ಒಟ್ಟು 332 ಕಡೆಗಳಲ್ಲಿ , 67 ದಾಸರು , 274 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಗುರುವರರಾಯ ಪ. ಏನೆಂಬೆ ನಾ ನಿಮ್ಮ ಕರುಣಕ್ಕೆ ಎಣೆಗಾಣೆ ಶ್ರೀ ಗುರುವರರಾಯ ಅ.ಪ. ಭೂಸುರ ಜನ್ಮದಲಿ ದಾಸತ್ವದಿಂದ ಮೆರೆವೊ | ಶ್ರೀ ಗುರುವರರಾಯ ಫಣಿ ಶ್ರೀ ಗುರುವರರಾಯ 1 ಶ್ರೀ ತಂದೆ ಮುದ್ದುಮೋಹನವಿಠಲದಾಸ | ಶ್ರೀ ಗುರುವರರಾಯ ಪ್ರೀತಿಯಿಂದ ಹರಿಯ ಅಂಕಿತ ಕೊಡುವಂಥ | ಶ್ರೀ ಗುರುವರರಾಯ 2 ಶ್ರೀ ಗುರುವರರಾಯ ವಿಘ್ನಗಳನೆ ತರಿದು ಪ್ರಾಜ್ಞಾ ಮೂರುತಿಯ ತೋರೈ | ಶ್ರೀ ಗುರುವರರಾಯ 3 ಮಂದಜ್ಞರಿಗೆ ಜ್ಞಾನ ತಂದಿತ್ತು ರಕ್ಷಿಪ | ಶ್ರೀ ಗುರುವರರಾಯ ಬಂದೆನು ನಿಮ್ಮ ಪಾದದ್ವಂದ್ವವೇ ಗತಿಯೆಂದು | ಶ್ರೀ ಗುರುವರರಾಯ 4 ಭವ | ಶ್ರೀ ಗುರುವರರಾಯ ತರಳನ ಕಾಯ್ದ ನರಹರಿಯ ಭಜಿಸುವಂಥ | ಶ್ರೀ ಗುರುವರರಾಯ 5 ಅಪರಾಧವೆಣಿಸದೆ ಸುಪಥಮಾರ್ಗವ ತೋರೈ | ಶ್ರೀ ಗುರುವರರಾಯ ಗುಪಿತ ಮಹಿಮ ನಿನ್ನ ಜಗದೊಳರಿವರ್ಯಾರು | ಶ್ರೀ ಗುರುವರರಾಯ 6 ಅಗಣಿತ ಮಹಿಮೆಯ | ಶ್ರೀ ಗುರುವರರಾಯ ಸುರನರರಿಂದಲಿ ವಂದನೆಗೊಂಬುವ | ಶ್ರೀ ಗುರುವರರಾಯ 7 ಅಂತರಂಗದಿ ಆನಂದವನಿತ್ತ ಮಹಿಮ | ಶ್ರೀ ಗುರುವರರಾಯ ಶಾಂತಮೂರುತಿ ನಿಮ್ಮ ಶರಣೆಂದು ಭಜಿಸುವೆ | ಶ್ರೀ ಗುರುವರರಾಯ 8 ನೀತ ಗುರುವೆ ನಿಮ್ಮ ನಂಬಿದೆ ಸಲಹಯ್ಯ | ಶ್ರೀ ಗುರುವರರಾಯ ಖ್ಯಾತ ಶ್ರೀ ಗೋಪಾಲಕೃಷ್ಣವಿಠಲ ಪ್ರಿಯ | ಶ್ರೀ ಗುರುವರರಾಯ 9
--------------
ಅಂಬಾಬಾಯಿ
ಶ್ರೀ ಮದಾಚಾರ್ಯ ಮುನಿ ಪ್ರೇಮದಲಿ ಸಲಹೊ ಪ. ಕಾಮಪೂರ್ಣನೆ ಎನ್ನ ಕಾಮಿತವನೀಯೊ ಅ.ಪ. ದ್ವಿತೀಯಯುಗದಲಿ ವಾಯುಸುತನಾಗಿ ಅವತರಿಸಿ ಕ್ಷಿತಿಸುತೆಗೆ ಉಂಗುರವ ಹಿತದಿಂದಲಿತ್ತೆ ತೃತಿಯುಗದಲಿ ಕುಂತಿಸುತನಾಗಿ ಕೌರವರ ಹತಗೊಳಿಸಿ ಹರಿಯಪದ ಹಿತದಿ ಧ್ಯಾನಿಸಿದೆ 1 ಕಲಿಯುಗದೊಳವತರಿಸಿ ಕಲಿಕಲ್ಮಷವ ಕಳೆದು ಒಲಿಸಿ ಹರಿಯನು ತುರಿಯ ಆಶ್ರಮದಲಿ ಸುಲಭಮಾರ್ಗವ ತೋರಿ ಸುಜನರನು ರಕ್ಷಿಸಿದೆ ಕಲಿಕಾಲ ಸಲಹೆನ್ನ ನೆಲಸಿ ಹೃದಯದಲಿ 2 ಆಚಾರ್ಯರೂಪದಲಿ ಗೋಚರಿಸಿ ಸ್ವಪ್ನದಲಿ ಸೂಚಿಸಿದೆ ದಾಸತ್ವ ಸಿದ್ಧಿಸಲಿ ಎಂದು ಯಾಚಿಸೆನೊ ಅನ್ಯರನು ನಾಚಿಕೆಯ ತೊರೆದಿನ್ನು ನೀಚತನವನೆ ಬಿಡಿಸಿ ಗೋಚರಿಸೊ ಸತತ 3 ಉಪದೇಶವನೆ ಇತ್ತೆ ಗುಪಿತದಿಂ ಸ್ವಪ್ನದಲಿ ಚಪಲತನದಲಿ ನಾನು ಅರಿಯಲಿಲ್ಲ ಅಪರಿಮಿತ ಮಹಿಮ ಶ್ರೀ ಗುರುಗಳಲಿ ನೀ ನಿಂತು ತಪ್ಪನೆಣಿಸದೆ ಎನ್ನ ನಮನ ಸ್ವೀಕರಿಸೊ 4 ವೇದವ್ಯಾಸರ ಪ್ರಿಯನೆ ಮೋದದಲಿ ಶಿಶುವಾದೆ ಶ್ರೀ ದುರ್ಗೆ ತಾ ಬಂದು ಎತ್ತಿದಳೊ ನಿನ್ನ ವಾದಿಗಳ ಗೆದ್ದ ಅನಾದಿ ಮುನಿ ನಮಿಸುವೆನೊ ಶ್ರೀದ ಗೋಪಾಲಕೃಷ್ಣವಿಠ್ಠಲನ ತೋರೊ 5
--------------
ಅಂಬಾಬಾಯಿ
ಶ್ರೀ ಲಕ್ಷ್ಮೀಸ್ತುತಿ ಅಪರೋಕ್ಷಜ್ಞಾನ ಸಂಚಯೇ ಶ್ರೀಪದ್ಮನಾಭ ನಿಲಯೇ ಪ ತಪಯೋಗ ಭಕ್ತಿನಿಧಿಯೆ ಅಪಾರಮಹಿಮಾವಲಯೇ ಅ.ಪ ಕಮಲಾ ಕಮಲಸದನೆ | ಕಮಲನಯನೆ ಕಮಲವದನೆ ಕಮಲಾಂಬರೆ ಕುಂದರದನೆ | ಕಮಲಾಂಬಿಕೆ ಮನಮೋಹನೆ 1 ಸರಸೀರುಹಜಾತನಮಿತೆ | ವರ ಮಾಂಗಿರಿರಂಗಪ್ರೀತೆ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀ ವರನೆ ಪರತರನೆ ಪ ಪಾವನಕರ ಕರುಣಾರಸ ಭರಿತನೆ ಅ.ಪ. ಅಘ ಪರಿಹಾರಕ ಹರಿಯೆ ಬಗೆ ಬಗೆ ಅಪರಾಧಗಳನು ಕ್ಷಮಿಸಿದೆ 1 ಸಕಲ ನಿಯಾಮಕ ವಿಭುವೆ ಭಕುತಪರಾಧ ಸಹಿಷ್ಣುವೆ ಪ್ರಭುವೆ 2 ಮೊರೆಯನು ಕೇಳೆಲೊ ದೊರೆಯೆ ಗರುವ ಕೊಡದೆ ಪೊರೆ ಕರಿಗಿರಿ ನಿಲಯನೆ 3
--------------
ವರಾವಾಣಿರಾಮರಾಯದಾಸರು
ಶ್ರೀ ವಿಷ್ಣು ತೀರ್ಥ ಅಣು ವಿಜಯ ಅರಣ್ಯಕಾಚಾರ್ಯ ಶ್ರೀವಿಷ್ಣು ತೀರ್ಥಾರ್ಯರ ಚರಣಸರಸೀರುಹದಿ ಶರಣಾದೆ ಸತತ ಹೊರ ಒಳಗೆ ಪ್ರಜ್ವಲಿಪ ಅನಘಗುಣ ಪರಿಪೂರ್ಣ ಸಿರಿವರ ಹರಿಕೃಪಾ ಪ್ರಸಾದವೊದಗಿಸುವ ಪ ಪಾದ ಸೇವಿಸಿದ ಫಲವಾಗಿ ಭಾಗೀರಥಿ ಬಾಳಾಚಾರ್ಯರಲಿ ಜನಿಸಿ ವೇಂಕಟರಾಮಾರ್ಯ ಐಜಿಯವರ ಸುಪವಿತ್ರ ಮುಖ ಪಂಕಜದಿಂದ ಕಲಿತರು ಸಚ್ಛಾಸ್ತ್ರ 1 ಜಯತೀರ್ಥ ನಾಮದಲಿ ಮೊದಲೆರಡು ಆಶ್ರಮ ನಿಯಮದಿ ಚರಿಸಿ ಈ ವೈರಾಗ್ಯ ನಿಧಿಯು ಸತ್ಯಸಂಧರಸುತ ಸತ್ಯವರ ತೀರ್ಥರಿಂ ತುರೀಯಾಶ್ರಮಕೊಂಡ ವಿಷ್ಣು ತೀರ್ಥಾರ್ಯ 2 ಏನು ಧನ್ಯರೋ ಸತ್ಯಧರ್ಮತೀರ್ಥರು ಮತ್ತು ಸೂರಿ ಈರ್ವರಿಗೆ ಅನಘಮಧ್ವಸ್ಥ ಶ್ರೀ ಹಂಸ ವೇದವ್ಯಾಸ ತಾನೇ ಸತ್ಯವರ ದ್ವಾರ ಉಪದೇಶ ಕೊಟ್ಟ 3 ಪೂರ್ವಾಶ್ರಮ ನಾಮ ಜಯತೀರ್ಥಾಂಕಿತದಲ್ಲಿ ತತ್ವಪ್ರಕಾಶಿಕ ಸುಧಾ ಟಿಪ್ಪಣಿಯ ಭಾಗವತ - ಸಾರೋ ದ್ಧಾರವ ಶೋಡಶಿ ಚತುರ್ದಶಿ ಬರೆದಿಹರು 4 ತತ್ವಬೋಧಕ ಸ್ತೋತ್ರ ಬಿನ್ನಹ ರೂಪವು ಆಧ್ಯಾತ್ಮ ರಸರಂಜಿನಿ ಅಮೃತಫÉೀಣ ಭಕ್ತಿಯಲಿ ಪಠಿಸಲು ಅಪರೋಕ್ಷ್ಯ ಪುರುಷಾರ್ಥ ಸಾಧನವಾಗಿಹುದನ್ನು ರಚಿಸಿಹರು ಇವರು 5 ಹದಿನಾರು ಪ್ರಕರಣ ಶೋಡಶಿ ಎಂಬುzರÀಲಿ ಹದಿನಾಲ್ಕು ಪ್ರಕರಣ ಚತುರ್ದಶಿಯಲ್ಲಿ ಬಂಧ ಮೋಕ್ಷಾಂತ ಶೋಡಶಿಯಲ್ಲಿಹುದು ಭಕ್ತಿ ಶುಚಿಯಲಿ ಪಠನೀಯ ರಹಸ್ಯವು 6 ಬಂಧಕವು ಬಂಧ ನಿವೃತ್ತಿಯು ಬಿಂಬ ಪ್ರತಿಬಿಂಬ ಭಾವವು, ಬಿಂಬಸಂಸ್ಥಾಪನವು ಅವಸ್ಥಾತ್ರಯ ನಿರ್ಮಾಣ ಆರನೆಯದು 7 ಪ್ರಾಣವ್ಯಾಪಾರವು ಭೋಜನ ಪ್ರಕರಣವು ಇಂದ್ರಿಯ ವ್ಯಾಪಾರವು ತತ್ವಕಾರ್ಯಹತ್ತು ತನು ಅಧಿಷ್ಠಾನ ರಥಾಧಿ ಪ್ರಕರಣವು ಹನ್ನೆರಡಲಿ ಬೋಧ್ಯ ಜಾಗೃತ್ ಪ್ರಕರಣವು 8 ಸ್ವಪ್ನವು ಸುಷುಪ್ತಿಯು ಗಮನಾಗಮನವು ಶುಭ ಮೋಕ್ಷ ಪ್ರಕರಣ ಷೋಡಶವು ಇನ್ನು ಚತುರ್ದಶಿಯಲಿ ಜೀವಹೋಮ ಮೊದಲಾಗಿ ರತ್ನಗಳು ಗುರು ಪ್ರಸಾದ ಲಾಭ ಪರ್ಯಂತ 9 ಜೀವಹೋಮ - ಉಪನಯನ ಸೂರ್ಯಗತಿ ಯಜ್ಞ ಪವಿತ್ರತಮ ವೇದಾಧ್ಯಯನ ಭಿಕ್ಷಾಟನ ವೈಶ್ವಾನರ ಪ್ರಿಯ ಭೋಜನ ಪಾಪಲೇಪ ಜೀವ ಪ್ರಯಾಣ ಮಾರ್ಗವು ನವಮ 10 ಹತ್ತನೆಯದು ಬ್ರಹ್ಮಯಜ್ಞಲಯ ಚಿಂತನಾಕ್ರಮ ಶುದ್ಧಯಜ್ಞ `ಸ್ವರೂಪಯಜ್ಞ' ಸುಲಭಪೂಜಾ ಹದಿನಾಲ್ಕಲಿ ಗುರುಪ್ರಾಸಾದ ಲಾಭದಲಿ ಆದಿತ್ಯಗ ಮಧು ಸುಖ ಪೂರ್ಣ ವಿಷಯ 11 ಯೋಗ್ಯ ಆಧಿಕಾರಿಗೆ ಮಾತ್ರ ಈಸೌ - ಭಾಗ್ಯಪ್ರದ ಜ್ಞಾನ ಪುಷ್ಠಿಕರಣ ಯುಗುಳ ಮಾತ್ರೆಗಳನ್ನ ವಿನಿಯೋಗಿಸುವುದು ಅಯೋಗ್ಯರಿಗೆ ಸರ್ವಥಾ ಕೊಡಕೂಡದು 12 ಕೃತ ಕೃತ್ಯ ಧನ್ಯಮನದಿಂದಲಿ ಈ ಮಹಾನ್ ಐದಿಹರಿಪುರಲಯವ ಚಿಂತನೆಮಾಡಿ ಹದಿನೇಳ್ ನೂರಿಪ್ಪತ್ತೆಂಟು ಶಕ ಮಾಘ ತ್ರಯೋದಶಿ ಕೃಷ್ಣದಲಿ ಕೃಷ್ಣನ ಸೇರಿದರು 13 ಮತ್ತೊಂದು ಅಂಶದಿ ವೃಂದಾವನದಿಹರು ಭಕ್ತಿಯಿಂ ಸ್ಮರಿಸಿದರೆ ಬಂದು ಸಲಹುವರು ಮಾದನೂರು ಕ್ಷೇತ್ರಸ್ಥ ವೃಂದಾವನ ಸೇವೆ ಭಕ್ತಿಯಲಿ ಮಾಳ್ಪರು ದೇಶ ದೇಶ ಜನರು 14 ಬೃಹತೀಸಹಸ್ರ ಪ್ರಿಯ ಮಹಿದಾಸ ಜಗದೀಶ ಬ್ರಹ್ಮಪಿತ ಭಕ್ತಪಾಲಕ ಪರಮ ಹಂಸ `ಮಹಿಸಿರಿ' ಶ್ರೀ ಪ್ರಸನ್ನ ಶ್ರೀನಿವಾಸನ ಮಹಾಭಕ್ತಿ ಶ್ರೀ ವಿಷ್ಣು ತೀರ್ಥಾರ್ಯರೇ ಶರಣು 15 ಪ || ಸಂಪೂರ್ಣಂ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ವಿಷ್ಣು ತೀರ್ಥರು (ಮಾದನೂರು) ಶ್ರೀ ವಿಷ್ಣು ತೀರ್ಥರೆ ನಮೋ ಪ ತಾಮರಸ ಭ್ರಮರರೆಂದನಿಸೂವಲೌಕಿಕ ಸುವೈದಿಕ ಸುಶಬ್ದ ಜಾತವಸಾರ್ವಭೌಮ ಹರಿಗನ್ವಯಿಪರಂ ಭಜಿಸುತ್ತ ಇಷ್ಟಾರ್ಥವಂ ಪಡೆಯಿರೊ ಅ.ಪ. ಸವಣೂರು ಸನಿಯ ಸಿದ್ಧಾಪುರದ ಸೀಮೆಯಲಿಅವಸಿತರು ಬಾಲ ಆಚಾರ್ಯ ಭಾಗೀರ್ಥಿ ಎಂಬುವರು ಸದ್ಧರ್ಮರತರೆನಿಸಿ ಜಯತೀರ್ಥರಂ ಸೇವಿಸಲು ಬಹು ಭಕುತಿಲಿ |ಅವರನುಗ್ರಹ ಜಾತ ವರಶಿಶುವಿಗವರ ನಾಮವನಿಟ್ಟು |ಕಾಲದೊಳಗುಪನಯ ನವಂ ಮಾಡಿ ಸರ್ವ ವೇದ ವೇಂದಾಗ ಪಾರಂಗತರು ಐಜಿ ಆಚಾರ್ಯರಲಿ ಬಿಡಲು 1 ಕುಶಲತೆಯು ಮತ್ತೆ ಸೌಶೀಲ್ಯ ಗುಣನಿಧಿ ಎನಿಪಶಿಷ್ಯನಿಗೆ ಸಚ್ಛಾಸ್ತ್ರ ಪಾರಂಗತನು ಎನಿಸಿಒಸೆದು ದ್ವಿತಿಯಾಶ್ರಮಕೆ ಚೋದಿಸಿ ಕಳುಹಲವ ಗೃಹಧರ್ಮ ಸ್ವೀಕರಿಸುತ |ಎಸೆವ ಕೀರ್ತಿಲಿ ಮೆರೆದು ಶಿಷ್ಯರಿಗೆ ಶಾಸ್ತ್ರ ಬೋ-ಧಿಸುತಲಿರಲು ಸತ್ಸಂತಾನವಂತರಾಗುತಎಸೆವ ಹಂಸತೂಲಿಕ ತಲ್ಪದೊಳು ಪವಡಿಸಿರೆ ಅಪರಾಹ್ನ ರೋಗಾರ್ತರು 2 ಪತಿ ಪುರಂದರ ಸುದಾಸಾರ್ಯ ನುಡಿದುದನುಅಂತೆ ಮಂಚ ಬಾರದು ಮಡದಿ ಬಾರಳು ಎಂಬಪಿಂತಿನ್ವಚನವ ಕೇಳಿ ಚಿಂತಿಸುತ್ತಿರೆ ತಮಗೆ ಜಾತಿ ಸ್ಮøತಿ ಒದಗುತಿರಲು 3 ಘನವಾದ ಐಶ್ವರ್ಯ ಸತಿಸುತರು ಬಂಧುಗಳತೃಣಕೆ ಸಮ ತಿಳಿಯುತ್ತ ಜಯ ಗುರೂ ಹೃದ್ಗತವಅನು ಸರಿಸೆ ಅಜ್ಞಾತ ಬಗೆಯಲಿರುತಿಹನೆಂದು ವೈರಾಗ್ಯವನೆ ಪೊಂದುತ ||ಮನೆಯಿಂದ ಹೊರ ಹೊರಟು ಅನತಿ ದೂರವಸಾಗೆಘನ ಸರ್ಪ ರೂಪದಿಂ ತೋರಿ ಕೊಳೆ ಜಯತೀರ್ಥ ಮುನಿವರ್ಯ ಹೃದ್ಗತವ ತಿಳಿದು ವಸುಮತಿ ವ್ಯರ್ಥ ಸಂಚರಣೆ ಸಂತ್ಯಜಿಸುತ 4 ಶೃತಿ ಸ್ಮøತಿಗೆ ಸಮ್ಮತವು ದಶಮತಿಯ ಸಮಯವೆನುತತಿ ಹಿತದಿ ಪ್ರವಚನೆಗೆ ಪ್ರೇರಿಸಿಹ ಗುರುಮತವ ಸತ್ಕರಿಸಿ ಕಾರುಣ್ಯ ಕೊಂಡಾಡಿ ಸಾಧಿಸಲು ತೃತಿಯಾಶ್ರಮವನು ||ಹಿತದಿ ಕೈಕೊಂಡು ಮಲವ ತಾನಪಹರಿಪಸರಿತೃತಟದಲಿ ಇರುವ ಮನುವಳ್ಳಿ ಪಳ್ಳಿಯಲಿ ನೆಲಿಸುತಲಿ ವಿಹಿತ ಕರ್ಮಾಚರಿಸಿ ಸಿರಿಮತ್ಸು ಮಧ್ವ ವಿಜಯವ ಪಠಿಸುತಿಹರು 5 ಸಂಚಿತ ಸಿರಿ ವಿಷ್ಣುತೀರ್ಥರೆಂಬಂಕಿತದಿ ಮೆರೆಯುತಿಹರು 6 ಭಾಗವತ ಸಾರದುದ್ಧಾರವನುಮುಂತಾದ ಮುಕುತಿ ಸತ್ಪಂಥಗಳ ಬೋಧಿಪಗ್ರಂಥಗಳ ರಚಿಸಿ ಸುಜನೋದ್ಧಾರವನೆ ಗೈದು ಶೋಭಿಸುವರವನಿಯಲ್ಲಿ 7 ಲಕ್ಷುಮಿಯು ನರೆಯಣರನುಗ್ರಹವನೇ ಪಡೆದುದಕ್ಷಿಣದಿ ಬದರಿಕಾಶ್ರಮವೆನುತಿರೆ ಮೆರೆವತ್ರಕ್ಷ್ಯ ಮೋದೇಶ್ವರ ಪುರದಲಿ ನೆಲಿಸಿ ನೂರೆಂಟು ಸಲ ಸುಧೆ ಪ್ರವಚಿಸುತಲಿ ||ಕುಕ್ಷಿಯೊಳಗುಳ್ಳ ಸು ಕ್ಷೇತ್ರಗಳ ಸಂಚರಿಸಿ ಲಕ್ಷಿಸುತ || ಯೋಗ್ಯ ಜನಕುಪದೇಶ ಚರಿಸಲುಸ್ವಕ್ಷೇತ್ರಕೇ ಮರಳಿ ಕುಶಸರಿತು ತೀರದಲಿ ಪರ್ಣ ಶಾಲೆಯಲಿ ವಸಿಸಿ 8 ಕಾಲ ತಾ ತಿಳೀಯುತ್ತ ಶಿಷ್ಯಜನಕರಿವಿತ್ತು ಶಾಲಿವಾನ ಸಹಸ್ರ ಷಟ್ಯತೊತ್ತರವಷ್ಟಸಪ್ತತಿಯು ಮಾಘಾಸಿತ ಪಕ್ಷ ತ್ರಯೋದಶಿ ಸುಮೂಹೂರ್ತದಿ ||ಸುರರು ಭೂಸುರರೆಲ್ಲ ಜಯಘೋಷ ಗೈಯ್ಯುತಿರೆವರ ಮಹಾತ್ಮರು ಆಗ ಹೊಗಲು ವೃಂದಾವನವಪರಿಜನರು ಮುಳುಗಿದರು ದುಃಖ ಆನಂದ ಸಾಗರದಲದನೇನೆಂಬನು 9 ಅವತಾರಮಾರಭ್ಯ ಐದು ದಶ ವರ್ಷಗಳುಅವನಿಜನ ದೃಗ್ವಿಷಯರೀ ಮಹಾತ್ಮರು ತಾವುಅವಧೂತ ವೇಷದಿಂ ಭವನ ಪಾವನವೆನಿಸಿ ಪಿಂತೆ ಶುಕಮುನಿಯಂದದಿ ||ಪವನ ಮತ ಶರನಿಧಿಗೆ ಶಶಿಯು ಇಪ್ಪತ್ತೆಂಟುಪವಿತರ ಸುಲಕ್ಷಣ ಸುತನುವಿಂದುರೆ ಮೆರೆದುಅವನಿಸುರ ಶಿಕ್ಷಣ ಸದುಪದೇಶನುಷ್ಠಾನದಿಂ ಗೈದ ಕೀರ್ತಿಯುತರು 10 ಇವರ ನಾಮಸ್ಮರಣೆ ಕಲಿಮಲದ ಅಪಹರಣೆಇವರ ಸೇವೆಯ ಫಲವು ಸರ್ವಾಮಯ ಹರವುಇವರುನುಗ್ರಹವಿರಲು ವಾದಿನಿಗ್ರಹವಹುದು ಇದಕೆ ಸಂಶಯ ಸಲ್ಲದು ||ಇವರಿಹರು ಸುರತರುವಿನಂದದಲಿ ಶರಣರಿಗೆಇವರೆ ಚಿಂತಾಮಣಿಯು ಸರ್ವ ಭಯ ಹರಿಸುವರು ಇವರ ಗುಣಕೊಂಡಾಡಿ ಇವರೊಲಿಮೆ ಅರ್ಜಿಸಲು ಸರ್ವಕಾಮವು ಲಭ್ಯವು 11 ಸರ್ವಕ್ಷೇತ್ರಾಧಿಕದಿ ಭೂವರಹ ನಿಲ್ಲಿರುವಸರ್ವಭಯ ನಾಶನಕೆ ನರಹರಿಯು ಅರಿರೂಪಸರ್ವಭಕ್ತರ ಭೀಷ್ಟ ವರ್ಷಣಕೆ ಗೋಪಾಲಕೃಷ್ಣರೂಪದಿ ಇರುವನು ||ಇವರ ವೃಂದಾವನದೊಳೀ ಪರೀ ಹರಿರೂಪಪವನ ರೂಪಗಳಿಹವು ಶಿರದೊಳಗೆ ಜಯ ಮುನಿಯುಸರ್ವಋಷಿ ದೇವತೆಗಳಿಹರು ವೃಕ್ಷರೂಪದಿ ಈ ಪವಿತರ ಕ್ಷೇತ್ರದಿ 12 ಭಾಗವತ ನಿಷ್ಠಾತರೆ ||ನಮೊ ನಮೋ ಭಕ್ತಜನ ಕಾಮಧುಕ್ ಭವ್ಯಾತ್ಮನಮೋ ಶ್ರೀ ಮದಾನಂದ ಮುನಿಚರಣ ಮಧುಪರೆನಮೊ ಗುರೂ ಗೋವಿಂದ ವಿಠಲ ಪಾದಾಶ್ರಿತರೆ ನಮೊ ವಿಷ್ಣುತೀರ್ಥ ಪಾಹಿ ||
--------------
ಗುರುಗೋವಿಂದವಿಠಲರು
ಶ್ರೀ ವೆಂಕಟಾಚಲ ನಿವಾಸ ನಿನ್ನ ಸೇವಾನುಸೇವಕರ ದಾಸಾ ಎನಿಸಿ ಜೀವಿಸುವ ನರಗೆ ಆಯಾಸಾ ಯಾಕೆ ಶ್ರೀವರನೆ ಕೊಡು ಎಮಗೆ ಲೇಸಾ 1 ಕಂಸಾರಿ ಪ್ರಭು ನಿನ್ನ ದಿವ್ಯ ನಾಮ ಒದಗಲು ಜಿಹ್ವೆಗೆನ್ನಾ ದೋಷ ಸೀಮೆಗಾಣದಿದ್ದರೆನ್ನ ಸ್ವಾಮಿ ನೀ ಮರೆಯಲಾಗದು ಸುಪ್ರಸನ್ನ 2 ನೀಚ ಯೋನಿಗಳಲ್ಲಿ ಬಂದೆ ಇನ್ನು ನಾಚಿಕಿಲ್ಲವೊ ಎನಗೆ ತಂದೆ ನೀನೆ ಮೋಚಕನು ಬಿನ್ನಪ ವಿದೆಂದೆ ಸವ್ಯ ಸಾಚಿಸಖ ಕೈಪಿಡಿಯೋ ತಂದೆ 3 ನಾನೊಬ್ಬನೇ ನಿನಗೆ ಭಾರವಾದೆ ನೇನೊ ಸಂತತ ನಿರ್ವಿಕಾರ ಎನ್ನ ಹೀನತ್ವ ನೋಡಲ್ಕಪಾರ ಚಕ್ರ ಪಾಣಿ ಮಾಡಿದಿರೆನ್ನ ದೂರ 4 ಕಂಡ ಕಂಡವರಿಗಾಲ್ಪರಿದು ಬೇಡಿ ಬೆಂಡಾದೆ ನಿನ್ನಂಘ್ರಿ ಮರೆದು ದಿಟ ತೊಂಡವತ್ಸಲನೆಂಬ ಬಿರುದು ಕಾಯೊ ಪುಂಡರೀಕಾಕ್ಷ ನೀನರಿದು 5 ಈ ಸಮಯದೊಳೆನ್ನ ತಪ್ಪ ನೋಡಿ ನೀ ಸಡಿಲ ಬೇಡುವರೇನಪ್ಪ ನಿನ್ನ ದಾಸರ್ಪೆಸರ್‍ಗೊಳಲು ಬಪ್ಪಾ ದೋಷ ನಾಶವಾಗೋದು ತಿಮ್ಮಪ್ಪ 6 ಕಾಮಾದಿಗಳ ಕಾಟದಿಂದ ನಿನ್ನ ನಾ ಮರೆದೆ ಸಚ್ಚಿದಾನಂದ ಎನ್ನ ಈ ಮಹಾ ದೋಷಗಳ ವೃಂದ ನೋಡದೆ ನೀ ಮನ್ನಿಸೆನ್ನ ಮುಕುಂದ 7 ನೀ ಪಿಡಿದವÀರ ಸಹಸ್ರಾರ ಸುಜನ ಪಾಪಾಟವಿಗೆ ಸುಕುಠಾರಾ ಜಗ ದ್ವ್ಯಾಪಕನೆ ಎನ್ನ ಸಂಸಾರ ಘೋರ ಕೊಪದಿಂದೆತ್ತಯ್ಯ ಧೀರ 8 ಸಿಂಧೂರ ರಾಜ ಪರಿಪಾಲ ಕೋಟಿ ಕಂದರ್ಪ ಲಾವಣ್ಯ ಶೀಲ ಧರ್ಮ ಮಂದಾರ ಭೂಜಾಲಪಾಲ ಯೋಗಿ ಸಂದೋಹ ಹೃತ್ಕುಮುದ ಶೀಲಾ 9 ಶಿವನ ವೈರಿಯ ಕೊಂದ ಶಕ್ತ ಪುಣ್ಯ ಶ್ರವಣ ಕೀರ್ತನ ನಿನ್ನ ಭಕ್ತಾ ಜನರ ಭವದೊಳಗೆ ದಣಿಸುವುದು ಯುಕ್ತವೇನೊ ಭುವನ ಪಾವನ ನಿತ್ಯಮುಕ್ತ 10 ಶ್ರೀಕರ ಶ್ರೀಮದಾನಂತ ನಿಖಿಳ ಲೋಕೈಕನಾಥ ನಿನ್ನಂಥ ಸಖರ ನಾ ಕಾಣೆನೆಲ್ಲಿಯೂ ಮಹಂತಾ ಎನ್ನ ನೀ ಕಾಯೋ ಕಂಡ್ಯ ಭೂಕಾಂತಾ 11 ಕರ್ಮ ಚಿತ್ರತ್ವಗ್ರಸನ ಕಾಯ ಕರಣ ಮನಹಂಕಾರ ಘ್ರಾಣಾ ಬುದ್ದಿ ಚರಣ ಪಾಯೂಪಸ್ಥ ನಯನಜಾತ ಉರುಪಾಪ ಕ್ಷಮಿಸು ಶ್ರೀ ರಮಣಾ 12 ಅನಿಮಿತ್ತ ಬಂಧು ನೀಯೆನ್ನ ಬಿಡುವು ದನುಚಿತವೋ ಲೋಕಪಾವನ್ನ ಚರಿತ ಮನ ವಚನ ಕಾಯದಲಿ ನಿನ್ನ ಪಾದ ವನಜ ನಂಬಿದೆ ಸುಪ್ರಸನ್ನಾ 13 ನೀನಲ್ಲದೆನಗೆ ಗತಿಯಿಲ್ಲ ಪವ ಮಾನವಂದಿತ ಕೇಳೋ ಸೊಲ್ಲ ಎನ್ನ ಜ್ಞಾನೇಚ್ಛೆ ಕ್ರಿಯಂಗಳೆಲ್ಲಾ ನಿನ್ನ ಧೀನವಲ್ಲವೆ ಲಕ್ಷ್ಮೀನಲ್ಲಾ 14 ಪ್ರಾಚೀನ ಕರ್ಮಾಂಧ ಕೂಪದೊಳಗೆ ಯೋಚಿಸುವ ನರರ ಸಂತಾಪ ನಿನಗೆ ಗೋಚರಿಸದೇನೋ ಬಹುರೂಪ ವೆಂಕ ಟಾಚಲನಿಲಯ ಪಾಹಿ ಶ್ರೀಪಾ 15 ಯಾಕೆ ದಯ ಬಾರದೆನ್ನಲ್ಲಿ ನರಕ ನಾಕ ನರಕ ಭೂ ಲೋಕಂಗಳಲ್ಲಿ ಚರಿಸಿ ನಾ ಕಷ್ಟಪಟ್ಟ ಬಗ್ಗೆ ನೀ ಬಲ್ಲಿ ವೀತ ಶೋಕ ಕೊಡು ಭಕುತಿ ನಿನ್ನಲ್ಲಿ 16 ಬನ್ನ ಬಡಿಸುವರೇನೋ ಬಿಡದೆ ನಾನು ಮುನ್ನ ಮಾಡಿದ ಪಾಪ ಕೆಡದೆ ನೀ ಪ್ರ ಪನ್ನ ವತ್ಸಲನೆಂದು ನುಡಿದೆ 17 ತಾಪತ್ರಯಗಳಿಂದ ನೊಂದೆ ಮಹಾ ಪಾಪಿಷ್ಠರಲ್ಲನ್ನ ತಿಂದೆ ಇನ್ನು ಆಪರೇತೇಶ್ವರನ ಮುಂದೆ ಪೋಗಿ ನಾ ಪೇಕೊಳಲೇನು ತಂದೆ 18 ದೇಹ ಸಂಬಂಧಿಗಳ ಸಹಿತವಾಗಿ ನಾ ಹೊಂದಿದೆನು ಲೋಕಮೋಹಿತ ಎನ್ನ ಮೋಹಿಪ್ರದು ನಿನ್ನಗೇನು ವಿಹಿತ ಹೃದಯ ಬಾಹಿರಂತರದಿ ಸನ್ನಿಹಿತ 19 ಪೋಗುತಿದೆ ದಿವಸ ಕಮಲಾಕ್ಷ ಪರಮ ಅಪರೋಕ್ಷ ಎನಗೆ ಹೇಗಾಗುವುದೊ ಸುರಾಧ್ಯಕ್ಷ ದುರಿತ ನೀನು ಕಾಮಿತ ಕಲ್ಪವೃಕ್ಷ 20 ಗತಿಯಾರು ನಿನ್ನುಳಿದು ದೇವ ರಮಾ ಸಂಜೀವ ಎನ್ನ ಸತಿಸುತರ ಅನುದಿನದಿ ಕಾವ ಭಾರ ಸತತ ನಿನ್ನದು ಮಹಾನುಭಾವ 21 ದೊಡ್ಡವರ ಕಾಯ್ವುದೇನರಿದು ಪರಮ ದಡ್ಡರನು ಕಾಯ್ವದೇ ಬಿರುದು ಎನ್ನ ಗುಡ್ಡದಂತಹ ಪಾಪ ತರಿದು ಕಾಯೋ ವಡ್ಡಿ ನಾಯಕ ಸಾರೆಗರದೊ 22 ಜ್ಞಾನಿಗಳು ನೀಚರಲಿ ಕರುಣಾ ಮಾಡ ರೇನೋ ಬಿಡುವರೇ ರಥಚರಣ ಪಾಣಿ ಭಾನು ಚಂಡರವಿಕಿರಣ ಬಿಡದೆ ತಾನಿಪ್ಪನೆ ರಮಾರಮಣ23 ಆಡಲ್ಯಾತಕೆ ಬಹಳ ಮಾತಾ ಪರರ ಬೇಡಲಾರೆನೋ ಜಗತ್ರಾತಾ ಹೀಗೆ ಮಾಡುವರೇ ಕೆಳೆನ್ನ ಮಾತ ನೀನೆ ನೀಡೆನಗೆ ಪುರುಷಾರ್ಥ ದಾತಾ 24 ಬೇಡಲೇತಕೆ ಬಹಳ ಮಾತಾ ಎನ್ನ ಕೇಡು ನಿನ್ನದಲ್ಲೇ ಬಲಿದೌತ ಪಾದ ಬೇಡಿಕೊಂಬುವೆ ನಾನನಾಥ ದೂರ ನೋಡಲಾಗದು ಪಾರ್ಥಸೂತ 25 ನಿತ್ಯ ಬಿಡದೆ ಶಾರದೇಶನ ನುತಿಪ ಭಕ್ತ ಜನರ ಪಾರ ಸಂತೈಸುವುದು ಮಿಥ್ಯವಲ್ಲ ಶ್ರೀರಮಣ ಸಾಕ್ಷಿದಕೆ ಸತ್ಯಾ 26 ಪರಿಯಂತ ಶಯನ ಪ್ರಣತಾರ್ತಿ ಹರನೆಂಬೊ ಅಂಕಾ ಕೇಳಿ ಮಣಿದ ನಿನ್ನಂಘ್ರಿಗೆ ಶಶಾಂಕಾ ಭಾಸ ದಣಿಸಲಾಗದು ನಿಷ್ಕಳಂಕಾ27 ಕಾರ್ತವೀರ್ಯಾಜುನನ ಕೊಂದ ಭವ್ಯ ಕೀರ್ತಿ ನಿನ್ನಾನಂದ ವೃಂದ ಸತತ ಕೀರ್ತಿಸುವ ನರರ ಬಹುಕುಂದ ನೋಡ ದಾರ್ತನ್ನ ಪೊರೆಯೊ ಗೋವಿಂದ 28 ದಯದಿಂದ ನೋಡೆನ್ನ ಹರಿಯೆ ಜಗ ನ್ಮಯನೆ ಜ್ಞಾನಾನಂದ ವೃಂದ ಸಿರಿಯೆ ಮನಾ ಭಯದೂರರಿನ್ನೊಬ್ಬರರಿಯೇ 29 ನರಸಿಂಹ ನಿನ್ನುಳಿದು ಜಗವ ಕಾಯ್ವ ಪರಮೋಷ್ಠಿ ರಾಯನು ನಗುವ ನಿತ್ಯ ನಿರಯಾಂಧ ರೂಪದೊಳು ಹುಗಿವಾ 30 ದಾಸ ದಾಸರ ದಾಸನೆಂದು ಬಿಡದೆ ನೀ ಸಲಹೋ ಎನ್ನನೆಂದೆಂದೊ ನಿನ್ನ ನಾ ಸೇವಿಸುವೆ ಕೃಪಾಸಿಂಧು ಎಮ್ಮನು ದಾಸಿಸದÀನಿಮಿತ್ತ ಬಂಧೂ 31 ಎಂದೆಂದು ನೀ ಬಡವನಲ್ಲ ನಿನ್ನ ಮಂದಿರದೊಳಗೆ ಬಲ್ಯಲ್ಲಾ ಚಿದಾ ನಂದ ನೀ ಭಕ್ತ ವತ್ಸಲ್ಲಾ 32 ಕಾಮಿತಪ್ರದನೆಂಬ ಬಿರಿದು ಕೇಳಿ ನಾ ಮುದದಿ ಬಂದೆನೋ ಅರಿದು ಎನ್ನ ತಾಮಸ ಮತಿಗಳೆಲ್ಲ ತರಿದು ಮಮ ಸ್ವಾಮಿ ನೋಡೆನ್ನ ಕಣ್ದೆರದು33 ಹಿತವರೊಳು ನಿನಗಧಿಕರಾದ ತ್ರಿದಶ ತತಿಗಳೊಳು ಕಾಣೆನೋ ಪ್ರಮೋದ ನೀನೆ ಗತಿಯೆಂದು ನಂಬಿದೆ ವಿವಾದವ್ಯಾಕೊ ಪತಿತಪಾವನ ತೀರ್ಥಪಾದ 34 ಮಡದಿ ಮಕ್ಕಳು ತಂದೆ ತಾಯಿ ಎನ್ನ ಒಡಹುಟ್ಟಿದವರ ನೀ ಕಾಯಿ ಲೋಕ ದೊಡೆಯ ನೀನಲ್ಲದಿನ್ನಾರೈ ಎನ್ನ ನುಡಿ ಲಾಲಿಸೋ ಶೇಷಶಾಯಿ 35 ಅನುಬಂಧ ಜನರಿಂದ ಬಪ್ಪ ಕ್ಲೇಶ ವನುಭವಿಸಲಾರೆ ಎನ್ನಪ್ಪ ಉದಾ ಸೀನ ಮಾಡಿ ದಯಮಾಡದಿಪ್ಪರೇನೋ ಘನ ಮಹಿಮ ಫಣಿರಾಜತಲ್ಪ 36 ಹದಿನಾಲ್ಕು ಲೋಕಂಗಳನಾಳ್ವ ಬ್ರಹ್ಮ ಮೊದಲಾದವರು ನಿನ್ನ ಚಲ್ವನಖದ ವಿಧಿಸಲಾಪೆನೆ ನಿನ್ನ ಸಲ್ವಾ 37 ಧನ ಧಾನ್ಯ ಪಶು ಪತ್ನಿ ಗೇಹ ಜನನೀ ಜಾಮಾತ ಸಖ ನೇಹ ಅನುಜ ತನುಜಾಪ್ತವರ್ಗದಿಂದಾಹ ಸೌಖ್ಯ ನಿನಗರ್ಪಿಸಿದೆ ಎನ್ನ ದೇಹಾ 38 ನೀನಿತ್ತ ಸಂಸಾರದೊಳಗೆ ಸಿಲುಕಿ ನಾನೊಂದೆ ಕರೆ ನಿನ್ನ ಬಳಿಗೆ ಚರಣ ಧ್ಯಾನ ದೊರಕಲು ಭವದಿ ಮುಳುಗೆ ನಿನ್ನ ಕಾಣದಿರಲಾರೆನರ ಘಳಿಗೆ 39 ಸಲುಗೆ ಬಿನ್ನಪವ ನೀ ಕೇಳೋ ಎನ್ನ ಬಲು ದುರುಳತನವ ನೀ ತಾಳೋ ನೀನೆ ನೆಲೆಯಲ್ಲದೆನಗಾರು ಪೇಳೋ ಎನ್ನ ಕುಲದೈವ ಬಹುಕಾಲ ಬಾಳೋ40 ಸಾಂದೀಪ ನಂದನನ ತಂದ ನಂದ ಭವ ವೃಂದ ಕಳೆದು ಎಂದೆಂದು ಕುಂದದಾನಂದವೀಯೋ ಇಂದಿರಾರಮಣ ಗೋವಿಂದ41 ತೈಜಸ ಪ್ರಾಜ್ಞ ತುರಿಯಾ ಎನ್ನ ದುಸ್ವಭಾವವ ನೋಡಿ ಪೊರೆಯದಿಹರೆ ನಿಸ್ಪøಹ ನಾನಿನ್ನಂಘ್ರಿ ಮೊರೆಯ ಪೊಕ್ಕೆ ಅಸ್ವತಂತ್ರನ ಕಾಯೋ ಪಿರಿಯಾ42 ಇಹಪರದಿ ಸೌಖ್ಯ ಪ್ರದಾತ ನೀನೆ ಅಹುದೋ ಲೋಕೈಕ ವಿಖ್ಯಾತ ಮಹಾ ಮಹಿಮ ಗುಣಕರ್ಮ ಸಂಜಾತ ದೋಷ ದಹಿಸು ಸಂಸಾರಾಬ್ದಿ ಪೋತಾ 43 ಲೋಕಬಾಂಧವನೆಂಬ ಖ್ಯಾತಿಯನ್ನು ನಾ ಕೇಳಿದೆನು ಖಳಾರಾತಿ ಮನೋ ಶೋಕ ಮೋಹಾಜ್ಞಾನ ಭೀತಿ ಬಿಡಿಸು ಶ್ರೀ ಕರಾರ್ಚಿತ ಸ್ವಯಂ ಜ್ಯೋತಿ44 ಒಂದು ಗೇಣೊಡಲನ್ನಕಾಗಿ ಅಲ್ಪ ಮಂದಭಾಗ್ಯರ ಮನೆಗೆ ಪೋಗಿ ದೈನ್ಯ ದಿಂದ ಸತ್ಕರ್ಮಗಳ ನೀಗಿ ಕಂದಿ ಕುಂದಿದೆನೋ ಸಲಹೋ ಲೇಸಾಗಿ45 ಪಾತಕರೊಳಗಧಿಕ ನಾನಯ್ಯ ಜಗ ತ್ಪಾತಕವ ಕಳೆವ ಮಹಾರಾಯ ನಿನ್ನ ದೂತನಲ್ಲವೆ ಜೀಯ ಜಗ ನ್ನಾಥ ವಿಠ್ಠಲ ಪಿಡಿಯೋ ಕೈಯಾ 46
--------------
ಜಗನ್ನಾಥದಾಸರು
ಶ್ರೀ ಹಯಗ್ರೀವ ಮಂತ್ರಸ್ತೋತ್ರ ಜ್ಞಾನ ಬಲಾನಂದಾದಿ ಸರ್ವಗುಣ ವಾರಿನಿಧಿ ಅನಿಷ್ಟಹರ ಇಷ್ಟಪ್ರದ ಹಯಗ್ರೀವ ಅನಘ ಸನ್ನುತ ಸೇವ್ಯ ಘನ ದಯಾಂಬುಧೇ ನಮೋ ಗುರುಗ ಲಕ್ಷ್ಮೀಶ ಪ ಕಮಲಾಸನ ಋಷಿಯು ಗಾಯತ್ರಿಛಂದಸ್ಸು ಅಮಲಾಷ್ಟಾಕ್ಷರ ಮಂತ್ರ ದೇವತೆ ಹಯಾಸ್ಯ ಸೋಮ ಮಂಡಲ ಸ್ಥಿತನು ಅಕಳಂಕ ಕಾಂತಿಮಾನ್ ಅಮೃತ ತನ್ನಯ ಸ್ವರೂಪ ಕಿರಣ ಸುರಿಸುವನು 1 ನಾಶರಹಿತನು ಅವ್ಯಯ ನಿತ್ಯೋ ನಿತ್ಯಾನಾಮ ಅಂಡ ಬಹಿರಂತರದಿ ಎಲ್ಲೂ ಪುಸ್ತಕ ಚಿನ್ಮುದ್ರೆಯು ಶಂಖಾಕ್ಷ ಮಾಲಾಧರ ಕಾಶಿಸುತಿಹ ತುರಗ ವದನ ಸರ್ವಜ್ಞ2 ಪೂರ್ಣ ಜ್ಞಾನಾತ್ಮನು ಪೂರ್ಣ ಐಶ್ವರ್ಯಾತ್ಮ ಪೂರ್ಣ ಪ್ರಭಾತ್ಮನು ಪೂರ್ಣ ತೇಜಾತ್ಮಾ ಪೂರ್ಣಾನಾನಂದಾತ್ಮನು ಪೂರ್ಣ ಶಕ್ತ್ಯಾತ್ಮನು ಪೂರ್ಣ ಗುಣನಿಧಿ ಸದಾ ನಿರ್ದೋಷ ಈಶ 3 ಪ್ರತಿವಾದಿ ಜಯಪ್ರದನು ಸರ್ವ ವಿದ್ಯಾದಾತ ಬುದ್ದಿ ಸ್ಥೈರ್ಯ ಸತ್ಜ್ಞಾನ ವರ್ಚಸ್ಸು ಈವ ಮುಕ್ತ್ತಿಸಾಧನೆ ಅಪರೋಕ್ಷಜ್ಞಾನವನಿತ್ತು ಸಾಧು ಅಧಿಕಾರಿಗಳ ಯೋಗಕ್ಷೇಮ ವಹಿಪ 4 ಏಕದಶÀ ಶತÀ ಸಹಸ್ರಾನಂತ ರೂಪನೇ ಸ್ವಗತ ಭೇದ ವಿಲ್ಲದ ಸುಪೂರ್ಣ ಸ್ವತಂತ್ರ ಶ್ರೀಕದಶ ವಿಧಿಪಿತ ಪ್ರಸನ್ನ ಶ್ರೀನಿವಾಸ ನಮೋ ವ್ಯಾಂ ಕಪಿಲದತ್ತÀ ವರಾಹಹಯಗ್ರೀವ 5 ಶ್ರೀ ಮಧ್ವಾಂತರ್ಗತ ಶ್ರೀ ಕೃಷ್ಣಾರ್ಪಣಮಸ್ತು
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀನಾಥ ಸಲಹೊ ಸತತ ನಿನ್ನ ಪದ ಧ್ಯಾನಾನಂದವಿತ್ತು ಪ ತಂದೆ ನಿನ್ನನುಗ್ರಹದಿ | ಜಗದೊಳಗೆ ಬಂದೆ ಭೂಸುರ ಜನ್ಮದಿ ಪೊಂದಿ ತ್ವತ್ವದ ಭಜಿಸದೆ ಭವದೊಳಗೆ ಬೆಂದು ಬೆಂಡಾದೆನು ನಾ1 ಪಗೆಯಾರುಖಳರು ಎನ್ನ | ಪಾಶದಲಿ ಬಿಗಿದು ಬಂಧಿನಿ ಎಳೆಯುತ || ಬಗೆ ಬಗೆಯ ಮಂಗನಂತೆ ಕುಣಿಸ್ಯಾಡಿ ಹಗರಣವ ಮಾಡುತಿಹರೋ 2 ಪರಸ್ವತಿಯರ ರೂಪನೋಡಿ | ಮರಳಾಗಿ ಬೆರೆತವಳ ಕ್ರೀಡಿಸುತಲಿ ಪರಗತಿಯ ಚಿಂತೆ ಬಿಟ್ಟು | ಪರಮಾತ್ಮ ನರಕಕ್ಕೆ ಗುರಿಯಾದೆನೋ 3 ಧನದಾಪೇಕ್ಷೆಯಿಂದ | ಧನಿಕರ ಮನೆಗ್ಹೋಗಿ ಲಜ್ಜೆ ತ್ಯಜಿಸಿ ಘನದಾತರೆಂದವರನು | ಬಲು ತುತಿಸಿ ದಿನಗಳೆದೆ ಶುನಕನಂತೆ 4 ಹರಿನಿನ್ನವಾಸರದಿ | ಉಪವಾಸ ಇರುಳು ಜಾಗರವ ಜರಿದು ಬರಿದೆ ಕಾಲವ ಕಳೆದೆನೋ ರವಿಸುತಗೆ | ಅರುಹಲು ಬಾಯಿಲ್ಲವೋ 5 ಪವಮಾನ ಕೃತಸುಶಾಸ್ತ್ರ | ಪ್ರವಚನವ ಕಿವಿಗೊಟ್ಟು ಕೇಳಲಿಲ್ಲ ಅವನಿ ದ್ವಿಜರ ಪಾದವ ಸೇವಿಸದೆ ಭಾರ ನಾನಾದೆನೊ 6 ಬಾಯೆಂದು ಕೂಗಿ ಕರೆವೆ | ಸರ್ವೇಶ ಓಯೆಂದು ಬೇಗ ಬಾರೋ || ಮಾಯಾ ಮೋಹವನೆ ಬಿಡಿಸೋ | ನಿನ್ನಂಘ್ರಿ ತೋಯಜಧ್ಯಾನವನಿತ್ತು 7 ಶಿಲೆಯಾದ ಸಲಹಿದ ತೆರದಿಲಿ ತುಳಿದು ಸಲಹಿದ ತೆರದಲಿ ಇಳಿಸುರನ ಮಹತ್ಪಾಪ ಕಳೆದವಗೆ ಸಲೆಮುಕ್ತಿ ಸಲಿಸಿದಂತೆ 8 ಇಂದಿನಾರಭ್ಯವಾಗಿ | ಎನ್ನಿಂದ ನಿಂದ್ಯಕರ್ಮವ ನಡೆಸದೆ ಮಂದರೋದ್ಮರನೆ ನಿನ್ನ |ಸದ್ಭಕ್ತ ವೃಂದದೊಳು ಕೂಡಿಸಯ್ಯ 9 ಅಪರಾಧ ಕ್ಷಮಿಸುವಲ್ಲಿ | ನಿನ್ನಂಥ ಕೃಪಣವತ್ಸಲ ಕಾಣೆ ಕೃಪೆಯಿಂದ ಕರಪಿಡಿಯೊ ಕರಿವರದ ಕೌಸ್ತುಭ ಕೃಷ್ಣ 10 ನಿನ್ನ ನಾಮದ ಭೂಸುರ ಕುಲಹೀನ ಕನ್ಯೆಯಳ ಸಂಗ ಮಾಡಿ ನಿನ್ನ ಪರ್ವತ ಮೆಟ್ಟಿಲು ಅವಗೊಲಿದು ನಿನ್ನಾಪ್ತನೆನಿಸಿದಂತೆ 11 ನಿನ್ನೊಲುಮೆ ಪಾತ್ರರಾದ ಗುರು ಜಗನ್ನಾಥಾಖ್ಯ ದಾಸಾರ್ಯರ ಸನ್ನಿಧಾನದಲಿ ಇಪ್ಪ | ಇವನೆಂದು ಮನ್ನಿಸೊ ಮಹಮಹಿನೆ 12 ದುರಿತ ರಾಶಿ | ಪೇಳಲ್ಕೆ ಭೂಮಿಧರಗಳವಲ್ಲವೋ ಪ್ರೇಮದಿಂದಲಿ ಪಾಲಿಸೋಮಮಸ್ವಾಮಿ ಶಾಮಸುಂದರ ದಯಾಳು 13
--------------
ಶಾಮಸುಂದರ ವಿಠಲ
ಶ್ರೀಪಾದ ರಾಜರ ಸ್ಮರಣೇ | ಭವತಾಪ ಪರಿಹರ ವೆಂದು ಗಣನೆ ಪ ಧೃತ - ಶ್ರೀಪತಿ ಶ್ರೀರಂಗವಿಠಲನ | ಅಪರೋಕ್ಷದಿ ಕಂಡು ಕುಣಿಯುವತಾಪಸೀಗಳ ದಯದಿ ದುರಿತವು | ಪೋಪುದೇನಿದು ನಮಗೆ ಅಚ್ಚರ ಅ.ಪ. ದಿವಿಜ ಸನ್ನುತ ಹರಿಯ ಕೀರ್ತನೆ ಸ್ತೋಮ ವಿರಚಿಸಿ ತತ್ವನೊರೆದ 1 ಕ್ಲೇಶ ಸುಕೃತ 2 ವಿಪ್ರ ವರೇಣ್ಯ 3
--------------
ಗುರುಗೋವಿಂದವಿಠಲರು
ಶ್ರೀಮನೋಹರ ನಿನ್ನ ನಾಮವೇ ಯೆನ್ನುಸಿರು ಕ್ಷೇಮ ನಾಡಿಗಳಲ್ಲಿ ತಿರುಗುತಿರಲಿ ಪ ಕಾಮಾದಿ ಷಡ್ವರ್ಗವ್ಯಾಪನೆಯನೋಡಿಸುತ ಪ್ರೇಮದಿಂ ಹೃತ್ಪದ್ಮದಲಿ ತೋರು ಸತತ ಅ.ಪ ಪ್ರಾಪಂಚಿಕರ ಮನವು ವಿಷಯಗಳಿಗೆಳೆವಂತೆ ಪಾಪಹರ ನಿನ್ನೊಳಗೆ ಯನ್ನ ಮನವಿರಲಿ ತಾಪತ್ರಯಂಗಳಿಗೆ ತನಯನನು ಸಿಲುಕಿಸದೆ ಕಾಪಾಡಿಕೋ ಸ್ವಾಮಿ ದಾಸಾನುದಾಸನಂ1 ಕನಸು ಎಚ್ಚರ ನಿದ್ದೆ ಎಂಬವಸ್ಥೆಗಳಲ್ಲಿ ದಿನಕರಪ್ರಭು ಮೂರ್ತಿಯವತಾರ ತೋರಿ ಅನುನಯದಿ ಪದಯುಗವ ಶರಣು ಹೊಂದುವ ಪರಿಯ ಕನಿಕರದಿ ಕರುಣಿಸೈ ಕಮಲನಯನ 2 ಕಫವಾತ ಪಿತ್ಥಗಳ ವಿಕೃತಿಗಳು ಬಾರದೆಲೆ ಅಪರಿಮಿತ ಸುಂದರಾನಂದ ನೀಡಿ ಸಫಲಮಂತ್ರವ ನುಡಿಸಿ ಕೃಪೆಯಿಂದ ಕೈಪಿಡಿದು ಸುಪಥದಿಂ ನದಿದಾಟಿ ಸೇರಿಸಿಕೊ ಅಡಿಗೆ 3 ಹರಿಹರೀ ಹರಿಯೆಂಬೆ ತಾಯಿ ತಂದೆಯೆ ಗುರುವೆ ದೊರೆಯೆನೀ ಸೋದರನು ಸಖನು ಬಂಧೂ ಧರಣೀಧರ ಸರ್ವತ್ರ ಬೆಂಬಿಡದೆ ಸಹಕರಿಸಿ ಪೊರೆವುದೈ ಭವನಾಶ ಹೆಜ್ಜಾಜಿ ಶ್ರೀಶಾ 4
--------------
ಶಾಮಶರ್ಮರು
ಶ್ರೀಲೋಲನೆ ಪರಿಪಾಲಿಪುದೆಮ್ಮನು ಕಾಲವಿಳಂಬಿಸದೇ ಪ. ಪೇಳಲೆಮಗೀ ನಾಲಿಗೆ ಸಾಲದು ಅ.ಪ ಅನಿಮಿಷರೂಪದಿಂದಾಗಮವನು ನೀನಜನಿಗೆ ತಂದಿತ್ತೆ ಪೂರ್ವದಿ ಘನ ಕಚ್ಛಪರೂಪದೊಳಾಗಿರಿಯನು ಬೆನ್ನೊಳಗಾಂತೇ ಅನಿಮಿಷರೊಡೆಯನ ಮನವನು ತಣಿಸಿದ ಫನಮಹಿಮನೆ ಶ್ರೀ ವನಜಜ ಜನಕನೆ ಶ್ರೀಲೋಲನೆ 1 ದುರುಳನ ಕರದಲಿ ಧರಣಿಯು ಸಿಲುಕುತ ಕರೆಕರೆಗೊಳ್ಳುತಿರೆ ವರಸೂಕರನಾಗುತ ದುರುಳನ ಛೇದಿಸಿ ಧರಣಿಯ ಕೈಪಿಡಿದೆ ಮತ್ತೆ ತರಳನ ಪೊರೆಯಲು ನರಕೇಸರಿ ರೂಪದಿ ಹಿರಣ್ಯಕನುದರದ ಕರುಳನು ಕಿತ್ತೆಸೆದೆÉೀ ಶ್ರೀಲೋಲನೆ 2 ಕಪಟತನದಲಿ ವಟುವಂದದಿ ಬಂದು ನೆಲವದಾನವ ಬೇಡಿ ಕಪಟವನರಿಯದೆ ದಾನವ ಕೊಟ್ಟನ ಪಾತಾಳಕೆ ಗುರಿ ಮಾಡಿ ಅಪರಿಮಿತಾನಂದದಿ ಮೆಚ್ಚಿ ಬಲೀಂದ್ರನ ಮನೆಬಾಗಿಲ ಕಾಯುವ ಗೊಲ್ಲ ನೀನೆನಿಸಿದೆ 3 ವರಮುನಿ ಜಮದಗ್ನಿಯ ರೇಣುಕಾಸುತ ಭಾರ್ಗವ ನೀನಾಗಿ ವರಪರಶುದರನೆಂದೆನ್ನಿಸಿ ಭೂಭುಜರನು ತರಿದಟ್ಟಿ ಧರಣೀಸುರರಿಗೆ ಸುರತರುವೆನಿಸಿದ 4 ಹರವಿರಂಚಿಯರ ವರಗಳ ಗರ್ವದೆ ದಶಶಿರದೈತ್ಯನು ಮೆರೆದು ಪರಿಪರಿ ವಿಧದಿಂ ಸುರಭೂಸುರರನು ಕರೆಕರೆಗೊಳಿಸುತಿರೆ ಧರಣಿಪ ದಶರಥ ತನುಭ ವರೆನ್ನಿಸಿ ನಿಶಿಚರ ಕುಲವನೇ ಸವರಿದ ರಾಘವ 5 ಅಷ್ಟಮದಂಗಳ ದಟ್ಟಣೆಯಿಂದತಿ ಅಟ್ಟಹಾಸದಿ ಮೆರೆದಾ ದುಷ್ಟ ಕಂಸನ ಮರ್ಧಿಸಿ ಧರಣಿಯ ಶಿಷ್ಟರ ಪಾಲಿಸಲು ವೃಷ್ಟಿವಂಶದಿ ಬಂದು ಕೃಷ್ಣನೆನಿಸಿ ತನ್ನ ಇಷ್ಟರಾದ ಪಾಂಡುಪುತ್ರರ ಸಲಹಿದ6 ಸಿದ್ದಿ ಸಂಕಲ್ಪದಿ ಬಲಭದ್ರನೆನ್ನಿಸಿ ಭವಬದ್ಧ ಜೀವಿಗಳಂ ಶುದ್ಧ ಮಾರ್ಗದಿ ಸಂಸ್ಕರಿಸಿ ಜಗವನು ಉದ್ಧರಿಸಲ್ಕಂಡು ಬುದ್ಧನೆಂದೊಳಿಸಿ ಮೆರೆದ ಸಂಕರ್ಷಣ ಭದ್ರಮಂಗಳ ಭವ್ಯಸ್ವರೂಪನೆ7 ಕಲಿಮಲದೋಷವ ತೊಳೆಯಲು ಪುನರಪಿ ಕಳೆಯೆ ನೀನೈತರುವೆ ಫಲತೆರದಲಿ ಭಕ್ತರ ಸಲಹಲು ಫಲರೂಪಗಳ ಕೈಕೊಳುವೆ ಹಲುಬುವ ಕಂದನ ಸಲಹೈ ಸಿರಿದೊರೆ 8
--------------
ನಂಜನಗೂಡು ತಿರುಮಲಾಂಬಾ
ಶ್ರೀವಾಯು ದೇವರು ಅನುದಿನ ಸ್ತುತಿಸುವೆ ದೀನಮನುಜನ ಜನುಮಗಳಳಿಸೋ ಪ ವಾಣಿವಂದಿತ ಪಾದಪದ್ಮನೆ ಕಾಯೋ ಈಗಲೇ ಅ.ಪ. ಜಾನಕೀರಮಣನ ಪ್ರಿಯ ದಾನವಾಂತಕ ಕಾಯ ಮಣಿಮಂತಾದಿಗಳ ಶೂಲ ಘನ ಪರಾಕ್ರಮ ಭೀಮ ಜ್ಞಾನದಾಯಕ ವಪುಷ ಆನಂದ ತೀರ್ಥಪ್ರಖ್ಯಾತ ಮೌನಿಮಾನಸ ಚಂದ್ರ ಅನಿಮಿಶೇಷಗಳಾದಿಗೊಡೆಯ ಭಾನುಕುಲತಿಲಕ ದೂತನೆ ಭಾನುಕೋಟಿತೇಜರೂಪನೆ ಗಣಿಸಲಾಗದ ಸತ್ವಮಂದಿರ ಮೌನಿಗಳ ಕಲಶ ಪ್ರಾಯನೆ ಕನಕವರ್ಣದಶುಭಗಾತ್ರನೆ ಧ್ಯಾನಗೋಚರ ವಿಶ್ವರೂಪನೆ ಮಾನದಿಂದಲಿ ಪಾಲಿಸಯ್ಯ 1 ವಾರಿಧಿ ದಾಟಿದಶೂರ ಭಾರಿವನವ ಕಿತ್ತವೀರ ಜರಾಸಂಧನ ಕೊಂದ ಧೀರ ವೈರಿತಿಮಿರಕೆ ಸೂರ್ಯ ಹರಿಯ ಹರಡಿದ ರಾಯ ಪರಾಶರಾತ್ಮಜಪ್ರಿಯ ಕರಿರಾಜವರದನೆ ಪ್ರಥಮಾಂಗ ಭಾರತಿ ರಮಣಮುಖ್ಯಪ್ರಾಣ ಹರಿಯು ಆಗಿ ಹರಿಯ ಒಲಿಸಿದೆ ವೀರಮಾರುತಿ ದೇವ ದೇವನೆ ಬಗೆದು ಧರಿಸಿ ಮೆರೆದೇ ಎಂದು ಸಾರಿದೆ ತೋರಿಸಿ ಕಾಯೊ ಸೂತ್ರನೆ 2 ಅಕ್ಷಯನ ಕೊಂದು ಮೆರೆದ ಲಕ್ಷ್ಮಣನ ಪ್ರಾಣವನುಳಿದ ರುಕ್ಮಿಣೀ ಪತಿಯ ಕಿಂಕರನಾದ ಲಕ್ಷ್ಯವಿಲ್ಲದೆ ಸೈನ್ಯಗಳಳಿದಾ ಪಕ್ಷವಾಹನನೆ ದೈವವೆಂದ ಮೋಕ್ಷಸಾಧನಗಳ ತೋರಿನಿಂದ ವೈರಿ ಅನಿಲ ರಕ್ಷಿಸು ರಕ್ಷಿಸು ತತ್ವೇಶರೊಡೆಯ ಲಕ್ಷ್ಮಿಮಾತೆಯಕಂಡುವಂದಿಸಿ ಲಂಕೆ ಸುಟ್ಟು ಸೊಕ್ಕೂ ಮುರಿದೆ ಅಕ್ಷನಾಟವ ಸೋತುನಟಿಸಿ ಕಾಂತೆಗಭಯವ ನೀಡಿ ಪೊರೆದೆ ಅಕ್ಷರೇಡ್ಯನ ಕರುಣದಿಂದಲಿ ಸೂತ್ರಭಾಷ್ಯವ ರಚಿಸಿ ಮೆರೆದೇ ಇಕ್ಷುಚಾಪನ ಪಿತನ ತೋರಿಸೋ ದಕ್ಷಿಣಾಕ್ಷಿಗವತ್ಸರೂಪಿಯೆ 3 ವಿಷಉಂಡುಪೊರೆದ ರೋಮರೋಮಕೆ ಕೋಟಿ ಲಿಂಗಗಳುದುರಿಸಿ ಬಂದ ಧಾಮಸಕಲ ಗುಣಕೆಂದೆನಿಕೊಂಡ ಅನಾದಿ ಅಪರೋಕ್ಷದೇವ ರಾಮಭಕ್ತಾಗ್ರೇಸರನೆನಿಸಿದ ತಾಮಸಾಂತಕ ವಿಜಯರಥಧ್ವಜ ಭಾಮೆಯರೂಪವ ತಾಳಿಮೆರೆದ ಭೀಮವಿಕ್ರಮ ಸಪ್ತಶಿವಧರ ಸಾಮಗಾಯನ ಲೋಲ ಕೃಷ್ಣನ ಪ್ರಿಯದಾಸ ಮೋದಮುನಿಯೆ ಎನಿಸಿಮೆರೆಯುವೆ 4 ವಾನರರೂಪಿಲಿ ಬಂದ ಜಾನಕಿ ಗುಂಗುರಕೊಟ್ಟು ನಿಂದ ರಾಜಸೂಯವ ಮಾಡಿನಿಂದ ಹರಿಯು ಎಂದ ವನಜನಾಭನಮುಖ್ಯ ಪ್ರತಿಬಿಂಬ ಕ್ಷಣದಿ ಸಂಜೀವನವ ತಂದೆ ವಾನರರ ಪ್ರಾಣ ಉಳಿಸಿದೆ ದ್ರೋಣಸುತನ ಅಸ್ತ್ರನಿಲಿಸಿದೆ ಸಾಮ ದೂರ ಖ್ಯಾತನಾಮನೆ ವಾಯು ಅಂತರ ವಿಶ್ವ ಚರಣ ನಂಬಿದೇ 5
--------------
ಕೃಷ್ಣವಿಠಲದಾಸರು
ಶ್ರೀಶಪದ ಕಮಲಕ್ಕೆ ಮಧುಪ | ನಿನ್ನದಾಸನೆಂದೆನಿಸುವುದು ಧನಪ | ಸಖ ಮ-ಹೇಶನ ಸುತ ಪೇಳ್ವೆ ಭಿನ್ನಪ | ನೀ ಪ್ರ-ಕಾಶಿಪುದು ಮನವಿ ವಿಘ್ನಪ 1 ಪತಿ ಕರುಣಿ ಶುಭಗಾತ್ರ | ಗ್ರಂಥಲೇಸೆನಿಸಿ ಲಿಖಿಸಿದೆ ಪವಿತ್ರ | ಮೂರ್ತಿಪಾಶಾಂಕುಶ ಪಾಣಿ ಸುಚರಿತ್ರ 2 ಸ್ವಾಂತ | ದಲ್ಲಿಅಭಯ ನೀ ತಿಳಿಸು ನಿಶ್ಚಿಂತ 3 ವಿಘ್ನಪನೆ ದುರ್ವಿಷಯದಲ್ಲಿ | ಬಹಳಮಗ್ನವಿಹ ಮನವ ಹರಿಯಲ್ಲಿ | ನಿರತಲಗ್ನ ಮಾಡಿಸು ತ್ವರ್ಯದಲ್ಲಿ | ಇನ್ನೂ ವಿಘ್ನಗಳಿಗಂಜಿಕೆಯು ಎಲ್ಲಿ ? | 4 ಧನಪ ವಿಶ್ವಕ್ಸೇನ ಯಮಳ | ಆ ಅ-ಶ್ವಿನೀಗಳ್ಗೆ ಸಮ ಕರಿಗೊರಳ | ಪುತ್ರನನುಜನೇ ಶೇಷ ಶತಗರುಗಳ | ರಲ್ಲಿಗುಣೋತ್ತಮನೆ ಕಾಯೊ ನಮ್ಮಗಳ | 5 ಬವರ | ದಲ್ಲಿಗೌರಿಪತಿ ವರದಿ ಉದ್ಧಟರ | ಆದಕ್ರೂರಿ ಜನ ಸಂಹಾರಿ ಶೂರ | 6 ಸೂತ್ರ ಅಪರೂಪ | ಖಳರದರ್ಪ ಭಂಜನನೆ ಶುಭರೂಪ | 7 ಶ್ರೀಶನತಿ ನಿರ್ಮಲವು ಎನಿಪ | ನಾಭಿದೇಶಗತನಾಗಿಹನೆ ಗಣಪ | ರಕ್ತವಾಸೆರಡು ಶೋಭಿತನೆ ಸುರಪ | ಮಿತ್ರಮೂಷಕಾ ವರವಹನ ರೂಪ | 8 ಶಂಕರಾತ್ಮಜ ದೈತ್ಯ ಜನಕೆ | ಅತಿ ಭ-ಯಂಕರ ಗತಿಯ ನೀಡಲ್ಕೇ | ನೀನುಸಂಕಟ ಚತುರ್ಥಿಗ ಎನೆಲ್ಕೆ | ಹಾಗೆಮಂಕು ಜನಾವೃತವು ಮೋಹಕ್ಕೆ 9 ಸಿದ್ಧಿ ವಿಧ್ಯಾಧರರು ಎಂಬ | ಗಣಾರಾಧ್ಯ ಪದಕಮಲ ನಿನದೆಂಬ | ಜನಕೆಸಿದ್ಧಿದಾಯಕ ವೇಗ ಎಂಬ | ಮಹಿಮಬುದ್ಧಿ ವಿದ್ಯೆಗಳ ಕೊಡು ತುಂಬ 10 ಭಕ್ತವರ ಭವ್ಯಾತ್ಮ ಪರಮ | ಶಾಸ್ತ್ರಸಕ್ತವಾಗಲಿ ಮನವು ಅಧಮ | ವಿಷಯಸಕ್ತಿರಹಿತನ ಮಾಡಿ ಪರಮ | ಶುದ್ಧಭಕ್ತನೆಂದೆನಿಸು ನಿಸ್ಸೀಮ | 11 ಶಕ್ರ ಪೂಜಿಸುತ ಗುರು ನಿನ್ನ ವೈರಿಶುಕ್ರ ಶಿಷ್ಯರ ಕೊಂದ ನಿನ್ನ | ಆ ಉ-ರುಕ್ರಮ ರಾಮ ಪೂಜಿಸೆನ್ನ | ತೋರ್ದವಕ್ರ ತುಂಡನೆ ಕರುಣವನ್ನ 12 ಕೌರವನು ಭಜಿಸದಲೆ ನಿನ್ನ | ಆಸಮೀರನ ಗದೆಯಲಿಂದಿನ್ನ | ಹತನುತಾರಕಾಂತಕನನುಜ ಯೆನ್ನೆ | ಧರ್ಮಪ್ರೇರಕನೆ ಸಂತೈಸು ಎನ್ನ 13 ಮೂಕರನ ವಾಗ್ಮಿಗಳ ಗೈವ | ಗುರು ಕೃ-ಪಾಕರನೆ ಕಾಮಗಳ ಕೊಡುವ | ಪರಮಲೇಖಕನೆ ಮನ್ಮನದಲಿರುವ | ಬಹುವ್ಯಾಕುಲವ ಪರಿಹರಿಸು ದೇವ | 14 ಸತ್ತೆ ವೃತ್ತಿಯು ಮತ್ತೆ ಪ್ರಮಿತಿ | ಜಗಕೆಇತ್ತು ತಾ ಸೃಷ್ಟ್ಯಷ್ಟಕತ್ರ್ರೀ | ಎನಿಪಚಿತ್ತಜ ಪಿತನ ದಿವ್ಯ ಸ್ಮøತಿ | ಇತ್ತುನಿತ್ಯ ನೀ ಪಾಲಿಪುದು ಸದ್ಗತಿ 15 ಪಂಚವಕ್ತ್ರನ ತನಯ ಕೇಳೊ | ಎನಗೆಪಂಚಭೇದದ ಜ್ಞಾನ ಪೇಳೊ | ಹರಿಯುವಾಂಛಿತ ಪ್ರದನ ದಿಟ ಆಳೊ | ಭವದಿವಂಚಿಸದೆ ಕಾಯೊ ಕೃಪಾಳೊ | 16 ಏನು ಬೇಡುವುದಿಲ್ಲ ನಿನ್ನ | ದುಷ್ಟಯೋನಿಗಳು ಬರಲಂಜೆ ಘನ್ನ | ಲಕುಮಿಪ್ರಾಣಪತಿ ತತ್ವರಿಂದಿನ್ನ | ಕಾರ್ಯತಾನೆಂಬ ಮತಿಯ ಕೊಡು ಮುನ್ನ 17 ಭಕ್ತ ಜನ ಕಲ್ಪ ತರುವೆನಿಪ | ಉಮೆಯಪುತ್ರ ಮಮ ಮಮತೆಯನು ಹರಿಪ | ದಾಯಹತ್ತಿಹುದು ನಿನ್ನಲ್ಲಿ ಗಣಪ | ಕಳೆಯೊಎತ್ತಿ ಕೈ ಮುಗಿವೆ ಭವರೂಪ 18 ಜಯ ಜಯವು ಎಂಬೆ ವಿಘ್ನೇಶ | ತಾಪತ್ರಯಗಳಿನು ನೀನೇ ವಿನಾಶ | ಗೈದುಭಯ ಶೋಕರಹಿತ ವಿದ್ಯೇಶ | ಜನ್ಮಾಮಯ ಮೃತಿ ಹರಿಸೊ ನಭಕೀಶ | 19 ನಮಿಸುವೆನೊ ಹೇರೊಡಲ ನಿನ್ನ | ಕರುಣಿಕಮಲಾಕ್ಷ ಹರಿನಾಮವನ್ನ | ನಿರುತವಿಮಲ ಮನದಿ ನುಡಿವಂತೆ ಎನ್ನ | ಮಾಡಿಕಮಲೇಶ ಪದ ತೋರೊ ಘನ್ನ20 ಎರಡು ನವ ಮೂರು ಪದಗಳನ್ನ | ಗೌರಿತರಳನಲಿ ಇರುವಂಥ ಪ್ರಾಣ | ಪತಿಯುಗುರು ಗೋವಿಂದ ವಿಠ್ಠಲನಾ | ಪದದಿಇರಿಸುವರ ಹರಿ ಪೊರೆವ ಅವರನ 21
--------------
ಗುರುಗೋವಿಂದವಿಠಲರು
ಸತ್ತು ಚಿತ್ತಾನಂದ ಭಕ್ತಜನಬೆಂಬಲನೆ ಸತ್ಯಾತ್ಮ ಸರ್ವೋತ್ತಮ ಪ ಮೃತ್ಯುಸಂಹರ ಸರ್ಗಮತ್ರ್ಯಪಾತಾಳತ್ರಯ ಶೌರಿ ಅ.ಪ ಬದ್ಧಕುಲಹರಣ ಗೋವರ್ಧನೋದ್ಧಾರ ಕ್ಷೀ ರಾಬ್ಧಿ ಕನ್ನಿಕಾರಮಣ ಬದ್ಧಸಂಸಾರದೊಳಗೆ ಬಿದ್ದು ಬಳಲುವ ಎನ್ನ ನುದ್ಧರಿಸು ದಯಭೂಷಣ ಬಿದ್ದೆ ನಿಮ್ಮಯಪದಕೆ ಮಧ್ವಮುನಿಪ್ರಿಯನೆ ಪರಿ ಶುದ್ಧನೆಂದೆನಿಸೆನ್ನ ಶುದ್ಧಪದ್ಧತಿಗಳನು ತಿದ್ದು ಎನ್ನೊಳಗಿದ್ದು ಶುದ್ಧಚೈತನ್ಯರೂಪ ಭೂಪ 1 ಕಪಟಬುದ್ಧಿಯ ಕಳೆದು ಅಪರೂಪ ನಿಜಜ್ಞಾನ ಕೃಪೆಮಾಡು ಭಕ್ತಲೋಲ ಅಪರೋಕ್ಷಮತಿ ನೀಡಿ ಅಪಮೃತ್ಯು ಪರಿಹರಿಸು ಅಪರಿಮಿತ ಮಹಿಮ ಜಾಲ ಸುಫಲದಾಯಕ ನಿಮ್ಮ ಜಪವೆನ್ನ ಜಿಹ್ವೆಯೊಳು ಸ್ಥಾಪಿಸೈ ಭಜಕಜನಪಾಲ ಕಪಿವರದ ವನಮಾಲ ಕಪಟಗಳಕುಲಕಾಲ ಕೃಪಾದೃಷ್ಟಿನೀಡೆನ್ನೊಳು ಕೇಳು 2 ಭ್ರಷ್ಟನು ಇವನೆಂದು ಬಿಟ್ಟಿ ಬೇಸರ ಬೇಡ ಮುಟ್ಟಿಭಜಿಪೆ ತವಪಾದವ ಎಷ್ಟು ತಪ್ಪಿರ್ದರು ಸುಟ್ಟು ಸಫಲೆನಿಸೆನ್ನ ಕೆಟ್ಟ ಬವಣೆ ಕಳಿಯಭವ ಹುಟ್ಟಿ ಸಾಯುವ ಮಹಕೆಟ್ಟ ಕಷ್ಟದ ಹಾದಿ ಕಟ್ಟುಮಾಡು ಹೇ ಮಾಧವ ದಿಟ್ಟ ಶ್ರೀರಾಮ ಎನ್ನ ಇಷ್ಟದೇವರು ನೀನೆ ಶಿಷ್ಟ ಸಜ್ಜನರ ಪ್ರೇಮಿ ಸ್ವಾಮಿ 3
--------------
ರಾಮದಾಸರು