ಒಟ್ಟು 21316 ಕಡೆಗಳಲ್ಲಿ , 137 ದಾಸರು , 8969 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೇಳು ಜೀವನವೆ ನೀ ಮಧ್ವಮತವನುಸರಿಸಿ ಶ್ರೀಲೋಲನಂಘ್ರಿಯನು ನೆನೆದು ಸುಖಿಸೊ ಪ. ನರನಾಗಿ ಪುಟ್ಟುವುದು ದುರ್ಲಭವೆಲವೊ ಭೂ- ಸುರಕುಲದಿ ಜನಿಸುವುದು ಬಹು ದುರ್ಲಭ ಪರಮ ಸುಕೃತವದೇನು ಫಲಿಸಿತೊ ನಿನಗೀಗ ದೊರಕಿದೀ ಜನುಮವನು ಸಫಲ ಮಾಡೊ 1 ಅರಘಳಿಗೆ ಮಾತ್ರವೆ ಪೊತ್ತು ಪೋಗಲು ಆಯು ಕೊರತೆಂದು ತಿಳಿ ನಿನ್ನ ಕ್ಲುಪ್ತದೊಳಗೆ ಮರಳುತನದಲಿ ಬರಿದೆ ದಿನಗಳಿಯಬ್ಯಾಡೆಲವೊ ಸ್ಥಿರವಲ್ಲ ಈ ದೇಹ ಸ್ವಪ್ನಸಮವೊ 2 ದುರುಳರೊಡನಾಡಿ ದುರ್ವಿಷಯ ಲಂಪಟನಾಗಿ ನರಕಯಾತನೆಗೆ ಗುರಿಯಾಗದಿರೆಲೊ ಎರಡುದಿನದೋಡ್ಯಾಟ ಇರಬಂದುದಲ್ಲವಿದು ಪರಗತಿಗೆ ಸಾಧನ ಮಾಡಿಕೊಳ್ಳೊ 3 ಹೋಗುತಿವೆ ಹೋಗುತಿವೆ ದಿವಸ ವ್ಯರ್ಥವಾಗಿ ಹೀಗೆ ಮೈಮರೆದಿಹುದು ನಿನಗೊಳ್ಳಿತೆ ಬ್ಯಾಗ ಹರಿಯನು ಭಜಿಸು ಬಾ ಈ ಮಾತಲ್ಲ ನೀ ಹೋಗಿನೋಡಲು ಯಮನ ಬಾಧೆ ಬಿರುಸೊ4 ಏನ ಹೇಳಲಿ ನಿನ್ನ ಮಂದಮತಿಯನು ಹಿಂದೆ ಶ್ವಾನಸೂಕರ ಮೊದಲಾದ ನೀಚ- ಯೋನಿಗಳೊಳಗೆ ಬಂದು ಅಂದದನು ಕ್ರಮಿಸಿದವನು ಆ ನೋವನಾಗಲೆ ಮರೆದಿಯಲ್ಲೊ 5 ಮುನ್ನ ದುಷ್ಕರ್ಮವ ಮಾಡಿದ ಪ್ರಾಣಿಗಳು ಉನ್ನತ ನೀಚ ದೇಹಗಳ ಧರಿಸಿ ಬನ್ನಬಡುತಿಹುದು ನೀ ನೋಡಿ ನೋಡಿ ಮತ್ತೆ ದುರ್ನಡತೆಯನು ಮಾಡಲುದ್ಯೋಗಿಪೆ 6 ಎಂಬತ್ತು ನಾಲ್ಕು ಲಕ್ಷ ಯೋನಿಗಳೊಳಗೆ ಕುಂಭಿಣಿಯೊಳಗೆ ತಿರುತಿರುಗಿ ಪಾಪ ಉಂಬುದನುಚಿತವೆಂದು ಮನ ಹೇಸಿ ವಾಕರಿಸಿ ನಂಬುನಾರಾಯಣನ ಇನ್ನಾದರೂ 7 ಜನನಿಯ ಗರ್ಭವಾಸ ದುಃಖ ಅತಿಶಯವೊ ಜನನ ಮರಣದ ದುಃಖ ಬಲು ಅಧಿಕವೊ ಘನ ನರಕದಾ ದುಃಖ ಪೇಳಲೊಶವಲ್ಲ ನಿನ- ಗಿನಿತಾದರೂ ನಾಚಿಕಿಲ್ಲವೇನೊ 8 ಸಾರಿ ಪೇಳುವೆನೀಗ ಪುಟ್ಟಿ ಬೆಳೆದಳಿವ ಸಂ- ಸಾರ ಸುಖವಲ್ಲ ಮಹ ದುಃಖಪುಂಜ ಘೋರ ಸಂತಾಪಕ್ಕೆ ಕಡೆಮೊದಲಿಲ್ಲವೊ ವಾರಿಜಾಂಬಕನ ಮರೆಯೊಕ್ಕು ಬದುಕೊ 9 ಹಿಂದೆ ಬಹುಜನುಮದಲಿ ಬಂದು ಬಳಲಿದ ಬವಣೆ ಒಂದೊಂದು ನೆನೆಸಿಕೊಳಲತಿ ಕಷ್ಟವೊ ಮುಂದಾದರು ಸರಿ ಎಚ್ಚೆತ್ತು ಬಿಡದೆ ಗೋ- ವಿಂದನ ಪದಾಂಬುಜವ ಧ್ಯಾನ ಮಾಡೊ 10 ಮಾರಿ ಇಲ್ಲಿದೆಯೆಂದು ಕೇಳುತಲಿ ಪೋಗಿ ನೀ ಭೂರಿ ಭಯಕೊಳಗಹದು ನೀತಿಯಲ್ಲ ದೂರ ತಿಳಿದು ನೋಡಿ ದುರ್ಮಾರ್ಗವನು ಜರಿದು ಸೇರಿ ಸಜ್ಜನರ ಸುಪಥವ ಪಡೆಯೊ 11 ನಿನ್ನಯ ಸ್ವರೂಪಕ್ಕೆ ಹೀಗಾಗುವುದೆಂದು ಪುಣ್ಯವನೆ ಗಳಿಸಿಕೊ ಬ್ಯಾಗ ನೀನು ಇನ್ನು ಈ ಧರೆಯಲ್ಲಿ ಬಿಟ್ಟು ಹೋಗುವ ದೇಹ- ವನ್ನು ಪೋಷಿಸಿಕೊಂಡು ಹಿಗ್ಗಬೇಡ 12 ವನಿತೆಸುತರನು ಪೊರೆಯಬೇಕೆಂಬ ಬುದ್ಧಿಯಲಿ ಧನದಾಸೆಯಿಂದಲಗಣಿತ ಪಾಪವ ಕ್ಷಣದೊಳಗೆ ಸಂಪಾದಿಸಿಕೊಂಬೆ ಎಲೊ ಮೂಢ ನಿನಗಿವರು ಕೊನೆಗೆ ಸಂಗಡ ಬರುವರೆ 13 ಕೆಡಬ್ಯಾಡ ವ್ಯರ್ಥಮೋಹಕೆ ಸಿಲುಕಿ ಜವನವರು ಪಿಡಿದೊಯ್ದು ಕಡಿದಿರಿದು ಕೊಲ್ಲುವಾಗ ಬಿಡಿಸುವವರಾರಿಲ್ಲ ಈಗಳೆ ಮುಂದರಿತು ಕಡಲಶಯನನ ಪೊಂದಿ ಮುಕುತಿ ಪಡೆಯೊ 14 ಈಗಲೇನೊ ಇನ್ನು ಕ್ಷಣಕೇನು ಬಪ್ಪುದೊ ನೀ ಗರುತರಿಯದಲೆ ಹಿತ ರಾಗದಲಿ ಸರ್ವವನು ಎನ್ನದೆಂದಾಡದಿರು ನಾಗಾರಿಗಮನನಾಧೀನವೆನ್ನೊ 15 ನೀ ಮಗುಳೆ ಮಹಿಯೊಳಗೆ ಕಂಡುಕಂಡುದ ಬಯಸಿ ಭ್ರಾಮಕರ ನುಡಿಗೇಳಿ ಭ್ರಾಂತಿಗೊಳದೆ ಕಾಮಾದಿಗಳ ತ್ಯಜಿಸಿ ಸತ್ಕರ್ಮವನು ಮಾಡಿ ಶ್ರೀಮನೋ ಹರನಿಗರ್ಪಣೆಯ ಮಾಡೊ16 ಏನುಧಾವತಿಗೊಳಲೇನೇನು ಫಲವಿಲ್ಲ ಮಾನವಜನುಮ ಜೊಳ್ಳು ಮಾಡಬ್ಯಾಡ ಆನಂದತೀರ್ಥರ ಪಾದಕಮಲವ ಪೊಂದಿ ಅಚ- ಲಾನಂದವಿಠಲನ್ನ ನೀನೊಲಿಸಿಕೊ 17
--------------
ಅಚಲಾನಂದದಾಸ
ಕೇಳು ನಾ ಪೇಳ್ವದೊಂದಾ ನಿತ್ಯಾನಂದಾ ಪ. ಕೇಳು ನಾ ಪೇಳ್ವದೊಂದಾ ಕಂಸಾದ್ಯಸುರವೃಂದ ಸೀಳಿ ಶೀಘ್ರಾದಿ ಪರಿಹರಿಸಿದಿ ಪಿತೃ ಬಂಧ ಅ.ಪ. ನಿಗಮ ತತಿಗಳು ನಿಶ್ಯೇಷ ತಿಳಿಯದ ಸುಗುಣವಾರಿಧಿ ಸುಖಬೋಧ ದೇಹ ಸ್ವಗತ ಖೇದೊಝ್ಝಿತ ಸರ್ವ ನಿಯಾಮಕ ಖಗಪತಿವಾಹನ ಕಾಮಿತ ಭಾವನ ಪಾಲನ ಪರಾತ್ಪರ ಸ್ವಗತಿ ನಿಯತಿ ಜ್ಞಾನ ದಾಯಕ ತ್ರಿಗುಣ ವರ್ಜಿತ ತ್ರಿಭುವನೇಶ್ವರ ಮಗುವು ನುಡಿವುದ ಮಾತೆಯಂದದಿ 1 ಮೊದಲಿನ ಭವಗಳ ಹದನ ಒಂದರಿಯೆನು ಪಾದ ಪದುಮಗಳ ಸದರದಿ ಸೇವಿಸಲಧಿಕ ಸಾಧನ ಮಾನು ಷ್ಯದಿ ಬಂದು ವೈಷ್ಣವ ಬುಧರಾ ಸೇವೆಯ ಬಿಟ್ಟು ವಿಧವಿಧ ಮೋಹಾಂಧಕಾರಗ- ಳುದಿಸಲದರೊಳು ಸಿಲುಕಿ ನಿರುಪದಿ ಬಧಿರ ಮೂಕ ಜಡಾಂಧನಾದೆನು ಸದಯ ಇನ್ನಾದರೂ ಕಟಾಕ್ಷದಿ 2 ತಾಪತ್ರಯೋನ್ಮೂಲನೇಶಾ ಕೌಸ್ತುಭಭೂಷ ಸುಜನ ಗಣೈಕ ಪೋಷಾ ಈಪರಿಯೊಳಗೆನ್ನ ಜರಿವದುಚಿತವೇನೊ ಕಾಪುರುಷರ ಸಂಗ ಕಡಿದು ಕರುಣವಿಟ್ಟು ಶ್ರೀ ಪಯೋಜ ಭವೇಂದ್ರ ವಂದ್ಯ ಪ್ರ- ದೀಪ ಸತ್ಸಿದ್ಧಾಂತ ತಿಳಿಸಿ ಪ- ದೇ ಪದೇ ಕಾಪಾಡು ವೆಂಕಟ ಭೂಪ ನೀ ಗತಿಯೆಂದು ನಂಬಿದೆ ಕೇಳು 3
--------------
ತುಪಾಕಿ ವೆಂಕಟರಮಣಾಚಾರ್ಯ
ಕೇಳು ಪೊರೆ ಶಾಂತ ತಾಳು ರಂಗಾ ನಿನ್ನಾಳು ನಾನಿರುವೆ ಕೃಷ್ಣಾ ಪ ಆಳೋ ಅರಸನೇ ಅ.ಪ. ಗಾಣ ಎಳೆಯುವ ಕ್ವಾಣನಾದೆನೋ ಕಾಣವೋ ನಯನಾ ಕಾಣಿ ವೇಣುಗೋಪಾಲ 1 ಮಾಯಾ ಮಗನಿಗೆ ನಾಯನಾಗಿರುವೆ ಮಾಯಾ ಕಾಯೋ ನರಹರಿ 2 ಬೇಡುವರು ಧನ ಕಾಡಿ ಎನ್ನನು ನೋಡು ಫಣಿಶಯನಾ ನಾಡಿಗೊಡೆಯಾ ಕೈ ಜೋಡಿಸುವೆನಯ್ಯಾ 3 ಬೇಗ ತವದಾಸನಾಗಿ ಮಾಡಿಕೋ ಸಾಗರಶಯನಾ ಈಗ ಭವಭಯ ನೀಗಿಸೈಯ್ಯ ಕೈ ಸಾಗದಾಯಿತು ಭಾಗವತಪ್ರಿಯಾ 4 ಆಶಾ ಬಿಡಿಸಿ ನೀ ಲೇಸು ಕೊಡು ಹನುಮೇಶವಿಠಲನೇ ಘಾಸಿಯಾದೆನು ಪೋಷಿಸಯ್ಯ ರಮೃಶ ಪಂಢರಿವಾಸ ವಿಠಲ 5
--------------
ಹನುಮೇಶವಿಠಲ
ಕೇಳು ಮಗುವೆ ನಾನೆಂಬಿ ಮಾತನುತಾಳು ತವಕದೊಳೆನ್ನ ಗುರುತನು 1 ಅಮರರುಸುರಿದಾ ಅರ್ಥಕೇಳಿದ್ಯಾಕಮಲಜನಿಗವತಾರವಿಲ್ಲದಾಕ್ರಮವಿ ನೋಡಲು ಕಾರ್ಯ ನಿನ್ನೊಳೂಭ್ರಮಿಸಿ ಬರುವದು ಭಾರವೇನಿದು2 ಎಂದು ತ್ರಿಯುಗನೂ ಮಂದಹಾಸಾದಿಂ-ದೆಂದು ನುಡಿಯನೂ ಕೇಳಿ ಪವನನುಇಂದಿರೇಶನೆ ನಿನ್ನಾಜ್ಞೆಮೀರಲೇದೆಂದು ಶಕ್ತನಲೆಂದು ಮಣಿದನೂ 3
--------------
ಇಂದಿರೇಶರು
ಕೇಳು ಶ್ರೀನಿವಾಸ ಕಷ್ಟವ ತಾಳಲಾರೆ ಶ್ರೀಶ ಕಂಜಜೇಶ ಪ. ಮಾತ ಕೇಳದಿರುವ ಮನ ಬಹು ಕಾತರಗೊಂಡಿರುವ ರೀತಿಯಿಂದ ಬಹು ಸೋತೆನು ಷಡ್ರಿಪು ಜಾತ ಬಂಧಿಸಿರುವ 1 ಕಟ್ಟಿ ಸಹಿಸಲಾರೆ ಮೊದಲ ವಿಠಲ ನೀ ಕೈಬಿಟ್ಟರೆ ಮಾಜದು ಅಟ್ಟಹಾಸ ತೋರೆ 2 ಉದಯ ಮೊದಲುಗೊಂಡು ನಾನಾ ವಿಧದಲಿ ಭ್ರಮೆಗೊಂಡು ಸದಯ ನಿನ್ನ ಪಾದಾಬ್ಜ ನೆನೆಯದೆ ಚದುರೆಯ ಮನಗೊಂಡು 3 ನಿತ್ಯ ಕರ್ಮವೆಲ್ಲ ಕಂಬಳಿ ಬುತ್ತಿಯಾಯಿತಲ್ಲ ಕತ್ತರಿಸಿ ಬ್ರಹ್ಮೆತ್ತಿಯನ್ನು ಪುರು- ಸಿರಿನಲ್ಲ 4 ತಲ್ಲಣಗೊಳಿಸುವುದು ತುದಿಮೋದ- ಲಿಲ್ಲದೆ ದಣಿಸುವುದು ನಿಲ್ಲೆ ನಡೆಯ ಮಲಗೆಲ್ಯು ಬಿಡದು ದೂ- ರೆಲ್ಲು ಪೇಳಗೊಡದು 5 ಮೆಲ್ಲ ಮೆಲ್ಲನೆದ್ದು ನೀ ಮನ ದಲ್ಲಿ ಸೇರುತ್ತಿದ್ದು ನಿಲ್ಲಲು ತೀರಿತಲ್ಲದೆ ಲೋಕ ದೊಳಿಲ್ಲ ಬೇರೆ ಮದ್ದು 6 ನಿತ್ಯ ನಿನ್ನ ಮುಂದೆ ಸೇವಾ ವೃತ್ತಿ ಮಾಳ್ಪದೊಂದೆ ಎತ್ತಾರಕವೆಂದಾಶ್ರಯಿಸದೆ ಮೇ- ಲೊತ್ತಿ ಬೇಗ ತಂದೆ 7 ಭೃತ್ಯರ ಬಿಡನೆಂದು ಶ್ರುತಿ ಶಿರ ವೃತ್ತಿ ವಚನವೆಂದು ಸತ್ಯವೆಂದು ನಂಬಿದ ನೀನರಿಯೆಯ ಔತ್ತರೆಯ ಬಂಧು 8 ವಿಜಯಸೂತನಿಂದ ಪಾದವ ಭಜಿಸಿದ ಮ್ಯಾಲೆನ್ನ ನಿಜ ಜನದೊಳು ಸೇರಿಸುವುದು ಚಿತ ಸಾಮಜ ವರದನೆ ಮುನ್ನ 9 ಭವ ಪರಿಪಾಲ ಪಾಲಿಸು ವ್ರಜ ಯುವತಿ ಲೋಲಾ ಪಾದ ಪಂ- ಕಜ ಕೊಡು ಗೋಪಾಲ 10
--------------
ತುಪಾಕಿ ವೆಂಕಟರಮಣಾಚಾರ್ಯ
ಕೇಳೆನ್ನ ಚಿನ್ನಾ ಮನವೇ ಪ ಮನವೇ ಮೈಮರೆವದು ಗುಣವೇ | ಮತ್ತು ಬಹ ಈ ದಿನವೇ | ವ್ಯರ್ಥದ ಗುಣವಾದನುವೇ 1 ಭ್ರಾಂತರ ಪರಿನಾನಾ | ಮಾ | ರ್ಗಾಂತರಾ ಸೇರಿ ಹೋಗದೆ | ಸಿಂತರ ಬ್ಯಾಗ ಕೂಡಲೋ ಸಂತರಾ 2 ಕುದಿವ ತಾಪವಳಿದು ಮೃದು | ವಾದಾ ಮಹಿಪತಿ ಪದವಾ | ಪಡಿ ಮುದವಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೇಳೆಲೋ ಪ್ರಾಣಿ ನಂಬಿ ಪೂಜಿಸು ಹರಿಯ ಪಾದಾ | ಪಾಲಿಸುವಾ ಗರದು ಅನುಭವ ಬೋಧಾ ಪ ಗುರುವಿನಾ ಬಲಗೊಂಡು ಬಲಿಯೋ ಸ್ವಸುಖ ಪಡಕೋ | ಹರಿಯದೇ ನಾನಾ ಮಾರ್ಗವ ಕಂಡು 1 ಕಂಡ ದೈವಕ ಹಲ್ಲಾ ದೆರೆದು ಬಾಗುವದಲ್ಲಾ | ಮಂಡೆ ದಡವಲ್ಲದೇ ಮತ್ತೇನಿಲ್ಲಾ 2 ಇರಲು ಮನಿಲಿ ಧರಿಲುಳ್ಳಾ ಬಯಸಿದವಟಗಳೆಲ್ಲಾ | ತಿರುಕವ ಬೇಡಿ ಉಂಬುದು ಸಲ್ಲಾ 3 ನೀರಡಿಸಿ ಬರಿಗೈಯ್ಯಾ ನೆಕ್ಕಿದರೇನು ಶ್ರಯಾ | ಗುರುವಿನ ಕೇಳು ಸ್ವಹಿತೋಪಾಯ 4 ಹತ್ತು ಕಟ್ಟುವಕಿಂತ ಮುತ್ತು ಕಟ್ಟಬೇಕೆಂದೇ | ಅರ್ತರೊಲುವನು ಮಹಿಪತಿಸುತಂದೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳೋನಂದ ಇದು ಏನು ಚೆಂದ ಹಾಲಿನ್ಹರವಿಯ ಒಡೆದೋಡಿ ಬಂದು ಬಾಲರನು ಕೂಡ್ಯಾಡಿ ಗೋವಿಂದ ಬವಣೆಬಡಿಸುವ ಬಲುಬಗೆಯಿಂದ ಪ ಕಣ್ಣ ತೆರೆದು ಉದಕದೊಳಾಡುವನು ಸಣ್ಣ ಮೋರೆಯ ಮಾಡಿ ಬಗ್ಗುವನು ಮಣ್ಣಕೆದರುತ ಕ್ರೋಡಾಗಿ ತಾನು ಚಿನ್ನಸುರ ಎಲ್ಲೆ ಕರುಳ್ಹಾರ್ಹಾಕುವನು 1 ತಿರುಕನಂದದಿ ಬೇಡಿಕೊಂಬುವನೊ ಗುರುತದಾರದರಿಯ ತಾಯ್ಹಂತಕನು ದೊರೆತನವ ಬಿಟ್ಟಡವಿಲಿರುವವನು ಶರತಮಾಡಿ ಮಾತುಳನ ಕೊಲ್ಲುವನು 2 ಬËದ್ಧರೂಪದಿ ಲಜ್ಜೆಗೆಡಿಸುವನು ಎದ್ದು ತುರುಗನೇರ್ಯೋಡಿ ಪೋಗುವನು ಕದ್ದು ಬೆಣ್ಣೆಯ ಮೆಲ್ಲುವ ತಾನು ಮುದ್ದು ಭೀಮೇಶಕೃಷ್ಣ ಎಲ್ಲಿಹನು 3
--------------
ಹರಪನಹಳ್ಳಿಭೀಮವ್ವ
ಕೈಕೊಂಡ - ನೃಹರಿ ಕೈಕೊಂಡ ಪ ಕೈಕೊಂಡ ಪೂಜೆಯ ನೃಹರಿ | ತ್ರೈಲೋಕ್ಯಕನಾಥನು ಅಸುರಾರಿ | ಆಹತೋಕನ ಸಲಹಲು | ಏಕಮೇವನ ಲೀಲೆಕೈಕೊಂಡ ಅವತಾರ | ಆ ಕಂಬೋದ್ಭವನಾಗಿಅ.ಪ. ಭಕ್ತಿ ಭಾವದಿ ಪರಾಶರ | ಬಹುತಪ್ತ ಭಾವದಿ ಕೃಷ್ಣೇ ತೀರ | ದಲ್ಲಿಸಕ್ತನಿರೆ ಧ್ಯಾನ ಗೋಚರ | ನಾಗಿವ್ಯಕ್ತನು ಷೋಡಶಕರ | ಆಹದೃಪ್ತ ದಾನವ ಧ್ವಂಸಿ | ದೀಪ್ತಾನಂತ ತೇಜಮೂರ್ತಿ ಕಾಣಿಸಿದನ | ವ್ಯಕ್ತನಾಗಿದ್ದಂಥ 1 ಕಟಿಸೂತ್ರ ಸ್ಮರ ಕೋಟಿ ಲಾವಣ್ಯಕರ ಪಾಶ ಅಸಿಕುಂತ | ವರದಾ ಭಯವು ಹಸ್ತ 2 ಕಂಬು ಚಕ್ರ ಚರ್ಮಕರ | ಮತ್ತೆಅಂಬುಜ ಶಾಂಙÁ್ರ್ಞದಿಧರ | ಗದಸಂಭೃತ ತುಳಸಿಯ ಹಾರ | ಮತ್ತೆಇಂಬಿನ್ವ್ಯೊ ಜಯಂತಿ ಹಾರ | ಆಹಅಂಬುಜದಳ ನೇತ್ರ | ಇಂಬಾಗಿ ಕರಪಾತ್ರತುಂಬ ಪೀಯುಷಧಿ | ಪೊಂಬಸಿರ ವಂದ್ಯನು 3 ಶ್ರೀವತ್ಸ ಲಾಂಛನ ಭೂಷ | ತನ್ನಭ್ರೂವಿಲಾಸದಿ ಬ್ರಹ್ಮ ಈಶ | ರಿಗೆತಾವೊಲಿದೀವ ಆವಾಸ | ಯೆನುತವ ವೇದಂಗಳು ಅನಿಶ | ಆಹಮಾವಿನೋದಿಯ ಗುಣ | ಸಾವಕಾಶಿಲ್ಲದೆಸಾರ್ವದ ಪೊಗಳುತ್ತ | ಭಾವದೊಳ್ಹಿಗ್ಗುವವು 4 ಪೊತ್ತು ರೂಪವ ಬಲಪಾದ | ಚಾಚುತ್ತ ರಕ್ಕಸನೊಡಲಗಾಧ | ಇಟ್ಟುವತ್ತುತ ತೊಡೆಯಲ್ವಿನೋದ | ದ್ವಯಹಸ್ತ ನಖದಿ ಉದರ ಬಗೆದ | ಆಹಕಿತ್ತುತ ಕರುಳನ್ನ | ಕತ್ತಿನೊಳ್ಹಾಕುತಭಕ್ತನ ಸಂಬಂಧ | ಎತ್ತಿ ತೋರ್ದ ಜಗಕೆ 4 ಪಂಚ ಮೋಕ್ಷಪ್ರದ ಹರಿ | ಆಯ್ತುಪಂಚಾಮೃತಭಿಷೇಕ ಅವಗೆ | ಮತ್ತೆಪಂಚಕಲಶಾರ್ಚನವು ಆವಗೆ | ಆಯ್ತುಪಂಚ ಕುಂಭಾಭಿಷೇಕವಗೆ | ಆಹಸಂಚಿಂತಿಸುತ ಹೃ | ತ್ಪಂಕಜದೊಳು ನೋಡೆಸಂಚಿಂತಾಗಮ ನಾಶ | ಕೊಂಚವು ಪ್ರಾರಬ್ಧ 6 ಶಾಲಿಗ್ರಾಮದ ಶಿಲ ಏಕ | ಪೊತ್ತುಪೋದಕ ಬಾಹು ಅಲೀಕ | ಶತಶಾಲೀವಾಹನವೆಂಬ ಶಕ | ದೊಳುಜ್ವಾಲಾ ನರಹರಿ ನಾಮಕ | ಆಹಯೇಳು ಐದೊರ್ಷದ | ಭಾಳ ತಪಕೆ ಮೆಚ್ಚಿಶೀಲ ದ್ವಿಜ ದಂಪತಿ | ಗೊಲಿದು ಪೇಳಿದ ಹೀಗೆ 7 ಭೀಮಕ ರಾಜಗೆ ಪೇಳು | ತೃಣಜಾಲವ ಹಾಕೆ ನೀರೊಳು | ಅಲ್ಲಿಜ್ವಾಲೆ ಉದ್ಭವಿಸಲು ಬಲು | ನೀರಮೇಲಕ್ಕೆ ಒಳಗಿಂದ ಬರಲು | ಆಹತೋಳೆರಡಲಿ ರಾಜ | ಮೇಲೆತ್ತೆ ಬರುವನುತಾಳ ಮೇಳ್ವೈಭವ | ದೊಳಗೆ ಸ್ಥಾಪಿಸಲೆಂದು 8 ಅಂಗಹೀನರೆ ಕೇಳಿ ಆವ | ನಿಮ್ಮಭಂಗಿಪ ಮೂಕಾಂಧ ಭಾವ | ನೀಗಿಶೃಂಗಾರ ರೂಪ ಸ್ವಭಾವ | ನರಸಿಂಗ ಕೊಡುವೆನು ಸೇವ | ಆಹ ಹಿಂಗದೆ ಕೊಡುವೆನು | ಅಂಗಜ ಪಿತ ನರಸಿಂಗಪುರವೆಂದು | ಸಂಗೀತವಾಗಲಿ 9 ವತ್ಸರ ಸೌಮ್ಯವು ಪುಷ್ಯ | ದಿನದರ್ಶ ವ್ಯಾಸತೀರ್ಥ ಶಿಷ್ಯ | ಆದರ್ಶ ದಾಸರ ದಿನ ಭವ್ಯ | ಭಕ್ತವತ್ಸಲ ಸ್ವೀಕಾರ ಆಲ್ಪ್ಯ | ಆಹಉತ್ಸವ ಕೊಳ್ಳುತ | ಉತ್ಸಾಹವೆನಗಿತ್ತುಮತ್ಸ್ಯಾದಿ ದಶರೂಪಿ | ಕೃತ್ಸ್ನ ಕಾರುಣ್ಯನು 10 ಪರಾಶರಗೊಲಿದ ಸುಶೀಲ | ಖಗವರನು ಭೂದೇವಿಯು ಬಲ | ಎಡವರಲಕ್ಷ್ಮೀ ಪ್ರಹ್ಲಾದ ಬಾಲ | ಸುರವರರಿಂದ ಸ್ತುತ್ಯ ವಿಶಾಲ | ಆಹಗುರು ಗೋವಿಂದ ವಿಠ್ಠಲ | ಗುರು ಬಿಂಬ ನರಸಿಂಗಶರಣರ ಅಪಮೃತ್ಯು | ಹರಿಸಿ ಸಂತತ ಕಾಯ್ವ11
--------------
ಗುರುಗೋವಿಂದವಿಠಲರು
ಕೈತುತ್ತ ಹಾಕುವೆ ಬಾರೋ ರಂಗ ಮೈತುಂಬಾ ಒಡವೆಯ ಇಡುವೆನು ಬಾರೋ ಪ ಬೈತಲೆ ಬಾಚಿ ಹೂ ಮುಡಿಸುವೆ ಬಾರೋ ತೈ ತೈ ತೈ ಎಂದು ಕುಣಿದಾಡು ಬಾರೋ ಅ.ಪ ಬಿಸಿ ಬಿಸಿಯನ್ನವ ಮೊಸರಲಿ ಕಲಸಿ ಹಸುವಿನ ಬೆಣ್ಣೆಯ ಅದರ ಮೇಲಿರಿಸಿ ಕೇಸರಿ ಬೆರೆಸಿ ತುಸು ಏಲಕ್ಕಿಯ ಪುಡಿಮಾಡಿರಿಸಿ 1 ಬಸಿರಲ್ಲಿ ಜಗಂಗಳ ತುಂಬಿಹೆನೆಂದು ಹಸಿವಿಲ್ಲವೆನಬೇಡ ಅಸುರರಕೊಂದು ಬಿಸದ ಕಾಳಿಂಗನ ತುಳಿದೆದ್ದುನಿಂದು ಬಸವಳಿದಿರ್ಪೆನೀನಮರರ ಬಂಧು 2 ಹೊಸ ಪೀತಾಂಬರ ಕಟಿಬಂಧವಿಡುವೆ ವಿಸರವ ಪಸರಿಪ ಹೂಗಳ ಮುಡಿವೆ ರಸಸವಿನಾದದ ಕೊಳಲನು ಕುಡುವೆ ನಸುನಗೆ ತೋರೋ ಮಾಂಗಿರಿರಂಗ ನಲಿವೆ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕೈಪಿಡಿದೆನ್ನನು ಕಾಪಿಡು ನಲವಿಂ ಕನ್ನಡ ನುಡಿವೆಣ್ಣೆ ಪ. ಈ ಪಸುಳೆಗೈದಾ ಪಾಪವದಾವುದು ಕೋಪಿಸದಿರೆನ್ನಾಣೆ ಅ.ಪ ಮುಳಿವಿಂತೇತಕೆ ನಳಿನದಳಾಂಬಕೆ ಎಳೆಗೂಸಿನ ಮನಕೆ ಕಳವಳದಿಂದತಿ ಬಳಲಿಕೆಯಾದರು ತಳುವುದಿದೇನಿದು ಸಾಕೇ 1 ಮಾತೆಯ ಮಮತೆಗೆ ಸೋತು ಭಜಿಸುವೀ ಪೋತನ ನೆರೆನೋಡಿ ಪ್ರೀತಿಯಿಂ ಕರೆದಾತುಕೋ ನಲ್ವಾತಿನಿಂ ಕೈನೀಡಿ 2 ಪರಿಪರಿಯೆಡರಿನ ಗಿರಿದುರ್ಗಂಗಳಾವರಿಸಿರುತಿಹುದೆ ಪರಿಯಿಂದದನುತ್ತರಿಸಿ ಬಂದಪೆ ಕರುಣಿಸು ಭರದೆ 3 ಕಾರ್ಯ ಕಾರಣ ಕರ್ತೃ ನೀನಹುದಾರ್ಯೆ ಸದಾ ಪೊರೆಯೇ ಕೋರಿಕೆಗಳನೀಡೇರಿಸಿಯಣುಗರ ನಿರಪಾಯದೆ ಕಾಯೇ 4 ಭಾಷೆಗೆ ತಪ್ಪಿದ ದೋಷಿಯೆನ್ನುತುಪೇಕ್ಷಿಸಬೇಡೆನ್ನ ಶೇಷಗಿರೀಶನೆ ಪೋಷಕನಾಗಿರೆ ನಿರ್ದೋಷಿಯೆನಿಸುವೆ ನೀಂ5
--------------
ನಂಜನಗೂಡು ತಿರುಮಲಾಂಬಾ
ಕೈಮುಗಿದು ಕೇಳಿಕೊಂಬೆ ಕರುಣಾಸಾಗರ ಶ್ರೀಕರ ಪ ಶ್ರೀಮನೋಹರ ಭಾವಿಸುತ್ತ ಭಕ್ತಿಯೀವುದೈ ಶುಭಕರ ಅ.ಪ ಕಣ್ಣ ತುಂಬ ನೋಡುವೆ ಚನ್ನ ಪಾದಯುಗಳ ನೀನಿಡುನಾ ನನ್ನಿಯಿಂ ನಮಿಪೆ ನಾರಾಯಣ 1 ಎನ್ನೊಳೆರಡು ಮಾತನಾಡು ಮೃದುನುಡಿ ಕೇಳುವೆ ಸಂ ಪನ್ನ ಕೃಪಾದೃಷ್ಟಿಯ ನೀಡು ಧನ್ಯನಾಗುವೆ ದೀನಬಂಧು2 ಬಾಲಗೋಪಾಲ ಲೀಲೆ ತೋರೋ ನಲಿಯುವೆ ಶ್ರೀಲೋಲ ಮುದ್ದಾಡುವೆ ಮುದ್ದು ಕೃಷ್ಣ3 ಎನ್ನ ಬಿನ್ನಪವ ಕೇಳು ಜನ್ಮ ಸಾರ್ಥಕವ ಮಾಡು ಇನ್ನು ಸಾವಕಾಶವೇಕೊ ಜಾಜೀಕೇಶವ ಸುವೈಭವ 4
--------------
ಶಾಮಶರ್ಮರು
ಕೈಯ ತೋರೋ ರಂಗ ಕೈಯ ತೋರೋ ಪ. ಕೈಯ ತೋರೋ ಕರುಣೆಗಳರಸನೆ ಅ.ಪ. ಶರಧಿ ಮಥನದಿ ದೇವಾಸುರರಿಗೆ ಮೋಹಿನಿಯೋಲ್ ಸುರರಿಗೆ ಸುಧೆಯಿತ್ತು ಸುರರಿಗಾಸರೆಯನಿತ್ತಾ 1 ಶಿರಮಂ ಸದ್ಗತಿವೊಂದಿಸಿ ಹರನಂ ನಲವಡಿಸಿದ 2 ಹರನ ವರದಿ ಭಸ್ಮಾಸುರ ಗರ್ವಿತನಾಗಿ [ಆ] ಹರನಂ ಬೆನ್ನಟ್ಟಿ ಬರೆ ದುರುಳನ ದಂಡಿಸಿದಾ 3 ತರಳಧ್ರುವ ತಾಯ ಬಿರುನುಡಿಗೆ ಮನನೊಂದು ಶರಣೆನೆ ಮೈದೋರಿ ತರಳನ ಮೈದಡಹಿದ4 ಕಂದ ಪ್ರಹ್ಲಾದನ ತಂದೆಯುಗ್ರದಿ ಜಡಿಯೆ ಕಂಬದಿಂ ಬಂದು ಖಳನ ಕರುಳನು ಕಿತ್ತೆಸೆದಾ 5 ಮೊಸಳೆ ಬಾಯೊಳು ಸಿಕ್ಕಿ ಬಸವಳಿದು ಬಾಯ್ಬಿಡುತಿರೆ ಎಸೆದ ಚಕ್ರದಿ ಸೀಳಿ ನಕ್ರನ ಕರಿಯನುದ್ಧರಿಸಿದ 6 ಚಕ್ರಧರ ರುಕ್ಮಿಣಿಯ ಕೈಪಿಡಿದ7 ತರುಣಿಯಭಿಮಾನವ ನೆರೆಕಾಯ್ದು ನರನಿಗೆ ವರಸಾರಥಿಯಾಗಿ ತೇರನೆ ನಡೆಸಿದ 8 ವರಶೇಷಗಿರಿಯಲ್ಲಿ ಸ್ಥಿರವಾಗಿ ಶರಣರ ಕರೆದಾದರಿಸಿ ವರಗಳ ಕೊಡುತಿಪ್ಪ 9
--------------
ನಂಜನಗೂಡು ತಿರುಮಲಾಂಬಾ
ಕೈಯ ಬಿಡುವರೇ ಕೃಷ್ಣ ಕೈಯ ಬಿಡುವರೇ ಪ ಹೇಯ ವಿಷಯದಲ್ಲೆ ಇರಿಸಿ ಜೀಯ ನಿನ್ನ ವಿಷಯ ಮರೆಸಿ ಭವ ಸಮುದ್ರ ಅ.ಪ ಬಿಂಬ ನೀನು ಸಿದ್ಧಪ್ರತಿಬಿಂಬ ನಾನು ಸಿಧ್ದವಿರಲು ತುಂಬಿ ಪರಿವ ನದಿಯ ಮಧ್ಯೆ ಅಂಬಿಗನೆ ತ್ಯಜಸಿದಂತೆ 1 ಕಲಿಯ ಕಾಟ ವಿಷಯ ದಾಟಗೆಲುವ ಶಕ್ತಿ ಎನಗೆ ಉಂಟೆ ಒಲಿಯದಿರಲು ನೀನೆ ದಯದಿ ಸುಲಭದೇವ ನೆನಿಸಿ ಹೀಗೆ 2 ತಾಯಿ ಬಿಡುವಳೇನು ಶಿಶುವ ಮಾಯೆ ಸುಳಿಯಲ್ಲಿರಲು ಸಹಾಯ ಮಾಡದೇನೆ ಬದಿಗ 3 ಶಿಷ್ಟನಲ್ಲ ದುಷ್ಟಕರ್ಮ ಭ್ರಷ್ಟನೆಂಬ ಮಾತು ಮೂಟೆ ಕಟ್ಟಿಪೇಳು ಬಿಟ್ಟು ನಿನ್ನ ಎಷ್ಟು ಕರ್ಮಮಾಡಲಾಪೆ 4 ಹಿಂದಿನವರು ತಾವೆ ಮುಂದೆ ಬಂದರೇನೊ ಬಿಟ್ಟು ನಿನ್ನ ಒಂದು ತೃಣವು ಚಲಿಸದಲ್ಲ ತಂದೆ ಮನವ ಮಾಡದಿರಲು 5 ನಾನು ಎಂದು ಹೀನನಾದೆ ನೀನು ಸ್ವಾಮಿ ನಾನು ಭೃತ್ಯ ಶ್ರೀನಿವಾಸ ಶರಣು ಶರಣು ಜ್ಞಾನವಿತ್ತು ಕಾಯೊ ಮುಂದೆ 6 ನಿನ್ನ ನಂಬಿ ಇರುವೆ “ಶ್ರೀ ಕೃಷ್ಣವಿಠಲ” ಸತ್ಯಸತ್ಯ ಅನ್ಯರನ್ನು ಕಾಣೆನಪ್ಪ ನಿನ್ನ ಚಿತ್ತ ನನ್ನ ಭಾಗ್ಯ 7
--------------
ಕೃಷ್ಣವಿಠಲದಾಸರು
ಕೈಯ ಮುಗಿವೆನು ಮಹಾಲಿಂಗ ಜಗ- ದೈಯನೆ ವೃಷಭತುರಂಗ ಪ. ಧೈರ್ಯಸಾಹಸ ಸಮುದ್ರ ರುದ್ರ ಸುರ- ವರ್ಯನೆ ಸದಯಾಪಾಂಗ ಅ.ಪ. ಕೆಂಡಗಣ್ಣಿನ ಪರಶಿವನೆ ಸುಪ್ರ- ಚಂಡ ಚಂಡಿಕಾಧವನೆ ಮಂಡೆಯೊಳಗೆ ಭಾಗೀರಥಿಯ ತಾಳ್ದ ಕಂಡಪರಶು ಪಾವನನೆ 1 ಚಂದ್ರಕಲಾಧರ ಹರನೆ ಗೋ- ವಿಂದನ ವರ ಕಿಂಕರನೆ ಸುಂದರ ಶುದ್ಧಸ್ಫಟಿಕಶರೀರನೆ ವೃಂದಾರಕ ಮುನಿವೃಂದವಂದಿತನೆ2 ಪಾವಂಜೆ ಕ್ಷೇತ್ರವಾಸ ಪರಿ- ಪಾಲಿಸು ಫಣಿಪತಿಭೂಷ ದೇವ ಲಕ್ಷ್ಮೀನಾರಾಯಣದಾಸನ ಕಾವ ಕಲ್ಮಷವಿನಾಶ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ