛೆಯನರಿತು ನಡೆದು 2 ವಂದನೆ ನಿಂದ್ಯಗಳ | ಮೋಕ್ಷಾರ್ಥಿಯು ಒಂದಾಗಿ ಭಾವಿಸುತ ಮಂದರೋದ್ಧರನ ಮಾಯಕೆ ಮನದಿ ಮೋದಿಸುತ ಮಂದರಂದದಿ ಮನುಜರಿಗೆ ತೋರುತಲಿದ್ದು 3 ಮಾನವ ಜನ್ಮ ಸಾಧನ ಜನ್ಮವಮ್ಮ ಸಾಧಾರಣವಲ್ಲ ಸಾಧು ಸಜ್ಜನಸಂಗ ಸಾಧಿಸಿ ದುಷ್ಕರ್ಮ ಛೇದಿಸಬೇಕಮ್ಮ 4 ಚಿಂತೆಯನಳಿಯಬೇಕು | ಶ್ರೀ ಗುರು ಕರುಣ ಅಂತರ ತಿಳಿಯಬೇಕು ಸಂತತ ಗೋಪಾಲಕೃಷ್ಣವಿಠ್ಠಲನ ಅಂತರಂಗದಿ ಭಜಿಸಿ ಮುಕ್ತಿ ಸಾಧಿಸಬೇಕು 5
--------------
ಅಂಬಾಬಾಯಿ
ಯಚ್ಚತ್ತು ನಡಿ ಕಂಡ್ಯ ಮನವೇ ನಮ್ಮ ಅಚ್ಯುತನಂಘ್ರಿಗಳನು ನೆನೆ ಮನವೇ ನೀ ನೆನೆ ಕಂಡ್ಯ ಮನವೇ ಪ ಆಡದಿರಪವಾದಗಳನು ನೀನು ಕೊಂಡಾಡದಿರು ಚಿಲ್ಲರೆ ದೈವಗಳನು ಬೇಡಾಡದಿರುಭಯ ಸೌಖ್ಯಗಳನು ನೀ ಮಾಡಿ ಕಂಡ್ಯ ದುರ್ಜನರ ಸ್ನೇಹವನ್ನು ಸಜ್ಜನರ ದ್ವೇಷವನು 1 ಹಾಳು ಹರಟಿಗ್ಹೋಗ ಬ್ಯಾಡ ಕಂಡ ಕೂಳುಗಳನು ತಿಂದು ವಡಲ್ಹೊರಿಯ ಬೇಡ ಕಾಲ ವೃಥಾ ಕಳಿಯ ಬ್ಯಾಡ ನಮ್ಮ | ಶ್ರೀ ಹರಿ ದಯಮಾಡಾ 2 ನಾನು ಯೆಂಬುದು ಬಿಡು ಕಂಡ್ಯಾ ಎನ್ನ ಮಾನಾಭಿಮಾನದ ಹರಿಯನ್ನು ಕಂಡ್ಯಾ ಜ್ಞಾನಿಗಳೊಡನಾಡು ಕಂಡ್ಯಾ ವಿಷಯ ಬೀಳುವಿ ಯಮಕೊಂಡಾ 3 ಅನ್ಯಸ್ತ್ರೀಯರ ನೋಡಬ್ಯಾಡಾ ಹಿಂದೆ ಮಣ್ಣು ಕೂಡಿರುವರೆಗೊ ಕೇಳೊ ಮೂಢಾ ಅನ್ಯಶಾಸ್ತ್ರವನೋದ ಬ್ಯಾಡಾ ನಮ್ಮ ಮೈಮರೆದಿರ ಬ್ಯಾಡಾ4 ನರಜನ್ಮ ಬರುವೋದು ಕಷ್ಟ ಅಮ್ಮ ಹಿರಿದು ನೋಡೆಲೋ ವಿಪ್ರತ್ವವು ಶ್ರೇಷ್ಠ ಮರಳಿ ಬಾರದು ಉತ್ಕøಷ್ಟ ನಮ್ಮ ಕೇಳೆಲವೋ ಮರ್ಕಟ 5 ಗೋವಿಪ್ರರ ಸೇವೆ ಮಾಡೋ ಸೋಹಂ ಭಾವಗಳನು ಬಿಟ್ಟು ದಾಸತ್ವ ಕೂಡೋ ಕೇವಲ ವೈರಾಗ್ಯ ಮಾಡೋ ಎಂಟು ಲಜ್ಜೆಯನೀಡ್ಯಾಡೋ6 ಕಷ್ಟ ಪಡದೆ ಸುಖ ಬರದು ಕಂ ಗೆಟ್ಟ ಮ್ಯಾಲಲ್ಲದೆ ಕಷ್ಟ ತಿಳಿಯದು ದುಷ್ಟ ವಿಷಯದಾಶೆ ಜರಿದು ವಿಜಯ ವಿಠಲನೆನ್ನದೆ ಮುಕ್ತಿಯು ಬರದೂ, ಕೂಗೆಲವೊ ಬ್ಯಾದೆರದು 7
--------------
ವಿಜಯದಾಸ
ಯತಿರಾಜಂ ಭಜರೇ ಮಾನಸಪತಿತೋದ್ಧಾರಕ ಯದುಗಿರಿ ನಿಲಯ ಪಶ್ರೀಮದ ದಾಶರಥೀನುತ ಚರಣಂಯಾಮುನಾ ಮುನಿ ಸಂಭಾವಿತ ಕರುಣಂಶ್ರೀಮದನಂತಂ ಕರುಣಾಭರಣಂರಾಮಾಯಣ ಮೂಲತತ್ವ ವಿಸ್ತರಣಂ 1 ಸಕಲವೇದ ಶಾಸ್ತ್ರಾಗಮ ನಿಪುಣಂವಕುಳಾಭರಣ ಪಾದಾಂಬುಜ ಭರಣಂಮುಕುಳಿತ ವೈಷ್ಣವ ತತ್ವೋದ್ಧರಣಂ[ವಿಕಸಿತ ವಿಶಿಷ್ಟಾದ್ವೈತ ವಿಶೇಷಂ] 2 ವ್ಯಾಸ ತತ್ವಸಾರಾಬ್ಧಿ ವಿಸ್ತರಣಂವಾಸುದೇವಕೃತ ಗೀತೋದ್ಧರಣಂವಾಸವನುತ ಮಾಂಗಿರಿಹರಿ ಚರಣಂದಾಸದಾಸೀಜನ ಪಾತಕಹರಣಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯತಿರಾಜಾ - ಪಾಲಿಸೊ ಎನ್ನ - ಯತಿರಾಜಾ ಪ ಯತಿರಾಜಾ ಪಾಲಿಸೊ ಎನ್ನ - ಅಹಂಮತಿಯ ಕಳೆದು ಗುರುವರೇಣ್ಯ | ಆಹ ಸತತದಿ ಹರಿ ಧ್ಯಾನ | ರತನನ ಮಾಡಿ ಸದ್ ಗತಿಯ ಸೇರುವಂಥ | ಪಥದಲ್ಲಿರಿಸೊ ರಾಜಅ.ಪ. ವೀಣಾ ವೆಂಕಟ ನಾಮಾಭಿಧ | ಕುಂಭಕೋಣ ಪುರದೊಳು ಮೆರೆದಾ | ಓವಿಜ್ಞಾನಿ ಸುಧೀಂದ್ರರೊಲಿಸಿದಾ | ಬಹುಮಾನವಾಗಿ ಶಾಲು ಪಡೆದಾ | ಆಹಏನು ಇದಾಶ್ಚರ್ಯ | ಮಾನ ಉಳಿವದೆಂತುನಾನೊಂದು ಕಾಣೆ | ನೆನುತಾವಸನ ಮುಂದಿಟ್ಟ 1 ಅಂದಿನಂದಿನ ಪಾಠಕ್ಕೆಲ್ಲ | ಟೀಕೆಛಂದಾಗಿ ಬರೆದಿರುವಲ್ಲ | ನಮ್ಮಹಿಂದಿನ ಸಂಶಯವೆಲ್ಲ | ನೀಗಿಮುಂದೆ ಜರುಗಿತು ಪಾಠವೆಲ್ಲ | ಆಹಎಂದು ನಮ್ಮ ವಸನ | ಕಂದ ನಿನ್ನಯ ಮೇಲೆಹೊಂದಿಸಿ ಮುದದಿಂದ | ಬಂದೆವೆಂದರ ಶಿಷ್ಯ 2 ಗುರುವು ಪಟ್ಟರು ಬಲು ಮೋದಾ | ಸುಧಾಪರಿಮಳಾರ್ಯರೆಂಬ ಬಿರುದಾ | ಪೊಂದಿಇರಲು ಕಾಲಾಂತರದಿಂದಾ | ಪಡೆದೆವರ ಯತ್ಯಾಶ್ರಮವವರಿಂದಾ | ಆಹಮೆರೆಸಿದೆ ರಾಮರ | ವರ ವೈಭವದಿಂದದುರುಳ ಮಾಯ್ಗಳಮತ | ತರಿದಿಟ್ಟೆ ವಾದದಿ 3 ಬೇಗೆಯಿಂದಳುತಿದ್ದ ಶಿಶುವಿಗೆ | ಚೈಲಆಗಸದೊಳು ನೀನು ನಿಲಿಸಿದೆ | ಹಾಂಗೆಮಾರ್ಗದಿ ಪ್ರಸವಿಸದವಳೀಗೆ | ನೀರನುಗಮಿಸುತ ನೀನು ಪೊರೆದೇ | ಆಹನಿಗಮಾಲಯ ವಾಸ | ರಾಘವೇಂದ್ರ ಗುರುವೆಬಗೆ ಬಗೆ ಗ್ರಂಥವ | ಮಿಗಿಲಾಗಿ ರಚಿಸೀದೆ 4 ಪಂಗು ಬಧಿರ ಮೂಕ ಜನರು | ನಿಮ್ಮಹಿಂಗದೆ ಬಂದು ಸೇವಿಪರು | ಬಂದಭಂಗಗಳೆಲ್ಲ ನೀಗುವರು | ಯತಿಪುಂಗನೆ ನಿನಗೆ ಸರಿಯಾರು | ಆಹಗಂಗಾ ಜನಕ ರೂ | ಪರಿಗಳು ನಾಲ್ಕರಿಂಅಂಗಲಾಚಿಪ ಜ | ನಂಗಳ ಪೊರೆಯುವ 5 ಅಘ ಪತಿ ಗೋ | ವಿಂದನ ಮಂದಿರಬಂದು ಸೇರುವುದಕ್ಕೆ | ಅಂದ ಸೋಪಾನವು 6 ವರಹಸುತೆ ತೀರ ವಾಸಾ | ಭಕ್ತಸುರತರುವೆ ನಿನ್ನ ದಾಸಾ | ನಾಗಿಇರಿಸೊ ಭೂ ತಳಾಧೀಶ | ಬೇಡ್ವೆವರ ಒಂದ ನಾನಿನ್ನ ಅನಿಶ | ಆಹಗುರುಗೋವಿಂದ ವಿಠಲನ | ಚರಣಾರವಿಂದವನಿರುತ ಭಜಿಸುವಂಥ ವರಮತಿ ಕೊಟ್ಟನ್ನ7
--------------
ಗುರುಗೋವಿಂದವಿಠಲರು
ಯಂತ್ರೋದ್ಧಾರಕ ರಾಯರ ಸ್ಮರಣೆಯ ಮಾಡಿ ಅಂತರಾತ್ಮನ ದಾಸರ ಪ ಸಂತತ ಮನದಿ ನಿಶ್ಚಿಂತೆಯೊಳ್ ಸ್ಮರಿಸಲು ಸಂತಾಪಗಳ ಕಳೆದು ಚಿಂತಿತಾರ್ಥವನೀವ ಅ.ಪ ಶರಧಿಯ ನೆರೆದಾಟಿದ ಕಾಲುವೆಯಂತೆ ನಲಿದು ಲಂಕೆಯ ಸಾರಿದ ಬಲಶಾಲಿ ಲಂಕಿಣಿಯು ಪುರವ ಕಾಯುವ ಶ್ರಮ ಹರಿಸಿ ಸೂಕ್ಷ್ಮದ ರೂಪ ಧರಿಸಿ ಪುರವ ಪೊಕ್ಕು ಪರಿಪರಿ ಕೋಟೆಗಳಿರವನೆ ಕಾಣುತ ಕರಿ ಹಯ ರಥ ಶಾಲೆಗಳ ಪರಿಕಿಸುತ ಖಳನರಮನೆ ಪೊಕ್ಕರು ಫಲವಿಲ್ಲದೆ ಕಡೆಗೆ ಅಶೋಕ ವನದೊಳು ಚರಿಸಿದ1 ವನದ ಮಧ್ಯದೊಳಿರಲು ರಕ್ಕಸ ಬಹು ಘನತೆಯಿಂದಲಿ ಬರಲು ಬಣಗು ದೈತ್ಯನ ತೃಣಕೆಣೆಮಾಡಿ ನುಡಿಯಲು ಪವನ ತನಯ ನೋಡಿ ಮನದಿ ಸ್ತೋತ್ರವ ಮಾಡಿ ಮನದೊಳು ಶ್ರೀ ರಘುವರನನು ಧ್ಯಾನಿಸಿ ಘನ ಮುದ್ರಿಕೆ ಮುಂದಿಡಲಾ ಜಾನಕಿ ನಯನಂಗಳ ಕಂಬನಿಗರೆಯುತ ಮುಂದಿಹ ಹನುಮನೊಳಿಂತೆನೆ ಲಾಲಿಸಿದ 2 ಯಾವ ರಾಯರ ದೂತನೋ ಪೇಳಯ್ಯ ಬಲು ಸಾವಧಾನದಿ ಮಾತನು ಶ್ರೀರಾಮಚಂದ್ರ ನಿನ್ನ ಸೇರಿ ಮಿತ್ರತ್ವಮಾಡೆ ಕಾರಣವೇನುಂಟು ಸಾವಧಾನದಿ ಪೇಳು ಯಾರನುಮತಿಯಿಂದೀ ಪುರ ಪೊಕ್ಕೆಯೊ ಯಾರಿಗಾಗಿ ಈ ವಾನರ ರೂಪವು ಪೋರನಂತೆ ಕಾಣುವಿ ನಿನ್ನ ವಚನವು ಬಾರದು ಮನಕೆಂದೆನಲು ಮಾತಾಡಿದ 3 ಜನಕ ಜಾತೆಯೆ ಲಾಲಿಸು ದೈತ್ಯರ ಸದೆ ಬಡಿಯುವನೆಂದು ಭಾವಿಸು ಇನಕುಲ ತಿಲಕನ ಚರಣಸೇವೆಯು ಮಾಡೆ ಜಲಜಾಕ್ಷನಾಜ್ಞದಿಂದ ಭುವಿಯೊಳು ವಾನರ- ಕುಲದೊಳಗವತರಿಸುವ ಶತ ಸಂಖ್ಯೆಯೊಳಿರುತಿರೆ ಗಿರಿವನಚರಿಸುವ ಸಮಯದಿ ಜಲಜಾಕ್ಷಿಯನರಸುತ ರಾಘವಬರೆ ಚರಣಾಂಬುಜಗಳಿಗೆರಗಿದೆವೆಂದೆನಲು 4 ಜಲಜಾಕ್ಷಿ ನಿಮ್ಮ ಕಾಣದೆ ಮನದೊಳಗೊಂದು ಘನವಾದ ಚಿಂತೆ ತಾಳಿದೆ ಜನಕ ಜಾತೆಯ ಪಾದಾಂಬುಜವ ಕಾಣದೆ ಮರಳಿ ಪುರವ ಸಾರುವದೆಂತು ರವಿಸುತನಾಜ್ಞೆ ಮೀರ- ಲರಿಯದೆ ಈ ಉಪವನದೊಳಗರಸುವ ಸಮಯದಿ ಶ್ರೀವರನಿಯಮಿಸಿ ಪೇಳಿದ ಪರಿಯನು ತಿಳಿಯುತ ಪರಮಾನಂದದಿ ರಘುವರನ್ವಾರ್ತೆಯ ಲಗುಬಗೆ ಪೇಳಿದ 5 ಕುರುಹು ಕೊಡಮ್ಮ ಜಾನಕಿ ಮನಸಿನ ಚಿಂತೆ ಬಿಡುಬೇಗ ಭದ್ರದಾಯಕಿ ಕ್ಷಣದೊಳ್ ಶ್ರೀರಾಮನೊಳು ಇನಿತೆಲ್ಲವನು ಪೇಳಿ ಕ್ಷಣದಿ ರಕ್ಕಸರನೆಲ್ಲ ನೆಲಸಮ ಮಾಳ್ಪೆನೆಂಬೀ ಅಣುಗನಿಗಪ್ಪಣೆಯನು ಪಾಲಿಸೆನಲು ಅನುಮತಿನೀಡಿದ ಅವನಿಜೆಗೊಂದಿಸಿ ಕ್ಷಣದೊಳು ವನಭಂಗವ ಮಾಡಿದ ನುಡಿ ಕೇ- ಳಿದ ರಾವಣನ ಪುರವ ಅನಲನಿಗಾಹುತಿ ಇತ್ತ 6 ಜಯ ಜಯ ಜಯ ಹನುಮಂತ ಜಯ ಜಯ ಬಲವಂತ ಜಯ ಶ್ರೀರಾಮರ ಪ್ರಿಯದೂತ ಜಯ ಜಯ ಜಯವೆಂದು ಸನಕಾದಿಗಳು ಪೊಗಳೆ ಅನಲ ಸಖನ ಸೂನುವನು ಸ್ತೋತ್ರದಿಂದ ಪಾಡೆ ಕಮಲಜಾದಿ ಸುರಗಣ ತಲೆದೂಗೆ ಶ್ರೀ ಕಮಲನಾಭ ವಿಠ್ಠಲನನು ಪಾಡುತ ಅಮಿತ ಪರಾಕ್ರಮವಂತನ ಪೊಗಳುತ ನಮಿಸಿ ಶ್ರೀರಾಮರ ಗುಣಗಳ ಪೊಗಳುವ 7
--------------
ನಿಡಗುರುಕಿ ಜೀವೂಬಾಯಿ
ಯಂತ್ರೋದ್ಧಾರಕನೆ | ಪಾಲಿಸೊ ಯಂತ್ರೋದ್ಧಾರಕನೆ ಪ. ಸಂತತ ತವ ಪದಕ್ರಾಂತಳಾಗಿರುತಿರೆ ಇಂತು ನಿರ್ದಯವೇಕೊ ಸಂತಸದಲಿ ಪೊರೆ ಅ.ಪ. ಯತಿಗಳಿಂದ ಸಂಸ್ಥಿತನೆನಿಸುತ ಅ- ಪ್ರತಿಮ ಮಹಿಮ ಈ ಕ್ಷಿತಿಯೊಳು ನೆಲಸಿಹ 1 ತುಂಗ್ರಭದ್ರ ತೀರ ಮಂಗಳ ಮಹಿಮನೆ ಕಂಗೊಳಿಸೆನ್ನಂತರಂಗದಲಿ ನೆಲಸುತ 2 ಮಂತ್ರಿವರ್ಯ ಮಾಹಂತ ಹರಿಪ್ರಿಯ ಎಂತು ವ್ಯಾಸರಿಲ್ಲಿ ಯಂತ್ರದಿ ಬಿಗಿದರೊ 3 ಹನುಮ ಭೀಮ ಶ್ರೀ ಮುನಿ ಮಧ್ವಾರ್ಯನೆ ಸನುಮತದಲಿ ಎನ್ನ ಮನದಿಚ್ಛೆ ಸಲಿಸೊ 4 ಬೆಟ್ಟದೊಡೆಯ ಬಹು ನಿಷ್ಠೆಯೊಳ್ ಸ್ತುತಿಸುವೆ ಇಷ್ಟ್ಯಾಕೆ ತಡೆ ಹಂಪೆ ಪಟ್ಟಣವಾಸಿಯೆ 5 ಕಾಮಿತ ಫಲದನೆ ಕಾಮಿನಿಗುಂಗುರ ನೇಮದಿಂದಿತ್ತೆಯೊ ರಾಮನ ದೂತನೆ 6 ಎಷ್ಟು ಮಾನವೊ ಬೆಟ್ಟೆಲಿ ಜಪಮಣಿ ದೃಷ್ಟಿಸೊ ಗೋಪಾಲಕೃಷ್ಣವಿಠ್ಠಲ ದಾಸ 7
--------------
ಅಂಬಾಬಾಯಿ
ಯದುನಾಥ ಯದುನಾಥ ಮುದದಿಂದಲಿ ಪೊರೆ ಪದುಮಿಣಿ ವಲ್ಲಭ ಪ. ಪೊಡವಿಯೊಳಗೆ ಪಡುಗಡಲೆಡೆವಾಸ ತಡವೇತಕೆ ಪಾಲ್ಕಡಲಶಯನ ಪೊರೆ 1 ಅಣುಮಹ ಕಾಲಾತ್ಮಕ ಸರ್ವೇಶ್ವರ ಗುಣಗಣಪೂರ್ಣನೆ ಸರ್ವವ್ಯಾಪಕ 2 ಚಿಂತನೆದೂರ ಅಚಿಂತ್ಯ ಮಹಿಮ ಗುಣ ವಂತ ಅನಂತ ಮಹಂತ ಕಾಲಾಂತಕ 3 ಸ್ಥಾವರ ಜಂಗಮ ಜೀವರ ಬಿಂಬ ಶ್ರೀ ಪಾವಮಾನಿ ಮತ ಸುಜನೋದ್ಧಾರಕ 4 ಬಾಲರೂಪ ಕಡಗೋಲ ಪಿಡಿದ ಗೋ ಪಾಲಕೃಷ್ಣವಿಠ್ಠಲ ಉಡುಪೀಶ 5
--------------
ಅಂಬಾಬಾಯಿ
ಯಾಕ ಸ್ಮರಸದೀ ಮನಸಿಗೇ ಪ ಯಾಕ ಸ್ಮರಸದೀ ಮನಸಿಗೆ | ಲೋಕದೊಳು ತನ್ನ ಸುಖಗೆ | ಮಾಕಾಂತ ನಡಿಗಳ ಮರೆಹೊಕ್ಕು | ವಿ ವೇಕ ಸೌಖ್ಯ ಪಡಿಯದೀಗ 1 ಉತ್ತಮ ಸಂಗವ ನೆರೆಮಾಡಿ ತನ್ನ | ಚಿತ್ತದ ಚಂಚಲ ನೀಡ್ಯಾಡೀ | ನಿತ್ಯದಿ ಗುರು ಹಿರಿಯರ ಶೇವೆಯಲಿ| ಹೊತ್ತು ಸಾರ್ಥಕ ಕಳಿಯದು ನೋಡು 2 ಸಣ್ಣ ದೊಡ್ಡವರಿಂದ ಭಲರೇಯಾ ಯಂದು | ಮನ್ನಿಸಿಕೊಳ್ಳದೇ ಅವರ ಕೈಯ್ಯಾ | ಕುನ್ನಿಯ ಛೀ ಸುಡು ಸುಡು ಯಂದು | ನಿನ್ನ ಜನ್ಮಕೆನಿಸುವದು ಬಲು ಕುಂದು 3 ವಿಹಿತವೇ ಅಹಿತವೆಂದು ಬಗೆವದು ತನ್ನ | ಸ್ವಹಿತವೇ ಅಹಿತೆಂದಾಚರಿಸುವುದು | ಇಹಪರ ಲೋಕಕ ಸಲ್ಲದು ಆಗಿ | ಕುಹಕ ಬುದ್ಧಿಯಿಂದಲೇ ಬಾಳುದು 4 ಜನಲಜ್ಜಾ ಮನಲಜ್ಜಾ ವೆರಡಿಲ್ಲಾ ಇದ | ಕೇನೋ ಮುಂದಣಗತಿ ಶಿವಬಲ್ಲಾ | ಅನುಮಾನ ವಿಲ್ಲಿದರೊಳು ಕಂಡು ಕೇಳಿ | ಘನಗುರು ಮಹಿಪತಿ ಜನ ಸೊಲ್ಲಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಾಕೆ ಕಳವಳವೋ-ಮಾನಸ ನಿನಗ್ಯಾಕೆ ಕಳವಳವೋ ಪ ಶ್ರೀಕಳತ್ರನು ಜಗದೇಕ ನಾಯಕ ನಿರಲ್ಯಾಕೆ ಅ.ಪ. ಹೊಟ್ಟೆಯೊಳಿರಲನ್ನ ವಿಟ್ಟು ಕಾಪಾಡಿದ ಸೃಷ್ಠಿಪಾಲಕ ಪರಮೇಷ್ಠಿಜನಕ ನಿರೆ 1 ಬಾಲನಾಗಿರೆ ಮೊಲೆಪಾಲ ನಿರ್ಮಿಸಿ ಪರಿ ಪಾಲಿಸಿದವ ಸಿರಿಲೋಲನಲ್ಲವೇ 2 ಲೋಪವಿಲ್ಲದೆ ಕಾಯ್ವ ಶ್ರೀಪತಿ ಪುಲಿಗಿರಿ ಭೂಪವರದ ವಿಠ್ಠಲಾ ಪದ್ರಕ್ಷಕ ನಿರಲ್ಯಾಕೆ ಕಳವಳವೋ 3
--------------
ಸರಗೂರು ವೆಂಕಟವರದಾರ್ಯರು
ಯಾಕೆ ಕಳವಳವೋ-ಮಾನಸ ನಿನಗ್ಯಾಕೋ ಕಳವಳವೋ ಪ ತ್ರೀಕಲತ್ರನು ಜಗದೇಕನಾಯಕನಿರಲ್ಯಾಕೆ ಅ.ಪ ಹೊಟ್ಟೆಯೊಳಿರನ್ನವಿಟ್ಟು ಕಾಪಾಡಿದ ಸೃಷ್ಟಿ ಪಾಲಕ ಪರಮಷ್ಠಿ ಜನಕನಿರಲು 1 ಬಾಲನಾಗಿರೆ ಮೊಲೆಪಾಲ ನಿರ್ಮಿಸಿ ಪರಿ ಪಾಲಿಸಿದವ ಸಿರಿಲೋಲನಲ್ಲವೆ 2 ಲೋಪವಿಲ್ಲದೆ ಕಾಯ್ವ ಶ್ರೀಪತಿ ಪುಲಿಗಿರಿ ಭೂಪÀ ವರದವಿಠಲಾಪದ್ರಕ್ಷಕನಿರಲು 3
--------------
ವೆಂಕಟವರದಾರ್ಯರು
ಯಾಕೆ ದಯ ಬಾರದೋ | ಕೃಷ್ಣಾ | ಯಾಕೆ ದಯಾ ಬಾರದೋ || ಪ ಕಾಕು ಜನರ ಸಂಗ ಕಳೆದು | ವ್ಯಾಕುಲ ನೀಗುವುದಕ್ಕೆ ಅ.ಪ. ಮಾನ ಅಪಮಾನವೆಲ್ಲ | ಮಾನ ನಿಧಿಯಾಧೀನವೆಂದುಸಾನುರಾಗದಿ ಧೇನಿಸುವನ | ಧೀನನ ಪರಿಪಾಲಿಸಲೂ 1 ಭಾರ | ಸತತ ನಿನಗಲ್ಲದಲೇ2 ಪರರಿಗೆ ಶಿರವ ಬಾಗಿ | ಕರವನೊಡ್ದಿಸದಲೇಶರಣರ ಸಲಹೊ ಗುರು | ಗೋವಿಂದ ವಿಠಲನೆ 3
--------------
ಗುರುಗೋವಿಂದವಿಠಲರು