ಒಟ್ಟು 1078 ಕಡೆಗಳಲ್ಲಿ , 97 ದಾಸರು , 773 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಣ್ಣಾರೆ ಕಂಡೆವಯ್ಯಾ ಕಣ್ಣಾರೆ ನಾ ಧ್ರುವ ಕಣ್ಣಾರೆ ಕಂಡೆ ಹರಿಯ ಎನ್ನ ಪ್ರಾಣಧೊರಿಯ ಧನ್ಯಗೈಸಿದ ಪರಿಯ ಏನೆಂದ್ಹೇಳಲಯ್ಯ 1 ಸ್ವಾನುಭವದ ಖೂನ ಜನಕ್ಹೇಳಲೇನು 2 ಆಡೇನಂದರ ಅಮಾತು ನಾಡಿಗೇನು ತಿಳದೀತು ಪಡೆದವಗೆ ದೋರಿತು ಬಿಡದ್ಹಾಂಗಾದೀತು 3 ಗುರುಕರುಣ ಕಟಾಕ್ಷ ಗುರುತಾಗ್ಯದ್ಯನ್ನಪೇಕ್ಷಾ ಇರುಳ್ಹಗಲೆ ದೋರುವದಧ್ಯಕ್ಷ 4 ಎನಗದೆ ಬ್ರಹ್ಮಾನಂದ ಭಾನುಕೋಟಿ ತೇಜನಿಂದ ದೀನಮಹಿಪತಿ ಬಂದ ಅನುಭವ ಆನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಣ್ಮನಕೆ ಆನಂದ ಇಂದಿನದಿ ಕೇಳೀ |ಮನ್ಮನೋರಥ ಮುಂದೆ | ಪೋಗಿ ಸೇರಿಹುದು ಪ ಮಧ್ವ ಸರಸಿಯ ತಟದಿ | ಮಧ್ವಮುನಿ ಸದ್ವಂದ್ಯಮಧ್ವೇಶ ಶಿರಿ ಕೃಷ್ಣ | ನರ್ಚಿಸುತ ನಿತ್ಯಮಧ್ವಮತ ಸಾಮ್ರಾಜ್ಯ | ಪೀಠದಲಿ ಭೂಷಿತರುವಿಶ್ವೇಶ ತೀರ್ಥರಿಗೆ | ವಂದಿಪೆನು ಸತತ 1 ಮಧ್ವ ಸಿದ್ಧಾಂತಗಳ | ಉತ್ಕರ್ಷ ಭೋದಿಸುತವಿದ್ವಜ್ಜನಾರಾಧ್ಯ | ಪಾಠಶಾಲಾವರ್ಧಂತಿ ಹತ್ತಾರು | ನಾಲ್ಕೊರ್ಷ ಉತ್ಸವದಿಅದ್ಯಕ್ಷ ವಿಶ್ವೇಶ | ತೀರ್ಥರನುಗ್ರಹಿಸೇ 2 ಅನಂತೇಶ ಸನ್ನಿಧಿಲಿ | ಅನುಮಾನ ತೀರ್ಥರಿಂದಾನಂತ ಸತ್ ಜ್ಞಾನ | ರಶ್ಮಿ ಸೂಸುತಲೀ |ಜ್ಞಾನ ಕಾರ್ಯವು ಗುರು | ಗೋವಿಂದ ವಿಠಲನಪ್ರೀಣನಕೆ ಜರುಗಿಹುದ | ನೋಡವನೆ ಧನ್ಯ 3
--------------
ಗುರುಗೋವಿಂದವಿಠಲರು
ಕಥಾಶ್ರವಣ ಮಾಡೋ ಪಾಡೋ ಹರಿ ಪ ಪಥÀ ವೈಕುಂಠಕ್ಕಿದು ನೋಡೋಅ.ಪ ಪತಿತಪಾವನ ಪಾದಾಬ್ಜದಲಿ ಹಿತದಿಂ ಭಕುತಿಯ ಮಾಡೋ 1 ಜ್ಞಾನ ಭಕುತಿ ವೈರಾಗ್ಯವೀವ ಆನಂದತೀರ್ಥರ ಪಾಡೋ 2 ಅಜಭವಾದಿಗಳಿಗರಸನಾದ ಶಿರಿ ವಿಜಯವಿಠಲನ ನೋಡೋ3
--------------
ವಿಜಯದಾಸ
ಕಂದ ಭೀಮಗೆ ಸರಿಯಿಲ್ಲ ಎಂದೆಂದಿಗೆ ಬಿಡದೆ ಬಂದಾ ಪ್ರತಿಬಂಧಕಗಳ ನಿತ್ಯ ಅರಿತುಳಿವಾ ಸತ್ಕೀರ್ತಿ ಪೊಳವ ಪ ಪ್ರಳಯಾಂತದಲ್ಲಿ ತಾನು ತಿಳಿದು ಸತ್ವ ಜೀವರ ನೆಲೆ ಗೊಳಿಸುವೆನೆಂದು ಬಲುಹರುಷದಲಿ ಜಲಜನಾಭನ ಚರಣಾಬ್ಜಕರಿಗೆ ಹಸ್ತ ಮುಗಿದು ಶ್ರುತಿವಿನುತ ಇದೇ ಕಾಯವನಿತ್ತ 1 ಮಂಡೆ ಮೇಲೆ ಭಾರವ ಕೊಂಡಾ ಸಹಸ್ರ ಫಣ ಕುಂಡಲಿಯ ಪೊತ್ತಾ ಗಂಡುಗಲಿ ಕೂರ್ಮನಾ ಕೊಂಡಾಡಲು ನಮಗೆ ಸಗುಣಾಖ್ಯಾ ಗುರುವೀತನೇ ಮುಖ್ಯಾ 2 ಭೀಮನೆ ಭೀಮಸೇನಾ ಭೀಮರಾಯನೆಂದು ನೇಮದಿಂದಲಿ ನಾಮವ ನೆನೆದಡೆ ಪಾಮರ ಬುಧ್ಧಿಯನ್ನು ನಿತ್ಯ ಸತ್ಪುಣ್ಯ ಅನುಗಣ್ಯ ಬಲು ಗುಣ್ಯಮಾಡಿಸುವನನ್ಯ 3 ಹಿಂದೆ ರಘುನಾಥನ ಛಂದದ ದೂತನಾಗಿ ಇಂದು ವಂಶದಲಿಂದು ಮಂದಹಾಸದಲುದಿಸಿ ನಂದದಿಂದಲಿ ಕುರುಬಲವ ಗೆದ್ದ ಚಲುವ ಭಕ್ತಗೊಲಿವ ಮೂಲೋಕವ ಗೆಲುವ 4 ಜ್ಞಾನ ಭಕ್ತಿ ವೈರಾಗ್ಯ ನಾನಾ ಪ್ರಕಾರ ಭೀಷ್ಟೆ ಮಾಣದೆ ಕೊಡುವನು ಅನಂತ ಕಾಲಕೂ ಆನಂದತೀರ್ಥನೀತಾ ಪ್ರಾಣಾದಿ ಪಂಚರೂಪ ಶ್ರೀನಾಥ ವಿಜಯ ವಿಠ್ಠಲಾ ಸಿರಿನಲ್ಲಾ ಪೊರೆವೆಲ್ಲಾ ಒಂದೆಂಬದಲ್ಲಾ 5
--------------
ವಿಜಯದಾಸ
ಕಮಲನಯನನ ಕರತಾರೆ ಕರುಣ ಸಾಗರನ ಕರಿರಾಜ ವರದನ ಪ -------ಪನ ಕಂಬುಕಂಧರನ ಲೋಕನಾಯಕ ಶ್ರೀಯದು ವೀರನಾ ರಾಕೇಂದು ಮುಖಿ ವರ ಲಕ್ಷ್ಮೀನಾಯಕನ ನೀರಜ ನಾಭನಾ 1 ಸುಜನ ವಿಲಾಸನಾ ಕಂದ ಪ್ರಹ್ಲಾದನಾ ಕಾಯ್ದದೇವನಾ ಸುಂದರ ವದನ ಗೋವಿಂದ ಮುಕುಂದನಾ ಮಾಧವ ಕೃಷ್ಣನಾ 2 ಯದುಕುಲಾಬ್ಧಿಚಂದ್ರ ವೇದಗೋಚರನಾ ಮಧÀು ಸೂದನ ರೂಪ ಮಹಿಮ ಪ್ರಕಾಶನಾ ಬುದ್ಧ ಜನರ ಸಿರಿಯ ನಾ ಪೂರ್ಣಾನಂದನ ಚದುರೆ ನೀ ಬೇಗ ಹೋಗಿ ಚಲುವ ಸಂಪನ್ನನಾ 3 ಆನಂದ ನಿಲಯನಾದ ಅಖಿಲವೈಭವನಾ ಜ್ಞಾನಿಗಳ ಪೊರೆವ ಘನ ಗಂಭೀರನಾ ಧೇನು ಪಾಲಕ ದೇವಾದಿ ದೇವನ ಗಾನಲೋಲನಾದ ವೇಣು ಗೋಪಾಲನ 4 ಗರುಡವಾಹನನಾ-----ಜನ ಕಾಯ್ದವನಾ ಸ್ಥಿರ ಹೆನ್ನ ತೀರದಿ ವಾಸವಾಗಿಹನ ದೊರೆ 'ಹೆನ್ನ ವಿಠ್ಠಲನ’ ----ದೇವನಾ ಪೊರೆವನು ನಮ್ಮ ನಿಂದು ಪರಮಹರುಷದಿಂದಾ5
--------------
ಹೆನ್ನೆರಂಗದಾಸರು
ಕರವ ಕರವ ಮುಗಿದು ಹೇಳಿದೆ ಹರಿಯ ಭಕ್ತರ ಸಿರಿಯ ದ್ವಾರಕೆ ದೊರೆಗೆ ಎರಗುವೆನೆಂದಳು ಶ್ರೀ ಹರಿಗೆ ಎರಗುವೆನೆಂದಳು ಪ. ಇಂದು ಸುಕೃತ ಬಹಳ ಬಂದುಒದಗಿತೆಂದನು ರಾಯ ಬಂದು ಒದಗಿತೆಂದನು 1 ಅಂದಮಾತು ಕೇಳಿ ಆನಂದ ಪೂರ್ಣನಾದನು ರಾಯಬಂದ ಜನರು ವೃಂದಾರಕರೆಂದು ಬಂದ ಕೃಷ್ಣ ಎಂದನು ಈಗ ಬಂದ ಸ್ವಾಮಿ ಎಂದನು 2 ಎಷ್ಟು ಯಜ್ಞವು ಎಷ್ಟು ದಾನವು ಎಷ್ಟು ಜಪ ತಪ ಹೋಮವುಮತ್ತೆ ಎಷ್ಟು ತೀರ್ಥಯಾತ್ರೆ ಫಲಿಸಿತು ಕೃಷ್ಣ ಬಂದನೆಂದು ಈಗ ಕೃಷ್ಣ ಮನೆಗೆ ಬಂದನು 3 ಧಿಟ್ಟೆರೈವರು ಕೃಷ್ಣನಂಘ್ರಿಯ ಮುಟ್ಟಿ ಮನದಲ್ಲಿಟ್ಟರುಕೃಷ್ಣ ಮನೆಗೆ ಬಂದನೆಂದುಎಷ್ಟು ಹರುಷ ಬಟ್ಟರು ಅವರು 4 ಏಳು ಜನ್ಮದ ಸುಕೃತದಿಂದ ಈ ವೇಳೆ ಒದಗಿತೆಂದನು ರಾಯ ಕೇಳ ರುಕ್ಮಿಣಿ ಭಾವೆ ಬಂದದ್ದು ಹೇಳಲ್ವಶವೆಎಂದನುರಾಯ ಹೇಳಲ್ವಶವೆ ಎಂದನು 5 ಪಾದ ಕಾಣದೆ ನಿಲ್ಲಲಾರೆವೆಂದರುಕ್ಷಣ ನಿಲ್ಲಲಾರೆವೆಂದರು ಚಲ್ವ ರಂಗನ ಬದಿಲೆ ಬಂದು ನಿಲ್ವೆವೀಗ ಎಂದನು ರಾಯ 6 ಏಸು ಜನ್ಮದ ಸುಕೃತದಿಂದ ರಾಮೇಶಬಂದನೆಂದನು ಸರ್ವೇಶ ಬಂದನೆಂದನು ವಾಸುದೇವರ ಪಾದಕಾಂಬುವೆ ಈ ಸಮಯದೊಳು ಎಂದನುರಾಯ 7
--------------
ಗಲಗಲಿಅವ್ವನವರು
ಕರವ ಪಿಡಿ ಗುರುರಾಯ | ಶಿರಬಾಗಿ ಬೇಡುವೆ ಪೊರೆಯೊ ಸತ್ಕವಿಗೇಯ | ನೆರೆನಂಬಿದೆನು ನೀ ಮರೆಯದಿರು ಶುಭಕಾಯ | ಹೇ ಸೂರಿವರ್ಯ ಪ ಉರಗಕೇತನ ಮೊರೆಯ ಲಾಲಿಸಿ ತರಣಿಜನಿಗೆರಡೊಂದು ಯುಗದಲಿ ಧುರದಿ ಸಾರಥಿಯಾಗಿ ಸ್ಯಂದನ ಭರದಿ ನಡೆಸಿದ ಪರಮ ಪುರುಷನೆ ಅ.ಪ ಶರಣು ಜನ ಸುರಧೇನು | ಹೇ ತಾತ ನೀ ಮೂರೆರಡು ಜನುಮಗಳನ್ನು | ಕಳೆದು ಮ ತ್ತುರುವ ಅವತಾರವನು ಭಕ್ತಿಪೂರ್ವಕ ಪಿರಿಯರಾಜ್ಞದಿ ನೀನು ಪೂರೈಸಲಿನ್ನು ಧರಣಿಯೊಳಗವತರಿಸಿ ನರರಿಗೆ ಅರಿಯದಂದದಿ ಹರಿಯ ದಿಸೆಯೋಳ್ ಹರಿಯ ಸ್ಮರಿಸುತ ಚರಿಪ ಧೊರೆ ತವ ಚರಣ ದರುಶನಗರೆದು ಕರುಣದಿ 1 ಕ್ಲೇಶ ತಡಮಾಡದಲೆ ನೀ ಭವ ಪಾಶ | ದೃಢಮನವ ಕೊಡು ನಿ ನ್ನಡಿಗಳಲಿ ನಿರ್ದೋಷ | ನುಡಿಯಲಾಲಿಸಿ ಬಿಡದೆ ಮಾಡುಪದೇಶ ಪೊಡವೀಶದಾಸ ಒಡೆಯನೇ ನೀನಡಗಿ ಎನ್ನನು ಕಡೆಗೆ ನೋಡಲು ಪಡೆದ ಜನನಿಯು ಪಿಡಿದು ಬಾಲನ ಮಡುವಿನೋಳ್ ತಾ ಬಿಡುವ ತೆರ ತವ ನಡತೆ ಎನಿಪುದು 2 ಮಂದನಾನಿಜವಯ್ಯ | ಸಂದೇಹವಿಲ್ಲದೆ ಕುಂದು ಎಣಿಸದೆ ಜೀಯ ಬಂದೆನ್ನ ಮನದಲಿ ನಿಂದು ನೀಸಲಹಯ್ಯ ವಂದಿಪೆನು ಶ್ರೀ ಪು ರಂದರಾರ್ಯರ ಪ್ರೀಯ ಆನಂದ ನಿಲಯ 3
--------------
ಶಾಮಸುಂದರ ವಿಠಲ
ಕರುಣಾಕರನೀತ ಕರಿಭಯ ಹರಿದಾತ ಹರಿಪರಂದೈವೀತ ಗುರುನಾಥ ಧ್ರುವ ಮೂರುಗುಣರಹಿತ ಮೂರುಲೋಕ ವಂದಿತ ಮುರಹರನಹುದೀತ ಗುರುನಾಥ 1 ಸುರಜನ ಪೂಜಿತ ಪರಮಾನಂದಭರಿತ ತಾರಕನಹುದೀತ ಗುರುನಾಥ 2 ಪತಿತಪಾವನೀತ ಪಿತಾಮಹನ ಪಿತ ದಾತನಹುದೀತ ಗುರುನಾಥ 3 ಅನುದಿನ ಸಾಕ್ಷಾತ ದೀನದಯಾಳುನೀತ ಗುರುನಾಥ 4 ಭಕ್ತವತ್ಸಲನೀತ ಶಕ್ತಸದ್ಗುರುನಾಥ ಮುಕ್ತಿದಾಯಕನೀತ ಗುರುನಾಥ 5 ಜನವನದೊಳಗೀತ ಮನೋಭಾವಪೂರಿತ ಆನಂದೋ ಬ್ರಹ್ಮನೀತ ಗುರುನಾಥ6 ಗುಹ್ಯಕೆ ಗುಹ್ಯನೀತ ಬಾಹ್ಯಂತ್ರ ಸದೋದಿತ ಮಹಾಮಹಿಮನೀತ ಗುರುನಾಥ 7 ಇಹಪರ ನಮಗೀತ ಮಹಿಪತಿ ಪ್ರಾಣನಾಥ ಸಹಾಕರನಹುದೀತ ಗುರುನಾಥ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣಾದಿ ಪಿಡಿ ಕರವಾ ದೇವರ ದೇವ ಪ ಕರುಣಾದಿ ಪಿಡಿಕರ ಸರಸಿಜಾಂಬಕ ಎನ್ನ ಗುರು ರಘುಪತಿ ಪಾಲಾ ಮರುತಾಂತರಿಯಾಮಿ ಅ.ಪ ಗತಶೋಕ ಜಿತಮಾಯ ಪತಿತ ಪಾವನವೇದ್ಯ ಪ್ರತಿಪಾದ್ಯ ಕ್ಷಿತಿಪ ಭಾರತಿ ಕಾಂತ ವಂದ್ಯಾ ಆ ನತರ ಪಾಲಕ ದುಷ್ಟದಿತಿಜಾರಿ ತವಪಾದ ಶತಪತ್ರ ಬಿಡದೆ ಸಂತತ ಭಕುತಿಯಲಿಂದ ಸ್ತುತಿಪಾರ ಮಿತ ಅಘವಾ ಕಳೆದು ಮತ್ತೆ ಹಿತದಿ ಸದ್ಗತಿ ಕೊಡುವಾ ನಿನ್ನಯ ದಿವ್ಯಾಚ್ಯುತವಾದ ಘನದಯವಾ ಪೊಗಳು ವಂಥ ಮತಿವಂತರನು ಕಾಣೆ ಶತಮುಖಜಜ ಮಾವಾ 1 ಅನಿಮಿತ್ಯ ಬಂಧುವೆ ವನಚಾರಿ ಕೂರ್ಮನೆ ಕನಕ ನೇತ್ರಾರಿ ಪಾವನತರ ನರ ಪಂಚ ನಾನಾ ರೂಪದಿಂದ ಬಾಲನಾ ಕಾಯ್ದೊನರ ಹರಿಬಲಿ ನಿತ್ಯ ಅನಘಾತ್ಮ ಜನನೀಯ ಕೊಂದಾನೆ ಜನಕ ಜಾಪತಿಯ ರು ಕ್ಮಿಣಿ ಮನೋಹರನೆ ವಸನದೂರ ಹಯರೂಢ ಜನನ ರಹಿತ ವಿಖ್ಯಾತಾ ನಮಿಸುವೆ ಅನಿಮಿಷಪಜನ ಸುತಾ ಬೇಡಿಕೊಂಬೆ ಅನುದಿನದಲಿ ಮಮತಾ ಕನಕೋದರನ ತಾತಾ 2 ಸರಿವೀರ ಹಿತ ಬಲಿಸರಸಿ ಜಾಂಬಕ ಮುರ ಹರ ಹರ ವಂದಿತ ಹರಿಮುಖ ಹರಿನುತ ಪಾದ್ಯ ಹರಸು ಎನ್ನಯ ಅಘ ನಿರುತ ನಿನ್ನ ಡಿಂಗರರ ನೀಕರದಿತ್ತು ಗುರುವಿನ ಚರಣಾದಿ ಸ್ಥಿರ ಭಕುತಿಯ ಕೊಟ್ಟು ವರ ಶಿರಿಗೋವಿಂದ ವಿಠಲನೆ ನೀ ಯನ್ನ ಮರಿಯದೆ ಮಮತೆಯಿಂದಾ ನಿತ್ಯ ಗರಿಯುತಲಿರು ಆನಂದಾ ನಿನ್ನಯ ಪಾದಾದಿರಲಿ ಮನಸು ಮುಕುಂದಾ ದುರುಳ ಭವದ ಬಂಧ 3
--------------
ಅಸ್ಕಿಹಾಳ ಗೋವಿಂದ
ಕರುಣಿಸಬಾರದೇನು ಶರಣೆಂಬೆ ನಾನು ಕರುಣಿಸ ಬಾರದೆ ಮೊರೆಯ ಹೊಕ್ಕವನ ಶರಣಾಗತ ಪಂಜರನೆಂಬೊ ಬಿರುದಿರೆ ಪ ಸ್ತಂಭದಿ ನೀ ಬಂದು ದೈತ್ಯನ ಬೇಗ ಶೀಳಿಕೋಪದಿಂದ ಇರಲು ಆಗ ಬ್ರಹ್ಮೇಂದ್ರ ರುದ್ರ ವೃಂದ ಬೆದರಿ ಪೋಗೆ ಪ್ರಹ್ಲಾದನಾಗ ಇಂದಿರಾವರ ಗೋವಿಂದ ಕೃಪೆಯ ಮಾಡೆಂದು ಸ್ತುತಿಸೆ ಆನಂದದಿ ಕಾಯ್ದತಿ ಸುಂದರಮೂರ್ತಿ ಮುಕುಂದ ಧರಣಿಧರ ಸಿಂಧುಶಯನ ಅರವಿಂದನಯನ ಹರಿ 1 ದಶರಥ ಸುತನೆನಸಿ ಮುನಿಯಧ್ವರ ಕುಶಲದಿನ್ನುದ್ಧರಿಸಿ ಪಶುಪತಿ ಧನು ಭಂಜಿಸಿ ಸೀತೆಯ ಕೋರಿ ದಶರಥನಾಜ್ಞೆ ವಹಿಸಿ ಕಾನನದಿ ಚರಿಸಿ ಕುಶನಿಧಿಯನು ಬಂಧಿಸಿ ರಾವಣನ ದಶ ಶಿರಗಳ ಭರದಿಂದಲಿ ಖಂಡಿಸಿ ಅವನನುಜಗ ನಿಶದೊಳ್ ಶಿರಿಲಾಲಿಸಿ ಪೊರೆದ ಶ್ರೀಶಶಿಧರನÀು ಹರಿ 2 ನಕ್ರ ಭಂಗಬಡಿಸೆ ಗಜಗಳರಸ ರಂಗ ಮುರಾರಿ ದೇವೋತ್ತುಂಗ ಶ್ರೀ ಶ್ಯಾಮಲಾಂಗ ಭಕ್ತಾಭಿಮಾನಿ ಮಂಗಳಾರಸತ್ಸಂಗ ಜಗದಂತರಂಗ ವಿಹಂಗ ಸಿರಿ ನರಸಿಂಹ ಬಂದು ಶಾಪಂಗಳ ತರಿದೆ ಭುಜಂಗತಲ್ಪ ಕಾನಂಗಪಿತ 'ಹೆನ್ನೆರಂಗ' ಶರಣು ರಣರಂಗ ಭೀಮ ಹರಿ 3
--------------
ಹೆನ್ನೆರಂಗದಾಸರು
ಕಾದನಾ ವತ್ಸವ ಹರಿ ಕಾದನಾ | ಮಾಧವ ಪ ವೇದವೇದ್ಯ ಸಾಧುವಿನುತÀರಾದಿಕಾ ರಮಣ ಕೃಷ್ಣ ಅ.ಪ. ಎಳೆಯ ಗರಿಕೆ ಇರುವ ಸ್ಥಳದಿ ನೆರೆದು ವತ್ಸಗಳನೆ ನಿಲಿಸಿ || ಕೊಳಲು ಕೈಲಿ ಪಿಡಿದು ಮುರಲಿಗಾನ ಮಾಡುತ್ತಾ 1 ತನ್ನ ಶೆರಗು ತೆಗೆದು ಕೃಷ್ಣ ಕರುಗಳನ್ನೆ ಬೆನ್ನೊರಿಸಿ | ತಿನ್ನು ತಿನ್ನು ಪುಲ್ಲು ಯೆನುತ ಘನ್ನ ಕರುಗಳೊತ್ತುತ್ತ 2 ಉಡುಗಳಂತೆ ಕರಗಳು ನಡುವೆ ಚಂದ್ರ ಧರೆಯೊಳು || ಪೊಡವಿಯೊಳಗೆ ಬೆಳಗಲು ಆ ಮೃಡನು ಕೊಂಡಾಡಲು3 ಒಂದು ತಿಂಗಳ ಕರುಗಳು ಇಂದಿರೇಶನು ಮೇಯಿಸಲು | ಬಂದು ವರುಷ ಕರುಗಳಂತೆ ಆನಂದದಿಂದ ಬೆಳೆದವು 4 ಕನಕ ರಜತ ಸರಪಳಿ ದನಕರುಗಳ ಕೊರಳಲ್ಲಿ | ಇಣಕುವಂತರಳೆಲೆ ಅನೇಕ ನಾದ ಬೆರಳಲಿ ಮಾಡುತ5 ಮರದ ನೆರಳು ವೊಳಗೆ ಕೃಷ್ಣ | ಮೆರೆದು ವತ್ಸಗಳನೇ ನಿಲಿಸಿ | ಕರೆದ ಪಾಲು ಕರದಿ ಪಿಡಿದು ನೆರೆದು ಬಾಯಲುಣಿಸುತ6 ಅಜಗಳ್ಹಾಂಗ ಇದ್ದ ಕರುಗಳು ಗಜಗಳ್ಹಾಂಗ ಆದವು | ತ್ರಿಜಗದೊಡೆಯ ವಿಜಯವಿಠ್ಠಲ ವ್ರಜಕೆ ದೊರೆಯಾಳುವ | 7
--------------
ವಿಜಯದಾಸ
ಕಾಮಿತಾರ್ಥದಾಯಿನೇ | ತುಳಸಿ ಕಲ್ಯಾಣಿ ಶ್ಯಾಮಾ ವಿಶಾಲನಯನೇ ಪ ಹಸುರು ಕಂಚುಕಧರೆ ಆನಂದ ರಸಿಕೇ ಶಶಿ ಬಿಂಬಸಮ ಸುಂದರಮುಖೇ ಉಸಿರುಬಿಡದೆ ನಿನ್ನ ಕೊಸರುವೆ ವರಗಳ ಹಸನಾಗಿ ಕೊಡುವೆನೀ ಅತಿಶಯದಿಂದಲಿ 1 ಬಣ್ಣಾದ ಸರಪಳಿ ಹಾಕಿದ ಕೊರಳೇ ಬಟ್ಟ ಮುತ್ತಿನ ಹರಳೇ ಹುಣ್ಣಿಮೆ ಚಂದ್ರನಂತೆ ಸುಂದರಮುಖದವಳೇ ಪನ್ನಂಗ ಶಯನಗೆ ಮಾಡಿದೆ ಮರುಳೇ 2 ಬಡನಡುವಿಗೆ ಒಡ್ಯಾಣಾ | ರುಳಿ ಪೈಜಣ ಕಡಗಾ ಕಂಕಣ ಹೊಳಿಯುವ ಜಾಣೆ | ನಡೆದು ಬಾರೆ ಶ್ರೀ ನರಸಿಂಹವಿಠಲನ ಪಾದ ಬಿಡದೆ ಭಜಿಪೆನಮ್ಮ 3
--------------
ಓರಬಾಯಿ ಲಕ್ಷ್ಮೀದೇವಮ್ಮ
ಕಾಯ ಇಂದಿರೆ ರಮಣ ಆಗಲೂ ನೀ ಕಾಯಬೇಕೋ ಅರವಿಂದ ನಯನ ಪ. ಈಗ ಈ ಜನ್ಮದಲ್ಲಿ ಭವ ದಾಟುವಲ್ಲಿ ಅ.ಪ. ಮಾನವ ನಾನಾಗಿ ಪುಟ್ಟಿ ಕಾಲ ಕಳೆದು ದೀನನಾಗೀಗ ಇನ್ನು ನೀನೆ ಗತಿಯೋ ಎನಲು ಶ್ರೀನಾಥ ನಿನ್ನ ನಾಮ ಎನ್ನ ನಾಲಗೆಯಲಿ ನುಡಿಸಿ 1 ಮಾಯಾಪತಿಯೆ ಕೇಳೋ ಆ ಯಮಭಟರು ಎಳೆದು ನೋಯಿಸುತ್ತಿರಲು ಎನ್ನ ಬಾಯಬಿಡುತಲಿ ತೋಯಜಾಂಬಕನೆ ಎನ್ನ ಕಾಯೋ ಎಂದೆನುತ ಒದರೆ ಆ ಯಮಬಾಧೆ ಬಿಡಿಸಿ ಸಾಯದಾ ಸೌಖ್ಯವನಿತ್ತು 2 ವೈಷ್ಣವ ಜನ್ಮವ ನೀನು ಇತ್ತುದು ಪಿರಿಯದಲ್ಲೊ ವೈಷ್ಣವ ಜ್ಞಾನವ ನೀಡೊ ಸುಭಕ್ತಿ ಸಹಿತ ಕೃಷ್ಣಮೂರುತಿಯೆ ನೀನು ಅಷ್ಟದಳÀ ಪದ್ಮದಲಿ ನಿಂತು ಉಷ್ಣ ಶೀತ ದ್ವಂದ್ವ ಸಹಿಷ್ಣುತೆ ವಿರಕ್ತಿಯೊಡನೆ 3 ತ್ರಿಗುಣದಿಂದ ಬದ್ಧವಾದ ವಿಗಡದೇಹ ತೊಲಗುವಂತೆ ಬಗೆಬಗೆಯ ನಿನ್ನ ಲೀಲೆ ಅಂತರದಿ ತಿಳಿಸಿ ಜಗದಾವರಣ ತೊಲಗುವಾಗ ಬಗೆಬಗೆಯ ಲಯದ ಚಿಂತೆ ತಗಲಿ ಮನಕೆ ನಿನ್ನ ಮಹಿಮೆ ಆನಂದವಾಗುವಂತೆ 4 ಗೋಪಾಲಕೃಷ್ಣವಿಠಲ ನೀ ಪರದೈವನೆನಿಸಿ ಆಪಾದಮೌಳಿ ನಿನ್ನ ರೂಪವ ತೋರಿ ಅಪವರ್ಗದಲಿ ಎನಗೆ ಶ್ರೀಪಾದಾಸ್ಥಾನವಿತ್ತು ಈ ಪರಿಯಿಂದ ಉಭಯ ವ್ಯಾಪಾರದಲ್ಲಿ ಹರಿಯೆ 5
--------------
ಅಂಬಾಬಾಯಿ
ಕಾಯೊ ಕಾಯೊ ಗುರುನಾಥತ್ರಯಗುಣಾತೀತ ಧ್ರುವ ಭಾನುಕೋಟಿ ಸುಪ್ರಭೆಯ ಅನುದಿನಕ್ಷಯ ಘನಮಹಿಮರ ಹೃದಯ ಆನಂದೋದಯ ಅನಾಥರಿಗೆ ಆಶ್ರಯ ನೀನಹುದೊನÀಮ್ಮಯ 1 ದೇಶಿಕÀರಿಗೆ ನೀ ದೇವ ಲೇಸಾಗಿ ಕಾವ ಋಷಿ ಮುನಿಗಳ ಸಂಜೀವ ವಾಸವಾಗಿವ್ಹ ವಿಶ್ವಾತ್ಮನಹುದೊ ಶ್ರೀದೇವ ಭಾಸುತಲಿವ್ಹ ಭಾಷೆಯ ಪಾಲಿಸುವ ಈಶ ನೀನೆ ಕೇಶವ 2 ಬಾಹ್ಯಾಂತ್ರ ನೀ ಸದೋದಿತ ಗುಹ್ಯಗುರುತು ಶ್ರೀಹರಿ ನೀನೆ ಸಾಕ್ಷಾತನಹುದೊ ಸ್ವಹಿತ ಇಹಪರ ನೀನು ದಾತಮಹಿಪತಿ ಪ್ರಾಣನಾಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾರು ಯಾರಮನೆಗುಂಟು ಖೋಡಿ ಚೋರತ್ವದಪಹಾರ ಮಾಡಿ ತಿಂದದ್ದೆಲ್ಲ ಪ ಕಾಯಜನಯ್ಯನ ದಿವ್ಯ ಚರಿತಗಳನ್ನು ಬಾಯಿಂದ ಪೊಗಳುತ ಕೈಯಿಂದ ಬರೆದು ಮಾಯಾಮೋಹವ ಬಿಡದೆ ನ್ಯಾಯಮಾರ್ಗವತಪ್ಪ ನ್ಯಾಯದಿಂ ಪರರೊಡವೆ ಬಾಯ್ಬಡಿದು ತಿಂದದ್ದು 1 ನಳಿನನಾಭನ ವಿಮಲ ಸುಲಲಿತ ಮಹಿಮೆಗಳ ತಿಳಿದು ಆನಂದದಿಂ ನಲಿನಲಿದು ಹಿಗ್ಗದೆ ಇಳೆಯ ವಾಸನೆಯಿಂದ ಅಳಿವ ಸುಖದಾಸೆಗೆ ಇಳೆಜನರ ಗಳಿಕೆಯನು ಕಳವಿನಿಂ ತಿಂದದ್ದು 2 ಭೂಮಿಯೊಳಧಿಕ ಶ್ರೀರಾಮನ ದಾತೃತ್ವ ಹೇ ಮನವೆ ನೀ ತಿಳಿದು ಪಾಮರತ್ವ ಬಿಡದೆ ಕಾಮಿತದೊಳು ಬಿದ್ದು ಭೂಮಿ ಜನರೆದುರಿಗೆ ಸ್ವಾಮಿಭಕ್ತಿಯ ತೋರಿ ಕಾಮಿಸಿ ತಿಂದದ್ದು 3
--------------
ರಾಮದಾಸರು